Drug peddler ಬಂಧನ! ₹20 ಲಕ್ಷ ಮೌಲ್ಯದ ಡ್ರಗ್ಸ್‌ ವಶ - Vistara News

ಕ್ರೈಂ

Drug peddler ಬಂಧನ! ₹20 ಲಕ್ಷ ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರಿನಲ್ಲಿ ಡ್ರಗ್ಸ್‌ ಜಾಲದ ಕಾರ್ಯಾಚರಣೆ ಅವ್ಯಾಹತವಾಗಿದೆ. ಮಂಗಳವಾರ ಈ ಜಾಲದ ಇಬ್ಬರನ್ನು ಬಂಧಿಸಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಡ್ರಗ್ ಪೆಡ್ಲರ್‌ ಗಳನ್ನು ಬಂಧಿಸಲಾಗಿದೆ. ಅವರಿಂದ 20 ಲಕ್ಷ ರೂ. ಬೆಲೆ ಬಾಳುವ ಎಂ.ಡಿ.ಎಂ.ಎ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಸಿಬಿಯ ಮಾದಕ ವಸ್ತು ನಿಗ್ರಹ ದಳ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ತಂಡವು ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೇರಳ ರಾಜ್ಯದಿಂದ ಕಡಿಮೆ ಬೆಲೆಗೆ ಎಂ.ಡಿ.ಎಂ.ಎ ಹರಳುಗಳನ್ನು ಖರೀದಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರತಿ ಗ್ರಾಂ ಗೆ ಸುಮಾರು ₹8 ರಿಂದ ₹10 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಹೆಚ್ಚಿನ ಬೆಲೆಗೆ ಈ ಮಾದಕ ವಸ್ತಗಳನ್ನು ಮಾರಾಟ ಮಾಡಿ ಅಕ್ರಮವಾಗಿ ಹೆಚ್ಚು ಹಣ ಸಂಪಾದಿಸುತ್ತಿದ್ದರೆಂದು ತಿಳಿದುಬಂದಿತ್ತು.

ಈ ಹಿನ್ನೆಲೆಯಲ್ಲಿ ಸಿ.ಸಿ.ಬಿ ಅಧಿಕಾರಿಗಳು ತನಿಖೆ ಆರಂಭಿಸಿದರು. ಮಾದಕ ವಸ್ತುಗಳ ಮಾರಾಟ/ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿತ್ತು. ಈ ಪ್ರಕರಣದ ವಿರುದ್ಧ ತನಿಖೆ ಮುಂದುವರಿದಿದ್ದು ಸದ್ಯ ಇಬ್ಬರು ಅಂತರ್ ರಾಜ್ಯ ಡ್ರಗ್ಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಹಾಗೂ ಮಾದಕ ವಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಸಿ.ಸಿ.ಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

ಇದನ್ನೂ ಓದಿ: ಡ್ರಗ್ಸ್‌ ಸೇವನೆ, ರೇವ್‌ ಪಾರ್ಟಿ ಆರೋಪ, ಪಬ್ ಮೇಲೆ ಪೊಲೀಸರ ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

Hassan Pen Drive Case: ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ. ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Hassan Pen Drive Case does not work as a discharge petal says DK Shivakumar
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

10 ದಿನದ ಮುಂಚೆ ದೂರು ಕೊಡಬೇಕಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಎಚ್‌ಡಿಕೆ ವಿರುದ್ಧ ಏಕವಚನ ಪ್ರಯೋಗ

ಪಕ್ಷದಿಂದ ವಜಾ ಮಾಡಲಿ, ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ಈ ಅಮಾನತಿನ ಬಗ್ಗೆ ರಾಜಕಾರಣದಲ್ಲಿ ನನಗೂ ಗೊತ್ತಿದೆ. ನನ್ನ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯೋ ಕೊಡು‌. ಕರೆ ಕೊಡಬೇಕು ನೀನು‌. ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌.ಡಿ. ಎಂದರೆ ಏನು? ಕುಟಂಬ ಅಲ್ಲವೆಂದರೆ ಹೇಗೆ?

ಈಗ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಕುಟುಂಬ ಅಲ್ಲ ಅಂತ ಹೇಳಿದರೆ ಹೇಗೆ ಒಪ್ಪಲು ಆಗುತ್ತದೆ? ಎಚ್‌.ಡಿ. ಎಂದರೆ ಏನು? ಎಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ‌ ಮಗ ಎಂದಲ್ಲವೇ? ಎಚ್.ಡಿ. ಕುಮಾರಸ್ವಾಮಿ ಅಂದರೂ ಹಾಗೇ ಎಂದು ಡಿಕೆಶಿ ಹೇಳಿದರು.

