777 Charlie | ರಕ್ಷಿತ್‌ ಶೆಟ್ಟಿ ಸಿನಿಮಾ ವಿತರಣೆ ಮಾಡಲಿದೆ UFO: ಮೇ 16ಕ್ಕೆ ಟ್ರೈಲರ್‌ ಬಿಡುಗಡೆ - Vistara News

ಕಾಲಿವುಡ್

777 Charlie | ರಕ್ಷಿತ್‌ ಶೆಟ್ಟಿ ಸಿನಿಮಾ ವಿತರಣೆ ಮಾಡಲಿದೆ UFO: ಮೇ 16ಕ್ಕೆ ಟ್ರೈಲರ್‌ ಬಿಡುಗಡೆ

777 ಚಾರ್ಲಿ ಸಿನಿಮಾವನ್ನು ಹಿಂದಿಯಲ್ಲಿ ವಿತರಣೆ ಮಾಡುವವರು ಯಾರು ಎಂಬ ವಿಚಾರ ರಿವೀಲ್‌ ಆಗಿದ್ದು, ಪಂಚ ಭಾಷೆಗಳಲ್ಲಿ ರಿಲೀಸ್‌ ಆಗ್ತಾ ಇದೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸ್ಯಾಂಡಲ್‌ವುಡ್‌ ನಲ್ಲಿ ನಿರ್ದೇಶಕನಾಗಿ ಮತ್ತು ನಟನಾಗಿ ಟ್ರೆಂಡ್‌ ಸೃಷ್ಟಿ ಮಾಡಿದ್ದವರಂದರೆ ರಕ್ಷಿತ್‌ ಶೆಟ್ಟಿ. ಯಾವಾಗಲೂ ಕಂಟೆಟ್‌ ಫಿಲ್ಮ್‌ ಗೆ ಆದ್ಯತೆ ನೀಡೋ ರಕ್ಷಿತ್‌ ಶೆಟ್ಟಿ ಅವರ ಅಭಿನಯಕ್ಕೆ ಮನಸೋಲದವರೇ ಇಲ್ಲ. ಈಗ ರಕ್ಷಿತ್‌ ಶೆಟ್ಟಿ ಅವರ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿ ಇದೇ ಜೂನ್‌ 8 ರಂದು ತೆರೆ ಕಾಣುತ್ತಿದೆ. ಚಾರ್ಲಿ ಸಿನಿಮಾವನ್ನು ಹಿಂದಿಯಲ್ಲಿ ವಿತರಣೆ ಮಾಡುವವರು ಯಾರು ಎಂಬ ವಿಚಾರ ತಿಳಿದು ಬಂದಿದೆ. ದೇಶದಲ್ಲಿ ಅತಿ ದೊಡ್ಡ ವಿತರಣಾ ಜಾಲ ಹೊಂದಿರುವ ಯುಎಫ್‌ಒ(UFO). ಸಂಸ್ಥೆ ಹಿಂದಿ ಅವತರಣಿಕೆಯ ವಿತರಣೆ ಹೊಣೆ ಹೊತ್ತಿದ್ದು, ಚಾರ್ಲಿ ಸಿನಿಮಾ ಸಕ್ಸೆಸ್‌ ಸಾಧ್ಯತೆ ಮತ್ತಷ್ಟು ನಿಚ್ಚಳವಾಗಿದೆ.ಮೇ 16ರ ಮದ್ಯಾಹ್ನ 12.12ಕ್ಕೆ ಅಫಿಷಿಯಲ್‌ ಟ್ರೈಲರ್‌ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ಪಂಚ ಭಾಷೆಗಳಲ್ಲಿ ತೆರೆ ಕಾಣ್ತೀರೋ ಚಾರ್ಲಿ :

ಕನ್ನಡದ ಜೊತೆಗೆ ಮಲಯಾಳಂ, ತೆಲುಗು , ಹಿಂದಿ, ತಲಿಳು ಭಾಷೆಯಲ್ಲಿ ತೆರೆ ಬರುತ್ತಿರುವ ಚಾರ್ಲಿ , ಈಗಾಗಲೇ ಟೀಸರ್‌ ಮೂಲಕ ಬೇರೆ ಬೇರೆ ಭಾಷಿಗರನ್ನು ಸೆಳೆದಿದೆ. ತೆಲಗುವಿನಲ್ಲಿ ನಟ ರಾಣಾ ದಗ್ಗುಬಾಟಿ, ತಮಿಳಿನಲ್ಲಿ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜು, ಮಲೆಯಾಳಂನಲ್ಲಿ ನಟ ಪೃಥ್ವಿರಾಜ್‌ ಸುಕುಮಾರನ್‌ ವಿತರಣೆ ಮಾಡುವ ಜವಬ್ದಾರಿ ಹೊಂದಿದ್ದು, ಅದೇ ರೀತಿಯಲ್ಲಿ ಹಿಂದಿಯಲ್ಲಿ ಖ್ಯಾತ ಸಂಸ್ಥೆ UFO ವಿತರಣೆ ಮಾಡಲಿದೆ.

