Trivikrama: ತ್ರಿವಿಕ್ರಮ ಸಾಂಗ್‌ಗೆ ಹ್ಯಾಟ್ರಿಕ್‌ ಹೀರೊ ಭರ್ಜರಿ ಸ್ಟೆಪ್‌ - Vistara News

ಸಿನಿಮಾ

Trivikrama: ತ್ರಿವಿಕ್ರಮ ಸಾಂಗ್‌ಗೆ ಹ್ಯಾಟ್ರಿಕ್‌ ಹೀರೊ ಭರ್ಜರಿ ಸ್ಟೆಪ್‌

ಇತ್ತೀಚಿಗಷ್ಟೇ ಲಡಾಕ್‌ ಮತ್ತು ಕಾಶ್ಮೀರದಲ್ಲಿ ಈ ಚಿತ್ರದ ಶೂಟಿಂಗ್‌ ಮಾಡಲಾಗಿತ್ತು. ಇದರ ಪೋಸ್ಟರ್‌ ಮತ್ತು ಟೀಸರ್‌ ಸಿನಿಮಾಸಕ್ತರನ್ನು ಸೆಳೆದಿತ್ತು.

VISTARANEWS.COM


on

Trivikrama
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಚಿತ್ರ ʼತ್ರಿವಿಕ್ರಮʼ ಸಿನಿಮಾದ ʼಮಮ್ಮಿ ಸಾಂಗ್‌ʼ ಮಿಲಿಯನ್‌ ವೀವ್ಸ್‌ ಪಡೆದು ದಾಖಲೆ ಮಾಡಿದೆ. ಶಿವರಾಜ್ ಕುಮಾರ್ ಈ ಹಾಡನ್ನು ರಿಲೀಸ್ ಮಾಡಿದ್ದು, ಇದೀಗ ಆ ಹಾಡಿಗೆ ಸ್ಟೆಪ್ ಕೂಡ  ಹಾಕಿದ್ದಾರೆ. ʼಪ್ಲೀಸ್ ಮಮ್ಮಿ ʼ ಹಾಡಿನ ಮ್ಯೂಸಿಕ್ ಗೆ ವಿಕ್ರಮ್ ಹಾಗೂ ಶಿವಣ್ಣ ಜೊತೆಗೂಡಿ ಹೆಜ್ಜೆ ಹಾಕಿ ಸಂತಸ ವ್ಯಕ್ತಪಡಿಸಿದ್ದಾರೆ. ವಿಕ್ರಮ್ ಈ ವಿಡಿಯೋವನ್ನು ತಮ್ಮ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Trivikrama: ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ಸಿನಿಮಾ ಡೇಟ್‌ ಅನೌನ್ಸ್!

ಸಹನಾ ಮೂರ್ತಿ ನಿರ್ದೇಶನದ ಈ ಚಿತ್ರದ ಬಿಡುಗಡೆಯ ಕುರಿತು ಸೋಷಿಯಲ್‌ ಮೀಡಿಯಾ ಮೂಲಕ ರಿಲೀಸ್‌ ಡೇಟ್‌ ಘೋಷಣೆ ಮಾಡಲಾಗಿತ್ತು. ಜೂನ್ 24ರಂದು ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

ಇತ್ತೀಚಿಗಷ್ಟೇ ಲಡಾಕ್‌ ಮತ್ತು ಕಾಶ್ಮೀರದಲ್ಲಿ ಶೂಟಿಂಗ್‌ ಮಾಡಲಾಗಿತ್ತು. ಪೋಸ್ಟರ್‌ ಮತ್ತು ಟೀಸರ್‌ ಮೂಲಕ ಸಿನಿಮಾ ಆಸಕ್ತರನ್ನು ಸೆಳೆದಿತ್ತು.  ಅರ್ಜುನ್‌ ಜನ್ಯ ಸಂಗೀತ ನಿರ್ದೇಶಿಸಿದ್ದಾರೆ. ಶ್ರೇಯಾ ಘೋಷಾಲ್‌, ಶ್ರೀರಾಮ್‌, ವಿಜಯ್‌ ಪ್ರಕಾಶ್‌ ಮತ್ತು ಹರಿಚರಣ್‌, ಸಂಜೀತ್‌ ಹೆಗಡೆ ಹಾಡಿದ್ದಾರೆ.

