ತುಕಡೆ ತುಕಡೆ ಗ್ಯಾಂಗ್‌ ರೀತಿಯಲ್ಲೆ ಬರಗೂರು ಕೆಲಸ: ಸಚಿವ ನಾಗೇಶ್‌ - Vistara News

ಪ್ರಮುಖ ಸುದ್ದಿ

ತುಕಡೆ ತುಕಡೆ ಗ್ಯಾಂಗ್‌ ರೀತಿಯಲ್ಲೆ ಬರಗೂರು ಕೆಲಸ: ಸಚಿವ ನಾಗೇಶ್‌

ಪಠ್ಯಪುಸ್ತಕ ವಿವಾದ ಬಗೆಹರಿಯಿತು ಎನ್ನುವಷ್ಟರಲ್ಲೆ ದೇಶದ ಪ್ರಮುಖ ಇತಿಹಾಸಕಾರರೂ ಇದೀಗ ಕರ್ನಾಟಕದ ವಿಚಾರಕ್ಕೆ ಮಧ್ಯಪ್ರವೇಶಿದಿದ್ದಾರೆ.

VISTARANEWS.COM


on

BC Nagesh
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ದೇಶವನ್ನು ತುಂಡರಿಸುವ ಘೋಷಣೆ ಹಾಗೂ ಕೃತ್ಯ ಎಸಗುವ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ ರೀತಿಯಲ್ಲೆ ಪ್ರೊ. ಬರಗೂರು ರಾಮಚಂದ್ರಪ್ಪ ಕೆಲಸ ಮಾಡಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆರೋಪಿಸಿದ್ದಾರೆ.

ರಾಜ್ಯಾದ್ಯಂತ ಪಠ್ಯಪುಸ್ತಕ ವಿವಾದ ಮುಕ್ತಾಯ ಕಾಣುತ್ತಿರುವಂತೆಯೇ ಜವಾಹರಲಾಲ್‌ ನೆಹರೂ ವಿವಿಯ ರೊಮಿಲಾ ಥಾಪರ್‌ ಸೇರಿ ಅನೇಕರು ಬಹಿರಂಗ ಪತ್ರವೊಂದನ್ನು ಸೋಮವಾರ ಬರೆದಿದ್ದರು.ತಿರುಚಿದ ಇತಿಹಾಸ ಮಕ್ಕಳಿಗೆ ಕಲಿಸಿಕೊಡಬೇಡಿ. ಒಳ್ಳೆಯ ಶಿಕ್ಷಣಕ್ಕೆ ಉತ್ತಮ ಪಠ್ಯಪುಸ್ತಕವೇ ಅಡಿಪಾಯ. ಇತಿಹಾಸ ಪಠ್ಯದಲ್ಲಿ ಏನೆಲ್ಲಾ ಮಾಹಿತಿ ಇರಬೇಕು ಎಂಬುದನ್ನು ಖ್ಯಾತ ಇತಿಹಾಸಕಾರರು ತೀರ್ಮಾನಿಸಬೇಕು. ಇತಿಹಾಸದಲ್ಲಿ ಏನು ತೆಗೆದುಕೊಳ್ಳಬೇಕು ಎಂದು ರಾಜಕಾರಣಿಗಳು, ಅಧಿಕಾರಿಗಳು ನಿರ್ಧರಿಸಬಾರದು. ಸಾರ್ವಜನಿಕರ ಅಭಿಪ್ರಾಯ ಅಥವಾ ರಾಜಕಾರಣಿಗಳ ಪ್ರೊಪಗಂಡಾ ಮೇಲೆ ಪಠ್ಯ ರಚಿಸಲು ಸಾದ್ಯವಿಲ್ಲ ಎಂದಿದ್ದರು.

