ವಿಸ್ತಾರ Explainer | ಕಾಂಗ್ರೆಸ್‌ ಕೊರಳಿಗೆ ಮತ್ತೆ ಸುತ್ತಿಕೊಂಡಿದೆ ನ್ಯಾಷನಲ್‌ ಹೆರಾಲ್ಡ್‌ ಉರುಳು! - Vistara News

EXPLAINER

ವಿಸ್ತಾರ Explainer | ಕಾಂಗ್ರೆಸ್‌ ಕೊರಳಿಗೆ ಮತ್ತೆ ಸುತ್ತಿಕೊಂಡಿದೆ ನ್ಯಾಷನಲ್‌ ಹೆರಾಲ್ಡ್‌ ಉರುಳು!

ನ್ಯಾಷನಲ್ ಹೆರಾಲ್ಡ್ ಅಕ್ರಮ ಪ್ರಕರಣದಲ್ಲಿ ಇ.ಡಿ ತನಿಖೆಗೆ ರಾಹುಲ್‌ ಗಾಂಧಿ ಹಾಜರಾಗಿದ್ದಾರೆ. ಸೋನಿಯಾ ಗಾಂಧಿ ಹಾಜರಾಗಬೇಕಿದೆ. ಏನಿದು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ? ಇಲ್ಲಿದೆ ಫುಲ್ ಡಿಟೇಲ್ಸ್.

VISTARANEWS.COM


on

national herald
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹರೀಶ್ ಕೇರ
ನ್ಯಾಷನಲ್‌ ಹೆರಾಲ್ಡ್‌
ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹವಾಲಾ ಹಣದ ವಹಿವಾಟಿನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ತನಿಖೆಗೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಜರಾಗಿದ್ದಾರೆ. ಅವರ ವಿಚಾರಣೆ ನಡೆಯುತ್ತಿದೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ವಿಚಾರಣೆಗೆ ಸಮನ್ಸ್‌ ನೀಡಲಾಗಿದೆ. ಆದರೆ ಸೋನಿಯಾ ಅವರು ಕೋವಿಡ್‌ ಪೀಡಿತರಾಗಿ ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಸದ್ಯಕ್ಕೆ ಇ.ಡಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮುಂತಾದವರನ್ನು ಈಗಾಗಲೇ ವಿಚಾರಣೆ ಮಾಡಲಾಗಿದೆ. ಕಾಂಗ್ರೆಸ್‌ ಮುಖಂಡರನ್ನು ಟಾರ್ಗೆಟ್‌ ಮಾಡಲಾಗ್ತಾ ಇದೆ ಅಂತ ಆರೋಪಿಸಿ ಕಾಂಗ್ರೆಸ್‌ ಅಭಿಯಾನ ನಡೆಸಲು ಆರಂಭಿಸಿದೆ. ಪ್ರತಿಭಟನೆಯಲ್ಲಿ ತೊಡಗಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಹಾಗಿದ್ದರೆ ಈ ತನಿಖೆಯಲ್ಲಿ ಹುರುಳಿಲ್ವಾ? ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ ಪಾತ್ರ ಎಷ್ಟಿದೆ? ಕಾಂಗ್ರೆಸ್‌ನ ಬೇರೆ ಮುಖಂಡರ ಪಾತ್ರ ಎಷ್ಟಿದೆ? ಒಂದೊಂದಾಗಿ ನೋಡೋಣ.

ಏನಿದು ನ್ಯಾಷನಲ್‌ ಹೆರಾಲ್ಡ್?‌

ನ್ಯಾಷನಲ್‌ ಹೆರಾಲ್ಡ್‌ ಎಂಬುದೊಂದು ದಿನಪತ್ರಿಕೆ. ಇದನ್ನು ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ (ಎಜೆಲ್‌) ಪ್ರಕಟಣೆ ಮಾಡುತ್ತಿದೆ. ಇದರ ಮಾಲೀಕತ್ವ ಇರುವುದು ಯಂಗ್‌ ಇಂಡಿಯನ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಸಂಸ್ಥೆಯ ಬಳಿ. ಈ ಯಂಗ್‌ ಇಂಡಿಯನ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಹಿನ್ನೆಲೆಯಲ್ಲಿ ರಾಷ್ಟ್ರ ಪಕ್ಷವಾದ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ಇದೆ.

ಸ್ವಾತಂತ್ರ್ಯಪೂರ್ವದಲ್ಲಿಯೇ ಈ ಪತ್ರಿಕೆ ಹುಟ್ಟಿಕೊಂಡಿತ್ತು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಉತ್ತೇಜನ ನೀಡುವುದು ಇದರ ಮೂಲ ಉದ್ದೇಶವಾಗಿತ್ತು. 1938ನೇ ಇಸವಿಯಲ್ಲಿ ಜವಾಹರಲಾಲ್ ನೆಹರೂ ಅವರು ಇದನ್ನು ಹುಟ್ಟುಹಾಕಿದರು. ಪ್ರಧಾನಿಯಾಗುವರೆಗೂ ಅವರೇ ಪತ್ರಿಕೆಯ ಸಂಪಾದಕ ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು. ಅಸೋಷಿಯೇಟೆಡ್ ಜರ್ನಲ್ಸ್ ಲಿ. (ಎಜೆಎಲ್) ಈ ಪತ್ರಿಕೆಯನ್ನು ಮುದ್ರಿಸುತ್ತಿತ್ತು. ಐದು ಸಾವಿರ ಸ್ವಾತಂತ್ರ್ಯ ಹೋರಾಟಗಾರರು ಈ ಎಜೆಎಲ್‌ನ ಪಾಲುದಾರರಾಗಿದ್ದರು. ಇಂಗ್ಲೀಷ್‌ನಲ್ಲಿ ನ್ಯಾಷನಲ್ ಹೆರಾಲ್ಡ್, ಹಿಂದಿಯಲ್ಲಿ ನವಜೀವನ್ ಮತ್ತು ಉರ್ದು ಭಾಷೆಯಲ್ಲಿ ಖ್ವಾಮಿ ಪತ್ರಿಕೆಗಳನ್ನು ಮುದ್ರಿಸಲಾಗುತ್ತಿತ್ತು.

ನೆಹರೂ ಅವರ ಬಳಿಕ ಕೆ. ರಾಮ್ ರಾವ್ ಅವರು ಪತ್ರಿಕೆಯ ಮೊದಲ ಸಂಪಾದಕರಾದರು. ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಬ್ರಿಟಿಷ್ ಸರಕಾರ ಎಲ್ಲ ಪತ್ರಿಕೆಗಳ ಮೇಲೆ ನಿರ್ಬಂಧ ಹೇರಿತು. 1942ರಿಂದ 1945ರವರೆಗೆ ಪತ್ರಿಕೆ ಪ್ರಕಟವಾಗಲಿಲ್ಲ. ಫಿರೋಜ್ ಗಾಂಧಿ ಅವರು ಈ ಪತ್ರಿಕೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದರು. ನಂತರ, 1946ರಿಂದ 78ರವರೆಗೆ ಮಣಿಕೊಂಡ ಚಲಪತಿ ರಾಜು ಅವರು ಸಂಪಾದಕರಾಗಿದ್ದರು. ರಾಜು ಅವರ ಕಾಲದಲ್ಲಿ ನ್ಯಾಷನಲ್ ಹೆರಾಲ್ಡ್ ಸಾಕಷ್ಟು ಜನಪ್ರಿಯತೆ ಪಡೆದಿತ್ತು. ನೆಹರೂ ತಮ್ಮ ಅಭಿಪ್ರಾಯಗಳನ್ನು ಪಸರಿಸಲು ಈ ಪತ್ರಿಕೆಯನ್ನು ಬಳಸಿಕೊಳ್ಳುತ್ತಿದ್ದರು. ಲಖನೌ ಮತ್ತು ನವದೆಹಲಿಯಿಂದ ಪತ್ರಿಕೆ ಪ್ರಕಟವಾಗುತ್ತಿತ್ತು.

national herald
ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ

ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಪತ್ರಿಕೆ ಚೆನ್ನಾಗಿ ಬರುತ್ತಿತ್ತು. ಕಾಂಗ್ರೆಸ್‌ಗೆ ಕಷ್ಟ ಒದಗಿದಾಗ ಅದೂ ಕಷ್ಟದಲ್ಲಿರುತ್ತಿತ್ತು. ಇಂದಿರಾ ಗಾಂಧಿ 1977ರಲ್ಲಿ ಚುನಾವಣೆಯಲ್ಲಿ ಸೋತ ನಂತರ ಎರಡು ವರ್ಷ ಪತ್ರಿಕೆ ಪ್ರಕಟವಾಗಿರಲಿಲ್ಲ. ರಾಜೀವ್ ಗಾಂಧಿ ಮತ್ತೆ ಪತ್ರಿಕೆ ಪ್ರಕಟವಾಗುವಂತೆ ನೋಡಿಕೊಂಡರು. 1998ರಲ್ಲಿ ಲಖನೌನಲ್ಲಿದ್ದ ಕಚೇರಿಯನ್ನು ಸಾಲದಿಂದಾಗಿ ಮುಚ್ಚಲಾಯಿತು. 2008ರ ಹೊತ್ತಿಗೆ ಆದಾಯ ಇಲ್ಲದುದರಿಂದಾಗಿ ಪತ್ರಿಕೆ ಸಂಪೂರ್ಣ ಸ್ಥಗಿತವಾಯಿತು.

2010ರಲ್ಲಿ ಯಂಗ್‌ ಇಂಡಿಯಾ ಕಂಪನಿ ಸ್ಥಾಪನೆಯಾಯಿತು. ಇದರಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಪಾಲು ಶೇ. 7.6ರಷ್ಟಿದೆ. ಉಳಿದ ಪಾಲು ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಅವರ ಬಳಿ ಇತ್ತು. ಎಜೆಎಲ್ ಸಂಸ್ಥೆಯನ್ನು ಯಂಗ್ ಇಂಡಿಯಾ 2010ರಲ್ಲಿ ಖರೀದಿಸಿತು. ಆಗ ಎಜೆಎಲ್‌ನಲ್ಲಿ 1057 ಷೇರುದಾರರು ಇದ್ದರು. ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ಮತ್ತು ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಮೊದಲಾದವರು ಷೇರುದಾರರಾಗಿದ್ದರು. 2010ರಲ್ಲಿ ಎಜೆಎಲ್‌ನ ಎಲ್ಲಾ ಷೇರುಗಳನ್ನು ಯಂಗ್ ಇಂಡಿಯಾಗೆ ವರ್ಗಾವಣೆ ಮಾಡಲಾಯಿತು. ಈ ಬಗ್ಗೆ ಎಜೆಎಲ್ ಷೇರುದಾರರ ಅನುಮತಿಯನ್ನು ಪಡೆದಿರಲಿಲ್ಲ. ಈಗಲೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲಿಕತ್ವ ಯಂಗ್ ಇಂಡಿಯಾ ಕಂಪನಿಗೆ ಸೇರಿದೆ.