ಕೆ.ಎಮ್‌ ಪ್ರಕಾಶ್‌ ಸಂಕಲನ ಮಾಡಿದ್ದು, ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ. ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ, ಚಿಕ್ಕಣ್ಣ ಮುಂತಾದ ಕಲಾವಿದರ ಸಮಾಗಮವಿದೆ.

ಇದನ್ನೂ ಓದಿ | ಕ್ರೇಜಿಸ್ಟಾರ್‌ ಜನ್ಮದಿನಕ್ಕೆ ಸಿಕ್ತು ಭರ್ಜರಿ ಗಿಫ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Payal Rajput: ನಟಿ ಪಾಯಲ್ ರಜಪೂತ್ ಕೊನೆಯದಾಗಿ ʻಮಂಗಳವರಂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ರಕ್ಷಣ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಒಳಗೊಂಡ ನಿಜ ಜೀವನದ ಘಟನೆಯಿಂದ ಸ್ಫೂರ್ತಿ ಪಡೆದ ಚಿತ್ರ ಎನ್ನಲಾಗಿದೆ. ಚಿತ್ರದಲ್ಲಿ ರೋಷನ್, ಮಾನಸ್, ರಾಜೀವ್ ಕಣಕಾಲ ಮತ್ತು ಶಿವನ್ನಾರಾಯಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಣದೀಪ್ ಠಾಕೋರ್ ನಿರ್ದೇಶಕ ಮತ್ತು ನಿರ್ಮಾಪಕ.

VISTARANEWS.COM


on

Payal Rajput Accuses Rakshana Producers Of Not Clearing Her Dues
Koo

ಬೆಂಗಳೂರು: ಪಂಜಾಬಿ ಬ್ಯೂಟಿ ಪಾಯಲ್ ರಜಪೂತ್ (Payal Rajput) ` RX 100 ಸಿನಿಮಾ ಮೂಲಕ ಟಾಲಿವುಡ್‌ನಲ್ಲಿ ಖ್ಯಾತಿ ಗಳಿಸಿದರು. ಜತೆಗೆ ಕನ್ನಡ ‘ಹೆಡ್‌ಬುಷ್’ ಚಿತ್ರದಲ್ಲಿ ಮಿಂಚಿದ್ದರು. ಆದರೀಗ ನಟಿ ಚಿತ್ರವೊಂದರ ನಿರ್ಮಾಪಕರ ಬಗ್ಗೆ ಆರೋಪ ಮಾಡಿದ್ದಾರೆ. ʻತಂಡ ಇನ್ನೂ ಸಂಭಾವನೆ ನೀಡಿಲ್ಲ. ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆʼ ಎಂದು ಪೋಸ್ಟ್‌ ಮಾಡಿದ್ದಾರೆ.

ನಟಿ ಪೋಸ್ಟ್‌ನಲ್ಲಿ “ನನ್ನ ಬಳಿ “ರಕ್ಷಣ” ಎಂಬ ಸಿನಿಮಾವಿದೆ . ಇದನ್ನು 2019 ಮತ್ತು 2020ರಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ 5Ws ಎಂದು ಹೆಸರಿಸಲಾಗಿದೆ. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಯಿತು. ಆದರೆ ಇತ್ತೀಚೆಗೆ ನನಗೆ ಸಿಕ್ಕ ಯಶಸ್ಸು ನೋಡಿ ಈಗ ನಿರ್ಮಾಪಕರು ಆ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ನನ್ನ ಬಾಕಿ ಹಣಗಳನ್ನು ಕ್ಲೀಯರ್‌ ಮಾಡದೇ ಪ್ರಚಾರ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಚಿತ್ರದ ಪ್ರಚಾರಕ್ಕೆ ಬರದೇ ಇದ್ದರೆ ತೆಲುಗು ಉದ್ಯಮದಿಂದ ಬ್ಯಾನ್‌ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನನ್ನ ತಂಡ ಬಾಕಿ ಮೊತ್ತದ ಬಗ್ಗೆ ಚರ್ಚಿಸಿದಾಗ ರಾಜಿ ಮಾಡಿಕೊಳ್ಳಲು ನಿರಾಕರಿಸಿದರು. ನನ್ನ ಹೆಸರನ್ನು ಡ್ಯಾಮೇಜ್ ಆಗುವಂತೆ ಬಳಸಲಾಗುತ್ತಿದೆ. ಇತ್ತೀಚಿನ ಮೀಟಿಂಗ್‌ನಲ್ಲಿ ನನ್ನ ಬಗ್ಗೆ ಅಸಭ್ಯ ಭಾಷೆ ಬಳಸಲಾಗಿದೆ. ನನಗೆ ನೀಡಬೇಕಾದ ಸಂಪೂರ್ಣ ಸಂಭಾವನೆಯನ್ನು ನೀಡದೆ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಿದ್ದಕ್ಕಾಗಿ ನಾನು ಈಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದುಕೊಂಡಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

