₹3.5ಲಕ್ಷದ ಚೆಕ್‌ ಹಿಂದಿರುಗಿಸಿದ ಬಸ್‌ ಕಂಡಕ್ಟರ್‌ ! - Vistara News

ಕೊಡಗು

₹3.5ಲಕ್ಷದ ಚೆಕ್‌ ಹಿಂದಿರುಗಿಸಿದ ಬಸ್‌ ಕಂಡಕ್ಟರ್‌ !

ಬಸ್‌ ನಿರ್ವಾಹಕ ₹3.5 ಲಕ್ಷದ ಚೆಕ್‌ನ್ನು ಮರಳಿ ವಾರಸುದಾರರಿಗೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೈರವ ಅವರ ಈ ಸೌಹಾರ್ದತೆಯ ಕೃತ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದಾರೆ.

VISTARANEWS.COM


on

ಜವರೇಗೌಡ ಅವರಿಗೆ ದಾಖಲಾತಿ, ಚೆಕ್‌ ಹಸ್ತಾಂತರಿಸುತ್ತಿರುವ ಕೆಎಸ್‌ಆರ್‌ಟಿಸಿ ಸಿಬ್ಬಂದಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಡಗು: ಬಸ್‌ ನಿರ್ವಾಹಕ ₹3.5 ಲಕ್ಷದ ಚೆಕ್‌ನ್ನು ಮರಳಿ ವಾರಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮರೆದಿದ್ದಾರೆ. ಭೈರವ ಎಂಬ ವ್ಯಕ್ತಿ ಈ ಔದಾರ್ಯದ ಕಾರ್ಯವನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಭೈರವ ಅವರ ಈ ಸೌಹಾರ್ದತೆಯ ಕೃತ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದಾರೆ.

ಊಟಿಯಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ತಮ್ಮ ಚೀಲವನ್ನು ಮರೆತು ಬಿಟ್ಟಿದ್ದರು. ಆ ಚೀಲದಲ್ಲಿ ಚೆಕ್‌ಬುಕ್ ಸೇರಿದಂತೆ ವಿವಿಧ ದಾಖಲಾತಿಗಳಿತ್ತು. ಈ ವಿಷಯ ಆ ಬಸ್‌ನ ನಿರ್ವಾಹಕ ಭೈರವ ಅವರ ಗಮನಕ್ಕೆ ಬಂದಿತ್ತು.

ಭೈರವ ತಮ್ಮ ಕೆಲಸ ಮುಗಿಸಿ ಹೊರಡುವಾಗ ಆ ಚಿಲವು ಬಸ್‌ ಸೀಟ್‌ ಮೇಲೆ ಇರುವುದು ಕಣ್ಣಿಗೆ ಬಿದ್ದಿತ್ತು. ನಂತರ ಆ ಚೀಲವನನು ಪರಿಶೀಲಿಸಿದಾಗ ಅದರಲ್ಲಿ ₹3.5ಲಕ್ಷದ, ಸಹಿ ಮಾಡಿದ ಚೆಕ್, ಚಕ್‌ಬುಕ್ ಸೇರಿದಂತೆ ಆಧಾರ್ ಕಾರ್ಡ್ ದೊರಕಿದೆ. ಭೈರವ ಈ ವಿಷಯವನ್ನು ಕೂಡಲೇ ಮಡಿಕೇರಿ ಘಟಕದ ಸಂಚಾರಿ ನಿಯಂತ್ರಕರಾದ ಹರೀಶ್ ಗಮನಕ್ಕೆ ತಂದಿದ್ದಾರೆ‌.
ನಂತರ ಆಧಾರ್‌ ಕಾರ್ಡ್‌ನಲ್ಲಿದ್ದ ಮಾಹಿತಿಯನ್ನು ಗಮನಿಸಿ ಆ ವ್ಯಕ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆ ಚೀಲದ ವಾರಸುದಾರರಾದ ಜವರೇಗೌಡ ಮೈಸೂರಿನಿಂದ ಮಡಿಕೇರಿಗೆ ಪ್ರಯಾಣ ಬೆಳೆಸಿದ್ದರು. ಹಾಗೂ ತಮ್ಮ ನಿಲ್ದಾಣದಲ್ಲಿ ಇಳಿದು ಹೋಗುವಾಗ ಚೀಲವನ್ನು ಬಸ್‌ನಲ್ಲಿಯೇ ಮರೆತು ಹೋಗಿದ್ದರೆಂದು ತಿಳಿದು ಬಂದಿದೆ.

