ಅಕ್ಕ ಎಷ್ಟೇ ಗೋಗರೆದರೂ ಕೇಳದೆ ನೇಣು ಬಿಗಿದುಕೊಂಡ ಎಂಬಿಬಿಎಸ್‌ ವಿದ್ಯಾರ್ಥಿ - Vistara News

ಕರ್ನಾಟಕ

ಅಕ್ಕ ಎಷ್ಟೇ ಗೋಗರೆದರೂ ಕೇಳದೆ ನೇಣು ಬಿಗಿದುಕೊಂಡ ಎಂಬಿಬಿಎಸ್‌ ವಿದ್ಯಾರ್ಥಿ

ಅವನಿಗೆ ಬೈಪೋಲಾರ್‌ ಡಿಸಾರ್ಡರ್‌ ಸಮಸ್ಯೆ ಇತ್ತು. ಅಕ್ಕನಿಗೆ ಫೋನ್‌ ಮಾಡಿ ಸಾಯುತ್ತೇನೆ ಅಂದಿದ್ದ. ಆಕೆ ಎಷ್ಟೇ ಗೋಗರೆದರೂ ಕೇಳದೆ ವಿಡಿಯೊ ಕಾಲ್‌ನಲ್ಲಿ ನೋಡ ನೋಡುತ್ತಿದ್ದಂತೆಯೇ ನೇಣಿಗೆ ಕೊರಳೊಡ್ಡಿದ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಒಡ ಹುಟ್ಟಿದ ಅಕ್ಕ ಎಷ್ಟೇ ಗೋಗರೆದರೂ ಕೇಳದೆ ವಿಡಿಯೊ ಕಾಲ್‌ನಲ್ಲಿ ಆಕೆಯ ಕಣ್ಣ ಮುಂದೆಯೇ ವೈದ್ಯಕೀಯ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ಬಳ್ಳಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೀದರ್‌ ಜಿಲ್ಲೆಯ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಶ್ರೇಯಸ್‌‌ ಜೋಶಿ (25) ಮೃತ ಯುವಕ. ವಿಮ್ಸ್‌ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಆತ ಇತ್ತೀಚೆಗೆ ಎಂಬಿಬಿಎಸ್‌ ಅಂತಿಮ ವರ್ಷದ ಅಧ್ಯಯನ ಮುಗಿಸಿದ್ದ. ಇನ್ನೇನು ಕೆಲವೇ ದಿನದಲ್ಲಿ ಮನೆಗೆ ಮರಳಬೇಕು ಎನ್ನುವಷ್ಟರಲ್ಲಿ ಈ ಅತಿರೇಕದ ಕ್ರಮಕ್ಕೆ ಮುಂದಾಗಿದ್ದಾನೆ.

ಬೈಪೋಲಾರ್‌ ಡಿಸಾರ್ಡರ್‌ ಕಾಯಿಲೆಯಿಂದ ನರಳುತ್ತಿದ್ದ ಆತ ಸ್ವಲ್ಪ ಮಟ್ಟಿಗೆ ಖಿನ್ನನಾಗಿಯೇ ಇದ್ದ. ರಾತ್ರಿ ಹಾಸ್ಟೆಲ್‌ ಕೋಣೆಯಲ್ಲಿ ಒಬ್ಬನೇ ಇದ್ದಾಗ ಈ ಕೃತ್ಯಕ್ಕೆ ಮುಂದಾಗಿದ್ದಾನೆ. ಅದಕ್ಕಿಂತ ಮೊದಲು ತನ್ನ ಅಕ್ಕ ಶ್ರದ್ಧಾ ಜೋಶಿ ಅವರಿಗೆ ಫೋನ್‌ ಕರೆ ಮಾಡಿದ್ದ ಆತ, ಇನ್ನು ತಾನು ಬದುಕುವುದಿಲ್ಲ ಎಂದು ಹೇಳಿಕೊಂಡು ಅತ್ತಿದ್ದಾನೆ. ಇದು ತನ್ನ ಕೊನೆಯ ಕಾಲ್‌ ಆಗಿರಬಹುದು, ನಾಳೆ ಬೆಳಗ್ಗೆ ಬಂದು ಹೆಣವನ್ನು ಕೊಂಡು ಹೋಗಬೇಕಾದೀತು ಎಂದೂ ಹೇಳಿದ್ದಾನೆ.

ತುಂಬ ಹೊತ್ತು ತಮ್ಮನೊಂದಿಗೆ ಮಾತನಾಡಿದ ಅಕ್ಕ ನಾನಾ ರೀತಿಯಲ್ಲಿ ಆತನನ್ನು ಸಮಾಧಾನ ಮಾಡಿದ್ದಾರೆ. ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಆದರೆ, ಅಕ್ಕನ ಯಾವುದೇ ಮಾತು ಕೇಳದ ಶ್ರೇಯಸ್‌ ಸಾಯುವುದೇ ಖಚಿತ ಎಂದಿದ್ದಾನೆ.

