ನೂಪುರ್‌ ಶರ್ಮಾ ಹೇಳಿಕೆಯನ್ನು ಬೆಂಬಲಿಸಿದರೇ ಸಿ.ಟಿ. ರವಿ? - Vistara News

ದೇಶ

ನೂಪುರ್‌ ಶರ್ಮಾ ಹೇಳಿಕೆಯನ್ನು ಬೆಂಬಲಿಸಿದರೇ ಸಿ.ಟಿ. ರವಿ?

ಧರ್ಮ ಹಾಗೂ ನಂಬಿಕೆಗಳ ವಿಚಾರದಲ್ಲಿ ಆಗಿಂದಾಗ್ಗೆ ಬಾಯಿ ಹರಿಬಿಡುವುದರಲ್ಲಿ ಬಿಜೆಪಿ ನಾಯಕರು ಎತ್ತಿದ ಕೈ. ಈ ಹಿಂದೆಯೂ ಸಂವಿಧಾನದ ಬಗ್ಗೆ ಸಂಸದ ಅನಂತಕುಮಾರ್‌ ಹೆಗಡೆ ಆಡಿದ ಮಾತು ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು.

VISTARANEWS.COM


on

ಸಿ.ಟಿ.ರವಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಸ್ಲಾಂ ಹಾಗೂ ಪ್ರವಾದಿ ಮೊಹಮ್ಮದ್‌ ಅವರ ಕುರಿತು ಮಾತನಾಡಿ ಈಗಾಗಲೆ ವಿಶವಾದ್ಯಂತ ವಿವಾದಕ್ಕೀಡಾಗಿರುವ ಬಿಜೆಪಿ ಮಾಜಿ ನಾಯಕಿ ನೂಪುರ್‌ ಶರ್ಮಾ ಅವರನ್ನು ಮಾಜಿ ಸಚಿವ ಹಾಗೂ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಹಾಸನದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಮಂಗಳವಾರ ಸಿ.ಟಿ. ರವಿ ಮಾತನಾಡಿರುವ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಬಿಜೆಪಿ ನಾಯಕರು ಅವಹೇಳನಕಾರಿಯಾಗಿ ಮಾತನಾಡಿದ್ದರ ಕುರಿತ ಪ್ರಶ್ನೆಗೆ ಸಿ.ಟಿ. ರವಿ ಉತ್ತರಿಸಿದ್ದಾರೆ.

ಇದನ್ನೂ ಓದಿ | ಪ್ರವಾದಿ ಮೊಹಮ್ಮದ್‌ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದ ವಕ್ತಾರೆ ನೂಪುರ್‌ ಶರ್ಮಾ ಬಿಜೆಪಿಯಿಂದ ಅಮಾನತು

“ಕೆಲವೊಮ್ಮೆ ಅಪ್ರಿಯವಾದ ಸತ್ಯ ಹೇಳಬಾರದು ಎಂದು ಹಿಂದೆಯೇ ಹೇಳಿದ್ದಾರೆ. ಅದಕ್ಕೊಂದು ಸಂಸ್ಕೃತ ಶ್ಲೋಕವೂ ಇದೆ. ಅಪ್ರಿಯವಾದ ಸತ್ಯವನ್ನು ಕೆಲವೊಮ್ಮೆ ಹೇಳಬಾರದು. ಕೆಲವೊಮ್ಮೆ ಸತ್ಯವಾಗಿದ್ದರೂ ಅದನ್ನು ಹೇಳಬಾರದು. ಅದರಲ್ಲೂ ನಮ್ಮಂತಹ ರಾಜಕಾರಣದ ಬಾಯಲ್ಲಿ ಹೇಳಿಸಬಾರದು. ನೀವು ಬೇಕಿದ್ದರೆ ಒಂದೊಂದೇ ವಿಷಯವನ್ನು ಅವಲೋಕನ ಮಾಡಿದರೆ ಸತ್ಯ ಏನು ಎಂದು ನಿಮಗೆ ಗೊತ್ತಾಗುತ್ತದೆ” ಎಂದು ನೂಪುರ್‌ ಶರ್ಮಾ ಹೇಳಿದ ವಿಚಾರದಲ್ಲಿ ಸತ್ಯವಿದೆ, ಆದರೆ ಅದನ್ನು ಬಹಿರಂಗವಾಗಿ ಹೇಳಬಾರದಿತ್ತು ಎಂದು ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಬಾಯಿ ಹರಿಯಬಿಡಬೇಡಿ ಎಂದ ಕಟೀಲ್‌

ಈಗಾಗಲೆ ದೇಶ ಹಾಗೂ ವಿದೇಶಗಳಲ್ಲಿ ನೂಪುರ್‌ ಶರ್ಮಾ ಹೇಳಿಕೆ ವಿವಾದ ಹೊಗೆಯಾಡುತ್ತಿದೆ. ಈ ನಡುವೆ ಬಿಜೆಪಿ ನಾಯಕರೇ ಆಗಿಂದಾಗ್ಗೆ ಧರ್ಮ, ನಂಬಿಕೆ ವಿಚಾರಗಳಲ್ಲಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕುತ್ತಿದ್ದಾರೆ. ಇದನ್ನು ತಡೆಯಲು ರಾಜ್ಯ ಬಿಜೆಪಿ ಮುಂದಾಗಿದೆ.