ಇದನ್ನೂ ಓದಿ | ಪಠ್ಯಪುಸ್ತಕ ನೆಪದಲ್ಲಿ ಅಶಾಂತಿ: ಸಿಎಂ ರಾಜೀನಾಮೆಗೆ ಡಿ. ಕೆ. ಶಿವಕುಮಾರ್ ಆಗ್ರಹ

ಆರ್ಯ ದ್ರಾವಿಡ ಸಿದ್ಧಾಂತದ ಕುರಿತು ಮಾತನಾಡಿದ್ದ ರೋಮಿಲಾ ಥಾಪರ್‌, ದ್ರಾವಿಡ ಇತಿಹಾಸ ಮಹತ್ವದ ಘಟ್ಟ. ಉತ್ತರ ಭಾರತಕ್ಕೆ ಆರ್ಯ ಸಮಾಜದ ರೀತಿಯಲ್ಲೆ ದಕ್ಷಿಣ ಭಾರತಕ್ಕೆ ದ್ರಾವಿಡ ಇತಿಹಾಸ ಅತ್ಯಂತ ಮಹತ್ವ. ಉತ್ತರ ಭಾರತದಲ್ಲಿ ಸುಲ್ತಾನಗಳು, ಮುಘಲರ ಇತಿಹಾಸವನ್ನು ತಿರಸ್ಕರಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ಪುರತಾನ ಕಾಲದ ಇತಿಹಾಸ ತಿಳಿಸಿಕೊಡುವುದು ಅತ್ಯಂತ ಮಹತ್ವ. ಇತಿಹಾಸ ಫಿಕ್ಷನ್ ಅಲ್ಲ. ಕೆಲ ದಾಖಲೆಗಳ ಮೇಲೆ ಇತಿಹಾಸ ಅವಲಂಬಿತವಾಗಿರುತ್ತದೆ ಎಂದಿದ್ದರು.

ಅದೇ ರೀತಿ ಪ್ರೊ. ಆದಿತ್ಯ ಮುಖರ್ಜಿಯೂ ಪತ್ರ ಬರೆದು, ಶಿಕ್ಷಣದಲ್ಲಿ ಅತ್ಯುನ್ನತ ಮೈಲಿಗಲ್ಲು ಸಾಧಿಸಿ, ಶ್ರೀಮಂತ ಸಾಂಸ್ಕೃತಿಕ ನೆಲೆ ಹೊಂದಿರುವ ರಾಜ್ಯದಲ್ಲಿ ಈ ಬೆಳವಣಿಗೆ ನಡೆಯುತ್ತಿರುವುದು ಆಶ್ಚರ್ಯ ಮೂಡಿಸಿದೆ. ಕರ್ನಾಟಕ ರಾಜ್ಯದಲ್ಲಿ ಸದ್ಯದ ಬೆಳವಣಿಗೆ ನೋಡಿದರೆ ಇತಿಹಾಸವನ್ನು ತಿರುಚುವ ಕೆಲಸ ಆಗಿದೆ. ಹೊಸ ವಿಚಾರವನ್ನು ತುರುಕುವ ಮೂಲಕ ದೇಶದ ಜಾತ್ಯತೀತ ಮನೋಭಾವಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ರಾಜ್ಯದ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ಅಂಶಗಳನ್ನು ನೋಡಿ ನಮಗೆ ಗಾಬರಿ ಉಂಟಾಗಿದೆ ಎಂದಿದ್ದರು.

ಈ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. “ಜೆಎನ್‌ಯುನವರು ಭಾರತ್‌ ತುಕಡಾ ಗ್ಯಾಂಗ್‌ನವರೇ ಬರಗೂರು ನೇತೃತ್ವದಲ್ಲಿ ಕೆಲಸ ಮಾಡಿದ್ದರು. ಭಾರತಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಅದನ್ನು ಮಕ್ಕಳಿಗೆ ಕಲಿಸಬೇಕು. ಬ್ರಿಟಿಷರು ಬರುವ ಮುನ್ನವೇ ಈ ದೇಶದಲ್ಲಿ ಜ್ಞಾನಕ್ಕೆ ಒತ್ತು ಕೊಟ್ಟಿದ್ದೆವು. ಇದೆಲ್ಲವನ್ನೂ ಮಕ್ಕಳಿಗೆ ಕಲಿಸಬೇಕು.

ಈ ಪತ್ರ ಬರೆದಿರುವವರಿಗೆ ಕನ್ನಡ ಬರಲ್ಲ. ಹಾಗಾದರೆ ಅವರೆಲ್ಲ ಹೇಗೆ ಇದಕ್ಕೆ ಪ್ರತಿಕ್ರಿಯೆ ನೀಡಿದರೂ? ಅವರೆಲ್ಲ ಹೀಗೆ ಪತ್ರ ಬರೆದಿದ್ದಾರೆ ಎಂದರೆ ಎಲ್ಲರೂ ತುಕಡೆ ತುಕಡೆ ಗ್ಯಾಂಗ್‌ನವರು ಎಂದರ್ಥ. ಇಲ್ಲದಿದ್ದರೆ ಅವರೇಕೆ ಪತ್ರ ಬರೆದಿದ್ದಾರೆ? ಇದರ ಹಿಂದೆ ಹಿಂದು ಸಮಾಜವನ್ನು ಒಡೆಯುವ ದೊಡ್ಡ ಗ್ಯಾಂಗ್‌ ಇದೆ. ಪಾಕಿಸ್ತಾನದ ಫ್ಲಾಗ್‌ ಹಾರಿಸುವ ಒಂದಷ್ಟು ಜನ ಇದರಲ್ಲೂ ಇದ್ದಾರೆ ಎಂದು ಇದರಿಂದ ಸಾಬೀತಾಗಿದೆ ಎಂದಿದ್ದಾರೆ.

