ವಿಸ್ತಾರ Explainer : IPL ಪ್ರಸಾರ ಹಕ್ಕಿಗಾಗಿ ದಿಗ್ಗಜರ ವಾರ್! - Vistara News

EXPLAINER

ವಿಸ್ತಾರ Explainer : IPL ಪ್ರಸಾರ ಹಕ್ಕಿಗಾಗಿ ದಿಗ್ಗಜರ ವಾರ್!

ಮುಂದಿನ ವರ್ಷದಿಂದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಗಳ ಪ್ರಸಾರದ ಹಕ್ಕನ್ನು ಯಾರು ಪಡೆಯಲಿದ್ದಾರೆ. ಮೀಡಿಯಾ ದೊರೆಗಳ ನಡುವೆ ಫೈಟ್‌ ಶುರುವಾಗಿದೆ.

VISTARANEWS.COM


on

ipl telecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • ಕೇಶವ್ ಪ್ರಸಾದ್ ಬಿ

ಬ್ರಾಡ್‌ಕಾಸ್ಟ್‌ ಇಂಡಸ್ಟ್ರಿಯ ಘಟಾನುಘಟಿಗಳೆಲ್ಲ ಈ ಯುದ್ಧದಲ್ಲಿ ಗೆದ್ದು ಬೀಗಲು ತುದಿಗಾಲಲ್ಲಿ ಕಾಯುತ್ತಿದ್ದಾರೆ. ಆದರೆ ಇದು ಐಪಿಎಲ್‌ನಲ್ಲಿ ಆಡುವ ಕ್ರಿಕೆಟಿಗರ ಹರಾಜಲ್ಲ. ಐಪಿಎಲ್‌ ಪಂದ್ಯಗಳನ್ನು ನೇರ ಪ್ರಸಾರ ಮಾಡುವ ಹಕ್ಕುಗಳಿಗೋಸ್ಕರ ನಡೆಯುವ ರೋಚಕ ಹರಾಜಿದು!

2022ರ ಜೂನ್‌ 12ರಿಂದ ಹರಾಜು ಪ್ರಕ್ರಿಯೆ ಶುರುವಾಗಲಿದೆ. ಇದರಲ್ಲಿ ಗೆದ್ದವರಿಗೆ ಮುಂದಿನ ಐದು ವರ್ಷಗಳ ತನಕ ಐಪಿಎಲ್‌ ಪಂದ್ಯಾವಳಿಗಳ ನೇರ ಪ್ರಸಾರ ಮಾಡುವ ಅವಕಾಶ. 2023ರಿಂದ 2027ರ ತನಕ 5 ವರ್ಷಗಳ ಕಾಲ ಪ್ರತಿ ಸೀಸನ್‌ನ ಟೂರ್ನಮೆಂಟ್‌ನಲ್ಲೂ 74 ಮ್ಯಾಚ್‌ಗಳು ನಡೆಯಲಿವೆ.

ಬಿಸಿಸಿಐ ನಡೆಸುವ ಐಪಿಎಲ್‌ ಈಗ ಕೇವಲ ಕ್ರಿಕೆಟ್‌ ಆಟವಾಗಿ ಉಳಿದಿಲ್ಲ. ಭಾರತೀಯ ಕ್ರೀಡಾ ಲೋಕದ ಅತಿ ದೊಡ್ಡ ಮೌಲ್ಯದ ಆಸ್ತಿಯಾಗಿದೆ. ಇದರ ಸುತ್ತಮುತ್ತ ಸಾವಿರಾರು ಕೋಟಿ ರೂ.ಗಳ ಭರ್ಜರಿ ವಹಿವಾಟು ನಡೆಯುವ ಉದ್ಯಮವಾಗಿ ಬೆಳೆದಿದೆ. ದೇಶ-ವಿದೇಶಗಳ ದಿಗ್ಗಜ ಉದ್ಯಮಿಗಳು ಇಲ್ಲಿ ಕೋಟ್ಯಂತರ ರೂ. ಬಂಡವಾಳ ಹೂಡಿ ಲಾಭ ಗಳಿಸುತ್ತಾರೆ. ಆಟಗಾರರಿಗೂ ಅವರವರ ಪ್ರತಿಭೆಗೆ ತಕ್ಕಂತೆ ಭರ್ಜರಿ ದುಡ್ಡು ಸೇರುತ್ತದೆ.

ಹಾಗಾದರೆ ಬಿಸಿಸಿಐ ಈ ಐಪಿಎಲ್‌ ನೇರ ಪ್ರಸಾರದ ಹಕ್ಕುಗಳನ್ನು ಹೇಗೆ ಹರಾಜಿಗೆ ಹಾಕಲಿದೆ? ಯಾರೆಲ್ಲ ಬಿಡ್‌ ಮಾಡಿದ್ದಾರೆ? ಯಾರು ಅಂತಿಮವಾಗಿ ಬಿಡ್‌ ಗೆಲ್ಲಬಹುದು? ಯಾವ ಚಾನೆಲ್‌ನಲ್ಲಿ, ಪ್ಲಾಟ್‌ಫಾರ್ಮ್‌ನಲ್ಲಿ ಐಪಿಎಲ್ ಕ್ರಿಕೆಟ್‌ ಪಂದ್ಯಗಳು ‌ನೇರ ಪ್ರಸಾರವಾಗಬಹುದು? ಎಷ್ಟು ಕೋಟಿ ರೂ.ಗೆ ಹಕ್ಕುಗಳು ಮಾರಾಟವಾದೀತು? ಹೀಗೆ ಜಿದ್ದಿಗೆ ಬಿದ್ದು ದುಬಾರಿ ಹಕ್ಕುಗಳನ್ನು ಪಡೆಯುವ ಕಂಪನಿಗಳು ಬಳಿಕ ಹೇಗೆ ಲಾಭ ಗಳಿಸುತ್ತವೆ? ಹೂಡಿಕೆಯನ್ನು ಲಾಭದಾಯಕವಾಗಿಸಿ ಹೇಗೆ ದಕ್ಕಿಸಿಕೊಳ್ಳುತ್ತವೆ?

ಇಂಥ ಅನೇಕ ಪ್ರಶ್ನೆಗಳು ಕ್ರಿಕೆಟ್‌ ಪ್ರೇಮಿಗಳನ್ನು, ಕಾರ್ಪೊರೇಟ್‌ ಕುಳಗಳನ್ನು, ಬಿಸಿನೆಸ್‌ ಜಗತ್ತಿನ ಕುತೂಹಲಿಗಳನ್ನು ಕಾಡತೊಡಗಿದೆ.

ಹರಾಜಿನಿಂದ ಬಿಸಿಸಿಐಗೆ ಹಣದ ಹೊಳೆ

ಬೋರ್ಡ್‌ ಆಫ್‌ ಕಂಟ್ರೋಲ್‌ ಫಾರ್‌ ಕ್ರಿಕೆಟ್ ಇನ್ ಇಂಡಿಯಾ ಅಥವಾ ಸಂಕ್ಷಿಪ್ತವಾಗಿ ಬಿಸಿಸಿಐ ಎಂದು ಜನಪ್ರಿಯವಾಗಿರುವ ಕ್ರಿಕೆಟ್‌ ಮಂಡಳಿಯೇ ಈ ಐಪಿಎಲ್‌ ಪಂದ್ಯಗಳನ್ನು ನಡೆಸುತ್ತದೆ. ಹಾಗೂ ಇದರ ನೇರ ಪ್ರಸಾರದ ಹಕ್ಕುಗಳನ್ನು ಹರಾಜಿಗೆ ಹಾಕಿದೆ.