ಏಳೆಂಟು ವರ್ಷಗಳಿಂದ ಹಲವು ಚುನಾವಣೆಗಳಲ್ಲಿ ಸೋತು ಸುಣ್ಣವಾಗಿದ್ದ ಕಾಂಗ್ರೆಸ್‌ಗೆ ನೂಪುರ್‌ ಶರ್ಮಾ ಹೇಳಿಕೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಟೀಕಿಸಲು ಅಸ್ತ್ರ ಈಗ ಸಿಕ್ಕಂತಾಗಿದೆ. ಕಾಂಗ್ರೆಸ್‌ಗೆ ಮರುಭೂಮಿಯಲ್ಲಿ ಓಯಸಿಸ್ ಸಿಕ್ಕಂತೆ ಆಗಿದೆ. ಕಳೆದ ಎರಡು ಮೂರು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಗುರಿಯಾಗಿರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಬಹಿರಂಗವಾಗಿ ಕಾಂಗ್ರೆಸ್ ನಾಯಕರು ವಾಗ್ದಾಳಿ ಮಾಡಲು ಶುರು ಮಾಡಿದ್ದಾರೆ. ಮುಂದೆ ಇಂತಹದ್ದಕ್ಕೆ ಅವಕಾಶ ನೀಡಬಾರದು ಎಂದು ರಾಜ್ಯದ ಪ್ರಮುಖ ಜನಪ್ರತಿನಿಧಿಗಳಿಗೆ ಕರ್ನಾಟಕ ಬಿಜೆಪಿ ಸೂಚನೆ ನೀಡಿದೆ.

ಧಾರ್ಮಿಕ ಗುರುಗಳ ಹಾಗೂ ಸಂಪ್ರದಾಯಗಳ ಬಗ್ಗೆ ಮಾತನಾಡದಂತೆ ಪಕ್ಷದ ನಾಯಕರು ಮತ್ತು ಮುಖಂಡರಿಗೆ ರಾಜ್ಯ ಬಿಜೆಪಿ ಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ಬಿಜೆಪಿ ಮಾಧ್ಯಮ ಘಟಕದಿಂದ ಶಾಸಕರು ಸಂಸದರಿಗೆ ಈ ಬಗ್ಗೆ ಸಂದೇಶ ರವಾನೆ ಮಾಡಿಸಿದ್ದಾರೆ. ಪ್ರಮುಖವಾಗಿ, ಆಗಿಂದಾಗ್ಗೆ ಈಂತಹ ವಿಚಾರಗಳಲ್ಲಿ ಬಾಯಿ ಹರಿಬಿಡುವ ಕೆ.ಎಸ್‌. ಈಶ್ವರಪ್ಪ, ಪ್ರತಾಪ್‌ ಸಿಂಹ, ಶೋಭಾ ಕರಂಧ್ಲಾಜೆ, ಅನಂತಕುಮಾರ್‌ ಹೆಗಡೆ ಸೇರಿ ಅನೇಕರಿಗೆ ದೂರವಾಣಿ ಕರೆ ಮಾಡಿ ಕಟೀಲ್‌ ಅವರ ಸೂಚನೆಯನ್ನು ನೀಡಲಾಗುತ್ತಿದೆ. ಒಟ್ಟಾರೆಯಾಗಿಯೂ ಪಕ್ಷದ ಎಲ್ಲ ನಾಯಕರಿಗೆ ಸೂಚನೆ ನೀಡಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಮೂಲಗಳು ಖಚಿತಪಡಿಸಿವೆ.

ಸಿ.ಟಿ. ರವಿ ಉದಾಹರಿಸಿದ ಶ್ಲೋಕ ಇದು

ಸತ್ಯಂ ಬ್ರೂಯಾತ್ ಪ್ರಿಯಮ್ ಬ್ರೂಯಾತ್ ನ ಬ್ರೂಯಾತ್ ಸತ್ಯಮಪ್ರಿಯಮ್ |
ಪ್ರಿಯಂ ಚ ನಾನೃತಂ ಬ್ರೂಯಾದೇಷ ಧರ್ಮ: ಸನಾತನ: ||

ಅರ್ಥ: ಸತ್ಯವಾದದ್ದನ್ನು ಹೇಳಬೇಕು, ಪ್ರಿಯವಾದದ್ದನ್ನು ಹೇಳಬೇಕು. ಕಹಿಯಾದ ಸತ್ಯವನ್ನು ಹೇಳಬಾರದು, ಹಾಗೆಯೇ ಪ್ರಿಯವಾದ ಅಸತ್ಯವನ್ನೂ ನುಡಿಯಬಾರದು. ಇದುವೇ ಸನಾತನ ಧರ್ಮ.

