ಮಿನಿ ಒಲಂಪಿಕ್ಸ್ ಪಂದ್ಯದಲ್ಲಿ ಶಿವಮೊಗ್ಗದ ಕ್ರೀಡಾಪಟುಗಳ ಗೆಲುವು - Vistara News

ಶಿವಮೊಗ್ಗ

ಮಿನಿ ಒಲಂಪಿಕ್ಸ್ ಪಂದ್ಯದಲ್ಲಿ ಶಿವಮೊಗ್ಗದ ಕ್ರೀಡಾಪಟುಗಳ ಗೆಲುವು

ಬೆಂಗಳೂರಿನಲಿ ಆಯೋಜಿಸಲಾಗಿದ್ದ ಮಿನಿ ಒಲಂಪಿಕ್ಸ್ ಬಾಕ್ಸಿಂಗ್‌ ಪಂದ್ಯದಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು 4 ತಾಮ್ರ ಪದಕವನ್ನು ಗೆಲ್ಲುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಮಿನಿ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಶಿವಮೊಗ್ಗದ ವಿದ್ಯಾರ್ಥಿಗಳು ತೃತೀಯ ಸ್ಥಾನ ಗಳಿಸುವ ಮೂಲಕ ಸಾಧನೆಗೈದಿದ್ದಾರೆ. ಮೇ 16 ರಿಂದ ಯುವ ಸಬಲೀಕರಣ, ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬಾಕ್ಸಿಂಗ್‌ ಕ್ರೀಡೆ ಆಯೋಜಿಸಲಾಗಿತ್ತು.

ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಕ್ರೀಡಾಪಟುಗಳಾದ ಜೈನ್ ಪಬ್ಲಿಕ್ ಶಾಲೆಯ ಮದಿಯಾ ಇಬ್ರಾಹಿಂ, 46-49 ಕೆ.ಜಿ. ವಿಭಾಗದಲ್ಲಿ, ಸವಳಂಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಲ್ಲಿಕಾರ್ಜುನ್, 58-61 ಕೆ.ಜಿ. ವಿಭಾಗದಲ್ಲಿ, ಬೊಮ್ಮನಕಟ್ಟೆಯ ರಾಮಕೃಷ್ಣ ಶಾಲೆಯ ವಂಶಿ 61-64 ಕೆ.ಜಿ. ವಿಭಾಗದಲ್ಲಿ ಮತ್ತು ಕಸ್ತೂರಭಾ ಶಾಲೆಯ ಕಾವ್ಯ 49-52 ಕೆ.ಜಿ. ವಿಭಾಗದಲ್ಲಿ ತೃತೀಯ ಪದಕ ಪಡೆದು ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಮಿನಿ ಒಲಂಪಿಕ್ಸ್

ಕ್ರೀಡಾಪಟುಗಳ ಕೋಚ್ ವೆಂಕಟೇಶ್‌ರವರಿಗೆ ಹಾಗೂ ಕ್ರೀಡಾಪಟುಗಳಿಗೆ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಅಧ್ಯಕ್ಷ ಶಿವಮೊಗ್ಗ ವಿನೋದ್ ಅವರು ಅಭಿನಂದಿಸಿದ್ದಾರೆ. ಕಳೆದ ಬಾರಿ ನಡೆದ ಮಿನಿ ಒಲಿಂಪಿಕ್ಸ್‌ನಲ್ಲಿ ಜಿಲ್ಲೆಗೆ 1 ಪದಕ ಬಂದಿದ್ದವು. ಈ ವರ್ಷ 4 ಪದಕಗಳು ಬಂದಿದ್ದು ಸಂತಸವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಮಹಿಳಾ ಹಾಕಿ ತಂಡಕ್ಕೆ ಕೊಡಗಿನ ಕೊಡುಗೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drowns in Farm Pond: ಜಾನುವಾರು ಮೇಯಿಸುತ್ತಿದ್ದಾಗ ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

Drowns in Farm Pond: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು-ತಲಕಾಲಕೊಪ್ಪ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಜಾನುವಾರು ಮೇಯಿಸಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ.

