Explainer: Sex work ಲೀಗಲ್‌ ಅಂದರೆ ಏನರ್ಥ? - Vistara News

EXPLAINER

Explainer: Sex work ಲೀಗಲ್‌ ಅಂದರೆ ಏನರ್ಥ?

ವೇಶ್ಯೆಯರನ್ನು ಬಂಧಿಸುವಂತಿಲ್ಲ, ಅವರನ್ನು ಹಿಂಸಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದರ ಹಿನ್ನೆಲೆ ಏನು? ವೇಶ್ಯಾವಾಟಿಕೆಯೂ ಒಂದು ವೃತ್ತಿ ಎಂಬ ತೀರ್ಪಿನ ಇಂಪ್ಯಾಕ್ಟ್‌ ಏನಾಗಲಿದೆ?

VISTARANEWS.COM


on

sex work india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೇಶ್ಯಾವಾಟಿಕೆ ಜಗತ್ತಿನ ಅತ್ಯಂತ ಹಳೇ ವೃತ್ತಿ- ಅಂತ ಬ್ರಿಟಿಷ್‌ಲೇಖಕ ರುಡ್‌ಯಾರ್ಡ್‌ಕಿಪ್ಲಿಂಗ್‌ತುಂಬಾ ಹಿಂದೇನೇ ಹೇಳಿದ್ದ. ಇದು ನಿಜ. ಎಲ್ಲ ದೇಶಗಳಲ್ಲೂ, ಎಲ್ಲ ಕಾಲಗಳಲ್ಲೂ ವೇಶ್ಯಾವಾಟಿಕೆ ಇದ್ದೇ ಇತ್ತು. ಭಾರತದ ಹಿಸ್ಟರಿ ನೋಡಿದರೆ ಕ್ರಿಸ್ತಪೂರ್ವ ಕಾಲದಲ್ಲೇ ಆಮ್ರಪಾಲಿ ಮುಂತಾದ ವೇಶ್ಯೆಯರ ಉದಾಹರಣೆ ಸಿಗುತ್ತೆ. ಇವರನ್ನು ʼನಗರವಧುʼ ಎಂದು ಕರೆಯಲಾಗ್ತಾ ಇತ್ತು. ಇವರು ರಾಜಮನೆತನದವರಿಗೆ, ಶ್ರೀಮಂತರಿಗೆ ಸಂತೋಷ ಕೊಡುವ, ಸುಖ ನೀಡುವ ವೃತ್ತಿಯನ್ನು ಮಾಡ್ತಾ ಇದ್ದರು. ಇನ್ನು ಪುರಾಣಗಳಲ್ಲಿ ಕಂಡುಬರೋ ಸ್ವರ್ಗದ ಅಪ್ಸರೆಯರ ಕೆಲಸವಂತೂ ಅದೇ ಆಗಿತ್ತು ಎಂಬುದನ್ನು ಬೇರೆ ಹೇಳಬೇಕಿಲ್ಲ. ಆಧುನಿಕ ಕಾಲಕ್ಕೆ ಬಂದರೆ, ಮುಂಬಯಿ, ಕೋಲ್ಕೊತಾ ಮುಂತಾದ ಬೃಹತ್‌ಮೆಟ್ರೋ ನಗರಗಳಲ್ಲಿ ದೊಡ್ಡ ದೊಡ್ಡ ಕಾಲೊನಿಗಳೇ ಈ ವೃತ್ತಿಗಾಗಿ ಮೀಸಲಾಗಿವೆ. ಇನ್ನು ಎಂಜಿ ರೋಡ್‌, ಬ್ರಿಗೇಡ್‌ರೋಡ್‌ನಂಥ ಐಷಾರಾಮಿ ಪ್ರದೇಶಗಳಲ್ಲಿ ನಡೆಯುವ ಹೈಟೆಕ್‌ ವೇಶ್ಯಾವಾಟಿಕೆಯೂ ಕಡಿಮೆಯೇನಲ್ಲ. ಹಾಗೆ ನಮ್ಮ ಜನಜೀವನದಲ್ಲಿ ಹಾಸುಹೊಕ್ಕಾಗಿರೋ ಲೈಂಗಿಕ ಕಾರ್ಯಕರ್ತೆಯರ ವೃತ್ತಿಯನ್ನು ಕಾನೂನುಬಾಹಿರ ಅಂತ ಘೋಷಿಸಿದ್ದಾದರೂ ಯಾರು?

supreme court

ನಂಬಿದ್ರೆ ನಂಬಿ, ಈ ದೇಶದಲ್ಲಿ ಯಾವತ್ತೂ ವೇಶ್ಯಾವಾಟಿಕೆ ಕಾನೂನುಬಾಹಿರ ಆಗಿರಲೇ ಇಲ್ಲ! ಯಾರೂ ಈ ವೃತ್ತಿಗೆ ಲೈಸೆನ್ಸ್‌, ಪರ್ಮಿಷನ್‌ ಅಂತೆಲ್ಲಾ ಮಾಡಿಲ್ಲವಾದರೂ, ಯಾರೂ ಅದನ್ನು ನಿಷೇಧಿಸಿಯೂ ಇಲ್ಲ.

ಹಾಗಿದ್ರೆ ಈಗ ಎದ್ದಿರೋ ಪ್ರಶ್ನೆ ಏನು?
ಸುಪ್ರೀಂ ಕೋರ್ಟ್‌ ನೀಡಿರುವ ಒಂದು ತೀರ್ಪಿನ ಕಾರಣದಿಂದ ಈಗ ದೇಶಾದ್ಯಂತ ಈ ಬಗ್ಗೆ ಚರ್ಚೆ ನಡೀತಾ ಇದೆ. ಈ ತೀರ್ಪಿಗೆ ಕಾರಣವಾಗಿರೋದು ಸ್ವತಃ ಸುಪ್ರೀಂ ಕೋರ್ಟ್‌ ನೇಮಿಸಿರುವ ಒಂದು ಸಮಿತಿ ನೀಡಿರುವ ಸಲಹೆಗಳು. ಈ ಸಮಿತಿಯನ್ನು 2011ರಲ್ಲೇ ರಚಿಸಲಾಗಿತ್ತು. ಪ್ರದೀಪ್‌ ಘೋಷ್‌ಎಂಬವರು ಈ ಸಮಿತಿಯ ಅಧ್ಯಕ್ಷರಾಗಿದ್ದರು. ಜಯಂತ್‌ ಭೂಷಣ್‌ ಮುಂತಾದವರು ಇದರ ಸದಸ್ಯರಾಗಿದ್ದರು. ಒಂದು ದಶಕ ಕಾಲ ಈ ಸಮಿತಿ ವೇಶ್ಯೆಯರ ಬದುಕು ಸ್ಥಿತಿಗತಿಗಳ ಮೇಲೆ ಅಧ್ಯಯನ ನಡೆಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದ್ದು, ಆ ಸೂಚನೆಗಳಿಗೆ ಅನುಗುಣವಾಗಿ ಕೋರ್ಟ್‌ ತನ್ನ ನಿರ್ಣಯಗಳನ್ನು ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ ಏನು ಹೇಳಿದೆ?
ಈ ದೇಶದ ಕಾನೂನಿನ ಸುರಕ್ಷತೆಯನ್ನು ವೇಶ್ಯೆಯರು ಕೂಡ ಹೊಂದಿದ್ದಾರೆ. ಇಂಥ ಸನ್ನಿವೇಶಗಳಲ್ಲಿ ಅಪರಾಧ ಕಾಯಿದೆಯನ್ನು ವ್ಯಕ್ತಿಯ ವಯಸ್ಸು ಮತ್ತು ಒಪ್ಪಿಗೆಯನ್ನು ನೋಡಿ ಅನ್ವಯಿಸಬೇಕು. ಸೆಕ್ಸ್‌ವರ್ಕರ್‌ ಪ್ರೌಢ ವಯಸ್ಕಳು ಹಾಗೂ ಸಮ್ಮತಿಯಿಂದಲೇ ಲೈಂಗಿಕ ಕ್ರಿಯೆಗೆ ಒಪ್ಪಿದ್ದಾಳೆ ಎಂದಾಗಿದ್ದರೆ ಪೊಲೀಸರು ಆಕೆಯ ಮೇಲೆ ಕೇಸು ದಾಖಲಿಸುವಂತಿಲ್ಲ. ವೃತ್ತಿ ಯಾವುದೇ ಇರಲಿ, ಈ ದೇಶದಲ್ಲಿ ಸಂವಿಧಾನದ ಆರ್ಟಿಕಲ್‌ 21ರ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೂ ಘನತೆಯಿಂದ ಬದುಕುವ ಹಕ್ಕಿದೆ.

ಅಂದರೆ, ಲೈಂಗಿಕ ಕಾರ್ಯಕರ್ತರ ಬದುಕು ಕೂಡ ಘನತೆಯಿಂದ ಕೂಡಿದೆ, ವೇಶ್ಯಾವಾಟಿಕೆಗೆ ಕೂಡ ಅದರದ್ದೇ ಆದ ಘನತೆ ಇದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದಂತಾಗಿದೆ.

ಕೋರ್ಟ್‌ ಇನ್ನೂ ಮುಂದುವರಿದು ಹೀಗೆ ಹೇಳಿದೆ- ವೇಶ್ಯಾಗೃಹಗಳ ಮೇಲೆ ನಡೆಯುವ ದಾಳಿಗಳ ಸಂದರ್ಭ ಪೊಲೀಸರು ವೇಶ್ಯೆಯರನ್ನು ಬಂಧಿಸುವುದು, ಚಿತ್ರಹಿಂಸೆ ಕೊಡುವುದು, ಅಪರಾಧಿಯಾಗಿಸಿ ನಿಲ್ಲಿಸುವುದು ಮಾಡುವಂತಿಲ್ಲ. ಯಾಕೆಂದರೆ ಲೈಂಗಿಕ ವೃತ್ತಿ ಅಪರಾಧವಲ್ಲ, ವೇಶ್ಯಾಗೃಹ ನಡೆಸುವುದು ಮಾತ್ರ ಅಪರಾಧ- ಎಂದಿದೆ.

ವೇಶ್ಯಾವಾಟಿಕೆಯ ಬಗ್ಗೆ ನಮ್ಮ ಕಾನೂನು ಏನು ಹೇಳುತ್ತೆ ?
ಭಾರತೀಯ ದಂಡ ಸಂಹಿತೆಯ ಪ್ರಕಾರ, ಇಬ್ಬರು ವಯಸ್ಕರ ನಡುವೆ ಸಮ್ಮತಿಯಿಂದ ನಡೆಯುವ ಲೈಂಗಿಕ ಕ್ರಿಯೆ ಅಪರಾಧವೇ ಅಲ್ಲ. ಆದರೆ ಈ ಸೇವೆಯ ಸುತ್ತ ನಡೆಯುವ ಇತರ ಕೆಲವು ಚಟುವಟಿಕೆಗಳು ಅಪರಾಧ ಎನಿಸಿಕೊಳ್ಳುತ್ತವೆ. ಉದಾಹರಣೆಗೆ ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆಯ ಸೇವೆಗಳನ್ನು ಪ್ರದರ್ಶಿಸುವುದು ಕಾನೂನುಬಾಹಿರ. ಹೋಟೆಲ್‌ಗಳಲ್ಲಿ ವೇಶ್ಯಾವಾಟಿಕೆ ನಡೆಸುವುದು ಕಾನೂನುಬಾಹಿರ. ಲೈಂಗಿಕ ಕಾರ್ಯಕರ್ತೆಯನ್ನು ಸಂಪರ್ಕಿಸಿಕೊಡುವುದು ಕಾನೂನುಬಾಹಿರ. ವೇಶ್ಯಾವಾಟಿಕೆಗೆ ಗಿರಾಕಿಗಳನ್ನು ಹೊಂದಿಸುವುದು ಕಾನೂನುಬಾಹಿರ.

