Russia-Ukraine War: ಮಾರಿಯೋಪೋಲ್‌ ನಗರ ಕೈವಶವಾಗಿದೆ ಎಂದು ಘೋಷಿಸಿದ ಪುಟಿನ್‌ - Vistara News

ರಷ್ಯಾ-ಉಕ್ರೇನ್‌ ಕದನ

Russia-Ukraine War: ಮಾರಿಯೋಪೋಲ್‌ ನಗರ ಕೈವಶವಾಗಿದೆ ಎಂದು ಘೋಷಿಸಿದ ಪುಟಿನ್‌

ಎರಡು ತಿಂಗಳಿನಿಂದ ನಡೆಯುತ್ತಿರುವ ಉಕ್ರೇನ್‌ ಮೇಲಿನ ದಾಳಿಯಲ್ಲಿ ಪ್ರಮುಖ ಮೈಲುಗಲ್ಲನ್ನು ಸಾಧಿಸಿರುವುದಾಗಿ ಹೇಳಿಕೊಂಡಿರುವ ರಷ್ಯಾ, ಮಾರಿಯೊಪೋಲ್‌ ನಗರವನ್ನು ಸಂಪೂರ್ಣ ವಶಪಡಿಸಿಕೊಂಡಿರುವುದಾಗಿ ಘೋಷಿಸಿದೆ.

VISTARANEWS.COM


on

Vladimir Putin well and Fit Says Russia Government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ಎರಡು ತಿಂಗಳಿಂದ ಉಕ್ರೇನ್‌ ಮೇಲೆ ನಡೆಸುತ್ತಿರುವ ಯುದ್ಧದಲ್ಲಿ(Russia- Ukraine War) ಮಹತ್ವದ ಮೈಲುಗಲ್ಲನ್ನು ಸಾಧಿಸಿರುವುದಾಗಿ ಹೇಳಿಕೊಂಡಿರುವ ರಷ್ಯಾ, ಮಾರಿಯೊಪೋಲ್‌(Mariupol) ನಗರವನ್ನು ಸಂಪೂರ್ಣ ಕೈವಶ ಮಾಡಿಕೊಂಡಿರುವುದಾಗಿ ಘೋಷಿಸಿದೆ. ದೂರದರ್ಶನದ ಮೂಲಕ ಗುರುವಾರ ಈ ಘೋಷಣೆಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಮಾಡಿದ್ದಾರೆ.

ಮಾರಿಯೊಪೋಲ್‌ ನಗರದ ಅಜೋವ್ಸ್‌ಟನ್‌ ಉಕ್ಕಿನ ಘಟಕವನ್ನು ಹೊರತುಪಡಿಸಿ ಸಂಪೂರ್ಣ ನಗರ ನಮ್ಮ ನಿಯಂತ್ರಣದಲ್ಲಿದೆ ಎಂದು ರಷ್ಯಾ ರಕ್ಷಣಾ ಸಚಿವ ಸೆರ್ಜಿ ಶೋಯ್ಗು ಹೇಳಿದ ನಂತರ ಪುಟಿನ್‌ ಈ ಘೋಷಣೆ ಮಾಡಿದ್ದಾರೆ. ಉಕ್ಕಿನ ಘಟಕದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಉಕ್ರೇನ್‌ ಸೈನಿಕರು ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ.

ನಾವು ಮಾರಿಯೊಪೋಲ್‌ ನಗರವನ್ನು ಸಂಪೂರ್ಣ ಸ್ವತಂತ್ರಗೊಳಿಸಿದ್ದೇವೆ ಎಂದಿರುವ ಪುಟಿನ್‌, ನಗರದಿಂದ ಯಾರೂ ಹೊರಹೋಗದಂತೆ ಸಂಪೂರ್ಣ ತಡೆ ವಿಧಿಸಿ ಎಂದಿದ್ದಾರೆ. ಫೆಬ್ರವರಿಯಲ್ಲಿ ಯುದ್ಧ ಆದಾಗಿನಿಂದ ಅತ್ಯಂತ ಬಿರುಸಿನ ಕದನಕ್ಕೆ ಮಾರಿಯೊಪೋಲ್‌ ನಗರ ಸಾಕ್ಷಿಯಾಗಿತ್ತು. ಈಗಾಗಲೆ ಕೆಲವು ನಗರಗಳನ್ನು ರಷ್ಯಾ ವಶಕ್ಕೆ ಪಡೆದಿದೆಯಾದರೂ, ಇಲ್ಲಿಯವರೆಗೆ ತನ್ನ ವಶದಲ್ಲಿದೆ ಎಂದು ರಷ್ಯಾ ಘೋಷಿಸಿರುವ ಅತಿ ದೊಡ್ಡ ನಗರ ಮಾರಿಯೊಪೋಲ್‌.