ಇದುವರೆಗೆ ಸ್ಟಾರ್‌ ಟಿವಿ ಚಾನೆಲ್‌ನಲ್ಲಿ ನೇರ ಪ್ರಸಾರವಾಗುತ್ತಿತ್ತು. ಈ ಸ್ಟಾರ್‌ ಟಿವಿ ಚಾನೆಲ್‌ ಅನ್ನು ನಡೆಸುತ್ತಿರುವ ವರ್ಲ್ಡ್‌ ಡಿಸ್ನಿ ಕಂಪನಿ ಇಂಡಿಯಾ ಖರೀದಿಸಿದ್ದ ನೇರ ಪ್ರಸಾರದ ಹಕ್ಕುಗಳ ಅವಧಿ 2022ರಲ್ಲಿ ಕೊನೆಯಾಗುತ್ತಿದೆ. ಆದ್ದರಿಂದ 2023ರಿಂದ ಮುಂದಿನ ಐದು ವರ್ಷಗಳ ಅವಧಿಗೆ ಮಾರಾಟದ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಮಾರಾಟ ಮಾಡಲು ಬಿಸಿಸಿಐ ಸಜ್ಜಾಗಿದೆ.

ಖರೀದಿದಾರರೂ ಉತ್ಸಾಹದಲ್ಲಿದ್ದಾರೆ. ಏಕೆಂದರೆ ಐಪಿಎಲ್‌ ವರ್ಷದಿಂದ ವರ್ಷಕ್ಕೆ ಅಗಾಧವಾಗಿ ಬೆಳೆಯುತ್ತಿದೆ. ಕೋಟ್ಯಂತರ ಪ್ರೇಕ್ಷಕರು ಈ ಪಂದ್ಯಗಳನ್ನು ವೀಕ್ಷಿಸುತ್ತಾರೆ. ಆಗ ತೋರಿಸುವ ಜಾಹೀರಾತಿನ ಪ್ರತಿ ಸೆಕೆಂಡ್‌ಗೂ ಹತ್ತು ಲಕ್ಷ ರೂಪಾಯಿಗೂ ಹೆಚ್ಚು ದುಡ್ಡು, ನೇರ ಪ್ರಸಾರ ಮಾಡುವ ಕಂಪನಿಯ ಖಾತೆಗೆ ಸೇರುತ್ತದೆ.

ಮೊದಲ ಬಾರಿಗೆ ಆನ್‌ಲೈನ್‌ ಹರಾಜು

ಐಪಿಎಲ್‌ ಮೀಡಿಯಾ ರೈಟ್ಸ್‌ ಅಥವಾ ನೇರ ಪ್ರಸಾರದ ಹಕ್ಕು ಇದೇ ಮೊದಲ ಬಾರಿಗೆ ಆನ್‌ಲೈನ್‌ ಮೂಲಕ ನಡೆಯಲಿದೆ. ಇದು ಮುಂಬಯಿನಲ್ಲಿ ಜೂನ್‌ 12ಕ್ಕೆ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ಹೀಗಿದ್ದರೂ ಹರಾಜಿನ ಕೊನೆಯ ದಿನಾಂಕ ಯಾವುದು ಎಂಬುದು ನಿಗದಿಯಾಗಿಲ್ಲ. ಮುಂಬರುವ ಕೆಲ ದಿನಗಳ ತನಕ ನಡೆಯಬಹುದು. ಬಿಡ್‌ಗಳು ಬರುವಷ್ಟು ದಿನ ಮುಂದುವರಿಯಬಹುದು.

ಆನ್‌ಲೈನ್‌ನಲ್ಲಿಯೇ ಬಿಡ್‌ಗಳನ್ನು ಸಲ್ಲಿಸಬೇಕಾಗುತ್ತದೆ. ಅತಿ ಹೆಚ್ಚು ಮೊತ್ತದ ಬಿಡ್‌ ಸಲ್ಲಿಸಿದವರಿಗೆ ನೇರ ಪ್ರಸಾರದ ಹಕ್ಕುಗಳು ದೊರೆಯಲಿವೆ.

ಬಿಡ್ಡರ್‌ಗಳು ಯಾರು?

ಕಳೆದ ಹಲವಾರು ದಿನಗಳಿಂದಲೂ ಐಪಿಎಲ್‌ ನೇರ ಪ್ರಸಾರದ ಹಕ್ಕುಗಳ ಹರಾಜಿನಲ್ಲಿ ವಿಶ್ವದ ಇಬ್ಬರು ಶ್ರೀಮಂತ ಉದ್ಯಮಿಗಳಾದ ಅಮೆಜಾನ್‌ ಸ್ಥಾಪಕ ಜೆಫ್‌ ಬಿಜೋಸ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ ಎಂದು ಹೇಳಲಾಗಿತ್ತು. ಆದರೆ ಇತ್ತೀಚಿನ ವರದಿಗಳ ಪ್ರಕಾರ ಇ-ಕಾಮರ್ಸ್‌ ದಿಗ್ಗಜ ಅಮೆಜಾನ್‌ ಇ-ಹರಾಜಿನಿಂದ ಹಿಂದೆ ಸರಿದಿದೆ. ಬಿಸಿಸಿಐ ಬಿಡ್‌ಗಳ ತಾಂತ್ರಿಕ ಮೌಲ್ಯಮಾಪನಕ್ಕೆ ಮುಂದಾಗುವ ಮುನ್ನವೇ ಅಮೆಜಾನ್‌ ಕಣದಿಂದ ಹಿಂದುಳಿಯುವ ಬಗ್ಗೆ ದೃಢಪಡಿಸಿದೆ ಎಂದು ವರದಿಯಾಗಿದೆ.

ಕೆಲ ವರದಿಗಳ ಪ್ರಕಾರ ಅಮೆಜಾನ್‌ ಸಿಇಒ ಆಂಡಿ ಜೆಸ್ಸಿ ಅವರು ಆಂತರಿಕ ಸಮಾಲೋಚನೆ ನಡೆಸಿದ ಬಳಿಕ ಕಣದಿಂದ ಹಿಂದೆ ಸರಿಯುವ ನಿರ್ಣಯಕ್ಕೆ ಬರಲಾಗಿದೆ. ಸ್ವಾರಸ್ಯ ಏನೆಂದರೆ ಅಮೆಜಾನ್‌ ಈ ಬಗ್ಗೆ ಅಧಿಕೃತವಾಗಿ ಏನೂ ಹೇಳಿಲ್ಲ.

ಇದರಿಂದಾಗಿ ಈ ರೋಚಕ ಹಣಾಹಣಿಯ ಹರಾಜಿನ ಕಣದಲ್ಲಿ ಡಿಸ್ನಿ-ಸ್ಟಾರ್‌, ರಿಲಯನ್ಸ್‌ ವಯಾಕಾಮ್-‌18 ಮತ್ತು ಸೋನಿ-ಝೀ ಕಂಪನಿಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ. ಗೂಗಲ್‌ ಪ್ಲಸ್‌ ಕೂಡ ಹಿಂದೊಮ್ಮೆ ಆಸಕ್ತಿ ತೋರಿಸಿದ್ದರೂ ಹಿಂದೆ ಸರಿದಿದೆ. ಕೆಲ ವರದಿಗಳ ಪ್ರಕಾರ ಝೀ ವಾಹಿನಿ ಕೂಡ ಬಿಡ್‌ ಅನ್ನು ಹಿಂಪಡೆಯುವ ಸಾಧ್ಯತೆ ಇದೆ. ಆಗ ಸ್ಟಾರ್‌ ವಾಹಿನಿ-ರಿಲಯನ್ಸ್‌ ವಯಾಕಾಮ್‌-18 ಮತ್ತು ಸೋನಿ ಪಿಕ್ಚರ್ಸ್ ನಡುವೆ ಸ್ಪರ್ಧೆ ನಡೆಯಲಿದೆ.

