ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ A1: ಉಡುಪಿ ಠಾಣೆಯಲ್ಲಿ FIR - Vistara News

ರಾಜಕೀಯ

ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ A1: ಉಡುಪಿ ಠಾಣೆಯಲ್ಲಿ FIR

ಎರಡನೇ ಹಾಗೂ ಮೂರನೇ ಆರೋಪಿಗಳಾಗಿ ಕ್ರಮವಾಗಿ ಈಶ್ವರಪ್ಪ ಅವರ ಆಪ್ತರಾದ ಬಸವರಾಜ್‌(A2), ರಮೇಶ್‌ (A3) ಅವರನ್ನು ಹೆಸರಿಸಲಾಗಿದೆ.

VISTARANEWS.COM


on

ಈಶ್ವರಪ್ಪ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide) ಪ್ರಕರಣದ ಸಂಬಂಧ ಉಡುಪಿ ಠಾಣೆಯಲ್ಲಿ‌ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಮೊದಲ ಆರೋಪಿ (A1) ಎಂದು ಹೆಸರಿಸಲಾಗಿದೆ.

ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್‌ ಪಾಟೀಲ್‌, ತಮ್ಮ ಆತ್ಮಹತ್ಯೆಗೆ ಕೆ.ಎಸ್‌. ಈಶ್ವರಪ್ಪ ಅವರು ಕಾರಣ ಎಂದು ಅನೇಕರಿಗೆ ಸಂದೇಶ ಕಳಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಶಾಂತ್‌ ಗೌಡಪ್ಪ ಪಾಟೀಲ್‌ ಎಂಬವರು ಉಡುಪಿ ಟೌನ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಎರಡನೇ ಹಾಗೂ ಮೂರನೇ ಆರೋಪಿಗಳಾಗಿ ಕ್ರಮವಾಗಿ ಈಶ್ವರಪ್ಪ ಅವರ ಆಪ್ತರಾದ ಬಸವರಾಜ್‌(A2), ರಮೇಶ್‌ (A3) ಅವರನ್ನು ಹೆಸರಿಸಲಾಗಿದೆ. ಸುದ್ದಿಗೋಷ್ಠಿಗಳಲ್ಲಿ ಹಾಗೂ ಯಾವುದೇ ವಿವಾದಗಳ ಸಂದರ್ಭದಲ್ಲಿ ತಮ್ಮದೇ ವಿಶಿಷ್ಠ ಶೈಲಿಯಲ್ಲಿ ಮಾತಿನ ಚಟಾಕಿ ಹಾರಿಸುವಲ್ಲಿ ಈಶ್ವರಪ್ಪ ಸಿದ್ಧಹಸ್ತ. ಇದೇ ವಿಚಾರಕ್ಕೆ ಅನೇಕ ಬಾರಿ ವಿವಾದಕ್ಕೂ ಈಡಾಗಿದ್ದ ಹಿರಿಯ ಸಚಿವ ಈಗ ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಎಫ್‌ಐಆರ್‌ ಸಾಂರಾಂಶ ಹೀಗಿದೆ
