Rajyasabha Election | ಕಾಂಗ್ರೆಸ್‌ಗೆ HDK ಓಪನ್‌ ಆಫರ್‌ - Vistara News

ಮೈಸೂರು

Rajyasabha Election | ಕಾಂಗ್ರೆಸ್‌ಗೆ HDK ಓಪನ್‌ ಆಫರ್‌

ವಿಧಾನಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೈಸೂರು ಜಿಲ್ಲೆಗೆ ಭೇಟಿ ನೀಡಿದ್ದಾರೆ.

VISTARANEWS.COM


on

ಎಚ್‌.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸಿದರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಉಳಿಕೆ ಮತಗಳಿಂದ ಎರಡನೇ ಅಭ್ಯರ್ಥಿ ಗೆಲುವು ಸಾಧ್ಯ ಇಲ್ಲ. ಹೀಗಾಗಿ ಜೆಡಿಎಸ್ ಎರಡನೇ ಪ್ರಾಶಸ್ತ್ಯ ಕೊಟ್ಟರೂ ಪ್ರಯೋಜನ ಆಗುವುದಿಲ್ಲ ಎಂದಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷಕ್ಕೆ ಓಪನ್‌ ಆಫರ್‌ ನೀಡಿದ್ದಾರೆ. ಕಾಂಗ್ರೆಸ್‌ನ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್‌ಗೆ ನೀಡಿ ಎಂದು ಕಾಂಗ್ರೆಸ್‌ ಪಕ್ಷವನ್ನು ಆಗ್ರಹಿಸಿದ್ದಾರೆ.

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಜಿಲ್ಲೆಗೆ ಚಾಮುಂಡಿ ಬೆಟ್ಟಕ್ಕೆ ಮಂಗಳವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೈತ್ರಿ ಬೇಕಿದ್ದರೆ ಕಾಂಗ್ರೆಸ್‌ನವರು ಮೊದಲೇ ಮಾತನಾಡಬೇಕಿತ್ತು. ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ಕರೆ ಮಾಡಿ, ನಮ್ಮ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ತಮಗೆ ನೀಡುವಂತೆ ಕೇಳಿದ್ದಾರೆ. ನಮ್ಮ ಬಳಿ 32 ಮತಗಳಿವೆ, ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್‌ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಬೇಕಿದ್ದರೆ ನಮ್ಮ ಪಕ್ಷದ 2ನೇ ಪ್ರಾಶಸ್ತ್ಯದ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡುತ್ತೇವೆ. ಕಾಂಗ್ರೆಸ್ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಲಿ ಎಂದು ಹೊಸ ಆಫರ್ ಮುಂದಿಟ್ಟರು.

ಜೆಡಿಎಸ್ ಅಭ್ಯರ್ಥಿ ನಿವೃತ್ತಿ ಪಡೆಯಲಿ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಬಿಜೆಪಿ ಸೋಲಬೇಕು ಎನ್ನುವ ಉದ್ದೇಶ ಇದ್ದರೆ ಅವರು ಜೆಡಿಎಸ್ ಜತೆ ಚರ್ಚೆ ಮಾಡುತ್ತಿದ್ದರು. ನನ್ನ ಜತೆಗೆ ಅಲ್ಲದಿದ್ದರೂ ಅವರೊಂದಿಗೆ ಚೆನ್ನಾಗಿರುವವರೊಂದಿಗೆ ಚರ್ಚೆ ಮಾಡಬಹುದಿತ್ತು. ಬಿಜೆಪಿ ಅಭ್ಯರ್ಥಿ ಸೋಲಿಸಲು ಜೆಡಿಎಸ್ ಅಭ್ಯರ್ಥಿ ಹಾಕಬೇಡಿ ಅಂತ ಯಾರೂ ಕೇಳಲಿಲ್ಲ. ಕಾಂಗ್ರೆಸ್‌ನ 23 ಮತ ಉಳಿಯುತ್ತವೆ, ಆದ್ದರಿಂದ ದೇವೇಗೌಡರು ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ್ದಾರೆ. ಕುಪೇಂದ್ರ ರೆಡ್ಡಿ ಕಾಂಗ್ರೆಸ್‌ ಜತೆ ನಿಕಟವಾಗಿ ಕೆಲಸ ಮಾಡಿದ್ದಾರೆ ಎಂದರು.