ಬಸ್‌ನಲ್ಲಿ ಬಿಟ್ಟುಹೋಗಿದ್ದ ದಾಖಲೆಪತ್ರ, ಚೆಕ್‌.

ಚೀಲವನ್ನು ಹಿಂದಿರುಗಿಸುವ ಉದ್ದೇಶದಿಂದ ನಂತರ ಜವರೇಗೌಡ ಅವರನ್ನು ಮಡಿಕೇರಿಯ ಡಿಪೋಗೆ ಕರೆಸಲಾಯಿತು. ನಂತರ ಅವರು ಕಳೆದುಕೊಂಡಿದ್ದ ಬೆಲೆಬಾಳುವ ದಾಖಲಾತಿಗಳ ಚೀಲವನ್ನು ವಾರಸುದಾರಿಗೆ ಹಸ್ತಾಂತರಿಸುವ ಮೂಲಕ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಮಡಿಕೇರಿ ಘಟಕದ ಸಂಚಾರಿ ನಿಯಂತ್ರಣಧಿಕಾರಿ ಹರೀಶ್, ನಿರ್ವಾಹಕ ಬೈರವ, ಚಾಲಕ ವಿನಯ್ ಹಾಗೂ ಪ್ರಮುಖರಾದ ಜಗದೀಶ್ ಕುಮಾರ್ ಹಾಜರಿದ್ದರು.

ಇದನ್ನೂ ಓದಿ: ಮುಂದಿನ ದಸರಾದೊಳಗೆ ಬೆಂಗಳೂರು- ಮೈಸೂರು ದಶಪಥ ಪೂರ್ಣ: ಪ್ರತಾಪ್‌ಸಿಂಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Rain News: ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Rain News
ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.
Koo

ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಕಾರವಾರ ಸೇರಿ ವಿವಿಧೆಡೆ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ (Rain News) ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಬೃಹತ್‌ ಮರಗಳು ರಸ್ತೆಗೆ ಉರುಳಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಇನ್ನು ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಇನ್ನು ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯ‌ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಗಂಟೆಗೆ 50 kmph ವೇಗದ ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಡಿಲು- ಗುಡುಗು ವೇಳೆ ಎಲೆಕ್ಟ್ರಿಕ್ ಉಪಕರಣಗಳನ್ನು ಆಫ್ ಮಾಡುವಂತೆ ಹಾಗೂ ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನ ನೀಡಿದೆ.

ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆ

ಕೊಡಗು: ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ‌ಯಾಗಿದ್ದು, ಪುಷ್ಪಗಿರಿ, ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರಿ ಮಳೆಯಿಂದನದಿ, ತೊರೆ, ಹಳ್ಳ, ಕೊಳ್ಳಗಳ ನೀರಿನ ಮಟ್ಟ ಏರಿಕೆಯಾಗಿದೆ. ಕಾವೇರಿ ನದಿ ನೀರಿನ ಮಟ್ಟವೂ ಗಣನೀಯ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಇನ್ನು ಗಾಳಿ ಮಳೆಗೆ ಹಲವೆಡೆ ಮರ ಗಿಡಗಳು ನೆಲಕ್ಕುರುಳಿವೆ.

ಮಡಿಕೇರಿ ವ್ಯಾಪ್ತಿಯಲ್ಲಿ ರಾತ್ರಿ ಧಾರಾಕಾರ ಮಳೆ ಹಿನ್ನಲೆಯಲ್ಲಿ ಮಡಿಕೇರಿ- ಚೆಟ್ಟಳ್ಳಿ ಮಾರ್ಗದಲ್ಲಿ ರಸ್ತೆಯ ಮೇಲೆ ಬೃಹತ್ ಮರ ಬಿದ್ದ‌ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಅಸ್ತವ್ಯವಾಗಿದೆ. ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಇಂದು (ಬುಧವಾರ) ಬೆಳಗ್ಗೆಯಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ, ಮಧ್ಯಾಹ್ನದ ಬಳಿಕ ಮತ್ತೆ ಆರ್ಭಟಿಸುತ್ತಿದ್ದಾನೆ. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗಿದೆ. ಮಡಿಕೇರಿ, ಭಾಗಮಂಡಲ ನಾಪೋಕ್ಲು ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ.

ಮಲೆನಾಡಿನಲ್ಲಿ ಮಳೆ ಆರ್ಭಟ ಜೋರು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದ ಬಳಿ ಕಳಸ-ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ ಮರ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳೀಯರಿಂದ ಮರ ತೆರವು ಕಾರ್ಯಚರಣೆ ನಡೆಯುತ್ತಿದೆ.

