Intimacy Coordinator: ಬಿಸಿಬಿಸಿ ದೃಶ್ಯಗಳಿಗೆ ಹೊಸ ಟ್ರೇನರ್! - Vistara News

ಸಿನಿಮಾ

Intimacy Coordinator: ಬಿಸಿಬಿಸಿ ದೃಶ್ಯಗಳಿಗೆ ಹೊಸ ಟ್ರೇನರ್!

ಸಿನಿಮಾದಲ್ಲಿ ನೃತ್ಯ, ಫೈಟ್‌ ದೃಶ್ಯಗಳಿಗೆ ಟ್ರೇನರ್‌ ಇರುತ್ತಾರೆ ಎಂಬುದು ನಿಮಗೆ ತಿಳಿದಿದೆ. ಅದರೆ ಲೈಂಗಿಕ ದೃಶ್ಯಗಳಿಗೂ ಟ್ರೇನರ್ಸ್ ಇರ್ತಾರೆ ಅಂತ ನಿಮಗೆ ಗೊತ್ತಾ?

VISTARANEWS.COM


on

intimate scene
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಲನಚಿತ್ರಗಳಲ್ಲಿ ಡ್ಯಾನ್ಸ್‌, ಫೈಟ್, ಆಕ್ಷನ್‌ ಸೀನ್‌ಗಳನ್ನು‌ ಮಾಡುವಂತೆ ಕಲಾವಿದರಿಗೆ ಟ್ರೇನಿಂಗ್ ಕೊಡುವವರಿದ್ದಾರೆ. ಆದರೆ, ಲೈಂಗಿಕ ದೃಶ್ಯಗಳನ್ನೂ ರಿಹರ್ಸಲ್‌ ಮಾಡುತ್ತಾರೆ, ಅದಕ್ಕೂ ಒಬ್ಬರು ಕೊಆರ್ಡಿನೇಟರ್‌ ಇರ್ತಾರೆ ಎಂದರೆ ನಂಬುತ್ತೀರಾ? ಹಾಲಿವುಡ್‌ ಸೇರಿದಂತೆ ಹಲವು ವಿದೇಶಿ ಚಿತ್ರರಂಗದಲ್ಲಿ ಹೀಗೊಂದು intimacy coordinator ಎಂಬ ಪರಿಕಲ್ಪನೆ ಹೊಸತೇನಲ್ಲ. ಆದರೆ ಭಾರತದಲ್ಲಿ ಇದು ಇತ್ತೀಚೆಗೆ ಪ್ರಚಲಿತಗೊಳ್ಳುತ್ತಿದೆ. ಒಂದು ಲೈಂಗಿಕ ದೃಶ್ಯ ಚಿತ್ರೀಕರಣಗೊಳ್ಳುವಾಗ ತೆರೆಯ ಹಿಂದಿನ ಕೆಲಸಗಳು ಹೇಗಿರಬಹುದು ಎಂಬುದನ್ನು ತಿಳಿಯುವ ಕುತೂಹಲ ನಿಮಗಿರಬಹುದು ಅಲ್ವಾ?

ಲೈಂಗಿಕ ದೃಶ್ಯಗಳನ್ನು ಚಿತ್ರೀಕರಿಸಲು ಪೂರ್ವಸಿದ್ಧತೆ ಹೇಗಿರುತ್ತದೆ ಎಂದು ಆಸ್ತಾ ಖನ್ನಾ ಮುಕ್ತವಾಗಿ ಹಂಚಿಕೊಂಡಿದ್ದಾರೆ.‌ ಆಸ್ತಾ ಖನ್ನಾ ಎಂಬ ಯುವತಿ ಭಾರತದ ಮೊದಲ ಇಂಟಿಮಸಿ ಕೊಆರ್ಡಿನೇಟರ್‌. ಅವರ ಮಾತುಗಳು ಹೀಗಿವೆ:

ಆಸ್ಥಾ ಖನ್ನಾ

ಇತ್ತೀಚೆಗೆ ಚಾಲ್ತಿಯಲ್ಲಿರುವ, ಓಟಿಟಿಯಲ್ಲಿ ಬರುವ ಸಿನಿಮಾ ಅಥವಾ ವೆಬ್‌ ಸೀರೀಸ್‌ಗಳಲ್ಲಿ ಲೈಂಗಿಕ ದೃಶ್ಯಗಳು ಹೆಚ್ಚಿವೆ. ಉಳಿದ ದೃಶ್ಯಗಳಂತೆ ಇವೂ ಕೂಡ ಕೂಡ ನಟನೆಯೇ ಆಗಿರುತ್ತವೆ. ಆದರೆ ಅದು ನೈಜವಾಗಿ ಕಾಣುವಂತೆ ಮಾಡುವ ಕಾರ್ಯ ಇಂಟಿಮಸಿ ಕೊಆರ್ಡಿನೇಟರದ್ದು.

