ರಾಜ ಮಾರ್ಗ ಅಂಕಣ : ನಂಬಿಕೆ, ಭರವಸೆ ಎಂಬ ಮಹಾಮಂತ್ರ; ನಂಬಿ ಕೆಟ್ಟವರಿಲ್ಲವೋ ಎಂದರು ಪುರಂದರದಾಸರು - Vistara News

ಅಂಕಣ

ರಾಜ ಮಾರ್ಗ ಅಂಕಣ : ನಂಬಿಕೆ, ಭರವಸೆ ಎಂಬ ಮಹಾಮಂತ್ರ; ನಂಬಿ ಕೆಟ್ಟವರಿಲ್ಲವೋ ಎಂದರು ಪುರಂದರದಾಸರು

ರಾಜ ಮಾರ್ಗ ಅಂಕಣ : ದೇವರನ್ನು, ದೈವಗಳನ್ನು ನಂಬದವರು ಸಾಕಷ್ಟು ಮಂದಿ ಇದ್ದರೂ ಮಂದಿರ, ಮಸೀದಿ, ಚರ್ಚು, ದೈವಸ್ಥಾನಗಳು, ಶಕ್ತಿ ಪೀಠಗಳು, ಶ್ರದ್ಧಾ ಕೇಂದ್ರಗಳು ನಮಗೆ ನೀಡುವ ಅಭಯ ವಾಕ್ಯ ಹಾಗೂ ಸಾಂತ್ವನಗಳನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ!

VISTARANEWS.COM


on

Belief and hope
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
RAJAMARGA

ನೀವು ಏನು ಆರೋಗ್ಯದ ಸಮಸ್ಯೆಗಳು ಬಂದರೂ ಒಟ್ಟಾರೆ ಯಾರೋ ಒಬ್ಬ ವೈದ್ಯರ ಬಳಿಗೆ ಹೋಗುವುದಿಲ್ಲ. ನೀವು ಹೋಗುವುದು ನಿಮ್ಮ ಫ್ಯಾಮಿಲಿ ವೈದ್ಯರ (Family doctor) ಬಳಿ! ಅದಕ್ಕೆ ಕಾರಣ ಅವರ ಮೇಲೆ ನಿಮಗೆ ಇರುವ ಅಗಾಧ ನಂಬಿಕೆ (ರಾಜ ಮಾರ್ಗ ಅಂಕಣ). ಎಷ್ಟೋ ಬಾರಿ ಅವರು ಕೊಡುವ ಔಷಧಕ್ಕಿಂತ ಅವರ ಮೇಲೆ ನೀವು ಇಟ್ಟಿರುವ ನಂಬಿಕೆಯೇ (Belief System) ಹೆಚ್ಚು ಪರಿಣಾಮ ಬೀರುತ್ತದೆ ಅನ್ನುತ್ತದೆ ಮನೋವಿಜ್ಞಾನ (Psychological Effect)!

ನೀವು ನಿಮ್ಮದೇ ಟೇಲರ್, ನಿಮ್ಮದೇ ಸೆಲೂನ್, ನಿಮ್ಮದೇ ಕಾಯಂ ಹೋಟೆಲು, ನಿಮ್ಮದೇ ಬ್ಯುಟಿಷಿಯನ್, ನಿಮ್ಮದೇ ಚಾರ್ಟರ್ಡ್ ಅಕೌಂಟೆಂಟ್, ನಿಮ್ಮದೇ ಡೆಕೋರೆಟರ್…… ಹೀಗೆ ಹುಡುಕಿಕೊಂಡು ಹೋಗಲು ಕಾರಣ ಏನು? ಅದಕ್ಕೆ ಕಾರಣ ನೀವು ಅವರ ಮೇಲೆ ಇಟ್ಟಿರುವ ಅಪಾರ ನಂಬಿಕೆ!

ಆ ದರ್ಜಿಯು ಹೊಲಿದು ಕೊಟ್ಟರೆ ನನಗೆ ಡ್ರೆಸ್ ಸರಿಯಾಗಿಯೇ ಹೊಂದಿಕೊಳ್ಳುತ್ತದೆ ಎನ್ನುವ ಭರವಸೆಯು ನಿಮ್ಮನ್ನು ಮುನ್ನಡೆಸುತ್ತದೆ. ನಮ್ಮ ಆಯ್ಕೆಯ ಸೆಲೂನಿಗೆ ಹೋಗಿ ನಾವು ಆತನ ಮುಂದೆ ಕಣ್ಣುಮುಚ್ಚಿ ಕೂತುಬಿಡುತ್ತೇವೆ! ಅದಕ್ಕೆ ಕಾರಣ ಮತ್ತೆ ನಂಬಿಕೆ! ಆ ಬ್ಯುಟಿಷಿಯನ್ ಬಗ್ಗೆ ನಂಬಿಕೆ ಇದ್ದ ಕಾರಣ ನಾವು ಮತ್ತೆ ಮತ್ತೆ ಅವರ ಬಳಿಗೇ ಹೋಗುವುದು. ನಿಮ್ಮ ಬೆಸ್ಟ್ ಕ್ಯಾಟರರ್, ಅರೆಂಜರ್, ಫೋಟೋಗ್ರಾಫರ್, ನಿಮ್ಮ ಬೆಸ್ಟ್ ಟೀಚರ್… ಕೂಡ ನಿಮ್ಮ ಭರವಸೆಯ ಸಂಕೇತವೇ ಆಗಿರುತ್ತಾರೆ! ಹೌದಲ್ಲ?

Belief and hope

ನಮಗೆ ನೂರಾರು ಗೆಳೆಯರು ಇದ್ದರೂ ನಾವು ನಮ್ಮ ಎಲ್ಲ ಭಾವನೆಗಳನ್ನು ಹಂಚಿಕೊಳ್ಳುವುದು ಕೆಲವೇ ಜನರ ಬಳಿ ಮಾತ್ರ. ಯಾಕೆಂದರೆ ಅವರ ಬಳಿ ನಾವು ಹೇಳುವ ಗೌಪ್ಯ ವಿಷಯಗಳು ಸೆಕ್ಯೂರ್ ಆಗಿರುತ್ತವೆ ಅನ್ನುವ ನಂಬಿಕೆಯು ನಮ್ಮ ಮನಸಲ್ಲಿ ಗಟ್ಟಿಯಾಗಿರುತ್ತದೆ. ನಿಮ್ಮ ಬೆಸ್ಟ್ ಫ್ರೆಂಡ್, ಬೆಸ್ಟ್ ಟೀಚರ್ ಹೇಳಿದ ‘ನಾನು ನಿನ್ನನ್ನು ನಂಬುತ್ತೇನೆ’ ಎಂದು ಹೇಳಿದ ಮಾತು ನಿಮ್ಮ ಮೇಲೆ ಬೀರುವ ಪ್ರಭಾವ, ಅದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ!

ಈ ನಂಬಿಕೆಯೇ ನಮ್ಮ ಹಲವು ಸಂಬಂಧಗಳ ಪಂಚಾಂಗ ಆಗಿರುತ್ತದೆ. ಇಂದು ಜಗತ್ತಿನ ಎಷ್ಟೋ ವೈಜ್ಞಾನಿಕವಾದ ಸಂಗತಿಗಳು ಕೂಡ ನಂಬಿಕೆ ಆಧಾರಿತ ಆಗಿರುತ್ತವೆ! ನಿಮಗೆ ನಂಬಲು ಕಷ್ಟವೇ ಆಗಬಹುದು. ಜಗತ್ತಿನ ಮಹಾವಿಜ್ಞಾನಿ ಆಗಿದ್ದ ಐನ್‌ಸ್ಟೀನ್ ದೇವರ ಬಗ್ಗೆ ಹೇಳಿದ ಮಾತು ಕೇಳಿ!: ‘ಯಾವುದೋ ಒಂದು ಅತೀಂದ್ರಿಯವಾದ ಶಕ್ತಿ ಜಗತ್ತನ್ನು ನಿಯಂತ್ರಿಸುತ್ತಿದೆ. ನಾನು ಅದನ್ನು ನಂಬುತ್ತೇನೆ. ನೀವು ಅದನ್ನು ದೇವರು ಎಂದು ಕರೆಯಬಹುದು! ‘

ಬಹಳ ಶತಮಾನಗಳ ಹಿಂದೆ ಹಲವು ಧಾರ್ಮಿಕ ನಾಯಕರು ಪ್ರಮೋಟ್ ಮಾಡುತ್ತಿದ್ದ ಭೂಮಿಯೇ ಸೃಷ್ಟಿಯ ಕೇಂದ್ರ ಎನ್ನುವ ಸುಳ್ಳು ಸಿದ್ಧಾಂತವು ನೂರಾರು ವರ್ಷಗಳ ಕಾಲ ಜಗತ್ತನ್ನು ಆಳುತ್ತಿತ್ತು! ಮುಂದೆ ‘ಸೂರ್ಯನೇ ಸೃಷ್ಟಿಯ ಕೇಂದ್ರ’ ಎಂದು ಸಾಕ್ರೆಟಿಸ್ ಗಟ್ಟಿಯಾಗಿ ಸತ್ಯವನ್ನು ಹೇಳಿದರೂ ಜನರ ನಂಬಿಕೆಯು ತುಂಬಾ ವರ್ಷಗಳ ಕಾಲ ಬದಲಾಗಲೇ ಇಲ್ಲ! ಈಗಲೂ ನಮ್ಮ ನೂರಾರು ವೈಜ್ಞಾನಿಕ ಫಲಿತಾಂಶಗಳು ನಮ್ಮ ನಂಬಿಕೆ ಆಧಾರಿತ ಆಗಿವೆ. ವಿಜ್ಞಾನ ಮತ್ತು ನಂಬಿಕೆಗಳು ಜೊತೆ ಜೊತೆಗೆ ಕೈ ಹಿಡಿದು ಹೋಗಬೇಕು ಅನ್ನುವುದೇ ಸತ್ಯ!
ಹಾಗೆಂದು ನಾನು ಮೌಢ್ಯಗಳನ್ನು ಬೆಂಬಲಿಸುವುದಿಲ್ಲ.