ನಟಿ ಪಾಯಲ್ ರಜಪೂತ್ ಕೊನೆಯದಾಗಿ ʻಮಂಗಳವರಂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ರಕ್ಷಣ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಒಳಗೊಂಡ ನಿಜ ಜೀವನದ ಘಟನೆಯಿಂದ ಸ್ಫೂರ್ತಿ ಪಡೆದ ಚಿತ್ರ ಎನ್ನಲಾಗಿದೆ. ಚಿತ್ರದಲ್ಲಿ ರೋಷನ್, ಮಾನಸ್, ರಾಜೀವ್ ಕಣಕಾಲ ಮತ್ತು ಶಿವನ್ನಾರಾಯಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಣದೀಪ್ ಠಾಕೂರ್ ನಿರ್ದೇಶಕ ಮತ್ತು ನಿರ್ಮಾಪಕ.

ದೆಹಲಿಯಲ್ಲಿ ಹುಟ್ಟಿ ಬೆಳೆದ ಪಾಯಲ್ ಮೊದಲಿಗೆ ಕಿರುತೆರೆ ಧಾರಾವಾಹಿಯಲ್ಲಿ ನಟಿಸಿದ್ದರು. ‘ಸಪ್ನೋನ್ ಸೇ ಭಾರೆ ನೈನಾ’ ಧಾರಾವಾಹಿಯಲ್ಲಿ ಸೋನಾಕ್ಷಿ ಎನ್ನುವ ಪಾತ್ರ ಮಾಡಿದ್ದರು.ಶೂನ್ಯ ನಿರ್ದೇಶನದ ‘ಹೆಡ್‌ಬುಷ್’ ಚಿತ್ರದಲ್ಲಿ ರೇಷ್ಮಾ ಎನ್ನುವ ಪಾತ್ರದಲ್ಲಿ ಆಕೆ ಕಾಣಿಸಿಕೊಂಡಿದ್ದರು.

Continue Reading

ಬಾಲಿವುಡ್

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Salman Khan: ಅರ್ಹಾನ್ ಖಾನ್ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಏಕೈಕ ಪುತ್ರ, ಈತ 2002ರಲ್ಲಿ ಜನಿಸಿದನು. ಅರ್ಹಾನ್ ಖಾನ್ ಮಲೈಕಾ ಅರೋರಾ ಅವರು ವಿವಾಹವಾಗಿ 19 ವರ್ಷಗಳ ಕಾಲ ಜೊತೆಗಿದ್ದರು. ನಂತರ 2016ರಲ್ಲಿ ಬೇರ್ಪಟ್ಟು 2017ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಕಾನ್ ಅವರನ್ನು ಮದುವೆಯಾದರು. ಮಲೈಕಾ ಅರೋರಾ ಅವರು ಮಾತ್ರ ವರ್ಷಗಳಿಂದ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

VISTARANEWS.COM


on

Salman Khan Ultimate Sex Symbol Says Malaika Arora
Koo

ಬೆಂಗಳೂರು: ಸಲ್ಮಾನ್ ಖಾನ್ (Salman Khan) ಅವರ ಮಾಜಿ ಅತ್ತಿಗೆ ಮಲೈಕಾ ಅರೋರಾ (Malaika Arora) ಅವರು ಬಾಲಿವುಡ್‌ನ ಹಾಟೆಸ್ಟ್ ಸ್ಟಾರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಸಂದರ್ಶನವೊಂದರಲ್ಲಿ ʻʻಅರ್ಬಾಜ್ ಖಾನ್ ನನ್ನ ಪಾಲಿಗೆ ಪರ್ಮನೆಂಟ್ ಗಂಡ. ಆದರೆ ಸಲ್ಮಾನ್ ಖಾನ್ ಬಾಲಿವುಡ್‌ನಲ್ಲಿ ಅಲ್ಟಿಮೇಟ್ ಸೆಕ್ಸ್ ಸಿಂಬಲ್ʼʼಎಂದು ಹೇಳಿಕೊಂಡಿದ್ದಾರೆ.