ಜೆಡಿಎಸ್‌ನಿಂದ 8-10 ಮತ ಒಡೆಯುತ್ತೇವೆ ಎಂದು ಮನವೊಲಿಸಿ ಕಾಂಗ್ರೆಸ್‌ನವರು ಎರಡನೇ ಅಭ್ಯರ್ಥಿ ಹಾಕಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಎರಡನೇ ಅಭ್ಯರ್ಥಿ ಹಾಕದೆ ಇದ್ದರೆ ಬಿಜೆಪಿ ಮೂರನೇ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಸಾ.ರಾ.ಮಹೇಶ್, ಬಂಡೆಪ್ಪ ಕಾಶಂಪೂರ್, ಅಶ್ವಿನ್ ಕುಮಾರ್, ಕೆ.ಟಿ.ಶ್ರೀಕಂಠೇಗೌಡ, ಸಿ.ಎನ್. ಮಂಜೇಗೌಡ ಮುಂತಾದವರು ಇದ್ದರು.

ಇದನ್ನೂ ಓದಿ | ರಾಜ್ಯಸಭೆ ಚುನಾವಣೆ | ಕೇಂದ್ರ ಸಚಿವ ಕಿಶನ್‌ ರೆಡ್ಡಿ ಉಸ್ತುವಾರಿ: ಎಲ್ಲರ ಅರ್ಜಿ ಊರ್ಜಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Karnataka Weather Forecast: ಬೆಂಗಳೂರಲ್ಲಿ ಸೂರ್ಯ ಮರೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯು (Rain news) ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬುಧವಾರ ಕರ್ನಾಟಕದ ಕರಾವಳಿಯಲ್ಲಿ ಮಳೆಯು (Heavy rain) ಅಬ್ಬರಿಸಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಗೆ ಯಾವುದೇ ಮಳೆ ಸೂಚನೆ ಇಲ್ಲ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಹಾಗೂ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

ಕರ್ನಾಟದಲ್ಲಿ ಮಳೆಗಾಲ ಆರಂಭವಾಗಿದೆ. ಕೆಲವು ಪ್ರವಾಸಿ (Karnataka Tour) ತಾಣಗಳಂತೂ ನಯನ ಮನೋಹರವಾಗಿ ಕಂಗೊಳಿಸುತ್ತಿವೆ. ಮಾಂತ್ರಿಕವಾಗಿ ಸಿಂಗಾರಗೊಂಡಂತಿವೆ. ದೂರದೂರದ ಪ್ರವಾಸಿಗರನ್ನು (tourists) ತನ್ನತ್ತ ಆಕರ್ಷಿಸುತ್ತಿವೆ. ಒಂದೆಡೆ ಪಶ್ಚಿಮ ಘಟ್ಟಗಳು (Western Ghats), ಇನ್ನೊಂದೆಡೆ ಅರಬ್ಬಿ ಸಮುದ್ರದ (arabian sea) ಸಮೀಪವಿರುವ ಕರಾವಳಿ ಪ್ರದೇಶಗಳು ಮಳೆಯ ಧಾರೆಯಲ್ಲಿ ತೋಯ್ದು ತನ್ನನ್ನು ತಾನು ಸ್ವಚ್ಛ, ಸುಂದರ ಮತ್ತಷ್ಟು ಸಿಂಗಾರಗೊಳಿಸಿದಂತೆ ಭಾಸವಾಗುತ್ತಿದೆ.

ಭಾರೀ ಮಳೆಯ ಆರಂಭದ ದಿನಗಳಲ್ಲಿ ಕರ್ನಾಟಕದ ಹವಾಮಾನವು ಆರ್ದ್ರವಾಗಿರುತ್ತದೆ ಮತ್ತು ಆಹ್ಲಾದಕರವಾಗಿರುತ್ತದೆ. ಕರ್ನಾಟಕದ ಕರಾವಳಿ ಪ್ರದೇಶಗಳು ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಸಿರಿನಿಂದ ಚಿತ್ರಿಸಲ್ಪಟ್ಟಂತೆ ಭಾಸವಾಗುತ್ತದೆ. ಪಶ್ಚಿಮ ಘಟ್ಟಗಳಂತೂ ಆಕರ್ಷಣೆಯ ಕೇಂದ್ರವಾಗುತ್ತದೆ.

ಹಗಲಿನಲ್ಲಿ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿದರೆ ರಾತ್ರಿಯಲ್ಲಿ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವುದು. ಹಗಲು ಸುರಿಯುವ ಮಳೆಯಲ್ಲೂ ಹೊರಗೆ ಸುತ್ತಾಡಲು ಮನ ಬಯಸಿದರೆ, ರಾತ್ರಿ ತಂಪನೆಯ ವಾತಾವರಣ ಬೆಚ್ಚನೆ ಹೊದಿಕೆ ಹೊದ್ದು ಮಲಗಲು ಪ್ರೇರೇಪಿಸುತ್ತದೆ.