ಪೂರ್ವ ಉಕ್ರೇನ್‌ನ ಡೊನೆಸ್ಕ್‌ ಹಾಗೂ ಲುಹಾನ್ಸ್‌ಕ್‌ ನಗರಗಳನ್ನು ಸ್ವತಂತ್ರ ಎಂದು ಫೆಬ್ರವರಿಯಲ್ಲಿ ಘೋಷಿಸಿದ ನಂತರ ಉಕ್ರೇನ್‌ ಮೇಲೆ ಯುದ್ಧವನ್ನು ರಷ್ಯಾ ಆರಂಭಿಸಿತ್ತು. ಯುದ್ಧ ಆರಂಭವಾದಾಗ ರಷ್ಯಾ ಬಲಿಷ್ಠ ರಾಷ್ಟ್ರವಾಗಿ, ಉಕ್ರೇನ್‌ ಸಣ್ಣ ಗುಬ್ಬಿಯಂತೆ ಭಾಸವಾಗುತ್ತಿತ್ತು. ಕೆಲವೇ ದಿನಗಳಲ್ಲಿ ಉಕ್ರೇನನ್ನು ರಷ್ಯಾ ವಶಪಡಿಸಿಕೊಳ್ಳುತ್ತದೆ ಎನ್ನಲಾಗುತ್ತಿತ್ತು. ಆರಂಭದ ದಿನಗಳಲ್ಲೆ ರಾಜಧಾನಿ ಕೀವ್‌ಗೆ ದಿಗ್ಬಂಧನ ವಿಧಿಸಿತ್ತು. ಆದರೆ ಉಕ್ರೇನ್‌ಗೆ ಅಮೆರಿಕ ಹಾಗೂ ಐರೋಪ್ಯ ರಾಷ್ಟ್ರಗಳು ನೀಡಿದ ಬೆಂಬಲ ಮತ್ತು ಉಕ್ರೇನಿ ಸೈನಿಕರ ಹೋರಾಟದಿಂದಾಗಿ ಎರಡು ತಿಂಗಳಾದರೂ ರಷ್ಯಾಕ್ಕೆ ನಿರೀಕ್ಷಿತ ಜಯ ಸಿಕ್ಕಿಲ್ಲ. ಉಕ್ಕಿನ ಘಟಕ ಪ್ರದೇಶದಲ್ಲಿ ಸುಮಾರು 1,000 ನಾಗರಿಕರು ಹಾಗೂ ಗಾಯಗೊಂಡ 500 ಉಕ್ರೇನಿ ಸೈನಿಕರು ಸಿಲುಕಿದ್ದಾರೆ ಎನ್ನಲಾಗಿದೆ. ಇವರೆಲ್ಲರನ್ನೂ ಸುರಕ್ಷಿತವಾಗಿ ಸಾಗಣೆ ಮಾಡಲು ಮಾನವೀಯ ಮಾರ್ಗವನ್ನು ಒದಗಿಸಲು ರಷ್ಯಾವನ್ನು ಉಕ್ರೇನ್‌ ಗುರುವಾರ ಬೆಳಗ್ಗೆಯಷ್ಟೆ ಕೋರಿತ್ತು. ಆದರೆ ಈ ಉಕ್ಕಿನ ಘಟಕ ಪ್ರದೇಶದಿಂದ ಒಂದು ಹಕ್ಕಿಯೋ ಹೊರಹೋಗದಂತೆ ನಿರ್ಬಂಧಿಸಿ ಎಂದು ಕಟ್ಟುನಿಟ್ಟಾಗಿ ಹೇಳಿದ್ದಾರೆ.

ಹೆಚ್ಚಿನ ಓದಿಗಾಗಿ | ಉಕ್ರೇನ್‌ ಮೇಲೆ ಅನುಕಂಪ, ರಷ್ಯಾ ಸ್ನೇಹಕ್ಕೆ ಧಕ್ಕೆಯಿಲ್ಲ: ಮೋದಿ-ಬೈಡೆನ್‌ ಸಭೆ Updates

ಇನ್ನೂ ಉಕ್ರೇನಿ ಸೈನಿಕರನ್ನು ಪ್ರದೇಶದಲ್ಲಿಟ್ಟುಕೊಂಡು ಸ್ವತಂತ್ರ ಎಂದು ಘೋಷಣೆ ಮಾಡಲಾಗಿದೆ. ಇದು ನಿಜವಾಗಿಯೂ ಸ್ವತಂತ್ರ ಅಲ್ಲದೇ ಇದ್ದರೂ, ದೀರ್ಘಕಾಲದ ಯುದ್ಧದಲ್ಲಿರುವ ರಷ್ಯಾಕ್ಕೆ, ತನ್ನ ಕಾರ್ಯಾಚರಣೆಯಲ್ಲಿ ಸಫಲತೆ ಕಾಣುತ್ತಿದ್ದೇನೆ ಎಂದು ತೋರಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿ, ಮಾರಿಯುಪೋಲ್‌ ಸಂಪೂರ್ಣ ಸ್ವತಂತ್ರವಾಗಿದೆ ಎಂದು ಪುಟಿನ್‌ ಘೋಷಣೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Safest Countries : ವಿಶ್ವದ ಎಲ್ಲೆಡೆ ನೋಡಿದರೂ ಯುದ್ಧ ಭೀತಿ; ಈ ದೇಶಗಳಷ್ಟೇ ಸುರಕ್ಷಿತ!

Safest Countries: ವಿಶ್ವದೆಲ್ಲೆಡೆ ಈಗ ಯುದ್ಧದ ಭೀತಿ ಎದುರಾಗಿದೆ. ಈ ನಡುವೆ ನಾವು ಹೆಚ್ಚು ಸುರಕ್ಷಿತವಾಗಿರುವುದು ಎಲ್ಲಿ ಎನ್ನುವ ಚಿಂತೆಯೂ ಕಾಡುತ್ತಿದೆ. ಒಂದು ವೇಳೆ ಯುದ್ಧ ನಡೆದರೆ ನಾವು ಯಾವ ದೇಶಕ್ಕೆ ಹೋಗಿ ಸುರಕ್ಷಿತವಾಗಿರಬಹುದು ಗೊತ್ತೇ ?

VISTARANEWS.COM


on

By

Safest Countries
Koo

ಒಂದೆಡೆ ರಷ್ಯಾ- ಉಕ್ರೇನ್ (Russia-Ukraine), ಇನ್ನೊಂದೆಡೆ ಹಮಾಸ್- ಇಸ್ರೇಲ್ (Hamas- Israel), ಮತ್ತೊಂದೆಡೆ ಇರಾನ್- ಇಸ್ರೇಲ್ (Iran- Israel) ಯುದ್ಧದಲ್ಲಿ ತೊಡಗಿದೆ. ಇದರಿಂದಾಗಿ ಮುಂದೆ ಮೂರನೇ ಮಹಾಯುದ್ಧದ (world war) ಭೀತಿ ವಿಶ್ವಕ್ಕೆ ಕಾಡುತ್ತಿದೆ. ಜಗತ್ತಿನಾದ್ಯಂತ ಈಗ ಯುದ್ಧದ ವಾತಾವರಣವಿದ್ದು ಎಲ್ಲರಲ್ಲೂ ಆತಂಕ ಮನೆ ಮಾಡಿದೆ. ಯುದ್ಧದ ಪರಿಸ್ಥಿತಿ ತಲೆದೋರಿದರೆ ಸುರಕ್ಷಿತವಾಗಿ ಇರಬಹುದಾದ ದೇಶ ಯಾವುದು (Safest Countries) ಎನ್ನುವ ಹುಡುಕಾಟದಲ್ಲೂ ಕೆಲವರಿದ್ದಾರೆ.

