US Military: ಇರಾನ್, ಹಮಾಸ್, ಹೆಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದ ಅಮೆರಿಕ - Vistara News

ವಿದೇಶ

US Military: ಇರಾನ್, ಹಮಾಸ್, ಹೆಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದ ಅಮೆರಿಕ

US Military:ನೌಕಾಪಡೆಯ ಕ್ರೂಸರ್‌ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ವಿಧ್ವಂಸಕಗಳನ್ನು ಈ ಪ್ರದೇಶಕ್ಕೆ ಕಳುಹಿಸುವ ನಿರ್ಧಾರವನ್ನು US ರಕ್ಷಣಾ ಕಾರ್ಯದರ್ಶಿ ಲ್ಯೋಡ್ ಆಸ್ಟಿನ್ ಅನುಮೋದಿಸಿದರು. ವಾಷಿಂಗ್ಟನ್ ಹೆಚ್ಚುವರಿ ಸ್ಕ್ವಾಡ್ರನ್ ಫೈಟರ್ ಜೆಟ್‌ಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ.ಆ ಮೂಲಕ ಅಮೆರಿಕ ಇರಾನ್, ಹಮಾಸ್, ಹಿಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದೆ.

VISTARANEWS.COM


on

US Military
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ವಾಯುದಾಳಿ ನಡೆಸಿ ಹತ್ಯೆ ನಡೆದಿರುವ ಬೆನ್ನಲ್ಲೇ ಭಾರೀ ಬೆದರಿಕೆ ಎದುರಿಸುತ್ತಿರುವ ಇಸ್ರೇಲ್(Israel)ಗೆ ಇದೀಗ ಬೆಂಗಾವಲಾಗಿ ನಿಲ್ಲಲು ಅಮೆರಿಕ ಮುಂದಾಗಿದೆ. ಇರಾನ್(Iran), ಹಮಾಸ್(Hamas) ಮತ್ತು ಹಿಜ್ಬುಲ್‌ ಉಗ್ರ ಸಂಘಟನೆಗಳಿಂದ ಬೆದರಿಕೆಯನ್ನು ಎದುರಿಸುತ್ತಿರುವ ಕಾರಣ, ಮಧ್ಯಪ್ರಾಚ್ಯದಲ್ಲಿ ಯುಎಸ್ ಮಿಲಿಟರಿ ಹೆಚ್ಚುವರಿ ಯುದ್ಧ ವಿಮಾನಗಳು ಮತ್ತು ನೌಕಾಪಡೆಯ ಯುದ್ಧನೌಕೆಗಳನ್ನು(US Military) ನಿಯೋಜಿಸಲಿದೆ ಎಂದು ಪೆಂಟಗನ್ ಶುಕ್ರವಾರ (ಆಗಸ್ಟ್ 2) ದೃಢಪಡಿಸಿದೆ.

ನೌಕಾಪಡೆಯ ಕ್ರೂಸರ್‌ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ವಿಧ್ವಂಸಕಗಳನ್ನು ಈ ಪ್ರದೇಶಕ್ಕೆ ಕಳುಹಿಸುವ ನಿರ್ಧಾರವನ್ನು US ರಕ್ಷಣಾ ಕಾರ್ಯದರ್ಶಿ ಲ್ಯೋಡ್ ಆಸ್ಟಿನ್ ಅನುಮೋದಿಸಿದರು. ವಾಷಿಂಗ್ಟನ್ ಹೆಚ್ಚುವರಿ ಸ್ಕ್ವಾಡ್ರನ್ ಫೈಟರ್ ಜೆಟ್‌ಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ.ಆ ಮೂಲಕ ಅಮೆರಿಕ ಇರಾನ್, ಹಮಾಸ್, ಹಿಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದೆ.

ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ವಾಯುದಾಳಿ ನಡೆಸಿ ಹತ್ಯೆ ನಡೆದಿರುವ ಬೆನ್ನಲ್ಲೇ ಇಸ್ರೇಲ್‌ ಮೇಲೆ ನೇರ ವೈಮಾನಿಕ ದಾಳಿ ನಡೆಸಿ ಹೊಡೆದುರುಳಿಸುವಂತೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಆದೇಶ ನೀಡಿದ್ದಾನೆ. ಹನಿಯೆಹ್‌ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ಪಣ ತೊಟ್ಟಿರುವ ಇರಾನ್‌ ಶೀಘ್ರದಲ್ಲಿ ಇಸ್ರೇಲ್‌ ಮೇಲೆ ಪ್ರತಿದಾಳಿ ನಡೆಸಲಿದೆ ಎಂಬ ಬಗ್ಗೆ ಅಲ್ಲಿನ ಮಾಧ್ಯಮಗಳು ಈಗಾಗಲೇ ವರದಿ ಮಾಡಿವೆ.

