ಇವರ ಮೈಮೇಲೆ ಸಾಯಿಬಾಬಾ ಬರುತ್ತಾರಾ? ಸದ್ಗುರು ಮಧುಸೂದನ ಸಾಯಿ ಇನ್ನೊಂದು ಸಾಮ್ರಾಜ್ಯ ಕಟ್ಟಿದ ರೋಚಕ ಕತೆ! - Vistara News

ಧಾರ್ಮಿಕ

ಇವರ ಮೈಮೇಲೆ ಸಾಯಿಬಾಬಾ ಬರುತ್ತಾರಾ? ಸದ್ಗುರು ಮಧುಸೂದನ ಸಾಯಿ ಇನ್ನೊಂದು ಸಾಮ್ರಾಜ್ಯ ಕಟ್ಟಿದ ರೋಚಕ ಕತೆ!

ಪುಟ್ಟಪರ್ತಿಯ ಸಾಯಿಬಾಬಾ ಭಕ್ತನಾಗಿದ್ದು, ಇಂದು ಸ್ವತಃ ತಮ್ಮನ್ನೇ ಸಾಯಿಬಾಬಾ ಆವಾಹಿತ ಎಂದು ಕರೆದುಕೊಳ್ಳುವ ಸದ್ಗುರು ಮಧುಸೂದನ ಸಾಯಿ ಅವರ ಕತೆ ಇಲ್ಲಿದೆ.

VISTARANEWS.COM


on

Madhusudan Sai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೆಚ್ಚೇನೂ ದೂರವಿಲ್ಲ, ಕರ್ನಾಟಕದ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಎಂಬಲ್ಲಿ ಸದ್ಗುರು ಮಧುಸೂದನ ಸಾಯಿ ಅವರ ನೂರಾರು ಎಕರೆ ವಿಸ್ತೀರ್ಣದ ಆಶ್ರಮವಿದೆ. ಅವರು ಮತ್ತು ಅವರ ನೂರಾರು ಭಕ್ತರು ಹೇಳುವ ಪ್ರಕಾರ, ಅವರ ಮೈಮೇಲೆ ಶ್ರೀ ಸಾಯಿಬಾಬಾ ಅವರ ಆವಾಹನೆ ಆಗುತ್ತದೆ. ಆದರೆ ಪುಟ್ಟಪರ್ತಿಯ ಮೂಲ ಸಾಯಿಬಾಬಾ ಆಶ್ರಮದವರ ಪ್ರಕಾರ ಈ ವ್ಯಕ್ತಿ ನಕಲಿ. ಹಾಗಿದ್ದರೆ ನಿಜವೇನು?

ಒಂದು ಕಾಲದಲ್ಲಿ ಸತ್ಯನಾರಾಯಣ ರಾಜು ಅವರು ಸತ್ಯಸಾಯಿ ಬಾಬಾ ಆದಂತೆ, ಇಂದು ಮಧುಸೂದನ ನಾಯ್ಡು ಅವರು ತಮ್ಮ ಭಕ್ತಾದಿಗಳ ಬೆಂಬಲದಿಂದ ʼಸದ್ಗುರು ಶ್ರೀ ಮಧುಸೂದನ ಸಾಯಿʼ ಆಗಿದ್ದಾರೆ. ಸಾಯಿಬಾಬಾ ಅವರಂತೆಯೇ ಬಟ್ಟೆ ಧರಿಸುತ್ತಾರೆ. ಅವರಂತೆಯೇ ಗಾಳಿಯಿಂದ ವಿಭೂತಿ ಸೃಷ್ಟಿಸುವುದು, ಶೂನ್ಯದಿಂದ ಉಂಗುರ ಸೃಷ್ಟಿಸುವುದು ಮುಂತಾದ ಪವಾಡಗಳನ್ನು ಮಾಡುತ್ತಾರೆ. ಪುಟ್ಟಪರ್ತಿಯಿಂದ ನೂರು ಕಿಲೋಮೀಟರ್‌ ದೂರದಲ್ಲಿರುವ ಮುದ್ದೇನಹಳ್ಳಿಯಲ್ಲಿ ತಮ್ಮದೇ ಆದ ವ್ಯವಸ್ಥಿತ ಬೃಹತ್‌ ಆಶ್ರಮ ಸಾಮ್ರಾಜ್ಯವನ್ನು ಕಟ್ಟಿಕೊಂಡಿದ್ದಾರೆ.