ತನ್ನ ರಾಯಭಾರಿ ಕಚೇರಿ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತಿಯಾಗಿ ಏಪ್ರಿಲ್ 13 ರಂದು ಇರಾನ್ ದೇಶವು ಇಸ್ರೇಲ್ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿತ್ತು. ಇದು ಮೂರನೇ ವಿಶ್ವ ಸಮರಕ್ಕೆ ಕಾರಣವಾಗಬಹುದು ಎನ್ನುವ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಈ ಯುದ್ಧವನ್ನು ತಡೆಗಟ್ಟಲು ಯುನೈಟೆಡ್ ಸ್ಟೇಟ್ಸ್ ಪ್ರಯತ್ನಿಸುತ್ತಿದೆ. ಇರಾನ್‌ನ ದಾಳಿಯು ವಿಶ್ವದೆಲ್ಲೆಡೆ ಸಂಘರ್ಷದ ವಾತಾವರಣವನ್ನು ಸೃಷ್ಟಿಸಿದೆ. ಅಲ್ಲದೇ ಇರಾನ್ ಗೆ ಎಚ್ಚರಿಕೆಯನ್ನೂ ನೀಡುತ್ತಿದೆ. ಹಮಾಸ್‌ ಮೇಲೆ ಇಸ್ರೇಲ್‌ ನಡೆಸಿರುವುದರಿಂದ ಮಧ್ಯಪ್ರಾಚ್ಯವು ಈಗಾಗಲೇ ಆಕ್ರೋಶದಲ್ಲಿದೆ.

ಇದನ್ನೂ ಓದಿ: Summer Tour: ಪಾಂಡಿಚೇರಿಯಲ್ಲಿ ಸುತ್ತು ಹಾಕುವಾಗ ಇವುಗಳನ್ನು ಮಿಸ್ ಮಾಡಿಕೊಳ್ಳಬೇಡಿ!

ಯುದ್ಧದ ಭೀತಿಗೆ ಕಾರಣ?

ಯುದ್ಧದ ಪರಿಸ್ಥಿತಿಯನ್ನು ಉಲ್ಬಣಗೊಳ್ಳಲು ಯುದ್ಧ ಸನ್ನದ್ಧವಾಗಿರುವ ರಾಷ್ಟ್ರಗಳಿಗೆ ಹಲವು ರಾಷ್ಟ್ರಗಳ ಬೆಂಬಲ, ಕೆಲವು ರಾಷ್ಟ್ರಗಳ ತಟಸ್ಥವಾಗಿರುವುದು ಕೂಡ ಕಾರಣವಾಗುತ್ತಿದೆ. ಇರಾನ್- ಇಸ್ರೇಲ್ ಯುದ್ಧದ ವೇಳೆ ಇರಾನ್, ಇರಾಕ್, ಸಿರಿಯಾ, ಲೆಬನಾನ್ ಮತ್ತು ಯೆಮೆನ್ ಮೊದಲಾದ ನೆರೆಯ ದೇಶಗಳಿಂದ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎನ್ನಲಾಗುತ್ತಿದೆ. ಮತ್ತೊಂದೆಡೆ, ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಲು ಯುನೈಟೆಡ್ ಸ್ಟೇಟ್ಸ್ ಮತ್ತು ಯುನೈಟೆಡ್ ಕಿಂಗ್ದಮ್ ಇಸ್ರೇಲ್ ನ ರಕ್ಷಣೆಗೆ ನಿಂತಿವೆ.

ಮೂರನೇ ವಿಶ್ವಯುದ್ಧದ ಆತಂಕ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಭದ್ರತಾ ಮಂಡಳಿಗೆ ನೀಡಿದ ಹೇಳಿಕೆಯಲ್ಲಿ ಮಧ್ಯಪ್ರಾಚ್ಯವು ಪ್ರಮುಖ ಸಂಘರ್ಷದ ಅಂಚಿನಲ್ಲಿದೆ ಎಂದು ಹೇಳಿದ್ದರು. ಈ ಪ್ರದೇಶದ ಜನರು ವಿನಾಶಕಾರಿ ಹಾಗೂ ಪೂರ್ಣ ಪ್ರಮಾಣದ ಸಂಘರ್ಷದ ಅಪಾಯವನ್ನು ಎದುರಿಸುತ್ತಿದ್ದಾರೆ. ಒಂದು ವೇಳೆ ಈಗ ಸಂಯಮ ತೆಗೆದುಕೊಳ್ಳದೇ ಇದ್ದರೆ ಮೂರನೇ ವಿಶ್ವಯುದ್ಧ ಉಂಟಾಗುವ ಸಂಪೂರ್ಣ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಯುದ್ಧ ಭೀತಿಯಲ್ಲಿರುವ ಮಧ್ಯಪ್ರಾಚ್ಯದಲ್ಲಿ ದೊಡ್ಡ ಜಾಗತಿಕ ಸಂಘರ್ಷ ಉಲ್ಬಣವಾದರೆ ಸಾಮಾನ್ಯ ಜನರಿಗೆ ಸುರಕ್ಷಿತ ಎಂದೆನಿಸುವ ಹತ್ತು ಪ್ರಮುಖ ರಾಷ್ಟ್ರಗಳಿವೆ.


ಗ್ರೀನ್‌ಲ್ಯಾಂಡ್

ಡೆನ್ಮಾರ್ಕ್‌ನ ಸ್ವಾಯತ್ತ ರಾಷ್ಟ್ರವಾಗಿರುವ ಗ್ರೀನ್ ಲ್ಯಾಂಡ್ ಯುದ್ಧ ಭೀತಿಯಿಂದ ದೂರದಲ್ಲಿದೆ ಮತ್ತು ರಾಜಕೀಯವಾಗಿ ಅಲಿಪ್ತವಾಗಿದೆ. ಇಲ್ಲಿ ಸಂಘರ್ಷ ಹರಡುವ ಸಾಧ್ಯತೆಗಳು ಕಡಿಮೆ.


