ವಿಸ್ತಾರ ಸಂಪಾದಕೀಯ: ಬೃಹತ್ ಕಾಮಗಾರಿ ವೇಳೆ ಕಾರ್ಮಿಕರ ಸುರಕ್ಷತೆ ಖಾತರಿಪಡಿಸಿ - Vistara News

ಅವಿಭಾಗೀಕೃತ

ವಿಸ್ತಾರ ಸಂಪಾದಕೀಯ: ಬೃಹತ್ ಕಾಮಗಾರಿ ವೇಳೆ ಕಾರ್ಮಿಕರ ಸುರಕ್ಷತೆ ಖಾತರಿಪಡಿಸಿ

Vistara Editorial: ದೇಶದಾದ್ಯಂತ ಸುಮಾರು 79 ಕಿ.ಮೀ ಉದ್ದದ ಒಟ್ಟು 29 ಸುರಂಗಗಳು ನಿರ್ಮಾಣ ಹಂತದಲ್ಲಿವೆ. ಹಿಮಾಚಲ ಪ್ರದೇಶದಲ್ಲಿ 12, ಜಮ್ಮು ಮತ್ತು ಕಾಶ್ಮೀರದಲ್ಲಿ ಆರು, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲಿ ತಲಾ ಎರಡು, ಮಧ್ಯಪ್ರದೇಶ, ಕರ್ನಾಟಕ, ಛತ್ತೀಸ್‌ಗಢ, ಉತ್ತರಾಖಂಡ ಮತ್ತು ದೆಹಲಿಯಲ್ಲಿ ತಲಾ ಒಂದೊಂದು ಸುರಂಗಗಳಿವೆ. ಇಲ್ಲೆಲ್ಲ ಸುರಕ್ಷತಾ ಕ್ರಮಗಳ ಪರಿಶೀಲನೆ ಅಗತ್ಯ.

VISTARANEWS.COM


on

Vistara Editorial, Ensure safety of workers during massive projects
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ದೇಶದಾದ್ಯಂತ ನಿರ್ಮಾಣ ಹಂತದಲ್ಲಿರುವ ಎಲ್ಲಾ 29 ಸುರಂಗಗಳ ಸುರಕ್ಷತೆ ಮತ್ತು ಅತ್ಯುನ್ನತ ಗುಣಮಟ್ಟದ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸುರಕ್ಷತಾ ಆಡಿಟ್ ಅನ್ನು ಕೈಗೊಳ್ಳಲಿದೆ ಎಂದು ಅದರ ಅಧಿಕೃತ ಹೇಳಿಕೆ ಬುಧವಾರ ತಿಳಿಸಿದೆ. ಎನ್‌ಎಚ್‌ಎಐ ಅಧಿಕಾರಿಗಳು, ದೆಹಲಿ ಮೆಟ್ರೋ ರೈಲು ನಿಗಮದ (ಡಿಎಂಆರ್‌ಸಿ) ತಜ್ಞರ ತಂಡ ಮತ್ತು ಇತರ ಸುರಂಗ ತಜ್ಞರು ಈಗ ನಡೆಯುತ್ತಿರುವ ಸುರಂಗ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ ಮತ್ತು ಏಳು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದಾರಂತೆ. ನವೆಂಬರ್ 12ರಂದು ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ ಸುರಂಗದ ಕುಸಿತ ಹಾಗೂ ಅದರ ಒಳಗೆ 41 ಕಾರ್ಮಿಕರು ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಈ ಕ್ರಮ ಕೈಗೊಳ್ಳುತ್ತಿದೆ(Vistara editorial).

ದೇಶದಾದ್ಯಂತ ಸುಮಾರು 79 ಕಿ.ಮೀ ಉದ್ದದ ಒಟ್ಟು 29 ಸುರಂಗಗಳು ನಿರ್ಮಾಣ ಹಂತದಲ್ಲಿವೆ. ಹಿಮಾಚಲ ಪ್ರದೇಶದಲ್ಲಿ 12, ಜಮ್ಮು ಮತ್ತು ಕಾಶ್ಮೀರದಲ್ಲಿ ಆರು, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲಿ ತಲಾ ಎರಡು, ಮಧ್ಯಪ್ರದೇಶ, ಕರ್ನಾಟಕ, ಛತ್ತೀಸ್‌ಗಢ, ಉತ್ತರಾಖಂಡ ಮತ್ತು ದೆಹಲಿಯಲ್ಲಿ ತಲಾ ಒಂದೊಂದು ಸುರಂಗಗಳಿವೆ. NHAI ಸಹ ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ (KRCL)ನೊಂದಿಗೆ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿದೆ. ಒಪ್ಪಂದದ ಭಾಗವಾಗಿ, ಸುರಂಗ ನಿರ್ಮಾಣ ಮತ್ತು NHAI ಯೋಜನೆಗಳ ಇಳಿಜಾರು ಸ್ಥಿರೀಕರಣಕ್ಕೆ ಸಂಬಂಧಿಸಿದ ವಿನ್ಯಾಸ, ರೇಖಾಚಿತ್ರ ಮತ್ತು ಸುರಕ್ಷತೆ ಅಂಶಗಳನ್ನು KRCL ಪರಿಶೀಲಿಸುತ್ತದೆ.