ಇನ್ನು ಮೂಡಿಗೆರೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಮಲೆಮನೆ, ರಾಣಿಜರಿ, ಸುಂಕಸಾಲೆ, ದೇವರಮನೆ ಸುತ್ತಮುತ್ತ ಬಿರುಸಿನ ಮಳೆಯಾಗಿದೆ.

ಕಳೆದೊಂದು ವಾರದಿಂದ ಬಿಡುವು ನೀಡಿದ್ದ ವರುಣದೇವ, ಇಂದು ಬೆಳಗ್ಗೆಯಿಂದ ಮತ್ತೆ ಅಬ್ಬರಿಸುತ್ತಿದ್ದಾನೆ. ಭಾರಿ ಗಾಳಿ-ಮಳೆಗೆ ಚಾರ್ಮಾಡಿಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಕಾರವಾರದಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ತಡರಾತ್ರಿ ಸುರಿದ ಭಾರಿ ಮಳೆಗೆ ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

ಕಾರವಾರ ನಗರದ ಮಾಲಾದೇವಿ ಮೈದಾನ ಸಮೀಪ ಚರಂಡಿಯಲ್ಲಿ ನೀರು ಹರಿಯದ ಪರಿಣಾಮ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಮಲೆನಾಡು ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಮಳೆಯಬ್ಬರ ಹೆಚ್ಚಿದ್ದು, ಕರಾವಳಿ ಭಾಗದ ಕಾರವಾರ, ಅಂಕೋಲಾ ಭಟ್ಕಳ, ಹೊನ್ನಾವರ ಭಾಗದಲ್ಲಿ ಅಲ್ಪ ಮಳೆಯಾಗಿದೆ. ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಇದನ್ನೂ ಓದಿ | IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

Continue Reading

ಕರ್ನಾಟಕ

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಮನರಂಜನೆಗಾಗಿ ಸಮುದ್ರಕ್ಕೆ ಇಳಿಯುವವರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೂನ್‌ 26ರಂದು ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ

ಇನ್ನು ರಾಜ್ಯದ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಅದೇ ರೀತಿ ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಬೀಳಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Continue Reading

ಕೊಡಗು

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Kodagu News: ಕಳೆದುಕೊಂಡಿದ್ದ 3 ಚಿನ್ನದ ನಾಣ್ಯಗಳನ್ನು ಮರಳಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಮಡಿಕೇರಿ ಸಂಚಾರಿ ಠಾಣೆಯ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

VISTARANEWS.COM


on

Kodagu News
Koo

ಕೊಡಗು: ಕಳೆದುಕೊಂಡಿದ್ದ 3 ಚಿನ್ನದ ನಾಣ್ಯಗಳನ್ನು ಮರಳಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಮಡಿಕೇರಿ ಸಂಚಾರ ಠಾಣೆಯ ಪೊಲೀಸರು ಪ್ರಾಮಾಣಿಕತೆ (Kodagu News) ಮೆರೆದಿದ್ದು, ಪೊಲೀಸರ ಕಾರ್ಯ ವೈಖರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ನಗರದ ಅಜ್ಜಮಾಡ ದೇವಯ್ಯ ವೃತ್ತದ ಸಮೀಪದ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಬೀಳಿಸಿಕೊಂಡು ಹೋಗಿದ್ದ ಮೂರು ಚಿನ್ನದ ನಾಣ್ಯಗಳು ಸಂಚಾರ ಠಾಣೆಯ ಪೇದೆ ನಾಗರಾಜ್ ಅವರಿಗೆ ಸಿಕ್ಕಿತ್ತು. ಕೂಡಲೇ ಅವರು ಅವುಗಳನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ, ವಿಷಯವನ್ನು ಅಧಿಕಾರಿ ಹಾಗೂ ಸಿಬ್ಬಂದಿಗೆ ತಿಳಿಸಿದ್ದಾರೆ. ಬಳಿಕ ಚಿನ್ನದ ನಾಣ್ಯಗಳ ವಾರಸುದಾರರ ಹುಡುಕಾಟಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಜು.9ರವರೆಗೆ ಅವಕಾಶ

