ಕಾಂಗ್ರೆಸ್‍ನವರು ನ್ಯಾಯಾಲಯದ ಪರ ಇದ್ದಾರೆಯೇ, ವಿರುದ್ಧ ಇದ್ದಾರೆಯೇ ಎಂಬುದನ್ನು ತಿಳಿಸಬೇಕು: ಸಿ.ಟಿ.ರವಿ - Vistara News

ಕರ್ನಾಟಕ

ಕಾಂಗ್ರೆಸ್‍ನವರು ನ್ಯಾಯಾಲಯದ ಪರ ಇದ್ದಾರೆಯೇ, ವಿರುದ್ಧ ಇದ್ದಾರೆಯೇ ಎಂಬುದನ್ನು ತಿಳಿಸಬೇಕು: ಸಿ.ಟಿ.ರವಿ

ಬಿಜೆಪಿ ಕೋಮುವಾದಕ್ಕೆ ಕುಮ್ಮಕ್ಕು ನೀಡಿದೆ ಎಂಬ ಸಿದ್ದರಾಮಯ್ಯ ಅವರ ಆರೋಪ ಒಪ್ಪಲು ಆಗುವುದಿಲ್ಲ. ಕೋಮು ಭಾವನೆಗೆ ಕುಮ್ಮಕ್ಕು ನೀಡುವ ಅವಶ್ಯಕತೆ ನಮಗೆ ಇಲ್ಲ.

VISTARANEWS.COM


on

ct ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮತಾಂಧತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿಕೊಂಡಿದೆ. ಮತಬ್ಯಾಂಕಿಗಾಗಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಾದಿ ಭಾಗ್ಯದಂಥ ಸಮಾಜ ಒಡೆಯುವ ಯೋಜನೆಯನ್ನು ನರೇಂದ್ರ ಮೋದಿ ಅವರಾಗಲೀ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಾಗಲೀ ಕೊಟ್ಟದ್ದಲ್ಲ. ಅದನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಬುಧವಾರ ತಿಳಿಸಿದರು.
ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದ ನಂತರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ವಿಪಕ್ಷಗಳಿಗೆ ಟೀಕೆ ಮಾಡಲೇಬೇಕು ಎಂಬ ಧೋರಣೆ ಇದೆ. ಮೆಚ್ಚುವ ಔದಾರ್ಯ ಅವರಲ್ಲಿಲ್ಲ. ಸಮವಸ್ತ್ರ ವಿರುದ್ಧ ಹಿಜಾಬ್ ವಿಷಯವನ್ನು ಎತ್ತಿಕೊಂಡು ಬಂದವರಿಗೆ ಅವರು ಪಾಠ ಹೇಳಬೇಕಿತ್ತು. ದೇಶದ ಶಾಲಾ ಕಾಲೇಜುಗಳಲ್ಲಿ 1983ರಿಂದ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ. ಇದನ್ನು ಬಿಜೆಪಿ ಕಡ್ಡಾಯಗೊಳಿಸಿದ್ದಲ್ಲ. ಹಿಜಾಬ್ ವರ್ಸಸ್ ಸಮವಸ್ತ್ರ ವಿಷಯ ಬಂದಾಗ ಸಮವಸ್ತ್ರ ಪರ ನಿಲ್ಲುತ್ತಾರೋ ಹಿಜಾಬ್ ಪರ ನಿಲ್ಲುತ್ತಾರೋ ಎಂದು ಅವರು ಮೊದಲು ಸ್ಪಷ್ಟಪಡಿಸಲಿ. ನಾವಂತೂ ಯುನಿಫಾರ್ಮ್ ಪರ ನಿಂತಿದ್ದೇವೆ ಎಂದರು.