ಯಾವುದೇ ಸರ್ಕಾರಿ ಕಾಮಗಾರಿ, ನಿರ್ಮಾಣ ಕಾರ್ಯಕ್ಕೆ ʼಭಾರತೀಯ ಮಾನಕʼ (Indian standard) ಅನ್ನು ಅನ್ವಯಿಸಲಾಗುತ್ತದೆ. ಇದೊಂದು ಬೃಹತ್‌ ದಾಖಲೆ ಮತ್ತು ಎಲ್ಲ ಕಾಮಗಾರಿಗೂ ಸಂಬಂಧಿಸಿದ ಸುರಕ್ಷತಾ ಸೂತ್ರಗಳು ಇದರಲ್ಲಿವೆ. ಮಣ್ಣಿನ ಪರೀಕ್ಷೆ ಮಾಡುವುದು, ಅದು ಗಟ್ಟಿ ನೆಲವೋ ಮೆದು ನೆಲವೋ ಎಂದು ಪರೀಕ್ಷಿಸುವುದರಿಂದ ಆರಂಭಿಸಿ, ಆ ಮಣ್ಣಿನಲ್ಲಿ ಯಾವ ಖನಿಜಾಂಶಗಳಿವೆ, ಅದು ಬೇಗನೆ ಕುಸಿಯಬಹುದೇ, ಸುರಂಗ ಕಾಮಗಾರಿಯ ಸಂದರ್ಭ ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ತುರ್ತು ಸಂದರ್ಭ ಒದಗಿದಾಗ ಒಳಗಿರುವ ಕಾರ್ಮಿಕರ ರಕ್ಷಣೆಗೆ ಯಾವ ಸೂತ್ರ ಅನುಸರಿಸಬೇಕು, ಒಳಗಿರುವವರಿಗೆ ವೆಂಟಿಲೇಶನ್‌ ಹಾಗೂ ಬೆಳಕಿನ ವ್ಯವಸ್ಥೆ ಹೇಗಿರಬೇಕು- ಎಂಬಿತ್ಯಾದಿ ಎಲ್ಲ ಅಂಶಗಳನ್ನೂ ಈ ಐಎಸ್‌ ಸಮಗ್ರವಾಗಿ ನಿರ್ದೇಶನ ರೂಪದಲ್ಲಿ ನೀಡಿದೆ. ಸುರಂಗ ನಿರ್ಮಾಣ ಕಾರ್ಯದಲ್ಲಿ ಸಾಕಷ್ಟು ಪರಿಣತಿ ಹಾಗೂ ದಕ್ಷತೆ ಹೊಂದಿರುವ ಕಂಪನಿಗಳಿಗೆ, ತಜ್ಞರಿಗೆ ಅದನ್ನು ಒಪ್ಪಿಸಲಾಗುತ್ತದೆ. ತುಂಬಾ ಆಳಕ್ಕೆ ಕೊರೆಯುವ ಗಣಿಗಳಲ್ಲಿ ಭೂಕುಸಿತ ಉಂಟಾಗಿ ಕಾರ್ಮಿಕರು ಸಾಯುವ ಘಟನೆಗಳು ಭಾರತದಲ್ಲಿ ಸಾಕಷ್ಟು ನಡೆದಿವೆ. ಆದರೆ ಸುರಂಗ ಕೊರೆತದ ವೇಳೆ ಇಂಥ ಘಟನೆಗಳು ಆಗಿರುವುದು ತುಂಬಾ ಕಡಿಮೆ. ದಿಲ್ಲಿ ಮೆಟ್ರೋ, ಬೆಂಗಳೂರು ಮೆಟ್ರೋ ಮುಂತಾದವುಗಳ ರಚನೆಯ ಮೇಲೆ ಈ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿದ ಪರಿಣಾಮ ಯಾವುದೇ ಅವಘಡ ಸಂಭವಿಸಿಲ್ಲ.

