ಏರ್‌ ಏಷ್ಯಾವನ್ನೂ ಖರೀದಿಸಲು ಮುಂದಾದ TATA: ಪೂರ್ಣ ಮಾಲೀಕತ್ವ ಕುರಿತು ಪ್ರಸ್ತಾಪ - Vistara News

ವಾಣಿಜ್ಯ

ಏರ್‌ ಏಷ್ಯಾವನ್ನೂ ಖರೀದಿಸಲು ಮುಂದಾದ TATA: ಪೂರ್ಣ ಮಾಲೀಕತ್ವ ಕುರಿತು ಪ್ರಸ್ತಾಪ

ಕಡಿಮೆ ದರದಲ್ಲಿ ವಿಮಾನಯಾನ ಸೌಲಭ್ಯ ಒದಗಿಸುವ ಹೆಗ್ಗಳಿಕೆಯನ್ನು ಏರ್‌ ಏಷ್ಯಾ ಹೊಂದಿದೆ. ಮಲೇಷ್ಯಾ ಮೂಲದ ಏರ್‌ ಏಷ್ಯಾ, ಭಾರತದಲ್ಲಿ ಏರ್‌ ಏಷ್ಯಾ ಇಂಡಿಯಾ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತದೆ.

VISTARANEWS.COM


on

ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ವಾತಂತ್ರ್ಯದ ನಂತರ ತನ್ನ ಕೈತಪ್ಪಿದ್ದ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು 70 ವರ್ಷಸದ ನಂತರ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ ಟಾಟಾ ಸಮೂಹ ಇದೀಗ ಮತ್ತೊಂದು ವಿಮಾನಯಾನ ಸಂಸ್ಥೆ ಏರ್‌ ಏಷ್ಯಾದ ಸಂಪೂರ್ಣ ಮಾಲೀಕತ್ವ ಹೊಂದಲು ಮುಂದಾಗಿದೆ.

ಆಟೊಮೊಬೈಲ್‌ನಿಂದ ಸ್ಟೀಲ್‌ವರೆಗೆ ಅನೇಕ ಉದ್ಯಮಗಳನ್ನು ಹೊಂದಿರುವ ಟಾಟಾ ಸಮೂಹ ಇದೀಗ ಭಾರತೀಯ ಸ್ಪರ್ಧಾ ಆಯೋಗಕ್ಕೆ ( Competition Commission of India) ಈ ಕುರಿತು ಅರ್ಜಿ ಸಲ್ಲಿಸಿದೆ.

ಕಡಿಮೆ ದರದಲ್ಲಿ ವಿಮಾನಯಾನ ಸೌಲಭ್ಯ ಒದಗಿಸುವ ಹೆಗ್ಗಳಿಕೆಯನ್ನು ಏರ್‌ ಏಷ್ಯಾ ಹೊಂದಿದೆ. ಮಲೇಷ್ಯಾ ಮೂಲದ ಏರ್‌ ಏಷ್ಯಾ, ಭಾರತದಲ್ಲಿ ಏರ್‌ ಏಷ್ಯಾ ಇಂಡಿಯಾ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತದೆ. 2013ರಲ್ಲಿ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸಿದ ಸಂಸ್ಥೆಯಲ್ಲಿ ಏರ್‌ ಏಷ್ಯಾ 49%, ಉದ್ಯಮಿ ಅರುಣ್‌ ಭಾಟಿಯಾ 21% ಹಾಗೂ ಟಾಟಾ ಸನ್ಸ್‌ 30% ಪಾಲು ಹೊಂದಿದ್ದವು. ಏರ್‌ ಇಂಡಿಯಾವನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆದ ನಂತರ ವಿನಾನಯಾನ ಕ್ಷೇತ್ರದಿಂದ ಟಾಟಾ ಸನ್ಸ್‌ 60 ವರ್ಷ ಹೊರಗಿತ್ತು. ಆರು ದಶಕದ ನಂತರ ಈ ಕ್ಷೇತ್ರಕ್ಕೆ ಟಾಟಾ ಮತ್ತೆ ಪಾದಾಪರ್ಪಣೆ ಮಾಡಿತ್ತು.

