Jawan Teaser: ಲಿಯಾಮ್ ನೀಸನ್ ಅವರ 1990ರ ಚಿತ್ರ ಡಾರ್ಕ್‌ಮ್ಯಾನ್ ಕಾಪಿ ಮಾಡಿದ್ರಾ SRK? - Vistara News

ಬಾಲಿವುಡ್

Jawan Teaser: ಲಿಯಾಮ್ ನೀಸನ್ ಅವರ 1990ರ ಚಿತ್ರ ಡಾರ್ಕ್‌ಮ್ಯಾನ್ ಕಾಪಿ ಮಾಡಿದ್ರಾ SRK?

ಶಾರುಖ್‌ ಅಭಿನಯದ Jawan Teaser ಹೊರಬಿದ್ದಿದೆ. ಇದಕ್ಕೂ ಹಾಲಿವುಡ್‌ನ ಲಿಯಾಮ್‌ ನೀಸನ್‌ ಅಭಿನಯದ ಡಾರ್ಕ್‌ಮ್ಯಾನ್‌ಗೂ ಲುಕ್‌ನಲ್ಲಿ ಹೋಲಿಕೆ ಹುಡುಕಿದ್ದಾರೆ ಸಿನಿ ಪರಿಣತರು.

VISTARANEWS.COM


on

Jawan Teaser Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಶಾರುಖ್‌ ಖಾನ್ ಫ್ಯಾನ್ಸ್‌ಗೆ ಇದೀಗ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ. ಹಲವು ದಿನಗಳಿಂದ ಶಾರುಖ್ ಅವರ ಜವಾನ್ ಸಿನಿಮಾದ ಬಗ್ಗೆ ಹಲವು ಊಹಾಪೋಹಗಳಿದ್ದವು. ನಯನತಾರಾ ಅವರೊಂದಿಗೆ ಶಾರುಖ್ ನಟಿಸುತ್ತಿದ್ದಾರಾ? ದ್ವಿಪಾತ್ರದಲ್ಲಿ ಶಾರುಖ್ ಮಿಂಚಲಿದ್ದಾರಾ? ಇದೀಗ ಟೀಸರ್‌ ಬಿಡುಗಡೆ ಮೂಲಕ ಕುತೂಲಹದ ಕೋಟೆಗೆ ಮತ್ತೊಂದಷ್ಟು ಸೇರಿಸಿದ್ದಾರೆ ಶಾರುಖ್.

ಹೌದು‌, ಜವಾನ್‌ ಟೀಸರ್‌ ಔಟ್‌ ಆಗಿದೆ. ತಮ್ಮ ಹೊಸ ಮುಖದ ಮೂಲಕ ಫ್ಯಾನ್ಸ್ ಮುಂದೆ ಅಚ್ಚರಿ ನೀಡಿದ್ದಾರೆ. ಫುಲ್‌ ಖಡಕ್‌ ಲುಕ್‌ ರಿವೀಲ್‌ ಮಾಡಿದ್ದಾರೆ ಶಾರುಖ್.

ಇದನ್ನೂ ಓದಿ | Jawan: ಡಬಲ್‌ ರೋಲ್‌ನಲ್ಲಿ ಶಾರುಖ್‌, ನಾಯಕಿಯಾಗಿ ನಯನ ತಾರಾ?

SRK ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ

ಶಾರುಖ್ ಖಾನ್ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್’ ಟೀಸರ್ ಬಿಡುಗಡೆಯಾಗಿದ್ದು, ಕನ್ನಡ ಭಾಷೆಗೂ ಸ್ಥಾನ ನೀಡಲಾಗಿದೆ. ಇದರಿಂದ ಕನ್ನಡಿಗರು ಫಿದಾ ಆಗಿದ್ದಾರೆ. ಅಟ್ಲೀ ನಿರ್ದೇಶನದ, ಗೌರಿ ಖಾನ್ ನಿರ್ಮಿಸಿರುವ ಈ  ಚಿತ್ರದ ಟೀಸರ್ ಅನ್ನು ಶಾರುಖ್ ಖಾನ್ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ.

ಶಾರುಖ್‌ ಈ ಮುಂಚೆ ಪ್ಯಾನ್‌ ಇಂಡಿಯಾ ಸಿನಿಮಾಗೆ ಪ್ರಾಧಾನ್ಯತೆ ನೀಡಿರಲಿಲ್ಲ. ಕೆಜಿಎಫ್‌-2 ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಬ್ಲಾಕ್‌ಬಸ್ಟರ್‌ ಆದ ಕಾರಣ ಎಲ್ಲಾ ಚಿತ್ರರಂಗಗಳೂ ಎಚ್ಚೆತ್ತು ಕೊಂಡು ಆ ಕಡೆ ಗಮನ ಹರಿಸುತ್ತಿದ್ದಾರೆ.

ಕಾಪಿ ಮಾಡಿದ್ರಾ SRK?

