Kushi Movie : ಶೂಟಿಂಗ್‌ ವೇಳೆ ಅವಘಡದಲ್ಲಿ ವಿಜಯ್‌ ದೇವರಕೊಂಡ -ಸಮಂತಾಗೆ ಗಾಯ - Vistara News

ಟಾಲಿವುಡ್

Kushi Movie : ಶೂಟಿಂಗ್‌ ವೇಳೆ ಅವಘಡದಲ್ಲಿ ವಿಜಯ್‌ ದೇವರಕೊಂಡ -ಸಮಂತಾಗೆ ಗಾಯ

ಈ ಚಿತ್ರವನ್ನು ನಿರ್ದೇಶಕ ಶಿವ ನಿರ್ವಾಣ ಮಾಡಿ ನಿರ್ದೇಶಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ. ಇಬ್ಬರು ಕಲಾವಿದರಿಗೂ ಬೆನ್ನಿನ ಭಾಗದಲ್ಲಿ ಗಾಯವಾಗಿದೆ ಎನ್ನಲಾಗುತ್ತಿದೆ.

VISTARANEWS.COM


on

ವಿಜಯ್‌ ದೇವರಕೊಂಡ -ಸಮಂತಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜಯ್‌ ದೇವರಕೊಂಡ ಮತ್ತು ಸಮಂತಾ ರುತ್‌ ಪ್ರಭು ಅಭಿನಯದ ಖುಷಿ ಸಿನಿಮಾದ ಶೂಟಿಂಗ್‌ ವೇಳೆ ಕಾಶ್ಮೀರದಲ್ಲಿ ವಾಹನ ಅಪಘಾತ ಸಂಭವಿಸಿದೆ.

ಅವಘಡದಲ್ಲಿ ಸಮಂತಾ ಮತ್ತು ದೇವರಕೊಂಡಗೆ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೊದಲ ಹಂತದ ಶೂಟಿಂಗ್‌ ಕಾಶ್ಮೀರದಲ್ಲಿ 20 ದಿನಗಳ ಕಾಲ ನಡೆಯುತ್ತಿತ್ತು.

ಇದನ್ನೂ ಓದಿ | Trailer Release | ಧರ್ಮನ ಕಥೆ ಹೇಳುವ ʼ777 ಚಾರ್ಲಿʼ

ಜಮ್ಮು ಕಾಶ್ಮೀರದ ಪೆಹಲ್‌ಗಾಂವ್‌ನಲ್ಲಿ ಆಕ್ಷನ್‌ ಸೀನ್‌ ಶೂಟಿಂಗ್‌ ನಡೆಯುತ್ತಿತ್ತು. ಲಿಡ್ಡರ್‌ ನದಿಯ ಮೇಲೆ ಹಗ್ಗಕ್ಕೆ ಕಟ್ಟಿದ್ದ ವಾಹನದ ಮೇಲೆ ಇಬ್ಬರೂ ನಡೆಯಬೇಕಿತ್ತು. ಇದ್ದಕ್ಕಿದ್ದಂತೆ ವಾಹನವು, ಕೆಳಗೆ ಹರಿಯುತ್ತಿದ್ದ ನದಿಗೆ ಬಿದ್ದಿದೆ. ಇಬ್ಬರಿಗೂ ಬೆನ್ನಿನ ಭಾಗದಲ್ಲಿ ಗಾಯವಾಗಿದೆ. ದಾಲ್‌ ಲೇಕ್‌ ಸಮೀಪದ ಆಸ್ಪತ್ರೆಗೆ ಇಬ್ಬರನ್ನೂ ದಾಖಲಿಸಲಾಗಿದ್ದು, ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಮತ್ತೆ ಶೂಟಿಂಗ್‌ನಲ್ಲಿ ಇಬ್ಬರೂ ಭಾಗಿಯಾಗಿದ್ದಾರೆ. ಆದರೆ ಬೆನ್ನು ನೋವು ಹಾಗೆಯೇ ಉಳಿದಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗಷ್ಟೆ ಮೋಷನ್‌ ಪೋಸ್ಟರ್‌ ಅನ್ನು ಖುಷಿ ಚಿತ್ರತಂಡ ಹಂಚಿಕೊಂಡಿತ್ತು. ವಿಜಯ್ ದೇವರಕೊಂಡ, ಸಮಂತಾ, ಜಯರಾಮ್, ಸಚಿನ್ ಖೇಡಕರ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್, ಶರಣ್ ಮುಂತಾದ ಅದ್ಭುತ ನಟ, ನಟಿಯರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ, ಪೀಟರ್ ಹೆನ್ಸ್ ಸಾಹಸ ನಿರ್ದೇಶನ, ಪ್ರವೀನ್ ಪುಡಿ ಅವರ ಸಂಕಲನ, ಜಿ ಮುರಳಿ ಕ್ಯಾಮೆರಾ ಕೆಲಸ ಮಾಡಿದೆ. ಹೇಶಮ್ ಅಬ್ದುಲ್ ವಹಾಬ್ ಅವರ ಸಂಗೀತವಿದೆ.