ಬುಧವಾರ ಬೆಳಗ್ಗೆ ಅಯತೊಲ್ಲಾ ಅಲಿ ಖಮೇನಿ ಇರಾನ್‌ನ ಸುಪ್ರೀಂ ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಖಮೇನಿ ಈ ಆದೇಶವನ್ನು ನೀಡಿದರು. ಇನ್ನು ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಇದನ್ನೂ ಓದಿ: Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಹೆಸರು ಅಂತಿಮ

Kamala Harris: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ, ಭಾರತದ ಮೂಲದ ಕಮಲಾ ಹ್ಯಾರಿಸ್ ಅವರ ಹೆಸರು ಅಂತಿಮವಾಗಿದೆ. ಈ ತಿಂಗಳ ಕೊನೆಯಲ್ಲಿ ಚಿಕಾಗೋದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ 59 ವರ್ಷದ ಕಮಲಾ ಹ್ಯಾರಿಸ್ ಅವರು, “ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಲು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

VISTARANEWS.COM


on

Kamala Harris
Koo

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ (US Presidential Election 2024) ಸ್ಥಾನಕ್ಕೆ ರಿಪಬ್ಲಿಕನ್‌ (Republican) ಪಕ್ಷದ ಡೊನಾಲ್ಡ್‌ ಟ್ರಂಪ್‌ (Donald Trump) ವಿರುದ್ಧ ಡೆಮಾಕ್ರಟಿಕ್ ಪಕ್ಷ (Democratic party)ದ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ, ಭಾರತದ ಮೂಲದ ಕಮಲಾ ಹ್ಯಾರಿಸ್ (Kamala Harris) ಅವರ ಹೆಸರು ಅಂತಿಮವಾಗಿದೆ.

ಈ ತಿಂಗಳ ಕೊನೆಯಲ್ಲಿ ಚಿಕಾಗೋದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ 59 ವರ್ಷದ ಕಮಲಾ ಹ್ಯಾರಿಸ್ ಅವರು, “ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಲು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಲವು ದಿನಗಳ ಹಿಂದೆ ಅಮೆರಿಕ ಅಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌ (Joe Biden) ಅವರು ಚುನಾವಣೆ ರೇಸ್‌ನಿಂದಲೇ ಹಿಂದೆ ಸರಿದಿದ್ದರು. ಇದು ಅಮೆರಿಕ ಮಾತ್ರವಲ್ಲ, ಜಗತ್ತಿನಾದ್ಯಂತ ಸಂಚಲನ ಮೂಡಿಸಿತ್ತು. ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಕುರಿತು ಜೋ ಬೈಡೆನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರದ ಮೂಲಕ ಘೋಷಿಸಿದ್ದರು.

“ನಾನು ಕಳೆದ ಮೂರುವರೆ ವರ್ಷಗಳಿಂದ ಅಮೆರಿಕ ಅಧ್ಯಕ್ಷನಾಗಿ, ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ” ಎಂದು ಅವರು ಹೇಳಿದ್ದರು.

ಅಂದಿನಿಂದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರ ಹೆಸರು ಹೆಚ್ಚು ಚಾಲ್ತಿಗೆ ಬಂದಿತ್ತು. ಅವರೇ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಮಾತು ಕೇಳಿ ಬರತೊಡಗಿತ್ತು. ಕಮಲಾ ಹ್ಯಾರಿಸ್‌ ಆಯ್ಕೆಗೆ ಪಕ್ಷದ ಒಳಗೆ ಯಾವುದೇ ಆಕ್ಷೇಪ ವ್ಯಕ್ತವಾಗದಿದ್ದು ಕೂಡ ಪ್ಲಸ್‌ ಪಾಯಿಂಟ್ ಆಗಿತ್ತು. ಈಗಾಗಲೇ ಅವರು ಸಮಾವೇಶ ನಡೆಸಿ ಮತದಾರರ ಗಮನವನ್ನೂ ಸೆಳೆದಿದ್ದಾರೆ.

ಇದನ್ನೂ ಓದಿ: Kamala Harris: ಅಮೆರಿಕ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಹಿನ್ನೆಲೆ ಏನು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಕಮಲಾ ಹ್ಯಾರಿಸ್‌ ಪರ ನಿಂತ ಬರಾಕ್‌ ಒಬಾಮಾ

ಈಗಾಗಲೇ ಕಮಲಾ ಹ್ಯಾರಿಸ್‌ ಅವರಿಗೆ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ (Barack Obama) ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಬೆಂಬಲ ಸೂಚಿಸಿದ್ದಾರೆ. ಇತ್ತೀಚೆಗೆ ಬರಾಕ್‌ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿ, ಬೆಂಬಲ ಘೋಷಿಸಿದ್ದರು. “ಕೆಲ ದಿನಗಳ ಹಿಂದೆ ನಾನು ಹಾಗೂ ಮಿಚೆಲ್‌ ಅವರು ಗೆಳತಿ ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿದ್ದೆವು. ನೀವು ಅಮೆರಿಕ ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ನಿಮಗೆ ನಮ್ಮ ಬೆಂಬಲವಿದೆ ಎಂಬುದನ್ನು ತಿಳಿಸಿದೆವು. ದೇಶವು ಮಹತ್ವದ ಘಟ್ಟದಲ್ಲಿರುವ ಇಂತಹ ಹೊತ್ತಿನಲ್ಲಿ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಲು ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ನೀವು ಕೂಡ ನಮ್ಮ ಜತೆಗೂಡಿ” ಎಂದು ಬರಾಕ್‌ ಒಬಾಮಾ ಪೋಸ್ಟ್‌ ಮಾಡಿದ್ದರು.