ಇದನ್ನೂ ಓದಿ | ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಪತ್ರ ಬರೆದಿದ್ದ ಸಾಹಿತಿಗಳ ಪೂರ್ವಾಪರ ಜಾಲಾಡಲಿದೆ ಗುಪ್ತಚರ ಇಲಾಖೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Prajwal Revanna Case: ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿರುವ ಎಸ್‌ಐಟಿ ತಂಡ‌ವು ಏರ್‌ಪೋರ್ಟ್‌ ಸಿಬ್ಬಂದಿ, ಅಧಿಕಾರಿಗಳಿಗೆ ಸೂಚನೆ‌ ನೀಡಿದೆ. ಪ್ರಜ್ವಲ್ ರೇವಣ್ಣ ಕಂಡ ಕೂಡಲೇ ವಶಕ್ಕೆ ಪಡೆಯುವಂತೆ ಹೇಳಲಾಗಿದೆ. ಈ ಸಂಬಂಧ ಏರ್‌ಪೋರ್ಟ್‌ನ ಇಮಿಗ್ರೇಷನ್ ಅಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ವಿದೇಶದಿಂದ ಬಂದ ಕೂಡಲೇ ಇಮಿಗ್ರೇಷನ್‌ಗೆ ಪ್ರಜ್ವಲ್‌ ಹೋಗಬೇಕು. ಈ ವೇಳೆ ಅಲ್ಲಿಯೇ ವಶಕ್ಕೆ ಪಡೆದು ಸ್ಥಳೀಯ ಪೊಲೀಸರಿಗೆ ಹಸ್ತಾಂತರ ಮಾಡಲು ನಿರ್ದೇಶನ ನೀಡಲಾಗಿದೆ.

VISTARANEWS.COM


on

Prajwal Revanna Case Locked up as Prajwal arrives at Bengaluru airport
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಲುಕ್‌ ಔಟ್‌ ನೋಟಿಸ್‌ ನೀಡಿ ಬಿಸಿ ಮುಟ್ಟಿಸಲಾಗಿದ್ದರಿಂದ ಪ್ರಜ್ವಲ್‌ ರೇವಣ್ಣ ಯಾವ ಸಮಯದಲ್ಲಿ ಬೇಕಿದ್ದರೂ ಬೆಂಗಳೂರಿಗೆ ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಅಲ್ಲಿಯೇ ಲಾಕ್‌ ಮಾಡಲು ಪ್ಲ್ಯಾನ್‌ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿರುವ ಎಸ್‌ಐಟಿ ತಂಡ‌ವು ಏರ್‌ಪೋರ್ಟ್‌ ಸಿಬ್ಬಂದಿ, ಅಧಿಕಾರಿಗಳಿಗೆ ಸೂಚನೆ‌ ನೀಡಿದೆ. ಪ್ರಜ್ವಲ್ ರೇವಣ್ಣ ಕಂಡ ಕೂಡಲೇ ವಶಕ್ಕೆ ಪಡೆಯುವಂತೆ ಹೇಳಲಾಗಿದೆ. ಈ ಸಂಬಂಧ ಏರ್‌ಪೋರ್ಟ್‌ನ ಇಮಿಗ್ರೇಷನ್ ಅಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ವಿದೇಶದಿಂದ ಬಂದ ಕೂಡಲೇ ಇಮಿಗ್ರೇಷನ್‌ಗೆ ಪ್ರಜ್ವಲ್‌ ಹೋಗಬೇಕು. ಈ ವೇಳೆ ಅಲ್ಲಿಯೇ ವಶಕ್ಕೆ ಪಡೆದು ಸ್ಥಳೀಯ ಪೊಲೀಸರಿಗೆ ಹಸ್ತಾಂತರ ಮಾಡಲು ನಿರ್ದೇಶನ ನೀಡಲಾಗಿದೆ. ಇದಾದ ಬಳಿಕ ಏರ್‌ಪೋರ್ಟ್‌ ಪೋಲಿಸರು ಎಸ್‌.ಐ.ಟಿ. ಅಧಿಕಾರಿಗಳಿಗೆ ಪ್ರಜ್ವಲ್ ಅವರನ್ನು ವಶಕ್ಕೆ ನೀಡುತ್ತಾರೆ.

