Road Rage Case: ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ

ದೇಶ

Road Rage Case: ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ

ಪಾರ್ಕಿಂಗ್‌ ಸ್ಥಳದಲ್ಲಿ ನಡೆದ ಜಗಳ (Road Rage Case) ಇದಾಗಿದ್ದು , ಗುರ್ನಾಮ್‌ ಸಿಂಗ್‌ ಎಂಬುವರ ತಲೆಗೆ ಸಿಧು ಹೊಡೆದಿದ್ದರು. ಕೆಲ ದಿನಗಳಲ್ಲಿ ಗುರ್ನಾಮ್‌ ಸಿಂಗ್‌ ಮೃತಪಟ್ಟಿದ್ದರು.

VISTARANEWS.COM


on

Navajot Singh
ನವಜೋತ್‌ ಸಿಂಗ್‌ ಸಿಧು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಮಾರು 34 ವರ್ಷಗಳ ಹಿಂದಿನ ರಸ್ತೆ ಜಗಳ (Road Rage Case) ಪ್ರಕರಣವೊಂದರಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಕ್ರಿಕೆಟರ್‌ ನವಜೋತ್‌ ಸಿಂಗ್‌ ಸಿಧು (Navjot Singh Sidhu)ಗೆ 1 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ತಾವು ಸುಪ್ರೀಂಕೋರ್ಟ್‌ ಆದೇಶಕ್ಕೆ ತಲೆಬಾಗಿ, ಕಾನೂನು ಪರಿಪಾಲನೆ ಮಾಡುವುದಾಗಿ ಸಿಧು ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾಗಿದ್ದ ನವಜೋತ್‌ ಸಿಂಗ್‌ ಸಿಧು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಕಾಂಗ್ರೆಸ್‌ ಸೋತ ಬಳಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಂಜಾಬ್‌ನಲ್ಲಿ ಈ ಬಾರಿ ಕಾಂಗ್ರೆಸ್‌ನ್ನು ನೆಲಕಚ್ಚಿಸಿದ ನಾಯಕ ಎಂಬ ಕುಖ್ಯಾತಿಗೂ ಪಾತ್ರರಾಗಿದ್ದಾರೆ.

1988ರ ಡಿಸೆಂಬರ್‌ 27ರಂದು ನವಜೋತ್‌ ಸಿಂಗ್‌ ಸಿಧು ಮತ್ತು ಅವರ ಸಹಾಯಕ ರೂಪಿಂದರ್‌ ಸಿಂಗ್‌ ಸಂಧು ಸೇರಿ ಪಾರ್ಕಿಂಗ್‌ ಸ್ಥಳವೊಂದರಲ್ಲಿ ಪಟಿಯಾಲಾದ ನಿವಾಸಿ ಗುರ್ನಾಮ್‌ ಸಿಂಗ್‌ ಎಂಬುವರೊಂದಿಗೆ ಜಗಳವಾಡಿದ್ದರು. ಈ ಜಗಳದಲ್ಲಿ ಸಿಧು ಮತ್ತು ಸಂಧು ಸೇರಿ ಗುರ್ನಾಮ್‌ ಸಿಂಗ್‌ರನ್ನು ಅವರ ಕಾರಿನಿಂದ ಕೆಳಗೆ ಎಳೆದು, ತಲೆಗೆ ಹೊಡೆದಿದ್ದರು. ಗುರ್ನಾಮ್‌ ಸಿಂಗ್‌ ಆ ಕ್ಷಣದಲ್ಲಿ ಮೃತಪಡದೆ ಇದ್ದರೂ, ಸ್ವಲ್ಪ ದಿನಗಳ ಬಳಿಕ ಸಾವನ್ನಪ್ಪಿದ್ದರು.

ಮೃತ ಗುರ್ನಾಮ್‌ ಸಿಂಗ್‌ ಕುಟುಂಬದವರು ಮೊದಲು ಪಟಿಯಾಲಾ ಸೆಷನ್ಸ್‌ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಸೂಕ್ತವಾದ ದಾಖಲೆಗಳು ಇಲ್ಲದ ಕಾರಣದಿಂದ 1999ರಲ್ಲಿ ನವಜೋತ್‌ ಸಿಂಗ್‌ ಸಿಧು ಹಾಗೂ ಅವರ ಸಹಚರ ಸಂಧು ಅವರನ್ನು ಸೆಷನ್ಸ್‌ ನ್ಯಾಯಾಲಯ ದೋಷಮುಕ್ತಗೊಳಿಸಿತ್ತು. ಮತ್ತೆ ಕುಟುಂಬದವರು ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಉಚ್ಛ ನ್ಯಾಯಾಲಯ, ಇದು ಶಿಕ್ಷಾರ್ಹ ನರಹತ್ಯೆ ಎಂದು ಹೇಳಿ, ಸಿಧುಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ | ಕಾಂಗ್ರೆಸ್‌ಗೆ ಹಾರ್ದಿಕ್‌ ಪಟೇಲ್‌ ಗುಡ್‌ಬೈ, ಮುಂದಿನ ನಿಲ್ದಾಣ ಬಿಜೆಪಿ?

