ಕುರಿ ಕಳ್ಳತನ ಮಾಡಲು ಬಂದು ರೈತನನ್ನೇ ಕೊಂದವರು ಅರೆಸ್ಟ್‌ - Vistara News

ಹಾವೇರಿ

ಕುರಿ ಕಳ್ಳತನ ಮಾಡಲು ಬಂದು ರೈತನನ್ನೇ ಕೊಂದವರು ಅರೆಸ್ಟ್‌

ಕುರಿ ಕಳ್ಳತನ ಮಾಡಲು ಬಂದಿದ್ದ ಆರೋಪಿಗಳು, ಕುರಿದೊಡ್ಡಿ ಮಾಲೀಕನ ಕೈಕಾಲು ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಿ ಹತ್ಯೆ ಮಾಡಿ ಕುರಿಗಳನ್ನು ಕದ್ದುಕೊಂಡು ಹೋಗಿದ್ದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದ ಹೊರವಲಯದಲ್ಲಿರೋ ಕುರಿ ದೊಡ್ಡಿಯಲ್ಲಿ ಕುರಿ ಕಳ್ಳತನ ಮಾಡಲು ಬಂದು ರೈತನನ್ನು ಹತ್ಯೆ ಮಾಡಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. 48 ವರ್ಷದ ರೈತ ವೆಂಕಟೇಶ ಮತ್ತೂರ ಅವರ ಕೈಕಾಲು ಕಟ್ಟಿಹಾಕಿ ಬಾಯಿಗೆ ಬಟ್ಟೆ ತುರುಕಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿ ಆಗಿದ್ದರು.

ಆರೋಪಿಗಳು ಕುರಿ ಕಳ್ಳತನಕ್ಕೆ ಬಂದಿದ್ದರು. ಮಾಲೀಕ ಕುರಿಗಳ ಕಾವಲುಗಾರನಾಗಿ ಕುರಿ ದೊಡ್ಡಿಯಲ್ಲೇ ಮಲಗಿದ್ದ. ಮಲಗಿದ್ದ ವೆಂಕಟೇಶ ಅವರ ಕೈಕಾಲು ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಿ ಆತನನ್ನು ಹತ್ಯೆ ಮಾಡಿ ಕುರಿಗಳನ್ನು ಕದ್ದುಕೊಂಡು ಹೋಗಿದ್ದರು.
ಇದನ್ನೂ ಓದಿ | ಹಾವೇರಿ ‘ಹೊಂಡ’ ಸಿಟಿ; ರಸ್ತೆಯಲ್ಲಿ ಗಾಡಿ ಪಲ್ಟಿ!

ಕುರಿ ಕಳ್ಳತನ

ರಾತ್ರಿ ಕಳೆದು ಬೆಳಗಾಗೋವಷ್ಟರಲ್ಲಿ ವೆಂಕಟೇಶನ ಹತ್ಯೆಯ ಸುದ್ದಿ ಗ್ರಾಮದ ತುಂಬಾ ಹಬ್ಬಿತು. ಎಸ್‌ಪಿ ಹನುಮಂತರಾಯ, ಹೆಚ್ಚುವರಿ ಎಸ್‌ಪಿ ವಿಜಯಕುಮಾರ ಸೇರಿ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಕುರಿ ಕಳ್ಳತನಕ್ಕೆ ಬಂದವರೆ ರೈತನನ್ನು ಹತ್ಯೆ ಮಾಡಿರಬಹುದು ಎನ್ನುವ ಅನುಮಾನ ಪ್ರಾಥಮಿಕ ತನಿಖೆ ವೇಳೆಯಲ್ಲೆ ಪೊಲೀಸರಿಗೆ ಸಿಕ್ಕಿತ್ತು. ಪೊಲೀಸರು ಆರೋಪಿಗಳ ಪತ್ತೆಯ ಜತೆಗೆ ರಾತ್ರಿ ಗಸ್ತು ಹೆಚ್ಚಿಸಿದ್ದರು. ಸಂಶಯಾಸ್ಪದ ರೀತಿಯಲ್ಲಿ ಬ್ರಿಡ್ಜ್ ವೊಂದರ ಕೆಳಗೆ ಕೆಲವರು ನಿಂತಿದ್ದು ಕಂಡುಬಂದಿತ್ತು. ಅವರನ್ನು ಕಂಡು ಅನುಮಾನಗೊಂಡಿದ್ದ ರಾಣೆಬೆನ್ನೂರು ಗ್ರಾಮೀಣ ಠಾಣೆ ಸಿಪಿಐ ಮೋತಿಲಾಲ ಪವಾರ ಮತ್ತವರ ತಂಡ, ಉಪೇಂದ್ರ ಮೋಡಿಕ್ಯಾರ ಮತ್ತು ಮಂಜುನಾಥ ಅಲಿಯಾಸ್ ಮಂಜ್ಯಾ ಕೊಂಚಿಕೊರವರ ಎಂಬಾತನನ್ನು ಹಿಡಿದು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

