Sunday read | ಹೊಸ ಪುಸ್ತಕ | ಭೀಷ್ಮರು ಹೇಳಿದ ಕಥೆ | ಕರುಣೆ ಅಸಾಮರ್ಥ್ಯವಲ್ಲ - Vistara News

ಅವಿಭಾಗೀಕೃತ

Sunday read | ಹೊಸ ಪುಸ್ತಕ | ಭೀಷ್ಮರು ಹೇಳಿದ ಕಥೆ | ಕರುಣೆ ಅಸಾಮರ್ಥ್ಯವಲ್ಲ

ಧರ್ಮರಾಯನಿಗೆ ಹಲವು ಕತೆಗಳನ್ನು ಹೇಳಿ ಅವನಲ್ಲಿ ಕರ್ತವ್ಯಪ್ರಜ್ಞೆ ಮೂಡಿಸುತ್ತಾರೆ ಭೀಷ್ಮಾಚಾರ್ಯರು. ಅವುಗಳಲ್ಲಿ ಒಂದು ಕತೆ ಇಲ್ಲಿದೆ. ಇದು ಜಗದೀಶ ಶರ್ಮಾ ಅವರ ʼಭೀಷ್ಮರು ಹೇಳಿದ ಮ್ಯಾನೇಜ್‌ಮೆಂಟ್‌ ಕಥೆಗಳುʼ ಕೃತಿಯ ಆಯ್ದ ಭಾಗ.

VISTARANEWS.COM


on

stories of bhishma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅದೊಂದು ಬೂರುಗದ ಮರ. ಅದು ಇದ್ದದ್ದು ಹಿಮಗಿರಿಯಲ್ಲಿ. ಅದು ಇರುತ್ತಾ ಅದೆಷ್ಟೋ ವರ್ಷ ಕಳೆದಿತ್ತು. ದಪ್ಪವಾದ ಕಾಂಡ, ದಶದಿಕ್ಕಿಗೂ ಹರಡಿದ ಲೆಕ್ಕವಿಲ್ಲದಷ್ಟು ಕೊಂಬೆಗಳು, ತುಂಬಿದ ಎಲೆಗಳು, ಹೀಗಿದ್ದ ಆ ಮರ ಒಂದು ಪ್ರದೇಶವನ್ನೇ ವ್ಯಾಪಿಸಿತ್ತು. ಬಿಸಿಲಿಗೆ ಬಸವಳಿದ ಆನೆಯಂತಹ ಪ್ರಾಣಿಯೂ ಅದರ ಅಡಿಯಲ್ಲಿ ನೆರಳು ಬಯಸುತ್ತಿತ್ತು ಎಂದ ಮೇಲೆ ಉಳಿದ ಪ್ರಾಣಿಗಳ ಬಗ್ಗೆ ಹೇಳಬೇಕಾಗಿಯೇ ಇಲ್ಲ. ಅದರಲ್ಲಿ ಗೂಡು ಕಟ್ಟಿದ ಪಕ್ಷಿಗಳಿಗೆ ಲೆಕ್ಕವಿರಲಿಲ್ಲ. ಆ ದಾರಿಯಲ್ಲಿ ಸಂಚರಿಸುವ ವ್ಯಾಪಾರಿಗಳಿಗೂ, ಕಾಡಲ್ಲೇ ಇರುವ ತಪಸ್ವಿಗಳಿಗೂ ಅದು ನೆರಳಾಗಿತ್ತು. ಅದು ರಮ್ಯವಾಗಿಯೂ ಇತ್ತು.

jagadish sharma
ಜಗದೀಶ ಶರ್ಮಾ ಸಂಪ

ಎಷ್ಟೋ ಕಾಲದಿಂದ ನಾರದರು ಈ ಮರವನ್ನು ನೋಡುತ್ತಿದ್ದರು. ತ್ರಿಲೋಕಸಂಚಾರಿಯಾದ ಅವರು ಅತ್ತ ಸಂಚರಿಸುವಾಗೆಲ್ಲ ಇದನ್ನು ಕಾಣುತ್ತಿದ್ದರು. ಅವರಿಗೆ ಇದೊಂದು ಅಚ್ಚರಿಯೇ ಆಗಿತ್ತು. ಒಂದು ದಿನ ಅವರು ಮರವನ್ನು ಮಾತನಾಡಿಸಿದರು. ʻಅಬ್ಬಾ, ಎಂತಹ ಸೌಂದರ್ಯ ನಿನ್ನದು! ಮನೋರಮ ನೀನು! ಪಕ್ಷಿ ಪ್ರಾಣಿ ಮನುಷ್ಯ ಎಲ್ಲರಿಗೂ ಆಶ್ರಯ. ನಿನ್ನ ಬಗ್ಗೆ ಮನಸ್ಸು ಪ್ರಸನ್ನವಾಗಿದೆ. ನನಗೊಂದು ಕೌತುಕ. ಎಂದಿನಿಂದಲೋ ನೋಡುತ್ತಿದ್ದೇನೆ, ನಿನ್ನ ಒಂದು ಕೊಂಬೆಯೂ ಮುರಿದದ್ದು ಕಾಣಿಸಿಲ್ಲ. ವಾಯುವಿಗೆ ನಿನ್ನ ಬಗ್ಗೆ ಪ್ರೀತಿಯೇ? ಅಥವಾ ಅವನು ನಿನ್ನ ಗೆಳೆಯನೇ? ನಿನ್ನನ್ನು ಅವನು ಕಾಪಾಡಲು ಕಾರಣವೇನು? ಅವನು ಮಹಾವೃಕ್ಷಗಳನ್ನೇ ಬೀಳಿಸುವವ ಶಿಖರಗಳನ್ನು ಅಲ್ಲಾಡಿಸುವವ. ಮಡು, ನದಿ, ಸಾಗರಗಳನ್ನು ಒಣಗಿಸುವವ. ಅವನು ಪಾತಾಳವನ್ನೂ ಬಿಡುವುದಿಲ್ಲ. ಅವನ ರಕ್ಷಣೆಯೇ ನಿನ್ನ ಬಲ. ಹಾಗಾಗಿಯೇ ನೀನು
ರೆಂಬೆ, ಕೊಂಬೆ, ಎಲೆ, ಹಣ್ಣು ಎಲ್ಲದರಿಂದ ಸದಾ ಸಮೃದ್ಧನಾಗಿ ಇರುವೆ’ ಎಂದರು.

