Fact check : ಬೆಂಗಳೂರಿನ ಏರ್ ಶೋದಲ್ಲಿ ಜೆಟ್ ಗಗನಕ್ಕೆ ಮುಖ ಮಾಡಿ ಹಾರಿದ್ದು ನಿಜವೇ? - Vistara News

ಫ್ಯಾಕ್ಟ್ ಚೆಕ

Fact check : ಬೆಂಗಳೂರಿನ ಏರ್ ಶೋದಲ್ಲಿ ಜೆಟ್ ಗಗನಕ್ಕೆ ಮುಖ ಮಾಡಿ ಹಾರಿದ್ದು ನಿಜವೇ?

ಬೆಂಗಳೂರಿನ ಏರ್ ಶೋನಲ್ಲಿ ಜೆಟ್ ಒಂದು ನೇರವಾಗಿ ಆಗಸಕ್ಕೆ ಮುಖ ಮಾಡಿ ಹಾರಿದೆ ಎನ್ನುವ ವಿಡಿಯೊ ಒಂದು ಹರಿದಾಡಿತ್ತು. ಅದರ ಸತ್ಯಾಂಶ ಫ್ಯಾಕ್ಟ್ ಚೆಕ್ (Fact check ) ಇಂದ ಹೊರಬಿದ್ದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಮ್ಮ ರಾಜಧಾನಿ ಬೆಂಗಳೂರಿನಲ್ಲಿ 14ನೇ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯುತ್ತಿದೆ. ಅಲ್ಲಿ ಯುದ್ಧ ವಿಮಾನಗಳು ತಮ್ಮ ಸಾಹಸ ಪ್ರದರ್ಶನ ಮಾಡುತ್ತಿರುವ ಅನೇಕ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗುತ್ತಿವೆ. ಅದರಂತೆಯೇ ಜೆಟ್ ಒಂದು ನೇರವಾಗಿ ಆಗಸಕ್ಕೆ ಮುಖ ಮಾಡಿ ಹಾರಾಟ ಆರಂಭಿಸುವ ವಿಡಿಯೊ ಒಂದು ವೈರಲ್ ಆಗಿದೆ. ಆದರೆ ಆ ವಿಡಿಯೊ ನಿಜಕ್ಕೂ ಬೆಂಗಳೂರಿನದ್ದಾ ಎನ್ನುವ ಬಗ್ಗೆ ಸತ್ಯಾಂಶ (Fact check) ಇಲ್ಲಿದೆ ನೋಡಿ.


ಈ ವಿಡಿಯೊ ಕುರಿಯತಾಗಿ ಎಎಫ್ಡಬ್ಲ್ಯೂಎ ಫ್ಯಾಕ್ಟ್ ಚೆಕ್ ಮಾಡಿದೆ. ಆಗ ಈ ವಿಡಿಯೊ ಬೆಂಗಳೂರಿನದ್ದಲ್ಲ, ಬದಲಾಗಿ ದುಬೈನದ್ದು ಎಂದು ತಿಳಿದುಬಂದಿದೆ. ಮೊದಲಿನ ಹಂತದ ಫ್ಯಾಕ್ಟ್ ಚೆಕ್ ಅಲ್ಲಿ ಈ ಜೆಟ್ ರಷ್ಯಾದ್ದಾಗಿದ್ದು, ರಷ್ಯಾದ ಪೈಲೆಟ್ ಇದನ್ನು ಓಡಿಸುತ್ತಿದ್ದಾಗಿ ತಿಳಿದುಬಂದಿದೆ. ಮತ್ತೆ ಫ್ಯಾಕ್ಟ್ ಚೆಕ್ ಮಾಡಿದಾಗ ಇದು ಒಂದು ರಿಮೋಟ್ ಕಂಟ್ರೋಲಡ್ ಜೆಟ್ ಎನ್ನುವ ವಿಚಾರ ಗೊತ್ತಾಗಿದೆ. ದುಬೈನಲ್ಲಿ ಪ್ರತಿ ವರ್ಷ ರಿಮೋಟ್ ಕಂಟ್ರೋಲಡ್ ಜೆಟ್ ಪ್ರದರ್ಶನ ನಡೆಯುತ್ತಿದ್ದು, ಅದರಲ್ಲಿ ರಷ್ಯಾದ ಈ ಮಾದರಿ ಜೆಟ್ ಹಾರಾಟ ನಡೆಸಿದ್ದಾಗಿ ತಿಳಿದುಬಂದಿದೆ.


ಈ ಜೆಟ್ ಅನ್ನು ತೋರಿಸುವಂತಹ ವಿಡಿಯೊ ಸೂಪರ್ ಕಾರ್ ಬ್ಲಾಂಡಿ ಹೆಸರಿನ ಯೂಟ್ಯೂಬ್ ಚಾನೆಲ್ ಅಲ್ಲಿ 2021ರಲ್ಲಿಯೇ ಹಂಚಿಕೊಂಡಿರುವುದು ಕಂಡುಬಂದಿದೆ. ವೈರಲ್ ವಿಡಿಯೊದಲ್ಲಿರುವ ಜೆಟ್ ಹಾಗೂ ಯುಟ್ಯೂಬ್ ವಿಡಿಯೊದಲ್ಲಿರುವ ಜೆಟ್ ಎರಡೂ ಒಂದೇ ಎನ್ನುವುದನ್ನು ಕಾಣಬಹುದಾಗಿದೆ. ಜೆಟ್ ಇರುವ ಸ್ಥಳವನ್ನೂ ಸಹ ಫ್ಯಾಕ್ಟ್ ಚೆಕ್ ಒಳಪಡಿಸಿದಾಗ ಅದು ದುಬೈನಲ್ಲಿ ನಡೆದ ಪ್ರದರ್ಶನದ್ದು ಎನ್ನುವುದು ದೃಢವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: ಏ.19ರವರೆಗೆ ಲೋಕಸಭೆ ಚುನಾವಣೆ; ಮೇ 22ಕ್ಕೆ ರಿಸಲ್ಟ್?