ವಿಡಿಯೊ ಕಾಲ್‌ ಮಾಡಲು ಒತ್ತಡ

ತಮ್ಮನ ವರ್ತನೆಯಿಂದ ಆತಂಕಗೊಂಡ ಅಕ್ಕ ಫೋನ್‌ ಬದಲು ವಿಡಿಯೊ ಕಾಲ್‌ ಮಾಡುವಂತೆ ತಿಳಿಸಿದ್ದಾರೆ. ತಮ್ಮ ಹೇಗಿದ್ದಾನೆ ಎಂದು ತಿಳಿದು ಮುಖಾಮುಖಿ ಸಮಾಧಾನ ಹೇಳಬಹುದು ಎನ್ನುವುದು ಆಕೆಯ ಉದ್ದೇಶವಾಗಿತ್ತು. ಆದರೆ, ಶ್ರೇಯಸ್‌ ಹಲವು ಬಾರಿ ವಿಡಿಯೊ ಕಾಲ್‌ ಮಾಡಿದರೂ ಎತ್ತಲಿಲ್ಲ. ಕೊನೆಗೆ ರಿಸೀವ್‌ ಮಾಡಿದ ಆತ ತಾನು ನೇಣಿಗೆ ಕೊರಳೊಡ್ಡಿರುವುದನ್ನು ತೋರಿಸಿದ್ದಾನೆ. ಆ ಹಂತದಲ್ಲೂ ಅಕ್ಕ ಯಾವ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬೇಡ, ಉರುಳು ತೆಗಿ ಎಂದು ಪರಿಪರಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಅದಾದ ಕೂಡಲೇ ಶ್ರೇಯಸ್‌ ಕಾಲ್‌ ಕಟ್‌ ಮಾಡಿದ್ದಾನೆ.

ಇದಾದ ತಕ್ಷಣವೇ ಅಕ್ಕ ಶ್ರೇಯಸ್‌ನ ಸ್ನೇಹಿತರಿಗೆ ಕರೆ ಮಾಡಿ ತಿಳಿಸಿದ್ದಾರೆ. ಅವರೆಲ್ಲ ಹಾಸ್ಟೆಲ್‌ ಕೋಣೆಗೆ ಧಾವಿಸಿದಾಗ ಆತ ನೇಣು ಬಿಗಿದುಕೊಂಡಾಗಿತ್ತು. ಗೆಳೆಯರು ಕೂಡಲೇ ಆತನನ್ನು ಬೈಒನೇಣಿನಿಂದ ಕೆಳಗಿಳಿಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಆತ ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ 6.30ರ ಹೊತ್ತಿಗೆ ಪ್ರಾಣ ಕಳೆದುಕೊಂಡಿದ್ದಾನೆ.

ಇದನ್ನೂ ಓದಿ | ಬಟ್ಟೆ ಒಣಗಲು ಹಾಕುವಾಗ ವಿದ್ಯುತ್‌ ಸ್ಪರ್ಶ, ತಾಯಿ, ಇಬ್ಬರು ಮಕ್ಕಳು ದಾರುಣ ಮರಣ

ಸಮಸ್ಯೆಯಿಂದ ನರಳುತ್ತಿದ್ದ

ಶ್ರೇಯಸ್‌ ಕಳೆದ ಕೆಲವು ವರ್ಷಗಳಿಂದ ಬೈಪೋಲಾರ್‌ ಡಿಸಾರ್ಡರ್‌ ಎಂಬ ಮನೋರೋಗದಿಂದ ಬಳಲುತ್ತಿದ್ದ, ಆತನ ಪಾಲಕರು ಹೈದರಾಬಾದ್‌, ನಾಂದೇಡ, ಪುಣೆ ಮೊದಲಾದ ಕಡೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಆದರೂ ಸಮಸ್ಯೆ ಪರಿಹಾರವಾಗಿರಲಿಲ್ಲ.

ಏನಿದು ಬೈಪೋಲಾರ್‌ ಡಿಸಾರ್ಡರ್‌?

ಬೈಪೋಲಾರ್‌ ಡಿಸಾರ್ಡರ್‌ ಎನ್ನುವುದು ಒಂದು ಮಾನಸಿಕ ರೋಗವಾಗಿದ್ದು, ಇದಕ್ಕೆ ವಂಶವಾಹಿ, ಪರಿಸರ ಮತ್ತಿತರ ಹಲವು ಕಾರಣಗಳು ಇರಬಹುದು ಎನ್ನುತ್ತದೆ ಮನೋವಿಜ್ಞಾನ. ಈ ರೋಗಕ್ಕೆ ತುತ್ತಾದವರು ಒಮ್ಮೊಮ್ಮೆ ತೀವ್ರ ಖಿನ್ನತೆಯನ್ನು ಅನುಭವಿಸಿದರೆ, ಇನ್ನೊಮ್ಮೆ ಖುಷಿಯ ಉತ್ತುಂಗದಲ್ಲಿದ್ದಂತೆ ಭಾಸವಾಗುತ್ತಾರೆ. ಅತ್ಯಧಿಕ ಮೂಡ್‌ ಸ್ವಿಂಗ್‌ ಅನುಭವಿಸುವ ಇವರು, ತಾವು ಯಾವುದಕ್ಕೂ ಸಲ್ಲದ ವ್ಯರ್ಥ ಜೀವಿಗಳು ಎಂಬ ನಕಾರಾತ್ಮಕ ಭಾವನೆ ಅನುಭವಿಸುತ್ತಿರುತ್ತಾರೆ. ದೈನಂದಿನ ಚಟುವಟಿಕೆಗಳಲ್ಲಿ ಆಸಕ್ತಿ ಕಳೆದುಕೊಳ್ಳುವ ಇವರು ತಪ್ಪಿತಸ್ಥ ಭಾವನೆಯೊಂದಿಗೆ ಖಿನ್ನರಾಗಿರುತ್ತಾರೆ.