ಇದರ ಮಧ್ಯೆ ಜವಾನ್‌ ಸಿನಿಮಾ ಟೀಸರ್ ರಿಲೀಸ್‌ ಆದ ಕೂಡಲೇ, ಶಾರುಖ್‌ ಅವರ ಲುಕ್‌ ಬಗ್ಗೆ ಸಕತ್‌ ಟ್ರೋಲ್‌ ಆಗುತ್ತಿದೆ. ಅದರಲ್ಲಿಯೂ ಲಿಯಾಮ್‌ ನೀಸನ್‌ ಅವರ 1990ರ ಸೂಪರ್‌ ಹೀರೋ ಚಿತ್ರ ಡಾರ್ಕ್‌ಮ್ಯಾನ್‌ ಲುಕ್‌ ಕಾಪಿ ಮಾಡಿದ್ದಾರಾ? ಎಂದು ಟ್ವೀಟ್‌ ಮೂಲಕ ಜನರು ಮಾತನಾಡುತ್ತಿದ್ದಾರೆ.

ಜವಾನ್‌ ಟೀಸರ್‌ ಹವಾ

ಜೂನ್‌ 3ರಂದು ಟೀಸರ್ ಬಿಡುಗಡೆ ಮಾಡಿದ್ದು, ಶಾರುಖ್‌ ಇದರಲ್ಲಿ ರಕ್ತ ಸಿಕ್ತವಾದ ದೇಹದೊಂದಿಗೆ, ಬ್ಯಾಂಡೇಜ್ ಮೂಲಕ ಮುಖವನ್ನು ಕವರ್ ಮಾಡಿ, ಭಯಂಕರವಾದ ಲುಕ್‌ನೊಂದಿಗೆ ರಿವೀಲ್‌ ಆಗಿದ್ದಾರೆ. ರೆಡ್‌ ಚಿಲ್ಲೀಸ್‌ ಎಂಟರ್‌ಟೇನ್‌ಮೆಂಟ್‌ ಅನೌನ್ಸ್ ಮಾಡಿದೆ.

ಇದನ್ನೂ ಓದಿ | ಕ್ರೂಸ್‌ನಲ್ಲಿ ಡ್ರಗ್ಸ್‌ ಕೇಸ್‌, ಶಾರುಖ್‌ ಪುತ್ರ ಆರ್ಯನ್‌ ಖಾನ್‌ಗೆ ಕ್ಲೀನ್‌ ಚಿಟ್‌

ಚಿತ್ರದ ಬಗ್ಗೆ ಮಾತನಾಡಿದ ಶಾರುಖ್‌ ಖಾನ್’ ʼʼಜವಾನ್‌ ಒಂದು ಯುನಿವರ್ಸಲ್ ಸ್ಟೋರಿಯಾಗಿದ್ದು, ಎಲ್ಲ ಭಾಗದ ಜನರಿಗೆ ಇಷ್ಟವಾಗುವಂತಹ ಸಿನಿಮಾ. ಸಿನಿಮಾ ಯುನಿಕ್‌ ಆಗಿದ್ದು, ಇಂತಹ ವಿಶೇಷ ಚಿತ್ರದ ಕ್ರೆಡಿಟ್‌ ನಿರ್ದೇಶಕ ಅಟ್ಲಿಗೆ ಸಲ್ಲುತ್ತದೆ. ಸಾಹಸಮಯವಾದ ಸಿನಿಮಾಗಳನ್ನು ಇಷ್ಟಪಡುವ ನನಗೆ ಇದು ಒಂದು ಅದ್ಭುತವಾದ ಸಿನಿಮಾʼʼ ಎಂದು ಹೇಳಿಕೊಂಡಿದ್ದಾರೆ.

ಈ ಕುರಿತಂತೆ ನಿರ್ದೇಶಕ ಅಟ್ಲಿ, ʼʼಜವಾನ್ ಸಿನಿಮಾ ಎಮೋಷನ್, ಡ್ರಾಮಾ, ಎಲ್ಲದರ ಸಮ್ಮಿಶ್ರಣವಾಗಿದೆ. ಪ್ರೇಕ್ಷಕರಿಗೆ ಅಸಾಧಾರಣ ಅನುಭವ ನೀಡಬೇಕೆಂಬುದು ಅಷ್ಟೇ ಮುಖ್ಯʼʼ ಎಂದಿದ್ದಾರೆ.

ಜವಾನ್‌ ಗೌರಿ ಖಾನ್ ನಿರ್ಮಾಣ ಮಾಡಿರುವುದು ಇನ್ನೂ ವಿಶೇಷ. ತಮ್ಮ ಟ್ವೀಟ್‌ ಮೂಲಕ ಅವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಯೋಗಿ ಬಾಬು ಶಾರುಖ್ ಜೊತೆಗೆ ʼಚೆನ್ನೈ ಎಕ್ಸ್‌ಪ್ರೆಸ್‌ʼನಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಹುನಿರೀಕ್ಷಿತ ಈ ಚಿತ್ರದಲ್ಲಿ ನಟರಾದ ಸನ್ಯಾ ಮಲ್ಹೋತ್ರಾ ಮತ್ತು ಸುನಿಲ್ ಗ್ರೋವರ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ 2 ಜೂನ್‌ 2023ರಲ್ಲಿ ರಿಲೀಸ್‌ ಆಗಲಿದೆ.

