ಯುವ ಸಾಮ್ರಾಟ್ ಚಿರು ಅಗಲಿಕೆಗೆ ಎರಡು ವರ್ಷ: ಪತಿಯನ್ನು ಭಾವುಕವಾಗಿ ಮೇಘನಾ ನೆನಪಿಸಿಕೊಳ್ಳೋದು ಹೀಗೆ - Vistara News

ಪ್ರಮುಖ ಸುದ್ದಿ

ಯುವ ಸಾಮ್ರಾಟ್ ಚಿರು ಅಗಲಿಕೆಗೆ ಎರಡು ವರ್ಷ: ಪತಿಯನ್ನು ಭಾವುಕವಾಗಿ ಮೇಘನಾ ನೆನಪಿಸಿಕೊಳ್ಳೋದು ಹೀಗೆ

ಚಿರಂಜೀವಿ ಸರ್ಜಾ ಅಕಾಲಿಕ ಮರಣಕ್ಕೀಡಾಗಿ 2 ವರ್ಷ ಕಳೆದಿದೆ. ಇವರ ನಟನೆಯ ಕೊನೆಯ ಚಿತ್ರ ರಾಜಮಾರ್ತಾಂಡ ರಿಲೀಸ್‌ಗೆ ಎಲ್ಲ ರೀತಿಯ ಪ್ರಯತ್ನಗಳು ಪ್ರಗತಿಯಲ್ಲಿವೆ. ಚಿರು ಪತ್ನಿ ಮೇಘನಾ, ಪತಿಯ ಅಗಲಿಕೆಯ ಕೊರಗಿನ ನಡುವೆಯೂ ನಟನೆ, ಕಿರುತೆರೆ ಕಾರ್ಯಕ್ರಮಗಳ ಜಡ್ಜ್‌ ಮತ್ತಿತರ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

ಚಿರಂಜೀವಿ ಸರ್ಜಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕನ್ನಡ ಚಿತ್ರರಂಗದ ಯುವ ಸಾಮ್ರಾಟ್‌ ಚಿರಂಜೀವಿ ಸರ್ಜಾ ಅಗಲಿ (ಜೂನ್‌ 7)  ಎರಡು ವರ್ಷ ಸಂದಿವೆ. ಕನಕಪುರ ರಸ್ತೆ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್‌ ಹೌಸ್‌ನಲ್ಲಿ ಚಿರು ಸಮಾದಿ ಇದ್ದು, ಎರಡನೇ ಪುಣ್ಯ ತಿಥಿಯಂದು ಅಲ್ಲಿಗೆ ತೆರಳಿ ಕುಟುಂಬಸ್ಥರು ಇಂದು ಪೂಜೆ ಸಲ್ಲಿಸಿದ್ದಾರೆ.

ಕನಕಪುರ ರಸ್ತೆಯ ನೆಲಗುಳಿಯ ಧ್ರುವ ಫಾರ್ಮ್ ಹೌಸ್ ನಲ್ಲಿರುವ ಚಿರು ಸಮಾಧಿಗೆ ಕುಟುಂಬಸ್ಥರಿಂದ
ಪೂಜೆ ನಡೆದಿದ್ದು, ಮೇಘನಾ ರಾಜ್ ಸರ್ಜಾ,ಅರ್ಜುನ್ ಸರ್ಜಾ, ದ್ರುವ ಸರ್ಜಾ ಹಾಗು ಕುಟುಂಬಸ್ಥರು ಭಾಗಿಯಾಗಿದ್ದರು.

