Loan Tips: ಗೃಹ ಸಾಲ ಬೇಗ ಬೇಗನೆ ತೀರಿಸಿರಿ, ಇಲ್ಲಿದೆ ಹಲವು ದಾರಿ - Vistara News

ರಿಯಲ್ ಎಸ್ಟೇಟ್

Loan Tips: ಗೃಹ ಸಾಲ ಬೇಗ ಬೇಗನೆ ತೀರಿಸಿರಿ, ಇಲ್ಲಿದೆ ಹಲವು ದಾರಿ

ಗೃಹ ಸಾಲ ಮಾಡಿದ್ದರಿಂದಾಗಿ ನಿಮ್ಮ ಸ್ವಂತ ಮನೆಯ ಕನಸು ಈಡೇರಿದೆ. ಈಗ ಸಾಲ ತೀರಿಸುವತ್ತ ಗಮನ ನೀಡುತ್ತಿದ್ದೀರಿ. ನೀವು ಮಾಡಿದ ಗೃಹ ಸಾಲವನ್ನು ಬೇಗನೆ ತೀರಿಸಲು ಇಲ್ಲಿ ಒಂದಿಷ್ಟು ಸಲಹೆಗಳಿವೆ ಓದಿ.

VISTARANEWS.COM


on

home loan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಿಮ್ಮ ಜೀವನದ ಮಹೋನ್ನತ ಕನಸುಗಳಲ್ಲಿ ಒಂದಾದ ಸ್ವಂತ ಮನೆಯನ್ನು ಹೊಂದಬೇಕೆಂಬ ಬಯಕೆ ಈಗ ಈಡೇರಿದೆ. ಇದಕ್ಕಾಗಿ ನೀವು ಗೃಹ ಸಾಲ ಮಾಡಿದ್ದೀರಿ. ಈಗ ನಿಮ್ಮ ಮುಂದಿರುವ ದೊಡ್ಡ ಸವಾಲೆಂದರೆ ಈ ಸಾಲವನ್ನು ತೀರಿಸುವುದು. ಮನೆ ಕೊಳ್ಳಲು ಪ್ಲಾನ್‌ ಮಾಡಿಕೊಂಡಂತೆ ಸಾಲ ತೀರಿಸಲೂ ನೀವು ಸರಿಯಾದ ಪ್ಲಾನ್‌ ಮಾಡಿಕೊಳ್ಳದಿದ್ದರೆ ಈ ಸಾಲವೇ ಶೂಲವಾಗಿ ತಿವಿಯಬಹುದು.

ನಿಮ್ಮ ಹಾಗೆಯೇ ಬೆಂಗಳೂರಿನ ಹೆಸರಾಂತ ಐಟಿ ಕಂಪನಿಯ ಉದ್ಯೋಗಿ ಕೆ. ರಾಜೀವ್‌ ಕುಮಾರ್‌ ಗೃಹ ಸಾಲ ಮಾಡಿ ಅಪಾರ್ಟ್‌ಮೆಂಟ್‌ ಒಂದನ್ನು ಖರೀದಿಸಿದ್ದರು. ಈಗ ನಿಗದಿತ ಅವಧಿಗಿಂತಲೂ ಮೊದಲೇ ಸಾಲ ತೀರಿಸಿ, ನಿಜವಾದ ಸ್ವಾತಂತ್ರ್ಯದ ಸುಖ ಅನುಭವಿಸುತ್ತಿದ್ದಾರೆ. ಅದಕ್ಕೆ ಅವರು ಸಾಲ ತೀರಿಸಲು ಪಕ್ಕಾ ಪ್ಲಾನ್‌ ಕೂಡ ಮಾಡಿಕೊಂಡಿದ್ದರು. ʼ‘ಸಾಲ  ಮರುಪಾವತಿ ನನ್ನ ಪ್ರಮುಖ ಆದ್ಯತೆಯಾಗಿತ್ತು. ಸಾಲ ಅನುಮೋದನೆಯಾಗುವ ಮುನ್ನವೇ ನಾನು ಈ ಬಗ್ಗೆ ಯೋಚಿಸಲು ಆರಂಭಿಸಿದ್ದೆ. ಏಕೆಂದರೆ ನಾನು ಇಷ್ಟೊಂದು ದೊಡ್ಡ ಮೊತ್ತದ ಸಾಲ ಮಾಡಿದ್ದು ಜೀವನದಲ್ಲಿ ಇದೇ ಮೊದಲಬಾರಿʼʼ ಎಂದು ಅವರು ತಾವು ಸಾಲ ತೀರಿಸಿದ ಕತೆಯನ್ನು ಹಂಚಿಕೊಂಡಿದ್ದಾರೆ.

ʼʼನಾನಿನ್ನೂ ಕಟ್ಟುತ್ತಿದ್ದ ಅಪರ್ಟ್‌ಮೆಂಟ್‌ಗೆ ಸಾಲ ಮಾಡಿದ್ದೆ. ಹೀಗಾಗಿ ಇಎಂಐ ಕಟ್ಟಲು 15 ತಿಂಗಳ ಬಿಡುವಿತ್ತು. ಸಾಲ ಬಿಡುಗಡೆಯಾದ ಮೊತ್ತಕ್ಕೆ ಬಡ್ಡಿ ಪಾವತಿಸಿದರೆ ಸಾಕಾಗಿತ್ತು. ಈ 15 ತಿಂಗಳಲ್ಲಿ ಮುಂದಿನ ಒಂದು ವರ್ಷಕ್ಕೆ ಸಾಕಾಗುವಷ್ಟು ಹಣವನ್ನು ನಾನು ಒಟ್ಟುಮಾಡಿಕೊಂಡಿದ್ದೆ. ಇದರಿಂದ ನನಗೆ ಸಾಲ ತೀರಿಸುವುದು ಹೇಗೆಂಬ ಭಯ ದೂರವಾಯಿತುʼʼ ಎಂದು ಅವರು ವಿವರಿಸಿದ್ದಾರೆ. 

ಒಂದು ಇಎಂಐ ಪಾವತಿಸದಿದ್ದರೂ ನಮ್ಮ ಕ್ರೆಡಿಟ್ ಸ್ಕೋರ್ ಸೊರಗುತ್ತದೆ. ಆದ್ದರಿಂದ ಸಾಲವನ್ನು ನಮ್ಮ ಜೇಬಿಗೆ ಭಾರವಾಗದಂತೆ ನಿಭಾಯಿಸುವುದು ಬಹಳ ಮುಖ್ಯ. ಕ್ರೆಡಿಟ್‌ ಸ್ಕೋರ್‌ ಸಾಲದ ವಿಷಯದಲ್ಲಿ ಬಹಳ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿವರಿಸುವ ಕೆ. ರಾಜೀವ್‌ ಕುಮಾರ್‌, ನಾನು ಮನೆ ಕೊಂಡ ನಂತರ ಇಂಟೀರಿಯರ್‌ ವಿಷಯದಲ್ಲಿ ಲೆಕ್ಕಾಚಾರ ತಪ್ಪಿ, ನಾಲ್ಕು ಲಕ್ಷ ಪರ್ಸನಲ್‌ ಲೋನ್‌ ಮಾಡಿದ್ದೆ. ಹೀಗಾಗಿ ಮೊದಲಿಗೆ  ದುಬಾರಿ ಸಾಲವಾದ ಇದರ ಮರುಪಾವತಿಗೆ  ಗಮನ ನೀಡಿದೆ ಎಂದಿದ್ದಾರೆ.

ಗೃಹ ಸಾಲ

ಇತರೆ ಸಾಲಗಳನ್ನು ಕಡೆಗಣಿಸದೆ ದುಬಾರಿ ಸಾಲಗಳಿಗೆ ನಮಗೆ ಸಾಧ್ಯವಿರುವ ಹೆಚ್ಚು ಮೊತ್ತವನ್ನು ಪಾವತಿಸಬೇಕು. ದುಬಾರಿ ಸಾಲ ಮರುಪಾವತಿಯಾದ ನಂತರ ಮುಂದಿನ ಸಾಲವನ್ನು ಗಮನನೀಡಬೇಕು.
ದುಬಾರಿ ಸಾಲಗಳನ್ನು ಮೊದಲು ಪಾವತಿಸಿದರೆ ಎಲ್ಲ ಸಾಲಗಳ ಬಡ್ಡಿಯ ಹೊರೆ ಕಡಿಮೆಯಾಗುತ್ತದೆ. ನಿಮ್ಮ ಭವಿಷ್ಯ ಸುಭದ್ರವಾಗಿರುತ್ತದೆ. ಆದರೆ ಗೃಹ ಸಾಲದ ಇಎಂಐ ಮತ್ತಿತರೆ ಸಾಲಗಳನ್ನು ನಿರ್ಲಕ್ಷಿಸಬಾರದು ಎಂದು ಅವರು ಸಲಹೆ ನೀಡುತ್ತಾರೆ.

