ಸಾ.ರಾ.ಮಹೇಶ್‌ ವಿರುದ್ಧ ಭೂ ಅಕ್ರಮ ದಾಖಲೆ ಬಿಡುಗಡೆ ಮಾಡಿದ ಆರ್‌ಟಿಐ ಕಾರ್ಯಕರ್ತ ಗಂಗರಾಜು - Vistara News

ಮೈಸೂರು

ಸಾ.ರಾ.ಮಹೇಶ್‌ ವಿರುದ್ಧ ಭೂ ಅಕ್ರಮ ದಾಖಲೆ ಬಿಡುಗಡೆ ಮಾಡಿದ ಆರ್‌ಟಿಐ ಕಾರ್ಯಕರ್ತ ಗಂಗರಾಜು

ಈ ಹಿಂದೆ ಕೆ.ಆರ್.‌ ನಗರದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಾ.ರಾ. ಮಹೇಶ್‌ ವಿರುದ್ಧ ಭೂ ಅಕ್ರಮದ ಕುರಿತು ಆರೋಪಿಸಿದ್ದರು. ಆದರೆ ಆರೋಪವನ್ನು ಮಹೇಶ್‌ ನಿರಾಕರಿಸಿದ್ದರು.

VISTARANEWS.COM


on

ಮೈಸೂರಿನಲ್ಲಿರುವ ಸಾ.ರಾ. ಕನ್ವೆನ್ಷನ್‌ ಹಾಲ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಶಾಸಕ ಸಾ.ರಾ.ಮಹೇಶ್ ಪತ್ನಿ ಮಾಲೀಕತ್ವದ ಕಲ್ಯಾಣ ಮಂಟಪ ನಿರ್ಮಾಣದಲ್ಲಿ ಭೂ ಅಕ್ರಮ ನಡೆಸಿದ್ದಾರೆ ಎನ್ನಲಾದ ದಾಖಲೆಗಳನ್ನು ಆರ್.ಟಿ.ಐ. ಕಾರ್ಯಕರ್ತ ಗಂಗರಾಜು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲೇ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಹಾಗೂ ಸಾ.ರಾ. ಮಹೇಶ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಗಂಗರಾಜು ಒತ್ತಾಯಿಸಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಗಂಗರಾಜು, 19 ವರ್ಷಗಳ ಹಿಂದೆ ಕಲ್ಯಾಣ ಮಂಟಪಕ್ಕಾಗಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಕಳೆದ ವರ್ಷ ಹರಾಜಿನಲ್ಲಿ ಸಾ.ರ. ಮಹೇಶ್‌ ತಾಯಿ, ಅತ್ತೆ, ನಾದಿನಿ ಹೆಸರಿಗೆ ಮಂಜೂರು ಮಾಡಲಾಗಿತ್ತು. ಆ ಜಾಗವನ್ನು ಕೆಲವು ವರ್ಷಗಳ ಹಿಂದೆಯೇ ಡಿನೋಟಿಫಿಕೇಷನ್‌ ಮಾಡಲಾಗಿತ್ತು. ಆದರೆ, ಆ ವ್ಯಾಪ್ತಿಯಲ್ಲಿ ಮುಡಾದಿಂದ ನಿವೇಶನ ಪಡೆದಿದ್ದರು. ಈ ಕುರಿತು ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಲಾಗಿತ್ತು. ನಂತರ ಎಚ್ಚೆತ್ತ ಸಾ.ರಾ.ಮಹೇಶ್‌ ಮುಡಾದಿಂದ ನಿವೇಶನ ಪಡೆದಿದ್ದವರಿಗೆ ಬದಲಿ ನಿವೇಶನ ಮಂಜೂರು ಮಾಡಿದ್ದಾರೆ.

ಈ ಪ್ರಕರಣದಲ್ಲಿ ಮುಡಾ ಆಯುಕ್ತ ಡಾ. ಡಿ.ಬಿ ನಟೇಶ್‌ ಕೂಡ ಶಾಮೀಲಾಗಿದ್ದಾರೆ ಎಂದು ಗಂಗರಾಜು ತಿಳಿಸಿದ್ದಾರೆ. ಕಲ್ಯಾಣ ಮಂಟಪಕ್ಕಾಗಿ ಕಬಳಿಸಿದ್ದ ಜಾಗವನ್ನು ವಿವಿಧ ಅಳತೆಯ ನಿವೇಶನಗಳನ್ನಾಗಿ ಗುರುತಿಸಿ, ಮುಡಾದಿಂದ ಹರಾಜಿಗೆ ಒಳಪಡಿಸಿ ಸಾ.ರಾ. ಮಹೇಶ್‌ ಖರೀದಿ ಮಾಡಲು ನಟೇಶ್‌ ನೆರವು ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ದೂರು ನೀಡಿದರೂ ನಟೇಶ್‌ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, ಅನ್ಲೈನ್ ಹರಾಜಿನಲ್ಲಿ ಆಯುಕ್ತರ ಮೌಖಿಕ ಆದೇಶದ ಮೇಲೆ ಸಾರಾ ಮಹೇಶ್ ಸಂಬಂಧಿಕರಿಗೆ ನಿವೇಶನಗಳು ಮಂಜೂರು ಮಾಡಲಾಗಿದೆ. ನಟೇಶ್ ಅವರನ್ನು ತಕ್ಷಣ ಬೇರೆಡೆ ವರ್ಗಾವಣೆ ಮಾಡಬೇಕು ಹಾಗೂ ಸಾ.ರಾ. ಮಹೇಶ್‌ ವಿರುದ್ಧ ತನಿಖೆ ಆಗಬೇಕು ಎಂದು ಗಂಗರಾಜು ಒತ್ತಾಯಿಸಿದ್ದಾರೆ.

