ಭಾರಿ ಗಾಳಿ ಮಳೆಗೆ ಮನೆಯ ಚಾವಣಿ ಮಾಯ! - Vistara News

ಕೊಡಗು

ಭಾರಿ ಗಾಳಿ ಮಳೆಗೆ ಮನೆಯ ಚಾವಣಿ ಮಾಯ!

ಜಿಲ್ಲೆಯಲ್ಲಿ ಸುರಿದ ಗಾಳಿ ಮಳೆಯ ಹೋಡೆತಕ್ಕೆ ಕೊಡಗು ಜಿಲ್ಲೆಯಾ ನಾಪೋಕ್ಲು ಸಮೀಪದ ಬೇತು ಗ್ರಾಮದ ನಿವಾಸಿ ದಿವಂಗತ ಕೃಷ್ಣಪ್ಪನವರ ಮನೆಯ ಮೇಲ್ಚಾವಣಿಯ ಸೀಟುಗಳು ಹಾರಿ‌ ಹೋಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕೊಡಗು: ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಭಾರಿ ಗಾಳಿ ಮಳೆಗೆ ನಾನಾ ಅವಾಂತರಗಳು ಆಗಿವೆ. ಗಾಳಿಯ ಹೊಡೆತಕ್ಕೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಬೇತ ಗ್ರಾಮದ ಮನೆಯೊಂದರ ಚಾವಣಿಯ ಸೀಟುಗಳು ಹಾರಿ‌ ಹೋಗಿವೆ.

ಇದನ್ನೂ ಓದಿ: ಮಳೆಗೆ ಮುಳುಗಿದ ಬೆಂಗಳೂರು ಪ್ರದೇಶಗಳು: ಮನೆ, ದೇವಸ್ಥಾನಕ್ಕೆ ನುಗ್ಗಿದ ನೀರು

ಇದರಿಂದ ಮಳೆಯ ನೀರೆಲ್ಲ ಮನೆಗೆ ತುಂಬಿ ಮನೆಯ ವಸ್ತುಗಳಿಗೆ ಹಾನಿಯಾಗಿದೆ. ಮನೆಯಲ್ಲಿದ್ದ ದಿ. ಕೃಷ್ಣಪ್ಪ ಅವರ ಪತ್ನಿ ಪುಷ್ಪ , ಪುತ್ರ ಹರೀಶ್, ಸೊಸೆ ಸ್ವಾತಿ ಹಾಗೂ ಮಗಳು ಮೋನಿಷಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಮಳೆನೀರು ಬೀಳದಂತೆ ಸ್ಥಳೀಯರ ಸಹಾಯದಿಂದ ತಾತ್ಕಾಲಿಕವಾಗಿ ಟಾರ್ಪಾಲ್ ಹೊದಿಕೆ ಹಾಕಲಾಗಿದೆ. ಮಡಿಕೇರಿ ಸಮೀಪದ ಹಾಕತ್ತೂರು ಭಾಗದಲ್ಲೂ ಗಾಳಿ ಮಳೆಯಾಗಿದ್ದು, ಭಾರಿ ಗಾಳಿಯ ರಭಸಕ್ಕೆ ಮರವೊಂದು ಹಾಕತ್ತೂರು ಗ್ರಾಮದ ರಜೀಶ್ ಎಂಬುವರ ಮನೆಯ ಮೇಲೆ ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: ಕೊಪ್ಪಳದಲ್ಲಿ ಭಾರೀ ಗಾಳಿ ಸಹಿತ ಮಳೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕೊಡಗು

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Kodagu News : ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.

VISTARANEWS.COM


on

Kodava Family Hockey Tournament Website Launched

ಕೊಡಗು: 25ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೆಬ್ ಸೈಟ್ ಲೋಕಾರ್ಪಣೆ ಕಾರ್ಯಕ್ರಮ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ ನಲ್ಲಿ (Kodagu News ) ನಡೆಯಿತು. ಪ್ರತಿ ವರ್ಷ ಕೂಡ ಒಂದೊಂದು ಕುಟುಂಬಗಳು ಪಂದ್ಯಾಟ ಆಯೋಜಿಸುವ ಜವಬ್ದಾರಿ ಹೊತ್ತುಕೊಳ್ಳುತ್ತೆ. ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.