ಯುಎಫ್‌ಒ ಸಂಸ್ಥೆ, ಎಲೆಕ್ಟ್ರಾನಿಕ್‌ ತಂತ್ರಜ್ಞಾನ ಬಳಸಿ ಸಿನಿಮಾ ವಿತರಣೆ ಮಾಡುವ ದೇಶದ ಪ್ರಮುಖ ಸಂಸ್ಥೆ. ಅನೇಕ ಸಿಂಗಲ್‌ ಸ್ಕ್ರೀನ್‌ಗಳಿಗೂ ಮರುಜೀವ ನೀಡಿದ, ಪೈರಸಿಗೆ ಸಾಕಷ್ಟು ಕಡಿವಾಣ ಹಾಕಿದ ಯುಎಫ್‌ಒ ಉತ್ತರ ಭಾರತದಲ್ಲಿ ಉತ್ತಮ ವಿತರಣಾ ಜಾಲ ಹೊಂದಿದೆ. ಯಾವುದೇ ಸಿನಿಮಾ ಸಕ್ಸೆಸ್‌ ಆಗಬೇಕೆಂದರೆ ಉತ್ತಮ ವಿತರಕರು ದೊರಕಬೇಕು. ಈಗಾಗಲೆ 22ಭಾಷೆಗಳ 11 ಸಾವಿರಕ್ಕೂ ಹೆಚ್ಚು ಸಿನಿಮಾಗಳನ್ನು ಬಿಡುಗಡೆ ಮಾಡಿರುವ ಯುಎಫ್‌ಒ ಇದೀಗ ಚಾರ್ಲಿ ವಿತರಣೆ ಹೊಣೆ ಹೊತ್ತಿದೆ.

ಶ್ವಾನ ಪ್ರೇಮಿಗಳು ಕಾತುರತೆಯಿಂದ ಕಾಯುತ್ತಿರುವ ಈ ಸಿನಿಮಾ ನಾಯಕನಾಗಿ ರಕ್ಷಿತ್‌ ಶೆಟ್ಟಿ ನಟಿಸಿದರೆ, ರಾಜ್‌ ಬಿ ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ನಟಿಸಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರದ ನಿರ್ದೇಶಕರಾಗಿದ್ದು, ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ನಿರ್ದೇಶಿಸಿದ್ದಾರೆ. ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ ನೀಡಿದ್ದು, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ ಮಾಡಿದ್ದಾರೆ. ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ. ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್‌ ಉಪಾಧ್ಯ ಸಂಭಾಷಣೆ ನೀಡಿದ್ದು, ಹಾಡುಗಳಿಗೆ ಹಿಂದಿಯಲ್ಲಿ ಶೈನಿ ದಾಸ್‌, ಕಾರ್ತಿಕಾ ನೈನನ್‌ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್‌ ಡಿಸೋಜಾ, ಸಾಯೇಶ್‌ ಪೈ ಪನಂಡಿಕರ್ ಸಾಹಿತ್ಯ ನೀಡಿದ್ದಾರೆ.

ಕನ್ನಡ ಭಾಷೆಯ ಪ್ರಸಾರ ಹಕ್ಕುಗಳು ರೂ.21 ಕೋಟಿಗೆ ಕಲರ್ಸ್‌ ಕನ್ನಡಕ್ಕೆ ಸೇಲ್‌ ಆಗಿರೋದು ಇನ್ನೂ ವಿಶೇಷ. ಏನೇ ಆಗಲಿ ಇದೇ ಜೂನ್‌ 10 ರಂದು ಚಾರ್ಲಿ ರಿಲೀಸ್‌ ಆಗ್ತಾ ಇದ್ದು. ಒಂದೆ ದಿನದಲ್ಲಿ ಪಂಚಭಾಷೆಗಳಲ್ಲಿ ತೆರೆ ಕಾಣುತ್ತಿರುವು ಅಭಿಮಾನಿಗಳಿಗೆ ಖುಷಿ ತರ್ತಾ ಇದ್ದು ಹೇಗೆ ರಂಜಿಸಲಿದೆ ಅನ್ನೋದು ಕಾದು ನೋಡಬೇಕಿದೆ.