  • ನಟ ಹಾಗೂ ನಟಿಯ ಬಳಿ ಅವರು ಈ ರೀತಿಯ ದೃಶ್ಯಗಳಿಗೆ ಅವರು ಕ್ಯಾಮೆರಾ ಮುಂದೆ ಎಷ್ಟು ಬೆತ್ತಲಾಗಲು ಸಿದ್ಧರಿದ್ದಾರೆ? ನಟ ಹಾಗೂ ನಟಿ ಇಬ್ಬರಿಗೂ ಪರಸ್ಪರ ಒಪ್ಪಿಗೆ ಇದೆಯೇ? ಅವರ ಮಿತಿ ಏನು? ಹೀಗೆ ಎಲ್ಲಾ ಮಾಹಿತಿಯನ್ನು ಇಂಟಿಮಸಿ ಕೊಆರ್ಡಿನೇಟರ್‌ ಮೊದಲು ಪಡೆಯಬೇಕು. ನಂತರ ಇಂಟಿಮಸಿ ಕೊಆರ್ಡಿನೇಟರ್‌ನ ಮುಖ್ಯ ಕೆಲಸ ಆರಂಭ. ನಟ ಹಾಗೂ ನಟಿಯರ ರಿಹರ್ಸಲ್.‌ ದೃಶ್ಯ ಹೇಗೆ ಮೂಡಬೇಕು, ಅಭಿನಯ ಹೇಗಿರಬೇಕು ಎಂದು ನಟನಟಿಯರಿಗೆ ಟ್ರೇನಿಂಗ್‌ ಕೊಡುವ ಕೆಲಸ ಇಂಟಿಮಸಿ ಕೊಆರ್ಡಿನೇಟರ್‌ ಮಾಡುತ್ತಾರೆ.
  • ಒಂದು ದೃಶ್ಯ ತೆರೆಯ ಮೇಲೆ ಹೇಗೆ ಮೂಡಬೇಕೆಂದು ನಿರ್ದೇಶಕರಿಗೆ ಸರಿಯಾದ ಚಿತ್ರಣವಿರುತ್ತದೆ. ಅದು ಯಾವ ಪ್ರಮಾಣದಲ್ಲಿ ನೋಡುಗನ ಮನಮುಟ್ಟಬೇಕು? ಯಾವ ವಾತಾವರಣ ಸೃಷ್ಟಿಸಬೇಕು? ಈ ಕುರಿತು ನಿರ್ದೇಶಕ ಇಂಟಿಮಸಿ ಕೊಆರ್ಡಿನೇಟರ್‌ಗೆ ತಿಳಿಸಿರುತ್ತಾರೆ. ಇಂಟಿಮಸಿ ಕೊಆರ್ಡಿನೇಟರ್‌ ಅದಕ್ಕೆ ತಕ್ಕಂತೆ ರಿಹರ್ಸಲ್‌ ಮಾಡಿಸುತ್ತಾರೆ.
  • ರಿಹರ್ಸಲ್ ನಾಲ್ಕು ಗೋಡೆಯ ಮಧ್ಯ ನಡೆಯುವಂಥದ್ದು. ಆದರೆ ಶೂಟಿಂಗ್‌ ಸಂದರ್ಭದಲ್ಲಿ ಅವರನ್ನು ನೋಡುವ ಕಣ್ಣುಗಳು ಹಲವಾರು. ಅದರಿಂದ ನಟ ನಟಿಯರಿಗೆ ಮುಜುಗರ ಉಂಟಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಚಿತ್ರೀಕರಣದ ಸಂದರ್ಭದಲ್ಲಿ ಸಾಮಾನ್ಯವಾಗಿ 3-4 ಜನ ಮಾತ್ರ ಇರುತ್ತಾರೆ. ಒಮ್ಮೊಮ್ಮೆ 7-8 ಜನ ಇರುಬೇಕಾದ ಸಂದರ್ಭ ಇರುತ್ತದೆ.
  • ನಟ ಹಾಗೂ ನಟಿಯ ನಡುವೆ ಯಾವುದೇ ಸಂಕೋಚ ಇರಬಾರದು. ಇದ್ದರೆ ಅದು ಚಿತ್ರದ ಮೇಲೆ ನೆಗಟಿವ್‌ ಪರಿಣಾಮ ಬೀರಬಹುದು. ಇಬ್ಬರ ನಡುವಿನ ಸಂಕೋಚವನ್ನು ದೂರ ಮಾಡಿ, ಆಪ್ತತೆ ಹೆಚ್ಚಿಸುವುದು ತುಂಬಾ ಮುಖ್ಯ. ಹಾಗಾಗಿ ಇಂಟಿಮಸಿ ಕೊಆರ್ಡಿನೇಟರ್‌ ಕೂಡ ರಿಹರ್ಸಲ್‌ ಮೇಲೆ ಹೆಚ್ಚು ಗಮನ ನೀಡುತ್ತಾರೆ. ನಟ ಹಾಗೂ ನಟಿಯ ಪರಿಮಿತಿಯನ್ನು ಮೊದಲೇ ತಿಳಿಸಲಾಗಿರುತ್ತದೆ. ರಿಹರ್ಸಲ್‌ ಸಮಯದಲ್ಲಿ ಈ ಪರಿಮಿತಿಯನ್ನು ಮೀರುವಂತಿಲ್ಲ. ‌
  • ಕೆಲವೊಮ್ಮೆ ಚಿತ್ರೀಕರಣದ ಸಂದರ್ಭದಲ್ಲಿ ಚಿತ್ರದ ಫ್ಲೋ ಜೊತೆ ಹೋಗಬೇಕಾಗುತ್ತದೆ. ನಿರ್ದೇಶಕರು ಸ್ಥಳದಲ್ಲಿ ಬದಲಾವಣೆ ಮಾಡಬಹುದು. ಹಾಗಿದ್ದಾಗ ಇಂಟಿಮಸಿ ಕೊಆರ್ಡಿನೇಟರ್‌ ಸೂಚನೆ ನೀಡುವ ಸಂದರ್ಭ ಎದುರಾಗುತ್ತದೆ. ಉದಾಹರಣೆಗೆ ಕೆಲವೊಮ್ಮೆ ʼಮೊದಲು ವ್ಯಕ್ತಿಯ ಮುಖವನ್ನು ಸ್ಪರ್ಶಿಸಿ, ನಂತರ ಭುಜ ಹಾಗೂ ಕುತ್ತಿಗೆಯನ್ನು ಚುಂಬಿಸಿ ಹಿಂದೆ ಸರಿಯಬೇಕುʼ ಎಂದೆಲ್ಲ ನಿರ್ದೇಶಿಸಬೇಕಾಗುತ್ತದೆ. ಆದರೆ ಇದು ಕೂಡ ಇಬ್ಬರ ಒಪ್ಪಿಗೆಯನ್ನು ಪಡೆದು ಮುಂದುವರಿಯಬೇಕು.