ಇದನ್ನೂ ಓದಿ | ಅಕ್ಷಯ್‌, ಅಜಯ್‌ ನಂತರ ಸರ್ಕಾರದತ್ತಲೇ ತಿರುಗಿದ ʼವಿಮಲ್‌ʼ ಬಾಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

Met Gala 2024: ಮೆಟ್‌ ಗಾಲಾ ಈ ಬಾರಿ ನಾಳೆ (ಮೇ.6)ರಂದು ನಡೆಯಲಿದೆ. ಮೆಟ್ ಗಾಲಾ ಅತಿಥಿ ಪಟ್ಟಿಯನ್ನು ಮುಖ್ಯ ಕಾರ್ಯಕ್ರಮದ ಹಿಂದಿನ ಸಂಜೆಯವರೆಗೂ ರಹಸ್ಯವಾಗಿ ಇರಿಸಲಾಗುತ್ತದೆ. ಸುಮಾರು 450 ಜನರು ಈ ಸಮಾರಂಭದಲ್ಲಿ ಪಾಲ್ಗೊಳಲಿದ್ದಾರೆ ಎಂದು ವರದಿಯಾಗಿದೆ. ಹೊಸ ಊಹಾಪೋಹಗಳೆಂದರೆ ಸೆಲೆಬ್ರಿಟಿ ಜೋಡಿ ಟೇಲರ್ ಸ್ವಿಫ್ಟ್ ಮತ್ತು ಟ್ರಾವಿಸ್ ಕೆಲ್ಸೆ ಈ ವರ್ಷ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Met Gala 2024 Alia Bhatt attend
Koo

ಬೆಂಗಳೂರು: ನಟಿ ಆಲಿಯಾ ಭಟ್‌ (Alia Bhatt) ಈಗಾಗಲೇ ಭಾರತದ ಹಲವರ ಮನಸ್ಸು ಗೆದ್ದಿರುವ ನಟಿ. 2022ರಲ್ಲಿ ನಟಿ ಹಿಂದಿ ಚಿತ್ರೋದ್ಯಮದಲ್ಲಿ ಹಿಟ್‌ ಮೇಲೆ ಹಿಟ್‌ ಸಿನಿಮಾಗಳನ್ನು ಕೊಟ್ಟಿದ್ದಾರೆ. ವಿಶ್ವದ ಸೆಲೆಬ್ರಿಟಿಗಳ ಅತ್ಯಂತ ದೊಡ್ಡ ಫ್ಯಾಷನ್‌ ಕಾರ್ಯಕ್ರಮವಾದ ಮೆಟ್‌ ಗಾಲಾದ ( Met Gala 2024) ರೆಡ್‌ ಕಾರ್ಪೆಟ್‌ ಮೇಲೆ ಹಿಂದಿನ ವರ್ಷ ಆಲಿಯಾ ಹೆಜ್ಜೆ ಹಾಕಿದ್ದರು. ಈ ಬಾರಿಯೂ ನಟಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಮೆಟ್ ಗಾಲಾ 2024ರ ಭಾಗವಾಗಿರುವ ಕೆಲವೇ ಕೆಲವು ಭಾರತೀಯ ಹೆಸರುಗಳಲ್ಲಿ ಆಲಿಯಾ ಭಟ್ ಕೂಡ ಒಬ್ಬರು. ಈ ಈವೆಂಟ್‌ಗೆ ಭಾಗವಾಗುತ್ತಿರುವುದು ಆಲಿಯಾ ಎರಡನೇ ಬಾರಿ. ಮೇ 4ರ ರಾತ್ರಿ ಮುಂಬೈನ ಅಂತಾರಾಷ್ಟ್ರೀಯ ಖಾಸಗಿ ಟರ್ಮಿನಲ್‌ನಿಂದ ನ್ಯೂಯಾರ್ಕ್‌ಗೆ ನಟಿ ಪ್ರಯಾಣಿಸಿರುವುದು ವರದಿಯಾಗಿದೆ.

