Pervez Musharraf Died: ಮುಷರಫ್‌ ಸಾವಿಗೆ ಕಾರಣವಾದ ಅಪರೂಪದ ಆರೋಗ್ಯ ಸಮಸ್ಯೆ, ಏನಿದು Amyloidosis? - Vistara News

ಆರೋಗ್ಯ

Pervez Musharraf Died: ಮುಷರಫ್‌ ಸಾವಿಗೆ ಕಾರಣವಾದ ಅಪರೂಪದ ಆರೋಗ್ಯ ಸಮಸ್ಯೆ, ಏನಿದು Amyloidosis?

ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಈಗ ದುಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಎದುರಿಸುತ್ತಿರುವ ಸಮಸ್ಯೆ Amyloidosis. ಏನಿದು ಅಪರೂಪದ ತೊಂದರೆ?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರು ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ(Pervez Musharraf Died). ಕಳೆದ ಕೆಲವು ತಿಂಗಳಿನಿಂದ ಅವರು ಯುಎಇನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಾಗಾದರೆ ಮುಷರಫ್‌ ಅವರಿಗೆ ಏನು ಆಗಿತ್ತು(Amyloidosis)? ಅವರ ಅಂಗಗಳ ಕಾರ್ಯಕ್ಷಮತೆ ಕ್ಷೀಣಿಸಲು ಏನು ಕಾರಣ? ಇಲ್ಲಿದೆ ಮಾಹಿತಿ.

ಮುಷರಫ್‌ ಅವರ ಈ ಅಪರೂಪದ ಸಮಸ್ಯೆಗೆ ಅಮೈಲೋಡೋಸಿಸ್‌ (Amyloidosis) ಎಂದು ಹೇಳಲಾಗುತ್ತದೆ. ದೇಹದ ಪ್ರಮುಖ ಅಂಗಗಳಲ್ಲಿ ಅಸಾಮಾನ್ಯ ರೀತಿಯಲ್ಲಿ ಪ್ರೊಟೀನ್ ಜಮಾವಣೆಗೊಂಡು, ಆ ಅಂಗಗಳ ಕಾರ್ಯಕ್ಷಮತೆಯನ್ನು ಕ್ಷೀಣಿಸುತ್ತದೆ. ಅಮೈಲಾಯ್ಡ್‌ ಸಾಮಾನ್ಯವಾಗಿ ದೇಹದಲ್ಲಿ ಇರುವುದಿಲ್ಲ. ಆದರೆ ಬೇರೆ ಬೇರೆ ರೀತಿಯ ಪ್ರೊಟೀನ್‌ಗಳಿಂದ ಇವು ರೂಪುಗೊಳ್ಳುವುದಕ್ಕೆ ಸಾಧ್ಯವಿದೆ. ಹೃದಯ, ಮೂತ್ರಪಿಂಡ, ಯಕೃತ್‌ ಮತ್ತು ಜೀರ್ಣಾಂಗದಂಥ ಪ್ರಮುಖ ಭಾಗಗಳಲ್ಲಿ ಇವು ರೂಪುಗೊಂಡು ಪ್ರಾಣಾಪಾಯನ್ನೂ ತರಬಹುದು.

‌2018ರಲ್ಲಿ ಅವರಿಗೆ ಅಮೈಲೋಡೋಸಿಸ್‌ ಇರುವುದು ಪತ್ತೆಯಾಗಿತ್ತು. ಇದರಿಂದ ನರ ಮತು ಹೃದಯ ಸಂಬಂಧೀ ಸಮಸ್ಯೆಗಳಿಗೆ ಅವರು ಚಿಕಿತ್ಸೆ ತೆಗೆದುಕೊಳ್ಳುವಂತಾಗಿತ್ತು. ಇದೀಗ ಈ ಸಮಸ್ಯೆ ಉಲ್ಭಣಗೊಂಡಿದ್ದು, ಅವರ ನರಮಂಡಲ ಸಂಪೂರ್ಣ ದುರ್ಬಲಗೊಂಡಿದೆ ಎಂದು ಅವರ ಸಮೀಪವರ್ತಿಗಳು ತಿಳಿಸಿದ್ದಾರೆ.

ಕಾರಣಗಳೇನು?
ಅಮೈಲೋಡೋಸಿಸ್‌ ಎನ್ನುವುದು ನಾನಾ ಆರೋಗ್ಯ ಸಮಸ್ಯೆಗಳ ಉಪ ಉತ್ಪನ್ನ ಎಂದು ಹೇಳಲಾಗುತ್ತದೆ. ಕೆಲವೊಮ್ಮೆ ಜೀನ್‌ ಮ್ಯುಟೇಷನ್‌ನಿಂದ ಈ ಸಮಸ್ಯೆ ಬರುತ್ತದೆ. ಹೆಚ್ಚಿನ ಸಂದರ್ಭದಲ್ಲಿ ಕಾರಣಗಳೇ ಗೊತ್ತಾಗುವುದಿಲ್ಲ. ಅಮೈಲೋಡೋಸಿಸ್‌ನಲ್ಲಿ ಲೈಟ್‌ ಚೈನ್‌ ಅಮೈಲೋಡೋಸಿಸ್‌, ಎಎ ಅಮೈಲೋಡೋಸಿಸ್‌, ಟ್ರಾನ್ಸ್‌ ಥೈರೆಟಿನ್‌ ಅಮೈಲೋಡೋಸಿಸ್‌ ಎಂಬ ಮೂರು ಪ್ರಕಾರಗಳಿವೆ.