  • 2020-21 ನೇ ಸಾಲಿನಲ್ಲಿ ಹಿಂಡಲಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ ಶ್ರೀ ಲಕ್ಷ್ಮೀ ದೇವಿ ಜಾತ್ರೆ ಜರುಗುವ ಹಿನ್ನೆಲೆಯಲ್ಲಿ ಊರಿನ ಪ್ರಮುಖರು ಮತ್ತು ಸ್ವಾಮಿಗಳು ಸೇರಿಕೊಂಡು ಗ್ರಾಮೀಣ ಅಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪನವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು.
  • ಜಾತ್ರೆಯ ವಿಷಯ ತಿಳಿಸಿ ಹಿಂಡಲಗಾ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದ ರಸ್ತೆ ಕಾಮಗಾರಿ, ಚರಂಡಿ ಕಾಮಗಾರಿ ಕಾಮಗಾರಿಗಳನ್ನು ಮಾಡಿಕೊಡಬೇಕೆಂದು ಸಚಿವರಲ್ಲಿ ವಿನಂತಿಸಿಕೊಂಡರು.
  • ನೀವು ನಮ್ಮ ಕಾರ್ಯಕರ್ತರು, ನೀವು ಕೆಲಸ ಶುರು ಮಾಡಿ, ಕಾಮಗಾರಿಗಳಿಗೆ ಎಷ್ಟೇ ಹಣ ಆದರೂ ಪರವಾಗಿಲ್ಲ ಎಂದು ಈಶ್ವರಪ್ಪನವರು ತಿಳಿಸಿದ್ದರು.
  • ಊರಿಗೆ ಹಿಂದಿರುಗಿದ ಪ್ರಮುಖರು ಹಾಗೂ ಹಿಂಡಲಗಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಕಾಮಗಾರಿ ಆರಂಭಿಸಲು ಸಂತೋಷ ಕೆ ಪಾಟೀಲ್ ಅವರಿಗೆ ತಿಳಿಸಿದರು.
  • ಸಂತೋಷ ಮತ್ತು ಉಳಿದ ಗುತ್ತಿಗೆದಾರರು ಸೇರಿಕೊಂಡು ಹಿಂಡಲಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ₹4 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಯನ್ನು ಸ್ವಂತ ಹಣದಿಂದ ಹಾಗೂ ಇತರರ ಸಹಾಯದಿಂದ ಸರ್ಕಾರದ ಹಣವಿಲ್ಲದೇ ಪೂರ್ಣಗೊಳಿಸಿದರು.
  • ಕಾಮಗಾರಿಗಳ ಬಿಲ್ ಪಾವತಿಗಾಗಿ ಸಚಿವರಾದ ಕೆ.ಎಸ್ ಈಶ್ವರಪ್ಪ ಮತ್ತು ಅವರ ಆಪ್ತರಾದ ಬಸವರಾಜ್ ಮತ್ತು ರಮೇಶ್ ಅವರನ್ನು ಹಲವು ಸಾರಿ ಭೇಟಿಯಾದರು.
  • ಆದರೆ ಹಾಗೆ ಕೆಲಸ ಆಗುವುದಿಲ್ಲ, 40% ಪರ್ಸೆಂಟ್ ಕಮೀಷನ್ ನೀಡಿದರೆ ಬಿಲ್ ಪಾಸ್ ಮಾಡಿಸುವುದಾಗಿ ಹೇಳಿದ್ದರು. ಈ ಕಮೀಷನ್ ವಿಷಯ ಕುರಿತು ಬೆಳಗಾವಿ ಗುತ್ತಿಗೆದಾರರ ಸಂಘದವರು ಸರಕಾರಕ್ಕೆ ದೂರು ಸಲ್ಲಿಸಿದರು.
  • ಗುತ್ತಿಗೆದಾರರಾದ ಸಂತೋಷ ಅವರು ಮಾದ್ಯಮಗಳ ಮುಖೇನ ಮಾರ್ಚ್‌ನಲ್ಲಿ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ಆರೋಪಿಸಿದ್ದರು.
