ಬರಗೂರು ಸಮಿತಿ ಎಡವಟ್ಟು‌ ಸರಿಪಡಿಸಲು ಮುಂದಾದ ಶಿಕ್ಷಣ ಇಲಾಖೆ? - Vistara News

ಕರ್ನಾಟಕ

ಬರಗೂರು ಸಮಿತಿ ಎಡವಟ್ಟು‌ ಸರಿಪಡಿಸಲು ಮುಂದಾದ ಶಿಕ್ಷಣ ಇಲಾಖೆ?

ರೋಹಿತ್‌ ಚಕ್ರತೀರ್ಥ ಸಮಿತಿಯಿಂದ ನಡೆದ ಪಠ್ಯ ಪರಿಷ್ಕರಣೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಇದೀಗ ವಿವಾದಿತ ಪಠ್ಯವೊಂದರ ಪಠ್ಯಪರಿಷ್ಕರಣೆಗೆ ಶಿಕ್ಷಣ ಸಚಿವರು ಸೂಚಿಸಿದ್ದಾರೆ.

VISTARANEWS.COM


on

ಶಿಕ್ಷಣ ಇಲಾಖೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ರೋಹಿತ್‌ ಚಕ್ರತೀರ್ಥ ಸಮಿತಿ ವಿವಾದದ ಬಳಿಕವೂ ಮತ್ತೆ ಪಠ್ಯ ಸರಿಪಡಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಬರಗೂರು ರಾಮಚಂದ್ರಪ್ಪ ಸಮಿತಿಯ ತಪ್ಪು ಸರಿಪಡಿಸಲು ನಿರ್ಧರಿಸಲಾಗಿದೆ.

ಜನರ ನಂಬಿಕೆ, ಧಾರ್ಮಿಕ ಭಾವನೆಗಳಿಗೆ ಕುಂದು ತರುವ ಪದ್ಯ ವಾಪಸ್ ಪಡೆಯಲು ಸಚಿವ ನಾಗೇಶ್ ಆದೇಶ ನೀಡಿದ್ದಾರೆ. ಮಠಗಳ ಮೇಲಿನ ನಂಬಿಕೆ ಒಡೆಯಲು ಬರಗೂರು ಸಮಿತಿ ಮುಂದಾಗಿತ್ತು ಎಂಬ ಆರೋಪವಿದೆ. ಸಾರ್ವಜನಿಕ ಆಕ್ಷೇಪಣೆ ಹಿನ್ನೆಲೆಯಲ್ಲಿ ನಾಲ್ಕನೇ ತರಗತಿ ಪರಿಸರ ಅಧ್ಯಯನದ ನಲಿಕಲಿ ವಿಭಾಗದ ಭೂಮಿ ಎಂಬ ಪದ್ಯ ವಾಪಸ್ ಪಡೆಯಲು ಶಿಕ್ಷಣ ಇಲಾಖೆ ಮುಂದಾಗಿದೆ.

ಕವಿ ಸಿದ್ದಲಿಂಗಯ್ಯ ಅವರು ರಚಿಸಿದ ʼಭೂಮಿʼ ಪದ್ಯವನ್ನು ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಮಾಡಿರಲಿಲ್ಲ. ಆದರೆ ನಲಿಕಲಿ ಪಠ್ಯದಲ್ಲಿ ಧಾರ್ಮಿಕ ನಂಬಿಕೆ ಹಾಗೂ ವಿವಾದಾತ್ಮಕ ಅಂಶಗಳಿವೆ ಎಂಬ ಆರೋಪ ಕೇಳಿಬಂದಿರುವುದರಿಂದ ಬರಗೂರು ಸಮಿತಿಯ ಪಠ್ಯ ವಾಪಸ್ ಪಡೆಯಲು ಇಲಾಖೆ ನಿರ್ಧರಿಸಿದೆ.