ಜಲಪಾತ, ಗಿರಿಧಾಮ, ಕಡಲ ತೀರಗಳು ಮಳೆಗಾಲದಲ್ಲಿ ಅನ್ವೇಷಿಸಬಹುದಾದ ಸಾಕಷ್ಟು ಆಕರ್ಷಣೆಗಳು ಕರ್ನಾಟಕದಲ್ಲಿವೆ. ಮಾನ್ಸೂನ್ ನಲ್ಲಿ ಈ ಸ್ಥಳಗಳ ಮಾಂತ್ರಿಕ ಮೋಡಿಯನ್ನು ಮಾಡುವುದು. ಮಳೆಗಾಲದಲ್ಲಿ ಕರ್ನಾಟಕದಲ್ಲಿ ನೋಡಲೇ ಬೇಕಾದ 15 ಪ್ರಮುಖ ಸ್ಥಳಗಳಿವೆ. ಇದರ ಸೌಂದರ್ಯವನ್ನು ಈ ಮಳೆಗಾಲದಲ್ಲಿ ಅನುಭವಿಸದೇ ಇದ್ದರೆ ಮುಂದಿನ ಮಳೆಗಾಲದವರೆಗೂ ಕಾಯಬೇಕಾಗುವುದು.


1. ಹಂಪಿ

ಹಂಪಿ ಕರ್ನಾಟಕದ ಅತ್ಯುತ್ತಮ ಮಾನ್ಸೂನ್ ಸ್ಥಳಗಳಲ್ಲಿ ಒಂದಾಗಿದೆ. ಇದ್ದಕ್ಕಿದ್ದಂತೆ, ಹಂಪಿಯ ಶುಷ್ಕ ಪ್ರದೇಶಗಳು ಹಸಿರು ವಿಸ್ತಾರವಾದ ಹುಲ್ಲುಗಾವಲುಗಳಾಗಿ ಬದಲಾಗುತ್ತವೆ. ಹಂಪಿಯ ರಮಣೀಯ ಭೂದೃಶ್ಯವನ್ನು ಹೊಂದಿರುವ ಹೇರಳವಾದ ದೇವಾಲಯಗಳು ಮಳೆಯಲ್ಲಿ ರುದ್ರರಮಣೀಯವಾಗಿ ಕಾಣುತ್ತವೆ. ಇಲ್ಲಿನ ಆಹ್ಲಾದಕರ ವಾತಾವರಣವು ಅದ್ಭುತವಾದ ಫೋಟೋಗಳನ್ನು ಒದಗಿಸುವುದು. ಮೋಡ ಕವಿದ ಆಕಾಶವು ದೇವಾಲಯಗಳ ಫೋಟೋಗಳಿಗೆ ಅದ್ಭುತವಾದ ಹಿನ್ನೆಲೆಯನ್ನು ಉಂಟು ಮಾಡುತ್ತದೆ. ಪ್ರಬಲವಾದ ಹಂಪಿ ನದಿಯಲ್ಲಿ ಕೊರಾಕಲ್ ದೋಣಿ ಸವಾರಿ ಮತ್ತು ರಾಕ್ ಕ್ಲೈಂಬಿಂಗ್ ಹೆಚ್ಚು ರೋಮಾಂಚನಕಾರಿಯಾಗಿರುತ್ತದೆ.


2. ಮರವಂತೆ

ಕರ್ನಾಟಕದ ಎನ್ ಹೆಚ್ 66ರಲ್ಲಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒಂದು ಸಣ್ಣ ಹಳ್ಳಿ ಮರವಂತೆಯಲ್ಲಿ ಸಮುದ್ರ ಮತ್ತು ನದಿ ಒಟ್ಟಿಗೆ ಸೇರುವ ದೃಶ್ಯ ನಯನಮನೋಹರವಾಗಿರುತ್ತದೆ. ಒಂದು ಕಡೆ ಗ್ರಾಮವು ಅರಬ್ಬೀ ಸಮುದ್ರದಿಂದ ಆವೃತವಾಗಿದ್ದರೆ ಇನ್ನೊಂದು ಬದಿಯಲ್ಲಿ ಸೌಪರ್ಣಿಕಾ ನದಿಯು ಶಾಂತವಾಗಿ ಹರಿಯುತ್ತಿರುತ್ತದೆ. ಮಾನ್ಸೂನ್ ಸಮಯದಲ್ಲಿ ಮರವಂತೆಯ ಬೀಚ್ ರಸ್ತೆಯಲ್ಲಿ ನಡೆಯುವುದು ಅತ್ಯುತ್ತಮ ಅನುಭವವನ್ನು ಕೊಡುವುದು.


