areca news : ಹೆಚ್ಚುತ್ತಿದೆ ಅಡಕೆ ಆಮದು, ತಡೆಗೆ ಮತ್ತೊಂದು ಪಿಐಎಲ್‌ - Vistara News

ಕೃಷಿ

areca news : ಹೆಚ್ಚುತ್ತಿದೆ ಅಡಕೆ ಆಮದು, ತಡೆಗೆ ಮತ್ತೊಂದು ಪಿಐಎಲ್‌

ಮ್ಯಾನ್ಮಾರ್‌ನಿಂದ ಕಳ್ಳ ಮಾರ್ಗಗಳ ಮೂಲಕ ಅಡಕೆ ಆಮದು ಹೆಚ್ಚುತ್ತಿದ್ದು, ಇದರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಗುವಾಹತಿ ಹೈಕೋರ್ಟ್‌ ನಲ್ಲಿ ಪಿಐಎಲ್‌ ಸಲ್ಲಿಕೆಯಾಗಿದೆ

VISTARANEWS.COM


on

areca news areca nut import
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಐಜ್ವಾಲ: ಅಡಕೆ ಆಮದು ಸುಂಕವನ್ನು ಹೆಚ್ಚಿಸಿದ್ದರೂ ವಿದೇಶದಿಂದ ಕಳಪೆ ಅಡಕೆ ಆಮದಾಗುವುದು ನಿಂತಿಲ್ಲ. ಕಳ್ಳ ಮಾರ್ಗದ ಮೂಲಕ ಮುಖ್ಯವಾಗಿ ಮ್ಯಾನ್ಮಾರ್‌ನಿಂದ  ಈಶಾನ್ಯ ರಾಜ್ಯಗಳಿಗೆ ಅಡಕೆ (areca) ಸರಬರಾಜಾಗುತ್ತಲೇ ಇದೆ. ಇದು ದೇಶೀಯ ಅಡಕೆ ಮಾರುಕಟ್ಟೆಗೆ ದೊಡ್ಡ ಹೊಡೆತ ನೀಡುವ ಆತಂಕ ಮತ್ತೆ ಎದುರಾಗಿದೆ.

ಅಧಿಕೃತ ಮಾಹಿತಿ ಪ್ರಕಾರವೇ 2021-22ನೇ ಸಾಲಿನಲ್ಲಿ ಕೇಂದ್ರೀಯ ಸುಂಕ ಇಲಾಖೆಯು ಸುಮಾರು 132.70 ಕೋಟಿ ಮೌಲ್ಯದ 9.7 ಲಕ್ಷ ಕೇಜಿ ಅಡಿಕೆಯನ್ನು ವಶಪಡಿಸಿಕೊಂಡಿದೆ. ಇದು ಯಾವ ಪ್ರಮಾಣದಲ್ಲಿ ಕಳ್ಳ ಮಾರ್ಗದಲ್ಲಿ ಅಡಿಕೆ ಆಮದಾಗುತ್ತಿದೆ ಎಂಬುದಕ್ಕೆ ದಿಕ್ಸೂಚಿಯಾಗಿದೆ.

ಈಶಾನ್ಯ ರಾಜ್ಯಗಳ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತಿರುವ ಈ ಕಳ್ಳ ವ್ಯವಹಾರದಲ್ಲಿ ಸ್ಥಳೀಯ ರಾಜಕಾರಣಿಗಳು, ಅಧಿಕಾರಿಗಳು ಶಾಮೀಲಾಗಿದ್ದಾರೆ. ಕಳೆದ ಜನವರಿಯಲ್ಲಿ ಮಿಜೋರಾಂನ ಗಡಿಯ ಜಿಲ್ಲೆ ಚಂಪಾಯಿಯಲ್ಲಿ ಅಡಕೆಯನ್ನು ಕಳ್ಳ ಮಾರ್ಗದ ಮೂಲಕ ಆಮದು ಮಾಡಿಕೊಳ್ಳುವುದರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದ ಜಿಲ್ಲಾಧಿಕಾರಿ ಸಿ ಟಿ ಜುಆಲಿ ಅವರನ್ನು ಮಿಜೋರಾಂ ಸರ್ಕಾರವೇ ವರ್ಗಾವಣೆ ಮಾಡಿತ್ತು. ಇದು ಅಡಕೆ (areca) ಆಮದು ಮಾಫಿಯಾ ಎಷ್ಟು ಬಲಿಷ್ಠವಾಗಿದೆ ಎಂಬುದಕ್ಕೆ ಉದಾಹರಣೆಯಾಗಿದೆ.