  • ಇದಕ್ಕೆ ಮುಂಚಿತವಾಗಿ ಸಂತೋಷ ಅವರು ತಮ್ಮ ಪತ್ನಿ ಜಯಾ ಅವರೊಂದಿಗೆ ಈ ವಿಷಯ ತಿಳಿಸಿದ್ದರು. ಪದೇ ಪದೇ ಏಕೆ ಬೆಂಗಳೂರಿಗೆ ಹೋಗುವುದು ಎಂದು ಪ್ರಶ್ನಿಸಿದಾಗ ಅವರು ಈ ಕಾಮಗಾರಿಗಳ ಬಿಲ್‌ ವಿಷಯವಾಗಿ ಕೆ.ಎಸ್ ಈಶ್ವರಪ್ಪ ಅವರನ್ನು ಭೇಟಿಯಾಗಿ ಬಿಲ್ ಪಾಸ್ ಮಾಡಿಸಲು ಹೋಗುತ್ತಿದ್ದೇನೆಂದು ತಿಳಿಸುತ್ತಿದ್ದರು.
  • ಇದೇ ಬಿಲ್ ಪಾಸ್ ಆಗದ ಕಾರಣ ಈಶ್ವರಪ್ಪ ಮತ್ತು ಅವರ ಆಪ್ತರಾದ ರಮೇಶ್ ಮತ್ತು ಬಸವರಾಜ್ ರವರ ವಿರುದ್ಧ ವಿಡಿಯೋ ಫೂಟೇಜ್ ಮುಖೇನ ₹4 ಕೋಟಿ ಕಾಮಗಾರಿ ಬಿಲ್ ಪಾಸ್ ಮಾಡದ ಕಾರಣ ಮುಂದೆ ಆಗುವ ಅನಾಹುತಕ್ಕೆ ನೀವೇ ಕಾರಣರಾಗಿರುತ್ತೀರಿ ಎಂದು ಮಾದ್ಯಮಗಳ ಮುಖೇನ ವಿಷಯ ಪ್ರಸ್ತಾಪಿಸಿದರು.
  • ಸಂತೋಷ ಅವರು ಅನೇಕ ರೀತಿಯ ರಸ್ತೆ ಕಾಮಗಾರಿಗಳಿಗೆ ಹಣ ಹಾಕಿದ್ದರಿಂದ ಅಡಚಣೆಯಾಗಿ ₹40 ಪರ್ಸೆಂಟ್ ಕಮಿಷನ್ ವಿಷಯದ ಕುರಿತು ರಾಜ್ಯ ಬಿ.ಜೆ.ಪಿ ಉಸ್ತುವಾರಿಯಾದ ಶ್ರೀ ಅರುಣ ಸಿಂಗ್ ಅವರಿಗೆ ಹಾಗೂ ದೆಹಲಿ ಮಟ್ಟದ ಬಿ.ಜೆ.ಪಿ ವರಿಷ್ಟರಿಗೆ, ಪ್ರಧಾನ ಮಂತ್ರಿಗಳ ಕಛೇರಿಗೆ ಭೇಟಿ ನೀಡಿ ಕೆ.ಎಸ್ ಈಶ್ವರಪ್ಪ ಅವರ ವಿರುದ್ಧ ತಿಳಿಸಿದ್ದರು.
  • ಆದರೂ ಬಿಲ್ ಪಾಸ್ ಆಗಿರುವುದಿಲ್ಲ. ಅದೇ ವಿಷಯದಲ್ಲಿ ಸಂತೋಷ ಅವರು ಆರೋಪಿಗಳಾದ ಕೆ.ಎಸ್ ಈಶ್ವರಪ್ಪ ಹಾಗೂ ಅವರ ಆಪ್ತರಾದ ರಮೇಶ್ ಮತ್ತು ಬಸವರಾಜ್ ಹಾಗೂ ಇತರರಿಂದ ಮನನೊಂದು ತನ್ನ ಮೊಬೈಲಿನಿಂದ ವಾಟ್ಸ್ ಅಫ್ ಮುಖೇನ ಡೆತ್ ನೋಟ್ ಸಂದೇಶ್ ಮಾದ್ಯಮಗಳಿಗೆ ಮತ್ತು ಆಪ್ತರಿಗೆ ಕಳುಹಿಸಿದ್ದರು
  • ದಿನಾಂಕ: 11/04/2022ರ ರಾತ್ರಿ ಸುಮಾರು 11-00 ಗಂಟೆಯಿಂದ ದಿನಾಂಕ: 12/04/2022 ರ ಬೆಳಿಗ್ಗೆ 10 ಗಂಟೆಯ ಮಧ್ಯಾವಧಿಯಲ್ಲಿ ಉಡುಪಿಯ ಶಾಂಭವಿ ಲಾಡ್ಜ್ ನ ರೂಂ ನಂಬರ್‌ 207ರಲ್ಲಿ ಅನುಮಾನಾಸ್ಪದ ಸಾವು ಆಗಿದೆ
  • ಈ ಸಾವಿಗೆ ಕೆ.ಎಸ್ ಈಶ್ವರಪ್ಪ, ಬಸವರಾಜ್, ರಮೇಶ್ ಹಾಗೂ ಇತರರು ಕಾರಣರಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವರೇ ಎಂಬಿತ್ಯಾದಿ ಆಗಿರುತ್ತದೆ.

