ಬಾಗಲಕೋಟೆಯಲ್ಲಿ ಮೊಸಳೆ ಪಾರ್ಕ್‌ ಆರಂಭಿಸಿ ಎಂದು ಅಂಗಲಾಚುತ್ತಿರುವ ಜನರು - Vistara News

ಬಾಗಲಕೋಟೆ

ಬಾಗಲಕೋಟೆಯಲ್ಲಿ ಮೊಸಳೆ ಪಾರ್ಕ್‌ ಆರಂಭಿಸಿ ಎಂದು ಅಂಗಲಾಚುತ್ತಿರುವ ಜನರು

ರೈತರೆಲ್ಲಾ ಸೇರಿ ಮೊಸಳೆ ಕಟ್ಟಿ ಹಾಕಿ ಸುರಕ್ಷಿತ ತಾಣಕ್ಕೆ ಬಿಡಲು ಮುಂದಾಗುತ್ತಿದ್ದರು. ಈ ಮಧ್ಯೆ ನದಿ ನೀರು ಕಡಿಮೆಯಾಗುತ್ತಿದ್ದಂತೆ ಮೊಸಳೆ ಬಗೆಗಿನ ಆತಂಕ ಹೆಚ್ಚಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಜಿಲ್ಲೆಯಲ್ಲಿ ಜನ‌ಜಾನುವಾರುಗಳ ಮೇಲೆ ಮೊಸಳೆಗಳು ಯಾವಾಗ ದಾಳಿ ಮಾಡುತ್ತವೆಯೋ ಎಂದು ಭಯದಲ್ಲಿ ಬದುಕುವಂತಾಗಿದೆ. ಕಾಳಿ ನದಿ ತೀರದ ಗ್ರಾಮಸ್ಥರಿಗೆ ಇನ್ನಿಲ್ಲದ ಭಯ ಸೃಷ್ಟಿಯಾಗುತ್ತಿದೆ.
ಇನ್ನು ಕೆಲವು ಕಡೆ ಗ್ರಾಮಕ್ಕೆ ನುಗ್ಗಿದಾಗ ಜನರ ಕೈಯಲ್ಲಿ ಸಿಕ್ಕು ಮೊಸಳೆಗಳು ಕೂಡ ಸಾವನ್ನಪ್ಪಿವೆ. ಕಳೆದ ಎರಡು ದಿನದ ಹಿಂದೆಯಷ್ಟೇ ಹುನಗುಂದ ತಾಲೂಕಿನ ರಾಮಥಾಳ ಗ್ರಾಮದಲ್ಲಿ 6 ಅಡಿ ಉದ್ದದ ಬೃಹತ್ ಮೊಸಳೆಯೊಂದು ರಾತ್ರೋರಾತ್ರಿ ನದಿ ಬಿಟ್ಟು ಹೊಲಕ್ಕೆ ನುಗ್ಗಿದ್ದು, ರೈತರು ಅದನ್ನು ಕಂಡು ಆತಂಕಕ್ಕೆ ಒಳಗಾದ್ರು. ತಕ್ಷಣ ರೈತರೆಲ್ಲಾ ಸೇರಿ ಮೊಸಳೆ ಕಟ್ಟಿ ಹಾಕಿ ಸುರಕ್ಷಿತ ತಾಣಕ್ಕೆ ಬಿಡಲು ಮುಂದಾದ್ರು. ಈ ಮಧ್ಯೆ ನದಿ ನೀರು ಕಡಿಮೆಯಾಗುತ್ತಿದ್ದಂತೆ ಮೊಸಳೆ ಬಗೆಗಿನ ಆತಂಕ ಮಾತ್ರ ತಪ್ಪಿಲ್ಲ.

ಬಾಗಲಕೋಟೆ ಜಿಲ್ಲೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮೂರು ನದಿಗಳನ್ನು ಹೊಂದಿರುವ ಜಿಲ್ಲೆ. ಕಾಳಿ ನದಿಯ ದಡದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಎಕರೆ ವಿಸ್ತೀರ್ಣದಲ್ಲಿ ಪಾರ್ಕ್ ನಿರ್ಮಿಸಲಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ನಿರ್ಮಾಣ ಕಾರ್ಯಗಳು 2019 ರಲ್ಲಿ ಪ್ರಾರಂಭವಾಯಿತು ಮತ್ತು ಜೂನ್ 2021 ರಲ್ಲಿ ಪೂರ್ಣಗೊಂಡಿತು. ಆದರೆ, ಸಾಂಕ್ರಾಮಿಕ ರೋಗದಿಂದಾಗಿ ಪ್ರಾರಂಭ ಮಾಡುವ ಕಾರ್ಯಕ್ಕೆ ವಿಘ್ನ ಉಂಟಾಗಿದೆ.