Lok Sabha Election: ಮಾರ್ಚ್ 12ರಂದು ಲೋಕಸಭಾ ಚುನಾವಣಾ ಪ್ರಕ್ರಿಯೆ ಆರಂಭವಾಗಿ, ಏಪ್ರಿಲ್ 19ರಂದು ಮತದಾನ ನಡೆಯಲಿದೆ ಮತ್ತು ಮೇ 22ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬ ವಾಟ್ಸಾಪ್ ಮೆಸೇಜ್ ಭಾರೀ ವೈರಲ್ ಆಗಿದೆ. ಅಸಲಿ ಸಂಗತಿ ಏನು?

VISTARANEWS.COM


on

Lok Sabha Election on April 19 and Result on May 22
Koo

ನವದೆಹಲಿ: ಲೋಕಸಭೆ ಚುನಾವಣಾ (Lok Sabha Election) ವೇಳಾ ಪಟ್ಟಿ ಕುರಿತು ಎಲ್ಲರಲ್ಲೂ ಕುತೂಹಲವಿದೆ(Election Schedule). ಯಾವಾಗ ದಿನಾಂಕ ಪ್ರಕಟವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ಮಧ್ಯೆ, ಏಪ್ರಿಲ್ 19ರಂದು ಚುನಾವಣೆ ನಡೆದು, ಮೇ 22ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ವಾಟ್ಸಾಪ್‌ ಮೆಸೇಜ್‌ವೊಂದು ಭಾರೀ ವೈರಲ್ ಆಗಿದೆ(WhatsApp Message Viral). ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಚುನಾವಣಾ ಆಯೋಗವು(Election Commission of India), ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಾಗುತ್ತದೆಯೇ ಹೊರತು, ಪಠ್ಯ ಅಥವಾ ವಾಟ್ಸಾಪ್ ಮೆಸೇಜ್ ಮೂಲಕ ಅಲ್ಲ. ಹಾಗಾಗಿ ಇದೊಂದು ಫೇಕ್ ನ್ಯೂಸ್ (Fake News) ಎಂದು ಕೇಂದ್ರ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ.

ಸಾರ್ವತ್ರಿಕ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯ ನಕಲಿ ಸಂದೇಶವೊಂದು ಹರಿದಾಡುತ್ತಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ತರುವ ಮೂಲಕ ಮಾರ್ಚ್ 12 ರಂದು ಚುನಾವಣೆಯನ್ನು ಅಧಿಸೂಚಿಸಲಾಗುವುದು ಎಂದು ಅದರಲ್ಲಿ ತಿಳಿಸಲಾಗಿದೆ. ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕ ಮತ್ತು ಏಪ್ರಿಲ್ 19 ಮತದಾನ ಮತ್ತು ಮೇ 22ರಂದು ಫಲಿತಾಂಶ ನಡೆಯಲಿದೆ ಎಂದು ನಕಲಿ ಸುದ್ದಿಯಲ್ಲಿ ತಿಳಿಸಲಾಗಿದೆ.

ಚುನಾವಣಾ ಆಯೋಗದ ಲೆಟರ್‌ಹೆಡ್‌‌ನಲ್ಲಿ ನಕಲಿ ಸಂದೇಶವು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡಲು ಪ್ರಾರಂಭಿಸಿತು. ಸಾರ್ವತ್ರಿಕ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವುದು ಹೇಗೆ ಎಂಬ ಪ್ರಶ್ನೆಯನ್ನು ಹಲವರು ಎತ್ತಿದ್ದಾರೆ.

ಈ ಗೊಂದಲದ ನಡುವೆಯೇ ನಿನ್ನೆ ಚುನಾವಣಾ ಆಯೋಗ ವೈರಲ್ ಸಂದೇಶ ನಕಲಿ ಎಂದು ಸ್ಪಷ್ಟಪಡಿಸಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯ ಕುರಿತು ವಾಟ್ಸಾಪ್‌ ಅಪ್ಲಿಕೇಶನ್‌ನಲ್ಲಿ ನಕಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶವು ನಕಲಿಯಾಗಿದೆ. ಆಯೋಗವು ಇಲ್ಲಿಯವರೆಗೆ ಯಾವುದೇ ದಿನಾಂಕಗಳನ್ನು ಘೋಷಿಸಿಲ್ಲ ಎಂದು ಎಕ್ಸ್ ವೇದಿಕೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಪೋಸ್ಟ್ ಮಾಡಿದೆ.

ಎಲೆಕ್ಷನ್ ವೇಳಾಪಟ್ಟಿಯನ್ನು ಆಯೋಗವು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡುತ್ತದೆ. #VerifyBeforeYouAmplify ಎಂಬ ಹ್ಯಾಷ್ ಟ್ಯಾಗ್ ಬಳಸಿರುವ ಆಯೋಗವು, ವಾಟ್ಸಾಪ್ ಸಂದೇಶಗಳನ್ನು ಫಾರ್ವರ್ಡ್ ಮಾಡುವಾಗ ದೃಢೀಕರಿಸಬೇಕು ಎಂದು ಹೇಳಿದೆ.

ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯಿಂದ ಪ್ರಸಾರವಾದ ಆಂತರಿಕ ಟಿಪ್ಪಣಿ ಗೊಂದಲಕ್ಕೆ ಕಾರಣವಾದ ಒಂದು ತಿಂಗಳ ಬಳಿಕ ಈ ನಕಲಿ ಸಂದೇಶವೂ ವೈರಲ್ ಆಗಿದೆ. ಈ ಆಂತರಿಕ ಟಿಪ್ಪಣಿಯಲ್ಲಿ ಏಪ್ರಿಲ್ 16 ಅನ್ನು ತಾತ್ಕಾಲಿಕ “ಚುನಾವಣೆ ದಿನಾಂಕ” ಎಂದು ಉಲ್ಲೇಖಿಸಲಾಗಿದ್ದು ಮತ್ತು ಅಧಿಕಾರಿಗಳಿಗೆ ಸಿದ್ಧತೆಗಳನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿತ್ತು.

ಈ ಸುದ್ದಿಯನ್ನೂ ಓದಿ: Lok Sabha Election: ಈ ದಿನಾಂಕದಂದು ಲೋಕಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

Continue Reading

ದೇಶ

Fact Check: ಅಮುಲ್‌ನಿಂದ ʼಶರಮ್‌ʼ ಹೆಸರಿನ ಚೀಸ್ ಬಿಡುಗಡೆ?

Fact Check: ಇತ್ತೀಚೆಗೆ ಅಮುಲ್‌ ಶರಮ್‌ ಹೆಸರಿನ ಚೀಸ್‌ ಬಿಡುಗಡೆ ಮಾಡಿದೆ ಎನ್ನುವ ಸುದ್ದಿ ವೈರಲ್‌ ಆಗಿತ್ತು. ಆದರೆ ಇದೀಗ ಕಂಪೆನಿ ಸ್ಪಷ್ಟನೆ ನೀಡಿ, ಇದು ನಕಲಿ ಸುದ್ದಿ ಎಂದು ಎಚ್ಚರಿಸಿದೆ.

VISTARANEWS.COM


on

amul
Koo

ನವದೆಹಲಿ: ಇತ್ತೀಚೆಗೆ ಶರಮ್ (Sharam) ಹೆಸರಿನ ಅಮುಲ್ ಚೀಸ್ (Amul cheese) ಪ್ಯಾಕೆಟ್‌ನ ಪೋಸ್ಟ್ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಇದನ್ನು ʼಶರಮ್ ನಾಮ್ ಕಿ ಚೀಜ್ ಭಿ ಹೋತಿ ಹೈʼ (Sharam naam ki cheez bhi hoti hai) ಎಂಬ ಹಿಂದಿ ನುಡಿಗಟ್ಟನ್ನು ಆಧರಿಸಿ ಪೋಸ್ಟ್‌ ಮಾಡಲಾಗಿತ್ತು. ನಾಚಿಕೆಯಿಲ್ಲದ ಯಾರಾದರೂ ವರ್ತಿಸುವಾಗ ಸಾಮಾನ್ಯವಾಗಿ ಈ ನುಡಿಗಟ್ಟನ್ನು ಬಳಸಲಾಗುತ್ತದೆ. ವೈರಲ್ ಪೋಸ್ಟ್‌ನಲ್ಲಿ ಹಿಂದಿಯ ʼಚೀಜ್ʼ ಅನ್ನು ಇಂಗ್ಲಿಷ್‌ನ ʼಚೀಸ್‌ʼ ಆಗಿ ಅನುವಾದಿಸಲಾಗಿದೆ. ಈ ವೈರಲ್‌ ಪೋಸ್ಟ್‌ನಲ್ಲಿ ಚೀಸ್ ತುಂಡಿನ ಚಿತ್ರವನ್ನು ಪ್ಯಾಕೆಟ್ ಮೇಲೆ ಮುದ್ರಿಸಿರುವುದು ಕಂಡು ಬಂದಿದೆ. ಈ ಕುರಿತು ಸ್ಪಷ್ಟನೆ ನೀಡಿದ ಅಮುಲ್‌, ʼʼಕಂಪನಿ ಇಂತಹ ಯಾವುದೇ ಉತ್ಪನ್ನ ಹೊರ ತಂದಿಲ್ಲʼʼ ಎಂದು (Fact Check) ಸ್ಪಷ್ಟಪಡಿಸಿದೆ.

ಅಮುಲ್‌ ಹೇಳಿದ್ದೇನು?

ಅಮುಲ್ ಇದಕ್ಕೆ ಪ್ರತಿಕ್ರಿಯಿಸಿ, ಇದು ನಮ್ಮ ಉತ್ಪನ್ನವಲ್ಲ ಮತ್ತು ಕೃತಕ ಬುದ್ಧಿಮತ್ತೆ (Artificial intelligence) ತಂತ್ರಜ್ಞಾನವನ್ನು ಬಳಸಿಕೊಂಡು ಚಿತ್ರವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದೆ. ಅಲ್ಲದೆ ಬ್ರ್ಯಾಂಡ್‌ನ ಅನುಮತಿಯಿಲ್ಲದೆ ಪೋಸ್ಟ್‌ ರಚಿಸಿ ಪೋಸ್ಟ್ ಹರಿಯಬಿಡಲಾಗಿದೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಮುಲ್‌ ಸ್ಪಷ್ಟಪಡಿಸಿದೆ.

“ಹೊಸ ರೀತಿಯ ಅಮುಲ್ ಚೀಸ್‌ಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮತ್ತು ಸೋಷಿಯಲ್‌ ಮೀಡಿಯಾಗಳಲ್ಲಿ ನಕಲಿ ಸಂದೇಶವನ್ನು ಫಾರ್ವರ್ಡ್ ಮಾಡಲಾಗುತ್ತಿದೆ. ಪೋಸ್ಟ್‌ನ ಸೃಷ್ಟಿಕರ್ತರು ನಮ್ಮಿಂದ ಯಾವುದೇ ಅನುಮತಿಯಿಲ್ಲದೆ ಇದನ್ನು ಪೋಸ್ಟ್ ಮಾಡಿದ್ದಾರೆ. ಈ ಪ್ಯಾಕ್ ಅನ್ನು ಎಐ ತಂತ್ರಜ್ಞಾನ ಬಳಸಿ ಅಭಿವೃದ್ಧಿಪಡಿಸಲಾಗಿದೆ. ಈ ಮೂಲಕ ಅಮುಲ್ ಬ್ರ್ಯಾಂಡ್‌ ಅನ್ನು ಕಳಪೆಯಂತೆ ಚಿತ್ರಿಸಲಾಗಿದೆʼʼ ಎಂದು ಕಂಪನಿ ಹೇಳಿದೆ.

