Elon Musk @51: ಹುಟ್ಟುಹಬ್ಬದ ಹುಡುಗನ ನಿಮಗೆ ಗೊತ್ತಿರದ 5 ಸಂಗತಿಗಳು - Vistara News

ಅವಿಭಾಗೀಕೃತ

Elon Musk @51: ಹುಟ್ಟುಹಬ್ಬದ ಹುಡುಗನ ನಿಮಗೆ ಗೊತ್ತಿರದ 5 ಸಂಗತಿಗಳು

ವಿಶ್ವದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ಬಗ್ಗೆ ಹೆಚ್ಚಿನವರು ತಿಳಿಯದ ಐದು ವಿಶೇಷ ಸಂಗತಿಗಳು ಇಲ್ಲಿವೆ. ಮಸ್ಕ್‌ಗೆ 51 ವರ್ಸ್‌ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ ಬರಹ.

VISTARANEWS.COM


on

elon musk
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವದ ಅತಿ ಶ್ರೀಮಂತರಲ್ಲಿ ಒಬ್ಬರಾದ ಎಲಾನ್‌ ಮಸ್ಕ್‌ ಅವರು ೫೧ ವಸಂತಗಳನ್ನು ಕಂಡಿದ್ದಾರೆ. ಪೇಪಾಲ್‌, ಸ್ಪೇಸ್‌ ಎಕ್ಸ್‌, ನ್ಯೂರಾಲಿಂಕ್‌ನಂಥ ಹೊಸತನದೊಂದಿಗೆ ಹುಟ್ಟಿದ ಕಂಪನಿಗಳ ಜೊತೆ ನಂಟಾಗಿದ್ದವರು ಈತ. ವಿಪರೀತ ಎನ್ನುವಂಥ ತರ್ಕ, ಐಲು ಎನಿಸುವಂಥ ಸೃಜನಶೀಲತೆ, ಒಂದಿಷ್ಟು ಸಿನಿಕತನ ಎಲ್ಲದರ ಒಟ್ಟುಮೊತ್ತದಂತೆ ಕಾಣುವ ಟೆಸ್ಲಾ ಕಂಪನಿಯ ಮುಖ್ಯಸ್ಥ ಮಸ್ಕ್‌ ಬಗ್ಗೆ ಒಂದಿಷ್ಟು ಕುತೂಹಲಕರ ಮಾಹಿತಿಗಳು ಇಲ್ಲಿವೆ.

೧೨ಕ್ಕೇ ಚುರುಕಿದ್ದ ಪೋರ: ಹೊಸತನದ ಹುಡುಕಾಟ ಅವರಿಗೆ ೧೨ರ ಹರೆಯದಲ್ಲೇ ಇತ್ತು. ʻಬ್ಲಾಸ್ಟರ್‌ʼ ಎನ್ನುವಂತ ಒಂದು ಕಂಪ್ಯೂಟರ್‌ ಆಟಕ್ಕೆ ಪ್ರೋಗ್ರಾಮಿಂಗ್‌ ಕೋಡ್‌ ಅಭಿವೃದ್ಧಿ ಪಡಿಸಿದ್ದು ಇದೇ ವಯಸ್ಸಿನಲ್ಲಿ. ಆನಂತರ ಮೂಲ ಕೋಡ್‌ ಅನ್ನು ೫೦೦ ಡಾಲರ್‌ಗಳಿಗೆ ಆತ ಮಾರಾಟ ಮಾಡಿದ್ದರು.

ಮನೆಯೇ ನೈಟ್‌ಕ್ಲಬ್‌!: ಐಲು ಎಂಬಂಥ ಸ್ವಭಾವಗಳು ಕಾಣಲಾರಂಭಿಸಿದ್ದೂ ಅವರ ಹರೆಯದಲ್ಲಿಯೇ. ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದಾಗ, ದೊಡ್ಡದೊಂದು ಮನೆಯನ್ನು ಬಾಡಿಗೆ ಪಡೆದಿದ್ದ ಆತ, ಆ ಬಾಡಿಗೆ ಕಟ್ಟಲು ಮನೆಯನ್ನು ನೈಟ್‌ಕ್ಲಬ್‌ ಆಗಿ ಪರಿವರ್ತಿಸಿದ್ದರು. ತಲಾ ೫ ಡಾಲರ್‌ನಂತೆ ಪ್ರವೇಶ ಶುಲ್ಕ ವಿಧಿಸಿದ್ದರು. ಒಂದು ವಾರಾಂತ್ಯವಂತೂ ೫೦೦ಕ್ಕಿಂತ ಹೆಚ್ಚು ಜನ ಅವರ ಕ್ಲಬ್‌ಗೆ ಭೇಟಿ ನೀಡಿದ್ದರಿಂದ ಝಣಝಣ ಕಾಂಚಾಣ ಅವರ ಕೈ ಸೇರಿತ್ತು.