VISTARANEWS.COM


on

Drowns in Farm Pond
Koo

ಶಿವಮೊಗ್ಗ: ಜಾನುವಾರು ಮೇಯಿಸಲು ತೆರಳಿದ್ದ ಬಾಲಕ, ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ (Drowns in Farm Pond) ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು-ತಲಕಾಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಾಲೆ ರಜೆ ಇರುವ ಹಿನ್ನೆಲೆ ಜಾನುವಾರು ಮೇಯಿಸಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಕೊನೆಯುಸಿರೆಳೆದಿದ್ದಾನೆ.

ಸಾತ್ವಿಕ್ (14) ಮೃತ ಬಾಲಕ. ಶಾಲೆ ರಜೆ ಇದ್ದ ಹಿನ್ನೆಲೆಯಲ್ಲಿ ಜಾನುವಾರು ಮೇಯಿಸಲು ಸಾತ್ವಿಕ್ ತೆರಳಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಬಾಲಕನ ಮೃತದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

ಬರ್ತ್ ಡೇ ಆಚರಣೆ ವಿಚಾರಕ್ಕೆ ಕಿರಿಕ್; ಇಬ್ಬರು ಯುವಕರಿಗೆ ಚಾಕು ಇರಿತ

ಶಿವಮೊಗ್ಗ: ಬರ್ತ್ ಡೇ ಆಚರಣೆ ವಿಚಾರಕ್ಕೆ ಯುವಕರ‌ ಮಧ್ಯೆ ಕಿರಿಕ್ ನಡೆದು, ಇಬ್ಬರಿಗೆ ಚಾಕು ಇರಿದಿರುವುದು ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ ನಡೆದಿದೆ. ಹುಟ್ಟು ಹಬ್ಬ ಆಚರಿಸಿಕೊಳ್ಳುವಾಗ ಪಟಾಕಿ ಹೊಡೆಯುವುದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ನಡೆದಿದೆ.

ನಿರಂಜನ್ ಹಾಗೂ ಗೌತಮ್ ಗಾಯಾಳುಗಳು. ಅಭಿ ಅಲಿಯಾಸ್ ಅಭಿಷೇಕ್ ಆರೋಪಿಯಾಗಿದ್ದಾನೆ. ಹುಟ್ಟು ಹಬ್ಬ ಆಚರಿಸಿಕೊಳ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಯುವಕರ ಮಧ್ಯೆ ಗಲಾಟೆ ಶುರುವಾಗಿ. ಈ ವೇಳೆ ನಿರಂಜನ್ ಹಾಗೂ ಗಲಾಟೆ ಬಿಡಿಸಲು ಬಂದ ಗೌತಮ್‌ಗೆ ಆರೋಪಿ ಅಭಿ ಚಾಕು ಇರಿದಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಪ್ರಕರಣ ನಡೆದಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕೆರೆಯಲ್ಲಿ ಈಜಲು ಹೋದ ಬಾಲಕ ಸಾವು

Road Accident

ಚಿಕ್ಕಮಗಳೂರು/ಗದಗ: ಕೆರೆಯಲ್ಲಿ ಈಜಲು ಹೋದ (Drowned in water) ಬಾಲಕನೊರ್ವ ಮೃತಪಟ್ಟಿದ್ದಾನೆ. ಶಶಾಂಕ್ ಮೃತ ದುರ್ದೈವಿ. ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ಘಟನೆ (Accident News) ನಡೆದಿದೆ.

ಚಿಕ್ಕಮಗಳೂರು ನಗರದ ಗಾಂಧಿನಗರ ಬಡಾವಣೆಯ ಶಶಾಂಕ್‌ 8ನೇ ತರಗತಿಯಲ್ಲಿ ಓದುತ್ತಿದ್ದ. ತನ್ನ ನಾಲ್ವರು ಗೆಳೆಯರೊಂದಿಗೆ ಈಜಲು ಕೆರೆಗೆ ಬಂದಿದ್ದ. ಈಜಲು ಜಿಗಿಯಲು ಹೋದಾಗ ಕೆರೆಯಲ್ಲಿ ಕಾಲು ಹೂತುಕೊಂಡಿದೆ. ಕೆರೆಯಿಂದ ಮೇಲೆ ಬಾರಲು ಆಗದೆ ಶಶಾಂಕ್‌ (13) ದುರ್ಮರಣ ಹೊಂದಿದ್ದಾನೆ.