ಮೆಟ್‌ ಗಾಲಾ ಈ ಬಾರಿ ನಾಳೆ (ಮೇ.6)ರಂದು ನಡೆಯಲಿದೆ. ಮೆಟ್ ಗಾಲಾ ಅತಿಥಿ ಪಟ್ಟಿಯನ್ನು ಮುಖ್ಯ ಕಾರ್ಯಕ್ರಮದ ಹಿಂದಿನ ಸಂಜೆಯವರೆಗೂ ರಹಸ್ಯವಾಗಿ ಇರಿಸಲಾಗುತ್ತದೆ. ಸುಮಾರು 450 ಜನರು ಈ ಸಮಾರಂಭದಲ್ಲಿ ಪಾಲ್ಗೊಳಲಿದ್ದಾರೆ ಎಂದು ವರದಿಯಾಗಿದೆ. ಹೊಸ ಊಹಾಪೋಹಗಳೆಂದರೆ ಸೆಲೆಬ್ರಿಟಿ ಜೋಡಿ ಟೇಲರ್ ಸ್ವಿಫ್ಟ್ ಮತ್ತು ಟ್ರಾವಿಸ್ ಕೆಲ್ಸೆ ಈ ವರ್ಷ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಲಾರೆನ್ ಸ್ಯಾಂಚೆಜ್, ಕೈಟ್ಲಿನ್ ಕ್ಲಾರ್ಕ್, ಸ್ಯಾಮ್ ಆಲ್ಟ್‌ಮನ್, ಜೆಫ್ ಬೆಜೋಸ್ ಸಹ ಈ ವರ್ಷದ ಮೆಟ್ ಗಾಲಾದಲ್ಲಿ ನಿರೀಕ್ಷಿಸಲಾದ ಕೆಲವು ಹೆಸರುಗಳು. ಪ್ರಿಯಾಂಕಾ ಚೋಪ್ರಾ ಈ ಬಾರಿ ಗೈರಾಗಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Heeramandi Trailer: ʻಹೀರಾಮಂಡಿʼ ಟ್ರೈಲರ್‌ ಕಂಡು ರಶ್ಮಿಕಾ, ಆಲಿಯಾ, ವಿಕ್ಕಿ ಕೌಶಲ್‌ ಫಿದಾ!

ಈ ಹಿಂದೆಯೂ ಬಾಲಿವುಡ್‌ನ ಅನೇಕ ನಟಿಯರು ಈ ಮೆಟ್‌ ಗಾಲಾದ ರೆಡ್‌ ಕಾರ್ಪೆಟ್‌ನಲ್ಲಿ ವಿಶೇಷವಾದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಕಳೆದ ವರ್ಷ ನತಾಶಾ ಅವರು ಸಬ್ಯಸಾಚಿ ಸೀರೆ ತೊಟ್ಟು ಅದರೊಂದಿಗೆ ಚಿನ್ನದ ಬಣ್ಣದ ಲೋಹದ ಕೋಟ್‌ ಧರಿಸಿ ಕಾಣಿಸಿಕೊಂಡಿದ್ದರು. ನಟಿಯ ಈ ಲುಕ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿತ್ತು. ಹಾಗೆಯೇ 2017ರಲ್ಲಿ ದೀಪಿಕಾ ಪಡುಕೋಣೆ ಅವರು ಬಿಳಿ ಬಣ್ಣದ ಉಡುಗೆಯಲ್ಲಿ ಮೆಟ್‌ ಗಾಲಾದ ರೆಡ್‌ ಕಾರ್ಪೆಟ್‌ ಮೇಲೆ ಮೊದಲನೇ ಬಾರಿಗೆ ಕಾಣಿಸಿಕೊಂಡಿದ್ದರು. 2018ರಲ್ಲಿ ಮತ್ತೊಮ್ಮೆ ರೆಡ್‌ ಕಾರ್ಪೆಟ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಆಗ ನಟಿ ಪ್ರಬಲ್‌ ಗುರುಂಗ್‌ ಅವರು ವಿನ್ಯಾಸ ಮಾಡಿದ್ದ ಕೆಂಪು ಬಣ್ಣದ ಉಡುಗೆ ತೊಟ್ಟಿದ್ದರು. ಒಂದು ಶೋಲ್ಡರ್‌ನ ಆ ಉಡುಗೆಯ ಫೋಟೋ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು.

ಯಾಂಕಾ ಚೋಪ್ರಾ ಅವರು 2017ರಲ್ಲಿ ಮೆಟ್‌ ಗಾಲಾದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅವರು ಈಗಿನ ಪತಿ ನಿಕ್‌ ಜೋನಾಸ್‌ ಅವರ ಜತೆಗೆ ಕಾಣಿಸಿಕೊಂಡಿದ್ದರು. ಉದ್ದನೆಯ ವೇಲು ರೀತಿಯಲ್ಲಿ ಬಟ್ಟೆ ಹೊಂದಿರುವ ಟ್ರೆಂಚ್‌ ಕೋಟ್‌ ಉಡುಗೆಯಲ್ಲಿ ನಟಿ ಮಿಂಚಿದ್ದರು

Continue Reading

ಸಿನಿಮಾ

Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

Kareena Kapoor: ಕರೀನಾ ಕಪೂರ್ ಖಾನ್ (Kareena Kapoor) ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. . ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ಕರೀನಾ ಕಪೂರ್ ಕೊನೆಯದಾಗಿ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡರು. ಮುಂದೆ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Kareena Kapoor appointed Unicef India National Ambassador
Koo

ಬೆಂಗಳೂರು: ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ (Kareena Kapoor) ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ಭಾಗಿಯಾಗುತ್ತಿದ್ದರು. ಇದೀಗ ನಟಿ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾಗಿ ಟಿಪ್ಪಣಿಯನ್ನು ಬರೆದಿದ್ದಾರೆ. ಗೌರವದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಭಾಷಣದ ವೇಳೆ ಕರೀನಾ ತಮ್ಮ ಹೊಸ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತಾ ಭಾವುಕರಾದರು.