ಚಿರು ಅಂತ್ಯ ಸಂಸ್ಕಾರ ಮಾಡಿದ್ದ ಸ್ಥಳದಲ್ಲಿ ಅಮೃತ ಶಿಲೆಯಲ್ಲಿ ಸಮಾಧಿ ಕಟ್ಟಿಸಿರುವ ಧ್ರುವ ಸರ್ಜಾ ,ಸಮಾಧಿ ಬಳಿ ಚಿರು ಹೆಸರನ್ನು ದೊಡ್ಡ ಅಕ್ಷರಗಳಲ್ಲಿ ಕೆತ್ತನೆ ಮಾಡಲಾಗಿದೆ. ಅಭಿಮಾನಿಗಳಿಗೂ ಚಿರು ಸಮಾಧಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೇಘನಾ ಭಾವುಕ ಮಾತು

ಚಿರುವಿನ ಪುಣ್ಯತಿಥಿಯಂದು ಕಳೆದ ವರ್ಷ ಮೇಘನಾ ಭಾವುಕ ಮಾತುಗಳನ್ನು ಹಂಚಿಕೊಂಡಿದ್ದರು. ‘ನೀನು ದೇವರ ಮನೆಗೆ ಹೋಗಿ ವರ್ಷವಾಯಿತು. ಎಷ್ಟು ಬೇಗ ಒಂದು ವರ್ಷ! ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರು ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರ ಗೌರವ. ಜನನಗಳಿಗೆ ನೀನು ತೋರಿಸುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ, ಉದಾರಗುಣ ಮತ್ತು ಅಜಾತ ಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ ಎಂದೆಂದೂ ನಿನ್ನ ನೆನಪಿನಲ್ಲೇ,’ ಎಂದು ಮೇಘನಾ ಬರೆದುಕೊಂಡಿದ್ದರು.

ಅಸ್ತಂಗತನಾದ ಚಿರು

ಒಂದರ ಮೇಲೆ ಒಂದು ಸಿನಿಮಾಗಳು ಇದ್ದರೂ ಕೊರೋನಾ ಲಾಕ್​ಡೌನ್​ನಿಂದಾಗಿ ಚಿರು ಮನೆಯಲ್ಲೇ ಇರುವಂತಾಗಿತ್ತು. ಅಲ್ಲದೆ ಆಗಲೇ ಮೇಘನಾ ಗರ್ಭಿಣಿ ಎಂಬ ವಿಷಯವೂ ತಿಳಿದಿತ್ತು. ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಚಿರು ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಆದರೂ ಸಹ ಚಿರು ಬದುಕಲಿಲ್ಲ. ಚಿರು ಅಗಲಿಕೆಯ ಸುದ್ದಿ ಇಡೀ ಕುಟುಂಬ ಹಾಗೂ ಅಭಿಮಾನಿಗಳಿಗೆ ಬರ ಸಿಡಿಲಿನಂತೆ ಬಡಿದಿತ್ತು.

ಇದನ್ನೂ ಓದಿ | ಲೊಡ್ಡೆ ಸಿನಿಮಾ ಮಾಡಿ ಲಾಸ್‌ ಆದ ನಿರ್ಮಾಪಕ ವಂಚನೆ ಪ್ರಕರಣದಲ್ಲಿ ಅಂದರ್‌

ಮೇಘನಾ , ಚಿರು ಜರ್ನಿ

ಮೇಘನಾ ರಾಜ್ ಆಗಾಗ ಚಿರು ಫೋಟೋವನ್ನು ಹಂಚಿಕೊಳ್ಳುತ್ತಾ ಭಾವುಕರಾಗಿ ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಮೇಘನಾ ರಾಜ್​ ಹಾಗೂ ಚಿರು ಅವರದ್ದು ಹತ್ತು ವರ್ಷಗಳ ಸ್ನೇಹ.