ಇದನ್ನೂ ಓದಿ: ದೈತ್ಯಾಕಾರದ ಜೆರ್ಸಿ, ಗಿನ್ನಿಸ್ ದಾಖಲೆ ಬರೆದ ಐಪಿಎಲ್‌-2022

ತಾಂತ್ರಿಕ ಬಿಡ್‌ ಪೂರ್ಣಗೊಳಿಸಿದವರು ಯಾರು?

ಡಿಸ್ನಿ ವಾರ್‌, ರಿಲಯನ್ಸ್‌ ವಯಾಕಾಮ್‌18, ಸೋನಿ ನೆಟ್‌ವರ್ಕ್‌, ಝೀ ಎಂಟರ್‌ಟೈನ್‌ಮೆಂಟ್‌, ಟೈಮ್ಸ್‌ ಇಂಟರ್‌ನೆಟ್‌ (ಡಿಜಿಟಲ್‌ ಹಕ್ಕುಗಳಿಗೆ ಮಾತ್ರ), ರಿಲಯನ್ಸ್‌ ಜಿಯೊ (ಡಿಜಿಟಲ್‌ ಹಕ್ಕುಗಳಿಗೆ ಮಾತ್ರ), ಸೂಪರ್‌ ಸ್ಪೋರ್ಟ್ಸ್ ( ಅಂತಾರಾಷ್ಟ್ರೀಯ ನೇರ ಪ್ರಸಾರದ ಹಕ್ಕುಗಳಿಗೆ ಮಾತ್ರ) ತಾಂತ್ರಿಕ ಬಿಡ್‌ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿವೆ.

ಡಿಸ್ನಿ-ಸ್ಟಾರ್‌, ಸೋನಿ-ಝೀ ಮತ್ತು ವಯಾಕಾಮ್‌18-ರಿಲಯನ್ಸ್‌ಗೆ ತಮ್ಮದೇ ಆದ ಟಿವಿ ಚಾನೆಲ್‌ ಮತ್ತು ಸ್ಪೋರ್ಟ್ಸ್‌ ಚಾನೆಲ್‌ಗಳು ಇವೆ. ಆದರೆ ಅಮೆಜಾನ್‌ಗೆ ತನ್ನದೇ ನಿರ್ದಿಷ್ಟವಾದ ಟಿವಿ ಚಾನೆಲ್‌ ಇಲ್ಲ. ಈಗಾಗಲೇ ಭಾರತದಲ್ಲಿ 600 ಕೋಟಿ ಡಾಲರ್‌ಗಿಂತಲೂ ಹೆಚ್ಚು ಬಂಡವಾಳವನ್ನು ಅಮೆಜಾನ್‌ ಹೂಡಿದೆ. ಕೇವಲ ಆನ್‌ಲೈನ್‌ ಮೂಲಕ ನೇರ ಪ್ರಸಾರಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಹೂಡುವುದು ಬಿಸಿನೆಸ್‌ ದೃಷ್ಟಿಯಿಂದ ಲಾಭವಾಗದು ಎಂಬ ಹಿನ್ನೆಲೆಯಲ್ಲಿ ಅಮೆಜಾನ್‌ ಹಿಂದೆ ಸರಿದಿರಬಹುದು ಎಂದು ಮಾರುಕಟ್ಟೆ ತಜ್ಞರು ಹೇಳುತ್ತಾರೆ.

ಐಪಿಎಲ್‌ ನೇರ ಪ್ರಸಾರದ ಹಕ್ಕುಗಳ 4 ಪ್ಯಾಕೇಜ್‌

ಬಿಸಿಸಿಐ ಐಪಿಎಲ್‌ ನೇರ ಪ್ರಸಾರದ ಹಕ್ಕುಗಳನ್ನು 4 ಪ್ಯಾಕೇಜ್‌ಗಳನ್ನಾಗಿ ವಿಭಾಗಿಸಿದೆ. ಅವುಗಳು-ಎ, ಬಿ, ಸಿ ಮತ್ತು ಡಿ ಎಂಬ ಪ್ಯಾಕೇಜ್‌ನಲ್ಲಿವೆ. ಎ- ಟಿವಿ ಚಾನೆಲ್‌ಗಳಲ್ಲಿ ಪಂದ್ಯಾವಳಿಯನ್ನು ಭಾರತದಲ್ಲಿ ವಿಶೇಷ ಪ್ರಸಾರ ಮಾಡುವ ಹಕ್ಕು. ಬಿ- ಭಾರತದಲ್ಲಿ ಡಿಜಿಟಲ್‌ ಮಾಧ್ಯಮದಲ್ಲಿ ಪ್ರಸಾರ ಮಾಡುವ ಹಕ್ಕು. ಸಿ-ಕೆಲವು ವಿಶೇಷ ಪಂದ್ಯಗಳ ಪ್ರಸಾರದ ಹಕ್ಕುಗಳಾಗಿದೆ. ಟೂರ್ನಮೆಂಟ್‌ನ ಆರಂಭಿಕ ಪಂದ್ಯ, ಪ್ಲೇ ಆಫ್‌ ಮ್ಯಾಚ್‌, ಕೆಲವು ವಾರಾಂತ್ಯದ ಮ್ಯಾಚ್‌ಗಳು ಮತ್ತು ಫೈನಲ್‌ ಪಂದ್ಯ. ಐಪಿಎಲ್‌ ಸೀಸನ್‌ 74 ಪಂದ್ಯಗಳನ್ನು ಒಳಗೊಂಡಿದೆ. ಸಿ-ಪ್ಯಾಕೇಜ್‌ನಲ್ಲಿ 11 ಮ್ಯಾಚ್‌ಗಳು ಇವೆ.

ಡಿ-ಪ್ಯಾಕೇಜ್‌ನಲ್ಲಿ ಟಿವಿ ಮತ್ತು ಡಿಜಿಟಲ್‌ ಎರಡೂ ಇದ್ದು ಭಾರತ ಹೊರತುಪಡಿಸಿ ಜಗತ್ತಿನ ಉಳಿದ ಕಡೆ ಪ್ರಸಾರ ಮಾಡುವ ಹಕ್ಕುಗಳಾಗಿದೆ.‌

ಇದನ್ನೂ ಓದಿ: ‌ಭಾರತ-ದ. ಆಫ್ರಿಕಾ T20| ಎರಡನೇ ಪಂದ್ಯ ನಾಯಕ ರಿಷಭ್‌ ಪಂ‌ತ್ ಪಾಲಿಗೆ ಟೆಸ್ಟ್!

ಪ್ರತಿ ಪ್ಯಾಕೇಜ್‌ಗೂ ಪ್ರತ್ಯೇಕ ಮೂಲ ದರ (ಬೇಸ್‌ ಪ್ರೈಸ್‌) ಇದೆ.
ಪ್ಯಾಕೇಜ್‌ ಎ- ಪ್ರತಿ ಪಂದ್ಯಕ್ಕೂ 49 ಕೋಟಿ ರೂ.
ಪ್ಯಾಕೇಜ್‌ ಬಿ- ಪ್ರತಿ ಪಂದ್ಯಕ್ಕೂ 33 ಕೋಟಿ ರೂ.
ಪ್ಯಾಕೇಜ್‌ ಸಿ- ಪ್ರತಿ ಪಂದ್ಯಕ್ಕೂ 11 ಕೋಟಿ ರೂ.
ಪ್ಯಾಕೇಜ್‌ ಡಿ- ಪ್ರತಿ ಪಂದ್ಯಕ್ಕೂ 3 ಕೋಟಿ ರೂ.
ಎ ಮತ್ತು ಬಿ ಪ್ಯಾಕೇಜ್‌ನ ಬಿಡ್ಡಿಂಗ್ ಏಕಕಾಲಕ್ಕೆ ನಡೆಯಲಿದೆ. ಬಳಿಕ ಸಿ ಮತ್ತು ಡಿ ಪ್ಯಾಕೇಜ್‌ನ ಬಿಡ್ಡಿಂಗ್‌ ನಡೆಯಲಿದೆ.