ಭಗವಂತ ಇದನ್ನು ಕ್ಷಮಿಸಲ್ಲ

ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಬಿಜೆಪಿಯವರ ಸ್ಟ್ಯಾಂಡ್ ಹೇಳಲಿ

ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಲ್ಹಾದ್‌ ಜೋಶಿ, ಸುನೀಲ್ ಕುಮಾರ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಯಾಕೆ ಮಾತನಾಡುತ್ತಿಲ್ಲ. ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ಹೇಳುತ್ತಾರೆ. ಅಶೋಕ್ ಬೆನ್ನು ಮೂಳೆ ಇಲ್ಲದ ನಾಯಕ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್. ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂಬುದಾಗಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Continue Reading

ಪ್ರಮುಖ ಸುದ್ದಿ

Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

Maoists killed: ಹೆಚ್ಚಾಗಿ ನಕ್ಸಲೀಯರ ಓಡಾಟವಿರುವ ನಾರಾಯಣಪುರ-ಕಂಕೇರ್ ಗಡಿಯಲ್ಲಿರುವ ಅಬುಜ್ಮದ್ ಕಾಡಿನಲ್ಲಿ ಈ ಘರ್ಷಣೆ ನಡೆಯಿತು. ಅಲ್ಲಿ ಮೀಸಲು ಪೊಲೀಸ್ ಮಹಾನಿರ್ದೇಶನಾಲಯ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಮಂಗಳವಾರ ಬೆಳಿಗ್ಗೆ ಶಂಕಿತ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿದರು.

VISTARANEWS.COM


on

maoists killed bastar
Koo

ಹೊಸದಿಲ್ಲಿ:‌ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ (Security forces) ನಡೆದ ಗುಂಡಿನ ಚಕಮಕಿಯಲ್ಲಿ (encounter) ಕನಿಷ್ಠ ಏಳು ಮಾವೋವಾದಿಗಳು (Maoists killed) ಹತರಾಗಿದ್ದಾರೆ. ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯ ನಂತರ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಏಳು ಮಾವೋವಾದಿಗಳ ಮೃತದೇಹಗಳು ಪತ್ತೆಯಾಗಿವೆ.

ಹೆಚ್ಚಾಗಿ ನಕ್ಸಲೀಯರ ಓಡಾಟವಿರುವ ನಾರಾಯಣಪುರ-ಕಂಕೇರ್ ಗಡಿಯಲ್ಲಿರುವ ಅಬುಜ್ಮದ್ ಕಾಡಿನಲ್ಲಿ ಈ ಘರ್ಷಣೆ ನಡೆಯಿತು. ಅಲ್ಲಿ ಮೀಸಲು ಪೊಲೀಸ್ ಮಹಾನಿರ್ದೇಶನಾಲಯ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಮಂಗಳವಾರ ಬೆಳಿಗ್ಗೆ ಶಂಕಿತ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿದರು.

“ನಾರಾಯಣಪುರ-ಕಂಕೇರ್ ಗಡಿ ಪ್ರದೇಶದ ಅಬುಜ್ಮದ್‌ನಲ್ಲಿ ಇಂದು ಬೆಳಿಗ್ಗೆಯಿಂದ ಡಿಆರ್‌ಜಿ ಮತ್ತು ಎಸ್‌ಟಿಎಫ್ ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ. “ಎಲ್ಲಾ ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಎನ್‌ಕೌಂಟರ್ ಇನ್ನೂ ನಡೆಯುತ್ತಿದೆ. ಸಾವುನೋವುಗಳ ಅಂತಿಮ ಸಂಖ್ಯಯನ್ನು ಈಗ ಹೇಳಲು ಆಗದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳು ಹತರಾದ ಕೆಲವು ದಿನಗಳ ನಂತರ ಈ ಕಾರ್ಯಾಚರಣೆ ನಡೆದಿದೆ. ಅವರಲ್ಲಿ ಹಿರಿಯ ಮಾವೋವಾದಿ ನಾಯಕರಾದ ಶಂಕರ್ ರಾವ್ ಮತ್ತು ಲಲಿತಾ ಮೆರವಿ ಅವರ ತಲೆಯ ಮೇಲೆ ₹8 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು. ಇದಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಕ್ಸಲರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ್ದು, ಸದ್ಯದಲ್ಲೇ ಛತ್ತೀಗಢ ಮತ್ತು ಭಾರತ ನಕ್ಸಲ್‌ ಮುಕ್ತವಾಗಲಿದೆ ಎಂದು ಹೇಳಿದ್ದರು.