ಹೆಚ್ಚಿನ ಓದು: ಮುಸ್ಲಿಮರು ಕತ್ತರಿಸಿದ ಮಾಂಸವನ್ನೇ ನಾವು ಸೇವಿಸೋದು: ಸಿದ್ದರಾಮಯ್ಯ

ಬಿಜೆಪಿ ಕೋಮುವಾದಕ್ಕೆ ಕುಮ್ಮಕ್ಕು ನೀಡಿದೆ ಎಂಬ ಸಿದ್ದರಾಮಯ್ಯ ಅವರ ಆರೋಪ ಒಪ್ಪಲು ಆಗುವುದಿಲ್ಲ. ಕೋಮು ಭಾವನೆಗೆ ಕುಮ್ಮಕ್ಕು ನೀಡುವ ಅವಶ್ಯಕತೆ ನಮಗೆ ಇಲ್ಲ. ಹಿಜಾಬ್ ಸಂಘರ್ಷಕ್ಕೆ ಕಾನೂನಿನ ನೆರವು ಒದಗಿಸಿದವರು ಯಾರು? ಹಿಜಾಬ್ ಪರ ಎಲ್ಲ ವಕೀಲರು ಕಾಂಗ್ರೆಸ್‍ನವರೇ ಆಗಿದ್ದರು. ನಾವು ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಕಾಂಗ್ರೆಸ್ ನಿಲುವೇನು?
ಧ್ವನಿವರ್ಧಕದಲ್ಲಿ ಪ್ರಸಾರ ಎಷ್ಟು ಡೆಸಿಬಲ್ ಇರಬೇಕು ಎಂಬುದನ್ನು ಬಿಜೆಪಿ ಅಧಿಕಾರಕ್ಕೆ ಬರುವ ಮೊದಲೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಪಷ್ಟಪಡಿಸಿದೆ. ನ್ಯಾಯಾಲಯಗಳ ತೀರ್ಪುಗಳೂ ಬಂದಿವೆ. ನಮ್ಮ ಪಕ್ಷ ನ್ಯಾಯಾಲಯದ ತೀರ್ಪಿನ ಪರ ಮತ್ತು ಇಲಾಖಾ ಸುತ್ತೋಲೆ ಪರವಾಗಿದೆ. ಕಾಂಗ್ರೆಸ್‍ನವರು ತಾವು ನ್ಯಾಯಾಲಯದ ತೀರ್ಪಿನ ಪರ ಇದ್ದಾರೆಯೇ ಅಥವಾ ವಿರುದ್ಧ ಇದ್ದಾರೆಯೇ ಎಂಬುದನ್ನು ತಿಳಿಸಬೇಕು. ಮತದ ಆಧಾರದಲ್ಲಿ ನ್ಯಾಯಾಲಯದ ತೀರ್ಪನ್ನು ವಿಭಜಿಸಬೇಕೇ ಎಂಬ ಕುರಿತು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ತಮ್ಮ ನಿಲುವನ್ನು ತಿಳಿಸಲಿ ಎಂದು ಸವಾಲೆಸೆದರು. ಆಗ ಮತಾಂಧತೆಯ ಭೂತ ಯಾರನ್ನು ಹೊಕ್ಕಿದೆ ಎಂದು ಸ್ಪಷ್ಟಗೊಳ್ಳುತ್ತದೆ ಎಂದು ತಿಳಿಸಿದರು.

ಚಂದ್ರು ಹತ್ಯೆಗೆ ಖಂಡನೆ

ಕನ್ನಡ ಮಾತನಾಡಿದ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಚಂದ್ರು ಹತ್ಯೆ ಆಗಿದೆ. ಇದನ್ನು ಖಂಡಿಸುತ್ತೇವೆ. ನಾವು ಯಾವ ದೇಶದಲ್ಲಿದ್ದೇವೆ? ಎಂದು ಸಿ.ಟಿ. ರವಿ ಪ್ರಶ್ನಿಸಿದರು. ಇದರ ಹಿಂದೆ ಪ್ರಚೋದನಕಾರಿ ಅಂಶವಿದೆ. ಇವತ್ತು ಗೋರಿಪಾಳ್ಯದಲ್ಲಿ ಆಗಿರುವುದು ನಾಳೆ ಬೇರೆ ಕಡೆ ನಡೆಯಬಹುದು. ನಿನ್ನೆ ಕಾಶ್ಮೀರದಲ್ಲಿ ನಡೆದಿದ್ದು ದೇಶದ ಇತರ ಭಾಗದಲ್ಲಿ ನಡೆಯಬಹುದು. ಇದು ಅತ್ಯಂತ ಖಂಡನೀಯ. ಇದರ ಬಗ್ಗೆ ಬುದ್ಧಿಜೀವಿಗಳು ಮಾತ್ರವಲ್ಲದೆ ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಸತ್ತವರು ಹಿಂದುಗಳಾದರೆ ಸಿದ್ದರಾಮಯ್ಯ ಸಂತಾಪ ಸೂಚಿಸುವುದಿಲ್ಲ. ಅವರ ಆಷಾಡಭೂತಿತನ ಖಂಡನಾರ್ಹ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು ಗ್ರಾಮಾಂತರ