ಸೂರ್ಯ ಚಂದ್ರ ದೇವರಲ್ಲ ಎಂಬ ಸಾಲು ವಿವಾದಿತ ಪದ್ಯದಲ್ಲಿ ಉಲ್ಲೇಖವಾಗಿದೆ. ಇನ್ನು ಮಠಗಳು ಮೋಸದ ಜಾಲ ಎಂಬ ವಾಕ್ಯ, ದೇವರ ಆತ್ಮ ಕಂಡವರಿಲ್ಲ, ಶಾಸ್ತ್ರ ಪುರಾಣ ‌ಸುಳ್ಳಿನ ಕಂತೆ, ಅರಮನೆ, ಗುರುಮನೆ ಮೋಸದ ಜಾಲ, ಮುಗಿಲು ಶೋಷಣೆ ಮಾಡುವ ಕಾಲ ವಾಕ್ಯಗಳನ್ನ ಬರಗೂರು ಸಮಿತಿ ಉಳಿಸಿಕೊಂಡಿತ್ತು. ಈ ವಾಕ್ಯಗಳು ಮಠಗಳ ಬಗ್ಗೆ ತಪ್ಪು ಭಾವನೆ ಮೂಡಿಸುತ್ತಿವೆ, ಸೂರ್ಯ ಚಂದ್ರ ದೇವರು ಅಲ್ಲ ಎಂಬುದು ವೈಜ್ಞಾನಿಕ ಸತ್ಯ ಆದರೂ ಧಾರ್ಮಿಕ ನಂಬಿಕೆಯ ಪ್ರಕಾರ ದೇವರೆಂದೇ ಪೂಜಿಸಲಾಗುತ್ತಿದೆ. ಹೀಗಾಗಿ ಪದ್ಯ ವಾಪಸ್ ಪಡೆಯಲು ಇಲಾಖೆ ಆದೇಶ ನೀಡಿದೆ.

ಇದನ್ನೂ ಓದಿ | Textbook controversy: ತಮ್ಮ ಕಥನವನ್ನು ಪಠ್ಯದಲ್ಲಿ ಸೇರಿಸಲು ನಿರಾಕರಿಸಿದ ದೇವನೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Murder News : ಹಾಸನದಲ್ಲಿ ನಟೋರಿಯಸ್​ ರೌಡಿ ಚೈಲ್ಡ್​ ರವಿ ಬರ್ಬರ ಕೊಲೆ

Murder News : ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸುತ್ತಿದ್ದಾರೆ.

VISTARANEWS.COM


on

Murder Case
Koo

ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿನಗರದಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಕೊಲೆಯಾಗಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸುತ್ತಿದ್ದಾರೆ.

ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ

ಮಂಗಳೂರು/ಯಾದಗಿರಿ: ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (Assault Case) ಬಿಜೆಪಿ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ದಾಳಿ ನಡೆಸಿರುವುದು ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದ್ದು, ಸುರಪುರದಲ್ಲಿ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಕಾರ್ಯಕರ್ತ ತಲ್ವಾರ್‌ನಿಂದ ದಾಳಿ ನಡೆಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ(33) ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ. ರಾಜೇಶ್‌ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ‌ ಅಭ್ಯರ್ಥಿ ಬ್ರಿಜೇಶ್‌ ಚೌಟ ಗೆಲುವು ಸಾಧಿಸಿದ್ದಕ್ಕೆ ಕಾರ್ಯಕರ್ತ ರಾಜೇಶ್ ಪಟಾಕಿ ಸಿಡಿಸಿದ್ದರು. ಆರೋಪಿ ಕುಶಲಪ್ಪ‌ ಮನೆ ಮುಂದೆ ರಾಜೇಶ್ ಮತ್ತು ತಂಡ ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ.

Continue Reading

ಪ್ರಮುಖ ಸುದ್ದಿ

Chikkodi Lok Sabha Result : ಕಾಂಗ್ರೆಸ್​ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಜೈಕಾರ ಕೂಗಿದ ಜಮೀರನ ಬಂಧನ

Chikkodi Lok Sabha Result :ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ವಿಡಿಯೊ ಹಾಗೂ ಸ್ಥಳದಲ್ಲಿ ಹಾಜರಿದ್ದವರ ಸಾಕ್ಷಿಯನ್ನು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆ ಮಾಡುತ್ತಿದ್ದು ಪಾಕಿಸ್ತಾನಕ್ಕೆ ಜೈಕಾರ ಹಾಕಲು ಕಾರಣವೇನು ಎಂಬುದನ್ನು ವಿಚಾರಿಸುತ್ತಿದ್ದಾರೆ.

VISTARANEWS.COM


on

Chikkodi Lok Sabha Result:
Koo

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ (Chikkodi Lok Sabha Result : ) ಕಾಂಗ್ರೆಸ್​​ನ ಪ್ರಿಯಾಂಕ ಜಾರಕಿಹೊಳಿ ಗೆದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುವಾಗ ಪಾಕಿಸ್ತಾನ ಪರ ಜೈಕಾರ ಕೂಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಮೀರ್​ ನಾಯಕವಾಡಿ ಎಂದು ಗುರುತಿಸಲಾಗಿದೆ. 25 ವರ್ಷದ ಆತ ಹುಂಬತನದಿಂದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪಾಕಿಸ್ತಾನಕ್ಕೆ ಜೈಕಾರ ಕೂಗಿದ್ದ. ಆ ತಕ್ಷಣವೇ ವಿಷಯ ಬಹಿರಂಗಗೊಂಡು ಆಕ್ರೋಶ ವ್ಯಕ್ತವಾಗಿತ್ತು.

ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ವಿಡಿಯೊ ಹಾಗೂ ಸ್ಥಳದಲ್ಲಿ ಹಾಜರಿದ್ದವರ ಸಾಕ್ಷಿಯನ್ನು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆ ಮಾಡುತ್ತಿದ್ದು ಪಾಕಿಸ್ತಾನಕ್ಕೆ ಜೈಕಾರ ಹಾಕಲು ಕಾರಣವೇನು ಎಂಬುದನ್ನು ವಿಚಾರಿಸುತ್ತಿದ್ದಾರೆ.

ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿ’ಹೋಳಿ’; ಜೊಲ್ಲೆಗೆ ಸೋಲು

ರಾಜ್ಯದ ಗಮನ ಸೆಳೆದಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ (Chikkodi Election Result 2024) ಬಾರಿಸಿದೆ. ಬಿಜೆಪಿಯ ಅಣ್ಣಾಸಾಹೇಬ್‌ ಜೊಲ್ಲೆ (Annasaheb Jolle) ಅವರ ವಿರುದ್ಧ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಯುವ ನಾಯಕಿ ಪ್ರಯಾಂಕಾ ಜಾರಕಿಹೊಳಿ ಅವರು ಬಿಜೆಪಿಯ ಭದ್ರಕೋಟೆಯನ್ನು ಭೇದಿಸುವ ಜತೆಗೆ ರಾಜ್ಯದ ಗಮನ ಸೆಳೆದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು 96,253 ಮತಗಳ ಅಂತರದಿಂದ ಜಯಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ 5,83,926 ಮತಗಳನ್ನು ಪಡೆದರು.

ಹಾಲಿ ಸಂಸದರೂ ಆಗಿರುವ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಟಿಕೆಟ್‌ ತಪ್ಪಿಸಿ, ತಾವು ಟಿಕೆಟ್‌ ಗಿಟ್ಟಿಸಿಕೊಳ್ಳಲು ರಮೇಶ್‌ ಕತ್ತಿ ಅವರು ತಂತ್ರ ಹೆಣೆದರೂ ಅದು ಸಫಲವಾಗಿಲ್ಲ. ಬಳಿಕ ರಮೇಶ್‌ ಕತ್ತಿ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದರೂ, ಅದು ಸಫಲವಾಗಲಿಲ್ಲ. ಅಷ್ಟರಮಟ್ಟಿಗೆ, ಅಣ್ಣಾಸಾಹೇಬ್‌ ಜೊಲ್ಲೆ ಅವರು ಭಿನ್ನಮತವನ್ನು ತಡೆದಿದ್ದು, ಮೋದಿ ಅವರ ಅಲೆ, ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇ ಅವರಿಗೆ ಸಕಾರಾತ್ಮಕವಾಗಲಿವೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದರು. ಅಣ್ಣಾ ಸಾಹೇಬ್‌ ಜೊಲ್ಲೆ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರು ಶಾಸಕಿ ಆಗಿರುವ ಕಾರಣ ಅವರ ಪ್ರಾಬಲ್ಯ ಜಾಸ್ತಿ ಇತ್ತು. ಇದೆಲ್ಲವನ್ನು ಪ್ರಿಯಾಂಕಾ ಜಾರಕಿಹೊಳಿ ಅವರು ಹಿಮ್ಮೆಟ್ಟಿ ನಿಂತಿದ್ದಾರೆ.