ಸಾಯಾಬಾಬಾ ನನ್ನ ಜೊತೆ ಮಾತಾಡ್ತಾರೆ!
2011ರಲ್ಲಿ ಸಾಯಿಬಾಬಾ ಅವರು ನಿಧನ ಹೊಂದಿದರು. ಆಗ ಮಧುಸೂದನ ಅವರು ʼʼನನ್ನ ಜೊತೆ ಸಾಯಿಬಾಬಾ ಮಾತಾಡುತ್ತಾರೆʼʼ ಎಂದು ಹೇಳಿಕೊಂಡಿದ್ದರು. ಈಗ ʼʼಅವರೇ ನನ್ನ ಮೇಲೆ ಆವಾಹನೆಯಾಗುತ್ತಾರೆʼʼ ಎಂದು ಹೇಳಿಕೊಳ್ಳುತ್ತಾರೆ. ʼʼನನಗೆ ದೇಹವಿಲ್ಲ. ಆದರೆ ನಾನು ನಿಮ್ಮ ದೇಹಗಳ ಮೂಲಕ ಪವಾಡ ಮಾಡುತ್ತೇನೆʼʼ ಎಂದು ಸಾಯಿಬಾಬಾ ಅವರು ಮಧುಸೂದನ ಸಾಯಿ ಅವರಿಗೆ ಹೇಳಿದ್ದನ್ನು ತಮ್ಮ ಲೇಖನದಲ್ಲಿ ಬರೆದುಕೊಂಡಿದ್ದಾರೆ ಅವರು.

ಮುದ್ದೇನಹಳ್ಳಿಯ ಆಶ್ರಮ ಕಾರ್ಪೊರೇಟ್‌ ಮಾದರಿಯಲ್ಲಿದೆ. ಪಿಆರ್‌ ವ್ಯವಸ್ಥೆ ಕೂಡ ಅದ್ಭುತವಾಗಿದೆ. ಪುಟ್ಟಪರ್ತಿಯಿಂದ ಕೆಲವು ಭಕ್ತರು ಕೂಡ ಮುದ್ದೇನಹಳ್ಳಿಯ ಆಶ್ರಮಕ್ಕೆ ಶಿಫ್ಟ್‌ ಆಗಿದ್ದಾರೆ, ನಿಷ್ಠ ಬದಲಾಯಿಸಿದ್ದಾರೆ. ಆದರೆ ಪುಟ್ಟಪರ್ತಿಯ ಆಶ್ರಮದವರಿಗೆ ಮಧೂಸೂದನ ಸಾಯಿಯ ನೂತನ ಅವತಾರದ ಮೇಲೆ ಸಿಟ್ಟಿದೆ. ʼʼಅದು ನಕಲಿ, ನಾಟಕʼʼ ಎಂಬುದು ಅವರ ಅಭಿಪ್ರಾಯ.

2011ರ ಏಪ್ರಿಲ್‌ನಲ್ಲಿ ಸಾಯಿಬಾಬಾ ನಿರ್ವಾಣ ಹೊಂದಿದರು. ತಾನು 96 ವರ್ಷದವರೆಗೆ ಬದುಕುತ್ತೇನೆ, ನಂತರ ಕರ್ನಾಟಕದ ಮಂಡ್ಯದಲ್ಲಿ ಪ್ರೇಮಸಾಯಿಯಾಗಿ ಜನಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದರು. ಆದರೆ ಬದುಕಿದ್ದು 84 ವರ್ಷ ಮಾತ್ರ.