ʻದೇವರ್ಷಿ, ವಾಯುವು ನನಗೆ ಗೆಳೆಯನೂ ಅಲ್ಲ, ಬಂಧುವೂ ಅಲ್ಲ, ಆತ್ಮೀಯನೂ ಅಲ್ಲ. ನನ್ನನ್ನು ರಕ್ಷಿಸಲು ಅವನೇನು ಬ್ರಹ್ಮನೇ? ನನ್ನ ಪರಾಕ್ರಮದ ಹದಿನೆಂಟನೇ ಒಂದು ಭಾಗವೂ ಅವನಿಗಿಲ್ಲ. ಪರ್ವತ, ವೃಕ್ಷಗಳನ್ನೆಲ್ಲ ಬೆದರಿಸುತ್ತಾ ಹಲವು ಬಾರಿ ನನ್ನ ಮೇಲೂ ದಾಳಿ ಮಾಡಿದ್ದನು. ತಡೆದು ಓಡಿಸಿದ್ದೆ. ಜೊತೆಗೆ ಅವನ ಬಲವನ್ನೂ ಕುಗ್ಗಿಸಿದ್ದೆ. ಅವನಿಗೋ ಅವನ ಕೋಪಕ್ಕೋ ಅಂಜುವ ಮಾತೇ ಇಲ್ಲ’ ಎಂದಿತು ಬೂರುಗ.

ʻಇದು ವಿಪರೀತದ ಮಾತು. ವಾಯುವಿನ ಬಲಕ್ಕೆ ಸರಿಸಮವಾದದ್ದು ಯಾವುದೂ ಇಲ್ಲ. ಇಂದ್ರ, ಯಮ, ಕುಬೇರ, ವರುಣ ಇವರೇ ಅವನಿಗೆ ಸಾಟಿಯಲ್ಲವಂತೆ, ಇನ್ನು ನೀನೆಷ್ಟರವನು? ಯಾವುದೇ ಜೀವಿಯ ಸಣ್ಣ ಚಲನೆಗೂ ವಾಯುವೇ ಕಾರಣ. ಎಲ್ಲ ಜೀವಿಗಳಿಗೂ ಆಶ್ರಯನಾದ ಅವನನ್ನು ನೀನು ಗೌರವಿಸದಿರುವುದು ನಿನ್ನ ಕ್ಷುಲ್ಲಕತೆ. ಒಳಗೆ ಟೊಳ್ಳು ನೀನು, ಹೊರಗೆ ಭಾರೀ ಮಾತನಾಡುವೆ. ಸಿಟ್ಟು, ಸುಳ್ಳು, ಸೊಕ್ಕು ಎಲ್ಲವೂ ಇದೆ ನಿನಗೆ, ನಿನ್ನ ಮೇಲೆ ತಡೆಯಲಾಗದಷ್ಟು ಕೋಪ ಬರುತ್ತಿದೆ. ನಿನ್ನ ಈ ದುಷ್ಟ ಮಾತನ್ನು ಖಂಡಿತವಾಗಿ ವಾಯುವಿಗೆ ತಿಳಿಸುತ್ತೇನೆ. ಚಂದನ, ಶಾಲ, ಸರಲ, ಬೆತ್ತ, ದೇವದಾರುವಿನಂತಹ ಶ್ರೇಷ್ಠ ವೃಕ್ಷಗಳೇ ಅವನಿಗೆ ಬಾಗುತ್ತವೆ. ಯಾಕೆಂದರೆ ಅವಕ್ಕೆ ಅವನ ಸಾಮರ್ಥ್ಯ ಗೊತ್ತು. ನಿನಗೆ ಸೊಕ್ಕು. ಹಾಗಾಗಿ ಅವನ ಬಲ ನಿನಗೆ ಗೊತ್ತಿಲ್ಲ’ ಎಂದು ಬೂರುಗದ ಮೇಲೆ ಸಿಟ್ಟಾದರು ನಾರದರು.

ಅದೇ ಕೋಪದಲ್ಲಿ ವಾಯುವಿನ ಬಳಿಗೆ ಹೋದರು. ʻಹಿಮವತ್ ಪರ್ವತದ ತಪ್ಪಲಿನಲ್ಲಿ ಒಂದು ಬೂರುಗ ಮರವಿದೆ. ಆಳಕ್ಕಿಳಿದ ಬೇರು, ವಿಶಾಲವಾಗಿ ಹರಡಿದ ರೆಂಬೆ ಕೊಂಬೆಗಳ ಬೃಹತ್ ವೃಕ್ಷವದು. ಅದು ನಿನ್ನನ್ನು ಅವಮಾನಿಸುತ್ತಿದೆ. ನಿನ್ನ ಬಗ್ಗೆ ಸಲ್ಲದ ಮಾತನ್ನಾಡುತ್ತಿದೆ. ಆ ಮಾತುಗಳನ್ನು ನಾನಂತೂ ನಿನ್ನೆದುರು ಹೇಳಲಾರೆ. ನೀನು ಪ್ರಾಣಿಗಳಲ್ಲೇ ಶ್ರೇಷ್ಠ. ನೀನು ವರಿಷ್ಠ, ನೀನೇ ಗರಿಷ್ಠ. ನಿನಗೆ ಸಿಟ್ಟು ಬಂದರೆ ಅದು ಯಮನಂತೆ’ ಎಂದರು.