ಕೆಲಹೊತ್ತು ವಿಚಾರಣೆ ನಡೆಸಿದ ನಂತರ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಕುರಿ ಕಳ್ಳತನ ಮಾಡಲು ಬಂದಿದ್ದೆವು, ಈ ಸಮಯದಲ್ಲಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಇಲ್ಲಿವರೆಗೆ ನಾಲ್ವರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಬಂಧಿತರಿಂದ ಎರಡು ಬೊಲೆರೋ ವಾಹನಗಳು, ಎರಡು ಕಬ್ಬಿಣದ ರಾಡುಗಳು, ಕಟರ್, ಪಕ್ಕಡ್‌, ಎರಡು ಹಗ್ಗ, ಬಿಯರ್ ಬಾಟಲಿಗಳು, ಖಾರದಪುಡಿ ಸೇರಿ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ| ಹೋಟೆಲ್‌ನಲ್ಲಿ ಕಳ್ಳತನಕ್ಕೆ ಬಂದು ಚಿಕನ್ ಹುಡುಕಾಡಿದ, ಅದೂ ಸಿಗದೆ ವಾಪಸಾದ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Assault Case: ಬೈರೇನಹಳ್ಳಿ ಕ್ರಾಸ್ ಬಳಿ ದಾರಿಗೆ ಅಡ್ಡಲಾಗಿ ನಿಂತವರನ್ನು ದಾರಿ ಬಿಡಿ ಎಂದು ಯೋಧ ಗೋವಿಂದರಾಜು (30) ಕೇಳಿದ್ದರು. ಇದಕ್ಕೆ ಕೆರಳಿದ 5 ಜನ ಪುಂಡರ ಗುಂಪು ಗೋವಿಂದರಾಜು ಬಳಿ ಜಗಳ ತೆಗೆದು ಹಲ್ಲೆ ನಡೆಸಿದೆ. ಕುಡಿದ ಮತ್ತಿನಲ್ಲಿದ್ದ ಪುಂಡರು ಮದ್ಯದ ಬಾಟಲಿಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

VISTARANEWS.COM


on

assault case koratagere
ಆರೋಪಿಗಳಾದ ಪುನೀತ್‌, ಭರತ್
Koo

ತುಮಕೂರು: ಗೃಹ ಸಚಿವ ಜಿ. ಪರಮೇಶ್ವರ್‌ (Home Minister G Parameshwara) ಅವರ ಸ್ವಕ್ಷೇತ್ರ ಕೊರಟಗೆರೆಯಲ್ಲಿ (Koratagere) ಪುಂಡರ ಹಾವಳಿ (hooliganism) ಮಿತಿಮೀರಿದ್ದು, ದಾರಿ ಬಿಡಿ ಎಂದು ಕೇಳಿದ್ದಕ್ಕೆ ಸೈನಿಕನ (Soldier) ಮೇಲೆಯೇ ಮಾರಣಾಂತಿಕ ಹಲ್ಲೆ (Assault case) ನಡೆಸಲಾಗಿದೆ. ಸದ್ಯ ಹಲ್ಲೆಗೀಡಾಗಿರುವ ಯೋಧ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ.

ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಬೈರೇನಹಳ್ಳಿ ಕ್ರಾಸ್ ಬಳಿ ದಾರಿಗೆ ಅಡ್ಡಲಾಗಿ ನಿಂತವರನ್ನು ದಾರಿ ಬಿಡಿ ಎಂದು ಯೋಧ ಗೋವಿಂದರಾಜು (30) ಕೇಳಿದ್ದರು. ಇದಕ್ಕೆ ಕೆರಳಿದ 5 ಜನ ಪುಂಡರ ಗುಂಪು ಗೋವಿಂದರಾಜು ಬಳಿ ಜಗಳ ತೆಗೆದು ಹಲ್ಲೆ ನಡೆಸಿದೆ. ಕುಡಿದ ಮತ್ತಿನಲ್ಲಿದ್ದ ಪುಂಡರು ಮದ್ಯದ ಬಾಟಲಿಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಕೋರರನ್ನು ಕೊರಟಗೆರೆ ತಾಲ್ಲೂಕಿನ ಅರಸಾಪುರದ ಭರತ್ (29), ಮಧುಗಿರಿ ತಾಲ್ಲೂಕಿನ ಕೊಡಗದಾಲದ ಪುನೀತ (32), ಹುಣಸವಾಡಿಯ ಗೌರಿಶಂಕರ (32), ಶಿವಾ (32), ಕೊಡಿಗೇನಹಳ್ಳಿ ಸಮೀಪದ ಭಟ್ಟಗೆರೆಯ ದಿಲೀಪ್ (35) ಎಂದು ಗುರುತಿಸಲಾಗಿದೆ. ಸದ್ಯ ಐವರ ವಿರುದ್ಧ ಕೊರಟಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ಹಾಗೂ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಗೋವಿಂದರಾಜು ಭಾರತೀಯ ಭೂಸೇನೆ ಸಿಪಾಯಿಯಾಗಿ ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಜೆಯ ಮೇಲೆ ತಮ್ಮ ಊರು ರಾಯವಾರಕ್ಕೆ ಬಂದಿದ್ದ ಗೋವಿಂದರಾಜು, ಕೆಲಸದ ನಿಮಿತ್ತ ಬೇರೇನಹಳ್ಳಿ ಕ್ರಾಸ್‌ಗೆ ಹೋಗಿದ್ದಾಗ ಘಟನೆ ನಡೆದಿದೆ. ಇತ್ತೀಚೆಗೆ ಭೈರೇನಹಳ್ಳಿ ಕ್ರಾಸ್ ಹಲವು ಕ್ರೈಂಗಳಿಗೆ ಸಾಕ್ಷಿಯಾಗಿದೆ. ಈ ಮುಂಚೆ ಕಾರ್‌ ಹಾರ್ನ್ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ‌ ಇರಿಯಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಗೃಹ ಸಚಿವ ಪರಮೇಶ್ವರ್ ಕಾರಿನ ಮೇಲೆ ಕಲ್ಲು ತೂರಲಾಗಿತ್ತು. ಈ ಸ್ಥಳದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ರೂ ಪೊಲೀಸರು ತಲೆ‌ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಪಾದಿಸಿದ್ದಾರೆ.

ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

ಹಾವೇರಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವೊಂದು ಸಂಭವಿಸಿದ್ದು, ತಿರುಪತಿಗೆ ಯಾತ್ರಾರ್ಥಿಗಳಾಗಿ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ. ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

Continue Reading

ಹಾವೇರಿ

Road Accident: ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

Road Accident: ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

VISTARANEWS.COM


on

ranebennuru road accident
Koo

ಹಾವೇರಿ: ಹಾವೇರಿ ಜಿಲ್ಲೆಯ (Haveri news) ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವೊಂದು (Road Accident) ಸಂಭವಿಸಿದ್ದು, ತಿರುಪತಿಗೆ (Tirupati) ಯಾತ್ರಾರ್ಥಿಗಳಾಗಿ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ. ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರ ಬಲಿ, ಇಬ್ಬರು ಗಂಭೀರ