ಕಳ್ಳ ಆಮದಿಗೆ ಕೊನೆಯೇ ಇಲ್ಲ

ಕಳಪೆ ಅಡಕೆಯು ವಿದೇಶದಿಂದ ಆಮದಾಗುತ್ತಿದ್ದುದ್ದರಿಂದ ದೇಶೀಯ ಅಡಕೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತಗೊಂಡು ಬೆಳೆಗಾರರು ಸಂಕಷ್ಟಕ್ಕೀಡಾಗುವುದು ಹೊಸ ವಿಷಯವೇನೂ ಅಲ್ಲ. ಕಳೆದ ಎರಡೂವರೆ ದಶಕಗಳಿಂದ ಇದೇ ಪರಿಸ್ಥಿತಿ ಇದ್ದು, ಇದರಿಂದ ಅಡಕೆ ಬೆಲೆ ನಿರಂತವಾಗಿ ಷೇರುಮಾರುಕಟ್ಟೆಯಂತೆ ಏರಿಳಿತ ಕಾಣುತ್ತಲೇ ಇದೆ. ಈ ಬಗ್ಗೆ ಆಗಾಗ ಬೆಳೆಗಾರರ ಸಂಘಟನೆಗಳು ಕೇಂದ್ರ ಸರ್ಕಾರದ ಗಮನ ಸೆಳೆಯುತ್ತಲೇ ಬಂದಿವೆ.

ಪರಿಣಾಮವಾಗಿ ಕೇಂದ್ರವು ಅಡಕೆಯ ಕನಿಷ್ಠ ಆಮದು ಬೆಲೆಯನ್ನು (ಎಂಐಪಿ) 2015ರಲ್ಲಿ 52 ರೂ.ಗಳಿಂದ 162 ರೂ.ಗಳಿಗೆ, 2017ರ ಜನವರಿಯಲ್ಲಿ251 ರೂ.ಗಳಿಗೆ ಏರಿಸಿತ್ತು. ಈಗ ಆಮದು ಸುಂಕವನ್ನು ಶೇ.100ರಷ್ಟು ವಿಧಿಸಲಾಗುತ್ತಿದೆ.

ಆದರೂ 2006ರಲ್ಲಿಜಾರಿಗೆ ಬಂದಿದ್ದ ದಕ್ಷಿಣ ಏಷ್ಯಾ ಮುಕ್ತ ವ್ಯಾಪಾರ ಒಪ್ಪಂದ(ಸಫ್ಟಾ)ದ ಅಡಿಯಲ್ಲಿ ಬಾಂಗ್ಲಾದೇಶ, ಭೂತಾನ್‌, ಮಾಲ್ಡೀವ್ಸ್‌, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾದಿಂದ ಮುಕ್ತವಾಗಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶವಿರುವುದರಿಂದ ಈ ದೇಶಗಳ ಅಡಕೆ ಭಾರತ ಮಾರುಕಟ್ಟೆಗೆ ಹರಿದು ಬರುತ್ತಲೇ ಇತ್ತು.  ಕನಿಷ್ಠ ಆಮದು ಧಾರಣೆಯನ್ನು ಹೆಚ್ಚಿಸಿದರೂ ಪ್ರಯೋಜನವಾಗದೇ ಇದ್ದಾಗ 2018ರ ಜುಲೈನಲ್ಲಿ “251 ರೂ.ಗಳಿಗಿಂತ ಕಡಿಮೆ ಬೆಲೆಯ ಅಡಕೆಯನ್ನು ಆಮದು ಮಾಡಿಕೊಳ್ಳುವಂತಿಲ್ಲʼʼಎಂದು ಕೇಂದ್ರ ಆದೇಶ ಕೂಡ ಹೊರಡಿಸಿತ್ತು.

ಇದರಿಂದ ಆಧಿಕೃತವಾಗಿ ವಿದೇಶಿ ಅಡಕೆ ಆಮದಿನ ಪ್ರಮಾಣ ಕಡಿಮೆಯಾಗುತ್ತಾ ಬಂದಿದ್ದರೂ ಕಳ್ಳ ಮಾರ್ಗದಿಂದ ಕಳಪೆ ಅಡಕೆ ಆಮದಾಗುವುದು ಸಂಪೂರ್ಣವಾಗಿ ನಿಂತಿಲ್ಲ.

ಕೋರ್ಟ್‌ ನಿಂದ ಕ್ರಮ

ಕಳಪೆ ಅಡಕೆ ಪ್ರಮಾಣ ಅಧಿಕವಾಗಿ ದೇಶೀಯ ಅಡಕೆ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತ ಸಾಮಾನ್ಯವಾಗಿ ಹೋಗಿತ್ತು. ಇತ್ತೀಚೆಗೆ ಸ್ವಲ್ಪ ಸ್ಥಿರಗೊಂಡು, ಅಡಕೆ ಬಂಗಾರದ ಬೆಲೆಯೂ ಬಂದಿತ್ತು. ಇದಕ್ಕೆ ಕಾರಣವಾಗಿದ್ದು ಕಳಪೆ ಅಡಕೆ ಆಮದಿನ ವಿರುದ್ಧ ಕೋರ್ಟ್‌ ನ ಸೂಚನೆ ಮೇರೆಗೆ ಸಿಬಿಐ ತೆಗೆದುಕೊಂಡಿದ್ದ ಕ್ರಮಗಳು.