ಇದನ್ನೂ ಓದಿ: Pervez Musharraf Died: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪ್ರಮುಖ ಲಕ್ಷಣಗಳು
– ದೇಹ ತುಂಬ ದುರ್ಬಲವಾಗುವುದು, ಆಯಾಸ
– ಯಾವುದೇ ಕಾರಣವಿಲ್ಲದೆ ದೇಹದ ತೂಕ ಕುಸಿತ
– ಸೊಂಟ, ಕಾಲು, ಮೊಣಗಂಟು ಮತ್ತು ಪಾದಗಳಲ್ಲಿ ಊತ
– ಕೈ ಮತ್ತು ಪಾದಗಳಲ್ಲಿ ನೋವು, ಇರುವೆ ಹರಿದಂತಾಗುವುದು
– ಚರ್ಮದಲ್ಲಿ ಕೆಲವು ಕಡೆ ಉರಿಯೂತ
– ನಾಲಿಗೆ ದಪ್ಪ ಆಗುವುದು
– ಉಸಿರಾಟದ ಅವಧಿ ಕಡಿಮೆ, ಏದುಸಿರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Cervical Cancer: ಗರ್ಭಕೊರಳಿನ ಕ್ಯಾನ್ಸರ್‌ಗೆ ಮುನ್ನೆಚ್ಚರಿಕೆಯೇ ಮದ್ದು

ಗರ್ಭಕೊರಳಿನ ಕ್ಯಾನ್ಸರ್‌ (Cervical Cancer) ಯಾವುದೇ ವಯಸ್ಸಿನವರನ್ನೂ ಬಾಧಿಸಬಹುದಾದರೂ, 30ರ ನಂತರದ ಮಹಿಳೆಯನ್ನು ಬಾಧಿಸುವುದು ಹೆಚ್ಚು. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡರೆ, ಗರ್ಭಕೊರಳಿನ ಕ್ಯಾನ್ಸರ್‌ ಬಾರದಂತೆ ತಡೆಯುವುದಕ್ಕೆ ಸಾಧ್ಯವಿದೆ. ಇಲ್ಲಿವೆ ವಿವರಗಳು.

VISTARANEWS.COM


on

Cervical Cancer
Koo

ನಮ್ಮ ಆರೋಗ್ಯ ರಕ್ಷಣೆಯಲ್ಲಿ ಹಲವು ವಿಷಯಗಳಿವೆ. ಒಂದು, ಸರಿಯಾದ ಸತ್ವಯುತ ಆಹಾರವನ್ನು ತೆಗೆದುಕೊಳ್ಳುವುದು, ತಪ್ಪದೆ ವ್ಯಾಯಾಮ ಮಾಡಿ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳುವುದು ಮತ್ತು ನಿಯಮಿತವಾಗಿ ತಪಾಸಣೆಗಳಿಗೆ ಒಳಗಾಗುವುದು- ಈ ಮೂರು ವಿಷಯಗಳನ್ನು ಪಾಲಿಸುವುದು ಆರೋಗ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಇದರಿಂದ ಮುಂದೆ ಬರಬಹುದಾದ ಬಹಳಷ್ಟು ತೊಂದರೆಗಳನ್ನು ಬುಡದಲ್ಲೇ ಕತ್ತರಿಸಬಹುದು. ನಿಯಮಿತ ತಪಾಸಣೆಯಿಂದ ಕೆಲವು ರೀತಿಯ ಕ್ಯಾನ್ಸರ್‌ಗಳನ್ನು ಪ್ರಾರಂಭಿಕ ಹಂತದಲ್ಲಿ ಅಥವಾ ಪ್ರಾರಂಭವಾಗುವ ಮುನ್ನವೇ ಪತ್ತೆ ಮಾಡಬಹುದು. ಉದಾ, ಸರ್ವೈಕಲ್‌ ಕ್ಯಾನ್ಸರ್‌ ಅಥವಾ ಗರ್ಭಕೊರಳಿನ ಕ್ಯಾನ್ಸರ್‌ (Cervical Cancer). ಇದು ಯಾವುದೇ ವಯಸ್ಸಿನವರನ್ನೂ ಬಾಧಿಸಬಹುದಾದರೂ, ೩೦ರ ನಂತರದ ಮಹಿಳೆಯನ್ನು ಬಾಧಿಸುವುದು ಹೆಚ್ಚು. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡರೆ, ಗರ್ಭಕೊರಳಿನ ಕ್ಯಾನ್ಸರ್‌ ಬಾರದಂತೆ ತಡೆಯುವುದಕ್ಕೆ ಸಾಧ್ಯವಿದೆ. ಇಲ್ಲಿವೆ ವಿವರಗಳು.

Ovarian and Cervical Cancer. Woman Touching on Lower Abdomen in

ವೈರಸ್‌ ಕಾರಣ

ಹ್ಯೂಮನ್‌ ಪ್ಯಾಪಿಲೋಮ ವೈರಸ್‌ ಅಥವಾ ಎಚ್‌ಪಿವಿ ಎಂದು ಕರೆಯಲಾಗುವ ವೈರಸ್‌ನಿಂದ ಗರ್ಭಕಂಠದ ಕ್ಯಾನ್ಸರ್‌ ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತದೆ. ಲೈಂಗಿಕವಾಗಿ ಸಕ್ರಿಯರಾಗಿರುವವರಲ್ಲಿ ಈ ವೈರಸ್‌ ಹರಡುತ್ತದೆ. ಒಮ್ಮೆ ವೈರಸ್‌ ಬಂದ ಮೇಲೆ ಹಲವಾರು ವರ್ಷಗಳ ನಂತರ ಗರ್ಭಕೋಶದ ಕಂಠದಲ್ಲಿ ಕ್ಯಾನ್ಸರ್‌ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಏಷ್ಯಾ ಖಂಡದಲ್ಲಿ ಮಹಿಳೆಯರು ತುತ್ತಾಗುತ್ತಿರುವ ಕ್ಯಾನ್ಸರ್‌ಗಳ ಪೈಕಿ ಮುಂಚೂಣಿಯಲ್ಲಿ ಸರ್ವೈಕಲ್‌ ಕ್ಯಾನ್ಸರ್‌ ಸಹ ಒಂದು. ಗ್ರಾಮೀಣ ಮತ್ತು ನಗರ ಭಾಗಗಳೆಂಬ ವ್ಯತ್ಯಾಸವಿಲ್ಲದಂತೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.

ಲಕ್ಷಣಗಳೇನು?