ಇದನ್ನೂ ಓದಿ | ಹೊಸ ಪುಸ್ತಕ | LTTE ಮೂರ್ತಿ Calling | ನೈಜ ಘಟನೆಯ ರೋಚಕ ಕಥೆ

ನಾರದರ ಮಾತಿನಿಂದ ವಾಯುವಿಗೆ ಕೋಪವೇರಿತು. ಬೂರುಗದ ಎದುರು ಬಂದನವ. ʻಬೂರುಗ, ನಾರದರ ಬಳಿ ಏನೋ ಹೇಳಿದೆಯಂತೆ? ನನ್ನನ್ನು ತುಚ್ಚೀಕರಿಸಿ ಮಾತನಾಡಿದೆಯಂತೆ? ವಾಯುವಿನ ಪ್ರಭಾವವನ್ನು ನಿನಗೆ ಇವತ್ತು ತೋರಿಸುತ್ತೇನೆ. ನಿನ್ನ ಬಗ್ಗೆ ನನಗೆ ತಿಳಿದಿಲ್ಲ ಎಂದುಕೊಳ್ಳಬೇಡ. ಎಲ್ಲ ಗೊತ್ತಿದೆ ನನಗೆ. ಹಿಂದೆ ಸೃಷ್ಟಿಕಾರ್ಯ ಮಾಡುವಾಗ ಬ್ರಹ್ಮ ನಿನ್ನ ನೆರಳಲ್ಲಿ ವಿಶ್ರಾಂತಿ ಪಡೆದಿದ್ದ. ಆ ಗೌರವದಿಂದಾಗಿ ನಿನ್ನನ್ನು ರಕ್ಷಿಸಿಕೊಂಡು ಬಂದೆ. ಅದು ನಿನ್ನ ಸಾಮರ್ಥ್ಯವಲ್ಲ, ನನ್ನ ಸದಭಿಪ್ರಾಯ. ಯಾರೋ ಕ್ಷುದ್ರನಂತೆ ನನ್ನನ್ನು ಅವಮಾನಿಸಿದೆಯಲ್ಲವೇ? ತೋರಿಸುತ್ತೇನೆ ಈಗ. ನಾನಾರೆಂದು ಅರಿಯಬಹುದಂತೆ’ ಎಂದು ಅಬ್ಬರಿಸಿದ.

ನಸು ನಕ್ಕಿತು ಬೂರುಗ. ʻವಾಯು, ನಿನ್ನ ಕೋಪತಾಪವನ್ನು ಬೇರೆಡೆ ತೋರಿಸು. ನನ್ನ ಎದುರು ಇವೆಲ್ಲ ಬೇಡ. ಸಿಟ್ಟಾಗಿ ನನಗೇನು ಮಾಡಬಲ್ಲೆ ನೀನು? ನೀನು ಸ್ವಯಂ ಪ್ರಭುವೇ ಆದರೂ ನನಗೇನೂ ಭಯವಿಲ್ಲ’ ಎಂದಿತದು. ʻನಾಳೆ ತೋರಿಸುತ್ತೇನೆ ನಿನಗೆ ನಾನು ಯಾರೆಂದು’ ಎಂದ ವಾಯು ಹಿಂದಿರುಗಿದ. ಆ ಹೊತ್ತಿಗೆ ರಾತ್ರಿಯೂ ಆಗಿತ್ತು.

ವಾಯು ಹೋದಮೇಲೆ ಬೂರುಗ ತನ್ನಲ್ಲೇ ಯೋಚಿಸಿತು. ವಾಯುವಿನ ಉತ್ಪಾತಗಳನ್ನು ನೆನಪಿಸಿಕೊಂಡಿತು. ತಾನು ವಾಯುವಿಗೆ ಸಮವಲ್ಲ ಎನಿಸಿತು. ʻನಾರದರ ಬಳಿ ನಾನು ಹೇಳಿದ್ದೆಲ್ಲ ಸರಿಯಲ್ಲ. ವಾಯುವೇ ನನಗಿಂತ ಬಲಿಷ್ಠ. ಅವರು ಹೇಳಿದ್ದೇ ಸರಿ. ವಾಸ್ತವವಾಗಿ ಬೇರೆ ವೃಕ್ಷಗಳಿಗಿಂತ ನಾನು ದುರ್ಬಲ. ಆದರೂ ಇಷ್ಟು ಕಾಲ ಹೀಗೆ ಬದುಕಿದ್ದೇನೆಂದರೆ ಅದಕ್ಕೆ ನನ್ನ ಜಾಣ್ಮೆ ಕಾರಣ. ಅವುಗಳಿಗಿಂತ ನಾನೇ ಬುದ್ಧಿವಂತ. ಈಗ ನಾನು ಬುದ್ಧಿಯಿಂದಲೇ ಗೆಲ್ಲಬೇಕು. ಈ ಹುಡುಗುಬುದ್ಧಿಯ ಮರಗಳಿಗೆ ಬುದ್ಧಿಯಿಲ್ಲ. ಹಾಗಾಗಿಯೇ ವಾಯುವಿಗೆ ಸೋಲುತ್ತವೆ. ಅವನು ನಮ್ಮನ್ನು ಬೀಳಿಸುವುದು ಹೇಗೆ ಎಂದು ಯೋಚಿಸಿದರೆ ಪರಿಹಾರ ಸಿಗುತ್ತದೆ. ನಮ್ಮ ರೆಂಬೆಕೊಂಬೆಗಳು, ನಮ್ಮ ಎಲೆಹಣ್ಣುಗಳು ಅವನ ಕೆಲಸವನ್ನು ಸುಲಭ ಮಾಡಿಕೊಡುತ್ತವೆ. ಅವೇ ಇಲ್ಲವಾದರೆ ಅವನೇನು ಮಾಡಿಯಾನು? ಈ ಪೆದ್ದುಗಳಿಗೆ
ಇಷ್ಟೂ ಅರ್ಥವಾಗದು’ ಎಂದು ಆಲೋಚಿಸಿತು. ಕಷ್ಟಪಟ್ಟು ತನ್ನ ಎಲೆ, ಹೂವು, ಕೊಂಬೆ ಎಲ್ಲವನ್ನೂ ಮುರಿದುಕೊಂಡಿತು. ಈಗ ಅದು ಒಣ ಮರವಾಗಿ ಕಾಣಿಸುತ್ತಿತ್ತು. ವಾಯುವಿನ ನಿರೀಕ್ಷೆಯಲ್ಲಿತ್ತು.