Student Death : ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ; ಕಾಲೇಜು ಕಿರುಕುಳಕ್ಕೆ ಬೇಸತ್ತಳೇ?

Self Harming : ಬೆಂಗಳೂರಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಮುಂದುವರಿದೆ. ಚಂದಾಪುರದ ಸಮೀಪ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆತ್ಮಹತ್ಯೆಗೆ (Student Death) ಕಾಲೇಜು ಆಡಳಿತ ಮಂಡಳಿಯ ಕಿರುಕುಳವೇ ಕಾರಣ ಎನ್ನಲಾಗುತ್ತಿದೆ.

VISTARANEWS.COM


on

By

Student Death
Koo

ಆನೇಕಲ್: ಎಂಜಿನಿಯರಿಂಗ್‌ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ (Student Death) ಮೃತಪಟ್ಟಿದ್ದಾಳೆ. ಕಾಲೇಜು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಸ್ಥಿತಿಯಲ್ಲಿ (Self Harming) ಶವ ಪತ್ತೆಯಾಗಿದೆ. ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತ (18) ಮೃತ ದುರ್ದೈವಿ.

ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆಯಲ್ಲಿ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದಳು. ನಿನ್ನೆ ಗುರುವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದಾಳೆ.

ಕಾಲೇಜಿನವರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಕಿರುಕುಳ ನೀಡುತ್ತಿದ್ದರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿನಿ ಸಾವು ಖಂಡಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಕ್ಷಿಸಲು ಹೋದ ವಿದ್ಯಾರ್ಥಿನಿಗೆ ಎಚ್‌ಓಡಿ ಬೈಗುಳ

ಇನ್ನೂ ಪಕ್ಕದ ರೂಮಿನ ವಿದ್ಯಾರ್ಥಿನಿ ಪ್ರಗತಿ ಎಂಬಾಕೆ ಬಾಗಿಲು ತೆರೆದು ನೋಡಿದಾಗ ಹರ್ಷಿತಾ ನೇಣಿಗೆ ಶರಣಾಗಿದ್ದು ಕಂಡಿದೆ. ಕೊಠಡಿಯ ಬಾಗಿಲು ತೆರೆದು ರಕ್ಷಣೆ ಮಾಡಲು ಪ್ರಗತಿ ಮುಂದಾಗಿದ್ದಕ್ಕೆ, ಎಚ್‌ಓಡಿ ಭಾರತಿ ಎಂಬುವವರು ಕೊಠಡಿ ಬಾಗಿಲನ್ನು ತೆರೆದಿದ್ದು ಯಾಕೆ ಎಂದು ಪ್ರಶ್ನೆ ಮಾಡಿ ಬೈದಿದ್ದಾರೆ. ರಕ್ಷಣೆ ಮಾಡಲು ಮುಂದಾಗಿದ್ದೆ ತಪ್ಪಾ ಎಂದು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟಿಸಿದ್ದಾರೆ. ಹರ್ಷಿತಾ ಮೃತಪಟ್ಟಾಗ ರಕ್ಷಣೆಗೆ ಹಾಸ್ಟೆಲ್‌ನಲ್ಲಿ ಯಾರು ಇರಲಿಲ್ಲ. ವಾರ್ಡನ್, ಆಯಾ ಯಾರು ಹಾಸ್ಟೆಲ್‌ನಲ್ಲಿ ಇರಲಿಲ್ಲ. ಹಾಸ್ಟೆಲ್ ಆಡಳಿತ ವ್ಯವಸ್ಥೆ ಸರಿಯಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದರು.