ನೇರ ಪ್ರಸಾರದ ಹಕ್ಕುಗಳ ಮೂಲ ದರ 32,890 ಕೋಟಿ ರೂ!

ಬಿಸಿಸಿಐ ಐಪಿಎಲ್‌ ಪಂದ್ಯಗಳ ನೇರ ಪ್ರಸಾರದ ಹಕ್ಕುಗಳ ಮೂಲ ದರವನ್ನು 32,890 ಕೋಟಿ ರೂ.ಗೆ ನಿಗದಿಪಡಿಸಿದೆ. ಮೂಲದರ ಎಂದರೆ ಕನಿಷ್ಠ ದರ. ಅದಕ್ಕಿಂತ ಕಡಿಮೆ ಬಿಡ್‌ ಸಲ್ಲಿಸುವ ಹಾಗಿಲ್ಲ. 5 ವರ್ಷಗಳ ಹಿಂದೆ ಮೂಲ ದರ 16,347 ಕೋಟಿ ರೂ.ಗಳಾಗಿತ್ತು.

ಬಿಸಿಸಿಐಗೆ 50,000 ಕೋಟಿ ರೂ. ಆದಾಯ ನಿರೀಕ್ಷೆ

ಕಳೆದ ಸಲ 2017ರಲ್ಲಿ ಸ್ಟಾರ್‌ ಇಂಡಿಯಾ ಹರಾಜಿನಲ್ಲಿ ದಾಖಲೆಯ 16,347 ಕೋಟಿ ರೂ.ಗಳನ್ನು ಬಿಸಿಸಿಐಗೆ ಹರಾಜಿನಲ್ಲಿ ಕೊಟ್ಟು ನೇರ ಪ್ರಸಾರದ ಹಕ್ಕುಗಳನ್ನು ಖರೀದಿಸಿತ್ತು. 2018ರಿಂದ 2022ರ ತನಕದ ಅವಧಿಯ ಹಕ್ಕುಗಳನ್ನು ತನ್ನದಾಗಿಸಿತ್ತು. ಇದು ಕ್ರಿಕೆಟ್‌ನ ಇತಿಹಾಸದಲ್ಲಿಯೇ ಅತಿ ದೊಡ್ಡ ಹಕ್ಕು ಖರೀದಿಯಾಗಿತ್ತು. ಈ ಹಿಂದಿನ ದೊಡ್ಡ ಹಕ್ಕಿಗಿಂತ 158% ಹೆಚ್ಚಿನ ಮೌಲ್ಯದ್ದಾಗಿತ್ತು. ಆದರೆ ಈ ಸಲ ನೇರ ಪ್ರಸಾರದ ಹಕ್ಕುಗಳು 50,000 ಕೋಟಿ ರೂ.ಗಳಿಂದ 60,000 ಕೋಟಿ ರೂ. ತನಕದ ದಾಖಲೆಯ ಮೌಲ್ಯಕ್ಕೆ ಮಾರಾಟವಾಗುವ ಭಾರಿ ನಿರೀಕ್ಷೆ ಉಂಟಾಗಿದೆ. ಈ ಸಲ ಹಕ್ಕಿನ ಅಂತಿಮ ಎರಡು ವರ್ಷಗಳಲ್ಲಿ 94ಕ್ಕೆ ಮ್ಯಾಚ್‌ಗಳ ಸಂಖ್ಯೆಯನ್ನು ಏರಿಸುವ ನಿರೀಕ್ಷೆಯೂ ಇದೆ.

ಪ್ರಸಾರದ ಹಕ್ಕು ಖರೀದಿಸಿದವರಿಗೆ ಲಾಭವೇನು?

ಪ್ರತಿಯೊಂದು ಪಂದ್ಯಕ್ಕೂ ನೂರಾರು ಕೋಟಿ ರೂ. ಕೊಟ್ಟು ದುಬಾರಿ ಮೊತ್ತದ ಐಪಿಎಲ್‌ ನೇರ ಪ್ರಸಾರ ಹಕ್ಕುಗಳನ್ನು ಖರೀದಿಸುವ ಮಾಧ್ಯಮ ಕಂಪನಿಗಳಿಗೆ ಲಾಭ ಹೇಗೆ ಎಂಬ ಕುತೂಹಲ ನಿಮ್ಮಲ್ಲಿರಬಹುದಲ್ಲವೇ? ಇದು ನಿಜಕ್ಕೂ ಸಂಶೋಧನೆ ಮಾಡಬೇಕಾಗಿರುವ ವಿಷಯವೇ.

ಜಾಗತಿಕ ಮಟ್ಟದಲ್ಲಿ ಐಪಿಎಲ್‌ ನೇರ ಪ್ರಸಾರದ ಹಕ್ಕುಗಳು ನಾಲ್ಕನೇ ಗರಿಷ್ಠ ದರವನ್ನು ಹೊಂದಿದೆ. ನ್ಯಾಷನಲ್‌ ಫುಟ್ಬಾಲ್‌ ಲೀಗ್‌ (NFL), ಇಂಗ್ಲೀಷ್‌ ಪ್ರೀಮಿಯರ್‌ ಲೀಗ್‌ (EPL), ಮೇಜರ್‌ ಲೀಗ್‌ ಬೇಸ್‌ಬಾಲ್‌ (MLB) ಬಿಟ್ಟರೆ ಅತಿ ಹೆಚ್ಚು ದರದ ಹಕ್ಕುಗಳು ಐಪಿಎಲ್‌ನದ್ದೇ ಆಗಿದೆ.

ಐಪಿಎಲ್‌ಗಿರುವ ಜನಪ್ರಿಯತೆ, ರೋಚಕತೆಯ ಪರಿಣಾಮ ಕೋಟ್ಯಂತರ ವೀಕ್ಷಕರನ್ನು ಗಳಿಸಿಕೊಂಡಿದೆ. ನೇರ ಪ್ರಸಾರ ಮಾಡುವಾಗ ಪ್ರತಿ ಓವರ್‌ನ ನಡುವೆ ಹಾಗೂ ವಿರಾಮದ ವೇಕೆ ಕಾರ್ಪೊರೇಟ್‌ ಕಂಪನಿಗಳು ಜಾಹೀರಾತುಗಳನ್ನು ನೀಡುತ್ತವೆ. ಜಾಹೀರಾತುಗಳಿಂದ ಸಿಗುವ ಆದಾಯವೇ ಬ್ರಾಡ್‌ಕಾಸ್ಟ್‌ ಕಂಪನಿಗಳಿಗೆ ಲಾಭದಾಯಕವಾಗಿರುತ್ತದೆ. ಅಲ್ಲದೆ ಪ್ರತಿ ವರ್ಷ ಜಾಹೀರಾತಿನ ದರವನ್ನು ಏರಿಸಲಾಗುತ್ತದೆ. ಈಗ ಟಿವಿ ಚಾನೆಲ್‌ಗಳ ಜತೆಗೆ ಡಿಜಿಟಲ್‌ ಮಾಧ್ಯಮಗಳಿಗೆ ಕೂಡ ಜಾಹೀರಾತುಗಳು ಲಭ್ಯ.

ಪ್ರತಿ ಸೆಕೆಂಡ್‌ ಜಾಹೀರಾತಿಗೆ 14 ಲಕ್ಷ ರೂ!

ಐಪಿಎಲ್‌ 2022ರಲ್ಲಿ ಬ್ರ್ಯಾಂಡ್‌ಗಳು ನೀಡಿದ ಜಾಹೀರಾತಿಗೆ ಪ್ರತಿ ಸೆಕೆಂಡ್‌ಗೆ ಸರಾಸರಿ 14 ಲಕ್ಷ ರೂ. ದರ ನಿಗದಿಯಾಗಿತ್ತು. 2018ರಲ್ಲಿ 10 ಲಕ್ಷ ರೂ. ನಿಗದಿಯಾಗಿತ್ತು. ಈ ಆದಾಯದ ಮಾರ್ಗವೇ ಐಪಿಎಲ್‌ ಬಿಡ್ಡಿಂಗ್‌ ವಾರ್‌ಗೆ ಕಾರಣವಾಗಿದೆ.