ಮೊದಲು ಸ್ನೇಹಿತರಾಗಿದ್ದ ಈ ಜೋಡಿ ನಂತರದಲ್ಲಿ ಪ್ರೀತಿಸಲಾರಂಭಿಸಿದರು. ಪ್ರೀತಿಯ ವಿಷಯ ಮನೆಯವರಿಗೆ ತಿಳಿಸಿ, ಹಿರಿಯ ಸಮ್ಮತಿ ಮೇರೆಗೆ ಮದುವೆಯಾಗಿದ್ದರು. ಕ್ರೈಸ್ತ ಹಾಗೂ ಹಿಂದೂ ಸಂಪ್ರದಾಯಂತೆ ಮದುವೆ ನೆರವೇರಿತ್ತು. 2018 ಏ. 29ರಂದು ಚಿರು ಹಾಗೂ ಮೇಘನಾ ಅವರ ಮದುವೆ ಕೋರಮಂಗಲದ ಹೊಸೂರು ರಸ್ತೆಯ ಸೇಂಟ್​ ಆಂಥೋನೀಸ್​ ಫೈರಿ ಚರ್ಚ್​ನಲ್ಲಿ ನಡೆದಿತ್ತು.

ಮೇಘನಾ ಬಾಳಿನಲ್ಲಿ ಜೂನಿಯರ್‌ ಚಿರು

ಕುಟುಂಬದವರ ಬಾಳಿನಲ್ಲಿ ಖುಷಿ ತಂದಿದ್ದು ಜೂನಿಯರ್ ಚಿರು. ಮೇಘನಾ ಅಕ್ಟೋಬರ್​ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು. ಆಗಲೇ ಕುಟುಂಬದವರು ಚಿರು ಮತ್ತೆ ಹುಟ್ಟಿ ಬಂದಿದ್ದಾರೆ ಎಂದು ಖುಷಿ ಪಟ್ಟರು. ಸದ್ಯ ಮೇಘನಾ ರಾಜ್​ ಮಗುವಿನ ಲಾಲನೆ ಹಾಗೂ ಪಾಲನೆ ಜೊತೆಗೆ ಸಿನಿಮಾ ನಟನೆ, ಕಿರುತೆರೆ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ನಟ ಚಿರಂಜೀವಿ ಹಾಗೂ ಮೇಘನಾ ರಾಜ್‌ ಪುತ್ರ ರಾಯನ್ ರಾಜ್ ಸರ್ಜಾ ಸ್ಟಾರ್‌ ಕಿಡ್ಸ್‌ಗಳ ಪೈಕಿಯಲ್ಲಿ ಹೆಚ್ಚು ಆಕ್ಟಿವ್‌ ಹಾಗೂ ಹೆಚ್ಚು ಅಭಿಮಾನಿಗಳ ಪ್ರೀತಿ ಪಡೆದಿದ್ದಾನೆ. ಸದಾ ಸೋಷಿಯಲ್‌ ಮಿಡಿಯಾ ಮೂಲಕ ಮೇಘನಾ ರಾಜ್‌, ರಾಯನ್‌ ಸರ್ಜಾ ಕುರಿತಾದ ಫೋಟೋವನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗಾಗಲೇ ಒಂದುವರೆ ವರ್ಷದವನಾಗಿರೋ ರಾಯನ್ ಮನೆಯಿಂದ ಹೊರ ಬಂದು ಆಟವಾಡುತ್ತಾನೆ.

ರಿಯಾಲಿಟಿ ಶೋ ಮತ್ತು ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ಮೇಘನಾ

ಮೇಘನಾ ರಾಜ್ ರಿಯಾಲಿಟಿ ಶೋ ಜಡ್ಜ್ ಆಗಿ ಮತ್ತು ಕೆಲ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

ಮೇ 13 ರಂದು ಮೇಘನಾ ಹಾಗೂ ಸೃಜನ್ ಅಭಿನಯದ ಸೆಲ್ಫಿ ಮಮ್ಮಿ ಗೂಗಲ್‌ ಡ್ಯಾಡಿ ಚಿತ್ರ ತೆರೆಕಂಡಿತ್ತು. ಸದ್ಯದಲ್ಲಿಯೇ ಚಿರು ಅಗಲಿಕೆ ನಡುವೆ ಕೊನೆಯ ಸಿನಿಮಾ ರಾಜಮಾರ್ತಾಂಡ ರಿಲೀಸ್ ಆಗಲಿದೆ.