ಈ ಚಿತ್ರವನ್ನು ನಿರ್ದೇಶಕ ಶಿವ ನಿರ್ವಾಣ ಮಾಡಿ ನಿರ್ದೇಶಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ. ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಡಿಸೆಂಬರ್‌ 23ರಂದು ಈ ಸಿನಿಮಾ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ | ನಮ್ಮುಡುಗಿ ಜತೆ ಮದುವೆಯಾಗಲಿ; ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದ ಭೂಪ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಟಾಲಿವುಡ್

Mrunal Thakur: ಸಿದ್ಧಾಂತ್ ಚತುರ್ವೇದಿ ಜತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್‌!

Mrunal Thakur: ದೇವ್‌ದಾಸ್‌ʼ ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ಯಂತಹ ಹಿಟ್‌ ಸಿನಿಮಾಗಳನ್ನು ನೀಡಿದವರು ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali). ಅವರು ‘ಲವ್ ಆ್ಯಂಡ್ ವಾರ್’ ಸಿನಿಮಾ ( ‘Love and War’) ಮಾಡುತ್ತಿರುವುದು ಗೊತ್ತೇ ಇದೆ. ಇದೀಗ ಈ ಸಿನಿಮಾ ಹಿಂದಿಯ ಹಿಟ್‌ ಸಿನಿಮಾವಾದ ʻಸಂಗಮ್ʼ ಕಥೆಯಿಂದ ಸ್ಫೂರ್ತಿ ಪಡೆದಿದೆ ಎಂದು ವರದಿಯಾಗಿದೆ. ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ಅವರ ಮುಂದಿನ ಚಿತ್ರಕ್ಕೆ ಮೃಣಾಲ್ ಠಾಕೂರ್ (Mrunal Thakur) ಮತ್ತು ಸಿದ್ಧಾಂತ್ ಚತುರ್ವೇದಿ ಜೋಡಿಯಾಗಿ ನಟಿಸುತ್ತಿದ್ದಾರೆ.

VISTARANEWS.COM


on

Mrunal Thakur and Siddhant Chaturvedi to start shoot
Koo

ಬೆಂಗಳೂರು: ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ಅವರ ಮುಂದಿನ ಚಿತ್ರಕ್ಕೆ ಮೃಣಾಲ್ ಠಾಕೂರ್ (Mrunal Thakur) ಮತ್ತು ಸಿದ್ಧಾಂತ್ ಚತುರ್ವೇದಿ ಜೋಡಿಯಾಗಿ ನಟಿಸುತ್ತಿದ್ದಾರೆ. ಮುಂದಿನ ವಾರ ಚಿತ್ರದ ಚಿತ್ರೀಕರಣ ಶುರುವಾಗಲಿದೆ ಎಂದು ವರದಿಯಾಗಿದೆ. ʻಸೀತಾರಾಮಂʼ, ʻಹಾಯ್ ನಾನ್ನʼ, ʻಫ್ಯಾಮಿಲಿ ಸ್ಟಾರ್ʼ ಚಿತ್ರದ ಸಕ್ಸೆಸ್‌ ನಂತರ ಮೃಣಾಲ್ ಮತ್ತೆ ಹವಾ ಕ್ರಿಯೇಟ್ ಮಾಡಲಿದ್ದಾರೆ. ಮೃಣಾಲ್‌ ಮತ್ತು ಸಿದ್ಧಾಂತ್ ಮುಂದಿನ ವಾರ ಮುಂಬೈನಲ್ಲಿ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.