ಐಪಿಎಲ್‌ ಹಿನ್ನೆಲೆ ಏನು?

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಮೊದಲ ಎಡಿಶನ್‌ 2008ರಲ್ಲಿ ಶುರುವಾಯಿತು. ಬಿಸಿಸಿಐ 2007ರಲ್ಲಿ ಈ ಟ್ವೆಂಟಿ20 ಕ್ರಿಕೆಟ್‌ ಪಂದ್ಯಾವಳಿಯನ್ನು ರೂಪಿಸಿತು. ಪ್ರತಿ ವರ್ಷ ಮಾರ್ಚ್‌ ಮತ್ತು ಮೇ ನಡುವೆ ಟೂರ್ನಮೆಂಟ್‌ ಅದ್ಧೂರಿಯಾಗಿ ನಡೆಯುತ್ತದೆ. ವಿಶ್ವದ ಅತ್ಯಂತ ಮಹತ್ವದ ಕ್ರೀಡಾಕೂಟಗಳಲ್ಲೊಂದಾಗಿ ಹೊರಹೊಮ್ಮಿದೆ. ಐಪಿಎಲ್‌ನ ಮೊದಲ ಅಧ್ಯಕ್ಷರಾಗಿದ್ದವರು ಉದ್ಯಮಿ ಹಾಗೂ ಕ್ರಿಕೆಟ್‌ ಪಂದ್ಯಾವಳಿಗಳ ವ್ಯವಸ್ಥಾಪಕ ಲಲಿತ್‌ ಕುಮಾರ್‌ ಮೋದಿ. 2005ರಲ್ಲಿ ಬಿಸಿಸಿಐನ ಉಪಾಧ್ಯಕ್ಷರಾಗಿ ನೇಮಕವಾಗಿದ್ದರು.

2010ರ ತನಕವೂ ಲಲಿತ್‌ ಮೋದಿ ಐಪಿಎಲ್‌ ಟೂರ್ನಮೆಂಟ್‌ಗಳನ್ನು ನಡೆಸುತ್ತಿದ್ದರು. ಐಪಿಎಲ್‌ ಈಗಿನ ಜಮಾನದ ಯುವಜನರಿಗೆ ಹೇಳಿ ಮಾಡಿಸಿದ ಕ್ರೀಡಾಕೂಟ. ಟ್ವೆಂಟಿ20 ಫಾರ್‌ಮ್ಯಾಟಿನ ಕ್ರಿಕೆಟ್‌ ಮ್ಯಾಚ್‌ ಇದಕ್ಕೆ ಸರಿಯಾಗಿ ಹೊಂದಿಕೊಳ್ಳುತ್ತದೆ. ಇದು ಮಹಿಳೆಯರು ಮತ್ತು ಮಕ್ಕಳಿಗೂ ಇಷ್ಟವಾಗಲಿದೆ ಎಂದಿದ್ದರು ಲಲಿತ್‌ ಮೋದಿ.

2005ರಲ್ಲಿ ಬಿಸಿಸಿಐನ ಉಪಾಧ್ಯಕ್ಷರಾಗಿ ಅವರು ನೇಮಕವಾಗಿದ್ದರು. ಆದರೆ ಹಲವಾರು ಅವ್ಯವಹಾರ, ಅಕ್ರಮಗಳ ಹಗರಣಗಳಲ್ಲಿ ಸಿಲುಕಿದ ಲಲಿತ್‌ ಮೋದಿ ಅವರನ್ನು ಬಿಸಿಸಿಐ 2010ರ ಏಪ್ರಿಲ್‌ನಲ್ಲಿ ಮಂಡಳಿಯಿಂದ ಉಚ್ಚಾಟಿಸಿತು. ವಿತ್ತಾಪರಾಧಿಯಾಗಿರುವ ಲಲಿತ್‌ ಮೋದಿ ಈಗ ಲಂಡನ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ.

ಆರಂಭದಲ್ಲಿ ಐಪಿಎಲ್‌ ಮಾದರಿಯ ಬಗ್ಗೆ ಬಿಸಿಸಿಐಗೆ ಅಂಥ ಆಸಕ್ತಿ ಇರಲಿಲ್ಲ. ಆದರೆ ಅದರ ಲಾಭದ ರುಚಿ ಕಂಡ ಬಳಿಕ ಹಿಂತಿರುಗಿ ನೋಡಲಿಲ್ಲ. ಆದರೆ ಎಲ್ಲದಕ್ಕೂ ಹೆಚ್ಚಿನ ಮುತುವರ್ಜಿಯಿಂದ ಬಿಸಿಸಿಐ ತನ್ನ ಹೆಮ್ಮೆಯ ಐಪಿಎಲ್‌ ಅನ್ನು ನಡೆಸುತ್ತಿದೆ.
ಅಂತೂ, ಐಪಿಎಲ್ ಪಂದ್ಯಾವಳಿಯ ಪ್ರಸಾರ ಹಕ್ಕಿನ ಹರಾಜು ಕುತೂಹಲ ಮೂಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇನ್ನು, ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಇನ್ನು ಕಾಲ್ತುಳಿತ ಹೇಗಾಯಿತು? ನೂರಾರು ಜನರ ಸಾವಿಗೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳುವುದು ಏನು ಎಂಬುದರ ಮಾಹಿತಿ ಇಲ್ಲಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದಿಷ್ಟು…

ಸತ್ಸಂಗ ಮುಗಿದ ಬಳಿಕ ನೂರಾರು ಜನ ಹೊರಗೆ ಬಂದಿದ್ದಾರೆ. ಎತ್ತರದ ಚರಂಡಿ ಮೇಲೆ ನಿರ್ಮಿಸಿದ ರಸ್ತೆ ಮೇಲೆ ಸಾವಿರಾರು ಜನ ನಿಂತಿದ್ದಾರೆ. ಆಗ ರಸ್ತೆಯ ಒಂದು ಭಾಗ ಚರಂಡಿಯೊಳಗೆ ಕುಸಿದಿದೆ. ಕೂಡಲೇ ಹತ್ತಾರು ಜನ ಚರಂಡಿಯೊಳಗೆ ಬಿದ್ದಿದ್ದು, ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ಇನ್ನು ಚರಂಡಿ ಮೇಲಿನ ರಸ್ತೆ ಕುಸಿದ ಸುದ್ದಿ ಹರಿದಾಡುತ್ತಲೇ ಎಲ್ಲರೂ ಓಡಲು ಶುರು ಮಾಡಿದರು. ಆಗಲೂ ಒಬ್ಬರ ಮೇಲೆ ಒಬ್ಬರು ಬಿದ್ದು, ತುಳಿದಾಡಿದ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಘಟನೆ ಕುರಿತು ವಿವರ ನೀಡಿದ್ದಾರೆ.