ಆದಾಯಕ್ಕೆ ತಕ್ಕಂತೆ ಮರುಪಾವತಿ

ಸಾಲ ತೀರಿಸಲು ನಾನು ಮಾಡಿದ ಮತ್ತೊಂದು ಟ್ರಿಕ್‌ ಎಂದರೆ ನನ್ನ ವೇತನ ಹೆಚ್ಚಾದಂತೆ ಇಎಂಐ ಮೊತ್ತವನ್ನು ಹೆಚ್ಚಿಸಿಕೊಂಡಿದ್ದು, ನಿಮ್ಮ ಸಾಲವನ್ನು ವೇಗವಾಗಿ ತೀರಿಸಲು ನಿಮ್ಮ ಆದಾಯ ಹೆಚ್ಚಿದಂತೆ ಇಎಂಐ ಹೆಚ್ಚಿಸಿಕೊಳ್ಳಿ. ವೇತನದಲ್ಲಿ ಶೇ.8ರಷ್ಟು ಹೆಚ್ಚಳ ಪಡೆದರೆ ಶೇ.5ರಷ್ಟು ಇಎಂಐ ಹೆಚ್ಚಿಸುವುದು ಉತ್ತಮ ಎನ್ನುತ್ತಾರೆ ರಾಜೀವ್‌ ಕುಮಾರ್‌. ಈ ರೀತಿ ಇಎಂಐ ಹೆಚ್ಚಿಸಿದರೆ ಸಾಲ ನಿಗದಿಗಿಂತಲೂ ಬಹಳ ಮೊದಲೇ ತೀರಿಸಬಹುದು.

ನಿಮಗೆ ಒಳ್ಳೆಯ ಬೋನಸ್ ದೊರೆತಿದೆಯೇ? ಅದರಿಂದ ಹೊಸ ಎಲ್‌ಇಡಿ ಟೀವಿ ಅಥವಾ ಸ್ಮಾರ್ಟ್‌ಫೋನ್‌ ಖರೀದಿಸಬೇಡಿ. ಅದನ್ನು ನಿಮ್ಮ ಸಾಲ ಮರುಪಾವತಿಗೆ ಬಳಸಿಕೊಳ್ಳಿ. ಆದಾಯ ತೆರಿಗೆ ರೀಫಂಡ್, ವಿಮೆ ಪಾಲಿಸಿಗಳು, ಬಾಂಡ್‌ಗಳ ಮೆಚ್ಯುರಿಟಿ ಹಣವನ್ನು ದುಬಾರಿ ಸಾಲಗಳ ಮರುಪಾವತಿಗೆ ಬಳಸಿಕೊಳ್ಳಿ. ಅದೆಲ್ಲಾ ತೀರುತ್ತಿದ್ದಂತೆಯೇ ಗೃಹ ಸಾಲದ ಪ್ರಿನ್ಸಿಪಲ್‌ ಅಮೌಂಟ್‌ಗೆ ಕಟ್ಟಿ, ಸಾಲದ ಮೊತ್ತ ಕಡಿಮೆ ಮಾಡಿಕೊಳ್ಳಿ ಎಂದು ಅವರು ಟಿಪ್ಸ್‌ ನೀಡಿದ್ದಾರೆ.

ದಂಡ ವಿಧಿಸದಂತೆ ನೋಡಿಕೊಳ್ಳಿ

ಕೆಲವು  ಬ್ಯಾಂಕ್‌ಗಳು ಸಾಲದ ಅವಧಿಪೂರ್ವ ಮರುಪಾವತಿಗೆ ದಂಡ ವಿಧಿಸುತ್ತವೆ. ಈ ಬಗ್ಗೆ ಬ್ಯಾಂಕಿನಿಂದ ಸರಿಯಾದ ಮಾಹಿತಿ ಪಡೆದುಕೊಳ್ಳಿ. ಈ ರೀತಿ ದಂಡ ವಿಧಿಸದಂತೆ ಬ್ಯಾಂಕಿಗೆ ಮನವಿ ಮಾಡಿಕೊಳ್ಳಬಹುದು. ಆರ್‌ಬಿಐ ದಂಡ ವಿಧಿಸಬಾರದು ಎಂದು ಆಗಾಗ ಸೂಚಿಸುತ್ತಲೇ ಇರುತ್ತದೆ. ದಂಡ ಪಾವತಿಸಬೇಕಿದ್ದರೆ ನೀವು ಉಳಿಸುವ ಬಡ್ಡಿಯನ್ನು ಲೆಕ್ಕ ಹಾಕಿಕೊಳ್ಳಿ ನಿರ್ಧಾರ ತೆಗೆದುಕೊಳ್ಳಬಹುದು.

ಬಡ್ಡಿ ಲೆಕ್ಕಾಚಾರ ಹಾಕಿ, ಸಾಲ ತೀರಿಸಿ

ಈಗ ನಿಮ್ಮ ಗೃಹಸಾಲದ ಮೇಲಿನ ಬಡ್ಡಿದರ ಕಡಿಮೆಯಾಗಿದೆ. ನಿಮ್ಮ ಹೂಡಿಕೆಗಳನ್ನು ಪಟ್ಟಿ ಮಾಡಿ, ಅದಕ್ಕೆ ಎಷ್ಟು ಬಡ್ಡಿ ದೊರೆಯುತ್ತಿದೆ ಎಂದು ನೋಡಿ. ಹೂಡಿಕೆಯ ಬಡ್ಡಿಯು ನೀವು ಕಟ್ಟುತ್ತಿರುವ ಗೃಹ ಸಾಲದ ಬಡ್ಡಿದರಕ್ಕಿಂತ ಕಡಿಮೆ ಇದ್ದರೆ ಹೂಡಿಕೆಯ ಮೊತ್ತವನ್ನು ಸಾಲ ತೀರಿಸಲು ಬಳಸುವುದೇ ಸೂಕ್ತ. ಆದರೆ ಆಪತ್ಕಾಲಕ್ಕೆಂದು ತೆಗೆದಿರಿಸಿದ ಹಣವನ್ನು ಹೀಗೆ ಸಾಲ ತೀರಿಸಲು ಬಳಸಬಾರದು. ನಿಮ್ಮ ವಿಮೆ ಹಣ ಅಥವಾ ಪಿಎಫ್‌ ತೆಗೆದುಕೊಂಡು ಸಾಲ ಮರುಪಾವತಿ ಮಾಡಬಹುದು.

ಇಎಂಐ ಮೊತ್ತ ಕಡಿಮೆಮಾಡಿಕೊಳ್ಳಬೇಡಿ!

ಗೃಹ ಸಾಲ

ನಿಮಗೆ ಪ್ರಧಾನಮಂತ್ರಿ ಅವಾಸ್‌ ಯೋಜನೆ (PMAY) ಯಿಂದಲೋ ಅಥವಾ ನಿಮ್ಮ ಪೋಷಕರಿಂದಲೋ ದೊಡ್ಡ ಮೊತ್ತದ ಹಣ ದೊರೆಯಿತೆಂದಿಟ್ಟುಕೊಳ್ಳಿ. ಅದನ್ನು ನೀವು ನಿಮ್ಮ ಗೃಹ ಸಾಲವನ್ನು ತೀರಿಸಲು ಬಳಸಿಕೊಳ್ಳಬಹುದು. ಈ ಸಂದರ್ಭದಲ್ಲಿ ಬ್ಯಾಂಕಿನವರು, ಇದನ್ನು ಇಎಂಐ ಕಡಿಮೆ ಮಾಡುವುದೋ, ಅಥವಾ ಪ್ರಿನ್ಸಿಪಲ್‌ ಅಮೌಂಟ್‌ಗೆ ಸೇರಿಸುವುದೋ ಕೇಳುತ್ತಾರೆ. ಆಗ ನೀವು ಸಾಲದ ಮೊತ್ತವನ್ನು ಕಡಿಮೆ ಮಾಡಿಕೊಳ್ಳಬೇಕು. ಇಎಂಐ ಮೊತ್ತ ಕಡಿಮೆಯಾದರೆ ಈಗ ಒಳ್ಳೆಯದು ಅನಿಸುತ್ತದೆ. ಆದರೆ ಸಾಲದ ಹೊರೆ ಕಡಿಮೆಯಾಗುವುದೇ ಇಲ್ಲ. ಹೀಗಾಗಿ ಇಂತಹ ಸಂರ್ಭದಲ್ಲಿ ತಜ್ಞರ ಸಲಹೆ ಪಡೆದು ತೀರ್ಮಾನ ತೆಗೆದುಕೊಂಡರೆ ಒಳ್ಳೆಯದು.
ನಿಮ್ಮ ಇಎಂಐ ಮೊತ್ತಕ್ಕಿಂತ ಹೆಚ್ಚು ಪಾವತಿಸಲು ಸಾಧ್ಯವಿದ್ದರೆ ಪ್ರೀಪೇಮೆಂಟ್‌ ಅವಕಾಶ ಬಳಸಿಕೊಳ್ಳಿ.  ಈ ರೀತಿ ನೀವು ಹೆಚ್ಚುವರಿಯಾಗಿ ಪಾವತಿಸುವ ಹಣವು ಪ್ರಿನ್ಸಿಪಲ್‌ ಅಮೌಂಟ್‌ ಅನ್ನು ಕಡಿಮೆ ಮಾಡುತ್ತದೆ. ನೀವು ನಿಗದಿತವಾಗಿ ಪ್ರೀಪೇಮೆಂಟ್‌ ಮಾಡುವುದರಿಂದ ದೊಡ್ಡ ಮೊತ್ತವನ್ನು ಉಳಿಸಬಹುದಾಗಿದೆ.