ಇದನ್ನೂ ಓದಿ | ರಥೋತ್ಸವ ವೇಳೆ ವಿದ್ಯುತ್ ತಗುಲಿ ಮಕ್ಕಳೂ ಸೇರಿ 11 ಮಂದಿ ಸಾವು: ತಂಜಾವೂರಿನಲ್ಲಿ ದುರ್ಘಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಹಾಸನ

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಶುಕ್ರವಾರ ನಡೆದ ವಿಚಾರಣೆಯಲ್ಲಿ ಮಧ್ಯಂತರ ರಿಲೀಫ್‌ ಸಿಕ್ಕಂತೆ ಆಗಿದೆ. ವಾದ – ಪ್ರತಿವಾದವನ್ನು ಆಲಿಸಿದ 42ನೇ ಎಸಿಎಂಎಂ ಕೋರ್ಟ್‌ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದು, ಅಂದು ಆದೇಶವನ್ನು ನೀಡಲಿದೆ. ಹೀಗಾಗಿ ರೇವಣ್ಣ ಅವರಿಗೆ ಜೈಲಾಗುತ್ತದೆಯೋ? ಇಲ್ಲವೇ ಬೇಲಾಗುತ್ತದೆಯೋ ಎಂಬ ವಿಚಾರವು ಸೋಮವಾರ ಗೊತ್ತಾಗಲಿದೆ.

VISTARANEWS.COM


on

HD Revanna case Hearing in Holenarasipura sexual assault case adjourned to Monday
Koo

ಬೆಂಗಳೂರು: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ನೀಡಲಾಗಿದೆ. ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ರಿಲೀಫ್‌ ಸಿಕ್ಕಿದೆಯಾದರೂ ಜೈಲಾ? ಬೇಲಾ? ಎಂಬುದು ಸೋಮವಾರ ಪ್ರಕಟವಾಗುವ ತೀರ್ಪಿನ ಮೇಲೆ ನಿಂತಿದೆ.

42ನೇ ಎಸಿಎಂಎಂ ಕೋರ್ಟ್‌ನಲ್ಲಿ ಶುಕ್ರವಾರ ವಿಚಾರಣೆ ಆರಂಭವಾಯಿತು. ಈ ವೇಳೆ ಮಾಜಿ‌ ಸಚಿವ ಎಚ್.ಡಿ. ರೇವಣ್ಣ ಅವರು ಬರಿಗಾಲಿನಲ್ಲಿಯೇ ಕೋರ್ಟ್‌ಗೆ ಹಾಜರಾದರು. ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಮುಂಚೆ ಇನ್ ಕ್ಯಾಮೆರಾ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಮೊದಲು ಅರ್ಜಿ ವಿಚಾರಣೆಯ ಅರ್ಹತೆ ಬಗ್ಗೆ ವಾದ ಮಂಡಿಸಿ. ನಂತರ ಇನ್ ಕ್ಯಾಮೆರಾ ವಿಚಾರಣೆ ನಡೆಸೋಣ ಎಂದು ಹೇಳಿದರು.

ವಾದ ಶುರು ಮಾಡಿದ ಎಸ್ಐಟಿ ಪರ ಎಸ್ ಪಿಪಿ ಜಯ್ನಾ ಕೊಠಾರಿ, ಹೊಳೆನರಸೀಪುರ ಪ್ರಕರಣದಲ್ಲಿ ಐಪಿಸಿ 376 ಸೆಕ್ಷನ್ ಹಾಕಲಾಗಿದ್ದು, ಇದು ಅತ್ಯಾಚಾರ ಆರೋಪವಾಗಿದೆ. ಸಂತ್ರಸ್ತೆಯ ವಿಚಾರಣೆ ಬಳಿಕ ಅತ್ಯಾಚಾರ ಆರೋಪ ದಾಖಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ಅವರು ಕೋರ್ಟ್‌ನಲ್ಲಿ ಓದಿ ಹೇಳಿದರು. ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್ 354 ಮಾತ್ರ ಇತ್ತು. ವಿಚಾರಣೆ ಬಳಿಕ 376 ಸೇರ್ಪಡೆಯಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿರುವ ಅಂಶಗಳನ್ನು ಉಲ್ಲೇಖಿಸಿ ಕೋರ್ಟ್‌ ಗಮನಕ್ಕೆ ತಂದರು.

ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಂಶಗಳ ಕೋರ್ಟ್‌ ಮುಂದೆ ಓದಿದ ಎಸ್‌ಪಿಪಿ ಜಯ್ನಾ ಕೊಠಾರಿ, ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಕಿರುಕುಳ ತಾಳಲಾರದೆ ಮನೆ ಬಿಟ್ಟು ಬಂದಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಕೆಲಸ ಬಿಟ್ಟು ಬಂದಿದಕ್ಕೆ ಮೊದಲು‌ ನೀಡಿದ್ದ ಆಶ್ರಯ ಮನೆಯನ್ನು ಬಲವಂತವಾಗಿ ವಾಪಸ್‌ ಪಡೆದಿದ್ದಾರೆ. ಆ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲ. ಸಂತ್ರಸ್ತೆಯ ಆರೋಪಗಳನ್ನು ಕೋರ್ಟ್‌ ಮುಂದೆ ಹೇಳಿದರು.

ಹೀಗಾಗಿ ಸಂತ್ರಸ್ತೆ ಹೇಳಿಕೆ ಮೇಲೆ ಸೆಕ್ಷನ್ 376 ಅನ್ನು ಸೇರಿಸಲಾಗಿದೆ ಎಂದು ವಾದಿಸಿದ ಜಯ್ನಾ ಕೊಠಾರಿ, ನಾನ್ ಬೇಲಬಲ್ ಸೆಕ್ಷನ್ ಸೇರಿಸಿರುವುದರಿಂದ ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಬೇಕು. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ತನಿಖಾಧಿಕಾರಿಯ ಮನವಿ ನಂತರ ಸೆಕ್ಷನ್‌ 376 ಸೇರ್ಪಡೆಗೊಂಡಿದೆ. ಈ ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್‌ 354 A, D ಮಾತ್ರವಿತ್ತು. ಪ್ರಜ್ಬಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ಇರುವ ಪ್ರಕರಣವನ್ನು ವಿಭಜಿಸಬಾರದು. ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಇಂತಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದಿಸಿದರು.