ಈ ಹಿಂದೆ ಕೆ.ಆರ್.‌ ನಗರದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಾ.ರಾ. ಮಹೇಶ್‌ ವಿರುದ್ಧ ಭೂ ಅಕ್ರಮದ ಕುರಿತು ಆರೋಪಿಸಿದ್ದರು. ರಾಜಕಾಲುವೆ ಹಾಗೂ ಗೋಮಾಳಕ್ಕೆ ಸಂಬಂಧಿಸಿದ ಪ್ರಕರ್ಣದಲ್ಲಿ, ಸಾ.ರಾ. ಮಹೇಶ್‌ ಆ ಜಾಗದಲ್ಲಿ ಅಕ್ರಮವಾಗಿ ಕಲ್ಯಾಣ ಮಂಟಪವನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಆಗ ಮಾಜಿ ಸಚಿವ ಸಾ.ರಾ. ಮಹೇಶ್‌ ʼರೋಹಿಣಿ ಸಿಂಧೂರಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರಲು ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆʼ ಎಂದು ಆರೋಪವನ್ನು ಖಂಡಿಸಿದ್ದರು. ಅಲ್ಲದೆ, ಆದಾಯ ವಿಭಾಗದ ಅಧಿಕಾರಿಗಳು ಮಾಜಿ ಸಚಿವ ಸಾ.ರಾ. ಮಹೇಶ್‌ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದರು.

ಇದನ್ನೂ ಓದಿ: ನನಗೆ ಗೃಹ ಸಚಿವನಾಗುವ ಶಕ್ತಿ ಇದೆ: ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಉತ್ತರದಲ್ಲಿ ಬಿಸಿಲ ಏಟು; ಮಲೆನಾಡು, ಕರಾವಳಿಯಲ್ಲಿ ಮಳೆಯಾಟ

Heat Wave Alert: ಉತ್ತರ ಒಳನಾಡಿನ 4 ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಅಲರ್ಟ್‌ (Karnataka Weather Forecast) ನೀಡಲಾಗಿದ್ದು, ಈ ನಡುವೆ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

Karnataka Weather
Koo

ಬೆಂಗಳೂರು: ಉತ್ತರ ಒಳನಾಡಿನಲ್ಲಿ ವಿಪರೀತ ತಾಪಮಾನ (Temperature Forecast) ಇದ್ದರೆ, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಉಳಿದಂತೆ ಚಾಮರಾಜನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಸೇರಿ ಮಲೆನಾಡಿನ ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಹಾಸನ ಚಿಕ್ಕಮಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಜತೆಗೆ ಮುಂದಿನ ಐದು ದಿನಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ. ಬಿಸಿಗಾಳಿ ಬೀಸಲಿದ್ದು, ಉರಿ ಬಿಸಿಲು ಜನರನ್ನು ತತ್ತರಿಸುವಂತೆ ಮಾಡಿದೆ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ದಾಖಲಾಗಿದೆ. ಕೆಲವೊಮ್ಮೆ ಬಿಸಿ ಗಾಳಿ ಬೀಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 36 ಡಿ.ಸೆ – 22 ಡಿ.ಸೆ
ಮಂಗಳೂರು: 35 ಡಿ.ಸೆ – 26 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 21 ಡಿ.ಸೆ
ಗದಗ: 39 ಡಿ.ಸೆ – 23 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಕಲಬುರಗಿ: 41 ಡಿ.ಸೆ – 26 ಡಿ.ಸೆ
ಬೆಳಗಾವಿ: 37 ಡಿ.ಸೆ – 22 ಡಿ.ಸೆ
ಕಾರವಾರ: 36 ಡಿ.ಸೆ – 26 ಡಿ.ಸೆ

ಇದನ್ನೂ ಓದಿ: Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

ಬೇಸಿಗೆಯಲ್ಲಿ ಕರಬೂಜದ ಹಣ್ಣನ್ನು ಭರಪೂರ ತಿನ್ನಿ!

ʻಬಂತಲ್ಲ ಬೇಸಿಗೆ, ಕೆಟ್ಟ ಬಿಸಿಲುʼ ಎಂದು ಗೊಣಗುವವರಿಗೆ ಬೇಸಿಗೆಯ ಹಣ್ಣುಗಳ ಪರಿಚಯ ಇದೆಯೋ ಇಲ್ಲವೋ. ಕಲ್ಲಂಗಡಿ, ದ್ರಾಕ್ಷಿಯಿಂದ ಹಿಡಿದು ಕರಬೂಜ, ಮಾವಿನಹಣ್ಣುಗಳವರೆಗೆ, ಬಳಲುವ ಶರೀರಗಳ ದಾಹ ತಣಿಸಲೋ ಎಂಬಂತೆ ನಿಸರ್ಗವೇ ಮಾಡಿಕೊಟ್ಟ ಅನುಕೂಲವಿದು. ಕರಬೂಜಕ್ಕೆ ಮಧುಫಲ ಎಂಬ ಹೆಸರೂ ಇದೆ. ಕಲ್ಲಂಗಡಿ, ಕುಂಬಳಕಾಯಿಗಳ ಜಾತಿಗೆ ಸೇರಿದ ಈ ಹಣ್ಣು ಮೊದಲಿಗೆ ಪಶ್ಚಿಮ ಏಷ್ಯಾ ದೇಶಗಳ ಬೆಳೆಯಾಗಿದ್ದರೂ, ನಂತರದ ವರ್ಷಗಳಲ್ಲಿ ಬ್ರೆಜಿಲ್‌, ಅಮೆರಿಕಾ ಮತ್ತು ಏಷ್ಯಾದ ಹಲವಾರು ಭಾಗಗಳಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಭಾರತದಲ್ಲೂ ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಇದನ್ನು ಬೆಳೆಯಲಾಗುತ್ತದೆ. ಏನಿವೆ ಇದನ್ನು ತಿನ್ನುವುದರ ಲಾಭಗಳು (Muskmelon Benefits) ಎಂಬುದನ್ನು ನೋಡೋಣ.

muskmelon

ಪೌಷ್ಟಿಕಾಂಶಗಳು ಏನಿವೆ?