ಬೆಳಗಾಯಿತು. ವಾಯು ಪ್ರಚಂಡವಾಗಿ ಬೀಸುತ್ತಾ ಬಂದ. ಸಿಟ್ಟು ಆವರಿಸಿತ್ತು ಅವನನ್ನು. ಬೂರುಗವನ್ನು ಕಂಡವ ನಕ್ಕುಬಿಟ್ಟ. ಎಲೆ, ಕಾಯಿ, ಹಣ್ಣು, ಕೊಂಬೆ ಏನೂ ಇಲ್ಲದ ಬೋಳು ಮರ ಅಲ್ಲಿತ್ತು. ಮುರಿಯಲು ಅಲ್ಲೇನೂ ಇರಲಿಲ್ಲ. ʻಬೂರುಗ, ನಾನು ಇದನ್ನೇ ಮಾಡಬೇಕೆಂದಿದ್ದೆ. ನೀನೇ ಮಾಡಿಕೊಂಡೆ. ಅಂತೂ ನನ್ನ ಬಲಕ್ಕೆ ಬಾಗಿದೆ’ ಎಂದ. ನಾಚಿಕೆಯೆನಿಸಿತು ಬೂರುಗಕ್ಕೆ. ನಾರದರ ಮಾತನ್ನು ಅದು ನೆನಪಿಸಿಕೊಂಡಿತು.

ಇದನ್ನೂ ಓದಿ : Sunday read | ಹೊಸ ಪುಸ್ತಕ | ಹೀರೋಯಿನ್‌ ಹಾಗೆ ಇದ್ದ ಹುಡುಗಿ

ಸಿಕ್ಕ ಹುದ್ದೆ, ಯಾರೂ ಎಡತಾಕದಿರುವುದು, ತನ್ನಷ್ಟಕ್ಕೆ ನಡೆದುಕೊಳ್ಳಲು ಸ್ವಾತಂತ್ರ್ಯವಿರುವುದು ಇವೆಲ್ಲ ತಲೆಯ ಮೇಲೆ ಕಿರೀಟ ತೊಡಿಸಿಬಿಡುತ್ತದೆ. ತನ್ನನ್ನು ಬಿಟ್ಟರಿಲ್ಲ ಎನಿಸುತ್ತದೆ. ತನಗೆ ಸಾವಿರ ತಲೆಯಿದೆ, ಎರಡು ಸಾವಿರ ಕೈಯಿದೆ, ತಾನು ಸರ್ವಶಕ್ತ, ಸರ್ವಜ್ಞ ಎಂದು ಮೆರೆಯತೊಡಗುತ್ತಾರೆ. ಹೀಗೆ ಮಾಡುತ್ತಲೇ ಒಂದು ದಿನ ದೊಡ್ಡ ಬಂಡೆಗೆ ಡಿಕ್ಕಿ ಹೊಡೆಯುತ್ತಾರೆ. ಅಲ್ಲಿಗೆ ಮುಗಿಯಿತು. ನೂರು ಜನರೆದುರು ಬೆತ್ತಲಾದಂತೆ. ಹಾಗಾಗಿ ಮೇಲೇರಿದಂತೆ ಎಚ್ಚರಿಕೆ ಬೇಕು. ಯಾರೋ ಸುಮ್ಮನಿರುವುದು ನಮ್ಮ ಸಾಮರ್ಥ್ಯವಾಗಿರದು. ಅದು ಅವರ ಕರುಣೆಯೇ ಆಗಿರಬಹುದು. ಹಾಗಾಗಿ ದುರಹಂಕಾರದ ವರ್ತನೆ ಎಂದಿಗೂ ಸಲ್ಲ. ಏರಿದವನು ಚಿಕ್ಕವನಿರಬೇಕು ಎಂದು ಸೂರ್ಯ ತೋರಿಸಿಕೊಡುತ್ತಾನೆ ಎನ್ನುವ ಜನಪದದ ಸಾಲಿಗೆ ಹೊಂದುವಂತೆ ಇರಬೇಕು.

ಪುಸ್ತಕ: ಭೀಷ್ಮ ಹೇಳಿದ ಮ್ಯಾನೇಜ್‌ಮೆಂಟ್‌ ಕಥೆಗಳು
ಲೇಖಕರು: ಜಗದೀಶ ಶರ್ಮಾ ಸಂಪ
ಪ್ರಕಾಶನ: ಸಾವಣ್ಣ
ಪುಟ ೧೭೬, ಬೆಲೆ ೧೮೦ ರೂ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Gali Janardana Reddy : ಗಣಿ ಧಣಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಮಡಿಲಿಗೆ, ಕಲ್ಯಾಣದಲ್ಲಿ ಲಾಭ ನಿರೀಕ್ಷೆ

Gali Janardhana Reddy : ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಲಾಭವಾಗುವ ನಿರೀಕ್ಷೆ ಇದೆ.

VISTARANEWS.COM


on

Gali Janarhana Reddy
Koo

ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ (Assembly Election 2023) ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya pragati Party) ಸ್ಥಾಪನೆ ಮಾ‌ಡಿ ಸಡ್ಡು ಹೊಡೆದಿದ್ದ ಗಾಲಿ ಜನಾರ್ದನ ರೆಡ್ಡಿ (Gali Janardana Reddy) ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ (Janardhana Reddy rejoins Congress). ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಅವರು ಲೋಕಸಭಾ ಚುನಾವಣೆಗೆ (Lok Sabha Election 2024) ಮುನ್ನ ಬಿಜೆಪಿಗೆ ಬಲ ತುಂಬಿದ್ದಾರೆ. ಅವರ ಮರು ಸೇರ್ಪಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಾಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್‌, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಅವರು ಭಾಗಿಯಾಗಿದ್ದಾರೆ. ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು. ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ. ಅವರು ನಾಯಕರು ಮತ್ತು ಹಿಂಬಾಲಕರನ್ನು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಪಕ್ಷಕ್ಕೆ ಸ್ವಾಗತ ಮಾಡಿದರು.