ಅಡಕೆ ಆಮದು
ಅಸ್ಸಾಂ ರೈಫಲ್ಸ್‌ ಪಡೆ ವಶಪಡಿಸಿಕೊಂಡ ಅಡಕೆ

ಏನಿದು ವಿಷಯ: 2016ರಲ್ಲಿಮಹಾರಾಷ್ಟ್ರದ ನಾಗ್‌ಪುರದಲ್ಲಿರೈಲ್ವೇ ಪೊಲೀಸರು 23 ವ್ಯಾಗನ್‌ ಅಕ್ರಮ ಕಳಪೆ ಗುಣಮಟ್ಟದ ಆಮದು ಅಡಕೆಯನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯದಿದ್ದಾಗ ಡಾ.ಮೆಹಬೂಬ್‌ ಎಂಕೆ ಚಿಂತನ್‌ವಾಲಾ ಎಂಬವರು ಹೈಕೋರ್ಟ್‌ನಲ್ಲಿಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದರು. ಅತ್ಯಂತ ಕಳಪೆ ದರ್ಜೆಯ ಅಡಕೆ ವಿದೇಶದಿಂದ ಕಳ್ಳ ಮಾರ್ಗದಲ್ಲಿ ಆಮದಾಗುತ್ತಿದ್ದು, ಅನಾಮಧೇಯರು ಈ ಅಕ್ರಮ ಚಟುವಟಿಕೆಯಲ್ಲಿಭಾಗಿಯಾಗಿದ್ದಾರೆ. ಇದರಿಂದ ಪ್ರತಿ ವರ್ಷ ಸರಕಾರಕ್ಕೆ 15 ಸಾವಿರ ಕೋಟಿ ರೂ. ಆಮದು ಸುಂಕ ನಷ್ಟವಾಗುತ್ತಿದೆ ಎಂದು ಅವರು ಅರ್ಜಿಯಲ್ಲಿಹೇಳಿದ್ದರು.  ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ನ ನಾಗಪುರ್‌ ಪೀಠ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

ಇದನ್ನೂ ಓದಿ| ನಿಮ್ಮ ಜಮೀನು ಸ್ಕೆಚ್‌ ನೀವೇ ಮಾಡಿಕೊಳ್ಳಿ: ಕಂದಾಯ ಇಲಾಖೆಯಿಂದ ಸ್ವಾವಲಂಬಿ ಆ್ಯಪ್

2021ರ ಮಾರ್ಚ್‌ನಲ್ಲಿಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಸಿಬಿಐ, ಕೇಂದ್ರ ಅಬಕಾರಿ ಮತ್ತು ಸುಂಕ ಇಲಾಖೆಯ ಅಧಿಕಾರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿತ್ತು. ಆದರೆ ಅಧಿಕಾರಿಗಳ ಹೆಸರನ್ನು ತಿಳಿಸಿರಲಿಲ್ಲ. ಅಧಿಕಾರಿಗಳ ಮಾಹಿತಿಯನ್ನೂ ನೀಡಬೇಕು, ಕಟ್ಟುನಿಟ್ಟಿನ ತನಿಖೆ ನಡೆಸಬೇಕು ಎಂದು ಕೋರ್ಟ್‌ ಸಿಬಿಐಗೆ ಸೂಚಿಸಿತ್ತು. ಇದರ ಪರಿಣಾಮ 2021ರ ಜೂನ್‌ 29ರಂದು ಸಿಬಿಐ ಮಂಬಯಿ, ನಾಗ್‌ಪುರ್‌ ಮತ್ತು ಅಹ್ಮದಾಬಾದ್‌ನ 19 ಕಡೆ ದಾಳಿ ನಡೆಸಿ, ಅಕ್ರಮ ಅಡಕೆ ಆಮದಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಿತ್ತು. ಅಲ್ಲದೆ ಈ ಹಗರಣದಲ್ಲಿಭಾಗಿಯಾಗುತ್ತಿದ್ದ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಿತ್ತು. ಪರಿಣಾಮ ಅಡ್ಡ ಹಾದಿಯಲ್ಲಿಅಡಕೆ ತರಿಸಿಕೊಳ್ಳುತ್ತಿದ್ದ ವ್ಯಾಪಾರಿಗಳೆಲ್ಲಾಹೆದರಿದರು. ತನಿಖೆ ವೇಗ ಪಡೆಯುತ್ತಿದ್ದಂತೆ ಅಕ್ರಮವಾಗಿ ವ್ಯಾಪಾರ ಮಾಡುತ್ತಿದ್ದವರೆಲ್ಲಾಬಿಲ ಸೇರಿದರು. ಹೆಚ್ಚು ಕಡಿಮೆ ಸಂಪೂರ್ಣವಾಗಿ ಆಮದು ಸ್ಥಗಿತಗೊಂಡಿತು. ದೇಶಿಯ ಅಡಕೆಗೆ ಸಹಜವಾಗಿಯೇ ಬೇಡಿಕೆ ಹೆಚ್ಚಾಗತೊಡಗಿತ್ತು.