ಕರೀನಾ ಪೋಸ್ಟ್‌ನಲ್ಲಿ ʻʻನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳುʼʼಎಂದು ಬರೆದುಕೊಂಡಿದ್ದಾರೆ.

ಕರೀನಾ ಕಪೂರ್ ಕೊನೆಯದಾಗಿ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡರು. ಮುಂದೆ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Kareena Kapoor: ಸೈಫ್‌ ಅಲಿಖಾನ್ ರನ್ನು ಮದುವೆಯಾಗಬೇಡಿ ಎಂದು ಜನ ಕರೀನಾಗೆ ಹೇಳಿದ್ದು ಯಾಕೆ?

ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ ಎಂದು ಫ್ಯಾನ್ಸ್‌ ಸಂತದಲ್ಲಿ ಇದ್ದಿದ್ದರು. ಆದರೀಗ ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಬಂದ ಕಾರಣ ಕರೀನಾ ಅವರು ಈ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಚಿತ್ರತಂಡ ಇನ್ನೊಬ್ಬ ನಟಿಯನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ.

ಪ್ರಶಾಂತ್‌ ನೀಲ್‌ ನಿರ್ದೇಶನದ ʼಕೆಜಿಎಫ್‌ 2ʼ ಚಿತ್ರದಲ್ಲಿ ಬಾಲಿವುಡ್‌ ತಾರೆಯರಾದ ಸಂಜಯ್‌ ದತ್‌ ಮತ್ತು ರವೀನಾ ಟಂಡನ್‌ ಕಾಣಿಸಿಕೊಂಡಿದ್ದರು. ಯಶ್‌ ಜತೆ ಇವರ ಪಾತ್ರಗಳೂ ಮೆಚ್ಚುಗೆ ಪಡೆದಿದ್ದವು. ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ʼಟಾಕ್ಸಿಕ್‌ʼ ಚಿತ್ರವನ್ನು ನಿರ್ಮಿಸಲಿದ್ದಾರೆ.

ಕಳೆದ ತಿಂಗಳು ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಇದರಿಂದ ಕನ್ಫರ್ಮ್ ಆಗಿದೆ.

Continue Reading

ಬಾಲಿವುಡ್

Sunidhi Chauhan: ಗಾಯಕಿ ಸುನಿಧಿ ಚೌಹಾಣ್ ಮೇಲೆ ಬಾಟಲಿ ಎಸೆತ: ವಿಡಿಯೊ ವೈರಲ್‌!

Sunidhi Chauhan: ಸುನಿಧಿ ಅವರು ಮೇರಿ ಆವಾಜ್‌ ಸುನೋ ರಿಯಾಲಿಟಿ ಶೋನಲ್ಲಿ ಗೆದ್ದಿದ್ದರು. ಗೌತಮಿ ಮುಖರ್ಜಿ ಬಳಿ ಸುನಿಧಿ ಸಂಗೀತ ಅಭ್ಯಾಸ ಮಾಡಿದ್ದರು. ಬಾಬ್ಬಿ ಖಾನ್‌ ಅವರನ್ನು ಸುನಿಧಿ ಮದುವೆಯಾಗಿದ್ದರು. 2003ರಲ್ಲಿ ಇಬ್ಬರೂ ದೂರವಾದರು. 2012ರಲ್ಲಿ ಹೀತೇಶ್‌ ಸೋನಿಕ್‌ ಎಂಬುವರನ್ನು ಸುನಿಧಿ ಮದುವೆಯಾದರು. ಸುನಿಧಿಗೆ ಓರ್ವ ಪುತ್ರನಿದ್ದಾನೆ. ಇದೀಗ ಕಾರ್ಯಕ್ರಮವೊಂದರಲ್ಲಿ ಸುನಿಧಿ ಚೌಹಾಣ್ ಅವರ ಮೇಲೆ ಪ್ರೇಕ್ಷಕರೊಬ್ಬರು ನೀರಿನ ಬಾಟಲಿಯನ್ನು ಎಸೆದಿದ್ದಾರೆ.