ಇದನ್ನೂ ಓದಿ | ನೂಪುರ್‌ ಶರ್ಮಾ ಸೃಷ್ಟಿಸಿದ ವಿವಾದದ ಬಗ್ಗೆ ಕೆದಕಿ ಪ್ರಶ್ನಿಸಿದ ಪಾಕ್‌ ಪತ್ರಕರ್ತ; ವಿಶ್ವ ಸಂಸ್ಥೆಯ ಉತ್ತರ ಹೀಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Union Budget 2024: ಜುಲೈ 15ರಿಂದ 22ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಬಡವರು, ಮಧ್ಯಮ ವರ್ಗದವರ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ, ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷಕ್ಕೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Union Budget 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು (Union Budget 2024) ಸಿದ್ಧತೆ ನಡೆಸಿದ್ದಾರೆ. ಇನ್ನು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಆದಾಯ ತೆರಿಗೆ ಮಿತಿಯನ್ನು 3 ಲಕ್ಷ ರೂಪಾಯಿಯಿಂದ (ಹೊಸ ತೆರಿಗೆ ಪದ್ಧತಿ) 5 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ದೇಶದಲ್ಲಿ ಈಗ ಹಳೆಯ ತೆರಿಗೆ ಪದ್ಧತಿ ಹಾಗೂ ಹೊಸ ತೆರಿಗೆ ಪದ್ಧತಿ ಚಾಲ್ತಿಯಲ್ಲಿವೆ. ಆದಾಯ ತೆರಿಗೆ ಪಾವತಿದಾರರು ಯಾವ ತೆರಿಗೆ ಪದ್ಧತಿಯನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದೆ. ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಂಡವರಿಗೆ 3 ಲಕ್ಷ ರೂ.ವರೆಗೆ ವಿನಾಯಿತಿ ಇದೆ. ಈಗ ಇದನ್ನು 5 ಲಕ್ಷ ರೂ.ಗೆ ಏರಿಕೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಆದರೆ, ಗರಿಷ್ಠ ತೆರಿಗೆ ಪ್ರಮಾಣವನ್ನು ಶೇ.30ರಿಂದ ಶೇ.25ಕ್ಕೆ ಇಳಿಸಬೇಕು ಎಂಬ ಒತ್ತಾಯವಿದ್ದು, ಇದನ್ನು ಈಡೇರಿಸುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ಹೇಳಲಾಗತ್ತಿದೆ.

ಹೊಸ ತೆರಿಗೆಯ ಸ್ಲ್ಯಾ ಬ್‌ ಹೀಗಿದೆ

ಆದಾಯವಿಧಿಸುವ ತೆರಿಗೆ
0-3 ಲಕ್ಷ ರೂ.ತೆರಿಗೆ ಇರಲ್ಲ
3-6 ಲಕ್ಷ ರೂ.5%
6-9 ಲಕ್ಷ ರೂ.10%
9-12 ಲಕ್ಷ ರೂ.15%
12-15 ಲಕ್ಷ ರೂ.20%
15 ಲಕ್ಷ ರೂ.ಗಿಂತ ಹೆಚ್ಚು30%

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

Union Budget 2024

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಜುಲೈನಲ್ಲಿ ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Continue Reading

ದೇಶ

Bakrid: ಬಕ್ರೀದ್ ವೇಳೆ ಜೈನರು ಮುಸ್ಲಿಮರ ವೇಷ ಧರಿಸಿ 124 ಮೇಕೆ ಖರೀದಿಸಿದರು! ಉದ್ದೇಶ ಹೃದಯಸ್ಪರ್ಶಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದೆಹಲಿಯಲ್ಲಿ ಜೈನ ಸಮುದಾಯದ ಸುಮಾರು 25 ಸದಸ್ಯರು ಮುಸ್ಲಿಮರಂತೆ ವೇಷಭೂಷಣ ಧರಿಸಿ ಸುಮಾರು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ 124 ಮೇಕೆಗಳನ್ನು ಖರೀದಿ (Saved Goats) ಮಾಡಿ ರಕ್ಷಿಸಿದ್ದಾರೆ. ಇದರಿಂದ ಚಾಂದಿನಿ ಚೌಕ್‌ನ ಜೈನ ಮಂದಿರದ ಅಂಗಳ ಈಗ ನೂರಾರು ಮೇಕೆಗಳಿಂದ ತುಂಬುಕೊಂಡಿದೆ.

VISTARANEWS.COM


on

By

Saved Goats
Koo

ನವದೆಹಲಿ: ಜೈನ ಸಮುದಾಯದ (jain  community) ಸುಮಾರು 25 ಸದಸ್ಯರು ದೆಹಲಿಯಲ್ಲಿ (delhi) ಬಕ್ರೀದ್ (Bakrid) ಸಂದರ್ಭದಲ್ಲಿ ಮುಸ್ಲಿಮರಂತೆ (muslim) ವೇಷಭೂಷಣ ಧರಿಸಿ 124 ಮೇಕೆಗಳನ್ನು (Saved Goats) ಖರೀದಿಸಿದರು. ಈ ಮೂಲಕ ಆ ಮೇಕೆಗಳ ಜೀವ ರಕ್ಷಿಸಿದರು.

ಸಿಎ ವಿವೇಕ್ ಜೈನ್ ಎಂಬುವರ ನೇತೃತ್ವದಲ್ಲಿ ಸಂಗ್ರಹಿಸಿದ ಸುಮಾರು 15 ಲಕ್ಷ ರೂ. ಅನ್ನು ಖರ್ಚು ಮಾಡಿ ಮೇಕೆಗಳನ್ನು ಖರೀದಿಸಿ ಅವುಗಳನ್ನು ದೇವಾಲಯದಲ್ಲಿ ಸಾಕುತ್ತಿದ್ದಾರೆ. ಅಂಗಡಿಯವರೊಂದಿಗೆ ಚೌಕಾಸಿ ಮಾಡಿ ತಲಾ 10,000 ರೂ. ಗಳನ್ನು ನೀಡಿ ಮೇಕೆಗಳನ್ನು ಅವರು ಖರೀದಿ ಮಾಡಿದರು.

