Navjot Singh Sidhu: ಪಟಿಯಾಲಾ ಸೆಂಟ್ರಲ್‌ ಜೈಲಲ್ಲಿ ಸಿಧು, ಕೈದಿ ನಂಬರ್‌ 241383

ದೇಶ

Navjot Singh Sidhu: ಪಟಿಯಾಲಾ ಸೆಂಟ್ರಲ್‌ ಜೈಲಲ್ಲಿ ಸಿಧು, ಕೈದಿ ನಂಬರ್‌ 241383

ನವಜೋತ್‌ ಸಿಂಗ್‌ ಸಿಧು (Navjot Singh Sidhu) ನಿನ್ನೆ ಸಂಜೆ 4 ಗಂಟೆ ಹೊತ್ತಿಗೆ ಪಟಿಯಾಲಾ ಕೋರ್ಟ್‌ಗೆ ಶರಣಾಗಿದ್ದರು. ರಾತ್ರಿಯೇ ಅವರನ್ನು ಪಟಿಯಾಲಾ ಸೆಂಟ್ರಲ್‌ ಜೈಲಿಗೆ ಕಳಿಸಲಾಗಿದೆ.

VISTARANEWS.COM


on

Navjot Singh Sidhu
ನವಜೋತ್‌ ಸಿಂಗ್‌ ಸಿಧು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಟಿಯಾಲಾ: ಮಾಜಿ ಕ್ರಿಕೆಟರ್‌, ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು (Navjot Singh Sidhu) ನಿನ್ನೆ ರಾತ್ರಿ ಪಟಿಯಾಲಾ ಸೆಂಟ್ರಲ್‌ ಜೈಲು ಸೇರಿದ್ದಾರೆ. 1988ರ ರಸ್ತೆ ಜಗಳ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಅವರಿಗೆ ಮೇ 19ರಂದು, 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅದರಂತೆ ನಿನ್ನೆ ಅವರು ಪಟಿಯಾಲಾ ಕೋರ್ಟ್‌ಗೆ ಶರಣಾದರು. ಅಲ್ಲಿಂದ ಅವರನ್ನು ಮಾತಾ ಕೌಶಲ್ಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ತಪಾಸಣೆಗಳನ್ನು ಮಾಡಿ ನಂತರ ಜೈಲಿಗೆ ಕರೆದುಕೊಂಡು ಹೋಗಲಾಗಿದೆ. ಸುಪ್ರೀಂಕೋರ್ಟ್‌ ಆದೇಶದ ಬೆನ್ನಲ್ಲೇ ನವಜೋತ್‌ ಸಿಂಗ್‌ ಸಿಧು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ವೈದ್ಯಕೀಯ ತಪಾಸಣೆ ಆಗಬೇಕಿದೆ. ಹಾಗಾಗಿ ಶರಣಾಗಲು ಸ್ವಲ್ಪ ಸಮಯ ಬೇಕು ಎಂದು ಹೇಳಿದ್ದರು. ಆದರೆ ಕಾಲಾವಕಾಶ ಸಿಗದ ಕಾರಣ ನಿನ್ನೆಯೇ ಅವರನ್ನು ಜೈಲಿಗೆ ಕಳಿಸಲಾಗಿದೆ.

ಜೈಲಲ್ಲಿ ಸಿಧುಗೆ ಕೊಟ್ಟಿದ್ದೇನು?
ಪಂಜಾಬ್‌ ಮಾಜಿ ಕಾಂಗ್ರೆಸ್‌ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಅವರನ್ನು ಪಟಿಯಾಲಾ ಸೆಂಟ್ರಲ್‌ ಜೈಲಿನ ಬ್ಯಾರಕ್‌ ಸಂಖ್ಯೆ 7ರಲ್ಲಿ ಇಡಲಾಗಿದ್ದು, ಅವರ ಕೈದಿ ಸಂಖ್ಯೆ 241383. ಸಿಧುಗೆ ಜೈಲಿನಲ್ಲಿ ಎರಡು ಟರ್ಬನ್‌ (ರುಮಾಲು), ಒಂದು ಬೀರು, ಒಂದು ಕಂಬಳಿ, ಮೂರು ಜೊತೆ ಒಳಉಡುಪು, ಎರಡು ಟವೆಲ್‌, ಒಂದು ಸೊಳ್ಳೆ ಪರದೆ, ಒಂದು ಪೆನ್‌, ಒಂದು ನೋಟ್‌ಬುಕ್‌, ಒಂದು ಜೊತೆ ಶೂ, ಎರಡು ಬೆಡ್‌ಶೀಟ್‌, ನಾಲ್ಕು ಜತೆ ಕುರ್ತಾ ಪೈಜಾಮಾಗಳು, ಎರಡು ತಲೆದಿಂಬಿನ ಕವರ್‌ಗಳನ್ನು ಜೈಲು ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ.