ಏಪ್ರಿಲ್ ಮೊದಲ ವಾರದಿಂದಲೇ ರವಿ ಉದ್ಯಾವರ್ ಅವರೊಂದಿಗೆ ಕಾರ್ಯಾಗಾರಗಳಿಗೆ ಭಾಗಿಯಾಗಿದ್ದರು. ಉದ್ಯಾವರ್ ಈ ಹಿಂದೆ ದಿವಂಗತ ನಟಿ ಶ್ರೀದೇವಿ ಅಭಿನಯದ MoM (2017) ಚಿತ್ರವನ್ನು ನಿರ್ದೇಶಿಸಿದ್ದರು. ಕೆಲವು ಮೂಲಗಳ ಪ್ರಕಾರ ‘ಲವ್ ಆ್ಯಂಡ್ ವಾರ್’ ಸಿನಿಮಾ ಬಳಿಕ ಬನ್ಸಾಲಿ ಈ ಸಿನಿಮಾದ ಚಿತ್ರೀಕರಣವನ್ನು ಮುಗಿಸುವ ಪ್ಲ್ಯಾನ್‌ನಲ್ಲಿದ್ದಾರೆ.

ಇದನ್ನೂ ಓದಿ: Mrunal Thakur: ಕೈ ಕೈ ಹಿಡಿದುಕೊಂಡ ಮೃಣಾಲ್ ಠಾಕೂರ್- ಬಾದ್‌ಶಾ; ಡೇಟಿಂಗ್ ಇರಬಹುದಾ?

ಬನ್ಸಾಲಿಯ ‘ಲವ್ ಆ್ಯಂಡ್ ವಾರ್’ಗೆ 1964ರ ಹಿಟ್‌ ಸಿನಿಮಾದಿಂದ ಸ್ಫೂರ್ತಿ!

ʼದೇವ್‌ದಾಸ್‌ʼ ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ಯಂತಹ ಹಿಟ್‌ ಸಿನಿಮಾಗಳನ್ನು ನೀಡಿದವರು ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali). ಅವರು ‘ಲವ್ ಆ್ಯಂಡ್ ವಾರ್’ ಸಿನಿಮಾ ( ‘Love and War’) ಮಾಡುತ್ತಿರುವುದು ಗೊತ್ತೇ ಇದೆ. ಇದೀಗ ಈ ಸಿನಿಮಾ ಹಿಂದಿಯ ಹಿಟ್‌ ಸಿನಿಮಾವಾದ ʻಸಂಗಮ್ʼ ಕಥೆಯಿಂದ ಸ್ಫೂರ್ತಿ ಪಡೆದಿದೆ ಎಂದು ವರದಿಯಾಗಿದೆ. 1964ರ ಈ ʻಸಂಗಮ್‌ʼ ( film Sangam) ಚಲನಚಿತ್ರದಲ್ಲಿ ರಾಜ್ ಕಪೂರ್, ವೈಜಯಂತಿಮಾಲಾ ಮತ್ತು ರಾಜೇಂದ್ರ ಕುಮಾರ್ ನಟಿಸಿದ್ದರು. ಈಗ ಈ ‘ಲವ್ ಆ್ಯಂಡ್ ವಾರ್’ ನಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್ ಮತ್ತು ವಿಕ್ಕಿ ಕೌಶಲ್‌ ನಟಿಸಲಿದ್ದಾರೆ.