ಚಿಕ್ಕೋಡಿ: ಮುಂಗಾರು ಆಗಮನಕ್ಕೆ ಮುನ್ನವೇ ಸಿಡಿಲಿನ ಮೂಲಕ ಇಬ್ಬರ ಬಲಿ ಪಡೆದುಕೊಂಡಿದೆ. ಚಿಕ್ಕೋಡಿ ಗ್ರಾಮಾಂತರ ಭಾಗದಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ಹೊರವಲಯದಲ್ಲಿ ಘಟನೆ ಸಿಡಿಲು ಬಡಿದು ರೈತ ಮಹಿಳೆ ಸಾವಿಗೀಡಾಗಿದ್ದಾರೆ. ಶೋಭಾ ಕೃಷ್ಣ ಕುಲಗೋಡೆ (45) ಮೃತ ರೈತ ಮಹಿಳೆ. ಸಂಜೆ ಕೃಷಿ ಚಟುವಟಿಕೆ ಮಾಡುವ ಸಂದರ್ಭದಲ್ಲಿ ಸಿಡಿಲು ಹೊಡೆದು ಮೃತಪಟ್ಟಿದ್ದಾರೆ. ನಾಲ್ಕು ಜನರಿಗೆ ಗಾಯಗಳಾಗಿವೆ. ಮಲ್ಲಪ್ಪ ಶಂಕರ್ ಮೇತ್ರಿ, ಭಾರತಿ ಕೆಂಪಣ್ಣ ಕಮತೆ, ಬಾಬುರಾವ್ ಅಶೋಕ ಚೌವ್ಹಾಣ್, ಪ್ರವೀಣ್ ಕಲ್ಲಪ್ಪ ಧರ್ಮಟ್ಟಿ ಗಾಯಗೊಂಡವರು. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಗುರು ಪುಂಡಲಿಕ (35) ಎಂಬವರು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಗುರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಇಬ್ಬರಿಗೆ ಸಂಕೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸಿಡಿಲು ಬಡಿದು 12 ಕುರಿಗಳು ಸಾವಿಗೀಡಾಗಿವೆ.

ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕನೊರ್ವ (Road Accident) ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ಘಟನೆ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಸತೀಶ್ (28) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಣಕಲ್‌ನಿಂದ ಸಾರಗೋಡು ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ 50ಕ್ಕೂ ಹೆಚ್ಚು ಗೊಬ್ಬರದ ಚೀಲಗಳನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಇಳಿಜಾರಿನಲ್ಲಿ ಭಾರ ತಡೆಯಲು ಆಗದೆ ಟ್ರ್ಯಾಕ್ಟರ್‌ ಪಲ್ಟಿ ಹೊಡೆದಿದೆ. ಪಲ್ಟಿಯಾದ ರಭಸಕ್ಕೆ ಟ್ರ್ಯಾಕ್ಟರ್‌ ಸಂಪೂರ್ಣ ಉಲ್ಟಾ ಹೊಡೆದಿದೆ. ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತೀಶ್‌ ಟ್ರ್ಯಾಕ್ಟರ್‌ನಡಿ ಸಿಲುಕಿ ಮೃತಪಟ್ಟಿದ್ದಾನೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ1 min ago

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಕೇಂದ್ರ ಸರ್ಕಾರ ನೋಟಿಸ್;‌ ಶೀಘ್ರವೇ ಬಂಧನ?

Crew on OTT
ಸಿನಿಮಾ5 mins ago

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

Soundarya Jagadish Cheating by soundarya Constructions Business Partners
ಬೆಂಗಳೂರು5 mins ago

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Fashion Show news
ಫ್ಯಾಷನ್5 mins ago

Fashion Show News: ಬಿಎಂಎಸ್‌ ಕಾಲೇಜಿನಲ್ಲಿ ನೋಡುಗರನ್ನು ಸೆಳೆದ ವಿದ್ಯಾರ್ಥಿಗಳ ಫ್ಯಾಷನ್‌ ಶೋ

Teacher
ವಿದೇಶ25 mins ago

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

Travel Tips
ಪ್ರವಾಸ35 mins ago

Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

SRH vs RR Qualifier 2
ಕ್ರೀಡೆ41 mins ago

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

Road Accident
ಕರ್ನಾಟಕ50 mins ago

Road Accident: ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕ್ರೈಂ51 mins ago

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rameshwaram Cafe
ಪ್ರಮುಖ ಸುದ್ದಿ52 mins ago

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