ಇದನ್ನೂ ಓದಿ | ಶಿವಣ್ಣ ಹುಟ್ಟುಹಬ್ಬಕ್ಕೂ ಮುನ್ನ ಬೈರಾಗಿ ರಿಲೀಸ್, 123ನೇ ಸಿನಿಮಾ ನೋಡಲು ಅಭಿಮಾನಿಗಳ ಕಾತರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Food Poisoning: ಆರತಿ (7).ಪ್ರಿಯಾಂಕ್ (9) ಮೃತಪಟ್ಟ ಮಕ್ಕಳು. ಹುಸೇನಮ್ಮ (35).ಮಾರುತಿ (40) ಲಕ್ಷ್ಮಣ್ (60) ಅಸ್ವಸ್ಥರಾಗಿದ್ದಾರೆ. ಕೂಲಿ ಕೆಲಸಕ್ಕೆಂದು ವಡ್ಲೂರು ಗ್ರಾಮಕ್ಕೆ ಬಂದಿದ್ದ ಕುಟುಂಬವು ವಿಷಾಹಾರ ಸೇವನೆಯಿಂದ ಸಂಕಷ್ಟಕ್ಕೆ ಬಿದ್ದಿದೆ.

VISTARANEWS.COM


on

Food Poisoning
Koo

ರಾಯಚೂರು: ವಿಷ ಆಹಾರ ಸೇವನೆಯಿಂದಾಗಿ (Food Poisoning) ಅಸ್ವಸ್ಥಗೊಂಡ ಒಂದೇ ಕುಟುಂಬಕ್ಕೆ ಸೇರಿದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಮೂವರು ಸಂಪೂರ್ಣ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ರಾಯಚೂರು ತಾಲೂಕಿನ ವಡ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಸ್ವಸ್ಥಗೊಂಡಿರುವ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಆರತಿ (7).ಪ್ರಿಯಾಂಕ್ (9) ಮೃತಪಟ್ಟ ಮಕ್ಕಳು. ಹುಸೇನಮ್ಮ (35).ಮಾರುತಿ (40) ಲಕ್ಷ್ಮಣ್ (60) ಅಸ್ವಸ್ಥರಾಗಿದ್ದಾರೆ. ಕೂಲಿ ಕೆಲಸಕ್ಕೆಂದು ವಡ್ಲೂರು ಗ್ರಾಮಕ್ಕೆ ಬಂದಿದ್ದ ಕುಟುಂಬವು ವಿಷಾಹಾರ ಸೇವನೆಯಿಂದ ಸಂಕಷ್ಟಕ್ಕೆ ಬಿದ್ದಿದೆ.
ಅವರೆಲ್ಲರೂ ಮೂಲತ ಲಿಂಗಸಗೂರು ತಾಲೂಕಿನ ಕಮಲದಿನ್ನಿ ಗ್ರಾಮದ ನಿವಾಸಿಗಳು. ಇಟ್ಟಿಗೆ ತಯಾರಿಕೆಯಲ್ಲಿ ಕೂಲಿ ಕಾರ್ಮಿಕರಾಗಿ ವಡ್ಲೂರಿಗೆ ಬಂದಿದ್ದರು. ರಜೆ ನಿಮಿತ್ತ ಪೋಷಕರ ಬಳಿ ಇಬ್ಬರೂ ಮಕ್ಕಳು ಬಂದಿದ್ದರು.

ಅವರೆಲ್ಲರೂ ರಾತ್ರಿ ಊಟಕ್ಕೆ ಚಪಾತಿ. ಹೆಸರಕಾಳು. ಅನ್ನ.ಸಾಂಬಾರು ಸೇವಿಸಿದ್ದರು. ಆ ಬಳಿಕ ಅವರೆಲ್ಲರ ಆರೋಗ್ಯದಲ್ಲಿ ಏರುಪೇರಾಗಿದೆ. ಮಕ್ಕಳು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

ಉಡುಪಿ: ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ (Car Accident) ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.

ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Girl Saved Mother : ಬುದ್ಧಿವಂತ ಬಾಲಕಿ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಕಾಪಾಡಿದ 7 ವರ್ಷದ ಪುತ್ರಿ

ಅಲ್ಲಿನ ಅಭಯಂ 181 ಸಹಾಯವಾಣಿ ಅಧಿಕಾರಿಗಳ ಪ್ರಕಾರ, ಮಣಿಕಟ್ಟು ಸೀಳಿ ಬಿದ್ದಿರುವ ನಂತರ ತಾಯಿಗೆ ತೀವ್ರ ರಕ್ತಸ್ರಾವವಾಗುತ್ತಿದೆ ಎಂದು ಬಾಲಕಿಯೊಬ್ಬಳು ಕರೆ ಮಾಡಿದ್ದಾಳೆ. ತಕ್ಷಣ ಅವರ ಅಲ್ಲಿಗೆ ಹೋಗಿದ್ದಾಗ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಅವರು ಮಹಿಳೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ.

VISTARANEWS.COM


on

girl Saved Mother
Koo

ಅಹಮದಾಬಾದ್​​: ಅಪ್ಪನ ದೌರ್ಜನ್ಯಕ್ಕೆ ಒಳಗಾಗಿ ಆತ್ಮಹತ್ಯಗೆ ಯತ್ನಿಸುತ್ತಿದ್ದ ತನ್ನ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಸಮಯ ಪ್ರಜ್ಞೆ ಹಾಗೂ ಚಾತುರ್ಯದ (Girl Saved Mother ) ಮೂಲಕ ಬದುಕುಳಿಸಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಅಂದ ಹಾಗೆ ಬಾಲಕಿಗೆ ನೆರವಾಗಿದ್ದು ಆಕೆ ತರಗತಿಯಲ್ಲಿ ಕಲಿತ ಪಾಠ. ಅಂದರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿಗೆ ಕರೆ ಮಾಡಬೇಕು ಎಂಬ ಶಿಕ್ಷಕರ ಹಿತನುಡಿ. ಹಾಗೆಯೇ ಕೈಯ ರಕ್ತನಾಳ ಕತ್ತರಿಸಿಕೊಂಡು ಅಸ್ವಸ್ಥಗೊಂಡು ಬಿದ್ದಿದ್ದ ತಾಯಿಯನ್ನು ನೋಡಿಯೂ ಗಾಬರಿಯಾಗದ ಆಕೆ ಸಹಾಯವಾಣಿಗೆ ಕರೆ ಮಾಡಿ ಆಂಬ್ಯುಲೆನ್ಸ್ ಕರೆಸಿ ಪ್ರಾಣ ಉಳಿಸಿದ್ದಾಳೆ.

ಕಳೆದ ಗುರುವಾರ ರಾತ್ರಿ ಘಟನೆ ನಡೆದಿದೆ ಎಂದು ಗುಜರಾತ್​ನ ಅಭಯಂ 181 ಸಹಾಯವಾಣಿ ಅಧಿಕಾರಿಗಳು ಹೇಳಿದ್ದಾರೆ. ಮಣಿಕಟ್ಟು ಸೀಳಿ ಬಿದ್ದಿರುವ ತಾಯಿಗೆ ತೀವ್ರ ರಕ್ತಸ್ರಾವವಾಗುತ್ತಿದೆ ಎಂದು ಬಾಲಕಿಯೊಬ್ಬಳು ಕರೆ ಅವರಿಗೆ ಕರೆ ಮಾಡಿದ್ದರು ತಕ್ಷಣ ಅವರ ಅಲ್ಲಿಗೆ ಹೋಗಿದ್ದಾಗ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಅವರು ಮಹಿಳೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ.