ಮುದ್ದೇನಹಳ್ಳಿಯ ಸಾಯಿ ಗ್ರಾಮ

ಬಾಬಾರ ನಿಕಟ ಅನುಯಾಯಿ
ಮಧುಸೂದನ ಸಾಯಿ ಅವರಿಗೆ ಈಗ 43 ವರ್ಷ. ಸಾಯಿಬಾಬಾ ತೀರಿಕೊಂಡ ಬಳಿಕ ಪುಟ್ಟಪರ್ತಿಯಲ್ಲಿದ್ದ ನರಸಿಂಹ ಮೂರ್ತಿ, ಸಿ.ಶ್ರೀನಿವಾಸ್‌, ಐಸಾಕ್‌ ಟಿಗ್ರೆಟ್‌ ಎಂಬ ದೊಡ್ಡ ಭಕ್ತರೆಲ್ಲ ಮಧುಸೂದನರ ಜೊತೆಗೆ ಸೇರಿಕೊಂಡರು. ಕೆಮಿಸ್ಟ್ರಿಯಲ್ಲಿ ಬಿಎ ಮತ್ತು ಎಂಎ ಡಿಗ್ರಿ ಮಾಡಿದ ಮಧುಸೂದನ, ಎಂಬಿಎಯನ್ನು ಪುಟ್ಟಪರ್ತಿಯಲ್ಲಿ ಮಾಡಿದರು. ಆಗಲೇ ಅದ್ಭುತವಾಗಿ ಮಾತನಾಡುತ್ತಿದ್ದರು, ಸ್ಟಡಿಯಲ್ಲಿ ಪಾರಂಗತ. ಸಂಗೀತ, ನಾಟಕ, ಪೇಂಟಿಂಗ್‌ಗಳಲ್ಲಿ ಪ್ರತಿಭಾವಂತ. ಸಾಯಿಬಾಬಾ ಅವರ ಹತ್ತಿರದ ಒಡನಾಟ ಹೊಂದಿದ್ದರು. ಆಗಲೇ ಹಾಸ್ಟೆಲ್‌ನಲ್ಲಿ ಸಾಯಿಬಾಬಾ ಅವರ ಮಾತು, ಕೈಕರಣಗಳನ್ನು ಅನುಕರಿಸಿ ಗೆಳೆಯರನ್ನು ಆಕರ್ಷಿಸುತ್ತಿದ್ದರು. ಸಾಯಿಬಾಬಾರಿಂದ ಕೆರಿಯರ್‌ ಮಾರ್ಗದರ್ಶನ ಪಡೆಯುತ್ತಿದ್ದರು. ಬಾಬಾ ಅವರ ತಂದೆತಾಯಿಗಳ ಪೇಟಿಂಗ್‌ ಮಾಡಿಕೊಟ್ಟಿದ್ದರು.

ಇದನ್ನೂ ಓದಿ: Explainer: ಕಾಶಿ ಮಾದರಿ ಸಮೀಕ್ಷೆಯತ್ತ ಮಥುರಾ ಶ್ರೀ ಕೃಷ್ಣ ಜನ್ಮಭೂಮಿ ?

2003ರಲ್ಲಿ ಎಂಬಿಎ ಮಾಡಿದ ಬಳಿಕ, ಬ್ಯಾಂಕಿಂಗ್‌ನತ್ತ ಹೋದರು. ಆದರೆ ಪುಟ್ಟಪರ್ತಿಗೆಗೆ ಆಗಾಗ ಬರುತ್ತಿದ್ದರು. ಸಾಯಿಬಾಬಾ ತೀರಿಕೊಂಡ ನಂತರ ಮಧುಸೂದನರ ವರ್ತನೆಗಳು ಬದಲಾದವು. ʼʼಸಮಾಧಿ ಒಡೆದು ಬಾಬಾ ಹೊರಗೆ ಬರುತ್ತಾರೆʼʼ ಎನ್ನುತ್ತಿದ್ದರು. ಪುಟ್ಟಪರ್ತಿಗೆ ಬಂದು ಭಕ್ತರನ್ನೆಲ್ಲ ಒಂದೆಡೆ ಸೇರಿಸಿ, ಅವರನ್ನು ದಿಟ್ಟಿಸಿ ನೋಡಿ, ʼʼಅದೋ ಬಾಬಾ ಬಂದರುʼʼ ಎನ್ನುತ್ತಿದ್ದರು. ಬಾಬಾ ನನ್ನ ಜೊತೆ ಮಾತಾಡುತ್ತಿದ್ದಾರೆ ಎನ್ನುತ್ತಿದ್ದರು. ಬಾಬಾ ಸಾವಿನ ಶಾಕ್‌ಗೆ ಮಧುಸೂದನ ಒಳಗಾಗಿದ್ದಾರೆ ಎಂದು ಪುಟ್ಟಪರ್ತಿ ಆಶ್ರಮದವರು ಇದನ್ನು ನಿರ್ಲಕ್ಷಿಸಿದರು.