ಇದನ್ನು ಗಮನಿಸಿದ ನಾಣ್ಯ ಕಳೆದುಕೊಂಡ ಮಡಿಕೇರಿಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲೀಕ ಬಿ.ಸಿ. ಮೋಹನ್ ಅವರು ಠಾಣೆಗೆ ತೆರಳಿ ವಿಚಾರಿಸಿದ್ದಾರೆ. ದೃಢೀಕರಿಸಿದ ನಂತರ ಮಾಲೀಕ ಮೋಹನ್‌ ಅವರು ಕಳೆದುಕೊಂಡಿದ್ದ ಅಂದಾಜು 45 ಸಾವಿರ ಮೌಲ್ಯದ ಚಿನ್ನದ ನಾಣ್ಯಗಳನ್ನು ಠಾಣಾಧಿಕಾರಿ ಶ್ರೀಧರ್ ಹಿಂದಿರುಗಿಸಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

Continue Reading

ಕೊಡಗು

Kodagu News: ಬಿಸ್ಲೆರಿಯಿಂದ ಕೊಡಗಿನಲ್ಲಿ ಸ್ವಚ್ಛತಾ ಅಭಿಯಾನ

Kodagu News: ಕೊಡಗು ಜಿಲ್ಲೆಯ ಮಲ್ದರೆಯಲ್ಲಿ ಅರಣ್ಯ ಇಲಾಖೆಯು ಬಿಸ್ಲೆರಿ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಬೃಹತ್‌ ಅರಣ್ಯ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ಅಭಿಯಾನದಲ್ಲಿ ಕೊಡಗು ಜಿಲ್ಲೆಯ ಮಲ್ದರೆಯಿಂದ ಮುತ್ತೂರು ಅಭಯಾರಣ್ಯದವರೆಗೆ ಸುಮಾರು 10 ಕಿ.ಮೀ. ವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಈ ವೇಳೆ ತಂಡವು ಒಟ್ಟು 810 ಕಿಲೋ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಜೈವಿಕವಾಗಿ ವಿಘಟನೆಯಾಗದ ತ್ಯಾಜ್ಯವನ್ನು ಸಂಗ್ರಹಿಸಿದೆ.

VISTARANEWS.COM


on

forest cleaning campaign in Maldare of Kodagu district
Koo

ಕೊಡಗು: ಜಿಲ್ಲೆಯ ಮಲ್ದರೆಯಲ್ಲಿ ಅರಣ್ಯ ಇಲಾಖೆಯು ಬಿಸ್ಲೆರಿ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಬೃಹತ್‌ ಅರಣ್ಯ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು (Kodagu News) ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛತಾ ಅಭಿಯಾನದಲ್ಲಿ ಕೊಡಗು ಜಿಲ್ಲೆಯ ಮಲ್ದರೆಯಿಂದ ಮುತ್ತೂರು ಅಭಯಾರಣ್ಯದವರೆಗೆ ಸುಮಾರು 10 ಕಿ.ಮೀ. ವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಈ ವೇಳೆ ತಂಡವು ಒಟ್ಟು 810 ಕಿಲೋ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಜೈವಿಕವಾಗಿ ವಿಘಟನೆಯಾಗದ ತ್ಯಾಜ್ಯವನ್ನು ಸಂಗ್ರಹಿಸಿದೆ.