ಮೊದಲಿಗೆ ದೀಪ ಬೆಳಗುವ ಮೂಲಕ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ‌ 2025 ನೇ ಮುದಂಡ ಕ್ರಿಕೇಟ್ ಪಂದ್ಯಾವಳಿಯ ವೆಬ್ ಸೈಟ್ ಲಾಂಚ್ ಮಾಡಿದ್ದು ಎಲ್ಲಾ ರೀತಿಯ ಮಾಹಿತಿಯನ್ನ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಹಾಕಿ ಪಂದ್ಯಾವಳಿಯ ಗೌರವ ಅಧ್ಯಕ್ಷರಾದ ಎಂಬಿ ದೇವಯ್ಯ ಮಾತನಾಡಿ ಮುದ್ದಂಡ ಕುಟುಂಬದ ಹಿರಿಯರು ಹಾಕಿ ಅಕಾಡೆಮಿ ಸಹಕಾರದಲ್ಲಿ ಈ ಬಾರಿ ಹಾಕಿ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ನಿರ್ಧರಿಸಿದ್ದೇವೆ. ಈಗಾಗಲೇ ಸಮಿತಿಯನ್ನು ರಚನೆ ಮಾಡಿದ್ದೇವೆ. ಕೆಲಸಗಳನ್ನು ಆರಂಭಿಸಿದ್ದು, ಎಲ್ಲರು ಸಹಕಾರ ನೀಡುವಂತೆ ಮನವಿ ಮಾಡಿದರು. 25ನೇ ವರ್ಷದ ಕಾರ್ಯಕ್ರಮ ಆಯೋಜನೆಗೆ ನಮಗೆ ಸಿಕ್ಕಿರೋದು ಬಹಳ ಸಂತೋಷವಿದ್ದು ಎಲ್ಲವನ್ನು ಅಚ್ಚುಕಟ್ಟಾಗಿ ಮಾಡುವ ಗುರಿ ಹೊಂದಿದೆ.

Kodava Family Hockey Tournament Website Launched

ಕಾರ್ಯಕ್ರಮದಲ್ಲಿ ಕೊಡಗು ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ, ಸ್ಥಳೀಯ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ,ಉಳ್ಳಿಯಡ ಪೂವಯ್ಯ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ,ಮುದ್ದಂಡ ಸ್ಪೋರ್ಟ್ಸ್ ಅ್ಯಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುದ್ದಂಡ ರಶಿತ್ ಸುಬ್ಬಯ್ಯ,
ಅತಿಥಿಗಳಾಗಿ ಕುಟುಂಬದ ಪಟ್ಟೆದಾರ ಡಾಲಿ ತಿಮ್ಮಯ್ಯ, ಡೀನ್ ಬೋಪಣ್ಣ, ಉಪಾಧ್ಯಕ್ಷ ಅಶೋಕ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ,ಆದ್ಯ ಪೊನ್ನಣ್ಣ ,ರಂಜಿತ್ ಪೊನ್ನಪ್ಪ, ಚಂಗಪ್ಪ, ದಿವ್ಯ ಪ್ರಮುಖರು ಇದ್ದರು

Continue Reading

ಕೊಡಗು

Deepawalli 2024 : ಮಡಿಕೇರಿಯಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ಉತ್ಸವ

Deepawalli 2024 : ಮಡಿಕೇರಿಯಲ್ಲಿ ದೀಪಾವಳಿ ಉತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ವರದಿಗಾರ ಹಾಗೂ ಕ್ಯಾಮೆರಾಮನ್‌ಗೆ ಸನ್ಮಾನಿಸಲಾಯಿತು.