ಉಳಿದ ಬಾಲಕರು ಪಾಯದಿಂದ ಪಾರಾಗಿದ್ದು, ಕೂಡಲೇ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಕೆರೆಯಿಂದ ವಿದ್ಯಾರ್ಥಿ ಶವವನ್ನು ಮೇಲೆತ್ತಿದ್ದಾರೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

ಬಸ್‌-ಬೈಕ್‌ ಡಿಕ್ಕಿಯಾಗಿ ಇಬ್ಬರು ರೈತರ ದುರ್ಮರಣ

ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ರೈತರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ಬಳಿ ಘಟನೆ ನಡೆದಿದೆ.

ಬಿತ್ತನೆ ಬೀಜ ಖರೀದಿ ಮಾಡಿ ಬೈಕ್‌ನಲ್ಲಿ ಊರಿಗೆ ಹೊರಟ್ಟಿದ್ದಾಗ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿತ್ತು. ಮುಂಡರಗಿ ಕಡೆಯಿಂದ ಬೈಕ್ ಸವಾರರು ಹಳ್ಳಿಗುಡಿಗೆ ಹೊರಟ್ಟಿದ್ದರು. ಹುಬ್ಬಳ್ಳಿ-ವಿಜಯನಗರ ಹೆದ್ದಾರಿ ಕ್ರಾಸಿಂಗ್ ಮಾಡಿ ಹಳ್ಳಿಗುಡಿಗೆ ಹೊರಟ್ಟಿದ್ದಾಗ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಡಿಕ್ಕಿ ರಭಸಕ್ಕೆ ಬೈಕ್‌ ಸಮೇತ ಬಸ್‌ನಡಿ ಸಿಲುಕಿದ ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರ ಗ್ರಾಮದ ಮಾರುತಿ ಯಾಟಿ ಮೃತಪಟ್ಟಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಮಳೆ

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Weather Forecast : ರಾಜ್ಯದ ಹಲವೆಡೆ ಮಳೆಗೆ (Rain News) ಅವಾಂತರಗಳೇ ಸೃಷ್ಟಿಯಾಗಿವೆ. ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತಗೊಂಡರೆ, ಯಾದಗಿರಿಯಲ್ಲಿ ಮನೆ ಚಾವಣಿ ಕುಸಿದಿದೆ. ವಿಜಯನಗರದ ರೈಲ್ವೆ ನಿಲ್ದಾಣದಲ್ಲಿ ಚಾವಣಿಯಿಂದ ನೀರು ಸೋರಿಕೆ ಆಗುತ್ತಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯೊಂದಿಗೆ ಗುಡುಗು ಇರಲಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಸೇರಿದಂತೆ ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ: Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಕಡಲತೀರಕ್ಕೆ ಇಳಿಯದಂತೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಅಲೆಗಳ ಅಬ್ಬರ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕಡಲತೀರದಲ್ಲಿ ಲೈಫ್‌ಗಾರ್ಡ್‌ಗಳು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಘಟ್ಟದ ಮೇಲಿನ ಕೆಲ ತಾಲೂಕುಗಳಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಕರಾವಳಿ ತಾಲೂಕುಗಳಲ್ಲಿ ಬಿಸಿಲಿನ ವಾತಾವರಣ ಇತ್ತು.

ರೈಲ್ವೆ ನಿಲ್ದಾಣದಲ್ಲಿ ನೀರು ಸೋರಿಕೆ

ಮಳೆಯಿಂದಾಗಿ ರೈಲ್ವೆ ನಿಲ್ದಾಣದ ಚಾವಣಿಯು ಸೋರಿಕೆ ಆಗುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿಜಯನಗರದ ಹೊಸಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಭಾರಿ ಮಳೆಯಿಂದ ಅವಾಂತರವೇ ಸೃಷ್ಟಿಸಿಯಾಗಿದೆ. ರೈಲು ನಿಲ್ದಾಣದ ಒಳಗೆ ಮಳೆ ನೀರು ನುಗ್ಗಿದ್ದು, ಹೊಸಪೇಟೆ ರೈಲ್ವೆ ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿ ಮಳೆ ನೀರು ಸೋರುತ್ತಿದೆ. ಒಂದು ವರ್ಷದ ಹಿಂದೆ ಕೇಂದ್ರ ಸರ್ಕಾರವು ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿತ್ತು.