ಇದನ್ನೂ ಓದಿ: ಎಲಾನ್‌ ಮಸ್ಕ್‌ ಡೀಲ್‌ಗೆ ನಿಯಂತ್ರಕ ವ್ಯವಸ್ಥೆ ಕೊಟ್ಟಿದ್ದ ಅವಧಿ ಮುಗಿಯಿತು ಎಂದ ಟ್ವಿಟರ್

ಸ್ಟ್ಯಾನ್‌ಫರ್ಡ್‌ ವಿದ್ಯಾರ್ಥಿ: ೨೪ರ ಹರೆಯದಲ್ಲಿ, ಆನ್ವಯಿಕ ಭೌತಶಾಸ್ತ್ರ ಓದಲೆಂದು ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫರ್ಡ್‌ ವಿಶ್ವವಿದ್ಯಾಲಯಕ್ಕೆ ಹೋಗಿ ಎರಡು ದಿನಗಳಾಗಿದ್ದವಷ್ಟೆ. ಆಗಲೇ ಝಿಪ್‌೨ ಎಂಬ ಕಂಪನಿ ಪ್ರಾರಂಭಿಸಲೆಂದು ಓದಿಗೆ ಕೈಮುಗಿದರು. ೧೯೯೯ರಲ್ಲಿ ಈ ಕಂಪನಿಯನ್ನು ಕಾಂಪ್ಯಾಕ್‌ ಸಂಸ್ಥೆ ೩೦೦ ಮಿಲಿಯನ್‌ ಡಾಲರ್‌ಗೆ ಖರೀದಿಸಿತು!

ಗೂಗಲ್‌ ಪಾಲಾಗುವುದರಲ್ಲಿದ್ದ ಟೆಸ್ಲಾ: ಒಂದು ಸಂದರ್ಭದಲ್ಲಿ ಮಸ್ಕ್‌ ಒಡೆತನದ ಟೆಸ್ಲಾ ಕಂಪನಿ ಗೂಗಲ್‌ ಎಂಬ ದೈತ್ಯನ ಪಾಲಾಗಿಯೇ ಬಿಟ್ಟಂತಿತ್ತು. ೭೦೦ ಬಿಲಿಯನ್‌ ಡಾಲರ್‌ ಬೆಲೆಯ ಟೆಸ್ಲಾ ಕಂಪನಿ ೨೦೧೩ರ ಹೊತ್ತಿಗೆ ಮಾರುಕಟ್ಟೆಯಲ್ಲಿ ಕುಂಟುತ್ತಿತ್ತು ಎಂಬ ಕಾರಣಕ್ಕೆ, ಅದನ್ನು ೧೧ ಬಿಲಿಯನ್‌ ಡಾಲರ್‌ ಮಾರಾಟ ಮಾಡುವ ಬಗ್ಗೆ ಗೂಗಲ್‌ ಸಿಇಒ ಲಾರಿ ಪೇಜ್‌ ಜೊತೆಗೆ ಮಾತುಕತೆ ನಡೆದಿತ್ತು. ಅದಾದ ಕೆಲವೇ ದಿನಗಳಲ್ಲಿ ಟೆಸ್ಲಾ ಚೇತರಿಸಿಕೊಂಡಿದ್ದರಿಂದ, ಈ ಒಪ್ಪಂದ ಅರ್ಧಕ್ಕೆ ನಿಂತಿತ್ತು.

