ಭಾರೀ ಮಳೆ-ಬಿರುಗಾಳಿಗೆ ಕೊಪ್ಪಳದಲ್ಲಿ 5,599 ಪ್ರದೇಶದ ಕೃಷಿ ಬೆಳೆ ಹಾನಿ - Vistara News

ಕರ್ನಾಟಕ

ಭಾರೀ ಮಳೆ-ಬಿರುಗಾಳಿಗೆ ಕೊಪ್ಪಳದಲ್ಲಿ 5,599 ಪ್ರದೇಶದ ಕೃಷಿ ಬೆಳೆ ಹಾನಿ

ಏಪ್ರಿಲ್ ತಿಂಗಳಲ್ಲಿ ಸುರಿದ ಗಾಳಿ ಮಳೆಗೆ ಕೊಪ್ಪಳ ಜಿಲ್ಲೆಯಲ್ಲಿ ಬರೋಬ್ಬರಿ ಸುಮಾರು 6 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೊಳಗಾಗಿದೆ ಎಂದು ಜಿಲ್ಲಾಡಳಿತ ಸಮೀಕ್ಷೆ ನಡೆಸಿ ಅಂದಾಜಿಸಿದೆ. ಮಳೆ ಗಾಳಿಯಿಂದ ಕಟಾವು ಹಂತದಲ್ಲಿರುವ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ.

VISTARANEWS.COM


on

ಕೊಪ್ಪಳ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ವಾಯುಭಾರ ಕುಸಿತದಿಂದ ಕೊಪ್ಪಳದಲ್ಲಿ ಕಳದೆ ಎರಡು ಮೂರು ದಿನಗಳಿಂದ ಭಾರಿ ಮಳೆ ಆಗುತ್ತಿದೆ.ಈ ಭಾರಿ ಮಳೆಯಿಂದಾಗಿ ಹಲವಾರು ಬೆಳೆಗಳು ನಾಶವಾಗಿವೆ. ಮಳೆಯಿಂದ ಆದ ಬೆಳೆ ನಾಶದಿಂದ ಕೃಷಿಕರು ಕಣ್ಣಿರು ಸುರಿಸುವಂತೆ ಆಗಿದೆ. ಈ ಹಾನಿಯ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಏಪ್ರಿಲ್‌ನಲ್ಲಿ ಸುರಿದ ಗಾಳಿ ಮಳೆಗೆ ಕೊಪ್ಪಳ ಜಿಲ್ಲೆಯಲ್ಲಿ ಬರೋಬ್ಬರಿ ಸುಮಾರು 6 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೊಳಗಾಗಿದೆ ಎಂದು ಜಿಲ್ಲಾಡಳಿತ ಸಮೀಕ್ಷೆ ನಡೆಸಿ ಅಂದಾಜಿಸಿದೆ. ಮಳೆ ಗಾಳಿಯಿಂದ ಕಟಾವು ಹಂತದಲ್ಲಿರುವ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ತುಂಗಭದ್ರಾ ಎಡದಂಡೆ ನಾಲೆಯ ವ್ಯಾಪ್ತಿಯಲ್ಲಿ 5,599 ಹೆಕ್ಟರ್ ಪ್ರದೇಶ ಹಾನಿಗೊಳಗಾಗಿದೆ. ಇದರ ಜತೆಗೆ 22.4 ಹೆಕ್ಟೇರ್‌ ಪ್ರದೇಶದಲ್ಲಿ ಬಾಳೆ, 11.74 ಹೆಕ್ಟೇರ್ ನುಗ್ಗೆ, 20.39 ಹೆಕ್ಟೇರ್ ವೀಳ್ಯೆದೆಲೆ ಹಾಗೂ 5.4 ಹೆಕ್ಟೇರ್ ಪ್ರದೇಶದಲ್ಲಿ ಪಪ್ಪಾಯಿ ಬೆಳೆಯು ಹಾನಿಗೊಳಗಾಗಿದೆ ಎಂದು ಸಮೀಕ್ಷೆಯಿಂದ‌ ಅಂದಾಜಿಸಲಾಗಿದೆ.

ಈ ಕುರಿತಂತೆ ಮತ್ತಷ್ಟು ಮಾಹಿತಿ ನೀಡಿರುವ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಜಿಲ್ಲೆಯಲ್ಲಿ 5,599.90 ಹೆಕ್ಟರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾಗೂ 76.82 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಯಮದ ಪ್ರಕಾರ 33% ಬೆಳೆ ನಾಶವಾಗಿದ್ದರೆ ಮಾತ್ರ ಅವರಿಗೆ ಪರಿಹಾರ ನೀಡಲಾಗುವುದು.

ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಯಮದ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 742 ಹೆಕ್ಟೇರ್ ಪ್ರದೇಶಕ್ಕೆ ಪರಿಹಾರ ನೀಡಬೇಕು. ಏಪ್ರಿಲ್ ಅಂತ್ಯದವರೆಗಿನ ಬೆಳೆಹಾನಿ ಕುರಿತು ಸಮೀಕ್ಷೆ ನಡೆಸಲಾಗಿದ್ದು ತಂತ್ರಾಂಶದಲ್ಲಿ ಎಂಟ್ರಿ ಮಾಡಿ ಅವರಿಗೆ ಪರಿಹಾರ ನೀಡಬಹುದಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಮಳೆಯಿಂದ ನೆಲಕ್ಕುರುಳಿದ ಬೆಳೆ; ನೀರು ತುಂಬಿದ ಗುಂಡಿಗೆ ಬಿದ್ದು ಬಾಲಕಿ ಸಾವು – 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kanthesh : ಅಶ್ಲೀಲ ವಿಡಿಯೊ ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದ ಈಶ್ವರಪ್ಪ ಪುತ್ರ ಕಾಂತೇಶ್​​

Kanthesh : ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

VISTARANEWS.COM


on

Kantesh
Koo

ಬೆಂಗಳೂರು: ಕರ್ನಾಟkದಲ್ಲಿ ಈಗ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಚರ್ಚೆ ಜೋರಾಗಿ ನಡೆಯುತ್ತಿದೆ. ಲೈಂಗಿಕ ಹಗರಣವೊಂದು ಬಯಲಾದ ಬಳಿಕ ಈ ವಿಷಯ ಗಂಭೀರ ಎನಿಸಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎಂದು ಹೇಳಲಾದ ಅಶ್ಲೀಲ ವಿಡಿಯೊ ಹರಿದಾಡಿ ಕೇಸು ದಾಖಲಾಗಿ, ತನಿಖಾ ತಂಡ ರಚನೆಯಾದ ಬಳಿಕ ಚರ್ಚೆಗೆ ಸಾಕಷ್ಟು ವಿಷಯಗಳು ಸಿಕ್ಕಿವೆ. ಇವೆಲ್ಲದರ ನಡುವೆ ಬಿಜೆಪಿಯ ರಾಷ್ಟ್ರೀಯ ನಾಯಕರ ಮಾತಿಗೆ ಸೊಪ್ಪು ಹಾಕದೇ ಪಕ್ಷೇತರರಾಗಿ ಶಿವಮೊಗ್ಗ ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ (Kanthesh )​ ಕೂಡ ತಮಗೆ ಸಂಬಂಧಿಸಿದ ತಮ್ಮ ಮಾನ ಹಾನಿ ಮಾಡುವ ಯಾವುದೇ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದಿದ್ದಾರೆ. ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

ಅರ್ಜಿಯಲ್ಲಿ ಏನಿದೆ?:

ಲೋಕಸಭೆ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ಕೆಲ ಮಾಧ್ಯಮಗಳು ನನ್ನ ಘನತೆ, ಗೌರವ ಮತ್ತು ಮಾನಹಾನಿ ಮಾಡಲು ಪ್ರಯತ್ನಿಸುತ್ತಿವೆ ಎಂಬ ಅನುಮಾನಗಳಿವೆ. ನನ್ನನ್ನೇ ನಕಲು ಮಾಡಿದ ಅಶ್ಲೀಲ ಪೋಟೊ, ವಿಡಿಯೊ ಮತ್ತು ಅಡಿಯೊಗಳನ್ನು ಪ್ರಸಾರ ಮಾಡಲು ಯತ್ನಿಸುತ್ತಿವೆ. ಒಂದೊಮ್ಮೆ ಅಂತಹ ಅಕ್ಷೇಪಾರ್ಹ ವಿಡಿಯೊ. ಫೋಟೊಗಳು ಪ್ರಸಾರಗೊಂಡರೆ ಅಥವಾ ಪ್ರಕಟವಾದರೆ ನನ್ನ ಮಾನಹಾನಿಯಾಗುತ್ತದೆ. ಆದ್ದರಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ ಆದೇಶ ನೀಡಬೇಕು’ ಎಂದು ಕಾಂತೇಶ್ ದಾವೆಯಲ್ಲಿ ಕೋರಿದ್ದಾರೆ.

ಯಡಿಯೂರಪ್ಪ ವಿರುದ್ಧ ಬಂಡೆದ್ದ ಅಪ್ಪ, ಮಗ

ಮಾಜಿ ಸಚಿವ ಹಾಗೂ ಬಿಜೆಪಿ ಕಟ್ಟಾಳು ಕೆಎಸ್​ ಈಶ್ವರಪ್ಪ ಪುತ್ರ ಕಾಂತೇಶ್ ಅವರು ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ಹಾಗೂ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ಕುಟುಂಬ ರಾಜಕಾರಣ ಎಂದು ಹೇಳಿದ್ದಾರೆ. ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.