ಇದೀಗ ಮಲೈಕಾ ಅವರ ಹಳೆಯ ಸಂದರ್ಶನದ ವಿಡಿಯೊ ವೈರಲ್‌ ಆಗುತ್ತಿದೆ. ʻʻಭಾರತದ ಪ್ರಮುಖ ಸೆಕ್ಸ್‌ ಸಿಂಬಾಲ್‌ ಪುರುಷ ಯಾರು?ʼʼ ಎಂಬ ಪ್ರಶ್ನೆಗೆ ಉತ್ತರಿಸಿದ ಮಲೈಕಾ, “ನಾನು ನಿಸ್ಸಂದೇಹವಾಗಿ ಸಲ್ಮಾನ್ ಖಾನ್ ಎಂದು ಭಾವಿಸುತ್ತೇನೆʼʼ ಎಂದು ಹೇಳಿದ್ದಾರೆ.

“ನನಗೆ, ಅರ್ಬಾಜ್ ನನ್ನ ಪಾಲಿಗೆ ಶಾಶ್ವತ ಗಂಡಸು (Arbaaz is my eternal man). ಇಲ್ಲಿಯವರೆಗೆ, ನಾವು ನಿಶ್ಚಿತಾರ್ಥ ಅಷ್ಟೇ ಮಾಡಿಕೊಂಡಿದ್ದೇವೆ ಎಂದು ಅನ್ನಿಸುತ್ತದೆ. ನಾವು ಮದುವೆಯಾಗಿದ್ದೇವೆ. ಮಗುವನ್ನು ಹೊಂದಿದ್ದೇವೆ ಎಂದು ನನಗೆ ಈಗಲೂ ಅನಿಸುವುದಿಲ್ಲ. ಆದರೆ ಸಲ್ಮಾನ್ ಖಾನ್ ಭಾರತದ ಅಲ್ಟಿಮೇಟ್ ಸೆಕ್ಸ್ ಸಿಂಬಲ್ ವ್ಯಕ್ತಿ ಎಂದು ನಾನು ಭಾವಿಸುತ್ತೇನೆʼʼ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Malaika arora reveal male sex symbol in the country in old zoom tv interview
byu/Sea-Fix691 inBollyBlindsNGossip

ಅರ್ಹಾನ್ ಖಾನ್ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಏಕೈಕ ಪುತ್ರ, ಈತ 2002ರಲ್ಲಿ ಜನಿಸಿದ್ದ. ಅರ್ಬಾಜ್ ಖಾನ್ – ಮಲೈಕಾ ಅರೋರಾ ಅವರು ವಿವಾಹವಾಗಿ 19 ವರ್ಷಗಳ ಕಾಲ ಜೊತೆಗಿದ್ದರು. ನಂತರ 2016ರಲ್ಲಿ ಬೇರ್ಪಟ್ಟು 2017ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಅವರನ್ನು ಮದುವೆಯಾದರು. ಮಲೈಕಾ ಅರೋರಾ ಅವರು ಮಾತ್ರ ವರ್ಷಗಳಿಂದ ತನಗಿಂತ ಕಿರಿಯ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