ಅನೈತಿಕ ವ್ಯವಹಾರಗಳ (ತಡೆ) ಕಾಯಿದೆ- 1986ರ ಪ್ರಕಾರ, ವೇಶ್ಯಾವೃತ್ತಿಗಾಗಿ ಇತರರನ್ನು ಆಕರ್ಷಿಸುವುದು, ಪ್ರಚೋದಿಸುವುದು ಅಪರಾಧ ಎನಿಸಿಕೊಳ್ಳುತ್ತದೆ. ಕಾಲ್‌ಗರ್ಲ್‌ಗಳು ತಮ್ಮ ಫೋನ್‌ ನಂಬರ್‌ಗಳನ್ನು ಸಾರ್ವಜನಿಕಗೊಳಿಸುವುದು ಅಪರಾಧ. ಈ ಅಪರಾಧಗಳಿಗಾಗಿ ಅವರನ್ನು ಆರು ತಿಂಗಳ ಕಾರಾಗೃಹವಾಸಕ್ಕೆ ಒಳಪಡಿಸಬಹುದು.

ಭಾರತೀಯ ದಂಡಸಂಹಿತೆಯ ಸೆಕ್ಷನ್‌372 ಹಾಗೂ 373ರ ಪ್ರಕಾರ, ಅಪ್ರಾಪ್ತ ವಯಸ್ಕರನ್ನು ಲೈಂಗಿಕ ಕೃತ್ಯಗಳಿಗೆ ಬಳಸಿಕೊಳ್ಳುವುದು ಅಪರಾಧ. ಇನ್ನು ಸಂವಿಧಾನದ ಆರ್ಟಿಕಲ್‌23ರ ಪ್ರಕಾರ, ವೇಶ್ಯಾವಾಟಿಕೆಗಾಗಿ ಮಹಿಳೆಯರ ಕಳ್ಳಸಾಗಣೆ ಮತ್ತು ಅವರನ್ನು ಬಲವಂತವಾಗಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ.

ಇನ್ನು ಶಿಕ್ಷೆಯ ಪ್ರಮಾಣ ಏನೇನು ಅಂತ ನೋಡೋಣ. ವೇಶ್ಯಾಗೃಹ ನಡೆಸುವವರಿಗೆ ಕನಿಷ್ಠ ಒಂದು ವರ್ಷ, ವೇಶ್ಯೆಯರ ಆದಾಯದಿಂದ ಬದುಕುವವನಿಗೆ ಕನಿಷ್ಠ ಎರಡು ವರ್ಷ, ಸೆಕ್ಸ್‌ವರ್ಕ್‌ಗಾಗಿ ಅಪ್ರಾಪ್ತ ವಯಸ್ಕ ಹುಡುಗಿಯರನ್ನು ಕಿಡ್‌ನ್ಯಾಪ್‌ಮಾಡುವವನಿಗೆ ಕನಿಷ್ಠ ಏಳು ವರ್ಷ, ವೇಶ್ಯಾಗೃಹದಲ್ಲಿ ಮಕ್ಕಳನ್ನು ಕೂಡಿ ಹಾಕುವವನಿಗೆ ಕನಿಷ್ಠ ಏಳು ವರ್ಷ, ಸಾರ್ವಜನಿಕ ಪ್ರದೇಶದಲ್ಲಿ ವೇಶ್ಯಾವಾಟಿಕೆಗೆ ಪ್ರಚೋದನೆ ಮಾಡುವವನಿಗೆ ಮೂರು ತಿಂಗಳು, ವೇಶ್ಯಾವಾಟಿಕೆಗೆ ಪ್ರೋತ್ಸಾಹ ನೀಡುವವನಿಗೆ ಆರು ತಿಂಗಳು, ಅಪ್ತಾಪ್ತರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸುವವರಿಗೆ ಕನಿಷ್ಠ ಏಳು ವರ್ಷ ಶಿಕ್ಷೆ ನೀಡಲಾಗುತ್ತದೆ.

ಇದನ್ನೂ ಓದಿ : Sex work legal: ವೇಶ್ಯೆಯರನ್ನು ಬಂಧಿಸುವಂತಿಲ್ಲ, ದಂಡ ವಿಧಿಸುವಂತಿಲ್ಲ ಎಂದ ಸುಪ್ರೀಂಕೋರ್ಟ್

ಹಾಗಾಗಿ ಇದೆಲ್ಲದರ ಒಟ್ಟಾರೆ ಅರ್ಥ ಏನಂದ್ರೆ, ಸಮ್ಮತಿ ಮೂಲಕ ಗಿರಾಕಿಯ ಜೊತೆ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ. ಆದ್ರೆ ಅಂಥ ವೇಶ್ಯಾವಾಟಿಕೆಗೆ ಸಪೋರ್ಟ್‌ ಮಾಡುವ ಎಲ್ಲರೂ ಶಿಕ್ಷಾರ್ಹರು. ಈ ಕಾನೂನನ್ನು ಬಿಗಿಯಾಗಿ ಜಾರಿ ಮಾಡಿದ್ರೆ ಏನಾಗುತ್ತೆ? ಲೈಂಗಿಕ ಕಾರ್ಯಕರ್ತರು ತಮ್ಮ ಗಿರಾಕಿಗಳನ್ನು ತಾವೇ ಹುಡುಕಿಕೊಳ್ಳಬೇಕಾಗುತ್ತೆ, ಪಿಂಪ್‌ಗಳನ್ನು ಅವಲಂಬಿಸುವಂತಿಲ್ಲ. ಆದ್ರೂ ಸಾರ್ವಜನಿಕ ಸ್ಥಳದಲ್ಲಿ ಹಾವಭಾವಗಳಿಂದ ಯಾರನ್ನೂ ಪ್ರಚೋದಿಸುವಂತಿಲ್ಲ. ಅದು ಶಿಕ್ಷಾರ್ಹ.

ತೀರ್ಪಿನಿಂದ ಏನಾದರೂ ಬದಲಾಗುತ್ತಾ?
ಹೌದು, ಈ ತೀರ್ಪು ವೇಶ್ಯಾವಾಟಿಕೆಯಲ್ಲಿ ತೊಡಗಿದ ಮಹಿಳೆಯರಿಗೆ ಒಂದು ದೊಡ್ಡ ಮಟ್ಟದ ಧೈರ್ಯವನ್ನು ನೀಡಬಹುದು. ಕೋರ್ಟ್‌ ಹೇಳಿರೋ ಈ ಮಾತುಗಳನ್ನು ಕೇಳಿ-

ಹೆಚ್ಚಿನ ಸಲ ಪೊಲೀಸರು ವೇಶ್ಯೆಯ ಜತೆಗೆ ಹಿಂಸಾತ್ಮಕವಾಗಿ, ಕ್ರೌರ್ಯದಿಂದ ನಡೆದುಕೊಳ್ಳುತ್ತಾರೆ. ಇದು ತಪ್ಪು. ಸೆಕ್ಸ್‌ ವರ್ಕರ್‌ಗಳೂ ಅನೇಕ ಸಲ ಲೈಂಗಿಕ ಆಕ್ರಮಣ, ರೇಪ್‌ಇತ್ಯಾದಿಗಳಿಗೆ ತುತ್ತಾಗುತ್ತಾರೆ. ಇದನ್ನು ಪೊಲೀಸರು ಗಮನದಲ್ಲಿ ಇಟ್ಟುಕೊಬೇಕು ಹಾಗೂ ವೇಶ್ಯೆಯರು ದೂರು ನೀಡಲು ಬಂದಾಗ ಅವರ ವಿಚಾರದಲ್ಲಿ ತಾರತಮ್ಯ ತೋರಬಾರದು. ಅವರಿಗೆ ಸೂಕ್ತ ವೈದ್ಯಕೀಯ ಹಾಗೂ ಕಾನೂನು ನೆರವು ಒದಗಿಸಬೇಕು. ಯಾವುದೇ ವೇಶ್ಯಾಗೃಹದಲ್ಲಿ ಮಕ್ಕಳು ಸಿಕ್ಕಿದರೆ, ಅವರನ್ನು ವೇಶ್ಯಾವಾಟಿಕೆಗಾಗಿ ಬಳಸಲಾಗುತ್ತಿದೆ ಎಂಬ ತೀರ್ಮಾನಕ್ಕೆ ಏಕಾಏಕಿ ಬರಬಾರದು. ಅವರು ವೇಶ್ಯೆಯರ ಮಕ್ಕಳಾಗಿರಬಹುದು. ಅವರಿಗೂ ಮೂಲಭೂತ ಸುರಕ್ಷತೆ, ಶಿಕ್ಷಣ ಇತ್ಯಾದಿಗಳ ಅಗತ್ಯವಿದೆ. ಮೂಲಭೂತ ಮಾನವ ಘನತೆಯು ವೇಶ್ಯೆಯರಿಗೂ ಅನ್ವಯವಾಗುತ್ತದೆ ಹಾಗೂ ಮಕ್ಕಳನ್ನು ಅವರಿಂದ ಪ್ರತ್ಯೇಕಗೊಳಿಸುವಂತಿಲ್ಲ. ವೇಶ್ಯೆಯರ ಬಳಿ ಸಂಗ್ರಹಿಸಿದ ಕಾಂಡೋಮ್‌ಗಳನ್ನು ಅವರ ವಿರುದ್ಧ ಅಪರಾಧಕ್ಕೆ ಸಾಕ್ಷಿಯಾಗಿ ಬಳಸುವಂತಿಲ್ಲ. ರೈಡ್‌ನಲ್ಲಿ ಸಿಕ್ಕಿಬಿದ್ದ ಲೈಂಗಿಕ ಕಾರ್ಯಕರ್ತೆಯನ್ನು ಮರುವಸತಿ ಕೇಂದ್ರಗಳಿಗೆ ಕಳಿಸಬೇಕು. ತಾವು ಸಮ್ಮತಿಪೂರ್ವಕ ಕೃತ್ಯ ಎಸಗಿದೆವು ಎಂದು ಅವರು ತಿಳಿಸಿದರೆ ಮ್ಯಾಜಿಸ್ಟ್ರೇಟ್‌ ಅವರನ್ನು ಬಿಟ್ಟುಬಿಡಬಹುದು.

ಇವಿಷ್ಟು ವೇಶ್ಯಾವಾಟಿಕೆ ಬಗ್ಗೆ ಕೋರ್ಟ್‌ ಹೇಳಿರೋ ಮಾತು. ಅಂದರೆ, ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸೋಕೆ ವೇಶ್ಯೆಯರನ್ನು ಯಾರೂ ತಡೆಯುವಂತಿಲ್ಲ. ಆದರೆ ಅವರು ತಮ್ಮ ವಹಿವಾಟು ನಡೆಸೋಕೆ ಇನ್ನೊಬ್ಬರನ್ನು ಅವಲಂಬಿಸುವಂತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಇನ್ನೊಬ್ಬರನ್ನು ಪ್ರಚೋದಿಸುವಂತಿಲ್ಲ. ತಮ್ಮ ಫೋನ್‌ ನಂಬರ್‌ಗಳನ್ನು ಬಹಿರಂಗಪಡಿಸುವಂತಿಲ್ಲ. ಪಿಂಪ್‌ಗಳನ್ನು ಬಳಸುವಂತಿಲ್ಲ.