ಇದನ್ನೂಓದಿ: Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದೀಗ ಪಕ್ಷೇತರವಾಗಿ ಕಣಕ್ಕಿಳಿದಿರುವ ಈಶ್ವರಪ್ಪ ರಾಘವೇಂದ್ರ ಅವರನ್ನು ಸೋಲಿಸಬೇಕೆಂದು ಪಣತೊಟ್ಟಿದ್ದಾರೆ.

Continue Reading

ಪ್ರಮುಖ ಸುದ್ದಿ

Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

Hassan Pen Drive Case: ಅಶ್ಲೀಲ ವಿಡಿಯೊ ಹಂಚಿಕೆ ಹಿಂದೆ ಮಹಾ ಸಂಚು ನಡೆದಿದೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸ್ಫೋಟಕ ಮಾಹಿತಿ ಹೊರಹಾಕಿದ್ದು, ವಿಡಿಯೊಗಳು ಅಪ್‌ಲೋಡ್‌ ಆಗಿದ್ದೆಲ್ಲಿ ಎಂಬ ಬಗ್ಗೆ ತಿಳಿಸಿದ್ದಾರೆ.

VISTARANEWS.COM


on

Hassan Pen drive Case
Koo

ಹುಬ್ಬಳ್ಳಿ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಸಂಸದ ಪ್ರಜ್ವಲ್‌ ರೇವಣ್ಣಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಹೊಸ ಬಾಂಬ್‌ ಸಿಡಿಸಿದ್ದು, ಅಶ್ಲೀಲ ವಿಡಿಯೊ ಹಂಚಿಕೆ ಹಿಂದೆ ಮಹಾ ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ. ಇನ್ನು ಪೆನ್‌ಡ್ರೈವ್‌ನಲ್ಲಿ ವಿಡಿಯೊಗಳು ಅಪ್‌ಲೋಡ್‌ ಆಗಿದ್ದೆಲ್ಲಿ ಎಂಬ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ಏ.21ರಂದು ರಾತ್ರಿ ಪೆನ್‌ಡ್ರೈವ್‌ ಮೂಲಕ ಅಶ್ಲೀಲ ವಿಡಿಯೊಗಳನ್ನು ವಾಟ್ಸ್ಆ್ಯಪ್‌ ಸೇರಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಕೋಡ್‌ ಮಾಡಿದ್ದಾರೆ. ಸಿಕ್ಕಸಿಕ್ಕಲ್ಲಿ ವಿಡಿಯೊಗಳನ್ನು ಅಪ್‌ಲೋಡ್‌ ಮಾಡಲು ಸಾಮಾನ್ಯರಿಂದ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ನನಗೆ ಬಂದಿರುವ ಮಾಹಿತಿ ಪ್ರಕಾರ, ಜಗತ್ತಿನಾದ್ಯಂತ ಈ ವಿಡಿಯೊಗಳಲ್ಲಿ ಹರಿಬಿಡಲು ದುಬೈನಲ್ಲಿ ಪ್ರಯತ್ನಿಸಲಾಗಿದೆ. ಅಲ್ಲಿಂದ ನೇರವಾಗಿ ಇಡೀ ದೇಶ, ವಿದೇಶಗಳಿಗೆ ವಿಡಿಯೊ ಹರಿಬಿಡಲು ಹೋಗಿದ್ದಾರೆ. ಆದರೆ, ಅವರ ಪ್ಲ್ಯಾನ್‌ ವಿಫಲವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದು, ಇಲ್ಲಿ ಪೆನ್‌ಡ್ರೈವ್‌, ವಾಟ್ಸ್ಆ್ಯಪ್‌ ಮೂಲಕ ಹಂಚಿಕೊಂಡಿದ್ದಾರೆ. ಫೋಟೊ, ವಿಡಿಯೊಗಳಲ್ಲಿ ಹೆಣ್ಣು ಮಕ್ಕಳ ಫೋಟೊ, ಮುಖಗಳನ್ನು ಬ್ಲರ್‌ ಮಾಡಬಹುದಿತ್ತು. ಇದರಿಂದ ಆ ಕುಟುಂಬಗಳ ಪರಿಸ್ಥಿತಿ ಏನಾಗಬಹುದು. ಇದರಲ್ಲಿ ತಪ್ಪು ಮಾಡಿದ್ದವರ ಹಿನ್ನೆಲೆ ಬಹಿರಂಗಪಡಿಸಿಲ್ಲ. ಆದರೆ, ಮಹಿಳೆಯರ ಗೌರವ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಆರೋಪಿಸಿದ್ದಾರೆ.