ಪ್ರಜ್ವಲ್‌ ವೀಸಾ, ಪಾಸ್‌ಪೋರ್ಟ್‌ ರವಾನೆ

ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಫೋಟೊ, ವೀಸಾ ಪಾಸ್‌ಪೋರ್ಟ್‌ನ ಮಾಹಿತಿಯನ್ನು ಏರ್‌ಪೋರ್ಟ್‌ನ ಸಿಬ್ಬಂದಿಗೆ ರವಾನೆ ಮಾಡಲಾಗಿದೆ. ಅಲ್ಲದೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪೊಲೀಸರು ಸಹ ಬೀಡುಬಿಟ್ಟಿದ್ದಾರೆ. ಸುತ್ತಮುತ್ತ ಹೈ ಅಲರ್ಟ್ ಆಗಿದ್ದು, ಪ್ರಜ್ವಲ್‌ ಬರುತ್ತಿದ್ದಂತೆ ಅಲ್ಲಿಯೇ ಹಿಡಿದು ಕರೆದೊಯ್ಯಲು ಮುಂದಾಗಲಾಗಿದೆ.

ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆ ಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟಿಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟಿಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Continue Reading

ಕ್ರಿಕೆಟ್

Andre Russell : ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

Andre Russell: ಡಿಜೆ ಬ್ರಾವೋ ಅವರ ಹೆಜ್ಜೆಗಳನ್ನು ಅನುಸರಿಸಿರುವ ಆ್ಯಂಡ್ರೆ ರಸೆಲ್ ಈಗ ಸಂಗೀತ ಜಗತ್ತಿಗೆ ಕಾಲಿಡುತ್ತಿದ್ದಾರೆ. ಇದು ಬಾಲಿವುಡ್​ನಲ್ಲಿ ಅವರು ಗಾಯನ ವೃತ್ತಿಜೀವನ ಆರಂಭಿಸಿದ್ದಾರೆ. ಪಲಾಶ್ ಮುಚಲ್ ಸಂಯೋಜಿಸಿದ ಹಾಡಿಗೆ ರಸೆಲ್ ಧ್ವನಿ ನೀಡಲಿದ್ದಾರೆ ಎಂದು ಖಚಿತಪಡಿಸಲಾಗಿದೆ. ಹೆಚ್ಚುವರಿಯಾಗಿ ಅವರು ಮ್ಯೂಸಿಕ್ ವೀಡಿಯೊದಲ್ಲಿ ನಟಿ ಅವಿಕಾ ಗೋರ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Andre Russell
Koo

ಬೆಂಗಳೂರು: ವೆಸ್ಟ್ ಇಂಡೀಸ್ ಆಟಗಾರರು ನಿಸ್ಸಂದೇಹವಾಗಿ ಐಪಿಎಲ್​ನಲ್ಲಿ ಯಾವುದೇ ತಂಡದ ದೊಡ್ಡ ಆಸ್ತಿ. ತಮ್ಮ 100% ಬದ್ಧತೆ ಮತ್ತು ಪವರ್-ಹಿಟ್ಟಿಂಗ್ ಸಾಮರ್ಥ್ಯಗಳಿಗೆ ಹೆಸರುವಾಸಿಯಾದ ಅವರು ಮೈದಾನದಲ್ಲಿ ಮರೆಯಲಾಗ ಛಾಪು ಮೂಡಿಸುತ್ತಾರೆ. ಇದಲ್ಲದೆ ಅವರು ಆಗಾಗ್ಗೆ ಡ್ರೆಸ್ಸಿಂಗ್ ಕೋಣೆಯಲ್ಲಿ ಖುಷಿಯ ಮೂಲವಾಗಿ ಕಾರ್ಯನಿರ್ವಹಿಸುತ್ತಾರೆ. ತಂಡಕ್ಕೆ ಮನರಂಜನೆ ಮತ್ತು ಶಕ್ತಿಯ ಅಂಶಗಳನ್ನು ಸೇರಿಸುತ್ತಾರೆ. ಅಂತೆಯೇ ಕೆಕೆಆರ್​ ತಂಡದ ಆ್ಯಂಡ್ರೆ ರಸೆಲ್​ (Andre Russell) ಬಾಲಿವುಡ್​ಗೆ ಪ್ರವೇಶ ಮಾಡುವ ಸೂಚನೆ ನೀಡಿದ್ದು ಈ ತಂಡದ ಪಾಲಿಗೆ ವಿಶೇಷ ಸುದ್ದಿ ಎನಿಸಿದೆ.