ಇದನ್ನೂ ಓದಿ | ಪ್ರೀತಿಯ ಶ್ವಾನದ ಜತೆಗೊಂದು ಹ್ಯಾಪಿ ಜರ್ನಿ ..!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Aditi Rao and Siddharth: ದೇವಸ್ಥಾನದಲ್ಲಿ ಮದುವೆಯಾದರೆ ನಟ ಸಿದ್ಧಾರ್ಥ್-ಅದಿತಿ ರಾವ್ ಹೈದರಿ?

Aditi Rao and Siddharth: ಅದಿತಿ ರಾವ್ ಮತ್ತು ಸಿದ್ಧಾರ್ಥ್ ಬಹಳ ಸಮಯದಿಂದ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದಿದ್ದರು. ಇಂದು ತೆಲಂಗಾಣದ ವನಪರ್ತಿ (Sri Ranganayakaswamy Temple) ಜಿಲ್ಲೆಯ ಶ್ರೀರಂಗಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಜೋಡಿಯ ವಿವಾಹವಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Aditi Rao and Siddharth
Koo

ಬೆಂಗಳೂರು: ನಟ ಸಿದ್ಧಾರ್ಥ್ (Actor Siddharth) ಅವರು ಅದಿತಿ ರಾವ್ ಹೈದರಿ ಜತೆ ಡೇಟಿಂಗ್‌ (Aditi Rao and Siddharth) ಮಾಡುತ್ತಿರುವ ವಿಚಾರ ಗೊತ್ತೇ ಇದೆ. ಇದೀಗ ಈ ಜೋಡಿ ಇಂದು (ಮಾ.27) ತೆಲಂಗಾಣದ ವನಪರ್ತಿ (Sri Ranganayakaswamy Temple) ಜಿಲ್ಲೆಯ ಶ್ರೀರಂಗಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ವಿವಾಹವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಅದಿತಿ ರಾವ್ ಮತ್ತು ಸಿದ್ಧಾರ್ಥ್ (Aditi Rao and Siddharth) ಬಹಳ ಸಮಯದಿಂದ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದರು. ʻಮಹಾ ಸಮುದ್ರಮ್‌ʼ ಚಿತ್ರದಲ್ಲಿ ಸಿದ್ಧಾರ್ಥ್‌ ಮತ್ತು ಅದಿತಿ ಒಟ್ಟಾಗಿ ಅಭಿನಯಿಸಿದ್ದರು. ಅಲ್ಲಿಂದ ಈ ಜೋಡಿ ಮಧ್ಯೆ ಆಪ್ತತೆ ಹೆಚ್ಚಾಗಿತ್ತು. ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಅವರು ತಮ್ಮ ವಿವಾಹದ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ನೀಡಿಲ್ಲ.

ಈ ಹಿಂದೆ ರಾಜಕುಮಾರ್‌ ರಾವ್‌ ಅವರ ಮದುವೆಯಲ್ಲಿ ಇವರಿಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್‌ ಹುಟ್ಟುಹಬ್ಬಕ್ಕೆ ಅತ್ಯಂತ ಪ್ರೀತಿಯಿಂದ ಹಾರೈಸಿದ್ದರು ಅದಿತಿ. ಈ ಮೊದಲು ಅದಿತಿ ರಾವ್​ ಹೈದರಿ ಅವರು ನಟ ಸತ್ಯದೀಪ್​ ಮಿಶ್ರಾ ಜತೆ ಮದುವೆ ಆಗಿದ್ದರು. ಆದರೆ 2013ರಲ್ಲಿ ಅವರು ವಿಚ್ಛೇದನ ಪಡೆದರು. ಅದೇ ರೀತಿ, ಸಿದ್ಧಾರ್ಥ್​ ಕೂಡ ಮೇಘನಾ ನಾರಾಯಣ್​ ಜತೆ 2003ರಲ್ಲಿ ಮದುವೆಯಾಗಿ 2007ರಲ್ಲಿ ಡಿವೋರ್ಸ್​ ಪಡೆದರು.