ಹೆಚ್ಚಿನ ಓದಿಗಾಗಿ: ಕೊಲೆ ಕೇಸ್‌ ಹಿಂಪಡೆದಾಗ ಕರ್ತವ್ಯಪ್ರಜ್ಞೆ ಎಲ್ಲಿತ್ತು?: HDK, ಸಿದ್ದುಗೆ ಬೊಮ್ಮಾಯಿ ತಿರುಗೇಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Dingaleshwar Swamiji: ನವಲಗುಂದದಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿದ್ದರಿಂದ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Dingaleshwar Swamiji
Koo

ಧಾರವಾಡ: ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ ನೀಡಿದ ಆರೋಪದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನವಲಗುಂದ ಮಾರ್ಕೆಟ್‌ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶ ಚುನಾವಣೆ ಭಾಷಣದ ವೇಳೆ ಸ್ವಾಮೀಜಿ ಎಡವಟ್ಟು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ವಾಮೀಜಿ, ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಭಾಷಣ ಮಾಡಿದ್ದರು. ಹೀಗಾಗಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡಿದ್ದಾರೆ ಎಂಬ ಆರೋಪದಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Jai Shri Ram Slogan

ರಾಯಚೂರು: ಜೈ ಶ್ರೀರಾಮ್ ಘೋಷಣೆ (Jai Shri Ram Slogan) ಕೂಗಿದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡನನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆ ಚುನಾವಣೆ ಹೊತ್ತಿನಲ್ಲಿ ಪಕ್ಷ ಮತ್ತು ನಾಯಕರಿಗೆ ಮುಜುಗಗರವಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದರಿಂದ ನಿಮ್ಮನ್ನು ಕಾಂಗ್ರೆಸ್ ‌ಪಕ್ಷದಿಂದ ಅಮಾನತು ಮಾಡಲಾಗಿದೆ. ತಾವು 7 ದಿನಗಳೊಳಗಾಗಿ ಈ ಹೇಳಿಕೆಗಳ ವಿವರಣೆ ನೀಡಬೇಕು ಎಂದು ಕೈ ಮುಖಂಡ ಬಷೀರುದ್ದೀನ್‌ ಅವರಿಗೆ ಅಮಾನತು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದರು. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದರು. ಹೀಗಾಗಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗಿತ್ತು. ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕಾಂಗ್ರೆಸ್‌ ಮುಖಂಡನನ್ನು ಅಮಾತುಗೊಳಿಸಲಾಗಿದೆ.

Continue Reading

ಕರ್ನಾಟಕ

Jai Shri Ram Slogan: ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Jai Shri Ram Slogan: ‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆಯೂ ವಿವಾದಿಕ ಹೇಳಿಕೆ ನೀಡಿದ್ದರಿಂದ ರಾಯಚೂರು ಕಾಂಗ್ರೆಸ್‌ ಮುಖಂಡನನ್ನು ಅಮಾನತು ಮಾಡಲಾಗಿದೆ.