ಲೈಂಗಿಕ ಉದ್ರೇಕ ಉಂಟಾದರೆ?

ಲೈಂಗಿಕ ದೃಶ್ಯವನ್ನು ಚಿತ್ರಿಸುವಾಗ ಅಥವಾ ರಿಹರ್ಸಲ್‌ ವೇಳೆಯಲ್ಲಿ ಯಾರೂ ಕಾಮೋದ್ರೇಕಕ್ಕೆ ಒಳಗಾಗುವುದಿಲ್ಲವೇ? ಈವರೆಗೆ ಆ ರೀತಿಯ ಸಂದರ್ಭ ಎದುರಾಗಿಲ್ಲವಂತೆ. ರಿಹರ್ಸಲ್‌ ಹಾಗೂ ಚಿತ್ರೀಕರಣದ ಸಮಯದಲ್ಲಿ ಜನರು ಅವರನ್ನು ನೋಡುತ್ತಿರುತ್ತಾರೆ. ಇದನ್ನು ಅವರು ಅರಿತುಕೊಂಡಿರುತ್ತಾರೆ. ಹಾಗಾಗಿ ಪ್ರಚೋದನೆಗೆ ಅವಕಾಶ ಇರುವುದಿಲ್ಲ. ಇಂಟಿಮಸಿ ಕೊಆರ್ಡಿನೇಟರ್ ಮೊದಲೇ ಅವರ ಬಳಿ ಮಾತನಾಡಿರುತ್ತಾರೆ.‌ ಪ್ರಚೋದನೆಗೆ ಪೂರಕವಲ್ಲದ ವಿಷಯಗಳನ್ನು ಮಾತನಾಡಿರುತ್ತಾರೆ.