ಇನ್ನೊಂದಿಷ್ಟು ಮೂಲಗಳ ಪ್ರಕಾರ, ಸಣ್ಣದೊಂದು ಹಾಲ್‌ನಲ್ಲಿ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊರಗಡೆ ಚರಂಡಿ ಮೇಲಿನ ಸ್ಲ್ಯಾಬ್‌ ಕುಸಿದಿದೆ ಎಂಬ ಸುದ್ದಿ ಕೇಳಿ ಎಲ್ಲರೂ ಓಡಲು ಶುರು ಮಾಡಿದರು. ಹೊರಗೆ ಹೋಗುವ ಗೇಟ್‌ ಚಿಕ್ಕದಿದ್ದ ಕಾರಣ ಎಲ್ಲರೂ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಹೆಣ್ಣುಮಕ್ಕಳು ಓಡಲೂ ಆಗದೆ, ನೂಕುತ್ತಿದ್ದ ಪುರುಷರನ್ನು ಹಿಮ್ಮೆಟ್ಟಿಸಲೂ ಆಗದೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

Rahul Gandhi: 10 ವರ್ಷಗಳ ಬಳಿಕ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವು ಕಾಂಗ್ರೆಸ್‌ಗೆ ಲಭಿಸಿದ್ದು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯಲು ರಾಹುಲ್‌ ಗಾಂಧಿ ಅವರು ಸಜ್ಜಾಗಿದ್ದಾರೆ. ಇನ್ನು ಪ್ರತಿಪಕ್ಷ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಸಿಗುವ ಸಂಬಳ ಎಷ್ಟು? ಅವರಿಗೆ ಇರುವ ವಿಶೇಷ ಅಧಿಕಾರಗಳು ಯಾವವು? ಸವಲತ್ತುಗಳು ಏನೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Parliament Sessions
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ (Leader Of The Opposition) ಆಯ್ಕೆಯಾಗಿದ್ದಾರೆ. ಕಳೆದ ಎರಡು (2014, 2019) ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಪ್ರತಿಪಕ್ಷವಾಗುವಷ್ಟು ಸೀಟುಗಳನ್ನು ಗೆದ್ದಿರದ ಕಾರಣ ಪ್ರತಿಪಕ್ಷ ನಾಯಕರೇ ಇರಲಿಲ್ಲ. ಆದರೆ, ಕಳೆದ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳನ್ನು ಗೆದ್ದಿದ್ದು, ಈಗ ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇವರು ಆಡಳಿತಾರೂಢ ಪಕ್ಷಕ್ಕೆ ಸೆಡ್ಡು ಹೊಡೆಯುವ ಜತೆಗೆ ಹಲವು ಅಧಿಕಾರಗಳು ಹಾಗೂ ಸವಲತ್ತುಗಳನ್ನು ಪಡೆಯಲಿದ್ದಾರೆ. ಅವುಗಳ ಕುರಿತ ಮಾಹಿತಿ ಹೀಗಿದೆ…

ರಾಹುಲ್‌ ಗಾಂಧಿ ಸಂಬಳ ಎಷ್ಟು?

ರಾಹುಲ್‌ ಗಾಂಧಿ ಅವರು ಸಂಸದನಾಗಿ ಪಡೆಯುವ ಸಂಬಳದ ಜತೆಗೆ ಪ್ರತಿಪಕ್ಷ ನಾಯಕರೂ ಆಗಿರುವ ಕಾರಣ ಅವರಿಗೆ ಮಾಸಿಕ 3.3 ಲಕ್ಷ ರೂ. ಸಂಬಳ ಸಿಗಲಿದೆ. ಅಲ್ಲದೆ, ಕ್ಯಾಬಿನೆಟ್‌ ದರ್ಜೆಯ ಸಚಿವರಿಗೆ ಸಿಗುವ ಸವಲತ್ತುಗಳು, ಭದ್ರತೆ (ಝಡ್‌ ಪ್ಲಸ್‌) ಸಿಗಲಿದೆ. ಕ್ಯಾಬಿನೆಟ್‌ ಸಚಿವರೊಬ್ಬರಿಗೆ ಸಿಗುವ ಬಂಗಲೆಯೇ ರಾಹುಲ್‌ ಗಾಂಧಿ ಅವರಿಗೂ ನೀಡಲಾಗುತ್ತದೆ. ಇದರ ಜತೆಗೆ ಹಲವು ಭತ್ಯೆಗಳು ಕೂಡ ರಾಹುಲ್‌ ಗಾಂಧಿ ಅವರಿಗೆ ಸಿಗಲಿವೆ.

Rahul Gandhi

ಅವರ ಅಧಿಕಾರ ವ್ಯಾಪ್ತಿ ಹೇಗಿರಲಿದೆ?

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಹಲವು ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ. ಜಂಟಿ ಸಂಸದೀಯ ಸಮಿತಿಗಳು, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿರುತ್ತಾರೆ. ಹಾಗೆಯೇ, ಸಿಬಿಐ ನಿರ್ದೇಶಕ, ಮುಖ್ಯ ಚುನಾವಣಾ ಆಯುಕ್ತರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಚೀಫ್‌ ವಿಜಿಲನ್ಸ್‌ ಕಮಿಷನರ್‌, ಕೇಂದ್ರೀಯ ಮಾಹಿತಿ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡುವಾಗ ರಾಹುಲ್‌ ಗಾಂಧಿ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಸದನದ ಮುಂದಿನ ಸಾಲಿನಲ್ಲಿರುವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ. ಹಾಗೆಯೇ, ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾತನಾಡುವಾಗ ಕೂಡ ಅವರಿಗೆ ಮುಂದಿನ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಲೋಕಸಭೆಯ ಒಟ್ಟು ಕ್ಷೇತ್ರಗಳ ಶೇ.10ರಷ್ಟು ಅಂದರೆ 55 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಪಕ್ಷವು ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುತ್ತದೆ. ಆ ಪಕ್ಷದ ನಾಯಕ ಪ್ರತಿಪಕ್ಷ ನಾಯಕರಾಗುತ್ತಾರೆ. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 44 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇತ್ತು. ಈ ಬಾರಿ 99 ಕ್ಷೇತ್ರಗಳನ್ನು ಗೆದ್ದಿರುವ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Continue Reading

ಕರ್ನಾಟಕ

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

CM Siddaramaiah: ‘ಗ್ಯಾರಂಟಿ’ ಹೆಸರಲ್ಲಿ ನಮಗೆ ಗೊತ್ತಿಲ್ಲದಂತೆಯೇ ಜೇಬು ಖಾಲಿ ಆಗುತ್ತಿದೆ. ಇತ್ತೀಚೆಗೆ ಸರಕಾರ ಮಾಡುತ್ತಿರುವ ಬೆಲೆ ಏರಿಕೆಗಳನ್ನು, ಇಷ್ಟರಲ್ಲಿಯೇ ಮಾಡಲಿರುವ ಬೆಲೆಯೇರಿಕೆಗಳನ್ನು ಗಮನಿಸಿ ಈ ಮಾತು ಆಡಲಾಗುತ್ತಿದೆ. ಒಂದು ಕಡೆಯಿಂದ ಕೊಟ್ಟಂತೆ ನಟಿಸುತ್ತಿರುವ ಸರಕಾರ, ಇನ್ನೊಂದು ಕಡೆಯಿಂದ ಅದರ ದುಪ್ಪಟ್ಟು ಹಣ ನಮ್ಮ ಕಿಸೆಯಿಂದ ಪೀಕುತ್ತಿದೆ!

VISTARANEWS.COM


on

cm siddaramaiah price hikes
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರಕಾರ (Congress government) ರಾಜ್ಯದಲ್ಲಿ ಬಂದ ಕೂಡಲೇ ಚುನಾವಣೆ (Assembly Election) ಸಂದರ್ಭದಲ್ಲಿ ನೀಡಿದ ʼಗ್ಯಾರಂಟಿ ಯೋಜನೆʼಗಳನ್ನು (Guarantee schemes) ಜಾರಿ ಮಾಡಿತು. ಇದಕ್ಕಾಗಿ ಮುಂದೆ ಯಾವ ಬೆಲೆ ತೆರಬೇಕಾಗಲಿದೆಯೋ ಎಂಬ ಆತಂಕ ಆಗಲೇ ರಾಜ್ಯದ ಜನತೆಯನ್ನು ಕಾಡಿತ್ತು. ಅದು ಈ ನಿಜವಾಗುತ್ತಿದೆ. ಒಂದು ಕಡೆಯಿಂದ ಕೊಟ್ಟಂತೆ ನಟಿಸುತ್ತಿರುವ ಸರಕಾರ, ಇನ್ನೊಂದು ಕಡೆಯಿಂದ ಅದರ ದುಪ್ಪಟ್ಟು ಹಣ ನಮ್ಮ ಕಿಸೆಯಿಂದ ಪೀಕುತ್ತಿದೆ!