ಹೈಕೋರ್ಟ್‌ ತೀರ್ಪಿನ ವಿರುದ್ಧ ನವಜೋತ್‌ ಸಿಂಗ್‌ ಸಿಧು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಪ್ರಕರಣವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದ ಕೋರ್ಟ್‌‌ 2018ರಲ್ಲಿ, ಗುರ್ನಾಮ್‌ ಸಿಂಗ್‌ ಅವರು ನವಜೋತ್‌ ಸಿಂಗ್‌ ಸಿಧು ಅವರು ಹೊಡೆದ ಒಂದೇ ಏಟಿಗೆ ಮೃತಪಟ್ಟಿದ್ದಾರೆ ಎಂದು ಹೇಳಲು ಸೂಕ್ತ ದಾಖಲೆ ಇಲ್ಲ. ಆದರೂ ಗುರ್ನಾಮ್‌ಗೆ 65 ವರ್ಷ ಆಗಿತ್ತು. ಹಿರಿಯ ನಾಗರಿಕರ ಮೇಲೆ ಕೈ ಮಾಡುವುದು ಅಪರಾಧ ಎಂದು ಹೇಳಿ, ಸಿಧುಗೆ 1000 ರೂಪಾಯಿ ದಂಡ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯನ್ನು ರದ್ದು ಮಾಡಿತ್ತು. ನವಜೋತ್‌ ಸಿಂಗ್‌ ಸಿಧು ಸಹಚರ ರೂಪಿಂದರ್‌ ಸಿಂಗ್‌ ಸಂಧುರನ್ನು ಸಂಪೂರ್ಣವಾಗಿ ದೋಷಮುಕ್ತಗೊಳಿಸಿತ್ತು.

ಸುಪ್ರೀಂಕೋರ್ಟ್‌ನ ಈ ಆದೇಶದ ಬಗ್ಗೆ ಗುರ್ಮಾನ್‌ ಸಿಂಗ್‌ ಕುಟುಂಬ ಅತೃಪ್ತಿ ವ್ಯಕ್ತಪಡಿಸಿತ್ತು. ಈ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಮನವಿ ಮಾಡಿ ಮತ್ತೆ ಸುಪ್ರೀಂಕೋರ್ಟ್‌ಗೆ ಕುಟುಂಬದ ಸದಸ್ಯರೊಬ್ಬರು ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ನ್ಯಾಯಮೂರ್ತಿಗಳಾದ ಎ.ಎಂ.ಖನ್ವಿಲ್ಕರ್‌ ಮತ್ತು ಎಸ್‌.ಕೆ.ಕೌಲ್‌ ನೇತೃತ್ವದ ಪೀಠ ವಿಚಾರಣೆ ನಡೆಸಿತ್ತು. ಸಿಧು ಅವರಿಗೆ ನರಹತ್ಯೆ ಪ್ರಕರಣದಡಿ ಶಿಕ್ಷೆ ವಿಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ಇದನ್ನೂ ಓದಿ | ಕಾಂಗ್ರೆಸ್‌ ನಲ್ಲಿ ಯುವಕರು V/s ಹಿರಿಯರು, 50% ಯುವ ಮೀಸಲಿಗೆ ಸೀನಿಯರ್ಸ್‌ ಗರಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: ಇಂದು ಹತ್ರಾಸಕ್ಕೆ ರಾಹುಲ್‌ ಗಾಂಧಿ; ಕಾಲ್ತುಳಿತ ಸಂತ್ರಸ್ತರ ಭೇಟಿ

Hathras Stampede: ಉತ್ತರಪ್ರದೇಶದ ಹತ್ರಾಸಕ್ಕೆ ಇಂದು (ಜುಲೈ 5) ಲೋಕಸಭೆಯ ಪ್ರತಿಪಕ್ಷದ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಭೇಟಿ ನೀಡಲಿದ್ದು, ಜುಲೈ 2ರಂದು ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರಪ್ರದೇಶದ ಹತ್ರಾಸಕ್ಕೆ ಇಂದು (ಜುಲೈ 5) ಲೋಕಸಭೆಯ ಪ್ರತಿಪಕ್ಷದ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) ಭೇಟಿ ನೀಡಲಿದ್ದು, ಜುಲೈ 2ರಂದು ನಡೆದ ಕಾಲ್ತುಳಿತ (Hathras Stampede)ದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಕಾಲ್ತುಳಿತಕ್ಕಿ ಸಿಲುಕಿ ಮೃತಪಟ್ಟಪಟ್ಟವರ ಸಂಖ್ಯೆ 123ಕ್ಕೆ ಏರಿದ್ದು, ಹಲವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರಂತದ ಹಿನ್ನೆಲೆ

ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಜುಲೈ 2ರಂದು ಸ್ವಯಂ ಘೋಷಿತ ʼದೇವ ಮಾನವʼ ಭೋಲೆ ಬಾಬಾ (Bhole Baba) ಅವರ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಕ್ಕಟ್ಟಾದ ಸ್ಥಳದಲ್ಲಿ ಲಕ್ಷಾಂತರ ಮಂದಿ ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು.