ಪ್ರತಿ ವರ್ಷ ನಷ್ಟಕ್ಕೆ ಸಿಲುಕಿ ಕೇಂದ್ರ ಸರ್ಕಾರಕ್ಕೂ ಭಾರೀ ಹೊರೆಯಾಗಿದ್ದ ಏರ್‌ ಇಂಡಿಯಾವನ್ನು ಇತ್ತೀಚೆಗಷ್ಟೆ $240 ಕೋಟಿ ನೀಡಿ ಖರೀದಿಸಿತ್ತು. ಸದ್ಯ ಏರ್‌ ಏಷ್ಯಾದಲ್ಲಿ ಟಾಟಾ ಸನ್ಸ್‌ 83.67% ಪಾಲು ಹೊಂದಿದೆ. ಏರ್‌ ಏಷ್ಯಾ ಇಂಡಿಯಾ ಲಿಮಿಟೆಡ್‌ ಪಾಲು 16.33% ಪಾಲು ಹೊಂದಿದೆ. ತಮ್ಮದೇ ವಿಮಾನಯಾನ ಸಂಸ್ಥೆಯನ್ನು ಹೊಂದಿರುವ ಟಾಟಾ, ಮತ್ತೊಂದು ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದುವುದು ತಾರ್ಕಿಕವಾಗಿ ಸರಿ ಕಾಣುವುದಿಲ್ಲ ಎಂಬ ಚರ್ಚೆ ನಡೆದಿತ್ತು. ಇದೀಗ ಸ್ಪರ್ಧಾ ಆಯೋಗಕ್ಕೆ ಅರ್ಜಿ ಸಲ್ಲಿಸಿರುವ ಟಾಟಾ, ಏರ್‌ ಏಷ್ಯಾದ ಸಂಪೂರ್ಣ ಮಾಲೀಕತ್ವವನ್ನು ಹೊಂದುವುದರಿಂದ ಭಾರತದಲ್ಲಿ ಸ್ಪರ್ಧಾ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದೆ.ʼಖಾಸಗಿ ಸಂಸ್ಥೆಗಳು ಮತ್ತೊಂದು ಸಂಸ್ಥೆಯನ್ನು ನಾಶ ಮಾಡಲು ಅನಾರೋಗ್ಯಕರ ಸ್ಪರ್ಧೆಗಳು, ಉತ್ಪಾದನಾ ವೆಚ್ಚಕ್ಕಿಂತಲೂ ತೀರಾ ಅಗ್ಗದಲ್ಲಿ ಉತ್ಪನ್ನಗಳನ್ನು ಮಾರುವುದು ಮುಂತಾದ ನಕಾರಾತ್ಮಕ ತಂತ್ರಗಳನ್ನು ಬಳಸುವುದನ್ನು ತಡೆಯಲು ಭಾರತೀಯ ಸ್ಪರ್ಧಾ ಆಯೋಗ ಕಾರ್ಯನಿರ್ವಹಿಸುತ್ತದೆ.

ಏರ್‌ ಇಂಡಿಯಾ ಅತ್ಯಂತ ಹೆಚ್ಚು ರನ್‌ ವೇ ಪರವಾನಗಿಯನ್ನು ಹೊಂದಿದೆಯಾದರೂ ಈಗಾಗಲೆ ಹಳೆಯದಾಗಿರುವ ವಿಮಾನಗಳನ್ನು ಬದಲಾಯಿಸುವ ಸವಾಲು ಎದುರಿಗಿದೆ.

ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ ಎಂದ BSY: ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Bank Loan Fraud: ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Bank Loan Fraud
Koo

ನವದೆಹಲಿ: 17 ಸದಸ್ಯರ ಬ್ಯಾಂಕ್ ಒಕ್ಕೂಟಕ್ಕೆ 34,000 ಕೋಟಿ ರೂ. ವಂಚನೆ ಮಾಡಿದ (Bank Loan Fraud) ಆರೋಪದ ಮೇಲೆ ಡಿಎಚ್ಎಫ್ಎಲ್ ಮಾಜಿ ನಿರ್ದೇಶಕ ಧೀರಜ್ ವಾಧ್ವಾನ್ ಅವರನ್ನು ಸಿಬಿಐ ಮಂಗಳವಾರ ಬಂಧಿಸಿದೆ ಸೋಮವಾರ ರಾತ್ರಿ ಮುಂಬೈನಲ್ಲಿ ವಶಕ್ಕೆ ಪಡೆದ ವಾಧ್ವಾನ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅದು ಅವರನ್ನು ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಡಿಎಚ್ಎಫ್ಎಲ್​​ನ ಮಾಜಿ ನಿರ್ದೇಶಕ ಮತ್ತು ಅವರ ಸಹೋದರ ಕಪಿಲ್ ಅವರನ್ನು ಈ ಹಿಂದೆ ಜುಲೈ 19, 2022 ರಂದು ಬಂಧಿಸಲಾಗಿತ್ತು. ಅಕ್ಟೋಬರ್ 15, 2022 ರಂದು ಕಪಿಲ್ ಮತ್ತು ಧೀರಜ್ ಸೇರಿದಂತೆ 75 ಸಂಸ್ಥೆಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್​ ಸಲ್ಲಿಸಲಾಗಿತ್ತು. ತನಿಖೆ ಅಪೂರ್ಣವಾಗಿದೆ ಮತ್ತು ಸಲ್ಲಿಸಲಾದ ಚಾರ್ಜ್​ಶೀಟ್​ನಲ್ಲಿ ತೊಡಕುಗಳಿಗೆ ಎಂಬ ಆಧಾರದ ಮೇಲೆ ಅವರಿಗೆ ಡಿಸೆಂಬರ್ 3, 2022 ರಂದು ವಿಶೇಷ ನ್ಯಾಯಾಲಯದಿಂದ “ಶಾಸನಬದ್ಧ” ಜಾಮೀನು ನೀಡಿತ್ತು. ಈ ಆದೇಶವನ್ನು ದೆಹಲಿ ಹೈಕೋರ್ಟ್ ಕೂಡ ಎತ್ತಿಹಿಡಿದಿದೆ.

ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮತ್ತು ಇತ್ಯರ್ಥಪಡಿಸಿದ ಕಾನೂನು ಸ್ಥಾನವನ್ನು ನಿರ್ಲಕ್ಷಿಸುವಲ್ಲಿ “ಕಾನೂನಿನ ಗಂಭೀರ ತಪ್ಪು ಮಾಡಿದೆ” ಎಂದು ಉಲ್ಲೇಖಿಸಿ ಜಾಮೀನು ಆದೇಶಗಳನ್ನು ಸರ್ವೋಚ್ಛ ರದ್ದುಗೊಳಿಸಿತು.

ಏತನ್ಮಧ್ಯೆ, ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಧೀರಜ್ ವಾಧ್ವಾನ್ ಮತ್ತು ಅವರ ಸಹೋದರ ಕಪಿಲ್ ವಾಧ್ವಾನ್ ಮತ್ತು ಅಜಯ್ ನವಂದರ್ ಈ ಆರೋಪಿಗಳಾಗಿದ್ದಾರೆ.

ಸಾಲ ವಾಪಸ್​ ಕೊಡದ ಡಿಎಚ್​ಎಲ್​ಎಫ್​

2010 ಮತ್ತು 2018 ರ ನಡುವೆ ಡಿಎಚ್ಎಫ್ಎಲ್​ಗೆ 42,871 ಕೋಟಿ ರೂ.ಗಳ ಸಾಲ ನೀಡಿದ್ದ 17 ಸದಸ್ಯರ ಸಾಲದಾತ ಒಕ್ಕೂಟದ ಮುಂಚೂಣಿ ಸಂಸ್ಥೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಮೇರೆಗೆ ಸಿಬಿಐ ವಾಧ್ವಾನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಕಪಿಲ್ ಮತ್ತು ಧೀರಜ್ ವಾಧ್ವಾನ್ ಇತರರೊಂದಿಗೆ ಕ್ರಿಮಿನಲ್ ಪಿತೂರಿ ಮಾಡಿದ್ದು ಸತ್ಯ ಮರೆ ಮಾಚಲಾಗಿದೆ ಎಂದು ಹೇಳಲಾಗಿದೆ. ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮಾಡಿದ್ದಾರೆ ಮತ್ತು 2019 ರ ಮೇ ತಿಂಗಳಿನಿಂದ ಸಾಲ ಮರುಪಾವತಿಯಲ್ಲಿ ವಿಫಲರಾಗುವ ಮೂಲಕ ಒಕ್ಕೂಟಕ್ಕೆ 34,615 ಕೋಟಿ ರೂ.ಗಳನ್ನು ವಂಚಿಸಲಾಗಿದೆ. ಅಲ್ಲದೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ತನ್ನ ಚಾರ್ಜ್​ಶೀಟ್​ನಲ್ಲಿ ಆರೋಪಿಸಿದೆ.