ಇನ್ನು ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಬಗ್ಗೆ ಸಂದರ್ಶನ ನಡೆದಿದೆ. ಅವರ ಹಿನ್ನೆಲೆ ಏನು ಎಂದು ತಿಳಿಯಬೇಕು. 2019ರ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡಿದಾಗ ಅಕ್ರಮ ಆಸ್ತಿ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ದೇವರಾಜೇಗೌಡ ನ್ಯಾಯಾಂಗ ಹೋರಾಟ ಮಾಡುತ್ತಿದ್ದಾರೆ. ಈಗ ಕಾರ್ತಿಕ್‌ ಎಂಬಾತನಿಂದ ಯಾರಿಗೂ ಕ್ಯಾಸೆಟ್‌ ಕೊಟ್ಟಿರಲಿಲ್ಲ ಎಂದು ಹೇಳಿಸಿದ್ದಾರೆ. ಆದರೆ, ಕಾರ್ತೀಕ್‌ ಎಂಬಾತನೇ ತನಗೆ ಕ್ಯಾಸೆಟ್‌ ನೀಡಿದ್ದ ಎಂದು ದೇವರಾಜೇಗೌಡ ಹೇಳಿದ್ದಾರೆ. ಇದರಿಂದಲೇ ಗೊತ್ತಾಗುತ್ತದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದಲೇ ಖೆಡ್ಡಾ ತೋಡಲಾಗಿದೆ. ಇದರ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪವನ್ನು ಮಾಡಿದರು.

ಆ ಸಂತ್ರಸ್ತೆಯನ್ನು ಯಾರು ಬೆಂಗಳೂರಿಗೆ ಕರೆದುಕೊಂಡು ಬಂದರು? ಇನ್ನು ದೂರಿನ ಅನ್ವಯ ನೋಡುವುದಾದರೆ ಆ ಹೆಣ್ಣು ಮಗಳು 2012-13 ರಲ್ಲಿ ರೇವಣ್ಣ ಮನೆಯಲ್ಲಿ ಕೆಲಸಕ್ಕೆ ಇದ್ದಳು. ಜತೆಗೆ ಆಕೆ ಸಂಬಂಧಿ ಸಹ ಆಗಿದ್ದಳು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಈ ಘಟನೆ ನಡೆದಿರುವುದು 5 – 6 ವರ್ಷಗಳ ಹಿಂದೆ ನಡೆದಿರುವುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಈ ಐದಾರು ವರ್ಷ ಕಂಪ್ಲೇಂಟ್‌ ಕೊಡದೆ ದೂರುದಾರರು ಏನು ಮಾಡುತ್ತಿದ್ದರು? ಈಗ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ 5 ದಿನ ಬಾಕಿ ಇರುವಾಗ ಬಿಡುಗಡೆ ಮಾಡಿದ್ದರ ಹಿಂದಿನ ಉದ್ದೇಶ ಏನು? ಇದರ ಹಿಂದೆ ಯಾವ ಮಹಾನ್‌ ನಾಯಕರು ಇದ್ದಾರೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಹಾಗಂತ ಈ ಪೆನ್‌‌ ಡ್ರೈವ್ ಬಿಡುಗಡೆಯಾದ ಬಳಿಕ ಯಾರೂ ಎಲ್ಲಿಯೂ ಪ್ರತಿಭಟನೆಯನ್ನು ಮಾಡಿಸಲಿಲ್ಲ. ಬದಲಾಗಿ ನಮ್ಮ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಹಿನ್ನಡೆ ತರಲು ಕಸರತ್ತು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಅಂದರೆ ಏಪ್ರಿಲ್‌ 28ರ ಬಳಿಕ 2012-13ರ ಪ್ರಕರಣದ ಕಂಪ್ಲೇಂಟ್‌ ಪಡೆದು, ಎಫ್‌ಐಆರ್‌ ಮಾಡಿ, ಬಳಿಕ ಎಸ್‌ಐಟಿಗೆ ಈಗ ವರ್ಗಾವಣೆ ಮಾಡಿದ್ದಾರೆ. ವಿಪರ್ಯಾಸವೆಂದರೆ ಸಾರ್ವಜನಿಕರಿಂದ ಯಾವುದೇ ದೂರು ಬರದೇ ಎಸ್‌ಐಟಿಯನ್ನು ರಚನೆ ಮಾಡಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನಮ್ಮ ಕುಟುಂಬದ ತೇಜೋವಧೆಯೇ ಇದರ ಉದ್ದೇಶ!

ಈ ಪ್ರಕರಣವನ್ನು ಗಮನಿಸಿದಾಗ ಸರ್ಕಾರಕ್ಕೆ ನಮ್ಮ ಕುಟುಂಬದ ವರ್ಚಸ್ಸನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಎಂದಿದೆ ಎಂಬುದು ಗೊತ್ತಾಗುತ್ತದೆ. ಇಲ್ಲಿ ಇವರಿಗೆ ಮಹಿಳೆಯರನ್ನು ರಕ್ಷಣೆ ಮಾಡುವುದು ಬೇಕಾಗಿಲ್ಲ. ಈ ಪ್ರಕರಣವನ್ನು ಬಳಸಿಕೊಂಡು ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಜ್ವಲ್‌ ರೇವಣ್ಣ ಅವರ ಫೋಟೊವನ್ನು ಸೇರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಲಾಗುತ್ತಿದೆ. ಈ ಪ್ರಕರಣ ಸಂಬಂಧ ಮೋದಿ ಅವರು ಉತ್ತರ ಕೊಡಬೇಕು ಎಂದು ಅಭಿಯಾನ ಮಾಡಲಾಗುತ್ತಿದೆ. ಮೋದಿಗೂ ಈ ಕೇಸ್‌ಗೂ ಏನು ಸಂಬಂಧ ಇದೆ? ಅವರ ಪಾತ್ರ ಇದರಲ್ಲೇನಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ; ಇಲ್ಲಿದೆ ಕಂಪ್ಲೀಟ್‌ ವಿಡಿಯೊ!