ಹೌದು, ಈ ಲೆಕ್ಕಾಚಾರ ನೋಡಿದರೆ ನೀವು ಖಂಡಿತಾ ಬಾಯಿ ಬಾಯಿ ಬಡಿದುಕೊಳ್ಳುತ್ತೀರಿ. ‘ಗ್ಯಾರಂಟಿ’ ಹೆಸರಲ್ಲಿ ನಮಗೆ ಗೊತ್ತಿಲ್ಲದಂತೆಯೇ ಜೇಬು ಖಾಲಿ ಆಗುತ್ತಿದೆ. ಇತ್ತೀಚೆಗೆ ಸರಕಾರ ಮಾಡುತ್ತಿರುವ ಬೆಲೆ ಏರಿಕೆಗಳನ್ನು, ಇಷ್ಟರಲ್ಲಿಯೇ ಮಾಡಲಿರುವ ಬೆಲೆಯೇರಿಕೆಗಳನ್ನು ಗಮನಿಸಿ ಈ ಮಾತು ಆಡಲಾಗುತ್ತಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ (Petrol price hike) ಏರಿಸಲಾಗಿದೆ; ಹಾಲು ದರವೂ (milk price hike) ಹೆಚ್ಚಿತು. ಮುಂದೆ ಕುಡಿಯವ ಕಾವೇರಿ ನೀರು (Kaveri Water Price hike) ಮತ್ತು ಆಲ್ಕೋಹಾಲ್‌ ದರಕ್ಕೂ (Liquor rates) ಸರಕಾರ ಕೈಹಾಕಲಿದೆ. ಶೀಘ್ರದಲ್ಲೇ ಟೀ- ಕಾಫಿ ರೇಟ್‌ ಏರಿಕೆಯೂ ಆಗಬಹುದು. ಮೆಡಿಕಲ್‌ ಸೀಟು ಶುಲ್ಕಗಳು ಹೆಚ್ಚಲಿವೆ, ಆಟೋ ದರ (Auto Fare) ಅಧಿಕವಾಗಲಿದೆ.

ಈಗ ಲೆಕ್ಕಾಚಾರ ತುಸು ನೋಡೋಣ. ಮೊದಲಿಗೆ ಸರಕಾರ ಏನು ಕೊಟ್ಟಿದೆ ಎಂಬ ಲೆಕ್ಕ.

ಗ್ಯಾರಂಟಿ ಯೋಜನೆಗಳು

ಗೃಹಲಕ್ಷ್ಮೀ – 2,000 ರೂ.
ಯುವನಿಧಿ – ಡಿಪ್ಲೊಮಾ 1500/- ಪದವೀಧರರಿಗೆ 3000/-
ಶಕ್ತಿಯೋಜನೆ – ಮಹಿಳೆಯರಿಗೆ ಸರ್ಕಾರಿ ಬಸ್​​ನಲ್ಲಿ ಉಚಿತ ಪ್ರಯಾಣ
ಅನ್ನಭಾಗ್ಯ – 5ಕೆಜಿ ಅಕ್ಕಿ & 170 ರೂಪಾಯಿ
ಗೃಹಜ್ಯೋತಿ – 200 ಯೂನಿಟ್​​ವರೆಗೆ ಉಚಿತ ವಿದ್ಯುತ್​​

ಇನ್ನು ಬೆಲೆ ಏರಿಕೆಗಳು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಪೆಟ್ರೋಲ್ – 3 ರೂಪಾಯಿ ಏರಿಕೆ
ಡೀಸೆಲ್ – 3.50 ರೂ. ಏರಿಕೆ
ಪೆಟ್ರೋಲ್ ಸದ್ಯದ ದರ – 103 ರೂ.
ಡೀಸೆಲ್ ಸದ್ಯದ ದರ – 89.20 ರೂ.
1 ದ್ವಿಚಕ್ರ ವಾಹನ – ದಿನಕ್ಕೆ 1 ಲೀಟರ್ ಬಳಕೆ
ತಿಂಗಳಿಗೆ ​ಬಳಕೆ ಸರಾಸರಿ ಹೆಚ್ಚಳ 30 ಲೀಟರ್​​ – ತಿಂಗಳಿಗೆ 100 ರೂ. ಹೆಚ್ಚಳ

ಹಾಲಿನ ದರ ಹೆಚ್ಚಳ

ಹಾಲಿನ ದರ – ವರ್ಷದಲ್ಲಿ 2 ಬಾರಿ ಏರಿಕೆ
ಮೊದಲು ಲೀಟರ್​​ಗೆ ಹೆಚ್ಚಾಗಿದ್ದು – 3 ರೂಪಾಯಿ
ಇದೀಗ ಲೀಟರ್​ಗೆ ಹೆಚ್ಚಾಗಿದ್ದು – 2 ರೂಪಾಯಿ
ಲೀಟರ್ ಹಾಲಿನ ಸದ್ಯದ ದರ – 44 ರೂ. (ನೀಲಿ ಪ್ಯಾಕೆಟ್)
1 ಕುಟುಂಬದಿಂದ ಹಾಲು ಬಳಕೆ – 1 ಲೀಟರ್
ತಿಂಗಳಿಗೆ ಕುಟುಂಬದಿಂದ ಬಳಕೆ – 30 ಲೀಟರ್
ಹಾಲಿನ ದರ ಹೆಚ್ಚಳದಿಂದ ಹೊರೆ – 150 ರೂ.

ತರಕಾರಿ ದರ ಏರಿಕೆ

ಹಣ್ಣು, ತರಕಾರಿ, ಸೊಪ್ಪು ಬೆಲೆ ನಿರಂತರ ಏರಿಕೆ
ಹಣ್ಣು, ತರಕಾರಿ ಏರಿಕೆಯಿಂದ ಹೆಚ್ಚುವರಿ ಹೊರೆ
ಟ್ರಾನ್ಸ್​ಪೋರ್ಟ್ ಚಾರ್ಜಸ್ ಸೇರಿ ವಿವಿಧ ಚಾರ್ಜಸ್
ಪ್ರತಿ ತಿಂಗಳಿಗೆ ಜನರಿಗೆ ಅಂದಾಜು 500 ರೂ. ಹೊರೆ

ದಿನಸಿ ವಸ್ತುಗಳ ಬೆಲೆ ಏರಿಕೆ

ದಿನಸಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆ
ಅಕ್ಕಿ, ಬೇಳೆ, ಡಿಟರ್ಜೆಂಟ್​​ ಸೇರಿ ವಸ್ತುಗಳ ಬೆಲೆ ಗಗನಕ್ಕೆ
ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆ
ತಿಂಗಳಿಗೆ ಅಂದಾಜು 700 ರೂಪಾಯಿಯಷ್ಟು ಜನರಿಗೆ ಹೊರೆ

ಮಾಂಸಪ್ರಿಯರಿಗೂ ಶಾಕ್

ರಾಜ್ಯದಲ್ಲಿ ಮಾಂಸದ ಬೆಲೆಯಲ್ಲೂ ಹೆಚ್ಚಳ
ಮಾಂಸದ ಬೆಲೆ ಹೆಚ್ಚಳದಿಂದ ಹೆಚ್ಚುವರಿ ಹೊರೆ
ಜನರಿಗೆ ತಿಂಗಳಿಗೆ ಅಂದಾಜು 300 ರೂಪಾಯಿ ಹೆಚ್ಚಳ

ಮದ್ಯಪ್ರಿಯರಿಗೆ ಬಿಗ್ ಶಾಕ್

2023ರ ಜುಲೈನಲ್ಲಿ ಬಿಯರ್ 10%, ಮದ್ಯ 20% ಏರಿಕೆ
3 ತಿಂಗಳ ಹಿಂದೆ ಬಿಯರ್ 10%, ಮದ್ಯ 25% ದರ ಹೆಚ್ಚಳ
ಜುಲೈ 1ರಿಂದ ಮತ್ತೆ ಅಬಕಾರಿ ದರ ಹೆಚ್ಚಳಕ್ಕೆ ನಿರ್ಧಾರ?