ಮೋದಿ ಅವರ ನಾಯಕತ್ವ ಮೆಚ್ಚಿ ಬಂದಿದ್ದಾರೆ ಎಂದ ವಿಜಯೇಂದ್ರ

ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಪಕ್ಷಕ್ಕೆ ಬಂದಿರುವುದು ಬಹಳ ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಗಾಲಿ ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು, ತಾವೇ ಕಟ್ಟಿದ ಪಕ್ಷವನ್ನು ವಿಸರ್ಜನೆ ಮಾಡಿ ಬಿಜೆಪಿಯೊಂದಿಗೆ ವಿಲೀನ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಶಕ್ತಿ ಬಂದಂತಾಗಿದೆ. ಮೋದಿ ಅವರ ನಾಯಕತ್ವ ಮೆಚ್ಚಿ ಮರು ಸೇರ್ಪಡೆ ಆಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

Gali Janarhana Reddy1
ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಂದಿಗೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ʻʻಲೋಕಸಭೆಯಲ್ಲಿ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ದಿನೇದಿನೆ ಮೋದಿ ಅವರ ಪರ ವಾತಾವರಣ ಹೆಚ್ಚುತ್ತಿದೆ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ರೂಪಿಸಲಿದೆ‌ʼʼ ಎಂದು ಹೇಳಿದ್ದಾರೆ.

ಬೆಳಗ್ಗೆ ಹೋಗಿ ಮಧ್ಯಾಹ್ನ ಮರಳಿ ಬಂದ ಹಾಗೆ ಅನಿಸ್ತಿದೆ ಎಂದ Gali Janardana Reddy

ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಿದ್ದೇನೆ. ನನ್ನ ಕಷ್ಟದ ಕಾಲದಲ್ಲಿ ನನ್ನ ಬೆನ್ನಿಗೆ ನಿಂತ ಎಲ್ಲಾ ಕಾರ್ಯಕರ್ತರಿಗೂ ವಂದನೆ ಸಲ್ಲಿಸ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಗೆ ಸೇರ್ಪಡೆ ಆಗಿದ್ದೇವೆ ಎಂದು ಹೇಳಿದರು.

ʻʻದೇಶದ ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಿನಂತೆ ಕೆಲಸ‌ ಮಾಡಿರುವ ಮೋದಿ ಅವರಿಗೆ ವಂದನೆಗಳು. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ, ಬಾಹ್ಯ ಬೆಂಬಲ ಬೇಡ. ಬಿಜೆಪಿಗೆ ಬಂದು ಕೆಲಸ ಮಾಡಿ ಅಂತ ಆಹ್ವಾನ ನೀಡಿದರು. ಅವರ ಆಹ್ವಾನ ಸ್ವೀಕರಿಸಿ ಬಂದಿದ್ದೇನೆ. ಇದು ನನ್ನ ಪೂರ್ವ ಜನ್ಮದ ಪುಣ್ಯʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಬಿ.ಎಸ್‌. ಯಡಿಯೂರಪ್ಪ ಅವರು ನನಗೆ ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರು. ಯಡಿಯೂರಪ್ಪ ಅವರು ಸಿಎಂ‌ ಆಗಿದ್ದಾಗ ಅವರ ಕ್ಯಾಬಿನೆಟ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈಗ ಅವರ ಸುಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರೋದು ನನ್ನ ಪುಣ್ಯ. ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ, ಕೆಲಸ ಮಾಡುತ್ತೇವೆ ಎಂದು ಹೇಳಿದರು.

ʻʻಎಲ್ಲಾ ಏಳುಬೀಳುಗಳನ್ನು ನೋಡಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿರೋ ಖುಷಿ ಇದೆ. ಕೆಲವು ಕಾರಣದಿಂದ ಹೊರಗೆ ಹೋಗಿದ್ದೆ. 13 ವರ್ಷಗಳ ಬಳಿಕ ವಾಪಸ್ ಬಂದಿದ್ದೇನೆ ಅನಿಸುತ್ತಿಲ್ಲ. ಬೆಳಗ್ಗೆ ಹೋಗಿ, ಮಧ್ಯಾಹ್ನ ಬಂದಿದ್ದೇನೆ ಅನಿಸುತ್ತಿದೆʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ : Rekha Patra: ಸಂದೇಶ್‌ಖಾಲಿ ಸಂತ್ರಸ್ತೆಗೆ ಟಿಕೆಟ್‌ ನೀಡಿದ ಬಿಜೆಪಿ; ಯಾರಿವರು ರೇಖಾ ಪಾತ್ರಾ?

Gali Janardana Reddy ಅಜ್ಞಾತವಾಸ ಮುಗಿಸಿ ಮರಳಿದ ಶ್ರೀರಾಮ ಎಂದ ಶ್ರೀರಾಮುಲು

ಜನಾರ್ದನ ರೆಡ್ಡಿ ಅವರ ಪಕ್ಷ ಮರು ಸೇರ್ಪಡೆಯಿಂದ ಅವರ ಗೆಳೆಯ ಹಾಗೂ ಬಳ್ಳಾರಿ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು, ಜನಾರ್ದನ ರೆಡ್ಡಿ ಅವರು ರಾಜಕೀಯ ಅಜ್ಞಾತವಾಸ ಮುಗಿಸಿ ಬಿಜೆಪಿಗೆ ವಾಪಸು ಬರ್ತಿದ್ದಾರೆ. ಅವರು ಬಿಜೆಪಿಗೆ ಬರುವುದರಿಂದ ರಾಜಕೀಯವಾಗಿ ನಮಗೆ ಲಾಭ ಆಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ನಮಗೆ ಲಾಭ ಆಗಲಿದೆ. ನಮಗೆ ಈ ಬೆಳವಣಿಗೆ ಹೆಚ್ಚು ಶಕ್ತಿ ತಂದಿದೆ. ರಾಷ್ಟ್ರೀಯ ನಾಯಕರು ರೆಡ್ಡಿ ಬಿಜೆಪಿಗೆ ಬರಲು ಕಾರಣರಾಗಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪಿಎಂ ಮಾಡಲು ಈ ನಿರ್ಧಾರ ಎಂದು ಹೇಳಿದರು ಶ್ರೀರಾಮುಲು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಈ ಬೆಳವಣಿಗೆ ಆಗಿದ್ದರೆ ಲಾಭ ಆಗುತ್ತಿತ್ತು. ಎಲ್ಲವೂ ರಾಷ್ಟ್ರೀಯ ನಾಯಕರ ಇಚ್ಛೆಯಂತೆ ಆಗುತ್ತಿದೆ ಎಂದು ಶ್ರೀರಾಮುಲು ಹೇಳಿದರು.