ಈ ಪ್ರಕರಣ ಹೊರಗೆ ಬಂದಾಗ ಸರ್ಕಾರದ ಭಾಗವಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನನ್ನ ಮೇಲೆ ನಿರಂತರವಾಗಿ ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ನಾನು ಈ ಹಿಂದೆ ಹೇಳಿದ್ದ ಪೆನ್‌ಡ್ರೈವ್‌ ಇದೇನಾ ಎಂದು ವ್ಯಂಗ್ಯವಾಗಿ ಕೇಳಿದ್ದಾರೆ. ಆ ಪೆನ್‌ಡ್ರೈವ್‌ ನನ್ನ ಬಳಿ ಇದೆ. ಅದನ್ನು ಯಾವಾಗ ಬಿಡುಗಡೆ ಮಾಡಬೇಕೋ ಆಗ ಮಾಡುತ್ತೇನೆ. ನಾನು ನನ್ನ ಜೀವನದಲ್ಲಿ ಇಂಥ ಪೆನ್‌ಡ್ರೈವ್‌ಗಳನ್ನು ಮಾಡಿಲ್ಲ. ಇಂಥ ಪೆನ್‌ಡ್ರೈವ್‌ಗಳನ್ನು ಮಾಡುವುದು ಅವರ ಸಂಪ್ರದಾಯ. ಅವರು ಈ ಹಿಂದೆ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಹೆಣ್ಣು ಮಕ್ಕಳನ್ನು ಕೂಡಿ ಹಾಕಿಕೊಂಡು ಕೇಸ್‌ ಮಾಡಿದ್ದರಲ್ಲ ಎಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್‌ಡಿಕೆ ಎಳೆದು ತಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಲವು ವಿಷಯಗಳಿವೆ, ಎಲ್ಲವನ್ನೂ ಹೇಳುವೆ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಹಲವು ವಿಷಯಗಳಿವೆ. ಅದನ್ನು ನಾನು ಹೇಳುತ್ತೇನೆ. ಮಹಾನ್‌ ನಾಯಕ ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾನೆ. ಇದರ ಬಗ್ಗೆಯೂ ನಾವು ಚರ್ಚೆ ಮಾಡಬೇಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮಾತೃ ಶಕ್ತಿ ಪರ ನಿಲ್ಲುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್‌ ಶಾ ಅವರು ಪ್ರಜ್ವಲ್‌ ರೇವಣ್ಣ ಬಗ್ಗೆ ಚರ್ಚೆ ಮಾಡಿಲ್ಲ. ಪ್ರಜ್ವಲ್‌ ವಿರುದ್ಧದ ಕ್ರಮ ತೆಗೆದುಕೊಳ್ಳುವ ವಿಷಯವನ್ನು ನಮಗೆ ಬಿಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ನಿಮ್ಮ ಜತೆ ನಾವಿದ್ದೇವೆ

ತಪ್ಪಾಗಿದ್ದರೆ ಶಿಕ್ಷೆಯಾಗಬೇಕೆಂದು ನಾನೇ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಏನಾಗಬೇಕೆಂದು ಚರ್ಚಿಸುತ್ತೇವೆ. ಈ ಬಗ್ಗೆ ಯಾರೂ ಗಾಬರಿಯಾಗಬೇಡಿ, ಆತಂಕ ಬೇಡ. ಯಾವುದೇ ಮಹಿಳೆಯರಿಗೆ ಅನ್ಯಾಯವಾದರೂ ಧ್ವನಿ ಎತ್ತುತ್ತೇವೆ. ನಿಮ್ಮ ಜತೆ ಎಚ್.ಡಿ. ದೇವೇಗೌಡ ಹಾಗೂ ನಾವು ಇದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

Continue Reading

ಪ್ರಮುಖ ಸುದ್ದಿ

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Labour Day: ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.