ಮಾರಾಟ ಹಾಗೂ ಸುಬ್ರಮಣಿಯನ್‌ ಸ್ವಾಮಿ ದೂರು

2010ರ ಡಿಸೆಂಬರ್ 16ರಂದು ಎಜೆಎಲ್ ಸುಮಾರು 90.1 ಕೋಟಿ ರೂ. ಸಾಲ ಹೊಂದಿತ್ತು. ಆಗ ಕಾಂಗ್ರೆಸ್ ಪಕ್ಷ 90.25 ಕೋಟಿ ರೂ. ಸಾಲವನ್ನು ಎಜೆಎಲ್‌ಗೆ ನೀಡಿತು. ಆದರೆ, ಈ ಹಣ ವಸೂಲಿ ಮಾಡುವ ಅಧಿಕಾರವನ್ನು ಯಂಗ್ ಇಂಡಿಯಾಗೆ ನೀಡಲಾಗಿತ್ತು. ಯಂಗ್ ಇಂಡಿಯಾದ ಮಾಲೀಕತ್ವಕ್ಕೆ ಎಜೆಎಲ್ ಒಳಪಡಬೇಕಾಯಿತು. ಎಜೆಎಲ್‌ನ ಶೇ. 99.99ರಷ್ಟು ಷೇರುಗಳು ಯಂಗ್ ಇಂಡಿಯಾಗೆ ವರ್ಗಾವಣೆ ಆದವು. 2010ರ ಡಿಸೆಂಬರ್ 13ರಂದು ಯಂಗ್ ಇಂಡಿಯಾದ ಮೊದಲ ಆಡಳಿತ ಮಂಡಳಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ನಿರ್ದೇಶಕರಾಗಿ ನೇಮಕ ಮಾಡಲಾಯಿತು. ಎಜೆಎಲ್‌ನ ಎಲ್ಲಾ ಷೇರುಗಳನ್ನು ಖರೀದಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ರತನ್ ದೀಪ್ ಟ್ರಸ್ಟ್ ಮತ್ತು ಜನಹಿತ್ ನಿಧಿ ಟ್ರಸ್ಟ್ ಮೂಲಕ ಹೆಚ್ಚುವರಿ ಷೇರುಗಳನ್ನು ಖರೀದಿ ಮಾಡಿದ್ದರು.

ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2012ರಲ್ಲಿ ನ್ಯಾಷನಲ್ ಹೆರಾಲ್ಡ್ ಹಗರಣ ಸಂಬಂಧ ಕ್ರಿಮಿನಲ್ ದೂರು ದಾಖಲಿಸಿದರು. ಅಕ್ರಮ ರೀತಿಯಲ್ಲಿ ಎಜೆಎಲ್ ಅನ್ನು ಖರೀದಿ ಮಾಡಲಾಗಿದ್ದು, ಅಕ್ರಮವಾಗಿ ಷೇರುಗಳನ್ನು ವರ್ಗಾಯಿಸಲಾಗಿದೆ ಎಂದು ಸ್ವಾಮಿ ಆರೋಪಿಸಿದರು. ಈ ಕುರಿತು ಸಿಬಿಐ ತನಿಖೆ ಕೈಗೆತ್ತಿಕೊಂಡಿತು. ಇದರಲ್ಲಿ ಹವಾಲಾ ಹಣದ ವಹಿವಾಟು ನಡೆದಿದೆ ಎಂಬ ಅನುಮಾನ ವ್ಯಕ್ತವಾದದ್ದರಿಂದ, ಜಾರಿ ನಿರ್ದೇಶನಾಲಯ ಇದರ ತನಿಖೆಗೆ ಮುಂದಾಯಿತು. 2015ರಲ್ಲಿ ಪ್ರಕರಣ ಮುಂದುವರಿಸುವಂತೆ ಸುಬ್ರಮಣಿಯನ್ ಸ್ವಾಮಿಗೆ ಸುಪ್ರೀಂ ಕೋರ್ಟ್ ತಿಳಿಸಿತು. ಸುಬ್ರಮಣಿಯನ್ ಸ್ವಾಮಿ ನೀಡಿದ ದೂರಿನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಾತ್ರವಲ್ಲದೆ ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸ್ಯಾಮ್‌ ಪಿತ್ರೋಡ ಹಾಗೂ ಪತ್ರಕರ್ತ ಸುಮನ್ ದುಬೆ ಹೆಸರುಗಳೂ ಇವೆ.

ಗಾಂಧಿಗಳಿಗೆ ಜಾಮೀನು…

ಈ ಪ್ರಕರಣಕ್ಕೆ ಸಂಬಂಧಿಸಿದ ತಮ್ಮ ಬಂಧನವಾಗದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಜಾಮೀನು ಪಡೆದಿದ್ದಾರೆ. 2015ರಲ್ಲಿ ಇವರಿಬ್ಬರಿಗೂ ಪಟಿಯಾಲ ಹೌಸ್ ನ್ಯಾಯಾಲಯ ಜಾಮೀನು ನೀಡಿತು. 2016ರಲ್ಲಿ ಪ್ರಕರಣ ರದ್ದು ಮಾಡುವಂತೆ ಕೋರಿ ಇವರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದರು. ಆದರೆ ಇದನ್ನು ಸುಪ್ರೀಂ ತಿರಸ್ಕರಿಸಿತು. ಕೋರ್ಟ್ ಕಲಾಪದಲ್ಲಿ ವ್ಯಕ್ತಿಗತವಾಗಿ ಹಾಜರಾಗುವುದರಿಂದ ಈ ಆರೋಪಿಗೆಳಿಗೆಲ್ಲ ವಿನಾಯಿತಿ ನೀಡಲಾಯಿತು.

ಇದನ್ನೂ ಓದಿ | ರಾಹುಲ್‌ ಗಾಂಧಿ ʼಪಪ್ಪುʼ ಎಂದ ಯುವ ಕಾಂಗ್ರೆಸ್‌!

2000 ಕೋಟಿ ರೂಪಾಯಿ ಹಗರಣ ಹೇಗೆ?

ವಿವಿಧ ಭಾಷೆಗಳಲ್ಲಿ ಪತ್ರಿಕೆ ನಡೆಸುವ ಷರತ್ತಿನ ಮೇರೆಗೆ 1962ರಲ್ಲಿ ಎಜೆಎಲ್‌ಗೆ ಬೆಲೆಬಾಳುವ ಭೂಮಿಯನ್ನು ಗುತ್ತಿಗೆಗೆ ನೀಡಲಾಗಿತ್ತು. ಹೆರಾಲ್ಡ್ ಹೌಸ್ ಕಟ್ಟಡ ಇಲ್ಲಿದೆ. ಆದರೆ ಮೂರು ಪತ್ರಿಕೆಗಳು ನಿಂತುಹೋಗಿ ಬಹು ಕಾಲವೇ ಆಗಿದೆ. ಪತ್ರಿಕೆ ನಿಂತಿದ್ದರೂ ಎಜೆಎಲ್ ಸುಪರ್ದಿಯಲ್ಲಿ ಜಮೀನು ಇರುವುದು ಅಕ್ರಮ ಎಂಬುದು ಸುಬ್ರಮಣಿಯನ್ ಸ್ವಾಮಿ ಆರೋಪ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇರುವ ಜಾಗದ ಮೌಲ್ಯ ಈಗ ಎರಡು ಸಾವಿರ ಕೋಟಿ ರೂ ಇದೆ. 2018ರಲ್ಲಿ ಈ ಜಾಗಕ್ಕೆ 56 ವರ್ಷಗಳಿಂದ ನೀಡಲಾಗಿದ್ದ ಲೀಸ್ ಅನ್ನು ಕೇಂದ್ರ ಸರಕಾರ ರದ್ದುಪಡಿಸಿತು. ಘೋಷಿತ ಉದ್ದೇಶದಂತೆ ಪತ್ರಿಕೆ ಮುದ್ರಣ ಆಗುತ್ತಿಲ್ಲದಿರುವುದರಿಂದ ಲೀಸ್ ಅಂತ್ಯಗೊಳಿಸಿದೆ ಎನ್ನಲಾಯಿತು. ನವದೆಹಲಿಯ ಲ್ಯಾಂಡ್ ಆಂಡ್ ಡೆವಲಪ್ಮೆಂಟ್ ಪ್ರಾಧಿಕಾರ ಈ ಜಮೀನನ್ನು ಹಿಡಿತಕ್ಕೆ ಪಡೆಯಲು ಪ್ರಯತ್ನಿಸಿತು. ಸ್ಥಳ ತೆರವು ಮಾಡಿ ಜಮೀನು ಹಸ್ತಾಂತರ ಮಾಡುವಂತೆ ಎಜೆಎಲ್‌ಗೆ ಆದೇಶ ನೀಡಲಾಯಿತು. ಆದರೆ 2019ರಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ, ಎಜೆಎಲ್ ವಿರುದ್ಧ ಮುಂದಿನ ಸೂಚನೆ ಬರುವವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ತಡೆ ನೀಡಿತು.