ಆದರೆ ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ನಡೆದಿರುವ ಘಟನೆಯ ಮೂಲ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಡಿಲವಾದ, ಮೆದುವಾದ ಮಣ್ಣಿನ ರಚನೆಯನ್ನು ಸರಿಯಾಗಿ ಗಮನಿಸದೆ ಕಾಮಗಾರಿ ನಡೆಸಿದ ಕಾರಣ ಹೀಗಾಗಿದೆಯೇ ಅಥವಾ ದಿಡೀರ್‌ ಎಂದು ಬಂದ ಮಳೆಯ ಕಾರಣ ಹೀಗಾಗಿದೆಯೇ ಎಂಬುದು ತಿಳಿದುಬಂದಿಲ್ಲ. ಅದೇನೇ ಇದ್ದರೂ, ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿದ್ದುದಕ್ಕಾಗಿ ಸುರಂಗ ಕಾಮಗಾರಿ ನಡೆಸುತ್ತಿರುವ ಕಂಪನಿಯ ಕ್ರಮ ಕೈಗೊಳ್ಳಬೇಕಾಗಿದೆ. ಹೈದರಾಬಾದ್‌ ಮೂಲದ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಸುರಂಗದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದೆ. ಜತೆಗೆ ಸುರಕ್ಷತಾ ಕ್ರಮಗಳಲ್ಲಿ ರಾಜಿ ಮಾಡಿಕೊಳ್ಳಲು ಬಜೆಟ್‌ನಲ್ಲಿ ಕಡಿತವಾಗುವಂತೆ ಅಧಿಕಾರಿಗಳಿಗೆ ಲಂಚ ನೀಡಿದ್ದರೆ ಅವರಿಗೂ ಶಿಕ್ಷೆಯಾಗಬೇಕು. ಮೊದಲು ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು ಹೊರಗೆ ಬರಲಿ; ನಂತರ ಸಮಗ್ರ ತನಿಖೆ ನಡೆಯಲಿ. ಇದೇ ವೇಳೆಗೆ ದೇಶದಲ್ಲಿ ನಡೆಯುತ್ತಿರುವ ಇತರ ಸುರಂಗ ಕಾಮಗಾರಿಗಳ ಸುರಕ್ಷತಾ ಪರೀಕ್ಷೆಯೂ ಅಗತ್ಯವಾಗಿ ನಡೆಯಬೇಕಿದೆ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Gali Janardana Reddy : ಗಣಿ ಧಣಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಮಡಿಲಿಗೆ, ಕಲ್ಯಾಣದಲ್ಲಿ ಲಾಭ ನಿರೀಕ್ಷೆ

Gali Janardhana Reddy : ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಲಾಭವಾಗುವ ನಿರೀಕ್ಷೆ ಇದೆ.

VISTARANEWS.COM


on

Gali Janarhana Reddy
Koo

ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ (Assembly Election 2023) ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya pragati Party) ಸ್ಥಾಪನೆ ಮಾ‌ಡಿ ಸಡ್ಡು ಹೊಡೆದಿದ್ದ ಗಾಲಿ ಜನಾರ್ದನ ರೆಡ್ಡಿ (Gali Janardana Reddy) ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ (Janardhana Reddy rejoins Congress). ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಅವರು ಲೋಕಸಭಾ ಚುನಾವಣೆಗೆ (Lok Sabha Election 2024) ಮುನ್ನ ಬಿಜೆಪಿಗೆ ಬಲ ತುಂಬಿದ್ದಾರೆ. ಅವರ ಮರು ಸೇರ್ಪಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಾಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್‌, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಅವರು ಭಾಗಿಯಾಗಿದ್ದಾರೆ. ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು. ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ. ಅವರು ನಾಯಕರು ಮತ್ತು ಹಿಂಬಾಲಕರನ್ನು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಪಕ್ಷಕ್ಕೆ ಸ್ವಾಗತ ಮಾಡಿದರು.