3. ಆಗುಂಬೆ

ಆಗುಂಬೆಯು ಹಲವಾರು ಜಲಪಾತಗಳು, ನೈಸರ್ಗಿಕ ವೈಭವ ಮತ್ತು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಎತ್ತರದ ಗ್ರಾಮವನ್ನು ‘ದಕ್ಷಿಣದ ಚಿರಾಪುಂಜಿ’ ಎಂದೂ ಕರೆಯುತ್ತಾರೆ. ಯಾಕೆಂದರೆ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳವಾಗಿದೆ. ಅನೇಕ ಜಲಪಾತಗಳಾದ ಒನಕೆ ಅಬ್ಬಿ, ಜೋಗಿ ಗುಂಡಿ ಜಲಪಾತ ಮತ್ತು ಬರ್ಕಾನ ಜಲಪಾತಗಳು ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಅದ್ಭುತಗಳಾಗಿ ರೂಪಾಂತರಗೊಳ್ಳುತ್ತವೆ. ಹಚ್ಚ ಹಸಿರಿನ ಮಳೆಕಾಡುಗಳಲ್ಲಿನ ಹಲವಾರು ಟ್ರೆಕ್ಕಿಂಗ್ ಟ್ರೇಲ್‌ಗಳು ಈ ಸ್ಥಳವನ್ನು ಒದಗಿಸುವ ಇತರ ಆಹ್ಲಾದಕರ ಸಂಗತಿಯಾಗಿದೆ.


4. ಬೀದರ್ ಕೋಟೆ

ಒಂದು ಕಾಲದಲ್ಲಿ ದಕ್ಷಿಣದ ರಾಜಧಾನಿಯಾಗಿದ್ದು 98 ಸ್ಮಾರಕಗಳನ್ನು ಹೊಂದಿರುವ ಜನಪ್ರಿಯ ತಾಣವಾಗಿದೆ. ಬೆಟ್ಟದ ತುದಿಯಲ್ಲಿ ನೆಲೆಸಿರುವ ‘ಸಿಟಿ ಆಫ್ ವಿಸ್ಪರಿಂಗ್ ಸ್ಮಾರಕಗಳು’ ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. 500 ವರ್ಷಗಳಷ್ಟು ಹಳೆಯದಾದ ಬೀದರ್ ಕೋಟೆಯು ಭಾರತದ ಪುರಾತತ್ತ್ವ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಗಳಿಸಿದೆ.


5. ಕೊಡಗು

ಮಳೆಗಾಲದಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣ ಕೊಡಗು. ದಟ್ಟವಾದ ಮಂಜಿನ ವಾತಾವರಣದಲ್ಲಿ ಹಸಿರು ಕಾಫಿ ತೋಟಗಳು ತುಂಬಾ ಆಕರ್ಷಣೀಯವಾಗಿ ಕಾಣುತ್ತದೆ. ಮಡಿಕೇರಿ ಪಟ್ಟಣದ ಅತ್ಯುನ್ನತ ಸ್ಥಳವಾದ ರಾಜಾ ಸೀಟ್‌ನಿಂದ ಮಳೆಯಲ್ಲಿ ಮುಳುಗಿರುವ ನಗರ ಸೌಂದರ್ಯವನ್ನು ವೀಕ್ಷಿಸುವುದು ರೋಮಾಂಚಕ ಅನುಭವವನ್ನು ಕೊಡುತ್ತದೆ.

ಕೂರ್ಗ್‌ನ ಮತ್ತೊಂದು ಪ್ರಸಿದ್ಧ ಪ್ರವಾಸಿ ಆಕರ್ಷಣೆಯಾಗಿರುವ ಅಬ್ಬೆ ಜಲಪಾತ. ಜಲಪಾತದ ಸೌಂದರ್ಯ ಸವಿಯುತ್ತಾ ಬಿಸಿಬಿಸಿ ಕಪ್ ಕಾಫಿ ಸೇವನೆ ಮಾಡುತ್ತ ಕೂರ್ಗ್‌ ನಲ್ಲಿ ಬೈಕ್ ಸವಾರಿ ಮಾಡುವುದು ಅತ್ಯಂತ ಅದ್ಭುತವಾದ ಅನುಭವವನ್ನು ಕೊಡುತ್ತದೆ.