ಜೀವನಶೈಲಿ ಬದಲಾಗಲಿ

ನಿಮ್ಮ ಜೀವನಶೈಲಿಯಲ್ಲಿ ಕೊಂಚ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನಿಮ್ಮ ಸಾಲವನ್ನು ಬಹುಬೇಗನೆ ತೀರಿಸಬಹುದು. ಸಾಲಗಳು ತೀರುವವರೆಗೂ ದುಬಾರಿ ಪ್ರವಾಸ ಇತ್ಯಾದಿಗಳಿಗಳಿಂದ ದೂರ ಉಳಿದರೇ ಒಳ್ಳೆಯದು.

ಇದನ್ನೂ ಓದಿ | Home loan: ಮನೆಕೊಳ್ಳಲು ಇದು ಸೂಕ್ತ ಸಮಯ, ಆದರೆ ಈ ವಿಷಯಗಳನ್ನು ಮರೆಯಬೇಡಿ!

ಅಲ್ಲದೆ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸದೆ ಆದಷ್ಟು ನಗದು ಬಳಸಬೇಕು. ಇದರಿಂದ ನಿಮ್ಮ ಖರ್ಚು ಮಾಡುವ ಉಮೇದು ಕಡಿಮೆಯಾಗುತ್ತದೆ. ರಜಾಮೋಜಿನ ಯೋಜನೆಗಳನ್ನು ಸಾಲದ ಮರುಪಾವತಿಯಾಗುವವರೆಗೂ ಮುಂದೂಡಿ. ಹೊಸ ಸಾಲಗಳನ್ನು ಪಡೆಯುವುದನ್ನು ತಪ್ಪಿಸಿ. ಈ ರೀತಿ ಹಲವು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವುದರಿಂದ ನೀವು ನಿಮ್ಮ ತಲೆಯ ಮೇಲಿರುವ ಸಾಲದ ಹೊರೆಯನ್ನು ಕೊಂಚವಾದರೂ ಇಳಿಸಿಕೊಳ್ಳಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಿಯಲ್ ಎಸ್ಟೇಟ್

Vastu Tips : ಮನೆಯಲ್ಲಿ ಅಟ್ಯಾಚ್ ಬಾತ್‌ರೂಮ್ ಇದ್ದರೆ ಆರ್ಥಿಕ ನಷ್ಟ ತಪ್ಪಿಸಲು ಹೀಗೆ ಮಾಡಿ!

ಮನೆಯಲ್ಲಿನ ಬಾತ್‌ರೂಮ್ ಮತ್ತು ಟಾಯ್ಲೆಟ್‌ಗಳೂ ವಾಸ್ತು ಪ್ರಕಾರ ಇರುವುದು ಅತ್ಯವಶ್ಯಕ. ಇದಕ್ಕೆ ಸಂಬಂಧಿಸಿದಂತೆ ವಾಸ್ತು ನಿಯಮಗಳು ಏನೇನಿವೆ (Vastu Tips) ಎಂಬುದನ್ನು ತಿಳಿಯೋಣ.

VISTARANEWS.COM


on

Vastu Tips vastu shastra rules for Attached Bathroom and Toilet in kannada
Koo

ಎಲ್ಲರಿಗೂ ತಿಳಿದಿರುವಂತೆ ಹಿಂದಿನ ಕಾಲದಲ್ಲಿ ಮನೆಯ ಹೊರಭಾಗದಲ್ಲಿ , ಅದೂ ಮನೆಯಿಂದ ದೂರದಲ್ಲಿ ಸ್ನಾನದ ಮನೆಗಳನ್ನು ನಿರ್ಮಿಸಲಾಗುತ್ತಿತ್ತು. ಈಗ ಹೀಗೆ ಮಾಡಲು ಸ್ಥಳಾವಕಾಶದ ಕೊರತೆ ಇರುವುದರಿಂದ ಮನೆಯ ಒಳಗೇ ಬಚ್ಚಲು ಮನೆಯನ್ನು (ಬಾತ್‌ರೂಮ್) (Vastu Tips) ನಿರ್ಮಿಸಲಾಗುತ್ತದೆ.

ನಮ್ಮ ಪೂರ್ವಜರು ಈ ರೀತಿ ಬಾತ್‌ರೂಮ್ ಮತ್ತು ಟಾಯ್ಲೆಟ್‌ ಅನ್ನು ಮನೆಯಿಂದ ಹೊರಗೆ ಕಟ್ಟಲು ಕಾರಣವಿತ್ತು. ಏಕೆಂದರೆ ಇವುಗಳಿಂದ ನಕಾರಾತ್ಮಕತೆ ಹೆಚ್ಚುತ್ತದೆ. ಆದರೆ ಈಗ ಮನೆಯಲ್ಲಿ ಎಷ್ಟು ಕೋಣೆಗಳಿರುತ್ತವೆಯೋ ಅದಕ್ಕಿಂತ ಹೆಚ್ಚು ಬಾತ್‌ರೂಮ್‌ಗಳನ್ನು ನಿರ್ಮಿಸಲಾಗಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಬಾತ್‌ರೂಮ್‌ಗಳಲ್ಲಿ ನೆಗೆಟಿವ್ ಎನರ್ಜಿ ಹೆಚ್ಚಾಗಿರುತ್ತದೆ. ಇದರಿಂದ ವಾಸ್ತು ದೋಷ ಉಂಟಾಗುತ್ತದೆ. ಹಾಗಾಗಿ ಬಾತ್‌ರೂಮ್ ವಾಸ್ತುವಿನ ಬಗ್ಗೆ ಸಹ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಇಲ್ಲವಾದಲ್ಲಿ ಮನೆಯ ಸದಸ್ಯರ ಆರೋಗ್ಯ ಮತ್ತು ಆರ್ಥಿಕತೆ ಮೇಲೆ ಪರಿಣಾಮಗಳಾಗಬಹುದು.

ಬಾತ್‌ರೂಮ್ ವಾಸ್ತು ಸರಿ ಇಲ್ಲದೇ ಇದ್ದಲ್ಲಿ ನಕರಾತ್ಮಕ ಶಕ್ತಿಯ ಹರಿವಿನಿಂದ ಮನೆಯಲ್ಲಿ ಕೆಡುಕು ಉಂಟಾಗುತ್ತದೆ. ಹಾಗಾಗಿ ಮನೆಯಲ್ಲಿ ಬಾತ್‌ರೂಮ್ ಮತ್ತು ಟಾಯ್ಲೆಟ್‌ಗಳನ್ನು ನಿರ್ಮಿಸಲು ಕೆಲವು ವಿಶೇಷವಾದ ನಿಯಮಗಳಿವೆ (vastu tips for bathroom). ಅವುಗಳನ್ನು ಪಾಲಿಸುವುದು ಉತ್ತಮ ಎನ್ನುತ್ತಾರೆ ವಾಸ್ತು ತಜ್ಞರು.

ಮನೆಯೊಳಗೆ ಹಾಗೂ ಮನೆಗೇ ಹೊಂದಿಕೊಂಡಿರುವ ಬಾತ್‌ರೂಮ್ ಮತ್ತು ಟಾಯ್ಲೆಟ್‌ಗಳ ವಾಸ್ತುವಿನ ಬಗ್ಗೆ ಗಮನ ಕೊಡುವುದು ಅತ್ಯಂತ ಅವಶ್ಯಕ. ಹಾಗಾದರೆ ವಾಸ್ತು ಪ್ರಕಾರ ಮನೆಯ ಒಳಗೆ ಕೋಣೆಗೆ ಹೊಂದಿಕೊಂಡಿರುವ ಬಾತ್‌ರೂಮ್ ಮತ್ತು ಟಾಯ್ಲೆಟ್‌ಗಳ ವಾಸ್ತು ಹೇಗಿರಬೇಕು? ಒಂದೊಮ್ಮೆ ವಾಸ್ತು ಪ್ರಕಾರ ಇಲ್ಲದೇ ಇದ್ದರೆ ಉಂಟಾಗುವ ವಾಸ್ತು ದೋಷವನ್ನು ಹೇಗೆ ನಿವಾರಣೆ ಮಾಡಿಕೊಳ್ಳಬೇಕು? ಎಂಬುದನ್ನು ತಿಳಿಯೋಣ.