ಇದನ್ನೂ ಓದಿ: Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

ಬೆಂಗಳೂರು: ರಾಜಧಾನಿಯ (Bengaluru) ಪ್ರತಿಷ್ಠಿತ ಪಿಇಎಸ್‌ ಎಂಜಿನಿಯರಿಂಗ್‌ (PES university) ಕಾಲೇಜಿನ ವಿದ್ಯಾರ್ಥಿ ರಾಹುಲ್‌ ಆತ್ಮಹತ್ಯೆಯೊಂದಿಗೆ, ಈ ಕಾಲೇಜಿನಲ್ಲಿ ಒಂದು ವರ್ಷದ ಅಂತರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ (Student Self harming) ಮಾಡಿಕೊಂಡಂತಾಗಿದೆ. ಇವು ನಾಲ್ಕೂ ಕೂಡ ವಿಚಿತ್ರ ಸಾಮ್ಯತೆ ಹೊಂದಿವೆ. ನಾಲ್ವರೂ ಪಿಇಎಸ್‌ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಎಲ್ಲರೂ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು (Engineering Students) ಹಾಗೂ ಅಭ್ಯಾಸದಲ್ಲಿ ಟಾಪರ್‌ಗಳೇ (Toppers) ಆಗಿದ್ದಾರೆ.

ಇತ್ತ, ವಿದ್ಯಾರ್ಥಿಗಳ ಪೋಷಕರು ಕಾಲೇಜಿನ ಆಡಳಿತ ಮಂಡಳಿಯವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಒಂದು ವರ್ಷದಲ್ಲಿ 4 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಪರಿಸ್ಥಿತಿಯ ಗಂಭೀರತೆಯನ್ನು ಪೊಲೀಸರ ಹಾಗೂ ಸರ್ಕಾರದ ಗಮನಕ್ಕೆ ತರಲು ಪಿಇಎಸ್ ಯೂನಿವರ್ಸಿಟಿ ವಿರುದ್ಧ ಮೇ 18ಕ್ಕೆ ಪ್ರತಿಭಟನೆ ಪೋಷಕರಿಂದ ಫ್ರೀಡ್ಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಒಂದೇ ವರ್ಷದ ಅಂತರದಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಮೂವರೂ ಒಂದೇ ಕಟ್ಟಡದ, 6ನೇ ಅಂತಸ್ತಿನಿಂದಲೇ ಬಿದ್ದು ಮೃತಪಟ್ಟಿದ್ದಾರೆ. 2023ರ ಜುಲೈನಲ್ಲಿ ಹೊಸಕೆರೆಹಳ್ಳಿ ಪಿಇಎಸ್ ಕಾಲೇಜಿನಲ್ಲಿ ಆದಿತ್ಯ ಪ್ರಭು ಎಂಬಾತ ಜೀವಹಾನಿ ಮಾಡಿಕೊಂಡಿದ್ದ. ಇದರ ನಂತರ, ಎಲೆಕ್ಟ್ರಾನಿಕ್‌ ಸಿಟಿಯ ಪಿಇಎಸ್‌ ಯೂನಿವರ್ಸಿಟಿ ಕಟ್ಟಡದಲ್ಲಿ ದುರಂತಗಳು ಸಂಭವಿಸಿವೆ. 2023ರ ಅಕ್ಟೋಬರ್‌ನಲ್ಲಿ ‌ಸೂರ್ಯ (21), 2024ರ ಜನವರಿ 29ರಂದು ವಿಗ್ನೇಶ್ (20), ನಿನ್ನೆ ರಾಹುಲ್ (21) ಸುಸೈಡ್‌ ಮಾಡಿಕೊಂಡಿದ್ದಾರೆ. ಪೊಲೀಸ್ ಇಲಾಖೆಯಿಂದ ಇವುಗಳ ತನಿಖೆ ನಡೆಯುತ್ತಿದೆ.