Continue Reading

ಮನಿ-ಗೈಡ್

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Money Guide: ಟೈಮ್ ಡೆಪಾಸಿಟ್ ಅಥವಾ ಟರ್ಮ್ ಡೆಪಾಸಿಟ್ ಎಂದೂ ಕರೆಯಲ್ಪಡುವ ನಿಶ್ಚಿತ ಠೇವಣಿ ಭಾರತೀಯರ ನೆಚ್ಚಿನ ಹೂಡಿಕೆಯ ಆಯ್ಕೆ ಎನಿಸಿಕೊಂಡಿದೆ. ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇದು ಉತ್ತಮ. ಈ ಯೋಜನೆ ಮುಖಾಂತರ ಹೂಡಿಕೆದಾರರು ತಮ್ಮ ಹೆಚ್ಚುವರಿ ಹಣವನ್ನು ನಿಗದಿತ ಅವಧಿಗೆ ಠೇವಣಿ ಇರಿಸಿಕೊಳ್ಳಬಹುದು. ಫಿಕ್ಸೆಡ್ ಡೆಪಾಸಿಟ್‌ಗೆ ವಿವಿಧ ಬ್ಯಾಂಕ್‌ಗಳು ಎಷ್ಟು ಬಡ್ಡಿದರ ನೀಡುತ್ತವೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಟೈಮ್ ಡೆಪಾಸಿಟ್ ಅಥವಾ ಟರ್ಮ್ ಡೆಪಾಸಿಟ್ ಎಂದೂ ಕರೆಯಲ್ಪಡುವ ನಿಶ್ಚಿತ ಠೇವಣಿ (Fixed Deposit) ಭಾರತೀಯರ ನೆಚ್ಚಿನ ಹೂಡಿಕೆಯ ಆಯ್ಕೆ ಎನಿಸಿಕೊಂಡಿದೆ. ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇದು ಉತ್ತಮ. ಈ ಯೋಜನೆ ಮುಖಾಂತರ ಹೂಡಿಕೆದಾರರು ತಮ್ಮ ಹೆಚ್ಚುವರಿ ಹಣವನ್ನು ನಿಗದಿತ ಅವಧಿಗೆ ಠೇವಣಿ ಇರಿಸಿಕೊಳ್ಳಬಹುದು. ಆಯ್ಕೆ ಮಾಡಿದ ಅವಧಿಗೆ ಸ್ಥಿರ ಬಡ್ಡಿಯನ್ನೂ ಪಡೆಯಬಹುದು ಎನ್ನುವ ಕಾರಣಕ್ಕೆ ಇದು ಅನೇಕರ ಗಮನ ಸೆಳೆಯುತ್ತದೆ. ಹೂಡಿಕೆಯ ಅವಧಿಯನ್ನು ಅವಲಂಬಿಸಿ ವಿವಿಧ ಬ್ಯಾಂಕ್‌ಗಳು ಶೇ. 3ರಿಂದ 7.50 ರವರೆಗೆ ಬಡ್ಡಿದರಗಳನ್ನು ನೀಡುತ್ತವೆ. ಹಿರಿಯ ನಾಗರಿಕರು ಹೆಚ್ಚುವರಿ ಶೇ. 0.5 ಬಡ್ಡಿಯೂ ಲಭ್ಯ. ಇಂದಿನ ಮನಿಗೈಡ್‌ (Money Guide)ನಲ್ಲಿ ಫಿಕ್ಸೆಡ್ ಡೆಪಾಸಿಟ್‌ಗೆ ವಿವಿಧ ಬ್ಯಾಂಕ್‌ಗಳು ಎಷ್ಟು ಬಡ್ಡಿದರ ನೀಡುತ್ತವೆ ಎನ್ನುವುದನ್ನು ಗಮನಿಸೋಣ.

ನಿಶ್ಚಿತ ಠೇವಣಿಯಲ್ಲಿ ಹೂಡಿಕೆಯ ಅವಧಿ ಮತ್ತು ಬಡ್ಡಿದರವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಸಾಮಾನ್ಯವಾಗಿ 7 ದಿನಗಳಿಂದ 10 ವರ್ಷಗಳವರೆಗಿನ ಅವಧಿಯಲ್ಲಿ ನೀವು ಒಂದು ಬಾರಿ ಹೂಡಿಕೆ ಮಾಡಬಹುದು. ಇದರ ಮೇಲಿನ ಬಡ್ಡಿಯನ್ನು ನಿಯಮಿತ ಮಧ್ಯಂತರಗಳಲ್ಲಿ ಪಡೆಯಬಹುದು ಅಥವಾ ನೀವು ಮುಕ್ತಾಯದ ಸಮಯದಲ್ಲಿ ಅದನ್ನು ಸ್ವೀಕರಿಸುವ ಆಯ್ಕೆಯನ್ನು ಆಯ್ದುಕೊಳ್ಳಬಹುದು. 

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (2 ಕೋಟಿ ರೂ.ಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರ)

ಎಸ್‌ಬಿಐಯ ಸ್ಥಿರ ಠೇವಣಿಗಳಲ್ಲಿ ಹೂಡಿಕೆ ಮಾಡುವ ಗ್ರಾಹಕರಿಗೆ ಶೇ. 3ರಿಂದ 7ರವರೆಗೆ ಬಡ್ಡಿ ಲಭಿಸುತ್ತದೆ. ಜತೆಗೆ ಹಿರಿಯ ನಾಗರಿಕರು ಹೆಚ್ಚುವರಿ 50 ಬೇಸಿಸ್ ಪಾಯಿಂಟ್‌ (ಬಿಪಿಎಸ್) ಪಡೆಯಲಿದ್ದಾರೆ. ನಿರ್ದಿಷ್ಟವಾಗಿ ಒಂದು ವರ್ಷದಲ್ಲಿ ಮುಕ್ತಾಯಗೊಳ್ಳುವ ಎಫ್‌ಡಿಗೆ ಬ್ಯಾಂಕ್ ಶೇ. 6.80ರಷ್ಟು ಬಡ್ಡಿದರವನ್ನು ಒದಗಿಸುತ್ತದೆ. ಇದಲ್ಲದೆ, ಎರಡರಿಂದ ಮೂರು ವರ್ಷಗಳ ಅವಧಿಗೆ ಬ್ಯಾಂಕ್ ಶೇ. 7ರಷ್ಟು ಬಡ್ಡಿದರವನ್ನು ನೀಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (2 ಕೋಟಿ ರೂ.ಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರ)