ʻಐರನ್‌ ಮ್ಯಾನ್‌ʼ: ಮಸ್ಕ್‌ ಅವರಿಂದಲೇ ಸ್ಫೂರ್ತಿ ಪಡೆದು ನಿರ್ಮಾಣಗೊಂಡಿದ್ದ ʻಐರನ್‌ ಮ್ಯಾನ್‌ʼ ಚಲನಚಿತ್ರಕ್ಕಾಗಿ ತಾವು ಅವರಿಂದಲೇ ನೆರವು ಪಡೆದಿದ್ದಾಗಿ ನಿರ್ದೇಶಕ ಜಾನ್‌ ಫವ್‌ರೋ ಹೇಳಿಕೊಂಡಿದ್ದಾರೆ. ಚಿತ್ರದ ನಾಯಕ ಟೋನಿ ಸ್ಟಾರ್ಕ್‌ ಕಲ್ಪನೆಯೂ ಮಸ್ಕ್‌ ಅವರನ್ನೇ ಆಧರಿಸಿದ್ದು. ಐರನ್‌ ಮ್ಯಾನ್‌-೨ ನಲ್ಲಿ ಮಸ್ಕ್‌ ಒಂದು ಅತಿಥಿ ಪಾತ್ರದಲ್ಲೂ ನಟಿಸಿದ್ದರು. ಮಾತ್ರವಲ್ಲ, ತಮ್ಮ ಸ್ಪೇಸ್‌-ಎಕ್ಸ್‌ ಆವರಣವನ್ನು ಈ ಚಿತ್ರದ ಚಿತ್ರೀಕರಣಕ್ಕಾಗಿ ಉಚಿತವಾಗಿಯೂ ನೀಡಿದ್ದರಂತೆ.

ಇದನ್ನೂ ಓದಿ: ಅವರು ಮಕ್ಕಳಂತಿರಲೇ ಇಲ್ಲ: Elon Musk ತಾಯಿ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Gali Janardana Reddy : ಗಣಿ ಧಣಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಮಡಿಲಿಗೆ, ಕಲ್ಯಾಣದಲ್ಲಿ ಲಾಭ ನಿರೀಕ್ಷೆ

Gali Janardhana Reddy : ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಲಾಭವಾಗುವ ನಿರೀಕ್ಷೆ ಇದೆ.

VISTARANEWS.COM


on

Gali Janarhana Reddy
Koo

ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ (Assembly Election 2023) ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya pragati Party) ಸ್ಥಾಪನೆ ಮಾ‌ಡಿ ಸಡ್ಡು ಹೊಡೆದಿದ್ದ ಗಾಲಿ ಜನಾರ್ದನ ರೆಡ್ಡಿ (Gali Janardana Reddy) ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ (Janardhana Reddy rejoins Congress). ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಅವರು ಲೋಕಸಭಾ ಚುನಾವಣೆಗೆ (Lok Sabha Election 2024) ಮುನ್ನ ಬಿಜೆಪಿಗೆ ಬಲ ತುಂಬಿದ್ದಾರೆ. ಅವರ ಮರು ಸೇರ್ಪಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಾಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್‌, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಅವರು ಭಾಗಿಯಾಗಿದ್ದಾರೆ. ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು. ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ. ಅವರು ನಾಯಕರು ಮತ್ತು ಹಿಂಬಾಲಕರನ್ನು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಪಕ್ಷಕ್ಕೆ ಸ್ವಾಗತ ಮಾಡಿದರು.

ಮೋದಿ ಅವರ ನಾಯಕತ್ವ ಮೆಚ್ಚಿ ಬಂದಿದ್ದಾರೆ ಎಂದ ವಿಜಯೇಂದ್ರ

ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಪಕ್ಷಕ್ಕೆ ಬಂದಿರುವುದು ಬಹಳ ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಗಾಲಿ ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು, ತಾವೇ ಕಟ್ಟಿದ ಪಕ್ಷವನ್ನು ವಿಸರ್ಜನೆ ಮಾಡಿ ಬಿಜೆಪಿಯೊಂದಿಗೆ ವಿಲೀನ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಶಕ್ತಿ ಬಂದಂತಾಗಿದೆ. ಮೋದಿ ಅವರ ನಾಯಕತ್ವ ಮೆಚ್ಚಿ ಮರು ಸೇರ್ಪಡೆ ಆಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

Gali Janarhana Reddy1
ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಂದಿಗೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ʻʻಲೋಕಸಭೆಯಲ್ಲಿ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ದಿನೇದಿನೆ ಮೋದಿ ಅವರ ಪರ ವಾತಾವರಣ ಹೆಚ್ಚುತ್ತಿದೆ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ರೂಪಿಸಲಿದೆ‌ʼʼ ಎಂದು ಹೇಳಿದ್ದಾರೆ.