VISTARANEWS.COM


on

labour Day
Koo

ಬೆಂಗಳೂರು: ಕಾರ್ಮಿಕರು ಯಾವುದೇ ಸಮಾಜ ಅಥವಾ ದೇಶದ ಶಕ್ತಿ. ಅವರಿಂದಲೇ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಕಾರ್ಮಿಕರು ರಾಷ್ಟ್ರೀಯ ಸಂಪತ್ತು. ಹೀಗೆ ಹಲವು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನೆರವಾ ಗುವ ಕಾರ್ಮಿಕರಿಗಾಗಿಯೇ ಒಂದು ದಿನವಿದೆ. ಅದುವೇ ಕಾರ್ಮಿಕರ ದಿನ. ಅಂದರೆ ಮೇ1. ಜಗತ್ತಿನ ಹಲವಾರು ದೇಶಗಳಲ್ಲಿ ಕಾರ್ಮಿಕ ದಿನವನ್ನು (Labour Day ) ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ಸಂದರ್ಭವನ್ನು ‘ಮೇ ದಿನ’ ಅಥವಾ ಕಾರ್ಮಿಕರ ದಿನ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಕೆಲಸ ಮಾಡುವವರಿಗೆ ವಿಶ್ರಾಂತಿ ದಿನವಾಗಿ ಆಚರಿಸಲಾಗುತ್ತದೆ

ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ. ಕಾರ್ಮಿಕ ದಿನವನ್ನು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ವಿಶೇಷ ಸಂದರ್ಭದ ಇತಿಹಾಸ, ಮಹತ್ವ ಅರಿಯೋಣ.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಇತಿಹಾಸ

ಅಂತಾರರಾಷ್ಟ್ರೀಯ ಕಾರ್ಮಿಕ ದಿನದ ಇತಿಹಾಸವು 1889 ರಲ್ಲಿ ಯುರೋಪ್, ಪ್ಯಾರಿಸ್​​ನಲ್ಲಿ ನಡೆದ ಸೋಶಿಯಲಿಸ್ಟ್​ ಪಾರ್ಟಿಗಳ ಮೊದಲ ಸಭೆ (ಇಂಟರ್​ನ್ಯಾಷನಲ್​ ಕಾಂಗ್ರೆಸ್​​) ಮೇ 1 ರಂದು ನಡೆಯಿತು. ಅದನ್ನು ಕಾರ್ಮಿಕರಿಗೆ ಸಮರ್ಪಿಸಲು ಮತ್ತು ಅದನ್ನು ಅಂತರರಾಷ್ಟ್ರೀಯ ಕಾರ್ಮಿಕ ದಿನ ಎಂದು ಘೋಷಣೆ ಮಾಡಲಾಯಿತು. 1886 ರಲ್ಲಿ, ಅಮೆರಿಕದ ಕೆಲವು ಭಾಗಗಳಲ್ಲಿ ಕಾರ್ಮಿಕರು ಗರಿಷ್ಠ ಎಂಟು ಗಂಟೆಗಳ ಕೆಲಸದ ದಿನಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಮುಷ್ಕರದ ಮೂರನೇ ದಿನ ಚಿಕಾಗೋದಲ್ಲಿ ಹಿಂಸಾಚಾರ ಉಂಟಾಯಿತು. ಈ ಘಟನೆಯನ್ನು ‘ದಿ ಹೇಮಾರ್ಕೆಟ್ ಅಫೇರ್’ ಎಂದು ಕರೆಯಲಾಯಿತು. ಇದು ಅಂತರರಾಷ್ಟ್ರೀಯ ಕಾರ್ಮಿಕ ದಿನದ ಸ್ಥಾಪನೆಗೆ ಕಾರಣವಾಯಿತು.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಮಹತ್ವ

ಕಾರ್ಮಿಕರ ಹೋರಾಟ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸುವುದು, ಅವರ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಅವರನ್ನು ಶೋಷಣೆಗೆ ಒಳಗಾಗದಂತೆ ತಡೆಯುವುದು ಕಾರ್ಮಿಕ ದಿನಾಚರಣೆಯ ಉದ್ದೇಶ. ಈ ಸಂದರ್ಭದಲ್ಲಿ, ಕಾರ್ಮಿಕರು ನ್ಯಾಯಯುತ ವೇತನ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗೆ ಒತ್ತಾಯಿಸಿ ಬೀದಿಗಳಲ್ಲಿ ಜಾಥಾ ನಡೆಸುತ್ತಾರೆ. ಮೇ ದಿನದಿಂದ ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಯು ಮಾಡಿದ ಐತಿಹಾಸಿಕ ಹೋರಾಟಗಳು ಮತ್ತು ಲಾಭಗಳನ್ನು ಸ್ಮರಿಸಲಾಗುತ್ತದೆ.

ಇದನ್ನೂ ಓದಿ: Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಧ್ಯೇಯ

ಪ್ರತಿ ವರ್ಷ, ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಆಚರಣೆಗಾಗಿ ಹೊಸ ಥೀಮ್ ಅನ್ನು ಘೋಷಿಸಲಾಗುತ್ತದೆ. ಬದಲಾಗುತ್ತಿರುವ ಹವಾಮಾನದಲ್ಲಿ ಕೆಲಸದಲ್ಲಿ ಸುರಕ್ಷತೆ ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳುವುದು ಈ ವರ್ಷದ ಧ್ಯೇಯ.