ಆತ್ಮಹತ್ಯೆ ಮಾಡಲು ಮುಂದಾಗಿರುವ ಮಹಿಳೆಯ ಗಂಡ ಅಪರಾಧವೊಂದರಲ್ಲಿ ಜೈಲು ಸೇರಿದ್ದ. ಅಲ್ಲಿಂದ ಬಿಡುಗಡೆಯಾಗಿ ಬಂದ ಬಳಿಕವೂ ಸಣ್ಣ ವಿಷಯಗಳಿಗೆ ಜಗಳವಾಡಲು ಪ್ರಾರಂಭಿಸಿದ್ದ. ಆಗಾಗ್ಗೆ ನಡೆಯುವ ಜಗಳಗಳಿಂದ ಬೇಸತ್ತ ಮಹಿಳೆ ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದಳು. ಪುತ್ರಿಯ ಸಮಯೋಚಿತ ಕರೆಯಿಂದ ಅವರೀಗ ಬದುಕಿದ್ದರೆ. ಶಾಲೆಯಲ್ಲಿ ಪಡೆದ ತರಬೇತಿಯನ್ನು ನೆನಪು ಮಾಡಿಕೊಂಡ ಬಾಲಕಿ ನಮ್ಮ ಸಹಾಯವಾಣಿ ಮತ್ತು 108 ಆಂಬ್ಯುಲೆನ್ಸ್ ಸೇವೆಗಳ ತುರ್ತು ಸಂಖ್ಯೆಗಳನ್ನು ನೆನಪಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಲಿಬಿಲಿಗೊಳ್ಳದ ಬಾಲಕಿ

ಸಾಮಾನ್ಯವಾಗಿ ಸಣ್ಣ ಮಕ್ಕಳು ಕಠಿಣ ಪರಿಸ್ಥಿತಿಯಲ್ಲಿ ಹೆಚ್ಚು ಗಲಿಬಿಲಿಗೆ ಒಳಗಾಗುತ್ತಾರೆ. ಅವರಿಗೆ ಮುಂದೇನು ಮಾಡಬೇಕು ಎಂಬ ಯೋಚನೆಯೇ ಇರುವುದಿಲ್ಲ. ಅಲ್ಲದೆ ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ಸಾಧ್ಯವಾಗದೇ ಜೋರಾಗಿ ಅಳುವುದಕ್ಕೆ ಆರಂಭಿಸುತ್ತಾರೆ. ಆದರೆ ಈ ಏಳು ವರ್ಷದ ಬಾಲಕಿ ಆ ರೀತಿ ಮಾಡಿಲ್ಲ. ತಾಯಿ ರಕ್ತ ಸಿಕ್ತ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿಯೂ ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿದ್ದಾಳೆ. ಆಕೆಯ ಕರೆಯಿಂದಾಗಿ ಜೀವವೊಂದು ಉಳಿದಿದೆ.

ಬದುಕಿನ ಪಾಠ ಅಗತ್ಯ

ಆಧುನಿಕ ಜಗತ್ತಿನಲ್ಲಿ ಜನರಿಗೆ ತುರ್ತು ಪರಿಸ್ಥಿತಿಗಳು ಹೆಚ್ಚಾಗಿ ಎದುರಾಗುತ್ತವೆ. ಆದರೆ, ಬಹುತೇಕ ಸಂದರ್ಭದಲ್ಲಿ ಅವುಗಳನ್ನು ನಿರ್ವಹಿಸಲು ಸಾಧ್ಯವಾಗದೇ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತವೆ. ಹೀಗಾಗಿ ತುರ್ತು ಸಂದರ್ಭದಲ್ಲಿ ಪ್ರಾಣ ಉಳಿಸಲು ಅಥವಾ ಆ ಕ್ಷಣದಿಂದ ಬಚಾವಾಗಲು ಏನು ಮಾಡಬೇಕು ಎಂಬ ತರಬೇತಿ ಅಗತ್ಯವಾಗಿದೆ. ಅದರಲ್ಲೂ ಶಾಲಾ ಮಕ್ಕಳಿಗೆ ಈ ನಿಟ್ಟಿನಲ್ಲಿ ತರಬೇತಿ ಕಡ್ಡಾಯ.