ಇದನ್ನೂ ಓದಿ: Aditi Rao Hydari: ಸಿದ್ಧಾರ್ಥ್ ಪೋಸ್ಟ್‌ ಹಂಚಿಕೊಂಡು ʻಜಸ್ಟ್‌ ಲುಕಿಂಗ್‌ ಲೈಕ್‌ ಎ ವಾವ್‌ʼ ಎಂದ ಅದಿತಿ!

ಅರುಣ್ ಕುಮಾರ್ ನಿರ್ದೇಶನದ “ಚಿತ್ತಾʼ ಚಿತ್ರದಲ್ಲಿ ಸಿದ್ಧಾರ್ಥ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ನಿಮಿಷಾ ಸಜಯನ್, ಅಂಜಲಿ ನಾಯರ್ ಮತ್ತು ಸಹಸ್ರ ಶ್ರೀ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಟಕಿ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿದ್ಧಾರ್ಥ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮುಂದೆ ನಟ ಎಸ್ ಶಂಕರ್ ನಿರ್ದೇಶನದ ಇಂಡಿಯನ್ 2 ಚಿತ್ರದಲ್ಲಿ ಕಮಲ್ ಹಾಸನ್ ಜತೆಗೆ ಕಾಣಿಸಿಕೊಳ್ಳಲು ಸಹ ಸಿದ್ಧರಾಗಿದ್ದಾರೆ.

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಇದನ್ನೂ ಓದಿ: Aditi Rao Hydari: ʻಲವ್ಲಿ ಜೋಡಿ’ ಎನ್ನುತ್ತಿದ್ದಂತೆ ನಾಚಿ ನೀರಾದ ಅದಿತಿ ರಾವ್ ಹೈದರಿ

ಮತ್ತೊಂದೆಡೆ, ಅದಿತಿ ರಾವ್ ಹೈದರಿ ಕೊನೆಯದಾಗಿ ವಿಕ್ರಮಾದಿತ್ಯ ಮೋಟ್ವಾನಿ ನಿರ್ದೇಶಿಸಿದ ಜುಬಿಲಿ ವೆಬ್ ಸಿರೀಸ್‌ನಲ್ಲಿ ಕಾಣಿಸಿಕೊಂಡರು. ಈ ಸಿರೀಸ್‌ನಲ್ಲಿ ಅಪರಶಕ್ತಿ ಖುರಾನಾ, ವಾಮಿಕಾ ಗಬ್ಬಿ, ಸಿದ್ದಾಂತ್ ಗುಪ್ತಾ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ಮುಂದಿನ ಸಂಜಯ್ ಲೀಲಾ ಬನ್ಸಾಲಿಯವರ ನೆಟ್‌ಫ್ಲಿಕ್ಸ್ ಸಿರೀಸ್‌ ಹೀರಾಮಂಡಿಯಲ್ಲಿ ಸೋನಾಕ್ಷಿ ಸಿನ್ಹಾ, ಮನಿಶಾ ಕೊಯಿರಾಲಾ ಮತ್ತು ಇನ್ನೂ ಅನೇಕರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಕಜ್ರಿ ಬಬ್ಬರ್ ನಿರ್ದೇಶನದ ಲಯನೆಸ್ ಎಂಬ ಇಂಗ್ಲಿಷ್ ಚಲನಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

ಕಾಲಿವುಡ್

Shruti Haasan: ನಿರ್ದೇಶಕನ ಜತೆ ಸಖತ್‌ ರೊಮ್ಯಾನ್ಸ್‌ ಮಾಡಿದ ಕಮಲ್ ಹಾಸನ್ ಪುತ್ರಿ

Shruti Haasan: ʻಇನಿಮೆಲ್ʼ ಸಾಂಗ್‌ಗೆ ಲೋಕೇಶ್ ಕನಕರಾಜ್ ಅವರು ನಟರಾಗಿದ್ದಾರೆ. ಕಮಲ್ ಹಾಸನ್ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಸಂಪೂರ್ಣ ವಿಡಿಯೊ ಮಾರ್ಚ್ 25ರಂದು ರಿಲೀಸ್ ಆಗಲಿದೆ.

