ಪರಿಷ್ಕೃತ ಶಾಲಾ ಪಠ್ಯವನ್ನು ಕೈಬಿಡಲು ಸಾಣೇಹಳ್ಳಿ ಶ್ರೀ ಆಗ್ರಹ - Vistara News

ಬೆಂಗಳೂರು

ಪರಿಷ್ಕೃತ ಶಾಲಾ ಪಠ್ಯವನ್ನು ಕೈಬಿಡಲು ಸಾಣೇಹಳ್ಳಿ ಶ್ರೀ ಆಗ್ರಹ

ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಪಠ್ಯಪುಸ್ತಕದಲ್ಲಿ ಬರೆಯಲಾಗಿದೆ ಎಂದು ಸಾಣೇಹಳ್ಳಿಯ ತರಳಬಾಳು ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿರುವ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯನ್ನು ಕೈಬಿಡಬೇಕು ಎಂದು ಆರೋಪಿಸಿ ಸಾಣೇಹಳ್ಳಿಯ ತರಳಬಾಳು ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೆ ಪಠ್ಯಪುಸ್ತಕ ಮತ್ತು ನಾಡಗೀತೆಗೆ ಅವಮಾನ ಕುರಿತಂತೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಯವರು ಸಿಎಂಗೆ ಪತ್ರ ಬರೆದಿದ್ದರು. ಈ ಕುರಿತು ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಅದರ ಬೆನ್ನಲ್ಲೆ ಇದೀಗ ಮತ್ತೊಬ್ಬ ಸ್ವಾಮೀಜಿ ಸರ್ಕಾರಕ್ಕೆ ಪತ್ರ ಬರೆದಿರುವುದು ಸರ್ಕಾರಕ್ಕೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

ಈಗಾಗಲೇ ಶಾಲೆಗಳು ಪ್ರಾರಂಭವಾಗಿ 15 ದಿನಗಳಾಗಿವೆ. ಆದರೂ ಪಠ್ಯಪುಸ್ತಕಗಳಿಲ್ಲ ಎಂದರೆ ಶಿಕ್ಷಕರು ಏನು ಪಾಠ ಮಾಡಬೇಕು ? ಈಗಿನ ಪಠ್ಯಸಮಿತಿಯಲ್ಲಿರುವವರು ಒಂದು ವರ್ಗಕ್ಕೆ ಸೇರಿದವರೆಂಬುದು ಮೇಲ್ನೋಟಕ್ಕೆ ಎದ್ದು ತೋರುವುದು. ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಪಠ್ಯರಚನಾ ಸಮಿತಿಯಲ್ಲಿರಬೇಕಾದ್ದು ಅಪೇಕ್ಷಣೀಯ. ವಾಟ್ಸಾಪ್‌ನಲ್ಲಿ ನಾವು ನೋಡಿರುವಂತೆ 9 ನೆಯ ತರಗತಿಯ ‘ ಸಮಾಜ ವಿಜ್ಞಾನ ‘ ಪಠ್ಯಪುಸ್ತಕ ( ಪರಿಷ್ಕೃತ -2022 ) ಭಾಗ -1 ರಲ್ಲಿ ಬಸವಣ್ಣನವರನ್ನು ಕುರಿತ ಪಾಠವಿದೆ.

ಕಳೆದ ವರ್ಷವೂ ಈ ಪಾಠವಿತ್ತು ಆದರೆ ಅದರಲ್ಲಿನ ಪ್ರಮುಖ ಸಾಲುಗಳನ್ನು ತೆಗೆದು ತಮಗೆ ಬೇಕಾದವುಗಳನ್ನು ಸೇರಿಸಿದ್ದಾರೆ. ಕಳೆದ ವರ್ಷದ ಪಾಠದಲ್ಲಿ ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. “ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು.

ಬಸವಣ್ಣ ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಪಠ್ಯಪುಸ್ತಕದಲ್ಲಿ ರಚನೆ ಮಾಡಲಾಗಿದೆ. ಈ ಬದಲಾವಣೆ ನಿಜಕ್ಕೂ ಖಂಡನಾರ್ಹ.