ಆಸ್ತಾ ಖನ್ನಾ ತಮ್ಮ ಬ್ಯಾಗಿನಲ್ಲಿ ಮಿಂಟ್‌, ಮೌತ್‌ ವಾಶ್‌, ಬಾಡಿ ಟೇಪ್‌, ಸಿಲಿಕಾನ್‌ ಒಳಉಡುಪುಗಳನ್ನು ಇಟ್ಟಿರುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ ನಟನಟಿಯರ ಜನನಾಂಗಗಳು ಟಚ್‌ ಆಗುವದನ್ನು ತಡೆಯಲು ಸೈಕಲ್‌ ಸೀಟ್‌ ಕವರ್‌ ರೀತಿಯ ಒಂದು ಕವರ್‌ ಹಾಗೂ 9 ಇಂಚಿನ ಪೈಲೆಟ್ಸ್‌ ಬಾಲ್‌ನ್ನು ಬಳಸಲಾಗುತ್ತದೆ. ಇದರಿಂದಾಗಿ, ಕಾಮೋದ್ರೇಕದ ಭಯ ಇರುವುದಿಲ್ಲ. ಸಿನಿಮಾ ಎಂಬ ಮಾಯಾಲೋಕದಲ್ಲಿ ಎಷ್ಟೊಂದು ವಿಚಿತ್ರಗಳಿರುತ್ತವೆ ಅಲ್ಲವೇ? ತೆರೆಯ ಮೇಲೆ ಕಾಣುವ 3 ಗಂಟೆಯ ಸಿನಿಮಾದ ಹಿಂದೆ ಎಷ್ಟೋ ಕೆಲಸಗಳು ನಡೆಯುತ್ತವೆ. ಇದನ್ನು ಊಹಿಸುವುದು ಕಷ್ಟ.

ಹೆಚ್ಚಿನ ಓದಿಗಾಗಿ: ಕೆಜಿಎಫ್‌ ಸ್ಟಾರ್‌ ಯಶ್‌ ಲಕ್ಷುರಿ ಲೈಫ್‌ಸ್ಟೈಲ್‌ ಹೇಗಿದೆ ನಿಮಗೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Golden Star Ganesh: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

VISTARANEWS.COM


on

Golden Star Ganesh Krishnam Pranaya Sakhi movie first song release on May 25 in Mysore
Koo

ಬೆಂಗಳೂರು: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್‌ಗಳು ಎಲ್ಲರ ಮೆಚ್ಚುಗೆ ಗಳಿಸಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Jagannath Puri Temple: ಪುರಿ ಜಗನ್ನಾಥ ದೇವಸ್ಥಾನದ 7 ಅಚ್ಚರಿಯ ಸಂಗತಿಗಳಿವು!

ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಸದ್ಯದಲ್ಲೇ ಚಿತ್ರ ತೆರೆಗೆ

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ‌.

ಇದನ್ನೂ ಓದಿ: Chardham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡಲು ಬಯಸಿದ್ದೀರಾ? ನಿಮಗೆ ಬೇಕಾದ ಮಾಹಿತಿ ಇಲ್ಲಿದೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ. ಚಿತ್ರದ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಸಿನಿಮಾ

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

ಬಾಹುಬಲಿ: ಕ್ರೌನ್ ಆ ಬ್ಲಡ್ ಅನಿಮೇಟೆಡ್ ಸರಣಿ ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ ಬಿಡುಗಡೆಯಾಗಿದ್ದು, ಶರದ್ ಕೇಲ್ಕರ್ (Sharad Kelkar) ಚಿತ್ರದೊಂದಿಗಿನ ತಮ್ಮ ನಂಟನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Sharad Kelkar
Koo

ಅದ್ಧೂರಿ ಬಜೆಟ್‌ನ ʼಬಾಹುಬಲಿʼ (bahubali) ಚಿತ್ರದ ಒಂದೊಂದು ದೃಶ್ಯಗಳು ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷ ಸಮೀಪಿಸಿದರೂ ಈಗಲೂ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ʼಬಾಹುಬಲಿʼ ಪಾತ್ರಧಾರಿ ಪ್ರಭಾಸ್‌ಗೆ (actor prabhas) ಧ್ವನಿ ನೀಡಿರುವ ಶರದ್ ಕೇಳ್ಕರ್ (Sharad Kelkar) ತಮ್ಮ ಮರೆಯಲಾಗದ ಅನುಭವವನ್ನು ಹಂಚಿಕೊಂಡಿದ್ದಾರೆ.

ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ (Disney Plus star) ಬಿಡುಗಡೆಯಾಗಿರುವ “ಬಾಹುಬಲಿ: ಕ್ರೌನ್ ಆ ಬ್ಲಡ್” (Baahubali: Crown of Blood) ಅನಿಮೇಟೆಡ್ ಸರಣಿಯು ಈಗ ಚರ್ಚೆಯಲ್ಲಿದೆ. ಬಾಹುಬಲಿ ಮತ್ತು ಮಾಹಿಷ್ಮತಿಯ ಜಗತ್ತಿನಲ್ಲಿ ಇದೂವರೆಗೂ ಕೇಳಿರದ, ಕಂಡಿರದ ಹಾಗೂ ತಿಳಿಯಲಾಗದಿದ್ದ ಅನೇಕ ಘಟನೆಗಳು ಕಥೆಗಳು ಒಂದೊಂದಾಗಿ ಕೇಳಿ ಬರುತ್ತಿವೆ.