ವಿಟಮಿನ್‌ ಸಿ ಹೆಚ್ಚಿನ ಪ್ರಮಾಣದಲ್ಲಿರುವ ಫಲವಿದು. ಬೇಸಿಗೆಯಲ್ಲಿ ದಾಳಿ ಇಡಬಹುದಾದ ರೋಗಗಳನ್ನು ದೂರ ಇರಿಸುವುದಕ್ಕೆ ಅಗತ್ಯವಾದ ರಕ್ಷಾಕವಚನ್ನು ಸಿ ಜೀವಸತ್ವ ಒದಗಿಸುತ್ತದೆ. ಜೊತೆಗೆ, ಕಣ್ಣು, ಕೂದಲು ಮತ್ತು ಚರ್ಮಗಳ ಸ್ವಾಸ್ಥ್ಯಕ್ಕೆ ಬೇಕಾದ ವಿಟಮಿನ್‌ ಎ ಸಹ ಹೇರಳವಾಗಿದೆ. ಇದರಲ್ಲಿರುವ ಗ್ಯಾಲಿಕ್‌ ಆಮ್ಲ, ಎಲಾಜಿಕ್‌ ಆಮ್ಲದಂಥ ಆಂಟಿ ಆಕ್ಸಿಡೆಂಟ್‌ಗಳು ದೇಹದಲ್ಲಿ ಕೋಶಗಳ ಹಾನಿಯನ್ನು ತಡೆದು, ಶರೀರವನ್ನು ಪುನರುಜ್ಜೀವನಗೊಳಿಸುತ್ತವೆ. ರಕ್ತನಾಳಗಳನ್ನು ಸಡಿಲಿಸಿ, ರಕ್ತ ಪರಿಚಲನೆಯನ್ನು ಚುರುಕುಗೊಳಿಸುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಕರಬೂಜದ ಹಣ್ಣನ್ನು ಯಥಾವತ್‌ ಆಗಿ ಅಥವಾ, ಪಾನಕ, ಸಲಾಡ್‌ ಯಾವುದೇ ರೀತಿಯಲ್ಲಿ ಸೇವಿಸಲು ಯೋಗ್ಯವಾಗಿದೆ.

Different Types of Tasty Ripe Melons on Wooden Table

ಬಹೂಪಯೋಗಿ ಹಣ್ಣು

ಮಾನಸಿಕ ಒತ್ತಡವನ್ನು ಕಳೆದು ದೇಹ ಮತ್ತು ಮನಸ್ಸಿಗೆ ತಂಪೆರೆಯುವ ಸಾಮರ್ಥ್ಯ ಇದಕ್ಕಿದೆ. ಜೊತೆಗೆ, ಇದರಲ್ಲಿರುವ ಪೊಟಾಶಿಯಂನಂಥ ಖನಿಜಗಳು ನಿದ್ದೆಯನ್ನು ಉದ್ದೀಪಿಸುವ ಗುಣ ಹೊಂದಿವೆ. ಅಧಿಕ ನೀರಿನಂಶದಿಂದ ದೇಹದ ಬಳಲಿಕೆಯನ್ನೂ ದೂರ ಮಾಡಿ, ಕಣ್ತುಂಬಾ ನಿದ್ದೆ ಬರಿಸುತ್ತದೆ. ಇದರಲ್ಲಿರುವ ವಿಟಮಿನ್‌ ಎ ಅಂಶವು ದೃಷ್ಟಿಯನ್ನು ಚುರುಕುಗೊಳಿಸಿ, ಕಣ್ಣನ್ನು ಸೋಂಕುಗಳಿಂದ ರಕ್ಷಿಸುತ್ತದೆ. ಈ ಹಣ್ಣಿನ ಪ್ರಖರ ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣಗಳು ಹೆಚ್ಚಿನ ಕೆರೋಟಿನಾಯ್ಡ್‌ಗಳಿರುವ ಸಂಕೇತ. ಈ ಅಂಶ ಹೆಚ್ಚಿದ್ದಷ್ಟೂ ಕಣ್ಣಿನ ಆರೋಗ್ಯಕ್ಕೆ ಉತ್ತಮ.
ಉದರ ಸಂಬಂಧೀ ಸಮಸ್ಯೆಗಳಿಗೂ ಇದು ಮದ್ದು. ಅಜೀರ್ಣದ ಸಮಸ್ಯೆಗಳನ್ನು ದೂರ ಮಾಡಿ, ಅಸಿಡಿಟಿಯನ್ನು ಹತೋಟಿಯಲ್ಲಿ ಇರಿಸುತ್ತದೆ. ಮಾತ್ರವಲ್ಲ, ನಿಯಮಿತ ಸೇವನೆಯಿಂದ ಹೊಟ್ಟೆ ಹುಣ್ಣು ಮತ್ತು ಮಲಬದ್ಧತೆಗೂ ಉಪಶಮನ ನೀಡುತ್ತದೆ. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನಾರಿನ ಅಂಶದಿಂದಾಗಿ ಸಹಜ ವಿರೇಚಕದಂತೆ ಕೆಲಸ ಮಾಡಿ, ಹೊಟ್ಟೆಯನ್ನು ಸ್ವಚ್ಛ ಮಾಡುತ್ತದೆ.