Continue Reading

ವಿದೇಶ

Breast Ironing: ಆಫ್ರಿಕಾದಲ್ಲಿದೆ ಬಿಸಿ ವಸ್ತುಗಳಿಂದ ಯುವತಿಯರ ಸ್ತನ ಚಪ್ಪಟೆಗೊಳಿಸುವ ಕ್ರೂರ ಪದ್ಧತಿ!

breast ironing tradition: ವಿಶ್ವದಾದ್ಯಂತ ವಿಚಿತ್ರ ಸಂಪ್ರದಾಯಗಳಿವೆ. ಪ್ರತಿಯೊಂದು ಸಂಪ್ರದಾಯಕ್ಕೂ ತಮ್ಮದೇ ಆದ ಕಾರಣಗಳಿದ್ದರೂ ಬಹುತೇಕ ಸಂಪ್ರದಾಯಗಳು ಹೆಣ್ಣು ಮಕ್ಕಳ ಮೇಲೆ ನೋವುಂಟು ಮಾಡುವಂತದ್ದೇ ಆಗಿರುತ್ತದೆ. ಆಫ್ರಿಕದಲ್ಲೊಂದು ಸಂಪ್ರದಾಯ (African Culture) ಹೆಣ್ಣು ಮಕ್ಕಳ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬಿರುತ್ತಿದ್ದರೂ ಇನ್ನೂ ಹೆಚ್ಚಿನ ಭಾಗಗಳಲ್ಲಿ ಆಚರಣೆಯಲ್ಲಿದೆ. ಇದೇನಿದು ಬ್ರೆಸ್ಟ್‌ ಐರೊನಿಂಗ್‌ ಪದ್ಧತಿ? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

African Culture
Koo

ವಿಶ್ವದ ಪ್ರತಿಯೊಂದು ದೇಶವೂ ತನ್ನದೇ ಆದ ಸಂಸ್ಕೃತಿ, ಆಚರಣೆಗಳನ್ನು (Culture, ritual) ಹೊಂದಿರುತ್ತದೆ. ಕೆಲವೊಂದು (Breast Ironing) ವಿಚಿತ್ರ ಆಚರಣೆಗಳೂ ಇರುತ್ತವೆ. ಇದರಲ್ಲಿ ಆಫ್ರಿಕಾದಲ್ಲಿ (African Culture) ಯುವತಿಯರಿಗೆ ನಡೆಸುವ ಬ್ರೆಸ್ಟ್ ಐರನಿಂಗ್ (Breast Ironing) ಕೂಡ ಒಂದು. ಇದನ್ನು ಸ್ತನವನ್ನು ಚಪ್ಪಟೆಗೊಳಿಸುವುದು ಎನ್ನಲಾಗುತ್ತದೆ.

ಯುವತಿಯರ ಅಭಿವೃದ್ಧಿ ಹೊಂದುತ್ತಿರುವ ಸ್ತನಗಳ ಮೇಲೆ ಬಿಸಿಯಾದ ವಸ್ತುಗಳಿಂದ ಬಡಿಯುವುದು ಮತ್ತು ಮಸಾಜ್ ಮಾಡುವ ಕ್ರಮ ಇದಾಗಿದೆ. ಇದನ್ನು ತಾಯಿ ಅಥವಾ ಅಜ್ಜಿಯರಂತಹ ನಿಕಟ ಸ್ತ್ರೀ ಸಂಬಂಧಿಗಳು ತಮ್ಮ ಹೆಣ್ಣು ಮಕ್ಕಳಿಗೆ ಮಾಡಿಸುತ್ತಾರೆ. ಈ ಸಾಂಪ್ರದಾಯಿಕ ಅಭ್ಯಾಸವು ಲೈಂಗಿಕ ಕಿರುಕುಳ, ಸಣ್ಣ ವಯಸ್ಸಿನಲ್ಲಿ ಗರ್ಭಧಾರಣೆ ಮತ್ತು ಬಲವಂತದ ಮದುವೆಯಿಂದ ಹುಡುಗಿಯರನ್ನು ರಕ್ಷಿಸುವ ಗುರಿಯನ್ನು ಹೊಂದಿದೆ. ಈ ರೀತಿ ಮಾಡುವುದರಿಂದ ಅವರು ಪುರುಷರಿಗೆ ಕಡಿಮೆ ಆಕರ್ಷಕವಾಗಿರುತ್ತಾರೆ ಎನ್ನುವ ನಂಬಿಕೆ ಆ ಜನರಲ್ಲಿದೆ.

ಸ್ತನವನ್ನು ಚಪ್ಪಟೆಗೊಳಿಸುವ ಈ ಸಂಪ್ರದಾಯವು ಯುವತಿಯರ ದೈಹಿಕ ಮತ್ತು ಮಾನಸಿಕ ಮೇಲೆ ಗಂಭೀರ ಹಾನಿಯನ್ನು ಉಂಟು ಮಾಡುತ್ತದೆ. ಇದರಿಂದ ಸಾವನ್ನಪ್ಪುವವರೂ ಇದ್ದಾರೆ. ಆದರೆ ಬದುಕುಳಿದವರ ಮೇಲೆ ದೀರ್ಘಕಾಲ ಇದರ ಗುರುತು ಉಳಿದು ಬಿಡುತ್ತದೆ.

African Culture
African Culture


ಸಾಂಸ್ಕೃತಿಕ ಸಮರ್ಥನೆ

ಇದನ್ನು ಕ್ಯಾಮರೂನ್‌ನಲ್ಲಿ ಹೆಚ್ಚಾಗಿ ಮಾಡಲಾಗುತ್ತದೆ. ಇತರ ಆಫ್ರಿಕನ್ ದೇಶಗಳಾದ ನೈಜೀರಿಯಾ, ಟೋಗೊ, ಗಿನಿಯಾ, ಕೋಟ್ ಡಿ’ಐವೊಯಿರ್, ಕೀನ್ಯಾ ಮತ್ತು ಜಿಂಬಾಬ್ವೆಯಲ್ಲೂ ಈ ಸಂಪ್ರದಾಯವಿದೆ. ನಗರ ಪ್ರದೇಶಗಳಲ್ಲಿ ಲೈಂಗಿಕ ದುರ್ಬಳಕೆಯ ಅಪಾಯ ಹೆಚ್ಚಾಗಿರುವುದರಿಂದ ಈ ಸಂಪ್ರದಾಯ ಹೆಚ್ಚು ಪ್ರಚಲಿತವಾಗಿದೆ.