Belief and  hope

ಅದಕ್ಕೆ ಋಷಿಸದೃಶವಾದ ವ್ಯಕ್ತಿತ್ವದ ಡಿವಿಜಿಯವರು ತಮ್ಮ ಮಂಕುತಿಮ್ಮನ ಕಗ್ಗದಲ್ಲಿ ಹೇಳಿದ್ದು ಹೀಗೆ – ಋಷಿ ವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ ಜಸವು ಜನ ಜೀವನಕೆ! ಅವರ ಪ್ರಕಾರ ಋಷಿವಾಕ್ಯ ಎಂದರೆ ನಂಬಿಕೆಯೇ ಆಗಿದೆ.

ನೀವು ಬಸ್ಸಿನಲ್ಲಿ ಅಥವ ರೈಲಿನಲ್ಲಿ ಕೂತು ದೂರ ಪ್ರಯಾಣ ಹೊರಟಾಗ ನಿಮ್ಮ ಸಂಬಂಧಿಕರಿಗೆ ಅಥವಾ ಗೆಳೆಯರಿಗೆ ಇಷ್ಟು ಹೊತ್ತಿಗೆ ತಲಪುತ್ತೇನೆ ಎಂದು ಹೇಳುತ್ತೇವಲ್ಲ! ನಿಮ್ಮನ್ನು ಆ ಸ್ಥಳಕ್ಕೆ ತಲುಪಿಸುವ ಗ್ಯಾರಂಟೀ ಕೊಟ್ಟವರು ಯಾರು?ಎಷ್ಟೋ ಸಂದರ್ಭಗಳಲ್ಲಿ ನಮ್ಮ ಈ ರೀತಿಯ ನಂಬಿಕೆಗಳು ನಮಗೆ ಅರಿವೇ ಇಲ್ಲದ ಹಾಗೆ ನಮ್ಮ ಬದುಕಿಗೆ ದಾರಿಯನ್ನು ತೋರಿಸುತ್ತಿರುವುದು ನಿಮ್ಮ ಗಮನಕ್ಕೂ ಬಂದಿರಬಹುದು.

ಇನ್ನು ದೇವರು, ದೈವಗಳು, ನಾಗದೇವರು, ನಮ್ಮ ನಮ್ಮ ಆರಾಧನಾ ಸ್ಥಳಗಳ ಬಗ್ಗೆ ಇರುವ ನಾಡಿನ ಬಹುಸಂಖ್ಯಾತ ಜನರ ನಂಬಿಕೆಗಳು ಹಲವು ಶತಮಾನಗಳಿಂದ ಅಚಲವಾಗಿ ನಿಂತಿವೆ. ಅವುಗಳ ಬಗ್ಗೆ ಸಾಕ್ಷಿಯನ್ನು ಕೊಡಿ ಎಂದು ಕೇಳುವ ಧೈರ್ಯವನ್ನು ಹೆಚ್ಚಿನವರು ಮಾಡುವುದಿಲ್ಲ. ನಮ್ಮ ಬೆನ್ನಿಗೆ ಯಾವುದೋ ದೈವಿಕ ಶಕ್ತಿಯು ನಿಂತು ನಮ್ಮನ್ನು ಕಾಯುತ್ತ ಇರುತ್ತದೆ ಎಂಬ ನಂಬಿಕೆಯನ್ನು ಯಾರೂ ಅಲ್ಲಗಳೆಯಲು ಹೋಗುವುದಿಲ್ಲ!

ದೇವರನ್ನು, ದೈವಗಳನ್ನು ನಂಬದವರು ಸಾಕಷ್ಟು ಮಂದಿ ಇದ್ದರೂ ಮಂದಿರ, ಮಸೀದಿ, ಚರ್ಚು, ದೈವಸ್ಥಾನಗಳು, ಶಕ್ತಿ ಪೀಠಗಳು, ಶ್ರದ್ಧಾ ಕೇಂದ್ರಗಳು ನಮಗೆ ನೀಡುವ ಅಭಯ ವಾಕ್ಯ ಹಾಗೂ ಸಾಂತ್ವನಗಳನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ! ಈ ಎರಡು ಅಂಶಗಳು ಸೈಕಾಲಜಿಯ ಪ್ರಕಾರವೂ ನಮ್ಮನ್ನು ಬಲಿಷ್ಠ ಮಾಡುತ್ತವೆ ಎನ್ನುವುದು ವೈಜ್ಞಾನಿಕ ಆಗಿ ಪ್ರೂವ್ ಆಗಿವೆ! ಕ್ರಿಶ್ಚಿಯನ್ ಧರ್ಮ ನಂಬುವ CONFESSION ನಮ್ಮ ಮಾನಸಿಕ ಒತ್ತಡವನ್ನು ಮತ್ತು ಗಿಲ್ಟ್‌ಗಳನ್ನು ಗೆಲ್ಲುವ ವೈಜ್ಞಾನಿಕ ತಂತ್ರಗಳೇ ಆಗಿವೆ!

ಇದನ್ನೂ ಓದಿ: ರಾಜ ಮಾರ್ಗ ಅಂಕಣ : ಮಕ್ಕಳ ಮೇಲೆ ಜಾಸ್ತಿ ನಂಬಿಕೆ ಇಡಬೇಡಿ; ಮೊಬೈಲ್‌ ಬಂದ ಮೇಲೆ ಯಾವ ಮಗುವೂ ಇನ್ನೋಸೆಂಟ್‌ ಅಲ್ಲ!

ಇಷ್ಟೆಲ್ಲ ವಿಷದವಾಗಿ ಹೇಳಿದ ನಂತರವೂ ನನ್ನ ಒಬ್ಬರು ಗೆಳೆಯರು ನನಗೆ ಕೇಳಿದ ಪ್ರಶ್ನೆ – ಹಾಗಿದ್ದರೆ ಎಷ್ಟೋ ಜನರು ನಂಬಿಕೆ ದ್ರೋಹ ಮಾಡಿ ನಮಗೆ ನೋವು ಕೊಡುತ್ತಾರಲ್ಲ! ಅದಕ್ಕೇನು ಹೇಳುತ್ತೀರಿ?

ನಾನು ಕೊಟ್ಟ ಉತ್ತರವೂ ಅಷ್ಟೇ ಸ್ಟ್ರಾಂಗ್ ಆಗಿತ್ತು – ನಂಬಿಕೆ ದ್ರೋಹ ಆಯಿತು ಅಂತಾದರೆ ಅದು ಅವರ ತಪ್ಪು ಅಲ್ಲ. ನಂಬಿಕೆಯ ತಪ್ಪು ಕೂಡ ಅಲ್ಲ! ನಂಬಿಕೆ ಇರಿಸಲು ನೀವು ಆರಿಸಿದ ಕೆಲವು ವ್ಯಕ್ತಿಗಳು ರಾಂಗ್ ಆಗಿರುತ್ತಾರೆ! ವ್ಯಕ್ತಿಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ನೀವು ಸೋತಿರುವುದು ಅದು ನಿಮ್ಮದೇ ತಪ್ಪು!
ನಿಮಗೆ ಹಾಗೆ ಅನ್ನಿಸುತ್ತಿದೆಯಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

ರಾಜಮಾರ್ಗ ಅಂಕಣ: ಮತ ಹಾಕದವರಿಗೆ ಕಾರಣ ಕೇಳುವ ನೋಟೀಸ್ ಸರಕಾರ ಜಾರಿ ಮಾಡುವುದರಿಂದ ಹಿಡಿದು, ದಂಡ ವಿಧಿಸುವ, ಸರಕಾರದ ಸೌಲಭ್ಯಗಳನ್ನು ತಡೆಹಿಡಿಯುವ ಕಾನೂನು ಇವೆ. ಬೆಲ್ಜಿಯಂ, ಆಸ್ಟ್ರೇಲಿಯ, ಆಸ್ಟ್ರಿಯಾ, ಅರ್ಜೆಂಟೀನ, ಬೊಲಿವಿಯಾ, ಯುಕ್ರೇನ್, ಬ್ರೆಜಿಲ್, ಈಜಿಪ್ಟ್, ಗ್ರೀಸ್, ಇಟಲಿ, ಮೆಕ್ಸಿಕೊ, ಫಿಲಿಫೈನ್ಸ್, ಸಿಂಗಾಪುರ, ಥೈಲ್ಯಾಂಡ್, ಟರ್ಕಿ, ಸ್ವಿಜರ್ಲ್ಯಾಂಡ್….ಮೊದಲಾದ ರಾಷ್ಟ್ರಗಳು ಕಡ್ಡಾಯ ಮತದಾನದ ಕಾನೂನು ಹೊಂದಿವೆ.

