777 ಚಾರ್ಲಿ: ಚಾರ್ಲಿನಾ ಭೇಟಿ ಮಾಡಿದ್ರಾ ಸಾಯಿಪಲ್ಲವಿ? ಚಿತ್ರಕ್ಕೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್‌ - Vistara News

ಪ್ರಮುಖ ಸುದ್ದಿ

777 ಚಾರ್ಲಿ: ಚಾರ್ಲಿನಾ ಭೇಟಿ ಮಾಡಿದ್ರಾ ಸಾಯಿಪಲ್ಲವಿ? ಚಿತ್ರಕ್ಕೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್‌

777 ಚಾರ್ಲಿ ಜೂನ್‌ 10ರಂದು ರಿಲೀಸ್‌ ಆಗುತ್ತಿದೆ. ಪ್ರೀಮಿಯರ್‌ ಶೋ ನೋಡಿದ ಬಳಿಕ ಅಭಿಮಾನಿಗಳು ಹ್ಯಾಷ್‌ಟ್ಯಾಗ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ದೇಶ-ವಿದೇಶಗಳಲ್ಲಿ ಬಿಡುಗಡೆಗೆ ಚಿತ್ರ ಸರ್ವ ರೀತಿಯಲ್ಲೂ ಸಜ್ಜಾಗಿದೆ.

VISTARANEWS.COM


on

777 ಚಾರ್ಲಿ karnataka-budget-2023-online portal to street dog adoptation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ತೆರೆಗೆ ಬರಲು ಕೌಂಟ್‌ಡೌನ್‌ ಶುರುವಾಗಿದೆ. ಪ್ಯಾನ್‌ ಇಂಡಿಯಾ ಲೆವಲ್‌ನಲ್ಲಿ ಸಿನಿಮಾ ರಂಗೇರಲು ಸಜ್ಜಾಗಿದೆ. ಪ್ರೀಮಿಯರ್‌ ಶೋ ನೋಡಿದ ಬಳಿಕ ಜನ ಈಗಾಗಲೇ ಸೋಷಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವುದರ ಮೂಲಕ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಸಾಯಿ ಪಲ್ಲವಿಯ New Best Friend

ಪರವಃ ಪೇಜ್‌ನಲ್ಲಿ ಸಾಯಿ ಪಲ್ಲವಿಯ ಮಡಿಲಲ್ಲಿ ಚಾರ್ಲಿ ಮಲಗಿರುವ ಕ್ಯೂಟ್‌ ಪೋಟೋವನ್ನು ಹಂಚಿಕೊಂಡಿದ್ದಾರೆ. ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಆಗಲಿರುವ ಚಾರ್ಲಿ ಸಿನಿಮಾಗೇ ಸೆಲೆಬ್ರಿಟಿಗಳಿಂದ ಪಾಸಿಟಿವ್‌ ರೆಸ್ಪಾನ್ಸ್‌ ಬರುತ್ತಿದೆ. 777 ಚಾರ್ಲಿ ಟ್ರೇಲರ್‌ನ್ನು ಈ ಹಿಂದೆ ಸಾಯಿಪಲ್ಲವಿ ಡಿಜಿಟಲ್‌ ಲಾಂಚ್‌ ಮಾಡಿದ್ದರು. ಚಿತ್ರವನ್ನು ಮಳಯಾಳಂನಲ್ಲಿ ಫೃಥ್ವಿರಾಜ್‌ ಸುಕುಮಾರ್‌ ಮತ್ತು ತಮಿಳಿನಲ್ಲಿ ಕಾರ್ತಿಕ್‌ ಸುಬ್ಬರಾಜ್‌ ವಿತರಿಸಿದ್ದಾರೆ. ತೆಲುಗುವಿನಲ್ಲಿ ರಾಣಾ ದಗ್ಗುಪಾಟಿ ವಿತರಿಸಿದ್ದು, ಚಿತ್ರವನ್ನು 100-150 ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಕನ್ನಡ ಭಾಷೆಯ ಪ್ರಸಾರ ಹಕ್ಕುಗಳು ₹ 21 ಕೋಟಿಗೆ ಕಲರ್ಸ್‌ ಕನ್ನಡಕ್ಕೆ ಸೇಲ್‌ ಆಗಿರೋದು ಗಮನಾರ್ಹ.