ಮೋದಿ ಅವರ ನಾಯಕತ್ವ ಮೆಚ್ಚಿ ಬಂದಿದ್ದಾರೆ ಎಂದ ವಿಜಯೇಂದ್ರ

ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಪಕ್ಷಕ್ಕೆ ಬಂದಿರುವುದು ಬಹಳ ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಗಾಲಿ ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು, ತಾವೇ ಕಟ್ಟಿದ ಪಕ್ಷವನ್ನು ವಿಸರ್ಜನೆ ಮಾಡಿ ಬಿಜೆಪಿಯೊಂದಿಗೆ ವಿಲೀನ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಶಕ್ತಿ ಬಂದಂತಾಗಿದೆ. ಮೋದಿ ಅವರ ನಾಯಕತ್ವ ಮೆಚ್ಚಿ ಮರು ಸೇರ್ಪಡೆ ಆಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

Gali Janarhana Reddy1
ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಂದಿಗೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ʻʻಲೋಕಸಭೆಯಲ್ಲಿ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ದಿನೇದಿನೆ ಮೋದಿ ಅವರ ಪರ ವಾತಾವರಣ ಹೆಚ್ಚುತ್ತಿದೆ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ರೂಪಿಸಲಿದೆ‌ʼʼ ಎಂದು ಹೇಳಿದ್ದಾರೆ.

ಬೆಳಗ್ಗೆ ಹೋಗಿ ಮಧ್ಯಾಹ್ನ ಮರಳಿ ಬಂದ ಹಾಗೆ ಅನಿಸ್ತಿದೆ ಎಂದ Gali Janardana Reddy

ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಿದ್ದೇನೆ. ನನ್ನ ಕಷ್ಟದ ಕಾಲದಲ್ಲಿ ನನ್ನ ಬೆನ್ನಿಗೆ ನಿಂತ ಎಲ್ಲಾ ಕಾರ್ಯಕರ್ತರಿಗೂ ವಂದನೆ ಸಲ್ಲಿಸ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಗೆ ಸೇರ್ಪಡೆ ಆಗಿದ್ದೇವೆ ಎಂದು ಹೇಳಿದರು.

ʻʻದೇಶದ ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಿನಂತೆ ಕೆಲಸ‌ ಮಾಡಿರುವ ಮೋದಿ ಅವರಿಗೆ ವಂದನೆಗಳು. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ, ಬಾಹ್ಯ ಬೆಂಬಲ ಬೇಡ. ಬಿಜೆಪಿಗೆ ಬಂದು ಕೆಲಸ ಮಾಡಿ ಅಂತ ಆಹ್ವಾನ ನೀಡಿದರು. ಅವರ ಆಹ್ವಾನ ಸ್ವೀಕರಿಸಿ ಬಂದಿದ್ದೇನೆ. ಇದು ನನ್ನ ಪೂರ್ವ ಜನ್ಮದ ಪುಣ್ಯʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಬಿ.ಎಸ್‌. ಯಡಿಯೂರಪ್ಪ ಅವರು ನನಗೆ ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರು. ಯಡಿಯೂರಪ್ಪ ಅವರು ಸಿಎಂ‌ ಆಗಿದ್ದಾಗ ಅವರ ಕ್ಯಾಬಿನೆಟ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈಗ ಅವರ ಸುಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರೋದು ನನ್ನ ಪುಣ್ಯ. ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ, ಕೆಲಸ ಮಾಡುತ್ತೇವೆ ಎಂದು ಹೇಳಿದರು.

ʻʻಎಲ್ಲಾ ಏಳುಬೀಳುಗಳನ್ನು ನೋಡಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿರೋ ಖುಷಿ ಇದೆ. ಕೆಲವು ಕಾರಣದಿಂದ ಹೊರಗೆ ಹೋಗಿದ್ದೆ. 13 ವರ್ಷಗಳ ಬಳಿಕ ವಾಪಸ್ ಬಂದಿದ್ದೇನೆ ಅನಿಸುತ್ತಿಲ್ಲ. ಬೆಳಗ್ಗೆ ಹೋಗಿ, ಮಧ್ಯಾಹ್ನ ಬಂದಿದ್ದೇನೆ ಅನಿಸುತ್ತಿದೆʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ : Rekha Patra: ಸಂದೇಶ್‌ಖಾಲಿ ಸಂತ್ರಸ್ತೆಗೆ ಟಿಕೆಟ್‌ ನೀಡಿದ ಬಿಜೆಪಿ; ಯಾರಿವರು ರೇಖಾ ಪಾತ್ರಾ?