“ಈ ಪೋಸ್ಟ್‌ನಲ್ಲಿ ತೋರಿಸಿರುವ ಪ್ಯಾಕ್ ಅಮುಲ್ ಚೀಸ್ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ. ಈ ಪೋಸ್ಟ್ ಅನ್ನು ತಪ್ಪು ಮಾಹಿತಿಯನ್ನು ಹರಡಲು ಮತ್ತು ಗ್ರಾಹಕರಲ್ಲಿ ಅನಗತ್ಯ ಭಯ ಹಾಗೂ ಗೊಂದಲವನ್ನು ಮೂಡಿಸಲು ಬಳಸಲಾಗಿದೆ. ದಯವಿಟ್ಟು ನಮ್ಮ ಈ ಸಂದೇಶವನ್ನು ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಅಮುಲ್ ಎಂದಿಗೂ ಅತ್ಯುತ್ತಮ ಉತ್ಪನ್ನಗಳನ್ನು ಒದಗಿಸುವ ಭರವಸೆ ನೀಡುತ್ತದೆʼʼ ಎಂದು ಕಂಪನಿ ಹೇಳಿದೆ.

ಹಿಂದೆಯೂ ಸುಳ್ಳು ಸುದ್ದಿ ಹರಡಿತ್ತು

ಅಮುಲ್‌ ಉತ್ಪನ್ನಗಳ ವಿರುದ್ಧ ಹಿಂದೆಯೂ ಪಿತೂರಿ ನಡೆದಿತ್ತು. ಅಮುಲ್ ಬೆಣ್ಣೆಯನ್ನು ಚೀನಾದಲ್ಲಿ ಪ್ಯಾಕ್ ಮಾಡಲಾಗುತ್ತಿದೆ ಎಂದು ಕಳೆದ ವರ್ಷ ಫೆಬ್ರವರಿಯಲ್ಲಿ ನಕಲಿ ಸಂದೇಶ ಪ್ರಸಾರವಾಗಿತ್ತು. ಕೂಡಲೇ ಎಚ್ಚೆತ್ತ ಕಂಪನಿಯು ಇದು ನಕಲಿ ಸಂದೇಶ ಎಂದು ಸ್ಪಷ್ಟನೆ ನೀಡಿತ್ತು. ಸುಳ್ಳು ಸುದ್ದಿ ಹಬ್ಬಿಸುವವರಿಗೆ ನೋಟಿಸ್ ರವಾನಿಸಿ, ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿತ್ತು.

ನಕಲಿ ಉತ್ಪನ್ನ ಮತ್ತು ಕಂಪನಿಯ ನಿಜವಾದ ಉತ್ಪನ್ನಗಳನ್ನು ಹೋಲಿಕೆ ಮಾಡುವ ವಿಡಿಯೊವನ್ನು ಪೋಸ್ಟ್‌ ಮಾಡಿ, ತಪ್ಪು ಮಾಹಿತಿಯನ್ನು ಸೃಷ್ಟಿಸಿ ಗ್ರಾಹಕರಲ್ಲಿ ಭಯ ಮತ್ತು ಗೊಂದಲ ಮೂಡಲು ಬಳಸಲಾಗಿದೆ ಎಂದು ಹೇಳಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಸೂಚನೆಯ ಪ್ರಕಾರ, ಎಲ್ಲ ಹಾಲಿನ ಉತ್ಪನ್ನಗಳು ಪ್ಯಾಕ್‌ನ ಮುಂಭಾಗದಲ್ಲಿ ವೆಜ್ ಲೋಗೋವನ್ನು ತೋರಿಸುವುದು ಕಡ್ಡಾಯ ಅದನ್ನೂ ಗಮನಿಸುವಂತೆ ಹೇಳಿತ್ತು.

ಇದನ್ನೂ ಓದಿ: Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

Continue Reading

ಕರ್ನಾಟಕ

Fact check: ಹುತಾತ್ಮ ಮಗನ ಕುರಿತು ಭಾವಪೂರ್ಣ ಕವಿತೆ ಬರೆದರೆ ಪ್ರಾಂಜಲ್‌ ತಾಯಿ?

Fact Check: ರಜೌರಿ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕರುನಾಡಿನ ವೀರ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರ ಕುರಿತಂತೆ ಭಾವುಕ ಕವನವೊಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಅವರ ತಾಯಿಯೇ ಬರೆದರಾ?