ಈ ‘ಲವ್ ಆ್ಯಂಡ್ ವಾರ್’ ಸಿನಿಮಾ ʻಸಂಗಮ್‌ʼ ರಿಮೇಕ್‌ ಎಂದು ಬಹಳ ಹಿಂದೆಯೇ ವರದಿಯಾಗಿತ್ತು. ಆರಂಭದಲ್ಲಿ, ಧರ್ಮ ಪ್ರೊಡಕ್ಷನ್ಸ್ ಈ ಸಿನಿಮಾ ಮಾಡಲು ಯೋಜಿಸಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ಮಾಡಲು ಆಗಲಿಲ್ಲ. ಬನ್ಸಾಲಿಯವರ ‘ಲವ್ ಆ್ಯಂಡ್ ವಾರ್’ ಸಿನಿಮಾ ಒಂದು ತ್ರಿಕೋನ ಪ್ರೇಮ ಕಥೆಯಾಗಿದೆ ಎಂದು ವರದಿಯಾಗಿದೆ. ಮಾತ್ರವಲ್ಲ 1964ರ ಚಲನಚಿತ್ರ ʻಸಂಗಮ್‌ʼ ಸಿನಿಮಾದಿಂದ ಸ್ಫೂರ್ತಿ ಪಡೆದ ‘ಲವ್ ಆ್ಯಂಡ್ ವಾರ್’ ಆಧುನಿಕ ಕಾಲದ ಚಿತ್ರಕಥೆ ಹೊಂದಿರಲಿದೆ ಎಂದು ವರದಿಯಾಗಿದೆ.

ಈ ಚಿತ್ರಕ್ಕಾಗಿ ರಣಬೀರ್ ಕಪೂರ್ ತಮ್ಮ ತಾತ ರಾಜ್ ಕಪೂರ್ ಅವರ ʻಸಂಗಮ್ʼ ಪಾತ್ರ ನಿಭಾಯಿಸಲಿದ್ದಾರಂತೆ. ಸಿನಿಮಾ ಯಾವಾಗ ಸೆಟ್ಟೇರಲಿದೆ ಎಂಬ ವಿಷಯ ದೃಢಪಟ್ಟಿಲ್ಲದಿದ್ದರೂ 2024ರ ದ್ವಿತೀಯಾರ್ಧದಲ್ಲಿ ಸಿನಿಮಾ ಸೆಟ್ಟೇರಲಿದೆ ಎನ್ನಲಾಗಿದೆ.

Continue Reading

South Cinema

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

Mahesh Babu: ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ.

VISTARANEWS.COM


on

Mahesh Babu SS Rajamouli return from Dubai
Koo

ಬೆಂಗಳೂರು: ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ. ಈ ಸಿನಿಮಾದಲ್ಲಿ ಮಹೇಶ್‌ ಬಾಬು ಅವರ ಲುಕ್‌ ಡಿಫ್‌ರೆಂಟ್‌ ಆಗಿರಲಿದೆ ಎಂದು ಈ ಮುಂಚೆ ರಾಜಮೌಳಿ ಅವರು ಹೇಳಿದ್ದರು. ಆ ಲುಕ್​ ಬಹಿರಂಗ ಆಗಬಾರದು ಎಂಬುದು ರಾಜಮೌಳಿ ಅವರ ಉದ್ದೇಶ ಆಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ ಈಗ ಮಹೇಶ್​ ಬಾಬು ಅವರು ಹೊಸ ಗೆಟಪ್​ ಬಹಿರಂಗ ಆಗಿದೆ.

ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾದ ಪಾತ್ರಕ್ಕಾಗಿ ಅವರು ಕೂದಲು ಬೆಳೆಸಿದ್ದಾರೆ ಎಂದು ವರದಿಯಾಗಿದೆ. ರಾಜಮೌಳಿ ಇತ್ತೀಚೆಗೆ ಆರ್‌ಆರ್‌ಆರ್ ಸಿನಿಮಾದ ವಿಶೇಷ ಪ್ರದರ್ಶನಕ್ಕಾಗಿ ಜಪಾನ್‌ಗೆ ಬಂದಿದ್ದರು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದ್ದರು.

