ಉತ್ತರ ಪ್ರದೇಶದಲ್ಲಿ ಈ ಬಾರಿ ರಸ್ತೆಯಲ್ಲಿ ನಮಾಜ್‌ ನಡೆದಿಲ್ಲ: ಇತಿಹಾಸದಲ್ಲೆ ಮೊದಲು - Vistara News

ದೇಶ

ಉತ್ತರ ಪ್ರದೇಶದಲ್ಲಿ ಈ ಬಾರಿ ರಸ್ತೆಯಲ್ಲಿ ನಮಾಜ್‌ ನಡೆದಿಲ್ಲ: ಇತಿಹಾಸದಲ್ಲೆ ಮೊದಲು

ಕರ್ನಾಟಕದಲ್ಲಿ ಹಿಜಾಬ್, ಆಜಾನ್‌, ಹಲಾಲ್‌ ಮುಂತಾದ ವಿವಾದಗಳು ತಣ್ಣಗಾಗುವ ವೇಳೆಗೆ ಮಹಾರಾಷ್ಟ್ರದಲ್ಲಿ ಆಜಾನ್‌ ವಿವಾದ ತಾರಕಕ್ಕೇರಿದೆ. ಆದರೆ ಇದೇ ವೇಳೆ ಉತ್ತರ ಪ್ರದೇಶದಲ್ಲಿ ಸಂಪೂರ್ಣ ಭಿನ್ನ ವಾತಾವರಣ ಇದೆ.

VISTARANEWS.COM


on

ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಉತ್ತರ ಪ್ರದೇಶದಲ್ಲಿ ಈ ವರ್ಷ ಈದ್‌ ಉಲ್‌ ಫಿತ್ರ್‌, ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿಯಂದು ಒಂದೂ ಗಲಾಟೆ, ಗಲಭೆ ನಡೆಯದಂತೆ ಸಂಪೂರ್ಣ ಶಾಂತಿಯುತವಾಗಿ ನೆರವೇರಿದೆ. ಅದಕ್ಕೂ ಮುಖ್ಯವಾಗಿ, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯದವರು ಈದ್‌ ಉಲ್‌ ಫಿತ್ರ್‌ ದಿನದಂದು ರಸ್ತೆಯಲ್ಲಿ ನಮಾಜ್‌ ಮಾಡಿಲ್ಲ, ಈದಕ್ಕೆ ಸಿಎಂ ಯೋಗಿ ಆದಿತ್ಯನಾಥ ಅವರಿಂದ ಮೆಚ್ಚುಗೆಯನ್ನೂ ಪಡೆದಿದ್ದಾರೆ.

ಹಿಂದು ಮುಸ್ಲಿಂ ಏಕತೆಗೆ ಗಂಗಾ ಜಮುನಾ ತಹಜೀಬ್‌ ಎಂಬ ವಾಕ್ಯವನ್ನು ಬಳಸಲಾಗುತ್ತದೆ. ಆದರೆ ಆಗಿಂದಾಗ್ಗೆ ದೇಶದಲ್ಲಿ ಎರಡೂ ಸಮುದಾಯಗಳ ನಡುವೆ ಗದ್ದಲ, ಗಲಾಟೆ ನಡೆಯುತ್ತಲೇ ಇರುತ್ತದೆ. ಕರ್ನಾಟಕದಲ್ಲೂ ಇತ್ತೀಚೆಗಷ್ಟೆ ಹಿಜಾಬ್‌ ವಿವಾದ ಆರಂಭವಾಗಿ ಅಂತಾರಾಷ್ಟ್ರೀಯ ಮಟ್ಟದವರೆಗೂ ಸುದ್ದಿಯಾಯಿತು. ನಂತರ ಆಜಾನ್‌, ಹಲಾಲ್‌, ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರನ್ನು ನಿಷೇಧಿಸುವವರೆಗೆ ವಿವಾದಗಳು ನಡೆದವು. ಕರ್ನಾಟಕದಲ್ಲಿ ವಿವಾದ ಇನ್ನೇನು ತಣ್ಣಗಾಯಿತು ಎನ್ನುವಷ್ಟರಲ್ಲಿ ಮಹಾರಾಷ್ಟ್ರದಲ್ಲಿ ಆಜಾನ್‌ ವಿವಾದ ಉತ್ತುಂಗದಲ್ಲಿದೆ. ಮಹಾರಾಷ್ಟ್ರ ನವನಿರ್ಮಾಣ ಪಕ್ಷದ (ಎಂಎನ್‌ಎಸ್‌) ರಾಜ್‌ ಠಾಕ್ರೆ, ಶಿವಸೇನೆ-ಕಾಂಗ್ರೆಸ್‌ ಮತ್ರಿಯ ಮಹಾರಾಷ್ಟ್ರ ವಿಕಾಸ್‌ ಅಘಾಡಿ(ಎಂವಿಎ) ಸರ್ಕಾರಕ್ಕೇ ಗಡುವು ನೀಡುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ವ್ಯತಿರಿಕ್ತವಾಗಿದೆ.