ಸಾಯಿಬಾಬಾ ತಮ್ಮ ಕೊನೆಗಾಲದಲ್ಲಿ ಯಾವುದೇ ಉಯಿಲು ಇತ್ಯಾದಿ ಏನೂ ಬರೆದಿಟ್ಟಿರಲಿಲ್ಲ. ಹೀಗಾಗಿ ಪುಟ್ಟಪರ್ತಿಯ ಉತ್ತರಾಧಿಕಾರದ ಕುರಿತ ಗೊಂದಲ ಮುಂದುವರಿದಿತ್ತು. ಪುಟ್ಟಪರ್ತಿಗೇ ಸಂಬಂಧಿಸಿದ ಮುದ್ದೇನಹಳ್ಳಿಯ 120 ಎಕರೆ ಆಶ್ರಮ ಕೂಡ ಮುಂದೇನು ಎಂಬ ಇತ್ಯರ್ಥ ಇಲ್ಲದೇ ಹೋಗಿತ್ತು. ಅದೇ ಸಂದರ್ಭದಲ್ಲಿ ಮಧುಸೂದನ ಅಲ್ಲಿಗೆ ಬಂದು ಝಂಡಾ ಊರಿದರು.

ಅಲ್ಲಿಂದಾಚೆಗೆ ಮುದ್ದೇನಹಳ್ಳಿ ಆಶ್ರಮದ ಲುಕ್ಕೇ ಬದಲಾಗಿ ಹೋಯಿತು. ಹೊಸ ಆಶ್ರಮ ಬಂತು. ʼಸತ್ಯಸಾಯಿ ಗ್ರಾಮʼ ಎಂದು ಕರೆಯಲಾಯಿತು. ಅಗಲ ಬೀದಿಗಳು, ದೊಡ್ಡ ಕಟ್ಟಡಗಳು, ಸೊಗಸಾದ ಲಾನ್‌ಗಳು, ಫುಡ್‌ ಔಟ್‌ಲೆಟ್‌ಗಳು, ಶಾಪಿಂಗ್‌ ಮಾಲ್‌ಗಳು ಬಂದವು. ನಿತ್ಯ ಧ್ಯಾನದ ಶೆಡ್ಯೂಲ್‌ಗಳು ಹಾಗೂ ಸಾರಿಗೆ ಸಂಪರ್ಕವಿದೆ. ಸ್ಟೇಡಿಯಂ ಮತ್ತು ಗೋಶಾಲೆ ನಿರ್ಮಾಣವಾಗುತ್ತಿದೆ. ಕೋಟ್ಯಂತರ ರೂಪಾಯಿ ಹಣ ದೇಶ ವಿದೇಶದ ಭಕ್ತಾದಿಗಳಿಂದ ಹರಿದು ಬರುತ್ತಿದೆ.

ಬಾಬಾ ಸಂದೇಶವಾಹಕ
2011ರ ನಂತರ ʼʼನಾನು ಸತ್ಯಸಾಯಿ ಬಾಬಾ ಅವರ ಸಂದೇಶವಾಹಕʼʼ ಎಂದು ಮಧುಸೂದನ ಹೇಳಿಕೊಂಡರು. ಸರಳ ಬಟ್ಟೆ ತೊಡುತ್ತಿದ್ದರು. ತಮ್ಮ ಗುರುವಿಗಾಗಿ ಮೀಸಲಾದ ಒಂದು ಕುರ್ಚಿಯನ್ನು ಮುಂದಿಟ್ಟುಕೊಂಡು ಅದರ ಮುಂದೆ ಕುಳಿತಿರುತ್ತಿದ್ದರು. ಸ್ವಲ್ಪ ಕಾಲದ ನಂತರ ʼʼನಾನು ಸಾಯಿಬಾಬಾ ಅವರನ್ನು ನೋಡಬಲ್ಲೆʼʼ ಎನ್ನತೊಡಗಿದರು. ಮರ್ಸಿಡಿಸ್‌ ಕಾರಿನ ಬಾಗಿಲು ತೆರೆದು, ಹಿಂದಿನ ಸೀಟಿನಿಂದ ಇಳಿದು ಬರುತ್ತಿರುವ ಸಾಯಿಬಾಬಾ ಅವರನ್ನ ಸ್ವಾಗತಿಸಿದಂತೆ, ಅವರ ಮಾತನ್ನು ಆಲಿಸಿದಂತೆ, ತಾನೂ ಅವರೊಂದಿಗೆ ಮಾತಾಡಿದಂತೆ ಅಭಿನಯಿಸಿದರು.