6. ದಾಂಡೇಲಿ

ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಸಸ್ಯ ಮತ್ತು ಪ್ರಾಣಿಗಳ ಸೌಂದರ್ಯ ಸವಿಯಲು ದಾಂಡೇಲಿಯ ಕಾಡುಗಳು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. ದಾಂಡೇಲಿ ವನ್ಯಜೀವಿ ಅಭಯಾರಣ್ಯವು ಕರ್ನಾಟಕದ ಎರಡನೇ ಅತಿ ದೊಡ್ಡ ವನ್ಯಜೀವಿ ಅಭಯಾರಣ್ಯವಾಗಿದೆ. ಮಳೆಗಾಲದಲ್ಲಿ ಅನೇಕ ಸರೀಸೃಪಗಳು, ಪಕ್ಷಿಗಳು ಮತ್ತು ಕಾಡು ಪ್ರಾಣಿಗಳ ಆವಾಸಸ್ಥಾನವಾಗಿದೆ. ಕಪ್ಪು ಪ್ಯಾಂಥರ್, ಚಿರತೆ ಅಥವಾ ಆನೆಯನ್ನು ಇಲ್ಲಿ ಕಾಣಬಹುದು.


7. ಮೈಸೂರು

ಮಳೆಗಾಲದಲ್ಲಿ ಪ್ರವಾಸ ಹೊರಡುವ ಯೋಚನೆ ಇದ್ದರೆ ಮೈಸೂರನ್ನು ಆಯ್ಕೆ ಮಾಡಬಹುದು. ವಾರಾಂತ್ಯವನ್ನು ಮೈಸೂರಿನ ಐಷಾರಾಮಿ ರೆಸಾರ್ಟ್‌ನಲ್ಲಿ ಕಳೆಯುವುದು ಅದ್ಭುತ ಆಯ್ಕೆಯಾಗಿದೆ. ಹೊರಗೆ ಮಳೆ ಸುರಿಯುವಾಗ ಬಲಿನೀಸ್, ಸ್ವೀಡಿಷ್ ಮತ್ತು ಆಯುರ್ವೇದಿಕ್ ಸ್ಪಾ ಚಿಕಿತ್ಸೆಗಳ ಆನಂದ ಸವಿಯಬಹುದು.


8. ನಂದಿ ಹಿಲ್‌

ಮಾನ್ಸೂನ್ ಸಮಯದಲ್ಲಿ ನಂದಿ ಬೆಟ್ಟದಲ್ಲಿ ಮಂತ್ರಮುಗ್ಧಗೊಳಿಸುವ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದು. ನಯನಮನೋಹರ ಸೂರ್ಯಾಸ್ತ, ಸೂರ್ಯೋದಯದ ದೃಶ್ಯಾವಳಿಗಳು ಮನದಲ್ಲಿ ವರ್ಣಚಿತ್ರದಂತೆ ಅಚ್ಚಳಿಯದೆ ಉಳಿಯುವುದು. ಮಳೆಗಾಲದಲ್ಲಿ ಬೈಕ್ ಸವಾರರು ಬೆಟ್ಟಗಳ ಮೇಲೆ ಹೋಗಿ ಪ್ರಕೃತಿಯ ಸೌಂದರ್ಯ ಸವಿಯಬಹುದು.


9. ಸ್ಕಂದಗಿರಿ ಬೆಟ್ಟ

ಸ್ಕಂದಗಿರಿ ಬೆಟ್ಟಗಳ ಶಿಖರದಲ್ಲಿ ನಿಂತಿರುವಾಗ ಮೋಡಗಳ ಮೇಲೆ ಏರಿದಂತ ಅನುಭವ ಕೊಡುತ್ತದೆ. ಆಗಸ್ಟ್‌ನಲ್ಲಿ ಇಲ್ಲಿ ಚಾರಣಕ್ಕೆ ಹೋಗಲು ಸೂಕ್ತ ಸಮಯ. ಹತ್ತಿಯಂತೆ ಕಾಣುವ ಮೋಡಗಳು ಅಲೌಕಿಕವಾಗಿ ಕಾಣುತ್ತವೆ. ಸ್ಕಂದಗಿರಿಯಿಂದ ಸೂರ್ಯೋದಯದ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು. ರಾತ್ರಿ ಆಕಾಶದ ಅದ್ಭುತಗಳ ಅಡಿಯಲ್ಲಿ ಕ್ಯಾಂಪಿಂಗ್ ಮಾಡುವುದು ಉತ್ತಮ ಅನುಭವವನ್ನು ನೀಡುತ್ತದೆ.


10. ಗೋಕರ್ಣ

ಹಿಪ್ಪಿಗಳ ಸ್ವರ್ಗ ಗೋಕರ್ಣದ ಕಡಲತೀರಗಳು ರಮಣೀಯ ದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಒಂದು ಕಡೆ ಕಲ್ಲಿನ ಪರ್ವತ ಮತ್ತು ಇನ್ನೊಂದು ಕಡೆ ಅರೇಬಿಯನ್ ಸಮುದ್ರದೊಂದಿಗೆ ಇರುವ ಧಾರ್ಮಿಕ ಪಟ್ಟಣವು ಅತ್ಯಂತ ಸುಂದರವಾದ ಭೂದೃಶ್ಯಗಳನ್ನು ನೀಡುತ್ತದೆ.