ಬಾತ್‌ರೂಮ್ ಈ ದಿಕ್ಕಿನಲ್ಲಿರಲಿ

ಬಾತ್‌ರೂಮ್ ಅನ್ನು ಮನೆಯ ಉತ್ತರ ಅಥವಾ ವಾಯವ್ಯ ದಿಕ್ಕಿನಲ್ಲಿ ನಿರ್ಮಾಣ ಮಾಡುವುದು ಒಳ್ಳೆಯದು. ದಕ್ಷಿಣ, ಈಶಾನ್ಯ ಅಥವಾ ನೈಋತ್ಯ ದಿಕ್ಕಿನಲ್ಲಿ ನಿರ್ಮಾಣ ಮಾಡುವುದು ವಾಸ್ತು ಪ್ರಕಾರ ಸರಿಯಲ್ಲವೆಂದು ಹೇಳಲಾಗುತ್ತದೆ. ಸ್ನಾನಗೃಹವನ್ನು ಅಡುಗೆ ಮನೆಯ ಎದುರಿಗೆ ಅಥವಾ ಅದಕ್ಕೆ ಹೊಂದಿಕೊಂಡಂತೆ ನಿರ್ಮಿಸುವುದು ಒಳ್ಳೆಯದಲ್ಲ.

ಮನೆಯಲ್ಲಿ ಕೋಣೆಗೇ ಅಟ್ಯಾಚ್ ಆಗಿರುವ ಬಾತ್‌ರೂಮ್‌ನಿಂದ ನಕಾರಾತ್ಮಕ ಶಕ್ತಿಯ ಹರಿವು ಹೆಚ್ಚುತ್ತದೆ. ಇದು ಪತಿ ಮತ್ತು ಪತ್ನಿಯ ಸಂಬಂಧದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ವಾಸ್ತು ಪ್ರಕಾರ ಮಲಗುವ ಸಂದರ್ಭದಲ್ಲಿ ಕಾಲನ್ನು ಬಾತ್‌ರೂಮ್ ಕಡೇ ಮಾಡಿ ಮಲಗಬಾರದು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಇದರಿಂದ ಪತಿ ಪತ್ನಿಯರ ನಡುವಿನ ಜಗಳ ಮತ್ತಷ್ಟು ಹೆಚ್ಚುತ್ತದೆ.

ಬಾತ್‌ರೂಮ್ ಬಾಗಿಲು ಹಾಕಿಡಬೇಕು

ಮಲಗುವ ಕೋಣೆಗೆ (ಬೆಡ್‌ರೂಮ್‌) ಹೊಂದಿಕೊಂಡಿರುವ ಬಾತ್‌ರೂಮ್‌ಗಳಿದ್ದಾಗ ಯಾವಾಗಲೂ ಅದರ ಬಾಗಿಲು ಹಾಕಿಯೇ ಇರಬೇಕು. ಬಾತ್‌ರೂಮ್ ಬಳಸಿದ ನಂತರ ಬಾಗಿಲು ಹಾಗೆಯೇ ತೆರೆದಿಟ್ಟುಕೊಂಡಿರಬಾರದು. ಇದರಿಂದ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಅದರಲ್ಲೂ ಮುಖ್ಯವಾಗಿ ಮಲಗುವ ಸಂದರ್ಭದಲ್ಲಿ ಬಾತ್‌ರೂಮ್ ಬಾಗಿಲು ಹಾಕಿಡಬೇಕು. ಇಲ್ಲದೇ ಇದ್ದರೆ ದಾಂಪತ್ಯ ಜೀವನದಲ್ಲಿ ಮನಸ್ತಾಪಗಳು ಉಂಟಾಗುತ್ತವೆ. ಇದೇ ಮುಂದುವರಿದು ವಿಚ್ಛೇದನದ ವರೆಗೂ ಹೋಗುವ ಸಾಧ್ಯತೆ ಇರುತ್ತದೆ. ಜೊತೆ ಜೊತೆಗೆ ಮನೆಯಲ್ಲಿ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡುತ್ತಾ ಬರುತ್ತದೆ.

ಯಾವುದೇ ಬಾತ್‌ರೂಮ್ ಆಗಿರಲಿ ಅದರ ಟಾಯ್ಲೆಟ್ ಸೀಟ್ ಅನ್ನು ಮುಚ್ಚಿಡಬೇಕು. ಇಲ್ಲದಿದ್ದರೆ ಇದರಿಂದ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಇದು ಆರ್ಥಿಕ ನಷ್ಟಕ್ಕೂ ಕಾರಣವಾಗುತ್ತದೆ.

ದೋಷಕ್ಕೆ ಇಲ್ಲಿದೆ ಪರಿಹಾರ!

ಮನೆಯ ಮಲಗುವ ಕೋಣೆಗೆ (ಬೆಡ್‌ರೂಮ್‌) ಹೊಂದಿಕೊಂಡೇ ಇರುವ ಅಂದರೆ ಅಟ್ಯಾಚ್ ಬಾತ್‌ರೂಮ್ ಮುಖ್ಯವಾಗಿ ವಾಸ್ತು ದೋಷಕ್ಕೆ ಕಾರಣವಾಗುತ್ತದೆ. ಇದಕ್ಕೆ ವಾಸ್ತು ಶಾಸ್ತ್ರದಲ್ಲಿ ಹೇಳಿರುವ ಸರಳ ಪರಿಹಾರವೆಂದರೆ ಗ್ಲಾಸ್ ಬಾಟಲಿಯಲ್ಲಿ ಸೈಂದಾ ಲವಣವನ್ನು ತುಂಬಬೇಕು. ಇದನ್ನು ಬಾತ್‌ರೂಮ್ ಒಳಗಡೆ ಇಡಬೇಕು. ಒಂದು ವಾರದವರೆಗೂ ಆ ಉಪ್ಪು ಹಾಗೇ ಇರುವಂತೆ ನೋಡಿಕೊಳ್ಳಬೇಕು. ಒಂದು ವಾರದ ನಂತರ ಆ ಬಾಟಲಿಯಲ್ಲಿರುವ ಉಪ್ಪನ್ನು ಚೆಲ್ಲಬೇಕು. ಮತ್ತೆ ಅದೇ ರೀತಿ ಬಾಟಲಿಯಲ್ಲಿ ಸೈಂದಾ ಉಪ್ಪನ್ನು ತುಂಬಿಡಬೇಕು. ಇದರಿಂದ ಬಾತ್‌ರೂಮ್‌ನಿಂದ ಉಂಟಾಗುವ ವಾಸ್ತು ದೋಷ ನಿವಾರಣೆಯಾಗುತ್ತದೆ.

ಇದನ್ನೂ ಓದಿ : Vastu Tips: ಈ ಅಭ್ಯಾಸಗಳು ದಾರಿದ್ರ್ಯಕ್ಕೆ ದಾರಿ, ಇವುಗಳಿಂದ ದೂರವಿರಿ!

Continue Reading

ಧಾರ್ಮಿಕ

Vastu Tips : ಹೊಸ ಮನೆ ಪ್ರವೇಶಿಸುವ ಮೊದಲು ಈ ವಿಷಯಗಳ ಬಗ್ಗೆ ಗಮನ ನೀಡಿ

ನೀವು ಕಟ್ಟಿಸಿದ, ಕೊಂಡ ಮನೆಯಿರಲಿ ಅಥವಾ ಬಾಡಿಗೆಯ ಮನೆಯಿರಲಿ ಒಟ್ಟಾರೆ ಹೊಸ ಮನೆಯ ಗೃಹ ಪ್ರವೇಶ ಮಾಡುವಾಗ ಗಮನಿಸಬೇಕಾದ ವಿಷಯಗಳನ್ನು (Vastu Tips) ಇಲ್ಲಿ ನೀಡಲಾಗಿದೆ.

VISTARANEWS.COM


on

Before entering into new house follow these vastu tips
Koo

ಮನೆಯ ವಾಸ್ತು (Vastu Tips) ಸರಿಯಾಗಿ ಇದ್ದಾಗ ಮಾತ್ರ ಮನೆಯ ಸದಸ್ಯರು ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಹೊಸ ಮನೆಗೆ ಹೋಗುವಾಗ ವಾಸ್ತುವಿಗೆ ಸಂಬಂಧಿಸ ವಿಚಾರಗಳನ್ನು ತಿಳಿದುಕೊಳ್ಳುವುದು ಅವಶ್ಯಕವಾಗುತ್ತದೆ.

ಸ್ವಂತ ಮನೆಯೇ ಆಗಲಿ ಅಥವಾ ಬಾಡಿಗೆ ಮನೆಯೇ ಆಗಲಿ ಹೋಗುವ ಮುನ್ನ ಹಲವು ವಿಚಾರಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಮನೆಯ ದಿಕ್ಕು, ಅಡುಗೆ ಕೋಣೆ, ನೀರು, ದೇವರ ಮನೆ ಹೀಗೆ ವಾಸ್ತು ಪ್ರಕಾರ ಎಲ್ಲವೂ ಸರಿಯಾಗಿದೆಯೇ ಅಥವಾ ಸರಿ ಇಲ್ಲದಿದ್ದರೆ ಅದಕ್ಕೆ ಪರಿಹಾರ ಇದೆಯೇ ಎಂಬ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ.