ಇದನ್ನೂ ಓದಿ: Chikkaballapur News : ಶಾಸಕ ಪ್ರದೀಪ್ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ

ಎಂಬಿಎ ಪದವೀಧರೆ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಸ್ಪರ್ಧಿಸಿದ್ದರೂ ಅಪ್ಪ ಸತೀಶ್‌ ಜಾರಕಿಹೊಳಿ ಅವರ ರಾಜಕೀಯ ಅನುಭವವು ಜತೆಗಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಅಪ್ಪನ ಗೆಲುವಾಗಿ ಓಡಾಟ ನಡೆಸಿದ್ದರು. ಇನ್ನು, ಚಿಕ್ಕೋಡಿಯಲ್ಲಿ ಲಿಂಗಾಯತ ಸಮುದಾದಯವರ ಮತಗಳೇ ನಿರ್ಣಾಯಕವಾಗಿದ್ದವು. ಸುಮಾರು 4.10 ಲಕ್ಷ ಲಿಂಗಾಯತ ಮತಗಳಿದ್ದು, ಪರಿಶಿಷ್ಟ ಜಾತಿ 1.65 ಲಕ್ಷ, ಪರಿಶಿಷ್ಟ ಪಂಗಡ 9೦, ಮುಸ್ಲಿಮರ 1.80 ಲಕ್ಷ ಮತಗಳು ಕೂಡ ನಿರ್ಣಾಯಕವಾಗಿದ್ದವು.

Continue Reading

ಪ್ರಮುಖ ಸುದ್ದಿ

Car Stunt : ಬೈಕ್​ ವೀಲಿಂಗ್ ಆಯ್ತು; ಇದೀಗ ಬೆಂಗಳೂರು ಮಹಾನಗರದಲ್ಲಿ ಕಾರಿನಲ್ಲಿ ಸ್ಟಂಟ್​

car stunt: ಜೂನ್ 1 ರಂದು ರಾತ್ರಿ 1.52 ಕ್ಕೆ ಜಯನಗರದ 4ನೇ ಹಂತದಲ್ಲಿ ಈ ಘಟನೆ ನಡೆದಿದೆ. ಒಂದು ಸರ್ಕಲ್​ಗೆ ಹಲವಾರು ಬಾರಿ ಕಾರನ್ನು ಸುತ್ತು ಹಾಕಿಸಿ ಸ್ಟಂಟ್ ಮಾಡಿರುವ ಘಟನೆ ನಡೆದಿದೆ. ಹೆಡ್​ಲೈಟ್ ಹಾಕಿಕೊಂಡು ಹಲವಾರು ಬಾರಿ ಕಾರಿನಲ್ಲಿ ಗಿರಕಿ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

VISTARANEWS.COM


on

Car Stunt
Koo

ಬೆಂಗಳೂರು: ಬೆಂಗಳೂರು ನಗರದಲ್ಲಿ ಕಿಡಿಗೇಡಿಗಳು ಬೈಕ್​ ಹತ್ತಿ ವೀಲಿಂಗ್ ಮತ್ತು ಸ್ಟಂಟ್ ಮಾಡುವುದು ಮಾಮೂಲಿ. ಪೊಲೀಸರು ಕ್ರಮ ಕೈಗೊಂಡ ಹೊರತಾಗಿಯೂ ಪುಂಡರು ತಮ್ಮ ವರ್ತನೆಯನ್ನು ಮುಂದುರಿಸುತ್ತಲೇ ಇರುತ್ತಾರೆ. ಆದರೆ ಜನರಿಗೆ ಇದೀಗ ಹೊಸ ಗೀಳು ಶುರುವಾಗಿದೆ. ಅತಿ ವೇಗದಲ್ಲಿ ಕಾರು ಓಡಿಸುತ್ತಾ ಸ್ಟಂಟ್ (Car Stunt) ಮಾಡುವುದು. ಈ ಪ್ರವೃತ್ತಿ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕರಲ್ಲಿ ಭೀತಿ ಉಂಟಾಗಿದೆ. ಬೈಕ್ ಸ್ಟಂಟ್​ಗಿಂತಲೂ ಹೆಚ್ಚು ಅಪಾಯಕಾರಿಯಾಗಿರುವ ಕಾರು ಸ್ಟಂಟ್​​ ಜನರ ಜೀವಕ್ಕೆ ಕುತ್ತು ತರುವುದಲ್ಲಿ ಯಾವುದೇ ಅನುಮಾನ ಇಲ್ಲ.

ಜೂನ್ 1 ರಂದು ರಾತ್ರಿ 1.52 ಕ್ಕೆ ಜಯನಗರದ 4ನೇ ಹಂತದಲ್ಲಿ ಈ ಘಟನೆ ನಡೆದಿದೆ. ಒಂದು ಸರ್ಕಲ್​ಗೆ ಹಲವಾರು ಬಾರಿ ಕಾರನ್ನು ಸುತ್ತು ಹಾಕಿಸಿ ಸ್ಟಂಟ್ ಮಾಡಿರುವ ಘಟನೆ ನಡೆದಿದೆ. ಹೆಡ್​ಲೈಟ್ ಹಾಕಿಕೊಂಡು ಹಲವಾರು ಬಾರಿ ಕಾರಿನಲ್ಲಿ ಗಿರಕಿ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಯನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದರ ವಿಡಿಯೊಗಳು ಎಲ್ಲೆಡೆ ವೈರಲ್ ಆಗಿದೆ. ಘಟನೆ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡ ಬಗ್ಗೆ ಮಾಹಿತಿ ಇಲ್ಲ.