ಬಸವೇಶ್ವನವರ ಮಾತುಗಳು
ಬಸವೇಶ್ವನವರ ಮಾತುಗಳು

ಬಸವಣ್ಣನವರ ಶುದ್ಧ , ಪಾರದರ್ಶಕ ಬದುಕಿಗೆ ಕಲಂಕ ತಂದಂತೆ. ‘ ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು ‘ ಎನ್ನುವುದು ಶುದ್ಧ ಸುಳ್ಳು , ಅವರು ‘ ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು ‘ ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ| ಪಠ್ಯದಲ್ಲಿ ಬ್ರಾಹ್ಮಣೀಕರಣ ಮಾಡುತ್ತಿಲ್ಲ, ಇತಿಹಾಸ ಹಾಗೂ ರಾಷ್ಟ್ರೀಯತೆ ಇದೆ ಎಂದ ಸಚಿವ ನಾಗೇಶ್‌

ಸರಿಯಾದ ಇತಿಹಾಸ ಹೇಳಬೇಕು: ಯದುವೀರ್‌

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಲೆಫ್ಟು ಬೇಡ, ರೈಟೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಭೋದಿಸಿ. ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯ ಅಳವಡಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ| ಪಠ್ಯಪುಸ್ತಕ ವಿಚಾರದಲ್ಲಿ ಸಿದ್ದರಾಮಯ್ಯ ಮತಬ್ಯಾಂಕ್ ರಾಜಕೀಯ: ಎಂ.ಜಿ.ಮಹೇಶ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Prajwal Revanna Case: ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾ ಮಾಡಿದೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಇದರಿಂದ ಸದ್ಯ ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ.

ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದರು. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

prajwal revanna case 4th


ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

Continue Reading

ಬೆಂಗಳೂರು

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bengaluru News: ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮನ್ನೋತ್ ಅಭಿಪ್ರಾಯಪಟ್ಟರು.

VISTARANEWS.COM


on

actor producer and Cow lover Mahendra Munnoth donated 51 lakh rupees to cow shelter
Koo

ಬೆಂಗಳೂರು: ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ತಾಯಿಯಂತೆ ನಮ್ಮನ್ನು ಪೊರೆಯುವ ಗೋಮಾತೆಯ ಋಣವನ್ನು ತೀರಿಸಲು ಖಂಡಿತಾ ಸಾಧ್ಯ ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮುನ್ನೋತ್ ತಿಳಿಸಿದರು.

ನಗರದ ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಹಮ್ಮಿಕೊಂಡಿದ್ದ ಗೋಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಅಲ್ಲದೇ ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು. ಅಂತಹ ಗೋವನ್ನು ಉಳಿಸಿದರೆ ಕೇವಲ ಗ್ರಾಮ ಮಾತ್ರವಲ್ಲ ಇಡೀ ದೇಶ ಸಮೃದ್ಧಿ, ಸಂಪದ್ಭರಿತ ಭೂಮಿಯಾಗುತ್ತದೆ. ಈ ನಂಬಿಕೆಯನ್ನು ಪ್ರತಿಯೊಬ್ಬ ಭಾರತೀಯನೂ ಅರ್ಥೈಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