ನಟಿ ಮಲೈಕಾ ಅರೋರಾ (Malaika Arora) ಮತ್ತು ಅವರ ಮಾಜಿ ಪತಿ ಅರ್ಬಾಜ್ ಖಾನ್ ( Arbaaz Khan) ಅವರ ಮಗ ಅರ್ಹಾನ್ ಖಾನ್ ಅವರ ʻಪಾಡ್‌ಕಾಸ್ಟ್ ದಮ್ ಬಿರಿಯಾನಿʼಯ (‘Dumb Biryani’) ಎರಡನೇ ಸಂಚಿಕೆಯಲ್ಲಿ ನಟಿ ಈ ಹಿಂದೆ ಮಾಜಿ ಪತಿ ಅರ್ಬಾಜ್ ಖಾನ್‌ರಿಂದ ತನ್ನ ಮಗ ಯಾವ ಗುಣಗಳನ್ನು ಅನುವಂಶಿಕವಾಗಿ ಪಡೆದಿದ್ದಾನೆ ಎಂಬುದನ್ನು ಮಲೈಕಾ ಅರೋರಾ ಹೇಳಿದ್ದರು. ಮೊದಲಿಗೆ ಅರ್ಹಾನ್ ಮಲೈಕಾಗೆ ತಂದೆ ಅರ್ಬಾಜ್‌ ಅವರ ಕೆಲವು ಗುಣಗಳ ಬಗ್ಗೆ ಕೇಳಿದರು. ಅದಕ್ಕೆ ಮಲೈಕಾ ಉತ್ತರಿಸಿ ʻʻನಿನ್ನ ಮ್ಯಾನರಿಸಂ ನಿನ್ನ ತಂದೆಯಂತೆಯೇ ಇದೆ. ಇಬ್ಬರೂ ನಡುವೆ ಹಲವು ವಿಚಾರಗಳಿಗೆ ಹೋಲಿಕೆ ಇದೆ. ಅರ್ಬಾಜ್ ಅವರ ಮ್ಯಾನರಿಸಂ ಅಷ್ಟಾಗಿ ಅಟ್ರ್ಯಾಕ್ಟಿವ್‌ ಆಗಿಲ್ಲʼʼ ಎಂದಿದ್ದರು.

ಮಲೈಕಾ ಮಾತು ಮುಂದುವರಿಸಿ ʻʻಅರ್ಬಾಜ್ ನ್ಯಾಯಯುತ ವ್ಯಕ್ತಿ. ಅವರು ಎಂದಿಗೂ ವಿಷಯಗಳ ಬಗ್ಗೆ ಅತಿಯಾಗಿ ಯೋಚಿಸಲು ಹೋಗುವುದಿಲ್ಲ, ಕೆಲವು ವಿಷಯಗಳ ಬಗ್ಗೆ ತುಂಬಾ ಸ್ಪಷ್ಟವಾಗಿರುತ್ತಾರೆ. ಆ ಗುಣ ನಿನ್ನಲ್ಲಿ ಕೂಡ ಇದೆʼʼ ಎಂದಿದ್ದರು.

Continue Reading

ಮಾಲಿವುಡ್

Mohan Lal: ಅಣ್ಣಾವ್ರ ಹಾಡನ್ನು ಎಂಜಾಯ್‌ ಮಾಡಿದ ಮೋಹನ್ ಲಾಲ್; ವಿಡಿಯೊ ವೈರಲ್‌!

Mohan Lal: ಮೋಹನ್ ಲಾಲ್ ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜತೆ ‘ಮೈತ್ರಿ’ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಗಿರಿರಾಜ್ ನಿರ್ದೇಶನದ ಈ ಸೋಶಿಯಲ್ ಡ್ರಾಮಾ ಚಿತ್ರದಲ್ಲಿ ಮಹಾದೇವ್ ಗೊಡ್ಕೆ ಎನ್ನುವ ವಿಜ್ಞಾನಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ರಾಜ್‌ಕುಮಾರ್‌ ಅವರ ʻಎರಡೂ ಕನಸುʼ ಚಿತ್ರದ ʻಎಂದೆಂದೂ ನಿನ್ನನ್ನು ಮರೆತು” ಹಾಡನ್ನು ಪ್ಲೇ ಮಾಡಿ ಗುನುಗುತ್ತಿದ್ದರು ಮೋಹನ್ ಲಾಲ್.