ಆತ್ಮಹತ್ಯೆ ಮಾಡಿಕೊಂಡ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಟಾಪರ್ಸ್ ಆಗಿದ್ದು, ಇನ್ನಷ್ಟು ಅಂಕ ಗಳಿಸುವಂತೆ ಒತ್ತಡಕ್ಕೊಳಗಾಗಿರಬಹುದು ಎಂದು ಶಂಕಿಸಲಾಗಿದೆ. ಈ ಆತ್ಮಹತ್ಯೆ ಸರಣಿಯ ಬಗ್ಗೆ ಆಕ್ರೋಶ ಹೆಚ್ಚಾಗಿದ್ದು, ಪ್ರತಿಷ್ಠಿತ ಕಾಲೇಜಿನ ವಿರುದ್ಧ ಕೆಲ ಪೋಷಕರು ತಿರುಗಿ ಬಿದ್ದಿದ್ದಾರೆ.

ಸೋಶಿಯಲ್ ಮೀಡಿಯಾಗಳಲ್ಲಿ ಈ ಬಗ್ಗೆ ಆಕ್ರೋಶ ಕಂಡುಬಂದಿದೆ. ಈ ಕಾಲೇಜಿನಲ್ಲಿ ಏನಾಗುತ್ತಿದೆ, ಇಷ್ಟು ಆತ್ಮಹತ್ಯೆಗಳು ಸಂಭವಿಸಿದರೂ ಕಾರಣ ಯಾಕೆ ಪತ್ತೆಯಾಗುತ್ತಿಲ್ಲ, ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿರುವ ಹಲವರು, ಸೂಸೈಡ್ ಪ್ರಕರಣಗಳ ಹಿಂದಿನ ರಹಸ್ಯ ಭೇದಿಸಲು ಒತ್ತಾಯಿಸಿದ್ದಾರೆ.

ಈ ಹಿಂದೆ, ಪಿಇಎಸ್ ಯೂನಿವರ್ಸಿಟಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಯ ಕುರಿತು ಏಪ್ರಿಲ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಪತ್ರ ಬರೆದಿತ್ತು. ವಿದ್ಯಾರ್ಥಿಗಳ ಸರಣಿ ಸಾವಿನ ಬಗ್ಗೆ ತನಿಖೆ ನಡೆಸಿ, ತಡೆಗಟ್ಟಲು ಸೂಕ್ತ ಕ್ರಮವಹಿಸಲು ಕೇಂದ್ರ ಸಚಿವಾಲಯ ಸೂಚನೆ ನೀಡಿತ್ತು. 2024 ಏಪ್ರಿಲ್ 1ರಂದು ಕೇಂದ್ರ ಶಿಕ್ಷಣ ಸಚಿವಾಲಯ ಪತ್ರ ಬರೆದ ಒಂದು ತಿಂಗಳಲ್ಲೇ ಮತ್ತೊಬ್ಬ ವಿದ್ಯಾರ್ಥಿಯ ಸಾವು ಸಂಭವಿಸಿದೆ.

ಮೇ 15ರಂದು ಕರಸಾಲ ರಾಹುಲ್‌ ಎಂಬ ವಿದ್ಯಾರ್ಥಿ ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ (Electronic city) ಪಿಇಎಸ್ ಯೂನಿವರ್ಸಿಟಿಯ ಕಟ್ಟಡದಿಂದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಪರೀಕ್ಷೆಗೆ (Exam) ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈತ ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ವಿಧ್ಯಾರ್ಥಿ. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ.

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ. ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ

Vijayanagara News: ರಾಷ್ಟ್ರೀಯ ಡೆಂಗ್ಯು ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಹೊಸಪೇಟೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