ಗಿರಾಕಿಗಳನ್ನು ಶಿಕ್ಷಿಸಬಹುದಾ?
ಹಾಗಾದ್ರೆ ವೇಶ್ಯೆಯರನ್ನು ತಮ್ಮ ದೈಹಿಕ ತೃಪ್ತಿಗಾಗಿ ಬಳಸಿಕೊಳ್ಳುವ ಗಂಡಸರನ್ನು ಶಿಕ್ಷೆಗೆ ಒಳಪಡಿಸಬಹುದಾ ಎಂಬ ಪ್ರಶ್ನೆ ಏಳುತ್ತೆ. ಇದರ ಬಗ್ಗೆ ಕೂಡ ಕೋರ್ಟ್‌ಗಳು ತಮ್ಮ ಅಭಿಪ್ರಾಯ ಹೇಳಿವೆ.

red light area

ʼʼವೇಶ್ಯೆಯರ ಜೊತೆಗೆ ಸಿಕ್ಕಿಬಿದ್ದ ಗಂಡಸರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತಿಲ್ಲʼʼ ಎಂದು ಕರ್ನಾಟಕ ಹೈಕೋರ್ಟ್‌ ಹಾಗೂ ಆಂಧ್ರಪ್ರದೇಶ ಹೈಕೋರ್ಟ್‌ಗಳು ರೂಲಿಂಗ್‌ ನೀಡಿವೆ. ಕೋರ್ಟ್‌ಗಳ ಪ್ರಕಾರ, ವೇಶ್ಯೆಯರ ಗಿರಾಕಿಗಳು ಕೂಡ ಶಿಕ್ಷಾರ್ಹರಲ್ಲ. ಯಾಕೆಂದರೆ ಅವರು ಆ ಮಹಿಳೆಯ ಜೊತೆ ಸಮ್ಮತಿ ಸೆಕ್ಸ್‌ನಲ್ಲಿ ಪಾಲ್ಗೊಂಡವರು ಅಷ್ಟೇ. ಅಂದ್ರೆ ವೇಶ್ಯೆಯ ಜೊತೆಗೆ ಆಕೆಯ ಗಿರಾಕಿಗಳೂ ಸುರಕ್ಷಿತ.

ಸರಿ ಹಾಗಾದ್ರೆ, ಬೇರೆ ದೇಶಗಳಲ್ಲೂ ನಮ್ಮದೇ ಥರ ಕಾನೂನು ಇದೆಯಾ? ಯಾವ್ಯಾವ ದೇಶಗಳಲ್ಲಿ ವೇಶ್ಯಾವಾಟಿಕೆ ಕಾನೂನುಬದ್ಧ? ಎಲ್ಲೆಲ್ಲಿ ಕಾನೂನುಬಾಹಿರ? ಅದನ್ನೂ ನೋಡೋಣ.

ಹೆಚ್ಚಿನ ಎಲ್ಲಾ ಮುಂದುವರಿದ ದೇಶಗಳಲ್ಲೂ ವೇಶ್ಯಾವಾಟಿಕೆ ಅನ್ನೋದು ಒಂದು ಅಪರಾಧವೇ ಅಲ್ಲ. ಅಮೆರಿಕ, ಯುರೋಪ್‌ನ ಹೆಚ್ಚಿನ ದೇಶಗಳಲ್ಲಿ ವೇಶ್ಯೆಯರು ಯಾವುದೇ ಭೀತಿಯಿಲ್ಲದೆ ಇತರ ಸಾರ್ವಜನಿಕರ ಸಮಾನವಾಗಿ ಓಡಾಡುವುದು, ತಮ್ಮ ಹಕ್ಕುಗಳನ್ನು ಪಡೆಯೋದನ್ನು ಕಾಣಬಹುದು. ಕೆನಡಾದಲ್ಲಿ ಲೈಂಗಿಕ ಕಾರ್ಯಕರ್ತರಿಗೆ ಎಲ್ಲ ಬಗೆಯ ಕಾನೂನಾತ್ಮಕ ರಕ್ಷಣೆಗಳಿವೆ. ಜರ್ಮನಿಯಲ್ಲಿ ವೇಶ್ಯಾವಾಟಿಕೆ ಕಾನೂನುಬದ್ಧ. ಇಲ್ಲಿ ಸರಕಾರವೇ ನಡೆಸುವ ಬ್ರಾತೆಲ್‌ಗಳಿವೆ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಆರೋಗ್ಯ ವಿಮೆ, ಪಿಂಚಣಿ ಥರದ ಸೋಶಿಯಲ್‌ಬೆನಿಫಿಟ್‌ಗಳಿವೆ. ಇವರು ಸರಕಾರಕ್ಕೆ ಟ್ಯಾಕ್ಸನ್ನೂ ಕೊಡಬೇಕಾಗುತ್ತೆ. ಫ್ರಾನ್ಸ್‌ನಲ್ಲಿ ವೇಶ್ಯಾವಾಟಿಕೆ ಓಕೆ, ಆದರೆ ಭಾರತದಂತೆಯೇ ಇಲ್ಲಿ ಕೂಡ ಅದರ ಸಾರ್ವಜನಿಕ ಪ್ರದರ್ಶನ ಇತ್ಯಾದಿಗಳು ನಿಷೇಧಿತವಾಗಿವೆ. ನ್ಯೂಜಿಲ್ಯಾಂಡ್‌ನಲ್ಲಿ 2003ರಿಂದೀಚೆಗೆ ಸೆಕ್ಸ್‌ವರ್ಕ್‌ ಕಾನೂನುಬದ್ಧವಾಗಿದೆ ಹಾಗೂ ಲೈಸೆನ್ಸ್‌ ಪಡೆದ ಬ್ರಾತೆಲ್‌ಗಳು ಕಾರ್ಯ ನಿರ್ವಹಿಸ್ತಾವೆ. ಗ್ರೀಸ್ ಮುಂತಾದ ದೇಶಗಳಲ್ಲಿ ಇವರಿಗೆ ಪುಗಸಟ್ಟೆ ಹೆಲ್ತ್‌ ಚೆಕಪ್‌ ಕೂಡ ಇದೆ. ಇನ್ನು ಆಫ್ರಿಕಾದಂಥ ಹಿಂದುಳಿದ ದೇಶಗಳಲ್ಲಿ, ಲೈಂಗಿಕ ಕಾರ್ಯಕರ್ತೆಯರನ್ನು ಎಚ್‌ಐವಿ ಅಥವಾ ಏಡ್ಸ್‌ ಹಬ್ಬಿಸುವವರು ಎನ್ನುವ ಅಸಹ್ಯ ದೃಷ್ಟಿಯಿಂದ ನೋಡಲಾಗ್ತಾ ಇತ್ತು. ಆದರೆ ಇತ್ತೀಚೆಗೆ ಅನೇಕ ಎನ್‌ಜಿಒಗಳು ಕಾಂಡೋಮ್‌ ಬಳಕೆ ಮುಂತಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗ್ರತಿ ಮೂಡಿಸಿವೆ.

ಈಗ ಸುಪ್ರೀಂ ಕೋರ್ಟ್‌ ತೀರ್ಪಿನ ಪರಿಣಾಮ ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನು ರಕ್ಷಣೆ ಸಿಕ್ಕಿದಂತಾಗಿದೆ. ಇವರನ್ನು ಪೊಲೀಸರು ವಿನಾಕಾರಣ ಬೆದರಿಸುವುದು, ಸುಳ್ಳು ಕೇಸು ದಾಖಲಿಸುವುದು ಮಾಡುವ ಹಾಗಿಲ್ಲ. ಇವರಿಂದ ಮಕ್ಕಳನ್ನು ಪ್ರತ್ಯೇಕಿಸುವಂತಿಲ್ಲ. ಇವರ ಗಿರಾಕಿಗಳಿಗೆ ಕಿರುಕುಳ ಕೊಡುವಂತಿಲ್ಲ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ನಡೆದಿದೆ ಎಂದು ದೂರು ಕೊಡೋಕೆ ವೇಶ್ಯೆ ಪೊಲೀಸ್‌ ಠಾಣೆಗೆ ಬಂದರೆ ಆಕೆಯನ್ನು ಇತರ ಸಾರ್ಜನಿಕರಂತೆಯೇ ಗೌರವದಿಂದ ಕಂಡು, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೆ ಬ್ರಾತೆಲ್‌ಗೆ ಪೊಲೀಸ್‌ ರೈಡ್‌ ನಡೆದರೆ, ಅಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವೇಶ್ಯೆಯರನ್ನಾಗಲೀ, ಗ್ರಾಹಕರನ್ನಾಗಲೀ ಕಿರುಕುಳಕ್ಕೆ ಒಳಪಡಿಸುವಂತಿಲ್ಲ.

ಇದನ್ನೂ ಓದಿ : ವಿಸ್ತಾರ Explainer: ಅಮೆರಿಕದ ಯುವಕರೇಕೆ ಕಿಲ್ಲರ್ ಆಗುತ್ತಿದ್ದಾರೆ?

ಕೋರ್ಟ್‌ ತೀರ್ಪಿನಿಂದ ವೇಶ್ಯೆಯರ ಸಬಲೀಕರಣ ಆಗುತ್ತೆ ಎಂದು ಈ ಕುರಿತು ಹೋರಾಡ್ತಾ ಇರುವ ಎನ್‌ಜಿಒಗಳು ಹೇಳುತ್ತವೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಹಾಗೂ ಸೇವಾ ಯೋಜನೆಗಳನ್ನು ಪಡೆಯುವಂತೆ ಮಾಡುವುದು ಸುಲಭವಾಗಲಿದೆ. ಯಾಕೆಂದರೆ ಹೆಚ್ಚಾಗಿ ಈ ದೇಹ ಮಾರುವ ದಂಧೆಗೆ ಇಳಿಯೋರು ಬಡತನದ ಹಿನ್ನೆಲೆಯಿಂದ ಬರುವವರು. ಶ್ರೀಮಂತರ್ಯಾರೂ ಇಂಥ ಕೆಲಸಕ್ಕೆ ಇಳಿಯುವುದಿಲ್ಲ. ಹೈಟೆಕ್‌ ವೇಶ್ಯಾವಾಟಿಕೆಗಳ ಹಿನ್ನೆಲೆ ಹಾಗೂ ಸಮಸ್ಯೆಗಳು ಬೇರೆಯಾದರೂ ಇದೇ ಕಾನೂನುಗಳೇ ಅಲ್ಲಿಯೂ ಅನ್ವಯವಾಗುತ್ತವೆ. ಆದರೆ ದುರ್ಬಲ ವರ್ಗದ ವೇಶ್ಯೆಯರ ಆರೋಗ್ಯ, ಅವರ ಮಕ್ಕಳ ಶಿಕ್ಷಣ ಇತ್ಯಾದಿಗಳು ಸದಾಕಾಲ ಸಂಕಷ್ಟದಲ್ಲಿರುತ್ತವೆ. ಇವರ ಬದುಕಿನ ಸ್ಥಿತಿಗತಿಗಳನ್ನು ಉತ್ತಮಪಡಿಸಬಹುದು ಹಾಗೂ ಎರಡನೇ ತಲೆಮಾರು ಮತ್ತೆ ಈ ವ್ಯವಹಾರಕ್ಕೆ ಇಳಿಯದಂತೆ ನೋಡಿಕೊಳ್ಳಬಹುದು- ಎಂದು ವೇಶ್ಯೆಯರ ಪರ ವಾದಿಸುವವರು ಹೇಳ್ತಾರೆ.