ಬೆಂಗಳೂರಿನ ವಿಜಯನಗರ ಮಾರುತಿ ಮೆಡಿಕಲ್ಸ್‌ನ, ಗೋಸೇವಕ ಮಹೇಂದ್ರ ಮುನ್ನೋತ್, ಗೋಶಾಲೆಗಳ ಉಳಿವಿಗಾಗಿ ಮತ್ತು ಗೋವುಗಳ ಸಂರಕ್ಷಣೆಗಾಗಿ ದೇಣಿಗೆ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ತಮ್ಮ ವ್ಯಾಪಾರದಲ್ಲಿ ಸಂಗ್ರಹಿಸಿದ ಬಹುಪಾಲು ಹಣವನ್ನು ಗೋವುಗಳ ರಕ್ಷಣೆಗೆ, ಪಾಲನೆಗಾಗಿ ವ್ಯಯಿಸುತ್ತಿರುವ ಮಹೇಂದ್ರ ಮನ್ನೋತ್‌ ಅವರ ಕುಟುಂಬ. ಕಳೆದ ಹದಿನಾಲ್ಕು ವರ್ಷಗಳಿಂದ ಪ್ರತೀ ವರ್ಷ ಗೋಶಾಲೆಗಳಿಗೆ ಲಕ್ಷಾಂತರ ರೂಪಾಯಿಗಳನ್ನು ದೇಣಿಗೆ ನೀಡುತ್ತಾರೆ. ಈ ವರ್ಷ ಅವರು ನಾಡಿನ ವಿವಿಧ ಗೋಶಾಲೆಗಳಿಗೆ 51 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

ನಾಡಿನಲ್ಲಿ ಅಕ್ರಮವಾಗಿ ಸಾಗಿಸಲ್ಪಡುವ ಗೋವುಗಳನ್ನು ಕಾನೂನಾತ್ಮಕವಾಗಿ ರಕ್ಷಿಸಿದ ನಂತರ ಆ ಗೋವುಗಳನ್ನು ಈ ಗೋಶಾಲೆಗಳಿಗೆ ತಂದು ಬಿಡಲಾಗುತ್ತದೆ. ಅಂತಹ ಗೋವುಗಳನ್ನು ಪೊರೆಯಲು ಗೋಶಾಲೆಗಳಿಗೆ ಶಕ್ತಿಯನ್ನು ತುಂಬವ ಕೆಲಸವನ್ನು ಮಹೇಂದ್ರ ಮುನ್ನೋತ್‌ ಅವರು ತಮ್ಮ ಮಾತಾಪಿತೃಗಳ ಪುಣ್ಯಸ್ಮರಣೆಯ ಹೆಸರಿನಲ್ಲಿ ಈ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ.

ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ 20ಕ್ಕೂ ಹೆಚ್ಚು ಗೋಶಾಲೆಯ ಮುಖ್ಯಸ್ಥರಿಗೆ ಚೆಕ್‌ ರೂಪದಲ್ಲಿ ಹಣವನ್ನು ನೀಡಲಾಯಿತು.

ಇದನ್ನೂ ಓದಿ: PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

ಈ ವೇಳೆ ಮಹೇಂದ್ರ ಮುನ್ನೋತ್‌ ಅವರ ಪತ್ನಿ ಸುರಕ್ಷಾ ಹಾಗೂ ಕುಟುಂಬದ ಸದಸ್ಯರು, ಗೋಶಾಲೆಯಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರೊಂದಿಗೆ ಗೋಪೂಜೆಯನ್ನೂ ಮಾಡಲಾಯಿತು.

Continue Reading

ಕರ್ನಾಟಕ

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Bengaluru News: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ “ಭಾವರಾಮಾಯಣ ರಾಮಾವತರಣ” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್‌. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.

VISTARANEWS.COM


on

Bhaavaramayana Ramavatarana book release programme on June 29 in Bengaluru
Koo

ಬೆಂಗಳೂರು: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ ʼಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ (Book Release) ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್‌. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕಾರ್ಯಕ್ರಮದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾರು ಹಾಗೂ ಶ್ರೀಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮತ್ತು ಪಿ.ಇ.ಎಸ್‌. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎಂ.ಆರ್‌. ದೊರೆಸ್ವಾಮಿ ಉಪಸ್ಥಿತರಿರುವರು.