ಎಸ್ಐಟಿ ತಂಡದಿಂದ ತನಿಖೆ ಪ್ರಗತಿಯಲ್ಲಿದೆ. ಈ‌ ಸಂದರ್ಭದಲ್ಲಿ ಆರೋಪಿಗೆ ಜಾಮೀನು ನೀಡುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ. ಬೇಲಬಲ್ ಸೆಕ್ಷನ್ ಇದ್ದಾಗ ಮಾತ್ರ ಸೆಕ್ಷನ್‌ 436 ಪ್ರಕಾರ ಜಾಮೀನು ನೀಡಬಹುದು. ಆದರೆ, ಈ ಪ್ರಕರಣದಲ್ಲಿ ನಾನ್ ಬೇಲಬಲ್ ಸೆಕ್ಷನ್ 436 ಅಡಿಯಲ್ಲಿ ಜಾಮೀನು ನೀಡುವಂತಿಲ್ಲ. ಅಲ್ಲದೆ, ನಾನ್ ಬೇಲಬಲ್ ಸೆಕ್ಷನ್ ಇರುವುದಿರಿಂದ ಇದರ ವಿಚಾರಣೆಯು ಸೆಷನ್ಸ್‌ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ವಿಚಾರಣೆ ನಡೆಯಬೇಕು. ದೂರಯದಾರರಿಗೆ ಮನೆಯಲ್ಲಿ ಇಬ್ಬರಿಂದಲೂ (ರೇವಣ್ಣ, ಪ್ರಜ್ವಲ್) ಕಿರುಕುಳ ನಡೆದಿದೆ. ಇದನ್ನೆಲ್ಲ ಮುಕ್ತ ನ್ಯಾಯಾಲಯದಲ್ಲಿ ವಿವರಿಸಲು ಆಗದು. ಇದು ಇನ್ ಕ್ಯಾಮೆರಾ ವಿಚಾರಣೆ ನಡೆಯಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಇಲ್ಲಿ ತಂದೆ – ಮಗ ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ರೇವಣ್ಣ ಅವರಿಂದ ಇಷ್ಟೇ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಅದೆಲ್ಲವೂ ತನಿಖೆಯ ನಂತರವಷ್ಟೇ ಗೊತ್ತಾಗಬೇಕಿದೆ. ಈಗಲೇ ಶಾಸಕ ರೇವಣ್ಣ ಮೇಲೆ ಅತ್ಯಾಚಾರ ಆರೋಪ ಇಲ್ಲವೆಂದು ಹೇಳಲು ಸಾಧ್ಯವಾಗುವುದಿಲ್ಲ.

ಒಮ್ಮೆ ಅತ್ಯಾಚಾರ ಆರೋಪ ದಾಖಲಾದರೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವ್ಯಾಪ್ತಿ ಇಲ್ಲ. ಜಾಮೀನು ಅರ್ಜಿ ವಿಚಾರಣೆ ನಡೆಸಲು ಈ ಕೋರ್ಟ್‌ಗೆ ವ್ಯಾಪ್ತಿ ಇಲ್ಲ. ಸೆಕ್ಷನ್‌ 376 ಅಪರಾಧಕ್ಕೆ ಜೀವಾವಧಿ ಶಿಕ್ಷೆ ಇದೆ. ಇದು ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದಾಗ ಜಾಮೀನು ಅರ್ಜಿ ಊರ್ಜಿತವಲ್ಲ. ಇಬ್ಬರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿದೆ. ಆರೋಪ ಪಟ್ಟಿ ದಾಖಲಾದ ನಂತರವಷ್ಟೇ ಯಾರ ಮೇಲೆ ಏನು ಆರೋಪ‌ ಎಂದು ತಿಳಿಯಲಿದೆ. ಸೆಕ್ಷನ್‌ 41ಎ ಅಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಬಂದಿಲ್ಲ. ಇದನ್ನು ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೇಳುತ್ತೇನೆ. ಈಗ ಜಾಮೀನು ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬಾರದೆಂಬ ವಿಚಾರಕ್ಕಷ್ಟೇ ವಾದಿಸುತ್ತಿದ್ದೇನೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿದರು.

ಬಳಿಕ ಮತ್ತೊಬ್ಬ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ, ಜನಪ್ರತಿನಿಧಿಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಇಲ್ಲಿಗೆ ಬರುತ್ತವೆ. ಜಾಮೀನು ಅಂದರೆ ಸೆಷನ್ ನ್ಯಾಯಾಲಯದ ಕೋರ್ಟ್ 82ಕ್ಕೆ ಬರುತ್ತದೆ ಎಂದು ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಇದು ಪೋಕ್ಸೋ ಕೇಸ್‌ ಆಗಿದ್ದರೆ ನೀವು ಸೆಷನ್ ಕೋರ್ಟ್‌ಗೆ ಹೋಗಿ. ಇದು ಇಲ್ಲಿ ನಿರ್ವಹಿಸಲಾಗದಿದ್ದರೆ ಅಲ್ಲಿಗೆ ಕಳಿಸಲಾಗುತ್ತದೆ ಎಂದು ಹೇಳಿದರು.