ದೆಹಲಿಯ ಜಾಮಾ ಮಸೀದಿಯಿಂದ ಸುಮಾರು 500 ಮೀಟರ್ ದೂರದಲ್ಲಿರುವ ಚಾಂದಿನಿ ಚೌಕ್‌ನ ದೇವಸ್ಥಾನದ ಅಂಗಳದಲ್ಲಿ ನೂರಾರು ಮೇಕೆಗಳು ಈಗ ಸಿಎ ವಿವೇಕ್ ಜೈನ್ ಅವರನ್ನು ಸುತ್ತುವರೆದಿವೆ. ಅವುಗಳನ್ನು ಶಾಂತಗೊಳಿಸಲು ಅವರು ಸ್ಪೀಕರ್‌ನಲ್ಲಿ ಶಾಂತಿ ಮತ್ತು ಸಕಾರಾತ್ಮಕತೆಯನ್ನು ತರುವ ಪ್ರಬಲ ಜೈನ ಮಂತ್ರವನ್ನು ಉಚ್ಚರಿಸುತ್ತಿದ್ದರು. ಈ ಮೇಕೆಗಳನ್ನು ನೋಡಿದರೆ ಪಾಪ ಅನಿಸುತ್ತಿತ್ತು. ಅವುಗಳನ್ನು ವಧೆಗಾಗಿ ಕೂಡಿ ಹಾಕಲಾಗಿತ್ತು. ನಾವು ಅವರಿಗೆ ಹೊಸ ಜೀವನವನ್ನು ನೀಡಿದ್ದೇವೆ. ಈ ಯಾವ ಸಂಗತಿಗಳೂ ಪಾಪ ಆ ಕುರಿಗಳಿಗೆ ತಿಳಿದಿರುವುದಿಲ್ಲ. ಅವುಗಳ ಜೀವ ಉಳಿಸಿದ ತೃಪ್ತಿ ನಮಗಿದೆ ಎನ್ನುತ್ತಾರೆ ವಿವೇಕ್.

ಈದ್‌ಗೆ ಮುನ್ನ ಸಿದ್ದಗೊಳ್ಳುವ ಮೇಕೆ ಮಾರುಕಟ್ಟೆಗಳಂತೆಯೇ ಈಗ ಧರಂಪುರ ಪ್ರದೇಶದ ನಯಾ ಜೈನ ಮಂದಿರ ಕಾಣುತ್ತಿದೆ. ಚಾಂದಿನಿ ಚೌಕ್‌ನಲ್ಲಿ ವಾಸಿಸುವ ಜೈನರಿಗೆ ಈಗ ಮೇಕೆ ದರ್ಶನವಾಗುತ್ತಿದೆ. ಮೇಕೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಕೆಲವರು ಅವುಗಳ ಮೇವಿಗಾಗಿ ಹಣವನ್ನು ದಾನ ಮಾಡಿದರು, ಇನ್ನು ಕೆಲವರು ಹೆಮ್ಮೆಯಿಂದ ಮುದ್ದಿಸಿದರು, ಮತ್ತು ಕೆಲವರು ತಮ್ಮ ಧರ್ಮದ ಸದ್ಗುಣಗಳ ಬಗ್ಗೆ ಹೆಮ್ಮೆಪಟ್ಟರು.

ಪ್ರತಿ ವರ್ಷ ಮುಸ್ಲಿಂ ಹಬ್ಬಗಳ ಸಂದರ್ಭದಲ್ಲಿ ಭುಗಿಲೇಳುವ ಮೇಕೆ ಬಲಿಯ ಕುರಿತಾದ ಚರ್ಚೆಯ ಮಧ್ಯೆ ದೆಹಲಿಯ ಜೈನ ಸಮುದಾಯವು ಈಗ ಎಲ್ಲರ ಗಮನ ಸೆಳೆದಿದೆ ಮಾತ್ರವಲ್ಲ ಸಾಕಷ್ಟು ಮೆಚ್ಚುಗೆಗಳು ಹರಿದು ಬರುತ್ತಿದೆ. ಎಕ್ಸ್ ನಲ್ಲಿ ಈ ಕುರಿತ ಪೋಸ್ಟ್ 21,000 ಕ್ಕೂ ಹೆಚ್ಚು ಮಂದಿ ಹಂಚಿಕೊಂಡಿದ್ದು, “ಜೈನ್” ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಅನ್ನು ಉಂಟು ಮಾಡಿದೆ. ದೇಶದಾದ್ಯಂತ ಇರುವ ನಮ್ಮ ಸಮುದಾಯದವರ ಕೊಡುಗೆ ಇದನ್ನು ಸಾಧ್ಯವಾಗಿಸಿದೆ. ನಾವು ಅದನ್ನು ಸಮಾಜ ಕಲ್ಯಾಣ ಎಂದು ಕರೆಯುತ್ತೇವೆ. ನಮ್ಮ ಧರ್ಮವು ನಮಗೆ ಕಲಿಸುವುದು ಇದನ್ನೇ. ಚಾಂದಿನಿ ಚೌಕ್‌ನ ಜೈನ ಸಮುದಾಯಕ್ಕೆ ಇದೊಂದು ‘ಐತಿಹಾಸಿಕ ಕ್ಷಣ’. ಇದು ನಮ್ಮ ಮೊದಲ ಹೆಜ್ಜೆ. ಇದನ್ನು ಮುಂದುವರಿಸುವುದಾಗಿ ವಿವೇಕ್ ಹೇಳಿದ್ದಾರೆ.


ಯಾವಾಗ ಈ ಯೋಚನೆ ಹುಟ್ಟಿಕೊಂಡಿತು?