VISTARANEWS.COM


on

Sunidhi Chauhan audience member throws bottle at her
Koo

ಬೆಂಗಳೂರು: ನಾಲ್ಕು ವರ್ಷ ಇರುವಾಗಲೇ ಗಾಯಕಿ ಸುನಿಧಿ ಚೌಹಾಣ್ (Sunidhi Chauhan) ಹಾಡಲು ಶುರು ಮಾಡಿದ್ದರು. ದೂರದರ್ಶನದಲ್ಲಿ ʻಮೇರಿ ಆವಾಜ್‌ ಸುನೋʼ ಎಂಬ ಸಿಂಗಿಂಗ್‌ ರಿಯಾಲಿಟಿ ಶೋನಲ್ಲಿ ವಿನ್ನರ್‌ ಆದವರು. ಇದೀಗ ಕಾರ್ಯಕ್ರಮವೊಂದರಲ್ಲಿ ಸುನಿಧಿ ಚೌಹಾಣ್ ಅವರ ಮೇಲೆ ಪ್ರೇಕ್ಷಕರೊಬ್ಬರು ನೀರಿನ ಬಾಟಲಿಯನ್ನು ಎಸೆದಿದ್ದಾರೆ. ಇದೀಗ ಈ ಕ್ಲಿಪ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮಾತ್ರವಲ್ಲ ಸುನಿಧಿ ಚೌಹಾಣ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕ್ಲಿಪ್‌ನಲ್ಲಿ, ಬಾಟಲಿ ಒಂದು ಕ್ಷಣ ಸುನಿಧಿ ಚೌಹಾಣ್ ಮೇಲೆ ಬೀಳುತ್ತಿದ್ದಂತೆ ಗಾಬರಿಯಾದರು. ಪ್ರದರ್ಶನವನ್ನು ಮುಂದುವರಿಸುವ ಮೊದಲು ಅವರು ಒಂದು ಕ್ಷಣ ಸ್ತಬ್ಧವಾಗಿ ನಿಂತು ಬಿಟ್ಟರು. ತನ್ನ ಕೈಯನ್ನು ಎದೆಯ ಮೇಲೆ ಇಟ್ಟುಕೊಂಡು ಸುತ್ತಲೂ ನೋಡಿದರು. ಸ್ವಲ್ಪ ಸಮಯದ ನಂತರ, ಸುನಿಧಿ ವೇದಿಕೆಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ʻʻಬಾಟಲಿಗಳನ್ನು ಎಸೆದರೆ ಏನಾಗುತ್ತದೆ? ಹಾಗೆ ಮಾಡುವುದರಿಂದ ಪ್ರದರ್ಶನವು ನಿಲ್ಲುತ್ತದೆ. ನಿಮಗೆ ಹಾಗೆ ಆಗಬೇಕೆ?ಎಂದು ಪ್ರಶ್ನೆ ಇಟ್ಟಿದ್ದಾರೆ. ನೆರೆದ ಪ್ರೇಕ್ಷಕರು “ಇಲ್ಲ” ಎಂದು ಕೂಗಿದ್ದಾರೆ. ಈ ಸಂದರ್ಭವನ್ನು ಅತ್ಯಂತ ನಾಜೂಕಾಗಿ ಹ್ಯಾಂಡಲ್‌ ಮಾಡಿದ್ದಾರೆ ಸುನಿಧಿ.

ವಿಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನಾಚಿಕೆಯಿಲ್ಲದವರು ! ಸುನಿಧಿ ಗ್ರೇಟ್‌” ಎಂದು ಬರೆದಿದ್ದಾರೆ. ಒಬ್ಬ ವ್ಯಕ್ತಿ, “ಇದು ತುಂಬಾ ಅಸಹ್ಯಕರ ನಡವಳಿಕೆ. ಸುನಿಧಿ ಗೌರವಕ್ಕೆ ಅರ್ಹಳು.” ಎಂದು ಕಮೆಂಟ್‌ ಮಾಡಿದ್ದಾರೆ. ʻʻಕಾರ್ಯಕ್ರಮವನ್ನು ಸುಲಭವಾಗಿ ಅವರು ಬಿಟ್ಟು ಹೋಗಬಹುದಿತ್ತು. ಆದರೆ ಸುನಿಧಿ ಹಾಗೇ ಮಾಡಿಲ್ಲ. ಅವಳು ಯಾವತ್ತು ಕ್ವೀನ್‌ʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಸುನಿಧಿ ಕೂಡ ತಮ್ಮ ಇನ್‌ಸ್ಟಾದಲ್ಲಿ ಈವೆಂಟ್‌ನ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಆದರೆ, ಘಟನೆಯ ಬಗ್ಗೆ ಏನು ಬರೆದುಕೊಂಡಿಲ್ಲ.

ಇದನ್ನೂ ಓದಿ: Ram Charan: ರಾಮ್‌ಚರಣ್‌ ಅಭಿನಯದ ʻಗೇಮ್ ಚೇಂಜರ್ʼ ಮೊದಲ ಸಾಂಗ್‌ ಔಟ್‌!

ಸುನಿಧಿ ಅವರು `ಮೇರಿ ಆವಾಜ್‌ ಸುನೋ’ ರಿಯಾಲಿಟಿ ಶೋನಲ್ಲಿ ಗೆದ್ದಿದ್ದರು. ಗೌತಮಿ ಮುಖರ್ಜಿ ಬಳಿ ಸುನಿಧಿ ಸಂಗೀತ ಅಭ್ಯಾಸ ಮಾಡಿದ್ದರು. ಬಾಬ್ಬಿ ಖಾನ್‌ ಅವರನ್ನು ಸುನಿಧಿ ಮದುವೆಯಾಗಿದ್ದರು. 2003ರಲ್ಲಿ ಇಬ್ಬರೂ ದೂರವಾದರು. 2012ರಲ್ಲಿ ಹೀತೇಶ್‌ ಸೋನಿಕ್‌ ಎಂಬುವರನ್ನು ಸುನಿಧಿ ಮದುವೆಯಾದರು. ಸುನಿಧಿಗೆ ಓರ್ವ ಪುತ್ರನಿದ್ದಾನೆ.