ಇದನ್ನೂ ಓದಿ: Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಅರೆಸ್ಟ್‌

ಜನಜಂಗುಳಿ ತುಂಬಿರುವ ಪೇಟೆ ಮತ್ತು ಏಕಾಂಗಿಯಾಗಿರುವ ವೇಳೆ ನಾನಾ ಆತಂಕಗಳನ್ನು ಇಂದಿನ ಮಕ್ಕಳು ಎದುರಿಸುತ್ತಾರೆ. ಆದರೆ, ಅದನ್ನು ನಿಭಾಯಿಸಲು ಸಾಧ್ಯವಾಗದೇ ಮಕ್ಕಳು ದುರ್ಘಟನೆಗಳ ಬಲಿಪಶು ಆಗುತ್ತಾರೆ. ಹೀಗಾಗಿ ಶಾಲಾ ಹಂತದಲ್ಲಿಯೇ ಇಂಥ ಸಂದರ್ಭಗಳನ್ನು ನಿಭಾಯಿಸುವ ತಂತ್ರಗಳನ್ನು ಹೇಳಿಕೊಡಬೇಕಾಗುತ್ತದೆ.

ಶಾಲಾ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಈಗ ಲೈಂಗಿಕ ದೌರ್ಜನ್ಯದ ವಿರುದ್ಧ ಹೇಗೆ ಹೋರಾಡಬೇಕು ಎಂಬ ಪಾಠವನ್ನು ಹೇಳಿಕೊಡಲಾಗುತ್ತದೆ. ಅದು ಬಹುತೇಕ ಸಾಫಲ್ಯ ಕಾಣುತ್ತಿದೆ. ಆದರೆ, ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಕೆಲವು ತಂತ್ರಗಳನ್ನು ಕೆಲವೊಂದು ಶಾಲೆಗಳಲ್ಲಿ ಮಾತ್ರ ಕಲಿಸಲಾಗುತ್ತದೆ. ಇಲ್ಲಿ ಗಂಡು ಹಾಗೂ ಹೆಣ್ಣು ಎಂಬ ಭೇದವಿಲ್ಲದೇ ಎಲ್ಲ ಮಕ್ಕಳಿಗೂ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಪಾಠ ಹೇಳಿಕೊಡಬೇಕಾದ ಅಗತ್ಯವಿದೆ.

ಮೇಲಿನ ಪ್ರಕರಣದಲ್ಲಿ ಬಾಲಕಿಗೆ ಸಹಾಯವಾಣಿಗೆ ಕರೆ ಮಾಡಬೇಕು ಎಂದು ಶಾಲೆಯಲ್ಲಿ ಹೇಳಿಕೊಟ್ಟಿದ್ದ ಕಾರಣ ಆಕೆಯ ತಾಯಿಯ ಪ್ರಾಣ ಉಳಿದಿದೆ. ಒಂದು ವೇಳೆ ಆಕೆ ಅಂಥದ್ದೊಂದು ಪರಿಸ್ಥಿತಿಯನ್ನು ಎದುರಿಸಲು ಸಿದ್ಧಗೊಳ್ಳದೇ ಹೋಗಿದ್ದರೆ ತಬ್ಬಲಿಯಾಗಬೇಕಾಗಿತ್ತು.

Continue Reading

ಪ್ರಮುಖ ಸುದ್ದಿ

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Narendra Modi: ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ.