Gali Janardana Reddy ಅಜ್ಞಾತವಾಸ ಮುಗಿಸಿ ಮರಳಿದ ಶ್ರೀರಾಮ ಎಂದ ಶ್ರೀರಾಮುಲು

ಜನಾರ್ದನ ರೆಡ್ಡಿ ಅವರ ಪಕ್ಷ ಮರು ಸೇರ್ಪಡೆಯಿಂದ ಅವರ ಗೆಳೆಯ ಹಾಗೂ ಬಳ್ಳಾರಿ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು, ಜನಾರ್ದನ ರೆಡ್ಡಿ ಅವರು ರಾಜಕೀಯ ಅಜ್ಞಾತವಾಸ ಮುಗಿಸಿ ಬಿಜೆಪಿಗೆ ವಾಪಸು ಬರ್ತಿದ್ದಾರೆ. ಅವರು ಬಿಜೆಪಿಗೆ ಬರುವುದರಿಂದ ರಾಜಕೀಯವಾಗಿ ನಮಗೆ ಲಾಭ ಆಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ನಮಗೆ ಲಾಭ ಆಗಲಿದೆ. ನಮಗೆ ಈ ಬೆಳವಣಿಗೆ ಹೆಚ್ಚು ಶಕ್ತಿ ತಂದಿದೆ. ರಾಷ್ಟ್ರೀಯ ನಾಯಕರು ರೆಡ್ಡಿ ಬಿಜೆಪಿಗೆ ಬರಲು ಕಾರಣರಾಗಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪಿಎಂ ಮಾಡಲು ಈ ನಿರ್ಧಾರ ಎಂದು ಹೇಳಿದರು ಶ್ರೀರಾಮುಲು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಈ ಬೆಳವಣಿಗೆ ಆಗಿದ್ದರೆ ಲಾಭ ಆಗುತ್ತಿತ್ತು. ಎಲ್ಲವೂ ರಾಷ್ಟ್ರೀಯ ನಾಯಕರ ಇಚ್ಛೆಯಂತೆ ಆಗುತ್ತಿದೆ ಎಂದು ಶ್ರೀರಾಮುಲು ಹೇಳಿದರು.

Gali Janardana Reddy ಸೇರ್ಪಡೆಯಿಂದ ಬಿಜೆಪಿಗೆ ಏನು ಲಾಭ?

ಗಾಲಿ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿ ಸೇರುವುದರಿಂದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಕಮಲ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ.

ಅದರಲ್ಲೂ ಮುಖ್ಯವಾಗಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರಿಗೆ ಸಾಕಷ್ಟು ಲಾಭವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಮತಗಳು ವಿಭಜನೆ ಆಗೋದು ತಪ್ಪಲಿದೆ.

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಪ್ರಭಾವಿ ನಾಯಕರ ಕೊರತೆಯನ್ನು ರೆಡ್ಡಿ ಸೇರ್ಪಡೆ ನೀಗಲಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ಅನಿವಾರ್ಯವಾದರೆ ರೆಡ್ಡಿ ತಂತ್ರಗಳು ಬಿಜೆಪಿಗೆ ಅನುಕೂಲವಾಗಲಿದೆ. ಯಾಕೆಂದರೆ, ಇಂಥ ತಂತ್ರಗಳನ್ನು ರೂಪಿಸುವಲ್ಲಿ ರೆಡ್ಡಿ ಅವರು ನಿಪುಣರಾಗಿದ್ದಾರೆ.

Continue Reading

ಬೆಂಗಳೂರು

Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

Arun Yogiraj : ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಒಂದು ಅಪರೂಪದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಎಂದೂ ಕಾಣದ ಮುಗ್ಧ ಮುಖದ ರಾಮ ಕಾಣಿಸುತ್ತಾನೆ.

VISTARANEWS.COM


on

Arun Yogiraj at work time
Koo

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ (Sri Rama Mandir) ವಿರಾಜಮಾನನಾಗಿರುವ ಶ್ರೀ ರಾಮ ಲಲ್ಲಾನ (Ram lalla) ಸುಂದರ ಮೂರ್ತಿಯನ್ನು ನಾವೆಲ್ಲರೂ ಕಣ್ತುಂಬಿಕೊಂಡಿದ್ದೇವೆ. ಕಳೆದ ಜನವರಿ 22ರಂದು ದೇವರ ಪ್ರಾಣಪ್ರತಿಷ್ಠೆ (Rama Pranaprathishte) ನಡೆದಿದ್ದು, ಅಂದು ಮೊದಲ ಬಾರಿಗೆ ಅಲಂಕೃತ ಶ್ರೀ ರಾಮನನ್ನು ನೋಡಿದ ಜನರು ಭಗವಂತನೇ ಧರೆಗಿಳಿದಂತೆ ಕಾಣುತ್ತಿದೆ ಎಂದು ಖುಷಿಪಟ್ಟಿದ್ದರು. ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಅವರ ಭಕ್ತಿ ಮತ್ತು ಕೈಚಳಕದಿಂದ ಮೂಡಿ ಸುಂದರ ಶಿಲ್ಪ ಕಲಾಕೃತಿಯನ್ನು ಕಳೆದ 33 ದಿನಗಳಲ್ಲಿ ಒಟ್ಟು ಒಂದು ಕೋಟಿ ಜನ ನೋಡಿ ಭಾವುಕರಾಗಿದ್ದಾರೆ. ಇದರ ನಡುವೆಯೇ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಇದುವರೆಗೂ ಯಾರೂ ನೋಡಿರದ ಅಪರೂಪದ ಚಿತ್ರವೊಂದನ್ನು ‌ ತೆರೆದಿಟ್ಟಿದ್ದಾರೆ.