ಈಗ ಮತ್ತೊಂದು ಪಿಐಎಲ್‌

ಕಳೆದ ಕೆಲವು ತಿಂಗಳಿನಿಂದ ಮ್ಯಾನ್ಮಾರ್‌ನಿಂದ ಕಳಪೆ ಅಡಕೆ ಆಮದಾಗುವುದು ಹೆಚ್ಚಿದ್ದು, ಮಿಜೋರಾಂನ ಚಂಪಾಯಿ ಜಿಲ್ಲೆಯಲ್ಲಿಯೇ ಒಟ್ಟು 40 ಕಳ್ಳ ಮಾರ್ಗಗಳ ಮೂಲಕ ಅಡಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಮ್ಯಾನ್ಮಾರ್‌, ಇಂಡೋನೇಷ್ಯಾ ಮತ್ತಿತರ ರಾಷ್ಟ್ರಗಳಿಂದ ಈ ಅಡಕೆ ಬರುತ್ತಿದ್ದು, ಭಾರತಕ್ಕೆ ಬಂದ ಕೂಡಲೇ ಅದಕ್ಕೆ ಸ್ಥಳೀಯ ಅಡಕೆಯ ರೂಪ ನೀಡಿ, ದೇಶದ ಪ್ರಮುಖ ಮಾರುಕಟ್ಟೆಗೆ ರವಾನಿಸಲಾಗುತ್ತಿದೆ.

ವನ್ರಾಮುಚುವಾಂಗಿ

ಈ ಕಳ್ಳವ್ಯವಹಾರದಿಂದ ಬೇಸತ್ತಿರುವ ಮಿಜೋರಾಂನ ಹೆಸರಾಂತ ಸಾಮಾಜಿಕ ಕಾರ್ಯಕರ್ತೆ ವನ್ರಾಮುಚುವಾಂಗಿ ಗುವಾಹತಿ ಹೈಕೋರ್ಟ್‌, ಇದರ ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಬೇಕೆಂದು ಗುವಾಹತಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (ಪಿಐಎಲ್‌-PIL) ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಗೆ ಕೋರ್ಟ್‌ ಒಪ್ಪಿಕೊಂಡಿದ್ದು, ಒಟ್ಟು 37 ಮಂದಿ ಈ ಅಕ್ರಮಕ್ಕೆ ಹೊಣೆಗಾರರು ಎಂದು ಪಿಐಎಲ್‌ನಲ್ಲಿ ಹೇಳಲಾಗಿದೆ. ಈ ಹಿಂದೆ ಕೂಡ ಕಳಪೆ ಅಡಕೆ ಆಮದನ್ನು ನಿಯಂತ್ರಿಸಬೇಕೆಂದು ವನ್ರಾಮುಚುವಾಂಗಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು.

ನ್ಯಾಯಾಲಯ ಅರ್ಜಿಯ ವಿಚಾರಣೆ ನಡೆಸಿ, ಈ ಹಿಂದಿನಂತೆ ಸೂಕ್ತ ಕ್ರಮಕ್ಕೆ ಸೂಚಿಸಿದರೆ ಮೀಜೋರಾಂ ಮೂಲಕ ಕಳಪೆ ಅಡಕೆ ಆಮದಾಗುವುದು ತಪ್ಪಿ, ದೇಶೀಯ ಅಡಕೆ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Kalaburagi News: ರಸಗೊಬ್ಬರ, ಬೀಜ ಕೊರತೆಯಾಗದಂತೆ ಎಚ್ಚರ ವಹಿಸಲು ಪ್ರಿಯಾಂಕ್ ಖರ್ಗೆ ಸೂಚನೆ

Kalaburagi News: ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

VISTARANEWS.COM


on

Minister Priyank Kharge held a meeting on Monsoon Sowing Preparation and Precautionary Measures for Flood Control
Koo

ಕಲಬುರಗಿ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದ ಕಾರಣ ಎಲ್ಲೆಡೆ ಒಮ್ಮೆಲೆ ಬಿತ್ತನೆ ಶುರುವಾಗಿದ್ದು, ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆ ಸಿದ್ಧತೆ ಮತ್ತು ಪ್ರವಾಹ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಳೆದ ವರ್ಷ ಕಲಬುರಗಿ, ಚಿತ್ತಾಪುರ, ಕಾಳಗಿ ತಾಲೂಕಿನಲ್ಲಿ ಕಳಪೆ ಬೀಜ ವಿತರಣೆಯಾಗಿದ್ದರಿಂದ ರೈತರು ತಮ್ಮ ಬೆಳೆ ಹಾನಿ ಮಾಡಿಕೊಂಡಿದ್ದಾರೆ ಇದು ಪುನರಾವರ್ತನೆಯಾಗಬಾರದು ಎಂದು ತಿಳಿಸಿದರು.