ಸ್ತನವನ್ನು ಚಪ್ಪಟೆಗೊಳಿಸಲು ಮರದ ಕೀಟ, ಎಲೆ, ಬಾಳೆಹಣ್ಣು, ತೆಂಗಿನ ಚಿಪ್ಪು, ರುಬ್ಬುವ ಕಲ್ಲು, ಕಲ್ಲಿದ್ದಲಿನ ಮೇಲೆ ಬಿಸಿ ಮಾಡಲಾದ ಸುತ್ತಿಗೆಗಳನ್ನು ಬಳಸಲಾಗುತ್ತದೆ. ಈ ಪ್ರಕ್ರಿಯೆಯು ವಾರಗಳಿಂದ ಹಲವಾರು ತಿಂಗಳುಗಳವರೆಗೆ ನಡೆಯುತ್ತದೆ.

African Culture
African Culture

ಇತಿಹಾಸದಲ್ಲೂ ಉಲ್ಲೇಖ

ಸ್ತನವನ್ನು ಚಪ್ಪಟೆಗೊಳಿಸುವ ಈ ಅಭ್ಯಾಸವನ್ನು ಶುಶ್ರೂಷಾ ನೋವನ್ನು ನಿವಾರಿಸಲು ಪುರಾತನ ಕಾಲದಿಂದಲೂ ಮಾಡಲಾಗುತ್ತಿದೆ. ಈಗ ಇದು ಯುವತಿಯರ ಮೇಲೆ ನಿಯಂತ್ರಣ ಬೀರುವ ವಿಧಾನವಾಗಿ ಪರಿವರ್ತನೆಯಾಗಿದೆ ಎನ್ನಲಾಗುತ್ತದೆ.

ಆರೋಗ್ಯದ ಮೇಲೆ ಪರಿಣಾಮ

ಸ್ತನವನ್ನು ಚಪ್ಪಟೆಗೊಳಿಸುವುದು ತೀವ್ರ ತರದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ತೀವ್ರವಾದ ನೋವು, ಅಂಗಾಂಶ ಹಾನಿಯನ್ನು ಉಂಟು ಮಾಡುತ್ತದೆ. ದೈಹಿಕ ವಿರೂಪ, ಸ್ತನ್ಯಪಾನಕ್ಕೆ ತೊಂದರೆ, ವಿವಿಧ ರೀತಿಯ ಸೋಂಕು, ಸ್ತನ ಕ್ಯಾನ್ಸರ್ ನ ಅಪಾಯವನ್ನು ಹೆಚ್ಚಿಸುತ್ತದೆ. ಅಲ್ಲದೇ ಇದು ಯುವತಿಯರ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Viral News: ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಕ್ರೀಡಾ ಸಚಿವೆ ಕಿಸ್‌ ಕೊಟ್ಟಿದ್ದು ಸಂಸ್ಕೃತಿಯ ಭಾಗ; ಸಮರ್ಥಿಸಿಕೊಂಡ ನೆಟ್ಟಿಗರು

ವ್ಯಾಪಕ ವಿರೋಧ, ಜಾಗೃತಿಗೆ ಯತ್ನ

ಸ್ತನವನ್ನು ಚಪ್ಪಟೆಗೊಳಿಸುವ ಸಂಪ್ರದಾಯವನ್ನು ತಡೆಯಲು ಕೆಲವು ಕಾನೂನುಗಳನ್ನು ರೂಪಿಸಿದ್ದರೂ ಅದು ಪರಿಣಾಮಕಾರಿಯಾಗಿ ಜಾರಿಯಾಗುವಲ್ಲಿ ವಿಫಲವಾಗಿದೆ. ಕೆಲವು ಸಂಘ ಸಂಸ್ಥೆಗಳು ಈ ಸಂಪ್ರದಾಯದ ವಿರುದ್ಧ ಜಾಗೃತಿಯನ್ನು ಮೂಡಿಸುವ ಪ್ರಯತ್ನ ನಡೆಸುತ್ತಿದೆ. ಆದರೂ ಆಫ್ರಿಕಾ ಖಂಡದಲ್ಲಿ ಈ ಭಯಾನಕ ಪದ್ಧತಿ ಜಾರಿಯಲ್ಲಿದೆ.

Continue Reading

ಪ್ರಮುಖ ಸುದ್ದಿ

Space mission : ಇಂಡೊ- ಯುಎಸ್​ ಬಾಹ್ಯಾಕಾಶ ಯಾನಕ್ಕೆ ಭಾರತದ ಶುಭಾಂಶು ಶುಕ್ಲಾ ‘ಪ್ರಧಾನ ಗಗನಯಾತ್ರಿ’

Space mission : “ಗಗನಯಾತ್ರಿ” ಎಂದೂ ಕರೆಯಲ್ಪಡುವ ಇಬ್ಬರೂ ಅಧಿಕಾರಿಗಳ ತರಬೇತಿ ಆಗಸ್ಟ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಯೋಜನೆ ಅವಧಿಯಲ್ಲಿ ಅಧಿಕಾರಿಗಳು ಐಎಸ್ಎಸ್​​ನಲ್ಲಿ ಆಯ್ದ ವೈಜ್ಞಾನಿಕ ಸಂಶೋಧನೆ ಮತ್ತು ತಂತ್ರಜ್ಞಾನ ಪ್ರದರ್ಶನ ಪ್ರಯೋಗಗಳನ್ನು ನಡೆಸಲಿದ್ದಾರೆ. ಬಾಹ್ಯಾಕಾಶ ಕುರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ.