34 ವರ್ಷಗಳ ಹಿಂದೆ ನವಜೋತ್‌ ಸಿಂಗ್‌ ಸಿಧು ಮತ್ತವರ ಸಹಚರನೊಬ್ಬ ಸೇರಿ ಪಟಿಯಾಲಾದ ಪಾರ್ಕಿಂಗ್‌ ಸ್ಥಳದಲ್ಲಿ ಹಿರಿಯ ನಾಗರಿಕ ಗುರ್ನಾಮ್‌ ಸಿಂಗ್‌ ಎಂಬುವರಿಗೆ ಹೊಡೆದಿದ್ದರು. ಕೆಲವೇ ದಿನಗಳಲ್ಲಿ ಅವರು ಮೃತಪಟ್ಟಿದ್ದರು. ಗುರ್ನಾಮ್‌ ಕುಟುಂಬದವರು ಕೋರ್ಟ್‌ ಮೆಟ್ಟಿಲೇರಿದ್ದರು. ಸಿಧು ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್‌ನ ತೀರ್ಪನ್ನು 2018ರಲ್ಲಿ ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. 1000 ರೂಪಾಯಿ ದಂಡ ವಿಧಿಸಿತ್ತು. ಮತ್ತೆ ಈ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಗುರ್ನಾಮ್‌ ಕುಟುಂಬದವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಮೇ 19ರಂದು ಅಂತಿಮ ತೀರ್ಪು ನೀಡಿದ ಸುಪ್ರೀಂಕೋರ್ಟ್‌ ಸಿಧುಗೆ ಒಂದು ವರ್ಷದ ಜೈಲು ಶಿಕ್ಷೆ ನೀಡಿದೆ.

ಜೈಲಿನಲ್ಲಿ ಹೇಗಿರಲಿದೆ ದಿನಚರಿ?
ಸಾಮಾನ್ಯವಾಗಿ ಸೆಂಟ್ರಲ್‌ ಜೈಲಿನಲ್ಲಿ ಕೈದಿಗಳು ಮುಂಜಾನೆ 5.30ಕ್ಕೆಲ್ಲ ಎದ್ದುಬಿಡುತ್ತಾರೆ. ಹಾಗೇ ಬೆಳಗ್ಗೆ 7ಗಂಟೆಗೆ ಅವರಿಗೆಲ್ಲ ಚಹಾ ಮತ್ತು ಜತೆಗೆ ಬಿಸ್ಕತ್‌ ಅಥವಾ ಕಡಲೆಯನ್ನು ನೀಡಲಾಗುತ್ತದೆ. ಬೆಳಗ್ಗೆ 8.30ರ ಹೊತ್ತಿಗೆ ಒಬ್ಬರಿಗೆ ಆರು ಚಪಾತಿಗಳು, ದಾಲ್‌ ಮತ್ತು ತರಕಾರಿಗಳನ್ನು ಕೊಡಲಾಗುತ್ತದೆ. ಅದನ್ನು ತಿಂದು ಕೈದಿಗಳು ಕೆಲಸಕ್ಕೆ ಹೋಗುತ್ತಾರೆ. ಸಂಜೆ 5.30 ಕ್ಕೆ ಕೆಲಸ ಮುಗಿಸಿ ಕಾರಾಗೃಹಕ್ಕೆ ವಾಪಸ್‌ ಬರುವ ಅವರು ತಮ್ಮ ವಿಭಾಗಕ್ಕೆ ತೆರಳುತ್ತಾರೆ. ಸಂಜೆ 6ಗಂಟೆಗೆಲ್ಲ ಊಟ ಮಾಡಿ, 7 ಗಂಟೆ ಹೊತ್ತಿಗೆ ಎಲ್ಲರೂ ತಮ್ಮ ಬ್ಯಾರಕ್‌ ಸೇರುತ್ತಾರೆ. ಕೈದಿಗಳು ಎಂಟು ತಾಸು ಕೆಲಸ ಮಾಡಿ ಗಳಿಸಿದ ಹಣವನ್ನು ಸರ್ಕಾರವೇ ನೀಡುತ್ತದೆ. ಅದರಲ್ಲಿ ಶೇ.25ರಷ್ಟನ್ನು ಮಾತ್ರ ಅವರ ಕೈಯಿಗೆ ಕೊಟ್ಟು, ಉಳಿದ ಹಣವನ್ನು ಕೈದಿಗಳ ಉಳಿತಾಯ ಖಾತೆಗೆ ಹಾಕಲಾಗುತ್ತದೆ.