ಮನೆಯ ಯಜಮಾನರ ರಾಶಿ, ನಕ್ಷತ್ರದ ಮೇಲೂ ಮನೆ ಆಗಿ ಬರುತ್ತದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದು. ಹಾಗಾಗಿ ಹೊಸ ಮನೆಯ ಗೃಹ ಪ್ರವೇಶಕ್ಕೂ ಮೊದಲು ಅಥವಾ ಬಾಡಿಗೆ ಮನೆಗೆ ಹೋಗುವ ಮೊದಲು ತಿಳಿದುಕೊಳ್ಳ ಬೇಕಾದ ಕೆಲವು ಅಂಶಗಳು ಹೀಗಿವೆ;

ಶುಭ ಮುಹೂರ್ತ ನೋಡಿ

ಮನೆಯಲ್ಲಿ ನೆಮ್ಮದಿ, ಸದಸ್ಯರಲ್ಲಿ ಸಾಮರಸ್ಯ, ಸುಖ ಶಾಂತಿ ನೆಲೆಸಿರಬೇಕೆಂದರೆ ಮನೆಯ ವಾಸ್ತು ಸರಿಯಾಗಿರಬೇಕು. ಹಾಗಾಗಿ ಹೊಸ ಮನೆಗೆ ಹೋಗುವ ಮೊದಲು ವಾರ, ತಿಥಿ, ನಕ್ಷತ್ರ ಮತ್ತು ದಿನ ಚೆನ್ನಾಗಿದೆಯೇ ಎಂಬುದನ್ನು ತಿಳಿದುಕೊಳ್ಳಬೇಕು. ಒಳ್ಳೆ ಮುಹೂರ್ತವನ್ನು ನೋಡಿಯೇ ಮನೆಗೆ ಪ್ರವೇಶಿಸಬೇಕು. ಮನೆಗೆ ಮೊದಲು ಕಾಲಿಡುವ ಘಳಿಗೆ ಉತ್ತಮವಾಗಿರಬೇಕು.

ಈ ಮಾಸಗಳು ಗೃಹ ಪ್ರವೇಶಕ್ಕೆ ಶುಭ

ಶಾಸ್ತ್ರದ ಪ್ರಕಾರ ಹೊಸ ಮನೆಗೆ ಹೋಗಲು ಕೆಲವು ಮಾಸಗಳು ಶುಭ ಮತ್ತು ಕೆಲವು ಮಾಸಗಳು ಅಶುಭವೆಂದು ಪರಿಗಣಿಸಲಾಗಿದೆ. ಹಾಗಾಗಿ ಆದಷ್ಟು ಗೃಹ ಪ್ರವೇಶಕ್ಕೆ ಯಾವ ಮಾಸಗಳು ಶುಭವೋ ಆ ಮಾಸಗಳಲ್ಲಿಯೇ ಹೊಸ ಮನೆ ಪ್ರವೇಶಿಸುವುದು ಒಳಿತು.

ಮಾಘ, ಫಾಲ್ಗುಣ, ವೈಶಾಖ ಮತ್ತು ಜ್ಯೇಷ್ಠ ಮಾಸಗಳು ಹೊಸ ಮನೆಯನ್ನು ಪ್ರವೇಶಿಸಲು ಉತ್ತಮ ಮಾಸಗಳೆಂದು ಹೇಳಲಾಗುತ್ತದೆ. ಅದೇ ಆಷಾಢ, ಶ್ರಾವಣ, ಭಾದ್ರಪದ, ಅಶ್ವಿನಿ ಮತ್ತು ಪುಷ್ಯ ಮಾಸಗಳು ಗೃಹ ಪ್ರವೇಶಕ್ಕೆ ಶುಭವಾದ ಮಾಸಗಳಲ್ಲ ಎಂದು ಹೇಳಲಾಗುತ್ತದೆ.

ಶುಭ ದಿನವನ್ನೇ ಆಯ್ಕೆ ಮಾಡಿಕೊಳ್ಳಿ

ಗೃಹ ಪ್ರವೇಶಕ್ಕೆ ಶುಭ ಮುಹೂರ್ತಗಳನ್ನು ನೋಡುವುದು ವಾಡಿಕೆ. ಒಂದೊಮ್ಮೆ ಅನಿವಾರ್ಯ ಕಾರಣಗಳಿಂದ ಬೇಗ ಹೊಸ ಮನೆ ಪ್ರವೇಶ ಮಾಡಬೇಕೆಂದಿದ್ದಾಗ ಶುಭವಾದ ವಾರ ಯಾವುದೆಂದು ತಿಳಿದು ಆ ದಿನಗಳಂದು ಹೊಸ ಮನೆಗೆ ಪ್ರವೇಶಿಸಬಹುದು.

ವಾರದ ಏಳು ದಿನಗಳಲ್ಲಿ ಮಂಗಳವಾರ ಗೃಹ ಪ್ರವೇಶಕ್ಕೆ ಯೋಗ್ಯವಲ್ಲವೆಂದು ಹೇಳುತ್ತಾರೆ. ವಿಶೇಷ ಪರಿಸ್ಥಿತಿಗಳಲ್ಲಿ ಭಾನುವಾರ ಮತ್ತು ಶನಿವಾರವನ್ನು ಸಹ ಗೃಹ ಪ್ರವೇಶಕ್ಕೆ ಉತ್ತಮವೆಂದು ಪರಿಗಣಿಸುತ್ತಾರೆ. ಇದನ್ನು ಹೊರತು ಪಡಿಸಿದರೆ ವಾರದ ಉಳಿದ ಎಲ್ಲ ದಿನಗಳು ಹೊಸ ಮನೆಯನ್ನು ಪ್ರವೇಶಿಸಲು ಯೋಗ್ಯವಾದ ದಿನಗಳಾಗಿವೆ.
ಅಮಾವಾಸ್ಯೆ ಮತ್ತು ಹುಣ್ಣಿಮೆಯನ್ನು ಹೊರತು ಪಡಿಸಿ, ಉಳಿದ 2, 3, 5 7, 10, 11, 12 ಮತ್ತು 13 ಈ ತಿಥಿಗಳು ಪ್ರವೇಶಕ್ಕೆ ಉತ್ತಮವೆಂದು ಹೇಳಲಾಗುತ್ತದೆ.

ಹೊಸ ಮನೆಗೆ ಹೋಗುವಾಗ ಈ ಐದು ವಸ್ತುಗಳಿರಲಿ

ಹೊಸ ಮನೆಗೆ ಅದು ನೀವು ಕಟ್ಟಿಸಿದ ಹೊಸ ಮನೆಯಾಗಿರಲಿ ಅಥವಾ ಬಾಡಿಗೆ ಮನೆಯಾಗಿರಲಿ, ಮಂಗಳ ಕಲಶದ ಜೊತೆಗೇ ಹೊಸ ಮನೆಯನ್ನು ಪ್ರವೇಶಿಸಬೇಕು. ಜೊತೆಗೆ ಐದು ಬಗೆಯ ಮಂಗಳ ವಸ್ತುಗಳಾದ ತೆಂಗಿನಕಾಯಿ, ಅರಿಶಿಣ, ಬೆಲ್ಲ, ಅಕ್ಕಿ ಮತ್ತು ಹಾಲನ್ನು ತೆಗೆದುಕೊಳ್ಳಬೇಕು. ಮನೆಯನ್ನು ತೋರಣ ಮತ್ತು ರಂಗವಲ್ಲಿಯಿಂದ ಅಲಂಕರಿಸಬೇಕು.

ಜತೆಯಲ್ಲಿ ದೇವರ ಫೋಟೊ ಕೂಡ ಇರಲಿ. ವಿಘ್ನ ನಿವಾರಕ ಗಣೇಶನ ಮೂರ್ತಿಯನ್ನು ಹೊಸ ಮನೆಗೆ ತೆಗೆದುಕೊಂಡು ಹೋಗಬೇಕು. ಜೊತೆಗೆ ದಕ್ಷಿಣಾವರ್ತಿ ಶಂಖ ಮತ್ತು ಶ್ರೀ ಯಂತ್ರವನ್ನು ಸಹ ತೆಗೆದುಕೊಂಡು ಹೋಗಬಹುದಾಗಿದೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಮನೆಯ ಯಜಮಾನ ಮೊದಲು ಬಲಗಾಲಿಟ್ಟು ಪ್ರವೇಶಿಸಿದ ನಂತರ ಆತನ ಪತ್ನಿಯು ಮನೆಯನ್ನು ಪ್ರವೇಶಿಸಬೇಕು. ತೆಗೆದುಕೊಂಡು ಬಂದ ಗಣೇಶನ ಮೂರ್ತಿಯನ್ನು ಈಶಾನ್ಯ ಮೂಲೆಯಲ್ಲಿ ಅಥವಾ ದೇವರ ಮನೆಯಲ್ಲಿ ಇಡಬೇಕು. ಅದರ ಜೊತೆಗೇ ಕಲಶವನ್ನು ಸಹ ಇಡಬೇಕು. ದೇವರ ಪೂಜೆಯಾದ ಬಳಿಕ ಅಡುಗೆ ಮಾಡುವ ಸ್ಟಾವ್‌ಗೆ ಪೂಜೆ ಸಲ್ಲಿಸಿ ಹಾಲು ಉಕ್ಕಿಸಬೇಕು.