ಗುರು ಸಂಜೀವ್ ಅವರು ಕರೆ ಮಾಡಿದ್ದಾಗ ಈದ್ ಹಬ್ಬದಂದು ಮೇಕೆಗಳನ್ನು ಕಡಿಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರು ಏನಾದರೂ ಮಾಡಬೇಕೆಂದು ಬಯಸಿದ್ದರು. ಎಲ್ಲಾ ಮೇಕೆಗಳನ್ನು ಉಳಿಸಲು ಸಾಧ್ಯವಾಗದಿದ್ದರೂ ನಾವು ಎಷ್ಟು ಸಾಧ್ಯವೋ ಅಷ್ಟು ರಕ್ಷಿಸಬೇಕು ಎಂದು ನಿರ್ಧರಿಸಲಾಯಿತು ಎಂದು ಚಿರಾಗ್ ತಿಳಿಸಿದರು.

ಹೇಗಿತ್ತು ಕಾರ್ಯಾಚರಣೆ?

ಶೀಘ್ರದಲ್ಲೇ ಒಂದು ಯೋಜನೆ ಹಾಕಿಕೊಂಡು ಜೂನ್ 15ರ ಸಂಜೆ ಜೈನ ಸಮುದಾಯದ 25 ಜನರ ತಂಡವನ್ನು ರಚಿಸಲಾಯಿತು. ಹಣದ ಕೊಡುಗೆಯನ್ನು ಕೋರಿ ವಾಟ್ಸಾಪ್ ಸಂದೇಶವನ್ನು ಪ್ರಸಾರ ಮಾಡಲಾಗಿತ್ತು. ಅನಂತರ ತಂಡವು ಮೇಕೆಗಳನ್ನು ಮಾರಾಟ ಮಾಡುವ ಪ್ರದೇಶಗಳ ಸಮೀಕ್ಷೆ ನಡೆಸಿತು.

ನಾವು ಮುಸ್ಲಿಂ ಸಮುದಾಯದ ಸದಸ್ಯರಂತೆ ವೇಷಭೂಷಣ ತೊಟ್ಟು ಮೇಕೆಗಳನ್ನು ಮಾರಾಟ ಮಾಡುವ ಬೆಲೆಯ ಬಗ್ಗೆ ಕೇಳಿ ತಿಳಿದುಕೊಂಡರು. ಜೂನ್ 16ರಂದು ತಂಡವು ರಹಸ್ಯವಾಗಿ ಹಳೆ ದೆಹಲಿಯ ಜಾಮಾ ಮಸೀದಿ, ಮೀನಾ ಬಜಾರ್, ಮತೀಯ ಮಹಲ್ ಮತ್ತು ಚಿಟ್ಲಿ ಕಬರ್‌ಗಳಂತಹ ವಿವಿಧ ಮೇಕೆ ಮಾರುಕಟ್ಟೆಗಳಿಗೆ ಹೋಗಿ ಮೇಕೆಗಳನ್ನು ಖರೀದಿಸುವಾಗ ಯಾವುದೇ ತೊಂದರೆಯಾಗದಂತೆ ಧಿರಿಸು ಧರಿಸಿ ಇತರರೊಂದಿಗೆ ಬೆರೆಯಲು ಅನುವು ಮಾಡಿಕೊಡುವ ರೀತಿಯಲ್ಲಿ ಮಾತನಾಡಲು ಸೂಚಿಸಲಾಯಿತು.

ನಾವು ಯಾರೂ ಭಯಪಡಲಿಲ್ಲ. ನಾವು ಯಾರ ಭಾವನೆಗಳಿಗೂ ಧಕ್ಕೆ ತರಲು ಬಯಸುವುದಿಲ್ಲ. ನಾವು ಮುಸ್ಲಿಮೇತರರು ಎಂದು ಅವರಿಗೆ ತಿಳಿದಿದ್ದರೆ ಅವರು ಮೇಕೆಗಳನ್ನು ಹೆಚ್ಚಿನ ಬೆಲೆಗೆ ನಮಗೆ ಮಾರಾಟ ಮಾಡುತ್ತಿದ್ದರು ಮತ್ತು ಸಾಧ್ಯವಾದಷ್ಟು ಹೆಚ್ಚು ಮೇಕೆಗಳನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದೇ ಇರುತ್ತಿತ್ತು. ಹೀಗಾಗಿ ನಾವು ಅವರ ವೇಷಭೂಷಣ ಧರಿಸಿ ಹೋಗಿದ್ದೆವು ಎನ್ನುತ್ತಾರೆ ವಿವೇಕ್.

ಖರೀದಿ ಪ್ರಕ್ರಿಯೆಯು ಅನೇಕ ಸುತ್ತಿನ ಕಠಿಣ ಚೌಕಾಶಿಗಳನ್ನು ಒಳಗೊಂಡಿತ್ತು. ಆದರೆ ಅಂತಿಮವಾಗಿ ಆಡುಗಳನ್ನು ಪ್ರತಿಯೊಂದಕ್ಕೆ ಸರಾಸರಿ 10,000 ರೂ. ಗೆ ಖರೀದಿಸಲಾಯಿತು. ಆದರೆ ಹಳೆ ದೆಹಲಿಯ ಮಂಡಿಗಳಲ್ಲಿ ಈ ಮೇಕೆಗಳನ್ನು ಮಾರಾಟ ಮಾಡುತ್ತಿದ್ದ ರೀತಿ ವಿವೇಕ್ ಅವರನ್ನು ದಿಗ್ಭ್ರಮೆಗೊಳಿಸಿತು.