ಉಳಿದವರಂತೆ ನವಜೋತ್‌ ಸಿಂಗ್‌ ಸಿಧು ಕೂಡ ಜೈಲಿನಲ್ಲಿ ಕೆಲಸ ಮಾಡಬೇಕಾಗಿದೆ. ಆದರೆ ಸದ್ಯ ಮೂರು ತಿಂಗಳು ತರಬೇತಿ ಅವಧಿ ಇದ್ದು, ಈ ವೇಳೆ ಅವರಿಗೆ ವೇತನ ಇರುವುದಿಲ್ಲ. ನಂತರ ಅವರನ್ನು ಯಾವ ಸೆಕ್ಷನ್‌ಗೆ ಹೊಂದಾಣಿಕೆಯಾಗುತ್ತಾರೆ ಎಂದು ನೋಡಿ ಅಲ್ಲಿ ಕೆಲಸಕ್ಕೆ ನಿಯೋಜಿಸಲಾಗುತ್ತದೆ ಮತ್ತು ದಿನಕ್ಕಿಷ್ಟು ಎಂದು ಸಂಬಳ ನಿಗದಿ ಮಾಡುತ್ತಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಸ್ತೆ ಜಗಳ ಪ್ರಕರಣ: ಕೊನೆಗೂ ಕೋರ್ಟ್‌ಗೆ ಶರಣಾದ ಕಾಂಗ್ರೆಸ್‌ ನಾಯಕ ಸಿಧು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

ಇ-ರಿಕ್ಷಾದಿಂದ ಚಾಲಕನನ್ನು ಇಳಿಸಿ, ಆತನ ಕೊರಳಪಟ್ಟಿ ಹಿಡಿದು, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಆಟೋ ಚಾಲಕನು ಕೂಡ ಮಂಗಳಮುಖಿಗೆ ಹೊಡೆದಿದ್ದಾನೆ. ಇದೇ ವೇಳೆ, ಮಂಗಳಮುಖಿಗೆ ಏನು ಅನಿಸಿತೋ ಏನೋ, ಕೂಡಲೇ ತಮ್ಮ ಪ್ಯಾಂಟ್‌ ಬಿಚ್ಚಿ, ಬೆತ್ತಲೆಯಾಗಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Viral Video
Koo

ನವದೆಹಲಿ: ರೈಲುಗಳಲ್ಲಿ, ಬಸ್‌ ಸ್ಟ್ಯಾಂಡ್‌ಗಳು, ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಮಂಗಳಮುಖಿಯರು (Transgenders) ಜನರಿಂದ 5-10 ರೂ. ಪಡೆಯುತ್ತಾರೆ. ಜನರೂ ಕರುಣೆ ತೋರಿಸಿ ಅವರಿಗೆ ಹಣ ನೀಡುತ್ತಾರೆ. ಕೆಲವೊಮ್ಮೆ ಕಾಡಿ-ಬೇಡಿ ಮಂಗಳಮುಖಿಯರು ಜನರಿಂದ ಹಣ ಪಡೆಯುತ್ತಾರೆ. ಇದರಿಂದ ಜಗಳಗಳೂ ನಡೆದಿರುವ ಉದಾಹರಣೆಗಳು ಇವೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ, ಮಂಗಳಮುಖಿಯೊಬ್ಬರು 10 ರೂ.ಗಾಗಿ ಎಲ್ಲರ ಮುಂದೆಯೇ ಪ್ಯಾಂಟ್‌ ಬಿಚ್ಚಿಕೊಂಡು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ವ್ಯಕ್ತಿಯು ಇ-ರಿಕ್ಷಾವನ್ನು ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಈತನ ರಿಕ್ಷಾವನ್ನು ಮಂಗಳಮುಖಿ ಹತ್ತಿದ್ದಾರೆ. ಮಂಗಳಮುಖಿಯು ಇಳಿಯುವಾಗ ಎಂದಿನಂತೆ ಇ-ರಿಕ್ಷಾ ಚಾಲಕನು 10 ರೂ. ಬಾಡಿಗೆ ಕೊಡಿ ಎಂದಿದ್ದಾನೆ. ಇದರಿಂದ ಕುಪಿತಗೊಂಡ ಮಹಿಳೆಯು ಆತನ ಜತೆ ಜಗಳಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಬಾಡಿಗೆ ಕೊಡುವುದಿಲ್ಲ ಎಂದು ಹೇಳುವ ಜತೆಗೆ ಬೈದಿದ್ದಾರೆ. ಇದಾದ ನಂತರ ಆಟೋ ಚಾಲಕನು ಕೂಡ ಗದರಿದ್ದಾನೆ. ಆಗ ಮಂಗಳಮುಖಿಯ ಕೋಪ ದ್ವಿಗುಣಗೊಂಡಿದೆ. ಕೂಡಲೇ ಆಟೋ ಚಾಲಕನ ಮೇಲೆ ದಾಳಿ ನಡೆಸಿದ್ದಾರೆ.‌ ಘಟನೆಯು ಎಲ್ಲಿ ನಡೆದಿದೆ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ.