ದಕ್ಷಿಣ ಆಫ್ರಿಕಾ

ಸ್ಥಿರವಾದ ವಿದೇಶಾಂಗ ನೀತಿ ಮತ್ತು ಆಧುನಿಕ ಮೂಲಸೌಕರ್ಯಕ್ಕೆ ಬದ್ಧತೆಯು ದಕ್ಷಿಣ ಆಫ್ರಿಕಾವನ್ನು ಯುದ್ಧದ ಸಂಭಾವ್ಯ ಅಪಾಯಗಳಿಂದ ರಕ್ಷಿಸುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ಇಲ್ಲಿ ಜನರು ಹೆಚ್ಚು ಸುರಕ್ಷಿತವಾಗಿರಬಹುದು.


ಐಸ್ ಲ್ಯಾಂಡ್

ಹೇರಳವಾದ ತಾಜಾ ನೀರಿನ ನಿಕ್ಷೇಪಗಳು, ಸಮುದ್ರ ಸಂಪನ್ಮೂಲಗಳು ಮತ್ತು ನವೀಕರಿಸಬಹುದಾದ ಇಂಧನ ಮೂಲಗಳಿಗೆ ಹೆಸರುವಾಸಿಯಾಗಿರುವ ಐಸ್ ಲ್ಯಾಂಡ್ ಮೇಲೆ ದಾಳಿ ನಡೆಯುವ ಸಾಧ್ಯತೆ ಇಲ್ಲ. ಇಲ್ಲಿ ಸಂಘರ್ಷ ಹರಡುವ ಸಾಧ್ಯತೆ ಇಲ್ಲ. ಹೀಗಾಗಿ ಇದು ಸುರಕ್ಷಿತವೆಂದೇ ಹೇಳಬಹುದು.


ಅಂಟಾರ್ಕ್ಟಿಕಾ

ಅಂಟಾರ್ಕ್ಟಿಕಾ ಇರುವ ಸ್ಥಳವು ಅದನ್ನು ಸುರಕ್ಷಿತ ಸ್ಥಳವನ್ನಾಗಿ ಮಾಡಿದೆ. ಇದು ಯುದ್ಧ ವಲಯವಾಗಿ ಬದಲಾಗುವ ಸಾಧ್ಯತೆಯಿಲ್ಲ.


ಸ್ವಿಟ್ಜರ್ಲೆಂಡ್

ಮೊದಲ ಎರಡು ವಿಶ್ವ ಯುದ್ಧಗಳಲ್ಲಿಯೂ ಇದು ಕಠಿಣವಾದ ಪರ್ವತ ಭೂಪ್ರದೇಶದಿಂದಾಗಿ ದೂರದಲ್ಲಿ ಉಳಿದಿತ್ತು. ಇಲ್ಲಿ ದೃಢವಾದ ಸಾಂಪ್ರದಾಯಿಕ ತಟಸ್ಥತೆ ಯುದ್ಧದ ಸನ್ನಿವೇಶದಿಂದ ಎಲ್ಲರನ್ನೂ ದೂರವಿರಿಸುತ್ತದೆ.


ಇಂಡೋನೇಷ್ಯಾ

ಭೌಗೋಳಿಕ ಪ್ರತ್ಯೇಕತೆ ಮತ್ತು ಬಲವಾದ ಆರ್ಥಿಕತೆಗೆ ಹೆಸರುವಾಸಿಯಾಗಿರುವ ಇಂಡೋನೇಷ್ಯಾ “ಮುಕ್ತ ಮತ್ತು ಸಕ್ರಿಯ” ವಿದೇಶಾಂಗ ನೀತಿಯನ್ನು ನಿರ್ವಹಿಸುತ್ತಿದೆ. ಹೀಗಾಗಿ ಇಲ್ಲಿ ಯುದ್ಧದ ಭೀತಿ ಇಲ್ಲ.


ಟುವಾಲು

ಪ್ರತ್ಯೇಕತೆ ಮತ್ತು ತಟಸ್ಥತೆಯಿಂದಾಗಿ ಟುವಾಲು ಅತ್ಯಂತ ಏಕಾಂತ ಮತ್ತು ರಾಜಕೀಯವಾಗಿ ಅಲಿಪ್ತವಾಗಿರುವ ರಾಷ್ಟ್ರವಾಗಿದೆ. ಹೀಗಾಗಿ ವಿಶ್ವ ಯುದ್ಧ ನಡೆದರೆ ಇದು ಅದರಿಂದ ದೂರವೇ ಉಳಿಯುತ್ತದೆ.


ನ್ಯೂಜಿಲೆಂಡ್

ಯುದ್ಧ ಸಂಘರ್ಷಗಳ ಇತಿಹಾಸವಿಲ್ಲದ ಸ್ಥಿರವಾದ ಪ್ರಜಾಪ್ರಭುತ್ವ, ತನ್ನದೇ ಆದ ಆಹಾರವನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವ ದೇಶ ನ್ಯೂಜಿಲ್ಯಾಂಡ್. ಇಲ್ಲಿ ಯುದ್ಧದ ಸಾಧ್ಯತೆ ಕಡಿಮೆ.


ಐರ್ಲೆಂಡ್

ತಟಸ್ಥತೆ ಮತ್ತು ಶಾಂತಿಯುತ ವಿದೇಶಾಂಗ ನೀತಿಗೆ ಹೆಸರುವಾಸಿಯಾಗಿರುವ ಐಲೆಂಡ್ ನಲ್ಲಿ ಯುದ್ಧ ಸಾಧ್ಯತೆಯೂ ಇಲ್ಲವೆನ್ನಬಹುದು.


ಭೂತಾನ್

ಹಿಮಾಲಯದಿಂದ ಸುತ್ತುವರೆದಿರುವ ಭೂತಾನ್‌ನ ವಿಶಿಷ್ಟ ಸ್ಥಳವು ಅಲ್ಲಿನ ಜನರಿಗೆ ಅತ್ಯುತ್ತಮವಾದ ಆಶ್ರಯವನ್ನು ಒದಗಿಸುತ್ತದೆ. ಇಲ್ಲಿ ಯುದ್ಧದ ಭೀತಿ ಇಲ್ಲವೆನ್ನಲು ಅಡ್ಡಿಯಿಲ್ಲ.