VISTARANEWS.COM


on

Captain pranjal mother poem fact check
Koo

ನಮ್ಮ ಕಣ್ಣೆದುರೇ ಬೆಳೆದ ಈ ಕಂದ ಪ್ರಾಂಜಲನ
ಜೀವ ಕಸಿಯುವ ಹಕ್ಕ ನಿಮಗೆ ನೀಡಿದವರಾರು?
ಕೇಳಿಸದೇ ನಿಮಗೆ ಹೊತ್ತು ಹೆತ್ತ ತಾಯಿಯ ಆಕ್ರಂದನ?
ಕಾಣಿಸದೇ, ದುಃಖವ ನುಂಗಿ ಕಣ್ಣೀರು ತಡೆದುಕೊಂಡ ತಂದೆಯ ದುಮ್ಮಾನ?
ಅನಿಸುವುದಿಲ್ಲವೇ, ಕೈಹಿಡಿದ ಬಾಳ ಸಂಗಾತಿಯ ಎಣೆಯಿಲ್ಲದ ಗೋಳು?
– ಇದು ಜಮ್ಮು-ಕಾಶ್ಮೀರದ ರಜೌರಿಯ ಕಾಡಿನಲ್ಲಿ (Rajouri Encounter) ಅಡಗಿಕೊಂಡಿದ್ದ ಉಗ್ರಗಾಮಿಗಳ ಹುಟ್ಟಡಗಿಸಲು ಮುನ್ನುಗ್ಗುವ ವೇಳೆ ಹುತಾತ್ಮರಾದ ಕ್ಯಾಪ್ಟನ್‌ ಎಂ.ವಿ ಪ್ರಾಂಜಲ್‌ (Captain MV Pranjal) ಅವರ ಬಗ್ಗೆ ಬರೆಯಲಾದ ಭಾವುಕ ಕವನವೊಂದರ (Emotional Poem) ಕೆಲವು ಸಾಲು (Fact Check).

ಕಳೆದ ನವೆಂಬರ್‌ 22ರಂದು ರಜೌರಿ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಈ 29 ವರ್ಷದ ತರುಣನಿಗೆ ಇಡೀ ಕನ್ನಡ ನಾಡು ಅಶ್ರುತರ್ಪಣ ಸಲ್ಲಿಸಿದೆ. ಬೆಂಗಳೂರಂತೂ ವೀರ ಯೋಧನಿಗೆ ಸೆಲ್ಯೂಟ್‌ ಹೊಡೆದು, ಪುಷ್ಟಾಂಜಲಿ ಸಲ್ಲಿಸಿ ಕಳುಹಿಸಿಕೊಟ್ಟಿದೆ. ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಆಡಳಿತ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್‌ (Pranjal Father M Venkatesh) ಮತ್ತು ಅನುರಾಧಾ ವೆಂಕಟೇಶ್‌ (Pranjal Mother Anuradha Venkatesh) ದಂಪತಿಯ ಏಕೈಕ ಪುತ್ರ ಪ್ರಾಂಜಲ್‌. ಸಣ್ಣ ವಯಸ್ಸಿನಲ್ಲೇ ಸೈನಿಕನಾಗುವ ಹಂಬಲ ಹೊತ್ತು ಅದನ್ನು ಸಾಕಾರಗೊಳಿಸಿಕೊಂಡಿದ್ದ ಎಲ್ಲರ ಮೆಚ್ಚಿನ ಅಕ್ಕರೆಯ ಹುಡುಗ. ಎರಡು ವರ್ಷದ ಹಿಂದೆ ಅದಿತಿ ಅವರನ್ನು ಕೈ ಹಿಡಿದು ಹೊಸ ಬಾಳಿನ ಹೊಸಿಲೂ ತುಳಿದಿದ್ದರು.

Family of Captain MV Pranjal
ಕ್ಯಾಪ್ಟನ್‌ ಫ್ಯಾಮಿಲಿ: ಕ್ಯಾ. ಪ್ರಾಂಜಲ್‌, ಅದಿತಿ ಪ್ರಾಂಜಲ್‌, ಅನುರಾಧಾ ವೆಂಕಟೇಶ್‌, ಎಂ ವೆಂಕಟೇಶ್‌

ಅವರು ಹುತಾತ್ಮರಾಗಿದ್ದಾರೆಂಬ ಸುದ್ದಿಯನ್ನು ಕೇಳುತ್ತಲೇ ಕುಟುಂಬ ವರ್ಗ, ಸ್ನೇಹಿತರು, ಶಿಕ್ಷಕರು ಕಣ್ಣೀರು ಹಾಕಿದ್ದರು. ಆದರೆ, ತಂದೆ ಎಂ.ವೆಂಕಟೇಶ್‌, ತಾಯಿ ಅನುರಾಧಾ ಮತ್ತು ಪತ್ನಿ ಅದಿತಿ ಮಾತ್ರ ಉಕ್ಕಿ ಬರುವ ಅಳುವನ್ನು ಗಂಟಲಲ್ಲೇ ಕಟ್ಟಿಕೊಂಡು ಸೈನಿಕನ ಮನೆಯವರು ತಾವು ಎಂಬುದನ್ನು ತೋರಿಸುವ ಸ್ಥಿತಪ್ರಜ್ಞತೆಯನ್ನು ಮೆರೆದಿದ್ದರು.

Family of Captain MV Pranjal
ಕ್ಯಾಪ್ಟನ್‌ ಗೆ ಅಂತಿಮ ನಮನ.. ಇದು ಕುಟುಂಬಕ್ಕೆ ಭಾವುಕ ಕ್ಷಣ

ಇದೀಗ ಎಲ್ಲ ಮುಗಿದು ಒಂದು ನೀರವ ಮೌನವಷ್ಟೇ ಉಳಿದೆ. ಬಹುಶಃ ಮನೆಯಲ್ಲಿ ಪ್ರಾಂಜಲ ನೆನಪುಗಳು ಹರಿದಾಡುತ್ತಿರಬಹುದು. ಒಬ್ಬನೇ ಮಗನನ್ನು ಕಳೆದುಕೊಂಡ ನೋವಿಗೆ ಪರಸ್ಪರ ಸಾಂತ್ವನ ಹೇಳುತ್ತಿರಬಹುದು. ಇದರ ನಡುವೆಯೇ ಆಕ್ರೋಶ, ಸಂಕಟಗಳು ನಾನಾ ರೂಪದಲ್ಲಿ ಪ್ರಕಟಗೊಳ್ಳುತ್ತಿರಬಹುದು.