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದಿದ್ದರು

2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಟಾಲಿವುಡ್

Teja Sajja: ಹೊಸ ಸಿನಿಮಾ ಅನೌನ್ಸ್‌ ಮಾಡಿದ ʻಹನುಮಾನ್ʼ ಹೀರೊ ತೇಜ್ ಸಜ್ಜಾ

Teja Sajja: ಮಿರಾಯ್ʼ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

VISTARANEWS.COM


on

Teja Sajja Hanuman Movie Feme Mirai announce
Koo

ಬೆಂಗಳೂರು: ʻಹನುಮಾನ್ʼ ಸಿನಿಮಾ (Hanuman Movie) ಮೂಲಕ ಸೂಪರ್ ಸಕ್ಸೆಸ್‌ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ (Teja Sajja) ಹೊಸ ಸಿನಿಮಾ ಅನೌನ್ಸ್ ಆಗಿದೆ. ʻಕಾರ್ತಿಕೇಯʼ, ʻಕಾರ್ತಿಕೇಯ-2ʼ , `ಧಮಾಕ’ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ  ಅವರು ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಅನಾವರಣಗೊಂಡಿದೆ.

ʻಹನುಮಾನ್ʼನಲ್ಲಿ ಸೂಪರ್ ಹೀರೊ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಾಫ್ಟ್ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ.

ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾ ʻಮಿರಾಯ್ʼ ಎಂಬ ಟೈಟಲ್ ಇಡಲಾಗಿದೆ. ʻಮಿರಾಯ್ʼ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ.

ʻಮಿರಾಯ್ʼ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: Hanuman Chalisa: ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ FIR;‌ ಪಾಕಿಸ್ತಾನವನ್ನು ಆಳುತ್ತಿದ್ದೀರಾ ಎಂದು ಸಿಎಂಗೆ ಜೋಶಿ ಪ್ರಶ್ನೆ

ಕಾರ್ತಿಕ್ ಗಟ್ಟಮ್ನೇನಿ ಮಿರಾಯ್ ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರ್ತಿರುವ ಮರೈ ಸಿನಿಮಾವನ್ನು 2025ರ ಏಪ್ರಿಲ್ 18ರಂದು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

Continue Reading

ಟಾಲಿವುಡ್

Nikhil Siddhartha: ಮಗನ ಹೆಸರನ್ನು ರಿವೀಲ್‌ ಮಾಡಿದ ʻಕಾರ್ತಿಕೇಯʼ ಸಿನಿಮಾ ಖ್ಯಾತಿಯ ನಟ!

Nikhil Siddhartha: ನಿಖಿಲ್ ಮತ್ತು ಪಲ್ಲವಿ 2020ರಲ್ಲಿ ಮದುವೆಯಾಗಿದ್ದರು. ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ಜೋಡಿ ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿತ್ತು. ಸಿನಿಮಾ ವಿಚಾರಕ್ಕೆ ಬಂದರೆ ನಿಖಿಲ್‌ ಶೀಘ್ರದಲ್ಲೇ ʻಸ್ವಯಂಭುʼ, ʻದಿ ಇಂಡಿಯಾ ಹೌಸ್ʼ ಮತ್ತು ʻಕಾರ್ತಿಕೇಯ 3ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಇದೀಗ ದಂಪತಿ ಮಗನ ಹೆಸರನ್ನು ಬಹಿರಂಗಪಡಿಸಿದ್ದಾರೆ. ಮಗನಿಗೆ ʻಧೀರʼ ಎಂದು ನಾಮಕರಣ ಮಾಡಿದೆ ಜೋಡಿ. ಇದೀಗ ನಿಖಿಲ್‌ ಮಾಧ್ಯಮದ ಜತೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Nikhil Siddhartha reveals his son name
Koo