ಶಾಸಕ ಪ್ರದೀಪ್ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ

ಚಿಕ್ಕಬಳ್ಳಾಪುರ: ಇಲ್ಲಿನ ಶಾಸಕ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಮಂಗಳವಾರ ರಾತ್ರಿ (ಜೂ4ರಂದು) ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಮನೆಗೆ ಹಾಕಲಾಗಿದ್ದ ಗಾಜುಗಳು ಪುಡಿಪುಡಿಯಾಗಿವೆ. ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಈ ಕೃತ್ಯ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ. ರಾಜಕೀಯ ವಿರೋಧಿಗಳ ವಿರುದ್ಧ ಭಯಂಕರ ಭಾಷಣ ಮಾಡುವ ಪ್ರದೀಪ್​ ಈಶ್ವರ್ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಕಲ್ಲು ಎಸೆದಿರಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ: Microplastics: ನಮಗೆ ಗೊತ್ತೇ ಆಗದಂತೆ ನಮ್ಮ ದೇಹ ಸೇರುತ್ತಿದೆ ಅಪಾಯಕಾರಿ ಪ್ಲಾಸ್ಟಿಕ್‌!

ಮಂಗಳವಾರ ಪ್ರಕಟವಾದ ಲೋಕ ಸಭಾ ಚುನಾವಣೆಯ ಫಲಿತಾಂಶದಲ್ಲಿ ಪ್ರದೀಪ್ ಈಶ್ವರ್ ಅವರ ರಾಜಕೀಯ ಪ್ರತಿಸ್ಪರ್ಧಿ ಡಾ. ಸುಧಾಕರ್ ಗೆಲುವ ಸಾಧಿಸಿದ್ದಾರೆ. ಆ ಬಳಿಕ ಸುಧಾಕರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದರು. ಅಲ್ಲದೆ ಸುಧಾಕರ್​ ಒಂದೇ ಒಂದು ಓಟ್​ ರಕ್ಷಾ ರಾಮಯ್ಯ ಅವರಿಗಿಂತ ಹೆಚ್ಚು ಪಡೆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿಕೆ ನೀಡಿದ್ದನ್ನು ಖಂಡಿಸಿದ್ದರು.

ರಾತ್ರಿ 10ರಿಂದ 11 ಗಂಟೆಯ ನಡುವೆ ಸುಧಾಕರ್​ ಅವರ ಗೃಹಕಚೇರಿಯ ನಿವಾಸದ ಮೇಲೆ‌ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿ ಅವರ ಗೃಹಕಚೇರಿ ಇದ್ದು ಅಲ್ಲಿಗೆ ಕಲ್ಲು ತೂರಲಾಗಿದೆ. ತಡರಾತ್ರಿ ಮನೆಯ ಹಿಂಭಾಗದ ಮೂಲಕ ಕಲ್ಲು ತೂರಾಟ

Continue Reading

ಕ್ರೈಂ

Praveen Nettaru Murder: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ವಿದೇಶಕ್ಕೆ ಪರಾರಿಯಾಗುತ್ತಿದ್ದಾಗಲೇ ಬಂಧನ

Praveen Nettaru Murder: ಕೊಲೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಎಂಬಾತನನ್ನು ಮುಂಬಯಿ ಏರ್‌ಪೋರ್ಟ್‌ನಲ್ಲಿ NIA ತಂಡ ಬಂಧಿಸಿದೆ. ಈತ ಮುಂಬಯಿ ಏರ್ಪೋರ್ಟ್‌ ಮೂಲಕ ಪರಾರಿಯಾಗುವ ಯತ್ನದಲ್ಲಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅಲ್ಲೇ ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Praveen Nettaru
Koo

ಬೆಂಗಳೂರು: ಬಿಜೆಪಿ ಕಾರ್ಯಕರ್ತ (BJP leader) ಪ್ರವೀಣ್‌ ನೆಟ್ಟಾರು ಕೊಲೆ (Praveen Nettaru Murder) ಮಾಡಿದ ಮತ್ತೊಬ್ಬ ಆರೋಪಿಯನ್ನು (Suspect) ಬಂಧಿಸಲಾಗಿದೆ. ಮುಂಬಯಿ ವಿಮಾನ ನಿಲ್ದಾಣದಲ್ಲಿ ಈತ ವಿದೇಶಕ್ಕೆ ಪರಾರಿಯಾಗಲು ಹೊರಟಿದ್ದಾಗಲೇ ಸಿಕ್ಕಿಬಿದ್ದಿದ್ದಾನೆ.

ಕೊಲೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಎಂಬಾತನನ್ನು ಮುಂಬಯಿ ಏರ್‌ಪೋರ್ಟ್‌ನಲ್ಲಿ NIA ತಂಡ ಬಂಧಿಸಿದೆ. ಈತ ಮುಂಬಯಿ ಏರ್ಪೋರ್ಟ್‌ ಮೂಲಕ ಪರಾರಿಯಾಗುವ ಯತ್ನದಲ್ಲಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅಲ್ಲೇ ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ವಿದೇಶದಲ್ಲೇ ಇದ್ದ ರಿಯಾಜ್, ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ಸೂಚನೆ ಪ್ರಕಾರ ಭಾರತಕ್ಕೆ ಮರಳಿದ್ದ. ಇತ್ತೀಚೆಗೆ ಬಂಧಿತನಾಗಿದ್ದ ಮುಸ್ತಫಾ ಪೈಚಾರ್ ಎಂಬ ಆರೋಪಿಗೆ ಸಕಲೇಶಪುರದಲ್ಲಿ ವಾಸ್ತವ್ಯ ಹೂಡಲು ಸಹಕರಿಸಿದ್ದ. ಸದ್ಯ ಪ್ರಕರಣ ಸಂಬಂಧ 19ನೇ ಆರೋಪಿಯನ್ನು NIA ಬಂಧಿಸಿದೆ.

ಪ್ರಮುಖ ಮೂವರು ಆರೋಪಿಗಳ ಬಂಧನ

ಹಾಸನ: ಬಿಜೆಪಿ ಕಾರ್ಯಕರ್ತ, ದಕ್ಷಿಣ ಕನ್ನಡದ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru murder Case) ಪ್ರಕರಣದಲ್ಲಿ ಮೂವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಹಾಸನ ಜಿಲ್ಲೆಯಲ್ಲಿ (Hassan news) ಎನ್‌ಐಎ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. ಸುಳ್ಯ ಮೂಲದ ಮುಸ್ತಾಫ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ ಬಂಧಿತರು. ಇವರಲ್ಲಿ ಮುಸ್ತಾಫನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಸಕಲೇಶಪುರ ತಾಲ್ಲೂಕಿನ ಆನೆಮಹಲ್‌ ಎಂಬಲ್ಲಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದಿದೆ. ಆನೆಮಹಲ್‌ನ ಸಿರಾಜ್ ಎಂಬವರ ಬಳಿ ಮುಸ್ತಾಫ ಪೈಚಾರ್ ಹಾಗೂ ಇಲಿಯಾಸ್ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್‌ನನ್ನೂ ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ.

ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫನಿಗಾಗಿ ಎನ್‌ಐಎ ವರ್ಷಗಳಿಂದ ಹುಡುಕುತ್ತಿತ್ತು. ಸುಳ್ಯದ ಶಾಂತಿನಗರ ನಿವಾಸಿಯಾದ ಮುಸ್ತಾಫ ಪ್ರಕರಣದ A4 ಆಗಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಡಗಿದ್ದ ಆರೋಪಿಯನ್ನು NIA ಇನ್‌ಸ್ಪೆಕ್ಟರ್ ಷಣ್ಮುಗಂ ನೇತೃತ್ವದ ತಂಡ ಬಂಧಿಸಿದೆ. ಆರೋಪಿಯನ್ನು ತನಿಖೆಗಾಗಿ ಬೆಂಗಳೂರು ಎನ್ಐಎ ಕಚೇರಿಯತ್ತ ಕೊಂಡೊಯ್ಯಲಾಗಿದೆ.

ಏನಿದು ಪ್ರಕರಣ?