ಬೀದಿ ಬದಿಯ ವ್ಯಾಪಾರಿಯಿಂದ ಬಟ್ಟೆಗಳನ್ನು ಖರೀದಿಸುತ್ತಿರುವಂತೆ ಭಾಸವಾಯಿತು. ಮೇಕೆಗಳನ್ನು ಒಟ್ಟಿಗೆ ಕೂಡಿಹಾಕಲಾಯಿತು ಮತ್ತು ಕಳಪೆಯಾಗಿ ನಿರ್ವಹಿಸಲಾಯಿತು. ಜೀವಂತವಾಗಿರುವ ಈ ಪ್ರಾಣಿಗಳ ಬಗ್ಗೆ ಯಾವುದೇ ಮಾನವೀಯತೆ ಅಲ್ಲಿ ಇರಲಿಲ್ಲ. ಅಂತಿಮವಾಗಿ 124 ಮೇಕೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅದೊಂದು ಸಂಭ್ರಮದ ಕ್ಷಣವಾಯಿತು ಎಂದರು ವಿವೇಕ್.


ಹಣ ಸಂಗ್ರಹ

ಇದಕ್ಕಾಗಿ ಗುಜರಾತ್, ಹೈದರಾಬಾದ್, ಕೇರಳ, ಪಂಜಾಬ್ ಮತ್ತು ಮಹಾರಾಷ್ಟ್ರದ ಜೈನ ಸಮುದಾಯದ ಸದಸ್ಯರಿಂದ 15 ಲಕ್ಷ ರೂಪಾಯಿ ಸಂಗ್ರಹಿಸಲಾಗಿದೆ. ಉಳಿದ ಹಣವನ್ನು ಅವುಗಳ ಮೇವನ್ನು ಖರೀದಿಸಲು ಬಳಸಿರುವುದಾಗಿ ವಿವೇಕ್ ತಿಳಿಸಿದರು.

ಮೇಕೆಗಳ ಆಶ್ರಯದಾತ

ಮೊದಲಿಗೆ ನಾಲ್ಕು ಮೇಕೆಗಳನ್ನಾದರೂ ಖರೀದಿ ಮಾಡುವುದು ಸಾಧ್ಯವೋ ಎಂಬ ಅನುಮಾನವಿತ್ತು. ಆದರೆ ನಮ್ಮ ಮನವಿಗೆ ಸ್ಪಂದಿಸಿ ಅನೇಕರು ದೇಣಿಗೆಗಳನ್ನು ನೀಡಿದ್ದು, ಇದರಿಂದ 15 ಲಕ್ಷ ರೂ. ಸಂಗ್ರಹವಾಯಿತು. ಬಳಿಕ 124 ರಕ್ಷಕ ಆಡುಗಳನ್ನು ಎಲ್ಲಿ ಇಡುವುದು ಎನ್ನುವ ಪ್ರಶ್ನೆ ಕಾಡಿತ್ತು. ಬಳಿಕ ಬಾಗ್‌ಪತ್‌ನ ಅಮಿನಗರ ಸರಾಯ್‌ನಲ್ಲಿರುವ ಮನೋಜ್ ಜೈನ್ ಅವರು ಮೇಕೆಗಳಿಗೆ ನಿರ್ಮಿಸಿರುವ ವಸತಿ ಶಾಲೆಯಲ್ಲಿ ಅವುಗಳಿಗೆ ಆಶ್ರಯ ನೀಡಿದರು. ಅವರ ಆಶ್ರಯದಲ್ಲಿ ಪ್ರಸ್ತುತ 615 ಆಡುಗಳಿವೆ. ಇವೆಲ್ಲವನ್ನೂ ಭಾರತದಾದ್ಯಂತ ಈದ್ ಆಚರಣೆ ವೇಳೆ ರಕ್ಷಿಸಿರುವುದು.
ರಕ್ಷಿಸಲ್ಪಟ್ಟ ಎಲ್ಲವೂ ಗಂಡು ಆಡುಗಳು. ಬಕ್ರೀದ್ ಹಬ್ಬದಲ್ಲಿ ಗಂಡು ಮೇಕೆಗಳನ್ನು ಕಡಿಯಲಾಗುತ್ತದೆ.

ಇದನ್ನೂ ಓದಿ: Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

ಕೊನೆಯವರೆಗೂ ಈ ಮೇಕೆಗಳ ಆರೈಕೆಯ ಜವಾಬ್ದಾರಿಯನ್ನು ನಮ್ಮ ಆಶ್ರಯ ವಹಿಸಿಕೊಂಡಿದೆ. ಇದಕ್ಕಾಗಿ ಭಾರತದಾದ್ಯಂತ ಇರುವ ಜೈನ ಸಮುದಾಯದ ಸದಸ್ಯರು ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದು ಮನೋಜ್ ಜೈನ್ ತಿಳಿಸಿದ್ದಾರೆ. ಮೇಕೆಗಳನ್ನು ಸಾಕಿರುವ ಜೈನ ದೇವಾಲಯದ ಬಳಿ ಬಂದ ಇಮ್ರಾನ್ ಮತ್ತು ಮುಷ್ತಾಕ್ ಎಂಬ ಹಿರಿಯ ಮುಸ್ಲಿಮರು, ಇದು ಮೇಕೆಗಳನ್ನು ಸಾಕಿರುವ ದೇವಾಲಯವಾಗಿದೆ. ಇವರು ಮೇಕೆಗಳನ್ನು ತೆಗೆದುಕೊಂಡು ಹೋಗಿರುವುದು ಗೊತ್ತು. ನಮ್ಮ ಧರ್ಮವು ಬಕ್ರೀದ್‌ನಂದು ಆಡುಗಳನ್ನು ಬಲಿಕೊಡಬೇಕೆಂದು ಕೇಳುತ್ತದೆ. ಅದನ್ನು ನಾವು ದೇವರ ಮೇಲಿನ ಭಕ್ತಿಯಿಂದ ಮಾಡುತ್ತೇವೆ. ಆದರೆ ನಾವು ಅದನ್ನು ಒತ್ತಾಯಿಸುವುದಿಲ್ಲ ಅಥವಾ ಪ್ರಚಾರ ಮಾಡುವುದಿಲ್ಲ ಎಂದು ಅವರು ತಿಳಿಸಿದರು.