ಅನೇಕ ಐತಿಹಾಸಿಕ ಚಿತ್ರಗಳಿಗೆ ಧ್ವನಿ ನೀಡಿ ಖ್ಯಾತರಾಗಿರುವ ಮೂಲತಃ ನಟರೂ ಆಗಿರುವ ಶರದ್ ಕೇಳ್ಕರ್ ಅವರು ಬಾಹುಬಲಿ ನಾಯಕ ಪ್ರಭಾಸ್‌ ಅವರಿಗೆ ಕಂಠದಾನ ಮಾಡಿದ್ದರು. ಈ ಕುರಿತಂತೆ ಅವರು ತಮ್ಮ ಸಂತಸವನ್ನು ಈಗ ಹಂಚಿಕೊಂಡಿದ್ದಾರೆ.

ತನ್ನ ಬಲವಾದ ಧ್ವನಿಗಾಗಿ ಹೆಸರಾಗಿರುವ ಶರದ್ , ಐಕಾನಿಕ್ ‘ಬಾಹುಬಲಿ’ ಸರಣಿಯನ್ನು ಹಿಂದಿ ಭಾಷೆಗೆ ಡಬ್‌ ಮಾಡುವಾಗ ಚಲನಚಿತ್ರ ನಿರ್ಮಾಪಕ ಎಸ್‌.ಎಸ್. ರಾಜಮೌಳಿ ಅವರು ತಮ್ಮ ಆಯ್ಕೆ ಬಗ್ಗೆ ಮೊದಲು ಸಂದೇಹ ಪಟ್ಟಿದ್ದರು. ‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಎರಡರಲ್ಲೂ ರೆಬೆಲ್ ಸ್ಟಾರ್ ಪ್ರಭಾಸ್ ಮೂಲತಃ ಚಿತ್ರಿಸಿದ ಅಮರೇಂದ್ರ ಬಾಹುಬಲಿ ಮತ್ತು ಮಹೇಂದ್ರ ಬಾಹುಬಲಿ ಪಾತ್ರಗಳಿಗೆ ಧ್ವನಿ ನೀಡಿದ ಕೇಳ್ಕರ್‌ ಅವರು ಎಪಿಕ್ ಸಾಹಸದ ಡಬ್ಬಿಂಗ್ ಕಾರ್ಯದ ಬಗ್ಗೆ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಅಭಿನಯದ 2016 ರ ತೆಲುಗು ಆಕ್ಷನ್- ಕಾಮಿಡಿ ಚಿತ್ರ ‘ಸರ್ದಾರ್ ಗಬ್ಬರ್ ಸಿಂಗ್’ ನಲ್ಲಿ ಕೇಳ್ಕರ್ ತೊಡಗಿಸಿಕೊಂಡಿದ್ದರು. ಈ ವೇಳೆ ಸಿಬ್ಬಂದಿಯೊಬ್ಬ ಅವರ ಗಾಯನವನ್ನು ಗುರುತಿಸಿ ರಾಜಮೌಳಿ ಅವರಿಗೆ ಇವರ ಹೆಸರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.


ನನಗೆ ‘ಬಾಹುಬಲಿ’ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ. ಆದರೆ ನಾನು ರಾಜಮೌಳಿ ಅವರ ಹಿಂದಿನ ಚಿತ್ರಗಳಾದ ‘ಮಗಧೀರ’ ನೋಡಿದ್ದೇನೆ. ಒಬ್ಬ ನಟನಾಗಿ ನಾನು ಈ ಮಾಸ್ಟರ್‌ಪೀಸ್‌ನ ಸೃಷ್ಟಿಕರ್ತನನ್ನು ಭೇಟಿಯಾಗಲು ಬಯಸಿದ್ದೆ. ಹಾಗಾಗಿ ನಾನು ನನ್ನ ಧ್ವನಿ ಪರೀಕ್ಷೆಯನ್ನು ಮಾಡಿದೆ. ಟೇಪ್ ನೊಂದಿಗೆ ಮರುದಿನ ಅವರನ್ನು ಸ್ಟುಡಿಯೋದಲ್ಲಿ ಭೇಟಿಯಾದೆ. ನೀವು ಬಾಹುಬಲಿಗಾಗಿ ಡಬ್ಬಿಂಗ್ ಮಾಡುತ್ತಿದ್ದೀರಿ ಎಂದು ಅವರು ಹೇಳಿದಾಗ ನಂಬಲು ಅಸಾಧ್ಯವಾಯಿತು ಎಂದಿದ್ದಾರೆ ಕೇಳ್ಕರ್.