ಈ ಸಲ ಅತಿವೃಷ್ಠಿಯಿಂದ ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ಹಾನಿ ತಡೆಗೆ ಈ ಕೂಡಲೇ ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದ ಸಚಿವ‌ ಪ್ರಿಯಾಂಕ್ ಖರ್ಗೆ, ಹೆಚ್ಚು ಮಳೆಗೆ ಆಗಬಹುದಾದ ಹಾನಿ ತಪ್ಪಿಸಲು ಬಸಿಗಾಲುವೆ ನಿರ್ಮಾಣ ಹಾಗೂ ಬೆಳೆ ವಿಮೆ ಮಾಡಿಸಲು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಳೆದ ವರ್ಷ ಬೆಳೆ‌ ವಿಮೆ ಮಾಡಿಸಿದ್ದರಿಂದ ಹೆಚ್ಚಿನ ಪರಿಹಾರ ಸಿಗಲು ಕಾರಣವಾಗಿದೆ. ಈ ಬಾರಿಯೂ ನೊಂದಣಿ ಹೆಚ್ಚಿಸಿ, ಮೈ ಮರೆಯದಿರಿ ಎಂದು ಕೃಷಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

ಪ್ರತಿ ತಾಲೂಕಿನಲ್ಲಿ ಪರವಾನಿಗೆ ಇಲ್ಲದೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಿದಲ್ಲಿ, ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ಅಂತಹ ಕೃಷಿ ಮಳಿಗೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರನ್ನೇ ಇದಕ್ಕೆ ಹೊಣೆಗಾರರನ್ನಾಗಿಸಬೇಕು. ಈ ಸಂಬಂಧ ತಾಲೂಕಾ ಅಧಿಕಾರಿಗಳಿಗೆ ಲಿಖಿತ ಸೂಚನೆ ನೀಡಿ ಎಂದು ಡಿ.ಸಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 8.65 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಈ ವರ್ಷ ಉತ್ತಮ ಮಳೆಯಾದ ಕಾರಣ ಜಿಲ್ಲೆಯ ಎಲ್ಲೆಡೆ ಇದೂವರೆಗೆ ಶೇ.30 ಬಿತ್ತನೆಯಾಗಿದೆ. ಉಳಿದೆಡೆ ಬಿತ್ತನೆ ಚಟುವಟಿಕೆ ಗರಿಗೆದರಿವೆ. ಕಳೆದ ವರ್ಷದಲ್ಲಿ ಬೆಳೆ‌ ವಿಮೆ, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ತೊಗರಿ ನೆಟೆ ರೋಗ ಪ್ರಕರಣದಲ್ಲಿ ಒಟ್ಟಾರೆ 697.34 ಕೋಟಿ ರೂ. ಪರಿಹಾರ ರೈತರಿಗೆ ಸಿಕ್ಕಿದೆ. ಕಳೆದ‌ ಬಾರಿ 1.62 ಲಕ್ಷ ರೈತರು ಬೆಳೆ ವಿಮೆ‌ ಮಾಡಿಸಿದ್ದರು, ಈ ಸಲ 2.50 ಲಕ್ಷಕ್ಕೆ ಹೆಚ್ಚಿಸಲು ಗುರಿ ಹೊಂದಿದ್ದು, ಇದೂವರೆಗೆ 15 ಸಾವಿರಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ರೈತರಿಗೆ ಸಬ್ಸಿಡಿ ಹಾಗೂ ಪರಿಹಾರ ಕೊಡಿಸುವಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಶ್ರಮವಹಿಸಿದ್ದೀರಿ. ಸರ್ಕಾರದ‌ ಮಟ್ಟದಲ್ಲಿ ಈ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ನಿಮಗೆ ಅಭಿನಂದನೆಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಮುಂದುವರೆದು, ಎಫ್.ಐ.ಡಿ. ನೊಂದಣಿ ತೀವ್ರಗೊಳಿಸಬೇಕು. ಇದರಿಂದ ಡಿ.ಬಿ.ಟಿ. ಪರಿಹಾರ ಪಡೆಯಲು ಸಹಕಾರಿಯಾಗಲಿದೆ. ಇದು ಸ್ಪಂದಿಸುವ ಸರ್ಕಾರ ಎಂಬುದನ್ನು ಅರಿತಿರುವ ರೈತರು ನಮ್ಮಿಂದ ಹೆಚ್ಚಿನ ಅಪೇಕ್ಷೆ ಹೊಂದಿದ್ದಾರೆ. ಇದನ್ನರಿತು ನೀವು ಕೆಲಸ ಮಾಡಿ ಎಂದು ತಿಳಿಸಿದರು‌.