ಇದನ್ನೂ ಓದಿ | 777 Charlie : ಕ್ಯೂಟ್‌ ಜರ್ನಿ ಬಗ್ಗೆ ಇಲ್ಲಿದೆ ನೋಡಿ ಫುಲ್‌ ಡಿಟೇಲ್ಸ್‌

ಚಾರ್ಲಿಗೆ ಭರ್ಜರಿ ರೆಸ್‌ಪಾನ್ಸ್‌ :

ಚಾರ್ಲಿ ತುಂಬಾ ಭಾವನಾತ್ಮಕವಾಗಿದ್ದು, ಸೆಕೆಂಡ್‌ ಹಾಫ್‌ ಎಮೋಷನ್‌ ಜತೆ, ವಿಷ್ಯುವಲ್‌ ಹಾಗೂ BGM ತುಂಬಾ ಚೆನ್ನಾಗಿದೆ. ರಕ್ಷಿತ್‌ ಶೆಟ್ಟಿ ಅವರ ಅಭಿನಯ ಟಾಪ್‌ ಕ್ಲಾಸ್‌ ಆಗಿ ಮೂಡಿ ಬಂದಿದೆ ಎಂದು ಜನರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಈಗಾಗಲೇ ಟಿಕೆಟ್‌ ಬೆಂಗಳೂರಿನಲ್ಲಿ ಸೋಲ್ಡ್‌ ಔಟ್‌ ಆಗಿದ್ದು, ಲವ್ಲಿ ಕ್ಯಾರೆಕ್ಟ್‌ರ್‌ ಧರ್ಮ ಎಂದು ಬರೆದುಕೊಳ್ಳುತ್ತಿದ್ದಾರೆ.

ಚಿತ್ರಮಂದಿರಗಳಲ್ಲಿ ಬ್ಯಾನರ್‌, ಪೋಸ್ಟರ್‌ ಮೂಲಕ ಜನರನ್ನು ಸೆಳೆಯುತ್ತಿರುವ ಚಾರ್ಲಿ ಪೋಸ್ಟ್‌ ಅನ್ನು ಸೋಷಿಯಲ್‌ ಮಿಡಿಯಾ ಮೂಲಕ ಶೇರ್‌ ಮಾಡಿಕೊಳ್ಳುತ್ತಿದ್ದಾರೆ ಅಭಿಮಾನಿಗಳು.

ಇದನ್ನೂ ಓದಿ | 777 Charlie: ಶಾರ್ವರಿ ಹಾಗೂ ಚಾರ್ಲಿಯ Friendship ಕಥೆ ಹೇಳುವ ʼಸಹಪಾಠಿʼ ಸಾಂಗ್‌

777 ಚಾರ್ಲಿಯ ಅಟ್ರ್ಯಾಕ್ಟಿವ್‌ ಕಟೌಟ್‌

777 ಚಾರ್ಲಿ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಇದು ಕನ್ನಡ ಮಾತ್ರವಲ್ಲದೇ, ವಿವಿಧ ಭಾಷೆಗಳಲ್ಲಿ ಸಹ ಬಿಡುಗಡೆಯಾಗುತ್ತಿದೆ. ಈ ತಮಿಳುನಾಡಿನಲ್ಲಿ ಸಹ ಚಿತ್ರ ರಿಲೀಸ್ ಆಗುತ್ತಿದ್ದು, ಚೈನ್ನೈನ ಸತ್ಯಂ ಸಿನಿಮಾಸ್​ ಎದುರು ಚಾರ್ಲಿ ಶ್ವಾನದ ಬೃಹತ್ ಕಟೌಟ್​ ನಿಲ್ಲಿಸಲಾಗಿದೆ. ಸದ್ಯ ಅದರ ಫೋಟೋವನ್ನು ಚಿತ್ರತಂಡ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಈಗ ಆ ಫೋಟೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್​ ಆಗುತ್ತಿದೆ.

ರಾಜ್ಯದಲ್ಲಿ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ. 500ಕ್ಕೂ ಹೆಚ್ಚು ವಿದೇಶಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಜೂನ್‌ 10ರಂದು ಬಿಡುಗಡೆ ಆಗುತ್ತಿದೆ.

ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ಸಂಗೀತಾ ಶೃಂಗೇರಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರಾಜ್ ಬಿ. ಶೆಟ್ಟಿ, ದಾನೀಶ್ ಸೇಠ್, ಬಾಬಿ ಸಿಂಹ, ಗೋಪಾಲ್ ದೇಶಪಾಂಡೆ, ಬೇಬಿ ಶಾರ್ವರಿ ಸೇರಿದಂತೆ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ | 777 ಚಾರ್ಲಿ: ಸಾಲು ಸಾಲು ಪ್ರೀಮಿಯರ್‌ ಶೋ, ಸೆಲೆಬ್ರಿಟಿಗಳು ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

M S Dhoni: ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಮೇ 1) ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಋತುವಿನಲ್ಲಿ ಪಂಜಾಟ್​​ನ ನಾಲ್ಕನೇ ಗೆಲುವಿನ ವೇಳೆ ಜಿತೇಶ್ ಶರ್ಮಾಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ, ಸಿಎಸ್​ಕೆ ಬ್ಯಾಟಿಂಗ್ ಸಮಯದಲ್ಲಿ ಧೋನಿಯನ್ನು ರನ್ ಔಟ್ ಮಾಡಿದ್ದರು. ಇದು ಧೋನಿಯ ಅಭಿಮಾನಿಗಳಿಗೆ ಕೋಪ ತರಿಸಿತ್ತು.

VISTARANEWS.COM


on

M S Dhoni
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ನಂತರ ಪಂಜಾಬ್ ಕಿಂಗ್ಸ್ (PBKS) ವಿಕೆಟ್ ಕೀಪರ್ ಬ್ಯಾಟರ್​​ ಜಿತೇಶ್ ಶರ್ಮಾ ಸೋಶಿಯಲ್ ಮೀಡಿಯಾಗಳ ಮೂಲಕ ಬೈಗುಳಗಳನ್ನು ಕೇಳಬೇಕಾಯಿತು. ಅದಕ್ಕೆ ಕಾರಣ ಅವರು ಮಹೇಂದ್ರ ಸಿಂಗ್ ಧೋನಿಯನ್ನು (MS Dhoni) ರನ್​ಔಟ್ ಮಾಡಿರುವುದು. ಜತೇಶ್​ ಅವರ ಇನ್​ಸ್ಟಾಗ್ರಾಮ್​ ಖಾತೆ ಮೂಲಕ ಹಲವಾರು ನಿಂದನಾತ್ಮಕ ಕಾಮೆಂಟ್​ಗಳನ್ನು ಪೋಸ್ಟ್ ಮಾಡಿದ್ದಾರೆ.

ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಮೇ 1) ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಋತುವಿನಲ್ಲಿ ಪಂಜಾಟ್​​ನ ನಾಲ್ಕನೇ ಗೆಲುವಿನ ವೇಳೆ ಜಿತೇಶ್ ಶರ್ಮಾಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ, ಸಿಎಸ್​ಕೆ ಬ್ಯಾಟಿಂಗ್ ಸಮಯದಲ್ಲಿ ಧೋನಿಯನ್ನು ರನ್ ಔಟ್ ಮಾಡಿದ್ದರು. ಇದು ಧೋನಿಯ ಅಭಿಮಾನಿಗಳಿಗೆ ಕೋಪ ತರಿಸಿತ್ತು.

ಜಿತೇಶ್ ಶರ್ಮಾಗೆ ಧೋನಿ ಅಭಿಮಾನಿಗಳಿಂದ ಟಾರ್ಗೆಟ್

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಎಂಎಸ್ ಧೋನಿ ತಮ್ಮ ವಿಕೆಟ್ ಕಳೆದುಕೊಳ್ಳದ ಗಮನಾರ್ಹ ಸಾಧನೆಯನ್ನು ಪಂಜಾಬ್ ವಿರುದ್ಧ ಕಳೆದುಕೊಂಡರು. ಚೆಂಡು ಥರ್ಡ್​ ಮ್ಯಾನ್​​ ಕಡೆಗೆ ಹೋದ ನಂತರ ಧೋನಿ ಅಪಾಯಕಾರಿ ಎರಡನೇ ರನ್ ಗಳಿಸಲು ಪ್ರಯತ್ನಿಸಿದರು. ಹರ್ಷಲ್ ಪಟೇಲ್ ಆರಂಭದಲ್ಲಿ ತಪ್ಪಾಗಿ ಫೀಲ್ಡಿಂಗ್ ಮಾಡಿದರು. ಆದರೆ ಬೇಗನೆ ಚೇತರಿಸಿಕೊಂಡರು ಮತ್ತು ಚೆಂಡನ್ನು ಬ್ಯಾಟ್ಸ್ ಮನ್ ನ ತುದಿಗೆ ಎಸೆದರು. ಚೆನ್ನೈ ವಿಕೆಟ್ ಕೀಪರ್ ಧೋನಿ ಕ್ರೀಸ್​ ತಲುಪುವ ಮೊದಲೇ ಜಿತೇಶ್​ ಬೇಲ್ಸ್ ಎಗರಿಸಿದರು. ಸಿಎಸ್​ಕೆ ಮಾಜಿ ನಾಯಕ 11 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ 14 ರನ್ ಗಳಿಸಿ ಔಟಾದರು. ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು 20 ಓವರ್ ಗಳಲ್ಲಿ 162 ರನ್ ಗಳಿಸಲು ಮಾತ್ರ ಯಶಸ್ವಿಯಾಯಿತು.