ಈ ಪಾತ್ರವು ಕೇಳ್ಕರ್ ಅವರ ವೃತ್ತಿಜೀವನವನ್ನು ಗಮನಾರ್ಹವಾಗಿ ಹೆಚ್ಚಿಸಿತು. ಮಾತ್ರವಲ್ಲದೆ ಅವರನ್ನು ಅಪಾರ ಅಭಿಮಾನಿಗಳ ಗುಂಪಿಗೆ ಪ್ರೀತಿಸುವಂತೆ ಮಾಡಿತು, ಅವರಿಗೆ “ಬಾಹುಬಲಿಯ ಧ್ವನಿ” ಮತ್ತು ಪ್ರೀತಿಯಿಂದ “ಭಾರತದ ಧ್ವನಿ” ಎಂಬ ಬಿರುದು ಸಿಗುವಂತಾಯಿತು. ಮೊದಲು ನಾನೊಬ್ಬ ನಟ. ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದರೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಇನ್ನು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ ಶರದ್.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್. ರಾಜಮೌಳಿ- ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿದ್ದು, ಜೀವನ್ ಜೆ. ಕಾಂಗ್, ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಎಂದು ಶರದ್ ಹೇಳಿದ್ದಾರೆ.


ಅನಿಮೇಟೆಡ್ ಸರಣಿ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಹಿಂದಿ ಭಾಷೆಗೆ ಭಾಷಾಂತರವಾಗಿದ್ದು, ಕೇಲ್ಕರ್ ಧ್ವನಿ ನೀಡಿದ್ದಾರೆ. ಈ ಸರಣಿಯು ಮೇ 17ರಿಂದ ಡಿಸ್ನಿ ಪ್ಲಸ್‌ನಲ್ಲಿ ಪ್ರದರ್ಶನ ಕಾಣುತ್ತಿದೆ.

Continue Reading

ಸಿನಿಮಾ

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

ಐಪಿಎಲ್‌ ಅಬ್ಬರ, ಲೋಕಸಭೆ ಚುನಾವಣೆ ಭರಾಟೆ ಸೇರಿ ಹಲವು ಕಾರಣಗಳಿಂದ ಆಂಧ್ರಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿತ್ತು. ಇದೇ ರೀತಿ ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್ ಮಾಡಬೇಕು ಎಂಬ ಚಿಂತನೆ ನಡೆದಿತ್ತು. ಆದರೆ, ಇದಕ್ಕೆ ಸ್ಯಾಂಡಲ್‌ವುಡ್‌ ನಿರ್ಮಾಪಕರು ವಿರೋಧ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Theatre
Koo

ಬೆಂಗಳೂರು: ಐಪಿಎಲ್‌ (IPL), ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಂಡಿತ್ತು. ಇದರಂತೆ, ಐಪಿಎಲ್‌, ಚುನಾವಣೆ ಜತೆಗೆ ಸ್ಟಾರ್‌ ನಟರ ಸಿನಿಮಾಗಳ ಬಿಡುಗಡೆ ಇಲ್ಲದ ಕಾರಣ ಕರ್ನಾಟಕದಲ್ಲೂ (Karnataka) ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚಬೇಕು ಎಂಬ ಚಿಂತನೆ ನಡೆದಿದೆ. ಇದರ ಬೆನ್ನಲ್ಲೇ, ಫಿಲಂ ಚೇಂಬರ್‌ನಲ್ಲಿ (Film Chamber) ನಿರ್ಮಾಪಕರ ಸಭೆ ನಡೆದಿದ್ದು, ಥಿಯೇಟರ್‌ಗಳನ್ನು (Theatres) ಮುಚ್ಚುವ ಚಿಂತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಫಿಲಂ ಚೇಂಬರ್‌ ಅಧ್ಯಕ್ಷ ಎನ್‌.ಎಂ.ಸುರೇಶ್‌ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆದಿದೆ. “ಕನ್ನಡ ಚಿತ್ರರಂಗದ ಕುರಿತು ಇಷ್ಟು ದಿನಗಳಲ್ಲಿ ಈಗ ಸಭೆಯಾಗುತ್ತಿರುವುದು ಒಳ್ಳೆಯ ವಿಚಾರ. ತೆಲಂಗಾಣದ ಪರಿಸ್ಥಿತಿ ನಮ್ಮ ಗಮನಕ್ಕಿದೆ. ಆದರೆ, ಕರ್ನಾಟಕದಲ್ಲಿ ಚಿತ್ರಮಂದಿರಗಳನ್ನು ಬಂದ್‌ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್‌ ಮಾಡಿದರೆ ಕನ್ನಡ ಚಿತ್ರರಂಗದ ಮೇಲೆ ಪರಿಣಾಮ ಬೀರುತ್ತದೆ. ಪ್ರದರ್ಶಕರು, ವಿತರಕರು ಹಾಗೂ ನಿರ್ಮಾಪಕರು ಸದ್ಯಕ್ಕೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ. ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳಿಗೆ ರಿಲೀಸ್ ಪ್ಲಾನ್ ಮಾಡಲು ಆಗುತ್ತಿಲ್ಲ. ಸ್ಟಾರ್ ಚಿತ್ರಗಳು ಹೆಚ್ಚಾಗುವುದು ಮುಂದೆಯೂ ಅಸಾಧ್ಯ ಎಂಬಂತಿದೆ. ಥಿಯೇಟರ್‌ಗಳನ್ನು ಮುಚ್ಚಿದರೆ ಮುಂದಾಗುವ ಪರಿಣಾಮಗಳ ಬಗ್ಗೆಯೂ ಗಮನ ಇರಬೇಕು. ಹಾಗಾಗಿ, ಚಿತ್ರಮಂದಿರಗಳನ್ನು ಮುಚ್ಚಬಾರದು” ಎಂದು ನಿರ್ಮಾಪಕರು ಆಗ್ರಹಿಸಿದರು.