ಇದು ಕೆಲಸ ಪ್ರಗತಿಯಲ್ಲಿದ್ದ ಕಾಲದ ಚಿತ್ರ. ನಮಗೆ ಮೂರ್ತಿಯ ಆಯ ಅಳತೆಗಳ ಬಗ್ಗೆ ಧೈರ್ಯದ ಭಾವನೆ ಇತ್ತು. ಆದರೆ, ರಾಮ್‌ ಲಲ್ಲಾನನ್ನು ನಮ್ಮ ಸೂಕ್ಷ್ಮ ಸ್ಪರ್ಶದಿಂದ ಮೂಡಿಸಿದಾಗ ಅಂತಿಮ ಫಲಿತಾಂಶ ಅದ್ಭುತವಾಗಿ ಮೂಡಿಬಂತು ಎಂದಿದ್ದಾರೆ ಅರುಣ್‌ ಯೋಗಿರಾಜ್‌.

ಟ್ವಿಟರ್‌ನಲ್ಲಿ ತಾವು‌ ಮೂರ್ತಿ ಕೆತ್ತನೆ ಮಾಡುತ್ತಿರುವ ಚಿತ್ರವನ್ನು ಪ್ರಕಟಿಸಿರುವ ಅವರು, ರಾಮನ ಮುದ್ದಾದ ಮುಖವನ್ನು ಕೈಯಲ್ಲಿ ಹಿಡಿದಿದ್ದಾರೆ.

ಈ ಚಿತ್ರವನ್ನು ಟ್ವಿಟರ್‌ನಲ್ಲಿ ಐದು ಲಕ್ಷದ 40 ಸಾವಿರ ಜನರು ವೀಕ್ಷಿಸಿದ್ದಾರೆ. ಅದ್ಭುತ ಕಲಾಕೃತಿ ಎಂದು ಹಾಡಿ ಹೊಗಳಿಸಿದ್ದಾರೆ. ಇದು ಮೈಸೂರು ಜಿಲ್ಲೆಯಲ್ಲಿ ಸಿಕ್ಕಿದ ಕೃಷ್ಣ ಶಿಲೆಯಲ್ಲಿ ಕೆತ್ತಿದ ಶಿಲ್ಪವಾಗಿದ್ದು, ಭಾರಿ ಜನಾಕರ್ಷಣೆಯನ್ನು ಪಡೆದಿದೆ.

ಇದನ್ನೂ ಓದಿ : Pandit Pacha Saab | ಶ್ರೀರಾಮ ಕೋಟಿ ಬರೆದಿದ್ದ ಮುಸ್ಲಿಂ ಪಂಡಿತ ವಿಧಿವಶ

ರಾಮ ಲಲ್ಲಾ, ರಾಮ ಜನ್ಮಭೂಮಿ ಚಿತ್ರವಿರುವ ನಾಣ್ಯ ಬಿಡುಗಡೆ

ಈ ನಡುವೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಮ ಲಲ್ಲಾ ಮತ್ತು ರಾಮ ಮಂದಿರದ ಚಿತ್ರವಿರುವ ನಾಣ್ಯವನ್ನು ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

BJP’s national convention: ಮುಂದಿನ 1,000 ವರ್ಷ ರಾಮರಾಜ್ಯ ಸ್ಥಾಪನೆಗೆ ರಾಮ ಮಂದಿರ ನಾಂದಿ; ಬಿಜೆಪಿ ನಿರ್ಣಯದಲ್ಲಿ ಪ್ರಶಂಸೆ