ಕಾರ್ಮಿಕರ ದಿನದ ಬಗ್ಗೆ ವಾಸ್ತವಾಂಶಗಳು

ಮೊದಲ ಬಾರಿಗೆ ಯುಎಸ್ ಕಾರ್ಮಿಕ ದಿನವನ್ನು ಸೆಪ್ಟೆಂಬರ್ 5, 1882ರ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ಕೇಂದ್ರ ಕಾರ್ಮಿಕ ಒಕ್ಕೂಟವು ಯೋಜಿಸಿತು. ಕಾರ್ಮಿಕ ಚಳುವಳಿಯನ್ನು ಗೌರವಿಸುವ ದಿನವನ್ನು ಆಯೋಜಿಸುವ ಕಲ್ಪನೆ ಕೆನಡಾದಲ್ಲಿ ಹುಟ್ಟಿತು. 1872 ರಲ್ಲಿ ಮುಷ್ಕರ ನಿರತ ಕಾರ್ಮಿಕರಿಗೆ ಬೆಂಬಲವನ್ನು ತೋರಿಸಲು ಅವರು ‘ಒಂಬತ್ತು ಗಂಟೆಗಳ ಚಳುವಳಿ’ ನಡೆಸಿದರು.

ಒರೆಗಾನ್ 1887 ರಲ್ಲಿ ಕಾರ್ಮಿಕ ದಿನವನ್ನು ಕಾನೂನುಬದ್ಧ ರಜಾದಿನವಾಗಿ ಆಚರಿಸಿದ ಮೊದಲ ದೇಶ . 19ನೇ ಶತಮಾನದಲ್ಲಿ ಅಮೆರಿಕನ್ನರು ವಾರದಲ್ಲಿ ಏಳು ದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ನ್ಯೂಯಾರ್ಕ್ ನಗರದಲ್ಲಿ ಮೊದಲ ಬಾರಿ ಮೆರವಣಿಗೆ ನಡೆಸಿದ ಜಾಗದಲ್ಲಿ ಇನ್ನೂ ಕಾರ್ಮಿಕ ದಿನದ ಮೆರವಣಿಗೆ ಮಾಡಲಾಗುತ್ತದೆ. 1882 ರ ಕಾರ್ಮಿಕ ಮೆರವಣಿಗೆಯ ಉತ್ತರದ 20 ಬ್ಲಾಕ್​​ಗಳಲ್ಲಿನಡೆಯುತ್ತದೆ.

Continue Reading

ಕರ್ನಾಟಕ

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Lok Sabha Election 2024: ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.

VISTARANEWS.COM


on

Prime Minister Narendra Modi wrote a letter to former CM Basavaraj Bommai
Koo

ನವ ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಪತ್ರ ಬರೆದು, ಚುನಾವಣೆಯಲ್ಲಿ (Lok Sabha Election 2024) ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.

ಸುದೀರ್ಘ ಪತ್ರ ಬರೆದಿರುವ ಅವರು, ನೀವು ಮುಖ್ಯಮಂತ್ರಿಯಾಗಿ, ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ, ನೀವು ಶಿಗ್ಗಾವಿಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಮಾಡಿದ್ದೀರಿ, ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಿದ್ದೀರಿ, ಕೋವಿಡ್ ಸಂದರ್ಭದಲ್ಲಿ ನಿಮ್ಮ ಸ್ವಂತ ಮನೆಯನ್ನು ಕೋವಿಡ್ ಕೇಂದ್ರವನ್ನಾಗಿ ಮಾಡಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಿದ್ದೀರಿ. ನೇಕಾರರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಬಳಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಿದ್ದೀರಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡಿದ್ದೀರಿ, ನೀವು ಒಬ್ಬ ಕಾರ್ಯಕರ್ತರಾಗಿ ಪಡೆದ ಅನುಭವ ಜನ ಸೇವಕರಾಗಿ ಮಾಡಿದ ಸೇವೆ ಹಾವೇರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