Continue Reading

ಬಾಲಿವುಡ್

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

Shreyas Talpade: ನಟ ಶ್ರೇಯಸ್‌ ತಲ್ಪಾಡೆ ಅವರು ‘ವೆಲ್‌ಕಮ್ ಟು ದಿ ಜಂಗಲ್‌’ ಸಿನಿಮಾದ ಚಿತ್ರೀಕರಣದರಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣ ಮುಗಿಸಿ ಮನೆಗೆ ಹೋದಮೇಲೆ ಅವರು ಕುಸಿದುಬಿದಿದ್ದರು. ತಕ್ಷಣ ಅವರನ್ನು ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ನಟ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ, 47 ವರ್ಷದ ಶ್ರೇಯಸ್‌ ತಲ್ಪಾಡೆ ತಮ್ಮ ಅಭಿನಯ ಪ್ರತಿಭೆಯಿಂದ ಗಮನ ಸೆಳೆದವರು. ಶಾರುಖ್ ಖಾನ್, ಅಕ್ಷಯ್ ಕುಮಾರ್ ಮೊದಲಾದ ಸ್ಟಾರ್‌ಗಳ ಜೊತೆ ತೆರೆ ಹಂಚಿಕೊಂಡು ಮಿಂಚಿದ್ದಾರೆ.

VISTARANEWS.COM


on

Shreyas Talpade hints his heart attack side effect of Covid vaccine
Koo

ಬೆಂಗಳೂರು: ಹಿಂದಿ ಮತ್ತು ಮರಾಠಿ ಚಿತ್ರರಂಗದ ಖ್ಯಾತ ನಟ ಶ್ರೇಯಸ್‌ ತಲ್ಪಾಡೆ (Shreyas Talpade) ಅವರಿಗೆ 2023ರ ಡಿಸೆಂಬರ್‌ 14ರಂದು ಹೃದಯಾಘಾತ ಸಂಭವಿಸಿತ್ತು. ಇದೀಗ ನಟ ಸಂದರ್ಶನವೊಂದರಲ್ಲಿ ನನಗೆ ಹೃದಯಾಘಾತ ಆಗಲು ಕಾರಣ ಕೋವಿಡ್ -19 ಲಸಿಕೆಯ ಅಡ್ಡ ಪರಿಣಾಮವಾಗಿರಬಹುದು ಎಂದು ಹೇಳಿಕೊಂಡಿದ್ದಾರೆ. ʻನಾನು ಆರೋಗ್ಯದ ಬಗ್ಗೆ ತುಂಬ ಕಾಳಜಿ ವಹಿಸುತ್ತೇನೆ. ಅದರ ಹೊರತಾಗಿಯೂ ಹೃದಯಾಘಾತವಾಗಿತ್ತುʼʼಎಂದು ಹೇಳಿಕೊಂಡಿದ್ದಾರೆ.

ನಟ ಶ್ರೇಯಸ್‌ ತಲ್ಪಾಡೆ ಅವರು ‘ವೆಲ್‌ಕಮ್ ಟು ದಿ ಜಂಗಲ್‌’ ಸಿನಿಮಾದ ಚಿತ್ರೀಕರಣದರಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣ ಮುಗಿಸಿ ಮನೆಗೆ ಹೋದಮೇಲೆ ಅವರು ಕುಸಿದುಬಿದಿದ್ದರು. ತಕ್ಷಣ ಅವರನ್ನು ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ನಟ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ,

ಶ್ರೇಯಸ್ ಮಾತನಾಡಿ, “ನಾನು ಧೂಮಪಾನ ಮಾಡುವುದಿಲ್ಲ. ನಾನು ರೆಗ್ಯುಲರ್‌ ಆಗಿ ಕುಡಿಯುವವನಲ್ಲ, ನಾನು ತಿಂಗಳಿಗೊಮ್ಮೆ ಕುಡಿಯುತ್ತೇನೆ. ತಂಬಾಕು ತಿನ್ನಲ್ಲ, ಹೌದು, ನನ್ನ ಕೊಲೆಸ್ಟ್ರಾಲ್ ಸ್ವಲ್ಪ ಹೆಚ್ಚಿತ್ತು. ಇದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ನಾನು ಅದಕ್ಕೆ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದೆ. ಆದರೆ ಈಗ ಕಡಿಮೆಯಾಗಿದೆ.ನನಗೆ ಮಧುಮೇಹ ಇಲ್ಲ, ರಕ್ತದೊತ್ತಡವಿಲ್ಲ.ಹಾಗಾದ್ರೆ ಕಾರಣವೇನು?ʼʼಎಂದರು.

ಇದನ್ನೂ ಓದಿ: Masoom Sawaal | ಸ್ಯಾನಿಟರಿ ಪ್ಯಾಡ್‌ ಮೇಲೆ ಶ್ರೀಕೃಷ್ಣ: ವಿವಾದ ಸೃಷ್ಟಿಸಿದ ಮಾಸೂಮ್‌ ಸವಾಲ್‌!