ಇಂಥ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಒಂದು ಭಾವಪೂರ್ಣ ಕವನ ಎಲ್ಲರ ಮನಸ್ಸನ್ನು ಹಿಂಡುತ್ತಿದೆ, ಉಗ್ರರ ಮೇಲೆ ಆಕ್ರೋಶ ಹೆಚ್ಚಿಸುತ್ತಿದೆ.

Captain pranjal mother poem fact check

ಆ ಕವನ ಹೀಗಿದೆ..

ಓ ಪ್ರಕೃತಿಯೇ ಹಣ್ಣೆಲೆಗಳು ಸರದಿಯಲ್ಲಿರುವಾಗ
ನೀನೇಕೆ ಎಳೆ ಚಿಗುರ ಕಸಿದುಕೊಂಡೆ?
ಬೆಳೆದು ಹೆಮ್ಮರವಾಗಬೇಕಾದ ಚಿಕ್ಕ ಗಿಡವ
ಚಿವುಟಿ ನೀನೇನ ಪಡೆದುಕೊಂಡೆ?

ಓ ರಕ್ತ ಪಿಪಾಸು ಉಗ್ರಗಾಮಿಗಳೇ…..
ನಿಮಗೇಕೆ ಈ ಕೊನೆಯಿಲ್ಲದ ದಾಹ?
ಎಂದೆಂದಿಗೂ ಸಾಧಿಸಲಾಗದ, ನಿಮಗೆಂದಿಗೂ ದೊರಕದ
ನಮ್ಮೀ ಮಾತೃಭೂಮಿಯ ಮೇಲೆ ಏಕೀ ವ್ಯಾಮೋಹ?

ನಿಮ್ಮನು ಪ್ರಚೋದಿಸಿ ಕಳುಹಿಸಿದ ಸ್ವಾರ್ಥಿಗಳಿಗೆ
ಎಂದು ಆಗುವುದು ಜ್ಞಾನೋದಯ?
ಎಲ್ಲರಿಗೂ ಬದುಕುವ ಹಕ್ಕು ಪ್ರಕೃತಿಯು ನೀಡಿರುವಾಗ
ನಿಮಗೇಕೆ ಅತಿಕ್ರಮಿಸುವ ಈ ದುಷ್ಟ ಸಂಪ್ರದಾಯ?

ನಮ್ಮ ಕಣ್ಣೆದುರೇ ಬೆಳೆದ ಈ ಕಂದ ಪ್ರಾಂಜಲನ
ಜೀವ ಕಸಿಯುವ ಹಕ್ಕ ನಿಮಗೆ ನೀಡಿದವರಾರು?
ಕೇಳಿಸದೇ ನಿಮಗೆ ಹೊತ್ತು ಹೆತ್ತ ತಾಯಿಯ ಆಕ್ರಂದನ?
ಕಾಣಿಸದೇ, ದುಃಖವ ನುಂಗಿ ಕಣ್ಣೀರು ತಡೆದುಕೊಂಡ ತಂದೆಯ ದುಮ್ಮಾನ?
ಅನಿಸುವುದಿಲ್ಲವೇ, ಕೈಹಿಡಿದ ಬಾಳ ಸಂಗಾತಿಯ ಎಣೆಯಿಲ್ಲದ ಗೋಳು?

-ಇದು ತಾಯಿ ಹೃದಯವೊಂದರ ಸಂಕಟದಂತೆ ಕಾಣುತ್ತಿದೆ. ಉಗ್ರರನ್ನು ರಕ್ತಪಿಪಾಸುಗಳೆಂದು ಕರೆದ ಈ ಕವನ, ನಿಮಗೆಂದೂ ದೊರಕದ ನಮ್ಮೀ ಮಾತೃಭೂಮಿಯ ಮೇಲೆ ಯಾಕೆ ವ್ಯಾಮೋಹ ಎಂದು ಕೇಳುತ್ತದೆ. ಕೊನೆಗೆ ಮನೆಯವರ ಸಂಕಟ ನಿಮಗೆ ಅರ್ಥವಾಗುವುದಿಲ್ಲವೇ ಎಂದು ಕೇಳಲಾಗಿದೆ.

ಹಾಗಿದ್ದರೆ ಈ ಕವನ ಬರೆದವರು ಯಾರು?

ಸಾಮಾಜಿಕ ಜಾಲತಾಣದಲ್ಲಿ ಈ ಕವನವನ್ನು ಓದಿದಾಗ ಮೂಡುವ ಭಾವವೇನೆಂದರೆ, ಇದು ತಾಯಿ ಕರುಳಿನ ರೋದನ ಮತ್ತು ಆಕ್ರೋಶ. ಈ ಕವನವನ್ನು ಪ್ರಾಂಜಲ್‌ ಅವರ ತಾಯಿ ಅನುರಾಧಾ ವೆಂಕಟೇಶ್‌ ಅವರು ಷೇರ್‌ ಮಾಡಿಕೊಂಡಿದ್ದಾರೆ. ಹೀಗಾಗಿ ಅವರೇ ಬರೆದಿದ್ದಾರೆ ಎಂದು ಹೆಚ್ಚಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಪ್ರಾಂಜಲ್‌ ಅವರ ತಾಯಿ ಇದು ತಾನು ಬರೆದಿದ್ದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Raja Marga Column : ಕ್ಯಾ. ಪ್ರಾಂಜಲ್‌ ಮಾತ್ರವಲ್ಲ ಅವರ ಹೆತ್ತವರು, ಪತ್ನಿ ಕೂಡಾ ವೀರ ಯೋಧರೆ!

ಪ್ರಾಂಜಲ್‌ ತಾಯಿ ವಿಸ್ತಾರ ನ್ಯೂಸ್‌ಗೆ ಹೇಳಿದ್ದೇನು?