ಕ್ರಿಸ್ ಗೇಲ್, ಡಿಜೆ ಬ್ರಾವೋ, ಕೀರನ್ ಪೊಲಾರ್ಡ್, ಡ್ಯಾರೆನ್ ಸಾಮಿ ಮತ್ತು ಪ್ರಸ್ತುತ ಕೆಕೆಆರ್ ಸೆನ್ಸೇಷನ್ ಆ್ಯಂಡ್ರೆ ರಸೆಲ್ ಸೇರಿದಂತೆ ಹಲವಾರು ವೆಸ್ಟ್ ಇಂಡೀಸ್ ಕ್ರಿಕೆಟಿಗರು ಐಪಿಎಲ್​​ನಲ್ಲಿ ತಮ್ಮ ಉಪಸ್ಥಿತಿ ಮತ್ತು ಪ್ರದರ್ಶನದಿಂದ ಮಿಂಚಿದ್ದಾರೆ.

ಬಾಲಿವುಡ್ ಗೆ ಕಾಲಿಟ್ಟ ರಸೆಲ್

ಡಿಜೆ ಬ್ರಾವೋ ಅವರ ಹೆಜ್ಜೆಗಳನ್ನು ಅನುಸರಿಸಿರುವ ಆ್ಯಂಡ್ರೆ ರಸೆಲ್ ಈಗ ಸಂಗೀತ ಜಗತ್ತಿಗೆ ಕಾಲಿಡುತ್ತಿದ್ದಾರೆ. ಇದು ಬಾಲಿವುಡ್​ನಲ್ಲಿ ಅವರು ಗಾಯನ ವೃತ್ತಿಜೀವನ ಆರಂಭಿಸಿದ್ದಾರೆ. ಪಲಾಶ್ ಮುಚಲ್ ಸಂಯೋಜಿಸಿದ ಹಾಡಿಗೆ ರಸೆಲ್ ಧ್ವನಿ ನೀಡಲಿದ್ದಾರೆ ಎಂದು ಖಚಿತಪಡಿಸಲಾಗಿದೆ. ಹೆಚ್ಚುವರಿಯಾಗಿ ಅವರು ಮ್ಯೂಸಿಕ್ ವೀಡಿಯೊದಲ್ಲಿ ನಟಿ ಅವಿಕಾ ಗೋರ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: T20 World Cup : ವಿಶ್ವ ಕಪ್​ ತಂಡದಿಂದ ಅರ್ಶ್​​ದೀಪ್​ ಕೈಬಿಡಲು ಆಗ್ರಹ; ಏನಾಯಿತು ಅವರಿಗೆ?

“ಲಡ್ಕಿ ತೋ ಕಮಾಲ್ ಕಿ” ಎಂಬ ಶೀರ್ಷಿಕೆಯ ಈ ಹಾಡು ಮೇ9 ರಂದು ವೊಯಿಲಾ ಡಿಗ್ ಬ್ಯಾನರ್ ಅಡಿಯಲ್ಲಿ ಬಿಡುಗಡೆಯಾಗಲಿದೆ.

ರಸೆಲ್ ಗಾಗಿ ಹಾಡು ಹಾಡುತ್ತಾರೆಯೇ ಶಾರುಖ್​

ಆ್ಯಂಡ್ರೆ ರಸೆಲ್ ಬೇರೆಡೆ ಅವಕಾಶಗಳನ್ನು ಹುಡುಕುವ ಅಗತ್ಯವಿಲ್ಲ. ಏಕೆಂದರೆ ಅವರಿಗೆ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಮಾಲೀಕ ಮತ್ತು ಬಾಲಿವುಡ್ನ ದಿಗ್ಗಜ ಶಾರುಖ್ ಖಾನ್ ಅವರ ಬೆಂಬಲವಿದೆ. ಶಾರುಖ್​ ಕೇವಲ ತಂಡದ ಮಾಲೀಕರಲ್ಲ; ಅವರು ಕೆಕೆಆರ್ ಕುಟುಂಬದಲ್ಲಿ ಮನರಂಜನೆಯ ಮೂಲ. ರಸೆಲ್ ಮತ್ತು ಶಾರುಖ್​ ಆಗಾಗ್ಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಾರೆ. ಪರಸ್ಪರರ ಸಹವಾಸವನ್ನು ಆನಂದಿಸುತ್ತಾರೆ. ಉತ್ತಮ ಸಮಯ ಕಳೆಯುತ್ತಾರೆ. ಆದ್ದರಿಂದ ಇಬ್ಬರು ಸೂಪರ್​ಸ್ಟಾರ್​ ಕೊಲಾಬ್ ಅನ್ನು ನಾವು ಸಕಾರಾತ್ಮಕವಾಗಿ ನಿರೀಕ್ಷಿಸಬಹುದು.