ಇದನ್ನೂ ಓದಿ: ನನ್ನ ಟ್ರಿಪ್‌ ವಿವರವನ್ನು ಟಿವಿ, ಪೇಪರ್‌ನಲ್ಲಿ ನೋಡಿ ಎಂದಿದ್ದ ಆರೋಪಿ ನಾಗೇಶ

ಒಟ್ಟಾರೆ ನದಿ ತೀರದ ಗ್ರಾಮಸ್ಥರಿಗೆ ಮಳೆಗಾಲದಲ್ಲಿ ಪ್ರವಾಹ ಭೀತಿ ಇದ್ದರೆ. ಇದರಿಂದ ನದಿ ತೀರದ ಗ್ರಾಮಸ್ಥರಿಗೆ ಇನ್ನಿಲ್ಲದ ಭಯ ಸೃಷ್ಟಿಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಮೊಸಳೆ ಪಾರ್ಕ್ ಪೂರ್ಣಗೊಳಿಸಿ ಅದನ್ನು ಆರಂಭಿಸಿ ಜನ ಜಾನುವಾರುಗಳನ್ನು ರಕ್ಷಣೆ ಮಾಡೋದರ ಜೊತೆಗೆ ಮೊಸಳೆಗಳನ್ನು ರಕ್ಷಣೆ ಮಾಡುವ ಕಾರ್ಯವಾಗಬೇಕಾಗಿದೆ ಎನ್ನುವುದು ಜಿಲ್ಲೆಯ ನಾಗರಿಕರ ಅಭಿಪ್ರಾಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

PM Narendra Modi: ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ವಿಡಿಯೊ ಕಂಡರೆ ನೀವೇನು ಮಾಡಬೇಕು?

PM Narendra Modi: ನನ್ನ ವಿರುದ್ಧವಾಗಿ ಫೇಕ್‌ ವಿಡಿಯೊ ಸಿದ್ಧಪಡಿಸಿ ಸೋಷಿಯಲ್‌ ಮೀಡಿಯಾಗಳಲ್ಲಿ ಬಿಡುತ್ತಾರೆ. ಮಾರ್ಫ್ ಮಾಡಿ ವಿಡಿಯೊ ಬಿಡುಗಡೆ ಮಾಡುತ್ತಾರೆ ಎಂದು ಡೀಪ್ ಫೇಕ್‌ ವಿಡಿಯೊ ಪ್ರಕರಣಗಳು ಹರಿದಾಡುತ್ತಿರುವ ಬಗ್ಗೆ ಗರಂ ಆದ ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್‌ ಬಚ್ಚನ್ ಸೇರಿ ಹಲವು ಸ್ಟಾರ್‌ಗಳ ಡೀಪ್‌ ಫೇಕ್‌ ವಿಡಿಯೊ ಮಾಡಲಾಗಿದೆ. ನನ್ನ ಧ್ವನಿ ಹೋಲುವಂತೆ ನಕಲು ಮಾಡಿ ಸಾಮಾಜಿಕ ತಾಣದಲ್ಲಿ ಬಿಡುತ್ತಾರೆ. ಈ ರೀತಿಯ ಫೇಕ್ ವಿಡಿಯೊ ಬಿಡುವ ಸಂಚುಕೋರರ ಬಗ್ಗೆ ಜಾಗ್ರತೆ ಇರಲಿ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

VISTARANEWS.COM


on

PM Narendra modi in Bagalakote and talk about DeepFake Video
Koo

ಬಾಗಲಕೋಟೆ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಮಾವೇಶ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಡೀಪ್‌ ಫೇಕ್‌ (Deep Fake) ಬಗ್ಗೆ ಮಾತನಾಡಿದ್ದಾರೆ. ತಮ್ಮ ಭಾಷಣದ ರೀತಿ ಮಾರ್ಫ್‌ ಮಾಡಿ ವಿಡಿಯೊವನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿಬಿಡುತ್ತಿರುವ ಗ್ಯಾಂಗ್‌ ಸಕ್ರಿಯವಾಗಿದೆ. ಇಂಥ ವಿಡಿಯೊ ನಿಮಗೆ ಕಂಡುಬಂದಲ್ಲಿ ಆ ವಿಡಿಯೊ ಸಹಿತ ಪೊಲೀಸರಿಗೆ ದೂರು ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕರೆ ನೀಡಿದರು.

ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆಯಲ್ಲಿ ಸೋತು ಮೈದಾನ ಬಿಟ್ಟು ಹೋದವರಿಂದ ಫೇಕ್‌ ವಿಡಿಯೊ ಮಾಡಲಾಗುತ್ತಿದೆ. ಸಾಮಾಜಿಕ ತಾಣಗಳಲ್ಲಿ ಫೇಕ್ ವಿಡಿಯೋ ಬಿಡುವ ಕಾರ್ಯದಲ್ಲಿದ್ದಾರೆ ಅವರೆಲ್ಲರೂ ನಿರತರಾಗಿದ್ದಾರೆ. ಆ ರೀತಿ ಫೇಕ್ ವಿಡಿಯೊಗಳು ನಿಮ್ಮ ಗಮನಕ್ಕೆ ಬಂದರೆ ಪೊಲೀಸರಿಗೆ ಕೊಡಿ. ನಮ್ಮ ದೇಶದ ಕಾನೂನಿನಲ್ಲಿ ಫೇಕ್‌ ವಿಡಿಯೊ ಗ್ಯಾಂಗ್‌ಗೆ ಶಿಕ್ಷೆ ಮಾಡುತ್ತೇವೆ ಎಂದು ಹೇಳಿದರು.