ಇದನ್ನೂ ಓದಿ: DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ವಿಶೇಷವಾಗಿ ಡಿ.ಎ.ಪಿ.ರಸಗೊಬ್ಬರ ಕೊರತೆ ಎದ್ದು ಕಾಣುತ್ತಿದೆ. ಇದು ಹೀಗೆ ಮುಂದುವರೆದರೆ ರೈತರು ಪಕ್ಕದ ರಾಜ್ಯ ಅಥವಾ ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಹಣ ನೀಡಿ ಖರೀದಿಸಬೇಕಾಗುತ್ತದೆ. ರೈತರನ್ನು ಇದರಿಂದ ತಪ್ಪಿಸಲು ಸಾಕಷ್ಟು ಪ್ರಮಾಣದಲ್ಲಿ ಆರ್.ಎಸ್.ಕೆ. ಕೇಂದ್ರದಲ್ಲಿ ಡಿ.ಎ.ಪಿ. ದಾಸ್ತಾನಿಕರಿಸಬೇಕು. ಕಳಪೆ, ನಕಲಿ ಬೀಜ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.

ಬೆಳೆ ವಿಮೆ‌ ಮಾಡಿದ ರೈತರಿಗೆ ಬೆಳೆ ಹಾನಿ‌ ಸಂದರ್ಭದಲ್ಲಿ ಸಮರ್ಪಕ ಪರಿಹಾರ ಪಡೆಯುವ ನಿಟ್ಟಿನಲ್ಲಿ ಕ್ರಾಪ್ ಕಟ್ಟಿಂಗ್ ಎಕ್ಸ್ ಪೆರಿಮೆಂಟ್ ನಡೆಯುವ ಸಮಯದಲ್ಲಿ ಕಡ್ಡಾಯವಾಗಿ ಇರಬೇಕಾದ ಅಧಿಕಾರಿಗಳು ಇರಲೇಬೇಕು ಹಾಗೂ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋಗ್ರಾಫಿ ಮಾಡಲೇಬೇಕು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಕಟ್ಟುನಿಟ್ಟಾಗಿ ಸೂಚಿಸಿದರು.

ತೋಟಗಾರಿಕೆ ಇಲಾಖೆ ಚರ್ಚೆ ವೇಳೆಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ತೋಟಗಾರಿಕೆ ಬೆಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ವಿಸ್ತರಣೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ತೋಟಗಾರಿಕೆ ಬೆಳೆ ವಿಸ್ತಿರ್ಣ ಹೆಚ್ಚಿಸಬೇಕು. ಇಲ್ಲಿನ ಕೆಂಬಾಳೆ, ಕಲ್ಲಂಗಡಿ ಅಂತಹ ಹಣ್ಣುಗಳನ್ನು ಸೂಪರ್ ಫುಡ್ ಬ್ರ್ಯಾಂಡ್ ನಡಿ ಮಾರಾಟ ಮಾಡಬೇಕು. ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂದ ಅವರು, ಅತಿವೃಷ್ಠಿ ಹಾನಿಯಾದಲ್ಲಿ ಮೇವು ದಾಸ್ತಾನು, ಜಾನುವಾರುಗಳಿಗೆ ಲಸಿಕಾಕರಣ ಮಾಡಬೇಕು ಎಂದು ಪಶುಸಂಗೋಪನಾ ಉಪನಿರ್ದೇಶಕ ಡಾ.ಎಸ್.ಡಿ. ಆವಂಟಿ ಅವರಿಗೆ ಸೂಚಿಸಿದರು.

ರೈತರ ಆತ್ಮಹತ್ಯೆಗೆ ಕಳವಳ, ಪರಿಹಾರ ವಿಳಂಬ ಸಲ್ಲದು

ಸಭೆಯಲ್ಲಿ ರೈತರ ಆತ್ಮಹತ್ಯೆ ಚರ್ಚೆ ಸಂದರ್ಭದಲ್ಲಿ ಇನ್ನು 5 ಪ್ರಕರಣ ಪರಿಹಾರ ನೀಡಲು ಬಾಕಿ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್‌ ಹೇಳಿದಾಗ, ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮಹತ್ಯೆಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಾ, ಇಂತಹ ಪ್ರಕರಣದಲ್ಲಿ ಪರಿಹಾರ ವಿಳಂಬ ಸಲ್ಲದು. ಇತ್ತೀಚೆಗೆ ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪ್ರಕರಣ ಉಲ್ಲೇಖಿಸಿ ಪಿ.ಎಚ್.ಸಿ ಯಲ್ಲಿ ಎಂಟಿ ಸ್ನೇಕ್ ವೆನೋಮ್ ಇಲ್ಲದಕ್ಕೆ ಯಾದಗಿರಿ ಆಸ್ಪತ್ರೆಗೆ ಹೋಗಬೇಕಾಯಿತು. ಪ್ರತಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಎಂಟಿ ಸ್ನೇಕ್ ವೆನೋಮ್ ಶೇಖರಿಸಿಡುವಂತೆ ಸೂಚಿಸಿದರು. ಇದಕ್ಕೆ ದನಿಗೂಡಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಹಾವು ಕಚ್ಚಿದ ಪ್ರಕರಣದಲ್ಲಿ ಜನರು ತಪ್ಪು ನಂಬಿಕೆಯಲ್ಲಿ ಮಂತ್ರ-ತಂತ್ರ ಎಂದು ಆ ಕಡೆ ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಲು ಅಭಿಯಾನ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಇದನ್ನೂ ಓದಿ: PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

ಸಭೆಯಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಾಧವ ಗಿತ್ತೆ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಅಧಿಕಾರಿಗಳು ಇದ್ದರು.