VISTARANEWS.COM


on

Dengue awareness rally in Hosapete
Koo

ಹೊಸಪೇಟೆ: ರಾಷ್ಟ್ರೀಯ ಡೆಂಗ್ಯು (Dengue) ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ (Vijayanagara News) ಜರುಗಿತು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಡೆಂಗ್ಯು ಜ್ವರವನ್ನು ಜನರು ನಿರ್ಲಕ್ಷಿಸದೆ ಸೂಕ್ತವಾದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಡೆಂಗ್ಯು ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು. ಮುಂಗಾರು ಪೂರ್ವ, ಮುಂಗಾರು ಮತ್ತು ಮುಂಗಾರಿನ ನಂತರದ ಸಮಯದಲ್ಲಿ ಡೆಂಗ್ಯು ಸೊಳ್ಳೆಗಳ ಸಂತತಿಯು ತೀವ್ರ ಪ್ರಮಾಣದಲ್ಲಿದ್ದು, ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಶಂಕರನಾಯ್ಕ ಮಾತನಾಡಿ, ರೋಗಗಳು ಬಂದ ಮೇಲೆ ಚಿಕಿತ್ಸೆ ನೀಡುವ ಬದಲಿಗೆ ಬರುವ ಮುಂಚೆ ಅದರ ಮುಂಜಾಗ್ರತೆ ವಹಿಸುವುದು ಸೂಕ್ತ. ಜನರು ಮನೆಯಲ್ಲಿ ಶೇಖರಿಸಿದ ನೀರನ್ನು ಆಗಾಗ ಬದಲಾಯಿಸುತ್ತಿರಬೇಕು. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಹಾಗೂ ಡೆಂಗ್ಯು ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ ದೊಡ್ಡಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಬೆಳಗಾವಿಯ ಡಾ. ಸಿದ್ದಲಿಂಗಯ್ಯ, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ: Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

ಕರಪತ್ರ ವಿತರಣೆ

ಈಡೀಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಡೆಂಗ್ಯು ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ತಕ್ಷಣವೇ ಆಶಾ, ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎನ್ನುವ ಮಾಹಿತಿಯ ಕರಪತ್ರಗಳನ್ನು ಇದೇ ವೇಳೆ ಸಾರ್ವಜನಿಕರಿಗೆ ವಿತರಿಸಲಾಯಿತು.

Continue Reading

ಚಿನ್ನದ ದರ

Gold Rate Today: ಇಳಿಯಿತು ಚಿನ್ನದ ಬೆಲೆ; ಬಂಗಾರದ ಗ್ರಾಹಕರಿಗೆ ತುಸು ನಿಟ್ಟುಸಿರು; ದರ ಹೀಗಿದೆ

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿದೆ. ಬೆಂಗಳೂರಿನ ಇಂದಿನ ಚಿನ್ನದ ಹಾಗೂ ಬೆಳ್ಳಿಯ ದರಗಳು ಇಲ್ಲಿವೆ.

VISTARANEWS.COM


on

gold rate today adah
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹25 ಹಾಗೂ ₹27 ಇಳಿಕೆಯಾಗಿವೆ. ನಿನ್ನೆ ಚಿನ್ನದ ಬೆಲೆ ಗ್ರಾಂಗೆ 70 ರೂಪಾಯಿಗಳಷ್ಟು ಏರಿಕೆಯಾಗಿತ್ತು. ಅಕ್ಷಯ ತದಿಗೆಯಂದು ಭಾರೀ ಬೆಲೆ ಏರಿಕೆ ಆಗಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,760ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,080 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,600 ಮತ್ತು ₹6,76,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,375 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,000 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,750 ಮತ್ತು ₹7,37,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹88.50, ಎಂಟು ಗ್ರಾಂ ₹708 ಮತ್ತು 10 ಗ್ರಾಂ ₹885ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,850 ಮತ್ತು 1 ಕಿಲೋಗ್ರಾಂಗೆ ₹88,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,75073,900
ಮುಂಬಯಿ67,600 73,750
ಬೆಂಗಳೂರು67,600 73,750
ಚೆನ್ನೈ67,70073,850

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading

ಬೆಂಗಳೂರು

Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

Murder case : ಮಿಷನ್ ರಸ್ತೆಯ ಕಟ್ಟಡದ ನೆಲ ಮಹಡಿಯಲ್ಲಿ ಯುವಕನ ಶವವೊಂದು (Dead Body Found) ಪತ್ತೆಯಾಗಿತ್ತು. ಮೊದಮೊದಲು ಇದೊಂದು ಕೊಲೆ ಎಂದು ಭಾವಿಸಲಾಗಿತ್ತು. ಆದರೆ ಅಸಲಿ ಸಂಗತಿಯನ್ನು ಪೊಲೀಸರು ಹೊರಗೆಳೆದಿದ್ದಾರೆ. ಪ್ರೀತಿ ವಿಷಯಕ್ಕೆ ಬಲಿಯಾದ ಎಂದವರಿಗೆ ಯುವಕನ ಸಾವಿನ ರಹಸ್ಯವನ್ನು ಬಯಲು (Secret revealed) ಮಾಡಿದ್ದಾರೆ.