Heart Health In Winter

ಹೃದಯ-ಸ್ನೇಹಿ

ಇದೇ ಪೊಟಾಶಿಯಂ ಸತ್ವಗಳಿಂದಾಗಿ, ರಕ್ತದ ಒತ್ತಡ ನಿಯಂತ್ರಣಕ್ಕೆ ನೆರವು ದೊರೆಯುತ್ತದೆ ಮತ್ತು ಹೃದಯದ ಆರೋಗ್ಯ ಕಾಪಾಡುವಲ್ಲಿ ನೆರವಾಗುತ್ತದೆ. ಅದಲ್ಲದೆ, ಹೃದಯಸ್ನೇಹಿ ಎನಿಸಿಕೊಳ್ಳುವುದಕ್ಕೆ ಮತ್ತೂ ಕಾರಣಗಳಿವೆ. ಕರಬೂಜದಲ್ಲಿರುವ ಅಡೆನೋಸಿನ್‌ ಎಂಬ ಅಂಶವು ರಕ್ತ ಹೆಪ್ಪುಗಟ್ಟದಂತೆ ನೋಡಿಕೊಳ್ಳುವ ಮತ್ತು ರಕ್ತ ನೀರಾಗಿಸುವ ಗುಣವನ್ನು ಹೊಂದಿದೆ. ಹಾಗಾಗಿ ಹೃದಯಕ್ಕೆ ರಕ್ತ ಪೂರೈಕೆಯಲ್ಲಿ ತೊಂದರೆಯಾಗದಂತೆ ಕಾಪಾಡುತ್ತದೆ.
ಮಹಿಳೆಯರಿಗೆ ಮುಟ್ಟಿನ ದಿನಗಳಲ್ಲಿ ಕಾಡುವ ಹೊಟ್ಟೆನೋವನ್ನು ಶಮನ ಮಾಡಬಲ್ಲದು. ರಕ್ತ ನೀರಾಗುವಂತೆ ನೋಡಿಕೊಳ್ಳುವ ಗುಣದಿಂದಲೇ, ರಕ್ತಸ್ರಾವ ಸರಾಗವಾಗುವಂತೆ ಮಾಡಿ ಹೊಟ್ಟೆಯ ನೋವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಮುಟ್ಟಿನ ಮೊದಲ ದಿನವೇ ಕರಬೂಜ ಸೇವನೆಯನ್ನು ಪರಂಪರಾಗತ ವೈದ್ಯ ಪದ್ಧತಿಯನ್ನು ಪ್ರೋತ್ಸಾಹಿಸುತ್ತಾರೆ.

weight loss

ತೂಕ ಇಳಿಕೆಗೆ

ತಿನ್ನುವುದಕ್ಕೆ ಸಿಹಿ ರುಚಿಯ ಈ ಹಣ್ಣಿನಲ್ಲಿರುವ ಕ್ಯಾಲರಿಗಳು ಕಡಿಮೆ. ನೀರಿನ ಪ್ರಮಾಣವೇ ಹೆಚ್ಚಿರುವುದರಿಂದ ತೂಕ ಇಳಿಸುವವರಿಗೆ ಒಳ್ಳೆಯ ಆಯ್ಕೆ. ಬೇಗ ಹೊಟ್ಟೆ ತುಂಬಿದ ಅನುಭವ ನೀಡಿ, ದೀರ್ಘಕಾಲದವರೆಗೆ ಹೊಟ್ಟೆ ಹಸಿವಾಗದಂತೆ ಕಾಪಾಡುತ್ತದೆ. ಹೆಚ್ಚು ನೀರಿನಂಶ ಹೊಂದಿರುವ ಇದು ಶರೀರವನ್ನು ತಂಪಾಗಿಸುವ ಗುಣವನ್ನು ಹೊಂದಿದೆ. ಜೊತೆಗೆ, ಡೈಯುರೇಟಿಕ್‌ ಸಹ ಹೌದಾಗಿದ್ದು, ಬೇಡದ ಕಶ್ಮಲಗಳನ್ನು ದೇಹದಿಂದ ಹೊರದೂಡುತ್ತದೆ. ಮೂತ್ರಪಿಂಡಗಳ ಆರೋಗ್ಯವನ್ನೂ ರಕ್ಷಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Rain News : ರಾಜ್ಯದಲ್ಲಿ ಮಳೆ ಕಾಣೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಹೀಟ್‌ ವೇವ್‌ ಅಲರ್ಟ್‌ (Heat wave Alert) ನೀಡಲಾಗಿದೆ. ಹವಾಮಾನ ಇಲಾಖೆ (karnataka Weather Forecast) ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಜತೆಗೆ ಮುಂದಿನ ಐದು ದಿನಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ಪ್ರಸ್ತುತ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಹವಾಮಾನ ಮೌಲ್ಯದ 90% ಮೀರಿದೆ. ಇನ್ನು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶಾಖ ಸೂಚ್ಯಂಕವು 40-50 ಡಿ.ಸೆ ವ್ಯಾಪ್ತಿಯಲ್ಲಿರಲಿದೆ.

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ. ಬಿಸಿಗಾಳಿ ಬೀಸಲಿದ್ದು, ಉರಿ ಬಿಸಿಲು ಜನರನ್ನು ತತ್ತರಿಸುವಂತೆ ಮಾಡಿದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ದಾಖಲಾಗಿದೆ. ಕೆಲವೊಮ್ಮೆ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

ಇನ್ನೂ ಬುಧವಾರದಂದು ರಾಜ್ಯಾದ್ಯಂತ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿ.ಸೆ ದಾಖಲಾಗಿತ್ತು. ಮಂಡ್ಯದ ಎಡಬ್ಲ್ಯೂಎಸ್‌ನಲ್ಲಿ ಕನಿಷ್ಠ ಉಷ್ಣಾಂಶ 16.7 ಡಿ.ಸೆ ಇತ್ತು. ಸರಾಸರಿ ಕನಿಷ್ಠ ಉಷ್ಣಾಂಶ ಕೋಲಾರದಲ್ಲಿ 18.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 40.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಬೆಂಗಳೂರು ನಗರ, ಕೋಲಾರ, ಹಾಸನ, ರಾಮನಗರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ನಿಂದ 18 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ನಿಂದ 44 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!