ಹಲವು ಹಂತಗಳಲ್ಲಿ ಅಕ್ರಮ

ಎಜೆಎಲ್‌ ಸಂಸ್ಥೆಗೆ ಕಾಂಗ್ರೆಸ್‌ ಈ ಹಿಂದೆ ನೀಡಿದ್ದ ಸಾಲವೇ ಅಕ್ರಮ. ಕಾಂಗ್ರೆಸ್‌ ಒಂದು ರಾಜಕೀಯ ಪಕ್ಷ. ಅದು ದೇಣಿಗೆ ಸ್ವೀಕರಿಸಬಹುದೇ ಹೊರತು, ಅದು ಬೇರೊಂದು ಸಂಸ್ಥೆಗೆ ಹಣ ಸಾಲ ನೀಡುವುದು ಹೇಗೆ ಸಾಧ್ಯ ಎಂಬುದು ಸುಬ್ರಮಣಿಯನ್‌ ಸ್ವಾಮಿ ಅವರ ಪ್ರಶ್ನೆ. ಸ್ವಾಮಿ ಅವರ ಪ್ರಕಾರ ಇಲ್ಲಿ ಅಕ್ರಮ ಹಲವು ಹಂತಗಳಲ್ಲಿ ನಡೆದಿದೆ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು ನಡೆಸುತ್ತಿದ್ದ ಎಜೆಎಲ್‌ ಹಣದ ಸಂಕಷ್ಟದಲ್ಲಿದ್ದಾಗ ಹಣಸಹಾಯ ಮಾಡಿದಂತೆ ಕಾಂಗ್ರೆಸ್‌ ತೋರಿಸಿಕೊಂಡಿದೆ. ಬಳಿಕ, ಈ ಸಾಲವನ್ನು ಮರುಪಾವತಿ ಮಾಡಿಸಿಕೊಳ್ಳುವುದಕ್ಕಾಗಿ, ಎಜೆಎಲ್‌ ಸಂಸ್ಥೆಯನ್ನೇ ಖರೀದಿಸಿದೆ. ಈ ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿಲ್ಲ. ಷೇರುದಾರರಿಗೆಲ್ಲ ಈ ಬಗ್ಗೆ ಮಾಹಿತಿ ನೀಡಲಾಗಿಲ್ಲ. ಎಷ್ಟು ಸಾಲವಿದೆ, ಎಷ್ಟು ಪಾವತಿ ಮಾಡಬೇಕಿದೆ, ಎಂಬುದರ ಬಗ್ಗೆ ಪಾರದರ್ಶಕತೆ ಇಲ್ಲ.

ಮಾತ್ರವಲ್ಲ ಈ ಮರುಪಾವತಿ ಪಡೆಯಬೇಕಾದ ಹೊಣೆಯನ್ನು ಇದ್ದಕ್ಕಿದ್ದಂತೆ (2015) ಯಂಗ್‌ ಇಂಡಿಯಾ ಎಂಬ ಸಂಸ್ಥೆಯನ್ನು ಸೃಷ್ಟಿ ಮಾಡಿ, ಅದಕ್ಕೆ ವಹಿಸಲಾಗುತ್ತದೆ. ಈ ಸಂಸ್ಥೆಯ ಸಂಪೂರ್ಣ ಮಾಲಿಕತ್ವ ಇದ್ದುದು ಸೋನಿಯಾ ಹಾಗೂ ರಾಹುಲ್‌ ಗಾಂಧಿ ಅವರ ಬಳಿ, ಇವರ ಬಳಿಯೇ ಈ ಸಂಸ್ಥೆಯ ಒಟ್ಟಾರೆ 76% ಷೇರುಗಳು ಇದ್ದವು. ಈ ಸಂಸ್ಥೆ ಎಜೆಎಲ್‌ ಅನ್ನು ಖರೀದಿಸುತ್ತದೆ. ಇದ್ದಕ್ಕಿದ್ದಂತೆ ಸೃಷ್ಟಿಯಾದ ಈ ಸಂಸ್ಥೆ ಯಾವುದೇ ಹಕ್ಕುಬಾಧ್ಯತೆಯೂ ಇಲ್ಲದೇ ಕೋಟ್ಯಂತರ ರೂಪಾಯಿ ಮೌಲ್ಯ ಹೊಂದಿರುವ ಸಂಸ್ಥೆಯೊಂದನ್ನು ಖರೀದಿಸಲು ಹೇಗೆ ಸಾಧ್ಯ? ಕಾಂಗ್ರೆಸ್‌ ನೀಡಿದ ಸಾಲದ ಮೊತ್ತ 100 ಕೋಟಿ ರೂ.ಗಳಿಗಿಂತಲೂ ಕಡಿಮೆ. ಆದರೆ ಎಜೆಎಲ್‌ ಮಾಲೀಕತ್ವದಲ್ಲಿ ಹೆರಾಲ್ಡ್‌ ಕಟ್ಟಡ ಸೇರಿದಂತೆ ಸಾವಿರಾರು ಕೋಟಿ ರೂಪಾಯಿ ಬೆಲೆಬಾಳುವ ಜಮೀನು ಮತ್ತಿತರ ಆಸ್ತಿಪಾಸ್ತಿಗಳಿದ್ದವು. ದೆಹಲಿ ಸೇರಿದಂತೆ ನಾನಾ ಕಡೆ ಆಸ್ತಿಗಳನ್ನು ಹೊಂದಲಾಗಿತ್ತು. ಈ ಆಸ್ತಿಗಳ ಒಟ್ಟಾರೆ ಮೌಲ್ಯ 5000 ಕೋಟಿ ರೂ.ಗಳನ್ನೂ ಮೀರಬಹುದು. ಈ ಆಸ್ತಿಗಳಲ್ಲಿ ಯಂಗ್‌ ಇಂಡಿಯಾ ವಾಣಿಜ್ಯ ವಹಿವಾಟು ನಡೆಸುತ್ತಿದೆ. ಆದ್ದರಿಂದ ಇದರಲ್ಲಿ ದೊಡ್ಡದೊಂದು ಅವ್ಯವಹಾರವೇ ನಡೆದಿದೆ. ಇದರಲ್ಲಿ ಸ್ವಾತಂತ್ರ್ಯ ಹೋರಾಟಗಾರರೂ ಸೇರಿದಂತೆ ದೇಶದ ಸಾವಿರಾರು ಮಂದಿಯ ಷೇರುಗಳಿವೆ. ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದರಿಂದ ದೇಶದ ಬೊಕ್ಕಸಕ್ಕೆ ಭಾರಿ ಪ್ರಮಾಣದ ತೆರಿಗೆ ವಂಚನೆಯೂ ಆಗಿದೆ- ಇದು ಸುಬ್ರಮಣಿಯನ್‌ ಸ್ವಾಮಿ ಅವರ ವಾದದ ತಿರುಳು.

ಕಾಂಗ್ರೆಸ್‌ ಏನು ಹೇಳುತ್ತದೆ?

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ವಾಸ್ತವವಾಗಿ ಯಾವುದೇ ಹಣದ ಅವ್ಯವಹಾರ ನಡೆದಿಲ್ಲ. ಎಜೆಎಲ್‌ ಎಂಬುದು ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದ ಸಂಸ್ಥೆಯಲ್ಲ. ಬದಲಾಗಿ ಅದು ಸಮಾಜ ಸೇವಾ ಕಾರ್ಯಗಳಿಗಾಗಿ ನಡೆಸುತ್ತಿದ್ದ ಸಂಸ್ಥೆ. ಹೀಗಾಗಿ ಅದೊಂದು ಲಾಭರಹಿತ ಸಂಸ್ಥೆಯಾಗಿತ್ತು. ಅದರ ಹೆಸರಿನಲ್ಲಿರುವ ಜಮೀನುಗಳು ಗುತ್ತಿಗೆ ಆಧಾರದಲ್ಲಿವೆ ಹೊರತು ಸ್ವಂತ ಆಸ್ತಿಗಳಲ್ಲ. ಅವೆಲ್ಲವೂ ಕಾಂಗ್ರೆಸ್‌ಗೆ ಸೇರಿವೆ. ಸುಬ್ರಮಣಿಯನ್‌ ಸ್ವಾಮಿ ಅವರು ರಾಜಕೀಯ ದ್ವೇಷದ, ಸೇಡಿನ ಕ್ರಮವಾಗಿ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡ, ಕಾಂಗ್ರೆಸ್‌ ಮುಖಂಡರನ್ನು ಮಣಿಸಬೇಕು ಎಂಬ ಸನ್ನಿವೇಶ ಸೃಷ್ಟಿಯಾದಾಗಲೆಲ್ಲ ಈ ಪ್ರಕರಣವನ್ನು ಬಳಸಿಕೊಳ್ಳುತ್ತದೆ. ಈಗ 2024ರ ಲೋಕಸಭೆ ಚುನಾವಣೆ ತಯಾರಿಗಾಗಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಓಡಾಡುತ್ತಿದ್ದಾರೆ. ಅವರನ್ನು ಮಣಿಸಲು, ಅವರ ಗಣನೀಯ ಸಮಯವೆಲ್ಲ ಈ ಪ್ರಕರಣದಲ್ಲಿ ವ್ಯರ್ಥವಾಗುವಂತೆ ನೋಡಿಕೊಳ್ಳಲು ಸುಬ್ರಮಣಿಯನ್‌ ಸ್ವಾಮಿಯನ್ನು ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ವಾದಿಸಿದೆ.

national herald
ಇಡಿ ವಿಚಾರಣೆಗೆ ಹಾಜರಾಗುತ್ತಿರುವ ರಾಹುಲ್‌ ಗಾಂಧಿ

ಇನ್ನೊಂದು ಪ್ರಕರಣ ನಿಮಗೆ ಗೊತ್ತಿದೆಯಾ?

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ ಮಾತ್ರವಲ್ಲ, ಗಾಂಧಿ ಕುಟುಂಬದ ಮೇಲೆ ಇನ್ನೂ ಒಂದು ಪ್ರಕರಣ ಕೂಡ ಇದೆ. ಗಾಂಧಿ ಅಥವಾ ನೆಹರೂ ಕುಟುಂಬದ ಒಡೆತನದಲ್ಲಿರುವ ಮೂರು ಟ್ರಸ್ಟ್‌ಗಳ ಹಣಕಾಸಿನ ವಹಿವಾಟಿನಲ್ಲಿ ನಡೆದಿರಬಹುದಾದ ಅಕ್ರಮವನ್ನು ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.

ರಾಜೀವ್‌ ಗಾಂಧಿ ಫೌಂಡೇಶನ್‌ (ಆರ್‌ಜಿಎಫ್)‌, ರಾಜೀವ್‌ ಗಾಂಧಿ ಚಾರಿಟೇಬಲ್‌ ಟ್ರಸ್ಟ್‌ (ಆರ್‌ಜಿಸಿಟಿ) ಹಾಗೂ ಇಂದಿರಾ ಗಾಂಧಿ ಮೆಮೋರಿಯಲ್‌ ಟ್ರಸ್ಟ್‌ (ಐಜಿಎಂಟಿ)ಗಳು ಈ ಮೂರು ಟ್ರಸ್ಟ್‌ಗಳಾಗಿವೆ. ಇವುಗಳಲ್ಲಿ ಎರಡು ಸಂಸ್ಥೆಗಳಿಗೆ ಸೋನಿಯಾ ಗಾಂಧಿ ಅವರು ಅಧ್ಯಕ್ಷರಾಗಿದ್ದಾರೆ ಹಾಗೂ ರಾಹುಲ್‌ ಗಾಂಧಿ ಅವರು ಟ್ರಸ್ಟಿಯಾಗಿದ್ದಾರೆ. ಹವಾಲಾ ವ್ಯವಹಾರ ತಡೆ ಕಾಯಿದೆ, ಆದಾಯ ತೆರಿಗೆ ಕಾಯಿದೆ, ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಗಳ ಅಡಿಯಲ್ಲಿ ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಇವುಗಳ ತನಿಖೆ ನಡೆಸಲು ಅಂತರ್‌ ಸಚಿವಾಲಯ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ. ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ತನಿಖೆಯ ನೇತೃತ್ವ ವಹಿಸಿದ್ದಾರೆ.