ನನ್ನ ವಿರುದ್ಧವಾಗಿ ಫೇಕ್‌ ವಿಡಿಯೊ ಸಿದ್ಧಪಡಿಸಿ ಸೋಷಿಯಲ್‌ ಮೀಡಿಯಾಗಳಲ್ಲಿ ಬಿಡುತ್ತಾರೆ. ಮಾರ್ಫ್ ಮಾಡಿ ವಿಡಿಯೊ ಬಿಡುಗಡೆ ಮಾಡುತ್ತಾರೆ ಎಂದು ಡೀಪ್ ಫೇಕ್‌ ವಿಡಿಯೊ ಪ್ರಕರಣಗಳು ಹರಿದಾಡುತ್ತಿರುವ ಬಗ್ಗೆ ಗರಂ ಆದ ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್‌ ಬಚ್ಚನ್ ಸೇರಿ ಹಲವು ಸ್ಟಾರ್‌ಗಳ ಡೀಪ್‌ ಫೇಕ್‌ ವಿಡಿಯೊ ಮಾಡಲಾಗಿದೆ. ನನ್ನ ಧ್ವನಿ ಹೋಲುವಂತೆ ನಕಲು ಮಾಡಿ ಸಾಮಾಜಿಕ ತಾಣದಲ್ಲಿ ಬಿಡುತ್ತಾರೆ. ಈ ರೀತಿಯ ಫೇಕ್ ವಿಡಿಯೊ ಬಿಡುವ ಸಂಚುಕೋರರ ಬಗ್ಗೆ ಜಾಗ್ರತೆ ಇರಲಿ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ

ಒಬಿಸಿ ಸಮುದಾಯಗಳ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್‌ ಸರ್ಕಾರ ಷಡ್ಯಂತ್ರ ರೂಪಿಸಿದೆ. ಹಿಂದುಳಿದ ವರ್ಗಗಳು ಹಾಗೂ ಎಸ್‌ಸಿ, ಎಸ್‌ಟಿ ಮೀಸಲಾತಿಗೂ ಕುತ್ತು ತರಲು ಕಾಂಗ್ರೆಸ್‌ ಹೊರಟಿದೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಹಂಚಿಕೆ ಮಾಡಲು ಕಾಂಗ್ರೆಸ್‌ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಧರ್ಮದ ರಾಜಕಾರಣ ಮಾಡಲು ಕಾಂಗ್ರೆಸ್‌ನಿಂದ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ. ಎಸ್‌ಸಿ – ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ತೆಗೆದು ಮುಸ್ಲಿಮರಿಗೆ ನೀಡಲು ಸಂಚು ರೂಪಿಸಲಾಗಿದೆ. ಆದರೆ, ನಾನು ಕಾಂಗ್ರೆಸ್ ನಾಯಕರ ರಾಜಕಾರಣದ ಸಂಚು ಫಲಿಸಲು ನಾನು ಬಿಡುವುದಿಲ್ಲ. ಮುಸ್ಲಿಮರನ್ನು ಓಲೈಸುತ್ತಾ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ವಿರುದ್ಧ ಸಂಚು ಮಾಡುತ್ತಿದ್ದಾರೆ. ಮೀಸಲಾತಿ, ನಿಮ್ಮ ಹಕ್ಕು, ನಿಮ್ಮ ಅಧಿಕಾರವನ್ನು ಕಿತ್ತುಕೊಳ್ಳಲು ಈ ನಿಮ್ಮ ನರೇಂದ್ರ ಮೋದಿ ಬಿಡುವುದಿಲ್ಲ. ನಿಮ್ಮ ರಕ್ಷಣೆಗೋಸ್ಕರ ಮೋದಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ವೇಳೆ ನಾನು ನಿಮಗೆ ಮಾತು ಕೊಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಾಗಲಕೋಟೆ ಕಾರ್ಯಕ್ರಮ

ಈ ಚುನಾವಣೆಯು ವಿಕಸಿತ ಭಾರತಕ್ಕೆ ನಡೆಯುತ್ತಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ದೇಶ ಆಗುತ್ತದೆ. ನಿಮ್ಮ ಒಂದು ವೋಟು ನಮಗೆ ಈ ಶಕ್ತಿಯನ್ನು ತಂದು ಕೊಡಲಿದೆ.