ಸಮ್ಮರ್‌ ಸೀಸನ್‌ನಲ್ಲಿ (Summer Fashion) ಇದೀಗ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ ಹೆಚ್ಚಾಗಿದೆ. ನೋಡಲು ಮಾತ್ರವಲ್ಲ, ಧರಿಸಿದಾಗ ಈ ಸೀಸನ್‌ನಲ್ಲಿ ಹೆಚ್ಚು ಸೆಕೆಯಾಗದಂತೆ, ಕಂಫರ್ಟಬಲ್‌ ಫೀಲ್‌ ಆಗುವಂತಹ ನಾನಾ ಡಿಸೈನ್ನ ಅದರಲ್ಲೂ ಲೈಟ್‌ವೈಟ್‌ ಫ್ಯಾಬ್ರಿಕ್‌ನ ತೋಳಿಲ್ಲದ ಈ ಗೌನ್‌ಗಳು ನಾನಾ ಡಿಸೈನ್‌ನಲ್ಲಿ ಮಾರುಕಟ್ಟೆಗೆ ಕಾಲಿಟ್ಟಿವೆ.

Summer Fashion

ಕಂಫರ್ಟಬಲ್‌ ಡಿಸೈನ್‌ ಗೌನ್‌

“ಸ್ಲಿವ್‌ಲೆಸ್‌ ಗೌನ್‌ಗಳು ಸಮ್ಮರ್‌ ಸೀಸನ್‌ನ ಟ್ರೆಂಡಿ ಗೌನ್‌ಗಳು ಎನ್ನಬಹುದು. ಇವು ಸೆಕೆಯಾಗುವುದಿಲ್ಲ. ಆರಾಮ ಎಂದೆನಿಸುತ್ತವೆ. ಇನ್ನು, ಈ ಸೀಸನ್‌ಗೆ ಪೂರಕ ಎಂಬಂತೆ, ಡಿಸೈನ್‌ಗಳನ್ನು ಹೊಂದಿರುತ್ತವೆ. ತೀರಾ ಟೈಟ್‌ ಫಿಟ್ಟಿಂಗ್‌ ಆಗಿರುವುದಿಲ್ಲ. ಅದರಲ್ಲೂ ಲೇಯರ್‌ ಇನ್ನರ್‌ ಲೈನಿಂಗ್‌ ಹೊಂದಿರುವುದಿಲ್ಲ. ಲೈಟ್‌ವೈಟಾಗಿರುತ್ತವೆ. ಅಂತಹ ಫ್ಯಾಬ್ರಿಕನ್ನೇ ಇವುಗಳನ್ನು ವಿನ್ಯಾಸ ಮಾಡಲು ಆಯ್ಕೆ ಮಾಡಲಾಗಿರುತ್ತದೆ. ವೆಡ್ಡಿಂಗ್‌ ಸೀಸನ್‌ಗೆ ಸೂಕ್ತವಾಗಿರುವುದು ಮಾತ್ರವಲ್ಲ, ಪಾರ್ಟಿವೇರ್‌ ಗೌನ್‌ಗಳು ಹಾಗೂ ಫೋಟೋಶೂಟ್‌ ಗೌನ್‌ಗಳು ಈ ಸೀಸನ್‌ಗೆ ತಕ್ಕಂತೆ ಬಿಡುಗಡೆಗೊಂಡಿವೆ” ಎನ್ನುತ್ತಾರೆ ಗೌನ್‌ ಡಿಸೈನರ್ ರಾಜನ್‌. ಅವರ ಪ್ರಕಾರ, ಇಂತಹ ಗೌನ್‌ಗಳು ಈ ಸೀಸನ್‌ಗೆಂದೇ ಸಿದ್ಧಪಡಿಸಲಾಗಿರುತ್ತದೆ ಎನ್ನುತ್ತಾರೆ.

Summer Fashion

ಟ್ರೆಂಡಿಯಾಗಿರುವ ಗೌನ್‌ ಡಿಸೈನ್ಸ್

ಸ್ಲಿವ್‌ಲೆಸ್‌ ಬಾರ್ಡರ್ ಗೌನ್ಸ್, ಎಥ್ನಿಕ್‌ ಡಿಸೈನ್ಸ್, ಸ್ಯಾಟಿನ್‌ ಗೌನ್ಸ್, ನೆಟ್ಟೆಡ್‌ ಸ್ಲಿವ್‌ಲೆಸ್‌ ಗೌನ್ಸ್, ಹಾಲ್ಟರ್‌ ನೆಕ್‌ ಗೌನ್ಸ್, ಸ್ವಿಂಗ್‌ ನೆಕ್‌ಲೈನ್‌ ಗೌನ್ಸ್, ಟೈಯಿಂಗ್‌ ಸ್ಲಿವ್‌ಲೆಸ್‌ ಗೌನ್ಸ್, ಶೋಲ್ಡರ್‌ಲೆಸ್‌ ಗೌನ್‌ಗಳು ಸೇರಿದಂತೆ ನಾನಾ ಬಗೆಯವು ಈ ಸೀಸನ್‌ಗೆ ಎಂಟ್ರಿ ನೀಡಿವೆ. ಇನ್ನು ಫುಲ್‌ಸ್ಲೀವ್‌ ಗೌನ್‌ಗಳು ಹಾಗೂ ಪಫ್‌ ಸ್ಲೀವ್‌, ಟೈಟ್‌ ಸ್ಲೀವ್‌ ಗೌನ್‌ಗಳು ಸದ್ಯಕ್ಕೆ ಸೈಡಿಗೆ ಸರಿದಿವೆ. ಮಾನ್ಸೂನ್‌ವರೆಗೂ ಇವು ಹಿಂದಿರುಗುವ ಯಾವುದೇ ಮುನ್ಸೂಚನೆಗಳು ಕಾಣುತ್ತಿಲ್ಲ ಎನ್ನುತ್ತಾರೆ ಸ್ಟೈಲಿಸ್ಟ್ ರಿಚಾ ಖಾನ್‌. ಅವರು ಹೇಳುವಂತೆ, ಈ ಸೀಸನ್‌ ಗೌನ್‌ಗಳು ಆದಷ್ಟೂ ಶಾರ್ಟ್ ಸ್ಲಿವ್‌ ಅಥವಾ ಸ್ಲಿವ್‌ಲೆಸ್‌ ಹೊಂದಿರುತ್ತವಂತೆ.