ಪೊಲೀಸ್‌ ತನಿಖೆಯ ಪ್ರಾಥಮಿಕ ವರದಿಯು, ʼʼ80 ಸಾವಿರ ಜನರಿಗಾಗಿ ಅನುಮತಿ ಪಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಭೋಲೆ ಬಾಬಾ ಮಧ್ಯಾಹ್ನ 12.30ರ ಸುಮಾರಿಗೆ ಸತ್ಸಂಗ ಪೆಂಡಾಲ್‌ಗೆ ಆಗಮಿಸಿದ್ದರು. ಕಾರ್ಯಕ್ರಮವು 1 ಗಂಟೆ ನಡೆಯಿತು. ನಂತರ ಮಧ್ಯಾಹ್ನ 1.40ರ ಸುಮಾರಿಗೆ ಭೋಲೆ ಬಾಬಾ ಪೆಂಡಾಲ್‌ನಿಂದ ಹೊರಬಂದರು. ಭೋಲೆ ಬಾಬಾ ಹೊರಡುವ ವೇಳೆ ವೇಳೆ ಲಕ್ಷಾಂತರ ಮಂದಿ ಅವರ ಪಾದ ಮುಟ್ಟಿ, ಅವರು ಮೆಟ್ಟಿದ ನೆಲದ ಮಣ್ಣನ್ನು ತೆಗೆದುಕೊಳ್ಳಲು ಓಡಿ ಹೋಗಿದ್ದಾರೆ. ಹಾಗೆ ಓಡಿ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಒಬ್ಬರನ್ನೊಬ್ಬರು ತುಳಿದುಕೊಂಡು ಮುಂದೆ ಸಾಗಿದ್ದು ಹಾಗೂ ಚರಂಡಿಯಲ್ಲಿ ಬಿದ್ದಿದ್ದು ಸಾವಿನ ಸಂಖ್ಯೆ ಜಾಸ್ತಿಯಾಗಲು ಕಾರಣ” ಎಂದು ವಿವರಿಸಿದೆ.

ತಲೆ ಮರೆಸಿಕೊಂಡಿರುವ ಭೋಲೆ ಬಾಬಾ

ಘಟನೆ ನಡೆದ ಬಳಿಕ ಭೋಲೆ ಬಾಬಾ ತಲೆ ಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಭೋಲೆ ಬಾಬಾ ಅವರು ತಮ್ಮ ಮೈನ್ಪುರಿಯ ಆಶ್ರಮದಲ್ಲಿಯೂ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ ಭೋಲೆ ಬಾಬಾ ಅವರ ವಕೀಲರು ಮಾತನಾಡಿ, ʼʼಅವರು (ಭೋಲೆ ಬಾಬಾ) ಎಲ್ಲಿದ್ದಾರೆಂದು ತಿಳಿದಿಲ್ಲ. ಈ ದುರಂತಕ್ಕೆ ಅವರು ಕಾರಣರಲ್ಲ. ಅವರು ಕಾನೂನಿನ ಕಣ್ಣು ತಪ್ಪಿಸಿ ಓಡಾಡುವುದಿಲ್ಲ. ಅವು ಸಂವಿಧಾನವದಲ್ಲಿ ನಂಬಿಕೆ ಇರಿಸಿದ್ದಾರೆ. ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ಅವರು ಪತ್ತೆಯಾದರೆ ಖಂಡಿತವಾಗಿತಯೂ ನಿಮಗೆ ತಿಳಿಸುತ್ತೇನೆʼʼ ಎಂದು ಭೋಲೆ ಬಾಬಾ ಅವರ ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

ಭೋಲೆ ಬಾಬಾ ಅಜ್ಞಾತ ಸ್ಥಳದಿಂದ ಹೇಳಿಕೆ ಬಿಡುಗಡೆ ಮಾಡಿ, ಕಾಲ್ತುಳಿತಕ್ಕೆ ಸಮಾಜಘಾತಕ ಶಕ್ತಿಯೇ ಕಾರಣ ಎಂದು ಆರೋಪಿಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. “ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ” ಎಂದು ಅಲಿಗಢ ಐಜಿ ಶಾಲಾಭ್‌ ಮಾಥುರ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Continue Reading