ಜನರ ಆಶೀರ್ವಾದದಿಂದ ನೀವು ಸಂಸದರಾಗಿ ನಮ್ಮ ತಂಡದ ಸದಸ್ಯರಾಗಿ ಬರುವುದು ನನಗೆ ದೊಡ್ಡ ಆಸ್ತಿ ಸಿಕ್ಕಂತೆ. ನಮ್ಮ ತಂಡ ಹಾವೇರಿ ಕ್ಷೇತ್ರ ಹಾಗೂ ದೇಶದ ಅಭಿವೃದ್ಧಿಗೆ ಶ್ರಮವಹಿಸಲಿದೆ. ನಾನು ಈ ಪತ್ರದ ಮೂಲಕ ಕ್ಷೇತ್ರದ ಜನತೆಗೆ ಹೇಳುವುದೇನೆಂದರೆ, ಇದು ಸಾಮಾನ್ಯ ಚುನಾವಣೆಯಲ್ಲ ಇದು ದೇಶದ ಪ್ರತಿಯೊಂದು ಕುಟುಂಬದ ವಿಶೇಷವಾಗಿ ಹಿರಿಯ ನಾಗರಿಕರು ಕಳೆದು ಐದಾರು ದಶಕದಲ್ಲಿ ಅನುಭವಿಸಿದ ತೊಂದರೆಗಳು ಕಳೆದ ಒಂದು ದಶಕದಲ್ಲಿ ಸಾಕಷ್ಟು ಬೆಳವಣಿಗೆಗಳನ್ನು ಕಂಡಿದ್ದಾರೆ. ಅನೇಕ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಈ ಚುನಾವಣೆ ಜನರ ಜೀವನಮಟ್ಟವನ್ನು ಇನ್ನಷ್ಟು ಸುಧಾರಣೆಗೊಳಿಸಲು ಪ್ರೇರಣೆಯಾಗಲಿದೆ.

ಈ ಚುನಾವಣೆಯಲ್ಲಿ ಬಿಜೆಪಿ ಪಡೆಯುವ ಪ್ರತಿಯೊಂದು ಮತವೂ 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತ ಮಾಡಲು ಮಹತ್ವದ್ದಾಗಿವೆ. ಮೊದಲ ಎರಡು ಹಂತದ ಮತದಾನದಲ್ಲಿ ಮತದಾರರು ತಮ್ಮ ಮತಗಳ ಮೂಲಕ ದೇಶದ ಅಭಿವೃದ್ಧಿ ಪರ ಇರುವ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಮತದಾರರಿಗೆ ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ತಿಳಿಸಿದ್ದಾರೆ.

ಈಗ ಬೇಸಿಗೆ ಇರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಆದರೆ, ದೇಶದ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಆದಷ್ಟು ಬೆಳಗಿನ ಸಮಯ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಈ ಚುನಾವಣೆ ಸಂದರ್ಭದಲ್ಲಿ ನಮ್ಮ‌ ಕಾರ್ಯಕರ್ತರು ಮತದಾರರನ್ನು ಪ್ರೇರೇಪಿಸಿ ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕು. ಈ ಮೂಲಕ ಬೂತ್ ಗೆಲ್ಲುವ‌ ಮೂಲಕ ಲೋಕಸಭಾ ಕ್ಷೇತ್ರ ಗೆಲ್ಲುವಂತೆ ನೋಡಿಕೊಳ್ಳಬೇಕು. ಇದೇ ವೇಳೆ ಕಾರ್ಯಕರ್ತರು ನಿಮ್ಮ ಆರೋಗ್ಯದ ಕಡೆಗೆ ಗಮನ ಕೊಡಿ ಎಂದು ಪತ್ರದ ಮೂಲಕ ಪ್ರಧಾನಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

ನನ್ನ ಪ್ರತಿ ಕ್ಷಣವೂ ದೇಶದ ಜನರ ಶ್ರೇಯೋಭಿವೃದ್ಧಿಗೆ ಮೀಸಲಿದೆ ಎಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಈ ಸಂದೇಶವನ್ನು ಎಲ್ಲ ಮತದಾರರಿಗೆ ತಲುಪಿಸಿ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Continue Reading
Advertisement
Kantesh
ಪ್ರಮುಖ ಸುದ್ದಿ15 mins ago

Kanthesh : ಅಶ್ಲೀಲ ವಿಡಿಯೊ ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದ ಈಶ್ವರಪ್ಪ ಪುತ್ರ ಕಾಂತೇಶ್​​

Election Commission
Lok Sabha Election 202424 mins ago

Election Commission: ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ; ಹೊಸ ವೇಳಾಪಟ್ಟಿ ಇಂತಿದೆ

Hassan Pen drive Case
ಪ್ರಮುಖ ಸುದ್ದಿ27 mins ago

Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

IPL 2024
ಪ್ರಮುಖ ಸುದ್ದಿ40 mins ago

IPL 2024 : ಅತಿ ವೇಗದ ಬೌಲರ್​ ಮಾಯಾಂಕ್​ ಯಾದವ್​ಗೆ ಮತ್ತೆ ಗಾಯ?

labour Day
ಪ್ರಮುಖ ಸುದ್ದಿ2 hours ago

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Parliament Flashback
Lok Sabha Election 20242 hours ago

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Viral Video
ವೈರಲ್ ನ್ಯೂಸ್2 hours ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Prime Minister Narendra Modi wrote a letter to former CM Basavaraj Bommai
ಕರ್ನಾಟಕ2 hours ago

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Labour Day 2024
ದೇಶ2 hours ago

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

State government conspiracy behind Prajwal Hassan Pen Drive Case says HD Kumaraswamy
ಕ್ರೈಂ2 hours ago

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ18 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