ನಮ್ಮ ಮಗ ಪ್ರಾಂಜಲ್‌ ಕುರಿತು ಯಾರೋ ಬರೆದ ಭಾವಪೂರ್ಣ ಕವಿತೆಯನ್ನು ಓದಿರುವೆ. ಅದು ಖಂಡಿತವಾಗಿಯೂ ನಾನು ಬರೆದಿದ್ದಲ್ಲ. ಆದರೆ ಸೋಷಿಯಲ್‌ ಮೀಡಿಯಾಗಳಲ್ಲಿ ಈ ಕವನ ನಾನೇ ಬರೆದಿದ್ದು ಎಂಬಂತೆ ನನ್ನ ಹೆಸರಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಹೀಗೆ ಮಾಡುವುದು ಸರಿಯಲ್ಲ ಎಂದು ಪ್ರಾಂಜಲ್‌ ಅವರ ತಾಯಿ ಅನುರಾಧಾ ಅವರು ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕವಿತೆಯ ಭಾವಾರ್ಥ ಚೆನ್ನಾಗಿದೆ. ಹಾಗಾಗಿ ನಾನು ಇದನ್ನು ನನ್ನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಶೇರ್‌ ಮಾಡಿದ್ದೆ ಅಷ್ಟೆ. ಇದನ್ನು ಬರೆದ ಕವಿಗೆ ಕೃತಜ್ಞತೆ ಸಲ್ಲಿಸುವೆ. ಆದರೆ ಈ ಕವನದ ಕುರಿತು ಸೋಷಿಯಲ್‌ ಮೀಡಿಯಾಗಳಲ್ಲಿ ತಪ್ಪು ಮಾಹಿತಿ ಕೊಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಇದು ಮಗನ ಕುರಿತು ಪ್ರಾಂಜಲ್‌ ತಾಯಿ ಬರೆದ ಭಾವಪೂರ್ಣ ಕವಿತೆ ಎಂದು ಪೇಸ್‌ಬುಕ್‌, ವಾಟ್ಸ್‌ಆಪ್‌ ಇತ್ಯಾದಿ ಕಡೆ ಪ್ರಸಾರ ಆಗುತ್ತಿರುವುದನ್ನು ಕಂಡು ನನಗೆ ಬೇಸರವಾಗಿದೆ. ನನ್ನ ಮಗನ ಕುರಿತು ಇರುವ ಜನರ ಅಭಿಮಾನಕ್ಕೆ ನಾವು ಚಿರಋಣಿ. ಆದರೆ ದಯವಿಟ್ಟು ಯಾರೂ ಯಾವುದೇ ರೀತಿಯ ತಪ್ಪು ಮಾಹಿತಿ ಹರಡಬೇಡಿ ಎಂದು ಅನುರಾಧಾ ಅವರು ಸಾರ್ವಜನಿಕರಲ್ಲಿ ವಿನಂತಿ ಮಾಡಿದರು.

Continue Reading

ದೇಶ

Fact Check: ಚಂದ್ರಯಾನ 3 ವಿಜ್ಞಾನಿಗಳಿಗೆ ಕೇಂದ್ರ ಸರ್ಕಾರ 3 ತಿಂಗಳಿಂದ ಸಂಬಳ ನೀಡಿಲ್ಲವೇ? ಇಲ್ಲಿದೆ ವಾಸ್ತವ

Fact Check: ಕೇಂದ್ರ ಸರ್ಕಾರವನ್ನು ಟೀಕಿಸಿದ ತೆಹ್ಸೀನ್‌ ಪೂನಾವಾಲಾ ಅವರು, ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ನೀಡಿಲ್ಲ ಎಂದು ಆರೋಪಿಸಿದ್ದರು. ಆದರೆ, ಪಿಐಬಿ ಫ್ಯಾಕ್ಟ್‌ಚೆಕ್‌ ಈ ಆರೋಪವನ್ನು ಸುಳ್ಳು ಎಂದು ತಿಳಿಸಿದೆ.

VISTARANEWS.COM


on

Tehseen Poonawalla on ISRO
Koo

ಬೆಂಗಳೂರು: ಶತಕೋಟಿ ಭಾರತೀಯರ ಕನಸಾಗಿರುವ ಚಂದ್ರಯಾನ 3 (‌Chandrayaan- 3) ಮಿಷನ್‌ ಕೊನೆಯ ಹಂತಕ್ಕೆ ಬಂದಿದೆ. ಇಸ್ರೋ ವಿಜ್ಞಾನಿಗಳು (ISRO Scientists) ಸತತವಾಗಿ ಶ್ರಮವಹಿಸಿ ಮಿಷನ್‌ ಸಿದ್ಧಗೊಳಿಸಿದ್ದು, ಮಿಷನ್‌ ಯಶಸ್ವಿಯಾದರೆ ಅವರು ಇತಿಹಾಸ ಸೃಷ್ಟಿಸಲಿದ್ದಾರೆ. ಹಾಗಾಗಿ ಭಾರತೀಯರು ಮಾತ್ರವಲ್ಲ, ಜಗತ್ತಿನ ಗಮನವೇ ಈಗ ಇಸ್ರೋ ವಿಜ್ಞಾನಿಗಳ ಮೇಲಿದೆ. ಇದರ ಬೆನ್ನಲ್ಲೇ, ಚಂದ್ರಯಾನ 3 ಮಿಷನ್‌ನಲ್ಲಿ ತೊಡಗಿರುವ ಇಸ್ರೋ ವಿಜ್ಞಾನಿಗಳಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡಿಲ್ಲ ಎಂಬ ಆರೋಪಗಳು (Fact Check) ಕೇಳಿಬಂದಿವೆ.

ಏನಿದು ಆರೋಪ?