ಇತ್ತೀಚಿನ ಕೆಲವು ದಿನಗಳ ಹಿಂದೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಡಂಕಿ ಚಲನಚಿತ್ರದ ಶಾರುಖ್​ ಅವರ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡುತ್ತಿರುವುದು ಕಂಡುಬಂದಿತ್ತು. ಅಲ್ಲಿ ಅವರು ಕೆಕೆಆರ್ ತಂಡದ ಸಹ ಆಟಗಾರ ರಿಂಕು ಸಿಂಗ್ ಅವರೊಂದಿಗೆ ಕಾಣಿಸಿಕೊಂಡರು.

Continue Reading

ಸಿನಿಮಾ

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Jolly LLB 3: ಜಾಲಿ ಎಲ್‌ಎಲ್‌ಬಿ 3 ಸಿನಿಮಾ ಶೂಟಿಂಗ್‌ ಆರಂಭವಾಗಿರುವ ಕುರಿತು ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಾರಿ ಅರ್ಷದ್‌ ವಾರ್ಸಿ ಹಾಗೂ ಅಕ್ಷಯ್‌ ಕುಮಾರ್‌ ಅವರು ಪಾರ್ಟ್‌ 3ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಿನಿಮಾ ಬಿಡುಗಡೆ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

VISTARANEWS.COM


on

Jolly LLB 3
Koo

ಮುಂಬೈ: ಅರ್ಷದ್‌ ವಾರ್ಸಿ ನಟನೆಯ ಜಾಲಿ ಎಲ್‌ಎಲ್‌ಬಿ (Jolly LLB) ಹಾಗೂ ಅಕ್ಷಯ್‌ ಕುಮಾರ್‌ (Askhay Kumar) ಅಭಿನಯದ ಜಾಲಿ ಎಲ್‌ಎಲ್‌ಬಿ 2 (Jolly LLB 2) ಸಿನಿಮಾಗಳು ಸೂಪರ್‌ ಹಿಟ್‌ ಆಗಿದ್ದವು. ಕೋರ್ಟ್‌ ಡ್ರಾಮಾ ಜಾನರ್‌ನ ಈ ಸಿನಿಮಾಗಳು ಕಾಮಿಡಿ ದಿಸೆಯಲ್ಲೂ ಜನರ ಮನಸೂರೆಗೊಳಿಸಿದ್ದವು. ಸೌರಭ್‌ ಶುಕ್ಲಾ ಅವರ ಮನೋಜ್ಞ ನಟನೆಯೂ ಮೆಚ್ಚುಗೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ, ನಟ ಅಕ್ಷಯ್‌ ಕುಮಾರ್‌ ಅವರು ಜಾಲಿ ಎಲ್‌ಎಲ್‌ಬಿ 3 (Jolly LLB 3) ಸಿನಿಮಾ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.

ಹೌದು, ಜಾಲಿ ಎಲ್‌ಎಲ್‌ಬಿ 3 ಸಿನಿಮಾ ಶೂಟಿಂಗ್‌ ಶುರುವಾಗಿರುವ ಕುರಿತು ಅಕ್ಷಯ್‌ ಕುಮಾರ್‌ ಅವರು ವಿಡಿಯೊ ಸಮೇತ ಮಾಹಿತಿ ನೀಡಿದ್ದಾರೆ. “ಈಗ ಅಸಲಿ ಯಾರು, ನಕಲಿ ಯಾರು ಎಂಬುದು ಗೊತ್ತಿಲ್ಲ. ಆದರೆ, ಇದು ನಿಮಗೆ ಅತ್ಯುತ್ತಮ ಸಿನಿ ಪಯಣ ಆಗಲಿದೆ. ನನ್ನ ಅಪ್‌ಡೇಟ್‌ಗಳಿಗಾಗಿ ಕಾಯುತ್ತಿರಿ. ಜೈ ಮಹಾಕಾಳ್”‌ ಎಂಬುದಾಗಿ ಅಕ್ಷಯ್‌ ಕುಮಾರ್‌ ಅವರು ವಿಡಿಯೊ ಜತೆಗೆ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಕ್ಷಯ್‌ ಕುಮಾರ್‌ ಘೋಷಣೆ ಬಳಿಕ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಿನಿ ಪ್ರೇಮಿಗಳಿಗೆ ಸರ್‌ಪ್ರೈಸ್‌

