ಬಿಜೆಪಿ ಮುಸ್ಲಿಂ ವಿರೋಧಿ ಎಂಬ ತಪ್ಪು ಮಾಹಿತಿ ದೂರ ಮಾಡಿ: ಜಮಾಲ್‌ ಸಿದ್ದಿಕಿ - Vistara News

ಕರ್ನಾಟಕ

ಬಿಜೆಪಿ ಮುಸ್ಲಿಂ ವಿರೋಧಿ ಎಂಬ ತಪ್ಪು ಮಾಹಿತಿ ದೂರ ಮಾಡಿ: ಜಮಾಲ್‌ ಸಿದ್ದಿಕಿ

`ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್’ ಘೋಷಣೆಯಂತೆ ಕೇಂದ್ರ ಸರಕಾರ ಕೆಲಸ ಮಾಡುತ್ತಿದೆ. ನಾವು ಸಮಾಜದ ಎಲ್ಲರಿಗೂ ಯೋಜನೆಗಳ ಪ್ರಯೋಜನ ತಲುಪುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್‌ ಸಿದ್ದಿಕಿ ಹೇಳಿದ್ದಾರೆ.

VISTARANEWS.COM


on

ಜಮಾಲ್ ಸಿದ್ದಿಕಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು:ʻ ʻʻಬಿಜೆಪಿ ಸರ್ವಸ್ಪರ್ಶಿ, ಸರ್ವವ್ಯಾಪಿ ಮತ್ತು ಸರ್ವರ ಅಭಿವೃದ್ಧಿಗೆ ಯತ್ನಿಸುವ ಪಕ್ಷ ಎಂದು ತಿಳಿಸುವ ಮೂಲಕ ಅದು ಅಲ್ಪಸಂಖ್ಯಾತರ ವಿರೋಧಿ ಎಂಬ ತಪ್ಪು ಮಾಹಿತಿಯನ್ನು ದೂರ ಮಾಡಲು ಮೋರ್ಚಾ ಯತ್ನಿಸಬೇಕು,ʼʼ ಎಂದು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಹೇಳಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಶನಿವಾರ ನಡೆದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಮಾಡಿದ ಉತ್ತಮ ಕಾರ್ಯಗಳಿಂದಾಗಿ ಬಿಜೆಪಿ ಇನ್ನೂ 50 ವರ್ಷ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ʻʻʻಅಲ್ಪಸಂಖ್ಯಾತರು ಸೇರಿದಂತೆ ಎಲ್ಲರನ್ನು ಸಮಾನವಾಗಿ ನೋಡುವ ಬಿಜೆಪಿ ಸರಕಾರ ಕೇಂದ್ರದ್ದು. ಕ್ರಿಶ್ಚಿಯನ್, ಮುಸ್ಲಿಮರು ಹೆಚ್ಚು ಸಂಖ್ಯೆಯಲ್ಲಿ ಇರುವ ಕಡೆ ವಿದ್ಯುತ್, ಮನೆ ಮತ್ತು ರಸ್ತೆ ಸಂಪರ್ಕ ನೀಡುವುದಿಲ್ಲ ಎಂಬ ಮಾತು ಯಾವತ್ತೂ ಬಂದಿಲ್ಲ. ರೈತರಿಗೆ ನೆರವಾಗುವ ಕಿಸಾನ್ ಸಮ್ಮಾನ್ ಯೋಜನೆಯನ್ನು ಬಿಜೆಪಿ ಸರಕಾರ ಜಾರಿಗೊಳಿಸಿದೆ. ಯಾವುದೇ ಯೋಜನೆಗಳಲ್ಲಿ ಭೇದ ಭಾವ ಮಾಡಿಲ್ಲ. “ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್” ಘೋಷಣೆಯಂತೆ ಕೇಂದ್ರ ಸರಕಾರ ಕೆಲಸ ಮಾಡುತ್ತಿದೆ. ನಾವು ಸಮಾಜದ ಎಲ್ಲರಿಗೂ ಯೋಜನೆಗಳ ಪ್ರಯೋಜನ ತಲುಪುವಂತೆ ನೋಡಿಕೊಳ್ಳಬೇಕು,ʼʼ ಎಂದರು.

ರಾಜ್ಯ ಅಧ್ಯಕ್ಷ ಸೈಯದ್ ಸಲಾಂ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ ಜಮಾಲ್‌ ಸಿದ್ದಿಕಿ, ಮುಂದೆ ಅವರು ರಾಷ್ಟ್ರೀಯ ಅಧ್ಯಕ್ಷ ಆಗಲಿ ಎಂದು ಆಶಿಸಿದರು. ಬಿಜೆಪಿ ಇಂಥ ಕನಸುಗಳಿಗೆ ಅವಕಾಶ ಮಾಡಿಕೊಡುತ್ತದೆ. ಅದು ನನಸಾಗಲೂ ಅವಕಾಶವಿದೆ. ಆದರೆ, ಕುಟುಂಬ ರಾಜಕಾರಣ ಮಾಡುವ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ಇಂಥ ಕನಸು ಕಾಣಲು ಸಾಧ್ಯವಿಲ್ಲ ಎಂದು ಅವರು ನುಡಿದರು.

ಜಾಲ ತಾಣಗಳನ್ನು ಬಳಸಿಕೊಳ್ಳಿ

ʻʻಪಕ್ಷವನ್ನು ಬಲಪಡಿಸಲು ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಬೇಕು. ವಾಟ್ಸಪ್, ಫೇಸ್ ಬುಕ್, ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣ, ಮುದ್ರಣ ಮಾಧ್ಯಮವನ್ನು ಪ್ರಚಾರಕಾರ್ಯಕ್ಕೆ ಬಳಸಿಕೊಳ್ಳಿʼʼ ಎಂದು ಅವರು ಮನವಿ ಮಾಡಿದರು. ಮತದಾರರನ್ನು ತಲುಪಲು ಮತ್ತು ಮುಖಂಡರಿಗೆ ವಿಷಯ ತಿಳಿಸಲು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆ ಅತ್ಯಗತ್ಯ ಎಂದು ವಿವರಿಸಿದರು. ಅಭಿವೃದ್ಧಿ ವಿಷಯದಲ್ಲಿ ಬಿಜೆಪಿಗೆ ಜಾತಿ, ಮತ ಮತ್ತು ಧರ್ಮದ ಭೇದವಿಲ್ಲ. ಈ ವಿಚಾರದಲ್ಲಿ ಯಾರಾದರೂ ತಪ್ಪು ಮಾಹಿತಿ ನೀಡಿದರೆ ಅವರಿಗೆ ಸೂಕ್ತ ಉತ್ತರ ಕೊಡಬೇಕು. ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆ ಮತದಾನದ ಅವಧಿ 2 ಗಂಟೆ ವಿಸ್ತರಣೆಗೆ ಬಿಜೆಪಿ ಮನವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
Latest4 hours ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest5 hours ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest1 day ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest1 day ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest1 day ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest2 days ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest2 days ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest2 days ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest2 days ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