ಇ-ರಿಕ್ಷಾದಿಂದ ಚಾಲಕನನ್ನು ಇಳಿಸಿ, ಆತನ ಕೊರಳಪಟ್ಟಿ ಹಿಡಿದು, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಆಟೋ ಚಾಲಕನು ಕೂಡ ಮಂಗಳಮುಖಿಗೆ ಹೊಡೆದಿದ್ದಾನೆ. ಇದೇ ವೇಳೆ, ಮಂಗಳಮುಖಿಗೆ ಏನು ಅನಿಸಿತೋ ಏನೋ, ಕೂಡಲೇ ತಮ್ಮ ಪ್ಯಾಂಟ್‌ ಬಿಚ್ಚಿ, ಬೆತ್ತಲೆಯಾಗಿದ್ದಾರೆ. ಪ್ಯಾಂಟ್‌ ಬಿಚ್ಚಿ ಬೆತ್ತಲೆಯಾದ ಬಳಿಕವೂ ಅವರು ಮತ್ತೆ ಚಾಲಕನ ಮೇಳೆ ಹಲ್ಲೆ ನಡೆಸಿದ್ದಾರೆ. ಕೇವಲ 10 ರೂ.ಗಾಗಿ ಇಬ್ಬರೂ ರಸ್ತೆ ಮಧ್ಯೆ ಕಾದಾಡಿಕೊಂಡಿರುವ ವಿಡಿಯೊ ಭಾರಿ ಸದ್ದು ಮಾಡುತ್ತಿದೆ.

ವಿಡಿಯೊ ವೈರಲ್‌ ಆಗುತ್ತಲೇ ಹತ್ತಾರು ಅಭಿಪ್ರಾಯಗಳು ವ್ಯಕ್ತವಾಗಿವೆ. “ಆಟೋ ಚಾಲಕರು 10 ರೂ.ಗಾಗಿ ದುಡಿಯುತ್ತಾರೆ. ಮಂಗಳಮುಖಿಯರು ಅವರಿಗೆ ಬಾಡಿಗೆ ಕೊಡಬೇಕು. ಅವರು ಬೇಕಾದರೆ ಶ್ರೀಮಂತರ ಬಳಿ ಹಣ ಪಡೆಯಲಿ” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿ, “ಮಂಗಳಮುಖಿಯರು ಕೆಲಸ ಮಾಡುತ್ತೇವೆ ಎಂದರೆ ಯಾರೂ ಕೆಲಸ ಕೊಡಲ್ಲ. ಅವರಿಗೆ ಮಾನವೀಯತೆ ಆಧಾರದ ಮೇಲೆ ಜನ ನೆರವು ನೀಡಬೇಕು” ಎಂಬುದಾಗಿ ಹೇಳಿದ್ದಾರೆ. ಹೀಗೆ ಪರ-ವಿರೋಧಗಳ ಚರ್ಚೆಯಾಗಿದೆ.

ಇದನ್ನೂ ಓದಿ: Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Continue Reading

ಕರ್ನಾಟಕ

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

Kalki 2898 AD:ಪ್ಯಾನ್‌ ಇಂಡಿಯಾ ಸ್ಟಾರ್‌ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್‌. ಪ್ರಭಾಸ್ ಅವರ ಕಟ್ಟಾ ಅಭಿಮಾನಿಗಳ ತಂಡವೊಂದು ಇತ್ತೀಚೆಗೆ ಅವರ ‘ಕಲ್ಕಿ 2898 AD’ ಸಿನಿಮಾ ವೀಕ್ಷಿಸಲು ಜಪಾನ್‌ನಿಂದ ಹೈದರಾಬಾದ್‌ಗೆ ಆಗಮಿಸಿತ್ತು.

VISTARANEWS.COM


on

Fans came from Japan to Hyderabad to watch Prabhas starrer Kalki 2898 AD
Koo

ಬೆಂಗಳೂರು: ವೈಜಯಂತಿ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಬಹುಕೋಟಿ ವೆಚ್ಚದ ಕಲ್ಕಿ 2898 ಎಡಿ (Kalki 2898 AD) ಸಿನಿಮಾ ಬಾಕ್ಸ್‌ಆಫೀಸ್‌ನಲ್ಲಿ ಗಳಿಕೆಯ ನಾಗಾಲೋಟ ಮುಂದುವರಿಸಿದೆ. ಸಾಹಸ ದೃಶ್ಯಗಳಿಗೆ ಪ್ರೇಕ್ಷಕ ವರ್ಗ ಮೂಕವಿಸ್ಮಿತನಾಗಿದ್ದ. ನಿರ್ದೇಶಕ ನಾಗ್‌ ಅಶ್ವಿನ್‌ ಅವರ ಕೈ ಚಳಕಕ್ಕೂ ಬಹುಪರಾಕ್‌ ಸಿಕ್ಕಿತ್ತು. ಅಭಿಮಾನಿಗಳಿಂದಲೂ ಪ್ರಭಾಸ್‌ ಹೊಸ ಅವತಾರಕ್ಕೆ ಮೆಚ್ಚುಗೆಯ ಮಹಾಪೂರವೇ ಸಿಕ್ಕಿತ್ತು. ಸಲಾರ್‌ಗೂ ಮುನ್ನ ಸರಣಿ ಸೋಲು ಅನುಭವಿಸಿದ್ದ ಪ್ರಭಾಸ್‌ಗೀಗ ಕಲ್ಕಿ ಸಿನಿಮಾ ಮೂಲಕ ಮತ್ತೆ ಮರು ಜೀವ ಸಿಕ್ಕಿದೆ.