ಜಾಲಿ ಎಲ್‌ಎಲ್‌ಬಿ ಸಿನಿಮಾದಲ್ಲಿ ಅಭಿಮಾನಿಗಳಿಗೆ ಅಕ್ಷಯ್‌ ಕುಮಾರ್‌ ಸರ್‌ಪ್ರೈಸ್‌ ನೀಡಿದ್ದಾರೆ. ಜಾಲಿ ಎಲ್‌ಎಲ್‌ಬಿ ಸರಣಿಯ ಮೊದಲ ಸಿನಿಮಾದಲ್ಲಿ ಅರ್ಷದ್‌ ವಾರ್ಸಿ ಅವರು ಹೀರೊ ಆಗಿದ್ದರೆ, ಎರಡನೇ ಸಿನಿಮಾದಲ್ಲಿ ಅಕ್ಷಯ್‌ ಕುಮಾರ್‌ ಹೀರೊ ಆಗಿದ್ದರು. ಆದರೆ, ಮೂರನೇ ಭಾಗದಲ್ಲಿ ಅಕ್ಷಯ್‌ ಕುಮಾರ್‌ ಹಾಗೂ ಅರ್ಷದ್‌ ವಾರ್ಸಿ ಇಬ್ಬರೂ ಇದ್ದಾರೆ. ಎಂದಿನಂತೆ ಸೌರಭ್‌ ಶುಕ್ಲಾ ಅವರು ನ್ಯಾಯಾಧೀಶರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಸಿನಿಮಾಗೆ ಯಾರು ನಾಯಕಿ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಕ್ಷಯ್‌ ಕುಮಾರ್‌ ಹಾಗೂ ಅರ್ಷದ್‌ ವಾರ್ಸಿ ಅವರು ಇದಕ್ಕೂ ಮೊದಲು ಎರಡು ಸಿನಿಮಾಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. 2002ರಲ್ಲಿ ಬಿಡುಗಡೆಯಾದ ಜಾನಿ ದುಷ್ಮನ್: ಏಕ್‌ ಅನೋಖಿ ಕಹಾನಿ ಹಾಗೂ 2022ರಲ್ಲಿ ಬಿಡುಗಡೆಯಾದ ಬಚ್ಚನ್‌ ಪಾಂಡೆ ಸಿನಿಮಾದಲ್ಲಿ ಇಬ್ಬರೂ ಜತೆಯಾಗಿ ನಟಿಸಿದ್ದರು. ಅರ್ಷದ್‌ ವಾರ್ಸಿ ಅವರ ಜಾಲಿ ಎಲ್‌ಎಲ್‌ಬಿ 2013ರಲ್ಲಿ ಬಿಡುಗಡೆಯಾಗಿತ್ತು. ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 2 ಸಿನಿಮಾ 2017ರಲ್ಲಿ ಬಿಡುಗಡೆಯಾಗಿ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದನ್ನೂ ಓದಿ: Akshay Kumar: ತೆಲುಗು ಚಿತ್ರಕ್ಕೆ ಎಂಟ್ರಿ ಕೊಟ್ಟ ಅಕ್ಷಯ್‌ ಕುಮಾರ್‌; ಜತೆಗಿರಲಿದ್ದಾರೆ ಶಿವಣ್ಣ!

Continue Reading

ಕರ್ನಾಟಕ

Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

Karnataka legislative council: ಜೂನ್ 3ರಂದು ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಈ ಆರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ಅನುಷ್ಠಾನಕ್ಕೆ ಬರುವಂತೆ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದರ ಅನುಸಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

VISTARANEWS.COM


on

six seats of Karnataka Legislative Council Elections to be held on June 3
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ (Karnataka legislative council) 6 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಿ ಆದೇಶಿಸಲಾಗಿದೆ. ಹಾಲಿ ಸದಸ್ಯರ ಅವಧಿ ಜೂನ್ 21ಕ್ಕೆ ಮುಕ್ತಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಹೀಗಾಗಿ ಜೂನ್‌ 3ಕ್ಕೆ ಈ ಆರೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಜೂನ್ 3ರಂದು ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆ

  • ಈಶಾನ್ಯ ಪದವೀಧರ ಕ್ಷೇತ್ರ
    ನೈರುತ್ಯ ಪದವೀಧರ ಕ್ಷೇತ್ರ
    ಬೆಂಗಳೂರು ಪದವೀಧರ ಕ್ಷೇತ್ರ
  • ಆಗ್ನೇಯ ಶಿಕ್ಷಕರ ಕ್ಷೇತ್ರ
    ನೈರುತ್ಯ ಶಿಕ್ಷಕರ ಕ್ಷೇತ್ರ
    ದಕ್ಷಿಣ ಶಿಕ್ಷಕರ ಕ್ಷೇತ್ರ