VISTARANEWS.COM


on

Space mission
Koo

ನವದೆಹಲಿ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹಾಗೂ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೊ ಜಂಟಿಯಾಗಿ ಕೈಗೊಳ್ಳಲಿರುವ ಬಾಹ್ಯಾಕಾಶ ಯಾನ ಯೋಜನೆಗೆ (Space mission) ಭಾರತದ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಯ್ಕೆಯಾಗಿದ್ದಾರೆ. ಅವರನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (International Space Station) ಪ್ರಮುಖ ಗಗನಯಾತ್ರಿಯಾಗಿ ಕಳುಹಿಸಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶುಕ್ರವಾರ ತಿಳಿಸಿದೆ. ಇಸ್ರೋದ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (HSFC) ಅಮೆರಿಕ ಮೂಲದ ಆಕ್ಸಿಯೋಮ್ ಸ್ಪೇಸ್​​ನೊಂದಿಗೆ ಮುಂಬರುವ ಆಕ್ಸಿಯಮ್ -4 ಮಿಷನ್​ಗಾಗಿ ಬಾಹ್ಯಾಕಾಶ ಹಾರಾಟ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ಗ್ರೂಪ್ ಕ್ಯಾಪ್ಟನ್ ಶುಕ್ಲಾ ಪ್ರೈಮರಿ ಮಿಷನ್ ಪೈಲಟ್ ಆಗಿದ್ದರೆ, ಭಾರತೀಯ ವಾಯುಪಡೆಯ ಮತ್ತೊಬ್ಬ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಬ್ಯಾಕಪ್ ಮಿಷನ್ ಪೈಲಟ್ ಆಗಿದ್ದಾರೆ.

“ಗಗನಯಾತ್ರಿ” ಎಂದೂ ಕರೆಯಲ್ಪಡುವ ಇಬ್ಬರೂ ಅಧಿಕಾರಿಗಳ ತರಬೇತಿ ಆಗಸ್ಟ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಯೋಜನೆ ಅವಧಿಯಲ್ಲಿ ಅಧಿಕಾರಿಗಳು ಐಎಸ್ಎಸ್​​ನಲ್ಲಿ ಆಯ್ದ ವೈಜ್ಞಾನಿಕ ಸಂಶೋಧನೆ ಮತ್ತು ತಂತ್ರಜ್ಞಾನ ಪ್ರದರ್ಶನ ಪ್ರಯೋಗಗಳನ್ನು ನಡೆಸಲಿದ್ದಾರೆ. ಬಾಹ್ಯಾಕಾಶ ಕುರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ.

ಆಕ್ಸಿಯೋಮ್ -4 ಮಿಷನ್ ಸಿಬ್ಬಂದಿಗಳ ಪಟ್ಟಿಯಲ್ಲಿ ಅಮೆರಿಕದ ಪೆಗ್ಗಿ ವಿಟ್ಸನ್ (ಕಮಾಂಡರ್), ಭಾರತದ ಗ್ರೂಪ್ ಕ್ಯಾಪ್ಟನ್ ಶುಕ್ಲಾ (ಪೈಲಟ್), ಪೋಲೆಂಡ್​​ನ ಸಾವೋಜ್ ಉಜ್ನಾನ್​ಸ್ಕಿ (ಮಿಷನ್ ಸ್ಪೆಷಲಿಸ್ಟ್) ಮತ್ತು ಹಂಗೇರಿಯ ಟಿಬೋರ್ ಕಾಪು (ಮಿಷನ್ ಸ್ಪೆಷಲಿಸ್ಟ್) ಇದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ 8ನೇ ದಿನವಾದ ಶನಿವಾರ ಭಾರತದ ಸ್ಪರ್ಧೆಗಳ ವಿವರ ಇಲ್ಲಿದೆ

ಕಳೆದ ವರ್ಷ ವಾಯುಪಡೆಯಿಂದ ನಾಲ್ಕು ಪರೀಕ್ಷಾ ಪೈಲಟ್​​​ಗಳನ್ನು ಆಯ್ಕೆ ಮಾಡಲಾಗಿತ್ತು. ಅವರ ಪ್ರಾಥಮಿಕ ತರಬೇತಿಯನ್ನು ಬೆಂಗಳೂರಿನ ಇಸ್ರೋದ ಗಗನಯಾತ್ರಿ ತರಬೇತಿ ಸೌಲಭ್ಯದಲ್ಲಿ ಪ್ರಾರಂಭಿಸಲಾಗಿತ್ತು. ಗಗನಯಾನ ಮಿಷನ್ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಭಾರತದ ಮಾನವ ಬಾಹ್ಯಾಕಾಶ ಹಾರಾಟ ಸಾಮರ್ಥ್ಯವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಮೂರು ದಿನಗಳ ಕಾರ್ಯಾಚರಣೆಗಾಗಿ ಮೂವರು ಸದಸ್ಯರ ತಂಡವನ್ನು 400 ಕಿ.ಮೀ ಕಕ್ಷೆಗೆ ಉಡಾಯಿಸಲು ಮಿಷನ್ ಯೋಜನೆ ರೂಪಿಸಿದೆ. ಇದು ಭಾರತೀಯ ಜಲಪ್ರದೇಶದಲ್ಲಿ ಸುರಕ್ಷಿತವಾಗಿ ಭೂಮಿಗೆ ಮರಳುವುದರ ಮೂಲಕ ಕೊನೆಗೊಳ್ಳುತ್ತದೆ.

