ರಾಹುಲ್‌ ಗಾಂಧಿ ಹೆಸರಿಗೆ ಸಂಪೂರ್ಣ ಆಸ್ತಿ ಬರೆದುಕೊಟ್ಟ ಉತ್ತರಾಖಂಡ್‌ನ ಅಜ್ಜಿ! - Vistara News

ದೇಶ

ರಾಹುಲ್‌ ಗಾಂಧಿ ಹೆಸರಿಗೆ ಸಂಪೂರ್ಣ ಆಸ್ತಿ ಬರೆದುಕೊಟ್ಟ ಉತ್ತರಾಖಂಡ್‌ನ ಅಜ್ಜಿ!

ಉತ್ತರಾಖಂಡ್‌ನ ವೃದ್ಧೆಯೊಬ್ಬರು ತಮ್ಮ ಸಂಪೂರ್ಣ ಆಸ್ತಿಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೆಸರಿಗೆ ಬರೆದುಕೊಟ್ಟಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡೆಹ್ರಾಡೂನ್: ನೆಹರು ಕಾಲೋನಿಯ ದಲನ್‌ವಾಲಾ ನಿವಾಸಿ ವೃದ್ಧೆ ಪುಷ್ಪಾ ಮುಂಜಿಯಾಲ್ ಎಂಬುವರು ರಾಹುಲ್ ಗಾಂಧಿ ಅವರನ್ನು ತಮ್ಮ ಆಸ್ತಿಯ ವಾರಸುದಾರರನ್ನಾಗಿ ಮಾಡುವಂತೆ ಜಿಲ್ಲಾ ನ್ಯಾಯಾಲಯಕ್ಕೆ ವಿಲ್ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿಯವರ ಆಲೋಚನೆಗಳಿಂದ ನಾನು ಪ್ರಭಾವಿತಳಾಗಿದ್ದೇನೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಗಾಂಧಿ ಕುಟುಂಬ ದೇಶಕ್ಕಾಗಿ ಅತ್ಯುನ್ನತ ತ್ಯಾಗ ಮಾಡಿದೆ. ಹೀಗಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಪುಪ್ಪಾ ಮುಂಜಿಯಾಲ್ ಹೇಳಿದ್ದಾರೆ.

ತಮ್ಮ ಆಸ್ತಿಯ ವಿವರವನ್ನು ನ್ಯಾಯಾಲಯಕ್ಕೆ ನೀಡಿರುವ ಅವರು, ಸಂಪೂರ್ಣ ಆಸ್ತಿಯ ಮಾಲೀಕತ್ವವನ್ನು ರಾಹುಲ್ ಗಾಂಧಿಗೆ ಹಸ್ತಾಂತರಿಸುವಂತೆ ಮನವಿ ಮಾಡಿದ್ದಾರೆ. ತಾವು ಬರೆಸಿದ ವಿಲ್ ನ ದಾಖಲೆಗಳನ್ನು 78 ವರ್ಷದ ಅಜ್ಜಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಹಸ್ತಾಂತರಿಸಿದ್ದಾರೆ.

ವೃದ್ಧೆ ಪುಷ್ಪಾ ಮುಂಜಿಯಾಲ್ ಅವರ ಬಳಿ ₹ 50 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಮತ್ತು ಸುಮಾರು 10 ಪವನ ಬಂಗಾರವಿದೆ. ಇದೀಗ ತನ್ನ ಸಂಪೂರ್ಣ ಆಸ್ತಿಯನ್ನು ಈ ವೃದ್ಧೆ ರಾಹುಲ್ ಗಾಂಧಿಯವರ ಹೆಸರಿಗೆ ವರ್ಗಾಯಿಸಿದ್ದಾರೆ.

ಪುಷ್ಪಾ ಮುಂಜಿಯಾಲ್ ಅವರು ತಮ್ಮ ಆಸ್ತಿಯ ದಾಖಲೆ ಪತ್ರವನ್ನು ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಪ್ರೀತಮ್ ಸಿಂಗ್ ಅವರ ನಿವಾಸದಲ್ಲಿ ವರ್ಗಾಯಿಸಿದರು. ವೃದ್ಧೆ ಪುಷ್ಪಾ ಮುಂಜಿಯಾಲ್ ಅವರು ರಾಹುಲ್ ಗಾಂಧಿ ಅವರಿಗೆ ಹಸ್ತಾಂತರಿಸಿದ ಆಸ್ತಿ ಡೆಹ್ರಾಡೂನ್‌ನ ಐಷಾರಾಮಿ ಸ್ಥಳದಲ್ಲಿದ್ದು, ಹೆಚ್ಚಿನ ಮೌಲ್ಯ ಹೊಂದಿದೆ ಎಂದು ತಿಳಿದು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Anant-Radhika Wedding: ಜುಲೈ 12ರಂದು ಮುಂಬೈಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ನಡೆಯಲಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್‌ ಕಾರ್ಪೋರೇಟ್‌ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿ ಹಸಮಣೆಗೇರಿತು.