ಧೋನಿ ರನೌಟ್ ಅವರ ನಿಷ್ಠಾವಂತ ಅಭಿಮಾನಿಗಳಲ್ಲಿ ನಿರಾಶೆಯನ್ನು ಹುಟ್ಟುಹಾಕಿತು. ಕೆಲವರು ಹತಾಶೆಯನ್ನು ವ್ಯಕ್ತಪಡಿಸಿದರೆ, ಇತರರು ಜಿತೇಶ್ ಶರ್ಮಾ ಅವರ ಪಾತ್ರಕ್ಕಾಗಿ ಟ್ರೋಲ್ ಮಾಡಿದರು. ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಧೋನಿಯನ್ನು ಔಟ್ ಮಾಡುವುದನ್ನು ನೋಡಿದ ಅಭಿಮಾನಿಗಳು ನಾನಾ ರೀತಿ ಪ್ರತಿಕ್ರಿಯಿಸಿದರು.

“ನೀವು ವಿಶ್ವಕಪ್​ಗೆ ಆಯ್ಕೆಯಾಗದಿರುವುದು ಒಳ್ಳೆಯದು, ನೀವು ತಲಾ ಅವರನ್ನು ರನ್ ಔಟ್ ಮಾಡಿದ್ದೀರಿ, ಒಂದು ರನ್ ಏನು ವ್ಯತ್ಯಾಸವನ್ನುಂಟು ಮಾಡುತ್ತದೆ?” ಎಂದು ಬಳಕೆದಾರರೊಬ್ಬರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

“ಗೆಳೆಯ, ಜನರು ಅವನಿಗಾಗಿ ಪಂದ್ಯಗಳನ್ನು ನೋಡುತ್ತಾರೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ನಾವು ಎಷ್ಟು ಕೆಟ್ಟದಾಗಿ ಭಾವಿಸಬೇಕು, ನೀವು ಅವನನ್ನು ರನ್ ಔಟ್ ಮಾಡಿದ್ದೀರಿ. ಇದಲ್ಲದೆ, ಅವನ ಕಾಲಿಗೆ ಗಾಯವಾಗಿದೆ. ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ, ಗೆಳೆಯ” ಎಂದು ಮತ್ತೊಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

163 ರನ್​ಗಳ ಗುರಿ ಬೆನ್ನತ್ತಿದ ಸ್ಯಾಮ್ ಕರ್ರನ್ ಪಡೆ 17.5 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಜಾನಿ ಬೈರ್​ಸ್ಟೋವ್​ 30 ಎಸೆತಗಳಲ್ಲಿ 46 ರನ್ ಗಳಿಸಿದರೆ, ರಿಲೀ ರೊಸ್ಸೌ 23 ಎಸೆತಗಳಲ್ಲಿ 43 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಪಿಬಿಕೆಎಸ್ ಎಂಟು ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​​ನಲ್ಲಿ ಏಳನೇ ಸ್ಥಾನಕ್ಕೆ ಏರಿದರೆ, ಸಿಎಸ್ಕೆ 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ನಾವು ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾಗಿದೆ: ಸ್ಯಾಮ್ ಕರ್ರನ್


ಪಿಬಿಕೆಎಸ್ ಸ್ಟ್ಯಾಂಡ್-ಇನ್ ನಾಯಕ ಸ್ಯಾಮ್ ಕರ್ರನ್ ಚೆನ್ನೈನ ಗೆಲುವಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಐಪಿಎಲ್ 2024 ರಲ್ಲಿ ಪ್ಲೇಆಫ್ ಸ್ಥಾನ ಪಡೆಯಲು ತಂಡವು ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲುವುಗಳನ್ನು ಪಡೆಯಲು ಬಯಸುತ್ತದೆ ಎಂದು ಅವರು ಒತ್ತಿ ಹೇಳಿದರು.