ಇದನ್ನೂ ಓದಿ | ಆಜಾನ್‌ ಸ್ಥಗಿತಗೊಳಿಸದಿದ್ದರೆ ಹನುಮಾನ್‌ ಚಾಲೀಸಾ ಪಠಣ: ವಿಶ್ವ ಹಿಂದು ಪರಿಷತ್‌ ಎಚ್ಚರಿಕೆ

ಉತ್ತರ ಪ್ರದೇಶದ ಪೊಲೀಸ್‌ ಅಧಿಕಾರಿಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿರುವಂತೆ, ಕಳೆದ ವರ್ಷ ಸುಮಾರು ೫೦ ಸಾವಿರದಿಂದ ಒಂದು ಲಕ್ಷದಷ್ಟು ಜನರು ರಾಜ್ಯದ ವಿವಿಧೆಡೆ ರಸ್ತೆಯಲ್ಲಿ ನಮಾಜ್‌ ಮಾಡಿದ್ದರು. ಈ ರೀತಿ ರಸ್ತೆಯಲ್ಲಿ ನಮಾಜ್‌ ಮಾಡುವುದಕ್ಕೆ ಅನೇಕರಿಂದ ಆಕ್ಷೇಪಣೆಗಳು ಕೇಳಿಬಂದಿದ್ದವು. ಸಾರ್ವಜನಿಕ ಕಾನೂನು ಸುವ್ಯವಸ್ಥೆಗೂ ಇದರಿಂದ ಧಕ್ಕೆಯಾಗುತ್ತದೆ ಎಂದು ತಿಳಿಸಿದ್ದರು.

ಈ ಮಾತಿಗೆ ಗೌರವ ನೀಡಿದ ಮುಸ್ಲಿಂ ಸಮುದಾಯ, ಹೆಚ್ಚಿನ ಪ್ರಮಾಣದಲ್ಲಿ ಈದ್ಗಾ ಮೈದಾನಗಳಲ್ಲೆ ಪ್ರಾರ್ಥನೆ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರಶಾಂತ್‌ ಕುಮಾರ್‌, ಈ ವರ್ಷ ಈದ್ ಉಲ್‌ ಫಿತ್ರ್‌ ದಿನದಂದು ಉತ್ತರ ಪ್ರದೇಶದ ಸುಮಾರು 32ಸಾವಿರ ಸ್ಥಳಗಳಲ್ಲಿ ನಮಾಜ್‌ ಮಾಡಲಾಗಿದೆ. ಎಲ್ಲ ಕಡೆಯೂ ಶಾಂತಯುತವಾಗಿ ಅಷ್ಟೆ ಅಲ್ಲದೆ ಸಂಪೂರ್ಣ ಸಾಂತ್ರದಾಯಿಕ ಹಾಗೂ ಸಂತೋಷ ಭರಿತವಾಗಿ ನೆರವೇರಿದೆ ಎಂದಿದ್ದಾರೆ.

ಕೆಲವು ಮಸೀದಿಗಳಲ್ಲಿ ಸ್ಥಳಾವಕಾಶಕ್ಕೆ ವಿಶೇಷ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಉದಾಹರಣೆಗೆ, ಲೋನಿ ಹಾಗೂ ಹಾಪುರದ ಮಸೀದಿಗಳಲ್ಲಿ ಸ್ಥಳಾವಕಾಶ ಕಡಿಮೆ ಇತ್ತು. ಹಾಗಾಗಿ ಮೂರ್ನಾಲ್ಕು ಪಾಳಿಗಳನ್ನು ಮಾಡಿಕೊಂಡು, ಒಂದೊಂದು ಸಮಯಕ್ಕೆ ಒಂದೊಂದು ಗುಂಪು ಆಗಮಿಸಿ ನಮಾಜ್‌ ಮಾಡಲು ಯೋಜನೆ ರೂಪಿಸಿಕೊಂಡು ಅನುಷ್ಠಾನ ಮಾಡಲಾಯಿತು. ಶಾಂತಯುತವಾಗಿ ಉತ್ಸವ ಆಚರಣೆ ಮಾಡಿದ ಎಲ್ಲ ಸಮುದಾಯಗಳಿಗೂ ಎಡಿಜಿಪಿ ಧನ್ಯವಾದ ಸಲ್ಲಿಸಿದ್ದಾರೆ.