VISTARANEWS.COM


on

Shruti Haasan romance with lokesh
Koo

ಬೆಂಗಳೂರು: ಇಷ್ಟು ದಿನ ಕಾಲಿವುಡ್‌ನಲ್ಲಿ  ‘ಕೈದಿ’, ‘ಲಿಯೋ’ ಹೀಗೆ ಅನೇಕ ಹಿಟ್‌ ಸಿನಿಮಾಗಳನ್ನು ನೀಡಿದ್ದರು ಲೋಕೇಶ್ ಕನಕರಾಜ್ (Lokesh Kanagaraj) . ಇದೀಗ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ (Shruti Haasan) ಜತೆ ರೊಮ್ಯಾನ್ಸ್‌ ಮಾಡಿದ್ದಾರೆ ಲೋಕೇಶ್‌. ʻಇನಿಮೆಲ್ʼ ಸಾಂಗ್‌ (video titled Inimel) ಒಂದು ಬಿಡುಗಡೆಯಾಗುತ್ತಿದೆ. ಲೋಕೇಶ್ ಕನಕರಾಜ್ ಅವರು ನಟರಾಗಿದ್ದಾರೆ. ಕಮಲ್ ಹಾಸನ್ (Kamal Haasan) ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಆದರೆ ಈ ಹಾಡಿಗೆ ನಿರ್ದೇಶನ ಇರೋದು ಶ್ರುತಿ ಹಾಸನ್ ಅವರದ್ದು. ಈ ಹಾಡಿನ ಪ್ರೋಮೊ ರಿಲೀಸ್ ಆಗಿದ್ದು, ಸಂಪೂರ್ಣ ವಿಡಿಯೊ ಮಾರ್ಚ್ 25ರಂದು ರಿಲೀಸ್ ಆಗಲಿದೆ.

ಒಂದು ವಾರದ ಹಿಂದೆ, ಶ್ರುತಿ (Shruti Haasan) ತಮ್ಮ ಇನ್‌ಸ್ಟಾದಲ್ಲಿ ಪೋಸ್ಟರ್ ಹಂಚಿಕೊಂಡಿದ್ದರು. ʻಇನಿಮೆಲ್ ರೋಲ್ ರಿವರ್ಸ್ ಹೊಸ ಪದ್ಯ” ಎಂದು ಬರೆದು, ಲೋಕೇಶ್ ನಟರಾಗಿ, ಕಮಲ್ ಗೀತರಚನೆಕಾರರಾಗಿ ಮತ್ತು ಶ್ರುತಿ ಸಂಯೋಜಕಿಯಾಗಿ ಹೊರಹೊಮ್ಮಿದ್ದಾರೆ ಎಂದು ಬರೆದುಕೊಂಡಿದ್ದರು.

ಮಾರ್ಚ್ 25 ರಂದು ಬಿಡುಗಡೆ

ಗುರುವಾರ (ಮಾ.21) ಸಂಜೆ ಹಾಡಿನ ಟೀಸರ್ ಬಿಡುಗಡೆ ಆಗಿದೆ. ಇನಿಮೆಲ್‌ನ ಪೂರ್ಣ ವಿಡಿಯೊವನ್ನು ಮಾರ್ಚ್ 25 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಬರೆದಿದ್ದಾರೆ. ವಿಡಿಯೊದಲ್ಲಿ, ಶ್ರುತಿ ಮತ್ತು ಲೋಕೇಶ್ ಪ್ರೇಮಿಗಳ ಪಾತ್ರವನ್ನು ನಿರ್ವಹಿಸಿದ್ದಾರೆ. ಲೋಕೇಶ್ ಹಾಗೂ ಶ್ರುತಿ ಹಾಸನ್ (Shruti Haasan) ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕೂಡ ಹಾಡಿನ ಸುಳಿವು ನೀಡಿದ್ದು, ಶ್ರುತಿ ಅವರ ಗಾಯನವಿದೆ.

ಇದನ್ನೂ ಓದಿ: Shruti Haasan: ಮಗಳ ಸಿನಿಮಾ ನಿರ್ಮಾಣ ಮಾಡುತ್ತಿರುವ ʻಕಮಲ್ ಹಾಸನ್ʼ; ‘ವಿಕ್ರಮ್’ ಡೈರೆಕ್ಟರ್ ಆ್ಯಕ್ಷನ್ ಕಟ್!