VISTARANEWS.COM


on

rajamarga column voting 1
Koo

ಮತದಾನ ಮಾಡಲು ಹೆಚ್ಚಿನ ಕಡೆ ಸುಶಿಕ್ಷಿತ ಯುವಜನತೆಯ ನಿರುತ್ಸಾಹ ಯಾಕೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತದಲ್ಲಿ ಚುನಾವಣೆಗಳನ್ನು ʼಪ್ರಜಾಪ್ರಭುತ್ವದ ಹಬ್ಬ’ (Festivals of democracy) ಎಂದು ಕರೆಯುತ್ತೇವೆ. ದೇಶ ಅಭಿವೃದ್ಧಿ ಆಗಬೇಕಾದರೆ ಸಧೃಡ ಸರಕಾರಗಳು ಬೇಕು. ದೇಶದ ನಾಗರಿಕರು ಚುನಾವಣೆಯಲ್ಲಿ ಬಂದು ಮತ ಚಲಾವಣೆ (Voting) ಮಾಡಬೇಕಾದದ್ದು, ಬಲಿಷ್ಟ ಸರಕಾರ ರಚಿಸಬೇಕಾದದ್ದು ಅನಿವಾರ್ಯ.

ದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಭಾರತ ಸರಕಾರದ SVEEP (Systematic Voters’ Education and Electoral Participation) ಎಂಬ ಸಮಿತಿಯು ಇದೆ. ಅದು ವಿವಿಧ ಮಾಧ್ಯಮಗಳ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತದೆ. ಮನರಂಜನಾ ಮಾಧ್ಯಮಗಳನ್ನು ಕೂಡ ಬಳಸಿಕೊಳ್ಳುತ್ತದೆ. ಆದರೂ ನಗರ ಪ್ರದೇಶಗಳ ಕೆಲವು ಕಡೆಗಳಲ್ಲಿ ಮತದಾನದ ಪ್ರಮಾಣವು ಉತ್ತೇಜಕವಾಗಿ ಇಲ್ಲ. ವಿಶೇಷವಾಗಿ ಹೆಚ್ಚಿನ ವಿದ್ಯಾವಂತ ಯುವಜನತೆಯು ಮತದಾನದಲ್ಲಿ ಉತ್ಸಾಹ ತೋರುತ್ತಿಲ್ಲ ಎನ್ನುವ ಆರೋಪಗಳು ಇವೆ. ಈ ಬಾರಿ ಕೂಡ ಹೆಚ್ಚು ಟೆಕ್ಕಿಗಳು ಇರುವ ಬೆಂಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಮತದಾನ ದಾಖಲು ಆಗಿದೆ. ಯಾಕೆ ಹೀಗೆ? ಯಾರು ಗೆದ್ದರೂ ನಮಗೇನು ಲಾಭ ಎಂಬ ನಕಾರಾತ್ಮಕ ಧೋರಣೆ ಯಾಕೆ?

ಭಾರತದಲ್ಲಿ ಕಡ್ಡಾಯ ಮತದಾನ ಯಾಕೆ ಸಾಧ್ಯವಿಲ್ಲ?

ಭಾರತವು ಡೆಮಾಕ್ರಟಿಕ್ ರಾಷ್ಟ್ರ ಅನ್ನುವುದು ಈ ಪ್ರಶ್ನೆಗೆ ಉತ್ತರ. ಅದಕ್ಕೆ ಪೂರಕವಾದ ಕಾನೂನು ಇನ್ನೂ ಭಾರತದಲ್ಲಿ ರೂಪುಗೊಂಡಿಲ್ಲ. ಇಲ್ಲಿ ಯಾರಿಗೂ ಒತ್ತಡ ಹಾಕುವ ಹಾಗಿಲ್ಲ. ಮನ ಒಲಿಕೆಯ ಮೂಲಕ ಮಾತ್ರ ಯಾರನ್ನಾದರೂ ಮತ ಹಾಕಲು ಕರೆದುಕೊಂಡು ಬರಬಹದು. ನಾಗರಿಕರನ್ನು ಎಜೂಕೆಟ್ ಮಾಡುವುದು ಸುಲಭದ ಕೆಲಸ ಅಲ್ಲ.

ಸ್ವೀಪ್ ಸಮಿತಿಯು ಅವಿರತ ಪ್ರಯತ್ನಗಳು

SVEEP ಸಮಿತಿಯು ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಆಕರ್ಷಕವಾದ ಮತದಾನ ಕೇಂದ್ರಗಳನ್ನು ತೆರೆದಿದೆ. ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನವನ್ನು ಮಾಡುವ ಸೌಲಭ್ಯವನ್ನು ನೀಡಿದೆ. ಮತದಾನ ಸಿಬ್ಬಂದಿಗಳಿಗೆ EDC ಮತ್ತು ಪೋಸ್ಟಲ್ ಬ್ಯಾಲೆಟ್ ಸೌಲಭ್ಯಗಳನ್ನು ನೀಡಿದೆ. BLOಗಳು ಮನೆ ಮನೆಗೆ ಹೋಗಿ ಗುರುತು ಚೀಟಿ ನೀಡಲು ಆದೇಶ ಮಾಡಿದೆ. No Voter to be Left Behind ಎಂಬ ಘೋಷಣಾ ವಾಕ್ಯದಡಿಯಲ್ಲಿ ಅವಿರತ ಜಾಗೃತಿ ಕೆಲಸಗಳು ಆಗಿವೆ. ಯಕ್ಷಗಾನ, ಬೀದಿ ನಾಟಕ ಮೊದಲಾದ ಮಾಧ್ಯಮಗಳು ಕೂಡ ಬಳಕೆ ಆಗಿವೆ. ಆದರೂ ಕೆಲವು ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಕಡಿಮೆ ಇದೆ ಎನ್ನುವುದು ನೋವಿನ ಸಂಗತಿ.

rajamarga column voting 1

31 ರಾಷ್ಟ್ರಗಳಲ್ಲಿ ಕಡ್ಡಾಯ ಮತದಾನ ಇದೆ!

ಈ ರಾಷ್ಟ್ರಗಳಲ್ಲಿ ಹೆಚ್ಚಿನವು ಡೆಮಾಕ್ರಟಿಕ್ ರಾಷ್ಟ್ರಗಳೇ ಆಗಿವೆ. ಆದರೆ ಅಲ್ಲಿ ಕಡ್ಡಾಯ ಮತದಾನದ ಕಾನೂನು ಜಾರಿಯಲ್ಲಿದೆ. ಮತ ಹಾಕದವರಿಗೆ ಕಾರಣ ಕೇಳುವ ನೋಟೀಸ್ ಸರಕಾರ ಜಾರಿ ಮಾಡುವುದರಿಂದ ಹಿಡಿದು, ದಂಡ ವಿಧಿಸುವ, ಸರಕಾರದ ಸೌಲಭ್ಯಗಳನ್ನು ತಡೆಹಿಡಿಯುವ ಕಾನೂನು ಇವೆ. ಬೆಲ್ಜಿಯಂ, ಆಸ್ಟ್ರೇಲಿಯ, ಆಸ್ಟ್ರಿಯಾ, ಅರ್ಜೆಂಟೀನ, ಬೊಲಿವಿಯಾ, ಯುಕ್ರೇನ್, ಬ್ರೆಜಿಲ್, ಈಜಿಪ್ಟ್, ಗ್ರೀಸ್, ಇಟಲಿ, ಮೆಕ್ಸಿಕೊ, ಫಿಲಿಫೈನ್ಸ್, ಸಿಂಗಾಪುರ, ಥೈಲ್ಯಾಂಡ್, ಟರ್ಕಿ, ಸ್ವಿಜರ್ಲ್ಯಾಂಡ್….ಮೊದಲಾದ ರಾಷ್ಟ್ರಗಳು ಕಡ್ಡಾಯ ಮತದಾನದ ಕಾನೂನು ಹೊಂದಿವೆ. ಪರಿಣಾಮವಾಗಿ ಅಲ್ಲಿ ಬಲಿಷ್ಠ ಸರಕಾರಗಳು ಆರಿಸಿ ಬರುತ್ತವೆ ಮತ್ತು ಜನರ ಜೀವನಮಟ್ಟ ತುಂಬಾ ಸುಧಾರಣೆ ಆಗಿದೆ.