ಎಡಿಜಿಪಿ ಧನ್ಯವಾದಕ್ಕೆ ಸಿಎಂ ಯೋಗಿ ಆದಿತ್ಯನಾಥ್‌ ದನಿಗೂಡಿಸಿದ್ದಾರೆ. ಎಲ್ಲ ನಂಬಿಕೆಗಳ ಮೇಲೆಯೂ ಗೌರವವಿದ್ದರೆ ಆರೋಗ್ಯಕರ ಹಾಗೂ ಶಾಂತ ಸಮಾಜವಿರುತ್ತದೆ. ಇದರ ಜತೆಗೆ ಕಾನೂನು ವಿಚಾರವೂ ಮುಖ್ಯ. ಈ ಅಂಶಗಳೇ ರಾಜ್ಯದ ಅಭಿವೃದ್ಧಿ ಹಾಗೂ ಆತ್ಮನಿರ್ಭರತೆಗೆ ಮೂಲ ಆಧಾರ. ಈ ಬಾರಿ ಮೊದಲ ಬಾರಿಗೆ ರಸ್ತೆಯಲ್ಲಿ ನಮಾಜ್‌ ಮಾಡದೇ ಇರುವುದಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

ಈದ್‌ ಉಲ್‌ ಫಿತ್ರ್‌ ದಿನದಂದು ಉತ್ತರ ಪ್ರದೇಶ ಸರ್ಕಾರದ ಉಪಮುಖ್ಯಮಂತ್ರಿ ಬ್ರಿಜೇಶ್‌ ಪಾಠಕ್‌ ಸಹ ನಮಾಜ್‌ನಲ್ಲಿ ಭಾಗವಹಿಸಿದ್ದರು. ಜತೆಗೆ ಮಾಜಿ ಸಿಎಂ ಅಖಿಲೇಶ್‌ ಯಾದವ್‌, ಮಾಜಿ ಡಿಸಿಎಂ ದಿನೇಶ್‌ ಶರ್ಮಾ, ರಾಜ್ಯದ ಸಚಿವ ದಾನಿಶ್‌ ಆಜಾದ್‌ ಅನ್ಸಾರಿ, ಲಖನೌ ಕೇಂದ್ರ ಹಾಗೂ ಪಶ್ಚಿಮ ಶಾಸಕರುಗಳಾದ ರವಿದಾಸ್‌ ಮೆಹರೋಟಾ, ಅರ್ಮಾನ್‌ ಖಾನ್‌, ಲಖನೌ ಕ್ರೈಸ್ಟ್‌ ಚರ್ಚ್‌ ಕಾಲೇಜು ಪ್ರಾಂಶುಪಾಲ ಆರ್‌.ಕೆ. ಛತ್ರಿ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

Narayana Murthy: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅವಶ್ಯಕತೆ, ಆಧುನಿಕ ಜಗತ್ತಿನಲ್ಲಿ ಅದರ ಬಳಕೆಯ ವ್ಯಾಪ್ತಿಯನ್ನು ನಾನು ಅರ್ಥ ಮಾಡಿಕೊಳ್ಳುತ್ತಿದ್ದೇನೆ. ಆದರೆ, ಇದು ಮನುಷ್ಯನ ಕೆಲಸಕ್ಕೆ ಪರ್ಯಾಯವಾಗುವುದಿಲ್ಲ. ಮನುಷ್ಯನ ಕೆಲಸದ ಬದಲಾಗಿ ಇದೇ ಕೆಲಸ ಮಾಡುವುದಿಲ್ಲ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ತಿಳಿಸಿದ್ದಾರೆ.

VISTARANEWS.COM


on

Narayana Murthy
Koo

ಬೆಂಗಳೂರು: ಆಧುನಿಕ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವು ಪ್ರಬಲವಾಗುತ್ತಿದೆ. ಅದರಲ್ಲೂ, ಪ್ರಬಂಧ ಬರೆಯುವುದರಿಂದ ಹಿಡಿದು ಕೋಡ್‌ ರಚನೆವರೆಗೆ ಎಐ ಆಧಾರಿತ ಚಾಟ್‌ಬಾಟ್‌ಗಳು (ಚಾಟ್‌ಜಿಪಿಟಿ) ಮನುಷ್ಯನ ಉದ್ಯೋಗಕ್ಕೇ ಕತ್ತರಿ ಹಾಕುತ್ತವೆ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲಕ್ಷಾಂತರ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ಕಡಿತದ ಕುರಿತು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಕೃತಕ ಬುದ್ಧಿಮತ್ತೆಯಿಂದ ಜನರ ಉದ್ಯೋಗಗಳಿಗೆ ಕತ್ತರಿ ಬೀಳುವುದಿಲ್ಲ” ಎಂದಿದ್ದಾರೆ.