ಹಾಗಿದ್ದರೆ ಇವುಗಳ ಮೇಲಿರುವ ಆರೋಪಗಳೇನು?

ಯುಪಿಎ ಅಧಿಕಾರಾವಧಿಯಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಹಣಕಾಸು ನಿಧಿಗೆ ಬಂದ ಹಣವನ್ನು ಆರ್‌ಜಿಎಫ್‌ಗೆ ವರ್ಗಾಯಿಸಲಾಗಿದೆ. ನಿರಾಶ್ರಿತರಿಗೆ ನೀಡಬೇಕಾದ ಹಣವನ್ನು ಕುಟುಂಬದ ನಿಧಿಗೆ ನೀಡಿರುವುದು ವಂಚನೆ. 2005-06ರಲ್ಲಿ ಚೀನಾದ ರಾಯಭಾರ ಕಚೇರಿ ರಾಜೀವ್‌ ಗಾಂಧಿ ಫೌಂಡೇಶನ್‌ಗೆ ಹಣ ಬಂದಿತ್ತು. ಇದು ಯಾಕೆ ಬಂದಿದೆ ಎಂಬುದು ಪತ್ತೆಯಾಗಬೇಕು. ಇದಲ್ಲದೆ, ಸೋನಿಯಾ ಗಾಂಧಿ ಅಳಿಯ ಪ್ರಿಯಾಂಕ ಅವರ ಪತಿ ರಾಬರ್ಟ್‌ ವಾದ್ರಾ ಅವರ ಬಹುಕೋಟಿ ತೆರಿಗೆ ವಂಚನೆ ಹಾಗೂ ಕಿಕ್‌ಬ್ಯಾಕ್‌ ಪ್ರಕರಣಗಳು ಕೂಡ ಜಾರಿ ನಿರ್ದೇಶನಾಲಯದಡಿ ತನಿಖೆಯಲ್ಲಿವೆ. ರಾಬರ್ಟ್‌ ವಾದ್ರಾ ಈಗ ಜಾಮೀನಿನಲ್ಲಿದ್ದಾರೆ.

ಕಾಂಗ್ರೆಸ್‌ನ ನೇತೃತ್ವ ವಹಿಸಿರುವ ಕುಟುಂಬವನ್ನು ಯಾಕೆ ಮತ್ತೆ ಮತ್ತೆ ಹಣದ ಅವ್ಯವಹಾರದ ಪ್ರಕರಣಗಳು ಕಂಗೆಡಿಸುತ್ತಾ ಇವೆ? ಇವುಗಳಲ್ಲಿರುವ ಪಾರದರ್ಶಕತೆಯ ಕೊರತೆ ಹಾಗೂ ದೇಶದ ಅತಿ ದೊಡ್ಡ ರಾಜಕೀಯ ಫ್ಯಾಮಿಲಿಯ ಇನ್‌ವಾಲ್ವ್‌ಮೆಂಟ್‌ಗಳು ಇದಕ್ಕೆ ಕಾರಣ. ರಾಜಕೀಯ ದ್ವೇಷವೋ ಅಲ್ಲವೋ, ದೇಶಕ್ಕೆ ಸತ್ಯ ಗೊತ್ತಾಗಬೇಕಿದೆ, ಏನಂತೀರಿ?

ಇದನ್ನೂ ಓದಿ | ನ್ಯಾಷನಲ್‌ ಹೆರಾಲ್ಡ್‌: ಜೂ.23ರಂದು ಹಾಜರಾಗಲು ಸೋನಿಯಾ ಗಾಂಧಿಗೆ ED ಸಮನ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

ವಿಶಾಖಪಟ್ಟಣದ ಋಷಿಕೊಂಡ ಬೆಟ್ಟದ ಬಳಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 500 ಕೋಟಿ ರೂ. ವೆಚ್ಚದಲ್ಲಿ ಅರಮನೆಯನ್ನು (Rushikonda Palace Issue) ನಿರ್ಮಿಸಿರುವುದು ಭಾರೀ ಟೀಕೆಗೆ ಗುರಿಯಾಗಿದೆ. ವೈಎಸ್‌ಆರ್‌ಸಿ ಆಡಳಿತದಲ್ಲಿ ನಿರ್ಮಿಸಿರುವ ಈ ಯೋಜನೆಯ ಬಗ್ಗೆ ತನಿಖೆ ನಡೆಸುವುದಾಗಿ ಈಗಿನ ಸರ್ಕಾರ ಹೇಳಿದೆ. ಏನಿದು ವಿವಾದ? ಇಲ್ಲಿದೆ ವಿಸ್ತೃತ ಮಾಹಿತಿ.

VISTARANEWS.COM


on

By

Rushikonda Palace Issue
Koo

ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದ ಬಳಿ (andrapradesh) ಈ ಹಿಂದೆ ಮುಖ್ಯಮಂತ್ರಿಯಾಗಿದ್ದ (former CM) ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) 500 ಕೋಟಿ ರೂ. ವೆಚ್ಚದಲ್ಲಿ ʼರಾಜಾ ಮಹಲ್‌ʼ ಹೆಸರಿನಲ್ಲಿ ಅರಮನೆಯನ್ನು (Rushikonda Palace) ನಿರ್ಮಿಸಿದ್ದರು. ಈಗ ಜಗನ್‌ ಸರ್ಕಾರ ಅಧಿಕಾರ ಕಳೆದುಕೊಂಡು ಟಿಡಿಪಿಯ ಎನ್‌ ಚಂದ್ರಬಾಬು ನಾಯ್ಡು ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೀಗ ಈ ಅರಮನೆ ಭಾರೀ ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿದೆ.

ಭಾರಿ ಭ್ರಷ್ಟಾಚಾರದ ಮೂಲಕ ರಾಜ್ಯ ಸರ್ಕಾರದ ಹಣವನ್ನು ಈ ಹಿಂದಿನ ಮುಖ್ಯಮಂತ್ರಿ ಜಗನ್‌ ರೆಡ್ಡಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ತೆಲುಗು ದೇಶಂ ಪಕ್ಷ (TDP), ವಿಶಾಖಪಟ್ಟಣಂನ (Vishakhapatnam) ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳ ಡ್ರೋನ್ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ಮೂಲಕ ಇದನ್ನು ಸಾರ್ವಜನಿಕರ ಗಮನಕ್ಕೆ ತಂದಿದೆ.

ಹಿಂದಿನ ವೈಎಸ್‌ಆರ್‌ಸಿ ಆಡಳಿತದಲ್ಲಿ ಋಷಿಕೊಂಡ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಭೇಟಿ ನೀಡಿದಾಗ ಋಷಿಕೊಂಡ ಅರಮನೆ ವಿವಾದ ಭುಗಿಲೆದ್ದಿತು. ಟಿಡಿಪಿ ನಾಯಕರು ಈ ಯೋಜನೆಯ ಸ್ವರೂಪ ಮತ್ತು ಪ್ರಕೃತಿಯ ಮೇಲೆ ಇದರ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಟಿಡಿಪಿ ನಾಯಕರು, ‘ಋಷಿಕೊಂಡ ಅರಮನೆ’ ಎಂದು ಕರೆಯಲ್ಪಡುವ ಈ ಅರಮನೆಯನ್ನು ಅಕ್ರಮವಾಗಿ ಮತ್ತು ರಹಸ್ಯವಾಗಿ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ. ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಅವರು ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿ) ಆಡಳಿತದಿಂದ ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೇಟಿ ನೀಡಿದ ಈ ವಿಷಯ ಹೆಚ್ಚು ಚರ್ಚೆಗೆ ಕಾರಣವಾಯಿತು. ಈ ಕಟ್ಟಡಗಳನ್ನು ‘ರಾಜ ಮಹಲ್’ ಎಂದು ಬಣ್ಣಿಸಿರುವ ಟಿಡಿಪಿ ನಾಯಕ ನಾರಾ ಲೋಕೇಶ್, ಸಾರ್ವಜನಿಕ ನಿಧಿಯ ದುರುಪಯೋಗದ ಬಗ್ಗೆ ದನಿ ಎತ್ತಿದ್ದಾರೆ.

ಋಷಿಕೊಂಡ ನಿರ್ಮಾಣ

ಸಚಿವ ನಾರಾ ಲೋಕೇಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ತಮ್ಮ ಕಳವಳವನ್ನು ವ್ಯಕ್ತಪಡಿಸಿ, “ಬಡವರು ತಮ್ಮ ಮಕ್ಕಳ ತಲೆಯ ಮೇಲೆ ಸೂರು ನಿರ್ಮಿಸಲು ಹೆಣಗಾಡುತ್ತಿದ್ದರೆ, ಅವರ ಹಣದಲ್ಲಿ ಜಗನ್‌ ಅರಮನೆಯನ್ನು ನಿರ್ಮಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡಲಾಗುವುದುʼʼ ಎಂದಿದ್ದಾರೆ. 9.88 ಎಕರೆ ಜಮೀನಿನಲ್ಲಿ ಕಟ್ಟಡವು 5 ಎಕರೆಯಲ್ಲಿ ಇರಬೇಕು, ಉಳಿದ ಪ್ರದೇಶವು ಭೂದೃಶ್ಯ ಮತ್ತು ಪಾರ್ಕಿಂಗ್ ಪ್ರದೇಶವಾಗಿರಬೇಕು ಎಂದು ಹೇಳಲಾಗಿತ್ತು. ಆದರೆ ಬೆಟ್ಟವನ್ನು 15 ಎಕರೆ ಹೆಚ್ಚುವರಿಯಾಗಿ ಅಗೆದಿರುವುದು ದೊಡ್ಡ ಉಲ್ಲಂಘನೆಯಾಗಿದೆ ಎಂದವರು ತಿಳಿಸಿದ್ದಾರೆ.


ಇದನ್ನೂ ಓದಿ: UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

ಜಗನ್‌ ಪಕ್ಷದ ಪ್ರತಿಪಾದನೆ ಏನು?