VISTARANEWS.COM


on

Anant-Radhika Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ದಂಪತಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹಕ್ಕೆ ದಿನ ಗಣನೆ ಆರಂಭವಾಗಿದೆ. ಜುಲೈ 12ರಂದು ಮುಂಬೈಯಲ್ಲಿ ಈ ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ.

ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್‌ ಕಾರ್ಪೋರೇಟ್‌ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿ ಹಸಮಣೆಗೇರಿತು.

ಈ ಸಾಮೂಹಿಕ ವಿವಾಹದಲ್ಲಿ ವಧು-ವರರ ಕುಟುಂಬದ ಸುಮಾರು 800 ಮಂದಿ ಪಾಲ್ಗೊಂಡಿದ್ದರು. ಸ್ವತಃ ಮುಕೇಶ್‌ ಅಂಬಾನಿ, ನೀತಾ ಅಂಬಾನಿ, ಆಕಾಶ್‌ ಅಂಬಾನಿ, ಶ್ಲೋಕ ಮೆಹ್ತಾ, ಇಶಾ ಅಂಬಾನಿ, ಆನಂದ್‌ ಪಿರಮಾಲ್‌ ಆಗಮಿಸಿ ನೂತನ ವಧು-ವರರನ್ನು ಹಾರೈಸಿದರು.

ಉಡುಗೊರೆ

ಪ್ರತಿ ಜೋಡಿಗೆ ಚಿನ್ನದ ಉಂಗುರ, ಮಂಗಳ ಸೂತ್ರ, ಮೂಗುತ್ತಿ ಉಡುಗೊರೆಯಾಗಿ ನೀಡಲಾಯಿತು. ಜತೆಗೆ ಬೆಳ್ಳಿಯ ಆಭರಗಳನ್ನೂ ನೀಡಲಾಗಿದೆ. ಜತೆಗೆ ಸ್ತ್ರೀಧನವಾಗಿ ಪ್ರತಿ ವಧುವಿಗೆ 1.01 ಲಕ್ಷ ರೂ. ಚೆಕ್‌ ಅನ್ನು ಅಂಬಾನಿ ಕುಟುಂಬಸ್ಥರು ವಿತರಿಸಿದ್ದಾರೆ. ಮಾತ್ರವಲ್ಲ ಪ್ರತಿ ಜೋಡಿಗೆ ಒಂದು ವರ್ಷಕ್ಕೆ ಅಗತ್ಯವಾದ ದಿನಸಿ ಸಾಮಗ್ರಿಗಳನ್ನೂ ವಿತರಿಸಲಾಗಿದೆ. ಇದು ಪಾತ್ರೆ ಪರಿಕರಗಳು, ಗ್ಯಾಸ್‌ ಸ್ಟವ್‌, ಮಿಕ್ಸಿ, ಫ್ಯಾನ್‌, ಹಾಸಿಗೆ ಮತ್ತು ತಲೆ ದಿಂಬುಗಳನ್ನು ಒಳಗೊಂಡಿದೆ. ಅದ್ಧೂರಿ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ವೇಳೆ ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಅತಿಥಿಗಳು ಮತ್ತು ಅಂಬಾನಿ ಕುಟುಂಬದ ಸದಸ್ಯರು ವೀಕ್ಷಿಸಿದರು.