“ಜಗತ್ತಿನಲ್ಲಿ ದೇವರ ಅದ್ಭುತ ಸೃಷ್ಟಿ ಎಂದರೆ ಅದು ಮನುಷ್ಯನ ಮೆದುಳು, ಬುದ್ಧಿಶಕ್ತಿ. 1975ರಲ್ಲೂ ತಂತ್ರಜ್ಞಾನದಲ್ಲಿ ಬದಲಾವಣೆಗಳು ಆದಾಗ ಜನರ ಉದ್ಯೋಗಗಳಿಗೆ ಕತ್ತರಿ ಬೀಳುತ್ತದೆ. ಸಾಫ್ಟ್‌ವೇರ್‌ ಡೆವಲೆಪ್‌ಮೆಂಟ್‌ ಶುರುವಾದಾಗ ಇದು ಮನುಷ್ಯನನ್ನು ಅಪಾಯಕ್ಕೆ ತಳ್ಳುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ, ಕಾಲಾನಂತರದಲ್ಲಿ ಜನರ ಉದ್ಯೋಗಗಳು ಜಾಸ್ತಿಯಾದವೇ ಹೊರತು, ಉದ್ಯೋಗಗಳ ಕೊರತೆ, ಕುಂಠಿತ ಆಗಲಿಲ್ಲ. ಹಾಗಾಗಿ, ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳ ಕಡಿತವಾಗುವುದಿಲ್ಲ. ಅದರಲ್ಲೂ, ಭಾರತವು ತಂತ್ರಜ್ಞಾನದ ಅಳವಡಿಕೆಯಲ್ಲಿ ಒಂದು ಹೆಜ್ಜೆ ಮುಂದಿದೆ. ಭಾರತೀಯರ ಎದುರು ಹಲವು ಸಾಧ್ಯತೆಗಳು ಇವೆ” ಎಂದು ಮನಿ ಕಂಟ್ರೋಲ್‌ಗೆ ನೀಡಿದ ಸಂದರ್ಶನದ ವೇಳೆ ಪ್ರಸ್ತಾಪಿಸಿದ್ದಾರೆ.

“ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅವಶ್ಯಕತೆ, ಆಧುನಿಕ ಜಗತ್ತಿನಲ್ಲಿ ಅದರ ಬಳಕೆಯ ವ್ಯಾಪ್ತಿಯನ್ನು ನಾನು ಅರ್ಥ ಮಾಡಿಕೊಳ್ಳುತ್ತಿದ್ದೇನೆ. ಆದರೆ, ಇದು ಮನುಷ್ಯನ ಕೆಲಸಕ್ಕೆ ಪರ್ಯಾಯವಾಗುವುದಿಲ್ಲ. ಮನುಷ್ಯನ ಕೆಲಸದ ಬದಲಾಗಿ ಇದೇ ಕೆಲಸ ಮಾಡುವುದಿಲ್ಲ. ಮನುಷ್ಯನ ಮೆದುಳಿಗೆ ಸಮನಾಗಿ ಕೆಲಸ ಮಾಡುವ ತಂತ್ರಜ್ಞಾನ ಇದುವರೆಗೆ ಬಂದಿಲ್ಲ. ತಂತ್ರಜ್ಞಾನವು ಮನುಷ್ಯನ ಕೆಲಸವನ್ನು ಸುಲಭಗೊಳಿಸುವ ಸಾಧನವಾಗಿದೆ ಅಷ್ಟೆ. ಇದರಿಂದ ಉದ್ಯೋಗಗಳಿಗೆ ಕತ್ತರಿ ಬೀಳುತ್ತದೆ ಎಂದು ನನಗೆ ಅನಿಸುವುದಿಲ್ಲ” ಎಂದರು.

ಭಾರತದ ಆರ್ಥಿಕತೆಯು ಪ್ರಪಂಚದ ಹಲವು ರಾಷ್ಟ್ರಗಳೊಂದಿಗೆ ಸ್ಪರ್ಧಿಸಬೇಕಾದರೆ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಎನ್.ಆರ್.ನಾರಾಯಣ ಮೂರ್ತಿ ಅವರು ಕೆಲ ತಿಂಗಳ ಹಿಂದೆ ಹೇಳಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು. “ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ಚೀನಾದಂತಹ ದೇಶಗಳೊಂದಿಗೆ ಸ್ಪರ್ಧಿಸಲು, ಭಾರತದ ಯುವಕರು ಹೆಚ್ಚುವರಿ ಗಂಟೆಗಳ ಕೆಲಸವನ್ನು ಮಾಡಬೇಕಾಗುತ್ತದೆ. ಎರಡನೇ ಮಹಾಯುದ್ಧದ ನಂತರ ಜಪಾನ್ ಮತ್ತು ಜರ್ಮನಿ ಯುವಕರು ಇದೇ ರೀತಿ ಮಾಡಿದ್ದರು” ಎಂದಿದ್ದರು. ಇದರ ಕುರಿತು ಪರ-ವಿರೋಧಗಳ ಚರ್ಚೆಯಾಗಿತ್ತು.