ಬೆಳಗ್ಗೆ ಹೋಗಿ ಮಧ್ಯಾಹ್ನ ಮರಳಿ ಬಂದ ಹಾಗೆ ಅನಿಸ್ತಿದೆ ಎಂದ Gali Janardana Reddy

ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಿದ್ದೇನೆ. ನನ್ನ ಕಷ್ಟದ ಕಾಲದಲ್ಲಿ ನನ್ನ ಬೆನ್ನಿಗೆ ನಿಂತ ಎಲ್ಲಾ ಕಾರ್ಯಕರ್ತರಿಗೂ ವಂದನೆ ಸಲ್ಲಿಸ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಗೆ ಸೇರ್ಪಡೆ ಆಗಿದ್ದೇವೆ ಎಂದು ಹೇಳಿದರು.

ʻʻದೇಶದ ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಿನಂತೆ ಕೆಲಸ‌ ಮಾಡಿರುವ ಮೋದಿ ಅವರಿಗೆ ವಂದನೆಗಳು. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ, ಬಾಹ್ಯ ಬೆಂಬಲ ಬೇಡ. ಬಿಜೆಪಿಗೆ ಬಂದು ಕೆಲಸ ಮಾಡಿ ಅಂತ ಆಹ್ವಾನ ನೀಡಿದರು. ಅವರ ಆಹ್ವಾನ ಸ್ವೀಕರಿಸಿ ಬಂದಿದ್ದೇನೆ. ಇದು ನನ್ನ ಪೂರ್ವ ಜನ್ಮದ ಪುಣ್ಯʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಬಿ.ಎಸ್‌. ಯಡಿಯೂರಪ್ಪ ಅವರು ನನಗೆ ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರು. ಯಡಿಯೂರಪ್ಪ ಅವರು ಸಿಎಂ‌ ಆಗಿದ್ದಾಗ ಅವರ ಕ್ಯಾಬಿನೆಟ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈಗ ಅವರ ಸುಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರೋದು ನನ್ನ ಪುಣ್ಯ. ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ, ಕೆಲಸ ಮಾಡುತ್ತೇವೆ ಎಂದು ಹೇಳಿದರು.

ʻʻಎಲ್ಲಾ ಏಳುಬೀಳುಗಳನ್ನು ನೋಡಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿರೋ ಖುಷಿ ಇದೆ. ಕೆಲವು ಕಾರಣದಿಂದ ಹೊರಗೆ ಹೋಗಿದ್ದೆ. 13 ವರ್ಷಗಳ ಬಳಿಕ ವಾಪಸ್ ಬಂದಿದ್ದೇನೆ ಅನಿಸುತ್ತಿಲ್ಲ. ಬೆಳಗ್ಗೆ ಹೋಗಿ, ಮಧ್ಯಾಹ್ನ ಬಂದಿದ್ದೇನೆ ಅನಿಸುತ್ತಿದೆʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ : Rekha Patra: ಸಂದೇಶ್‌ಖಾಲಿ ಸಂತ್ರಸ್ತೆಗೆ ಟಿಕೆಟ್‌ ನೀಡಿದ ಬಿಜೆಪಿ; ಯಾರಿವರು ರೇಖಾ ಪಾತ್ರಾ?