Continue Reading

ಪ್ರಮುಖ ಸುದ್ದಿ

Vladimir Putin: ಐಷಾರಾಮಿ ತಾಣದಲ್ಲಿ ವ್ಲಾದಿಮಿರ್‌ ಪುಟಿನ್‌, ಗರ್ಲ್‌ಫ್ರೆಂಡ್ ರಹಸ್ಯ ವಾಸ, ಯಾರೀಕೆ ಗೆಳತಿ?

ರಷ್ಯದ ರಾಜಧಾನಿ ಮಾಸ್ಕೋದ ವಾಯುವ್ಯದಲ್ಲಿರುವ ಈ ಎಸ್ಟೇಟ್‌ನಲ್ಲಿ ಪುಟಿನ್‌ (Vladimir Putin) ತಮ್ಮ ಬಹುಕಾಲ ಗೆಳತಿ ಮತ್ತು ಆಕೆಯ ಮಕ್ಕಳ ಜತೆಗೆ ಹಾಯಾಗಿದ್ದಾರೆ.
ಪುಟಿನ್‌ ಅವರ ಸಂಗಾತಿಯ ಹೆಸರು ಅಲಿನಾ ಕಬಯೆವಾ, ಈಕೆಗೆ 39 ವರ್ಷ. 2008ರಿಂದಲೂ ಇವರ ಹೆಸರು ಪುಟಿನ್‌ ಜತೆಗೆ ತಳುಕು ಹಾಕಿಕೊಂಡಿದೆ.

VISTARANEWS.COM


on

vladimir putin
Koo

ಕ್ರೆಮ್ಲಿನ್:‌ ಒಂದು ಕಡೆ ಉಕ್ರೇನ್‌ ದೇಶದ ಮೇಲೆ ಸೇನೆ ನುಗ್ಗಿಸಿ ಅಲ್ಲಿನ ಜನರ ಬದುಕನ್ನು ನರಕ ಮಾಡಿರುವ ರಷ್ಯ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ (Vladimir Putin) , ತಾನು ಮಾತ್ರ ರಹಸ್ಯ ಐಷಾರಾಮಿ ತಾಣದಲ್ಲಿ, ಗೆಳತಿಯ ಜತೆ ಸುಖವಾಗಿ ಮೋಜು ಮಜಾ ಮಾಡುತ್ತಾ ಇದ್ದಾರೆ.

ಹೌದು, ಅವರು ಇರುವ ಐಷಾರಾಮಿ ಎಸ್ಟೇಟ್‌ನ ಮೌಲ್ಯ ಸುಮಾರು 120 ಮಿಲಿಯ ಡಾಲರ್‌, ಅಂದರೆ ಸುಮಾರು 989 ಕೋಟಿ ರೂಪಾಯಿ. ರಷ್ಯದ ರಾಜಧಾನಿ ಮಾಸ್ಕೋದ ವಾಯುವ್ಯದಲ್ಲಿರುವ ಈ ಎಸ್ಟೇಟ್‌ನಲ್ಲಿ ಪುಟಿನ್‌ ತಮ್ಮ ಬಹುಕಾಲ ಗೆಳತಿ ಮತ್ತು ಆಕೆಯ ಮಕ್ಕಳ ಜತೆಗೆ ಹಾಯಾಗಿದ್ದಾರೆ. ಲೇಕ್‌ ವಾಲ್ಡಾಯ್‌ ತೀರದಲ್ಲಿರುವ ಈ ರಹಸ್ಯ ತಾಣವನ್ನು 2020ರಲ್ಲಿ ನಿರ್ಮಿಸಲಾಗಿದೆ. ಸುಮಾರು 13,000 ಚದರಡಿ ವಿಸ್ತಾರವಾಗಿರುವ ಬಂಗಲೆಯನ್ನು ಪೂರ್ತಿಯಾಗಿ ಮರದಿಂದ ರಷ್ಯನ್‌ ವಾಸ್ತುಶಿಲ್ಪ ಬಳಸಿ ನಿರ್ಮಿಸಲಾಗಿದೆಯಂತೆ.

ಪುಟಿನ್‌ ನೆಲೆಸಿರುವ ತಾಣದ ಬಗ್ಗೆ ಮೊದಲು ಅಲ್ಲಿನ ಪ್ರತಿಪಕ್ಷ ಮುಖಂಡ ಅಲೆಕ್ಸಿ ನವಲ್ನಿ ವರದಿ ಮಾಡಿದ್ದರು. ಇಲ್ಲಿರುವ ಪುಟಿನ್‌ ಅವರ ಬೆಡ್‌ರೂಂ, ಚಿನ್ನದ ಕುರ್ಚಿಗಳು, ಚಿನ್ನದ ತೂಗುದೀಪ ಮುಂತಾದ ಫೋಟೋಗಳು ಬಹಿರಂಗಗೊಂಡಿವೆ.

ಯಾರೀಕೆ ಕಬಯೆವಾ?