ಮಾತು ಮುಂದುವರಿಸಿ “ನಾನು ಸಿದ್ಧಾಂತವನ್ನು ನಿರಾಕರಿಸುವುದಿಲ್ಲ. ಕೋವಿಡ್-19 ವ್ಯಾಕ್ಸಿನೇಷನ್ ಮಾಡಿದ ನಂತರವೇ ನಾನು ಸ್ವಲ್ಪ ಆಯಾಸ ಮತ್ತು ದಣಿವನ್ನು ಅನುಭವಿಸಿದೆ. ಸ್ವಲ್ಪ ಪ್ರಮಾಣದ ಸತ್ಯ ಇರಬೇಕು. ಈ ರೀತಿ ನನ್ನ ಬಾಡಿ ಟೈಯರ್ಡ್‌ ಆಗಲು ಕಾರಣ ಕೋವಿಡ್ ಲಸಿಕೆಯಾಗಿರಬಹುದು. ನಮ್ಮ ದೇಹದಲ್ಲಿ ನಾವು ಏನು ತೆಗೆದುಕೊಂಡಿದ್ದೇವೆ ಎಂಬುದು ನಮಗೆ ನಿಜವಾಗಿ ತಿಳಿದಿಲ್ಲ. ನಾವು ಕಂಪನಿಗಳನ್ನು ನಂಬಿ ಎಲ್ಲರೂ ವಾಕ್ಸಿನ್‌ ತೆಗೆದುಕೊಂಡಂತೆ ತೆಗೆದುಕೊಂಡಿದ್ದೇ. ಕೋವಿಡ್ ಮೊದಲು ನಾನು ಅಂತಹ ಘಟನೆಗಳನ್ನು ಕೇಳಿರಲಿಲ್ಲʼʼಎಂದರು. ಕೊನೆಯಲ್ಲಿ ನಟ ಮಾತನಾಡಿ ʻʻಈ ರೀತಿ ಹೃದಯಾಘಾತವಾಗಲು ಕೋವಿಡ್‌ ಲಸಿಕೆಯಿಂದಲೋ ನನಗೆ ಖಚಿತವಿಲ್ಲ. ಸಾಕಷ್ಟು ಪುರಾವೆಗಳಿಲ್ಲದ ಕಾರಣ, ಯಾವುದೇ ಹೇಳಿಕೆಗಳನ್ನು ನೀಡುವುದರಲ್ಲಿ ಅರ್ಥವಿಲ್ಲʼʼಎಂದರು.

47 ವರ್ಷದ ಶ್ರೇಯಸ್‌ ತಲ್ಪಾಡೆ ತಮ್ಮ ಅಭಿನಯ ಪ್ರತಿಭೆಯಿಂದ ಗಮನ ಸೆಳೆದವರು. ಶಾರುಖ್ ಖಾನ್, ಅಕ್ಷಯ್ ಕುಮಾರ್ ಮೊದಲಾದ ಸ್ಟಾರ್‌ಗಳ ಜೊತೆ ತೆರೆ ಹಂಚಿಕೊಂಡು ಮಿಂಚಿದ್ದಾರೆ. ಚಿತ್ರರಂಗಕ್ಕೆ 2002ರಲ್ಲೇ ಕಾಲಿಟ್ಟರು. ‘ಆಂಖೇ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. 2007ರಲ್ಲಿ ರಿಲೀಸ್ ಆದ ‘ಓಂ ಶಾಂತಿ ಓಂ’ ಸಿನಿಮಾದಲ್ಲಿ ಶಾರುಖ್​ನ ಗೆಳೆಯನಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ‘ಗೋಲ್​ಮಾಲ್​ ರಿಟರ್ನ್ಸ್​’, ಗೋಲ್​ಮಾಲ್​ 3’, ‘ಹೌಸ್​ಫುಲ್ 2’ ಅಂಥ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.

Continue Reading
Advertisement
Pralhad Joshi
ಕರ್ನಾಟಕ4 mins ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest16 mins ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest41 mins ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Air India
ದೇಶ43 mins ago

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

Lok Sabha Election 2024 Narendra Modi cant become PM again says CM Siddaramaiah
Lok Sabha Election 202448 mins ago

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Radhika Khera
ದೇಶ50 mins ago

Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ!

Viral News
ಕ್ರೈಂ50 mins ago

Viral News: ವಿಮಾನ ಪ್ರಯಾಣಿಕನ ಜೇಬಿನಲ್ಲಿತ್ತು ಎರಡು ಹಾವು!

Self-Healing Roads
ತಂತ್ರಜ್ಞಾನ52 mins ago

Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

IPL 2024
ಪ್ರಮುಖ ಸುದ್ದಿ60 mins ago

IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

Narendra Modi
ದೇಶ1 hour ago

Narendra Modi: ಪ್ರಚಾರದ ಮಧ್ಯೆಯೇ ರಾಮಮಂದಿರಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 hour ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ3 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