ಪಿಎನ್‌ಬಿ ಸ್ಥಿರ ಠೇವಣಿಗೆ ಶೇ. 3.50ರಿಂದ 7.50ರವರೆಗೆ ಬಡ್ಡಿದರ ಒದಗಿಸುತ್ತದೆ. ನಿರ್ದಿಷ್ಟವಾಗಿ ಒಂದು ವರ್ಷದಲ್ಲಿ ಮುಕ್ತಾಯಗೊಳ್ಳುವ ಸ್ಥಿರ ಠೇವಣಿಗಳಿಗೆ ಸಾಮಾನ್ಯ ಹೂಡಿಕೆದಾರರಿಗೆ ಬಡ್ಡಿದರವು ಶೇಕಡಾ 6.75ರಷ್ಟಿದ್ದರೆ, ಹಿರಿಯ ನಾಗರಿಕರು ಶೇ. 7.25ರಷ್ಟು ಪಡೆಯಲಿದ್ದಾರೆ.

ಎಚ್‌ಡಿಎಫ್‌ಸಿ ಬ್ಯಾಂಕ್ (2 ಕೋಟಿ ರೂ.ಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರ)

ಎಚ್‌ಡಫ್‌ಸಿ ಬ್ಯಾಂಕ್ ಒಂದು ವರ್ಷದ ಸ್ಥಿರ ಠೇವಣಿಗಳಿಗೆ ಆಕರ್ಷಕ ಬಡ್ಡಿ ದರವನ್ನು ನೀಡುತ್ತದೆ. ನಿಯಮಿತ ಹೂಡಿಕೆದಾರರು ಶೇಕಡಾ 6.60ರಷ್ಟು ಬಡ್ಡಿದರವನ್ನು ಪಡೆಯಬಹುದು. ಮಾತ್ರವಲ್ಲ ಹಿರಿಯ ನಾಗರಿಕರು ಅಂತಹ ಠೇವಣಿಗಳ ಮೇಲೆ ಶೇಕಡಾ 7.10ರಷ್ಟು ಬಡ್ಡಿದರ ಹೊಂದಬಹುದು.

ಐಸಿಐಸಿಐ ಬ್ಯಾಂಕ್ (5 ಕೋಟಿ ರೂ.ಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರ)

ಐಸಿಐಸಿಐ ಬ್ಯಾಂಕ್ ತನ್ನ ಎಫ್‌ಡಿ ಖಾತೆಗಳಿಗೆ ಬಡ್ಡಿದರಗಳನ್ನು ಶೇ. 3ರಿಂದ 7.50ರವರೆಗೆ ನೀಡುತ್ತದೆ. ಮಾತ್ರವಲ್ಲ ಹಿರಿಯ ನಾಗರಿಕರು ಹೆಚ್ಚುವರಿ ಶೇ. 0.5ರಷ್ಟು ಬಡ್ಡಿ ಪಡೆಯಲಿದ್ದಾರೆ. ನಿರ್ದಿಷ್ಟವಾಗಿ ಒಂದು ವರ್ಷದಲ್ಲಿ ಮುಕ್ತಾಯಗೊಳ್ಳುವ ಸ್ಥಿರ ಠೇವಣಿಗಳಿಗೆ ಸಾಮಾನ್ಯ ಗ್ರಾಹಕರಿಗೆ ಶೇ. 6.70ರಷ್ಟು ಬಡ್ಡಿ ಇದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

Continue Reading

ಮನಿ-ಗೈಡ್

Money Guide: ಎಫ್‌ಡಿ V/S ಆರ್‌ಡಿ; ಯಾವುದು ಉತ್ತಮ? ಯಾವುದರಲ್ಲಿ ಹೂಡಿಕೆ ಮಾಡಬೇಕು?

Money Guide: ಉಳಿತಾಯವು ಅನಿರೀಕ್ಷಿತ ಆಘಾತ, ಆರ್ಥಿಕ ಸಮಸ್ಯೆಗಳಿಂದ ನಿಮ್ಮನ್ನು ಕುಗ್ಗದಂತೆ ಕಾಪಾಡುತ್ತದೆ. ಹೀಗಾಗಿ ನೀವು ಭವಿಷ್ಯದ ದೃಷ್ಟಿಯಿಂದ ವಿವಿಧ ಯೋಜನೆಗಳಲ್ಲಿ ನಿಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ಪೈಕಿ ನಿಶ್ಚಿತ ಠೇವಣಿ ಮತ್ತು ರಿಕರಿಂಗ್‌ ಠೇವಣಿ ಪ್ರಮುಖವಾದುದು. ಹಾಗಾದರೆ ಈ ಎರಡು ಯೋಜನೆಗಳ ವೈಶಿಷ್ಟ್ಯಗಳೇನು ಎನ್ನುವುದನ್ನು ನೋಡೋಣ. ಎಫ್‌ಡಿ ಮತ್ತು ಆರ್‌ಡಿ ಇವೆರಡೂ ಭಾರತದಲ್ಲಿನ ಅತ್ಯಂತ ಜನಪ್ರಿಯ ಹೂಡಿಕೆ ಯೋಜನೆಗಳು ಎನಿಸಿಕೊಂಡಿವೆ. ವಿಶೇಷವಾಗಿ ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇವು ಉತ್ತಮ ಆಯ್ಕೆ.