VISTARANEWS.COM


on

Jai Shri Ram Slogan
Koo

ರಾಯಚೂರು: ಜೈ ಶ್ರೀರಾಮ್ ಘೋಷಣೆ (Jai Shri Ram Slogan) ಕೂಗಿದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡನನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆ ಚುನಾವಣೆ ಹೊತ್ತಿನಲ್ಲಿ ಪಕ್ಷ ಮತ್ತು ನಾಯಕರಿಗೆ ಮುಜುಗಗರವಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದರಿಂದ ನಿಮ್ಮನ್ನು ಕಾಂಗ್ರೆಸ್ ‌ಪಕ್ಷದಿಂದ ಅಮಾನತು ಮಾಡಲಾಗಿದೆ. ತಾವು 7 ದಿನಗಳೊಳಗಾಗಿ ಈ ಹೇಳಿಕೆಗಳ ವಿವರಣೆ ನೀಡಬೇಕು ಎಂದು ಕೈ ಮುಖಂಡ ಬಷೀರುದ್ದೀನ್‌ ಅವರಿಗೆ ಅಮಾನತು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದರು. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದರು. ಹೀಗಾಗಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗಿತ್ತು. ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕಾಂಗ್ರೆಸ್‌ ಮುಖಂಡನನ್ನು ಅಮಾತುಗೊಳಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

cm siddaramaiah

ಬೆಂಗಳೂರು: ಸೋಶಿಯಲ್‌ ಮೀಡಿಯಾದಲ್ಲಿ (Social media) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಮಾನಹಾನಿ (derogatory) ಮಾಡುವಂತಹ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ʼಪೋಸ್ಟ್‌ಕಾರ್ಡ್‌ʼ (Postcard) ಮುಖ್ಯಸ್ಥ ಮಹೇಶ್‌ ವಿಕ್ರಮ್‌ ಹೆಗ್ಡೆ (Mahesh Vikram Hegde) ಮತ್ತು ವಸಂತ್‌ ಗಿಳಿಯಾರ್‌ (Vasant Giliyar) ಅವರನ್ನು ಸದ್ಯಕ್ಕೆ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್‌ (Highcourt) ನಿರ್ದೇಶಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್‌ ವಿಕ್ರಮ್‌ ಹೆಗ್ಡೆ ಮತ್ತು ವಸಂತ್‌ ಗಿಳಿಯಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮೇ 9ಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೆ ಅರ್ಜಿದಾರರನ್ನು ಬಂಧಿಸಬಾರದು ಎಂದು ಪೊಲೀಸರಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಿತು.

ಮಹೇಶ್‌ ವಿಕ್ರಮ್‌ ಹೆಗ್ಡೆ ಅವರು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಟ್ವಿಟರ್‌ ಮತ್ತು ವಾಟ್ಸಾಪ್‌ಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಜನರನ್ನು ಪ್ರಚೋದಿಸುವ ಉದ್ದೇಶದಿಂದಲೇ ಈ ಕೃತ್ಯ ಎಸಗಿದ್ದಾರೆ. ಸಿದ್ದರಾಮಯ್ಯ ಅವರ ಫೋಟೊ ದುರ್ಬಳಕೆ ಮಾಡಿಕೊಂಡಿದ್ದಾರೆ. ಜತೆಗೆ, ಪೋಟೋವನ್ನು ಕೆಟ್ಟ ಮಾಹಿತಿಯೊಂದಿಗೆ ಬಳಕೆ ಮಾಡುವ ಮೂಲಕ ಸಿಎಂ ವರ್ಚಸ್ಸಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರೀಶ್‌ ನಾಗರಾಜು 2024ರ ಏ.9ರಂದು ಅರ್ಜಿದಾರರು ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಬೆಂಗಳೂರಿನ ಬಸವೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ಅದನ್ನು ಆಧರಿಸಿ ಅರ್ಜಿದಾರರ ವಿರುದ್ಧ ಪಶ್ವಿಮ ವಿಭಾಗದ ಸಿಇಎನ್‌ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

Continue Reading

ಬಳ್ಳಾರಿ

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಮೇ 9ಕ್ಕೆ ಅಧಿಸೂಚನೆ ಪ್ರಕಟ

MLC Election: ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಈ ಬಗ್ಗೆ ಮೇ 09 ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 16 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮೇ 17 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ಜರುಗಲಿದೆ. ಜೂನ್ 6 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 12 ರಂದು ಚುನಾವಣೆ ಪ್ರಕ್ರಿಯಗಳು ಪೂರ್ಣಗೊಳ್ಳಲಿವೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