ಇದೆಲ್ಲ ಬಾಬಾ ಅವರ ಭಕ್ತರನ್ನು ಆಕರ್ಷಿಸಿತು. ಪುಟ್ಟಪರ್ತಿಯ ಅನೇಕ ಸಾಂಪ್ರದಾಯಿಕ ಭಕ್ತರು ಕೂಡ ಇತ್ತ ಸೆಳೆತಕ್ಕೊಳಗಾದರು. ವಿದೇಶಗಳ ಭಕ್ತರೂ ಬರತೊಡಗಿದರು. ಕೆಲವು ವಿದೇಶಿ ಭಕ್ತರ ಹಿಂದಿನ ಜೀವನದ ವಿವರಗಳನ್ನು ಕರಾರುವಕ್ಕಾಗಿ ಹೇಳಿ, ಅವರನ್ನು ಮತ್ತಷ್ಟು ಇಂಪ್ರೆಸ್‌ ಮಾಡಿದರು. ಕೆಲವರು ಪರ್ಮನೆಂಟಾಗಿ ತಮ್ಮ ತಾಣವನ್ನು ಪುಟ್ಟಪರ್ತಿಯಿಂದ ಇಲ್ಲಿಗೆ ಬದಲಾಯಿಸಿದರು.

ನಾನೇ ಬಾಬಾ!
ನಿಧಾನವಾಗಿ ಮಧುಸೂದನ ಇನ್ನಷ್ಟು ಬದಲಾದರು. ಸತ್ಯಸಾಯಿ ಬಾಬಾ ಅವರಂತೆಯೇ ಉಡುಪು ಧರಿಸತೊಡಗಿದರು. 2019ರ ಜುಲೈ 16ರಂದು, ಸಾಯಿಬಾಬಾ ಅವರಿಗೆ ಮೀಸಲಿಟ್ಟ ಆಸನದಲ್ಲಿ ತಾವೇ ಕುಳಿತರು. ʼʼಗುರುಪೂರ್ಣಿಮೆಯಂದು ನಾನು ಎಲ್ಲವನ್ನೂ ಮಧುಸೂದನ್‌ಗೆ ಒಪ್ಪಿಸಿಕೊಟ್ಟಿದ್ದೇನೆ. ಅಗತ್ಯವಿದ್ದರೆ ಅವನು 24 ಗಂಟೆಯೂ ನನ್ನ ಆವಾಹನೆಯನ್ನು ಹೊಂದಿ ಇರಬಹುದುʼʼ ಎಂದು ಸಾಯಿಬಾಬಾ ಅವರ ಧ್ವನಿಯಲ್ಲಿ ಮಧುಸೂದನ ಹೇಳಿದರು.

ಇದನ್ನೂ ಓದಿ: Explainer: ಜ್ಞಾನವಾಪಿ ಮಸೀದಿ ವಿವಾದ: ಹಿಂದೂಗಳಿಗೆ ಅಡ್ಡಿಯಾಗುತ್ತಾ ಪೂಜಾ ಸ್ಥಳಗಳ ಕಾಯಿದೆ ?