ಇದನ್ನೂ ಓದಿ: Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Continue Reading

ಉದ್ಯೋಗ

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Job Alert: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ದ್ವಿತೀಯ ಪಿಯುಸಿ ಪಾಸಾದವರು, ಪದವಿ ಪಡೆದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಬಹುದು. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಅಂದರೆ ಅಭ್ಯರ್ಥಿಗಳು 1994ರ ಏಪ್ರಿಲ್‌ 3 ಮತ್ತು 2006ರ ಏಪ್ರಿಲ್‌ 3ರೊಳಗೆ ಜನಿಸಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ

ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್‌ ಮೂಲಕ ಸಂದರ್ಶನ ನಡೆಯಲಿದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಕಾರ್ಯ ವೈಖರಿ

ಆಯ್ಕೆಯಾಗುವ ಉದ್ಯೋಗಿಗಳು ಗ್ರಾಹಕರ ಖಾತೆಗಳನ್ನು ನಿರ್ವಹಿಸುವುದು, ಹಣ ವರ್ಗಾವಣೆಗಳು ಮತ್ತು ಠೇವಣಿಗಳನ್ನು ಪ್ರಕ್ರಿಯೆ ನಡೆಸುವುದು, ಡ್ರಾಫ್ಟ್‌ ಮತ್ತು ಚೆಕ್‌ ನೀಡುವುದು, ಲಾಕರ್‌ಗಳ ನಿರ್ವಹಣೆ, ಗ್ರಾಹಕರ ಪ್ರಶ್ನೆಗಳಿಗೆ ಉತ್ತರ ನೀಡುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು, ಬ್ಯಾಂಕಿನ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವುದು, ಕ್ಯಾಶ್ ನಿರ್ವಹಣೆ ಮುಂತಾದ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

ಬ್ಯಾಂಕ್‌ ಬಗ್ಗೆ

ಕೋಲ್ಕತ್ತಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಧನ್‌ ಬ್ಯಾಂಕ್‌ ದೇಶದ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಬ್ಯಾಂಕ್‌ಗೆ ಸುಮಾರು 2.51 ಕೋಟಿ ಗ್ರಾಹಕರಿದ್ದಾರೆ.

Bandhan Bankನ ಸಹಾಯಕ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸಹಿ, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಎಚ್‌ಆರ್‌ ವಿಭಾಗದ ಫೋನ್‌ ನಂಬರ್‌: 7501496783 ಅಥವಾ ಇಮೇಲ್‌ hrraj.bankingofficial@gmail.com ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

Continue Reading

ದೇಶ

Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

Bomb blast: ಮದರಸಾದ ಎದುರು ಬಿದ್ದಿದ್ದ ಚೆಂಡಿನಂತಹ ವಸ್ತುವನ್ನು ಚೆಂಡೆಂದು ಭಾವಿಸಿ ಆಲಂ ಮದರಸಾದೊಳಗೆ ಕೊಂಡೊಯ್ದಿದ್ದಾನೆ. ಮೌಲಾನಾ ಆ ವಸ್ತುವನ್ನು ನೋಡಿದ್ದರು. ಅವರು ಆಲಂನಿಂದ ಅದನ್ನು ತೆಗೆದುಕೊಂಡು ಅದನ್ನು ಬಾಂಬ್ ಎಂದು ಶಂಕಿಸಿ ಎಸೆದರು. ವಸ್ತು ಸ್ಫೋಟಗೊಂಡು ಇಬ್ಬರಿಗೂ ಗಾಯಗಳಾಗಿವೆ.  ಘಟನೆಯಲ್ಲಿ ಇಮಾಮುದ್ದೀನ್‌ ಮತ್ತು ಆಲಂ ಗಂಭೀರವಾಗಿ ಗಾಯಗೊಂಡಿದ್ದ ಇವರಿಬ್ಬರನ್ನೂ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು.

VISTARANEWS.COM


on

Bomb Blast
Koo

ಪಾಟ್ನಾ:ಲೋಕಸಭೆ ಚುನಾವಣೆ(Lok Sabha Election 2024)ಗೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿರುವಗಲೇ ಬಿಹಾರ(Bihar)ದಲ್ಲಿ ಬಾಂಬ್‌ ಸ್ಫೋಟ(Bomb blast)ಗೊಂಡಿದ್ದು, ಮೌಲಾನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಪ್ರಾಪ್ತ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸರನ್‌ ಜಿಲ್ಲೆಯ ಮದರಸಾವೊಂದರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೌಲಾನ ಮೌಲಾನಾ ಇಮಾಮುದ್ದೀನ್ ಮತ್ತು ವಿದ್ಯಾರ್ಥಿ ನೂರ್ ಆಲಂ (15) ಗಾಯಗೊಂಡಿದ್ದರು. ಇವರಿಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಇಮಾಮುದ್ದೀನ್‌ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಘಟನೆ ವಿವರ:

ಬುಧವಾರ ತಡರಾತ್ರಿ ಸರನ್‌ನ ಓಲ್ಹಾನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದರಸಾದ ಎದುರು ಬಿದ್ದಿದ್ದ ಚೆಂಡಿನಂತಹ ವಸ್ತುವನ್ನು ಚೆಂಡೆಂದು ಭಾವಿಸಿ ಆಲಂ ಮದರಸಾದೊಳಗೆ ಕೊಂಡೊಯ್ದಿದ್ದಾನೆ. ಮೌಲಾನಾ ಆ ವಸ್ತುವನ್ನು ನೋಡಿದ್ದರು. ಅವರು ಆಲಂನಿಂದ ಅದನ್ನು ತೆಗೆದುಕೊಂಡು ಅದನ್ನು ಬಾಂಬ್ ಎಂದು ಶಂಕಿಸಿ ಎಸೆದರು. ವಸ್ತು ಸ್ಫೋಟಗೊಂಡು ಇಬ್ಬರಿಗೂ ಗಾಯಗಳಾಗಿವೆ.  ಘಟನೆಯಲ್ಲಿ ಇಮಾಮುದ್ದೀನ್‌ ಮತ್ತು ಆಲಂ ಗಂಭೀರವಾಗಿ ಗಾಯಗೊಂಡಿದ್ದ ಇವರಿಬ್ಬರನ್ನೂ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾದರಿಗಳನ್ನು ಸಂಗ್ರಹಿಸಿದೆ. ನಾವು ಅವರ ವರದಿಯನ್ನು ಪಡೆದ ನಂತರ, ವಸ್ತುವು ಬಾಂಬ್ ಅಥವಾ ಪಟಾಕಿಯೇ ಎನ್ನುವುದನ್ನು ಖಚಿತವಾಗಿ ಹೇಳಬಹುದು ಎಂದು ಸರನ್ ಎಸ್ಪಿ ಗೌರವ್ ಮಂಗಳಾ ತಿಳಿಸಿದ್ದಾರೆ. ಇನ್ನು ಪ್ರಕರಣದ ವಿಚಾರ ರಾಜ್ಯದಲ್ಲಿ ಸುದ್ದಿಯಾಗುತ್ತಿದ್ದಂತೆ ಪೊಲೀಸರು ಪ್ರಕರಣವನ್ನು ಕೂಲಂಕಷ ತನಿಖೆ ಮಾಡಲು ನಿರ್ಧಾರ ಮಾಡಿದ್ದಾರೆ. ಶುಕ್ರವಾರದ ವೇಳೆ ಬ್ಲಾಸ್ಟ್‌ನಲ್ಲಿ ಗಾಯಗೊಂಡವರು ಇಬ್ಬರು ವ್ಯಕ್ತಿಗಳು ಎಂದು ತಿಳಿಸಲಾಗಿದೆ.  ಎಸ್ಪಿ ಗೌರವ್ ಮಂಗಳಾ ನೀಡಿರುವ ಮಾಹಿತಿಯ ಪ್ರಕಾರ, ಪ್ರಕರಣದ ನಡೆದ ಬಳಿಕ ಸ್ಥಳೀಯ ಜನರು ಸಾಕ್ಷ್ಯವನ್ನು ನಾಶ ಮಾಡಿದ್ದರಿಂದ ಇಲ್ಲಿ ಬ್ಲಾಸ್ಟ್‌ ಆದ ವಸ್ತು ಯಾವುದು ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:Lok Sabha Election 2024: 272 ಸೀಟು ಗೆಲ್ಲದೇ ಹೋದರೆ ಬಿಜೆಪಿಯ ಪ್ಲ್ಯಾನ್ ಬಿ ಏನು? ಅಮಿತ್ ಶಾ ಉತ್ತರ ಹೀಗಿದೆ