VISTARANEWS.COM


on

Ballari DC Prashanth kumar Mishra pressmeet about MLC election
Koo

ಬಳ್ಳಾರಿ: ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಈ ಬಗ್ಗೆ ಮೇ 09 ರಂದು ಅಧಿಸೂಚನೆ ಪ್ರಕಟವಾಗಲಿದೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ (MLC Election) ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆ ಸಂಬಂಧ ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 16 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮೇ 17 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ಜರುಗಲಿದೆ. ಜೂನ್ 6 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 12 ರಂದು ಚುನಾವಣೆ ಪ್ರಕ್ರಿಯಗಳು ಪೂರ್ಣಗೊಳ್ಳಲಿವೆ.

ಇದನ್ನೂ ಓದಿ: Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಈ ಚುನಾವಣೆ ಸಂಬಂಧ ಈಗಾಗಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಈಶಾನ್ಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಆಯ್ಕೆಯಾಗಿ ನಡೆಯುವ ಈ ಚುನಾವಣೆಗೆ ಕಲಬುರ್ಗಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದು, ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆ ಎಂದರು.

22,156 ಮತದಾರರು, 16 ಮತಗಟ್ಟೆಗಳು

ಚುನಾವಣಾ ಆಯೋಗದ ನಿರ್ದೇಶನದಂತೆ, ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಕಳೆದ 2023 ಡಿಸೆಂಬರ್ 30 ರಂದು ಈಗಾಗಲೇ ಪ್ರಕಟಿಸಲಾಗಿದೆ. ಅಂತಿಮ ಮತದಾರ ಪಟ್ಟಿಯಂತೆ ಬಳ್ಳಾರಿ ಜಿಲ್ಲೆಯಲ್ಲಿ 13,744 ಪುರುಷರು, 8,408 ಮಹಿಳೆಯರು, ಇತರೆ-04 ಸೇರಿದಂತೆ ಒಟ್ಟು 22,156 ಪದವೀಧರ ಮತದಾರರಿದ್ದು, ಒಟ್ಟು 16 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಕಂಪ್ಲಿ ತಾಲೂಕಿನಲ್ಲಿ 3,539 ಮತದಾರರು, 03 ಮತಗಟ್ಟೆಗಳು. ಸಿರುಗುಪ್ಪ-3,323 ಮತದಾರರು, 04 ಮತಗಟ್ಟೆಗಳು. ಬಳ್ಳಾರಿ (ಗ್ರಾಮೀಣ)-4,604 ಮತದಾರರು, 03 ಮತಗಟ್ಟೆಗಳು. ಬಳ್ಳಾರಿ (ನಗರ)-7,396 ಮತದಾರರು, 03 ಮತಗಟ್ಟೆಗಳು ಹಾಗೂ ಸಂಡೂರು ತಾಲೂಕಿನಲ್ಲಿ 3,294 ಮತದಾರರಿದ್ದು, 03 ಮತಗಟ್ಟೆಗಳಿವೆ. ಮತದಾರರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಈಗಾಗಲೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಮೇ 6 ಕಡೆಯ ದಿನ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಲು ಮೇ 06 ಅಂತಿಮ ದಿನವಾಗಿದೆ. ಅರ್ಹ ಪದವೀಧರ ಮತದಾರರು ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಆಯಾ ತಾಲೂಕು ತಹಸೀಲ್ದಾರರ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅದೇ ತಹಸಿಲ್ದಾರರ ಕಚೇರಿಗೆ ಸಲ್ಲಿಸಬಹುದು. ಜನವರಿ ತಿಂಗಳಿನಿಂದ ನಿರಂತರ ಪರಿಷ್ಕರಣೆಯಲ್ಲಿ ಸ್ವೀಕೃತವಾದ ಅರ್ಜಿಗಳು ಹಾಗೂ ಮೇ 06 ರವರೆಗೆ ಸ್ವೀಕರಿಸಲ್ಪಟ್ಟ ಅರ್ಜಿಗಳನ್ನು ನಿಯಮಾನುಸಾರ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ಇದನ್ನೂ ಓದಿ: MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