ಪುಟಿನ್‌ ಅವರ ಸಂಗಾತಿಯ ಹೆಸರು ಅಲಿನಾ ಕಬಯೆವಾ, ಈಕೆಗೆ 39 ವರ್ಷ. 2008ರಿಂದಲೂ ಇವರ ಹೆಸರು ಪುಟಿನ್‌ ಜತೆಗೆ ತಳುಕು ಹಾಕಿಕೊಂಡಿದೆ. ರಷ್ಯಾದ ಮಾಜಿ ಜಿಮ್ನಾಸ್ಟ್‌ ಕೂಡ ಆಗಿರುವ ಕಬಯೆವಾ ಮೊದಲು ನಾಲ್ಕು ಮಕ್ಕಳಿಗೆ ಸ್ವಿಜರ್ಲೆಂಡ್‌ನಲ್ಲಿ ಜನ್ಮ ನೀಡಿದ್ದರು. ಪುಟಿನ್‌ ಅವರಿಂದ ಐದನೇ ಮಗು ಪಡೆಯುತ್ತಿದ್ದಾರೆ ಎಂಬ ರೂಮರ್‌ಗಳು ಈ ಮೊದಲು ಹರಡಿದ್ದವು. ಅಲಿನಾ ರಷ್ಯಾದ ಸಂಸತ್ತು ಎನಿಸಿಕೊಂಡಿರುವ ಡುಮಾದ ಮಾಜಿ ಸದಸ್ಯರೂ ಆಗಿದ್ದಾರೆ. ರಷ್ಯಾದ ಪರವಾಗಿ ಮಾತನಾಡುವ ಟಿವಿ, ರೇಡಿಯೋ ಹಾಗೂ ಮುದ್ರಣ ಮಾಧ್ಯಮ ಸಂಸ್ಥೆಗಳ ಗುಂಪು ಎನಿಸಿಕೊಂಡಿರುವ ರಷ್ಯಾದ ರಾಷ್ಟ್ರೀಯ ಮಾಧ್ಯಮ ಗುಂಪಿನ ಮುಖ್ಯಸ್ಥರಾಗಿದ್ದಾರೆ.

ಕಬಯೆವಾ ರಷ್ಯಾದ ಅಗ್ರಗಣ್ಯ ಮಹಿಳಾ ಜಿಮ್ನಾಸ್ಟ್. 2000ರಲ್ಲಿ ಸಿಡ್ನಿ ಒಲಂಪಿಕ್ ಕ್ರೀಡಾಕೂಟದಲ್ಲಿ ಕಂಚಿನ ಪದಕ, 2004ರ ಅಥೆನ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ, ವಿವಿಧ ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಒಟ್ಟು 14 ಪದಕಗಳನ್ನು ಗೆದ್ದುಕೊಟ್ಟಿದ್ದಾರೆ. ಈ ಹಿಂದೆ ಒಬ್ಬ ಪೋಲೀಸ್‌ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳೆಂದು ಹೇಳಲಾಗಿತ್ತು; ಆದರೆ 2008ರಿಂದೀಚೆಗೆ ಪುಟಿನ್ ಜೊತೆ ಸಂಬಂಧ ಹೊಂದಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ: ಬೈಡೆನ್ ಉಕ್ರೇನ್ ಭೇಟಿ ಎಫೆಕ್ಟ್! ಅಮೆರಿಕ ಜತೆ ಪರಮಾಣು ಒಪ್ಪಂದ ಮಾತುಕತೆ ಇಲ್ಲ ಎಂದ ರಷ್ಯಾ ಅಧ್ಯಕ್ಷ ಪುಟಿನ್

Continue Reading

ದೇಶ

Russia-Ukraine War:‌ ರಷ್ಯಾ ವಿರುದ್ಧ ವಿಶ್ವಸಂಸ್ಥೆ ನಿರ್ಣಯ, ಮತದಾನದಿಂದ ಹೊರಗುಳಿದ ಭಾರತ

ಉಕ್ರೇನ್‌ನ ಮೇಲೆ ರಷ್ಯಾ ಯುದ್ಧ ಸಾರಿ (Russia-Ukraine War) ಒಂದು ವರ್ಷವಾಗಿದೆ. ಅಸಂಖ್ಯ ಜೀವಹಾನಿಯಾಗಿದೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಉಕ್ರೇನ್‌ನಿಂದ ಸೈನ್ಯ ಹಿಂದೆಗೆಯಲು ರಷ್ಯಾವನ್ನು ಆಗ್ರಹಿಸುವ ಗೊತ್ತುವಳಿಯನ್ನು ಮಂಡಿಸಲಾಗಿದೆ.

VISTARANEWS.COM


on

ukraine
Koo

ನವ ದೆಹಲಿ: ಉಕ್ರೇನ್‌ನಿಂದ ಸೇನಾಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ರಷ್ಯಾವನ್ನು ಆಗ್ರಹಿಸುವ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಕುರಿತು ಮತದಾನ ನಡೆದಿದ್ದು, ಈ ಮತದಾನದಲ್ಲಿ ಭಾಗವಹಿಸದೆ ಭಾರತ ಆಚೆಗೆ ಉಳಿದಿದೆ.

ಉಕ್ರೇನ್‌ನ ಮೇಲೆ ರಷ್ಯಾ ಯುದ್ಧ ಸಾರಿ (Russia-Ukraine War) ಒಂದು ವರ್ಷವಾಗಿದೆ. ಅಸಂಖ್ಯ ಜೀವಹಾನಿಯಾಗಿದೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಉಕ್ರೇನ್‌ನಿಂದ ಸೈನ್ಯ ಹಿಂದೆಗೆಯಲು ರಷ್ಯಾವನ್ನು ಆಗ್ರಹಿಸುವ ಗೊತ್ತುವಳಿಯನ್ನು 180 ಸದಸ್ಯ ರಾಷ್ಟ್ರಗಳಿರುವ ವಿಶ್ವಸಂಸ್ಥೆ ಮಹಾಸಭೆಯಲ್ಲಿ ಮತಕ್ಕೆ ಹಾಕಿದಾಗ, 141 ದೇಶಗಳು ಅದನ್ನು ಬೆಂಬಲಿಸಿವೆ. ರಷ್ಯಾ ಸೇರಿದಂತೆ 7 ದೇಶಗಳು ವಿರೋಧಿಸಿವೆ. ಭಾರತ, ಚೀನಾ ಸೇರಿದಂತೆ 32 ದೇಶಗಳು ಈ ಮತದಾನದಿಂದ ಹೊರಗೆ ಉಳಿದಿವೆ.