ವಿಶಾಖಪಟ್ಟಣಂನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶವನ್ನು ಈ ಪುನರಾಭಿವೃದ್ಧಿ ಯೋಜನೆ ಹೊಂದಿದೆ ಎಂದು ಜಗನ್ ನೇತೃತ್ವದ ಪಕ್ಷವು ಪ್ರತಿಪಾದಿಸಿದೆ. ಈ ಆಸ್ತಿ ಸರ್ಕಾರಿ ಸ್ವಾಮ್ಯದಲ್ಲಿದೆ, ಖಾಸಗಿಯಲ್ಲ ಎಂದು ಹೇಳಿರುವ ಪಕ್ಷದ ಪ್ರಮುಖರು, ರಾಷ್ಟ್ರಪತಿ ಅಥವಾ ಪ್ರಧಾನಮಂತ್ರಿ ವಿಶಾಖಪಟ್ಟಣಕ್ಕೆ ಭೇಟಿ ನೀಡಿದಾಗ ಇದನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಈ ನಡುವೆಯೇ ಯೋಜನೆಯು ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳನ್ನು ಉಲ್ಲಂಘಿಸಿದ ಕಾರಣದಿಂದ ಪರಿಸರವಾದಿಗಳಿಂದಲೂ ವ್ಯಾಪಕ ವಿರೋಧವನ್ನು ಎದುರಿಸುತ್ತಿದೆ.

ಹೇಗಿದೆ ಈ ಅರಮನೆ?

9.88 ಎಕರೆ ಸಮುದ್ರಾಭಿಮುಖ ಸೈಟ್‌ನಲ್ಲಿ ಹರಡಿರುವ ಋಷಿಕೊಂಡ ಅರಮನೆಯು ಒಟ್ಟು 1,41,433 ಚದರ ಮೀಟರ್‌ಗಳ ನಿರ್ಮಾಣ ಪ್ರದೇಶದೊಂದಿಗೆ 12 ಬೆಡ್‌ ರೂಮ್‌ಗಳನ್ನು ಹೊಂದಿದೆ. ಮೂರು ಮಹಲುಗಳನ್ನು ರಚಿಸಲು ರಮಣೀಯವಾದ ಋಶಿಕೊಂಡ ಬೆಟ್ಟಗಳನ್ನು ಧ್ವಂಸಪಡಿಸಲಾಗಿದೆ. ಕೆಲವು ವಾಶ್‌ರೂಮ್‌ಗಳಂತೂ 480 ಚದರ ಅಡಿ ದೊಡ್ಡದಾಗಿದೆ. ಮೀಟಿಂಗ್ ಹಾಲ್‌ಗಳು 7,266 ಚದರ ಮೀಟರ್‌ ವ್ಯಾಪಿಸಿದೆ!

ಆಮದು ಮಾಡಿದ ದುಬಾರಿ ಮಾರ್ಬಲ್‌ಗಳನ್ನು ಬಳಸಿದ್ದು, ವಿಶಾಲವಾದ ಕಾರಿಡಾರ್‌ಗಳನ್ನು ಒಳಗೊಂಡಿದೆ. ವಾಲ್-ಟು-ವಾಲ್ ಸ್ಕ್ರೀನ್ ಹೊಂದಿರುವ ಹೋಮ್ ಥಿಯೇಟರ್ ಬ್ಲಾಕ್‌ ಇದರ ಮತ್ತೊಂದು ಪ್ರಮುಖ ಅಂಶವಾಗಿದೆ. ಸರ್ಕಾರವು ಲ್ಯಾಂಡ್‌ಸ್ಕೇಪಿಂಗ್‌ನಲ್ಲಿ 50 ಕೋಟಿ ರೂ. ಮತ್ತು ಒಳಾಂಗಣ ಅಲಂಕಾರಕ್ಕಾಗಿ 33 ಕೋಟಿ ರೂ. ವೆಚ್ಚ ಮಾಡಿದೆ ಎನ್ನಲಾಗಿದೆ. ರೆಸ್ಟ್ ರೂಮ್ಗ‌ಳನ್ನು ಒಳಗೊಂಡಂತೆ ಸಂಪೂರ್ಣ ಸಂಕೀರ್ಣದ ಉದ್ದಕ್ಕೂ ಸೆಂಟ್ರಲ್‌ ಹವಾನಿಯಂತ್ರಣವಿದೆ. ಸಮುದ್ರದ ನೋಟವನ್ನು ಹೊಂದಿರುವ ಡೈನಿಂಗ್ ಹಾಲ್, ಪ್ರತಿ ಮಲಗುವ ಕೋಣೆಯಲ್ಲಿ 12 ಹಾಸಿಗೆಗಳಿವೆ. ಸ್ಪಾ ಸೇವೆಗಳೊಂದಿಗೆ ಸ್ನಾನಗೃಹಗಳು ವಿಶೇಷ ವೈಶಿಷ್ಟ್ಯಗಳಿಂದ ಕೂಡಿದೆ.

Continue Reading

ದೇಶ

New Criminal Laws: ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ; ಯಾವ ಕಾನೂನು? ಏನು ಬದಲಾವಣೆ? Complete Details!

New criminal laws: ಕಳೆದ ಡಿಸೆಂಬರ್‌ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟು ರಾಷ್ಟ್ರಪತಿಗಳಿಂದ ಒಪ್ಪಿಗೆಯನ್ನು ಪಡೆದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ ಒಂದರಿಂದ ಜಾರಿಗೆ ಬರಲಿವೆ. ಅವುಗಳ ಅನುಷ್ಠಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳು ನಡೆಯುತ್ತಿದೆ. ಮೂರು ಹೊಸ ಕಾನೂನುಗಳ ರೂಪುರೇಷೆಗಳೇನು? ಬದಲಾವಣೆಗಳು ಏನೇನು? ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

New criminal laws
Koo

ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು (New criminal laws) ಜುಲೈ 1ರಿಂದ ಜಾರಿಗೆ ಬರಲಿವೆ. ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ (Union law and justice ministe) ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಈ ಬಗ್ಗೆ ವಿವರ ನೀಡಿದ್ದಾರೆ.

ಕೋಲ್ಕತ್ತಾದಲ್ಲಿ (Kolkata) “ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ” ಎಂಬ ಸಮ್ಮೇಳನದಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆಯ (UCC) ರಾಷ್ಟ್ರವ್ಯಾಪಿ ಅನುಷ್ಠಾನದ ಬಗ್ಗೆಯೂ ಭರವಸೆ ವ್ಯಕ್ತಪಡಿಸಿದ್ದಾರೆ.

ಜುಲೈ 1ರಿಂದ ಎಲ್ಲಾ ಮೂರು ಕಾನೂನುಗಳು – ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಗಳು ಈ ಹಿಂದಿನ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸುತ್ತವೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತನ ಉದ್ದೇಶಗಳಿವೆ.

ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು. ಆದರೆ, ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (ಬಿಪಿಆರ್‌ಡಿ) ಈ ಹೊಸ ಕಾನೂನುಗಳಿಗೆ ತರಬೇತಿಯನ್ನು ನೀಡುತ್ತಿದೆ. ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯಗಳು ಸಹ ತರಬೇತಿಯನ್ನು ನೀಡುತ್ತಿವೆ. ನ್ಯಾಯಾಧೀಶರಿಗೂ ನ್ಯಾಯಾಂಗ ಇಲಾಖೆಯಿಂದ ತರಬೇತಿ ನೀಡಲಾಗುತ್ತಿದೆ.

ಇದನ್ನೂ ಓದಿ: Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

ಹೊಸ ಕ್ರಿಮಿನಲ್ ಕಾನೂನುಗಳು ಯಾವವು?

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ.


ಭಯೋತ್ಪಾದಕರ ಆಸ್ತಿ ಮುಟ್ಟುಗೋಲು

ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯ ಸಾರ್ವಜನಿಕರನ್ನು ಅಥವಾ ಅದರ ಒಂದು ಭಾಗವನ್ನು ಬೆದರಿಸಲು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಈ ಕಾನೂನಿನ ಅಡಿಯಲ್ಲಿ ಇದೆ. ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳನ್ನು ಮರಣದಂಡನೆ ಅಥವಾ ಪೆರೋಲ್ ಇಲ್ಲದೆ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ. ‘ಆಸ್ತಿಗೆ ಹಾನಿ, ಅಥವಾ ಕರೆನ್ಸಿಯ ತಯಾರಿಕೆ ಅಥವಾ ಕಳ್ಳಸಾಗಣೆಯನ್ನು ಇದು ಒಳಗೊಂಡಿದೆ.

ದೇಶದ್ರೋಹ ಎಂಬುದು ರದ್ದು

ಭಾರತೀಯ ದಂಡ ಸಂಹಿತೆ1860ರ ದೇಶದ್ರೋಹದ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152ಕ್ಕೆ ಬದಲಾಯಿಸಲಾಗಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾರ್ಯಗಳ ಮೇಲೆ ಕೇಂದ್ರೀಕರಿಸುವ ವಿಭಾಗಗಳನ್ನು ಪರಿಚಯಿಸಲಾಗಿದೆ.

ಅತ್ಯಾಚಾರ ಮಾಡಿದರೆ ಮರಣ ದಂಡನೆ

ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ‘ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು’ ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತಿದೆ.

ಅಪ್ರಾಪ್ತ ವಯಸ್ಸಿನ ಮಹಿಳೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 18 ವರ್ಷದೊಳಗಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಗೆ ಅವಕಾಶ ಕಲ್ಪಿಸಲಾಗಿದೆ.

ಅತ್ಯಾಚಾರ ಎಸಗುವವರಿಗೆ ಕಾನೂನಿನ ಪ್ರಕಾರ 10 ವರ್ಷಗಳಿಗಿಂತ ಕಡಿಮೆಯಿಲ್ಲದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದು ಜೀವಾವಧಿಯವರೆಗೆ ಜೈಲು ಶಿಕ್ಷೆಗೆ ವಿಸ್ತರಿಸಬಹುದು ಮತ್ತು ದಂಡಕ್ಕೆ ಸಹ ಹೊಣೆಗಾರರಾಗಬೇಕಾಗುತ್ತದೆ.

ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಯಾವುದೇ ಆಮಿಷದ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

ಮೊದಲ ಬಾರಿಗೆ ಸಂಘಟಿತ ಅಪರಾಧದ ವ್ಯಾಖ್ಯಾನ

ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸಲಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ 111 (1) ಅಡಿಯಲ್ಲಿ ಪದವನ್ನು ಮೊದಲ ಬಾರಿಗೆ ವ್ಯಾಖ್ಯಾನಿಸಲಾಗಿದೆ. ಈ ವ್ಯಾಖ್ಯಾನವು ಸಶಸ್ತ್ರ ದಂಗೆ, ವಿಧ್ವಂಸಕ ಕಾರ್ಯಾಚರಣೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಒಳಗೊಂಡಿದೆ. ಶಿಕ್ಷೆಯು ವಿವಿಧ ಅಪರಾಧಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ, ದಂಡ ಅಥವಾ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಒಳಗೊಂಡಿರುತ್ತದೆ.

ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ

ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯಿದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆಯನ್ನು ನೀಡಲು ಬಯಸುತ್ತದೆ.

ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ

“ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆ” ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ.

ಯಾರಾದರೂ ಉದ್ದೇಶಪೂರ್ವಕವಾಗಿ ಪದಗಳಲ್ಲಿ ಮಾತನಾಡುವ ಅಥವಾ ಬರೆಯುವ ಅಥವಾ ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ, ಅಥವಾ ವಿದ್ಯುನ್ಮಾನ ಸಂವಹನದ ಮೂಲಕ ಅಥವಾ ಹಣಕಾಸಿನ ಅರ್ಥದ ಬಳಕೆಯಿಂದ ಅಥವಾ ಬೇರೆ ಬೇರೆ ಅಥವಾ ಸಶಸ್ತ್ರ ದಂಗೆ ಅಥವಾ ವಿಧ್ವಂಸಕವನ್ನು ಪ್ರಚೋದಿಸಲು ಪ್ರಯತ್ನಿಸಿದರೆ ಕಠಿಣ ಶಿಕ್ಷೆ ಕಾದಿದೆ. ಅಕ್ರಮ ಚಟುವಟಿಕೆಗಳು, ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಅಥವಾ ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಎಸಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಗುರಿಯಾಗಬಹುದು.

ತ್ವರಿತ ವಿಚಾರಣೆ ಮತ್ತು ನ್ಯಾಯ

ಹೊಸ ಕಾನೂನುಗಳ ಪ್ರಕಾರ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗುತ್ತದೆ ಮತ್ತು ಪರಿಸ್ಥಿತಿಯನ್ನು ನೋಡಿ ನ್ಯಾಯಾಲಯವು ಇನ್ನೂ 90 ದಿನಗಳವರೆಗೆ ಅನುಮತಿ ನೀಡಬಹುದು. ತನಿಖೆಯನ್ನು 180 ದಿನಗಳಲ್ಲಿ ಮುಗಿಸಿ ವಿಚಾರಣೆಗೆ ಕಳುಹಿಸಬೇಕು.

ಇದಲ್ಲದೆ, ಪೊಲೀಸರು 90 ದಿನಗಳಲ್ಲಿ ಪ್ರಕರಣದ ಸ್ಥಿತಿಯನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ವಿಚಾರಣೆಯ ಅನಂತರ 30 ದಿನಗಳಲ್ಲಿ ತೀರ್ಪು ನೀಡಬೇಕಾಗುತ್ತದೆ. ಒಂದು ವಾರದೊಳಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು.
ಮೂರು ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾಮಾನ್ಯ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ. 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಎಲ್ಲೇ ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದು.

ಸಂತ್ರಸ್ತರ ಮಾಹಿತಿ ಹಕ್ಕನ್ನು ಬಲಪಡಿಸಲಾಗಿದೆ. ಎಫ್‌ಐಆರ್‌ನ ಉಚಿತ ಪ್ರತಿಯನ್ನು ಪಡೆಯುವ ಹಕ್ಕು ಬಲಿಪಶುವಿಗೆ ಇದೆ. 90 ದಿನಗಳಲ್ಲಿ ತನಿಖೆಯ ಸ್ಥಿತಿಯನ್ನು ಸಂತ್ರಸ್ತರಿಗೆ ತಿಳಿಸಲು ಅವಕಾಶವಿದೆ. ಹೊಸ ಸಂಹಿತೆಯು ಕ್ರಿಮಿನಲ್ ಪ್ರಕರಣಗಳಲ್ಲಿ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುತ್ತದೆ.

ಇತರ ನಿಬಂಧನೆಗಳು

ಹೊಸ ಕಾನೂನಿನ ಪ್ರಕಾರ ‘ಆರ್ಥಿಕ ಅಪರಾಧಗಳನ್ನು’ ಹೊರತುಪಡಿಸಿ ಘೋರ ಅಪರಾಧಿಗಳಿಗೆ ಮಾತ್ರ ಕೈಕೋಳವನ್ನು ಬಳಸಲಾಗುವುದು. ಅಂಗವೈಕಲ್ಯ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗುವ ಅಪರಾಧ ಕಾರ್ಯಗಳಿಗೆ ಕಠಿಣ ದಂಡವನ್ನು ಪರಿಚಯಿಸಲಾಗಿದೆ.

ಶಿಕ್ಷೆ ಮನ್ನಾಗೊಳಿಸಲು ಕಾನೂನುಗಳಲ್ಲಿ ಹೊಸ ನಿಬಂಧನೆಯನ್ನು ಮಾಡಲಾಗಿದೆ. ಮರಣದಂಡನೆಗಳನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬಹುದು. ಏಳು ವರ್ಷಗಳ ಒಳಗಿನ ಸೆರೆವಾಸ ಮತ್ತು ಜೀವಾವಧಿ ಶಿಕ್ಷೆಯನ್ನು ಮಾತ್ರ ಕ್ಷಮಿಸಬಹುದು.

Continue Reading

EXPLAINER

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಮಾರ್ಗದಲ್ಲಿ ಕವಚ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Train Accident
Koo

ಕೋಲ್ಕೊತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ (Train Accident) 15 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದರಲ್ಲೂ, ಈ ಮಾರ್ಗದಲ್ಲಿ ರೈಲುಗಳ ಸುರಕ್ಷತೆಗಾಗಿ ಅಳವಡಿಸಿಕೊಳ್ಳಲಾಗಿರುವ ಕವಚ (Kavach) ಸುರಕ್ಷಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಹಾಗಾದರೆ, ಏನಿದು ಕವಚ ಸುರಕ್ಷಾ ವ್ಯವಸ್ಥೆ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

ಏನಿದು ಕವಚ?

ಆತ್ಮನಿರ್ಭರ ಭಾರತದ ಭಾಗವಾಗಿ 2022-23ರಲ್ಲಿ ರೈಲುಗಳ ಸುರಕ್ಷತೆ ಮತ್ತು ಸಾಮರ್ಥ್ಯ ಹೆಚ್ಚಳಕ್ಕಾಗಿ ಸುಮಾರು 2,000 ಕಿ.ಮೀ. ಮಾರ್ಗವನ್ನು ಕವಚ ಸುರಕ್ಷತಾ ವಿಧಾನದ ಅಡಿಯಲ್ಲಿ ತರಲಾಗುವುದು ಎಂದು ಸಚಿವಾಲಯ ಹೇಳಿತ್ತು. ಕವಚ ಎಂಬುದು ಸೇಫ್ಟಿ ಇಂಟೆಗ್ರಿಟಿ ಲೆವೆಲ್ 4 ಮಾನದಂಡಗಳಾಗಿವೆ. ಇದನ್ನು ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್​​ಡಿಎಸ್​​ಒ) ಅಭಿವೃದ್ಧಿಪಡಿಸಿದೆ. ಕವಚ​ ವ್ಯವಸ್ಥೆಯು ರೈಲುಗಳು ಕೆಂಪು ಸಿಗ್ನಲ್​ ದಾಟಿ ಮುಂದಕ್ಕೆ ಹೋಗುವುದನ್ನು ತಡೆಯುತ್ತದೆ. ಒಂದು ವೇಳೆ ದಾಟಿದರೆ ಸ್ವಯಂಚಾಲಿತ ಬ್ರೇಕಿಂಗ್ ವ್ಯವಸ್ಥೆ ಆ್ಯಕ್ವಿವೇಟ್​ ಆಗುತ್ತದೆ. ಹೀಗಾಗಿ ಎರಡು ರೈಲುಗಳ ನಡುವಿನ ಮುಖಾಮುಖಿ ಡಿಕ್ಕಿಯ ಸಂಭವ ಕಡಿಮೆ.

ಕವಚ ಕಾರ್ಯನಿರ್ವಹಿಸುವುದು ಹೇಗೆ?

ಯಾವುದೇ ತುರ್ತು ಸಂದರ್ಭದಲ್ಲಿ ರೈಲು ಅಪಘಾತ ತಡೆಯುವುದೇ ಕವಚದ ಉದ್ದೇಶವಾಗಿದೆ. ರೈಲು ಹಳಿಗಳು, ಸ್ಟೇಷನ್‌ ಯಾರ್ಡ್‌ ಹಾಗೂ ಸಿಗ್ನಲ್‌ಗಳಿಗೆ ಆರ್‌ಎಫ್‌ಐಡಿ (ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್)‌ ಟ್ಯಾಗ್‌ಗಳನ್ನು ಅಳವಡಿಸಲಾಗಿರುತ್ತದೆ. ಇದರಿಂದ ರೈಲುಗಳು ಎದುರು ಬದಿರಾಗಿ ಒಂದೇ ಹಳಿಯ ಮೇಲೆ ಚಲಿಸಿದರೂ ಎರಡೂ ಡಿಕ್ಕಿಯಾಗುವ ಮುನ್ನ ಸ್ವಯಂಚಾಲಿತವಾಗಿಯೇ ರೈಲುಗಳು ಬ್ರೇಕ್‌ ಹಾಕಿಕೊಳ್ಳುತ್ತವೆ. ಲೋಕೊ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸಿಗ್ನಲ್‌ನಿಂದಾಗಿಯೇ ಸ್ವಯಂಚಾಲಿತವಾಗಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ಅಷ್ಟೇ ಅಲ್ಲ, ಒಂದು ರೈಲಿನ ಹಿಂದೆ ಮತ್ತೊಂದು ರೈಲು ಚಲಿಸುವಾಗ ಹಿಂದಿನ ರೈಲು ನಿಧಾನಗತಿಯಲ್ಲಿ ಸಾಗುವುದು, ರೈಲಿನ ಸಮೀಪ ಹೋದಾಗ ಬ್ರೇಕ್‌ ಹಾಕುವುದು, ಹವಾಮಾನ ವೈಪರೀತ್ಯದಿಂದ ಮಂದ ಬೆಳಕು ಇದ್ದಾಗ ಬ್ರೇಕ್‌ ಹಾಕುವುದು, ಗೇಟ್‌ಗಳು ಅಡ್ಡ ಬಂದಾಗ ಬ್ರೇಕ್‌ ಹಾಕುವುದು ಸೇರಿ ಯಾವುದೇ ತುರ್ತು ಸಂದರ್ಭದಲ್ಲಿ ಲೋಕೊಮೋಟಿವ್‌ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸ್ವಯಂಚಾಲಿತವಾಗಿ ಕವಚ ವ್ಯವಸ್ಥೆಯ ಅಡಿಯಲ್ಲಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ದೇಶಾದ್ಯಂತ ವಿಸ್ತರಣೆ ಯಾವಾಗ?