ಇದನ್ನೂ ಓದಿ: Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

ಸಂಜೆ 5 ಗಂಟೆಗೆ ಕಲಾಸ್ನೇಹಿ ಹಾಗೂ ನರ್ತನಯೋಗ ಸಂಸ್ಥೆಯ ನಿರ್ದೇಶಕಿ ಸ್ನೇಹಾ ನಾರಾಯಣ ಮತ್ತು ಯೋಗೇಶ್‌ ಕುಮಾರ್‌ ಅವರಿಂದ ಭರತನಾಟ್ಯ, ಸಂಜೆ 5.30 ಕ್ಕೆ ನೂರಕ್ಕೂ ಹೆಚ್ಚು ಗಣ್ಯರಿಂದ ಪುಸ್ತಕ ಲೋಕಾರ್ಪಣೆ, ಶ್ರೀಸಂಸ್ಥಾನದವರೊಂದಿಗೆ ಸಂವಾದ, ಎನ್. ರವಿಶಂಕರ್‌ ಸಂವಾದಕರಾಗಿ ಪಾಲ್ಗೊಳ್ಳುವರು. ಮಂತ್ರಾಲಯ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮ ಜರುಗಲಿದೆ.

Continue Reading

ಕ್ರೈಂ

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Honey Trap: ಹನಿಟ್ರ್ಯಾಪ್ ಮಾಡಿ ಕೋಟ್ಯಾಂತರ ರೂ. ಹಣಕ್ಕೆ ಬೆಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವವಿಧೆಡೆ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಬೆಂಗಳೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

VISTARANEWS.COM


on

honey trap harish gowda
ಆರೋಪಿ ಸಂತೋಷ್‌, ಶಾಸಕ ಹರೀಶ್‌ ಗೌಡ
Koo

ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ ಗೌಡ (MLA Harish Gowda) ಸೇರಿದಂತೆ ಹಲವು ವಿಐಪಿಗಳಿಗೆ ಹನಿಟ್ರ್ಯಾಪ್‌ (Honey Trap) ಗಾಳ ಹಾಕಿದ್ದ ಖತರ್‌ನಾಕ್‌ ಗ್ಯಾಂಗನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಇವರು ವಿಶಿಷ್ಟ ವಿಧಾನ ಅನುಸರಿಸಿ, ಹೋಟೆಲ್‌ಗಳ ರೂಮಿನಲ್ಲಿ ಉಳಿದುಕೊಳ್ಳುತ್ತಿದ್ದ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ (Blackmail) ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದ ಶಾಸಕರು, ಸಚಿವರು, ಉದ್ಯಮಿಗಳು, ವಿಶ್ವ ವಿದ್ಯಾಲಯಗಳ ಕುಲಪತಿಗಳು ಸೇರಿ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ, ನಂತರ ಅವರದ್ದೇ ವಿಡಿಯೋ ಎನ್ನುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ಈ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ.

ಸಮಾಜದ ಗಣ್ಯ ವ್ಯಕ್ತಿಗಳಿಗೆ ಹನಿಟ್ರಾಪ್ ಮೂಲಕ ಬ್ಲಾಕ್ ಮೇಲ್ ಮಾಡ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೀಗೆ, ಹನಿಟ್ರ್ಯಾಪ್ ಮಾಡಿ ಕೋಟ್ಯಾಂತರ ರೂ. ಹಣಕ್ಕೆ ಬೆಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವವಿಧೆಡೆ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಬೆಂಗಳೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕರು ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ.