ಪ್ರಾರಂಭದಲ್ಲಿ ಈ ಕ್ಯಾನ್ಸರ್‌ ಯಾವುದೇ ಲಕ್ಷಣಗಳನ್ನು ತೋರುವುದಿಲ್ಲ ಎನ್ನುವುದು ಸಮಸ್ಯೆಯನ್ನು ಹೆಚ್ಚಿಸುತ್ತದೆ. ರೋಗ ಮುಂದುವರಿದಂತೆ, ಋತುಚಕ್ರಗಳ ನಡುವಿನ ಅವಧಿಯಲ್ಲಿ ರಕ್ತಸ್ರಾವ ಆಗುವುದು, ಲೈಂಗಿಕ ಕ್ರಿಯೆಯ ಸಂದರ್ಭದಲ್ಲಿ ನೋವು ಅಥವಾ ರಕ್ತಸ್ರಾವ, ಮೂತ್ರದಲ್ಲಿನ ರಕ್ತ, ರಜೋನಿವೃತ್ತಿಯ ನಂತರ ರಕ್ತಸ್ರಾವ, ಕಿಬ್ಬೊಟ್ಟೆಯಲ್ಲಿ ನೋವು, ಬೆನ್ನಿನ ಕೆಳಭಾಗದಲ್ಲಿ ನೋವು- ಇಂಥ ಲಕ್ಷಣಗಳು ಕಾಣುತ್ತವೆ. ಆಗ ತುರ್ತಾಗಿ ಸ್ತ್ರೀರೋಗ ತಜ್ಞರನ್ನು ಕಾಣಬೇಕಾಗುತ್ತದೆ.

Vaccine

ಲಸಿಕೆ ಇದೆ

ಎಚ್‌ಪಿವಿ ರೋಗಾಣುವಿನಿಂದ ಬರುವ ಗರ್ಭಕೊರಳಿನ ಕ್ಯಾನ್ಸರ್‌ ತಡೆಯಲು ಸಾಧ್ಯವಿದೆ. ಇದಕ್ಕಾಗಿ ಪರಿಣಾಮಕಾರಿ ಲಸಿಕೆ ಲಭ್ಯವಿದ್ದು, 9-14 ವರ್ಷ ವಯೋಮಾನದ ಹೆಣ್ಣು ಮಕ್ಕಳಿಗೆ ಇದನ್ನು ನೀಡಿದರೆ, ಅತಿ ಹೆಚ್ಚಿನ ಪ್ರಮಾಣದಲ್ಲಿ ಯಶಸ್ಸಿದೆ. ಆನಂತರ 26 ವರ್ಷ ವಯಸ್ಸಿನವರೆಗೂ ಮಹಿಳೆಯರು ಇದನ್ನು ಪಡೆಯಬಹುದಾಗಿದ್ದು, ಯಶಸ್ಸಿನ ಪ್ರಮಾಣ ಸಮಾಧಾನಕರವಾಗಿದೆ. ಆನಂತರ 45 ವರ್ಷಗಳವರೆಗೂ ಮಹಿಳೆಯರು ಇದನ್ನು ಪಡೆಯಬಹುದಾಗಿದ್ದರೂ ವಯಸ್ಸು ಹೆಚ್ಚಿದಂತೆಲ್ಲಾ ಲಸಿಕೆಯ ಯಶಸ್ಸಿನ ಪ್ರಮಾಣ ಕಡಿಮೆಯಾಗುತ್ತದೆ.

ಏನು ಪರೀಕ್ಷೆ?

ಗರ್ಭ ಕಂಠದ ಕೆಲವು ಅಂಗಾಂಶಗಳನ್ನು ತೆಗೆಯುವ ವೈದ್ಯರು, ಅದನ್ನು ಪರೀಕ್ಷೆ ಮಾಡಿಸುತ್ತಾರೆ. ಅದರಲ್ಲಿ ಯಾವುದಾದರೂ ಅಸ್ವಾಭಾವಿಕ ಬೆಳವಣಿಗೆಗಳು ಇವೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ. ಈಗಾಗಲೇ ಕ್ಯಾನ್ಸರ್‌ ಬಂದಿರುವುದು ಮಾತ್ರವಲ್ಲ, ಮುಂದಿನ ನಾಲ್ಕಾರು ವರ್ಷಗಳಲ್ಲಿ ಈ ಕೋಶಗಳಲ್ಲಿ ಅನಿಯಂತ್ರಿತ ಬೆಳವಣಿಗೆ ಆಗಬಹುದೇ ಎಂಬುದನ್ನೂ ಈ ಪರೀಕ್ಷೆಯಲ್ಲಿ ಪತ್ತೆ ಮಾಡಬಹುದು. ಹಾಗಾಗಿ ಪ್ರತಿ ಮೂರು ವರ್ಷಗಳಿಗೊಮ್ಮೆ ಪ್ಯಾಪ್‌ ಸ್ಮೇರ್‌ ಪರೀಕ್ಷೆಯನ್ನು ಮಹಿಳೆಯರು ತಪ್ಪದೆ ಮಾಡಿಸುವುದು ಸೂಕ್ತ. ಈ ಪರೀಕ್ಷೆಯಲ್ಲಿ ಕ್ಯಾನ್ಸರ್‌ ಸಂಭಾವ್ಯತೆಯನ್ನು ಉದ್ಭವಾವಸ್ಥೆಯಲ್ಲೇ ಪತ್ತೆ ಮಾಡಬಹುದು.

ಇದನ್ನೂ ಓದಿ: Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

ಬದಲಾವಣೆಗಳು

ಬದುಕಿನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ನಮ್ಮನ್ನು ಇಂಥ ರೋಗಗಳಿಂದ ದೂರ ಇರಿಸುತ್ತವೆ. ಸುರಕ್ಷಿತ ಲೈಂಗಿಕ ಅ‍ಭ್ಯಾಸಗಳು ಬದುಕಿನಲ್ಲಿ ಅತ್ಯಂತ ಮಹತ್ವವನ್ನು ಹೊಂದಿವೆ. ಒಂದಕ್ಕಿಂತ ಹೆಚ್ಚು ಲೈಂಗಿಕ ಸಂಗಾತಿಗಳನ್ನು ಹೊಂದುವುದು ಮತ್ತು ಕಾಂಡೊಮ್‌ ಬಳಸದೆ ಇರುವುದು ಹಲವು ರೋಗಗಳನ್ನು ತರಬಹುದು. ಅತಿ ಸಣ್ಣ ಪ್ರಾಯದಲ್ಲಿ ಲೈಂಗಿಕವಾಗಿ ಸಕ್ರಿಯರಾಗುವುದು ಸಹ ಕ್ಯಾನ್ಸರ್‌ ಸಹಿತ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಸಮತೋಲನದಿಂದ ಕೂಡಿದ ತಾಜಾ ಆಹಾರಗಳ ಸೇವನೆ, ಸಿಗರೇಟ್‌ ಮತ್ತು ಮದ್ಯಗಳನ್ನು ದೂರ ಮಾಡುವುದು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳು. ನಿಯಮಿತವಾದ ವ್ಯಾಯಾಮ ಮತ್ತು ಒತ್ತಡ ನಿವಾರಣೆಯ ಕ್ರಮಗಳು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