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಯಾರು?

ಲಕ್ನೋದಲ್ಲಿ ಜನಿಸಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಸುಮಾರು 18 ವರ್ಷಗಳ ಹಿಂದೆ ಕಠಿಣ ಮತ್ತು ದೀರ್ಘ ಮಿಲಿಟರಿ ತರಬೇತಿಗಾಗಿ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರಿದ್ದರು. ಅಲ್ಲಿಂದ ಭಾರತೀಯ ವಾಯುಪಡೆಯಲ್ಲಿ ಅವರ ಪ್ರಯಾಣ ಪ್ರಾರಂಭವಾಯಿತು.

ಶುಕ್ಲಾ ಅವರ ಹಿರಿಯ ಸಹೋದರಿಯ ಹೇಳುವಂತೆ, ಕಾರ್ಗಿಲ್ ಯುದ್ಧ ಸಮಯದಲ್ಲಿ ಭಾರತೀಯ ಸೈನಿಕರ ಶೌರ್ಯ ಮತ್ತು ತ್ಯಾಗದ ವೀರ ಕಥೆಗಳನ್ನು ಓದಿದ ನಂತರ ಸೇನೆ ಸೇರಲು ಪ್ರೇರಣೆ ಪಡೆದಿದ್ದರು. 1999 ರಲ್ಲಿ ಕಾರ್ಗಿಲ್​ನಲ್ಲಿ ಯುದ್ಧ ಪ್ರಾರಂಭವಾದಾಗ ಪಾಕಿಸ್ತಾನದ ಒಳನುಸುಳುವವರು ನಿಯಂತ್ರಣ ರೇಖೆಯನ್ನು (ಎಲ್ಒಸಿ) ದಾಟಿ ಭಾರತೀಯ ಪೋಸ್ಟ್ಗಳನ್ನು ಅತಿಕ್ರಮಿಸಿದಾಗ ಅವರಿಗೆ ಕೇವಲ 14 ವರ್ಷ ವಯಸ್ಸಾಗಿತ್ತು.

Continue Reading

Latest

Kriti Sanon: ನಟಿ ಕೃತಿ ಸನೋನ್‌ ಡೇಟಿಂಗ್‌ ಮಾಡುತ್ತಿರುವ ಈ ಕಬೀರ್ ಬಹಿಯಾ ಯಾರು?

ಬಾಲಿವುಡ್ ನಟಿ ಕೃತಿ ಸನೋನ್ (Kriti Sanon) ಹೆಸರೀಗ ಯುಕೆ ಮೂಲದ ಮಿಲಿಯನೇರ್ ಉದ್ಯಮಿ ಕಬೀರ್ ಬಹಿಯಾ ಅವರೊಂದಿಗೆ ಕೇಳಿ ಬರುತ್ತಿದೆ. ಈ ಹಿಂದೆ ನಟಿ ಹೆಸರು ಕಾರ್ತಿಕ್ ಆರ್ಯನ್, ಪ್ರಭಾಸ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಕೇಳಿ ಬಂದಿತ್ತಾದರೂ ಈ ಬಗ್ಗೆ ಕೃತಿ ಎಂದಿಗೂ ಪ್ರತಿಕ್ರಿಯಿಸಿರಲಿಲ್ಲ. ಇದೀಗ ಕೃತಿ ಮತ್ತೊಮ್ಮೆ ಡೇಟಿಂಗ್ ನಲ್ಲಿರುವುದು ಸುದ್ದಿಯಾಗುತ್ತಿದ್ದಂತೆ ಆ ವ್ಯಕ್ತಿ ಯಾರು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಕಬೀರ್‌ ಹಿನ್ನೆಲೆ ಏನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Kriti Sanon
Koo

ಕ್ರೂ, ಹಿರೊಪಂತಿ, ಮಿಮಿ, ದಿಲ್ವಾಲೆ, ಬರೇಲಿ ಕಿ ಬರ್ಫಿ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟಿ (bollywood actress) ಕೃತಿ ಸನೋನ್ (Kriti Sanon) ಈಗ ಯುಕೆ ಮೂಲದ ಮಿಲಿಯನೇರ್ (UK based millionaire) ಜೊತೆ ಡೇಟಿಂಗ್ ನಲ್ಲಿದ್ದಾರೆ ಎನ್ನುವ ವದಂತಿಗಳು ಕೇಳಿ ಬರುತ್ತಿವೆ. ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಆಕೆಯ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಕಾತರರಾಗಿರುತ್ತಾರೆ.