ʼʼಜನ ಸೇವೆಯೇ ಜನಾರ್ದನ ಸೇವೆ ಎಂದು ಪರಿಗಣಿಸುವ ಅಂಬಾನಿ ಕುಟುಂಬ ಪ್ರತಿ ಶುಭ ಸಂದರ್ಭದಲ್ಲಿ ಸಮಾಜಕ್ಕೆ ನೆರವಾಗುವ ಉದ್ದೇಶದಿಂದ ಇಂತ ಜನ ಕಲ್ಯಾಣ ಕಾರ್ಯಕ್ರಮಗಳು ಆಯೋಜಿಸುತ್ತದೆʼʼ ಎಂದು ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

ಜುಲೈ 12ರಂದು ಮದುವೆ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಜುಲೈ 14ರವರೆಗೆ ಶುಭ ವಿವಾಹ, ಶುಭ ಆಶೀರ್ವಾದ ಮತ್ತು ಮಂಗಳ ಉತ್ಸವ ಎನ್ನುವ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಕೆಲವು ದಿನಗಳ ಹಿಂದೆ ಮೂರು ದಿನಗಳ ಅದ್ದೂರಿ ಮದುವೆ ಪೂರ್ವ ಸಮಾರಂಭ ನಡೆದಿತ್ತು. ದೇಶ-ವಿದೇಶಗಳ ವಿವಿಧ ಕ್ಷೇತ್ರಗಳ ಗಣ್ಯರು ಇದರಲ್ಲಿ ಪಾಲ್ಗೊಂಡಿದ್ದರು.

Continue Reading

ಕ್ರೀಡೆ

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Medal Biting: ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ಪದಕಗಳನ್ನು ಕಚ್ಚಿ (Medal Biteing) ಫೋಟೋಗೆ ಪೋಸ್ ಕೊಡುತ್ತಾರೆ. ಇದು ಯಾಕಾಗಿ? ಪದಕದ ಶುದ್ಧತೆಯನ್ನು ಪರಿಶೀಲಿಸಲೇ ಅಥವಾ ಇದೊಂದು ಸಂಪ್ರದಾಯವೇ? ಇದು ಯಾವಾಗದಿಂದ ಆಚರಣೆಯಲ್ಲಿದೆ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Medal Biteing
Koo

ಬೆಂಗಳೂರು: ಒಲಂಪಿಕ್ಸ್‌ನಲ್ಲಿ (Olympic) ಪದಕ ವಿಜೇತ ( winners ) ಕ್ರೀಡಾಪಟುಗಳು ಪದಕವನ್ನು ಕಚ್ಚಿ (Medal Biting) ಫೋಟೋಗೆ ಪೋಸ್ ಕೊಡುವುದನ್ನು ನೋಡಿರುತ್ತೇವೆ. ಇವರು ಯಾಕೆ ಹೀಗೆ ಮಾಡುತ್ತಾರೆ ಎನ್ನುವ ಪ್ರಶ್ನೆಯಂತೂ ಒಂದಲ್ಲಾ ಒಂದು ಬಾರಿ ನಮ್ಮ ಮನದಲ್ಲಿ ಮೂಡಿರುತ್ತದೆ. ಒಲಿಂಪಿಕ್ ಪದಕ ವಿಜೇತರು ಪದಕ ಕಚ್ಚಲು ಕಾರಣವಿದೆ ಮಾತ್ರವಲ್ಲ ಇದಕ್ಕೆ ದೊಡ್ಡ ಇತಿಹಾಸವೇ ಇದೆ.

ಒಲಿಂಪಿಕ್ಸ್ ಪದಕ ವಿಜೇತ ಗಣ್ಯ ಕ್ರೀಡಾಪಟುಗಳು ವೇದಿಕೆಯ ಮೇಲೆ ನಿಂತು ತಮ್ಮ ಪದಕಗಳನ್ನು ಕಚ್ಚುವುದು ಒಲಿಂಪಿಕ್ಸ್‌ನಲ್ಲಿ ಚಿರಪರಿಚಿತ ದೃಶ್ಯವಾಗಿದೆ. ಮೈಕೆಲ್ ಫೆಲ್ಪ್ಸ್, ಉಸೇನ್ ಬೋಲ್ಟ್ ಮತ್ತು ಸಿಮೋನ್ ಬೈಲ್ಸ್ ಅವರ ಇಂತಹ ಚಿತ್ರಗಳು ಇಂದಿಗೂ ಬಹುತೇಕ ಮಂದಿಯ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಒಲಿಂಪಿಯನ್‌ಗಳು ಹೀಗೆ ಪದಕಗಳನ್ನು ಏಕೆ ಕಚ್ಚುತ್ತಾರೆ, ಇದರ ಹಿಂದಿರುವ ಕಾರಣ ಏನು ಗೊತ್ತೇ?

ಶುದ್ಧತೆ ಪರಿಶೀಲನೆ?