Continue Reading

ವಿಜಯನಗರ

Vijayanagara News: ವಿಜಯನಗರ ಜಿಲ್ಲೆಗೆ 85.76 ಕೋಟಿ ರೂ. ಬೆಳೆವಿಮೆ ಬಿಡುಗಡೆ

Vijayanagara News: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ವಿಜಯನಗರ ಜಿಲ್ಲೆಗೆ ಒಟ್ಟು 85.76 ಕೋಟಿ ರೂ. ಬೆಳೆ ವಿಮೆ ಬಿಡುಗಡೆಯಾಗಿದೆ.

VISTARANEWS.COM


on

85.76 crore rupees crop insurance released for Vijayanagara district says Vijayanagara District Joint Agriculture Director Sharanappa Mudgal
ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್.
Koo

ಹೊಸಪೇಟೆ: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 85.76 ಕೋಟಿ ರೂ. ಬೆಳೆ ವಿಮೆ (Vijayanagara News) ಬಿಡುಗಡೆಯಾಗಿದೆ.

ಹಡಗಲಿ ತಾಲೂಕಿಗೆ 1071.72 ಲಕ್ಷ ರೂ., ಹಗರಿಬೊಮ್ಮನಹಳ್ಳಿ ತಾಲೂಕಿಗೆ 256.62 ಲಕ್ಷ ರೂ., ಹರಪನಹಳ್ಳಿ ತಾಲೂಕಿಗೆ 6101.63 ಲಕ್ಷ ರೂ., ಹೊಸಪೇಟೆ ತಾಲೂಕಿಗೆ 38.05 ಲಕ್ಷ ರೂ., ಕೊಟ್ಟೂರು ತಾಲೂಕಿಗೆ 491.81 ಲಕ್ಷ ರೂ., ಕೂಡ್ಲಿಗಿ ತಾಲೂಕಿಗೆ 616.85 ಲಕ್ಷ ರೂ. ಬಿಡುಗಡೆಯಾಗಿದೆ.

ಇದನ್ನೂ ಓದಿ: Job News: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಆಯ್ಕೆ ಹೇಗಿರುತ್ತದೆ? ಪರೀಕ್ಷೆ ಸ್ವರೂಪವೇನು? Complete Details

ಹಡಗಲಿ ತಾಲೂಕಿನಲ್ಲಿ 3382, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 708, ಹರಪನಹಳ್ಳಿ ತಾಲೂಕಿನಲ್ಲಿ 20394, ಹೊಸಪೇಟೆ ತಾಲೂಕಿನಲ್ಲಿ 212, ಕೊಟ್ಟೂರು ತಾಲೂಕಿನಲ್ಲಿ 2402, ಕೂಡ್ಲಿಗಿ ತಾಲೂಕಿನಲ್ಲಿ 2412 ರೈತರು ಈ ಬೆಳೆ ವಿಮೆ ಪಡೆಯುತ್ತಿದ್ದಾರೆ.

ಬೆಳೆ ವಿಮೆಗೆ ನೋಂದಾಯಿಸಿದ ರೈತರು ಬೆಳೆ ವಿಮಾ ಕಂತು ತುಂಬಿದ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿಕೊಳ್ಳಲು ಕೋರಿದೆ. ಬೆಳೆ ವಿಮಾ ಜಮೆ ಆಗದಿದ್ದಲ್ಲಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಇದನ್ನೂ ಓದಿ:Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

ಪ್ರಸಕ್ತ ಸಾಲಿನಲ್ಲಿಯೂ ಸಹ ಉತ್ತಮ ಮಳೆ ಆಗುವುದೆಂಬ ಅಂದಾಜಿರುವುದರಿಂದ ಎಲ್ಲಾ ರೈತ ಬಾಂಧವರು ಕಡ್ಡಾಯವಾಗಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದೇಶ

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು.

VISTARANEWS.COM


on

Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Kisan Samman Nidhi).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Continue Reading

ತುಮಕೂರು

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

Shira News: ಶಿರಾ ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕೇಂದ್ರದಲ್ಲಿ ಸೋಮವಾರ ಶಾಸಕ ಟಿ.ಬಿ. ಜಯಚಂದ್ರ, ರೈತರಿಗೆ ಬಿತ್ತನೆ ಬೀಜ ವಿತರಿಸಿದರು.

VISTARANEWS.COM


on

Sowing seed distribution in Shira by MLA TB Jayachandra
Koo

ಶಿರಾ: ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳುವಂತೆ ಶಾಸಕ ಟಿ.ಬಿ.ಜಯಚಂದ್ರ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ (Shira News) ನೀಡಿದರು.