ಮೋಜು ಮಸ್ತಿ ಮಾಡುವವರಿಂದ, ರಜೆ ಹಾಕುವವರಿಂದ ದೇಶದ ಅಭಿವೃದ್ಧಿ ಅಸಾಧ್ಯ. ದೇಶದ ಪ್ರಗತಿಗಾಗಿ ಗುರಿ ಬೇಕು. ಅದಕ್ಕಾಗಿ ಕಷ್ಟಪಟ್ಟು ದುಡಿಯಬೇಕು. ನಿಮ್ಮ ಮೋದಿ ಈ ಕೆಲಸವನ್ನು ಮಾಡಲಿದ್ದಾರೆ. 24/7 ಮಾದರಿಯಲ್ಲಿ ನಿಮ್ಮ ಸೇವೆಗಾಗಿ ನನ್ನ ಜೀವನವನ್ನು ಮುಡಿಪಾಗಿಟ್ಟಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ ಈಗ ಏನು ಮಾಡುತ್ತಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿರುವುದು ಮಾತ್ರವಲ್ಲದೆ, ದೇಶವನ್ನು ಲೂಟಿ ಹೊಡೆಯುವ ಕೆಲಸಕ್ಕೆ ಕೈಹಾಕಿದೆ. ಇಂಥ ಕಾಂಗ್ರೆಸ್‌ ಸರ್ಕಾರ ನಿಮಗೆ ಬೇಕಾ? ಇದಲ್ಲದೆ ಕಾಂಗ್ರೆಸ್‌ ಹೈಕಮಾಂಡ್‌ನವರು ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್‌ ನಾಯಕರು ಲೂಟಿ ಗ್ಯಾಂಗ್‌ ಅನ್ನು ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಹಾಗೂ ಆ ಪಕ್ಷದ ನಾಯಕರೇ ಮೂಲ ಕಾರಣರಾಗಿದ್ದಾರೆ. ಇಂಥವರಿಗೆ ದೇಶದ ಜವಾಬ್ದಾರಿಯನ್ನು ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕಟ್ಟಕಡೆಯ ಹಳ್ಳಿಗಳಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸಿಲ್ಲ. ಕೋಟ್ಯಂತರ ಜನ ಮೂಲ ಸೌಕರ್ಯದಿಂದ ವಂಚಿತರಾಗಿದ್ದರು. ಆದರೆ, ಹಳ್ಳಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕೊಡಿಸಿದ್ದು, ನಮ್ಮ ಸರ್ಕಾರದಿಂದ ಎಂಬುದು ಮುಖ್ಯ. ಇನ್ನು ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಜೀವನ್‌ ಮಿಷನ್‌ ಅನ್ನು ಪ್ರಾರಂಭ ಮಾಡಿದ್ದೇವೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಶೇ. 17ರಷ್ಟು ಮಂದಿಗೆ ಮಾತ್ರ ನೀರಿನ ಸಂಪರ್ಕ ಇತ್ತು. ಇಂದು ನಮ್ಮ ಆಡಳಿತದಲ್ಲಿ ಶೇ. 75ರಷ್ಟು ನೀರಿನ ಸಂಪರ್ಕ ಇದೆ. ಇನ್ನು ಕರ್ನಾಟಕದಲ್ಲಿ ಕುಡಿಯುವ ನೀರಿಲ್ಲದೆ ಜನರು ಕಷ್ಟಪಡುತ್ತಿದ್ದಾರೆ. ಕಾಂಗ್ರೆಸ್‌ನ ಭ್ರಷ್ಟಾಚಾರದ ಪಾಪಕ್ಕೆ ಶಿಕ್ಷೆ ಕೊಡಬೇಕೇ? ಬೇಡವೇ? ಹೀಗಾಗಿ ನೀವು ಈ ಮೇ 7ರಂದು ಮತ ಚಲಾವಣೆ ಮಾಡಿ ಬಿಜೆಪಿ ಜಯಕ್ಕೆ ಕಾರಣರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಾದಾಮಿ, ಐಹೊಳೆ, ಪಟ್ಟದಕಲ್ಲು ಪಾರಂಪರಿಕ ಸ್ಥಳಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ವಿಜಯಪುರದಲ್ಲೂ ಏರ್ಪೋರ್ಟ್‌ ನಿರ್ಮಾಣ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ. ಇಳಕಲ್‌ ಸೀರೆಗಾಗಿ ಒಂದು ಗ್ರಾಮ ಒಂದು ಉತ್ಪನ್ನ ಎಂದು ಮಾಡಿದೆವು. ತಳವಾರ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿದ್ದು ನಮ್ಮ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳಿಗೆ ಏನಾಯಿತು? ನೇಹಾ ಮೇಲೆ ಒಂದಾದ ಮೇಲೆ ಒಂದರಂತೆ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಆದರೆ, ಕಾಂಗ್ರೆಸ್‌ ಏನು ಕ್ರಮ ಕೈಗೊಂಡಿದೆ. ತುಷ್ಟೀಕರಣಕ್ಕಾಗಿ ಇದು ಯಾವ ಹಂತಕ್ಕೆ ಬೇಕಾದರೂ ಹೋಗಲಿದೆ. ಇನ್ನು ಬೆಂಗಳೂರಿನಲ್ಲಿ ಹನುಮಾನ್‌ ಚಾಲೀಸಾವನ್ನು ಪಠಣ ಮಾಡಿದರೆ ಗಲಾಟೆ ಮಾಡುತ್ತಾರೆ, ಹಲ್ಲೆ ನಡೆಸುತ್ತಾರೆ. ಇದರ ಬಗ್ಗೆ ಏನು ಕ್ರಮ ಕೈಗೊಂಡರು? ಅಲ್ಲದೆ, ಬೆಂಗಳೂರು ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಬಗ್ಗೆ ಕಾಂಗ್ರೆಸ್‌ ಸರ್ಕಾರ ಹೇಳಿದ್ದು ಏನು? ಸಿಲಿಂಡರ್‌ ಬ್ಲಾಸ್ಟ್‌ ಎಂದು ಹೇಳಿಬಿಟ್ಟರು. ಕೊನೆಗೆ ಬ್ಯುಸಿನೆಸ್‌ ಶತ್ರುಗಳು ಮಾಡಿದ್ದು ಎಂದು ಹೇಳಿದರು. ಇದು ಕಾಂಗ್ರೆಸ್‌ನ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಕಂಬನಿ

ಇಂದು ಬೆಳಗ್ಗೆ ಬಿಜೆಪಿ ನಾಯಕ ಹಾಗೂ ಸಾಮಾಜಿಕ ನ್ಯಾಯದ ಸಿಪಾಯಿ ವಿ. ಶ್ರೀನಿವಾಸ್‌ ಪ್ರಸಾದ್ ನಿಧನ ಸುದ್ದಿ ಕೇಳಿ ನನಗೆ ನೋವಾಯಿತು. ಚಾಮರಾಜನಗರದ ಸಂಸದರಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಜನರ ನಾಯಕನಾಗಿ ರಾಜಕೀಯದಲ್ಲಿ ಬೆಳೆದು ಹಲವು ದಶಕಗಳಿಂದ ಸಾಮಾಜಿಕ ಜೀವನದಲ್ಲಿದ್ದರು. ಬಡವರು, ಶೋಷಿತರು ಹಾಗೂ ವಂಚಿತರ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕೇಂದ್ರ ಹಾಗೂ ರಾಜ್ಯದಲ್ಲಿ ಮಂತ್ರಿಯೂ ಆಗಿ ಜನಸೇವೆ ಮಾಡಿದ್ದನ್ನು ಯಾವಾಗಲೂ ಮರೆಯಲ್ಲ. ಶ್ರೀನಿವಾಸ್ ಪ್ರಸಾದ್ ಆತ್ಮಕ್ಕೆ ಸದ್ಗತಿ ಸಿಗಬೇಕು, ಪ್ರಸಾದ್ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಸಿಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥಿಸಿದರು.

ಇದನ್ನೂ ಓದಿ: Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

ಬಾಲಕಿಯ ಫೋಟೊ ತೆಗೆಯಲು ಹೇಳಿದ ಮೋದಿ!

ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಫೋಟೊವನ್ನು ಬಾಲಕಿಯೊಬ್ಬಳು ಪ್ರದರ್ಶನ ಮಾಡುತ್ತಿದ್ದಳು. ಇದನ್ನು ಭಾಷಣದ ಮಧ್ಯೆಯೇ ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಸ್‌ಪಿಜಿ ಕಮಾಂಡೋಗಳಿಗೆ ಸೂಚಿಸಿ, ಆ ದೃಶ್ಯದ ಒಂದು ಫೋಟೊವನ್ನು ತೆಗೆದಿಟ್ಟುಕೊಳ್ಳಲು ಹೇಳಿದರು.

Continue Reading

Lok Sabha Election 2024

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra Modi: ಧರ್ಮದ ರಾಜಕಾರಣ ಮಾಡಲು ಕಾಂಗ್ರೆಸ್‌ನಿಂದ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ. ಎಸ್‌ಸಿ – ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ತೆಗೆದು ಮುಸ್ಲಿಮರಿಗೆ ನೀಡಲು ಸಂಚು ರೂಪಿಸಲಾಗಿದೆ. ಆದರೆ, ನಾನು ಕಾಂಗ್ರೆಸ್ ನಾಯಕರ ರಾಜಕಾರಣದ ಸಂಚು ಫಲಿಸಲು ನಾನು ಬಿಡುವುದಿಲ್ಲ. ಮುಸ್ಲಿಮರನ್ನು ಓಲೈಸುತ್ತಾ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ವಿರುದ್ಧ ಸಂಚು ಮಾಡುತ್ತಿದ್ದಾರೆ. ಮೀಸಲಾತಿ, ನಿಮ್ಮ ಹಕ್ಕು, ನಿಮ್ಮ ಅಧಿಕಾರವನ್ನು ಕಿತ್ತುಕೊಳ್ಳಲು ಈ ನಿಮ್ಮ ನರೇಂದ್ರ ಮೋದಿ ಬಿಡುವುದಿಲ್ಲ. ನಿಮ್ಮ ರಕ್ಷಣೆಗೋಸ್ಕರ ಮೋದಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ವೇಳೆ ನಾನು ನಿಮಗೆ ಮಾತು ಕೊಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದ್ದಾರೆ.