ರಾಯಚೂರಲ್ಲಿ ಸೇತುವೆ ಸಂಪರ್ಕ ಕಡಿತ

ರಾಯಚೂರಲ್ಲಿ ಅಬ್ಬರದ ಮಳೆ ಮುಂದುವರಿದಿದ್ದು, ಹಲವು ಗ್ರಾಮಗಳ ಸೇತುವೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಫತ್ತೇಪೂರ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಅಪಾಯದಲ್ಲೇ ಸೇತುವೆ ದಾಟಲು ಜನರು ಮುಂದಾಗುತ್ತಿದ್ದಾರೆ. ಸ್ವಲ್ಪ ಯಾಮಾರಿದರೂ ನೀರಲ್ಲಿ‌ ಕೊಚ್ಚಿ ಹೋಗುವ ಸಾಧ್ಯತೆ ಇದೆ.

ಯಾದಗಿರಿಯಲ್ಲಿ ಮಳೆಗೆ ಚಾವಣಿ ಕುಸಿತ

ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಇಡೀ ಮನೆಯ ಚಾವಣಿ ಕುಸಿದಿದ್ದು, ಪವಾಡ ಸದೃಶ್ಯ ಎಂಬಂತೆ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ತೆಗ್ಗೆಳ್ಳಿ ಗ್ರಾಮದ ಭೀರಪ್ಪ ಪೂಜಾರಿ ಹಾಗೂ ಸುರೇಶ್ ಕಲ್ಮನಿ ಎಂಬುವರಿಗೆ ಸೇರಿದ ಮನೆಯು ವಿಪರೀತ ಗಾಳಿ ಮಳೆಯಿಂದ ಚಾವಣಿ ಕುಸಿದಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ಸಂಪೂರ್ಣ ಹಾಳಾಗಿವೆ.

ರಾಯಚೂರಲ್ಲಿ ಗಾಳಿಗೆ ಮಳೆಗೆ ಹಾರಿಹೋದ ಜೋಪಡಿಗಳು

ರಾಯಚೂರು ಜಿಲ್ಲೆಯಲ್ಲಿ ತಡರಾತ್ರಿ ಗಾಳಿ ಸಹಿತ ಭಾರಿ ಮಳೆಗೆ ಲಿಂಗಸಗೂರಿನಲ್ಲಿ ಜೋಪಡಿಗಳು ಹಾರಿಹೋಗಿದೆ. ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಜನರು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ 50 ಕ್ಕೂ ಹೆಚ್ಚು ಜೋಪಡಿಗಳಿಗೆ ಹಾನಿಯಾಗಿದೆ. ಸೂರುಯಿಲ್ಲದೆ ಬುಡ್ಗ ಜಂಗಮ ಸಮುದಾಯದವರು ಕಂಗಲಾಗಿದ್ದಾರೆ. ಜೋಪಡಿಗಳಿಗೆ ಹಾನಿಯಾದರೂ,ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಬುಡ್ಗ ಜಂಗಮ ಸಮುದಾಯದವರ ಆಕ್ರೋಶ ಹೊರಹಾಕಿದ್ದಾರೆ.

ಧಾರವಾಡದಲ್ಲಿ ಬಿತ್ತನೆ ಕಾರ್ಯ ಚುರುಕು

ಮುಂಗಾರು ಪೂರ್ವ ಮಳೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಮುಂಗಾರಿನ ಬೆಳೆಗಳನ್ನು ಬಿತ್ತುವ ಕಾರ್ಯ ಆರಂಭವಾಗಿದೆ. ಧಾರವಾಡ ಗ್ರಾಮೀಣ ಹಾಗೂ ಜಿಲ್ಲೆಯಾದ್ಯಂತ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಮುಂಗಾರು ಬೆಳೆಗಳಾದ ಹೆಸರು, ಕಡಲೆ, ಶೇಂಗಾ ಇತ್ಯಾದಿ ಬೆಳೆಗಳನ್ನು ರೈತರು ಬಿತ್ತುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಬಿತ್ತನೆ ಕಾರ್ಯ ಚುರುಕು ಪಡೆದಿದೆ. ಕಳೆದ ವರ್ಷ ಬರ ಹಿನ್ನೆಲೆ ಈ ಮುಂಗಾರು ಪೂರ್ವವೇ ಬಿತ್ತನೆಗೆ ಸಿದ್ಧತೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