VISTARANEWS.COM


on

Deepavali festival held in Madikeri

ಕೊಡಗು: ದೀಪಾವಳಿ ಹಬ್ಬದ (Deepawalli 2024) ಪ್ರಯುಕ್ತ ಮಡಿಕೇರಿಯ ಕಾಲನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 11ನೇ ವರ್ಷದ ದೀಪಾವಳಿ ಉತ್ಸವವು ಬಹಳ ಸಂಭ್ರಮ ಸಡಗರದಿಂದ ನಡೆಯಿತು. ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಈಶ್ವರ್ ಮಲ್ಪೆ, ಮಡಿಕೇರಿಯ ಕಲಾ ನಗರಕ್ಕೆ ಕರೆಸಿರೋದು ಬಹಳ‌ ಸಂತೋಷವಾಗಿದೆ‌. ನಾನೂ ರಾಜ್ಯದ ಬೇರೆ ಬೇರೆ ಭಾಗಗಳಿಗೆ ತೆರಳಿ ನೀರಿನಲ್ಲಿ ಮುಳುಗಿದ್ದ ಶವ ಹೊರ ತೆಗೆದಿದ್ದೇನೆ. ಕಳೆದ ವರ್ಷ ಕೂಡ ಇಲ್ಲಿಗೆ ಬಂದು ಒಂದು ಶವವನ್ನು ಹೊರ ತೆಗೆದಿದ್ದೇನೆ‌. ಈ ಒಂದು ಸಣ್ಣ ಸಮಾಜಮುಖಿ ಕಾರ್ಯವನ್ನು ಗುರುತಿಸಿ ನನ್ನ ಈ ಕಾರ್ಯಕ್ರಮಕ್ಕೆ ಕರೆಸಿರೋದು ಬಹಳ ಸಂತಸ ತಂದಿದೆ. ಕಲಾನಗರದಲ್ಲಿ ಕಲಾ ರಸಿಕರೆ ಇದ್ದು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ಮತ್ತಷ್ಟು ಸಾಧನೆ ಮಾಡಲೆಂದು ಹಾರೈಸಿದರು.

Deepavali festival held in Madikeri

ಇನ್ನೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜ ಸೇವಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ವಯನಾಡು ದುರಂತದ ಕುರಿತು ಪ್ರತ್ಯಕ್ಷ ವರದಿಗಾರಿಕೆ‌ ಮಾಡಿದ್ದ ಕೊಡಗಿನ ಪತ್ರಕರ್ತರಾದ ವಿಸ್ತಾರ ನ್ಯೂಸ್‌ನ ಜಿಲ್ಲಾ ವರದಿಗಾರ ಲೋಹಿತ್ ಎಂ.ಆರ್, ಕ್ಯಾಮೆರಾಮನ್ ಮನೋಜ್, ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಪ್ರಜ್ವಲ್ ಎನ್‌.ಸಿ, ನಗರದ ಸ್ವಚ್ಚತಾ ಕಾರ್ಯದಲ್ಲಿ ಶ್ರಮಿಸುತ್ತಿರುವ ನಗರಸಭೆಯ ರಂಗಪ್ಪ , ಆರೋಗ್ಯ ಇಲಾಖೆಯ ಪ್ರತಿಮಾ ರೈ, ಅಣ್ಣಯ್ಯ, ಸೇರಿದಂತೆ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು‌‌. ಮಕ್ಕಳ ಮಂಟಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಡಿವೈಎಸ್ಪಿ ಮಹೇಶ್ ಕುಮಾರ್, ಆಕಾಶವಾಣಿಯ ಸುಬ್ರಾಯ ಸಂಪಾಜೆ ಅಧ್ಯಕ್ಷರಾದ ಮಹೇಶ್, ಆಶಾ ನಟರಾಜ್, ಸ್ಥಾಪದ ಸದಸ್ಯರು ಚಂದ್ರು, ಕೆ.ಎಸ್ ರಮೇಶ್,ಕೋಡಿ ಭರತ್, ತಿಲಖ್ ಸಿಂಗ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕೊಡಗು

Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

Murder Case : ತೆಲಂಗಾಣ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಸ್ಥಳ ಮಹಜರು ವೇಳೆ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