ಇದನ್ನೂ ಓದಿ : Vastu Tips : ಮನೆಯ ಈ ದಿಕ್ಕಿಗೆ ಕಿಟಕಿ ಇದ್ದರೆ ಆರ್ಥಿಕ ಲಾಭ, ಸಮೃದ್ಧಿ!

Continue Reading

ಧಾರ್ಮಿಕ

Vastu Tips : ಕಚೇರಿಯ ವಾಸ್ತು ಹೀಗಿದ್ದರೆ ಯಶಸ್ಸು ಖಚಿತವಂತೆ!

ವ್ಯವಹಾರದಲ್ಲಿ, ವೃತ್ತಿ ಜೀವನದಲ್ಲಿ ಯಶಸ್ಸಿಗೆ ಕಚೇರಿಯ ವಾಸ್ತು ಬಹಳ ಮುಖ್ಯ. ಹಾಗಾಗಿ ಕಚೇರಿ ನಿರ್ಮಾಣದ ವೇಳೆ ವಾಸ್ತು ನಿಯಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗಿರುವುದು ಅಗತ್ಯ. ಈ ಕುರಿತು ತಜ್ಞರು ನೀಡಿದ ಕೆಲವು ಸಲಹೆಗಳು (Vastu Tips) ಇಲ್ಲಿವೆ.

VISTARANEWS.COM


on

Vastu Tips Office Vastu Directions and useful tips to bring prosperity at work
Koo

ವಾಸ್ತು ಶಾಸ್ತ್ರ ಕೇವಲ ಮನೆಗಷ್ಟೇ ಸೀಮಿತವಲ್ಲ. ನೀವು ಕೆಲಸ ಮಾಡುವ ಕಚೇರಿ, ಓದುವ ಶಾಲೆ- ಕಾಲೇಜು, ವ್ಯಾಪಾರದ ಸ್ಥಳ ಹೀಗೆ ಎಲ್ಲ ಕಡೆಗಳಲ್ಲೂ ಈ ಶಾಸ್ತ್ರಕ್ಕೆ ಮಹತ್ವವಿದೆ. ನೀವಿರುವ ಕಡೆ ವಾಸ್ತು ಸರಿಯಾಗಿದ್ದರಷ್ಟೇ, ನಿಮ್ಮ ಕೆಲಸಗಳಲ್ಲಿ ಯಶಸ್ಸು ಸಾಧಿಸಬಹುದು (Vastu Tips), ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.

ಮನೆಯಲ್ಲಿ ತೊಂದರೆ ತಾಪತ್ರಯಗಳಾದಾಗ ತಕ್ಷಣವೇ ಜ್ಯೋತಿಷ್ಯ ಅಥವಾ ವಾಸ್ತು ತಜ್ಞರನ್ನು ಸಂಪರ್ಕಿಸುತ್ತೇವೆ. ಹಾಗೆಯೇ ವ್ಯವಹಾರಗಳಲ್ಲಿ, ವ್ಯಾಪಾರದಲ್ಲಿ ತೊಂದರೆಗಳಾದರೆ, ಕಚೇರಿಯಲ್ಲಿ ಸಮಸ್ಯೆಗಳು ಎದುರಾಗುತ್ತಿದ್ದರೆ ಅದಕ್ಕೆ ವಾಸ್ತು ದೋಷವು ಕಾರಣವಾಗಿರಬಹುದು. ಹಾಗಾಗಿ ಕಚೇರಿ ನಿರ್ಮಾಣದ ವೇಳೆ ವಾಸ್ತು ಪ್ರಕಾರ ನಿರ್ಮಾಣ ಮಾಡಿದರೆ ಉತ್ತಮ.

ಕಚೇರಿಯ ವಾಸ್ತು ಬಗ್ಗೆ ತಿಳಿದುಕೊಂಡಲ್ಲಿ ನಿಮ್ಮ ಕಚೇರಿಯನ್ನು ಅದಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳಬಹುದು ಅಥವಾ ಮರು ನಿರ್ಮಿಸಬಹುದು. ಕಚೇರಿಗೆ ಸಂಬಂಧಿಸಿದ ವಾಸ್ತುವಿನ ಕುರಿತು ವಾಸ್ತು ತಜ್ಞರು ಏನು ಹೇಳುತ್ತಾರೆ ನೋಡೋಣ;

ಕಚೇರಿ ಮುಖ್ಯದ್ವಾರ ಯಾವ ದಿಕ್ಕಿನಲ್ಲಿರಬೇಕು?

ವಾಸ್ತು ಶಾಸ್ತ್ರದ ಅನುಸಾರ ಕಚೇರಿಯ ಮುಖ್ಯ ದ್ವಾರ ಪೂರ್ವ ಅಥವಾ ಉತ್ತರ ದಿಕ್ಕಿಗಿದ್ದರೆ ಉತ್ತಮ. ಜೊತೆಗೆ ಕಚೇರಿಯಲ್ಲಿ ಹಣಕಾಸಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವವರು ಆದಷ್ಟು ಉತ್ತರ ದಿಕ್ಕಿಗೆ ಕುಳಿತುಕೊಂಡರೆ ಉತ್ತಮ. ಉತ್ತರ ದಿಕ್ಕಿಗೆ ಸಂಪತ್ತಿನ ಒಡೆಯ ಕುಬೇರ ದೇವರ ಕೃಪೆ ಇರುತ್ತದೆ.

ಕಚೇರಿಯಲ್ಲಿ ಮುಖ್ಯಸ್ಥರು ಕುಳಿತುಕೊಳ್ಳುವ ಸ್ಥಳದ ಹಿಂದೆ ಕಿಟಕಿ ಇರುವುದು ಒಳ್ಳೆಯದಲ್ಲ. ಗೋಡೆಯಷ್ಟೆ ಇದ್ದು ಎದುರಿಗೆ ಕಿಟಕಿ ಇದ್ದರೆ ಉತ್ತಮ. ಗೋಡೆಗೆ ಹಸಿರಿನಿಂದ ಕಂಗೊಳಿಸುವ ಪೇಂಟಿಂಗ್‌ಗಳನ್ನು ಹಾಕಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಈ ದಿಕ್ಕಿನಲ್ಲಿರಲಿ.

ಕಚೇರಿಯಲ್ಲಿ ಕಂಪ್ಯೂಟರ್ ಮತ್ತು ಇತರೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಆಗ್ನೇಯ ದಿಕ್ಕಿನಲ್ಲಿ ಇಟ್ಟುಕೊಳ್ಳಬೇಕು. ಇದು ಅಗ್ನಿದೇವನ ದಿಕ್ಕಾಗಿರುವುದರಿಂದ ಈ ವಸ್ತುಗಳಿಗೆ ಅಗ್ನಿ ಮೂಲೆ ಸೂಕ್ತವಾಗಿರುತ್ತದೆ.

ವೇಯಿಂಟ್ ಅಥವಾ ಮೀಟಿಂಗ್ ರೂಮ್ ಇದ್ದಲ್ಲಿ ಅದನ್ನು ವಾಯುವ್ಯ ದಿಕ್ಕಿಗೆ ಮಾಡಿದರೆ ಉತ್ತಮ. ವಾಸ್ತು ಪ್ರಕಾರ ವಾಯುವ್ಯ ದಿಕ್ಕು ಶುಭವೆಂದು ಹೇಳಲಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಒಂದು ಟೇಬಲ್‌ನಲ್ಲಿ ಒಬ್ಬ ಅಧಿಕಾರಿ ಮಾತ್ರ ಕುಳಿತುಕೊಳ್ಳಬೇಕು. ಒಂದಕ್ಕಿಂತ ಹೆಚ್ಚು ಜನರು ಕುಳಿತುಕೊಂಡಲ್ಲಿ ಕೆಲಸದ ಒತ್ತಡ ಹೆಚ್ಚುತ್ತದೆ.

Office Vastu Directions and useful tips to bring prosperity at work

ಕಚೇರಿಯಲ್ಲಿ ಕುಳಿತುಕೊಳ್ಳುವವರು ಮುಖ್ಯ ದ್ವಾರಕ್ಕೆ ಬೆನ್ನು ಹಾಕಿ ಕುಳಿತುಕೊಳ್ಳುವುದು ಅಶುಭ.

ಕಚೇರಿಯ ಅಡುಗೆ ಮನೆ ಅಥವಾ ಕ್ಯಾಂಟೀನ್ ಆಗ್ನೇಯ ದಿಕ್ಕಿಗಿದ್ದರೆ ಶುಭ.