ಪ್ಯಾನ್‌ ಇಂಡಿಯಾ ಸ್ಟಾರ್‌ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್‌. ಕಲ್ಕಿ ಸಿನಿಮಾ ಅಂಥದ್ದೊಂದು ದೊಡ್ಡ ಗೆಲುವನ್ನು ಪ್ರಭಾಸ್‌ ಅವರಿಗೆ ನೀಡಿದೆ. ಫ್ಯಾಂಟಸಿ ಸಿನಿಮಾ ಮೂಲಕ, ಕಣ್ಣಿಗೆ ಅಚ್ಚರಿ ಎನಿಸುವ ದೃಶ್ಯಾವಳಿಗಳನ್ನೇ ನೋಡುಗರಿಗೆ ನೀಡಿ, ಮಾಸ್‌ ಆಕ್ಷನ್‌ ಸೀನ್‌ಗಳಿಂದ ಸಮೃದ್ಧವಾದ ಚಿತ್ರವನ್ನೇ ಪ್ರೇಕ್ಷಕನ ತಟ್ಟೆಗೆ ಬಡಿಸಿದ್ದಾರೆ ಪ್ರಭಾಸ್‌. ತಮ್ಮ ಗಮನಾರ್ಹವಾದ ಆನ್- ಸ್ಕ್ರೀನ್ ಪಾತ್ರದಿಂದಲೇ ಗಮನ ಸೆಳೆದ ಪ್ರಭಾಸ್‌, ಜಾಗತಿಕ ಅಭಿಮಾನಿಗಳಿಗೂ ಹಬ್ಬದೂಟ ಹಾಕಿಸಿದ್ದಾರೆ.

ಪ್ರಭಾಸ್ ಅವರ ಕಟ್ಟಾ ಅಭಿಮಾನಿಗಳ ತಂಡವೊಂದು ಇತ್ತೀಚೆಗೆ ಅವರ ‘ಕಲ್ಕಿ 2898 AD’ ಸಿನಿಮಾ ವೀಕ್ಷಿಸಲು ಜಪಾನ್‌ನಿಂದ ಹೈದರಾಬಾದ್‌ಗೆ ಆಗಮಿಸಿತ್ತು. ಈ ಅದ್ಭುತ ಗೆಸ್ಚರ್ ಸೂಪರ್‌ಸ್ಟಾರ್‌ನ ಜಾಗತಿಕ ಸ್ಟಾರ್‌ಡಮ್‌ಗೆ ಹಿಡಿದ ಸಾಕ್ಷಿ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಚಿತ್ರದ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್, ಹೈದರಾಬಾದ್‌ನ ಪ್ರಸಾದ್ಸ್ ಮಲ್ಟಿಪ್ಲೆಕ್ಸ್‌ನಲ್ಲಿ ಐಕಾನಿಕ್ ‘ರೆಬೆಲ್’ ಟ್ರಕ್ ಪಕ್ಕದಲ್ಲಿ ನಿಂತಿರುವ ಮೂವರು ಜಪಾನೀ ಅಭಿಮಾನಿಗಳ ಫೋಟೋಗಳನ್ನು ಹಂಚಿಕೊಂಡಿದೆ. ಪ್ರಭಾಸ್ ಪಾತ್ರದ ಭೈರವ ಮತ್ತು ಬುಜ್ಜಿ ವಾಹನದ ಫೋಟೋ ಇರುವ ವಿಶೇಷ ಬಾವುಟ ಹಿಡಿದು “ಕಲ್ಕಿ 2898 AD. ಬಿಡುಗಡೆಗೆ ಅಭಿನಂದನೆಗಳು!! ಜಪಾನಿನ ಅಭಿಮಾನಿಗಳಿಂದ 2024.6.27.” ಎಂದು ಜಪಾನಿನ ಫ್ಯಾನ್ಸ್‌ ಖುಷಿ ವ್ಯಕ್ತಪಡಿಸಿದ್ದಾರೆ.