ಬೆಳ್ಳಾರೆ ಪರಿಸರದಲ್ಲಿ ಹಿಂದೂ ಸಂಘಟನೆಯ ಸಕ್ರಿಯ ನಾಯಕರಾಗಿ ಗಮನ ಸೆಳೆದಿದ್ದ ಪ್ರವೀಣ್‌ ನೆಟ್ಟಾರು ಅವರನ್ನು 2022ರ ಜುಲೈ 26ರಂದು ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆ ಸಂಬಂಧ ಪಿಎಫ್‌ಐ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆನ್ನಲಾದ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಈ ನಡುವೆ, ಹಿಂದೂ ಕಾರ್ಯಕರ್ತರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಎಂದು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಚಾರ್ಜ್‌ಶೀಟ್‌ ಸಲ್ಲಿಕೆ

ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯದಲ್ಲಿ ಸುಮಾರು 1500 ಪುಟಗಳ ಚಾರ್ಜ್​ಶೀಟ್​ ಈ ಹಿಂದೆ ಎನ್‌ಐಎ ಸಲ್ಲಿಸಿತ್ತು. ‘ಸಮಾಜದಲ್ಲಿ-ಜನರಲ್ಲಿ ಭಯ ಹುಟ್ಟಿಸುವ ಸಲುವಾಗಿ ಪ್ರವೀಣ್​ ನೆಟ್ಟಾರು ಅವರನ್ನು ಪಿಎಫ್​ಐ ಹತ್ಯೆ ಮಾಡಿದೆ. ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿ ಸೃಷ್ಟಿಸುವುದು ಆ ಸಂಘಟನೆ ಮುಖಂಡರ ಪ್ರಮುಖ ಉದ್ದೇಶ. 2047ರ ಹೊತ್ತಿಗೆ ಇಸ್ಲಾಮಿಕ್​ ಆಳ್ವಿಕೆ ಸ್ಥಾಪಿಸುವ ನಿಟ್ಟಿನಲ್ಲಿ ಪಿಎಫ್​ಐ ಕಾರ್ಯಕರ್ತರು ಕಾರ್ಯಾಚರಣೆ ನಡೆಸುತ್ತಿದ್ದರು. ವಿವಿಧ ಹಿಂದು ಮುಖಂಡರ ಹತ್ಯೆಗಳನ್ನು ನಡೆಸಲು ಸೇವಾ ತಂಡಗಳು, ಕಿಲ್ಲರ್​ ಸ್ಕ್ವಾಡ್​​ಗಳು ಎಂಬ ರಹಸ್ಯ ತಂಡಗಳನ್ನು ಪಿಎಫ್​ಐ ರಚನೆ ಮಾಡಿಕೊಂಡಿತ್ತು. ಒಬ್ಬ ವ್ಯಕ್ತಿಯನ್ನು ಟಾರ್ಗೆಟ್​ ಮಾಡಿ, ಆತನನ್ನು ಕೊಲ್ಲಲು ಯೋಜನೆ ರೂಪಿಸುತ್ತಿದ್ದರು. ಅದಕ್ಕಾಗಿ ಸದಸ್ಯರಿಗೆ ತರಬೇತಿ ನೀಡುತ್ತಿದ್ದರು. ಬಳಿಕ ಆಯಾ ಜಿಲ್ಲಾ ಮುಖ್ಯಸ್ಥನಿಗೆ ಸೂಚನೆ ನೀಡುತ್ತಿದ್ದರು. ಹೀಗೆ ಟಾರ್ಗೆಟ್​ ಆದ ವ್ಯಕ್ತಿಗಳಲ್ಲಿ ಪ್ರವೀಣ್​ ನೆಟ್ಟಾರು ಕೂಡ ಒಬ್ಬನಾಗಿದ್ದ’ ಎಂಬ ಅಂಶಗಳನ್ನು ಎನ್​ಐಎ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದೆ.

ಮಹಮ್ಮದ್ ಶಿಯಾಬ್, ಅಬ್ದುಲ್ ಬಶೀರ, ರಿಯಾಝ್, ಮುಸ್ತಫಾ ಪೈಚಾರ್, ಮಸೂದ್ ಕೆ ಎ, ಕೊಡಾಜೆ ಮೊಹಮ್ಮದ್ ಶರೀಫ್, ಅಬೂಬಕ್ಕರ್ ಸಿದ್ದಿಕ್, ನೌಫಲ್ ಎಂ., ಇಸ್ಮಾಯಿಲ್ ಶಾಫಿ.ಕೆ., ಕೆ ಮಹಮ್ಮದ್ ಇಕ್ಬಾಲ್, ಶಹೀದ್ ಎಂ., ಮಹಮ್ಮದ್ ಶಫೀಕ್ ಜಿ., ಉಮ್ಮರ್ ಫಾರೂಕ್ ಎಂ.ಆರ್., ಅಬ್ದುಲ್ ಕಬೀರ್ ಸಿ.ಎ., ಮುಹಮ್ಮದ್ ಇಬ್ರಾಹಿಂ ಶಾ., ಸೈನುಲ್ ಅಬಿದ್ ವೈ., ಶೇಖ್ ಸದ್ದಾಂ ಹುಸೇನ್., ಜಾಕಿಯಾರ್ ಎ., ಎನ್.ಅಬ್ದುಲ್ ಹಾರಿಸ್., ತುಫೈಲ್ ಎಂ. ಎಚ್. ಎಂಬುವರ ಹೆಸರು ಚಾರ್ಜ್​ಶೀಟ್​​ನಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: Praveen Nettaru: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೊಂದು ಚಾರ್ಜ್‌ಶೀಟ್‌ ಸಲ್ಲಿಕೆ