ಒಲಿಂಪಿಕ್ಸ್ ನ ಆರಂಭಿಕ ದಿನಗಳು. ಬೆಲೆಬಾಳುವ ಚಿನ್ನವನ್ನು ಕರೆನ್ಸಿಯ ರೂಪದಲ್ಲಿ ಬಳಸಲು ಪ್ರಾರಂಭಿಸಲಾಯಿತು. ಚಿನ್ನದ ಪರಿಶುದ್ಧತೆಯನ್ನು ಪರಿಶೀಲಿಸಲು ವ್ಯಾಪಾರಿಗಳು ಚಿನ್ನದ ನಾಣ್ಯಗಳನ್ನು ಕಚ್ಚಿ ನೋಡುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ. ಚಿನ್ನವು ಮೃದುವಾದ ಲೋಹವಾಗಿದೆ. ಇದರ ಮೇಲೆ ಸ್ವಲ್ಪ ಒತ್ತಡ ಬಿದ್ದರೂ ಗುರುತು ಬೀಳುತ್ತದೆ. ಹೀಗಾಗಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ತಮಗೆ ಸಿಗುವ ಚಿನ್ನದ ಪದಕವನ್ನು ಪರಿಶೀಲಿಸಲು ಹೀಗೆ ಮಾಡುತ್ತಿದ್ದರು. ಕ್ರಮೇಣ ಇದೊಂದು ಅಭ್ಯಾಸದ ಭಾಗವಾಯಿತು.


ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.


ಕ್ರೀಡಾಪಟುಗಳು ಪದಕಗಳನ್ನು ಏಕೆ ಕಚ್ಚುತ್ತಾರೆ?

ಒಲಿಂಪಿಕ್ ಕ್ರೀಡಾಪಟುಗಳಿಗೆ ಪದಕಗಳನ್ನು ಕಚ್ಚಿ ಫೋಟೋಗೆ ಪೋಸ್ ಕೊಡಲು ಕ್ರೀಡಾ ಛಾಯಾಚಿತ್ರ ಗ್ರಾಹಕರು ಕೇಳುತ್ತಾರೆ. ಇದೀಗ ಗೀಳಾಗಿ ಪರಿಣಮಿಸಿದೆ ಎನ್ನುತ್ತಾರೆ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಒಲಿಂಪಿಕ್ ಇತಿಹಾಸಕಾರರ ಅಧ್ಯಕ್ಷ ಡೇವಿಡ್ ವಾಲೆಚಿನ್ಸ್ ಕಿ.

ಪದಕವನ್ನು ಕಚ್ಚುವ ಭಂಗಿಯು ಪತ್ರಿಕೆಗಳ ಮೊದಲ ಪುಟಕ್ಕೆ ಕೊಡಬಹುದಾದ ಚಿತ್ರ ಎಂದು ಅವರು ಪರಿಗಣಿಸುತ್ತಾರೆ ಹೀಗಾಗಿ ಕ್ರೀಡಾಪಟುಗಳಿಗೆ ಹಾಗೆ ಮಾಡಲು ಪತ್ರಕರ್ತರೇ ವಿನಂತಿಸುತ್ತಾರೆ. ಅವರು ಅದನ್ನು ಒಂದು ಸಾಂಪ್ರದಾಯ ಎನ್ನುವಂತೆ ನೋಡುತ್ತಾರೆ. ಅಥ್ಲೀಟ್‌ಗಳು ಇದನ್ನು ಸ್ವಂತವಾಗಿ ಮಾಡುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ವಾಲೆಚಿನ್ಸ್ ಕಿ ವಿವರಿಸಿದರು.


ಇದನ್ನೂ ಓದಿ: Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

ಹಲ್ಲು ಮುರಿದುಕೊಂಡ ಡೇವಿಡ್ ಮೊಲ್ಲರ್

2010ರ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಜರ್ಮನ್ ಲೂಗರ್ ಡೇವಿಡ್ ಮೊಲ್ಲರ್ ಅವರಿಗೆ ಈ ಭಂಗಿಯಲ್ಲಿ ಫೋಟೋಗೆ ಪೋಸ್ ಕೊಡಲು ಪತ್ರಕರ್ತರು ಕೇಳಿಕೊಂಡರು, ಆದರೆ ಇದರಿಂದ ಬಳಿಕ ಅವರು ಒಂದು ಹಲ್ಲು ಮುರಿದುಕೊಂಡಿರುವುದಾಗಿ ಹೇಳಿಕೊಂಡಿದ್ದರು.