ದೇಶ

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

ಇ-ರಿಕ್ಷಾದಿಂದ ಚಾಲಕನನ್ನು ಇಳಿಸಿ, ಆತನ ಕೊರಳಪಟ್ಟಿ ಹಿಡಿದು, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಆಟೋ ಚಾಲಕನು ಕೂಡ ಮಂಗಳಮುಖಿಗೆ ಹೊಡೆದಿದ್ದಾನೆ. ಇದೇ ವೇಳೆ, ಮಂಗಳಮುಖಿಗೆ ಏನು ಅನಿಸಿತೋ ಏನೋ, ಕೂಡಲೇ ತಮ್ಮ ಪ್ಯಾಂಟ್‌ ಬಿಚ್ಚಿ, ಬೆತ್ತಲೆಯಾಗಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Viral Video
Koo

ನವದೆಹಲಿ: ರೈಲುಗಳಲ್ಲಿ, ಬಸ್‌ ಸ್ಟ್ಯಾಂಡ್‌ಗಳು, ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಮಂಗಳಮುಖಿಯರು (Transgenders) ಜನರಿಂದ 5-10 ರೂ. ಪಡೆಯುತ್ತಾರೆ. ಜನರೂ ಕರುಣೆ ತೋರಿಸಿ ಅವರಿಗೆ ಹಣ ನೀಡುತ್ತಾರೆ. ಕೆಲವೊಮ್ಮೆ ಕಾಡಿ-ಬೇಡಿ ಮಂಗಳಮುಖಿಯರು ಜನರಿಂದ ಹಣ ಪಡೆಯುತ್ತಾರೆ. ಇದರಿಂದ ಜಗಳಗಳೂ ನಡೆದಿರುವ ಉದಾಹರಣೆಗಳು ಇವೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ, ಮಂಗಳಮುಖಿಯೊಬ್ಬರು 10 ರೂ.ಗಾಗಿ ಎಲ್ಲರ ಮುಂದೆಯೇ ಪ್ಯಾಂಟ್‌ ಬಿಚ್ಚಿಕೊಂಡು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ವ್ಯಕ್ತಿಯು ಇ-ರಿಕ್ಷಾವನ್ನು ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಈತನ ರಿಕ್ಷಾವನ್ನು ಮಂಗಳಮುಖಿ ಹತ್ತಿದ್ದಾರೆ. ಮಂಗಳಮುಖಿಯು ಇಳಿಯುವಾಗ ಎಂದಿನಂತೆ ಇ-ರಿಕ್ಷಾ ಚಾಲಕನು 10 ರೂ. ಬಾಡಿಗೆ ಕೊಡಿ ಎಂದಿದ್ದಾನೆ. ಇದರಿಂದ ಕುಪಿತಗೊಂಡ ಮಹಿಳೆಯು ಆತನ ಜತೆ ಜಗಳಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಬಾಡಿಗೆ ಕೊಡುವುದಿಲ್ಲ ಎಂದು ಹೇಳುವ ಜತೆಗೆ ಬೈದಿದ್ದಾರೆ. ಇದಾದ ನಂತರ ಆಟೋ ಚಾಲಕನು ಕೂಡ ಗದರಿದ್ದಾನೆ. ಆಗ ಮಂಗಳಮುಖಿಯ ಕೋಪ ದ್ವಿಗುಣಗೊಂಡಿದೆ. ಕೂಡಲೇ ಆಟೋ ಚಾಲಕನ ಮೇಲೆ ದಾಳಿ ನಡೆಸಿದ್ದಾರೆ.‌ ಘಟನೆಯು ಎಲ್ಲಿ ನಡೆದಿದೆ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ.

ಇ-ರಿಕ್ಷಾದಿಂದ ಚಾಲಕನನ್ನು ಇಳಿಸಿ, ಆತನ ಕೊರಳಪಟ್ಟಿ ಹಿಡಿದು, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಆಟೋ ಚಾಲಕನು ಕೂಡ ಮಂಗಳಮುಖಿಗೆ ಹೊಡೆದಿದ್ದಾನೆ. ಇದೇ ವೇಳೆ, ಮಂಗಳಮುಖಿಗೆ ಏನು ಅನಿಸಿತೋ ಏನೋ, ಕೂಡಲೇ ತಮ್ಮ ಪ್ಯಾಂಟ್‌ ಬಿಚ್ಚಿ, ಬೆತ್ತಲೆಯಾಗಿದ್ದಾರೆ. ಪ್ಯಾಂಟ್‌ ಬಿಚ್ಚಿ ಬೆತ್ತಲೆಯಾದ ಬಳಿಕವೂ ಅವರು ಮತ್ತೆ ಚಾಲಕನ ಮೇಳೆ ಹಲ್ಲೆ ನಡೆಸಿದ್ದಾರೆ. ಕೇವಲ 10 ರೂ.ಗಾಗಿ ಇಬ್ಬರೂ ರಸ್ತೆ ಮಧ್ಯೆ ಕಾದಾಡಿಕೊಂಡಿರುವ ವಿಡಿಯೊ ಭಾರಿ ಸದ್ದು ಮಾಡುತ್ತಿದೆ.