ವಾಣಿಜ್ಯ ವಿದ್ಯುತ್ ಬಳಕೆದಾರರಿಗೆ ಶಾಕ್!?

ಉಚಿತ ವಿದ್ಯುತ್​ ಮಧ್ಯೆಯೂ ವಾಣಿಜ್ಯ ಬಳಕೆ ವಿದ್ಯುತ್​ ದರ ಏರಿಕೆ
ಕೈಗಾರಿಕೆ ಸೇರಿ ವಾಣಿಜ್ಯ ಬಳಕೆಯ ವಿದ್ಯುತ್​ ದರ ಹೆಚ್ಚಳ
ವಿದ್ಯುತ್ ದರ ಹೆಚ್ಚಳದಿಂದ ವಸ್ತುಗಳ ಮೇಲೆ ಪರಿಣಾಮ
ಅಂದಾಜು 300 ರೂಪಾಯಿಯಷ್ಟು ಹೊರೆ ಬೀಳುವ ಸಾಧ್ಯತೆ

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್?

ಉಚಿತ ಪ್ರಯಾಣದ ನಡುವೆ ಬಸ್ ಟಿಕೆಟ್ ದರ ಏರಿಕೆ ಚಿಂತನೆ
ಗಂಡಸರ ಪ್ರಯಾಣದ ದರ ಹೆಚ್ಚಿಸಲು ಸರ್ಕಾರದ ಚಿಂತನೆ
ಶೀಘ್ರದಲ್ಲೇ ಸರ್ಕಾರಿ ಬಸ್​ಗಳ ಪ್ರಯಾಣದ ದರ ಏರಿಕೆ ಸಾಧ್ಯತೆ
ಖಾಸಗಿ ಬಸ್‌ಗಳ ದರವೂ ದುಬಾರಿಯಾಗುವ ಸಾಧ್ಯತೆ
ಟಿಕೆಟ್ ದರ ಏರಿಕೆಯಿಂದ ಪ್ರತಿ ಕುಟುಂಬಕ್ಕೂ ಹೆಚ್ಚುವರಿ ಹೊರೆ
1 ಕುಟುಂಬಕ್ಕೆ ಅಂದಾಜು 200 ರೂಪಾಯಿಯಷ್ಟು ಹೆಚ್ಚು ಹೊರೆ

ಜನರಿಗೆ ಜಲ‘ಶಾಕ್’!
ರಾಜ್ಯದ ಹಲವು ಕಡೆ ಕುಡಿಯುವ ನೀರಿನ ಸಮಸ್ಯೆ
ಹೆಚ್ಚು ಟ್ಯಾಂಕರ್ ನೀರು ಅವಲಂಬಿಸಿರುವ ಜನರು
ಟ್ಯಾಂಕರ್​ ಮೂಲಕ ನೀರು ತರಿಸಿಕೊಳ್ತಿರುವ ಜನರು
ಒಂದು ಟ್ಯಾಂಕರ್​​ ನೀರಿನ ಬೆಲೆ ಸುಮಾರು ₹2000

ತಿಂಗಳಿಗೆ 1 ಕುಟುಂಬಕ್ಕೆ ಅಂದಾಜು ಹೊರೆ

ಹಾಲು 30 ಲೀಟರ್ ಬಳಕೆ – 150 ರೂ.
ಪೆಟ್ರೋಲ್, ಡೀಸೆಲ್ 30 ಲೀ. – 90 ರೂ.
ತರಕಾರಿ – 500 ರೂಪಾಯಿ
ಮದ್ಯ – 500 ರೂಪಾಯಿ
ವಿದ್ಯುತ್ ವಾಣಿಜ್ಯ ಬಳಕೆ – 300 ರೂ.
ಬಸ್ ಟಿಕೆಟ್ ದರ – 200 ರೂ.
ದಿನಸಿ – 700 ರೂ.
ಮಾಂಸ – 300 ರೂ.
ಟ್ಯಾಂಕರ್ ನೀರು – 2,000 ರೂ.
ಒಟ್ಟು ಅಂದಾಜು ಹೊರೆ – 4740

ವರ್ಷಕ್ಕೆ ಎಷ್ಟು ಹೊರೆ?

ಪ್ರತಿ 1 ಕುಟುಂಬಕ್ಕೆ ತಿಂಗಳಿಗೆ 4740 ರೂ. ಅಧಿಕ ಹೊರೆ
ಪ್ರತಿ 1 ಕುಟುಂಬಕ್ಕೆ ವರ್ಷಕ್ಕೆ 56,880 ರೂ. ಅಧಿಕ ಹೊರೆ

ವರ್ಷಕ್ಕೆ ಎಷ್ಟು ಹೆಚ್ಚುವರಿ ಹೊರೆ?

ಕುಟುಂಬಕ್ಕೆ ಸರ್ಕಾರ ಕೊಡೋದು ವರ್ಷಕ್ಕೆ 24 ಸಾವಿರಕ್ಕೂ ಹೆಚ್ಚು
ಆದರೆ ಪ್ರತಿ 1 ಕುಟುಂಬಕ್ಕೆ ವರ್ಷಕ್ಕೆ 56,880 ರೂ. ಹೊರೆ
ಸರ್ಕಾರ ಕೊಟ್ಟ 24 ಸಾವಿರ ಬಿಟ್ಟರೆ 32,880 ರೂ. ಹೆಚ್ಚುವರಿ ಹೊರೆ
ಪ್ರತಿ 1 ಕುಟುಂಬಕ್ಕೆ ತಿಂಗಳಿಗೆ 4740 ರೂ. ಅಧಿಕ ಹೊರೆ
ಸರ್ಕಾರ ಕೊಡುವ 2 ಸಾವಿರ ಹೊರತುಪಡಿಸಿದರೆ 2740 ರೂ. ಹೆಚ್ಚುವರಿ ಹೊರೆ

ಇದನ್ನೂ ಓದಿ: CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Continue Reading

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading
Advertisement
Satsang programme on 5th July in Bengaluru
ಬೆಂಗಳೂರು10 mins ago

Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

Hassan News Distribution of free notebook bag to government primary schools in Alur
ಹಾಸನ12 mins ago

Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

To complete pending railway projects in the state former MP DK Suresh appeals central government
ಬೆಂಗಳೂರು13 mins ago

DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

ದೇಶ22 mins ago

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೆ ಒಲಿದ ಸಿಎಂ ಪಟ್ಟ; ಜು.7ರಂದು ಪ್ರಮಾಣ ವಚನ- ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌

drivers protest
ಪ್ರಮುಖ ಸುದ್ದಿ32 mins ago

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

Viral News
ವೈರಲ್ ನ್ಯೂಸ್54 mins ago

Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

Chikkaballapura News
ಚಿಕ್ಕಬಳ್ಳಾಪುರ1 hour ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

Team India
ಕ್ರೀಡೆ1 hour ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Bhole Baba
Latest1 hour ago

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Team India victory parade
ಪ್ರಮುಖ ಸುದ್ದಿ1 hour ago

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Chikkaballapura News
ಚಿಕ್ಕಬಳ್ಳಾಪುರ1 hour ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ3 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ4 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಟ್ರೆಂಡಿಂಗ್‌