ಮದರಸಾದಲ್ಲಿ ಸ್ಫೋಟದ ನಂತರ, ಎಫ್‌ಎಸ್‌ಎಲ್ ತಂಡ ತನಿಖೆ ಆರಂಭಿಸಿದೆ. ಸ್ಫೋಟದ ಹಿಂದಿನ ನಿಜವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ. ಸ್ಫೋಟದ ಹಿಂದೆ ಬಾಂಬ್ ಇದೆಯೇ ಅಥವಾ ಪಟಾಕಿಯಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಆದರೆ ಈ ಘಟನೆಯ ನಂತರ ಮದರಸಾದಲ್ಲಿ ಯಾರೂ ಪತ್ತೆಯಾಗಿಲ್ಲ. ಘಟನೆಗೂ ಮುನ್ನ ಮದರಸಾದಲ್ಲಿ 12 ಮಕ್ಕಳು ಓದುತ್ತಿದ್ದರು. ಘಟನೆಯ ನಂತರ ಸ್ಥಳವನ್ನು ತೊಳೆಯಲಾಗಿದೆ. ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸುವ ಯತ್ನ ನಡೆದಿದೆ ಎಂಬ ಆರೋಪಗಳಿವೆ ಎನ್ನಲಾಗಿದೆ. ಸ್ಫೋಟದ ನಂತರ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಹಾರದ ಮದರಸಾಗಳು ಭಯೋತ್ಪಾದನೆಯ ಗೂಡು ಎಂಬುದನ್ನು ಚಾಪ್ರಾ ಘಟನೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ. ಬಿಹಾರದ ಮದರಸಾಗಳು ಭಯೋತ್ಪಾದಕರ ತಾಣಗಳಾಗಿವೆ ಎಂದು ನಾವು ಮೊದಲೇ ಹೇಳಿದ್ದೆವು ಎಂದಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabha Election 2024: 272 ಸೀಟು ಗೆಲ್ಲದೇ ಹೋದರೆ ಬಿಜೆಪಿಯ ಪ್ಲ್ಯಾನ್ ಬಿ ಏನು? ಅಮಿತ್ ಶಾ ಉತ್ತರ ಹೀಗಿದೆ

Lok Sabha Election 2024: ಲೋಕಸಭೆಯಲ್ಲಿ 400 ಸ್ಥಾನಗಳನ್ನು ಹೊಂದಲಿರುವ ಬಿಜೆಪಿಯು ಗಡಿಗಳನ್ನು ರಕ್ಷಿಸಲು, ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲು ಮತ್ತು ಬಡವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಬಯಸುತ್ತದೆ ಎಂದು ಅಮಿತ್‌ ಶಾ ಹೇಳಿದರು.

VISTARANEWS.COM


on

Amith Shah lok sabha election 2024
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ (BJP) ಬಹುಮತಕ್ಕೆ ಬೇಕಾದ 272 ಸೀಟು ಪಡೆಯದಿದ್ದರೆ ಏನು ಮಾಡುತ್ತದೆ? ಈ ಕುರಿತು ಎದುರಾದ ಮಾಧ್ಯಮದ ಪ್ರಶ್ನೆಗೆ ಗೃಹ ಸಚಿವ ಅಮಿತ್ ಶಾ (Home minister Amit Shah) ಖಡಕ್‌ ಆಗಿ ಉತ್ತರಿಸಿದ್ದಾರೆ. ಅಂಥದೊಂದು ಸನ್ನಿವೇಶ ಸಂಭವಿಸುವ ಸಾಧ್ಯತೆ ನನಗೆ ಕಾಣುತ್ತಿಲ್ಲ. ಹೀಗಾಗಿ ಬಿಜೆಪಿಗೆ ಪ್ಲಾನ್ ಬಿ (Plan B) ಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 272ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ ಬಿಜೆಪಿಯ ನಡೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, “ಅಂತಹ ಯಾವುದೇ ಸಾಧ್ಯತೆಗಳು ನನಗೆ ಕಾಣುತ್ತಿಲ್ಲ, 60 ಕೋಟಿ ಫಲಾನುಭವಿಗಳ ಸೈನ್ಯವು ಪ್ರಧಾನಿ ಮೋದಿಯವರೊಂದಿಗೆ ನಿಂತಿದೆ. ಅವರಿಗೆ ಯಾವುದೇ ಜಾತಿಬಲ ಅಥವಾ ವಯೋಮಾನವಿಲ್ಲ. ಈ ಎಲ್ಲಾ ಪ್ರಯೋಜನಗಳನ್ನು ಪಡೆದವರಿಗೆ ನರೇಂದ್ರ ಮೋದಿಯವರಿಗೆ ಹೇಗೇ ಆದರೂ 400 ಸೀಟ್‌ ನೀಡುವುದು ಗೊತ್ತು” ಎಂದು ಶಾ ಹೇಳಿದ್ದಾರೆ.

ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ, ಬಿಜೆಪಿಯ ಪ್ಲಾನ್ ಬಿ ಬಗ್ಗೆ ಕೇಳಲಾಯಿತು. ಆದರೆ ಪಕ್ಷದ ಪ್ಲಾನ್ ಎ ಯಶಸ್ವಿಯಾಗಿಯೇ ಆಗುತ್ತದೆ ಎಂದು ಅಮಿತ್ ಶಾ ಹೇಳಿದರು. “ಪ್ಲಾನ್ ಎ ಯಶಸ್ವಿಯಾಗಲು 60%ಕ್ಕಿಂತ ಕಡಿಮೆ ಅವಕಾಶವಿರುವಾಗ ಮಾತ್ರ ಪ್ಲಾನ್ ಬಿ ಮಾಡಬೇಕು. ಪಿಎಂ ಮೋದಿ ಅವರು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಾರೆ ಎಂದು ನನಗೆ ಖಚಿತವಾಗಿದೆ” ಎಂದು ಅವರು ಹೇಳಿದರು.

