ದಂಡ ಹಾಕಿದ ಪೊಲೀಸ್‌ಗೆ ʼಪವರ್‌ʼ ಇಲ್ಲದಂತೆ ಮಾಡಿದ ಬೈಕ್‌ ಸವಾರ; ಇಂಥವರೂ ಇರ್ತಾರಾ? - Vistara News

ವೈರಲ್ ನ್ಯೂಸ್

ದಂಡ ಹಾಕಿದ ಪೊಲೀಸ್‌ಗೆ ʼಪವರ್‌ʼ ಇಲ್ಲದಂತೆ ಮಾಡಿದ ಬೈಕ್‌ ಸವಾರ; ಇಂಥವರೂ ಇರ್ತಾರಾ?

ಸ್ವರೂಪ್‌ ಬಳಿ ಎಲ್ಲ ದಾಖಲೆಗಳು ಇದ್ದರೂ, ಅದನ್ನೆಲ್ಲ ಮನೆಯಲ್ಲೇ ಇಟ್ಟು ಬಂದಿದ್ದರು. ಹೋಗಿ ತರುತ್ತೇನೆ ಬಿಡಿ ಎಂದರೂ ಪೊಲೀಸ್‌ ಅಧಿಕಾರಿ ಕೇಳಿರಲಿಲ್ಲ.

VISTARANEWS.COM


on

Uttar Pradesh News
ಪ್ರಾತಿನಿಧಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬರೇಲಿ: ಸಂಚಾರ ನಿಯಮ ಉಲ್ಲಂಘನೆ ಮಾಡಿ, ನಿಮಗೆ ಪೊಲೀಸರು ದಂಡ ಹಾಕಿದರೆ ನೀವೇನು ಮಾಡುತ್ತೀರಿ?-ಒಂದೋ ಒಪ್ಪಿಕೊಂಡು ದಂಡ ತುಂಬಿ ಬರುತ್ತೀರಿ, ಇಲ್ಲ ಪೊಲೀಸರೊಂದಿಗೆ ವಾದಕ್ಕೆ ಇಳಿಯುತ್ತೀರಿ. ಏನೇ ಮಾಡಿದರೂ ಅಂತಿಮವಾಗಿ ಹಣ ಕೊಡುವುದು ತಪ್ಪೋದಿಲ್ಲ ಎಂದು ಗೊತ್ತಿದ್ದರೂ ಒಂದಷ್ಟು ಹೊತ್ತು ಜಗಳ-ಗಲಾಟೆ ನಡೆಸುವವರೂ ಇದ್ದಾರೆ. ಆದರೆ ಉತ್ತರ ಪ್ರದೇಶದ (Uttar Pradesh) ಬರೇಲಿಯ ವ್ಯಕ್ತಿಯೊಬ್ಬ ತನಗೆ ದಂಡ ವಿಧಿಸಿದ ಪೊಲೀಸರ ಮೇಲೆ ಅತ್ಯಂತ ವಿಭಿನ್ನವಾಗಿ ಪ್ರತೀಕಾರ ತೀರಿಸಿಕೊಂಡಿದ್ದು ವರದಿಯಾಗಿದೆ.

ಈ ವ್ಯಕ್ತಿಯ ಹೆಸರು ಭಗವಾನ್‌ ಸ್ವರೂಪ್‌ ಎಂದಾಗಿದ್ದು ವೃತ್ತಿಯಲ್ಲಿ ಲೈನ್‌ಮೆನ್‌. ಇವರೊಂದು ದಿನ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹರ್ದಾಸ್‌ಪುರ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿ ಮೋದಿ ಸಿಂಗ್‌ ಎಂಬುವರ ಕೈಯಲ್ಲಿ ಸಿಕ್ಕಿಬಿದ್ದಿದ್ದರು. ವಾಹನದ ದಾಖಲೆಗಳನ್ನು ತೋರಿಸುವಂತೆ ಮೋದಿ ಸಿಂಗ್‌ ಕೇಳಿದ್ದಾರೆ. ಆದರೆ ಅವರು ಕೇಳಿದ ಎಲ್ಲ ದಾಖಲೆಗಳೂ ಸ್ವರೂಪ್‌ ಬಳಿ ಬೈಕ್‌ನಲ್ಲಿ ಇರಲಿಲ್ಲ. ʼ ನನ್ನ ಬಳಿ ಎಲ್ಲ ಡಾಕ್ಯುಮೆಂಟ್‌ಗಳೂ ಸರಿಯಾಗಿಯೇ ಇವೆ. ಆದರೆ ಮನೆಯಲ್ಲಿ ಇದೆ. ನಾನು ತಂದು ತೋರಿಸುತ್ತೇನೆ ಬಿಡಿʼ ಎಂದು ಸ್ವರೂಪ್‌ ಕೇಳಿಕೊಂಡರೂ, ಆ ಪೊಲೀಸ್‌ ಅಧಿಕಾರಿ ಕೇಳಲಿಲ್ಲ. ಬದಲಿಗೆ 500 ರೂಪಾಯಿ ದಂಡ ವಿಧಿಸಿದ್ದಾರೆ.‌