ತುಂಬಾ ಸಂತೋಷವಾಗಿದೆ. ಪ್ರತಿ ಬಾರಿ ನೀವು ಚೆನ್ನೈಗೆ ಬಂದು ಎರಡು ಗೆಲುವುಗಳನ್ನು ಪಡೆದಾಗ ಯಾವಾಗಲೂ ವಿಶೇಷ ಭಾವನೆ ಬರುತ್ತದೆ. ಕಳೆದ ವರ್ಷದಂತೆ, ನಾವು ನಮ್ಮ ತವರು ಪಂದ್ಯಗಳಲ್ಲಿ ಬಹಳಷ್ಟು ಸೋತಿದ್ದೇವೆ ಮತ್ತು ಆ ಮೇಲೆ ಗೆದ್ದಿದ್ದೇವೆ ಎಂದು ಹೇಳಿದ್ದಾರೆ.

Continue Reading

ದೇಶ

Rahul Gandhi: ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ; ಯಾರಿಗೆ ಮಣೆ?

Rahul Gandhi: ಅಮೇಥಿ ಹಾಗೂ ರಾಯ್‌ಬರೇಲಿಯಲ್ಲಿ ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಸಲು ಇನ್ನೂ ಕೆಲವೇ ಗಂಟೆಗಳು ಬಾಕಿ ಇವೆ. ಇಷ್ಟಾದರೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ ಎಂದು ತಿಳಿದುಬಂದಿದೆ. ಹಾಗಾಗಿ, ಯಾರಿಗೆ ಮಣೆ ಹಾಕಲಾಗುತ್ತದೆ ಎಂಬ ಕುತೂಹಲ ಜಾಸ್ತಿಯಾಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಉತ್ತರ ಪ್ರದೇಶದ ಅಮೇಥಿ (Amethi) ಹಾಗೂ ರಾಯ್‌ಬರೇಲಿಯಲ್ಲಿ (Raebareli) ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ (Rahul Gandhi) ಹಾಗೂ ಪ್ರಿಯಾಂಕಾ ವಾದ್ರಾ (Priyanka Vadra) ಸ್ಪರ್ಧೆ ಕುರಿತ ವರದಿಗಳು ಕೇಳಿಬರುತ್ತಲೇ ಇವೆ. ಗಾಂಧಿ ಕುಟುಂಬದ ಅತ್ಯಾಪ್ತ ಕ್ಷೇತ್ರಗಳಲ್ಲಿ ಇಬ್ಬರೂ ಸ್ಪರ್ಧಿಸುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ಎರಡೂ ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ. ಅಮೇಥಿ ಹಾಗೂ ರಾಯ್‌ಬರೇಲಿಯಲ್ಲಿ ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಸಲು ಇನ್ನೂ ಕೆಲವೇ ಗಂಟೆಗಳು ಬಾಕಿ ಇವೆ. ಇಷ್ಟಾದರೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ ಎಂದು ತಿಳಿದುಬಂದಿದೆ.

ರಾಹುಲ್‌ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದು, ಏಪ್ರಿಲ್‌ 26ರಂದು ಮತದಾನ ನಡೆದಿದೆ. ಇನ್ನು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಥವಾ ಅವರ ಪತಿ ರಾಬರ್ಟ್‌ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಪ್ರಿಯಾಂಕಾ ವಾದ್ರಾ ಅವರು ರಾಯ್‌ಬರೇಲಿಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದುಬಂದಿದೆ.

Rahul Gandhi And Priyanka Vadra

ರಾಹುಲ್‌ ಗಾಂಧಿ ಅವರು ಅಮೇಥಿಯಿಂದ 2004ರಿಂದಲೂ ಸ್ಪರ್ಧಿಸಿ, ಗೆಲುವು ಸಾಧಿಸುತ್ತಿದ್ದರು. ಆದರೆ, 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅವರು ಸೋಲನುಭವಿಸಿದ ಕಾರಣ ವಯನಾಡು ಅವರ ಲೋಕಸಭೆ ಕ್ಷೇತ್ರವಾಗಿದೆ. ಈ ಬಾರಿಯೂ ರಾಹುಲ್‌ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರು ಕೂಡ 2004ರಿಂದ ಸ್ಪರ್ಧಿಸುತ್ತಿದ್ದರು. ಇವರು ಈಗ ರಾಜ್ಯಸಭೆಗೆ ಆಯ್ಕೆಯಾದ ಕಾರಣ ರಾಯ್‌ಬರೇಲಿಯಲ್ಲಿ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ.