ಸ್ಟಾರ್‌ ನಟರ ಜತೆ ಚರ್ಚೆಗೆ ನಿರ್ಧಾರ

ಕರ್ನಾಟಕದಲ್ಲಿ ಸ್ಟಾರ್‌ ನಟರ ಸಿನಿಮಾಗಳ ಬಿಡುಗಡೆಯಾಗದಿರುವ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಕನ್ನಡ ಚಿತ್ರರಂಗ ದಯನೀಯ ಸ್ಥಿತಿಗೆ ತಲುಪುವ ಕುರಿತು ಕೂಡ ಅಭಿಪ್ರಾಯ ವ್ಯಕ್ತವಾಯಿತು. ಸ್ಟಾರ್‌ ನಟರು ವರ್ಷಕ್ಕೆ ಎರಡು ಸಿನಿಮಾ ಮಾಡುವಂತೆ ಮನವಿ ಮಾಡಲು ಕೂಡ ನಿರ್ಧರಿಸಲಾಯಿತು. ಚಿತ್ರರಂಗದ ಉಳಿವು, ಮುಂದಿನ ದಿನಗಳಲ್ಲಿ ಮಾಡಬೇಕಾದ ಬದಲಾವಣೆಗಳು ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಬಂದ್‌ ನಿರ್ಧಾರ ನಿಲ್ಲ ಎಂದ ಎನ್.ಎಂ.ಸುರೇಶ್‌

ಸಭೆಯ ಬಳಿಕ ಮಾತನಾಡಿದ ಎನ್‌.ಎಂ.ಸುರೇಶ್‌, “ಕರ್ನಾಟಕದಲ್ಲಿ ಥಿಯೇಟರ್‌ಗಳನ್ನು ಮುಚ್ಚುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚಿಸಿದ್ದೇವೆ. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಟಿಕೆಟ್ ರೇಟ್ ಕಡಿಮೆ ಮಾಡುವುದು, ಯುಎಫ್ಒ, ಕ್ಯೂಬ್ ರೇಟ್ ಕಡಿಮೆ ಮಾಡುವ ಕುರಿತು ಸರ್ಕಾರಕ್ಕೆ ಕೋರಿಕೆ ಸಲ್ಲಿಸುತ್ತೇವೆ. ಕೇರಳದಲ್ಲಿ ಸರ್ಕಾರದ್ದೇ ಸ್ವಂತ ಒಟಿಟಿ ವ್ಯವಸ್ಥೆ ಇದೆ. ಇದು ಕರ್ನಾಟಕದಲ್ಲೂ ಜಾರಿಗೆ ಬರಬೇಕು. ಕಲಾವಿದರು ಕೂಡ ಸಹಕಾರ ನೀಡಬೇಕು. ಮೂರ್ನಾಲ್ಕು ದಿನದಲ್ಲಿ ಸ್ಟಾರ್‌ ನಟರ ಜತೆ ಸಭೆ ನಡೆಸಲಾಗುತ್ತದೆ” ಎಂದು ತಿಳಿಸಿದರು.