ಬೆಲ್ಜಿಯಂ ಮಾದರಿ

ಅಲ್ಲಿ ಮೊದಲ ಬಾರಿಗೆ ಮತದಾನ ಮಾಡದಿದ್ದರೆ 4,000 ಯುರೋ ದಂಡ ಸರಕಾರ ವಿಧಿಸುತ್ತದೆ. ಎರಡನೇ ಬಾರಿಗೆ ಮತದಾನ ಮಾಡದಿದ್ದರೆ 10,000 ಯುರೋ ದಂಡ ಕಟ್ಟಬೇಕು. ಎಲ್ಲ ಸರಕಾರಿ ಸೌಲಭ್ಯಗಳು ಅವರಿಗೆ ಕಡಿತ ಆಗುತ್ತವೆ. 4 ಬಾರಿ ಮತದಾನಕ್ಕೆ ಬಾರದಿದ್ದರೆ ಅವರ ಹೆಸರು ಮತದಾನ ಪಟ್ಟಿಯಲ್ಲಿ ಕಡಿತ ಆಗುತ್ತದೆ.

ಬೊಲಿವಿಯಾ ಮಾದರಿ

ಈ ರಾಷ್ಟ್ರವು ಮತದಾನ ಮಾಡುವರಿಗೆ ಒಂದು ಗುರುತು ಚೀಟಿ ನೀಡುತ್ತದೆ. ಅವರಿಗೆ ಮಾತ್ರ ರೇಶನ್ ಸೌಲಭ್ಯ, ವಿದ್ಯುತ್, ವಸತಿ, ಇತರ ಸರಕಾರಿ ಸೌಲಭ್ಯಗಳು ದೊರೆಯುತ್ತವೆ. ಸರಕಾರಿ ನೌಕರರು ಮತದಾನಕ್ಕೆ ಬಾರದಿದ್ದರೆ ಅವರಿಗೆ ವೇತನ ಕಡಿತ ಆಗುತ್ತದೆ.

ಆಸ್ಟ್ರೇಲಿಯ ಮಾದರಿ

ಈ ದೇಶದಲ್ಲಿ ಶಕ್ತಿಶಾಲಿ ಡೆಮಾಕ್ರಟಿಕ್ ಸರಕಾರ ಇದೆ. ಮತದಾನ ಕಡ್ಡಾಯ ಕಾನೂನು ಇದೆ. ಮತದಾನದ ಪ್ರಮಾಣ ಅಲ್ಲಿ 96%ಕ್ಕಿಂತ ಕೆಳಗೆ ಬಂದದ್ದೇ ಇಲ್ಲ!

ಗ್ರೀಸ್ ಮಾದರಿ

ಅಲ್ಲಿ ಮತದಾನ ಮಾಡದಿದ್ದರೆ ಸರಕಾರ ನಾಗರಿಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುತ್ತದೆ. ತೃಪ್ತಿಕರವಾದ ಉತ್ತರ ಬಾರದೆ ಹೋದರೆ ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್ಪೋರ್ಟ್ ರದ್ದು ಆಗುತ್ತದೆ.

ಸಿಂಗಾಪುರ ಮಾದರಿ

ಇಲ್ಲಿ ಬಲಿಷ್ಟವಾದ ಸರಕಾರ ಇದೆ. ಮತದಾನ ಮಾಡದವರಿಗೆ ಕಾರಣ ಕೇಳಿ ನೋಟಿಸ್ ನೀಡಿದ ನಂತರ ತೃಪ್ತಿಕರ ಉತ್ತರ ಬಾರದಿದ್ದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ನಿರ್ದಾಕ್ಷಿಣ್ಯವಾಗಿ ಕಿತ್ತು ಹಾಕಲಾಗುತ್ತದೆ.

ಅಮೇರಿಕಾ ಮಾದರಿ

ಇಲ್ಲಿ ಯಾವುದೇ ಕಡ್ಡಾಯ ಕಾನೂನು ಇಲ್ಲ. ವೋಟಿಂಗ್ ದಿನ ರಜೆಯು ಕೂಡ ಇಲ್ಲ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮತದಾನ ಕೇಂದ್ರಗಳು ತೆರೆದಿರುತ್ತವೆ. ಅಲ್ಲಿ ಮತದಾನದ ಪ್ರಮಾಣವು ಉತ್ತಮವಾಗಿಯೇ ಇದೆ.

ಭಾರತದಲ್ಲಿ ಕಡ್ಡಾಯ ಮತದಾನದ ಕಾನೂನು ಜಾರಿಗೆ ಬರಲಿ ಮತ್ತು ಸುಸ್ಥಿರ ಸರಕಾರಗಳು ಆರಿಸಿಬರಲಿ ಎನ್ನುವುದೇ ನಮ್ಮೆಲ್ಲರ ಹಾರೈಕೆ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಧವಳ ಧಾರಿಣಿ ಅಂಕಣ: ಕಾಮವೆನ್ನುವುದು ಎಂತಹವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುತ್ತಾನೆ.

VISTARANEWS.COM


on

king dasharatha kaikeyi dhavala dharini column
Koo

ಪ್ರಾಣಕ್ಕಿಂತ ಪ್ರಿಯಳಾದ ಸತಿಯಿಂದ ಪ್ರಾಪ್ತವಾದ ಪುತ್ರ ವಿಯೋಗ

dhavala dharini by Narayana yaji

ಧವಳ ಧಾರಿಣಿ ಅಂಕಣ: ಸ ಕೈಕೇಯ್ಯಾ ಗೃಹಂ ಶ್ರೇಷ್ಠಂ ಪ್ರವಿವೇಶ ಮಹಾಯಶಾಃ
ಪಾಣ್ಡುರಾಭ್ರಮಿವಾಕಾಶಂ ರಾಹುಯುಕ್ತಂ ನಿಶಾಕರಃ ৷৷ಅ.ಯೋ.10.11৷৷

ಬಿಳಿಯದಾದ ಮೋಡಗಳಿಂದ ಕೂಡಿದ ಆಕಾಶದಲ್ಲಿ ರಾಹುವಿಗೆ ಗ್ರಾಸವಾಗುವ ಸಲುವಾಗಿ ಚಂದ್ರನು ಪ್ರವೇಶಿಸುವಂತೆ ಮಹಾಯಶೋವಂತನಾದ ರಾಜನು ಭವ್ಯವಾದ ಕೈಕೇಯಿಯ ಅಂತಃಪುರವನ್ನು ಪ್ರವೇಶಿಸಿದನು.