ಸಮಾಜಕ್ಕೆ ಹಾನಿಕರ?
ಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರೂ ತುಂಬಾ ಮಂದಿ ಇದ್ದಾರೆ. ಭಾರತದಂಥ ದೇಶದಲ್ಲಿ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸುವುದು ಸರಿಯಲ್ಲ. ಇಲ್ಲಿನ ಸಾಂಪ್ರದಾಯಿಕ ಜೀವನಪದ್ಧತಿಗೆ ಇದರಿಂದ ಇನ್ನಷ್ಟು ಹೊಡೆತ ಬೀಳಲಿದೆ. ಈಗಾಗಲೇ ಇಂಟರ್‌ನೆಟ್‌ ಮುಂತಾದ ಆಧುನಿಕ ಮಾಧ್ಯಮಗಳ ಮೂಲಕ ಪೋರ್ನೋಗ್ರಫಿ ಮೊದಲಾದ ಪ್ರಚೋದನಕಾರಿ ಕಂಟೆಂಟ್‌ಗಳಿಗೆ ಯುವಜನತೆ ತೆರೆದುಕೊಂಡಿದ್ದಾರೆ. ವೇಶ್ಯಾವಾಟಿಕೆ ಇನ್ನಷ್ಟು ಮುಕ್ತಗೊಂಡರೆ, ಆಗ ನಮ್ಮ ಯುವಜನತೆ ಇದರತ್ತ ಹೆಚ್ಚೆಚ್ಚು ಆಕರ್ಷಿತವಾಗಬಹುದು ಹಾಗೂ ಸುಲಭವಾಗಿ ಹಣ ಮಾಡುವ ದಾರಿಗಳನ್ನು ಕಂಡುಕೊಳ್ಳಬಹುದು. ಸಮಾಜ ಕಾಪಾಡಿಕೊಂಡುಬಂದ ನೈತಿಕ ಮೌಲ್ಯಗಳು ಗಾಳಿಯಲ್ಲಿ ತೂರಿಹೋಗಲಿವೆ. ವೇಶ್ಯಾವಾಟಿಕೆಯಲ್ಲಿ ತೊಡಗಿದವರು ಇನ್ನಷ್ಟು ಧೈರ್ಯವಾಗಿ ತಮ್ಮ ವಹಿವಾಟನ್ನು ನಡೆಸುವುದರಿಂದ, ಸಭ್ಯ ಸಾಮಾಜಿಕ ಜೀವನವನ್ನು ನಡೆಸುವವರಿಗೆ ಮುಜುಗರ ಉಂಟಾಗುವ ಸನ್ನಿವೇಶಗಳು ಅಧಿಕಗೊಳ್ಳಬಹುದು. ಭಾರತೀಯ ಸಮಾಜದ ಸೂಕ್ಷ್ಮ ಹೆಣಿಗೆಯಲ್ಲಿ ಬಿರುಕುಗಳು ಉಂಟಾಗಬಹುದು ಎಂದು ಹಲವರು ಆತಂಕಪಡುತ್ತಾರೆ.

ವೇಶ್ಯಾವಾಟಿಕೆಯಲ್ಲಿ ತೊಡಗಿದವರಿಗೂ ಸಾಮಾಜಿಕ ಮಾನ್ಯತೆ ಮತ್ತು ಸರಕಾರದ ಕಲ್ಯಾಣ ಯೋಜನೆಗಳು ಸಿಗಲಿವೆಯಾ? ಅವರಿಗೂ ಗುರುತುಪತ್ರ ಮುಂತಾದವು ಸಿಗುತ್ತವಾ? ಸಮಾಜದಲ್ಲಿ ಅವರ ಬಗ್ಗೆ ಇರೋ ಹೀನಾಯ ಭಾವನೆ ನಿವಾರಣೆ ಆಗುತ್ತಾ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ವಿಸ್ತಾರ EXPLAINER: ವೇಶ್ಯಾವಾಟಿಕೆಗೆ ಇನ್ನು ಓಪನ್‌ ಪರ್ಮಿಟ್‌ ಸಿಗುತ್ತಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

ವಿಮಾನಗಳಲ್ಲಿ ಪ್ರಕ್ಷುಬ್ಧತೆಯ (Flight Turbulence) ಸಮಯದಲ್ಲಿ ಸುರಕ್ಷಿತವಾಗಿರಲು ಪ್ರಯಾಣಿಕರಿಗೆ ಅಮೆರಿಕದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್‌, ವಿಮಾನ ಸಿಬ್ಬಂದಿ ಪಾಲಿಸಬಹುದಾದ ಮತ್ತು ಪ್ರಯಾಣಿಕರು ನಿರ್ವಹಿಸಬೇಕಾದ ಮಾರ್ಗಸೂಚಿಯನ್ನು ನೀಡಿದೆ. ಈ ಕುರಿತ ವಿವರಣೆ ಇಲ್ಲಿದೆ. ವಿಮಾನದೊಳಗಿನ ಪ್ರಕ್ಷುಬ್ಧತೆ (Flight Turbulence) ಎಂದರೇನು, ಇದರಿಂದ ಪಾರಾಗುವುದು ಹೇಗೆ ಎಂಬ ಮಾಹಿತಿಯೂ ಇಲ್ಲಿದೆ.

VISTARANEWS.COM


on

By

Flight Turbulence
Koo

ವಿಮಾನ (flight) ಹಾರುವಾಗ ವಾಯು ಒತ್ತಡದಿಂದ ಕೆಲವೊಮ್ಮೆ ಪ್ರಕ್ಷುಬ್ಧತೆ (Flight Turbulence) ಉಂಟಾಗುತ್ತದೆ. ವಿಮಾನ ನಡುಗುತ್ತದೆ. ಈ ಸಂದರ್ಭದಲ್ಲಿ ಹಠಾತ್ ಆಘಾತಗಳು ಸಂಭವಿಸಿ ಸಾವು ನೋವು ಉಂಟಾಗುವುದೂ ಇದೆ. ಇಂಥ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಪರಿಸ್ಥಿತಿಯನ್ನು ಶಾಂತವಾಗಿ ನಿಭಾಯಿಸಬೇಕಾಗುತ್ತದೆ. ಇತ್ತೀಚೆಗೆ ಸಿಂಗಾಪುರ ಏರ್‌ಲೈನ್ಸ್ (singapore airlines) ವಿಮಾನ ಇಂಥದ್ದೇ ಪರಿಸ್ಥಿತಿಗೆ ಒಳಗಾಗಿ ಪ್ರಯಾಣಿಕರೊಬ್ಬರು ಸಾವಿಗೀಡಾಗಿ, ಹಲವರು ಪ್ರಯಾಣಿಕರು ಗಾಯಗೊಂಡಿದ್ದರು. ಲಂಡನ್‌ನಿಂದ ಸಿಂಗಾಪುರಕ್ಕೆ ಹಾರುತ್ತಿದ್ದ ಬೋಯಿಂಗ್ 777-312ER ವಿಮಾನ 321ರಲ್ಲಿದ್ದ ಪ್ರಯಾಣಿಕರು ವಾಯು ಪ್ರಕ್ಷುಬ್ಧತೆಯ ಭಯಾನಕತೆಯನ್ನು ಅನುಭವಿಸಬೇಕಾಯಿತು.

ವಾಯು ಪ್ರಕ್ಷುಬ್ಧತೆ ಎಂದರೇನು?

ವಾಯು ಪ್ರಕ್ಷುಬ್ಧತೆಯು ಭೂಮಿಯ ವಾತಾವರಣದಲ್ಲಿ ಗಾಳಿಯ ಅನಿಯಮಿತ ಮತ್ತು ಅನಿರೀಕ್ಷಿತ ಚಲನೆಯಿಂದ ಉಂಟಾಗುತ್ತದೆ. ಇದು ವಿಮಾನ ಹಾರಾಟದ ಸಮಯದಲ್ಲಿ ಅಪಘಾತಕ್ಕೆ ಕಾರಣವಾಗುತ್ತದೆ. ವೇಗವಾಗಿ ವಾಹನ ಓಡಿಸುತ್ತಿದ್ದಾಗ ಯಾವ ಸೂಚನಾ ಫಲಕ ಇಲ್ಲದೆ ಹಠಾತ್‌ ಹಂಪ್‌ ಎದುರಾದಾಗ ಏನಾಗುತ್ತದೋ ವಿಮಾನದೊಳಗೆ ಹಾಗೆಯೇ ಆಗುತ್ತದೆ. ವಿಮಾನವು ಚಾಲಕನ ನಿಯಂತ್ರಣ ಕಳೆದುಕೊಂಡು ಪತನಗೊಳ್ಳುವಂತಾಗುತ್ತದೆ.

ಆಗ ಏನು ಮಾಡಬೇಕು?

ಯಾವಾಗಲೂ ಸೀಟ್ ಬೆಲ್ಟ್ ಧರಿಸಿ ಸುರಕ್ಷಿತವಾಗಿ ಕುಳಿತಿರಬೇಕು. ಸೈನ್ ಆಫ್ ಆಗಿದ್ದರೂ, ಅದನ್ನು ಬಿಗಿಯಾಗಿ ಇರಿಸಬೇಕು.
ಸಿಬ್ಬಂದಿಯ ಸೂಚನೆಗಳನ್ನು ಅನುಸರಿಸಿ. ಅವರ ಮಾತನ್ನು ಕೇಳಿ. ಪ್ರಕ್ಷುಬ್ಧತೆಯನ್ನು ನಿಭಾಯಿಸಲು ಅವರಿಗೆ ತರಬೇತಿ ನೀಡಲಾಗಿರುತ್ತದೆ. ಪ್ರಕ್ಷುಬ್ಧತೆಯ ಸಮಯದಲ್ಲಿ ಕ್ಯಾಬಿನ್ ಸುತ್ತಲೂ ಚಲಿಸುವುದನ್ನು ತಪ್ಪಿಸಿ ಮತ್ತು ಆತಂಕದಿಂದ ಕಿರುಚದೇ ಮೌನವಾಗಿ ಕುಳಿತುಕೊಳ್ಳಿ.

ಕ್ಯಾಬಿನ್‌ನಲ್ಲಿ ಇಟ್ಟಿರುವ ವಸ್ತುಗಳು ಮೈಮೇಲೆ ಬೀಳದಂತೆ ಸುರಕ್ಷಿತವಾಗಿರಿಸಿ. ಸೋರಿಕೆ ಅಥವಾ ಬೀಳುವಿಕೆಯನ್ನು ತಪ್ಪಿಸಲು ವಸ್ತುಗಳನ್ನು ಓವರ್ ಹೆಡ್ ವಿಭಾಗಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಿ.
ಪ್ರಕ್ಷುಬ್ಧತೆ ಸಾಮಾನ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಶಾಂತವಾಗಿರಿ ಮತ್ತು ಭಯಭೀತರಾಗಬೇಡಿ. ರೆಸ್ಟ್ ರೂಮ್‌ ಅನ್ನು ಬಳಸಬೇಕಾದರೆ ಎದ್ದೇಳುವ ಮೊದಲು ಶಾಂತ ಕ್ಷಣಕ್ಕಾಗಿ ಕಾಯಿರಿ. ಸ್ಥಿರತೆಗಾಗಿ ಹ್ಯಾಂಡ್ರೈಲ್‌ಗಳನ್ನು ಬಳಸಿ.