‘ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

‘ಬಾಹುಬಲಿ’ಯಿಂದ ‘ಸಲಾರ್’, ‘ಕಲ್ಕಿ 2898 AD’ ವರೆಗೆ ಪ್ರಭಾಸ್ ತಮ್ಮ ಸ್ಟಾರ್ ಪವರ್‌ಗೆ ಸಾಟಿಯಿಲ್ಲ ಎಂಬುದನ್ನು ಸಾಬೀತುಪಡಿಸುತ್ತಲೇ ಬಂದಿದ್ದಾರೆ. ಸಮಕಾಲೀನ ಸಿನಿಮಾರಂಗದಲ್ಲಿ ಅತ್ಯಂತ ಅಪ್ರತಿಮ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರಾಗಿ ಹೊರಹೊಮ್ಮುತ್ತಿದ್ದಾರೆ ಪ್ರಭಾಸ್.‌ ಅಂದಹಾಗೆ ನಾಗ್ ಅಶ್ವಿನ್ ನಿರ್ದೇಶಿಸಿದ, ‘ಕಲ್ಕಿ 2898 AD’ 2898 AD ವರ್ಷದಲ್ಲಿ ಹಿಂದೂಗಳ ಮಹಾಕಾವ್ಯ ಮಹಾಭಾರತದಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗಿದೆ. ಈ ವೈಜ್ಞಾನಿಕ ಆಕ್ಷನ್ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಂತಹ ಲೆಜಂಡರಿ ಕಲಾವಿದರಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಸೇರಿ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

Continue Reading

ದೇಶ

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

ಬಾಹ್ಯಾಕಾಶ ಕ್ಷೇತ್ರವು ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆಗಷ್ಟೇ ಸೀಮಿತವಾಗಿದೆ. ಆದರೆ, ಬಾಹ್ಯಾಕಾಶ ಕ್ಷೇತ್ರದಿಂದ ಕೃಷಿ, ಮೂಲ ಸೌಕರ್ಯ, ಸಂವಹನ, ಆರೋಗ್ಯ ಸೇರಿ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಭಾರತದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲೂ ಖಾಸಗಿ ಸಹಭಾಗಿತ್ವಕ್ಕೆ ಅವಕಾಶ ನೀಡಿರುವುದು ಭಾರಿ ಅನುಕೂಲವಾಗಿದೆ ಎಂಬುದಾಗಿ ಡಾ.ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

VISTARANEWS.COM


on

Dr Jitendra Singh
Koo

ನವದೆಹಲಿ: 2023ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಚಂದ್ರಯಾನ-3 (Chandrayaan 3) ಮಿಷನ್‌ಅನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಬಳಿಕ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಆತ್ಮವಿಶ್ವಾಸವು ನೂರ್ಮಡಿಯಾಗಿದೆ. ಕೇಂದ್ರ ಸರ್ಕಾರವೂ (Central Government) ಬಾಹ್ಯಾಕಾಶ ಯೋಜನೆಗಳಿಗೆ ಉತ್ತೇಜನ ನೀಡುತ್ತಿದೆ. ಇದರ ಬೆನ್ನಲ್ಲೇ, “2025ರ ವೇಳೆಗೆ ಭಾರತವು ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಹಾಗೂ ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್‌ ಕಳುಹಿಸಲಾಗುತ್ತದೆ” ಎಂಬುದಾಗಿ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ (Dr. Jitendra Singh) ತಿಳಿಸಿದ್ದಾರೆ.

ಭಾರತ್‌ 24 ನ್ಯೂಸ್‌ ನೆಟ್‌ವರ್ಕ್‌ ಜತೆಗಿನ ವಿಶೇಷ ಸಂವಾದದಲ್ಲಿ ಈ ಕುರಿತು ಅವರು ಮಾಹಿತಿ ನೀಡಿದ್ದಾರೆ. “ಬಾಹ್ಯಾಕಾಶ ಕ್ಷೇತ್ರವು ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆಗಷ್ಟೇ ಸೀಮಿತವಾಗಿದೆ. ಆದರೆ, ಬಾಹ್ಯಾಕಾಶ ಕ್ಷೇತ್ರದಿಂದ ಕೃಷಿ, ಮೂಲ ಸೌಕರ್ಯ, ಸಂವಹನ, ಆರೋಗ್ಯ ಸೇರಿ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಭೂಮಿ ದಾಖಲೆ ನಿರ್ವಹಣೆ, ಹೊಸ ಭೌಗೋಳಿಕ ನೀತಿ, ಹೊಸ ಬಾಹ್ಯಾಕಾಶ ನೀತಿ, ಮಣ್ಣಿನ ಆರೋಗ್ಯ ಕಾರ್ಡ್‌, ಲ್ಯಾಂಡ್‌ ಮ್ಯಾಪಿಂಗ್‌ ಸೇರಿ ಮುಂತಾದ ವಲಯಗಳಿಗೆ ಅನುಕೂಲವಾಗಲಿದೆ” ಎಂಬುದಾಗಿ ಅವರು ತಿಳಿಸಿದರು.