ಛತ್ತೀಸ್‌ಗಢವು ಹಲವು ದಶಕಗಳಿಂದ ನಕ್ಸಲೈಟ್‌, ಮಾವೋವಾದಿಗಳ ಭೀತಿ ಎದುರಿಸುತ್ತಿದೆ. ವಿಶೇಷವಾಗಿ ಬಸ್ತಾರ್ ಪ್ರದೇಶವು ನಕ್ಸಲ್ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದೆ. ಇಲ್ಲಿ ಆಗಾಗ ಹಿಂಸಾಚಾರ ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ ನಡೆಯುತ್ತಲೇ ಇರುತ್ತದೆ. ನಕ್ಸಲರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವುದು, ಸ್ಥಳೀಯ ಅಭಿವೃದ್ಧಿಗೆ ಆದ್ಯತೆ ನೀಡುವುದು ಮತ್ತು ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಆದಾಗ್ಯೂ ಈ ಪ್ರಯತ್ನಗಳ ಹೊರತಾಗಿಯೂ ರಾಜ್ಯದಲ್ಲಿ ನಕ್ಸಲ್ ಹಾವಳಿ ಮುಂದುವರಿದಿದೆ.

ಇದನ್ನೂ ಓದಿ: Kanker Encounter: ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Continue Reading

ಕ್ರೈಂ

Hassan Pen Drive Case: ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

Hassan Pen Drive Case: ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದ್ದಾರೆ.

VISTARANEWS.COM


on

Hassan Pen Drive Case will tell Rakesh Siddaramaiah died history says HD Kumaraswamy
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್‌ಡಿಕೆ ಎಳೆದು ತಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಲವು ವಿಷಯಗಳಿವೆ, ಎಲ್ಲವನ್ನೂ ಹೇಳುವೆ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಹಲವು ವಿಷಯಗಳಿವೆ. ಅದನ್ನು ನಾನು ಹೇಳುತ್ತೇನೆ. ಮಹಾನ್‌ ನಾಯಕ ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾನೆ. ಇದರ ಬಗ್ಗೆಯೂ ನಾವು ಚರ್ಚೆ ಮಾಡಬೇಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮಾತೃ ಶಕ್ತಿ ಪರ ನಿಲ್ಲುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್‌ ಶಾ ಅವರು ಪ್ರಜ್ವಲ್‌ ರೇವಣ್ಣ ಬಗ್ಗೆ ಚರ್ಚೆ ಮಾಡಿಲ್ಲ. ಪ್ರಜ್ವಲ್‌ ವಿರುದ್ಧದ ಕ್ರಮ ತೆಗೆದುಕೊಳ್ಳುವ ವಿಷಯವನ್ನು ನಮಗೆ ಬಿಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ನಿಮ್ಮ ಜತೆ ನಾವಿದ್ದೇವೆ

ತಪ್ಪಾಗಿದ್ದರೆ ಶಿಕ್ಷೆಯಾಗಬೇಕೆಂದು ನಾನೇ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಏನಾಗಬೇಕೆಂದು ಚರ್ಚಿಸುತ್ತೇವೆ. ಈ ಬಗ್ಗೆ ಯಾರೂ ಗಾಬರಿಯಾಗಬೇಡಿ, ಆತಂಕ ಬೇಡ. ಯಾವುದೇ ಮಹಿಳೆಯರಿಗೆ ಅನ್ಯಾಯವಾದರೂ ಧ್ವನಿ ಎತ್ತುತ್ತೇವೆ. ನಿಮ್ಮ ಜತೆ ಎಚ್.ಡಿ. ದೇವೇಗೌಡ ಹಾಗೂ ನಾವು ಇದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

Continue Reading

ಕ್ರೈಂ

Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

Hassan Pen Drive Case: ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ತನಿಖಾ ಹೊಣೆ ನೀಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಿಂದ ಮಹಿಳೆಯರಿಗೆ ಸಾಕಷ್ಟು ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.

VISTARANEWS.COM


on

Hassan Pen Drive Case Sexual assault case Prajwal Revanna suspended from JDS
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಜೆಡಿಎಸ್‌ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗಿದೆ. ಪ್ರಜ್ವಲ್‌ ಅವರನ್ನು ಉಚ್ಚಾಟನೆ ಮಾಡುವ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಗಂಭೀರ ಆರೋಪ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಜಿ.ಟಿ. ದೇವೇಗೌಡ, ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ತನಿಖಾ ಹೊಣೆ ನೀಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಿಂದ ಮಹಿಳೆಯರಿಗೆ ಸಾಕಷ್ಟು ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಏಕೆ ಈ ಕ್ರಮ?