ವಾಯು ಪ್ರಕ್ಷುಬ್ಧತೆಗೆ ಕಾರಣಗಳೇನು?

ಚಂಡಮಾರುತ, ಜೆಟ್ ಸ್ಟ್ರೀಮ್‌ ಅಥವಾ ಗಾಳಿಯ ಒತ್ತಡದಲ್ಲಿನ ಬದಲಾವಣೆಗಳಿಂದ ವಾಯು ಪ್ರಕ್ಷುಬ್ಧತೆ ಉಂಟಾಗಬಹುದು. ಹವಾಮಾನ ಬದಲಾವಣೆಗಳಿಂದಾಗಿ ಗಾಳಿಯ ಪ್ರಕ್ಷುಬ್ಧತೆಯು ಆಗಾಗ ಸಂಭವಿಸುತ್ತದೆ ಎನ್ನುತ್ತಾರೆ ತಜ್ಞರು. ತೀವ್ರವಾದ ಪ್ರಕ್ಷುಬ್ಧ ಘಟನೆಗಳು ಅಪರೂಪ. ಪೈಲಟ್‌ಗಳು ಅವುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತರಬೇತಿ ಪಡೆದಿರುತ್ತಾರೆ.

ಇದನ್ನೂ ಓದಿ: Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

ಮಾಜಿ ಪೈಲೆಟ್ ಹೇಳಿದ್ದೇನು?

43 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಪೈಲಟ್ ಕ್ಯಾಪ್ಟನ್ ಕ್ರಿಸ್ ಹ್ಯಾಮಂಡ್ ಅವರು ಈ ಪರಿಸ್ಥಿತಿಯನ್ನು ಹೀಗೆ ವಿವರಿಸುತ್ತಾರೆ: ಇಂಥ ಸಂದರ್ಭದಲ್ಲಿ ಪ್ರಯಾಣಿಕರನ್ನು ಹೆಚ್ಚು ಸಮಾಧಾನದಿಂದ ಇರಿಸುವಂತೆ ಮಾಡುವ ಜವಾಬ್ದಾರಿ ಪೈಲಟ್‌ನದ್ದಾಗಿದೆ. ಎಲ್ಲಕ್ಕಿಂತ ಪೈಲಟ್‌ ತಾನು ಸಮಾಧಾನದಿಂದ ಇದ್ದು, ವಿವೇಚನೆ ಮತ್ತು ಅನುಭವ ಬಳಸಿ ವಿಮಾನವನ್ನು ನಿಯಂತ್ರಿಸಬೇಕಾಗುತ್ತದೆ. ಅನುಭವಿ ಚಾಲಕರು ಇಂಥ ಸನ್ನಿವೇಶವನ್ನು ಯಶಸ್ವಿಯಾಗಿ ನಿಭಾಯಿಸಿ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡುತ್ತಾರೆ.

Continue Reading

ದೇಶ

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

Share Market: ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಇದು ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಗೆ ಹಿಡಿದ ಕನ್ನಡಿ ಎಂದೇ ವಿಶ್ಲೇಷಿಸಲಾಗುತಿದೆ.

VISTARANEWS.COM


on

Share Market
Koo

ಮುಂಬೈ: “ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರಂದು ಭಾರತದ ಷೇರು ಮಾರುಕಟ್ಟೆಯು (Share Market) ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಇದೇ ಮಾತು ಹೇಳಿದ್ದಾರೆ. ಇದರ ಮಧ್ಯೆಯೇ, ಗುರುವಾರ (ಮೇ 23) ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಯ ಸಂಕೇತವಾಗಿಯೇ ಷೇರು ಮಾರುಕಟ್ಟೆಯು ದಾಖಲೆ ಬರೆದಿದೆ ಎಂದೇ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

“ನಿಫ್ಟಿಯು ದಾಖಲೆಯ ಏರಿಕೆ ಕಾಣುವ ಮೂಲಕ ಚುನಾವಣೆ ನಂತರದಲ್ಲಿ ದೇಶದಲ್ಲಿ ರಾಜಕೀಯ ಸ್ಥಿರತೆ ಇರುತ್ತದೆ ಎಂಬ ಸಂದೇಶ ರವಾನಿಸಿದೆ. ಅತಿ ಹೆಚ್ಚಿನ ಹಣ ಹೂಡಿಕೆ ಮಾಡುವವರು ಸೇರಿ ಎಲ್ಲರಿಗೂ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಜಿಯೋಜೀತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ರಣತಂತ್ರಗಾರ ವಿ.ಕೆ.ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಸಾರ್ವತ್ರಿಕ ಚುನಾವಣೆ ಫಲಿತಾಂಶದ ದಿನ ಷೇರು ಪೇಟೆಯಲ್ಲಿ ಲವಲವಿಕೆ ಇದ್ದೇ ಇರುತ್ತದೆ. ಆದರೆ, ಜೂನ್‌ 4ರಂದು ಇತಿಹಾಸ ಸೃಷ್ಟಿಯಾಗುತ್ತದೆ ಎಂದು ಹೇಳುತ್ತಿರುವುದು ಹೂಡಿಕೆದಾರರ ಖುಷಿ ಹೆಚ್ಚಿಸಿದೆ.

Share Market

ಕೇಂದ್ರಕ್ಕೆ ಆರ್‌ಬಿಐ ಲಾಭಾಂಶದ ಕೊಡುಗೆ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.10 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

ಷೇರು ಮಾರುಕಟ್ಟೆ ಬಗ್ಗೆ ಮೋದಿ ಹೇಳಿದ್ದೇನು?

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಸಿನಿಮಾ

CGI Technology In Film: ʼವೆಸ್ಟ್‌ವರ್ಲ್ಡ್‌ʼನಿಂದ ʼಅವತಾರ್‌ʼ ಚಿತ್ರದವರೆಗೆ ಸಿಜಿಐ ತಂತ್ರಜ್ಞಾನದ ರೋಚಕ ಹಾದಿ! ವಿಡಿಯೊಗಳಿವೆ

ಹೊಸ ತಂತ್ರಜ್ಞಾನಗಳು, ಆವಿಷ್ಕಾರಗಳು ಚಲನಚಿತ್ರ ಕ್ಷೇತ್ರದಲ್ಲೂ ಸಾಕಷ್ಟು ನಡೆದಿದೆ. ಇದರಲ್ಲಿ ಸಿಜಿಐ (CGI Technology In Film) ಕೂಡ ಒಂದು. 1970ರ ದಶಕದ ಆರಂಭದ ದಿನಗಳಿಂದಲೂ ಕಂಪ್ಯೂಟರ್ ರಚಿತ ಚಿತ್ರಣ (CGI- computer generated imagery) ಸಾಕಷ್ಟು ಪ್ರಯೋಗಗಳಿಗೆ ಒಳಗಾಗಿದೆ. ಇದು ಸಾಕಷ್ಟು ಅದ್ಭುತ ಚಲನಚಿತ್ರಗಳ ಮೇಲೆ ಪ್ರಭಾವವನ್ನು ಬೀರಿದೆ. ಕಥೆ ಹೇಳುವ ಶೈಲಿ ಮತ್ತು ದೃಶ್ಯ ಸಂಯೋಜನೆಯ ಗಡಿಗಳನ್ನು ವಿಸ್ತರಿಸಿದೆ. ಚಲನಚಿತ್ರ ರಂಗದಲ್ಲಿ ಸಿಜಿಐ ನ ಮೈಲುಗಲ್ಲು ಹೇಗಿತ್ತು ಎನ್ನುವ ಕಿರು ನೋಟ ಇಲ್ಲಿದೆ.

VISTARANEWS.COM


on

By

CGI Technology In Film
Koo

ಹಿಂದಿನ ದಿನಗಳಲ್ಲಿ ಚಲನಚಿತ್ರಗಳಲ್ಲಿ (film) ಒಂದು ವಿಶೇಷ ಸನ್ನಿವೇಶವನ್ನು ಚಿತ್ರಿಸಬೇಕಾದರೆ ಸೆಟ್‌ಗಳ ನಿರ್ಮಾಣಕ್ಕೆ ನಿರ್ಮಾಪಕರು (filmmakers), ಕೆಮರಾಮೆನ್‌ಗಳು (camera men) ಸಾಕಷ್ಟು ಕಷ್ಟಪಡುತ್ತಿದ್ದರು. ಆದರೆ ಈಗ ಎಲ್ಲವೂ ಕಂಪ್ಯೂಟರ್ ರಚಿತ ಚಿತ್ರಣ (CGI- computer generated imagery) ತಂತ್ರಜ್ಞಾನದ (CGI Technology In Film) ಮೂಲಕ ನಡೆದುಹೋಗುತ್ತದೆ. ಇದೀಗ ʼಮುಂಜ್ಯಾʼ ಎಂಬ ಭಾರತದ ಚಿತ್ರದಲ್ಲಿ ಈ ತಂತ್ರಜ್ಞಾನ ಬಳಸಲಾಗುತ್ತಿದೆ. ʼಮುಂಜ್ಯಾʼ ಭಾರತದ ಮೊದಲ CGI ಚಿತ್ರ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ತಂತ್ರಜ್ಞಾನದ ಹಿನ್ನೋಟ ಇಲ್ಲಿ ಕೊಡಲಾಗಿದೆ.

ಸಿನಿಮಾ ಜಗತ್ತಿನಲ್ಲಿ ಸಿಜಿಐಯ ವಿಕಾಸ ಒಂದು ಪ್ರಮುಖ ಮೈಲುಗಲ್ಲು ಎಂದರೆ ತಪ್ಪಾಗಲಾರದು. ಇದು ಸಿನಿಮಾದ ಭವಿಷ್ಯವನ್ನೇ ಬದಲಾಯಿಸಿತ್ತು. ಹಿಂದೆ ಚಲನಚಿತ್ರ ನಿರ್ಮಾಪಕರು ಪ್ರೇಕ್ಷಕರ ಗ್ರಹಿಕೆಯನ್ನು ರೂಪಿಸಲು ವಿವಿಧ ಪ್ರಯೋಗಗಳನ್ನು ಮಾಡುತ್ತಿದ್ದರು ಜೊತೆಗೆ ಆಪ್ಟಿಕಲ್ ತಂತ್ರಗಳನ್ನು ಅವಲಂಬಿಸಿದ್ದರು. ಕೆಮರಾ ಕೋನಗಳು, ಲೆನ್ಸ್ ಆಯ್ಕೆ ಮತ್ತು ವಿಸ್ತಾರವಾಗಿ ವಿನ್ಯಾಸಗೊಳಿಸಿದ ಸೆಟ್‌ ಗಳ ತಂತ್ರಗಳನ್ನು ಬಳಸುತ್ತಿದ್ದರು. ಹಸಿರು ಮತ್ತು ವಾಲ್ಯೂಮೆಟ್ರಿಕ್ ಎಲ್ಇಡಿ ಪರದೆಯನ್ನು ಬಳಸಿ ಹಿಂದೆ ಸೆಟ್ ವಿಸ್ತರಣೆಗಳನ್ನು ಕೈಯಿಂದ ನಿಖರವಾಗಿ ಚಿತ್ರಿಸಲಾಗುತ್ತಿತ್ತು.