ಪಾರ್ಟಿವೇರ್‌ ಸ್ಲಿವ್‌ಲೆಸ್‌ ಗೌನ್‌ಗಳು

ಪಾರ್ಟಿವೇರ್‌ ಸ್ಲಿವ್‌ಲೆಸ್‌ ಗೌನ್‌ಗಳು ತೀರಾ ಉದ್ದವಾಗಿರುವುದಿಲ್ಲ! ಬದಲಿಗೆ ನೋಡಲು ಕೊಂಚ ಮ್ಯಾಕ್ಸಿಯಂತಿರುತ್ತವೆ. ಅಥವಾ ಲಾಂಗ್‌ ಸ್ಕರ್ಟ್‌ನಂತಿರುತ್ತವೆ. ಡಿಸೈನ್‌ಗಳು ಅಷ್ಟೇ! ಸಿಂಪಲ್‌ ಆಗಿರುತ್ತವೆ. ಕೊಂಚ ಶಿಮ್ಮರ್‌ ಆಗಿರುತ್ತವೆ ಎನ್ನುತ್ತಾರೆ ಡಿಸೈನರ್‌ ಡಿಂಪಲ್‌.

Summer Fashion

ಸ್ಲಿವ್‌ಲೆಸ್‌ ಗೌನ್‌ಗಳ ಆಯ್ಕೆಗೆ 3 ಟಿಪ್ಸ್

  • ಆದಷ್ಟೂ ಸಿಂಪಲ್‌ ಡಿಸೈನ್‌ ಆಯ್ಕೆ ಮಾಡಿ.
  • ಟ್ರೆಂಡಿ ಕಲರ್ಸ್ ಸೆಲೆಕ್ಟ್ ಮಾಡಿ.
  • ತೀರಾ ಟೈಟ್‌ ಆಗಿರುವುದು ಬೇಡ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

Toll Hike: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ (bengaluru mysuru expressway) ಟೋಲ್‌ ದರ ಹೆಚ್ಚಳವಾಗಿದ್ದು, ಏಪ್ರಿಲ್‌ 1ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಹಾಗಾದರೆ ಯಾವ್ಯಾವ ವಾಹನಕ್ಕೆ ಎಷ್ಟು ಶುಲ್ಕ ನಿಗದಿ ಮಾಡಲಾಗಿದೆ.

VISTARANEWS.COM


on

By

toll hike
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು-ಮೈಸೂರು ಹೆದ್ದಾರಿಯ (bengaluru mysuru expressway) ಟೋಲ್‌ ದರವನ್ನು ಹೆಚ್ಚಳ (Toll Hike) ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಟೋಲ್‌ ಬರೆ ಎಳೆದಿದೆ. ಏಪ್ರಿಲ್‌ 1ರಿಂದ ಪರಿಷ್ಕೃತ ದರವು ಜಾರಿಯಾಗಲಿದೆ.

ನಿಡಘಟ್ಟ, ಕಣಮಿಣಿಕ ಹಾಗೂ ಶೇಷಗಿರಿಹಳ್ಳಿ ಟೋಲ್‌ ಪ್ಲಾಜಾವರೆಗಿನ 56 ಕಿ.ಮೀ ಉದ್ದದ ಹೆದ್ದಾರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕರವು ಮಾಹಿತಿ ನೀಡಿದೆ. ಇದರೊಂದಿಗೆ ಹೆದ್ದಾರಿ ಟೋಲ್‌ ಎರಡು ಬಾರಿ ಪರಿಷ್ಕರಣೆಯಾಗಿದೆ.

ಪ್ರತಿ ಹಣಕಾಸು ವರ್ಷದಂದು ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಟೋಲ್‌ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಶುಲ್ಕದಲ್ಲೂ ಪರಿಷ್ಕರಣೆ ಮಾಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಹುಲ್‌ ಗುಪ್ತಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

ಕಳೆದ ವರ್ಷ ಏಪ್ರಿಲ್‌ನಲ್ಲಿ ಟೋಲ್‌ ದರ ಹೆಚ್ಚಳ ಮಾಡಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣಕ್ಕೆ ದರ ಹೆಚ್ಚಳವನ್ನು ಕೈ ಬಿಟ್ಟಿತ್ತು. ಆ ಬಳಿಕ ಜೂನ್‌ನಲ್ಲಿ ಏಕಾಏಕಿ ಶೇ.22ರಷ್ಟು ದರ ಹೆಚ್ಚಳಗೊಂಡಿತ್ತು. ಇದೀಗ 9 ತಿಂಗಳ ನಂತರ ಮತ್ತೆ ಟೋಲ್‌ ಏರಿಕೆ ಆಗಿದೆ.

ಯಾವ ವಾಹನಕ್ಕೆ ಎಷ್ಟು ಶುಲ್ಕ?

ವಾಹನಒನ್‌ ಸೈಡ್‌ರಿಟರ್ನ್‌ ಜರ್ನಿತಿಂಗಳ ಪಾಸ್‌(ಒನ್‌ಸೈಡ್‌)
ಕಾರು, ಜೀಪು, ವ್ಯಾನ್‌₹ 170₹ 255₹ 5,715
ಲಘು ವಾಹನ, ಮಿನಿ ಬಸ್‌2754159,230
2 ಆಕ್ಸೆಲ್‌ ಟ್ರಕ್‌/ಬಸ್‌58057019,345
3 ಆಕ್ಸೆಲ್‌ ವಾಣಿಜ್ಯ ವಾಹನ63595021,100
ಭಾರಿ ವಾಹನ (4-6 ಆಕ್ಸೆಲ್‌)‌9101,36530,335
ದೊಡ್ಡ ವಾಹನ (7ಕ್ಕಿಂತ ಹೆಚ್ಚು ಆಕ್ಸೆಲ್‌)1,1101,66036,930
ವಾಹನಹಳೆ ದರಹೊಸ ದರ ಹೆಚ್ಚಳ
ಕಾರು, ಜೀಪು, ವ್ಯಾನ್‌13517035
ಲಘು ವಾಹನ, ಮಿನಿ ಬಸ್‌22027555
2 ಆಕ್ಸೆಲ್‌ ಟ್ರಕ್‌/ಬಸ್‌460580120
3 ಆಕ್ಸೆಲ್‌ ವಾಣಿಜ್ಯ ವಾಹನ500635135
ಭಾರಿ ವಾಹನ (4-6 ಆಕ್ಸೆಲ್‌)720910190
ದೊಡ್ಡ ವಾಹನ (7ಕ್ಕಿಂತ ಹೆಚ್ಚು ಆಕ್ಸೆಲ್‌)8801,110880