VISTARANEWS.COM


on

Money Guide
Koo

ಬೆಂಗಳೂರು: ಇಂದಿನ ಉಳಿತಾಯವೇ ನಾಳೆಯ ಆದಾಯ ಎನ್ನುವ ಮಾತಿದೆ. ಅಂದರೆ ನಾವು ಎಷ್ಟು ಉಳಿತಾಯ ಮಾಡುತ್ತೇವೆಯೋ ಭವಿಷ್ಯದಲ್ಲಿ ಅಷ್ಟು ನೆಮ್ಮದಿ ಇರುತ್ತದೆ ಎನ್ನುವುದು ಇದಕ್ಕೆ ಕಾರಣ. ಇದಕ್ಕಾಗಿಯೇ ಆರ್ಥಿಕ ತಜ್ಞರು ಉಳಿತಾಯದತ್ತ ಗಮನ ಹರಿಸುವಂತೆ ಸಲಹೆ ನೀಡುತ್ತಾರೆ. ಉಳಿತಾಯವು ಅನಿರೀಕ್ಷಿತ ಆಘಾತ, ಆರ್ಥಿಕ ಸಮಸ್ಯೆಗಳಿಂದ ನಿಮ್ಮನ್ನು ಕುಗ್ಗದಂತೆ ಕಾಪಾಡುತ್ತದೆ. ಹೀಗಾಗಿ ನೀವು ಭವಿಷ್ಯದ ದೃಷ್ಟಿಯಿಂದ ವಿವಿಧ ಯೋಜನೆಗಳಲ್ಲಿ ನಿಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ಪೈಕಿ ನಿಶ್ಚಿತ ಠೇವಣಿ (Fixed Deposits) ಮತ್ತು ರಿಕರಿಂಗ್‌ ಠೇವಣಿ (Recurring Deposits) ಪ್ರಮುಖವಾದುದು. ಹಾಗಾದರೆ ಈ ಎರಡು ಯೋಜನೆಗಳ ವೈಶಿಷ್ಟ್ಯಗಳೇನು ಎನ್ನುವುದನ್ನು ನೋಡೋಣ (Money Guide).

ಎಫ್‌ಡಿ ಮತ್ತು ಆರ್‌ಡಿ ಇವೆರಡೂ ಭಾರತದಲ್ಲಿನ ಅತ್ಯಂತ ಜನಪ್ರಿಯ ಹೂಡಿಕೆ ಯೋಜನೆಗಳು ಎನಿಸಿಕೊಂಡಿವೆ. ವಿಶೇಷವಾಗಿ ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇವು ಉತ್ತಮ ಆಯ್ಕೆ. ಇದರಿಂದ ಯಾವುದೇ ಅಪಾಯವಿಲ್ಲದೆ ಸ್ಥಿರ ಆದಾಯವನ್ನು ಗಳಿಸಬಹುದು ಎನ್ನುವ ಕಾರಣಕ್ಕೆ ಇದನ್ನು ಬಹುತೇಕರು ನೆಚ್ಚಿಕೊಂಡಿದ್ದಾರೆ.

ನಿಶ್ಚಿತ ಠೇವಣಿಯಲ್ಲಿ ಹೂಡಿಕೆಯ ಅವಧಿ ಮತ್ತು ಬಡ್ಡಿದರವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಸಾಮಾನ್ಯವಾಗಿ 7 ದಿನಗಳಿಂದ 10 ವರ್ಷಗಳವರೆಗಿನ ಅವಧಿಯಲ್ಲಿ ನೀವು ಒಂದು ಬಾರಿ ಹೂಡಿಕೆ ಮಾಡಬಹುದು. ಇದರ ಮೇಲಿನ ಬಡ್ಡಿಯನ್ನು ನಿಯಮಿತ ಮಧ್ಯಂತರಗಳಲ್ಲಿ ಪಡೆಯಬಹುದು ಅಥವಾ ನೀವು ಮುಕ್ತಾಯದ ಸಮಯದಲ್ಲಿ ಅದನ್ನು ಸ್ವೀಕರಿಸುವ ಆಯ್ಕೆಯನ್ನು ಆಯ್ದುಕೊಳ್ಳಬಹುದು. 