ಬೆಂಗಳೂರು: ʻಕಾರ್ತಿಕೇಯʼ ಸಿನಿಮಾ ಖ್ಯಾತಿಯ ಟಾಲಿವುಡ್‌ ನಟ ನಿಖಿಲ್ ಸಿದ್ಧಾರ್ಥ ಅವರ ಪತ್ನಿ ಪಲ್ಲವಿ ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ದಂಪತಿ ಮಗನ ಹೆಸರನ್ನು ಬಹಿರಂಗಪಡಿಸಿದ್ದಾರೆ. ಮಗನಿಗೆ ʻಧೀರʼ ಎಂದು (Dheera Siddhartha) ನಾಮಕರಣ ಮಾಡಿದೆ ಜೋಡಿ. ಇದೀಗ ನಿಖಿಲ್‌ ಮಾಧ್ಯಮದ ಜತೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ನಿಖಿಲ್ ಸಿದ್ಧಾರ್ಥ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ಮಗನೊಂದಿಗೆ ಮನೆಯಲ್ಲಿ ಸಮಯ ಕಳೆಯಲು ಹಾಗೂ ಹೆಂಡತಿಯೊಂದಿಗೆ ಜವಾಬ್ದಾರಿಗಳನ್ನು ಹಂಚಿಕೊಳ್ಳಲು ಇಷ್ಟ ಪಡುವುದಾಗಿ ಹೇಳಿಕೊಂಡರು. ನಿಖಿಲ್ ಸಿದ್ಧಾರ್ಥ ಮಾತನಾಡಿ ʻʻನಾವು ಮಗನಿಗೆ ಧೀರ ಸಿದ್ಧಾರ್ಥ ಎಂದು ಹೆಸರಿಟ್ಟಿದ್ದೇವೆ. ನಾನು ಪ್ರತಿದಿನ ಅವನೊಂದಿಗೆ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದೇನೆ. ಏಕೆಂದರೆ ಮಕ್ಕಳು ಬೇಗನೆ ಬೆಳೆಯುತ್ತಾರೆ. ನಾನು ಪಲ್ಲವಿಯೊಂದಿಗೆ ಜವಾಬ್ದಾರಿಗಳನ್ನು ಹಂಚಿಕೊಳ್ಳಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇನೆ. ನಾನು ವಾರಕ್ಕೊಮ್ಮೆಯಾದರೂ ಪಾರ್ಟಿಗೆ ಹೋಗುತ್ತಿದ್ದೆ, ಆದರೆ ನಾನು ಈಗ ಅದನ್ನೆಲ್ಲ ಕಡಿಮೆ ಮಾಡಿದ್ದೇನೆ. ಪೋಷಕರಾದ ನಂತರ ನಮ್ಮ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಕೆಟ್ಟ ಅಭ್ಯಾಸಗಳನ್ನು ಬಿಡಬೇಕುʼʼಎಂದರು.

ಇದನ್ನೂ ಓದಿ: Nikhil Siddhartha: ’ಸ್ವಯಂಭು’ ಮೂಲಕ ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ‘ಪಟಾಕ’!

ಫೆಬ್ರವರಿ 21 ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಧೀರ ಜನಿಸಿದ. ಮಗುವನ್ನು ಎತ್ತಿಕೊಂಡಿರುವ ಫೋಟೊವನ್ನು ನಟ ನಿಖಿಲ್ ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದರು. ಜತೆಗೆ ಹೀಗೆ ಬರೆದುಕೊಂಡಿದ್ದರು. ʻʻಒಂದು ವರ್ಷದ ಹಿಂದೆ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಈಗ ಮನೆಗೆ ಧಿರ ಬಂದಿದ್ದಾನೆ. ಪಲ್ಲವಿ ಮತ್ತು ನನಗೆ ಇಂದು ಮುದ್ದಾದ ಪುಟ್ಟ ಗಂಡು ಮಗುವಿದೆ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ. ಅತ್ಯಂತ ಸಂತೋಷವಾಗಿದೆʼʼಎಂದು ಬರೆದುಕೊಂಡಿದ್ದರು.

ನಿಖಿಲ್ ಮತ್ತು ಪಲ್ಲವಿ 2020ರಲ್ಲಿ ಮದುವೆಯಾಗಿದ್ದರು. ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ಜೋಡಿ ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿತ್ತು. ಸಿನಿಮಾ ವಿಚಾರಕ್ಕೆ ಬಂದರೆ ನಿಖಿಲ್‌ ಶೀಘ್ರದಲ್ಲೇ ʻಸ್ವಯಂಭುʼ, ʻದಿ ಇಂಡಿಯಾ ಹೌಸ್ʼ ಮತ್ತು ʻಕಾರ್ತಿಕೇಯ 3ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Ayalaan Movie: ತಮಿಳು ನಟ ಶಿವಕಾರ್ತಿಕೇಯನ್ ‘ಅಯಲಾನ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ʻಸ್ವಯಂಭುʼ

ತೆಲುಗು ನಟ ನಿಖಿಲ್ ಸಿದ್ದಾರ್ಥ್ (Nikhil Siddhartha) ನಟಿಸುತ್ತಿರುವ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ʻಸ್ವಯಂಭುʼ (Swayambhu Movie) ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ʻಪಟಾಕʼ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್‌ಗೆ 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಸುಂದರಿ ʻಸ್ವಯಂಭುʼ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ.