VISTARANEWS.COM


on

By

Murder case In Bengaluru
ಬಂಧಿತ ಆರೋಪಿಗಳು ಹಾಗೂ ಮೃತಪಟ್ಟಿದ್ದ ಯುವಕ ಸತ್ಯ
Koo

ಬೆಂಗಳೂರು: ಕಳೆದ ಮೇ 9 ರಂದು ಬೆಂಗಳೂರಿನ ಎಸ್‌ಆರ್‌ ನಗರ ಠಾಣಾ ವ್ಯಾಪ್ತಿಯಲ್ಲಿರುವ ಮಿಷನ್ ರೋಡ್‌ನ ಪಿ.ಸಿ.ಮೋಹನ್ ಆ್ಯಂಡ್‌ ಕೊ ಕಾಂಪ್ಲೆಕ್ಸ್‌ನ ಗ್ರೌಂಡ್ ಫ್ಲೋರ್‌ನಲ್ಲಿ ಯುವಕನೊಬ್ಬನ ಶವ (Dead Body Found) ಪತ್ತೆಯಾಗಿತ್ತು. ಕೆ.ಎಸ್. ಗಾರ್ಡನ್ ನಿವಾಸಿ ಸತ್ಯ (22) ಎಂಬಾತ ಸ್ನೇಹಿತರ ಜತೆ ಹೊರಹೋದವನು (Murder Case) ಬೀದಿ ಹೆಣವಾಗಿದ್ದ. ಮೊದಮೊದಲು ಇದು ಪ್ರೀತಿ ವಿಚಾರಕ್ಕೆ ಕೊಲೆ ಆಗಿರಬಹುದೆಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಯುವಕನ ಸಾವಿನ ಸಿಕ್ರೇಟ್‌ (Secret revealed) ಅನ್ನು ಎಸ್‌.ಆರ್ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಕಳೆದ ಮೇ 9ರಂದು ರಾತ್ರಿ ಕಾಂಪ್ಲೆಕ್ಸ್‌ನ ಪಕ್ಕದಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೇಲೆ ಸತ್ಯ ತೆರಳಿದ್ದ. ಈ ವೇಳೆ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್‌ಗಳು ಸತ್ಯನನ್ನು ಕಳ್ಳ ಎಂದು ಭಾವಿಸಿ ಹಿಡಿಯಲು ಹೋಗಿದ್ದಾರೆ. ಈ ತಳ್ಳಾಟ ನೂಕಾಟದಲ್ಲಿ ಸತ್ಯ ಕಾಲು ಜಾರಿ ಕಟ್ಟಡದಿಂದ ಕೆಳಗೆ ಬಿದಿದ್ದ. ಆಗ ವಿದ್ಯುತ್ ತಂತಿ ಸ್ಪರ್ಶದಿಂದ ಮೃತ ಪಟ್ಟಿದ್ದ.

