ಡೋಣಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ: ಸಿಲಿಕಿಕೊಂಡ ವಾಹನಗಳು - Vistara News

ವಿಜಯಪುರ

ಡೋಣಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ: ಸಿಲಿಕಿಕೊಂಡ ವಾಹನಗಳು

ಹರನಾಳ ತಾಳಿಕೋಟೆ ಮಧ್ಯ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆದರೆ ದಿಢೀರ್ ಆಗಿ ಶನಿವಾರ ರಾತ್ರಿ ಡೋಣಿ ನದಿಗೆ ಪ್ರವಾಹ ಬಂದಿದೆ

VISTARANEWS.COM


on

ಪ್ರವಾಹ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಕಳೆದ ಮೂರ್ನಾಲ್ಕು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಡೋಣಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತಾಳಿಕೋಟೆ ತಾಲೂಕಿನ ಹರನಾಳ ಗ್ರಾಮದ ಬಳಿ ಡೋಣಿ ನದಿ ಪ್ರವಾಹದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಟ್ಯಾಕ್ಟರ್ ಸಿಲುಕಿದ ಘಟನೆ ನಡೆದಿದೆ.

ಇದನ್ನೂ ಓದಿ | ಮಕ್ಕಳನ್ನು ಕದ್ದು ಮಾರುತ್ತಿದ್ದಳ ಸ್ಟಾಫ್‌ ನರ್ಸ್‌?: ನಾಲ್ಕು ಮಕ್ಕಳ ರಕ್ಷಣೆ

ಹರನಾಳ ತಾಳಿಕೋಟೆ ಮಧ್ಯ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆದರೆ ದಿಢೀರನೆ ಶನಿವಾರ ರಾತ್ರಿ ಡೋಣಿ ನದಿಗೆ ಪ್ರವಾಹ ಬಂದಿದೆ. ಕಾಮಗಾರಿ ನಡೆಯುತ್ತಿರುವದರಿಂದ ರಾತ್ರಿ ಸಮಯದಲ್ಲಿ ಟ್ಯಾಕ್ಟರ್ ಹಾಗೂ ಸಾಮಗ್ರಿಗಳನ್ನು ಡೋಣಿ ನದಿಯಲ್ಲಿಯೇ ಬಿಟ್ಟು ಹೋಗಿದ್ದಾರೆ. ರವಿವಾರ ನೋಡಿದಾಗ ಅದು ಸಂಪೂರ್ಣ ನೀರಿನಲ್ಲಿ ನಿಂತಿದೆ. ಘಟನಾ ಸ್ಥಳಕ್ಕೆ ರವಿವಾರ ತಡರಾತ್ರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಎಸ್‌ಪಿ ಎಚ್.ಡಿ. ಆನಂದಕುಮಾರ, ಹೆಚ್ಚುವರಿ ಎಸ್‌ಪಿ ರಾಮ್ ಅರಸಿದ್ಧಿ, ಎಸಿ, ತಹಸೀಲ್ದಾರ್ ಸೇರಿ ಇನ್ನಿತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಮುಂಜಾಗ್ರತಾ ಕ್ರಮವಾಗಿ ಘಟನಾ‌ ಸ್ಥಳದಲ್ಲೇ ಬೀಡು ಬಿಡುವಂತೆ ಕೆಳಹಂತದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನದಿಯಲ್ಲಿ ಸಿಲುಕಿದ ಟ್ರ್ಯಾಕ್ಟರ್ ಹಾಗೂ ಇನ್ನಿತರ ಕಾಮಗಾರಿ ಸಾಮಗ್ರಿಗಳನ್ನು ನದಿಯಲ್ಲಿನ ನೀರಿನ‌ ಪ್ರಮಾಣ ತಗ್ಗಿದ ನಂತರವಷ್ಟೇ ಹೊರತೆಗೆಯಲು ಸಾಧ್ಯವಾಗಲಿದೆ.

ಇದನ್ನೂ ಓದಿ | Heavy Rains | ಮಳೆಗೆ ಬೆಳೆ ನಷ್ಟ; ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
lok sabha election 2024 voting dhoni
ಪ್ರಮುಖ ಸುದ್ದಿ21 mins ago

Lok Sabha Election 2024: ಮಧ್ಯಾಹ್ನ 1 ಗಂಟೆವರೆಗೆ 39.13% ಮತದಾನ, ಪ.ಬಂಗಾಳ ದಾಖಲೆ, ರಾಂಚಿಯಲ್ಲಿ ಧೋನಿ ವೋಟ್‌

SRH vs RR
ಕ್ರೀಡೆ33 mins ago

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

Exam date announced for recruitment of 4000 posts including PSI exam
ಉದ್ಯೋಗ48 mins ago

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

Udupi Gang War
ಪ್ರಮುಖ ಸುದ್ದಿ48 mins ago

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

google maps kerala river
ವೈರಲ್ ನ್ಯೂಸ್56 mins ago

Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು

Samarjit Lankesh Love you Samantha Song Teaser
ಸ್ಯಾಂಡಲ್ ವುಡ್57 mins ago

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Fake Intelligence Bureau officer arrested
ಬಾಗಲಕೋಟೆ1 hour ago

Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

Janhvi Kapoor views on Gandhi Ambedkar casteism
ಬಾಲಿವುಡ್1 hour ago

Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

Karan Johar announces new film on birthday
ಬಾಲಿವುಡ್1 hour ago

Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

foolish to link Rakesh death to Prajwal case says CM Siddaramaiah
ರಾಜಕೀಯ1 hour ago

CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