ʻಉತ್ತರ-ದಕ್ಷಿಣ’ ವಿಭಜನೆಗೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.‌

“ಇದು ಪ್ರತ್ಯೇಕ ದೇಶ ಎಂದು ಯಾರಾದರೂ ಹೇಳಿದರೆ ಅದು ತುಂಬಾ ಆಕ್ಷೇಪಾರ್ಹ. ಈ ದೇಶವನ್ನು ಇನ್ನು ಎಂದಿಗೂ ವಿಭಜಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ಉತ್ತರ ಮತ್ತು ದಕ್ಷಿಣ ಭಾರತವನ್ನು ವಿಭಜಿಸುವ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅದನ್ನು ನಿರಾಕರಿಸಿಲ್ಲ. ಜನತೆ ಈ ಹೇಳಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಸೂಚಿಯ ಬಗ್ಗೆ ಗ್ರಹಿಸಬೇಕು. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ 5 ರಾಜ್ಯಗಳನ್ನು ಒಟ್ಟುಗೂಡಿಸಿ ಬಿಜೆಪಿ ಈ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ” ಎಂದು ಅವರು ಹೇಳಿದರು.

ದೇಶದ ರಾಜಕೀಯದಲ್ಲಿ ಸ್ಥಿರತೆ ತರಲು 400ಕ್ಕೂ ಹೆಚ್ಚು ಸ್ಥಾನಗಳ ಅಗತ್ಯವಿದೆ. ಸಂವಿಧಾನವನ್ನು ಬದಲಾಯಿಸುವ ಜನಾದೇಶ ಬಿಜೆಪಿಗಿದೆ. ಆದರೆ ನಾವು ಎಂದಿಗೂ ಹಾಗೆ ಮಾಡಲಿಲ್ಲ. ಲೋಕಸಭೆಯಲ್ಲಿ 400 ಸ್ಥಾನಗಳನ್ನು ಹೊಂದಲಿರುವ ಬಿಜೆಪಿಯು ಗಡಿಗಳನ್ನು ರಕ್ಷಿಸಲು, ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲು ಮತ್ತು ಬಡವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಬಯಸುತ್ತದೆ ಎಂದು ಅವರು ಹೇಳಿದರು.

ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಸಂವಿಧಾನವನ್ನು ತಿದ್ದುಪಡಿ ಮಾಡಲು ಬಯಸುತ್ತದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿ ಪ್ರಯೋಜನಗಳನ್ನು ಕಿತ್ತುಕೊಂಡು ಮುಸ್ಲಿಂ ಸಮುದಾಯಕ್ಕೆ ನೀಡಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಮೋದಿ, ಶಾ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Continue Reading
Advertisement
Narayana Murthy
ದೇಶ2 mins ago

Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

IPL 2024
ಪ್ರಮುಖ ಸುದ್ದಿ10 mins ago

IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

Job Alert
ಉದ್ಯೋಗ10 mins ago

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Bomb Blast
ದೇಶ17 mins ago

Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

KSRTC BUS Woman locks in window of KSRTC bus after going to spit
ಬೆಂಗಳೂರು19 mins ago

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

banned plastic seized by corporation in Mysore
ಮೈಸೂರು22 mins ago

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

RCB vs CSK
ಕ್ರೀಡೆ44 mins ago

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

Amith Shah lok sabha election 2024
ಪ್ರಮುಖ ಸುದ್ದಿ1 hour ago

Lok Sabha Election 2024: 272 ಸೀಟು ಗೆಲ್ಲದೇ ಹೋದರೆ ಬಿಜೆಪಿಯ ಪ್ಲ್ಯಾನ್ ಬಿ ಏನು? ಅಮಿತ್ ಶಾ ಉತ್ತರ ಹೀಗಿದೆ

PM Narendra Modi
ದೇಶ1 hour ago

PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Raveena tandon Saree fashion magic in Jayanthi Ballal designer
ಫ್ಯಾಷನ್1 hour ago

Raveena tandon Saree fashion: ಜಯಂತಿ ಬಲ್ಲಾಳ್‌ ಡಿಸೈನರ್‌ ಸೀರೆಯಲ್ಲಿ ನಟಿ ರವೀನಾ ಟಂಡನ್‌ ಜಾದೂ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