ಕವಿಸಮಯವೆನ್ನುವದು ರಾಮಾಯಣ ಕಾವ್ಯದ ವಿಶೇಷ. ವಾಲ್ಮೀಕಿ ಕಾವ್ಯವನ್ನು ಕೇವಲ ಉಅಪದೇಶಕ್ಕಾಗಿಯಲ್ಲ, ಅದನ್ನು ತಾಳವಾದ್ಯಗಳೊಂದಿಗೆ ರಾಗವಾಗಿ ಹಾಡಲು ಅನುಕೂಲವಾಗುವಂತೆ ಬರೆದಿದ್ದಾನೆ. ಹಾಡುಗಾರಿಕೆಯಲ್ಲಿ ವರ್ಣನೆಗೆ ಮಹತ್ವ ಬರುತ್ತದೆ. ಕಾವ್ಯದ ಮುಂಗಾಣ್ಕೆ ಅಲ್ಲಲ್ಲಿ ವ್ಯಕ್ತವಾಗುತ್ತಾ ಹೋಗುತ್ತದೆ. ಕೈಕೇಯಿಯ ಅರಮನೆಗೆ ಹೋಗುವ ರಾಜನ ಕುರಿತು ವರ್ಣಿಸುವಾಗ ಬಿಳಿಯದಾದ ಮೋಡ, ರಾಹು, ಆಕಾಶ, ಚಂದ್ರ ಎನ್ನುವ ಉಪಮೆಗಳ ಮೂಲಕ ಹೇಳಿದ್ದಾನೆ. ಆಕಾಶ ಎನ್ನುವುದು ಮನಸ್ಸಿನಲ್ಲಿ ಆಸೆಗಳ ವಿಸ್ತಾರದವನ್ನು ಸೂಚಿಸಿದೆ. ಬಿಳಿಯದಾದ ಮೋಡವೆನ್ನುವದು ಅರ್ಥಪೂರ್ಣವಾದ ಉಪಮೆ. ನೀರಿನಿಂದ ಯುಕ್ತವಾದ ಮೋಡ ಕಪ್ಪಾಗಿರುತ್ತದೆ. ಮನಸ್ಸಿನಲ್ಲಿ ತನ್ನ ಮಗನ ಪಟ್ಟಾಭಿಷೇಕದ ಕುರಿತು ಯಾವ ಆಸೆಯನ್ನೇ ಇರಿಸಿಕೊಳ್ಳಲಿ, ಅದೆಲ್ಲವೂ ನೀರಿಲ್ಲದ ಮೋಡದಂತೆ ವ್ಯರ್ಥವಾಗಿ ಹಾರಿಹೋಗುತ್ತದೆ ಎನ್ನುವುದನ್ನು ಹೇಳುತ್ತಾನೆ. ರಾಹು ಮತ್ತು ಕೇತುಗಳು ಭಾರತೀಯ ಖಗೋಳಶಸ್ತ್ರದ ಪ್ರಕಾರ ಎರಡು ವಿರುದ್ಧದಿಕ್ಕುಗಳಲ್ಲಿರುವ ಬಿಂದುಗಳು. ಈ ಬಿಂದುವಿಗೆ ಸೂರ್ಯಚಂದರು ಬಂದಾಗ ಗ್ರಹಣವಾಗುತ್ತದೆ. ಚಂದ್ರ ಮನಸ್ಸಿನ ಕಾರಕ. ಸಂತೊಷ ಮತ್ತು ಕಾಮವಿಕಾರಗಳು ಮನಸ್ಸಿನಲ್ಲಿ ಉತ್ಪನ್ನವಾಗುವಂತವು. ಚಂದ್ರ ತನ್ನ ಪರಿಭ್ರಮಣದಲ್ಲಿ ರಾಹುವಿನ ಬಿಂದುವಿಗೆ ಬಂದಾಗ ಗ್ರಹಣವಾಗಿ ತನ್ನ ಕಾಂತಿಯನ್ನು ಕಳೆದುಕೊಳ್ಳುತ್ತಾನೋ ಅದೇರಿತಿ ರಾಜ ತನ್ನೆಲ್ಲ ಕನಸನ್ನು ಕಳೆದುಕೊಂಡು ನಿಶ್ಚಿತವಾಗಿ ಮರಣದತ್ತ ಸಾಗಲು ಬಂದಿದ್ದಾನೆ ಎನ್ನುವುದನ್ನು ಉಪಮಾಮಲಂಕಾರದಲ್ಲಿ ಕವಿ ವರ್ಣಿಸಿದ್ದಾನೆ.

ದಶರಥನ ಪಾತ್ರವನ್ನು ವಿವೇಚಿಸುವಾಗ ಮೊದಲಿನಿಂದಲೂ ಕಂಡುಬಂದ ಅಂಶವೆಂದರೆ ಮಹಾನ್ ರಾಜರ್ಶಿಯಾಗಿದ್ದ ದೊರೆ ರಾಮನ ಕುರಿತು ಕಡುಲೋಭಿಯಾಗಿ ಪರಿವರ್ತನೆಯಾಗಿರುವುದನ್ನು ಗಮನಿಸಬಹುದು. ದಶರಥನ ವ್ಯಕ್ತಿತ್ವವೆನ್ನುವುದು ಸಂಕೀರ್ಣವೇನೂ ಅಲ್ಲ. ಶೂರನಾಗಿದ್ದ; ಸೂರ್ಯವಂಶದ ಧ್ಯೇಯೋದ್ಧಶವಾದ ಧರ್ಮಸ್ಥಾಪನೆಯ ವಿಷಯದಲ್ಲಿ ಸದಾ ನಿರತನಾಗಿದ್ದ. ಅದೇ ಕಾಲಕ್ಕೆ ಅಯೋಧ್ಯೆಯ ಸಿಂಹಾಸನವೆನ್ನುವುದು ಗಣತಂತ್ರವ್ಯವಸ್ಥೆಯಲ್ಲಿ ಇತ್ತು. ರಾಜರಾಗುವವರು ಯಾರೇ ಆದರೂ ಅದಕ್ಕೆ ಪ್ರಜೆಗಳ ಒಪ್ಪಿಗೆ ಪಡೆಯಬೇಕಾಗಿತ್ತು. ಪ್ರಾಚೀನ ಗ್ರೀಸಿನಲ್ಲಿದ್ದ ರೀತಿಯ ಗಣತಂತ್ರವ್ಯವಸ್ಥೆ ಅಯೋಧ್ಯೆಯಲ್ಲಿ ಇತ್ತು ಎನ್ನುವುದಕ್ಕೆ ವಾಲ್ಮೀಕಿಯ ರಾಮಾಯಣವನ್ನು ಮತ್ತು ಮತ್ತು ಪ್ಲೇಟೋವಿನ “The Republic” ಕೃತಿಯನ್ನು ತುಲನೆ ಮಾಡಿದಾಗ ಅನಿಸುತ್ತದೆ. ಅದನ್ನು ಕೇವಲ ತೋರಿಕೆಗಾಗಿ ಆಚರಣೆಯಲ್ಲಿ ಇಟ್ಟು ತನಗೆ ಬೇಕಾದಂತೆ ಉತ್ತರಾಧಿಕಾರಿಯನ್ನು ಆರಿಸುವ ತಂತ್ರವನ್ನು ದಶರಥ ಅನುಸರಿಸಿರುವುದು ರಾಮನಿಗೆ ಪಟ್ಟಗಟ್ಟಬೇಕೆನ್ನುವ ಸಂದರ್ಭದಲ್ಲಿ ಕಾಣಬಹುದು. ಆತನ ಚಾಣಾಕ್ಷನಡೆಯ ಒಳಗಿರುವದು ತನ್ನದು ಎನ್ನುವ ಮೋಹದ ಅರಿವು ಎನ್ನುವುದು ಯಾರ ಗಮನಕ್ಕೂ, ಹೆಚ್ಚೇನು ರಾಮನ ಅರಿವಿಗೂ ಬಾರದ ಹಾಗೆ ನಡೆದುಕೊಂಡಿದ್ದಾನೆ. ಪರಿಪೂರ್ಣ ವ್ಯಕ್ತಿತ್ವದ ರಾಮನಂತಹ ದೊರೆ ತಮಗೆ ಸಿಗುತ್ತಾನೆ ಎನ್ನುವ ಕಾರಣಕ್ಕೆ ಪ್ರಜೆಗಳು ಸಂಭ್ರಮಿಸುವುದು ಸಹಜವೇ ಆಗಿದೆ. ತಾನು ಅಶ್ವಪತಿಗೆ ಕೊಟ್ಟ ಮಾತುಗಳು ಹೀಗೆ ಮರೆಯಾದ ಕಾರಣ ಅದು ದೊರೆಗೆ ಅಪರಿಮಿತ ಸಂತೋಷವನ್ನು ಕೊಟ್ಟಿದೆ. ಇಳಿವಯಸ್ಸಿನಲ್ಲಿ ಕಿರಿಯ ಚಲುವೆಯಾದ ಕೈಕೇಯಿಯ ಹಿಂದೆ ಬಿದ್ದಿದ್ದ ದೊರೆಗೆ ವೃದ್ದಾಪ್ಯದಲ್ಲಿ ಮಕ್ಕಳಾದ ಮೇಲೆ ರಾಮ ಎನ್ನುವ ಕುರುಡು ಮೋಹ ಆವರಿಸಿಕೊಂಡಿತ್ತು. ಆತನ ಕುರಿತು ಮಂಥರೆ ಹೇಳುವ ಮಾತು

ಧರ್ಮವಾದೀ ಶಠೋ ಭರ್ತಾ ಶ್ಲಕ್ಷ್ಣವಾದೀ ಚ ದಾರುಣಃ
ಶುದ್ಧಭಾವೇ ನ ಜಾನೀಷೇ ತೇನೈವ ಮತಿಸಂಧಿತಾ৷৷ಬಾ.ಕಾಂ.7.24৷৷

ನಿನ್ನ ಗಂಡನು ಮೇಲೆಮೇಲೆ ಧರ್ಮಸಮ್ಮತವಾದ ಮಾತುಗಳನ್ನು ಆಡುತ್ತಿದ್ದರೂ ಅಂತರಂಗದಲ್ಲಿ ಬಹಳ ಕಪಟಸ್ವಭಾವದವನು. ಬಾಯಲ್ಲಿ ಮೃದುವಾದ ಮಾತುಗಳನ್ನು ಆಡುತ್ತಿದ್ದರೂ ನಂಬಿಸಿ ಮೋಸಮಾಡುವುದು ಹೇಗೆಂದು ಯೋಚಿಸುತ್ತಿರುತ್ತಾನೆ. ಕರುಣೆಯೆನ್ನುವುದೇ ಇಲ್ಲ, ಬಹಳ ಋಜುಸ್ವಭಾವದವಳಾದ ನೀನು ಆತನ ಕಪಟವನ್ನು ಅರಿಯದೇ ಹೋದೆಯಲ್ಲವೇ.