ಆದರೆ, ಉಕ್ರೇನ್‌ನ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಭಾರತಕ್ಕೆ ಕಳವಳವಿದೆ. ಅಸಂಖ್ಯ ಜೀವಹಾನಿ ಹಾಗೂ ನಿರಾಶ್ರಯಕ್ಕೆ ಕಾರಣವಾಗಿರುವ ಈ ಯುದ್ಧವನ್ನು ಆದಷ್ಟು ಬೇಗ ಕೈಬಿಟ್ಟು ಉಭಯ ದೇಶಗಳು ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂಬುದರಲ್ಲಿ ಭಾರತ ವಿಶ್ವಾಸ ಹೊಂದಿದೆ. ಇಂದಿನ ನಿರ್ಣಯ ಈ ವಿಚಾರದಲ್ಲಿ ಸೀಮಿತವಾಗಿರುವುದರಿಂದ ಭಾರತ ಮತದಾನದಿಂದ ಆಚೆ ಉಳಿಯುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯಾಗಿರುವ ರುಚಿರಾ ಕಾಂಬೋಜ್‌ ಹೇಳಿದ್ದಾರೆ.

ಇದನ್ನೂ ಓದಿ: Russia-Ukraine War : ಯುದ್ಧದ ಭೀಕರತೆ ಹೇಗಿರುತ್ತವೆ ಎಂಬುದಕ್ಕೆ ರಷ್ಯಾ- ಉಕ್ರೇನ್​ ಕದನ ಈ ಚಿತ್ರಗಳೇ ಸಾಕ್ಷಿ

Continue Reading

ತಂತ್ರಜ್ಞಾನ

ಗಾಳಿಯನ್ನೇ ಹೀರುವ vacuum bomb! ಸ್ಮಶಾನವನ್ನೇ ಸೃಷ್ಟಿಸಬಲ್ಲ ಇದರ ಮಾಹಿತಿ ಇಲ್ಲಿದೆ

ಉಕ್ರೇನ್‌ನಲ್ಲಿ ರಷ್ಯಾ ವ್ಯಾಕ್ಯೂಮ್‌ ಬಾಂಬ್‌ (ಥರ್ಮೋಬೇರಿಕ್‌ ಬಾಂಬ್‌)ಗಳನ್ನು ಪ್ರಯೋಗಿಸುತ್ತಿದೆ ಎನ್ನಲಾಗಿದೆ. ಈ vacuum bomb ಬರ್ಬರತೆ ಏನು? ಇಲ್ಲಿದೆ ವಿವರ.

VISTARANEWS.COM


on

vacuum bomb
Koo

— ಗಿರೀಶ್ ಲಿಂಗಣ್ಣ

ವ್ಯಾಕ್ಯೂಮ್ ಬಾಂಬ್ ಅಥವಾ ಥರ್ಮೋಬೇರಿಕ್ ಆಯುಧಗಳು ಎರಡು ಹಂತಗಳಲ್ಲಿ ಕಾರ್ಯ ನಿರ್ವಹಿಸುತ್ತವೆ. ಮೊದಲ ಹಂತದಲ್ಲಿ ಇದು ದಹನಕಾರಿ ವಸ್ತುಗಳ ದಟ್ಟ ಮೋಡವನ್ನು ಸೃಷ್ಟಿಸುತ್ತದೆ. ಸಾಮಾನ್ಯವಾಗಿ ಇದು ಇಂಧನ ಅಥವಾ ಅಲ್ಯೂಮಿನಿಯಂನಂತಹ ಲೋಹದ ಸಣ್ಣ ಕಣಗಳನ್ನು ಒಳಗೊಂಡಿರುತ್ತದೆ. ಎರಡನೇ ಹಂತದಲ್ಲಿ ಒಂದು ಸ್ಫೋಟ ನಡೆಯುತ್ತದೆ. ಈ ಸ್ಫೋಟ ಒಂದು ಬೃಹತ್ ಬೆಂಕಿಯ ಚೆಂಡು ಮತ್ತು ಶಾಕ್ ವೇವ್‌ಗಳನ್ನು ಉಂಟು ಮಾಡುತ್ತದೆ. ಇದು ಮೊದಲ ಹಂತದ ದಹನಕಾರಿ ವಸ್ತುಗಳನ್ನು ಸುಡುತ್ತಾ, ಎಲ್ಲೆಡೆ ಬೆಂಕಿ ಹರಡುತ್ತದೆ.

ಈ ಸ್ಫೋಟ ಒಂದು ರೀತಿ ಕಲ್ಲಿದ್ದಲು ಗಣಿಗಳಲ್ಲಿ ಅಥವಾ ಹಿಟ್ಟಿನ ಗಿರಣಿಗಳಲ್ಲಿ ಆಕಸ್ಮಿಕವಾಗಿ ನಡೆಯುವ ಧೂಳಿನ ಸ್ಫೋಟದಂತೆ ಕಂಡುಬರುತ್ತದೆ. ಆ ಧೂಳಿನ ಸ್ಫೋಟಗಳಲ್ಲಿ ಸುಲಭವಾಗಿ ಬೆಂಕಿ ಹಿಡಿಯುವ ಕಣಗಳು ಗಾಳಿಯಲ್ಲಿ ಎಲ್ಲೆಡೆ ಚದುರಿ, ಬಳಿಕ ಬೆಂಕಿ ಹತ್ತಿಕೊಂಡು, ಬೃಹತ್ ಪ್ರಮಾಣದ ಸ್ಫೋಟ ಉಂಟಾಗುವಂತೆ ಮಾಡುತ್ತವೆ.