ಕಾರ್ತಿಕ್ ಆರ್ಯನ್, ಪ್ರಭಾಸ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಡೇಟಿಂಗ್‌ನಲ್ಲಿದ್ದರು ಎನ್ನುವ ವದಂತಿ ಇತ್ತಾದರೂ ಈ ಬಗ್ಗೆ ಕೃತಿ ಎಂದಿಗೂ ಪ್ರತಿಕ್ರಿಯಿಸಿರಲಿಲ್ಲ. ಇದೀಗ ಕೃತಿ ಮತ್ತೊಮ್ಮೆ ಡೇಟಿಂಗ್‌ನಲ್ಲಿರುವುದು ಸುದ್ದಿಯಾಗುತ್ತಿದ್ದಂತೆ ಆ ವ್ಯಕ್ತಿ ಯಾರು ಎನ್ನುವ ಕುತೂಹಲ ಕೃತಿ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಕಬೀರ್ ಬಹಿಯಾ ಯಾರು?

1999ರ ನವೆಂಬರ್‌ನಲ್ಲಿ ಜನಿಸಿದ ಕಬೀರ್ ಬಹಿಯಾ ಇಂಗ್ಲೆಂಡ್‌ನ ಮಿಲ್‌ಫೀಲ್ಡ್ ಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಲಿಂಕ್ಡ್‌ಇನ್ ಪ್ರೊಫೈಲ್‌ನ ಪ್ರಕಾರ ಅವರು ಯುಕೆ ಮೂಲದ ಉದ್ಯಮಿಯಾಗಿದ್ದು, ಲಂಡನ್‌ನ ರೀಜೆಂಟ್ಸ್ ಯೂನಿವರ್ಸಿಟಿಯಿಂದ ವ್ಯಾಪಾರ, ನಿರ್ವಹಣೆ, ಮಾರ್ಕೆಟಿಂಗ್ ಮತ್ತು ಸಂಬಂಧಿತ ಬೆಂಬಲ ಸೇವೆಗಳ ಕುರಿತು ಅಧ್ಯಯನ ಪೂರ್ಣಗೊಳಿಸಿದ್ದಾರೆ.

Kriti Sanon
Kriti Sanon


ಯುಕೆಯಲ್ಲಿ ಸೌಥಾಲ್ ಟ್ರಾವೆಲ್ ಎಂಬ ಪ್ರಮುಖ ಟ್ರಾವೆಲ್ ಕಂಪನಿಯನ್ನು ನಡೆಸುತ್ತಿರುವ ಕುಲ್ಜಿಂದರ್ ಬಹಿಯಾ ಅವರ ಮಗ ಕಬೀರ್. 2019ರ ಸಂಡೇ ಟೈಮ್ಸ್ ಶ್ರೀಮಂತರ ಪಟ್ಟಿಯ ಆಧರಿಸಿ ಹೇಳುವುದಾದರೆ ಕುಲ್ಜಿಂದರ್ ಮತ್ತು ಅವರ ಕುಟುಂಬವು 427 ಮಿಲಿಯನ್ ಪೌಂಡ್‌ಗಳ (ಸುಮಾರು 4590 ಕೋಟಿ ರೂ.) ನಿವ್ವಳ ಮೌಲ್ಯವನ್ನು ಹೊಂದಿದೆ. ಕಬೀರ್ ತನ್ನದೇ ಆದ ಟ್ರಾವೆಲ್ ಕಂಪನಿಯಾದ ವರ್ಲ್ಡ್‌ವೈಡ್ ಏವಿಯೇಷನ್ ​​ಮತ್ತು ಟೂರಿಸಂ ಲಿಮಿಟೆಡ್ ಅನ್ನು ಪ್ರಾರಂಭಿಸಿದ್ದು, 2021ರ ಜೂನ್ ನಿಂದ ಅದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ಕಬೀರ್ ಉದ್ಯಮಿಯಾಗಿದ್ದರೂ ಕ್ರೀಡೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ಅವರ ನೆಚ್ಚಿನ ಫುಟ್‌ಬಾಲ್ ಕ್ಲಬ್ ಬೊರುಸ್ಸಿಯಾ ಡಾರ್ಟ್‌ಮಂಡ್ ಆಗಿದೆ. ಅವರು ಹಲವಾರು ಭಾರತೀಯ ಕ್ರಿಕೆಟಿಗರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ.

ಎಂ.ಎಸ್. ಧೋನಿ, ಹಾರ್ದಿಕ್ ಪಾಂಡ್ಯ ಅವರಿಗೂ ಪರಿಚಿತರು

ನತಾಸಾ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ಅವರ ವಿವಾಹ ಸಮಾರಂಭದಲ್ಲಿ ಕಬೀರ್ ಭಾಗವಹಿಸಿದ್ದರು. ಅಲ್ಲದೇ ಮಹೇಂದ್ರ ಸಿಂಗ್ ಧೋನಿ ಮತ್ತು ಅವರ ಕುಟುಂಬದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. 2024ರ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಧೋನಿ ಮತ್ತು ಅವರ ಪತ್ನಿ ಸಾಕ್ಷಿಯೊಂದಿಗೆ ಕಬೀರ್ ಕಾಣಿಸಿಕೊಂಡಿದ್ದರು. ಕಬೀರ್ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಇಬ್ಬರೂ ಕ್ರಿಕೆಟಿಗರೊಂದಿಗೆ ಅನೇಕ ಚಿತ್ರಗಳನ್ನು ಹೊಂದಿದ್ದಾರೆ.