ಇನ್ನೂ ಎಲ್ಲಾ ತರಹದ ವಾಹನಗಳು 24 ಗಂಟೆಯೊಳಗೆ ಹಿಂದಿರುಗಿ ಬಂದಲ್ಲಿ ಪಾವತಿಸಬೇಕಾದ ಟೋಲ್‌ನಲ್ಲಿ ಶೇ. 25ರಷ್ಟು ರಿಯಾಯಿತಿ ಸಿಗಲಿದೆ. ಅದೇ ರೀತಿ, ಎಲ್ಲಾ ವಾಹನಗಳು ಟೋಲ್‌ ಪಾವತಿ ದಿನದಿಂದ ಒಂದು ತಿಂಗಳೊಳಗೆ 50 ಬಾರಿ ಹೈವೆಯಲ್ಲಿ ಸಂಚಾರಿಸಿದ್ದರೆ ಶೇ. 35ರಷ್ಟು ರಿಯಾಯಿತಿ ಸಿಗಲಿದೆ. ಯಾವುದೇ ವಾಹನಗಳು ಅನುಮತಿಗಿಂತ ಹೆಚ್ಚಿನ ಸರಕು ಹೊಂದಿದ್ದರೆ ನಿಗದಿತ ಶುಲ್ಕಕ್ಕಿಂತ ಹತ್ತು ಪಟ್ಟು ಶುಲ್ಕ ಪಾವತಿಸಬೇಕಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather : ಮುಂದಿನ 5 ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಉತ್ತರ ಒಳನಾಡಲ್ಲಿ ಹೀಟ್‌ ವೇವ್‌!

Karnataka Weather : ಮುಂದಿನ ಮೂರು ದಿನಗಳ ಕಾಲ ಅಂದರೆ, ಮಾರ್ಚ್‌ 28ರಿಂದ 30ರವರೆಗೆ ಉತ್ತರ ಒಳನಾಡಿನ ಕೆಲವು ಕಡೆ ಹೀಟ್‌ ವೇವ್‌ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು ಮುಂದಿನ ನಾಲ್ಕೈದು ದಿನ 36 – 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

VISTARANEWS.COM


on

Karnataka Weather Heavy rains lash in Karnataka for next 5 days also Heat wave caution and Girl enjoying rain
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಅಂದರೆ (ಮಾ. 28 – ಏಪ್ರಿಲ್‌ 1) ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು – ಮಿಂಚುಗಳ ಸಹಿತ ಸಾಧಾರಣದಿಂದ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬೆಂಗಳೂರು ಮಾತ್ರ ಸೆಕೆಯಲ್ಲಿ ಮತ್ತಷ್ಟು ಬೇಯಲಿದೆ ಎಂದು ಅಂದಾಜಿಸಲಾಗಿದೆ. ಕಾರಣ, ಏಪ್ರಿಲ್‌ 2ರವರೆಗೆ ಗರಿಷ್ಠ ಉಷ್ಣಾಂಶವು 36 – 37 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ. ಇನ್ನು ರಾಜ್ಯದ ಹಲವು ನದಿಗಳಲ್ಲಿ ನೀರು ಬತ್ತಿರುವ ದೃಶ್ಯಗಳನ್ನು ನೆಟ್ಟಿಗರು ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಬರದ ಭೀಕರತೆಯ ದರ್ಶನ ಮಾಡಿಸಿದ್ದಾರೆ. ಹೀಗಾಗಿ ಕಾವೇರಿ ಕೊಳ್ಳ ಸೇರಿದಂತೆ ನದಿ ಒಡಲು ಇರುವ ಕಡೆಗಳಲ್ಲಿ ಉತ್ತಮ ಮಳೆಯಾಗಬಹುದು ಎಂಬ ನಿರೀಕ್ಷೆಯನ್ನು ಹೊಂದಲಾಗಿದೆ.

ಇದರ ಜತೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 2 – 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಲ್ಲಿ ಹೀಟ್‌ ವೇವ್‌!

ಮುಂದಿನ ಮೂರು ದಿನಗಳ ಕಾಲ ಅಂದರೆ, ಮಾರ್ಚ್‌ 28ರಿಂದ 30ರವರೆಗೆ ಉತ್ತರ ಒಳನಾಡಿನ ಕೆಲವು ಕಡೆ ಹೀಟ್‌ ವೇವ್‌ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಬಿಸಿಲಿನ ಬೇಗೆಯ ಜತೆಗೆ ಬಿಸಿ ಗಾಳಿಯನ್ನೂ ಜನರು ತಡೆದುಕೊಳ್ಳಬೇಕಿದೆ.

ಹಾಟ್‌ ಬೆಂಗಳೂರು

ಬೆಂಗಳೂರಲ್ಲಿ ಬಿಸಿಲಿನ ತೀವ್ರತೆ ಇರಲಿದ್ದು, ಸೆಕೆಯು ಕಾಡಲಿದೆ. ಇಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದ್ದು, ಹಾಲಿ 35 ಡಿಗ್ರಿ ಸೆಲ್ಸಿಯಸ್‌ ಇರುವ ಗರಿಷ್ಠ ಉಷ್ಣಾಂಶವು ಮುಂದಿನ ನಾಲ್ಕೈದು ದಿನ 36 – 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಲಾಗಿದೆ. ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ಶಿವಮೊಗ್ಗ, ದಾವಣಗೆರೆಯಲ್ಲಿ ಗುಡುಗಿನೊಂದಿಗೆ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ ಸೇರಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಮಳೆಯಾಗಬಹುದು ಎಂದು ಹೇಳಲಾಗಿದೆ.