Continue Reading

ವಾಣಿಜ್ಯ

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

Stock Market: ಭಾರತೀಯ ಷೇರು ಮಾರುಕಟ್ಟೆ ಬುಧವಾರ (ಜುಲೈ 3) ಹೊಸ ಇತಿಹಾಸ ಬರೆದಿದೆ. ವಹಿವಾಟು ಆರಂಭವಾದ ಕೂಡಲೇ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಇದೇ ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿದೆ. ಜತೆಗೆ ನಿಫ್ಟಿ ಕೂಡ 24,291.75 ಅಂಕಗಳ ಹೊಸ ಶಿಖರ ಏರಿದೆ. ಇಂದು ಸೆನ್ಸೆಕ್ಸ್ ಮೊದಲ ಬಾರಿಗೆ ಜೀವಮಾನದ ಗರಿಷ್ಠ ಪಾಯಿಂಟ್‌ 80,039 ಪಾಯಿಂಟ್‌ಗೆ ತಲುಪಿದರೆ, ನಿಫ್ಟಿ 169 ಪಾಯಿಂಟ್‌ಗಳ ಏರಿಕೆ ಕಂಡು 24,292ಕ್ಕೆ ತಲುಪಿದೆ.

VISTARANEWS.COM


on

Stock Market
Koo

ಮುಂಬೈ: ಭಾರತೀಯ ಷೇರು ಮಾರುಕಟ್ಟೆ (Stock Market) ಬುಧವಾರ (ಜುಲೈ 3) ಹೊಸ ಇತಿಹಾಸ ಬರೆದಿದೆ. ಇಂದು ವಹಿವಾಟು ಆರಂಭವಾದ ಕೂಡಲೇ ಸೆನ್ಸೆಕ್ಸ್ (Sensex) 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಇದೇ ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿದೆ. ಜತೆಗೆ ನಿಫ್ಟಿ (Nifty) ಕೂಡ 24,291.75 ಅಂಕಗಳ ಹೊಸ ಶಿಖರ ಏರಿದೆ.

ಇಂದು ಸೆನ್ಸೆಕ್ಸ್ ಮೊದಲ ಬಾರಿಗೆ ಜೀವಮಾನದ ಗರಿಷ್ಠ ಪಾಯಿಂಟ್‌ 80,039 ಪಾಯಿಂಟ್‌ಗೆ ತಲುಪಿದರೆ, ನಿಫ್ಟಿ 169 ಪಾಯಿಂಟ್‌ಗಳ ಏರಿಕೆ ಕಂಡು 24,292ಕ್ಕೆ ತಲುಪಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಸೆನ್ಸೆಕ್ಸ್‌ನಲ್ಲಿ ಗರಿಷ್ಠ ಲಾಭ ಗಳಿಸಿದ್ದು, 1,791.90 ರೂ.ಗೆ ತಲುಪಿದೆ. ಸೆನ್ಸೆಕ್ಸ್‌ನಲ್ಲಿ ಕೋಟಕ್ ಬ್ಯಾಂಕ್, ಬಜಾಜ್ ಫೈನಾನ್ಸ್, ಬಜಾಜ್ ಫಿನ್‌ಸರ್ವ್‌ ಮತ್ತು ಎಂ & ಎಂ ಲಾಭ ಗಳಿಸಿದರೆ, ಟೆಕ್ ಮಹೀಂದ್ರಾ, ಟಿಸಿಎಸ್, ಸನ್ ಫಾರ್ಮಾ, ಇನ್ಫೋಸಿಸ್ ಮತ್ತು ಭಾರ್ತಿ ಏರ್‌ಟೆಲ್‌ ನಷ್ಟ ಅನುಭವಿಸಿವೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ 52 ವಾರಗಳ ಗರಿಷ್ಠ ಬೆಲೆ

ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಆಗಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ ಸುಮಾರು 52 ವಾರಗಳ ಬಳಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಷೇರುಗಳು ಇಂದು 60ಕ್ಕೂ ಹೆಚ್ಚು ರೂ. ಅಥವಾ ಶೇ. 3ಕ್ಕೂ ಅಧಿಕ ಮಟ್ಟದಲ್ಲಿ ವಹಿವಾಟು ನಡೆಸುತ್ತಿವೆ. ʼʼಇಂದು ಮಾರುಕಟ್ಟೆ ಚಟುವಟಿಕೆಯ ಕೇಂದ್ರಬಿಂದು ಎಚ್‌ಡಿಎಫ್‌ಸಿ ಬ್ಯಾಂಕ್ ಆಗಿದ್ದು, ತನ್ನ ಮೇಲ್ಮುಖ ಚಲನೆಯನ್ನು ಮುಂದುವರಿಸಿದೆ. ಇದು ಇನ್ನೂ ಕೆಲವು ದಿನಗಳವರೆಗೆ ಮುಂದುವರಿಯುವ ಸಾಮರ್ಥ್ಯ ಹೊಂದಿದೆʼʼ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಯುಎಸ್ ಫೆಡರಲ್ ರಿಸರ್ವ್ ಅಧ್ಯಕ್ಷ ಜೆರೋಮ್ ಪೊವೆಲ್ ಅವರು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಪ್ರಗತಿ ಸಾಧಿಸುದ್ದೇವೆ ಎಂದು ಹೇಳಿಕ ನೀಡಿದ ನಂತರ ಏಷ್ಯಾ-ಪೆಸಿಫಿಕ್ ಮಾರುಕಟ್ಟೆಗಳು ಬುಧವಾರ ಬೆಳಿಗ್ಗೆ ಧನಾತ್ಮಕ ಪ್ರದರ್ಶನ ತೋರಿದವು.

ಇದನ್ನೂ ಓದಿ: ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

ಮಂಗಳವಾರ ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿತ್ತು. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿತ್ತು. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿತ್ತು. ಐಟಿ ಕಂಪನಿಗಳ ಲಾಭ ಮತ್ತು ಯುಎಸ್ ಫೆಡರಲ್ ಸೆಪ್ಟೆಂಬರ್‌ನಲ್ಲಿ ರಿಸರ್ವ್ ಬಡ್ಡಿದರ ಕಡಿತದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರುಗಳು ಈ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ.

ಹಿಂದಿನ ಸೆಷನ್‌ನಲ್ಲಿ ಶೇ. 2ರಷ್ಟು ಏರಿಕೆ ಕಂಡಿದ್ದ ಐಟಿ ಷೇರುಗಳು ಮತ್ತೆ ಶೇ. 0.7ರಷ್ಟು ಹೆಚ್ಚಳ ದಾಖಲಿಸಿದ್ದವು. ಎಲ್ಲ 13 ಪ್ರಮುಖ ವಲಯಗಳು ಲಾಭವನ್ನು ಕಂಡವು. ಅದರಲ್ಲಿಯೂ ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳು ಕ್ರಮವಾಗಿ ಶೇ. 0.4 ಮತ್ತು ಶೇ. 0.2 ಹೆಚ್ಚಳ ಕಂಡವು.

Continue Reading

ದೇಶ

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Nitin Gadkari: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Nitin Gadkari
Koo

ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼಪರಿಸರ ಮಾಲಿನ್ಯ ಎನ್ನುವುದು ಸದ್ಯ ದೇಶ, ಜಗತ್ತು ಎದುರಿಸುವ ಬಹುದೊಡ್ಡ ಸಮಸ್ಯೆ. ಹೀಗಾಗಿ ಸರ್ಕಾರ ಪರಿಸರಕ್ಕೆ ಹಾನಿ ಉಂಟು ಮಾಡದ ಪರ್ಯಾಯ ವ್ಯವಸ್ಥೆಗಳಿಗೆ ಒತ್ತು ನೀಡಲಿದೆ. ಅದರ ಭಾಗವಾಗಿ ಸಾರ್ವಜನಿಕ ಸಾರಿಗೆ ವಿಭಾಗದಲ್ಲಿಯೂ ಅಮೂಲಾಗ್ರ ಬದಲಾವಣೆ ಜಾರಿಗೆ ತರಲಾಗುವುದುʼʼ ಎಂದು ಹೇಳಿದ್ದಾರೆ.