Gali Janardana Reddy ಅಜ್ಞಾತವಾಸ ಮುಗಿಸಿ ಮರಳಿದ ಶ್ರೀರಾಮ ಎಂದ ಶ್ರೀರಾಮುಲು

ಜನಾರ್ದನ ರೆಡ್ಡಿ ಅವರ ಪಕ್ಷ ಮರು ಸೇರ್ಪಡೆಯಿಂದ ಅವರ ಗೆಳೆಯ ಹಾಗೂ ಬಳ್ಳಾರಿ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು, ಜನಾರ್ದನ ರೆಡ್ಡಿ ಅವರು ರಾಜಕೀಯ ಅಜ್ಞಾತವಾಸ ಮುಗಿಸಿ ಬಿಜೆಪಿಗೆ ವಾಪಸು ಬರ್ತಿದ್ದಾರೆ. ಅವರು ಬಿಜೆಪಿಗೆ ಬರುವುದರಿಂದ ರಾಜಕೀಯವಾಗಿ ನಮಗೆ ಲಾಭ ಆಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ನಮಗೆ ಲಾಭ ಆಗಲಿದೆ. ನಮಗೆ ಈ ಬೆಳವಣಿಗೆ ಹೆಚ್ಚು ಶಕ್ತಿ ತಂದಿದೆ. ರಾಷ್ಟ್ರೀಯ ನಾಯಕರು ರೆಡ್ಡಿ ಬಿಜೆಪಿಗೆ ಬರಲು ಕಾರಣರಾಗಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪಿಎಂ ಮಾಡಲು ಈ ನಿರ್ಧಾರ ಎಂದು ಹೇಳಿದರು ಶ್ರೀರಾಮುಲು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಈ ಬೆಳವಣಿಗೆ ಆಗಿದ್ದರೆ ಲಾಭ ಆಗುತ್ತಿತ್ತು. ಎಲ್ಲವೂ ರಾಷ್ಟ್ರೀಯ ನಾಯಕರ ಇಚ್ಛೆಯಂತೆ ಆಗುತ್ತಿದೆ ಎಂದು ಶ್ರೀರಾಮುಲು ಹೇಳಿದರು.

Gali Janardana Reddy ಸೇರ್ಪಡೆಯಿಂದ ಬಿಜೆಪಿಗೆ ಏನು ಲಾಭ?

ಗಾಲಿ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿ ಸೇರುವುದರಿಂದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಕಮಲ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ.

ಅದರಲ್ಲೂ ಮುಖ್ಯವಾಗಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರಿಗೆ ಸಾಕಷ್ಟು ಲಾಭವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಮತಗಳು ವಿಭಜನೆ ಆಗೋದು ತಪ್ಪಲಿದೆ.

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಪ್ರಭಾವಿ ನಾಯಕರ ಕೊರತೆಯನ್ನು ರೆಡ್ಡಿ ಸೇರ್ಪಡೆ ನೀಗಲಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ಅನಿವಾರ್ಯವಾದರೆ ರೆಡ್ಡಿ ತಂತ್ರಗಳು ಬಿಜೆಪಿಗೆ ಅನುಕೂಲವಾಗಲಿದೆ. ಯಾಕೆಂದರೆ, ಇಂಥ ತಂತ್ರಗಳನ್ನು ರೂಪಿಸುವಲ್ಲಿ ರೆಡ್ಡಿ ಅವರು ನಿಪುಣರಾಗಿದ್ದಾರೆ.

Continue Reading

ಬೆಂಗಳೂರು

Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

Arun Yogiraj : ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಒಂದು ಅಪರೂಪದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಎಂದೂ ಕಾಣದ ಮುಗ್ಧ ಮುಖದ ರಾಮ ಕಾಣಿಸುತ್ತಾನೆ.

VISTARANEWS.COM


on

Arun Yogiraj at work time
Koo

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ (Sri Rama Mandir) ವಿರಾಜಮಾನನಾಗಿರುವ ಶ್ರೀ ರಾಮ ಲಲ್ಲಾನ (Ram lalla) ಸುಂದರ ಮೂರ್ತಿಯನ್ನು ನಾವೆಲ್ಲರೂ ಕಣ್ತುಂಬಿಕೊಂಡಿದ್ದೇವೆ. ಕಳೆದ ಜನವರಿ 22ರಂದು ದೇವರ ಪ್ರಾಣಪ್ರತಿಷ್ಠೆ (Rama Pranaprathishte) ನಡೆದಿದ್ದು, ಅಂದು ಮೊದಲ ಬಾರಿಗೆ ಅಲಂಕೃತ ಶ್ರೀ ರಾಮನನ್ನು ನೋಡಿದ ಜನರು ಭಗವಂತನೇ ಧರೆಗಿಳಿದಂತೆ ಕಾಣುತ್ತಿದೆ ಎಂದು ಖುಷಿಪಟ್ಟಿದ್ದರು. ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಅವರ ಭಕ್ತಿ ಮತ್ತು ಕೈಚಳಕದಿಂದ ಮೂಡಿ ಸುಂದರ ಶಿಲ್ಪ ಕಲಾಕೃತಿಯನ್ನು ಕಳೆದ 33 ದಿನಗಳಲ್ಲಿ ಒಟ್ಟು ಒಂದು ಕೋಟಿ ಜನ ನೋಡಿ ಭಾವುಕರಾಗಿದ್ದಾರೆ. ಇದರ ನಡುವೆಯೇ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಇದುವರೆಗೂ ಯಾರೂ ನೋಡಿರದ ಅಪರೂಪದ ಚಿತ್ರವೊಂದನ್ನು ‌ ತೆರೆದಿಟ್ಟಿದ್ದಾರೆ.