Continue Reading

ಆರೋಗ್ಯ

ICMR Guidelines: ಶಿಶು ಆಹಾರ ಹೇಗಿರಬೇಕು? ಐಸಿಎಂಆರ್‌ ಮಾರ್ಗಸೂಚಿ ಹೀಗಿದೆ

ಘನ ಆಹಾರ ಪ್ರಾರಂಭ ಮಾಡಿದ ತಕ್ಷಣ ಅತ್ಯಂತ ತೆಳುವಾದ ಹದದಲ್ಲಿರುವ ಅಕ್ಕಿ ಗಂಜಿ, ಬೇಳೆ-ತರಕಾರಿಯ ನೀರು ಮುಂತಾದವನ್ನು ಶಿಶುಗಳಿಗೆ ನೀಡಲಾಗುತ್ತದೆ. ಪ್ರಾರಂಭದಲ್ಲಿ ಇದು ಸೂಕ್ತವಾದರೂ, ಕ್ರಮೇಣ ಶಿಶುಗಳ ಆಹಾರದ ಹದವನ್ನು ಮಂದಗೊಳಿಸಿ ಎನ್ನುವುದು ಐಸಿಎಂಆರ್‌ ಸಲಹೆ. ಈ ಕುರಿತ ಉಪಯುಕ್ತ (ICMR guidelines) ಮಾಹಿತಿ ಇಲ್ಲಿದೆ.

VISTARANEWS.COM


on

ICMR Guidelines
Koo

ಎಳೆ ಮಕ್ಕಳಿಗೆ ಆರು ತಿಂಗಳು ತುಂಬುತ್ತಿದ್ದಂತೆ, ಅವುಗಳ ಬೆಳವಣಿಗೆಗೆ ಸೂಕ್ತವಾದ ಆಹಾರವನ್ನು ನೀಡಬೇಕಾಗುತ್ತದೆ. ಅಲ್ಲಿಯವರೆಗೆ ತಾಯಿಯ ಹಾಲು ಮಾತ್ರವೇ ಶಿಶುವಿಗೆ ಸಾಕಾದರೂ, ನಂತರ ತಾಯಿಯ ಹಾಲಿನ ಜೊತೆಗೆ ಹೆಚ್ಚುವರಿ ಆಹಾರಗಳ ಅಗತ್ಯ ಬಂದೇಬರುತ್ತದೆ. 6-12 ತಿಂಗಳವರೆಗೆ ಮತ್ತು ಒಂದು ವರ್ಷದ ನಂತರ ಆಹಾರ ಕ್ರಮವನ್ನು ಬದಲಿಸಬೇಕಾಗುತ್ತದೆ. ಈ ಕುರಿತಾಗಿ ಹಲವಾರು ವಿವರಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಇತ್ತೀಚೆಗೆ ಪ್ರಕಟಿಸಿದೆ. ತಾಯಿ ಹಾಲಿನ ಜೊತೆಗೆ, ಹೊರಗಿನಿಂದ ಆಹಾರ ಪ್ರಾರಂಭ ಮಾಡಿದ ತಕ್ಷಣ ಅತ್ಯಂತ ತೆಳುವಾದ ಹದದಲ್ಲಿರುವ ಅಕ್ಕಿ ಗಂಜಿ, ಬೇಳೆ-ತರಕಾರಿಯ ನೀರು ಮುಂತಾದವನ್ನು ಶಿಶುಗಳಿಗೆ ನೀಡಲಾಗುತ್ತದೆ. “ಪ್ರಾರಂಭದಲ್ಲಿ ಇದು ಸೂಕ್ತವಾದರೂ, ಕ್ರಮೇಣ ಶಿಶುಗಳ ಆಹಾರದ ಹದವನ್ನು ಮಂದಗೊಳಿಸಿ” ಎನ್ನುವುದು ಐಸಿಎಂಆರ್‌ ಸಲಹೆ (ICMR guidelines). ಅಂದರೆ ಬೇಳೆ-ತರಕಾರಿಯ ನೀರಿಗೇ ಶಿಶುಗಳ ಆಹಾರವನ್ನು ಸ್ಥಗಿತಗೊಳಿಸುವುದು ಸರಿಯಲ್ಲ. ಬದಲಿಗೆ, ತರಕಾರಿಗಳನ್ನು ಚೆನ್ನಾಗಿ ಬೇಯಿಸಿ ತೆಳುವಾದ ಪೇಸ್ಟ್‌ನಂತೆ ಮಾಡುವುದು, ಬೇಳೆಯ ಮಂದ ಕಟ್ಟು ಉಣಿಸುವುದು ಶಿಶುಗಳಿಗೆ ಹೆಚ್ಚು ಪೂರಕ. ಘನ ಆಹಾರ ನೀಡುವುದಕ್ಕೆ ಪ್ರಾರಂಭಿಸಿದಾಗ ಕೂಸುಗಳು ಉಗಿಯುವುದು, ಕಟವಾಯಲ್ಲಿ ಹರಿಸುವುದು ಸಾಮಾನ್ಯ. ಕಾರಣ ಅವುಗಳಿಗೆ ಘನ ಆಹಾರವನ್ನು ನುಂಗುವುದು ಅಭ್ಯಾಸವಾಗುವುದಕ್ಕೆ ಸಮಯ ಬೇಕು. ನಾಲಿಗೆಯಲ್ಲಿ ಅದನ್ನು ಒಳಗೆ ತಳ್ಳುವ ಪ್ರಯತ್ನದಲ್ಲಿ, ಹೆಚ್ಚಿನ ಆಹಾರವನ್ನು ಅವು ಬಾಯಿಂದ ಹೊರಗೆ ತಳ್ಳುವುದೇ ಹೆಚ್ಚು. ಇದೇ ನೆವದಿಂದ ತೀರಾ ನೀರಾದ ಆಹಾರವನ್ನು ಅವುಗಳಿಗೆ ಉಣಿಸುವ ಅಗತ್ಯವಿಲ್ಲ ಅಥವಾ ಆ ಆಹಾರಗಳನ್ನು ಕೂಸುಗಳು ಇಷ್ಟಪಡುವುದಿಲ್ಲ ಎಂದೂ ಅರ್ಥವಲ್ಲ. ಪ್ರಾರಂಭದಲ್ಲಿ ತೆಳುವಾದ ಹದದಲ್ಲಿ ಇದ್ದರೂ, ಕ್ರಮೇಣ ಇದನ್ನು ಮಂದವಾದ ಹದಕ್ಕೆ (ಇಡ್ಲಿ ಹಿಟ್ಟಿನ ಹದಕ್ಕೆ) ತರುವುದು ಅಗತ್ಯ ಎಂದು ತನ್ನ ವಿವರವಾದ ನಿರ್ದೇಶನಗಳಲ್ಲಿ ಸಂಸ್ಥೆ ಹೇಳಿದೆ.