ಕನಸಿನ ಯೋಜನೆ

ಈ ವೇಳೆ ಅವರು ತಮ್ಮ ಕನಸಿನ 132 ಸೀಟುಗಳ ಬಸ್‌ನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼ132 ಆಸನಗಳ ಬಸ್ ಅನ್ನು‌ ಪಚಯಿಸಲು ಮುಂದಾಗಿದ್ದೇವೆ. ಇದರ ಪ್ರಾಯೋಗಿಕ ಸಂಚಾರ ನಾಗ್ಪುರದಲ್ಲಿ ನಡೆಯಲಿದೆ. ಈ ಬಸ್‌ ವಿಮಾನದಂತಹ ಆಸನ ಮತ್ತು ಬಸ್ ಹೋಸ್ಟೆಸ್ ಅನ್ನು ಒಳಗೊಂಡಿದೆ. ಸಾಮಾನ್ಯ ಡೀಸೆಲ್ ಬಸ್‌ಗಳಿಗಿಂತ ಅಗ್ಗವಾಗಿರಲಿದೆ. ಮಾಲಿನ್ಯರಹಿತ ಶಕ್ತಿಯ ಮೂಲಗಳಲ್ಲಿ ಚಲಿಸಲಿದೆʼʼ ಎಂದು ವಿವರಿಸಿದ್ದಾರೆ. ʼʼಭಾರತವನ್ನು ಇಂಧನದ ಆಮದುದಾರ ದೇಶವನ್ನಾಗಿಸುವ ಬದಲು ಬದಲು ರಫ್ತುದಾರ ದೇಶವನ್ನಾಗಿಸುವುದೇ ನಮ್ಮ ಸರ್ಕಾರದ ಗುರಿʼʼ ಎಂದು ಅವರು ತಿಳಿಸಿದ್ದಾರೆ.

ಪರಿಸರ ಮಾಲಿನ್ಯ ಪ್ರಮುಖ ಸಮಸ್ಯೆ

ʼʼನಾವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಪರಿಸರ ಮಾಲಿನ್ಯ ಮುಖ್ಯವಾದುದು. ದೇಶದಲ್ಲಿ ಅದರಲ್ಲಿಯೂ ರಾಜಧಾನಿ ದೆಹಲಿಯಲ್ಲಿ ವಾಯು, ಜಲ, ಶಬ್ದ ಮಾಲಿನ್ಯ ಮಿತಿ ಮೀರಿದೆ. ಹೀಗಾಗಿ ನಾವು ಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಕಡಿಮೆ ವೆಚ್ಚದ, ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆ ಪರಿಚಯಿಸಲು ಚಿಂತನೆ ನಡೆಸಿದ್ದೇವೆ. ಅದರ ಭಾಗವಾಗಿ ಇಂಡಿಯನ್ ಆಯಿಲ್ 300 ಎಥೆನಾಲ್ ಪಂಪ್‌ಗಳನ್ನು ಸ್ಥಾಪಿಸಲಿದೆ. ಹೊಸ ಮಾದರಿಯ ವಾಹನ ನಿರ್ಮಾಣಕ್ಕೆ ತಯಾರಕರೂ ಮುಂದಾಗಿದ್ದಾರೆ. ಆದ್ದರಿಂದ 100 ರೂ. ಕೊಟ್ಟು ಒಂದು ಲೀಟರ್‌ ಪೆಟ್ರೋಲ್ ಖರೀದಿಸುವ ಬದಲು, 60 ರೂ. ಪಾವತಿಸಿ ಎಥೆನಾಲ್ ಖರೀದಿಸಬಹುದು. ಈ ಹೊಸ ಮಾದರಿಯ ವಾಹನವು ಶೇ. 60 ವಿದ್ಯುತ್ ಮತ್ತು ಶೇ. 40ರಷ್ಟು ಎಥೆನಾಲ್‌ನಲ್ಲಿ ಚಲಿಸಲಿದೆ. ಇದು ಮಾಲಿನ್ಯವನ್ನು ಸಹ ಕಡಿಮೆ ಮಾಡುತ್ತದೆ” ಎಂದು ಸಚಿವರು ಹೇಳಿದ್ದಾರೆ.

“ನಾವು ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ನಾಗ್ಪುರದಲ್ಲಿ ಪ್ರಾಯೋಗಿಕ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಜೆಕ್ ಗಣರಾಜ್ಯದಲ್ಲಿ ಮೂರು ಬಸ್ಸುಗಳನ್ನು ಸೇರಿಸಿ ಓಡಿಸುತ್ತಾರೆ. ಅದರಂತೆ ನಮ್ಮ ಈ ಯೋಜನೆ 132 ಸೀಟುಗಳ ಬಸ್‌ ಅನ್ನು ಹೊಂದಿದೆ. ಈ ಬಸ್‌ ರಿಂಗ್ ರಸ್ತೆಯಲ್ಲಿ 49 ಕಿ.ಮೀ. ಪ್ರಯಾಣಿಸುತ್ತದೆ. ಕೇವಲ 40 ಸೆಕೆಂಡು ಚಾರ್ಜ್ ಮಾಡಿದರೆ 40 ಕಿ.ಮೀ. ದೂರ ಸಂಚರಿಸಲಿದೆʼʼ ಎಂದು ಗಡ್ಕರಿ ತಿಳಿಸಿದ್ದಾರೆ.