ಶ್ರುತಿ ಹಾಸನ್‌ (Shruti Haasan) ಕೊನೆಯದಾಗಿ ʻಸಲಾರ್ʼನಲ್ಲಿ ಕಾಣಿಸಿಕೊಂಡರು. ಕೆಲವು ದಿನಗಳ ಹಿಂದೆ ಶ್ರುತಿ ತಮ್ಮ ಮುಂಬರುವ ಯೋಜನೆಗಳ ಕುರಿತು ಅಪ್‌ಡೇಟ್ ನೀಡಿ ʻಎರಡು ಚಿತ್ರಗಳಲ್ಲಿ ಏಕಕಾಲದಲ್ಲಿ ಕೆಲಸ ಮಾಡುತ್ತಿದ್ದೇನೆ. ಎರಡೂ ಇನ್ನೂ ಬಿಡುಗಡೆಯಾಗಬೇಕಿದೆʼʼಎಂದು ಹೇಳಿಕೊಂಡಿದ್ದರು. ಶನೈಲ್ ಡಿಯೋ ನಿರ್ದೇಶನದ ಮತ್ತು ಅಡಿವಿ ಶೇಷ್ ಸಹ-ನಟನಾಗಿ ಶ್ರುತಿ ಶೀಘ್ರದಲ್ಲೇ ʻಡಕಾಯತ್‌ʼ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಶ್ರುತಿ ಹೊಸ ಅವತಾರದಲ್ಲಿ ಕಾಣಲಿದ್ದಾರೆ. ಫಿಲಿಪ್ ಜಾನ್ ಅವರ ಚೆನ್ನೈ ಸ್ಟೋರಿಯಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಕಾಲಿವುಡ್

Yogi Babu: ಯೋಗಿಬಾಬು ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಕನ್ನಡ ʻಬಿಗ್‌ ಬಾಸ್‌ʼ ವಿನ್ನರ್‌!

Yogi Babu: ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್ ಶೆಟ್ಟಿ ತಮಿಳು ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮಿಳು ಸಿನಿರಂಗದ ಹಾಸ್ಯ ದಿಗ್ಗಜ ಯೋಗಿಬಾಬು ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

VISTARANEWS.COM


on

Roopesh shety with Yogi Babu
Koo

ಬೆಂಗಳೂರು: ತುಳುನಾಡ ನಟ ರೂಪೇಶ್ ಶೆಟ್ಟಿ (Roopesh shety) ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ʻಸರ್ಕಸ್ʼ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸೆಸ್‌ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್‌ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವವರ ನಡುವೆ ರೂಪೇಶ್ ಅಳೆದು ತೂಗಿ ʻಅಧಿಪತ್ರʼ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಪತ್ರ ಚಿತ್ರದ ಜತೆಗೆ ಮತ್ತೆರೆಡು ಹೊಸ ಕನ್ನಡ ಪ್ರಾಜೆಕ್ಟ್‌ನಲ್ಲಿ ಬ್ಯುಸಿಯಾಗಿರುವ ರೂಪೇಶ್ ಈಗ ತಮಿಳು (Yogi Babu) ಸಿನಿಮಾರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ.

ಬಿಗ್ ಬಾಸ್ ಸೀಸನ್ 9 ವಿನ್ನರ್ ಆಗಿರುವ ರಾಕ್ ಸ್ಟಾರ್ ರೂಪೇಶ್, ʻಸನ್ನಿಧಾನಮ್ P. Oʼ (Sannidhanam P.O.) ಎಂಬ ತಮಿಳು ಪ್ರಾಜೆಕ್ಟ್ ನಲ್ಲಿ ನಟಿಸಿದ್ದಾರೆ. ವಿಶೇಷ ಅಂದರೆ ತಮಿಳು ಸಿನಿರಂಗದ ಹಾಸ್ಯ ದಿಗ್ಗಜ ಯೋಗಿಬಾಬು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಅವರ ಜತೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವ ಸಂತಸದಲ್ಲಿದ್ದಾರೆ ರೂಪೇಶ್.

ಮಧುರಾವ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದು, ಅಮುದ ಸಾರಥಿ ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ʻಸನ್ನಿಧಾನಮ್ P. Oʼ ಚಿತ್ರದ ಎರಡನೇ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಜೂನ್‌ನಲ್ಲಿ ಸಿನಿಮಾ ತೆರೆಗೆ ತರಲು ಚಿತ್ರತಂಡ ತಯಾರಿ ನಡೆಸುತ್ತಿದೆ. ನಾಲ್ಕು ಭಾಷೆಯಲ್ಲಿ ʻಸನ್ನಿಧಾನಮ್ P. Oʼ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ: Lokayukta Raid : 50 ಸಾವಿರ ರೂ. ಲಂಚ ಕೇಳಿದ್ದ ಸಬ್‌ ರಿಜಿಸ್ಟ್ರಾರ್‌ ಲೋಕಾಯುಕ್ತ ದಾಳಿ ವೇಳೆ ಎಸ್ಕೇಪ್!‌