VISTARANEWS.COM


on

Modi in Karnataka stay in Belagavi tomorrow and Huge gatherings at five places
Koo

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾಗಿಯಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ. ಈ ಸಭೆಯ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

Car Accident : ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

Car Accident: ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

VISTARANEWS.COM


on

Car Accident
Koo

ಉಡುಪಿ: ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ (Car Accident) ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.

ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಬೆಂಗಳೂರು ನಗರ ವಲಯದಲ್ಲಿ ಅರಣ್ಯಕ್ಕೆ ಬೆಂಕಿ, ಭಾರೀ ಹಾನಿ

ಬೆಂಗಳೂರು: ಮಹಾನಗರದ ಹೊರವಲಯದ ಸುಮನ್ನಹಳ್ಳಿ ಬ್ರಿಡ್ಜ್ ಬಳಿ ಶ್ರೀಗಂಧ ಕಾವಲ್ ನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಮೂರು ಎಕರೆ ಅರಣ್ಯ ಪ್ರದೇಶದಲ್ಲಿ ಹೊತ್ತಿ ಮರಗಳು ಹೊತ್ತಿ ಉರಿದಿವೆ. ಒಣ ಕಸಕ್ಕೆ ಬೆಂಕಿ ಹಾಕಿರುವ ಹಿನ್ನಲೆ ಮರಗಳಿಗೆ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ. ಬೆಂಗಳೂರು ನಗರದಲ್ಲಿ ಬೇಸಿಗೆ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಕಸಕ್ಕೆ ಹಾಕಿದ ಬೆಂಕಿ ಅರಣಕ್ಕೆ ತಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ರಾತ್ರಿ ವೇಳೆ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ. ಎರಡು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಅರಣ್ಯವು ಬಿಬಿಎಂಪಿ ವ್ಯಾಪ್ತಿಗೆ ಸೇರಿದ್ದು, ಅದರಲ್ಲಿ 1.5 ಎಕರೆ ಜಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ತೆರವುಗೊಳಿಸಿದ ಮರಗಳನ್ನು ಇಲ್ಲಿ ತಂದು ಡಂಪ್ ಮಾಡಲಾಗುತ್ತಿತ್ತು. ಅದೇ ರೀತಿ ಹೊರಗಡೆ ಮಾರಟ ಮಾಡುವ ಕಟ್ಟಿಗೆಗಳನ್ನು ಇಲ್ಲಿ ತಂದು ಹಾಕಿ ಹರಾಜು ಮಾಡಲಾಗ್ತಿತ್ತು. ಹರಾಜು ಆಗದೇ ಉಳಿದಿದ್ದ ಕಟ್ಟಿಗೆಗಳೆಲ್ಲ ಅರಣ್ಯ ವ್ಯಾಪ್ತಿಯಲ್ಲಿ ರಾಶಿ ಬಿದ್ದಿದ್ದವು. ತೀವ್ರ ಬಿಸಿಲಿನ ಕಾರಣ ಸಂಪೂರ್ಣ ಒಣಗಿದ್ದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಸಾಧ್ಯತೆಯೂ ಇದೆ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸತತ 9 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Continue Reading
Advertisement
ರಾಜಕೀಯ7 mins ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

777 Charlie
ಸ್ಯಾಂಡಲ್ ವುಡ್8 mins ago

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

Food Poisoning
ಪ್ರಮುಖ ಸುದ್ದಿ18 mins ago

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Manjummel Boys
ಮಾಲಿವುಡ್49 mins ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ56 mins ago

Girl Saved Mother : ಬುದ್ಧಿವಂತ ಬಾಲಕಿ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಕಾಪಾಡಿದ 7 ವರ್ಷದ ಪುತ್ರಿ

ವಿದೇಶ1 hour ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್1 hour ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ದೇಶ2 hours ago

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

Car Accident
ಪ್ರಮುಖ ಸುದ್ದಿ2 hours ago

Car Accident : ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202418 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ23 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