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಈ ಬಾರಿ ರಸ್ತೆಯಲ್ಲಿ ನಮಾಜ್‌ ನಡೆದಿಲ್ಲ: ಇತಿಹಾಸದಲ್ಲೆ ಮೊದಲು

ಇಷ್ಟಾದ ಮೇಲೆ ತಮಗೆ ಅವಮಾನ ಆಗಿದ್ದಕ್ಕೆ ಸ್ವರೂಪ್‌ ತುಂಬ ನೊಂದಿದ್ದರು. ಅವರಿಗೆ ಪೊಲೀಸ್‌ ಅಧಿಕಾರಿಯ ಮೇಲೆ ಮನಸಲ್ಲೇ ಕ್ರೋಧ ಕುದಿಯುತ್ತಿತ್ತು. ಈ ಬಗ್ಗೆ ತಮ್ಮ ಕೆಲವು ಸಹೋದ್ಯೋಗಿಗಳೊಂದಿಗೆ ಚರ್ಚಿಸಿದ್ದಾರೆ. ಬಳಿಕ ಒಂದು ಉಪಾಯ ಮಾಡಿ, ಒಂದೆರಡು ಜನರೊಂದಿಗೆ ಹೋಗಿ ಹರ್ದಾಸ್‌ಪುರ ಪೊಲೀಸ್‌ ಸ್ಟೇಶನ್‌ನ ವಿದ್ಯುತ್‌ ಸಂಪರ್ಕವನ್ನೇ ಕಡಿತಗೊಳಿಸಿದ್ದಾರೆ. ಅಂದರೆ ಪೊಲೀಸ್‌ ಠಾಣೆಗೆ ವಿದ್ಯುತ್‌ ಇಲ್ಲದಂತೆ ಮಾಡಿದ್ದಾರೆ. ಪೊಲೀಸ್‌ ಸ್ಟೇಶನ್‌ಗೆ ಮಾತ್ರ ಕರೆಂಟ್‌ ಇಲ್ಲದಾಗ ಸಹಜವಾಗಿಯೇ ಅದರ ಬಗ್ಗೆ ಗಮನಹರಿಸಲಾಯಿತು. ಆಗ ಈ ಕೆಲಸ ಸ್ವರೂಪ್‌ದೇ ಎಂದು ಗೊತ್ತಾಗಿದೆ. ಆದರೆ ಸ್ವರೂಪ್‌ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳಲಿಲ್ಲ, ಬದಲಿಗೆ ʼಮಾಧ್ಯಮಗಳೊಂದಿಗೆ ಮಾತನಾಡಿ, ಆ ಪೊಲೀಸ್‌ ಸ್ಟೇಶನ್‌ನಲ್ಲಿ ವಿದ್ಯುತ್‌ ಮೀಟರ್‌ ಇರಲಿಲ್ಲ. ಮೀಟರ್‌ ಇಟ್ಟುಕೊಳ್ಳದೆ ವಿದ್ಯುತ್‌ ಬಳಸುವುದು ಕಾನೂನು ಬಾಹಿರ. ಹಾಗಾಗಿಯೇ ಸಂಪರ್ಕ ಕಡಿತಗೊಳಿಸಲಾಗಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತದಲ್ಲಿ ಗುಂಡಿನ ದಾಳಿ ನಡೆಸಿ, ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

Viral News: ಕೇರಳ ಪ್ರವಾಸೋದ್ಯಮ ಇಲಾಖೆಯು ಬಸ್ ಬ್ರ್ಯಾಂಡಿಂಗ್ ಮೂಲಕ ಕೇರಳದ ಹಿರಿಮೆಯನ್ನು ವಿದೇಶಗಳಲ್ಲಿ ಪಸರಿಸಲು ಮುಂದಾಗಿದೆ. ದೂರದ ಇಂಗ್ಲೆಂಡ್‌ನಲ್ಲಿ ಇದೀಗ ಕೇರಳದ ಪ್ರಾಕೃತಿಕ ಸೌಂದರ್ಯ ಬಹು ಜನಪ್ರಿಯ. ಅದಕ್ಕೆ ಕಾರಣವಾಗಿದ್ದು ಲಂಡನ್‌ನ ಡಬಲ್ ಡೆಕ್ಕರ್ ಬಸ್‌ನ ಅಲಂಕರಿಸಿರುವ ಕೇರಳದ ಅದ್ಭುತ ದೃಶ್ಯಗಳು. ಸದ್ಯ ಬಸ್‌ ರಸ್ತೆಯಲ್ಲಿ ಸಂಚರಿಸುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Viral News
Koo