ಇದೆಲ್ಲವೂ ಅತ್ತ ಪುಟ್ಟಪರ್ತಿಯ ಆಶ್ರಮದಲ್ಲಿ ಒಂದು ಬಗೆಯ ಕೋಲಾಹಲವನ್ನೇ ಸೃಷ್ಟಿಸಿವೆ. ಮಧುಸೂದನ ಅವರ ಬೋಧನೆ, ಮಾತುಗಳಿಂದ ಆಕರ್ಷಿತರಾಗಿ ಇತ ಬಂದವರು ಹಲವರಿದ್ದಾರೆ. ಅವರನ್ನು ಪುಟ್ಟಪರ್ತಿಯ ಆಶ್ರಮದವರು ಮರಳಿ ಸೇರಿಸಿಕೊಂಡಿಲ್ಲ. ʼʼಮಧುಸೂದನ ಮಾಡುತ್ತಿರುವುದೆಲ್ಲಾ ನಾಟಕʼʼ ಎಂದೇ ಅವರು ಪ್ರತಿಪಾದಿಸುತ್ತಾ ಬಂದಿದ್ದಾರೆ. ಆಶ್ರಮದ ಜಾಗದ ತಗಾದೆ ಸೇರಿದಂತೆ ಹಲವಾರು ಕೋರ್ಟ್‌ ಪ್ರಕರಣಗಳು ಸಾಯಿಬಾಬಾ ಟ್ರಸ್ಟ್‌ ಹಾಗೂ ಮುದ್ದೇನಹಳ್ಳಿ ಆಶ್ರಮದ ನಡುವೆ ಇವೆ. ಮಧುಸೂದನ ಅವರ ಪುಸ್ತಕ ಅಥವಾ ಇನ್ಯಾವುದೇ ಪ್ರಭಾವಗಳು ಕಂಡುಬಂದಲ್ಲಿ ಅಂಥವರ ಮೇಲೆ ಪುಟ್ಟಪರ್ತಿ ಆಶ್ರಮ ಕಠಿಣ ಕ್ರಮ ಕೈಗೊಳ್ಳುತ್ತದೆ.

ಕೆಲವು ದಾಖಲೆಗಳ ಪ್ರಕಾರ ಇತ್ತೀಚೆಗೆ ಪುಟ್ಟಪರ್ತಿಗಿಂತಲೂ ಅಧಿಕ ವಿದೇಶಿ ಹಣ ಮುದ್ದೇನಹಳ್ಳಿ ಆಶ್ರಮಕ್ಕೆ ಹರಿದುಬರುತ್ತಿದೆ. ಆದರೆ ಪುಟ್ಟಪರ್ತಿಯ ಸಾಮ್ರಾಜ್ಯ ಇಂದಿಗೂ ಅಖಂಡಿತವಾಗಿಯೇ ಇದೆ. 114 ದೇಶಗಳಲ್ಲಿ ಹರಡಿಕೊಂಡಿರುವ ಸಾಯಿಬಾಬಾ ಕೇಂದ್ರಗಳು, ಶಿಕ್ಷಣಕೇಂದ್ರಗಳು, ಸುಸಜ್ಜಿತ ಏರ್‌ಪೋರ್ಟ್‌ ಎಲ್ಲ ಇವೆ.

ಸಾಯಿಬಾಬಾ ಅವರು ಮಧುಸೂದನ ಸಾಯಿ ಅವರ ದೇಹದಲ್ಲಿ ಇದ್ದಾರೆ ಎಂಬುದರ ಬಗ್ಗೆ ಅವರ ಭಕ್ತರಿಗೆ ಅಪನಂಬಿಕೆಯಿಲ್ಲ. ಆದರೆ ಪುಟ್ಟಪರ್ತಿಯವರಿಗೆ ಇದರ ಬಗ್ಗೆ ನಂಬಿಕೆಯಿಲ್ಲ. ಇಬ್ಬರಿಗೂ ತಮ್ಮ ತಮ್ಮ ಸಾಮ್ರಾಜ್ಯವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯವಂತೂ ಇದ್ದೇ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
Prajwal Revanna Case
ಕರ್ನಾಟಕ5 mins ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ19 mins ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ27 mins ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest41 mins ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Fire Accident
ಕರ್ನಾಟಕ2 hours ago

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

IPL 2024
ಕ್ರೀಡೆ2 hours ago

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

Al Jazeera
ಪ್ರಮುಖ ಸುದ್ದಿ2 hours ago

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Pralhad Joshi
ಕರ್ನಾಟಕ2 hours ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest2 hours ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest3 hours ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ5 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ5 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