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವೂ ಇತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಮಂದಿರಕ್ಕೆ ಭೇಟಿ ನೀಡುವ ಯೋಜನೆ ಇತ್ತು. ಈಗ ಇದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Continue Reading

ಕ್ರೀಡೆ

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Virat kohli: ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20 ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ.

VISTARANEWS.COM


on

Virat kohli
Koo

ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಗಾಗಿ (T20 World Cup) 15 ಸದಸ್ಯರ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ (Virat kohli) ಸೇರ್ಪಡೆಗೆ ಏನು ಕಾರಣ ಎಂಬುದನ್ನು ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ (Ajit Agarkar) ವಿವರಿಸಿದ್ದಾರೆ. ಯಾಕೆಂದರೆ ಕೊಹ್ಲಿಯ ಸ್ಟ್ರೈಕ್​ರೇಟ್​​ ಬಗ್ಗೆ ಜೋರು ಚರ್ಚೆ ನಡೆಯುತ್ತಿರುವ ಜತೆಗೆ ಅವರ ಆಯ್ಕೆಯನ್ನು ಹಲವರು ಪ್ರಶ್ನಿಸಿದ್ದಾರೆ. ಹೀಗಾಗಿ ಅಗರ್ಕರ್ ಉತ್ತರ ನೀಡಿದ್ದಾರೆ.

ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20 ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ.

ಅಂದ ಹಾಗೆ ಈ ಪ್ರಶ್ನೆಯನ್ನು ರೋಹಿತ್​ ಶರ್ಮಾ ಅವರಿಗೂ ಕೇಳಲಾಗಿತ್ತು. ಆದರೆ, ಅವರು ಜೋರಾಗಿ ನಗುವ ಮೂಲಕ ಇದೊಂದು ಚರ್ಚೆಯ ವಿಷಯವೇ ಅಲ್ಲ ಎಂಬುದಾಗಿ ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ, ಬಲಗೈ ಬ್ಯಾಟರ್​ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಆದರೆ ಸ್ಟ್ರೈಕ್ ರೇಟ್ ಟೀಕೆಗಳು ಅವರ ಬಗ್ಗೆ ಟೀಕೆ ಮಾಡಲು ಅವಕಾಶ ಕೊಟ್ಟಿದೆ. 10 ಪಂದ್ಯಗಳಲ್ಲಿ 1 ಶತಕ ಹಾಗೂ 4 ಅರ್ಧಶತಕಗಳ ನೆರವಿನಿಂದ 500 ರನ್ ಗಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸ್ಪರ್ಧೆಯಲ್ಲಿ ಋತುರಾಜ್ ಗಾಯಕ್ವಾಡ್ ಮಾತ್ರ ಅವರಿಗಿಂತ ಹೆಚ್ಚು ಸ್ಕೋರ್ ಮಾಡಿದವರು.

ಕೊಹ್ಲಿಯನ್ನು ಸಮರ್ಥಿಸಿಕೊಂಡ ಅಜಿತ್ ಅಗರ್ಕರ್

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ತಂಡದಲ್ಲಿದ್ದಾರೆ. ಉತ್ತಮ ಇನ್ನಿಂಗ್ಸ್ ನಿರ್ಮಿಸಲು ಬಯಸುವ ಮತ್ತು ಅನೇಕ ಆಧುನಿಕ ಟಿ 20 ಬ್ಯಾಟರ್​ಗಳಂತೆ ಆರಂಭದಿಂದಲೇ ವೇಗವಾಗಿ ಸ್ಕೋರ್ ಮಾಡಲು ಪ್ರಾರಂಭಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಹ್ಲಿಯ ಅಗತ್ಯವಿಲ್ಲ ಎಂದು ಅನೇಕರ ವಾದ ಮಾಡಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, ಇದು ಆಯ್ಕೆದಾರರು ಮತ್ತು ತಂಡದ ಮ್ಯಾನೇಜ್ಮೆಂಟ್ ನಡುವೆ ಚರ್ಚೆಯ ವಿಷಯವೂ ಅಲ್ಲ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರ ಅನುಭವವು ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ ಎಂದು ಭಾರತದ ಮಾಜಿ ವೇಗಿ ಗಮನಸೆಳೆದರು.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