ಸ್ವಯಂಭು’ ಶೂಟಿಂಗ್ ಅಖಾಡಕ್ಕೆ ನಭಾ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಝಲಕ್ ಮೂಲಕ ಚಿತ್ರತಂಡ ಆಕೆಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಣಿಯಂತೆ ಕಂಗೊಳಿಸುತ್ತಿರುವ ನಭಾ ಲುಕ್ ರಿವೀಲ್ ಮಾಡಲಾಗಿದೆ. ಆದರೆ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಬಿಟ್ಟುಕೊಟ್ಟಿಲ್ಲ. ಶಿವಣ್ಣ ನಟನೆಯ ʻವಜ್ರಕಾಯʼ ಚಿತ್ರದ ಮೂಲಕ ಸಿನಿಮಾ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ನಭಾ, ಪೂರಿ ಜಗನ್ನಾಥ್ ನಿರ್ದೇಶನದ ʻಇಸ್ಮಾರ್ಟ್ ಶಂಕರ್ʼ ಮೂಲಕ ಖ್ಯಾತಿ ಗಳಿಸಿದರು.

ನಿಖಿಲ್ ನಾಯಕನಟನಾಗಿರುವ ʻಸ್ವಯಂಭುʼ ಸಿನಿಮಾದಲ್ಲಿ ಸಂಯುಕ್ತ ಮೆನನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ತಮ್ಮ ಪಾತ್ರಕ್ಕಾಗಿ ಅವರು ತಯಾರಿಯಲ್ಲಿದ್ದಾರೆ. ಅಂದಹಾಗೇ ಭರತ್ ಕೃಷ್ಣಮಾಚಾರಿ ಸ್ವಯಂಭು ಆ್ಯಕ್ಷನ್ ಕಟ್ ಹೇಳಿದ್ದಾರೆ.

Continue Reading
Advertisement
Modi in Karnataka Bomb blasts and Neha murder case Modi attacks Congress government
Lok Sabha Election 20245 mins ago

Modi in Karnataka: ಬಾಂಬ್ ಸ್ಫೋಟ, ನೇಹಾ ಹತ್ಯೆ ಪ್ರಕರಣ; ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ

Farmers Protest
ದೇಶ9 mins ago

Farmers Protest: ರೈತರ ಪ್ರತಿಭಟನೆ; ಅಂಬಾಲಾ-ಅಮೃತಸರ ಮಾರ್ಗದ 54 ರೈಲು ಸಂಚಾರ ರದ್ದು

Vinesh Phogat
ಕ್ರೀಡೆ20 mins ago

Vinesh Phogat: ಖೇಲ್ ರತ್ನ ಪ್ರಶಸ್ತಿಯನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದ ವಿನೇಶ್ ಫೋಗಟ್​ಗೆ ಒಲಿದ ಒಲಿಂಪಿಕ್ಸ್​ ಟಿಕೆಟ್​

Dalit Student
ದೇಶ21 mins ago

Dalit Student: ದೇಶ, ರಾಮನ ವಿರೋಧ; ದಲಿತ ಪಿಎಚ್‌.ಡಿ ವಿದ್ಯಾರ್ಥಿಯ ಅಮಾನತು!

Apricot Benefits
ಆರೋಗ್ಯ35 mins ago

Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್‌ ತಿನ್ನಿ!

Family health insurance
ಮನಿ ಗೈಡ್35 mins ago

Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ

Modi in Karnataka
ಪ್ರಮುಖ ಸುದ್ದಿ40 mins ago

Modi in Karnataka: ಪ್ರಧಾನಿ ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

Modi in Karnataka Govt turns tax city Bengaluru into tanker city and attacks girls too PM Narendra Modi
ಕರ್ನಾಟಕ1 hour ago

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Kalki 2898 AD
ಸಿನಿಮಾ1 hour ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ1 hour ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20245 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ7 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ8 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