VISTARANEWS.COM


on

PM Narendra modi in Bagalakote and Attack on Congress
Koo

ಬಾಗಲಕೋಟೆ: ಒಬಿಸಿ ಸಮುದಾಯಗಳ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್‌ ಸರ್ಕಾರ ಷಡ್ಯಂತ್ರ ರೂಪಿಸಿದೆ. ಹಿಂದುಳಿದ ವರ್ಗಗಳು ಹಾಗೂ ಎಸ್‌ಸಿ, ಎಸ್‌ಟಿ ಮೀಸಲಾತಿಗೂ ಕುತ್ತು ತರಲು ಕಾಂಗ್ರೆಸ್‌ ಹೊರಟಿದೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಹಂಚಿಕೆ ಮಾಡಲು ಕಾಂಗ್ರೆಸ್‌ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಧರ್ಮದ ರಾಜಕಾರಣ ಮಾಡಲು ಕಾಂಗ್ರೆಸ್‌ನಿಂದ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ. ಎಸ್‌ಸಿ – ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ತೆಗೆದು ಮುಸ್ಲಿಮರಿಗೆ ನೀಡಲು ಸಂಚು ರೂಪಿಸಲಾಗಿದೆ. ಆದರೆ, ನಾನು ಕಾಂಗ್ರೆಸ್ ನಾಯಕರ ರಾಜಕಾರಣದ ಸಂಚು ಫಲಿಸಲು ನಾನು ಬಿಡುವುದಿಲ್ಲ. ಮುಸ್ಲಿಮರನ್ನು ಓಲೈಸುತ್ತಾ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ವಿರುದ್ಧ ಸಂಚು ಮಾಡುತ್ತಿದ್ದಾರೆ. ಮೀಸಲಾತಿ, ನಿಮ್ಮ ಹಕ್ಕು, ನಿಮ್ಮ ಅಧಿಕಾರವನ್ನು ಕಿತ್ತುಕೊಳ್ಳಲು ಈ ನಿಮ್ಮ ನರೇಂದ್ರ ಮೋದಿ ಬಿಡುವುದಿಲ್ಲ. ನಿಮ್ಮ ರಕ್ಷಣೆಗೋಸ್ಕರ ಮೋದಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ವೇಳೆ ನಾನು ನಿಮಗೆ ಮಾತು ಕೊಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಾಗಲಕೋಟೆ ಕಾರ್ಯಕ್ರಮ

ಈ ಚುನಾವಣೆಯು ವಿಕಸಿತ ಭಾರತಕ್ಕೆ ನಡೆಯುತ್ತಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ದೇಶ ಆಗುತ್ತದೆ. ನಿಮ್ಮ ಒಂದು ವೋಟು ನಮಗೆ ಈ ಶಕ್ತಿಯನ್ನು ತಂದು ಕೊಡಲಿದೆ.