ಈ ವಿಧಾನಕ್ಕೆ ಈಗ ಡಿಜಿಟಲ್ ಸ್ಪರ್ಶ ಸಿಕ್ಕಿದೆ. ಇಲ್ಲಿ ಕಂಪ್ಯೂಟರ್‌ಗಳು ಮತ್ತು ವಿವಿಧ ಸಾಫ್ಟ್‌ವೇರ್‌ಗಳು ಊಹಿಸುವ ಯಾವುದೇ ವಿನ್ಯಾಸವನ್ನು ರಚಿಸಲು ಇದು ಸಹಾಯ ಮಾಡುತ್ತದೆ. ಡಿಜಿಟಲ್ ಸೃಜನಶೀಲತೆಯೆಡೆಗಿನ ಈ ಬದಲಾವಣೆಯು ಸಿಜಿಐ ತಂತ್ರಜ್ಞಾನದ ಪ್ರಗತಿ ವೇಗವನ್ನು ಹೆಚ್ಚಿಸಿತ್ತು.


ಕಂಪ್ಯೂಟರ್ ಗ್ರಾಫಿಕ್ಸ್ ಬಳಸಿ ಈಗಾಗಲೇ ಹಲವಾರು ಚಿತ್ರಗಳನ್ನು ನಿರ್ಮಿಸಲಾಗಿದೆ. ಉದಾಹರಣೆಗೆ ಮಾರ್ವೆಲ್‌ನ ದಿ ಅವೆಂಜರ್ಸ್‌ನಲ್ಲಿ ಮಾರ್ಕ್ ರುಫಲೋ ಧರಿಸಿರುವ ಸೂಟ್ ಮತ್ತು ಸುತ್ತಲಿನ ದೃಶ್ಯಗಳಿಗೆ ಮತ್ತೆ ಡಿಜಿಟಲ್ ಸ್ಪರ್ಶ ನೀಡಲಾಗಿದೆ.

ಸಿಜಿಐಯ ಮೊದಲ ಪ್ರಯೋಗ ಯಾವಾಗ?

ಸಿಜಿಐ ಅನ್ನು ಆಧುನಿಕ ಚಲನಚಿತ್ರಗಳಲ್ಲಿ ಮಾತ್ರ ನಾವು ಗಮನಿಸಿದ್ದೇವೆ. ಆದರೆ ಇದು 2000 ರ ದಶಕದಿಂದ ಹಾಲಿವುಡ್‌ನ ಚಿತ್ರೀಕರಣದಲ್ಲಿ ಬಳಕೆಯಾಗುತ್ತಿದೆ. ಕಂಪ್ಯೂಟರ್ ರಚಿತ ಚಿತ್ರಣ 1973ರ ವೆಸ್ಟ್‌ವರ್ಲ್ಡ್ ಮತ್ತು 1977ರ ಸ್ಟಾರ್ ವಾರ್ಸ್‌ನಲ್ಲೂ ಮಾಡಲಾಗಿದೆ.

ವೆಸ್ಟ್‌ವರ್ಲ್ಡ್ ( 1973)

ವೆಸ್ಟ್‌ವರ್ಲ್ಡ್ ಚಲನಚಿತ್ರದಲ್ಲಿ ಸಿಜಿಐ ಸಂಕ್ಷಿಪ್ತವಾಗಿ ಸರಿಸುಮಾರು 10 ಸೆಕೆಂಡ್ ನಷ್ಟೇ ಬಳಕೆ ಮಾಡಲಾಗಿದೆ. ಚಿತ್ರದಲ್ಲಿ ಇದು ಬಣ್ಣಗಳನ್ನು ಬದಲಾಯಿಸುವುದು, ಸಂಕುಚಿತಗೊಳಿಸುವುದು ಮತ್ತು ಚಿತ್ರಣವನ್ನು ವಿಸ್ತರಿಸುವುದು ಸೇರಿದೆ.


ಸ್ಟಾರ್ ವಾರ್ಸ್ (1977)

ಇದರಲ್ಲಿ ಚಿಕಣಿ ಮಾದರಿಗಳು ಮತ್ತು ಬೆಳಕಿನ ತಂತ್ರಗಳ ಮಿಶ್ರಣವನ್ನು ಮಾಡಲಾಗಿದೆ. ಚಿತ್ರದ ಪ್ರಮುಖ ಕ್ಷಣವೊಂದರಲ್ಲಿ ಲ್ಯೂಕ್ ಸ್ಕೈವಾಕರ್ ಮತ್ತು ಇತರ ಎಕ್ಸ್-ವಿಂಗ್ ಪೈಲಟ್‌ಗಳು ಡೆತ್ ಸ್ಟಾರ್‌ನ ಮೇಲೆ ತಮ್ಮ ಆಕ್ರಮಣಕ್ಕೆ ತಯಾರಿ ನಡೆಸುತ್ತಿರುವಾಗ ಇದನ್ನು ಪ್ರಯೋಗಿಸಲಾಗಿದೆ. ಇದರಲ್ಲಿ 3ಡಿ ಯುದ್ಧತಂತ್ರದ ನಕ್ಷೆಯನ್ನು ತೋರಿಸಲಾಗಿದೆ. ಇದನ್ನು ಇಲಿನಾಯ್ಸ್ ವಿಶ್ವವಿದ್ಯಾಲಯವು ಚಿಕಾಗೋದ ಎಲೆಕ್ಟ್ರಾನಿಕ್ ದೃಶ್ಯೀಕರಣ ಪ್ರಯೋಗಾಲಯ ತಂಡದೊಂದಿಗೆ ಅಭಿವೃದ್ಧಿಪಡಿಸಿದೆ.


ಸಿಜಿಐನ ಸಂಪೂರ್ಣ ಬಳಕೆ

ಸಂಪೂರ್ಣವಾಗಿ ಸಿಜಿಐ ಪಾತ್ರವನ್ನು ಸ್ಟಾರ್ ವಾರ್ಸ್ ಮತ್ತೊಮ್ಮೆ ಪರಿಚಯಿಸಿದ್ದು 1999ರ ಸ್ಟಾರ್ ವಾರ್ಸ್ ಸಂಚಿಕೆ 1: ದಿ ಫ್ಯಾಂಟಮ್ ಮೆನೇಸ್‌ನಲ್ಲಿ ಜಾರ್ ಜಾರ್ ಬಿಂಕ್ಸ್ ಮೂಲಕ.

ಸ್ಟಾರ್ ವಾರ್ಸ್: ಎ ನ್ಯೂ ಹೋಪ್ (1977)

1977ರಲ್ಲಿ ಬಿಡುಗಡೆಯಾದ ಜಾರ್ಜ್ ಲ್ಯೂಕಾಸ್‌ನ ಸ್ಟಾರ್ ವಾರ್ಸ್: ಎ ನ್ಯೂ ಹೋಪ್‌ ಪ್ರಾಯೋಗಿಕ ಮತ್ತು ಚಿಕಣಿ ಪರಿಣಾಮಗಳೊಂದಿಗೆ ಬೆರೆಸಿದ ಸಿಜಿಐ ಅಂಶಗಳ ಮನಮುಟ್ಟುವ ಬಳಕೆಯ ಮೂಲಕ ಚಲನಚಿತ್ರ ನಿರ್ಮಾಣದ ಹೊಸ ಯುಗವನ್ನು ಪ್ರಾರಂಭಿಸಿತು. 80ರ ದಶಕದಲ್ಲಿ ಇದು ಟ್ರಾನ್, ಪ್ರಿಡೇಟರ್, ಸೂಪರ್‌ಮ್ಯಾನ್, ಇ.ಟಿ. ಮತ್ತು ಏಲಿಯನ್ಸ್‌ನಂತಹ ಚಲನಚಿತ್ರಗಳ ಮೇಲೆ ಇದು ಪ್ರಭಾವ ಬೀರಿತು.


ಟರ್ಮಿನೇಟರ್ 2: ಜಡ್ಜ್‌ಮೆಂಟ್ ಡೇ (1991)

ಹೆಚ್ಚಿನ ಚಲನಚಿತ್ರ ಶಾಲೆಗಳಲ್ಲಿ ಒಂದು ಸಾಮಾನ್ಯ ಮಾತು ಇದೆ. ಸ್ಟಾರ್ ವಾರ್ಸ್ ಆಟವನ್ನು ಪ್ರಾರಂಭಿಸಿತು ಮತ್ತು ನಂತರ ಜುರಾಸಿಕ್ ಪಾರ್ಕ್ ಅದನ್ನು ಬದಲಾಯಿಸಿತು. ಇದಕ್ಕೆ ಸರಿಯಾದ ಒಂದು ಚಿತ್ರ ಟರ್ಮಿನೇಟರ್ 2: ಜಡ್ಜ್‌ಮೆಂಟ್ ಡೇ. ಈ ಚಿತ್ರದಲ್ಲಿ ಸಿಜಿಐ ಬಳಕೆಯಲ್ಲಿ ಇದು ಒಂದು ಅತ್ಯಂತ ಪ್ರಭಾವಶಾಲಿ ಚಲನಚಿತ್ರ. ಯಾಕೆಂದರೆ ಇಲ್ಲಿ ಖಳನಾಯಕನನ್ನು ಸಿಜಿಐ ಮೂಲಕ ಸಂಪೂರ್ಣ ಲಿಕ್ವಿಡ್ ಮೆಟಲ್ ಪಾತ್ರದಲ್ಲಿ ರಚಿಸಲಾಗಿದೆ. ಈ ಮೂಲಕ ಇದು ಯಾವುದೇ ಆಕಾರವನ್ನು ಮಾರ್ಫ್ ಮಾಡಬಹುದು ಎಂಬುದನ್ನು ನಿರೂಪಿಸಿತ್ತು.


ಜುರಾಸಿಕ್ ಪಾರ್ಕ್ (1995)

ಜುರಾಸಿಕ್ ಪಾರ್ಕ್ ಒಂದು ಬ್ಲಾಕ್ಬಸ್ಟರ್ ಚಿತ್ರ. ಇದು ಸಿಜಿಐ ಇತಿಹಾಸದಲ್ಲೊಂದು ಮೈಲುಗಲ್ಲು ಸ್ಥಾಪಿಸಿತ್ತು. ಇದರಲ್ಲಿ ಡೈನೋಸಾರ್‌ಗಳು ಕಲಾವಿದರೊಂದಿಗೆ ಸಂವಾದ ನಡೆಸುವುದನ್ನು ಕಾಣಬಹುದು. ಇದರಲ್ಲಿ ಮಾನವನ ಪಕ್ಕದಲ್ಲಿ ಡೈನೋಸಾರ್ ತಲೆಯ ಕ್ಲೋಸ್-ಅಪ್ ಅಗತ್ಯವಿರುವಾಗ ಪ್ರಾಯೋಗಿಕ ಡೈನೋಸಾರ್ ಮಾದರಿಯನ್ನು ಬಳಸಿದ್ದರೆ ದೂರದ ಶಾಟ್ ಗಳಿಗಾಗಿ ಡೈನೋಸಾರ್‌ಗಳ ಸಿಜಿಐ ಆವೃತ್ತಿಗಳನ್ನು ಬಳಸಲಾಗಿತ್ತು.