Mother Feeding Baby⁠

ಪೂರಕ ಆಹಾರಗಳೆಂದರೆ…?

ಇದನ್ನು ಪಾಲಕರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. 6 ತಿಂಗಳವರೆಗಿನ ಬೆಳವಣಿಗೆಗೆ ತಾಯಿಯ ಹಾಲು ಸಾಕಾಗುತ್ತದೆ. ಇದರಿಂದ ದಿನಕ್ಕೆ ಅಂದಾಜು 5 ಗ್ರಾಂ ಪ್ರೊಟೀನ್‌ ಮತ್ತು 500 ಕ್ಯಾಲರಿ ಶಕ್ತಿ ಮಗುವಿಗೆ ದೊರೆಯುತ್ತದೆ. 6 ತಿಂಗಳ ನಂತರ, ತನ್ನ ಚಟುವಟಿಕೆಯನ್ನು ಹೆಚ್ಚಿಸಿಕೊಳ್ಳುವ ಮಗುವಿಗೆ ಈ ಪ್ರಮಾಣ ಸಾಕಾಗುವುದಿಲ್ಲ. ದಿನಕ್ಕೆ 9-10 ಗ್ರಾಂ ಪ್ರೊಟೀನ್‌ ಮತ್ತು650ರಿಂದ720 ಕ್ಯಾಲರಿಗಳವರೆಗೆ ಶಕ್ತಿ ಬೇಕಾಗುತ್ತದೆ. ಈ ಕೊರತೆಯನ್ನು ತುಂಬುವುದಕ್ಕೆ ಪೂರಕವಾದ ಘನ ಆಹಾರಗಳನ್ನು ಮಗುವಿಗೆ ನೀಡಬೇಕಾಗುತ್ತದೆ.

ಏನು ಕೊಡಬೇಕು?

ಈ ದಿನಗಳಲ್ಲಿ ಸೂಕ್ಷ್ಮ ಪೋಷಕಾಂಶಗಳ ಅಗತ್ಯ ಶಿಶುಗಳಿಗೆ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಹಾಗಾಗಿ, ಧಾನ್ಯಗಳ ಜೊತೆಗೆ ಎಣ್ಣೆ ಬೀಜಗಳು, ಹಾಲು, ತರಕಾರಿಗಳು ಮತ್ತು ಹಣ್ಣುಗಳನ್ನು ನೀಡಬೇಕು. ಮಾತ್ರವಲ್ಲ, ತರಹೇವಾರಿ ಬೇಳೆಗಳು, ನಾನಾ ರೀತಿಯ ಕಾಳುಗಳೆಲ್ಲ ಪುಟ್ಟ ಮಕ್ಕಳ ಪ್ರೊಟೀನ್‌ ಅಗತ್ಯವನ್ನು ಪೂರೈಸುತ್ತವೆ. ಜೊತೆಗೆ ಬೇಯಿಸಿದ ಮೊಟ್ಟೆಯನ್ನು ಅಷ್ಟಷ್ಟಾಗಿ ಅಭ್ಯಾಸ ಮಾಡಿಸಬಹುದು.
ಬೇಯಿಸಿದ ಕ್ಯಾರೆಟ್‌, ಕುಂಬಳಕಾಯಿ, ಪಾಲಕ್‌, ಗೆಣಸು ಮುಂತಾದ ಸೊಪ್ಪು-ತರಕಾರಿಗಳ ಪೇಸ್ಟ್‌ ಮಕ್ಕಳಿಗೆ ಉಣಿಸಬಹುದು. ಸೇಬುಹಣ್ಣನ್ನೂ ಇದೇ ರೀತಿಯಲ್ಲಿ ನೀಡಬಹುದು. ಮೊದಲಿಗೆ ತರಕಾರಿ, ಹಣ್ಣುಗಳನ್ನು ಒಂದೊಂದಾಗಿ ನೀಡಿ, ಅದರಿಂದ ಶಿಶುಗಳ ಆರೋಗ್ಯದಲ್ಲಿ ವ್ಯತ್ಯಾಸವಾಗುವುದಿಲ್ಲ ಎಂದು ಖಾತ್ರಿಯಾದ ಮೇಲೆ, ಮಿಶ್ರ ತರಕಾರಿ ಮತ್ತು ಬೇಳೆಗಳನ್ನು ಉಣಿಸಬಹುದು. ಒಂದು ವರ್ಷದ ನಂತರ ಮೃದುವಾಗಿ ಬೇಯಿಸಿದ ಧಾನ್ಯದ ಉಪ್ಪಿಟ್ಟುಗಳು, ಬೇಳೆ ಹಾಕಿದ ಕಿಚಡಿಗಳು, ಬೇಯಿಸಿದ ಮೊಟ್ಟೆ, ಮೀನುಗಳನ್ನು ರೂಢಿಸಬಹುದು.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಯಾವುದು ಬೇಡ?