ಫಿಲಂ ಚೇಂಬರ್ ಅಧ್ಯಕ್ಷ ಎನ್. ಎಂ. ಸುರೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟಗರು, UI ಚಿತ್ರಗಳ ಖ್ಯಾತಿಯ ನಿರ್ಮಾಪಕ ಕೆ.ಪಿ. ಶ್ರೀಕಾಂತ್, ಕಬ್ಜ ಖ್ಯಾತಿಯ ಆರ್. ಚಂದ್ರು, ಜಯಣ್ಣ, ತರುಣ್ ಶಿವಪ್ಪ, ಲಹರಿ ವೇಲು, ಹೊಂಬಾಳೆ ಫಿಲಮ್ಸ್‌ ಪ್ರತಿನಿಧಿ ಚಿದಾನಂದ್ ಸೇರಿ ಹಲವು ನಿರ್ಮಾಕರು ಭಾಗವಹಿಸಿದರು. ಐಪಿಎಲ್‌ ಅಬ್ಬರ, ಲೋಕಸಭೆ ಚುನಾವಣೆ ಭರಾಟೆ ಸೇರಿ ಹಲವು ಕಾರಣಗಳಿಂದ ಆಂಧ್ರಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿತ್ತು. ಇದೇ ರೀತಿ ಕರ್ನಾಟಕದಲ್ಲೂ ತಾತ್ಕಾಲಿಕವಾಗಿ ಸಿಂಗ್‌ ಸ್ಕ್ರೀನ್‌ ಥಿಯೇಟರ್‌ಗಳನ್ನು ಬಂದ್ ಮಾಡಬೇಕು ಎಂಬ ಚಿಂತನೆ ನಡೆದಿತ್ತು.

ಇದನ್ನೂ ಓದಿ: Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Continue Reading

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

Kalki 2898 AD: ಪ್ರಭಾಸ್‍, ದೀಪಿಕಾ ಪಡುಕೋಣೆ, ಅಮಿತಾಭ್‍ ಬಚ್ಚನ್ ಮತ್ತಿತರರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ  ‘ಕಲ್ಕಿ 2898 ಎಡಿ’ಯ ಹೊಸ ಪಾತ್ರ ‘ಬುಜ್ಜಿ’ ಗಮನ ಸೆಳೆಯುತ್ತಿದೆ. ಚಿತ್ರದ ಐದನೇ ಸೂಪರ್‌ ಸ್ಟಾರ್ ‘ಬುಜ್ಜಿ’ಯನ್ನು ಚಿತ್ರತಂಡ ಅದ್ಧೂರಿ ಕಾರ್ಯಕ್ರಮದಲ್ಲಿ ಪರಿಚಯಿಸಿದೆ. ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ ಈ ಬುಜ್ಜಿ. ಬುಜ್ಜಿ ಝಳಕ್‌ ಅನ್ನು ಈ ವಿಡಿಯೊದಲ್ಲಿ ನೋಡಿ.

VISTARANEWS.COM


on

Kalki 2898 AD
Koo

ಹೈದರಾಬಾದ್: ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ. ಈ ಸಿನಿಮಾದಲ್ಲಿನ ಪ್ರಮುಖ ನಟರ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ ಬುಧವಾರ (ಮೇ 22) ಚಿತ್ರದ ಐದನೇ ಸೂಪರ್‌ ಸ್ಟಾರ್ ‘ಬುಜ್ಜಿ’ಯನ್ನು ಅನಾವರಣಗೊಳಿಸಿದೆ. ಇದಕ್ಕಾಗಿ ನಗರದ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ ಅನ್ನು ಅನಾವರಣಗೊಳಿಸಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪ್ರೇಕ್ಷಕರ ಮುಂದಿಡಲಾಗಿದೆ.

ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಸ್ಪಷ್ಟವಾಗುತ್ತದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ಎಡಿʼ ಚಿತ್ರದ ಹೊಸ ಪೋಸ್ಟರ್‌ ಔಟ್‌; ಪ್ರಭಾಸ್‌ ಪಾತ್ರದ ಹೆಸರು ರಿವೀಲ್‌

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು. ಜತೆಗೆ ಮೊದಲ ಬಾರಿಗೆ ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ತೆರೆಮೇಲೆ ಒಂದಾಗುತ್ತಿರುವುದೂ ನಿರೀಕ್ಷೆ ಹೆಚ್ಚಿಸಿದೆ.

Continue Reading
Advertisement
WhatsApp AI
ತಂತ್ರಜ್ಞಾನ2 mins ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ10 mins ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ11 mins ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Agee hunnime Thousands of devotees have darshan of Shri Renukamba Devi of Chandragutti
ಶಿವಮೊಗ್ಗ16 mins ago

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

an inscription of Hulagi Katte built during the Vijayanagara kings was discovered
ಕೊಪ್ಪಳ17 mins ago

Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

CM Siddaramaiah inaugurated the website of the inter caste marriage registration website in Mysore
ಕರ್ನಾಟಕ19 mins ago

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

COMEDK UGET 2024 Result Declared Tomorrow Afternoon How to view and download
ಶಿಕ್ಷಣ22 mins ago

COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

IPL 2024
ಪ್ರಮುಖ ಸುದ್ದಿ53 mins ago

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

Share Market
ದೇಶ1 hour ago

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

IPL 2024
ಪ್ರಮುಖ ಸುದ್ದಿ1 hour ago

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ17 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