ಕವಚ ಸುರಕ್ಷಾ ವಿಧಾನದ ಅಳವಡಿಕೆಯಿಂದ ರೈಲುಗಳ ಅಪಘಾತವು ಗಣನೀಯವಾಗಿ ಕುಸಿದಿದೆ. ಆದರೆ, ಇದುವರೆಗೆ 1,500 ಕಿಲೋಮೀಟರ್‌ ರೈಲು ಮಾರ್ಗಕ್ಕೆ ಮಾತ್ರ ಕವಚ ಅಳವಡಿಸಲಾಗಿದೆ. ಆರಂಭಿಕ ಹಂತದಲ್ಲಿ 2 ಸಾವಿರ ಕಿಲೋಮೀಟರ್‌ ಹಾಗೂ ಹಂತ ಹಂತವಾಗಿ 34 ಸಾವಿರ ಕಿಲೋಮೀಟರ್‌ ಉದ್ದದ ರೈಲು ಮಾರ್ಗಕ್ಕೆ ಕವಚ ಅಳವಡಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಭಾರತೀಯ ರೈಲ್ವೆಯು ಸುಮಾರು 1 ಲಕ್ಷ ಕಿಲೋಮೀಟರ್‌ ಮಾರ್ಗವನ್ನು ಹೊಂದಿರುವ ಕಾರಣ ಎಲ್ಲ ಮಾರ್ಗಗಳಲ್ಲೂ ಕವಚ ಅಳವಡಿಸಲು ಸಮಯ ಬೇಕಾಗುತ್ತದೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; ಕನಿಷ್ಠ 15 ಮಂದಿ ಸಾವು

Continue Reading

ವಿದೇಶ

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Petrodollar Explainer: ಸೌದಿ ಅರೇಬಿಯಾವು ಅಮೆರಿಕ ಜೊತೆಗಿನ 50 ವರ್ಷಗಳ ಹಿಂದಿನ ಪೆಟ್ರೋಡಾಲರ್ ಒಪ್ಪಂದವನ್ನು (Petrodollar Deal) ಕೊನೆಗೊಳಿಸಿದೆ. 1974ರಲ್ಲಿ ಸಹಿ ಮಾಡಲಾದ ಈ ಒಪ್ಪಂದ ಮುರಿದಿರುವುದರಿಂದ ಇದು ಜಾಗತಿಕ ವಹಿವಾಟಿನಲ್ಲಿ ಬಹುದೊಡ್ಡ ಬದಲಾವಣೆ ಬಿರುವುದು ಮಾತ್ರವಲ್ಲ ವಿಶ್ವದ ಆರ್ಥಿಕತೆಯ ಮೇಲೂ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಕುರಿತ ವಿಸ್ತೃತ ಚಿತ್ರಣ ಇಲ್ಲಿದೆ.

VISTARANEWS.COM


on

By

Petrodollar Deal
Koo

ಸೌದಿ ಅರೇಬಿಯಾವು (Saudi Arabia) ಅಮೆರಿಕದೊಂದಿಗಿನ (United States) 50 ವರ್ಷಗಳ ಹಳೆಯ ಪೆಟ್ರೋಡಾಲರ್ ಒಪ್ಪಂದವನ್ನು (Petrodollar Explainer) ಕೊನೆಗೊಳಿಸಲು ನಿರ್ಧರಿಸಿದೆ. 1974ರ ಜೂನ್ 8ರಂದು ಸಹಿ ಹಾಕಲಾದ ಈ ಒಪ್ಪಂದವು ಜೂನ್ 9ರಂದು ಮುಕ್ತಾಯಗೊಂಡಿದೆ. ಮಧ್ಯಪ್ರಾಚ್ಯ ದೇಶವು (Middle East country) ಈಗ ಅದನ್ನು ನವೀಕರಿಸದಿರಲು ನಿರ್ಧರಿಸಿದೆ. ಇದು ಎರಡು ರಾಷ್ಟ್ರಗಳ ನಡುವಿನ ಆರ್ಥಿಕ ಮತ್ತು ರಾಜತಾಂತ್ರಿಕ ಸಂಬಂಧಗಳಲ್ಲಿ ಐತಿಹಾಸಿಕ ತಿರುವು ಎಂದರೆ ತಪ್ಪಾಗಲಾರದು. ಇದರಿಂದ ಸೌದಿ ಅರೇಬಿಯಾ ಮತ್ತು ಅಮೆರಿಕ ನಡುವಿನ ದೀರ್ಘಕಾಲದ ತೈಲ ಡಾಲರ್ ಒಪ್ಪಂದ ಕೊನೆಯಾದಂತಾಗಿದೆ.

ಏನಿದು ಪೆಟ್ರೋಡಾಲರ್?

ಪೆಟ್ರೋಡಾಲರ್ ಎಂಬ ಪದವು ಜಾಗತಿಕ ಕಚ್ಚಾ ತೈಲ ವಹಿವಾಟುಗಳಿಗೆ ಕರೆನ್ಸಿಯಾಗಿ ಯುಎಸ್ ಡಾಲರ್ ಬಳಕೆಯನ್ನು ಸೂಚಿಸುತ್ತದೆ. ಯುಎಸ್ ಚಿನ್ನ ವಹಿವಾಟುಗಳಿಗೆ ಕರೆನ್ಸಿಯಾಗಿ ಡಾಲರ್ ಬಳಕೆಯನ್ನು ಕಡಿಮೆಗೊಳಿಸಿದ ಬಳಿಕ ಪೆಟ್ರೋಡಾಲರ್ ವ್ಯವಸ್ಥೆಯು ಜಾರಿಗೆ ಬಂದಿತು.

ಏನು ಸಮಸ್ಯೆ?

ಸೌದಿ ಅರೇಬಿಯಾವು ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ತನ್ನ ದೀರ್ಘಕಾಲದ ಒಪ್ಪಂದವನ್ನು ನವೀಕರಿಸದಿರಲು ನಿರ್ಧರಿಸಿದೆ. ಇದಕ್ಕೆ ಮುಖ್ಯ ಕಾರಣ ಯುನೈಟೆಡ್ ಸ್ಟೇಟ್ಸ್ ತೈಲವನ್ನು ಯುಎಸ್ ಡಾಲರ್‌ಗಳಲ್ಲಿ ಪ್ರತ್ಯೇಕವಾಗಿ ಮಾರಾಟ ಮಾಡುತ್ತದೆ. ಪೆಟ್ರೋಡಾಲರ್ ವ್ಯವಸ್ಥೆಯು ಜಾಗತಿಕ ತೈಲ ಮಾರುಕಟ್ಟೆಯ ಮೂಲಾಧಾರವಾಗಿದೆ ಮತ್ತು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಯುಎಸ್ ಡಾಲರ್ ಅನ್ನು ಹೆಚ್ಚು ಪ್ರಭಾವಶಾಲಿಗೊಳಿಸಿದೆ. ಪೆಟ್ರೋಡಾಲರ್ ಒಪ್ಪಂದವು ಆರ್ಥಿಕ ಸಹಕಾರ ಮತ್ತು ಸೌದಿ ಅರೇಬಿಯಾದ ಮಿಲಿಟರಿ ಅಗತ್ಯಗಳಿಗಾಗಿ ಜಂಟಿ ಆಯೋಗಗಳನ್ನು ಸ್ಥಾಪಿಸಿತ್ತು.

ಯಾವಾಗ ಸಹಿ ಹಾಕಲಾಯಿತು?

ಯುಎಸ್ ಸರ್ಕಾರದ ಪರವಾಗಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಮತ್ತು ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ಮತ್ತು ಸೌದಿ ರಾಜಮನೆತನದ ನೇತೃತ್ವದಲ್ಲಿ ನಡೆದ ಮಾತುಕತೆ ವೇಳೆ 1974ರ ಜೂನ್ 8ರಂದು ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಅನಂತರ ಪೆಟ್ರೋಡಾಲರ್ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು.

ಈ ಒಪ್ಪಂದದ ಪ್ರಕಾರ ಸೌದಿ ಆಡಳಿತದ ಭದ್ರತೆಯನ್ನು ಖಾತರಿಪಡಿಸಲು ಯುಎಸ್ ಮಿಲಿಟರಿ ಸಹಾಯವನ್ನು ಒದಗಿಸುವ ಬದಲಾಗಿ ಸೌದಿ ಅರೇಬಿಯಾ ತನ್ನ ತೈಲ ರಫ್ತುಗಳಿಗೆ ಯುಎಸ್ ಡಾಲರ್‌ಗಳಲ್ಲಿ ಪ್ರತ್ಯೇಕವಾಗಿ ಬೆಲೆ ನೀಡಲು ಒಪ್ಪಿಕೊಂಡಿತು. ಈ ಒಪ್ಪಂದವು ಯುಎಸ್ ಡಾಲರ್‌ಗೆ ಸ್ಥಿರವಾದ ಬೇಡಿಕೆಯನ್ನು ಖಾತ್ರಿಪಡಿಸಿತು. ಏಕೆಂದರೆ ಇತರ ದೇಶಗಳಿಗೆ ತೈಲವನ್ನು ಖರೀದಿಸಲು ಡಾಲರ್‌ಗಳ ಅಗತ್ಯವಿತ್ತು. ವಿಶ್ವದ ಪ್ರಾಥಮಿಕ ಮೀಸಲು ಕರೆನ್ಸಿಯಾಗಿ ಡಾಲರ್‌ನ ಸ್ಥಿತಿಯನ್ನು ಪರಿಣಾಮಕಾರಿಯಾಗಿ ಬಲಪಡಿಸಿತು.

ಪೆಟ್ರೋಡಾಲರ್ ಒಪ್ಪಂದದ ಮಹತ್ವವೇನು?

ಪೆಟ್ರೋಡಾಲರ್ ವ್ಯವಸ್ಥೆಯು ಹಲವಾರು ಕಾರಣಗಳಿಗಾಗಿ ಗಮನಾರ್ಹವಾಗಿದೆ.