VISTARANEWS.COM


on

Mohan Lal watching dr rajkumars super hit song
Koo

ಬೆಂಗಳೂರು: ಕನ್ನಡದ ಕುಲಪುತ್ರ ದಿವಂಗತ ಡಾ. ರಾಜ್ ಕುಮಾರ್ (Dr. Rajkumar) ಎಂದರೆ ಅದು ಕೇವಲ ವ್ಯಕ್ತಿಯಲ್ಲ. ಅವರು ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಟ. ಕನ್ನಡಿಗರಿಗೆಲ್ಲರಿಗೂ ಅವರೊಂದು ಶಕ್ತಿ. ಅವರು ಕನ್ನಡ ಭಾಷೆಯ ಅಸ್ಮಿತೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಸಾರ್ವಭೌಮ ಬಣ್ಣ ಹಚ್ಚಿದ್ದರು. ರಾಜ್‌ಕುಮಾರ್‌ ಅವರನ್ನು ಇಷ್ಟ ಪಡದವರೇ ಇಲ್ಲ. ಇನ್ನು ಮಾಲಿವುಡ್ ನಟ ಮೋಹನ್ ಲಾಲ್‌ಗೂ (Mohan Lal) ರಾಜ್‌ ಅಂದರೆ ಪ್ರೀತಿ. ರಾಜ್‌ಕುಮಾರ್‌ ಅವರ ʻಎರಡೂ ಕನಸುʼ ಚಿತ್ರದ ʻಎಂದೆಂದೂ ನಿನ್ನನ್ನು ಮರೆತು” ಹಾಡನ್ನು ಪ್ಲೇ ಮಾಡಿ ಗುನುಗುತ್ತಿದ್ದರು ಮೋಹನ್ ಲಾಲ್. ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಮೋಹನ್ ಲಾಲ್ ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜತೆ ‘ಮೈತ್ರಿ’ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಗಿರಿರಾಜ್ ನಿರ್ದೇಶನದ ಈ ಸೋಶಿಯಲ್ ಡ್ರಾಮಾ ಚಿತ್ರದಲ್ಲಿ ಮಹಾದೇವ್ ಗೊಡ್ಕೆ ಎನ್ನುವ ವಿಜ್ಞಾನಿ ಪಾತ್ರದಲ್ಲಿ ನಟಿಸಿದ್ದರು. 50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರೆ- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು.30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಇದೀಗ ಮೋಹನ್‌ಲಾಲ್‌ ತಮ್ಮ ಮೊಬೈಲ್ ನಲ್ಲಿ ರಾಜ್ ಕುಮಾರ್ ಹಾಡು ಕೇಳುತ್ತ ಅದೇ ರೀತಿ ಹಾಡಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: Actor Mohanlal: 56ನೇ ಬಾರಿಗೆ ಮೋಹನ್ ಲಾಲ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಈ ಫೇಮಸ್‌ ನಟಿ!

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading

ಸಿನಿಮಾ

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Actor Chetan Kumar Ahimsa: “ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್ʼ ಕೃತಿಯ ಪ್ರತಿಯನ್ನು ಸಿಎಂ ʼಸೋಮಾರಿ’ ಸಿದ್ದು ನೀಡಿದ್ದಾರೆ. ಎಷ್ಟು ವಿಪರ್ಯಾಸ” ಎಂದು ಚೇತನ್‌ ವ್ಯಂಗ್ಯವಾಡಿದ್ದಾರೆ.‌

VISTARANEWS.COM


on

actor Chetan Kumar Ahimsa
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ನಟ ಚೇತನ್‌ (Actor Chetan Kumar ahimsa) “ಸೋಮಾರಿ” ಎಂದು ಕರೆದಿದ್ದಾರೆ. ಅವರ ಟ್ವೀಟ್‌ ಇದೀಗ ಕುತೂಹಲವನ್ನು ಹಾಗೂ ಸಿದ್ದು ಅಭಿಮಾನಿಗಳಲ್ಲಿ ಅಸಮಾಧಾನವನ್ನು ಸೃಷ್ಟಿಸಿದೆ.

“ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್ʼ ಕೃತಿಯ ಪ್ರತಿಯನ್ನು ಸಿಎಂ ʼಸೋಮಾರಿ’ ಸಿದ್ದು ನೀಡಿದ್ದಾರೆ. ಎಷ್ಟು ವಿಪರ್ಯಾಸ” ಎಂದು ಚೇತನ್‌ ವ್ಯಂಗ್ಯವಾಡಿದ್ದಾರೆ.‌