Gali Janardana Reddy ಸೇರ್ಪಡೆಯಿಂದ ಬಿಜೆಪಿಗೆ ಏನು ಲಾಭ?

ಗಾಲಿ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿ ಸೇರುವುದರಿಂದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಕಮಲ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ.

ಅದರಲ್ಲೂ ಮುಖ್ಯವಾಗಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರಿಗೆ ಸಾಕಷ್ಟು ಲಾಭವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಮತಗಳು ವಿಭಜನೆ ಆಗೋದು ತಪ್ಪಲಿದೆ.

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಪ್ರಭಾವಿ ನಾಯಕರ ಕೊರತೆಯನ್ನು ರೆಡ್ಡಿ ಸೇರ್ಪಡೆ ನೀಗಲಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ಅನಿವಾರ್ಯವಾದರೆ ರೆಡ್ಡಿ ತಂತ್ರಗಳು ಬಿಜೆಪಿಗೆ ಅನುಕೂಲವಾಗಲಿದೆ. ಯಾಕೆಂದರೆ, ಇಂಥ ತಂತ್ರಗಳನ್ನು ರೂಪಿಸುವಲ್ಲಿ ರೆಡ್ಡಿ ಅವರು ನಿಪುಣರಾಗಿದ್ದಾರೆ.

Continue Reading

ಬೆಂಗಳೂರು

Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

Arun Yogiraj : ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಒಂದು ಅಪರೂಪದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಎಂದೂ ಕಾಣದ ಮುಗ್ಧ ಮುಖದ ರಾಮ ಕಾಣಿಸುತ್ತಾನೆ.

VISTARANEWS.COM


on

Arun Yogiraj at work time
Koo

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ (Sri Rama Mandir) ವಿರಾಜಮಾನನಾಗಿರುವ ಶ್ರೀ ರಾಮ ಲಲ್ಲಾನ (Ram lalla) ಸುಂದರ ಮೂರ್ತಿಯನ್ನು ನಾವೆಲ್ಲರೂ ಕಣ್ತುಂಬಿಕೊಂಡಿದ್ದೇವೆ. ಕಳೆದ ಜನವರಿ 22ರಂದು ದೇವರ ಪ್ರಾಣಪ್ರತಿಷ್ಠೆ (Rama Pranaprathishte) ನಡೆದಿದ್ದು, ಅಂದು ಮೊದಲ ಬಾರಿಗೆ ಅಲಂಕೃತ ಶ್ರೀ ರಾಮನನ್ನು ನೋಡಿದ ಜನರು ಭಗವಂತನೇ ಧರೆಗಿಳಿದಂತೆ ಕಾಣುತ್ತಿದೆ ಎಂದು ಖುಷಿಪಟ್ಟಿದ್ದರು. ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಅವರ ಭಕ್ತಿ ಮತ್ತು ಕೈಚಳಕದಿಂದ ಮೂಡಿ ಸುಂದರ ಶಿಲ್ಪ ಕಲಾಕೃತಿಯನ್ನು ಕಳೆದ 33 ದಿನಗಳಲ್ಲಿ ಒಟ್ಟು ಒಂದು ಕೋಟಿ ಜನ ನೋಡಿ ಭಾವುಕರಾಗಿದ್ದಾರೆ. ಇದರ ನಡುವೆಯೇ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಇದುವರೆಗೂ ಯಾರೂ ನೋಡಿರದ ಅಪರೂಪದ ಚಿತ್ರವೊಂದನ್ನು ‌ ತೆರೆದಿಟ್ಟಿದ್ದಾರೆ.

ಇದು ಕೆಲಸ ಪ್ರಗತಿಯಲ್ಲಿದ್ದ ಕಾಲದ ಚಿತ್ರ. ನಮಗೆ ಮೂರ್ತಿಯ ಆಯ ಅಳತೆಗಳ ಬಗ್ಗೆ ಧೈರ್ಯದ ಭಾವನೆ ಇತ್ತು. ಆದರೆ, ರಾಮ್‌ ಲಲ್ಲಾನನ್ನು ನಮ್ಮ ಸೂಕ್ಷ್ಮ ಸ್ಪರ್ಶದಿಂದ ಮೂಡಿಸಿದಾಗ ಅಂತಿಮ ಫಲಿತಾಂಶ ಅದ್ಭುತವಾಗಿ ಮೂಡಿಬಂತು ಎಂದಿದ್ದಾರೆ ಅರುಣ್‌ ಯೋಗಿರಾಜ್‌.

ಟ್ವಿಟರ್‌ನಲ್ಲಿ ತಾವು‌ ಮೂರ್ತಿ ಕೆತ್ತನೆ ಮಾಡುತ್ತಿರುವ ಚಿತ್ರವನ್ನು ಪ್ರಕಟಿಸಿರುವ ಅವರು, ರಾಮನ ಮುದ್ದಾದ ಮುಖವನ್ನು ಕೈಯಲ್ಲಿ ಹಿಡಿದಿದ್ದಾರೆ.

ಈ ಚಿತ್ರವನ್ನು ಟ್ವಿಟರ್‌ನಲ್ಲಿ ಐದು ಲಕ್ಷದ 40 ಸಾವಿರ ಜನರು ವೀಕ್ಷಿಸಿದ್ದಾರೆ. ಅದ್ಭುತ ಕಲಾಕೃತಿ ಎಂದು ಹಾಡಿ ಹೊಗಳಿಸಿದ್ದಾರೆ. ಇದು ಮೈಸೂರು ಜಿಲ್ಲೆಯಲ್ಲಿ ಸಿಕ್ಕಿದ ಕೃಷ್ಣ ಶಿಲೆಯಲ್ಲಿ ಕೆತ್ತಿದ ಶಿಲ್ಪವಾಗಿದ್ದು, ಭಾರಿ ಜನಾಕರ್ಷಣೆಯನ್ನು ಪಡೆದಿದೆ.