ರಿಕರಿಂಗ್ ಡೆಪಾಸಿಟ್ ಯೋಜನೆಯಲ್ಲಿ ನೀವು ನಿರ್ದಿಷ್ಟ ಮೊತ್ತಗಳನ್ನು ಠೇವಣಿ ಇಡಬಹುದು. ಇದು 6 ತಿಂಗಳಿಂದ 10 ವರ್ಷಗಳು ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯಲ್ಲಿರಬಹುದು. ರಿಕರಿಂಗ್ ಡೆಪಾಸಿಟ್‌ನಲ್ಲಿ ನೀವು ಹೂಡಿಕೆ ಮಾಡಬಹುದಾದ ಕನಿಷ್ಠ ಮೊತ್ತವು ಸಾಮಾನ್ಯವಾಗಿ ಕೇವಲ ರೂ. 100 ಅಥವಾ ಅದಕ್ಕೂ ಕಡಿಮೆ ಇರುತ್ತದೆ. ಮೆಚ್ಯೂರಿಟಿ ಸಮಯದಲ್ಲಿ ಬಡ್ಡಿಯೊಂದಿಗೆ ಅಸಲನ್ನು ಪಡೆಯಬಹುದು.

ಎಫ್‌ಡಿಯ ವೈಶಿಷ್ಟ್ಯ

  • ಒಟ್ಟು ಮೊತ್ತದ ಹೂಡಿಕೆ: ಎಫ್‌ಡಿಗಳಿಗೆ ಒಂದು ಬಾರಿಯ ದೊಡ್ಡ ಮೊತ್ತದ ಠೇವಣಿ ಅಗತ್ಯ.
  • ಸ್ಥಿರ ಬಡ್ಡಿದರ: ಬಡ್ಡಿದರವನ್ನು ಹೂಡಿಕೆಯ ಸಮಯದಲ್ಲಿ ನಿಗದಿಪಡಿಸಲಾಗುತ್ತದೆ ಮತ್ತು ಅವಧಿಯುದ್ದಕ್ಕೂ ಸ್ಥಿರವಾಗಿರುತ್ತದೆ.
  • ಬಡ್ಡಿ ಪಾವತಿ ಆಯ್ಕೆಗಳು: ನಿಮ್ಮ ಆದ್ಯತೆಯನ್ನು ಅವಲಂಬಿಸಿ ಬಡ್ಡಿಯನ್ನು ಸಂಯೋಜಿಸಬಹುದು ಮತ್ತು ಮರುಹೂಡಿಕೆ ಮಾಡಬಹುದು.
  • ಕಡಿಮೆ ದ್ರವ್ಯತೆ: ಗಮನಿಸಿ ಅವಧಿ ಮುಕ್ತಾಯಗೊಳ್ಳುವ ಮೊದಲು ಎಫ್‌ಡಿಯನ್ನು ಹಿಂಪಡೆಯುವುದು ದಂಡಕ್ಕೆ ಮತ್ತು ಬಡ್ಡಿ ನಷ್ಟಕ್ಕೆ ಕಾರಣವಾಗಬಹುದು.

ಆರ್‌ಡಿಯ ವೈಶಿಷ್ಟ್ಯ

  • ನಿಯಮಿತ ಉಳಿತಾಯ: ಆರ್‌ಡಿ ನಿಮಗೆ ನಿಯಮಿತವಾಗಿ ಸಾಮಾನ್ಯವಾಗಿ ಮಾಸಿಕವಾಗಿ ನಿಗದಿತ ಮೊತ್ತವನ್ನು ಉಳಿಸಲು ಅನುವು ಮಾಡಿಕೊಡುತ್ತದೆ.
  • ಫ್ಲೆಕ್ಸಿಬಲ್ ಡೆಪಾಸಿಟ್ ಮೊತ್ತ: ನೀವು ಪ್ರತಿ ತಿಂಗಳು ಠೇವಣಿ ಮಾಡಬೇಕಾದ ಮೊತ್ತವನ್ನು ಆಯ್ಕೆ ಮಾಡಬಹುದು.
  • ಸ್ಥಿರ ಬಡ್ಡಿದರ: ಎಫ್‌ಡಿಯಂತೆಯೇ ಆರ್‌ಡಿ ಕೂಡ ಇಡೀ ಅವಧಿಗೆ ಸ್ಥಿರ ಬಡ್ಡಿದರವನ್ನು ನೀಡುತ್ತದೆ.
  • ನಿಗದಿತ ಅವಧಿ: ಆರ್‌ಡಿ ನಿಗದಿತ ಅವಧಿಯನ್ನು ಹೊಂದಿರುತ್ತದೆ. ಮೆಚ್ಯೂರಿಟಿ ಮೊತ್ತವನ್ನು ಮೊದಲೇ ನಿರ್ಧರಿಸಲಾಗುತ್ತದೆ.
  • ಹೆಚ್ಚಿನ ದ್ರವ್ಯತೆ: ಎಫ್‌ಡಿಗೆ ಹೋಲಿಸಿದರೆ ಆರ್‌ಡಿ ಉತ್ತಮ ದ್ರವ್ಯತೆಯನ್ನು ನೀಡುತ್ತವೆ. ನೀವು ಸಂಗ್ರಹಿಸಿಟ್ಟ ಮೊತ್ತವನ್ನು ಯಾವಾಗ ಬೇಕಾದರೂ ಹಿಂಪಡೆಯಬಹುದು ಅಥವಾ ತುರ್ತು ಸಂದರ್ಭಗಳಲ್ಲಿ ಅದರ ಮೇಲೆ ಸಾಲವನ್ನು ತೆಗೆದುಕೊಳ್ಳಬಹುದು.