Continue Reading
Advertisement
Murder Case
ಪ್ರಮುಖ ಸುದ್ದಿ22 mins ago

Murder News : ಹಾಸನದಲ್ಲಿ ನಟೋರಿಯಸ್​ ರೌಡಿ ಚೈಲ್ಡ್​ ರವಿ ಬರ್ಬರ ಕೊಲೆ

Election Results 2024
Lok Sabha Election 202433 mins ago

Election Results 2024: ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಿವರು!

Chikkodi Lok Sabha Result:
ಪ್ರಮುಖ ಸುದ್ದಿ43 mins ago

Chikkodi Lok Sabha Result : ಕಾಂಗ್ರೆಸ್​ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಜೈಕಾರ ಕೂಗಿದ ಜಮೀರನ ಬಂಧನ

Election Results 2024 chandrababu naidu nitish kumar 2
ಪ್ರಮುಖ ಸುದ್ದಿ49 mins ago

Election Results 2024: ನಿತೀಶ್‌ಕುಮಾರ್, ಚಂದ್ರಬಾಬು ನಾಯ್ಡು ನೆರವಿಲ್ಲದೆ ಮೋದಿ ಸರ್ಕಾರ ನಡೆಸಲಾಗದೆ?

Election Results 2024
ದೇಶ1 hour ago

Election Results 2024: ಸುದೀರ್ಘ ಅವಧಿಗೆ ಪ್ರಧಾನಿ ಆಗ್ತಾರಾ ಮೋದಿ?; ನೆಹರೂ, ಇಂದಿರಾ ಸಾಲಿಗೆ ಸೇರೋದು ಪಕ್ಕಾನಾ?

World Environment Day
ಪರಿಸರ2 hours ago

World Environment Day: ಇಂದು ವಿಶ್ವ ಪರಿಸರ ದಿನ; ಭೂಮಿಯನ್ನು ಉಳಿಸಲು ಈ 5 ಸೂತ್ರ ಪಾಲಿಸೋಣ

Election Results 2024
Lok Sabha Election 20242 hours ago

Election Results 2024: ವಾರಣಾಸಿಯಲ್ಲಿ ಮೋದಿ ಮತ ಗಳಿಕೆ ಪ್ರಮಾಣ ಕುಸಿಯುವಂತೆ ಮಾಡಿದ ಎಸ್‌ಪಿ-ಕಾಂಗ್ರೆಸ್ ಮೈತ್ರಿಕೂಟ

Election Results 2024
ದೇಶ2 hours ago

Election Results 2024: ಹ್ಯಾಟ್ರಿಕ್‌ ಸರದಾರ ಮೋದಿಗೆ ವಿಶ್ವನಾಯಕರಿಂದ ಅಭಿನಂದನೆ

election results 2024 Modi and Yogi
ಪ್ರಮುಖ ಸುದ್ದಿ2 hours ago

Election Results 2024: ರಾಮ ಮಂದಿರ ಭದ್ರ, ಯುಪಿ ಅಭದ್ರ: ಉತ್ತರ ಪ್ರದೇಶದಲ್ಲಿ ಬಿಜೆಪಿ 64ರಿಂದ 36ಕ್ಕೆ ಕುಸಿಯಲು ಕಾರಣ ಇಲ್ಲಿದೆ

Election Results 2024
ದೇಶ3 hours ago

Election Results 2024: 543ರಲ್ಲಿ 542 ಕ್ಷೇತ್ರಗಳ ಫಲಿತಾಂಶ ಘೋಷಣೆ; ಪಕ್ಷಗಳ ಅಂತಿಮ ಬಲಾಬಲ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