ಮಂಥರೆ ಇಲ್ಲಿ ಕೈಕೇಯಿಯ ಮನಸ್ಸನ್ನು ತಿರುಗಿಸಲು ಹೇಳಿರುವಳಾದರೂ ಪಾಯಸವನ್ನು ತನ್ನ ರಾಣಿಯರಿಗೆ ಹಂಚುವಲ್ಲಿಂದ ಹಿಡಿದು ರಾಮಪಟ್ಟಾಭಿಷೇಕದ ವರೆಗೆ ದಶರಥ ಏಕಪಕ್ಷೀಯವಾಗಿ ತೆಗೆದುಕೊಂಡ ತೀರ್ಮಾನವನ್ನು ಗಮನಿಸಿದಾಗ ನಮ್ಮ ದೌರ್ಬಲ್ಯ ಶತ್ರುಗಳಿಗೆ ಆಯುಧ ಎನ್ನುವ ನೀತಿಶಾಸ್ತ್ರದ ಮಾತನ್ನು ನೆನಪಿಸುತ್ತದೆ. ಅಂತೂ ತನ್ನ ಕಾರ್ಯವಾದ ರಾಮನ ಪಟ್ಟಾಭಿಷೇಕದ ವಿಷಯದಲ್ಲಿ ಯಾವ ತೊಂದರೆಯಿಲ್ಲದೇ ಸಾಂಗವಾಗಿ ನಡೆಯುವುದು ಎನ್ನುವ ನಂಬಿಕೆಯೊಂದಿಗೆ ಸಂತೊಷವೆನ್ನುವುದು ಅತಿರೇಕಕ್ಕೆ ಹೋಗಿತ್ತು. ಸಂತೋಷ ಅತಿರೇಕಕ್ಕೆ ಹೋದಾಗ ಅದು ಮದಕ್ಕೆ ತಿರುಗುತ್ತದೆ. ಮದವೆನ್ನುವುದು ಕಾಮಕ್ಕೆ ಮೂಲ. ಅದನ್ನು ಇಳಿಸಿಕೊಳ್ಳಲು ಸಂಗಾತಿಯನ್ನು ಹುಡಿಕಿಕೊಳ್ಳುವುದು ಜೀವಿಗಳ ಸಹಜ ಕ್ರಿಯೆ. ಅರಸನಿಗೆ ತನ್ನ ಆಲೋಚನೆಯನ್ನು ಹಂಚಿಕೊಳ್ಳುವ ಸಂಗಾತಿಯ ಅಗತ್ಯ ತುರ್ತಾಗಿ ಎದುರಾಯಿತು. ವಶಿಷ್ಠರಲ್ಲಿಯಾಗಲಿ, ವಾಮದೇವರಲ್ಲಿಯಾಗಲಿ ಇದನ್ನೆಲ್ಲವನ್ನು ಹಂಚಿಕೊಳ್ಳಲು ಅವರೇನು ಸಾಮಾನ್ಯದವರಾಗಿರಲಿಲ್ಲ.

ರಾಮ ಯುವರಾಜ ಪಟ್ಟಕ್ಕೆ ಅರ್ಹನಾಗಿದ್ದರೂ, ಅಯೋಧ್ಯೆಯಲ್ಲಿ ಆ ಸಾಯಂಕಾಲ ನಡೆದ ಸಿದ್ಧತೆ ದಶರಥನ ವೈಯಕ್ತಿಕ ಕಾಮನೆಯ ಫಲವಾಗಿತ್ತು. ಪ್ರಜೆಗಳು ರಾಮನನ್ನು ರಾಜನ್ನಾಗಿ ನೋಡಲು ಬಯಸಿದ್ದರೆನ್ನುವುದು ನಿಜವಾದರೂ ಇಲ್ಲಿಮೊದಲ ಸಾರಿ ರಾಮನ ಪಟ್ಟಾಭಿಷೇಕಕ್ಕಾಗಿ ದಶರಥ ಹೇಗೆಲ್ಲಾ ಮಂಡಿಗೆಯನ್ನು ಹಾಕಿದ್ದ ಎನುವುದನ್ನು ಹಿಂದಿನ ಭಾಗಗಳಲ್ಲಿ ನೋಡಿದ್ದೇವೆ. ರಾಮನನ್ನು ಕೇವಲ ಮಗನಾಗಿ ಮಾತ್ರ ನೋಡಿದ್ದಾನೆಯೇ ಹೊರತು ವಿಶ್ವಾಮಿತ್ರ, ವಶಿಷ್ಠರು, ಪರಶುರಾಮ ಮೊದಲಾದವರಿಗೆ ರಾಮನ ಅವತಾರದ ಹಿಂದಿರುವ ದೈವತ್ವದ ದರ್ಶನ ಅರಸನಿಗೆ ಸಾಯುವವರೆಗೂ ಆಗಲೇ ಇಲ್ಲ. ರಾಮನಿಗೆ ಪಟ್ಟಗಟ್ಟುವ ತನ್ನ ಮನಸ್ಸಿನ ಮಂಡಿಗೆ ಯಶಸ್ವಿಯಾದ ವಿಷಯವನ್ನು ವಿವರವಾಗಿ ವರ್ಣಿಸಿ ಹೇಳಲು ಕಿರಿಯ ರಾಣಿಯಷ್ಟು ಆಪ್ತರು ಬೇರೆ ಯಾರೂ ಇಲ್ಲ. ಕೌಸಲ್ಯೆಗೆ ಹೇಳಿದರೆ ಆಕೆಗೆ ಸಂತೋಷವೇನೋ ಆಗಬಹುದಾದರೂ ಆಕೆಯಲ್ಲಿ ಕಾಮದ ಆಕರ್ಷಣೆ ದೊರೆಗೆ ಬತ್ತಿಹೋಗಿತ್ತು. ಸುಮಿತ್ರೆಯೂ ಅಷ್ಟೇ. ಚಿಕ್ಕವಯಸ್ಸಿನ ಕೈಕೆಯಿಯನ್ನು ಚೆನ್ನಾಗಿ ಮರಳುಮಾಡಿ ಇಟ್ಟುಕೊಂಡಿದ್ದ. ತನಗೆ ಬೇಕಾದ ಹಾಗೆ ಸುಖವನ್ನು ಅವಳಿಂದ ಪಡೆಯುತ್ತಿದ್ದ. ಆಕೆ ರಾಜನಿಗೋಸ್ಕರ ಅಲಂಕರಿಸಿಕೊಂಡು ನಗುಮುಖದಿಂದ ಯಾವತ್ತಿಗೂ ಸ್ವಾಗತಿಸಲು ಸಿದ್ಧಳಾಗಿರುತ್ತಿದ್ದಳು. ಕೈಕೇಯಿ ಮಂಥರೆಯ ಮಾತಿನಿಂದ ಪ್ರಭಾವಿತಳಾಗಿ ರಾಜನನ್ನು ಮಣಿಸಲೇ ಬೇಕೆಂದು ಕೋಪಾಗಾರವನ್ನು ಸೇರಿದರೆ ಇಳಿವಯಸ್ಸಿನ ರಾಜ “ರಾಮಾಭಿಷೇಕದ ಸಂತೋಷದ ವಾರ್ತೆಯನ್ನು ಕೈಕೇಯಿಗೆ ತಿಳಿಸಿ ರತಿಸುಖವನ್ನು ಪಡೆಯಬೇಕೆಂದು ಬಯಸಿ ಅತ್ಯಾಸೆಯಿಂದ ಕೈಕೇಯಿಯ ಅಂತಃಪುರಕ್ಕೆ ಧಾವಿಸಿ ಬರುತ್ತಾನೆ”.