ಯಾವುದು ಉತ್ತಮ?

ಮೊದಲೇ ಹೇಳಿದಂತೆ ಎಫ್‌ಡಿ ಮತ್ತು ಆರ್‌ಡಿ ಎರಡೂ ಉತ್ತಮ ಉಳಿತಾಯ ಯೋಜನೆ ಎನಿಸಿಕೊಂಡಿದೆ. ಎಫ್‌ಡಿಯಲ್ಲಿ ಹೂಡಿಕೆ ಮಾಡಲು ದೊಡ್ಡ ಮೊತ್ತವನ್ನು ಹೊಂದಿರಬೇಕಾಗುತ್ತದೆ. ಆದರೆ ಮಾಸಿಕ ಆದಾಯದಿಂದ ಸಣ್ಣ ಭಾಗವನ್ನು ಹೂಡಿಕೆ ಮಾಡುವವರಿಗೆ ಆರ್‌ಡಿ ಉತ್ತಮ. ಆರ್‌ಡಿ ಮತ್ತು ಎಫ್‌ಡಿ ಎರಡೂ ಕಡಿಮೆ ತೆರಿಗೆ ಸ್ಲ್ಯಾಬ್‌ನಲ್ಲಿರುವ ರಿಸ್ಕ್‌ಗಳನ್ನು ತೆಗೆದುಕೊಳ್ಳದ ಹೂಡಿಕೆದಾರರಿಗೆ ಹೆಚ್ಚು ಸೂಕ್ತವಾಗಿವೆ. ನಿಮಗೆ ಯಾವುದು ಉತ್ತಮ ಎಂಬುದು ನಿಮ್ಮ ಆರ್ಥಿಕ ಗುರಿಗಳು ಮತ್ತು ಆದ್ಯತೆಗಳನ್ನು ಅವಲಂಬಿಸಿರುತ್ತದೆ. ನೀವು ಹೂಡಿಕೆ ಮಾಡಲು ದೊಡ್ಡ ಮೊತ್ತವನ್ನು ಹೊಂದಿದ್ದರೆ ಮತ್ತು ದ್ರವ್ಯತೆ ಅಗತ್ಯವಿಲ್ಲದಿದ್ದರೆ ಎಫ್‌ಡಿ ಸೂಕ್ತವಾಗಬಹುದು. ಮತ್ತೊಂದೆಡೆ ನೀವು ನಿಯಮಿತವಾಗಿ ಉಳಿತಾಯ ಮಾಡಲು ಮತ್ತು ದ್ರವ್ಯತೆಗೆ ಆದ್ಯತೆ ನೀಡಲು ಬಯಸಿದರೆ ಆರ್‌ಡಿ ಉತ್ತಮ ಆಯ್ಕೆಯಾಗಿದೆ. ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ನಿರ್ಣಯಿಸುವುದು ಮತ್ತು ಹಣಕಾಸು ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading

ಚಿನ್ನದ ದರ

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Gold Rate Today: ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

VISTARANEWS.COM


on

Mamitha Baiju
Koo

ಬೆಂಗಳೂರು: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಸೇರಿ ಕರ್ನಾಟಕದಾದ್ಯಂತ (Karnataka) ಭಾರಿ ಏರಿಕೆ ಕಂಡು, ಬಳಿಕ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ (Gold Rate Today) ಭಾನುವಾರ (ಮೇ 11) ಯಾವುದೇ ಬದಲಾವಣೆಯಾಗಿಲ್ಲ. ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) 87.10 ರೂ., ಎಂಟು ಗ್ರಾಂ 696.80 ರೂ. ಮತ್ತು 10 ಗ್ರಾಂ 871 ರೂ. ಇದೆ. 100 ಗ್ರಾಂಗೆ ಗ್ರಾಹಕರು 8,710 ರೂ. ಮತ್ತು 1 ಕಿಲೋಗ್ರಾಂಗೆ 87,100 ರೂ. ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Akshaya Tritiya 2024

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Continue Reading
Advertisement
Job Alert
ಉದ್ಯೋಗ9 mins ago

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

viral video garbage bengaluru roads
ವೈರಲ್ ನ್ಯೂಸ್41 mins ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ44 mins ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ46 mins ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ2 hours ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ2 hours ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ3 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ3 hours ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ4 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ14 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202416 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202419 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ20 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು21 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