ಇದನ್ನೂ ಓದಿ : Pandit Pacha Saab | ಶ್ರೀರಾಮ ಕೋಟಿ ಬರೆದಿದ್ದ ಮುಸ್ಲಿಂ ಪಂಡಿತ ವಿಧಿವಶ

ರಾಮ ಲಲ್ಲಾ, ರಾಮ ಜನ್ಮಭೂಮಿ ಚಿತ್ರವಿರುವ ನಾಣ್ಯ ಬಿಡುಗಡೆ

ಈ ನಡುವೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಮ ಲಲ್ಲಾ ಮತ್ತು ರಾಮ ಮಂದಿರದ ಚಿತ್ರವಿರುವ ನಾಣ್ಯವನ್ನು ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

BJP’s national convention: ಮುಂದಿನ 1,000 ವರ್ಷ ರಾಮರಾಜ್ಯ ಸ್ಥಾಪನೆಗೆ ರಾಮ ಮಂದಿರ ನಾಂದಿ; ಬಿಜೆಪಿ ನಿರ್ಣಯದಲ್ಲಿ ಪ್ರಶಂಸೆ

BJP’s national convention : ನರೇಂದ್ರ ಮೋದಿ ನಾಯಕತ್ವದಿಂದ ಭಾರತದಲ್ಲಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆ ಉಳಿದಿದೆ ಎಂಬುದಾಗಿ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

BJP national Convention
Koo

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಭಾನುವಾರ ನಡೆದ ಬಿಜೆಪಿಯ ರಾಷ್ಟ್ರೀಯ ಸಮಾವೇಶ ಮಹತ್ವದ ನಿರ್ಣಯವನ್ನು (BJP’s national convention) ಅಂಗೀಕರಿಸಲಾಗಿದ್ದು , ಮಂದಿರವು ಮುಂದಿನ 1,000 ವರ್ಷಗಳವರೆಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಗೆ ನಾಂದಿ ಹಾಡಲಿದೆ ಎಂದು ಪ್ರತಿಪಾದಿಸಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆ ನಡೆದ ದೇವಾಲಯವು ರಾಷ್ಟ್ರೀಯ ಪ್ರಜ್ಞೆಯ ಪ್ರತೀಕವಾಗಿದೆ. “ವಿಕಸಿತ್​​ ಭಾರತ್” ನ ಅಗತ್ಯಗಳನ್ನು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಭವ್ಯ ಮತ್ತು ದೈವಿಕ ದೇವಾಲಯ ನಿರ್ಮಿಸುವುದು ಐತಿಹಾಸಿಕ ಮತ್ತು ಅದ್ಭುತ ಸಾಧನೆಯಾಗಿದೆ. ಇದು ಮುಂದಿನ 1,000 ವರ್ಷಗಳ ಕಾಲ ಭಾರತದಲ್ಲಿ ‘ರಾಮರಾಜ್ಯ’ ಸ್ಥಾಪನೆಗೆ ಪೂರಕವಾಗಲಿದೆ. ಹೊಸ ಶಕೆಯ ಆರಂಭವಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಇದೇ ವೇಳೆ ರಾಮನ ಪ್ರತಿಷ್ಠಾಪನೆಯನ್ನು ಯಶಸ್ವಿ ನಡೆಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ನಿರ್ಣಯದಲ್ಲಿ ಅಭಿನಂದಿಸಲಾಗಿದೆ.

ರಾಮ ಮಂದಿರವು ಭಾರತದ ದೃಷ್ಟಿಕೋನ, ತತ್ವಶಾಸ್ತ್ರ ಮತ್ತು ಸನ್ಮಾರ್ಗದ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. “ಶ್ರೀ ರಾಮ್ ದೇವಾಲಯವು ನಿಜವಾಗಿಯೂ ರಾಷ್ಟ್ರೀಯ ಪ್ರಜ್ಞೆಯ ದೇವಾಲಯವಾಗಿದೆ” ಎಂದು ಅದು ಹೇಳಿದೆ. ಭಗವಾನ್ ಶ್ರೀ ರಾಮನ ದೈವಿಕ ಪ್ರತಿಷ್ಠಾಪನೆಯನ್ನು ನೋಡಿ ಪ್ರತಿಯೊಬ್ಬ ಭಾರತೀಯ ಸಂತೋಷ ಪಟ್ಟಿದ್ದಾನೆ ಎಂದು ಉಲ್ಲೇಖದಲ್ಲಿ ತಿಳಿಸಲಾಗಿದೆ. ಭಾರತೀಯ ನಾಗರಿಕತೆ ಮತ್ತು ಸಂಸ್ಕೃತಿಯ ಪ್ರತಿಯೊಂದು ಅಂಶದಲ್ಲೂ ಭಗವಾನ್ ರಾಮ, ಸೀತೆ ಮತ್ತು ರಾಮಾಯಣವಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮೂಲಭೂತ ಹಕ್ಕುಗಳಿಗೆ ಸ್ಫೂರ್ತಿ