ನಾಮಪತ್ರ ಸಲ್ಲಿಕೆಗೆ ಮೇ 16 ಕೊನೇ ದಿನ

ವಿಧಾನ ಪರಿಷತ್ತಿನ ಆರು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಒಂದು ವೇಳೆ ನಾಮಪತ್ರದಲ್ಲಿ ದೋಷಗಳು ಕಂಡುಬಂದಲ್ಲಿ ಚುನಾವಣಾ ಆಯೋಗವು ಅಂತಹ ನಾಮಪತ್ರವನ್ನು ತಿರಸ್ಕೃತ ಮಾಡಲಾಗಿದೆ. ನಾಮಪತ್ರವನ್ನು ಹಿಂಪಡೆಯಲು ಮೇ 20 ಕೊನೆಯ ದಿನ ಎಂದು ಚುನಾವಣಾ ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ. ಜೂನ್ 3ರಂದು ಮತದಾನ ನಡೆದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ.

ನೀತಿ ಸಂಹಿತೆ ಜಾರಿ

ಈ ಆರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ಅನುಷ್ಠಾನಕ್ಕೆ ಬರುವಂತೆ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದರ ಅನುಸಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅವಧಿ ಪೂರೈಸುತ್ತಿರುವ ಪರಿಷತ್‌ ಸದಸ್ಯರು ಇವರು

ಈಶಾನ್ಯ ಪದವೀಧರ ಕ್ಷೇತ್ರ – ಡಾ. ಚಂದ್ರಶೇಖರ್‌ ಬಿ. ಪಾಟೀಲ್
ನೈರುತ್ಯ ಪದವೀಧರ ಕ್ಷೇತ್ರ‌ – ಆಯನೂರು ಮಂಜುನಾಥ್ (2023ರ ಏಪ್ರಿಲ್‌ 19ಕ್ಕೆ ರಾಜೀನಾಮೆ)
ಬೆಂಗಳೂರು ಪದವೀಧರ ಕ್ಷೇತ್ರ‌ – ಎ. ದೇವೇಗೌಡ

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

ಆಗ್ನೇಯ ಶಿಕ್ಷಕರ ಕ್ಷೇತ್ರ – ವೈ.ಎ. ನಾರಾಯಣಸ್ವಾಮಿ
ನೈರುತ್ಯ ಶಿಕ್ಷಕರ ಕ್ಷೇತ್ರ – ಎಸ್.ಎಲ್.‌ ಭೋಜೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರ – ಮರಿತಿಬ್ಬೇಗೌಡ (2024ರ ಮಾರ್ಚ್‌ 21ಕ್ಕೆ ರಾಜೀನಾಮೆ)

Continue Reading
Advertisement
Murder case in Bengaluru
ಬೆಂಗಳೂರು7 mins ago

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Prajwal Revanna Case Locked up as Prajwal arrives at Bengaluru airport
ಹಾಸನ8 mins ago

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Andre Russell
ಕ್ರಿಕೆಟ್20 mins ago

Andre Russell : ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

Jolly LLB 3
ಸಿನಿಮಾ21 mins ago

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Davanagere lok sabha constituency bjp candidate gayatri siddeshwar election campaign in harapanahalli
ರಾಜಕೀಯ23 mins ago

Lok Sabha Election: ಹರಪನಹಳ್ಳಿಯಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

MLC Chalavadi Narayanaswamy latest Statement in Hubballi
ಹುಬ್ಬಳ್ಳಿ24 mins ago

Lok Sabha Election: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ಛಲವಾದಿ ನಾರಾಯಣಸ್ವಾಮಿ

Mega Shetty
ಫ್ಯಾಷನ್33 mins ago

Mega Shetty: ದಾವಣಿ-ಲಂಗದಲ್ಲಿ ನಟಿ ಮೇಘಾ ಶೆಟ್ಟಿಯಂತೆ ನೀವೂ ಕಾಣಬೇಕೆ? ಈ ಟಿಪ್ಸ್ ಪಾಲಿಸಿ!

six seats of Karnataka Legislative Council Elections to be held on June 3
ಕರ್ನಾಟಕ34 mins ago

Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

Deepika Padukone
ಬಾಲಿವುಡ್37 mins ago

Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

Sania Mirza
ಕ್ರೀಡೆ44 mins ago

Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