ತುಳು ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಾ, ನಟನಾಗಿ, ನಿರ್ದೇಶಕನಾಗಿ ನೆಲೆ ಕಂಡುಕೊಂಡಿದ್ದವರು ರೂಪೇಶ್ ಶೆಟ್ಟಿ. ಅದರ ಬೆನ್ನಲ್ಲೇ ಬಿಗ್‌ಬಾಸ್‌ ವಿಜೇತರಾಗಿಯೂ ಹೊರಹೊಮ್ಮಿದರು. ಬಳಿಕ ಕನ್ನಡದ ಸಿನಿಮಾ ಅವಕಾಶಗಳ ಬಾಗಿಲೂ ತೆರೆಯಿತು. ತುಳು, ಕನ್ನಡ ಮಾತ್ರವಲ್ಲ ತೆಲುಗು, ಕೊಂಕಣಿ ಭಾಷೆಯಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ರೂಪೇಶ್ ಅವರನ್ನು ತಮಿಳುಚಿತ್ರರಂಗ ರತ್ನ ಕಂಬಳಿ ಹಾಸಿ ಸ್ವಾಗತಿಸಿದೆ.

Continue Reading

ಕಾಲಿವುಡ್

SS Rajamouli: ಜಪಾನ್‌ ಭೂಕಂಪದಲ್ಲಿ ಬದುಕುಳಿದ ರಾಜಮೌಳಿ, ಮಗ ಕಾರ್ತಿಕೇಯ!

SS Rajamouli: ನಿರ್ದೇಶಕ ಎಸ್‌ಎಸ್ ರಾಜಮೌಳಿ ಮಗ ಕಾರ್ತಿಕೇಯ ತಮ್ಮ ಸ್ಮಾರ್ಟ್ ವಾಚ್‌ನಲ್ಲಿ ಭೂಕಂಪದ ಬಗ್ಗೆ ಎಚ್ಚರಿಕೆ ನೀಡಿದ ಮೆಸೇಜ್‌ಅನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

VISTARANEWS.COM


on

SS Rajamouli and son Karthikeya
Koo

ಬೆಂಗಳೂರು: ನಿರ್ದೇಶಕ ಎಸ್‌ಎಸ್ ರಾಜಮೌಳಿ (SS Rajamouli ), ಅವರ ಮಗ ಕಾರ್ತಿಕೇಯ ಮತ್ತು ನಿರ್ಮಾಪಕ ಶೋಬು ಯರ್ಲಗಡ್ಡ ಅವರು ಮಾರ್ಚ್ 21ರ ಗುರುವಾರ ಆರ್‌ಆರ್‌ಆರ್‌ನ ವಿಶೇಷ ಪ್ರದರ್ಶನಕ್ಕಾಗಿ ಜಪಾನ್‌ನಲ್ಲಿದ್ದರು. ಈ ವೇಳೆ ಜಪಾನ್‌ನಲ್ಲಿ ನಡೆದ ತಮ್ಮ ಭೂಕಂಪನದ ಅನುಭವವನ್ನು ಹಂಚಿಕೊಂಡಿದ್ದಾರೆ. ತಮ್ಮ ಸ್ಮಾರ್ಟ್ ವಾಚ್‌ನಲ್ಲಿ ಭೂಕಂಪನದ ಬಗ್ಗೆ ಎಚ್ಚರಿಕೆ ನೀಡಿದ ಮೆಸೇಜ್‌ಅನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಭೂಕಂಪ ಸಂಭವಿಸಿದಾಗ ನಮ್ಮ ಆರ್‌ಆರ್‌ಆರ್ ತಂಡ 28ನೇ ಮಹಡಿಯಲ್ಲಿ ಇತ್ತು ಎಂದು ಬಹಿರಂಗಪಡಿಸಿದರು.

ಕಾರ್ತಿಕೇಯ ಅವರು ತಮ್ಮ ವಾಚ್‌ ಚಿತ್ರವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಭೂಕಂಪದ ತುರ್ತು ಎಚ್ಚರಿಕೆಯ ಮೆಸೇಜ್‌ ಶೇರ್‌ ಮಾಡಿಕೊಂಡಿದ್ದಾರೆ. ಜತೆಗೆ ಹೀಗೆ ಬರೆದುಕೊಂಡಿದ್ದಾರೆ. “ಇದೀಗ ಜಪಾನ್‌ನಲ್ಲಿ ಭೂಕಂಪನದ ಅನುಭವ ಆಯ್ತು. ನಾವು 28ನೇ ಮಹಡಿಯಲ್ಲಿ ಇದ್ದೆವು. ಇದು ಭೂಕಂಪನ ಎಂದು ತಿಳಿದುಕೊಳ್ಳಲು ನಮಗೆ ಸ್ವಲ್ಪ ಸಮಯ ಹಿಡಿಯಿತು. ನಾವೆಲ್ಲ ಭಯಭೀತರಾದರೂ ಜಪಾನಿಯರು ಸ್ವಲ್ಪವೂ ಕದಲಲಿಲ್ಲ!!ʼʼಎಂದು ಪೋಸ್ಟ್‌ನಲ್ಲಿ ರಾಜಮೌಳಿ ಮತ್ತು ಶೋಬು ಅವರನ್ನು ಟ್ಯಾಗ್ ಮಾಡಿದ್ದಾರೆ.