ಉತ್ತರ ಕರ್ನಾಟಕದಲ್ಲಿ ಕೆಲವು ಕಡೆ ಅಲ್ಪ ಮಳೆ

ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಅಲ್ಪ ಪ್ರಮಾಣದ ಮಳೆಯಾಗುವ ಸಂಭವ ಇದೆ. ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಕರಾವಳಿ – ಮಲೆನಾಡಲ್ಲಿ ಸಾಧಾರಣ ಮಳೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯನ್ನು ಹೊಂದಲಾಗಿದೆ.

ಇದನ್ನೂ ಓದಿ: Summer Skincare: ಬೇಸಿಗೆಯಲ್ಲಿ ನಿಮ್ಮ ಚರ್ಮ ಕಪ್ಪಾಗದಂತೆ ತಡೆಯಲು ಹೀಗೆ ಮಾಡಿ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 35 ಡಿ.ಸೆ – 21 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 23 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 41 ಡಿ.ಸೆ – 26 ಡಿ.ಸೆ
ಬೆಳಗಾವಿ: 37 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ

ದುಬಾರೆಯ ಪರಿಸ್ಥಿತಿ ಹೇಗಿದೆ ನೋಡಿ!

ಕಾವೇರಿ ನದಿಯಲ್ಲೂ ನೀರಿಲ್ಲ

ಮಳೆ ಇಲ್ಲದೆ ಕರ್ನಾಟಕದ ಬಹುತೇಕ ನದಿಗಳು ಬತ್ತುವ ಹಂತವನ್ನು ತಲುಪಿವೆ. ನೀರಿಲ್ಲದೆ ನದಿ ಮಾರ್ಗಗಳು ಒಣಗಿ ಹೋಗಿವೆ. ಖಾಲಿ ರಸ್ತೆಯಂತಾಗಿವೆ. ಕಾವೇರಿ ನದಿ ತೀರದ ಪ್ರದೇಶದಲ್ಲಿರುವ ದುಬಾರೆ ಪರಿಸ್ಥಿತಿ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಕೊಡಗು ಕನೆಕ್ಟ್‌ ಎಂಬ ಖಾತೆಯಲ್ಲಿ ಫೋಟೊಗಳನ್ನು ಪೋಸ್ಟ್‌ ಮಾಡಲಾಗಿದೆ. ಇದು ನೀರಿನ ಕೊರತೆಯ ತೀವ್ರತೆಯನ್ನು ಎತ್ತಿ ತೋರಿಸುತ್ತದೆ.

Continue Reading
Advertisement
Aadujeevitham box office
ಮಾಲಿವುಡ್19 mins ago

Aadujeevitham Box Office: ಮೊದಲ ದಿನವೇ ಒಳ್ಳೆಯ ಗಳಿಕೆ ಕಂಡ ‘ʻಆಡು ಜೀವಿತಂ’!

gold rate today
ಚಿನ್ನದ ದರ29 mins ago

Gold Rate Today: ಆಕಾಶಕ್ಕೇ ಏರಿದ ಚಿನ್ನದ ಬೆಲೆ! ಇಂದಿನ ಧಾರಣೆ ಹೀಗಿದೆ ನೋಡಿ

attempt to murder case
ಬೆಂಗಳೂರು40 mins ago

Attempt To Murder : ಹಣದಾಸೆಗೆ ವೃದ್ಧ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Alia Bhatt hosts Hope Gala
ಬಾಲಿವುಡ್42 mins ago

Alia Bhatt: ಲಂಡನ್‌ನಲ್ಲಿ `ಹೋಪ್ ಗಾಲಾ’ ಹೋಸ್ಟ್‌ ಮಾಡಿದ ಆಲಿಯಾ; ಏನಿದರ ಉದ್ದೇಶ?

RCB
ಕ್ರೀಡೆ46 mins ago

RCB vs KKR: ಕೆಕೆಆರ್​ ಸವಾಲು ಸುಲಭದ್ದಲ್ಲ; ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ದಾಖಲೆ ಹೇಗಿದೆ?

Thalaivar 171 Rajinikanth first look
ಕಾಲಿವುಡ್48 mins ago

Thalaivar 171: ರಜನಿಕಾಂತ್‌ 171ನೇ ಸಿನಿಮಾ ಪೋಸ್ಟರ್‌ ಔಟ್‌; ʻರೋಲೆಕ್ಸ್‌ʼ ಸೂರ್ಯ ಎಂಟ್ರಿ ಆಗ್ತಾರಾ?

Narendra Modi And Bill Gates
ದೇಶ57 mins ago

Narendra Modi: ಮೋದಿ ಜತೆ ಚಾಟ್; ಭಾರತದ ಡಿಜಿಟಲ್ ಕ್ರಾಂತಿಗೆ ಬಿಲ್ ಗೇಟ್ಸ್ ಶ್ಲಾಘನೆ

Lok Sabha Election 2024 JDS finalised candidates for 3 constituency
ಪ್ರಮುಖ ಸುದ್ದಿ59 mins ago

HD Deve Gowda: ನಾಲ್ಕು ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ದೇವೇಗೌಡರು; ಮಾಸ್ಟರ್‌ ಪ್ಲಾನ್‌ ಏನು?

Sania Mirza
ಕ್ರೀಡೆ2 hours ago

Sania Mirza: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಾನಿಯಾ ಮಿರ್ಜಾ?; ಈ ಪಕ್ಷದಿಂದ ಆಫರ್​

Savadatti Yallamma
ಕರ್ನಾಟಕ2 hours ago

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202423 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