ವಿಶ್ವವಿದ್ಯಾಲಯದ ಉಪಕುಲಪತಿಗಳೊಬ್ಬರು ಹೀಗೆ ಬ್ಲಾಕ್‌ಮೇಲ್‌ಗೆ ಒಳಗಾಗಿದ್ದು, ಈ ಬಗ್ಗೆ ಶಾಸಕ ಶಾಸಕ ಹರೀಶ್ ಗೌಡ ಅವರಿಗೆ ಮಾಹಿತಿ ನೀಡಿದ್ದರು. ಉಪಕುಲಪತಿಗಳ ಬೆಂಬಲಕ್ಕೆ ನಿಂತ ಶಾಸಕ ಹರೀಶ್‌ ಗೌಡ, ದೂರು ನೀಡಿ ಧೈರ್ಯ ಹೇಳಿದ್ದರು. ಆರೋಪಿಗಳ ಗ್ಯಾಂಗ್ ಪುನಃ ಶಾಸಕ ಹರೀಶ್‌ ಗೌಡ ವಿರುದ್ಧವೇ ಸುಳ್ಳು ಹನಿಟ್ರ್ಯಾಪ್ ಮಾದರಿ ವಿಡಿಯೋ ಸೃಜಿಸಿ ಬೆದರಿಕೆ ಹಾಕಲು ಮುಂದಾಗಿದೆ. ಈ ಪ್ರಕರಣ ಬೇಧಿಸಿದ ಸಿಸಿಬಿ ಪೊಲೀಸರಿಗೆ ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎಂಬ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಗ್ಯಾಂಗ್‌ನಲ್ಲಿ ಒರ್ವ ಯುವತಿ ಕೂಡ ಭಾಗಿಯಾಗಿದ್ದಾಳೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಆರೋಪಿಗಳು ಪ್ರಭಾವಿಗಳ ಸಂಪರ್ಕ ಮಾಡಿ ಅವರನ್ನು ಫಾಲೋ ಮಾಡುತ್ತಿದ್ದರು. ಬಳಿಕ ವಿಐಪಿಗಳನ್ನು ಭೇಟಿ ಮಾಡಿ ನಂಬರ್ ಪಡೆದುಕೊಳ್ಳುತ್ತಿದ್ದರು. ನಂತರ, ವಿಐಪಿಗಳ ಚಲನವಲನದ ಮೇಲೆ ಹದ್ದಿನ ಕಣ್ಣಿಡುತ್ತಿದ್ದ ಆರೋಪಿಗಳು ವಿಐಪಿಗಳು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್‌ಗಳ ರೂಮು ಬುಕಿಂಗ್, ಚೆಕ್-ಇನ್ ಹಾಗೂ ಚೆಕ್-ಔಟ್ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ವಿಐಪಿಗಳು ಹೋಟೆಲ್‌ನ ರೂಮು ಖಾಲಿ ಮಾಡಿಕೊಂಡು ಹೋದ ನಂತರ ಅವರು ಉಳಿದುಕೊಂಡಿದ್ದ ರೂಮ್ ಅನ್ನು ಬಾಡಿಗೆ ಪಡೆದು ಈ ಆರೋಪಿಗಳು ಅಲ್ಲಿ ಉಳಿದುಕೊಳ್ಳುತ್ತಿದ್ದರು.

ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಯುವತಿಯನ್ನು ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿರುವ ರೀತಿಯಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ಬಳಿಕ ಆ ರೂಮಿನಲ್ಲಿ ಉಳಿದುಕೊಂಡಿದ್ದ ವಿಐಪಿ ಈ ಯುವತಿಯನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ಕ್ರಿಯೇಟ್ ಮಾಡಿ ಅದನ್ನು ವಿಐಪಿಗಳಿಗೆ ಕಳಿಸುತ್ತಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಾಗೂ ಪೊಲೀಸರಿಗೆ ಕೊಡುವುದಾಗಿ ಬೆದರಿಕೆ ಒಡ್ಡಿ ಹಣ ಪೀಕುತ್ತಿದ್ದರು.

ಇದನ್ನೂ ಓದಿ: Honey trap : ಉದ್ಯಮಿಯ ಬೆತ್ತಲೆ ವಿಡಿಯೊ ತೆಗೆದು Honey trap; ಮುಸ್ಲಿಂ ಮಹಿಳೆ ಸಹಿತ ಮೂವರ ಸೆರೆ

Continue Reading
Advertisement
Viral Video
Latest6 mins ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ14 mins ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest16 mins ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Arvind Kejriwal
ದೇಶ17 mins ago

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Actor Darshan Full aggressive mode while he drunk
ಸ್ಯಾಂಡಲ್ ವುಡ್22 mins ago

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

5G Spectrum
ವಾಣಿಜ್ಯ23 mins ago

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Rain News
ಕರ್ನಾಟಕ26 mins ago

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Money Guide
ಮನಿ-ಗೈಡ್39 mins ago

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Prajwal revanna Case
ಕರ್ನಾಟಕ50 mins ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್55 mins ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