ಈ ಪೋಸ್ಟ್‌ಗೆ ಫ್ಯಾನ್ಸ್‌ ಕೂಡ ʻʻಮೂವರು ಸುರಕ್ಷಿತವಾಗಿದ್ದರೆ ಸಾಕುʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಭೂಕಂಪ ಮುಂದುವರಿಯಬಹುದು, ಆದ್ದರಿಂದ ದಯವಿಟ್ಟು ಜಾಗರೂಕರಾಗಿರಿʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: IPL 2024: ಮೊಹಮ್ಮದ್ ಶಮಿ ಬದಲಿಗೆ ಗುಜರಾತ್​ ಸೇರಿದ ಸಂದೀಪ್ ವಾರಿಯರ್

ಮಹೇಶ್‌ ಬಾಬು ಸಿನಿಮಾ ಬಗ್ಗೆ ಜಪಾನ್‌ನಲ್ಲಿ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಜಮೌಳಿ!

ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು.

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದರು.

ಸದ್ಯ ಚಿತ್ರಕ್ಕೆ ʼಎಸ್‌.ಎಸ್‌.ಬಿ.ಎಂ. 29ʼ (SSMB 29) ಎನ್ನುವ ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಮೊದಲ ಬಾರಿಗೆ ಇಬ್ಬರು ಚಿತ್ರಕ್ಕಾಗಿ ಒಂದಾಗುತ್ತಿರುವುದು ಕೂಡ ನಿರೀಕ್ಷೆ ಹೆಚ್ಚಲು ಮತ್ತೊಂದು ಮುಖ್ಯ ಕಾರಣ.

Continue Reading
Advertisement
Rajasthan Royals
ಪ್ರಮುಖ ಸುದ್ದಿ5 mins ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

SBI Debit Cards
ವಾಣಿಜ್ಯ7 mins ago

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

Rishabh Pant -IPL 2024
ಕ್ರೀಡೆ39 mins ago

Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

Parliament Flashback
ಕರ್ನಾಟಕ1 hour ago

Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

Lok Sabha Election 2024 HD Kumaraswamy to file nomination for Mandya Lok Sabha seat on April 4
ಕರ್ನಾಟಕ1 hour ago

Lok Sabha Election 2024: ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆ ಯಶಸ್ವಿ; ಏ. 4ಕ್ಕೆ ಹೆಚ್ಡಿಕೆ ನಾಮಪತ್ರ ಸಲ್ಲಿಕೆ

IPL 2024- Jayadev Unadkat
ಕ್ರೀಡೆ1 hour ago

IPL 2024 : ಐಪಿಎಲ್ ಇತಿಹಾಸದಲ್ಲಿ ವಿಭಿನ್ನ ಸಾಧನೆ ಮಾಡಿದ ಎಸ್​ಆರ್​​ಎಚ್​​ ಬೌಲರ್​ ಉನಾದ್ಕಟ್​

bengaluru dc
ಬೆಂಗಳೂರು2 hours ago

Hindu Temple: ಜಾತ್ರೆ, ಉತ್ಸವಗಳಲ್ಲಿ ಹಿಂದುಯೇತರರ ಅಂಗಡಿಗೆ ಅನುಮತಿ ನೀಡಬೇಡಿ; ಜಿಲ್ಲಾಧಿಕಾರಿಗೆ ಮನವಿ

minister Lakshmi hebbalkar latest statement
ಬೆಳಗಾವಿ2 hours ago

Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

Chikkaballapura lok sabha constituency congress ticket aspirants Sivasankar Reddy Veerappa Moily and Raksha Ramayya
Lok Sabha Election 20242 hours ago

Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ!

Karnataka Weather
ಮಳೆ2 hours ago

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20247 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20248 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