ಕೈಕೇಯಿ ಅಂತಃಪುರದಲ್ಲಿ ಇಲ್ಲವಾಗಿರುವುದನ್ನು ಕಂಡವನಿಗೆ ವ್ಯಾಕುಲವಾಯಿತು. ಪ್ರತಿಹಾರಿ ಹೇಳಿದ “ದೇವ ದೇವಿ ಬೃಶಂ ಕ್ರುದ್ಧಾ ಕ್ರೋಧಾಗಾರಮಭಿದ್ರುತಾ-ಪರಮ ಕ್ರುದ್ಧೆಯಾಗಿ ದೇವಿ ಕೋಪಾಗಾರವನ್ನು ಸೇರಿದ್ದಾಳೆ” ಎನ್ನುವ ಮಾತನ್ನು ಕೇಳಿ ಕಂಗಾಲಾದ. ಕೋಪಾಗಾರಕ್ಕೆ ಧಾವಿಸಿ ನೋಡಿದರೆ ತನ್ನ ಪ್ರೇಯಸಿ ಅಸ್ತವ್ಯಸ್ತವಾಗಿ ನೆಲದ ಮೇಲೆ ಮಲಗಿದ್ದಾಳೆ. ಪ್ರಿಯತಮೆಯನ್ನು ಆಕಾಶದಿಂದ ಚ್ಯುತಳಾದ ಅಪ್ಸರೆಯಂತೆ ಕಂಡವನಿಗೆ ಎದೆಯೊಡೆದು ಹೋಯಿತು. “ನಿಷ್ಕಳಂಕನಾದ ದಶರಥ ಪಾಪಸಂಕಲ್ಪವನ್ನು ಹೊತ್ತ ಕೈಕೇಯಿಯನ್ನು ಕಂಡ” ಎನ್ನುವ ಮಾತು ಇಲ್ಲಿ ಬರುತ್ತದೆ. ಸಂಕಲ್ಪವೆನ್ನುವುದು ಹೊಸ ಕಾರ್ಯಕ್ಕೆ ಹೇತು. ಮುಂದಿನ ಘಟನೆಗೆ ಇಲ್ಲಿ ನಾಂದಿಯಾಗುತ್ತಿದೆ. ಧರ್ಮಮಾರ್ಗದಲ್ಲಿ ಸದಾ ನಡೆಯುತ್ತಿದ್ದ ಅರಸ ಕಾಮಮೋಹಿತನಾಗಿ ಕೈಕೇಯಿಯನ್ನು ಸಮಾಧಾನ ಮಾಡಲು ಹೇಳುವ ಮಾತುಗಳು ಸೂರ್ಯವಂಶಕ್ಕೆ ಹೇಳಿಸಿದ್ದಲ್ಲ.

ಅವಧ್ಯೋ ವಧ್ಯತಾಂ ಕೋ ವಾ ವಧ್ಯಃ ಕೋವಾ ವಿಮುಚ್ಯತಾಮ್.
ದರಿದ್ರಃ ಕೋ ಭವದಾಢ್ಯೋ ದ್ರವ್ಯವಾನ್ಕೋSಪ್ಯಕಿಂಚನಃ৷৷ಅ. ಕಾಂ.10.33৷৷

ಕಾಮವೆನ್ನುವುದು ಎಂತವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುವ ಮಾತುಗಳು ದೊರೆತನಕ್ಕೆ ತಕ್ಕುದಲ್ಲ. ಆತ ಅವಳನ್ನು ಸಮಾಧಾನಿಸುತ್ತಾ “ಪ್ರಿಯತಮೆಯಲ್ಲಿ ನನಗೆ ನಿನಗಿಂತ- ಮನುಜರಲ್ಲಿ ರಾಮನಿಗಿಂತ ಹೆಚ್ಚಿನವರು ಯಾರೂ ಇಲ್ಲ” ಎನ್ನುವಲ್ಲಿ ರಾಮನ ಹೆಸರನ್ನು ಕೇಳಿದ ಆಕೆಗೆ ಮತ್ತುಷ್ಟು ಉರಿ ಹತ್ತಿತು. ದೊರೆ ಮನ್ಮಥನ ಬಾಣಕ್ಕೆ ಈಡಾಗಿರುವುದನ್ನು ಪಕ್ಕಾ ಮಾಡಿಕೊಂಡಳು. ಸ್ವಲ್ಪ ಹೊತ್ತು ಕಾಡಿಸಬೇಕು ಎಂದು ಸುಮ್ಮನಾದವಳು. ದಶರಥನಿಗೆ ಸಹಿಸಲಾಗಿಲ್ಲ. ಆಕೆಯ ರೂಪಲಾವಣ್ಯಕ್ಕೆ ಸೋತಿದ್ದ. ಅವಳ ನೋವನ್ನು ಬಗೆಹರಿಸುವುದು ತನ್ನ ಆದ್ಯ ಕರ್ತವ್ಯವೆಂದು ಬಗೆದ.. ಅದು ತನಕ ತಾನು ಗಳಿಸಿದ ಸುಕೃತದ ಮೇಲೆ ಆಣೆಯಿಟ್ಟು ಅವಳ ಬಯಕೆಯನ್ನು ಈಡೇರಿಸುವೆ ಎಂದು ಅಂಗಲಾಚಿದ.

dhavala dharini king dasharatha

ಆದರೂ ಸುಮ್ಮನಿದ್ದ ಕೈಕೇಯಿಗೆ ಕೊನೆಯದಾಗಿ “ನನ್ನ ರಾಮನಾಣೆಗೂ ನೀನು ಹೇಳುವ ಕಾರ್ಯವನ್ನು ಮಾಡುತ್ತೇನೆ” ಎಂದು ಪ್ರತಿಜ್ಞೆ ಮಾಡಿಬಿಟ್ಟ. ಗಾಳದಲ್ಲಿ ಚಿಕ್ಕಮೀನನ್ನು ಚುಚ್ಚಿ ದೊಡ್ಡಮೀನನ್ನು ಸೆಳೆಯುವಂತೆ ಚಕ್ರವರ್ತಿಯನ್ನು ಮಟ್ಟುಹಾಕಿ ತನ್ನ ಕಾರ್ಯಸಾಧಿಸಲು ಇದೇ ಸಮಯವೆಂದು ತಿಳಿದ ಕೈಕೇಯಿ ಬಯಕೆಯನ್ನು ಹೇಳುವ ಮುನ್ನ ರಾಜನಲ್ಲಿನ ಧರ್ಮಪ್ರಜ್ಞೆಯನ್ನು ಜಾಗ್ರತಗೊಳಿಸಲು “ನೀನು ಮಾಡಿದ ಈ ಪ್ರತಿಜ್ಞೆಯನ್ನು ಮೂವತ್ತುಮೂರು ಕೋಟಿ ದೇವತೆಗಳು ಕೇಳಲಿ, ಚಂದ್ರಸೂರ್ಯರೂ ಕೇಳಲಿ, ಆಕಾಶವೂ ಇದಕ್ಕೆ ಸಾಕ್ಷಿಯಾಗಲಿ, ನವಗ್ರಹಗಳು, ಹಗಲು-ರಾತ್ರಿಗಳು, ಎಂಟುದಿಕ್ಕುಗಳು,ಗಂಧರ್ವರಾಕ್ಷಸರನ್ನೊಳಗೊಂಡಿರುವ ಸ್ವರ್ಗ-ಮರ್ತ್ಯ-ಪಾತಾಳ, ನಿಶಾಚರರೂ, ಪಿಶಾಚಗಳೂ, ಭೂತಗಣಗಳೂ, ಗೃಹದೇವತೆಗಳೂ ಸಹಿತ ಎಲ್ಲರೂ ನೀನು ಹೇಳಿದ ಈ ಪ್ರತಿಜ್ಞಾವಾಕ್ಯಕ್ಕೆ ಸಾಕ್ಷಿಗಳಾಗಲಿ” ಎಂದವಳೇ ಆತನನ್ನು ಸಂಪೂರ್ಣವಾಗಿ ಖೆಡ್ಡಾಕ್ಕೆ ತೋಡುವ ಈ ಮಾತನ್ನು ಆಡುತ್ತಾಳೆ.

ಸತ್ಯಸಂಧೋ ಮಹಾತೇಜಾಃ ಧರ್ಮಜ್ಞಃ ಸುಸಮಾಹಿತಾಃ.
ವರಂ ಮಮ ದದಾತ್ಯೇಷಃ ತನ್ಮೇ ಶ್ರೃಣ್ವನ್ತು ದೈವತಾಃ৷৷ಅಯೋ.11.16৷৷

ಎಲೈ ದೇವತೆಗಳಿರಾ! ನೀವೆಲ್ಲರೂ ಕೇಳಿರಿ. ಸತ್ಯಸಂಧನಾದ ಮಹಾತೇಜಸ್ವಿಯಾದ, ಧರ್ಮಜ್ಞನಾದ ಧಶರಥನು ಸಮಾಧಾನಚಿತ್ತನಾಗಿ ತಾನು ಪ್ರತಿಜ್ಞೆ ಮಾಡಿರುವಂತೆ ನನಗೆ ವರವನ್ನು ದಯಪಾಲಿಸಲಿದ್ದಾನೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ವ್ಯಾಧನ ಧ್ವನಿಯಿಂದ ಆಕರ್ಷಿತಳಾಗಿ ಬಲೆಗೆ ಬೀಳುವ ಜಿಂಕೆಯಂತೆ ರಾಜನು ತನ್ನ ವಿನಾಶಕ್ಕಾಗಿ ಧರ್ಮಪಾಶವನ್ನು ಕುತ್ತಿಗೆಗೆ ಬಿಗಿದುಕೊಂಡಿದ್ದು ಹೀಗೆ. ಅವನಿಗೆ ಮುಂದೆ ಮಾತಾಡಲು ಅವಕಾಶಕೊಡದಂತೆ ಆತನನ್ನು ಬಿಗಿದಪ್ಪಿ ತನಗೆ ಹಿಂದೆ ಕೊಟ್ಟಿದ್ದ ವರಗಳನ್ನು ಅಪೇಕ್ಷಿಸಿ ಅದಕ್ಕೆ ರಾಜ ಬೇರೆ ಏನನ್ನಾದರೂ ಹೇಳಬಾರದೆಂದು, “ರಾಮನಿಗೆ ಪಟ್ಟಾಭಿಷೇಕಕ್ಕೆ ಯಾವೆಲ್ಲಾ ಸಿದ್ಧತೆಗಳಾಗಿವೆಯೋ ಅದೇ ಸಾಂಬಾರಪದಾರ್ಥಗಳಿಂದ ಭರತನಿಗೆ ಪಟ್ಟಾಭಿಷೇಕವಾಗಬೇಕು. ಎರಡನೇಯ ವರವನ್ನೂ ಹೇಳಿಯೇಬಿಡುವೆ.