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ, ಮುಂಗಾರು ಹಂಗಾಮಿಗೆ ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಬಿತ್ತನೆ ಬೀಜ ವಿತರಿಸಿ, ಬಳಿಕ ಅವರು ಮಾತನಾಡಿದರು.

ಇದನ್ನೂ ಓದಿ: Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ರೈತರಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಸರ್ಕಾರದ ರಿಯಾಯಿತಿ ದರದ ಬೀಜ, ಗೊಬ್ಬರ ಹಾಗೂ ಕೃಷಿ ಸಲಕರಣೆಗಳನ್ನು ರೈತರು ಪಡೆದುಕೊಂಡು ಉತ್ತಮ ಕೃಷಿ ಕೈಗೊಳ್ಳಬೇಕು. ಮುಂಗಾರು ಹಂಗಾಮಿಗೆ ಬೀಜಗಳನ್ನು ರೈತರ ಬೇಡಿಕೆಗೆ ಅನುಗುಣವಾಗಿ ವಿತರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ನಾಗರಾಜು, ತಹಸೀಲ್ದಾರ್ ದತ್ತಾತ್ರೇಯ ಗಾದ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಕಾಂಗ್ರೆಸ್ ಯುವ ಮುಖಂಡ ಅಜಯ್ ಗಾಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಶಿರಾ: ಪರಿಸರ ಸಂರಕ್ಷಣೆಗೆ ಇಂದು ತುರ್ತು ಆದ್ಯತೆ ನೀಡಬೇಕಾಗಿದೆ. ಪರಿಸರ ದಿನಾಚರಣೆಯು ಕೇವಲ ಒಂದು ದಿನ ಮತ್ತು ಪ್ರಚಾರಕ್ಕೆ ಸೀಮಿತವಾಗದೇ ಇದು ನಿತ್ಯೋತ್ಸವ ಆಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಕರೆ ನೀಡಿದರು.

ನಗರದ ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆವರಣದಲ್ಲಿ ಸೋಮವಾರ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ನಮ್ಮ ಸುತ್ತಮುತ್ತಲಿನ ಪರಿಸರ ಕಲುಷಿತಗೊಂಡಿದೆ. ನಾವು ಸೇವಿಸುವ ಗಾಳಿ, ನೀರು ಎಲ್ಲವೂ ಕಲುಷಿತಗೊಂಡಿವೆ. ನಗರದಲ್ಲಿ ಕೈಗಾರಿಕೆಗಳು ಹೆಚ್ಚಾಗುತ್ತಿದ್ದು, ಇದರಿಂದಾಗಿ ನಿತ್ಯವೂ ಪರಿಸರ ಹಾನಿಯಾಗುತ್ತಿದೆ ಎಂದ ಅವರು, ಪ್ರಕೃತಿ ನಮಗೆ ಎಲ್ಲವೂ ನೀಡಿದೆ. ಆದರೆ ನಾವು ಪ್ರಕೃತಿಯ ಮೇಲೆ ದಾಳಿ ನಡೆಸುತ್ತಿದ್ದೇವೆ. ಪ್ರಕೃತಿಯನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಪರಿಸರ ಸಂರಕ್ಷಣೆಯ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ. ನಗರಗಳು ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆಗಳು ಬೆಳೆಯುತ್ತಿವೆ. ಈ ಎಲ್ಲಾ ಬೆಳೆವಣಿಗೆಗಳು ಪರಿಸರದ ಮೇಲೆ ಮಾರಕ ಪರಿಣಾಮ ಬೀರುತ್ತಿವೆ. ಎಲ್ಲಿ ಮಳೆ ಬರಬೇಕು ಅಲ್ಲಿ ಮಳೆ ಆಗುತ್ತಿಲ್ಲ. ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯಿಂದ ಇಂತಹ ಪ್ರಕೃತಿಕ ವಿಕೋಪಗಳು ನಡೆಯುತ್ತಿವೆ. ಈ ಎಲ್ಲಾ ವಿಕೋಪಗಳಿಗೆ ಮನುಷ್ಯನೇ ಕಾರಣ. ಈ ಹಿನ್ನೆಲೆಯಲ್ಲಿ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಈ ಸಂದರ್ಭದಲ್ಲಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ವೆಂಕಟೇಶಯ್ಯ, ಆರ್‌ಎಫ್‌ಒ ನವನೀತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ನಗರಸಭೆ ಪೌರಾಯುಕ್ತ ರುದ್ರೇಶ್, ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಬಾಯಿ, ಕಾಂಗ್ರೆಸ್ ಮುಖಂಡ ಅಜೇಯ ಗಾಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading
Advertisement
Gold Rate Today
ಚಿನ್ನದ ದರ13 mins ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ18 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್24 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ29 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ30 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest42 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ44 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್49 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ1 hour ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ1 hour ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