HD Revanna: ಹೊಳೆನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಯಾವ ಪ್ರಯತ್ನವೂ ಫಲಿಸಲಿಲ್ಲ. ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸುತ್ತಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದರು.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಿಐಡಿ ಕಚೇರಿಯಲ್ಲಿ ವೈದ್ಯಕೀಯ ಪರೀಕ್ಷೆ (Medical Test) ನಡೆಸಲಾಗುತ್ತಿದೆ. ಇನ್ನು, ಪ್ರಕರಣದಲ್ಲಿ ಯಾವುದೇ ತೊಂದರೆಯಾಗದಿರಲಿ ಎಂದು ಎಚ್‌.ಡಿ.ರೇವಣ್ಣ ಅವರು ಮಾಡಿಸಿದ ಹೋಮ, ಇವರ ಕುರಿತು ಜ್ಯೋತಿಷಿ ನೀಡಿದ ಭವಿಷ್ಯ ಸುಳ್ಳಾಗಿದೆ. ಅವರು ಯಾವಾಗಲೂ ಹಿಡಿದುಕೊಂಡು ತಿರುಗಾಡುತ್ತಿದ್ದ ನಿಂಬೆ ಹಣ್ಣು ಕೂಡ ಮತ್ತಷ್ಟು ಹುಳಿ ಆಗಿದೆ.

ಹೌದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಯಾವುದೇ ಸಮಸ್ಯೆ ಎದುರಾಗದಿರಲಿ, ಮಗ ಬಚಾವಾಗಲಿ, ಜಾಮೀನು ಸಿಗಲಿ ಎಂಬುದು ಸೇರಿ ಹಲವು ದೃಷ್ಟಿಯಿಂದ ಬುಧವಾರ (ಮೇ 1) ಸಂಜೆ ಹೊಳೆನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಜಾಮೀನು ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವೂ ಅವರದ್ದಾಗಿತ್ತು ಎಂದು ತಿಳಿದುಬಂದಿದೆ.

ರೇವಣ್ಣ ಅಂದುಕೊಂಡಂತೆ ಯಾವುದೂ ಆಗಲಿಲ್ಲ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್‌.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಇದಾದ ಕೆಲ ಹೊತ್ತಿನಲ್ಲೇ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡರು.

ಸಿಐಡಿ ಕಚೇರಿಯಲ್ಲಿ ಆಂಬುಲೆನ್ಸ್‌, ಅಲ್ಲೇ ವೈದ್ಯಕೀಯ ಪರೀಕ್ಷೆ

ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಭದ್ರತಾ ದೃಷ್ಟಿಯಿಂದ ಆಂಬುಲೆನ್ಸ್‌ ಹಾಗೂ ವೈದ್ಯರನ್ನೇ ಸಿಐಡಿ ಕಚೇರಿಗೆ ಕರೆಸಿದ್ದಾರೆ. ಭದ್ರತಾ ದೃಷ್ಟಿಯಿಂದಾಗಿ ವೈದ್ಯಕೀಯ ಪರೀಕ್ಷೆಗಾಗಿ ರೇವಣ್ಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯದೆ, ಆಂಬುಲೆನ್ಸ್‌ಅನ್ನು ಸಿಐಡಿ ಕಚೇರಿಗೆ ಕರೆಸಲಾಗಿದೆ. ಆಂಬುಲೆನ್ಸ್‌ನಲ್ಲಿಯೇ ಎಚ್‌.ಡಿ.ರೇವಣ್ಣ ಅವರ ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Continue Reading
Advertisement
HD Revanna
ಕರ್ನಾಟಕ13 mins ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ18 mins ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ18 mins ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ40 mins ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ54 mins ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ56 mins ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ1 hour ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ1 hour ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ2 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ2 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