ಮುಷ್ತಾಕ್ ಅವರು ಮಾತನಾಡಿ, ಇದು ಅವರ ಧರ್ಮ. ಪ್ರಾಣಿಗಳನ್ನು ಉಳಿಸುವುದು ಅದರ ಭಾಗವಾಗಿದ್ದರೆ ಪರವಾಗಿಲ್ಲ. ಪ್ರತಿಯೊಬ್ಬರೂ ಶಾಂತಿಯನ್ನು ತರುವ ಅಭ್ಯಾಸ ಮಾಡಲಿ ಎಂದು ಹೇಳಿದರು.

Continue Reading

ದೇಶ

Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Kannur Bomb Blast: ಸ್ಟೀಲ್‌ನಿಂದ ತಯಾರಿಸಿದ ಬಾಂಬ್‌ಅನ್ನು ಗಮನಿಸದ ವ್ಯಕ್ತಿಯು, ಪೊಟ್ಟಣ ತೆಗೆದು, ಅದನ್ನು ಒಡೆಯಲು ಯತ್ನಿಸಿದ್ದಾರೆ. ಆಗ ಅದು ಸ್ಫೋಟಗೊಂಡು ಆಯಿನಾತ್‌ ವೇಲಾಯುಧನ್‌ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Kannur Bomb Blast
Koo

ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯ ತಲಸ್ಸೇರಿ ಬಳಿಯ ಜಮೀನಿನಲ್ಲಿ ಬಾಂಬ್‌ (Kannur Bomb Blast) ಸ್ಫೋಟಗೊಂಡು 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕುಡಕ್ಕಲಮ್‌ ಗ್ರಾಮದ ಆಯಿನಾತ್‌ ವೇಲಾಯುಧನ್‌ (Aayinatt Velayudhan) ಅವರು ಮೃತರು. ಆಯಿನಾತ್‌ ವೇಲಾಯುಧನ್‌ ಅವರು ಜಮೀನಿನಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋದಾಗ, ಬಾಂಬ್‌ ಇದ್ದ ಪೊಟ್ಟಣ ಕಂಡಿದೆ. ಅದನ್ನು ಅವರು ಎತ್ತಿಕೊಂಡು, ತೆಗೆದು ನೋಡಿದಾಗ ಅದು ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

ಸ್ಟೀಲ್‌ನಿಂದ ತಯಾರಿಸಿದ ಬಾಂಬ್‌ಅನ್ನು ಗಮನಿಸದ ವ್ಯಕ್ತಿಯು, ಪೊಟ್ಟಣ ತೆಗೆದು, ಅದನ್ನು ಒಡೆಯಲು ಯತ್ನಿಸಿದ್ದಾರೆ. ಆಗ ಅದು ಸ್ಫೋಟಗೊಂಡು ಆಯಿನಾತ್‌ ವೇಲಾಯುಧನ್‌ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ವೈದ್ಯರು ಘೋಷಿಸಿದರು ಎಂದು ಮೂಲಗಳು ತಿಳಿಸಿವೆ.

ಬಾಂಬ್‌ ಸ್ಫೋಟಗೊಂಡ ಜಮೀನು.

“ಬಾಂಬ್‌ ಸ್ಫೋಟದ ಕುರಿತು ತನಿಖೆ ಆರಂಭಿಸಲಾಗಿದೆ. ಬಾಂಬ್‌ ಸ್ಫೋಟಗೊಂಡ ಸ್ಥಳದಲ್ಲಿ ಬಾಂಬ್‌ ನಿಷ್ಕ್ರೀಯ ದಳದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಯನ್ನು ಬುಧವಾರ ನಡೆಸಲಾಗುತ್ತದೆ. ಮರಣೋತ್ತರ ವರದಿ ಬಂದ ಬಳಿಕ ಇನ್ನಷ್ಟು ಮಾಹಿತಿ ದೊರೆಯಲಿದೆ” ಎಂಬುದಾಗಿ ತಲಸ್ಸೇರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಇದುವರೆಗೆ ಜಮೀನಿನಲ್ಲಿ ಬಾಂಬ್‌ ಹೇಗೆ ಬಂತು? ಅದನ್ನು ಎಲ್ಲಿ ತಯಾರಿಸಲಾಗಿತ್ತು? ಅದನ್ನೇಕೆ ಜಮೀನಿನಲ್ಲಿ ಬಿಸಾಡಲಾಗಿತ್ತು ಎಂಬುದರ ಮಾಹಿತಿ ಲಭ್ಯವಾಗಿಲ್ಲ.