ಯುಎಸ್ ಡಾಲರ್ ಪ್ರಾಬಲ್ಯ

ಈ ಒಪ್ಪಂದವು ಯುಎಸ್ ಡಾಲರ್‌ನ ಸ್ಥಾನವನ್ನು ವಿಶ್ವದ ಪ್ರಬಲ ಕರೆನ್ಸಿಯಾಗಿ ಭದ್ರಪಡಿಸಿತು. ಅಂತಾರಾಷ್ಟ್ರೀಯ ವ್ಯಾಪಾರವನ್ನು ಸುಗಮಗೊಳಿಸಿತು ಮತ್ತು ಜಾಗತಿಕ ಹಣಕಾಸು ವ್ಯವಸ್ಥೆಯ ಮೇಲೆ ಯುಎಸ್ ಗಮನಾರ್ಹ ಪ್ರಭಾವವನ್ನು ಬೀರಲು ಅನುವು ಮಾಡಿಕೊಟ್ಟಿತ್ತು.

ಆರ್ಥಿಕ ಸ್ಥಿರತೆ

ಯುಎಸ್ ಡಾಲರ್‌ಗೆ ಸ್ಥಿರವಾದ ಬೇಡಿಕೆಯು ಅದರ ಮೌಲ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡಿತು ಮತ್ತು ತಕ್ಷಣದ ಆರ್ಥಿಕ ಪರಿಣಾಮಗಳನ್ನು ಎದುರಿಸದೆ ದೊಡ್ಡ ವ್ಯಾಪಾರ ಕೊರತೆಗಳನ್ನು ಚಲಾಯಿಸುವ ಅನನ್ಯ ಸಾಮರ್ಥ್ಯವನ್ನು ಯುಎಸ್ ಗೆ ಒದಗಿಸಿತು.


ಭೌಗೋಳಿಕ ರಾಜಕೀಯ ಪ್ರಭಾವ

ಯುಎಸ್ ಮತ್ತು ಸೌದಿ ಅರೇಬಿಯಾ ನಡುವಿನ ಕಾರ್ಯತಂತ್ರದ ಮೈತ್ರಿಯನ್ನು ಪಡೆದುಕೊಂಡಿತು. ಮಧ್ಯಪ್ರಾಚ್ಯದಲ್ಲಿ ಅದರ ತೈಲ ಸಂಪನ್ಮೂಲಗಳಿಗೆ ನಿರ್ಣಾಯಕ ಪ್ರದೇಶವಾದ ಅಮೆರಿಕದ ಪ್ರಭಾವವನ್ನು ಖಾತ್ರಿಪಡಿಸಿತು.

ಹಣಕಾಸು ಮಾರುಕಟ್ಟೆಗಳು

ಪೆಟ್ರೋಡಾಲರ್ ಮರುಬಳಕೆಯ ಕಾರ್ಯವಿಧಾನವು ತೈಲ- ರಫ್ತು ಮಾಡುವ ದೇಶಗಳಿಗೆ ತಮ್ಮ ಹೆಚ್ಚುವರಿ ಡಾಲರ್‌ಗಳನ್ನು ಯುಎಸ್ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಅವಕಾಶ ಮಾಡಿಕೊಟ್ಟಿತು. ಇದರಿಂದಾಗಿ ಅಮೆರಿಕಾದ ಹಣಕಾಸು ಮಾರುಕಟ್ಟೆಗಳು ಮತ್ತು ಸರ್ಕಾರದ ಸಾಲಕ್ಕೆ ಬೆಂಬಲವಾಯಿತು.

ಒಪ್ಪಂದ ನವೀಕರಿಸದಿರುವ ಪರಿಣಾಮ ಏನು?

ಪೆಟ್ರೋಡಾಲರ್ ಒಪ್ಪಂದವನ್ನು ಅಂತ್ಯಗೊಳಿಸಲು ಸೌದಿ ಅರೇಬಿಯಾದ ನಿರ್ಧಾರವು ದೂರಾಲೋಚನೆಯನ್ನು ಹೊಂದಿದೆ. ಇದು ಬಹಳ ಪರಿಣಾಮಗಳನ್ನು ಉಂಟುಮಾಡುತ್ತದೆ. ಪೆಟ್ರೋಡಾಲರ್ ವ್ಯವಸ್ಥೆಯ ಅಂತ್ಯದಿಂದ ಯುಎಸ್ ಡಾಲರ್‌ಗೆ ಜಾಗತಿಕ ಬೇಡಿಕೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಯುರೋ, ಚೈನೀಸ್ ಯುವಾನ್ ಅಥವಾ ಕ್ರಿಪ್ಟೋಕರೆನ್ಸಿಗಳಂತಹ ಇತರ ಕರೆನ್ಸಿಗಳು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳಬಹುದು. ಇದು ಡಾಲರ್‌ನ ಪ್ರಾಬಲ್ಯವನ್ನು ಕಡಿಮೆ ಮಾಡುತ್ತದೆ. ಸೌದಿ ಅರೇಬಿಯಾ ಪ್ರಾಜೆಕ್ಟ್ ಎಂಬ್ರಿಡ್ಜ್‌ನಲ್ಲಿ ಭಾಗವಹಿಸಿದೆ. ಇದು ಕೇಂದ್ರೀಯ ಬ್ಯಾಂಕುಗಳು ಮತ್ತು ವಾಣಿಜ್ಯ ಬ್ಯಾಂಕುಗಳ ಬಳಕೆಗಾಗಿ ಡಿಜಿಟಲ್ ಕರೆನ್ಸಿ ಪ್ಲಾಟ್‌ಫಾರ್ಮ್ ಅನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Aliens: ಏಲಿಯನ್‌ಗಳು ಅನ್ಯಗ್ರಹ ಜೀವಿಗಳಲ್ಲ; ಈ ಭೂಮಿಯ ರಹಸ್ಯ ನಿವಾಸಿಗಳು! ಹಾರ್ವರ್ಡ್ ವಿಜ್ಞಾನಿಗಳ ಸಂಶೋಧನೆ

ವಿನಿಮಯ ದರಗಳಲ್ಲಿ ಚಂಚಲತೆ

ಡಾಲರ್‌ಗೆ ಬೇಡಿಕೆಯಲ್ಲಿನ ಕಡಿತವು ವಿನಿಮಯ ದರ ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಚಂಚಲತೆಗೆ ಕಾರಣವಾಗಬಹುದು. ಇದು ಡಾಲರ್ ನಾಮಕರಣದ ವ್ಯಾಪಾರ ಮತ್ತು ಸಾಲದ ಮೇಲೆ ಹೆಚ್ಚು ಅವಲಂಬಿತವಾಗಿರುವ ದೇಶಗಳ ಮೇಲೆ ಪರಿಣಾಮ ಬೀರಬಹುದು.

ಅಮೆರಿಕಕ್ಕೆ ಆರ್ಥಿಕ ಸವಾಲು

ಯುಎಸ್ ತನ್ನ ಕೊರತೆಗಳಿಗೆ ಹಣಕಾಸು ಒದಗಿಸಲು ಮತ್ತು ಪೆಟ್ರೋಡಾಲರ್‌ಗಳ ನಿರಂತರ ಒಳಹರಿವು ಇಲ್ಲದೆ ತನ್ನ ಆರ್ಥಿಕ ಪ್ರಾಬಲ್ಯವನ್ನು ಉಳಿಸಿಕೊಳ್ಳುವಲ್ಲಿ ಸವಾಲುಗಳನ್ನು ಎದುರಿಸಬಹುದು. ಇದು ಹೆಚ್ಚಿನ ಬಡ್ಡಿ ದರ ಮತ್ತು ಹಣಕಾಸಿನ ನೀತಿಗಳ ಮರುಮೌಲ್ಯಮಾಪನಕ್ಕೆ ಕಾರಣವಾಗಬಹುದು.

ಭೌಗೋಳಿಕ ರಾಜಕೀಯ ಮರುಜೋಡಣೆ

ಈ ಒಪ್ಪಂದದ ಮುಕ್ತಾಯವು ಜಾಗತಿಕ ಮೈತ್ರಿಗಳ ಮರುಜೋಡಣೆಗೆ ಕಾರಣವಾಗಬಹುದು. ಸೌದಿ ಅರೇಬಿಯಾವು ಚೀನಾ ಅಥವಾ ರಷ್ಯಾದಂತಹ ಇತರ ಪ್ರಮುಖ ಶಕ್ತಿಗಳೊಂದಿಗೆ ಸಂಬಂಧವನ್ನು ಬಲಪಡಿಸಲು ಪ್ರಯತ್ನಿಸಬಹುದು. ಆ ಮೂಲಕ ಮಧ್ಯಪ್ರಾಚ್ಯ ಮತ್ತು ಅದರಾಚೆಗಿನ ಭೌಗೋಳಿಕ ರಾಜಕೀಯ ಚಿತ್ರಣ ಬದಲಾಗಬಹುದು.

ತೈಲ ಮಾರುಕಟ್ಟೆ

ತೈಲ ರಫ್ತು ಮಾಡುವ ದೇಶಗಳು ತಮ್ಮ ತೈಲಕ್ಕಾಗಿ ಬಹು ಕರೆನ್ಸಿಗಳನ್ನು ಸ್ವೀಕರಿಸಲು ಪ್ರಾರಂಭಿಸಬಹುದು. ಇದು ಹೆಚ್ಚು ವೈವಿಧ್ಯಮಯ ಮತ್ತು ಹೆಚ್ಚು ಸಂಕೀರ್ಣವಾದ ತೈಲ ಮಾರುಕಟ್ಟೆಗೆ ಕಾರಣವಾಗುತ್ತದೆ. ಇದು ಜಾಗತಿಕ ತೈಲ ಬೆಲೆಗಳು ಮತ್ತು ವ್ಯಾಪಾರ ಅಭ್ಯಾಸಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಭಾರತ ಕೆಲವು ತೈಲ ರಾಷ್ಟ್ರಗಳ ಜತೆ ಡಾಲರ್‌ ಬದಲು ರೂಪಾಯಿಯಲ್ಲೇ ವ್ಯವಹಾರ ನಡೆಸಲು ಆರಂಭಿಸಿದೆ.

Continue Reading
Advertisement
Viral Video
Latest6 mins ago

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

JP Nadda
ದೇಶ12 mins ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ13 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್22 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್37 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ45 mins ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

LKG UKG In Govt Schools
ಕರ್ನಾಟಕ50 mins ago

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

Sex Doll
ದೇಶ58 mins ago

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

Job Alert
ಉದ್ಯೋಗ59 mins ago

Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

Unusual Story
Latest60 mins ago

Unusual Story: 15 ವರ್ಷದ ವಿದ್ಯಾರ್ಥಿಯಿಂದ ಶಿಕ್ಷಕಿ ಗರ್ಭಿಣಿ! ಜೈಲು ಶಿಕ್ಷೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