Self Harming: ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೊತ್ತದ ಹಗರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

VISTARANEWS.COM


on

self harming chandrashekar
Koo

ಶಿವಮೊಗ್ಗ: ಮೇಲಧಿಕಾರಿಗಳ ಕಿರುಕುಳ (harassment) ಸಹಿಸಲಾಗುತ್ತಿಲ್ಲ ಎಂದು ಆರೋಪಿಸಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ (karnataka state valmiki development corporation) ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಎಂಬವರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಶಿವಮೊಗ್ಗದ (Shivamogga news) ತಮ್ಮ ಮನೆಯಲ್ಲಿ ಅವರು ನೇಣು ಹಾಕಿಕೊಂಡಿದ್ದಾರೆ.

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೊತ್ತದ ಹಗರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್ ಒಂದು ಸಿಕ್ಕಿದ್ದು, ಅದರಲ್ಲಿ ತಮ್ಮ ಮೇಲಧಿಕಾರಿಗಳನ್ನು ತಮ್ಮ ಸಾವಿಗಾಗಿ ದೂರಿದ್ದಾರೆ. 6 ಪುಟಗಳ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಪದ್ಮನಾಭ, ಪರಶುರಾಮ್, ಶುಚಿಸ್ವತ ಎಂಬ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೀಪ್‌ಫೇಕ್‌ ಬಳಸಿ ವಿದ್ಯಾರ್ಥಿನಿಯರ ನಗ್ನಚಿತ್ರ ರೂಪಿಸಿ ಕಿರುಕುಳ

ಬೆಂಗಳೂರು: ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್‌ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ. ಡೀಪ್‌ಫೇಕ್‌ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.

ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.

ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: Kichcha Sudeep: ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಕಿಚ್ಚ ಸುದೀಪ್‌ಗೆ ಇಲ್ಲ ಆಹ್ವಾನ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ಹೇಗೆ?

Karnataka Weather Forecast : ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಸೋಮವಾರವು (Heavy Rain) ಮುಂದುವರಿಯಲಿದೆ.ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Rain News) ಬೀಸಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯೊಂದಿಗೆ ಗುಡುಗು ಸಹಿತ ಮಿಂಚಿನೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Rainfall Expect: ನಕ್ಷತ್ರಗಳ ಪ್ರಕಾರ ಈ ವರ್ಷ ಯಾವಾಗ ಮಳೆ ಬರಬಹುದು? ಇಲ್ಲಿದೆ ಪಕ್ಕಾ ಲೆಕ್ಕಾಚಾರ!

ಬಿಸಿಲಿನ ತಾಪ ದಿನೇದಿನೇ ಹೆಚ್ಚಾಗುತ್ತಿದ್ದು, ದಿನಕ್ಕೊಮ್ಮೆಯಾದರೂ ತಲೆ ಎತ್ತಿ ಆಕಾಶದತ್ತ (sky) ನೋಡಿ ಒಂದೆರಡು ಹನಿ ಮಳೆ (Rainfall Expect) ಇವತ್ತಾದರೂ ಸುರಿಯಬಾರದೇ ಎನ್ನುವಂತಾಗಿದೆ. ಈ ನಡುವೆ ಅಗತ್ಯ ಕೆಲಸಗಳಿಗೆ ಮಾತ್ರವಲ್ಲ ಕೆಲವೆಡೆ ಕುಡಿಯಲೂ ನೀರಿಲ್ಲ. ಇನ್ನು ತೋಟ, ಗದ್ದೆಗಳಲ್ಲಿನ ಫಸಲು ಬಿಸಿಲಿನ ಬೇಗೆಯಿಂದ ಸುಟ್ಟು ಹೋದಂತಾಗಿದೆ. ಈ ಬಾರಿ ಏಪ್ರಿಲ್ (april) ಮತ್ತು ಮೇ (may) ತಿಂಗಳ ತೀವ್ರವಾದ ಶಾಖವನ್ನು ಗಮನಿಸಿದರೆ ಈಗಲೇ ಹೀಗೆ ಇನ್ನು ಭವಿಷ್ಯದಲ್ಲಿ ಹೇಗಿರಬಹುದು ಎನ್ನುವ ಚಿಂತೆ ಎಂಥವರನ್ನೂ ಕಾಡದೇ ಇರಲಾರದು.