Kriti Sanon
Kriti Sanon


ಕೃತಿ ಸನೋನ್ ಜೊತೆ ಡೇಟಿಂಗ್ ವದಂತಿ

ಕೃತಿ ಮತ್ತು ಕಬೀರ್ ಹೊಸ ವರ್ಷವನ್ನು ಒಟ್ಟಿಗೆ ಆಚರಿಸುತ್ತಿರುವಾಗ ಅವರ ನಡುವಿನ ಸಂಬಂಧದ ಬಗ್ಗೆ ವದಂತಿಗಳು ಪ್ರಾರಂಭವಾದವು. 2024ರ ಹೋಳಿ ಹಬ್ಬವನ್ನು ಕಬೀರ್ ಜೊತೆ ಕೃತಿ ನಡೆಸಿರುವುದಾಗಿ ಹೇಳುವ ಅನೇಕ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದು ನಟಿಯ ಅಭಿಮಾನಿಗಳು ಕುತೂಹಲ ಕೆರಳಿಸಿದೆ. ಕಬೀರ್‌ಗಿಂತ ಒಂಬತ್ತು ವರ್ಷ ಹಿರಿಯರಾದ ಕೃತಿ ತನ್ನ ಸಹೋದರಿ ನೂಪುರ್ ಮೂಲಕ ಅವರನ್ನು ಮೊದಲ ಬಾರಿ ಭೇಟಿಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: OTT Releases: ಒಟಿಟಿಯಲ್ಲಿ ಈ ತಿಂಗಳು ಕಲ್ಕಿ, ಇಂಡಿಯನ್‌, ಟರ್ಬೊ ಜತೆಗೆ ಇನ್ಯಾವ ಹೊಸ ಚಿತ್ರ, ವೆಬ್‌ ಸಿರೀಸ್‌?

ಕೃತಿ ಸನೋನ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ವೇಳೆ ಕಬೀರ್ ಜೊತೆ ಪ್ರವಾಸ ನಡೆಸಿರುವುದಾಗಿ ಕೇಳಿ ಬಂದಾಗ ಅವರಿಬ್ಬರ ಡೇಟಿಂಗ್ ಗೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಸದ್ಯ ನಟಿ ಕೃತಿ ತನ್ನ ಸಹೋದರಿ ನೂಪುರ್ ಸನೋನ್ ಮತ್ತು ಸ್ನೇಹಿತರೊಂದಿಗೆ ಗ್ರೀಸ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಲ್ಲಿ ಅಭಿಮಾನಿಗಳು ಕೃತಿ ಮತ್ತು ಕಬೀರ್ ಒಟ್ಟಿಗೆ ಇರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹರಿದಾಡುತ್ತಿವೆ. ಇದನ್ನು ನೋಡಿರುವ ಅವರ ಅಭಿಮಾನಿಗಳು ನಟಿ ಕೃತಿ ತಮ್ಮ 34ನೇ ಹುಟ್ಟುಹಬ್ಬವನ್ನು ಕಬೀರ್ ಜೊತೆ ಆಚರಿಸಿದರು ಎಂಬುದಾಗಿ ಹೇಳುತ್ತಿದ್ದಾರೆ

Continue Reading
Advertisement
murder case
ಶಿವಮೊಗ್ಗ22 seconds ago

Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

Tharun Sudhir And Sonal Montero Gave Update On their Wedding
ಸ್ಯಾಂಡಲ್ ವುಡ್2 mins ago

Tharun Sudhir: ಸುಧೀರ್-ಸೋನಲ್ ವಿವಾಹ; ಲವ್‌ ಸ್ಟೋರಿ ರಿವೀಲ್‌ ಮಾಡಿದ   ಸ್ಯಾಂಡಲ್​ವುಡ್ ಜೋಡಿ!

Physical abuse
ದೇಶ13 mins ago

Physical Abuse: ಹಾಸಿಗೆ ಹಿಡಿದಿದ್ದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ

BJP-JDS Padayatra ST Somashekhar
ಪ್ರಮುಖ ಸುದ್ದಿ20 mins ago

BJP-JDS Padayatra: ಅಸಮಾಧಾನಗೊಂಡ ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಜನಾಂದೋಲನಕ್ಕೆ ಬೆಂಬಲ?

road Accident
ಚಿತ್ರದುರ್ಗ22 mins ago

Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

Gold Rate Today
ಚಿನ್ನದ ದರ26 mins ago

Gold Rate Today: ಕೊನೆಗೂ ಆಭರಣ ಪ್ರಿಯರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಳಿಕೆ

Akshay Kumar Bollywood folks send him condolence messages
ಬಾಲಿವುಡ್31 mins ago

Akshay Kumar: ನಾನು ಸತ್ತೇ ಹೋದೆ ಎಂಬ ರೀತಿಯಲ್ಲಿ ಸಂತಾಪದ ಸಂದೇಶ ಕಳಿಸುತ್ತಾರೆ ಎಂದು ಗರಂ ಆದ ಅಕ್ಷಯ್‌ ಕುಮಾರ್‌!

PV Sindhu
ಕ್ರೀಡೆ33 mins ago

PV Sindhu: ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಅವಳಿ ಒಲಿಂಪಿಕ್​ ಪದಕ ವಿಜೇತೆ ಪಿ.ವಿ. ಸಿಂಧು

Ramakrishna Ashram
ರಾಯಚೂರು48 mins ago

Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

IPL 2025
ಕ್ರೀಡೆ1 hour ago

IPL 2025: ಇನ್ನು ಮುಂದೆ ಹೀಗೆ ಮಾಡಿದರೆ ವಿದೇಶಿ ಆಟಗಾರರಿಗೆ ಐಪಿಎಲ್​ನಿಂದ 2 ವರ್ಷ ನಿಷೇಧ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ6 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