“ನಾವು ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಚರ್ಚಿಸುತ್ತಿಲ್ಲ. ಐಪಿಎಲ್ ಮತ್ತು ಅಂತಾರರಾಷ್ಟ್ರೀಯ ಕ್ರಿಕೆಟ್ ನಡುವೆ ವ್ಯತ್ಯಾಸವಿದೆ. ನಿಮಗೆ ಅನುಭವ ಬೇಕು. ನಾವು ತಂಡದಲ್ಲಿ ಸಾಕಷ್ಟು ಸಮತೋಲನ ಹೊಂದಿದ್ದೇವೆ. ಐಪಿಎಲ್​​ನಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಿ. ಸಕಾರಾತ್ಮಕತೆಯನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕಾಗುತ್ತದೆ. ವಿಶ್ವಕಪ್ ಪಂದ್ಯದ ಒತ್ತಡವೇ ಬೇರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ನಡೆದ ಮಾತುಕತೆಗಳನ್ನು ಅಜಿತ್ ಅಗರ್ಕರ್ ತಳ್ಳಿಹಾಕಿದ್ದಾರೆ.

ಕಳೆದ ಆವೃತ್ತಿಯ ಟಿ20 ವಿಶ್ವಕಪ್​​ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅವರು 6 ಪಂದ್ಯಗಳಲ್ಲಿ ನಾಲ್ಕು ಅರ್ಧಶತಕಗಳ ಸಹಾಯದಿಂದ 296 ರನ್ ಗಳಿಸಿದ್ದರು. ಸುಮಾರು 100 ರ ಅದ್ಭುತ ಸರಾಸರಿ ಹೊಂದಿದ್ದರು. ಮುಂಬರುವ ವಿಶ್ವಕಪ್​​ನಲ್ಲಿಯೂ ಸ್ಟಾರ್ ಬ್ಯಾಟರ್​​ ತಮ್ಮ ಪ್ರದರ್ಶನವನ್ನು ಪುನರಾವರ್ತಿಸುತ್ತಾರೆ ಎಂದು ಭಾರತ ತಂಡ ಆಶಿಸುತ್ತಿದೆ.

Continue Reading

ದೇಶ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಇದರಲ್ಲಿ, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಆದರೆ, ಅಮೆರಿಕದ ವರದಿಗೆ ಕೇಂದ್ರ ಸರ್ಕಾರವು ಅಸಮಾಧಾನ ವ್ಯಕ್ತಪಡಿಸಿದೆ. ಇದು ರಾಜಕೀಯ ಪ್ರೇರಿತ ವರದಿ ಎಂದು ತಿರುಗೇಟು ನೀಡಿದೆ.

VISTARANEWS.COM


on

Religious Freedom
Koo

ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಸರ್ಕಾರದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ (USCIRF Report) ವರದಿ ಬಿಡುಗಡೆ ಮಾಡಿದೆ. ಅದರಲ್ಲೂ, ಭಾರತ ಸೇರಿ 17 ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ (Religious Freedom) ಕುರಿತು ಕಳವಳ ವ್ಯಕ್ತಪಡಿಸಿದೆ. ಇದಕ್ಕೆ ಭಾರತ ಸರ್ಕಾರವು ತಿರುಗೇಟು ನೀಡಿದ್ದು, “ಯುಎಸ್‌ಸಿಐಆರ್‌ಎಫ್‌ ವರದಿಯು ಪಕ್ಷಪಾತ ಹಾಗೂ ರಾಜಕೀಯ ಪ್ರೇರಿತವಾಗಿ ತಯಾರಿಸಿದ್ದಾಗಿದೆ” ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಅಮೆರಿಕದ ವರದಿಯಲ್ಲಿ ಏನಿದೆ?