ಮಳೆ (rain) ಯಾವಾಗ ಬರುತ್ತದೆ ಎನ್ನುವುದನ್ನು ಈಗ ವಿಜ್ಞಾನಿಗಳು (Scientist) ನಿಖರವಾಗಿ ಹೇಳುತ್ತಾರೆ. ಆದರೆ ಹಿಂದಿನ ಕಾಲದಲ್ಲಿ ನಕ್ಷತ್ರಗಳ (star) ಚಲನೆಯನ್ನು ಆಧರಿಸಿ ಮಳೆ ಯಾವಾಗ ಬರಬಹುದು ಎನ್ನುವುದನ್ನು ನಮ್ಮ ಹಿರಿಯರು ಅಂದಾಜು ಮಾಡುತ್ತಿದ್ದರು.

ಮಳೆಯ ಮುನ್ಸೂಚನೆ

ಆಕಾಶದಲ್ಲಿ ಆಗಾಗ ಕಾಣಿಸುವ ಮೋಡಗಳು ಮಳೆಯ ಮುನ್ಸೂಚನೆ ನೀಡಿದರೂ ಕೆಲವೇ ಕ್ಷಣಗಳಲ್ಲಿ ಮೋಡ ಮರೆಯಾಗಿ ಬೇಸರ ಮೂಡುವಂತೆ ಮಾಡುತ್ತದೆ. ಆದರೆ ನಕ್ಷತ್ರಗಳು ನಿಖರವಾಗಿ ಮಳೆಯ ಮುನ್ಸೂಚನೆಯನ್ನು ನೀಡುತ್ತವೆ. ಹಿಂದೆ ನಮ್ಮ ಹಿರಿಯರು ಈ ನಕ್ಷತ್ರಗಳನ್ನೇ ನೋಡಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ನಿಖರವಾಗಿ ಹೇಳುತ್ತಿದ್ದರು.

ಯಾವ ನಕ್ಷತ್ರಗಳು?

ಅಶ್ವಿನಿಯಿಂದ ವಿಶಾಖ ನಕ್ಷತ್ರದವರೆಗೆ ಗುರುತಿಸಲಾದ ಮಳೆ ನಕ್ಷತ್ರಗಳು ಸಾಂಪ್ರದಾಯಿಕವಾಗಿ ಜಾನಪದ ಮತ್ತು ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ ಮಳೆಯನ್ನು ಸೂಚಿಸುತ್ತವೆ ಎಂದೇ ನಂಬಲಾಗಿದೆ. ಅನಾದಿ ಕಾಲದಿಂದಲೂ ಈ ನಕ್ಷತ್ರಗಳು ರೈತರಿಗೆ ಮಳೆಯ ಮಾಹಿತಿ ನೀಡುತ್ತಿದ್ದವು.

ಈಗ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದರೆ ಶತಮಾನಗಳಿಗಿಂತಲೂ ಹಿಂದೆ ನಕ್ಷತ್ರ ನೋಡಿಯೇ ಮಳೆಯ ಸೂಚನೆ ಪಡೆಯುತ್ತಿದ್ದರು, ಈ ಬಾರಿ ಮಳೆಯ ನಕ್ಷತ್ರಗಳು ಏನು ಹೇಳುತ್ತವೆ ಎಂಬುದರ ಕುರಿತಾದ ಒಂದು ಕಿರು ಮಾಹಿತಿ ಇಲ್ಲಿದೆ.

ಏಪ್ರಿಲ್‌ನಲ್ಲಿ ಮಳೆ ಸಾಧ್ಯತೆ ಕಡಿಮೆ

ಏಪ್ರಿಲ್ 13ರಂದು ಪ್ರಾರಂಭವಾಗುವ ಅಶ್ವಿನಿ ನಕ್ಷತ್ರವು ಆಗಾಗ ಸಾಮಾನ್ಯ ಮತ್ತು ಸಣ್ಣ ಮಳೆಯನ್ನು ತರುವ ನಿರೀಕ್ಷೆಯಿದೆ. ಏಪ್ರಿಲ್ 27ರಂದು ಪ್ರಾರಂಭವಾಗುವ ಭರಣಿ ನಕ್ಷತ್ರವು ಸಾಮಾನ್ಯ ಮಳೆಯನ್ನು ತರುತ್ತದೆ. ಆದರೂ ಈ ಬಾರಿ ಏಪ್ರಿಲ್ ನಲ್ಲಿ ಈ ಮಳೆ ನಕ್ಷತ್ರಗಳು ಮಳೆಯಾಗುವ ಸೂಚನೆಯನ್ನು ಖಾತ್ರಿಪಡಿಸಿಲ್ಲ. ಹೀಗಾಗಿ ಏಪ್ರಿಲ್ ನಲ್ಲಿ ಮಳೆ ಕಾಣಿಸಿಕೊಳ್ಳುವುದು ಬಹುತೇಕ ಅನುಮಾನ.