ಈಗಾಗಲೇ ಜೆಡಿಎಸ್‌ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಅಲ್ಲದೆ, ಈ ಪ್ರಕರಣ ಈಗ ದೇಶಾದ್ಯಂತ ಸಂಚಲನ ಉಂಟುಮಾಡಿದೆ. ಮೈತ್ರಿ ಪಕ್ಷ ಬಿಜೆಪಿ ಕೂಡ ಇದರಿಂದ ಮುಜುಗರ ಅನುಭವಿಸುತ್ತಿದೆ. ದೇಶದ ಹಲವು ಕಡೆ ಇನ್ನೂ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದಾದರೆ ಬಿಜೆಪಿಗೆ ಇದು ತೀವ್ರ ಇರಿಸುಮುರಿಸನ್ನು ತರುತ್ತದೆ. ಅಲ್ಲದೆ, ವಿಪಕ್ಷಗಳ ಟೀಕೆಯನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳಲು ಪ್ರಜ್ವಲ್ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಜೆಡಿಎಸ್‌ ಬಂದಿದೆ.

ಜೆಡಿಎಸ್‌ ಶಾಸಕರಿಂದ ಹೆಚ್ಚಿತ್ತು ಒತ್ತಡ

ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಜೆಡಿಎಸ್‌ನ ಹಲವು ಶಾಸಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಈ ಸಂಬಂಧ ಶಾಸಕರಾದ ಸಮೃದ್ಧಿ ಮಂಜುನಾಥ್‌ ಹಾಗೂ ಶರಣಗೌಡ ಕುಂದಕೂರ ಅವರು ಎಚ್.ಡಿ. ದೇವೇಗೌಡರಿಗೆ ಬಹಿರಂಗ ಪತ್ರ ಬರೆದು ಕೋರಿದ್ದರು.

ಸಮೃದ್ಧಿ ಮಂಜುನಾಥ್‌ ಪತ್ರದಲ್ಲೇನಿತ್ತು?

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ.

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ??

ಪಕ್ಷದ ರಾಷ್ಟ್ರಾಧ್ಯಕ್ಷರು ಎಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್‌ ಅವರು ಮುಖ್ಯವೋ ತೀರ್ಮಾನಿಸಬೇಕಿದೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. ನಿಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಸಮೃದ್ಧಿ ಮಂಜುನಾಥ್ ಬರೆದುಕೊಂಡಿದ್ದಾರೆ.

Continue Reading
Advertisement
T20 World Cup 2024
ಕ್ರೀಡೆ6 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್​, ದಕ್ಷಿಣ ಆಫ್ರಿಕಾ

America Shootout
ವಿದೇಶ16 mins ago

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

Hassan Pen Drive Case does not work as a discharge petal says DK Shivakumar
ರಾಜಕೀಯ1 hour ago

Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

Toyota Kirloskar Motor Introduces New G-AT Grade of Toyota Rumion
ದೇಶ1 hour ago

Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

Rohit Sharma Birthday
ಕ್ರೀಡೆ1 hour ago

Rohit Sharma Birthday: ಬೌಲರ್​ ಆಗಿದ್ದ ರೋಹಿತ್​ ಹಿಟ್​ಮ್ಯಾನ್​ ಆಗಿದ್ದೇಗೆ?; ಕ್ರಿಕೆಟ್​ ಜರ್ನಿಯೇ ರೋಚಕ

covishield vaccine
ದೇಶ2 hours ago

Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Supreme Court
ದೇಶ2 hours ago

Supreme Court: 14 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿ, ಬಳಿಕ ನಿರ್ಧಾರ ವಾಪಸ್‌ ಪಡೆದ ಸುಪ್ರೀಂ

Ballari City MLA Nara Bharat Reddy Election Campaign for Ballari Lok Sabha Constituency Congress Candidate E Tukaram
ಬಳ್ಳಾರಿ2 hours ago

Lok Sabha Election 2024: ಬಳ್ಳಾರಿಗೆ ಕೈಗಾರಿಕೆಗಳನ್ನು ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು: ನಾರಾ ಭರತ್ ರೆಡ್ಡಿ

maoists killed bastar
ಪ್ರಮುಖ ಸುದ್ದಿ2 hours ago

Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

Labour Day 2024
ಮನಿ ಗೈಡ್2 hours ago

Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ10 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