11. ಜೋಗ ಜಲಪಾತ

ಮಳೆಗಾಲದಲ್ಲಿ ತುಂಬಿ ಹರಿಯುವ ಜೋಗ ಜಲಪಾತವು ಕನಸಿನ ಪ್ರಪಂಚವನ್ನು ಮಳೆಗಾಲದಲ್ಲಿ ತೋರಿಸುತ್ತದೆ. ಮಾನ್ಸೂನ್ ಸಮಯದಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಬಿಲ್ಲುಗಳೊಂದಿಗೆ ಭವ್ಯವಾದ ಪ್ರಕೃತಿಯನ್ನು ಇಲ್ಲಿ ಆನಂದಿಸಬಹುದು. ಶರಾವತಿ ನದಿಯಿಂದ ರೂಪುಗೊಂಡಿರುವ ಜಲಪಾತವು ಕರ್ನಾಟಕದ ಅತ್ಯಂತ ಪ್ರಸಿದ್ಧವಾದ ಜಲಪಾತಗಳಲ್ಲಿ ಒಂದಾಗಿದೆ ಮತ್ತು ಭಾರತದ ಅತಿ ಎತ್ತರದ ಜಲಪಾತಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು


12. ಕೆಮ್ಮಣ್ಣುಗುಂಡಿ

ಕರ್ನಾಟಕದ ಪ್ರಸಿದ್ಧ ಗಿರಿಧಾಮಗಳಲ್ಲಿ ಒಂದಾಗಿರುವ ಕೆಮ್ಮಣ್ಣುಗುಂಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿ ನೋಡುವಂತ ಹಲವಾರು ಭೂದೃಶ್ಯಗಳು ಮತ್ತು ಸೊಂಪಾದ ಪ್ರದೇಶಗಳಿವೆ. ಕೆಮ್ಮನಗುಂಡಿಯಲ್ಲಿರುವ ಇತರ ಕೆಲವು ಪ್ರಮುಖ ಆಕರ್ಷಣೆಗಳೆಂದರೆ ಹೆಬ್ಬೆ ಜಲಪಾತ, ಶಾಂತಿ ಜಲಪಾತ, ಝೆಡ್ ಪಾಯಿಂಟ್ ಮತ್ತು ಅತ್ಯಂತ ಪ್ರಸಿದ್ಧವಾದ ಬಾಬಾ ಬುಡನ್ ಗಿರಿ ಮತ್ತು ಮುಳ್ಳಯ್ಯನಗಿರಿ ಬೆಟ್ಟಗಳು.


13. ಕುದುರೆಮುಖ

ಕುದುರೆಮುಖ ಗಿರಿಧಾಮ ಮಾನ್ಸೂನ್ ಸಮಯದಲ್ಲಿ ಉತ್ತಮ ಅನುಭವವನ್ನು ನೀಡುತ್ತದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ಶೋಲಾ ಹುಲ್ಲುಗಾವಲು ಮತ್ತು ಕಾಡುಗಳು ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯಂತ ಆಸಕ್ತಿದಾಯಕ ತಾಣಗಳಾಗಿವೆ. ಹನುಮಾನ್ ಗುಂಡಿ ಮತ್ತು ಕದಂಬಿ ಜಲಪಾತ ಇಲ್ಲಿನ ಎರಡು ಪ್ರಮುಖ ತಾಣಗಳಾಗಿವೆ. ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಭೇಟಿ ನೀಡಲು ಇದು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ.


14. ಬಾಲೂರು

ಚಿಕ್ಕಮಗಳೂರು ಜಿಲ್ಲೆಯ ಒಂದು ಗ್ರಾಮವಾದ ಬಾಲೂರು ಮಾನ್ಸೂನ್ ಋತುವಿನಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣವಾಗಿದೆ. ವಿಶಾಲವಾದ ಕಾಫಿ ಎಸ್ಟೇಟ್ ಗಳು ಭೂಮಿಯ ಮೇಲಿನ ಅತ್ಯಂತ ಪರಿಶುದ್ಧ ಸ್ಥಳ ಎಂಬಂತೆ ಭಾಸವಾಗುತ್ತದೆ. ಚಾರ್ಮಾಡಿ ಘಾಟ್, ಚಾರ್ಮಾಡಿ ಜಲಪಾತ ಮತ್ತು ಕೊಡೆ ಕಲ್ಲು ಇಲ್ಲಿನ ಅದ್ಭುತ ಸ್ಥಳಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

Road Accident : ಪ್ರತ್ಯೇಕ ಕಡೆಗಳಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ವಾಟರ್‌ ಟ್ಯಾಂಕರ್‌ ಹರಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಸ್ಕೂಟರ್‌ನಲ್ಲಿ ಹೆದ್ದಾರಿ ದಾಟುವಾಗ ಕಾರೊಂದು ಬಡಿದು ಸವಾರ ಬಲಿಯಾಗಿದ್ದಾರೆ.