ವಿಡಿಯೊ ವೈರಲ್‌ ಆಗುತ್ತಲೇ ಹತ್ತಾರು ಅಭಿಪ್ರಾಯಗಳು ವ್ಯಕ್ತವಾಗಿವೆ. “ಆಟೋ ಚಾಲಕರು 10 ರೂ.ಗಾಗಿ ದುಡಿಯುತ್ತಾರೆ. ಮಂಗಳಮುಖಿಯರು ಅವರಿಗೆ ಬಾಡಿಗೆ ಕೊಡಬೇಕು. ಅವರು ಬೇಕಾದರೆ ಶ್ರೀಮಂತರ ಬಳಿ ಹಣ ಪಡೆಯಲಿ” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿ, “ಮಂಗಳಮುಖಿಯರು ಕೆಲಸ ಮಾಡುತ್ತೇವೆ ಎಂದರೆ ಯಾರೂ ಕೆಲಸ ಕೊಡಲ್ಲ. ಅವರಿಗೆ ಮಾನವೀಯತೆ ಆಧಾರದ ಮೇಲೆ ಜನ ನೆರವು ನೀಡಬೇಕು” ಎಂಬುದಾಗಿ ಹೇಳಿದ್ದಾರೆ. ಹೀಗೆ ಪರ-ವಿರೋಧಗಳ ಚರ್ಚೆಯಾಗಿದೆ.

ಇದನ್ನೂ ಓದಿ: Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Continue Reading

ಕರ್ನಾಟಕ

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

Kalki 2898 AD:ಪ್ಯಾನ್‌ ಇಂಡಿಯಾ ಸ್ಟಾರ್‌ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್‌. ಪ್ರಭಾಸ್ ಅವರ ಕಟ್ಟಾ ಅಭಿಮಾನಿಗಳ ತಂಡವೊಂದು ಇತ್ತೀಚೆಗೆ ಅವರ ‘ಕಲ್ಕಿ 2898 AD’ ಸಿನಿಮಾ ವೀಕ್ಷಿಸಲು ಜಪಾನ್‌ನಿಂದ ಹೈದರಾಬಾದ್‌ಗೆ ಆಗಮಿಸಿತ್ತು.

VISTARANEWS.COM


on

Fans came from Japan to Hyderabad to watch Prabhas starrer Kalki 2898 AD
Koo

ಬೆಂಗಳೂರು: ವೈಜಯಂತಿ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಬಹುಕೋಟಿ ವೆಚ್ಚದ ಕಲ್ಕಿ 2898 ಎಡಿ (Kalki 2898 AD) ಸಿನಿಮಾ ಬಾಕ್ಸ್‌ಆಫೀಸ್‌ನಲ್ಲಿ ಗಳಿಕೆಯ ನಾಗಾಲೋಟ ಮುಂದುವರಿಸಿದೆ. ಸಾಹಸ ದೃಶ್ಯಗಳಿಗೆ ಪ್ರೇಕ್ಷಕ ವರ್ಗ ಮೂಕವಿಸ್ಮಿತನಾಗಿದ್ದ. ನಿರ್ದೇಶಕ ನಾಗ್‌ ಅಶ್ವಿನ್‌ ಅವರ ಕೈ ಚಳಕಕ್ಕೂ ಬಹುಪರಾಕ್‌ ಸಿಕ್ಕಿತ್ತು. ಅಭಿಮಾನಿಗಳಿಂದಲೂ ಪ್ರಭಾಸ್‌ ಹೊಸ ಅವತಾರಕ್ಕೆ ಮೆಚ್ಚುಗೆಯ ಮಹಾಪೂರವೇ ಸಿಕ್ಕಿತ್ತು. ಸಲಾರ್‌ಗೂ ಮುನ್ನ ಸರಣಿ ಸೋಲು ಅನುಭವಿಸಿದ್ದ ಪ್ರಭಾಸ್‌ಗೀಗ ಕಲ್ಕಿ ಸಿನಿಮಾ ಮೂಲಕ ಮತ್ತೆ ಮರು ಜೀವ ಸಿಕ್ಕಿದೆ.