ದಿ ಮ್ಯಾಟ್ರಿಕ್ಸ್ (1999)

ಪ್ರೇಕ್ಷಕರನ್ನು ಬೆಚ್ಚಿಬೀಳಿಸಿದ ದೃಶ್ಯ ದಿ ಮ್ಯಾಟ್ರಿಕ್ಸ್ ಚಿತ್ರದ ತುಣುಕು ಚಿತ್ರ ನೋಡಿದವರೆಲ್ಲರಿಗೂ ನೆನಪಿರಬಹುದು. 360 ಡಿಗ್ರಿ ಕ್ಯಾಮರಾ ರಿಗ್‌ನ ಬಳಕೆ, ಮಧ್ಯದಲ್ಲಿ ಕೀನು ರೀವ್ಸ್‌ನ ಪ್ರತ್ಯೇಕ ಫೋಟೋಗಳನ್ನು ತೆಗೆಯುವ ಮೂಲಕ ನಟರು ಮತ್ತು ಸಿಜಿಐ ಒಟ್ಟಿಗೆ ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ಈ ಚಿತ್ರ ತೋರಿಸಿಕೊಟ್ಟಿದೆ. ಸಿಜಿಐ ಅನ್ನು ದೋಷರಹಿತವಾಗಿ ಕಾರ್ಯಗತಗೊಳಿಸಿದ ಕೀರ್ತಿ ಈ ಚಿತ್ರ ತಂಡದ್ದು.


ಅವತಾರ್ (2009)

ಅವತಾರ್ ಚಿತ್ರದ ದೃಶ್ಯಾವಳಿಗಳು ಎಲ್ಲರ ಕಣ್ಣ ಮುಂದಿದೆ. ಇದರಲ್ಲಿ ಮೋಷನ್ ಕ್ಯಾಪ್ಚರ್ ಮತ್ತು ಸಿಜಿಐ ಸಂಪೂರ್ಣ ಮಿಶ್ರಣವಾಗಿತ್ತು.ಇದರಲ್ಲಿ ಕ್ಯಾಮರಾಗಳನ್ನು ಬಳಸಿಕೊಂಡು ನಟರ ಹೆಚ್ಚು ವಿವರವಾದ ಫೇಸ್ ಮ್ಯಾಪಿಂಗ್ ತಂತ್ರಜ್ಞಾನವನ್ನು ಬಳಸಲಾಗಿದೆ. ಆ ಡೇಟಾವನ್ನು ಬಳಿಕ ಕಂಪ್ಯೂಟರ್ ರಚಿತ ಅಕ್ಷರ ಮಾದರಿಗಳಿಗೆ ವರ್ಗಾಯಿಸುತ್ತದೆ. ಸಂಪೂರ್ಣ ಮೂರು ಗಂಟೆಗಳ ಚಿತ್ರದಲ್ಲಿ ಶೇ. 60ರಷ್ಟನ್ನು ಸಿಜಿಐ ಮೂಲಕವೇ ಚಿತ್ರಣ ಮಾಡಲಾಗಿದೆ. ಈ ಚಿತ್ರವು ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿದೆ.

ಇನ್ಸೆಪ್ಶನ್ (2010)

ಕ್ರಿಸ್ಟೋಫರ್ ನೋಲನ್ ಅವರ ಇನ್ಸೆಪ್ಶನ್ ನಲ್ಲಿ ಸಿಜಿಐನೊಂದಿಗೆ ಸಂಕೀರ್ಣ ನಿರೂಪಣಾ ರಚನೆಯ ನವೀನ ಅಪ್ಲಿಕೇಶನ್‌ ಅನ್ನು ಬಳಸಲಾಗಿದೆ. ಇದು ಕನಸಿನ ಕುಶಲತೆಯ ಮೂಲಕ ಮಾನವ ಮನಸ್ಸಿನ ಆಳವನ್ನು ಪರಿಶೋಧಿಸುತ್ತದೆ. ವೀಕ್ಷಕರ ವಾಸ್ತವತೆಯ ಗ್ರಹಿಕೆಗೆ ಸವಾಲು ಹಾಕುವ ಈ ಚಿತ್ರ ಪ್ರೇಕ್ಷಕರನ್ನು ತನ್ನ ಕಥೆಯೊಳಗೆ ಲೀನ ವಾಗುವಂತೆ ಮಾಡುತ್ತದೆ.


ಅವತಾರ್: ದಿ ವೇ ಆಫ್ ವಾಟರ್ (2022)

ಜೇಮ್ಸ್ ಕ್ಯಾಮರೂನ್ ಅವರ ಅವತಾರ್‌ನ ಬಹುನಿರೀಕ್ಷಿತ ಮುಂದುವರಿದ ಭಾಗ ದಿ ವೇ ಆಫ್ ವಾಟರ್ ಸಿನಿಮೀಯ ತಂತ್ರಜ್ಞಾನ ಮತ್ತು ಕಥೆ ಹೇಳುವಿಕೆಯನ್ನು ಮೀರಿ ಮತ್ತಷ್ಟು ಅಭಿವೃದ್ಧಿ ಹೊಂದಿದೆ. ಅತ್ಯಾಧುನಿಕ ಸಿಜಿಐ ಮತ್ತು ಕಾರ್ಯಕ್ಷಮತೆ ಕ್ಯಾಪ್ಚರ್ ತಂತ್ರಜ್ಞಾನದ ಪ್ರಭಾವಶಾಲಿ ಪರಾಕಾಷ್ಠೆಯನ್ನು ಈ ಚಿತ್ರದಲ್ಲಿ ಕಾಣಬಹುದು.


ಸಿಜಿಐ ಪ್ರಭಾವ ಹೇಗಿದೆ?

ಇತ್ತೀಚಿನ ವರ್ಷಗಳಲ್ಲಿ ಸ್ಟುಡಿಯೋಗಳು ಮತ್ತು ಚಲನಚಿತ್ರ ನಿರ್ಮಾಪಕರು ಸಿಜಿಐ ಅನ್ನು ದೂರವಿಡುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸಿಜಿಐ ಬಳಕೆಯಿಂದ ನಿಜವಾದ ಅನುಭವ, ಸಂತೃಪ್ತಿ ಕಲಾವಿದನಿಗೆ ಸಿಗುವುದಿಲ್ಲ. ಕಲಾವಿದರೊಬ್ಬರ ಪ್ರಕಾರ ಶೂಟಿಂಗ್ ವೇಳೆ ನಾನು ಜೆಟ್ ಗಳಲ್ಲಿ ಹಾರಲು ಬಯಸಿದರೆ ಸಿಜಿಐನಲ್ಲಿ ಜೆಟ್‌ಗಳೇ ಇರುವುದಿಲ್ಲ ಎನ್ನುತ್ತಾರೆ. ಈ ಹೇಳಿಕೆ ಚಿತ್ರರಂಗದ ಮಾರುಕಟ್ಟೆಯಲ್ಲಿ ಬಹುದೊಡ್ಡ ಪ್ರಭಾವವನ್ನು ಬೀರಿದೆ. ಯಾಕೆಂದರೆ ಚಿತ್ರಗಳಲ್ಲಿ ನೋಡುವ ದೃಶ್ಯಗಳು ಯಾವುದು ನಿಜವಲ್ಲ ಎಂದು ಪ್ರೇಕ್ಷಕರಿಗೆ ಗೊತ್ತಾದರೆ ಅವರು ಚಿತ್ರದ ಮೇಲಿನ ಆಸಕ್ತಿ ಕಳೆದುಕೊಳ್ಳಬಹುದು ಎನ್ನುವ ವಾದವೂ ಇದೆ.

ಇದನ್ನೂ ಓದಿ: Munjya Teaser: ʻಮುಂಜ್ಯಾʼ ಟೀಸರ್‌ ಔಟ್‌; ಇದು ಭಾರತದ ಮೊದಲ CGI ಚಿತ್ರ!

ಸಿಜಿಐನ ಭವಿಷ್ಯವೇನು?

ಸಿಜಿಐ ಭವಿಷ್ಯವು ಸ್ಟುಡಿಯೋದ ಮಿತಿಯಲ್ಲಿರುವುದು ಸ್ಪಷ್ಟ. ಚಿತ್ರೀಕರಣದಲ್ಲಿ ಈಗ ಅದ್ಧೂರಿ ಬಜೆಟ್‌ಗಳ ಯುಗವು ಕ್ಷೀಣಿಸುತ್ತಿದೆ. ಆದರೆ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ನೈಜ ಸಮಯದ ಫೋಟೊರಿಯಾಲಿಸ್ಟಿಕ್ ಹಿನ್ನೆಲೆಗಳನ್ನು ಪ್ರದರ್ಶಿಸುವ ಎಲ್ಇಡಿ ಪರದೆಗಳನ್ನು ಒಳಗೊಂಡಿರುವ ವರ್ಚುವಲ್ ಸೆಟ್ ಗಳ ಆಗಮನವು ಅಭೂತಪೂರ್ವ ಉನ್ನತ ಗುಣಮಟ್ಟದ ಸಿಜಿಐ ಯುಗವನ್ನು ಸೂಚಿಸುತ್ತದೆ.

ದಿ ಬ್ಯಾಟ್‌ಮ್ಯಾನ್, ಡ್ಯೂನ್ ಮತ್ತು ದಿ ಮ್ಯಾಂಡಲೋರಿಯನ್‌ನಂತಹ ಕೃತಿಗಳಲ್ಲಿ ಈ ನವೀನ ತಂತ್ರಜ್ಞಾನದ ಸಾಮರ್ಥ್ಯವನ್ನು ಪ್ರದರ್ಶಿಸುವ ಗ್ರೀಗ್ ಫ್ರೇಸರ್‌ನಂತಹ ಸಿನಿಮಾಟೋಗ್ರಾಫರ್‌ಗಳು ಮುಂಚೂಣಿಯಲ್ಲಿದ್ದಾರೆ.

Continue Reading

ವಿದೇಶ

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

ಇರಾನ್ ಅಧ್ಯಕ್ಷರ ಸಾವು ವಿಶ್ವದಲ್ಲೇ ರಾಜಕೀಯ ನಾಯಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ರಾಜಕೀಯ ನಾಯಕರ ಸಾವು ಇದೇ ಮೊದಲಲ್ಲ. ವಿಶ್ವದ ಹತ್ತು ಪ್ರಮುಖ ನಾಯಕರು ಈ ರೀತಿಯ ದುರಂತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Air Crashes
Koo

ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ (Ebrahim Raisi) ಅವರು ಭಾನುವಾರ ರಾತ್ರಿ ದೇಶದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ಸಾವನ್ನಪ್ಪಿದ್ದಾರೆ. ರೈಸಿ ಅವರ ದಣಿವರಿಯದ ಸ್ಫೂರ್ತಿಯ ಸೇವೆಯ ಮಾರ್ಗದಲ್ಲಿ ಮುಂದುವರಿಯುವುದಾಗಿ ಇರಾನ್‌ ಆಡಳಿತ ರಾಷ್ಟ್ರದ ಜನರಿಗೆ ಭರವಸೆ ನೀಡಿದೆ. ವಿಮಾನ ದುರಂತಗಳಲ್ಲಿ ರಾಜಕೀಯ ನಾಯಕರು ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ರಾಷ್ಟ್ರಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಕುರಿತ ಹಿನ್ನೋಟ ಇಲ್ಲಿದೆ.