“ಭಾರತದ ಬಾಹ್ಯಾಕಾಶ ಕ್ಷೇತ್ರವು ಗಣನೀಯವಾಗಿ ಏಳಿಗೆ ಹೊಂದುತ್ತಿದೆ. 2022ರಲ್ಲಿ ದೇಶದಲ್ಲಿ ಬಾಹ್ಯಾಕಾಶಕ್ಕೆ ಸಂಬಂದಿಸಿದ ಒಂದೇ ಒಂದು ನವೋದ್ಯಮ ಇತ್ತು. ಬಾಹ್ಯಾಕಾಶದಲ್ಲೂ ಖಾಸಗಿ ಸಹಭಾಗಿತ್ವಕ್ಕೆ 2024ರಲ್ಲಿ ಅವಕಾಶ ನೀಡಿದ ಬಳಿಕ ನಾವೀಗ 200 ನವೋದ್ಯಮಗಳನ್ನು ಹೊಂದಿದ್ದೇವೆ. ಇವುಗಳಲ್ಲೇ ಕೆಲವು ಸ್ಟಾರ್ಟಪ್‌ಗಳು ಜಾಗತಿಕ ಮಟ್ಟದ ಸಾಮರ್ಥ್ಯ ಹೊಂದಿವೆ. ಅಷ್ಟೇ ಅಲ್ಲ, ಖಾಸಗಿ ವಲಯದಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ 1 ಸಾವಿರ ಕೋಟಿ ರೂ. ಹೂಡಿಕೆ ಹರಿದು ಬಂದಿದೆ” ಎಂಬುದಾಗಿ ಡಾ.ಜಿತೇಂದ್ರ ಸಿಂಗ್‌ ತಿಳಿಸಿದರು.

ಈಶಾನ್ಯ ರಾಜ್ಯಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ ಅವರು ಹತ್ತಾರು ವಿಷಯಗಳನ್ನು ಪ್ರಸ್ತಾಪಿಸಿದರು. “ಈಶಾನ್ಯ ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ ಭಾರಿ ಅಭಿವೃದ್ಧಿಯಾಗಿದೆ. ಎಲ್ಲ ಹವಾಮಾನದಲ್ಲೂ ಸುಗಮವಾಗಿ ಸಂಚಾರಕ್ಕೆ ಅನುಕೂಲವಾಗುವ ರಸ್ತೆಗಳ ಅಭಿವೃದ್ಧಿ, ಹೆದ್ದಾರಿಗಳ ಮೂಲಕ ಉತ್ತಮ ಸಂಪರ್ಕ, ನಗರ ಪ್ರದೇಶಗಳಿಂದ ದೂರವಿರುವ ಪಟ್ಟಣ, ಗ್ರಾಮಗಳಿಗೂ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ. ಇದು ಈಶಾನ್ಯ ರಾಜ್ಯಗಳ ಮಟ್ಟಿಗೆ ಅತ್ಯುತ್ತಮ ಬೆಳವಣಿಗೆ” ಎಂದು ಹೇಳಿದರು.

ಇದನ್ನೂ ಓದಿ: Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Continue Reading

ದೇಶ

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

Mukesh Ambani: ಜುಲೈ 12ರಂದು ಮುಂಬೈಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ನಡೆಯಲಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿದೆ. ಈಗ ಮುಕೇಶ್‌ ಅಂಬಾನಿ ಅವರು ದೇಶದ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುವಲ್ಲಿ ಬ್ಯುಸಿಯಾಗಿದ್ದಾರೆ.

VISTARANEWS.COM


on

Mukesh Ambani
Koo

ನವದೆಹಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (RIL) ಮುಖ್ಯಸ್ಥ, ದೇಶದ ಆಗರ್ಭ ಶ್ರೀಮಂತ ಮುಕೇಶ್‌ ಅಂಬಾನಿ (Mukesh Ambani) ಅವರ ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹಕ್ಕೆ ದಿನಗಣನೆ ಆರಂಭವಾಗಿದೆ. ಜುಲೈ 12ರಂದು ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಜೋಡಿಯು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಹಾಗಾಗಿ, ಗುರುವಾರ (ಜುಲೈ 4) ಮುಕೇಶ್‌ ಅಂಬಾನಿ ಅವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರನ್ನು ಭೇಟಿಯಾಗಿ, ಮಗನ ಮದುವೆಗೆ ಆಹ್ವಾನಿಸಿದ್ದಾರೆ.