ಅಮೆರಿಕ ಸರ್ಕಾರದ ಆಯೋಗ ರಚಿಸಿದ ವರದಿಯಲ್ಲಿ ಭಾರತದ ಕುರಿತು ಉಲ್ಲೇಖವಿದೆ. “ಭಾರತ ಸೇರಿ 17 ದೇಶಗಳಲ್ಲಿ ಜನರು ತಮ್ಮ ಧರ್ಮವನ್ನು ಅನುಸರಿಸುವ, ಧಾರ್ಮಿಕ ವಿಚಾರಗಳ ಮೇಲೆ ನಂಬಿಕೆ ಇರಿಸುವ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತಿದೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಭಾರತದಲ್ಲಂತೂ ತಾರತಮ್ಯದಿಂದ ಕೂಡಿರುವ ರಾಷ್ಟ್ರೀಯವಾದ ನೀತಿಗಳ ಹೇರಿಕೆಯಿಂದಾಗಿ ಧಾರ್ಮಿಕ ನಂಬಿಕೆ ಹೊಂದಿದವರಿಗೆ ಹಿನ್ನಡೆಯಾಗುತ್ತಿದೆ” ಎಂಬುದಾಗಿ ವರದಿ ತಿಳಿಸಿದೆ.

“ಭಾರತದಲ್ಲಿ ರಾಷ್ಟ್ರೀಯವಾದಿ ನೀತಿಗಳ ಹೇರಿಕೆಯಿಂದಾಗಿ ಧರ್ಮಗಳಲ್ಲಿ ನಂಬಿಕೆ ಇಟ್ಟುಕೊಂಡವರಿಗೆ ಸಮಸ್ಯೆಯಾಗಿದೆ. ದ್ವೇಷ ಕಾರುವ ವಾಕ್ಚಾತುರ್ಯ, ಕೋಮುವಾದದಿಂದ ಕೂಡಿದ ಹಿಂಸಾಚಾರಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಧಾರ್ಮಿಕ ವಿಚಾರಗಳನ್ನು ಇಟ್ಟುಕೊಂಡವರಿಗೆ ಅವುಗಳನ್ನು ಪಾಲಿಸಲು ಕಷ್ಟವಾಗುತ್ತಿದೆ. ಇದು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದಕ್ಕೆ ಉದಾಹರಣೆಯಾಗಿದೆ” ಎಂಬುದಾಗಿ ಅಮೆರಿಕದ ಆಯೋಗವು ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರ ತಿರುಗೇಟು

ಅಮೆರಿಕದ ವರದಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಅವರು ತಿರುಗೇಟು ನೀಡಿದ್ದಾರೆ. “ಯುಎಸ್‌ಸಿಐಆರ್‌ಎಫ್‌ ಎಂಬುದು ಪಕ್ಷಪಾತದ ಧೋರಣೆಗಳಿಂದ ಕೂಡಿದ ಸಂಘಟನೆಯಾಗಿದ್ದು, ರಾಜಕೀಯದಿಂದ ಪ್ರೇರೇಪಿತವಾಗಿದೆ. ಇದಕ್ಕೂ ಮೊದಲು ಕೂಡ ಇಂತಹ ವರದಿಗಳನ್ನು ಅದು ಪ್ರಕಟಿಸಿತ್ತು. ಭಾರತದ ಕುರಿತು ಷಡ್ಯಂತ್ರದಿಂದ ಕೂಡಿದ ವರದಿ ಬಿಡುಗಡೆ ಮಾಡುವುದು ಅದಕ್ಕೆ ರೂಢಿಯೇ ಆಗಿದೆ. ಯುಎಸ್‌ಸಿಐಆರ್‌ಎಫ್‌ ವರದಿಯಲ್ಲಿ ಯಾವುದೇ ಹುರುಳಿಲ್ಲ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Continue Reading
Advertisement
Dr Vinayaka Prasanna passed away
ಬಳ್ಳಾರಿ1 second ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 mins ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ5 mins ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ6 mins ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

BJP workers meeting in Banavasi
ರಾಜಕೀಯ8 mins ago

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Yakshagana performance for voting awareness in Uttara Kannada district on May 4
ಉತ್ತರ ಕನ್ನಡ9 mins ago

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Reliance Retail Tira Beauty launch new brand Nails Our Way
ದೇಶ9 mins ago

Reliance Retail: ರಿಲಯನ್ಸ್ ರಿಟೇಲ್‌ನ ಟಿರಾ ಬ್ಯೂಟಿಯಿಂದ ಹೊಸ ಬ್ರ್ಯಾಂಡ್ ‘ನೈಲ್ಸ್ ಅವರ್ ವೇ’ ಅನಾವರಣ

M S Dhoni
ಪ್ರಮುಖ ಸುದ್ದಿ14 mins ago

M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

Rahul Gandhi
ದೇಶ30 mins ago

Rahul Gandhi: ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ; ಯಾರಿಗೆ ಮಣೆ?

Virat kohli
ಕ್ರೀಡೆ55 mins ago

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ16 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