ಪುಟ್ಟ ಮಕ್ಕಳು ಉಪ್ಪಾದ ಚಿಪ್ಸ್‌, ಸಿಹಿ ಕ್ಯಾಂಡಿಗಳೆಲ್ಲ ಇಷ್ಟಪಟ್ಟು ನೆಕ್ಕುತ್ತವೆ. ಆದರೆ ಅವುಗಳನ್ನು ನೀಡುವುದು ಸಲ್ಲದು. ಆಹಾರಕ್ಕೆ ಸಕ್ಕರೆಯಂಥ ಕೃತಕ ಸಿಹಿಗಳು, ಫ್ರೂಟ್‌ ಜ್ಯೂಸ್‌ಗಳನ್ನು ಮಿಶ್ರ ಮಾಡುವುದಕ್ಕೂ ಐಸಿಎಂಆರ್‌ಗೆ ಸಹಮತವಿಲ್ಲ. ಬದಲಿಗೆ ನೈಸರ್ಗಿಕವಾದ ಹಣ್ಣುಗಳನ್ನೇ ಸೀರಿಯಲ್‌ಗೆ ಮಿಶ್ರ ಮಾಡುವುದು ಆರೋಗ್ಯಕರ. ಪೂರಕ ಆಹಾರಗಳಿಗೆ ಉಪ್ಪು-ಸಿಹಿಗಳನ್ನೆಲ್ಲಾ ಸೇರಿಸಿಯೇ ತಿನ್ನಿಸುವ ಅಭ್ಯಾಸ ಸರಿಯಲ್ಲ ಎಂದು ನಿರ್ದೇಶನದಲ್ಲಿ ಹೇಳಲಾಗಿದೆ.

Continue Reading

ಮನಿ-ಗೈಡ್

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

ಮೂರು ಗಂಟೆಗಳ ಒಳಗೆ ಆಸ್ಪತ್ರಗಳಲ್ಲಿ ನಗದು ರಹಿತ ಆರೋಗ್ಯ ವಿಮಾ (Health Insurance) ಕ್ಲೈಮ್ ಗಳನ್ನು ಸಲ್ಲಿಸಬೇಕು ಎಂದು ಐಆರ್ ಡಿಐಎ ಸೂಚಿಸಿದೆ. ಹಿಂದಿನ 55 ಆದೇಶಗಳನ್ನು ರದ್ದುಗೊಳಿಸಿ ಒಂದು ಸಮಗ್ರ ಆದೇಶವನ್ನು ಹೊರಡಿಸಲಾಗಿದೆ. ಇದರಲ್ಲಿ ಮಾಡಿರುವ ಬದಲಾವಣೆಗಳು ಇಂತಿವೆ.

VISTARANEWS.COM


on

By

Health Insurance
Koo

ಬೆಂಗಳೂರು: ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (IRDAI) ಆರೋಗ್ಯ ವಿಮಾ ಪಾಲಿಸಿಗಳ (Health Insurance) ಮಾನದಂಡಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ. 55 ಸುತ್ತೋಲೆಗಳನ್ನು ರದ್ದುಗೊಳಿಸಿ ಆರೋಗ್ಯ ವಿಮಾ ಉತ್ಪನ್ನಗಳ ಕುರಿತು ಸಮಗ್ರವಾಗಿ ಒಂದು ಸುತ್ತೋಲೆ ಪ್ರಕಟಿಸಿದೆ. ಪ್ರಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ (hospital discharge) ವಿನಂತಿ ಸ್ವೀಕರಿಸಿದ ಕ್ಯಾಶ್​ಲೆಸ್​ ಕ್ಲೈಮ್ ಗಳನ್ನು ಮೂರು ಗಂಟೆಗಳ ಒಳಗೆ ಇತ್ಯರ್ಥಗೊಳಿಸಬೇಕು ಐಆರ್ ಡಿಎಐ ಸೂಚಿಸಿದೆ.

ಯಾವುದೇ ಸಂದರ್ಭದಲ್ಲಿ ಪಾಲಿಸಿದಾರರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಹೆಚ್ಚು ಕಾಯುವಂತೆ ಮಾಡಬಾರದು. ಮೂರು ಗಂಟೆಗಳಿಗಿಂತ ಹೆಚ್ಚು ವಿಳಂಬವಾದರೆ ಆಸ್ಪತ್ರೆಯಿಂದ ವಿಧಿಸಲಾದ ಹೆಚ್ಚುವರಿ ಮೊತ್ತವನ್ನು ವಿಮಾದಾರರು ಭರಿಸಬೇಕಾಗುತ್ತೆ ಎಂದು ಕಂಪನಿ ತಿಳಿಸಿದೆ. ತುರ್ತು ಸಂದರ್ಭಗಳಲ್ಲಿ ಬರುವ ನಗದು ರಹಿತ ವಿನಂತಿಯನ್ನು ವಿಮಾದಾರರು ತಕ್ಷಣವೇ ನಿರ್ಧರಿಸಬೇಕು ಎಂದು ಐಆರ್ ಡಿ ಎಐ ಹೇಳಿದೆ.

2024ರ ಜುಲೈ 31ರೊಳಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ವಿಮಾದಾರರಿಗೆ ಆದೇಶಿಸಿರುವ ಐಆರ್ ಡಿಎಐ ನಗದು ಕ್ಯಾಶ್​ಲೆಸ್​​ ವಿನಂತಿಗಳನ್ನು ಸ್ವೀಕರಿಸಲು ವಿಮಾದಾರರು ಆಸ್ಪತ್ರೆಯಲ್ಲಿ ಹೆಲ್ಪ್​ ಡೆಸ್ಕ್‌ಗಳನ್ನು ಸಹ ವ್ಯವಸ್ಥೆಗೊಳಿಸಬಹುದು ಎಂದು ಹೇಳಿದೆ.


ಇತರ ಕೆಲವು ಬದಲಾವಣೆಗಳು ?

ಲಭ್ಯವಿರುವ ಉತ್ಪನ್ನಗಳ ಮೂಲಕ ಪಾಲಿಸಿದಾರರಿಗೆ ವಿಮಾ ಕಂಪನಿಗಳು ವ್ಯಾಪಕ ಆಯ್ಕೆಗಳನ್ನು ಒದಗಿಸಬೇಕು ಎಂದು ಐಆರ್ ಡಿಎಐ ಹೇಳಿದೆ. ಅದೇ ಉದ್ದೇಶವನ್ನು ಪೂರೈಸಲು, ವಿಮಾದಾರರು ಎಲ್ಲಾ ವಯಸ್ಸಿನವರು, ಪ್ರದೇಶಗಳು, ಔದ್ಯೋಗಿಕ ವಿಭಾಗಗಳು, ವೈದ್ಯಕೀಯ ಪರಿಸ್ಥಿತಿಗಳು/ ಚಿಕಿತ್ಸೆಗಳು, ಎಲ್ಲಾ ರೀತಿಯ ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆ ಒದಗಿಸುವವರಿಗೆ ವೈವಿಧ್ಯಮಯ ವಿಮಾ ಉತ್ಪನ್ನಗಳನ್ನು ಒದಗಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: Health Insurance Benefits : ಉದ್ಯೋಗಿಗಳ ಆರೋಗ್ಯ ವಿಮೆ ಏಕೆ ಮಹತ್ವಪೂರ್ಣ? ಇಲ್ಲಿದೆ ಡಿಟೇಲ್ಸ್