ಅನಂತರ ಸತ್ಯ ಸಾವಿನ ವಿಚಾರ ತಿಳಿದ ಸೆಕ್ಯೂರಿಟಿ ಗಾರ್ಡ್‌ ರಂಜಿತ್ ಪ್ರದಾನ್, ರಮೇಶ್ ರಾತ್ರೋರಾತ್ರಿ ಸತ್ಯನ ಮೃತದೇಹವನ್ನು ಪಕ್ಕದ ಕಟ್ಟಡಕ್ಕೆ ರವಾನಿಸಿದರು. ಮರುದಿನ ಮೇ 10ರಂದು ನೆಲಮಹಡಿಯಲ್ಲಿ ಶವ ಪತ್ತೆಯಾಗಿತ್ತು. ಆದರೆ ಪೊಲೀಸರ ತನಿಖೆ ವೇಳೆ ಸತ್ಯನ ಸಾವಿನ ಸಿಕ್ರೇಟ್ ಬಯಲಾಗಿದೆ. ಸದ್ಯ ಎಸ್‌ಆರ್ ನಗರ ಪೊಲೀಸರು ಐಪಿಸಿ 304ರ ಅಡಿ ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನೂ ಕೆಎಸ್ ಗಾರ್ಡನ್ ನಿವಾಸಿಯಾದ ಸತ್ಯ ಪ್ಲಂಬರ್ ಕೆಲಸ ಮಾಡಿಕೊಂಡಿದ್ದ. ಈ ಹಿಂದೆ ಪ್ರಕರಣವೊಂದರಲ್ಲಿ ಬಂಧಿತನಾಗಿ ಜೈಲು ಸೇರಿದ್ದ. ಅದೇ ವಿಚಾರವಾಗಿ ಸತ್ಯನ ಕೊಲೆಯಾಗಿದೆ ಎಂದು ಆರೋಪಿಸಿಸಲಾಗಿತ್ತು‌.ಆದರೆ ತನಿಖೆ ಕೈಗೊಂಡಾಗ ಅಸಲಿ ಸತ್ಯ ತಿಳಿದುಬಂದಿದೆ.

ಇದನ್ನೂ ಓದಿ: Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shah Rukh Khan and Anirudh Ravichander to team up for King
ಬಾಲಿವುಡ್7 mins ago

Shah Rukh Khan: ಶಾರುಖ್‌ ಹೊಸ ಸಿನಿಮಾಗಾಗಿ ಕೈ ಜೋಡಿಸಿದ ಅನಿರುದ್ಧ್ ರವಿಚಂದರ್!

Air India
ದೇಶ11 mins ago

Air India: ಟಗ್ ಟ್ರ್ಯಾಕ್ಟರ್‌ಗೆ 180 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಡಿಕ್ಕಿ; ತಪ್ಪಿದ ಭಾರೀ ದೊಡ್ಡ ದುರಂತ

PM Narendra Modi
ದೇಶ13 mins ago

PM Narendra Modi: “ಮೊದಲ 100 ದಿನಗಳ ಬ್ಲೂಪ್ರಿಂಟ್‌ ರೆಡಿ; ಹೆಚ್ಚುವರಿ 25 ದಿನ ಯುವಕರಿಗೆ ಮೀಸಲು”- ಪ್ರಧಾನಿ ಮೋದಿ

Student Death
ಬೆಂಗಳೂರು ಗ್ರಾಮಾಂತರ15 mins ago

Student Death : ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ; ಕಾಲೇಜು ಕಿರುಕುಳಕ್ಕೆ ಬೇಸತ್ತಳೇ?

Dengue awareness rally in Hosapete
ವಿಜಯನಗರ32 mins ago

Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ

Modi v/s Rahul
ರಾಜಕೀಯ39 mins ago

Modi v/s Rahul: ರಾಹುಲ್‌ ಗಾಂಧಿ ಆಸ್ತಿ ಪ್ರಧಾನಿ ಮೋದಿಗಿಂತ ಎಷ್ಟು ಪಟ್ಟು ಹೆಚ್ಚು ಗೊತ್ತೆ?

gold rate today adah
ಚಿನ್ನದ ದರ50 mins ago

Gold Rate Today: ಇಳಿಯಿತು ಚಿನ್ನದ ಬೆಲೆ; ಬಂಗಾರದ ಗ್ರಾಹಕರಿಗೆ ತುಸು ನಿಟ್ಟುಸಿರು; ದರ ಹೀಗಿದೆ

MDH, Everest Spices
ವಿದೇಶ56 mins ago

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

Virat Kohli
ಕ್ರೀಡೆ59 mins ago

Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

dhruva sarja support C Cinema Kanda Kanda Video Song Release
ಸ್ಯಾಂಡಲ್ ವುಡ್1 hour ago

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ23 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