ಲಂಡನ್‌: ದೇವರ ಸ್ವಂತ ನಾಡು (God’s Own Country) ಎಂದು ಕರೆಯಲ್ಪಡುವ ಕೇರಳ (Kerala) ಪ್ರಾಕೃತಿಕವಾಗಿ ಸಂಪತ್ಭರಿತ ರಾಜ್ಯ. ಇದೇ ಕಾರಣಕ್ಕೆ ದೇಶ-ವಿದೇಶದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಇದೀಗ ಕೇರಳ ಪ್ರವಾಸೋದ್ಯಮ ಇಲಾಖೆಯು ಬಸ್ ಬ್ರ್ಯಾಂಡಿಂಗ್ ಮೂಲಕ ಕೇರಳದ ಹಿರಿಮೆಯನ್ನು ವಿದೇಶಗಳಲ್ಲಿ ಪಸರಿಸಲು ಮುಂದಾಗಿದೆ. ದೂರದ ಇಂಗ್ಲೆಂಡ್‌ನಲ್ಲಿ ಇದೀಗ ಕೇರಳದ ಪ್ರಾಕೃತಿಕ ಸೌಂದರ್ಯ ಬಹು ಜನಪ್ರಿಯ. ಅದಕ್ಕೆ ಕಾರಣವಾಗಿದ್ದು ಲಂಡನ್‌ನ ಡಬಲ್ ಡೆಕ್ಕರ್ ಬಸ್‌ನ ಅಲಂಕರಿಸಿರುವ ಕೇರಳದ ಅದ್ಭುತ ದೃಶ್ಯಗಳು. ಸದ್ಯ ಬಸ್‌ ರಸ್ತೆಯಲ್ಲಿ ಸಂಚರಿಸುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಡಬಲ್ ಡೆಕ್ಕರ್ ಬಸ್‌ನ ಸುತ್ತ ಕೇರಳದ ಸುಂದರ ಹಿನ್ನೀರಿನ ದೃಶ್ಯಗಳನ್ನು ಅಳವಡಿಸಲಾಗಿದೆ. ಈ ಮನವೋಹಕ ದೃಶ್ಯವನ್ನು ನೋಡಿದ ಎಂತಹವರೂ ತಲೆದೂಗಲೇಬೇಕು. ಕೇರಳದತ್ತ ಆಕರ್ಷಿತರಾಗಲೇಬೇಕು. ರಾಜ್ಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಈ ಜಾಹೀರಾತು ಈಗಾಗಲೇ ಹಲವರ ಗಮನ ಸೆಳೆದಿದೆ. ವಿಶೇಷವಾಗಿ ಬೇಸಿಗೆ ರಜಾದಿನಗಳಲ್ಲಿ ಪ್ರವಾಸಿಗರನ್ನು ಇನ್ನಷ್ಟು ರಾಜ್ಯದತ್ತ ಸೆಳೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೊವನ್ನು ಈಗಾಗಲೇ ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಕೇರಳ ಪ್ರವಾಸೋದ್ಯಮವನ್ನು ಉತ್ತೇಜಿಸುವ ಜಾಹೀರಾತು ಹೊತ್ತ ಬಸ್‌ ದೂರದ ಲಂಡನ್‌ನಲ್ಲಿ ಸಂಚರಿಸುತ್ತಿರುವುದನ್ನು ನೋಡಿ ಅನೇಕರು ರೋಮಾಂಚಿತರಾಗಿದ್ದಾರೆ. ಬಸ್‌ನಲ್ಲಿ ಚಿತ್ರೀಕರಿಸಿರುವ ಹಿನ್ನೀರಿನ ದೃಶ್ಯಗಳನ್ನು ತೋರಿಸುವ ಮೂಲಕ ವಿಡಿಯೊ ಆರಂಭವಾಗುತ್ತದೆ. ಬಳಿಕ ವಿಡಿಯೊ ಬಸ್‌ನ ಸಂಪೂರ್ಣ ಚಿತ್ರಣವನ್ನು ಒದಗಿಸುತ್ತದೆ. ಅಲಪ್ಪುಳದ ಹೌಸ್‌ ಬೋಟ್‌, ಸ್ನೇಕ್ ಬೋಟ್ ರೇಸ್‌ ಮತ್ತು ನದಿ, ಹಸಿರಿನ ಚಿತ್ರದೊಂದಿಗೆ ಈ ಬಸ್‌ ಕೇರಳ ಪ್ರವಾಸೋದ್ಯಮದ ಲಾಂಛನವನ್ನೂ ಒಳಗೊಂಡಿದೆ. ಬಸ್‌ನ ಒಂದು ಬದಿಯಲ್ಲಿ #TravelForGood ಎಂದು ಹ್ಯಾಶ್ ಬರೆಯಲಾಗಿದೆ.