ಹಲವು ಆರೋಗ್ಯ ವಿಮಾ ಪಾಲಿಸಿಗಳನ್ನು ಹೊಂದಿರುವ ಪಾಲಿಸಿದಾರನು ಸ್ವೀಕಾರಾರ್ಹ ಕ್ಲೈಮ್ ಮೊತ್ತವನ್ನು ಪಡೆಯುವ ಪಾಲಿಸಿ ಆಯ್ಕೆಯನ್ನು ಹೊಸ ಸುತ್ತೋಲೆಯಲ್ಲಿ ಪಡೆಯುತ್ತಾನೆ. ವಿಮಾದಾರರು ಪ್ರತಿ ಪಾಲಿಸಿ ಡಾಕ್ಯುಮೆಂಟ್ ಜೊತೆಗೆ ಗ್ರಾಹಕರ ಮಾಹಿತಿ ಶೀಟ್​​ (CIS) ಒದಗಿಸಬೇಕಾಗುತ್ತದೆ. ಪಾಲಿಸಿ ಅವಧಿಯಲ್ಲಿ ಯಾವುದೇ ಕ್ಲೈಮ್‌ಗಳು ಮಾಡದಿದ್ದರೆ ವಿಮಾ ಮೊತ್ತವನ್ನು ಹೆಚ್ಚಿಸುವ ಅಥವಾ ಪ್ರೀಮಿಯಂ ಮೊತ್ತವನ್ನು ರಿಯಾಯಿತಿ ಮಾಡಬೇಕಾಗುತ್ತದೆ.

ಒಂದು ವೇಳೆ ಪಾಲಿಸಿದಾರರು, ಚಾಲ್ತಿಯಲ್ಲಿರು ಪಾಲಿಸಿಯನ್ನು ಯಾವುದೇ ಸಮಯದಲ್ಲಿ ರದ್ದುಮಾಡಲು ಬಯಸಿದರೆ ಅವಧಿ ಪ್ರೀಮಿಯಂ/ ಅನುಪಾತದ ಪ್ರೀಮಿಯಂನ ಮರುಪಾವತಿ ಮಾಡಬೇಕಾಗುತ್ತದೆ.

ರೋಗಿಯನ್ನು ದಾಖಲಿಸುವ ಮೊದಲು ವಿಮಾ ಕಂಪನಿಯು ಆಸ್ಪತ್ರೆಯ ಟಿಪಿಎ ಡೆಸ್ಕ್‌ಗೆ ಪೂರ್ವ-ಅನುಮೋದನೆಯನ್ನು ಒದಗಿಸಿದ ಮೇಲೂ ಶೇ.43ರಷ್ಟು ವಿಮಾ ಪಾಲಿಸಿದಾರರು ತಮ್ಮ “ಆರೋಗ್ಯ ವಿಮೆ” ಕ್ಲೈಮ್‌ಗಳನ್ನು ಪಡೆಯಲು ತೊಂದರೆಗಳನ್ನು ಎದುರಿಸಿದ್ದಾರೆ ಎಂದು ಸಮೀಕ್ಷೆಯೊಂದರಲ್ಲಿ ತಿಳಿದು ಬಂದಿದೆ. ಕೆಲವು ಪ್ರಕರಣಗಳಲ್ಲಿ, ರೋಗಿಯು ಡಿಸ್ಚಾರ್ಜ್‌ಗೆ ಸಿದ್ಧವಾದ ಅನಂತರ 10- 12 ಗಂಟೆಗಳ ಬಳಿಕ ಕ್ಲೇಮ್​ ನೀಡಲಾಗಿದೆ.

Continue Reading

ಬೆಂಗಳೂರು

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

Fortis Hospital: ರಾಜ್ಯದಲ್ಲಿ ಮೊದಲ ಬಾರಿಗೆ ಫೋರ್ಟಿಸ್‌ ಆಸ್ಪತ್ರೆಯು ಮಿಜೋರಾಂ ರಾಜ್ಯದ 75 ವರ್ಷದ ವನ್ಲಾಲಸಂಗ ಎಂಬ ರೋಗಿಗೆ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್‌ಮೆಂಟ್ (TAVR) ನಡೆಸುವ ಮೂಲಕ ಅತ್ಯಾಧುನಿಕ ಎಡ್ವರ್ಡ್ಸ್ ಸೇಪಿಯನ್ 3 ಅಲ್ಟ್ರಾ ವಾಲ್ವ್ ಅನ್ನು ಯಶಸ್ವಿಯಾಗಿ ನಿರ್ವಹಿಸಿದೆ.

VISTARANEWS.COM


on

First successful TAVR surgery in the state at Fortis Hospital
Koo

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಫೋರ್ಟಿಸ್‌ ಆಸ್ಪತ್ರೆಯು (Fortis Hospital) 75 ವರ್ಷದ ರೋಗಿಗೆ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್‌ಮೆಂಟ್ (TAVR) ನಡೆಸುವ ಮೂಲಕ ಅತ್ಯಾಧುನಿಕ ಎಡ್ವರ್ಡ್ಸ್ ಸೇಪಿಯನ್ 3 ಅಲ್ಟ್ರಾ ವಾಲ್ವ್ ಅನ್ನು ಯಶಸ್ವಿಯಾಗಿ ನಿರ್ವಹಿಸಿದೆ.

ನಗರದ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿ ಹಿರಿಯ ಸಲಹೆಗಾರ ಡಾ. ಬಿ.ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೈಕೆ ಮತ್ತು ಮೇಲ್ವಿಚಾರಣೆಯಲ್ಲಿ ಕೇವಲ 45 ನಿಮಿಷಗಳಲ್ಲಿ ಈ ಶಸ್ತ್ರಚಿಕಿತ್ಸೆಯನ್ನು ಪೂರ್ಣಗೊಳಿಸಲಾಗಿದೆ.