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇತ್ತೀಚೆಗೆ ದಿ ರಣವೀರ್‌ ಶೋ ಪಾಡ್‌ಕಾಸ್ಟ್‌ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯುಟ್ಯೂಬರ್‌ ತೆಹ್ಸೀನ್‌ ಪೂನಾವಾಲಾ, ಚಂದ್ರಯಾನ 3 ಮಿಷನ್‌ನಲ್ಲಿ ತೊಡಗಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ನೀಡಿಲ್ಲ ಎಂದು ಹೇಳಿದ್ದರು. “ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ. ಇದು ಸರಿಯೇ? ನನಗೆ ಈ (ಕೇಂದ್ರ) ಸರ್ಕಾರದ ಮೇಲೆ ಇದೇ ಕಾರಣಕ್ಕೆ ಸಿಟ್ಟು ಬರುತ್ತದೆ. ನಮಗೆ ಇಸ್ರೋ ಬಗ್ಗೆ ಹೆಮ್ಮೆ ಇದೆ. ಅದೊಂದು ಅದ್ಭುತ ಸಂಸ್ಥೆ. ಆದರೆ, ಅವರಿಗೆ ಮೂರು ತಿಂಗಳಿಂದ ಸಂಬಳ ನೀಡಿಲ್ಲ. ನೀವು ಬೇಕಾದರೆ ಇದನ್ನು ಪರಿಶೀಲಿಸಬಹುದು” ಎಂದು ಹೇಳಿದ್ದರು.

ವಾಸ್ತವ ಏನು?

ನಕಲಿ ಸುದ್ದಿಗಳ ಕುರಿತು ಫ್ಯಾಕ್ಟ್‌ ಚೆಕ್‌ ಮಾಡಿ, ವಾಸ್ತವಾಂಶ ತಿಳಿಸುವ ಪಿಐಬಿ ಫ್ಯಾಕ್ಟ್‌ಚೆಕ್‌ ಈ ಕುರಿತು ಮಾಹಿತಿ ನೀಡಿದ್ದು, ತೆಹ್ಸೀನ್‌ ಪೂನಾವಾಲಾ ಹೇಳಿದ್ದು ಸುಳ್ಳು ಎಂದು ತಿಳಿಸಿದೆ. “ಈ ವದಂತಿ ಸುಳ್ಳು. ಇಸ್ರೋ ವಿಜ್ಞಾನಿಗಳು ಪ್ರತಿ ತಿಂಗಳ ಕೊನೆಯ ದಿನದಂದು ಸಂಬಳ ಪಡೆಯುತ್ತಾರೆ” ಎಂದು ಪೂನಾವಾಲಾ ಆರೋಪವನ್ನು ಅಲ್ಲಗಳೆದಿದೆ. ತೆಹ್ಸೀನ್‌ ಪೂನಾವಾಲಾ ಅವರು ಉದ್ಯಮಿ ಕೂಡ ಆಗಿದ್ದಾರೆ. ಅವರು ರಾಜಕೀಯ ವಿಶ್ಲೇಷಣೆಯನ್ನೂ ಮಾಡುತ್ತಾರೆ.

ಇದನ್ನೂ ಓದಿ: Chandrayaan 3: ನನಸಾಗುವತ್ತ ಶತಕೋಟಿ ಭಾರತೀಯರ ಚಂದ್ರಯಾನ ಕನಸು; ಇಂದು ಮಹತ್ವದ ಘಟ್ಟ

ಸವಾಲು ಹಾಕಿದ ಬಿಜೆಪಿ ವಕ್ತಾರ ಶೆಹಜಾದ್‌

ತೆಹ್ಸೀನ್‌ ಪೂನಾವಾಲಾ ಅವರು ಬಿಜೆಪಿ ವಕ್ತಾರ ಶೆಹಜಾದ್‌ ಪೂನಾವಾಲಾ ಅವರ ಸಹೋದರರೂ ಆಗಿದ್ದಾರೆ. ಇನ್ನು ಈ ಹೇಳಿಕೆ ನೀಡಿದ ತೆಹ್ಸೀನ್‌ ಪೂನಾವಾಲಾ ಅವರಿಗೆ ಶೆಹಜಾದ್‌ ಪೂನಾವಾಲಾ ಅವರು ಸವಾಲು ಹಾಕಿದ್ದಾರೆ. “ಇಸ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಅವರ ಹುದ್ದೆಯ ಕುರಿತು ಮಾಹಿತಿ ಕೊಡಿ ನೋಡೋಣ. ಸತ್ಯಾಂಶ ಇಲ್ಲದ, ಹುರುಳಿಲ್ಲದ ಆರೋಪ ಮಾಡುವುದು ನಿಮಗೆ ರೂಢಿಯಾಗಿದೆ. ಮಕ್ಕಳಂತೆ ವಿಶ್ಲೇಷಣೆ ಮಾಡುವ ಪ್ರವೃತ್ತಿ ಮೊದಲು ನಿಲ್ಲಲಿ” ಎಂದು ಶೆಹಜಾದ್‌ ತಿರುಗೇಟು ನೀಡಿದ್ದಾರೆ. ಆದಾಗ್ಯೂ, ತೆಹ್ಸೀನ್‌ ಪೂನಾವಾಲಾ ಅವರು ಸಹೋದರನ ಸವಾಲು ಸ್ವೀಕರಿಸಿಲ್ಲ ಎಂದು ತಿಳಿದುಬಂದಿದೆ.

Continue Reading
Advertisement
IPL 2024
ಕ್ರೀಡೆ14 mins ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ16 mins ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ39 mins ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 202439 mins ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ48 mins ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ1 hour ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ1 hour ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Boat Capsizes
ದೇಶ1 hour ago

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Chikkaballapur Lok Sabha Constituency NDA candidate Dr K Sudhakar election campaign
ಚಿಕ್ಕಬಳ್ಳಾಪುರ2 hours ago

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು2 hours ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ8 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ19 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