ಇದು ಕೆಲಸ ಪ್ರಗತಿಯಲ್ಲಿದ್ದ ಕಾಲದ ಚಿತ್ರ. ನಮಗೆ ಮೂರ್ತಿಯ ಆಯ ಅಳತೆಗಳ ಬಗ್ಗೆ ಧೈರ್ಯದ ಭಾವನೆ ಇತ್ತು. ಆದರೆ, ರಾಮ್‌ ಲಲ್ಲಾನನ್ನು ನಮ್ಮ ಸೂಕ್ಷ್ಮ ಸ್ಪರ್ಶದಿಂದ ಮೂಡಿಸಿದಾಗ ಅಂತಿಮ ಫಲಿತಾಂಶ ಅದ್ಭುತವಾಗಿ ಮೂಡಿಬಂತು ಎಂದಿದ್ದಾರೆ ಅರುಣ್‌ ಯೋಗಿರಾಜ್‌.

ಟ್ವಿಟರ್‌ನಲ್ಲಿ ತಾವು‌ ಮೂರ್ತಿ ಕೆತ್ತನೆ ಮಾಡುತ್ತಿರುವ ಚಿತ್ರವನ್ನು ಪ್ರಕಟಿಸಿರುವ ಅವರು, ರಾಮನ ಮುದ್ದಾದ ಮುಖವನ್ನು ಕೈಯಲ್ಲಿ ಹಿಡಿದಿದ್ದಾರೆ.

ಈ ಚಿತ್ರವನ್ನು ಟ್ವಿಟರ್‌ನಲ್ಲಿ ಐದು ಲಕ್ಷದ 40 ಸಾವಿರ ಜನರು ವೀಕ್ಷಿಸಿದ್ದಾರೆ. ಅದ್ಭುತ ಕಲಾಕೃತಿ ಎಂದು ಹಾಡಿ ಹೊಗಳಿಸಿದ್ದಾರೆ. ಇದು ಮೈಸೂರು ಜಿಲ್ಲೆಯಲ್ಲಿ ಸಿಕ್ಕಿದ ಕೃಷ್ಣ ಶಿಲೆಯಲ್ಲಿ ಕೆತ್ತಿದ ಶಿಲ್ಪವಾಗಿದ್ದು, ಭಾರಿ ಜನಾಕರ್ಷಣೆಯನ್ನು ಪಡೆದಿದೆ.

ಇದನ್ನೂ ಓದಿ : Pandit Pacha Saab | ಶ್ರೀರಾಮ ಕೋಟಿ ಬರೆದಿದ್ದ ಮುಸ್ಲಿಂ ಪಂಡಿತ ವಿಧಿವಶ

ರಾಮ ಲಲ್ಲಾ, ರಾಮ ಜನ್ಮಭೂಮಿ ಚಿತ್ರವಿರುವ ನಾಣ್ಯ ಬಿಡುಗಡೆ

ಈ ನಡುವೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಮ ಲಲ್ಲಾ ಮತ್ತು ರಾಮ ಮಂದಿರದ ಚಿತ್ರವಿರುವ ನಾಣ್ಯವನ್ನು ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

BJP’s national convention: ಮುಂದಿನ 1,000 ವರ್ಷ ರಾಮರಾಜ್ಯ ಸ್ಥಾಪನೆಗೆ ರಾಮ ಮಂದಿರ ನಾಂದಿ; ಬಿಜೆಪಿ ನಿರ್ಣಯದಲ್ಲಿ ಪ್ರಶಂಸೆ

BJP’s national convention : ನರೇಂದ್ರ ಮೋದಿ ನಾಯಕತ್ವದಿಂದ ಭಾರತದಲ್ಲಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆ ಉಳಿದಿದೆ ಎಂಬುದಾಗಿ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