ನೆಟ್ಟಿಗರ ಪ್ರತಿಕ್ರಿಯೆ

ವಿಡಿಯೊ ನೋಡಿದ ನೆಟ್ಟಿಗರು ಖುಷಿಯ ಉದ್ಘಾರ ತೆಗೆದಿದ್ದಾರೆ. ʼʼವಾವ್‌! ಇಡೀ ಆಲಪ್ಪುಳವೇ ಈ ಒಂದು ಬಸ್‌ನಲ್ಲಿದೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಆಳಪ್ಪುಳ ಮತ್ತು ಕುಟ್ಟನಾಡು ತನ್ನ ಸೌಂದರ್ಯದಿಂದ ವಿದೇಶಿಗರನ್ನೂ ಸೆಳೆಯುತ್ತದೆʼʼ ಎಂದಿದ್ದಾರೆ ಮತ್ತೊಬ್ಬರು. ಇನ್ನೊಬ್ಬರು ಕಮೆಂಟ್‌ ಮಾಡಿ ʼʼಪ್ರಪಂಚದಾದ್ಯಂತದ ಜನರು ಭಾರತವನ್ನು ಕೇರಳದ ಮೂಲಕ ಗುರುತಿಸುತ್ತಿರುವುದು ಹೆಮ್ಮೆಯ ಸಂಗತಿʼʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಮಗದೊಬ್ಬರು ಈ ಜಾಹೀರಾತಿನ ಯೋಚನೆಯನ್ನು ಶ್ಲಾಘಿಸಿದ್ದಾರೆ. ʼʼಅತ್ಯುತ್ತಮ ಯೋಜನೆ ಇದು. ಕೇರಳ ಪ್ರವಾಸೋದ್ಯಮಕ್ಕೆ ಇಲಾಖೆಗೆ ಹ್ಯಾಟ್‌ಆಫ್‌ʼʼ ಎಂದಿದ್ದಾರೆ.

ಇದನ್ನೂ ಓದಿ: Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

ಕೇರಳ ಪ್ರವಾಸೋದ್ಯ,ಮ ಸಚಿವ ಪಿ.ಎ..ಮೊಹಮ್ಮದ್‌ ರಿಯಾಸ್‌ ಈ ವಿಡಿಯೊವನ್ನು ಶೇರ್‌ ಮಾಡಿದ್ದಾರೆ. ʼʼಕೇರಳ ಟೂರಿಸಂನ ಹೊಸ ಅಭಿಯಾನ ಇದು. ನಮ್ಮ ಆಲಪ್ಪುಳ ಮತ್ತು ಹೌಸ್‌ಬೋಟ್‌ ಲಂಡನ್‌ನ ಬಸ್ಸಿನಲ್ಲಿ ರಾರಾಜಿಸುತ್ತಿದೆ. ಇನ್ನಷ್ಟು ದೇಶಗಳಲ್ಲಿ ಈ ರೀತಿಯ ಜಾಹೀರಾತು ಅಭಿಯಾನ ಮುಂದುವರಿಸಲಿದ್ದೇವೆʼʼ ಎಂದು ತಿಳಿಸಿದ್ದಾರೆ. ಕೇರಳದ ಈ ರೀತಿಯ ಸೃಜನಶೀಲತೆ ಹಿಂದೆಯೂ ವಿದೇಶಿಗರ ಗಮನ ಸೆಳೆದಿತ್ತು. 2018ರಲ್ಲಿಯೂ ಲಂಡನ್‌ನ ಡಬಲ್‌ ಡೆಕ್ಕರ್‌ ಬಸ್‌ನಲ್ಲಿ ಕೇರಳದ ಪ್ರವಾಸಿ ತಾಣಗಳನ್ನು ಪ್ರಚುರಪಡಿಸಲಾಗಿತ್ತು. ಒಟ್ಟಿನಲ್ಲಿ ಕೇರಳದ ಈ ಐಡಿಯ ಸೂಪರ್‌ ಎಂದಿದ್ದಾರೆ ನೆಟ್ಟಿಗರು.