vacuum bomb

ಥರ್ಮೋಬೇರಿಕ್ ಆಯುಧಗಳನ್ನು ವ್ಯಾಕ್ಯುಮ್ ಬಾಂಬ್ ಎಂದೂ ಕರೆಯಲಾಗುತ್ತದೆ. ಯಾಕೆಂದರೆ ಈ ಸ್ಫೋಟ ಉಪಕರಣದ ಸುತ್ತಲೂ ಇರುವ ಆಮ್ಲಜನಕವನ್ನು ಸಂಪೂರ್ಣವಾಗಿ ಹೀರಿಬಿಡುತ್ತದೆ. ಈ ರೀತಿ ಆದಾಗ ಸ್ಫೋಟದ ಸ್ಥಳದಲ್ಲಿ ಉಳಿದ ವ್ಯಕ್ತಿಗಳು ಉಸಿರಾಡಲೂ ಸಾಧ್ಯವಾಗದಂತೆ ಮಾಡಿ, ಉಸಿರುಕಟ್ಟಿ ಸಾಯುವಂತೆ ಮಾಡುತ್ತದೆ. ಉಸಿರು ಕಟ್ಟಿಸುವುದು ಮಾತ್ರವಲ್ಲದೆ, ಈ ಸ್ಫೋಟದ ಸಂದರ್ಭದಲ್ಲಿ ಉಂಟಾಗುವ ಒತ್ತಡ ಆ ಪ್ರದೇಶದಲ್ಲಿ ಇರುವ ವ್ಯಕ್ತಿಗಳನ್ನು ಸಾಯುವಂತೆ ಮಾಡಿಬಿಡುತ್ತದೆ. ಅದು ಮನುಷ್ಯರ ದೇಹದ ಪ್ರಮುಖ ಅಂಗಗಳನ್ನೂ ಹಾನಿಗೊಳಿಸುತ್ತದೆ. ಉದಾಹರಣೆಗೆ ಅದು ಶ್ವಾಸಕೋಶವನ್ನೇ ಹಾಳುಗೆಡವುತ್ತದೆ.

ಇದನ್ನೂ ಓದಿ | ಸಮರಾಂಕಣ | ಅಗ್ನಿ 5 ಕ್ಷಿಪಣಿ: ಭಾರತದ ಬತ್ತಳಿಕೆಯಲ್ಲಿದೆ ಐಸಿಬಿಎಂ ಅಸ್ತ್ರ

ಥರ್ಮೋಬೇರಿಕ್ ಆಯುಧಗಳ ಪರಿಣಾಮ ಯಾವದೇ ಸಾಂಪ್ರದಾಯಿಕ ಬಾಂಬ್‌ಗಿಂತ ಹೆಚ್ಚಾಗಿರುತ್ತದೆ. ಈ ಸ್ಫೋಟ ಬಹಳ ದೀರ್ಘಕಾಲ ನಡೆಯುತ್ತದೆ ಮಾತ್ರವಲ್ಲದೆ ಆ ಸ್ಫೋಟದ ತಾಪಮಾನವೂ ಅತ್ಯಂತ ಹೆಚ್ಚಾಗಿರುತ್ತದೆ. ಇದರ ಪರಿಣಾಮವಾಗಿ, ಈ ಆಯುಧಗಳು ಬಹುದೊಡ್ಡ ಭೂ ಪ್ರದೇಶವನ್ನೂ ನಾಶಪಡಿಸಬಲ್ಲವು, ಕಟ್ಟಡಗಳನ್ನು ಧ್ವಂಸಗೊಳಿಸಬಲ್ಲವು. ಇದರಲ್ಲಿ ಸೃಷ್ಟಿಯಾಗುವ ಅತ್ಯಂತ ಗರಿಷ್ಠ ಪ್ರಮಾಣದ ತಾಪಮಾನದಲ್ಲಿ ಮಾನವ ದೇಹವೂ ಆವಿಯಾಗಿ ಹೋಗುವ ಸಾಧ್ಯತೆಗಳಿವೆ. ಅದರೊಡನೆ ಥರ್ಮೋಬೇರಿಕ್ ಆಯುಧಗಳಲ್ಲಿ ಬಳಸುವ ಉಪಕರಣಗಳು ಸಾಮಾನ್ಯವಾಗಿ ಅತ್ಯಂತ ವಿಷಕಾರಿಯಾಗಿದ್ದು, ರಾಸಾಯನಿಕ ಆಯುಧಗಳಷ್ಟೇ ಅಪಾಯಕಾರಿಯಾಗಿರುತ್ತವೆ.

ಥರ್ಮೋಬೇರಿಕ್ ಆಯುಧಗಳು ಭಾರೀ ಶಸ್ತ್ರಸಜ್ಜಿತ ಸೇನೆಯ ವಿರುದ್ಧ ಅತ್ಯಂತ ಪರಿಣಾಮಕಾರಿ ಎನ್ನಲಾಗುವುದಿಲ್ಲ. ಆದ್ದರಿಂದ ಅವುಗಳನ್ನು ಟ್ಯಾಂಕ್‌ನಂತಹ ಗುರಿಗಳ ವಿರುದ್ಧ ಬಳಸಿಕೊಳ್ಳಲು ಸಾಧ್ಯವಿಲ್ಲ. ಅವುಗಳನ್ನು ಮೂಲಭೂತ ಸೌಕರ್ಯಗಳನ್ನು ನಾಶಪಡಿಸಲು, ಸೇನಾಪಡೆಗಳನ್ನು ಹಾಗೂ ನಾಗರಿಕರನ್ನು ಸಂಹರಿಸಲು ಬಳಸಬಹುದಾಗಿದೆ.

ಇದನ್ನೂ ಓದಿ | ಸಮರಾಂಕಣ | ಭಾರತದ ನೌಕಾಸೇನೆಯಲ್ಲಿ ಸದ್ದಿಲ್ಲದ ಕ್ರಾಂತಿ- INS ವಿಕ್ರಾಂತ್‌

Continue Reading
Advertisement
MS Dhoni
Latest28 seconds ago

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

Mahesh Babu shares sweet moments with sister Manjula and Prabhas aunt
South Cinema8 mins ago

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Kavya Maran
ಪ್ರಮುಖ ಸುದ್ದಿ24 mins ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್26 mins ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

viral video tn rao
ಪ್ರಮುಖ ಸುದ್ದಿ30 mins ago

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Ramana Avatara trailer out
ಸಿನಿಮಾ31 mins ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 202432 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
ಪ್ರಮುಖ ಸುದ್ದಿ47 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ57 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ1 hour ago

Physical Abuse: ಮದುವೆಗೊಪ್ಪದ ಬಾಲಕಿಯ ಅತ್ಯಾಚಾರ; ಕೆನ್ನೆಯ ಮೇಲೆ ಬಿಸಿ ಕಬ್ಬಿಣದಿಂದ ಪಾಗಲ್‌ ಪ್ರೇಮಿ ಹೆಸರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 202432 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202420 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202422 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202424 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