ಮೋಜು ಮಸ್ತಿ ಮಾಡುವವರಿಂದ, ರಜೆ ಹಾಕುವವರಿಂದ ದೇಶದ ಅಭಿವೃದ್ಧಿ ಅಸಾಧ್ಯ. ದೇಶದ ಪ್ರಗತಿಗಾಗಿ ಗುರಿ ಬೇಕು. ಅದಕ್ಕಾಗಿ ಕಷ್ಟಪಟ್ಟು ದುಡಿಯಬೇಕು. ನಿಮ್ಮ ಮೋದಿ ಈ ಕೆಲಸವನ್ನು ಮಾಡಲಿದ್ದಾರೆ. 24/7 ಮಾದರಿಯಲ್ಲಿ ನಿಮ್ಮ ಸೇವೆಗಾಗಿ ನನ್ನ ಜೀವನವನ್ನು ಮುಡಿಪಾಗಿಟ್ಟಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ ಈಗ ಏನು ಮಾಡುತ್ತಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿರುವುದು ಮಾತ್ರವಲ್ಲದೆ, ದೇಶವನ್ನು ಲೂಟಿ ಹೊಡೆಯುವ ಕೆಲಸಕ್ಕೆ ಕೈಹಾಕಿದೆ. ಇಂಥ ಕಾಂಗ್ರೆಸ್‌ ಸರ್ಕಾರ ನಿಮಗೆ ಬೇಕಾ? ಇದಲ್ಲದೆ ಕಾಂಗ್ರೆಸ್‌ ಹೈಕಮಾಂಡ್‌ನವರು ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್‌ ನಾಯಕರು ಲೂಟಿ ಗ್ಯಾಂಗ್‌ ಅನ್ನು ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಹಾಗೂ ಆ ಪಕ್ಷದ ನಾಯಕರೇ ಮೂಲ ಕಾರಣರಾಗಿದ್ದಾರೆ. ಇಂಥವರಿಗೆ ದೇಶದ ಜವಾಬ್ದಾರಿಯನ್ನು ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕಟ್ಟಕಡೆಯ ಹಳ್ಳಿಗಳಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸಿಲ್ಲ. ಕೋಟ್ಯಂತರ ಜನ ಮೂಲ ಸೌಕರ್ಯದಿಂದ ವಂಚಿತರಾಗಿದ್ದರು. ಆದರೆ, ಹಳ್ಳಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕೊಡಿಸಿದ್ದು, ನಮ್ಮ ಸರ್ಕಾರದಿಂದ ಎಂಬುದು ಮುಖ್ಯ. ಇನ್ನು ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಜೀವನ್‌ ಮಿಷನ್‌ ಅನ್ನು ಪ್ರಾರಂಭ ಮಾಡಿದ್ದೇವೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಶೇ. 17ರಷ್ಟು ಮಂದಿಗೆ ಮಾತ್ರ ನೀರಿನ ಸಂಪರ್ಕ ಇತ್ತು. ಇಂದು ನಮ್ಮ ಆಡಳಿತದಲ್ಲಿ ಶೇ. 75ರಷ್ಟು ನೀರಿನ ಸಂಪರ್ಕ ಇದೆ. ಇನ್ನು ಕರ್ನಾಟಕದಲ್ಲಿ ಕುಡಿಯುವ ನೀರಿಲ್ಲದೆ ಜನರು ಕಷ್ಟಪಡುತ್ತಿದ್ದಾರೆ. ಕಾಂಗ್ರೆಸ್‌ನ ಭ್ರಷ್ಟಾಚಾರದ ಪಾಪಕ್ಕೆ ಶಿಕ್ಷೆ ಕೊಡಬೇಕೇ? ಬೇಡವೇ? ಹೀಗಾಗಿ ನೀವು ಈ ಮೇ 7ರಂದು ಮತ ಚಲಾವಣೆ ಮಾಡಿ ಬಿಜೆಪಿ ಜಯಕ್ಕೆ ಕಾರಣರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಾದಾಮಿ, ಐಹೊಳೆ, ಪಟ್ಟದಕಲ್ಲು ಪಾರಂಪರಿಕ ಸ್ಥಳಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ವಿಜಯಪುರದಲ್ಲೂ ಏರ್ಪೋರ್ಟ್‌ ನಿರ್ಮಾಣ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ. ಇಳಕಲ್‌ ಸೀರೆಗಾಗಿ ಒಂದು ಗ್ರಾಮ ಒಂದು ಉತ್ಪನ್ನ ಎಂದು ಮಾಡಿದೆವು. ತಳವಾರ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿದ್ದು ನಮ್ಮ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳಿಗೆ ಏನಾಯಿತು? ನೇಹಾ ಮೇಲೆ ಒಂದಾದ ಮೇಲೆ ಒಂದರಂತೆ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಆದರೆ, ಕಾಂಗ್ರೆಸ್‌ ಏನು ಕ್ರಮ ಕೈಗೊಂಡಿದೆ. ತುಷ್ಟೀಕರಣಕ್ಕಾಗಿ ಇದು ಯಾವ ಹಂತಕ್ಕೆ ಬೇಕಾದರೂ ಹೋಗಲಿದೆ. ಇನ್ನು ಬೆಂಗಳೂರಿನಲ್ಲಿ ಹನುಮಾನ್‌ ಚಾಲೀಸಾವನ್ನು ಪಠಣ ಮಾಡಿದರೆ ಗಲಾಟೆ ಮಾಡುತ್ತಾರೆ, ಹಲ್ಲೆ ನಡೆಸುತ್ತಾರೆ. ಇದರ ಬಗ್ಗೆ ಏನು ಕ್ರಮ ಕೈಗೊಂಡರು? ಅಲ್ಲದೆ, ಬೆಂಗಳೂರು ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಬಗ್ಗೆ ಕಾಂಗ್ರೆಸ್‌ ಸರ್ಕಾರ ಹೇಳಿದ್ದು ಏನು? ಸಿಲಿಂಡರ್‌ ಬ್ಲಾಸ್ಟ್‌ ಎಂದು ಹೇಳಿಬಿಟ್ಟರು. ಕೊನೆಗೆ ಬ್ಯುಸಿನೆಸ್‌ ಶತ್ರುಗಳು ಮಾಡಿದ್ದು ಎಂದು ಹೇಳಿದರು. ಇದು ಕಾಂಗ್ರೆಸ್‌ನ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನನ್ನ ಬಗ್ಗೆ ಫೇಕ್‌ ವಿಡಿಯೊ ಕಂಡರೆ ದೂರು ಕೊಡಿ

ಇನ್ನು ನನ್ನ ಬಗ್ಗೆಯೇ ಕಾಂಗ್ರೆಸ್‌ ನಕಲಿ ವಿಡಿಯೊ ಮಾಡಿದೆ. ಚುನಾವಣೆಯಲ್ಲಿ ಸೋತು ಮೈದಾನ ಬಿಟ್ಟು ಹೋದವರಿಂದ ಫೇಕ್‌ ವಿಡಿಯೊ ಹೊರಗೆ ಬರುತ್ತಿದೆ. ಸೋಷಿಯಲ್‌ ಮೀಡಿಯಾಗಳಲ್ಲಿ ಅಂಥ ವಿಡಿಯೊಗಳನ್ನು ಅಪ್ಲೋಡ್‌ ಮಾಡುತ್ತಾ ಬರುತ್ತಿದ್ದಾರೆ. ಆ ರೀತಿಯ ಫೇಕ್‌ ವಿಡಿಯೊಗಳು ನಿಮ್ಮ ಗಮನಕ್ಕೆ ಬಂದರೆ ಪೊಲೀಸರಿಗೆ ದೂರು ಕೊಡಿ. ನಮ್ಮ ದೇಶದ ಕಾನೂನಿನಲ್ಲಿ ಫೇಕ್‌ ವಿಡಿಯೊ ಗ್ಯಾಂಗ್‌ಗೆ ತಕ್ಕ ಶಿಕ್ಷೆಯನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಕಂಬನಿ

ಇಂದು ಬೆಳಗ್ಗೆ ಬಿಜೆಪಿ ನಾಯಕ ಹಾಗೂ ಸಾಮಾಜಿಕ ನ್ಯಾಯದ ಸಿಪಾಯಿ ವಿ. ಶ್ರೀನಿವಾಸ್‌ ಪ್ರಸಾದ್ ನಿಧನ ಸುದ್ದಿ ಕೇಳಿ ನನಗೆ ನೋವಾಯಿತು. ಚಾಮರಾಜನಗರದ ಸಂಸದರಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಜನರ ನಾಯಕನಾಗಿ ರಾಜಕೀಯದಲ್ಲಿ ಬೆಳೆದು ಹಲವು ದಶಕಗಳಿಂದ ಸಾಮಾಜಿಕ ಜೀವನದಲ್ಲಿದ್ದರು. ಬಡವರು, ಶೋಷಿತರು ಹಾಗೂ ವಂಚಿತರ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕೇಂದ್ರ ಹಾಗೂ ರಾಜ್ಯದಲ್ಲಿ ಮಂತ್ರಿಯೂ ಆಗಿ ಜನಸೇವೆ ಮಾಡಿದ್ದನ್ನು ಯಾವಾಗಲೂ ಮರೆಯಲ್ಲ. ಶ್ರೀನಿವಾಸ್ ಪ್ರಸಾದ್ ಆತ್ಮಕ್ಕೆ ಸದ್ಗತಿ ಸಿಗಬೇಕು, ಪ್ರಸಾದ್ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಸಿಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥಿಸಿದರು.

ಇದನ್ನೂ ಓದಿ: Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

ಬಾಲಕಿಯ ಫೋಟೊ ತೆಗೆಯಲು ಹೇಳಿದ ಮೋದಿ!

ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಫೋಟೊವನ್ನು ಬಾಲಕಿಯೊಬ್ಬಳು ಪ್ರದರ್ಶನ ಮಾಡುತ್ತಿದ್ದಳು. ಇದನ್ನು ಭಾಷಣದ ಮಧ್ಯೆಯೇ ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಸ್‌ಪಿಜಿ ಕಮಾಂಡೋಗಳಿಗೆ ಸೂಚಿಸಿ, ಆ ದೃಶ್ಯದ ಒಂದು ಫೋಟೊವನ್ನು ತೆಗೆದಿಟ್ಟುಕೊಳ್ಳಲು ಹೇಳಿದರು.

Continue Reading

Lok Sabha Election 2024

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

PM Narendra Modi Live: ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇಂದು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

PM Narendra modi in Bagalakote for Election Campaign and here is Live telecast
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆಯಲ್ಲಿ ಮೋದಿ ಸಮಾವೇಶದ ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

ಪ್ರಧಾನಿ ನರೇಂದ್ರ ಮೋದಿ ಅವರ ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading
Advertisement
IPL 2024
ಪ್ರಮುಖ ಸುದ್ದಿ4 mins ago

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

Multivitamin Pill
ಆರೋಗ್ಯ5 mins ago

Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

Kannada New Movie
ಸ್ಯಾಂಡಲ್ ವುಡ್13 mins ago

Kannada New Movie: ‘ಕನ್ನಡ ಮಾಧ್ಯಮ’ ಸಿನಿಮಾಕ್ಕೆ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಸಾಥ್; ಮೋಷನ್ ಪೋಸ್ಟರ್ ರಿಲೀಸ್

V Srinivas Prasad
ಪ್ರಮುಖ ಸುದ್ದಿ27 mins ago

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

KL Rahul
ಕ್ರೀಡೆ35 mins ago

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

Actress Summer Fashion
ಫ್ಯಾಷನ್35 mins ago

Actress Summer Fashion: ಬಾಲಿವುಡ್‌ನವರನ್ನು ಮೀರಿಸಿದ ನಟಿ ಶಿಲ್ಪಾ ಮಂಜುನಾಥ್‌ ಪೂಲ್‌ಸೈಡ್‌ ಹಾಟ್‌ ಲುಕ್‌!

Hassan Pen Drive Case
ಸಿನಿಮಾ38 mins ago

Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Physical Abuse
ಕ್ರೈಂ58 mins ago

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

Russia-Ukraine War
ರಷ್ಯಾ-ಉಕ್ರೇನ್‌ ಕದನ59 mins ago

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Leg Swelling
ಆರೋಗ್ಯ1 hour ago

Leg Swelling: ಪ್ರಯಾಣಿಸುವಾಗ ನಮ್ಮ ಕಾಲುಗಳು ಊದಿಕೊಳ್ಳುವುದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ13 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