VISTARANEWS.COM


on

By

Road Accident
Koo

ಬೆಂಗಳೂರು: ವಾಟರ್ ಟ್ಯಾಂಕರ್ ವಾಹನಕ್ಕೆ ಯುವಕನೊರ್ವ (Road Accident) ಬಲಿಯಾಗಿದ್ದಾನೆ. ಕಿರಣ್ ಕುಮಾರ್ (21) ಮೃತಪಟ್ಟವನು. ಬೆಂಗಳೂರಿನ ಕೊತ್ತನೂರು ದಿಣ್ಣೆ ಆರ್‌ಬಿಐ ಲೇಔಟ್‌ನಲ್ಲಿ ಬೆಳಗ್ಗೆ 9.30ಕ್ಕೆ ಈ ಅಪಘಾತ ಸಂಭವಿಸಿದೆ.

ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಕುಮಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದ ಕಿರಣ್‌ ತಲೆ ಮೇಲೆ ಟ್ಯಾಂಕರ್‌ ಹರಿದಿದೆ. ಅಪಘಾತದಲ್ಲಿ ಕಿರಣ್‌ ಕುಮಾರ್‌ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಎಸ್‌ ಲೇಔಟ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಾಟರ್‌ ಟ್ಯಾಂಕರ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

ಸ್ಕೂಟರ್‌ಗೆ ಗುದ್ದಿದ ಕಾರು; ಹಾರಿ ಬಿದ್ದ ವೃದ್ಧ ಸ್ಪಾಟ್‌ ಡೆತ್‌

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ವೃದ್ಧನೊರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಡಿವೈಡರ್ ಬಳಿ ರಸ್ತೆ ದಾಟುವಾಗ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ವೃದ್ಧ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ಗ್ರಾಮಾಂತರದ ದಾಬಸ್ ಪೇಟೆ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮೇಶ್ವರ ಗೇಟ್ ಬಳಿ ಅಪಘಾತ ನಡೆದಿದೆ. ನಾರನಹಳ್ಳಿ ಗ್ರಾಮದ ಮಾಳಪ್ಪ (80) ಮೃತ ದುರ್ದೈವಿ. ರಾಮೇಶ್ವರ ಗೇಟ್‌ನಲ್ಲಿ ರಸ್ತೆ ದಾಟುವಾಗ ದಾಬಸ್ ಪೇಟೆ ಕಡೆಯಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮಾಳಪ್ಪ ಸಾವನ್ನಪ್ಪಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

ಡಿವೈಡರ್‌ ಏರಿದ ಕಾರು

ಮೈಸೂರಿನಲ್ಲಿ ಚಾಲಕನ‌ ಅಜಾಗರೂಕತೆಯಿಂದ ಕಾರೊಂದು ಡಿವೈಡರ್ ಮೇಲೇರಿದ ಘಟನೆ ನಡೆದಿದೆ. ಮೈಸೂರಿನ ಬೋಗಾದಿ ಸಿಗ್ನಲ್ ಬಳಿ ಲಾರಿಯನ್ನು ಓವರ್‌ ಟೇಕ್‌ ಮಾಡುವ ತವಕದಲ್ಲಿ ಕಾರು ಡಿವೈಡರ್ ಮೇಲೇರಿದೆ. ತಡರಾತ್ರಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

Self Harming: ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್‌ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್‌ ಸ್ಥಳದಲ್ಲೇ ಮೃತಪಟ್ಟಿದ್ದರು.

VISTARANEWS.COM


on

self harming mysore
ಆತ್ಮಹತ್ಯೆ ಮಾಡಿಕೊಂಡ ಭಾಗ್ಯಮ್ಮ, ಮಗಳು, ಕೊಲೆಯಾದ ಮಗ ಅಭಿಷೇಕ್‌, ಭಾವ ರವಿಚಂದ್ರ
Koo

ಮೈಸೂರು: ಕೊಲೆಯಾಗಿ (Murder Case) ಹೋದ ಪುತ್ರನ (Son) ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು (Mother) ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಮೈಸೂರಿನ (Mysore News) ಕೂರ್ಗಳ್ಳಿಯಲ್ಲಿ ನಡೆದಿದೆ.