ಭಾರತದ ಸಂವಿಧಾನದ ಮೂಲ ಪ್ರತಿಯಲ್ಲಿ, ಮೂಲಭೂತ ಹಕ್ಕುಗಳ ವಿಭಾಗದಲ್ಲಿ, ವಿಜಯದ ನಂತರ ಅಯೋಧ್ಯೆಗೆ ಮರಳಿದ ನಂತರ ಭಗವಾನ್ ಶ್ರೀ ರಾಮ, ತಾಯಿ ಸೀತಾ ಮತ್ತು ಲಕ್ಷ್ಮಣ ಜಿ ಅವರ ಚಿತ್ರವಿದೆ. ಭಗವಾನ್ ಶ್ರೀ ರಾಮ ಮೂಲಭೂತ ಹಕ್ಕುಗಳಿಗೆ ಸ್ಫೂರ್ತಿ ಎಂಬುದಕ್ಕೆ ಅದುವೇ ಪುರಾವೆ ಎಂದು ಅದು ಹೇಳಿದೆ. ಅದೇ ರೀತಿ ರಾಮರಾಜ್ಯದ ಕಲ್ಪನೆಯು ಮಹಾತ್ಮ ಗಾಂಧಿಯವರ ಹೃದಯದಲ್ಲಿಯೂ ಇತ್ತು’ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ರಾಮರಾಜ್ಯದ ಕಲ್ಪನೆಯೇ ನಿಜವಾದ ಪ್ರಜಾಪ್ರಭುತ್ವದ ಕಲ್ಪನೆ ಎಂದು ಗಾಂಧೀಜಿ ಹೇಳುತ್ತಿದ್ದರು. ಭಗವಾನ್ ಶ್ರೀ ರಾಮನ ಆದರ್ಶಗಳನ್ನು ಅನುಸರಿಸಿ, ಪ್ರಧಾನಿ ದೇಶದಲ್ಲಿ ಉತ್ತಮ ಆಡಳಿತವನ್ನು ಸ್ಥಾಪಿಸುವ ಮೂಲಕ ನಿಜವಾದ ಅರ್ಥದಲ್ಲಿ ರಾಮರಾಜ್ಯ’ದ ಸ್ಫೂರ್ತಿಯನ್ನು ಜಾರಿಗೆ ತಂದಿದ್ದಾರೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ ಗೆಲುವಿಗಾಗಿ ಕಾರ್ಯಕರ್ತರಿಗೆ 100 ದಿನಗಳ ಟಾಸ್ಕ್‌ ಕೊಟ್ಟ ಮೋದಿ!

ಭಗವಾನ್ ರಾಮನು ತನ್ನ ಮಾತುಗಳಲ್ಲಿ ಮತ್ತು ಆಲೋಚನೆಗಳಲ್ಲಿ ತುಂಬಿದ ಮೌಲ್ಯಗಳನ್ನು ಅನುಸರಿಸಲಾಗುತ್ತಿದೆ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮತ್ತು ‘ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್​ ಅದಕ್ಕೆ ಸ್ಫೂರ್ತಿ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮೋದಿಯವರ ನಾಯಕತ್ವದಲ್ಲಿ, ಭಾರತದ ಏಕತೆ ಮತ್ತು ಒಗ್ಗಟ್ಟು ಸಾರ್ವಜನಿಕರ ಭಾಗವಹಿಸುವಿಕೆಯು ಹೆಚ್ಚಿದೆ. ಅವರು ತಮ್ಮ ನೀತಿಗಳು ರಾಷ್ಟ್ರದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ.. ಕಳೆದ 10 ವರ್ಷಗಳಲ್ಲಿ ಭಾರತೀಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಐತಿಹಾಸಿಕ ಹೆಮ್ಮೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಅದು ಹೇಳಿದೆ.

Continue Reading

ಅವಿಭಾಗೀಕೃತ

Karnataka Live News: ಚಾಮುಂಡೇಶ್ವರಿ ಆಶೀರ್ವಾದ ಪಡೆದ ಅಮಿತ್‌ ಶಾ; ಲೋಕಸಭೆಗೆ ರಣಕಹಳೆ ಊದಿದ ಚಾಣಕ್ಯ!

Karnataka Live News : ರಾಜಕೀಯ ವಿದ್ಯಮಾನ, ಸರ್ಕಾರದ ಪ್ರಮುಖ ನಿರ್ಧಾರ, ಅಪಘಾತ, ಅಪರಾಧ, ಹವಾಮಾನ, ಶೈಕ್ಷಣಿಕ, ಸಾಮಾಜಿಕ ಇತ್ಯಾದಿ ನಾಡಿನ ಪ್ರಮುಖ ಸಂಗತಿಗಳ ತ್ವರಿತ ಅಪ್‌ಡೇಟ್ಸ್ ಇಲ್ಲಿವೆ.

VISTARANEWS.COM


on

By

karnataka live news karnataka today news live vistara news feb 11th
Koo
Continue Reading
Advertisement
Prajwal Revanna Case
ಕರ್ನಾಟಕ6 mins ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Hardik Pandya
ಕ್ರಿಕೆಟ್8 mins ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ11 mins ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ21 mins ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Mobile Side Effect
ಆರೋಗ್ಯ23 mins ago

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

Suchitra Krishnamoorthi Reveals Her Face Swelled Like A Balloon
ಬಾಲಿವುಡ್31 mins ago

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Wedding Season Hair Fashion
ಫ್ಯಾಷನ್31 mins ago

Wedding Season Hair Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಎಂಟ್ರಿ ನೀಡಿದ ಆರ್ಟಿಫಿಶಿಯಲ್‌ ಹೇರ್‌ ಎಕ್ಸ್‌ಟೆನ್ಷನ್ಸ್‌!

Virat Kohli
ಕ್ರೀಡೆ44 mins ago

Virat Kohli: ಗುಜರಾತ್​ ವಿರುದ್ಧ 6 ರನ್ ಬಾರಿಸಿದರೆ ವಿಶೇಷ ದಾಖಲೆ ಬರೆಯಲಿದ್ದಾರೆ ಕಿಂಗ್​ ಕೊಹ್ಲಿ

Rohit Sharma
ಕ್ರೀಡೆ45 mins ago

Rohit Sharma : ರೋಹಿತ್​​ ಶರ್ಮಾಗೆ ಗಾಯ; ವಿಶ್ವ ಕಪ್​ ಮೊದಲೇ ಭಾರತ ತಂಡಕ್ಕೆ ಸಮಸ್ಯೆ?

Prajwal Revanna Case
ಕರ್ನಾಟಕ49 mins ago

Prajwal Revanna Case: ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್, ಕೆಲವೇ ಕ್ಷಣಗಳಲ್ಲಿ ಆದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