ಪ್ಯಾನ್‌ ಇಂಡಿಯಾ ಸ್ಟಾರ್‌ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್‌. ಕಲ್ಕಿ ಸಿನಿಮಾ ಅಂಥದ್ದೊಂದು ದೊಡ್ಡ ಗೆಲುವನ್ನು ಪ್ರಭಾಸ್‌ ಅವರಿಗೆ ನೀಡಿದೆ. ಫ್ಯಾಂಟಸಿ ಸಿನಿಮಾ ಮೂಲಕ, ಕಣ್ಣಿಗೆ ಅಚ್ಚರಿ ಎನಿಸುವ ದೃಶ್ಯಾವಳಿಗಳನ್ನೇ ನೋಡುಗರಿಗೆ ನೀಡಿ, ಮಾಸ್‌ ಆಕ್ಷನ್‌ ಸೀನ್‌ಗಳಿಂದ ಸಮೃದ್ಧವಾದ ಚಿತ್ರವನ್ನೇ ಪ್ರೇಕ್ಷಕನ ತಟ್ಟೆಗೆ ಬಡಿಸಿದ್ದಾರೆ ಪ್ರಭಾಸ್‌. ತಮ್ಮ ಗಮನಾರ್ಹವಾದ ಆನ್- ಸ್ಕ್ರೀನ್ ಪಾತ್ರದಿಂದಲೇ ಗಮನ ಸೆಳೆದ ಪ್ರಭಾಸ್‌, ಜಾಗತಿಕ ಅಭಿಮಾನಿಗಳಿಗೂ ಹಬ್ಬದೂಟ ಹಾಕಿಸಿದ್ದಾರೆ.

ಪ್ರಭಾಸ್ ಅವರ ಕಟ್ಟಾ ಅಭಿಮಾನಿಗಳ ತಂಡವೊಂದು ಇತ್ತೀಚೆಗೆ ಅವರ ‘ಕಲ್ಕಿ 2898 AD’ ಸಿನಿಮಾ ವೀಕ್ಷಿಸಲು ಜಪಾನ್‌ನಿಂದ ಹೈದರಾಬಾದ್‌ಗೆ ಆಗಮಿಸಿತ್ತು. ಈ ಅದ್ಭುತ ಗೆಸ್ಚರ್ ಸೂಪರ್‌ಸ್ಟಾರ್‌ನ ಜಾಗತಿಕ ಸ್ಟಾರ್‌ಡಮ್‌ಗೆ ಹಿಡಿದ ಸಾಕ್ಷಿ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಚಿತ್ರದ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್, ಹೈದರಾಬಾದ್‌ನ ಪ್ರಸಾದ್ಸ್ ಮಲ್ಟಿಪ್ಲೆಕ್ಸ್‌ನಲ್ಲಿ ಐಕಾನಿಕ್ ‘ರೆಬೆಲ್’ ಟ್ರಕ್ ಪಕ್ಕದಲ್ಲಿ ನಿಂತಿರುವ ಮೂವರು ಜಪಾನೀ ಅಭಿಮಾನಿಗಳ ಫೋಟೋಗಳನ್ನು ಹಂಚಿಕೊಂಡಿದೆ. ಪ್ರಭಾಸ್ ಪಾತ್ರದ ಭೈರವ ಮತ್ತು ಬುಜ್ಜಿ ವಾಹನದ ಫೋಟೋ ಇರುವ ವಿಶೇಷ ಬಾವುಟ ಹಿಡಿದು “ಕಲ್ಕಿ 2898 AD. ಬಿಡುಗಡೆಗೆ ಅಭಿನಂದನೆಗಳು!! ಜಪಾನಿನ ಅಭಿಮಾನಿಗಳಿಂದ 2024.6.27.” ಎಂದು ಜಪಾನಿನ ಫ್ಯಾನ್ಸ್‌ ಖುಷಿ ವ್ಯಕ್ತಪಡಿಸಿದ್ದಾರೆ.

‘ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

‘ಬಾಹುಬಲಿ’ಯಿಂದ ‘ಸಲಾರ್’, ‘ಕಲ್ಕಿ 2898 AD’ ವರೆಗೆ ಪ್ರಭಾಸ್ ತಮ್ಮ ಸ್ಟಾರ್ ಪವರ್‌ಗೆ ಸಾಟಿಯಿಲ್ಲ ಎಂಬುದನ್ನು ಸಾಬೀತುಪಡಿಸುತ್ತಲೇ ಬಂದಿದ್ದಾರೆ. ಸಮಕಾಲೀನ ಸಿನಿಮಾರಂಗದಲ್ಲಿ ಅತ್ಯಂತ ಅಪ್ರತಿಮ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರಾಗಿ ಹೊರಹೊಮ್ಮುತ್ತಿದ್ದಾರೆ ಪ್ರಭಾಸ್.‌ ಅಂದಹಾಗೆ ನಾಗ್ ಅಶ್ವಿನ್ ನಿರ್ದೇಶಿಸಿದ, ‘ಕಲ್ಕಿ 2898 AD’ 2898 AD ವರ್ಷದಲ್ಲಿ ಹಿಂದೂಗಳ ಮಹಾಕಾವ್ಯ ಮಹಾಭಾರತದಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗಿದೆ. ಈ ವೈಜ್ಞಾನಿಕ ಆಕ್ಷನ್ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಂತಹ ಲೆಜಂಡರಿ ಕಲಾವಿದರಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಸೇರಿ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