BJP national Convention
Koo

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಭಾನುವಾರ ನಡೆದ ಬಿಜೆಪಿಯ ರಾಷ್ಟ್ರೀಯ ಸಮಾವೇಶ ಮಹತ್ವದ ನಿರ್ಣಯವನ್ನು (BJP’s national convention) ಅಂಗೀಕರಿಸಲಾಗಿದ್ದು , ಮಂದಿರವು ಮುಂದಿನ 1,000 ವರ್ಷಗಳವರೆಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಗೆ ನಾಂದಿ ಹಾಡಲಿದೆ ಎಂದು ಪ್ರತಿಪಾದಿಸಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆ ನಡೆದ ದೇವಾಲಯವು ರಾಷ್ಟ್ರೀಯ ಪ್ರಜ್ಞೆಯ ಪ್ರತೀಕವಾಗಿದೆ. “ವಿಕಸಿತ್​​ ಭಾರತ್” ನ ಅಗತ್ಯಗಳನ್ನು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಭವ್ಯ ಮತ್ತು ದೈವಿಕ ದೇವಾಲಯ ನಿರ್ಮಿಸುವುದು ಐತಿಹಾಸಿಕ ಮತ್ತು ಅದ್ಭುತ ಸಾಧನೆಯಾಗಿದೆ. ಇದು ಮುಂದಿನ 1,000 ವರ್ಷಗಳ ಕಾಲ ಭಾರತದಲ್ಲಿ ‘ರಾಮರಾಜ್ಯ’ ಸ್ಥಾಪನೆಗೆ ಪೂರಕವಾಗಲಿದೆ. ಹೊಸ ಶಕೆಯ ಆರಂಭವಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಇದೇ ವೇಳೆ ರಾಮನ ಪ್ರತಿಷ್ಠಾಪನೆಯನ್ನು ಯಶಸ್ವಿ ನಡೆಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ನಿರ್ಣಯದಲ್ಲಿ ಅಭಿನಂದಿಸಲಾಗಿದೆ.

ರಾಮ ಮಂದಿರವು ಭಾರತದ ದೃಷ್ಟಿಕೋನ, ತತ್ವಶಾಸ್ತ್ರ ಮತ್ತು ಸನ್ಮಾರ್ಗದ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. “ಶ್ರೀ ರಾಮ್ ದೇವಾಲಯವು ನಿಜವಾಗಿಯೂ ರಾಷ್ಟ್ರೀಯ ಪ್ರಜ್ಞೆಯ ದೇವಾಲಯವಾಗಿದೆ” ಎಂದು ಅದು ಹೇಳಿದೆ. ಭಗವಾನ್ ಶ್ರೀ ರಾಮನ ದೈವಿಕ ಪ್ರತಿಷ್ಠಾಪನೆಯನ್ನು ನೋಡಿ ಪ್ರತಿಯೊಬ್ಬ ಭಾರತೀಯ ಸಂತೋಷ ಪಟ್ಟಿದ್ದಾನೆ ಎಂದು ಉಲ್ಲೇಖದಲ್ಲಿ ತಿಳಿಸಲಾಗಿದೆ. ಭಾರತೀಯ ನಾಗರಿಕತೆ ಮತ್ತು ಸಂಸ್ಕೃತಿಯ ಪ್ರತಿಯೊಂದು ಅಂಶದಲ್ಲೂ ಭಗವಾನ್ ರಾಮ, ಸೀತೆ ಮತ್ತು ರಾಮಾಯಣವಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮೂಲಭೂತ ಹಕ್ಕುಗಳಿಗೆ ಸ್ಫೂರ್ತಿ