ಮತ್ತೆ ವಾದ ಮುಂದುವರಿಸಿದ ಅಶೋಕ್‌ ನಾಯಕ್‌, ಸಂತ್ರಸ್ತೆ ಮೇಲೆ ತಂದೆ ಮತ್ತು ಪುತ್ರ ಇಬ್ಬರೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಒಬ್ಬಳ ಮೇಲೆ ಪದೇ ಪದೆ ದೌರ್ಜನ್ಯವೆಸಗಿದ್ದಾರೆ. ಕೊಲೆ ಪ್ರಕರಣದಲ್ಲಿ 302 ಸೆಕ್ಷನ್ ಜತೆಗೆ ಇತರೆ ಬೇಲಬಲ್ ಸೆಕ್ಷನ್‌ಗಳನ್ನ ಹಾಕಿರುತ್ತಾರೆ. ಹಾಗಂತ ಆರೋಪಿಗಳನ್ನು ಹಾಗೂ ಕೇಸ್‌ ಅನ್ನು ವಿಭಜನೆ ಮಾಡಲು ಆಗುತ್ತದೆಯೇ? ಅದೇ ರೀತಿ ಈ ಪ್ರಕರಣದಲ್ಲಿ ತಂದೆ, ಮಗ ಇಬ್ಬರೂ ಒಂದೇ ಅಪರಾಧ ಎಸಗಿದ್ದಾರೆ. ಒಂದೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಎರಡನೇ ಆರೋಪಿಯನ್ನು ಮೊದಲನೇ ಆರೋಪಿಯೇ ರಕ್ಷಣೆ ಮಾಡುತ್ತಿದ್ದಾರೆ. ದೇಶ ಬಿಟ್ಟು ಹೋಗಲು ಮೊದಲ ಆರೋಪಿಯೇ ಸಹಾಯ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿ ವಾದ ಮಂಡಿಸಿದ ಸಿ.ವಿ. ನಾಗೇಶ್‌

ಈ ವೇಳೆ ರೇವಣ್ಣ ಪರ ವಕೀಲ‌ ಸಿ.ವಿ. ನಾಗೇಶ್ ಪ್ರತಿವಾದ ಆರಂಭಿಸಿ, ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಪ್ರಕರಣವು ಬೇಲಬಲ್ ಸೆಕ್ಷನ್‌ಗಳಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಜಾಮೀನು ನೀಡಬೇಕಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಎಫ್ಐಆರ್ ದಾಖಲಾದ ದಿನಾಂಕ, ಅದರಲ್ಲಿರುವ ಸೆಕ್ಷನ್‌ಗಳು ಏನು ಎಂಬುದನ್ನು ಇದೇ ವೇಳೆ ಕೋರ್ಟ್‌ ಗಮನಕ್ಕೆ ತಂದರು. ಯಾವುದೇ ವ್ಯಕ್ತಿಯ ವಿರುದ್ಧ ದೂರು ದಾಖಲಾದರೆ, ಆತ ಬಂಧನಕ್ಕೊಳಗಾಗುವ ಮುನ್ನ ಶರಣಾದರೆ ಜಾಮೀನು ನೀಡಬಹುದು. ಇದರ ಗ್ರಾವಿಟಿಯೇ 436 ಸಿಆರ್‌ಪಿಸಿ ಆಗಿದೆ. ಇಲ್ಲಿ ಸಿಆರ್‌ಪಿಸಿ 439 ಅಲ್ಲ. ರೇವಣ್ಣ ವಿರುದ್ಧ ಈಗ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವು ದೂರು ದಾಖಲಾದ ದಿನ ಅಥವಾ ವಾರದ ಹಿಂದೆ ಇಲ್ಲವೇ ವರ್ಷದ ಹಿಂದೆ ನಡೆದಿಲ್ಲ. ಕೃತ್ಯ ನಡೆದು ಹಲವು ವರ್ಷಗಳೇ ಕಳೆದು ಹೋಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗರ್ಭಗುಡಿಯಲ್ಲಿ ದೇವರು ಕುಳಿತಂತೆ ಕುಳಿತಿದ್ದೆ!

ಈ ವೇಳೆ ಮಧ್ಯ ಪ್ರವೇಶ ಮಾಡಿದ ಎಸ್‌ಪಿಪಿ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಲು ಮುಂದಾದರು. ಅದಕ್ಕೆ ಸಿಟ್ಟಾದ ಸಿ.ವಿ. ನಾಗೇಶ್, “ನೀವು ವಾದ ಮಾಡಬೇಕಾದರೆ ನಾನು ಗರ್ಭಗುಡಿಯಲ್ಲಿ‌ ದೇವರು ಕುಳಿತ ಹಾಗೆ ಕುಳಿತುಕೊಂಡಿದ್ದೆ. ಏನಾದರೂ ತೊಂದರೆ ಮಾಡಿದ್ದೇನಾ? ಎಂದು ಪ್ರಶ್ನಿಸಿ ತಮ್ಮ ವಾದವನ್ನು ಮುಂದುವರಿಸಿದರು. ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂದು ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳಿಸಿ ಆಶ್ರಯ ಮನೆ ಕಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು. ಪೊಲೀಸರನ್ನು ಕಳಸಿ ಮನೆ ಕಾಲಿ ಮಾಡಿಸಿದರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಇದು ಅತ್ಯಾಚಾರ ಪ್ರಕರಣ ಅಲ್ಲ