ಸ್ವೀಡನ್ ಪ್ರಧಾನಿ ಅರ್ವಿಡ್ ಲಿಂಡ್‌ಮನ್ (1936)

ಸ್ವೀಡನ್‌ನ ಹಿಂದಿನ ಅಡ್ಮಿರಲ್ ಮತ್ತು ಎರಡು ಬಾರಿ ಸ್ವೀಡನ್‌ನ ಪ್ರಧಾನಮಂತ್ರಿ ಆಗಿದ್ದ ಸಾಲೋಮನ್ ಅರ್ವಿಡ್ ಅಚಾಟೆಸ್ ಲಿಂಡ್‌ಮನ್ ಪ್ರಭಾವಿ ಸಂಪ್ರದಾಯವಾದಿ ರಾಜಕಾರಣಿಯಾಗಿದ್ದರು. 1936ರ ಡಿಸೆಂಬರ್ 9ರಂದು ಲಿಂಡ್‌ಮನ್ ಅವರು ಪ್ರಯಾಣಿಸುತ್ತಿದ್ದ ಡಗ್ಲಾಸ್ ಡಿಸಿ-2 ಯುನೈಟೆಡ್ ಕಿಂಗ್‌ಡಂನ ಕ್ರೊಯ್ಡಾನ್ ವಿಮಾನವು ನಿಲ್ದಾಣದ ಬಳಿ ದಟ್ಟವಾದ ಮಂಜಿನಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಮನೆಗಳಿಗೆ ಅಪ್ಪಳಿಸಿದಾಗ ಮೃತಪಟ್ಟರು.

ಫಿಲಿಪೈನ್ಸ್ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ (1957)

ಫಿಲಿಪೈನ್ಸ್‌ನ ಏಳನೇ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರು ತಮ್ಮ ಬಲವಾದ ಭ್ರಷ್ಟಾಚಾರ ವಿರೋಧಿ ನಿಲುವು ಮತ್ತು ಜನಪ್ರಿಯ ಕಾರ್ಯಕ್ಕೆ ಹೆಸರುವಾಸಿಯಾಗಿದ್ದರು. ಅವರ ಅಧ್ಯಕ್ಷತೆಯು 1957ರ ಮಾರ್ಚ್ 17ರಂದು ಥಟ್ಟನೆ ಕೊನೆಗೊಂಡಿತು. “ಮೌಂಟ್ ಪಿನಾಟುಬೊ” ಎಂದು ಕರೆಯಲ್ಪಡುವ ಅವರ ಸಿ-47 ವಿಮಾನವು ಸೆಬು ನಗರದ ಮನುಂಗಲ್ ಪರ್ವತಕ್ಕೆ ಅಪ್ಪಳಿಸಿತು. ಆಗ ಮ್ಯಾಗ್ಸೆಸೆ ಮೃತಪಟ್ಟರು. 25 ಪ್ರಯಾಣಿಕರ ಪೈಕಿ ಒಬ್ಬರು ಮಾತ್ರ ಬದುಕುಳಿದಿದ್ದರು.


ಬ್ರೆಜಿಲ್ ಅಧ್ಯಕ್ಷ ನೆರೆಯು ರಾಮೋಸ್ (1958)

ಬ್ರೆಜಿಲ್‌ನ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನೆರೆಯು ರಾಮೋಸ್ ಅವರು 1958ರ ಜೂನ್ 16ರಂದು ನಿಧನರಾದರು. ರಾಮೋಸ್ ಅವರು ಕ್ರೂಝೈರೊ ಡೊ ಸುಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪರಾನಾ ರಾಜ್ಯದ ಕುರಿಟಿಬಾ ಅಫೊನ್ಸೊ ಪೆನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟರು.

ಇರಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಆರಿಫ್ (1966)

ಇರಾಕ್‌ನ ಎರಡನೇ ಅಧ್ಯಕ್ಷರಾದ ಅಬ್ದುಲ್ ಸಲಾಂ ಆರಿಫ್ ರಾಜಪ್ರಭುತ್ವವನ್ನು ಉರುಳಿಸಿದ 1958ರ ಕ್ರಾಂತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 1966ರ ಏಪ್ರಿಲ್ 13ರಂದು ಆರಿಫ್ ಅವರ ಇರಾಕಿ ಏರ್ ಫೋರ್ಸ್ ವಿಮಾನ, ಡಿ ಹ್ಯಾವಿಲ್ಯಾಂಡ್ ಡಿಹೆಚ್ 104 ಡೋವ್, ಬಸ್ರಾ ಬಳಿ ಅಪಘಾತಕ್ಕೀಡಾದಾಗ ನಿಧನರಾದರು. ಅವರ ಸಹೋದರ ಅಬ್ದುಲ್ ರಹಮಾನ್ ಆರಿಫ್ ಅವರ ಅನಂತರ ಅಧ್ಯಕ್ಷರಾದರು.


ಬ್ರೆಜಿಲ್ ಅಧ್ಯಕ್ಷ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ (1967)

ಬ್ರೆಜಿಲ್‌ನ 26ನೇ ಅಧ್ಯಕ್ಷ ಮತ್ತು ಮಾಜಿ ಮಿಲಿಟರಿ ಸರ್ವಾಧಿಕಾರದ ಪ್ರಮುಖ ವ್ಯಕ್ತಿಯಾಗಿದ್ದ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ 1967ರ ಜುಲೈ 18ರಂದು ನಿಧನರಾದರು. ಅವರ ಅಧ್ಯಕ್ಷೀಯ ಅವಧಿ ಮುಗಿದ ಸ್ವಲ್ಪ ಸಮಯದ ಅನಂತರ ಕ್ಯಾಸ್ಟೆಲೊ ಬ್ರಾಂಕೋ ಅವರ ಪೈಪರ್ ಪಿಎ -23 ಅಜ್ಟೆಕ್ ವಿಮಾನ ಬ್ರೆಜಿಲಿಯನ್ ವಾಯುಪಡೆ ವಿಮಾನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು. ಅವರ ಸಾವು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇಂದಿರಾ ಗಾಂಧಿ ಮಗ ಸಂಜಯ್ ಗಾಂಧಿ (1980)

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ 1980ರ ಜೂನ್ 23ರಂದು ವಿಮಾನ ಅಪಘಾತದಲ್ಲಿ ನಿಧನರಾದರು. ದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ತಾವು ಚಲಾಯಿಸುತ್ತಿದ್ದ ವಿಮಾನದ ನಿಯಂತ್ರಣವನ್ನು ಕಳೆದುಕೊಂಡು ದುರಂತ ಸಾವು ಕಂಡರು.


ಲೆಬನಾನ್ ಪ್ರಧಾನಿ ರಶೀದ್ ಕರಾಮಿ (1987)

ಲೆಬನಾನ್‌ನ ಅತಿ ಹೆಚ್ಚು ಬಾರಿ ಚುನಾಯಿತರಾದ ಪ್ರಧಾನಮಂತ್ರಿ ರಶೀದ್ ಕರಾಮಿ ಅವರು ಲೆಬನಾನಿನ ಅಂತರ್ಯುದ್ಧದ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. 1987ರ ಜೂನ್ 1ರಂದು, ಬೈರುತ್‌ಗೆ ಹೋಗುವ ಮಾರ್ಗದಲ್ಲಿ ಅವರ ಹೆಲಿಕಾಪ್ಟರ್‌ನಲ್ಲಿ ಬಾಂಬ್ ಸ್ಫೋಟಗೊಂಡು ಕರಾಮಿ ಕೊಲ್ಲಲ್ಪಟ್ಟರು.

ಪಾಕಿಸ್ತಾನದ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ (1988)

ಪಾಕಿಸ್ತಾನದ ಆರನೇ ಅಧ್ಯಕ್ಷರಾದ ಜನರಲ್ ಮುಹಮ್ಮದ್ ಜಿಯಾ-ಉಲ್-ಹಕ್ ಅವರು 1988ರ ಆಗಸ್ಟ್ 17ರಂದು ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಸಿ-130 ಹರ್ಕ್ಯುಲಸ್ ವಿಮಾನವು ಬಹವಾಲ್‌ಪುರದಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಅಪಘಾತಕ್ಕೀಡಾಯಿತು. ಅಪಘಾತದ ಕಾರಣವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?


ಕಾಂಗ್ರೆಸ್‌ ನಾಯಕ ಮಾಧವರಾವ್ ಸಿಂಧಿಯಾ (2001)

ಮಾಧವರಾವ್ ಸಿಂಧಿಯಾ ಭಾರತದ ಪ್ರಮುಖ ರಾಜಕಾರಣಿ ಮತ್ತು ಕಾಂಗ್ರೆಸ್ ನಾಯಕರಾಗಿದ್ದರು. 2001ರ ಸೆಪ್ಟೆಂಬರ್ 30ರಂದು ವಿಮಾನ ಅಪಘಾತದಲ್ಲಿ ದಾರುಣ ಅಂತ್ಯ ಕಂಡರು. ಉತ್ತರ ಪ್ರದೇಶದ ಮೈನ್‌ಪುರಿ ಬಳಿ ಅವರ ಖಾಸಗಿ ಬೀಚ್‌ಕ್ರಾಫ್ಟ್ ಕಿಂಗ್ ಏರ್ ಸಿ 90 ಗಾಳಿಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿತ್ತು.

ಚಿಲಿಯ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ (2024)

ಚಿಲಿಯ ಮಾಜಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಮೆರಾ ಅವರು ಫೆಬ್ರವರಿ 2024ರಲ್ಲಿ ನಿಧನರಾದರು. ಪಿನೆರಾ ಅವರ ಹೆಲಿಕಾಪ್ಟರ್ ದಕ್ಷಿಣ ಚಿಲಿಯ ಸರೋವರಕ್ಕೆ ಅಪ್ಪಳಿಸಿತು. ಈ ದುರಂತದಲ್ಲಿ ಅವರು ಪ್ರಾಣ ಕಳೆದುಕೊಂಡರು. ಅವರು ಸತತ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ್‌ ರೆಡ್ಡಿ ಅವರೂ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Continue Reading
Advertisement
Phalodi Satta Bazar
ದೇಶ12 mins ago

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Sara Tendulkar
ಕ್ರಿಕೆಟ್19 mins ago

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Liquor ban
ಕರ್ನಾಟಕ44 mins ago

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Narendra Modi
ದೇಶ46 mins ago

Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

HD Kumaraswamy slams CM Siddaramaiah about devegowda statement
ರಾಜಕೀಯ52 mins ago

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

Former DGP Arrested
ಕ್ರೈಂ1 hour ago

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಕ್ರೈಂ1 hour ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

CSK vs RC
ಕ್ರೀಡೆ1 hour ago

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

BSNL network problem in Hosanagara The lawyer decided to climb the tower and protest
ಕರ್ನಾಟಕ1 hour ago

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

union minister pralhad joshi spoke in North East Graduate Constituency Electoral Convention at ballari
ಕರ್ನಾಟಕ1 hour ago

MLC Election: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ; ಸಚಿವ ಪ್ರಲ್ಹಾದ್‌ ಜೋಶಿ ವ್ಯಾಖ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