Continue Reading

ದೇಶ

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

ಬಾಹ್ಯಾಕಾಶ ಕ್ಷೇತ್ರವು ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆಗಷ್ಟೇ ಸೀಮಿತವಾಗಿದೆ. ಆದರೆ, ಬಾಹ್ಯಾಕಾಶ ಕ್ಷೇತ್ರದಿಂದ ಕೃಷಿ, ಮೂಲ ಸೌಕರ್ಯ, ಸಂವಹನ, ಆರೋಗ್ಯ ಸೇರಿ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಭಾರತದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲೂ ಖಾಸಗಿ ಸಹಭಾಗಿತ್ವಕ್ಕೆ ಅವಕಾಶ ನೀಡಿರುವುದು ಭಾರಿ ಅನುಕೂಲವಾಗಿದೆ ಎಂಬುದಾಗಿ ಡಾ.ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

VISTARANEWS.COM


on

Dr Jitendra Singh
Koo

ನವದೆಹಲಿ: 2023ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಚಂದ್ರಯಾನ-3 (Chandrayaan 3) ಮಿಷನ್‌ಅನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಬಳಿಕ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಆತ್ಮವಿಶ್ವಾಸವು ನೂರ್ಮಡಿಯಾಗಿದೆ. ಕೇಂದ್ರ ಸರ್ಕಾರವೂ (Central Government) ಬಾಹ್ಯಾಕಾಶ ಯೋಜನೆಗಳಿಗೆ ಉತ್ತೇಜನ ನೀಡುತ್ತಿದೆ. ಇದರ ಬೆನ್ನಲ್ಲೇ, “2025ರ ವೇಳೆಗೆ ಭಾರತವು ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಹಾಗೂ ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್‌ ಕಳುಹಿಸಲಾಗುತ್ತದೆ” ಎಂಬುದಾಗಿ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ (Dr. Jitendra Singh) ತಿಳಿಸಿದ್ದಾರೆ.

ಭಾರತ್‌ 24 ನ್ಯೂಸ್‌ ನೆಟ್‌ವರ್ಕ್‌ ಜತೆಗಿನ ವಿಶೇಷ ಸಂವಾದದಲ್ಲಿ ಈ ಕುರಿತು ಅವರು ಮಾಹಿತಿ ನೀಡಿದ್ದಾರೆ. “ಬಾಹ್ಯಾಕಾಶ ಕ್ಷೇತ್ರವು ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆಗಷ್ಟೇ ಸೀಮಿತವಾಗಿದೆ. ಆದರೆ, ಬಾಹ್ಯಾಕಾಶ ಕ್ಷೇತ್ರದಿಂದ ಕೃಷಿ, ಮೂಲ ಸೌಕರ್ಯ, ಸಂವಹನ, ಆರೋಗ್ಯ ಸೇರಿ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಭೂಮಿ ದಾಖಲೆ ನಿರ್ವಹಣೆ, ಹೊಸ ಭೌಗೋಳಿಕ ನೀತಿ, ಹೊಸ ಬಾಹ್ಯಾಕಾಶ ನೀತಿ, ಮಣ್ಣಿನ ಆರೋಗ್ಯ ಕಾರ್ಡ್‌, ಲ್ಯಾಂಡ್‌ ಮ್ಯಾಪಿಂಗ್‌ ಸೇರಿ ಮುಂತಾದ ವಲಯಗಳಿಗೆ ಅನುಕೂಲವಾಗಲಿದೆ” ಎಂಬುದಾಗಿ ಅವರು ತಿಳಿಸಿದರು.