ಬಸ್‌ನ ವೈಶಿಷ್ಟ್ಯ

“ಬಸ್‌ನಲ್ಲಿ ಎಲ್ಲ ಸೌಲಭ್ಯಗಳನ್ನು ಅಳವಡಿಸುವಂತೆ ಸೂಚಿಸಿದ್ದೇನೆ. ಸೀಟಿನ ಮುಂದೆ ಲ್ಯಾಪ್‌ಟಾಪ್‌ ಇಡಲು ಸ್ಥಳಾವಕಾಶ, ಹವಾನಿಯಂತ್ರಣ ವ್ಯವಸ್ಥೆ, ಆರಾಮದಾಯಕ ಕುರ್ಚಿಗಾಗಿ ಬೇಡಿಕೆ ಇಟ್ಟಿದ್ದೇನೆ. ಏರ್ ಹೋಸ್ಟೆಸ್‌ಗಳಂತೆ ಪ್ರಯಾಣಿಕರಿಗೆ ಹಣ್ಣು, ಪ್ಯಾಕ್ ಮಾಡಿದ ಆಹಾರ ಮತ್ತು ಪಾನೀಯಗಳನ್ನು ನೀಡಲು ಬಸ್ ಹೋಸ್ಟೆಸ್‌ಗಳು ಇರಲಿದ್ದಾರೆ. ನನ್ನ ಲೆಕ್ಕಾಚಾರದ ಪ್ರಕಾರ ಈ ಬಸ್‌ನ ವೆಚ್ಚ ಡೀಸೆಲ್ ಬಸ್‌ಗಿಂತ ಶೇ. 30ರಷ್ಟು ಕಡಿಮೆ ಇರಲಿದೆ. ಸೌರಶಕ್ತಿಯನ್ನು ಬಳಸಿದರೆ, ವೆಚ್ಚ ಇನ್ನೂ ಕಡಿಮೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಲಹೆಯನ್ನು ಸ್ವೀಕರಿಸಿದ್ದಕ್ಕಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಅವರಿಗೆ ಧನ್ಯವಾದ ಅರ್ಪಿಸಿದ ಗಡ್ಕರಿ, ʼʼಇಂಡಿಯನ್ ಆಯಿಲ್ ಕಸದಿಂದ 1 ಲಕ್ಷ ಲೀಟರ್ ಎಥೆನಾಲ್ ಮತ್ತು ಜೈವಿಕ ಬಿಟುಮೆನ್ ಉತ್ಪಾದಿಸುವ ಯೋಜನೆಯನ್ನು ಪ್ರಾರಂಭಿಸಿದೆ. 76,000 ಟನ್ ಜೈವಿಕ ವಾಯುಯಾನ ಇಂಧನವನ್ನು ಸಹ ಉತ್ಪಾದಿಸುತ್ತದೆʼʼ ಎಂದಿದ್ದಾರೆ.

ಇದನ್ನೂ ಓದಿ: Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

Continue Reading
Advertisement
Anant-Radhika Wedding
ದೇಶ7 mins ago

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Prajwal Devaraj cancel birthday darshan main reason
ಸಿನಿಮಾ9 mins ago

Prajwal Devaraj: ಪ್ರಜ್ವಲ್ ದೇವರಾಜ್ ಬರ್ತ್‌ಡೇ ಸೆಲೆಬ್ರೇಷನ್‌ ಕ್ಯಾನ್ಸಲ್‌; ದರ್ಶನ್‌ ಕಾರಣ?

IND vs ZIM
ಕ್ರೀಡೆ19 mins ago

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

Medal Biteing
ಕ್ರೀಡೆ26 mins ago

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Tharun Sudhir sonal monteiro marriage update
ಸ್ಯಾಂಡಲ್ ವುಡ್36 mins ago

Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

Stock Market
ವಾಣಿಜ್ಯ59 mins ago

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

bangalore murder case
ಕ್ರೈಂ1 hour ago

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Team India
ಕ್ರೀಡೆ1 hour ago

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Actor Darshan V Manohar About Darshan
ಸ್ಯಾಂಡಲ್ ವುಡ್1 hour ago

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Nitin Gadkari
ದೇಶ2 hours ago

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