BJP’s national convention : ನರೇಂದ್ರ ಮೋದಿ ನಾಯಕತ್ವದಿಂದ ಭಾರತದಲ್ಲಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆ ಉಳಿದಿದೆ ಎಂಬುದಾಗಿ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

BJP national Convention
Koo

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಭಾನುವಾರ ನಡೆದ ಬಿಜೆಪಿಯ ರಾಷ್ಟ್ರೀಯ ಸಮಾವೇಶ ಮಹತ್ವದ ನಿರ್ಣಯವನ್ನು (BJP’s national convention) ಅಂಗೀಕರಿಸಲಾಗಿದ್ದು , ಮಂದಿರವು ಮುಂದಿನ 1,000 ವರ್ಷಗಳವರೆಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಗೆ ನಾಂದಿ ಹಾಡಲಿದೆ ಎಂದು ಪ್ರತಿಪಾದಿಸಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆ ನಡೆದ ದೇವಾಲಯವು ರಾಷ್ಟ್ರೀಯ ಪ್ರಜ್ಞೆಯ ಪ್ರತೀಕವಾಗಿದೆ. “ವಿಕಸಿತ್​​ ಭಾರತ್” ನ ಅಗತ್ಯಗಳನ್ನು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಭವ್ಯ ಮತ್ತು ದೈವಿಕ ದೇವಾಲಯ ನಿರ್ಮಿಸುವುದು ಐತಿಹಾಸಿಕ ಮತ್ತು ಅದ್ಭುತ ಸಾಧನೆಯಾಗಿದೆ. ಇದು ಮುಂದಿನ 1,000 ವರ್ಷಗಳ ಕಾಲ ಭಾರತದಲ್ಲಿ ‘ರಾಮರಾಜ್ಯ’ ಸ್ಥಾಪನೆಗೆ ಪೂರಕವಾಗಲಿದೆ. ಹೊಸ ಶಕೆಯ ಆರಂಭವಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಇದೇ ವೇಳೆ ರಾಮನ ಪ್ರತಿಷ್ಠಾಪನೆಯನ್ನು ಯಶಸ್ವಿ ನಡೆಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ನಿರ್ಣಯದಲ್ಲಿ ಅಭಿನಂದಿಸಲಾಗಿದೆ.

ರಾಮ ಮಂದಿರವು ಭಾರತದ ದೃಷ್ಟಿಕೋನ, ತತ್ವಶಾಸ್ತ್ರ ಮತ್ತು ಸನ್ಮಾರ್ಗದ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. “ಶ್ರೀ ರಾಮ್ ದೇವಾಲಯವು ನಿಜವಾಗಿಯೂ ರಾಷ್ಟ್ರೀಯ ಪ್ರಜ್ಞೆಯ ದೇವಾಲಯವಾಗಿದೆ” ಎಂದು ಅದು ಹೇಳಿದೆ. ಭಗವಾನ್ ಶ್ರೀ ರಾಮನ ದೈವಿಕ ಪ್ರತಿಷ್ಠಾಪನೆಯನ್ನು ನೋಡಿ ಪ್ರತಿಯೊಬ್ಬ ಭಾರತೀಯ ಸಂತೋಷ ಪಟ್ಟಿದ್ದಾನೆ ಎಂದು ಉಲ್ಲೇಖದಲ್ಲಿ ತಿಳಿಸಲಾಗಿದೆ. ಭಾರತೀಯ ನಾಗರಿಕತೆ ಮತ್ತು ಸಂಸ್ಕೃತಿಯ ಪ್ರತಿಯೊಂದು ಅಂಶದಲ್ಲೂ ಭಗವಾನ್ ರಾಮ, ಸೀತೆ ಮತ್ತು ರಾಮಾಯಣವಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮೂಲಭೂತ ಹಕ್ಕುಗಳಿಗೆ ಸ್ಫೂರ್ತಿ