ನವ ಪಞ್ಚ ಚ ವರ್ಷಾಣಿ ದಣ್ಡಕಾರಣ್ಯಮಾಶ್ರಿತಃ
ಚೀರಾಜಿನಜಟಾಧಾರೀ ರಾಮೋ ಭವತು ತಾಪಸಃ.

ಹದಿನಾಲ್ಕು ವರುಷಗಳ ಕಾಲ ರಾಮನು ದಂಡಕಾರಣ್ಯಕ್ಕೆ ಹೋಗಿ ಅಲ್ಲಿ ಅವನು ಜಟಾಧಾರಿಯಾಗಿ ನಾರಮುಡಿಯನ್ನುಟ್ಟು ಕೃಷ್ಣಾಜಿನವನ್ನು ಧರಿಸಿ ತಾಪಸನಂತೆ ಇರಬೇಕು.

ಕೈಕೇಯಿ ಇಷ್ಟಕ್ಕೇ ನಿಲ್ಲಿಸುವುದಿಲ್ಲ. “ಆದ್ಯ ಚೈವ ಹಿ ಪಶ್ಯೇಯಂ ಪ್ರಯಾನ್ತಂ ರಾಘವಂ ವನಮ್- ರಾಘವನು ಚೀರಾಜಿನ-ಜಟಾಧಾರಿಯಾಗಿ ಕಾಡಿಗೆ ಹೋಗುವುದನ್ನು ಈಗಲೇ ನಾನು ನೋಡಬೇಕು, ಸತ್ಯವಚನನಾದ ನೀನು ಈಗಲೇ ನಡೆಸಿಕೊಡು” ತನ್ನ ಇಬ್ಬರು ಪ್ರಿಯರಲ್ಲಿ ಒಬ್ಬನಾದ ರಾಮನಿಗೆ ಆಘಾತಕಾರಿಯಾದ ವಿಷಯಗಳನ್ನು ಹೇಳುವ ಮಾತುಗಳು ದಶರಥನ ಕಾಮದ ಪಿತ್ಥವನ್ನು ಜರ್ರನೆ ಇಳಿಸಿಯೇಬಿಟ್ಟಿತು; ಜೊತೆಗೆ ಆತನ ಮನೋಧೈರ್ಯವನ್ನೂ ಸಹ! ಲೋಕದ ಎಲ್ಲಾ ರಾಜರನ್ನು, ಪ್ರಜೆಗಳನ್ನು ಮತ್ತು ವಶಿಷ್ಠರಾದಿಯಾಗಿರುವ ಎಲ್ಲಾ ಋಷಿಗಳನ್ನು ತನ್ನ ಇಷ್ಟಕ್ಕೆ ಒಗ್ಗಿಕೊಳ್ಳುವಂತೆ ತಂತ್ರವನ್ನು ಹೂಡಿದ ಅರಸನ ಇಚ್ಛೆ ಇಲ್ಲಿ ತರಗೆಲೆಗಳಂತೆ ಗಾಳಿಗೆ ಹಾರಿಹೋಯಿತು. ಯಾವ ಉದ್ಧೇಶಕ್ಕಾಗಿ ಕೈಕೇಯಿಯ ಅರಮನೆಗೆ ಬಂದಿದ್ದನೋ ಅವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಕದಡಿಹೋಯಿತು. ಅವನ ಜೀವನದಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿವದೊಂದೇ ಗುರಿ ಇದ್ದಿದ್ದು. ತನ್ನ ಪ್ರೀತಿಯ ರಾಣಿಯಿಂದಲೇ ಹೀಗೆ ವಿಘ್ನಬರಬಹುದೆಂದು ರಾಜ ಎಣಿಸಿರಲಿಲ್ಲ. ಅಂಥ ಸ್ವಲ್ಪ ಅನುಮಾನ ಬಂದಿದ್ದರೂ ಆತ ಕೈಕೇಯಿಯ ಅರಮನೆಗೆ ಬರುತ್ತಲೇ ಇರಲಿಲ್ಲ. ಒಮ್ಮೆಲೇ ಎಚ್ಚರತಪ್ಪಿ ಬಿದ್ದ. ತನ್ನ ರಾಜತ್ವಕ್ಕೆ ಧಿಕ್ಕಾರ ಹಾಕಿಕೊಂಡ. ಕೊನೆಗೆ ಅನಿವಾರ್ಯವಾಗಿ ಕೈಕೇಯಿಗೆ ನಮಸ್ಕರಿಸಿಕೊಂಡು “ನಿನ್ನ ಕಾಲನ್ನು ಬೇಕಾದರೂ ಹಿಡಿಯುತ್ತೇನೆ, ರಾಮನನ್ನು ರಕ್ಷಿಸು. ವರದಾನವೆನ್ನುವ ಒಂದು ಪ್ರತಿಜ್ಞೆಯಲ್ಲಿ ನನ್ನನ್ನು ಸಿಕ್ಕಿಹಾಕಿಸಿ ನಿರಪರಾಧಿಯನ್ನು ಕಾಡಿಗಟ್ಟಿದ ದೋಷ ನನಗೆ ಬಾರದಿರಲಿ” ಎಂದು ನೆಲದಲ್ಲಿ ಹೊರಳಾಡತೊಡಗಿದ.

ಮೂಂದಿನ ಭಾಗದಲ್ಲಿ ತನ್ನ ಕರ್ಮಫಲವನ್ನು ತಾನು ಉಂಡ ಮಹಾರಾಜ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading
Advertisement
Kulgam
ದೇಶ3 mins ago

Kulgam: ಪೂಂಚ್‌ ದಾಳಿಗೆ ಸೇನೆ ಸೇಡು; ಒಬ್ಬ ಲಷ್ಕರ್‌ ಕಮಾಂಡರ್‌ ಸೇರಿ ಮೂವರು ಉಗ್ರರ ಖತಂ

Lok Sabha Election
Latest19 mins ago

Lok Sabha Election : ರಾಜಕೀಯಕ್ಕಾಗಿ ದ್ವೇಷ ಸೃಷ್ಟಿ; ಬಿಜೆಪಿ ವಿರುದ್ಧ ವಿಡಿಯೊ ಮೂಲಕ ಟೀಕೆ ಮಾಡಿದ ಸೋನಿಯಾ ಗಾಂಧಿ

guava leaves benefits
ಆರೋಗ್ಯ30 mins ago

Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

t20 world cup
ಕ್ರೀಡೆ45 mins ago

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

Lok Sabha Election 2024
ಪ್ರಮುಖ ಸುದ್ದಿ53 mins ago

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

School Jobs
ಪ್ರಮುಖ ಸುದ್ದಿ58 mins ago

School Jobs: 25 ಸಾವಿರ ಶಿಕ್ಷಕರ ವಜಾ ಆದೇಶಕ್ಕೆ ಸುಪ್ರೀಂ ತಡೆ; ಮಮತಾ ಸರ್ಕಾರಕ್ಕೆ ಚಾಟಿ

Karnataka Weather Forecast
ಮಳೆ1 hour ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Akshaya Tritiya 2024
ಫ್ಯಾಷನ್1 hour ago

Akshaya Tritiya 2024: ಅಕ್ಷಯ ತೃತೀಯದಂದು ಬಂಗಾರ ಖರೀದಿಸುವವರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್‌

T20 world Cup
ಪ್ರಮುಖ ಸುದ್ದಿ1 hour ago

T20 World Cup : ಬುಮ್ರಾಗೆ ವಿಶ್ರಾಂತಿ ನೀಡಲು ನಿರಾಕರಿಸಿದ ಮುಂಬೈ ಇಂಡಿಯನ್ಸ್​; ವಿಶ್ವ ಕಪ್​ ಆಡಲು ಸಮಸ್ಯೆ

Lok Sabha Election 2024
ಬೀದರ್‌1 hour ago

Lok Sabha Election 2024: ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ3 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