ಮೇ 11ರ ಬಳಿಕ ಮಳೆ ಸಾಧ್ಯತೆ

ಮೇ 11ರ ಬಳಿಕ ಕೃತ್ತಿಕಾ ನಕ್ಷತ್ರವು ಮಳೆ ಸೂಚನೆ ನೀಡಿದೆ. ಮೇ 24ರಿಂದ ರೋಹಿಣಿ ನಕ್ಷತ್ರವು ಸಾಮಾನ್ಯ ಮಳೆ ತರುವ ನಿರೀಕ್ಷೆಯಿದೆ. ಆದರೂ ಇದು ಧರೆಯ ಬಿಸಿಲಿನ ತಾಪವನ್ನು ಸಂಪೂರ್ಣ ಕಡಿಮೆ ಮಾಡುತ್ತದೆ ಎಂದು ಹೇಳಲಾಗದು.

ಜೂನ್ 21ರಿಂದ ಪುನರ್ವಸು, ಜುಲೈ 5ರಿಂದ ಆರ್ಧ್ರ, ಜುಲೈ 19 ರಿಂದ ಪುಷ್ಯ, ಆಗಸ್ಟ್ 2ರಿಂದ ಆಶ್ಲೇಷ, ಜುಲೈ 16 ರಿಂದ ಮಾಘ ಮತ್ತು ಜುಲೈ 30 ರಿಂದ ಹಸ್ತ ನಕ್ಷತ್ರಗಳು ಉತ್ತಮ ಮಳೆಯಾಗುವ ಸೂಚನೆ ನೀಡಿದೆ. ಇದರ ಭವಿಷ್ಯವನ್ನು ಆಧರಿಸಿ ಸೆಪ್ಟೆಂಬರ್ 13 ರಿಂದ ಉತ್ತರ ಮಳೆ ನಿರೀಕ್ಷಿಸಲಾಗಿದೆ, ಹಸ್ತ ಸೆಪ್ಟೆಂಬರ್ 26 ರಿಂದ, ಅಕ್ಟೋಬರ್ 10 ರಿಂದ ಚಿತ್ರ ಮಳೆ, ಅಕ್ಟೋಬರ್ 23 ರಿಂದ ಸ್ವಾತಿ ಮಳೆ ಮತ್ತು ನವೆಂಬರ್ 1 ರಿಂದ ವಿಶಾಖ ಮಳೆಯಾಗುವ ನಿರೀಕ್ಷೆ ಇದೆ.

ಹಿಂದೂ ಜ್ಯೋತಿಷ್ಯದಲ್ಲಿ ಬಳಸಲಾಗುವ ಒಟ್ಟು 27 ನಕ್ಷತ್ರಗಳಿವೆ. ಇದು ಒಂದು ವರ್ಷದಲ್ಲಿ ಆಕಾಶಗೋಳದಾದ್ಯಂತ ಸೂರ್ಯನ ದಾರಿಯನ್ನು ನಿರ್ಧರಿಸತ್ತದೆ. ಹಿಂದೂ ಸಂಸ್ಕೃತಿಯಲ್ಲಿ ಜ್ಯೋತಿಷ್ಯ, ಜಾತಕ ಹೊಂದಾಣಿಕೆ, ಆಚರಣೆಗಳು ಮತ್ತು ಶುಭ ಸಮಾರಂಭಗಳ ಸಮಯದಲ್ಲಿ ನಕ್ಷತ್ರಗಳ ಪಾತ್ರ ಮಹತ್ವದ್ದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಪ್ರಮುಖ ಸುದ್ದಿ3 mins ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ30 mins ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ55 mins ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ1 hour ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ1 hour ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ1 hour ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ1 hour ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ1 hour ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ1 hour ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ6 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