ಭಾರತದ ಸಂವಿಧಾನದ ಮೂಲ ಪ್ರತಿಯಲ್ಲಿ, ಮೂಲಭೂತ ಹಕ್ಕುಗಳ ವಿಭಾಗದಲ್ಲಿ, ವಿಜಯದ ನಂತರ ಅಯೋಧ್ಯೆಗೆ ಮರಳಿದ ನಂತರ ಭಗವಾನ್ ಶ್ರೀ ರಾಮ, ತಾಯಿ ಸೀತಾ ಮತ್ತು ಲಕ್ಷ್ಮಣ ಜಿ ಅವರ ಚಿತ್ರವಿದೆ. ಭಗವಾನ್ ಶ್ರೀ ರಾಮ ಮೂಲಭೂತ ಹಕ್ಕುಗಳಿಗೆ ಸ್ಫೂರ್ತಿ ಎಂಬುದಕ್ಕೆ ಅದುವೇ ಪುರಾವೆ ಎಂದು ಅದು ಹೇಳಿದೆ. ಅದೇ ರೀತಿ ರಾಮರಾಜ್ಯದ ಕಲ್ಪನೆಯು ಮಹಾತ್ಮ ಗಾಂಧಿಯವರ ಹೃದಯದಲ್ಲಿಯೂ ಇತ್ತು’ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ರಾಮರಾಜ್ಯದ ಕಲ್ಪನೆಯೇ ನಿಜವಾದ ಪ್ರಜಾಪ್ರಭುತ್ವದ ಕಲ್ಪನೆ ಎಂದು ಗಾಂಧೀಜಿ ಹೇಳುತ್ತಿದ್ದರು. ಭಗವಾನ್ ಶ್ರೀ ರಾಮನ ಆದರ್ಶಗಳನ್ನು ಅನುಸರಿಸಿ, ಪ್ರಧಾನಿ ದೇಶದಲ್ಲಿ ಉತ್ತಮ ಆಡಳಿತವನ್ನು ಸ್ಥಾಪಿಸುವ ಮೂಲಕ ನಿಜವಾದ ಅರ್ಥದಲ್ಲಿ ರಾಮರಾಜ್ಯ’ದ ಸ್ಫೂರ್ತಿಯನ್ನು ಜಾರಿಗೆ ತಂದಿದ್ದಾರೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ ಗೆಲುವಿಗಾಗಿ ಕಾರ್ಯಕರ್ತರಿಗೆ 100 ದಿನಗಳ ಟಾಸ್ಕ್‌ ಕೊಟ್ಟ ಮೋದಿ!

ಭಗವಾನ್ ರಾಮನು ತನ್ನ ಮಾತುಗಳಲ್ಲಿ ಮತ್ತು ಆಲೋಚನೆಗಳಲ್ಲಿ ತುಂಬಿದ ಮೌಲ್ಯಗಳನ್ನು ಅನುಸರಿಸಲಾಗುತ್ತಿದೆ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮತ್ತು ‘ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್​ ಅದಕ್ಕೆ ಸ್ಫೂರ್ತಿ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮೋದಿಯವರ ನಾಯಕತ್ವದಲ್ಲಿ, ಭಾರತದ ಏಕತೆ ಮತ್ತು ಒಗ್ಗಟ್ಟು ಸಾರ್ವಜನಿಕರ ಭಾಗವಹಿಸುವಿಕೆಯು ಹೆಚ್ಚಿದೆ. ಅವರು ತಮ್ಮ ನೀತಿಗಳು ರಾಷ್ಟ್ರದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ.. ಕಳೆದ 10 ವರ್ಷಗಳಲ್ಲಿ ಭಾರತೀಯ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಐತಿಹಾಸಿಕ ಹೆಮ್ಮೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಅದು ಹೇಳಿದೆ.

Continue Reading

ಅವಿಭಾಗೀಕೃತ

Karnataka Live News: ಚಾಮುಂಡೇಶ್ವರಿ ಆಶೀರ್ವಾದ ಪಡೆದ ಅಮಿತ್‌ ಶಾ; ಲೋಕಸಭೆಗೆ ರಣಕಹಳೆ ಊದಿದ ಚಾಣಕ್ಯ!

Karnataka Live News : ರಾಜಕೀಯ ವಿದ್ಯಮಾನ, ಸರ್ಕಾರದ ಪ್ರಮುಖ ನಿರ್ಧಾರ, ಅಪಘಾತ, ಅಪರಾಧ, ಹವಾಮಾನ, ಶೈಕ್ಷಣಿಕ, ಸಾಮಾಜಿಕ ಇತ್ಯಾದಿ ನಾಡಿನ ಪ್ರಮುಖ ಸಂಗತಿಗಳ ತ್ವರಿತ ಅಪ್‌ಡೇಟ್ಸ್ ಇಲ್ಲಿವೆ.

VISTARANEWS.COM


on

By

karnataka live news karnataka today news live vistara news feb 11th
Koo
Continue Reading
Advertisement
Pakistan Inflation
ವಿದೇಶ43 mins ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ59 mins ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು1 hour ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ2 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ2 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ2 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ2 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ2 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ3 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ3 hours ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202412 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202413 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