ಕಚೇರಿಯ ಬಾತ್‌ರೂಮ್ ಈಶಾನ್ಯ ಮೂಲೆಯಲ್ಲಿ ಇರುವುದು ಒಳ್ಳೆಯದಲ್ಲ. ವಾಸ್ತುವಿನಲ್ಲಿ ಈ ದಿಕ್ಕನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ.

ಕಚೇರಿಯ ಗೋಡೆ, ಕರ್ಟನ್, ಟೇಬಲ್‌ಗಳು ತಿಳಿ ಬಣ್ಣದ್ದಾಗಿದ್ದರೆ ಉತ್ತಮ.

ಕಚೇರಿಯಲ್ಲಿ ಹಿಂಸೆಯನ್ನು ಬಿಂಬಿಸುವ ಪಶು-ಪಕ್ಷಿಗಳು, ಅಳುತ್ತಿರುವ ದೃಶ್ಯ, ಮುಳುಗುತ್ತಿರುವ ಹಡಗು ಇತ್ಯಾದಿ ಪೇಂಟಿಂಗ್‌ಗಳನ್ನು ಇಟ್ಟುಕೊಳ್ಳಬಾರದು. ಇದರಿಂದ ಕಚೇರಿಯಲ್ಲಿ ನೆಗೆಟಿವ್ ಎನರ್ಜಿ ಹೆಚ್ಚುತ್ತದೆ.

ನಗುತ್ತಿರುವ ಮಗು, ಮಹಾ ಪುರುಷರ ಚಿತ್ರಗಳು, ಹರಿಯುತ್ತಿರುವ ನೀರು ಇತ್ಯಾದಿ ಪೇಂಟಿಂಗ್‌ಗಳನ್ನು ಇಟ್ಟುಕೊಳ್ಳುವುದು ಶುಭ. ಇದರಿಂದ ಕಚೇರಿಯಲ್ಲಿ ಪಾಸಿಟಿವ್ ಎನರ್ಜಿ ಹೆಚ್ಚುತ್ತದೆ.

ಕಚೇರಿಯಲ್ಲಿ ಕೆಲಸಕ್ಕೆ ಉಪಯೋಗವಾಗುವ ಫ್ಯಾಕ್ಸ್, ಕಂಪ್ಯೂಟರ್, ಗಡಿಯಾರ, ಸ್ಕ್ಯಾನರ್, ಪ್ರಿಂಟರ್ ಇತ್ಯಾದಿ ಉಪಕರಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.

ಕಚೇರಿಯ ಸ್ವಚ್ಛತೆಯು ಮುಖ್ಯ

ಕಚೇರಿಯು ಸ್ವಚ್ಛವಾಗಿದ್ದರೆ ಪಾಸಿಟಿವ್ ಎನರ್ಜಿ ಇರುತ್ತದೆ. ಇದರಿಂದ ಕೆಲಸದಲ್ಲಿ ಆಸಕ್ತಿ ಹೆಚ್ಚುತ್ತದೆ. ಕಚೇರಿಯ ಟೇಬಲ್ ಅಥವಾ ಕಬೋರ್ಡ್‌ಗಳಲ್ಲಿ ಅಗತ್ಯವಿರುವ ವಸ್ತುಗಳನ್ನು ಮಾತ್ರ ಇಟ್ಟುಕೊಳ್ಳಬೇಕು. ಅದನ್ನು ಕೂಡಾ ಸ್ವಚ್ಛವಾಗಿಟ್ಟುಕೊಳ್ಳಬೇಕು.

ಕಚೇರಿಯ ಗಡಿಯಾರ ಸದಾ ಪೂರ್ವ ಅಥವಾ ಉತ್ತರ ದಿಕ್ಕಿಗೆ ಇರಬೇಕು. ಇದು ಸಕಾರಾತ್ಮಕತೆಯ ಸ್ಥಾನವಾದ್ದರಿಂದ ಸಮಯವನ್ನು ತೋರಿಸುವ ಗಡಿಯಾರ ಇದೇ ದಿಕ್ಕಿನಲ್ಲಿರಬೇಕು. ಕಚೇರಿಯ ಈಶಾನ್ಯ ಕೋಣೆಯಲ್ಲಿ ದೇವರ ಮೂರ್ತಿಗಳನ್ನು ಇಟ್ಟುಕೊಳ್ಳಬಹುದು.

ಇದನ್ನೂ ಓದಿ : Vastu Tips : ಆರ್ಥಿಕ ಲಾಭ ಪಡೆಯಲು ಮನೆಯ ಉತ್ತರ ದಿಕ್ಕಿನಲ್ಲಿ ಹೀಗೆ ಮಾಡಿ!

Continue Reading

ಧಾರ್ಮಿಕ

Vastu Tips | ಹಣಕಾಸಿನ ತೊಂದರೆಯೇ?; ಇವುಗಳಿಂದ ಪಾರಾಗಲು ಮನೆಯಲ್ಲಿ ಈ ವಾಸ್ತು ನಿಯಮ ಪಾಲಿಸಿ

ಸಂಪಾದನೆ ಮಾಡಿದ ಹಣ ಕೈಗೆ ಬರುತ್ತಿದ್ದಂತೆಯೇ ಖರ್ಚಾಗುತ್ತಿದೆಯೇ, ಹಣ ಉಳಿತಾಯ ಮಾಡಲು ಸಾಧ್ಯವಾಗುತ್ತಿಲ್ಲವೇ? ಇದಕ್ಕೆ ವಾಸ್ತು ಶಾಸ್ತ್ರದಲ್ಲಿ (Vastu Tips ) ಪರಿಹಾರವಿದೆ. ಹಾಗಾದರೆ ಆ ವಾಸ್ತು ಉಪಾಯಗಳು ಯಾವುವು ತಿಳಿಯೋಣ.

VISTARANEWS.COM


on

Vastu Tips
Koo

ನಾವು ಪಡುವ ಶ್ರಮಕ್ಕೆ ತಕ್ಕ ಫಲ ಸಿಗಬೇಕೆಂದು ಎಲ್ಲರೂ ಬಯಸುತ್ತಾರೆ. ಎಷ್ಟೇ ದುಡಿದರೂ ಕೆಲವೊಮ್ಮೆ ಕೈಯಲ್ಲಿ ದುಡ್ಡು ನಿಲ್ಲುವುದಿಲ್ಲ. ಸಂಪಾದನೆ ಚೆನ್ನಾಗಿಯೇ ಇದ್ದರೂ, ಗಳಿಸಿದ ಹಣ ಯಾವುದೋ ಕಾರಣಕ್ಕೆ ಖರ್ಚಾಗಿ ಹೋಗಿರುತ್ತದೆ. ಈ ರೀತಿಯ ಆರ್ಥಿಕ ತೊಂದರೆಗೆ ವಾಸ್ತು ದೋಷ ಸಹ ಕಾರಣವಾಗಿರಬಹುದು.

ವಾಸ್ತು ತಜ್ಞರ ಪ್ರಕಾರ ಮನೆಯಲ್ಲಿ ವಾಸ್ತುವಿಗೆ ಸಂಬಂಧಿಸಿದ ಕೆಲವು ದೋಷಗಳು ಅಥವಾ ವಸ್ತುಗಳಿಂದ ಹಣದ ತೊಂದರೆ ಉಂಟಾಗುತ್ತದೆ. ಈ ರೀತಿಯ ವಾಸ್ತು ಸಮಸ್ಯೆ ಇದ್ದಾಗ ಹಣ ಉಳಿಸುವುದು ಕನಸಿನ ಮಾತಾಗುತ್ತದೆ. ಹಾಗಾಗಿ ಮನೆಯಲ್ಲಿ ಧನಲಕ್ಷ್ಮೀಯು ಸದಾ ನೆಲೆಸಿರುವಂತೆ ಮಾಡಲು ವಾಸ್ತು ಶಾಸ್ತ್ರದಲ್ಲಿ ತಿಳಿಸಿರುವ ಕೆಲ ಸರಳ ಪರಿಹಾರದ (Vastu Tips) ಬಗ್ಗೆ ತಿಳಿಯೋಣ.

ನೈಋತ್ಯ ದಿಕ್ಕು ಕುಬೇರ ಸ್ಥಾನ
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನೈಋತ್ಯ ಭಾಗವನ್ನು ಕುಬೇರನ ಸ್ಥಾನವೆಂದು ಹೇಳಲಾಗುತ್ತದೆ. ಈ ಭಾಗದಲ್ಲಿ ಹಣ ಇರಿಸುವ ಲಾಕರ್‌ಗಳನ್ನು ಇಡಬಹುದು. ಇದು ಸಾಧ್ಯವಾಗದೇ ಇದ್ದರೆ ದಕ್ಷಿಣದ ಗೋಡೆಯಲ್ಲಿ ಉತ್ತರಕ್ಕೆ ಎದುರಾಗಿ ಲಾಕರ್ ಅನ್ನು ಇರಿಸುವುದು ಸಹ ಅದೃಷ್ಟವನ್ನು ತರುತ್ತದೆ. ಲಾಕರ್‌ನ ಬಾಗಿಲು ಉತ್ತರಕ್ಕೆ ತೆರೆಯಬೇಕು, ಇದು ವಾಸ್ತು ಪ್ರಕಾರ ಕುಬೇರನ (ಸಂಪತ್ತಿನ ದೇವರು) ದಿಕ್ಕು. ಹಣವನ್ನು ತಿಜೋರಿಯ ಮಧ್ಯ ಭಾಗದಲ್ಲಿ ಅಥವಾ ಮೇಲಿನ ಭಾಗದಲ್ಲಿ ಇಡಬೇಕೆಂದು ಮತ್ತು ತಿಜೋರಿಯ ಕೆಳಭಾಗದಲ್ಲಿ ಹಣ ಇಡಬಾರದೆಂದು ಶಾಸ್ತ್ರ ಹೇಳುತ್ತದೆ.