“ಭಾರತದ ಬಾಹ್ಯಾಕಾಶ ಕ್ಷೇತ್ರವು ಗಣನೀಯವಾಗಿ ಏಳಿಗೆ ಹೊಂದುತ್ತಿದೆ. 2022ರಲ್ಲಿ ದೇಶದಲ್ಲಿ ಬಾಹ್ಯಾಕಾಶಕ್ಕೆ ಸಂಬಂದಿಸಿದ ಒಂದೇ ಒಂದು ನವೋದ್ಯಮ ಇತ್ತು. ಬಾಹ್ಯಾಕಾಶದಲ್ಲೂ ಖಾಸಗಿ ಸಹಭಾಗಿತ್ವಕ್ಕೆ 2024ರಲ್ಲಿ ಅವಕಾಶ ನೀಡಿದ ಬಳಿಕ ನಾವೀಗ 200 ನವೋದ್ಯಮಗಳನ್ನು ಹೊಂದಿದ್ದೇವೆ. ಇವುಗಳಲ್ಲೇ ಕೆಲವು ಸ್ಟಾರ್ಟಪ್‌ಗಳು ಜಾಗತಿಕ ಮಟ್ಟದ ಸಾಮರ್ಥ್ಯ ಹೊಂದಿವೆ. ಅಷ್ಟೇ ಅಲ್ಲ, ಖಾಸಗಿ ವಲಯದಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ 1 ಸಾವಿರ ಕೋಟಿ ರೂ. ಹೂಡಿಕೆ ಹರಿದು ಬಂದಿದೆ” ಎಂಬುದಾಗಿ ಡಾ.ಜಿತೇಂದ್ರ ಸಿಂಗ್‌ ತಿಳಿಸಿದರು.

ಈಶಾನ್ಯ ರಾಜ್ಯಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ ಅವರು ಹತ್ತಾರು ವಿಷಯಗಳನ್ನು ಪ್ರಸ್ತಾಪಿಸಿದರು. “ಈಶಾನ್ಯ ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ ಭಾರಿ ಅಭಿವೃದ್ಧಿಯಾಗಿದೆ. ಎಲ್ಲ ಹವಾಮಾನದಲ್ಲೂ ಸುಗಮವಾಗಿ ಸಂಚಾರಕ್ಕೆ ಅನುಕೂಲವಾಗುವ ರಸ್ತೆಗಳ ಅಭಿವೃದ್ಧಿ, ಹೆದ್ದಾರಿಗಳ ಮೂಲಕ ಉತ್ತಮ ಸಂಪರ್ಕ, ನಗರ ಪ್ರದೇಶಗಳಿಂದ ದೂರವಿರುವ ಪಟ್ಟಣ, ಗ್ರಾಮಗಳಿಗೂ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ. ಇದು ಈಶಾನ್ಯ ರಾಜ್ಯಗಳ ಮಟ್ಟಿಗೆ ಅತ್ಯುತ್ತಮ ಬೆಳವಣಿಗೆ” ಎಂದು ಹೇಳಿದರು.

ಇದನ್ನೂ ಓದಿ: Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Continue Reading
Advertisement
Hathras Stampede
ದೇಶ16 mins ago

Hathras Stampede: ಇಂದು ಹತ್ರಾಸಕ್ಕೆ ರಾಹುಲ್‌ ಗಾಂಧಿ; ಕಾಲ್ತುಳಿತ ಸಂತ್ರಸ್ತರ ಭೇಟಿ

Sleep Apnea
ಆರೋಗ್ಯ17 mins ago

Sleep Apnea: ಗೊರಕೆಯೆಂದು ನಿರ್ಲಕ್ಷಿಸಬೇಡಿ, ಇದು ಜೀವಕ್ಕೂ ಎರವಾದೀತು!

Job Interview
Latest17 mins ago

Job Interview: ಉದ್ಯೋಗ ಸಂದರ್ಶನವನ್ನು ಹೇಗೆ ಎದುರಿಸಬೇಕು? ಈ ಟಿಪ್ಸ್‌ ಫಾಲೋ ಮಾಡಿ

chemicals in food
ಕೋಲಾರ24 mins ago

Chemicals in Food: ಕ್ಯಾನ್ಸರ್​ ಕಾರಕ ಅಂಶವಿರುವ ರಾಸಾಯನಿಕ ಕಲರ್ ಬಳಸಿದ ಸ್ವೀಟ್​ ವಶಕ್ಕೆ

dengue fever hassan news
ಹಾಸನ45 mins ago

Dengue Fever: ಹಾಸನದಲ್ಲಿ ಶಂಕಿತ ಡೆಂಗ್ಯು ಜ್ವರದಿಂದ ನಾಲ್ಕನೇ ಬಾಲಕಿ ಬಲಿ

Hot Corn Recipe
ಆಹಾರ/ಅಡುಗೆ1 hour ago

Hot Corn Recipe: ಮಳೆಗಾಲದಲ್ಲಿ ಬಿಸಿಬಿಸಿಯಾದ ಜೋಳವನ್ನು ಮನೆಯಲ್ಲೇ ಮಾಡುವುದು ಹೇಗೆ?

karnataka Weather Forecast Rain
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Vastu Tips
ಧಾರ್ಮಿಕ2 hours ago

Vastu Tips: ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕೆ? ಹೀಗೆ ಮಾಡಿ

Dina Bhavishya
ಭವಿಷ್ಯ3 hours ago

Dina Bhavishya :‌ ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಗುಡ್‌ ನ್ಯೂಸ್

Team India
ಪ್ರಮುಖ ಸುದ್ದಿ8 hours ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ15 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ17 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ18 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ19 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ20 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ21 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