VISTARANEWS.COM


on

Murder Case

ಬೆಂಗಳೂರು: ಕೊಲೆ ಆರೋಪಿಯನ್ನು (Murder Case) ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿರುವ ಘಟನೆ ತೆಲಂಗಾಣ ರಾಜ್ಯದ ಉಪ್ಪಳ್‌ನಲ್ಲಿ ನಡೆದಿದೆ. ತೆಲಂಗಾಣದಲ್ಲಿ ಉದ್ಯಮಿಯನ್ನು ಹತ್ಯೆ ನಡೆಸಿ ಬಳಿಕ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಪನ್ಯದ ಎಸ್ಟೇಟ್‌ನಲ್ಲಿ ಸುಟ್ಟುಹಾಕಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದರು.

ಓರ್ವ ನ್ಯಾಯಾಂಗ ಬಂಧನವಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪೈಕಿ ಅಂಕುರ್ ರಾಣಾ ಠಾಕೂರ್‌ನನ್ನು ಎರಡು ದಿನಗಳ ಹಿಂದೆ ತೆಲಂಗಾಣಕ್ಕೆ ಮಹಜರು ನಡೆಸಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಆರೋಪಿ ಪರಾರಿ ಸಂಬಂಧ ತೆಲಂಗಾಣ ಉಪ್ಪಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚುವರಿಯಾಗಿ ಕೊಡಗಿನ ಎರಡು ಎಕ್ಸ್ ಪರ್ಟ್ ಟೀಮ್ ಕೂಡ ತೆಲಂಗಾಣಕ್ಕೆ ತೆರಳಿದ್ದು ಹುಟುಕಾಟ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case
ಬಂಧಿತ ಆರೋಪಿಗಳು

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಕೊಡಗು

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣವನ್ನು ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಪನ್ಯ ಎಫ್.ಸಿ. ತಂಡದ ಸದಸ್ಯರು ಸನ್ಮಾನಿಸಿ ಗೌರವಿಸಿದರು.

VISTARANEWS.COM


on

murder case

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಸಂದೇಶ್‌ ಎಂಬುವವರಿಗೆ ಸೇರಿದ ಪನ್ಯ ಕಾಫಿ ತೋಟದಲ್ಲಿ ವ್ಯಕ್ತಿಯನ್ನು ಕೊಲೆ (murder case) ಮಾಡಿ, ಸುಟ್ಟು ಹಾಕಿದ ಪ್ರಕರಣವನ್ನು ಸುಂಟಿಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಭೇದಿಸಿದ್ದರು. ಹೀಗಾಗಿ ಸುಂಟಿಕೊಪ್ಪ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಪನ್ಯತೋಟದ ಪನ್ಯ ಎಫ್.ಸಿ. ತಂಡದ ಸದಸ್ಯರು ಸುಂಟಿಕೊಪ್ಪ ಠಾಣೆಗೆ ತೆರಳಿ ಕುಶಾಲನಗರ ವೃತ್ತ ನಿರೀಕ್ಷಕ ಮುದ್ದು ಮಾದೇವ, ಸುಂಟಿಕೊಪ್ಪದ ಠಾಣಾಧಿಕಾರಿ ಚಂದ್ರಶೇಖರ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಿದರು.

murder case

ಯಾವುದೆ ಸುಳಿವು ಇಲ್ಲದಿರೋ ಈ ಪ್ರಕರಣವನ್ನು ಪೊಲೀಸರು ಭೇದಿಸಿರೋದಕ್ಕೆ ಪನ್ಯ ಎಫ್.ಸಿ ತಂಡ ಶ್ಲಾಘನೆ ವ್ಯಕ್ತಪಡಿಸಿತ್ತು. ಪನ್ಯ ಎಫ್.ಸಿ. ತಂಡದ ಸುಮಾರು 25ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು. ಗ್ರಾ.ಪಂ. ಸದಸ್ಯ ಪ್ರಸಾದ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು

murder case

ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನಿಗೆ ಚಟ್ಟ ಕಟ್ಟಿದ್ದಳು

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading
Advertisement
Latest15 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest20 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest21 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