ಅಂಬೇಡ್ಕರ್ (Dr. BR Ambedkar) ಅವರ ಕಾಲದಲ್ಲಿ ಅವರ ಅತಿದೊಡ್ಡ ರಾಜಕೀಯ ಶತ್ರು ಕಾಂಗ್ರೆಸ್ ಪಕ್ಷ (ರಾಜಕೀಯ ಹಿಂದೂ ಧರ್ಮ); ಇಂದಿನ ಕಾಂಗ್ರೆಸ್ ಪಕ್ಷ (ಅದೇ ಮನುವಾದ) ಅಂಬೇಡ್ಕರ್ ಅವರನ್ನು ಚುನಾವಣಾ ಲಾಭಕ್ಕಾಗಿ ಅಪಹರಿಸಲು ಪ್ರಯತ್ನಿಸುತ್ತಾರೆ. ಗಾಂಧಿಯವರ 36 ಬ್ರಾಹ್ಮಣ್ಯದ ಪುಸ್ತಕಗಳಲ್ಲಿ ಒಂದನ್ನು ಸಿಎಂ ಈ ಇಬ್ಬರು ವಿದ್ಯಾರ್ಥಿಗಳಿಗೆ ನೀಡಬೇಕಿತ್ತು; ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ಚೇತನ್ ಹೇಳಿದ್ದಾರೆ.

ಚೇತನ್‌ ಇಂಥ ಅಪ್ರಾಸಂಗಿಕ, ವಿವಾದಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ನಟ ಚೇತನ್ ವಿರುದ್ಧ ವಕೀಲರೊಬ್ಬರು ಶೇಷಾದ್ರಿಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಚೇತನ್ ವಿರುದ್ಧ ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್‌ಸಿಆರ್) ದಾಖಲಿಸಿದ್ದರು.

ಚೇತನ್ ತಮ್ಮ ಫೇಸ್ಬುಕ್ ಖಾತೆಯಲ್ಲಿ “ಕೆಂಪೇಗೌಡ ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್-ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ” ಎಂದು ಪೋಸ್ಟ್ ಮಾಡಿದ್ದರು.

ಇತ್ತೀಚೆಗೆ, “ಗಾಂಧಿವಾದವನ್ನು ಕಿತ್ತೊಗೆಯಬೇಕು. ಬೆಳಗಾವಿಯ ಸುವರ್ಣಸೌಧದಲ್ಲಿ ವಿ.ಡಿ ಸಾವರ್ಕರ್ ಜೊತೆಗೆ ಮಹಾತ್ಮಾ ಗಾಂಧೀಜಿ ಫೋಟೊವನ್ನು ತೆರವು ಮಾಡಬೇಕು” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Continue Reading
Advertisement
Payal Rajput Accuses Rakshana Producers Of Not Clearing Her Dues
ಟಾಲಿವುಡ್9 mins ago

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Salman Khan Ultimate Sex Symbol Says Malaika Arora
ಬಾಲಿವುಡ್13 mins ago

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Ebrahim Raisi
ವಿದೇಶ15 mins ago

Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

One year for the government Cm Siddaramaiah reveals many dreams and media interaction live
ರಾಜಕೀಯ24 mins ago

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

Drowned in water
ಬೆಂಗಳೂರು42 mins ago

Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

gold rate today sai pallavi
ಚಿನ್ನದ ದರ1 hour ago

Gold Rate Today: 22 ಕ್ಯಾರಟ್‌ ಚಿನ್ನದ ಬೆಲೆ 500 ರೂ. ಏರಿಕೆ; ಇಂದಿನ ಬಂಗಾರದ ಧಾರಣೆ ಹೀಗಿದೆ

Murder case
ದೇಶ1 hour ago

Murder Case: ತಾಜ್‌ ಮಹಲ್‌ ಸಮೀಪದಲ್ಲೇ ಘೋರ ಕೃತ್ಯ; ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

Mohan Lal watching dr rajkumars super hit song
ಮಾಲಿವುಡ್1 hour ago

Mohan Lal: ಅಣ್ಣಾವ್ರ ಹಾಡನ್ನು ಎಂಜಾಯ್‌ ಮಾಡಿದ ಮೋಹನ್ ಲಾಲ್; ವಿಡಿಯೊ ವೈರಲ್‌!

Lok Sabha Election 2024
Lok Sabha Election 20242 hours ago

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

actor Chetan Kumar Ahimsa
ಸಿನಿಮಾ2 hours ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ22 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ23 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