ಸೆಷನ್ಸ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ 376 ಸೆಕ್ಷನ್ ಇರಲಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಬಂದಾಗ ಈ ಸೆಕ್ಷನ್‌ ಸೇರ್ಪಡೆಯಾಗಿದೆ. ಅವತ್ತು ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಇವರು ಮೊದಲೇ 376 ಇದೆ ಎಂದು ಹೇಳಿದ್ದರೆ, ನಾವು ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ವಾಪಸ್‌ ಪಡೆಯುತ್ತಿರಲಿಲ್ಲ. ರೇವಣ್ಣ ವಿರುದ್ಧ 376 ಇದೆ ಅಂತ ಹೇಳಲಿ. ಆಗ ನಾವು ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ನ ಕಕ್ಷಿದಾರದರ ವಿರುದ್ಧ ದಾಖಲಾಗಿರೋದು ಕೇವಲ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದೆ. ಅತ್ಯಾಚಾರ ಪ್ರಕರಣ ಅಲ್ಲ. ಇದೊಂದು‌ ಸುಳ್ಳು ಕೇಸ್ ಆಗಿದೆ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಇದುವರೆಗೂ ರೇವಣ್ಣ ಅವರಿಗೆ ನೀಡಿದ ಯಾವ ನೋಟಿಸ್‌ನಲ್ಲೂ ಸೆಕ್ಷನ್‌ 376 ಇದೆ ಅಂತ ಉಲ್ಲೇಖಿಸಿಲ್ಲ. ಈಗ 376 ಇದೆ ಎಂದು ಹೇಳುತ್ತಿದ್ದಾರೆ. ಇದರಿಂದ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬಹುದು. ರೇವಣ್ಣ ವಿರುದ್ಧ ದಾಖಲಾಗಿರುವ ಕೇಸ್‌ನಲ್ಲಿ ಎಲ್ಲವೂ ಬೇಲಬಲ್ ಸೆಕ್ಷನ್‌ಗಳಿವೆ. ಹೀಗಾಗಿ ಜಾಮೀನು‌ ನೀಡಬೇಕೆಂದು ಮನವಿ ಮಾಡಿದ ಸಿ.ವಿ. ನಾಗೇಶ್ ತಮ್ಮ ವಾದವನ್ನು ಮುಕ್ತಾಯ ಮಾಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಎಫ್‌ಐಆರ್‌ ಬಳಿಕವೂ ಸೆಕ್ಷನ್‌ ಸೇರಿಸಬಹುದು

ಬಳಿಕ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ರೇವಣ್ಣ ಪರ ವಕೀಲರು ಕೇವಲ ಬೇಲಬಲ್ ಸೆಕ್ಷನ್‌ಗಳ ಬಗ್ಗೆ ಮಾತ್ರ ಹೇಳ್ರಿದ್ದಾರೆ. ಪ್ರಾರಂಭದಲ್ಲೇ ಜಾಮೀನು ರಹಿತ ಸೆಕ್ಷನ್‌ಗಳನ್ನು ದಾಖಲಿಸದೆ ಇರಬಹುದು. ತನಿಖೆ ನಡೆದಾಗ ಯಾವಾಗ ಬೇಕಿದ್ದರೂ ಅಪರಾಧ ನಡೆದಿರುವ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಬಹುದು. ಈ ಬಗ್ಗೆ ಅವಕಾಶವೂ ಇದೆ. ನಂತರವು ಜಾಮೀನು ರಹಿತದ ಸೆಕ್ಷನ್‌ಗಳನ್ನು ಕೂಡಾ ಸೇರಿಸುವ ಅವಕಾಶ ಇದೆ. ಅದಕ್ಕೆ‌ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ಹೇಳಿದರು.

ಭಯದಿಂದ ಗಂಡನ ಬಳಿ ಸತ್ಯ ಮುಚ್ಚಿಟ್ಟಿರುವ ಸಂತ್ರಸ್ತೆ

ರೇವಣ್ಣ ಪರ ವಕೀಲರು‌ ಹೇಳುವಂತೆ ಮಹಿಳಾ ಪೊಲೀಸ್ ಇಲ್ಲದೆ ನಮ್ಮ ಪೊಲೀಸರು ಹೋಗಿಲ್ಲ. ಮಹಿಳಾ ಸಿಬ್ಬಂದಿಯ ಜತೆಯಲ್ಲೆ ಹೋಗಿ ದೂರು ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಸಂತ್ರಸ್ತೆ ತನ್ನ ಗಂಡನ ಬಳಿ ಕೆಲವೊಂದನ್ನು ಮುಚ್ಚಿಟ್ಟಿದ್ದಾಳೆ. ಸತ್ಯ ಹೇಳಿದರೆ ಮನೆಯಿಂದ ಹೊರ ಹಾಕುತ್ತಾರೆ ಎಂಬ ಭಯದಲ್ಲಿ ಆಕೆ ಗಂಡನಿಗೆ ಆ ರೀತಿಯಾಗಿ ಹೇಳಿದ್ದಾಳೆ. ಆಕೆಯ ಸುರಕ್ಷತೆಗೆ ಸಂಬಂಧಿಸಿದ ವಿಚಾರವಾಗಿದ್ದರಿಂದ ರಹಸ್ಯ ಸ್ಥಳದಲ್ಲಿ ದೂರು ಪಡೆಯಲಾಗಿದೆ. ಇದು ಸಂಪೂರ್ಣವಾಗಿ ಮಹಿಳೆಯ ರಕ್ಷಣೆಗೆ ಸಂಬಂಧಿಸಿದ ವಿಚಾರವಾಗಿದೆ. ನಾವು ಮೆಮೋ ಹಾಕಿದ್ದೆವು, ರಿಮಾಂಡ್ ಅಪ್ಲಿಕೇಶನ್‌ನಲ್ಲೂ ಲೈಂಗಿಕ ದೌರ್ಜನ್ಯ ಅಂತ ಹೇಳಿದ್ದೆವು. ಆದರೆ, ಈಗ ಸೆಕ್ಷನ್‌ 376 ಹಾಕಿರುವುದಕ್ಕೆ ದಾಖಲೆ ಇದೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lokayukta Raid: ಲೋಕಾಯುಕ್ತ ದಾಳಿ; 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಎಫ್‌ಡಿಎ

Lokayukta Raid: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ, ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

Lokayukta Raid
Koo

ಮೈಸೂರು: ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಬಲೆಗೆ (Lokayukta Raid) ಬಿದ್ದಿದ್ದಾರೆ.

ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ನಟೇಶ್ ಎಂಬುವರಿಗೆ ಆಹಾರ ಪೂರೈಕೆ ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚಕ್ಕೆ ವಿಜಯ್ ಕುಮಾರ್ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತ ಪೊಲೀರಿಗೆ ನಟೇಶ್‌ ದೂರು ನೀಡಿದ್ದರು.

ಮೊದಲೇ ನಡೆದಿದ್ದ ಮಾತುಕತೆಯಂತೆ ಎಫ್‌ಡಿಎ ವಿಜಯ್‌ ಕುಮಾರ್‌, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಜಿತ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ವಿ.ಕೃಷ್ಣಯ್ಯ ಲೋಕಾಯುಕ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ರವಿಕುಮಾರ್‌, ರೂಪಶ್ರೀ, ಲೋಕೇಶ್‌, ಸಿಬ್ಬಂದಿಯಾದ ಮೋಹನ್‌ ಗೌಡ, ವೀರಭದ್ರಸ್ವಾಮಿ, ಆಶಾ, ತ್ರಿವೇಣಿ, ಪುಷ್ಪಲತಾ, ದಿನೇಶ್‌, ಲೋಕೇಶ್‌, ಪೃಥ್ವೀಶ್‌, ಶೇಖರ್‌ ಇದ್ದರು.

ಇದನ್ನೂ ಓದಿ | Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

shoot out doddaballapur murder case

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

ಆರೋಗ್ಯ

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

Ambulance Booking: ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ.

VISTARANEWS.COM


on

ambulance-booking
Koo

ಬೆಂಗಳೂರು: ತಂತ್ರಜ್ಞಾನ ಆಧಾರಿತ ವಿಮಾ ಸಂಸ್ಥೆಯಾದ ಆಕ್ಕೊ (ACKO), ತನ್ನ ಅನೇಕ ಕೊಡುಗೆಗಳ ಪೋರ್ಟ್‌ಫೋಲಿಯೋಗೆ ತನ್ನ ಮೊಬೈಲ್ ಆ್ಯಪ್‌ನಲ್ಲಿ ಆಂಬುಲೆನ್ಸ್ ಬುಕ್ ಮಾಡುವ ಹೊಸ ಸೇವೆಯೊಂದನ್ನು ಸೇರಿಸಿದೆ. ತನ್ನ ಸೇವೆಗಳನ್ನು ವಿಮಾ ಪರಿಹಾರಗಳಾಚೆ ವಿಸ್ತರಿಸುವ ಮೂಲಕ ಎಲ್ಲಾ ಆರೋಗ್ಯ ಸುರಕ್ಷತಾ ಅಗತ್ಯಗಳಿಗೆ ಒಂದೇ ಸೂರಿನಡಿ ಸೇವೆ ಸಲ್ಲಿಸುವ ದೂರದೃಷ್ಟಿಯನ್ನು ಹೊಂದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಲಭ್ಯವಿರುವ ಸೇವೆಯು ಮುಂಬರುವ ವಾರಗಳಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್, ದೆಹಲಿ ಮತ್ತು ಕೋಲ್ಕತ್ತಾದಲ್ಲೂ ಸಿಗಲಿದೆ ಎಂದು ಕಂಪನಿ ಹೇಳಿದೆ.

ದೇಶದ ಮುಂಚೂಣಿ ತುರ್ತು ಸೇವಾ ಸಂಸ್ಥೆಗಳ ಪೈಕಿ ಒಂದಾದ Red.Healthನ ಸಹಭಾಗಿತ್ವದೊಂದಿಗೆ ಈ ಸೇವೆಯನ್ನು ಆರಂಭಿಸಲಾಗಿದ್ದು ವೈದ್ಯಕೀಯ ತುರ್ತುಸ್ಥಿತಿಗಳಲ್ಲಿ ಎಲ್ಲರಿಗೂ ನೆರವು ಒದಗಿಸುವ ಗುರಿ ಹೊಂದಿದೆ. ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ. ಗ್ರಾಹಕರು ಆಂಬುಲೆನ್ಸ್‌ನ ನಿಖರ ಲೊಕೇಶನ್‌ಅನ್ನು ಮ್ಯಾಪ್ ಮೇಲೆ ನೋಡಿ ಅದರ ಆಗಮನದ ಅಂದಾಜು ಸಮಯವನ್ನು ಲೆಕ್ಕ ಹಾಕಬಹುದು. ಆತಂಕದ ಸಮಯದಲ್ಲಿ ಅವರಿಗೆ ಅದು ನೆಮ್ಮದಿ ಒದಗಿಸಬಹುದು. ತಮ್ಮ ಪ್ರೀತಿಪಾತ್ರರ ಯೋಗಕ್ಷೇಮದ ಮೇಲೆ ಗಮನ ಕೇಂದ್ರೀಕರಿಸಬಹುದಾಗಿದೆ. ಈ ಆವಿಷ್ಕಾರವು ತುರ್ತುಸ್ಥಿತಿಗಳಲ್ಲಿ ತಡೆಯಿಲ್ಲದ ಮತ್ತು ತೊಂದರೆಯಿಲ್ಲದ ಅನುಭವ ಒದಗಿಸುತ್ತದೆ.