ಭಾಗ್ಯಮ್ಮ (46) ಪುತ್ರನ ಸಾವಿನ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್‌ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್‌ 9ರಂದು ನಡೆದಿತ್ತು.

ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್‌ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್‌ ಸ್ಥಳದಲ್ಲೇ ಮೃತಪಟ್ಟಿದ್ದರು.

ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಚ್‌ಐವಿ ಪೀಡಿತ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ದರೋಡೆ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಒಂದು ಶಾಕಿಂಗ್‌ ಘಟನೆ ನಡೆದಿದೆ. 56 ವರ್ಷದ ಎಚ್‌ಐವಿ ಪೀಡಿತ ವ್ಯಕ್ತಿಯೊಬ್ಬರನ್ನು ಅವರ ನಿವಾಸದಲ್ಲೇ ಅತ್ಯಾಚಾರ ಎಸಗಿ ದರೋಡೆ ಮಾಡಿರುವ ಆಘಾತಕಾರಿ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ವರದಿಯಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ಸಮೀಪದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಎನ್‌ಜಿಒವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಒಂದು ವರ್ಷದ ಹಿಂದೆ ಆರೋಪಿ ಶ್ಯಾಮ್ ಪಾಟೀಲ್ ಎಂಬಾತನ ಜೊತೆ ಸ್ನೇಹ ಬೆಳೆಸಿದ್ದ. ಪಾಟೀಲ್ ತಾನು ಕ್ಷಯರೋಗದಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡು ಸಂತ್ರಸ್ತನ ವಿಶ್ವಾಸ ಗಳಿಸಿದ್ದ. ಇತ್ತೀಚೆಗಷ್ಟೇ ಸಂತ್ರಸ್ತನ ಪತ್ನಿ ಮತ್ತು ಮಕ್ಕಳು ಸ್ವಗ್ರಾಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿ ಪರಿಸ್ಥಿತಿಯ ಲಾಭ ಪಡೆದು ಕೃತ್ಯ ಎಸಗಿದ್ದಾನೆ.

ಸಂತ್ರಸ್ತ ಒಂಟಿಯಾಗಿರುವ ವಿಚಾರ ತಿಳಿದ ಪಾಟೀಲ್ ಅವರ ಮನೆಗೆ ಭೇಟಿ ನೀಡಿ ಜ್ಯೂಸ್‌ನಲ್ಲಿ ನಿದ್ದೆ ಮಾತ್ರೆ ಬೆರೆಸಿ ಕೊಟ್ಟಿದ್ದಾರೆ. ಸಂತ್ರಸ್ತ ಪ್ರಜ್ಞಾಹೀನರಾಗುತ್ತಿದ್ದಂತೆ, ಪಾಟೀಲ್ ಅವರ ಮುಖಕ್ಕೆ ಪ್ರಜ್ಞೆ ತಪ್ಪಿಸುವ ಲಿಕ್ವಿಡ್‌ ಸಿಂಪಡಿಸಿದ್ದಾನೆ. ನಂತರ ಅವರ ಮೇಲೆ ಅತ್ಯಾಚಾರ ಎಸಗಿ, ಕಬೋರ್ಡ್‌ನಲ್ಲಿಟ್ಟಿದ್ದ 88 ಗ್ರಾಂ ಚಿನ್ನಾಭರಣ, 20 ಸಾವಿರ ನಗದು, ಮೊಬೈಲ್ ಹ್ಯಾಂಡ್ ಸೆಟ್ ದೋಚಿ ಪರಾರಿಯಾಗಿದ್ದಾನೆ.

ಸಂತ್ರಸ್ತ ಮರುದಿನ ಬೆಳಗ್ಗೆ ಎಚ್ಚೆತ್ತಾಗ ತಾನು ದರೋಡೆಯಾಗಿರುವುದು ಗಮನಕ್ಕೆ ಬಂದಿದೆ. ಅವರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಶ್ಯಾಮ್ ಪಾಟೀಲ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Viral News: ಇದೆಂಥಾ ಹುಚ್ಚಾಟ! ಎನ್‌ಡಿಎ ಕಳಪೆ ಪ್ರದರ್ಶನದಿಂದ ಖಿನ್ನತೆ; ವ್ಯಕ್ತಿ ಆತ್ಮಹತ್ಯೆಗೆ ಶರಣು

Continue Reading
Advertisement
Physical Abuse
ಕರ್ನಾಟಕ22 mins ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ27 mins ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್30 mins ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Actor Darshan
ಕರ್ನಾಟಕ54 mins ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ1 hour ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ1 hour ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್1 hour ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ1 hour ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Stray Dogs Attack
ಕರ್ನಾಟಕ1 hour ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