ಅಷ್ಟೇ ಅಲ್ಲ, ಸೈನೇಜ್ ಬೋರ್ಡ್‌ಗಳನ್ನು ನೆಟ್ಟು, ಸರಿಯಾದ ತ್ಯಾಜ್ಯ ವಿಲೇವಾರಿ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದೆ. ಜತೆಗೆ ಮರುಬಳಕೆಯನ್ನು ಉತ್ತೇಜಿಸಿ, ಕಸ ಎಸೆಯುವುದನ್ನು ತಪ್ಪಿಸಲು ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್‌ನ ಪರಿಣಾಮ ಮತ್ತು ಬಳಸಿದ ಪ್ಲಾಸ್ಟಿಕ್ ಅನ್ನು ಸಂಗ್ರಹಿಸುವ ವಿಧಾನದ ಬಗ್ಗೆ ತಿಳಿವಳಿಕೆಯನ್ನೂ ಮೂಡಿಸಲು ಯತ್ನಿಸಿದೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ಈ ಕುರಿತು ರಾಜ್ಯ ಅರಣ್ಯ ಇಲಾಖೆಯ ಟೈಗರ್ ರಿಸರ್ವ್‌ ಫಾರೆಸ್ಟ್‌ನ ಡಿಆರ್‌ಎಫ್‌ಒ ಚಿನ್ನವಿಶೇರಾ ಮಾತನಾಡಿ, “ಪರಿಸರ ಸುಸ್ಥಿರತೆಯನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿ ಈ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ. ಬಾಟಲ್ಸ್ ಫಾರ್ ಚೇಂಜ್‌ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮರುಬಳಕೆ ಪ್ರಯತ್ನದಲ್ಲಿ ಬಿಸ್ಲೆರಿ ಇಂಟರ್‌ನ್ಯಾಷನಲ್‌ ಸಹಕಾರ ಮತ್ತು ಸಕ್ರಿಯ ತೊಡಗಿಸಿಕೊಳ್ಳುವಿಕೆಯನ್ನು ನಾವು ಮೆಚ್ಚುತ್ತೇವೆ. ಕರ್ನಾಟಕಕ್ಕೆ ಪರಿಸರ ಸ್ನೇಹಿ ಭವಿಷ್ಯವನ್ನು ರೂಪಿಸುವುದಕ್ಕೆ ನಾವು ನಿರಂತರವಾಗಿ ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಹಭಾಗಿತ್ವದ ಕುರಿತು ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈ.ಲಿ.ನ ಸುಸ್ಥಿರತೆ ಮತ್ತು ಕಾರ್ಪೊರೇಟ್ ವ್ಯವಹಾರಗಳ ನಿರ್ದೇಶಕ ಕೆ.ಗಣೇಶ್ ಮಾತನಾಡಿ, ನಮ್ಮ ಬಾಟಲ್ಸ್ ಫಾರ್ ಚೇಂಜ್ ಕಾರ್ಯಕ್ರಮದ ಮೂಲಕ ಪರಿಸರ ಸಂರಕ್ಷಣೆಯನ್ನು ಉತ್ತೇಜಿಸಲು ಕರ್ನಾಟಕ ಅರಣ್ಯ ಇಲಾಖೆಯ ಜತೆಗೆ ಸಹಭಾಗಿತ್ವ ವಹಿಸಿರುವುದಾಗಿ ಘೋಷಿಸುವುದು ನಮಗೆ ಖುಷಿಯ ಸಂಗತಿಯಾಗಿದೆ. ಧನಾತ್ಮಕ ಬದಲಾವಣೆಯನ್ನು ಪ್ರೋತ್ಸಾಹಿಸಲು ಮತ್ತು ಸುಸ್ಥಿರ ಭವಿಷ್ಯವನ್ನು ಪೋಷಿಸಲು ನಮಗೆ ಈ ಪಾಲುದಾರಿಕೆಯು ಪೂರಕವಾಗಿರಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಜು.9ರವರೆಗೆ ಅವಕಾಶ

ಸುಸ್ಥಿರ ಅಭಿವೃದ್ಧಿ ಉಪಕ್ರಮಗಳ ಮೂಲಕ ಸಮುದಾಯಗಳ ಮೇಲೆ ಧನಾತ್ಮಕ ಮತ್ತು ದೀರ್ಘಕಾಲೀನ ಪರಿಣಾಮವನ್ನು ಉಂಟು ಮಾಡುವ ಗುರಿ ಹೊಂದಿರುವ ಲಾಭೋದ್ದೇಶ ರಹಿತ ಸಂಸ್ಥೆ ಸಂಪ್ರಭಾವ್‌ ಫೌಂಡೇಶನ್‌ ಪರಿಣಾಮಕಾರಿಯಾಗಿ ತ್ಯಾಜ್ಯವನ್ನು ನಿರ್ವಹಿಸುವುದು ಮತ್ತು ಸಾಮಗ್ರಿಗಳನ್ನು ಮರುಬಳಕೆ ಮಾಡುವ ವಿಷಯದಲ್ಲಿ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಗುರಿ ಹೊಂದಿದೆ. ಈ ಸಂಸ್ಥೆಯು ಪಾಲುದಾರನಾಗಿದೆ. ಈ ಸಂಸ್ಥೆಯು ಕೊಡಗಿನ ಅಭ್ಯತ್‌ಮಂಗಲ ಮೂಲದ್ದಾಗಿದೆ.

Continue Reading
Advertisement
Terrorists Killed
ಪ್ರಮುಖ ಸುದ್ದಿ14 mins ago

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ42 mins ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ48 mins ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ53 mins ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು57 mins ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು1 hour ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ1 hour ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ1 hour ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ1 hour ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Vijayalakshmi Darshan
ಕರ್ನಾಟಕ2 hours ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