ನವದೆಹಲಿಯ 10 ಜನಪಥದಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ಮುಕೇಶ್‌ ಅಂಬಾನಿ ಅವರು ಕಾಂಗ್ರೆಸ್‌ ನಾಯಕಿಯನ್ನು ಮದುವೆಗೆ ಆಹ್ವಾನಿಸಿದ್ದಾರೆ. ಅದ್ಧೂರಿಯಾಗಿ ನಡೆಯುವ ವಿವಾಹ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ನೂರಾರು ರಾಜಕಾರಣಿಗಳು, ಬಾಲಿವುಡ್‌ ನಟ-ನಟಿಯರು, ಕ್ರಿಕೆಟಿಗರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಬಹುತೇಕ ಜನರಿಗೆ ಮುಕೇಶ್‌ ಅಂಬಾನಿ ಅವರ ಕುಟುಂಬದಿಂದ ವಿವಾಹ ಆಮಂತ್ರಣ ಪತ್ರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಜುಲೈ 12ರಂದು ನಡೆಯುವ ಅದ್ಧೂರಿ ವಿವಾಹ ಸಮಾರಂಭಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್‌ ಕಾರ್ಪೋರೇಟ್‌ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿಗಳು ಹಸೆಮಣೆ ಏರಿದವು.

ಈ ಸಾಮೂಹಿಕ ವಿವಾಹದಲ್ಲಿ ವಧು-ವರರ ಕುಟುಂಬದ ಸುಮಾರು 800 ಮಂದಿ ಪಾಲ್ಗೊಂಡಿದ್ದರು. ಸ್ವತಃ ಮುಕೇಶ್‌ ಅಂಬಾನಿ, ನೀತಾ ಅಂಬಾನಿ, ಆಕಾಶ್‌ ಅಂಬಾನಿ, ಶ್ಲೋಕ ಮೆಹ್ತಾ, ಇಶಾ ಅಂಬಾನಿ, ಆನಂದ್‌ ಪಿರಮಾಲ್‌ ಆಗಮಿಸಿ ನೂತನ ವಧು-ವರರನ್ನು ಹಾರೈಸಿದರು.

ಪ್ರತಿ ಜೋಡಿಗೆ ಚಿನ್ನದ ಉಂಗುರ, ಮಂಗಳ ಸೂತ್ರ, ಮೂಗುತ್ತಿ ಉಡುಗೊರೆಯಾಗಿ ನೀಡಲಾಯಿತು. ಜತೆಗೆ ಬೆಳ್ಳಿಯ ಆಭರಗಳನ್ನೂ ನೀಡಲಾಗಿದೆ. ಜತೆಗೆ ಸ್ತ್ರೀಧನವಾಗಿ ಪ್ರತಿ ವಧುವಿಗೆ 1.01 ಲಕ್ಷ ರೂ. ಚೆಕ್‌ ಅನ್ನು ಅಂಬಾನಿ ಕುಟುಂಬಸ್ಥರು ವಿತರಿಸಿದ್ದಾರೆ. ಮಾತ್ರವಲ್ಲ ಪ್ರತಿ ಜೋಡಿಗೆ ಒಂದು ವರ್ಷಕ್ಕೆ ಅಗತ್ಯವಾದ ದಿನಸಿ ಸಾಮಗ್ರಿಗಳನ್ನೂ ವಿತರಿಸಲಾಗಿದೆ. ಇದು ಪಾತ್ರೆ ಪರಿಕರಗಳು, ಗ್ಯಾಸ್‌ ಸ್ಟವ್‌, ಮಿಕ್ಸಿ, ಫ್ಯಾನ್‌, ಹಾಸಿಗೆ ಮತ್ತು ತಲೆ ದಿಂಬುಗಳನ್ನು ಒಳಗೊಂಡಿದೆ. ಅದ್ಧೂರಿ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ವೇಳೆ ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಅತಿಥಿಗಳು ಮತ್ತು ಅಂಬಾನಿ ಕುಟುಂಬದ ಸದಸ್ಯರು ವೀಕ್ಷಿಸಿದರು.

ಇದನ್ನೂ ಓದಿ: Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

Continue Reading
Advertisement
Hot Corn Recipe
ಆಹಾರ/ಅಡುಗೆ17 mins ago

Hot Corn Recipe: ಮಳೆಗಾಲದಲ್ಲಿ ಬಿಸಿಬಿಸಿಯಾದ ಜೋಳವನ್ನು ಮನೆಯಲ್ಲೇ ಮಾಡುವುದು ಹೇಗೆ?

karnataka Weather Forecast Rain
ಮಳೆ47 mins ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Vastu Tips
ಧಾರ್ಮಿಕ1 hour ago

Vastu Tips: ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕೆ? ಹೀಗೆ ಮಾಡಿ

Dina Bhavishya
ಭವಿಷ್ಯ2 hours ago

Dina Bhavishya :‌ ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಗುಡ್‌ ನ್ಯೂಸ್

Team India
ಪ್ರಮುಖ ಸುದ್ದಿ7 hours ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Viral Video
ದೇಶ7 hours ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ7 hours ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ8 hours ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ8 hours ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

India's open-bus parade
ಪ್ರಮುಖ ಸುದ್ದಿ8 hours ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ47 mins ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ13 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ14 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ16 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ17 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ18 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ19 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ20 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