ಆಕ್ಕೊದ ಸಮಗ್ರ ವೇದಿಕೆಯ ಮೇಲಿರುವ ಆಂಬುಲೆನ್ಸ್ ಬುಕಿಂಗ್ ಆರೋಗ್ಯ ಸೇವಾ ಪರಿಹಾರಗಳನ್ನು ಒದಗಿಸುವ ಮೂಲಕ ಬಳಕೆದಾರ-ಸುರಕ್ಷತೆ ಹಾಗೂ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸುತ್ತದೆ. ಈ ಕ್ರಮವು, ಹೊಸ ಯುಗದಲ್ಲಿ ತುರ್ತುಸ್ಥಿತಿ ಆರೋಗ್ಯ ಶುಶ್ರೂಷೆಯನ್ನು ಪರಿವರ್ತಿಸುವ ಗುರಿ ಹೊಂದಿದೆ.

ಆಕ್ಕೊದ ಆಂಬುಲೆನ್ಸ್ ಬುಕಿಂಗ್ ಸೇವೆಯ ವಿಶೇಷತೆಗಳು

● ವ್ಯಾಪಕ ಕಾರ್ಯಜಾಲ: ಈ ಯೋಜನೆಯಡಿ ಐದು ನಗರಗಳಾದ್ಯಂತ 3000 ಆಂಬುಲೆನ್ಸ್‌ಗಳು ಲಭ್ಯವಿರುತ್ತವೆ.
● ತಡೆರಹಿತ ಬುಕಿಂಗ್: ACKO ಆಪ್ ಮೂಲಕ ಫೋನ್‌ನಲ್ಲಿ ಕೆಲವೇ ಕ್ಲಿಕ್‌ಗಳೊಂದಿಗೆ ಆಂಬುಲೆನ್ಸ್ ಪಡೆದುಕೊಳ್ಳಬಹುದು
● ನೈಜ -ಸಮಯ ಟ್ರ್ಯಾಕಿಂಗ್: ಗಂಭೀರ ಪರಿಸ್ಥಿತಿಗಳಲ್ಲಿ ನೆಮ್ಮದಿನೀಡುವಂಥ ಆಂಬುಲೆನ್ಸ್‌ನ ಆಗಮನದ ನೈಜ ಸಮಯವನ್ನು ಟ್ರ್ಯಾಕ್ ಮಾಡಬಹುದು.
● ಬಳಕೆದಾರ-ಕೇಂದ್ರಿತ ವಿನ್ಯಾಸ: ಸುಲಭವಾಗಿ ಬಳಸುವುದಕ್ಕಾಗಿಯೇ ಆಕ್ಕೊ ಆಪ್ ವಿನ್ಯಾಸಗೊಂಡಿದೆ.

ಇದನ್ನೂ ಓದಿ: Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

ವೈದ್ಯಕೀಯ ತುರ್ತುಸ್ಥಿತಿಗಳು ತಕ್ಷಣ ಪ್ರತಿಕ್ರಿಯೆಯನ್ನು ಬೇಡುತ್ತದೆ. ಆದರೆ ಅದು ಎಲ್ಲರಿಗೂ ಪೂರಕವಾಗಿಲ್ಲ ಎಲ್ಲಕ್ಕಿಂತ ಮಿಗಿಲಾಗಿ, ಆಂಬುಲೆನ್ಸ್ ಸೇವೆಗಳು, ನಿರ್ಲಕ್ಷಿತ ಕ್ಷೇತ್ರವಾಗಿಯೇ ಉಳಿದು ಪರಿಸ್ಥಿತಿಗಳನ್ನು ಮೀರಲು ಜನರು ಬಹಳ ಕಷ್ಟಪಡಬೇಕಾಗುತ್ತದೆ. ತುರ್ತುಸ್ಥಿತಿಗಳಲ್ಲಿ ಗಂಭೀರ ನೆರವು ಒದಗಿಸಲು ತಂತ್ರಜ್ಞಾನವನ್ನು ವರ್ಧಿಸುವ ಮೂಲಕ ಆಕ್ಕೊ, ಬಳಕೆದಾರ ಸುರಕ್ಷತೆ ಹಾಗೂ ಸಂತೃಪ್ತಿಗೆ ತನ್ನ ಅಚಲ ಬದ್ಧತೆಯನ್ನು ಪ್ರದರ್ಶಿಸಿದೆ.

ಆಂಬುಲೆನ್ಸ್-ಬುಕಿಂಗ್ ಅಂಶವು, ನಿಜಜೀವನದ ಸಮಸ್ಯೆಗಳಿಗೆ ವಾಸ್ತವ ಪರಿಹಾರ ಒದಗಿಸುತ್ತದೆ.

Continue Reading
Advertisement
HD Revanna case Hearing in Holenarasipura sexual assault case adjourned to Monday
ಹಾಸನ1 min ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್4 mins ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ6 mins ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Narendra Modi
ದೇಶ8 mins ago

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

IPL 2024
ಪ್ರಮುಖ ಸುದ್ದಿ9 mins ago

IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

SubAir facility
ಕ್ರೀಡೆ20 mins ago

SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

Lokayukta Raid
ಕರ್ನಾಟಕ26 mins ago

Lokayukta Raid: ಲೋಕಾಯುಕ್ತ ದಾಳಿ; 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಎಫ್‌ಡಿಎ

Health Tips Kannada sleepy is good
ಆರೋಗ್ಯ28 mins ago

Health Tips Kannada: ಕೂತಲ್ಲೇ ತೂಕಡಿಸುತ್ತೀರಾ? ಇದು ಒಳ್ಳೆಯದು!

Jr NTR and Prashanth Neel get the title Dragon from Karan
ಬಾಲಿವುಡ್32 mins ago

Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

Narendra Modi
ದೇಶ43 mins ago

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ11 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