ಭಾರತದ ಸಂವಿಧಾನದ ಮೂಲ ಪ್ರತಿಯಲ್ಲಿ, ಮೂಲಭೂತ ಹಕ್ಕುಗಳ ವಿಭಾಗದಲ್ಲಿ, ವಿಜಯದ ನಂತರ ಅಯೋಧ್ಯೆಗೆ ಮರಳಿದ ನಂತರ ಭಗವಾನ್ ಶ್ರೀ ರಾಮ, ತಾಯಿ ಸೀತಾ ಮತ್ತು ಲಕ್ಷ್ಮಣ ಜಿ ಅವರ ಚಿತ್ರವಿದೆ. ಭಗವಾನ್ ಶ್ರೀ ರಾಮ ಮೂಲಭೂತ ಹಕ್ಕುಗಳಿಗೆ ಸ್ಫೂರ್ತಿ ಎಂಬುದಕ್ಕೆ ಅದುವೇ ಪುರಾವೆ ಎಂದು ಅದು ಹೇಳಿದೆ. ಅದೇ ರೀತಿ ರಾಮರಾಜ್ಯದ ಕಲ್ಪನೆಯು ಮಹಾತ್ಮ ಗಾಂಧಿಯವರ ಹೃದಯದಲ್ಲಿಯೂ ಇತ್ತು’ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ರಾಮರಾಜ್ಯದ ಕಲ್ಪನೆಯೇ ನಿಜವಾದ ಪ್ರಜಾಪ್ರಭುತ್ವದ ಕಲ್ಪನೆ ಎಂದು ಗಾಂಧೀಜಿ ಹೇಳುತ್ತಿದ್ದರು. ಭಗವಾನ್ ಶ್ರೀ ರಾಮನ ಆದರ್ಶಗಳನ್ನು ಅನುಸರಿಸಿ, ಪ್ರಧಾನಿ ದೇಶದಲ್ಲಿ ಉತ್ತಮ ಆಡಳಿತವನ್ನು ಸ್ಥಾಪಿಸುವ ಮೂಲಕ ನಿಜವಾದ ಅರ್ಥದಲ್ಲಿ ರಾಮರಾಜ್ಯ’ದ ಸ್ಫೂರ್ತಿಯನ್ನು ಜಾರಿಗೆ ತಂದಿದ್ದಾರೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ ಗೆಲುವಿಗಾಗಿ ಕಾರ್ಯಕರ್ತರಿಗೆ 100 ದಿನಗಳ ಟಾಸ್ಕ್‌ ಕೊಟ್ಟ ಮೋದಿ!

ಭಗವಾನ್ ರಾಮನು ತನ್ನ ಮಾತುಗಳಲ್ಲಿ ಮತ್ತು ಆಲೋಚನೆಗಳಲ್ಲಿ ತುಂಬಿದ ಮೌಲ್ಯಗಳನ್ನು ಅನುಸರಿಸಲಾಗುತ್ತಿದೆ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮತ್ತು ‘ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್​ ಅದಕ್ಕೆ ಸ್ಫೂರ್ತಿ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮೋದಿಯವರ ನಾಯಕತ್ವದಲ್ಲಿ, ಭಾರತದ ಏಕತೆ ಮತ್ತು ಒಗ್ಗಟ್ಟು ಸಾರ್ವಜನಿಕರ ಭಾಗವಹಿಸುವಿಕೆಯು ಹೆಚ್ಚಿದೆ. ಅವರು ತಮ್ಮ ನೀತಿಗಳು ರಾಷ್ಟ್ರದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ.. ಕಳೆದ 10 ವರ್ಷಗಳಲ್ಲಿ ಭಾರತೀಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಐತಿಹಾಸಿಕ ಹೆಮ್ಮೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಅದು ಹೇಳಿದೆ.

Continue Reading

ಅವಿಭಾಗೀಕೃತ

Karnataka Live News: ಚಾಮುಂಡೇಶ್ವರಿ ಆಶೀರ್ವಾದ ಪಡೆದ ಅಮಿತ್‌ ಶಾ; ಲೋಕಸಭೆಗೆ ರಣಕಹಳೆ ಊದಿದ ಚಾಣಕ್ಯ!

Karnataka Live News : ರಾಜಕೀಯ ವಿದ್ಯಮಾನ, ಸರ್ಕಾರದ ಪ್ರಮುಖ ನಿರ್ಧಾರ, ಅಪಘಾತ, ಅಪರಾಧ, ಹವಾಮಾನ, ಶೈಕ್ಷಣಿಕ, ಸಾಮಾಜಿಕ ಇತ್ಯಾದಿ ನಾಡಿನ ಪ್ರಮುಖ ಸಂಗತಿಗಳ ತ್ವರಿತ ಅಪ್‌ಡೇಟ್ಸ್ ಇಲ್ಲಿವೆ.

VISTARANEWS.COM


on

By

karnataka live news karnataka today news live vistara news feb 11th
Koo
Continue Reading
Advertisement
Dina Bhavishya
ಭವಿಷ್ಯ1 hour ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case
ಕರ್ನಾಟಕ7 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ7 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ8 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest8 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ8 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ8 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ8 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ9 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ9 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ12 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ13 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ13 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ18 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ3 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

ಟ್ರೆಂಡಿಂಗ್‌