ಕಣ್ಣೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಾಂಬ್‌ಗಳ ಉತ್ಪಾದನೆ ಹಾಗೂ ಸ್ಫೋಟದಂತಹ ಪ್ರಕರಣಗಳು ಹೆಚ್ಚಾಗಿವೆ. ಆರು ತಿಂಗಳ ಹಿಂದೆಯೇ ಕಸ ಸಂಗ್ರಹಿಸುವ ವ್ಯಕ್ತಿಯೊಬ್ಬರು ಕಸ ಆಯ್ದುಕೊಳ್ಳುವಾಗ ಬಾಂಬ್‌ ಸ್ಫೋಟಗೊಂಡು ಗಾಯಗೊಂಡಿದ್ದರು. ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರ ಮನೆಯ ಮೇಲೂ ಬಾಂಬ್‌ ದಾಳಿ ನಡೆದಿತ್ತು. ತಂಡವೊಂದು ಬಾಂಬ್‌ ತಯಾರಿಸುವಾಗಲೇ ಸ್ಫೋಟಗೊಂಡು ಸಿಪಿಎಂ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು. ಇಂತಹ ಪ್ರಕರಣಗಳನ್ನು ನಿಗ್ರಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Election Results 2024: ಪಶ್ಚಿಮ ಬಂಗಾಲದಲ್ಲಿ ಮತ ಎಣಿಕೆಗೂ ಮುನ್ನ ಬಾಂಬ್‌ ಸ್ಫೋಟ, ಐವರಿಗೆ ಗಾಯ

Continue Reading

ದೇಶ

Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Kisan Samman Nidhi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಿದ್ದಾರೆ.

VISTARANEWS.COM


on

Kisan Samman Nidhi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ಅಲ್ಲದೆ, ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (Kisan Samman Nidhi) ಯೋಜನೆಯ 17ನೇ ಕಂತಿನ ಮೊತ್ತವಾದ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದರು.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡಿದ ಬಳಿಕ ನರೇಂದ್ರ ಮೋದಿ ಅವರು ಮೊದಲಿಗೆ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ಜಮೆ ಮಾಡುವ ದಿಸೆಯಲ್ಲಿ 20 ಸಾವಿರ ಕೋಟಿ ರೂ. ಕಿಸಾನ್‌ ಸಮ್ಮಾನ್‌ ನಿಧಿ ಬಿಡುಗಡೆ ಮಾಡುವ ಕಡತಕ್ಕೆ ಸಹಿ ಮಾಡಿದ್ದರು. ಅದರಂತೆ ಮಂಗಳವಾರ ಮೋದಿ ಅವರು ರೈತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Continue Reading
Advertisement
Kodi Mutt Swamiji
ಪ್ರಮುಖ ಸುದ್ದಿ11 mins ago

Kodi Mutt Swamiji: ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು, ರಾಜ್ಯದಲ್ಲಿ ಅತಿವೃಷ್ಟಿ: ಕೋಡಿಮಠ ಶ್ರೀ ಭವಿಷ್ಯ!

Vijayapura News
ಕರ್ನಾಟಕ39 mins ago

Vijayapura News: ಗುಂಡಿಗೆ ಬಿದ್ದು ಮೂವರ ಸಾವು; ಬಾಲಕಿಯನ್ನು ರಕ್ಷಿಸಲು ಹೋದವರೂ ನೀರುಪಾಲು

Pakistan Begger
Latest51 mins ago

Pakistan Begger: ಪಾಕಿಸ್ತಾನವೇ ಒಂದು ಭಿಕ್ಷುಕ ದೇಶ! ಆದರೆ ಅಲ್ಲಿಯ ಈ ಭಿಕ್ಷುಕ ಎಷ್ಟು ಶ್ರೀಮಂತ ನೋಡಿ!

Union Budget 2024
ದೇಶ1 hour ago

Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Wild boar hunting in Hebbatti village Arrest of two accused
ಉತ್ತರ ಕನ್ನಡ1 hour ago

Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

a successful kidney transplanted for 32 year old woman at Fortis Hospital
ಕರ್ನಾಟಕ1 hour ago

Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

Saved Goats
ದೇಶ1 hour ago

Bakrid: ಬಕ್ರೀದ್ ವೇಳೆ ಜೈನರು ಮುಸ್ಲಿಮರ ವೇಷ ಧರಿಸಿ 124 ಮೇಕೆ ಖರೀದಿಸಿದರು! ಉದ್ದೇಶ ಹೃದಯಸ್ಪರ್ಶಿ

Self Harming
ಕರ್ನಾಟಕ1 hour ago

Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Adequately deposit the crop insurance amount in the farmers account says MLA Shivaram Hebbar
ಉತ್ತರ ಕನ್ನಡ1 hour ago

Uttara Kannada News: ಬೆಳೆ ವಿಮೆ ಮೊತ್ತ ಸಮರ್ಪಕವಾಗಿ ರೈತರ ಖಾತೆಗೆ ಜಮಾ ಮಾಡಿ; ಹೆಬ್ಬಾರ್

Youth Empowerment and Sports Department Progress Review Meeting by CM Siddaramaiah
ಕರ್ನಾಟಕ2 hours ago

Bengaluru News: ಎಲ್ಲ ಕಾಮಗಾರಿಗಳಿಗೂ ಟೆಂಡರ್‌; ಸಿದ್ದರಾಮಯ್ಯ ಸೂಚನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