ಇದನ್ನೂ ಓದಿ: Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

ಈ ಕುರಿತು ಡಾ. ಬಿ.ವಿ. ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಮಿಜೋರಾಂ ರಾಜ್ಯದ 75 ವರ್ಷದ ವನ್ಲಾಲಸಂಗ ಎಂಬ ರೋಗಿಯು ಈ ಮೊದಲು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದಾದ ಬಳಿಕ ಅವರಿಗೆ ಹೃದಯದ ಮಹಾಪಧಮನಿಯ ಕವಾಟವು ಚಿಕ್ಕದಾಗುತ್ತಾ ಸಾಗಿದೆ. ಇದರಿಂದ ಇವರ ಹೃದಯಕ್ಕೆ ಸೂಕ್ತ ರೀತಿಯಲ್ಲಿ ರಕ್ತ ಪರಿಚಲನೆ ಸಾಧ್ಯವಾಗುತ್ತಿರಲಿಲ್ಲ. ಕಾಲಕ್ರಮೇಣ ಇದು ವಿಕೋಪಕ್ಕೆ ತಿರುಗಿ, ಅವರು ಎಂದಿನಂತೆ ನಡೆಯಲು ಸಹ ಸಾಧ್ಯವಾಗದೇ ಗಾಲಿಕುರ್ಚಿಯಲ್ಲಿ ಓಡಾಡುವಂತಾಯಿತು.

ಇದಕ್ಕೆ ಸೂಕ್ತ ಚಿಕಿತ್ಸೆಗಾಗಿ ಸಾಕಷ್ಟು ಆಸ್ಪತ್ರೆಗೆ ತೆರಳಿದರೂ ಸಾಧ್ಯವಾಗಲಿಲ್ಲ. ಬಳಿಕ ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇವರ ಪರಿಸ್ಥಿತಿಯನ್ನು ಅವಲೋಕಿಸಿ ಇವರಿಗೆ ಟಿಎವಿಆರ್‌ (TAVR) ಶಸ್ತ್ರಚಿಕಿತ್ಸೆಗೆ ಒಳಗಾಗಲು ಸಲಹೆ ನೀಡಿದೆವು. ಸಾಂಪ್ರದಾಯಿಕ ಹೃದಯ ಕವಾಟ ಬದಲಿ ಶಸ್ತ್ರಚಿಕಿತ್ಸೆಯಿಂದ ಹೆಚ್ಚಿನ ಅಪಾಯದ ಜತೆಗೆ, ಚೇತರಿಕೆಯ ಅವಧಿಯೂ ದೀರ್ಘವಾಗಿದೆ. ಹೀಗಾಗಿ ನೂತನ ಚಿಕಿತ್ಸೆಯಾದ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ಕವಾಟ ರಿಪ್ಲೇಸ್‌ಮೆಂಟ್ (TAVR) ಮೂಲಕ ಶಸ್ತ್ರಚಿಕಿತ್ಸೆ ನಡೆಸಿದೆವು. ಇದು ಕಡಿಮೆ ಅಪಾಯ ನೀಡಲಿದ್ದು, ವೇಗವಾಗಿ ಚೇತರಿಸಿಕೊಳ್ಳಬಹುದಾಗಿದೆ ಎಂದವರು ತಿಳಿಸಿದರು.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

ಈ ನೂತನ ಶಸ್ತ್ರಚಿಕಿತ್ಸೆಯು ರಾಜ್ಯದಲ್ಲೇ ಮೊದಲ ಬಾರಿಗೆ ನಡೆದಿರುವುದು ವಿಶೇಷ. 45 ನಿಮಿಷಗಳ ಈ ಶಸ್ತ್ರಚಿಕಿತ್ಸೆಯ ಬಳಿಕ ರೋಗಿಯು ಕೆಲವೇ ಗಂಟೆಗಳಲ್ಲಿ ಸ್ವತಂತ್ರವಾಗಿ ನಡೆಯಲು ಪ್ರಾರಂಭಿಸಿದರು ಎಂದು ಅವರು ವಿವರಿಸಿದರು.

Continue Reading
Advertisement
prajwal revanna case mobile
ಪ್ರಮುಖ ಸುದ್ದಿ27 mins ago

Prajwal Revanna Case: ವಿದೇಶದಲ್ಲಿಯೇ ಮೊಬೈಲ್‌ ನಾಶ ಮಾಡಿದರಾ ಪ್ರಜ್ವಲ್?

Cervical Cancer
ಆರೋಗ್ಯ1 hour ago

Cervical Cancer: ಗರ್ಭಕೊರಳಿನ ಕ್ಯಾನ್ಸರ್‌ಗೆ ಮುನ್ನೆಚ್ಚರಿಕೆಯೇ ಮದ್ದು

prajwal revanna case airport arrest
ಕ್ರೈಂ1 hour ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಮೊದಲು ನಡೆಯೋದೇ ಆ ಟೆಸ್ಟ್‌ ! ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

Karnataka Weather
ಮಳೆ2 hours ago

Karnataka Weather : ರಾಜ್ಯದಲ್ಲಿಂದು ಭಾರಿ ಮಳೆಗೆ ಗುಡುಗು, ಮಿಂಚು ಸಾಥ್‌

Prajwal Revanna Case
ಕರ್ನಾಟಕ2 hours ago

Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

ICMR Guidelines
ಆರೋಗ್ಯ2 hours ago

ICMR Guidelines: ಶಿಶು ಆಹಾರ ಹೇಗಿರಬೇಕು? ಐಸಿಎಂಆರ್‌ ಮಾರ್ಗಸೂಚಿ ಹೀಗಿದೆ

Prajwal revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಪೆನ್​ಡ್ರೈವ್ ಸಾರ್ವಜನಿಕ ಸ್ಥಳಗಳಲ್ಲಿ ಸಿಗುವುದರಿಂದ ಹಿಡಿದು ಪ್ರಜ್ವಲ್ ಬಂಧನದವರೆಗೆ; ಪ್ರಕರಣದ ಟೈಮ್​ಲೈನ್​ ಇಲ್ಲಿದೆ

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗಿಗಳಿಗೆ ತೆರೆಯಲಿದೆ ಅದೃಷ್ಟದ ಬಾಗಿಲು; ಪ್ರೇಮಿಗಳಿಗೆ ಶುಭ ಸೂಚನೆ

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಬಂಧನ ಆಗಿದ್ದು ಹೇಗೆ? ಏರ್​ಪೋರ್ಟ್​​ನಲ್ಲಿ ನಡೆದ ಪ್ರಕ್ರಿಯೆಗಳೇನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ19 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