ಈ ವಸ್ತುಗಳನ್ನು ತಿಜೋರಿಯಲ್ಲಿಡಿ
ವಾಸ್ತು ಶಾಸ್ತ್ರದ ಪ್ರಕಾರ ತಿಜೋರಿಯಲ್ಲಿ ಶುಭವನ್ನು ನೀಡುವಂತಹ ಯಂತ್ರಗಳಾದ ವೃದ್ಧಿ ಯಂತ್ರ, ಮಹಾಲಕ್ಷ್ಮೀ ಯಂತ್ರ ಇತ್ಯಾದಿ ಲಕ್ಷ್ಮೀಗೆ ಸಂಬಂಧಿಸಿದ ಯಂತ್ರಗಳನ್ನು ಇಡಬೇಕೆಂದು, ಇದರಿಂದ ಖಜಾನೆ ಬರಿದಾಗುವುದಿಲ್ಲ ವೆಂದು ಶಾಸ್ತ್ರ ಹೇಳುತ್ತದೆ.

ಮಹಾಲಕ್ಷ್ಮೀ ಮತ್ತು ಕುಬೇರ ಮೂರ್ತಿ
ಹಣ ಮನೆಗೆ ಬರುತ್ತಿದ್ದಂತೆಯೇ ಖಾಲಿಯಾಗುತ್ತಿದೆ ಎಂದಾದರೆ, ಇಲ್ಲವೇ ಎಷ್ಟೇ ಪ್ರಯತ್ನಿಸಿದರೂ ಹಣ ಉಳಿತಾಯ ಮಾಡಲು ಆಗುತ್ತಿಲ್ಲವೆಂದಾದರೆ, ಮನೆಯ ದೇವರ ಕೋಣೆಯಲ್ಲಿ ಸಂಪತ್ತಿನ ಅಧಿ ದೇವತೆಯಾಗಿರುವ ಲಕ್ಷ್ಮೀಯನ್ನು ಮತ್ತು ಸಂಪತ್ತಿಗೆ ಒಡೆಯನಾಗಿರುವ ಕುಬೇರ ದೇವರ ಪ್ರತಿಮೆಯನ್ನು ಇಡಬೇಕೆಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗುತ್ತದೆ. ಜೊತೆಗೆ ಅದಕ್ಕೆ ಪ್ರತಿನಿತ್ಯ ಪೂಜೆ ಮಾಡಬೇಕು. ಇದರಿಂದ ಆರ್ಥಿಕ ಲಾಭ ಉಂಟಾಗುತ್ತದೆ.

ಪಾತ್ರೆ ತೊಳೆಯದೇ ಇಡುವುದು ಅಶುಭ
ಮನೆಯಲ್ಲಿ ರಾತ್ರಿ ಸಮಯದಲ್ಲಿ ಊಟ ಮಾಡಿದ ತಟ್ಟೆ, ಅಡುಗೆ ಮಾಡಿದ ಪಾತ್ರೆಗಳನ್ನು ತೊಳೆಯದೇ ಹಾಗೇಯೇ ಬಿಟ್ಟು ಮಲಗುವುದು ಅಶುಭವೆಂದು ಶಾಸ್ತ್ರ ಹೇಳುತ್ತದೆ. ಎಂಜಲು ಪಾತ್ರೆಗಳನ್ನು ತಕ್ಷಣಕ್ಕೆ ತೊಳೆದಿಡುವುದು ಶುಭ ಮತ್ತು ಇದರಿಂದ ವಾಸ್ತು ದೋಷ ಉಂಟಾಗುವುದಿಲ್ಲ. ಎಂಜಲು ಪಾತ್ರೆಗಳನ್ನು ಹಾಗೇಯೇ ಬಿಟ್ಟು ಮಲಗಿದರೆ ಅಂಥ ಮನೆಯಲ್ಲಿ ಲಕ್ಷ್ಮೀ ನೆಲೆಸುವುದಿಲ್ಲ, ಹಾಗಾಗಿ ಪಾತ್ರೆಗಳನ್ನು ಶುಚಿಗೊಳಿಸಿ ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ನೆಮ್ಮದಿ ಮತ್ತು ಸಂಪತ್ತು ನೆಲೆಸುತ್ತದೆ.

ಮನೆ ಸ್ವಚ್ಛವಾಗಿರಲಿ
ಸ್ವಚ್ಛತೆ ಇದ್ದರೆ ಮಾತ್ರ ಲಕ್ಷ್ಮೀ ವಾಸ ಮಾಡುತ್ತಾಳೆ. ಎಲ್ಲಿ ಕೊಳಕು, ಕೆಟ್ಟದ್ದು ಇರುತ್ತದೆಯೋ ಅಲ್ಲಿ ಲಕ್ಷ್ಮೀ ನೆಲೆಸುವುದಿಲ್ಲ. ಹಾಗಾಗಿ ಮನೆಯನ್ನು ಯಾವಾಗಲೂ ಶುಚಿಯಾಗಿಟ್ಟುಕೊಂಡಿರಬೇಕು. ಮನೆಯ ಈಶಾನ್ಯ ಭಾಗದಲ್ಲಿ ಯಾವುದೇ ಕಸ ಮತ್ತು ಬೇಡದ ವಸ್ತುಗಳನ್ನು ಇಡಬಾರದು. ಇದು ದೇವರ ಕೋಣೆಯ ಸ್ಥಾನವೆಂದು ಹೇಳಲಾಗುತ್ತದೆ.

ದಕ್ಷಿಣಾವರ್ತಿ ಶಂಖ ಮನೆಯಲ್ಲಿರಲಿ
ಹಣಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತಿದ್ದರೆ, ದೇವರ ಕೋಣೆಯಲ್ಲಿ ದಕ್ಷಿಣಾವರ್ತಿ ಶಂಖವನ್ನು ಇಟ್ಟುಕೊಳ್ಳಬೇಕು. ಅಷ್ಟೇ ಅಲ್ಲದೆ ಅದಕ್ಕೆ ಪೂಜೆಯನ್ನು ಮಾಡಿ ಅದನ್ನು ಊದಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಲಕ್ಷ್ಮೀ ನೆಲೆಸುತ್ತಾಳೆ ಹಾಗೂ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ.

ಒಣಗಿದ ಹೂವು ತೆಗೆಯಿರಿ
ವಾಸ್ತು ಶಾಸ್ತ್ರದ ಪ್ರಕಾರ ದೇವರ ಕೋಣೆಯಲ್ಲಿ ಒಣಗಿದ ಹೂವು ಅಥವಾ ಹೂವಿನ ಮಾಲೆಯನ್ನು ಇಡಬಾರದು. ಒಣಗಿದ ಅಥವಾ ಕೊಳೆತ ಹೂಗಳನ್ನು ಆ ಕೂಡಲೇ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಅವುಗಳನ್ನು ಹಾಗೆಯೇ ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ದಾರಿದ್ರ್ಯ ಬರುತ್ತದೆ.

ಚಪ್ಪಲಿಯನ್ನು ಸರಿಯಾಗಿಡಿ
ಮನೆಯ ಮುಂಬಾಗಿಲಿನಲ್ಲಿ ಚಪ್ಪಲಿಗಳನ್ನು ಅಡ್ಡಾದಿಡ್ಡಿಯಾಗಿ ಬಿಡುವುದು, ಮನೆಯವರ ಚಪ್ಪಲಿಗಳ ರಾಶಿ ಹಾಕುವುದು ಕೂಡ ದಾರಿದ್ರ್ಯಕ್ಕೆ ಕಾರಣವಾಗಬಹುದು. ಹೀಗಾಗಿನ ಮನೆಯ ಮುಂಭಾಗದಲ್ಲಿ ಚಪ್ಪಲಿಗಳನ್ನು ಸರಿಯಾ ದ ರೀತಿಯಲ್ಲಿ ಜೋಡಿಸಿಡುವುದು ಕೂಡ ಅವಶ್ಯಕ.

ಇದನ್ನೂ ಓದಿ | Weekly Horoscope | ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Continue Reading
Advertisement
Narendra Modi
ದೇಶ5 mins ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ11 mins ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು18 mins ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ52 mins ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್1 hour ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ1 hour ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest1 hour ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ2 hours ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest2 hours ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ2 hours ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