Continue Reading

ವೈರಲ್ ನ್ಯೂಸ್

Viral Video:ಶಾಕಿಂಗ್‌ ವಿಡಿಯೋ! ಮಗನನ್ನು ಟ್ರೆಡ್‌ಮಿಲ್‌ನಲ್ಲಿ ಓಡಿಸಿ ಪ್ರಾಣವನ್ನೇ ತೆಗೆದ ಪಾಪಿ ತಂದೆ

Viral Video: ಆರು ವರ್ಷದ ಮಗನನ್ನು ದಪ್ಪ ಇದ್ದಾನೆಂದು ಬಲವಂತವಾಗಿ ಟ್ರೆಡ್‌ಮಿಲ್‌ನಲ್ಲಿ ಓಡಿಸಿದ ಪಾಪಿ ತಂದೆ ಮಗನನ್ನೇ ಬಲಿ ತೆಗೆದುಕೊಂಡಿರುವ ಘಟನೆ ಅಮೆರಿಕದ ನ್ಯೂ ಜೆರ್ಸಿಯಲ್ಲಿ ನಡೆದಿದೆ. 2021ರಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದೆ.

VISTARANEWS.COM


on

Viral video
Koo

ಅಮೆರಿಕ: ಪ್ರಪಂಚದಲ್ಲಿ ಎಂತೆಂಥಾ ವಿಕೃತ ಮನಸ್ಸಿನ ವ್ಯಕ್ತಿಗಳಿರುತ್ತಾರೆ ಅಂದ್ರೆ ಕೆಲವೊಮ್ಮೆ ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬ ಪಾಪಿ ತಂದೆಯ ಹುಚ್ಚಾಟಕ್ಕೆ ಪುಟ್ಟ ಬಾಲಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಆರು ವರ್ಷದ ಮಗನನ್ನು ದಪ್ಪ ಇದ್ದಾನೆಂದು ಬಲವಂತವಾಗಿ ಟ್ರೆಡ್‌ಮಿಲ್‌(Treadmill) ನಲ್ಲಿ ಓಡಿಸಿದ ಪಾಪಿ ತಂದೆ ಮಗನನ್ನೇ ಬಲಿ ತೆಗೆದುಕೊಂಡಿರುವ ಘಟನೆ ಅಮೆರಿಕ(America)ದ ನ್ಯೂ ಜೆರ್ಸಿಯಲ್ಲಿ ನಡೆದಿದೆ. 2021ರಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣ(Social Media)ದಲ್ಲಿ ಈ ವಿಡಿಯೋ ವೈರಲ್‌(Viral video) ಆಗುತ್ತಿದೆ.

ಕ್ರಿಸ್ಟೋಫರ್‌ ಜಾರ್ಜ್‌ ಎಂಬ ವ್ಯಕ್ತಿ ಅಟ್ಲಾಂಟಿಕ್‌ ಫಿಟ್‌ನೆಸ್‌ ಕ್ಲಬ್‌ ಹೌಸ್‌ ಎಂಬ ಜಿಮ್‌ನಲ್ಲಿ ತನ್ನ ಆರು ವರ್ಷದ ಮಗ ಕೋರೆ ಮಿಕ್ಕಿಯೊಲೋನನ್ನು ಪದೇ ಪದೇ ಟ್ರೆಡ್‌ಮಿಲ್‌ನಲ್ಲಿ ಓಡಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ನೀನು ದಪ್ಪಗಿದ್ದಿಯಾ ಎಂದು ಪದೇ ಪದೇ ಹೇಳುತ್ತಾ ಟ್ರೆಡ್‌ಮಿಲ್‌ ವೇಗವನ್ನು ಸ್ಪೀಡಾಗಿ ಸೆಟ್‌ ಮಾಡಿ ಮಗನನ್ನು ಅದರಲ್ಲಿ ಓಡಿಸುತ್ತಾನೆ. ಮಗ ಟ್ರೆಡ್‌ಮಿಲ್‌ನಿಂದ ಬ್ಯಾಲೆನ್ಸ್‌ ತಪ್ಪಿ ಬಿದ್ದರೂ ಬಿಡದ ಕ್ರಿಸ್ಟೋಫರ್‌, ಮತ್ತೆ ಮತ್ತೆ ಬಾಲಕನನ್ನು ಬಲವಂತವಾಗಿ ಟ್ರೆಡ್‌ಮಿಲ್‌ ಮೇಲೆ ನಿಲ್ಲಿಸುತ್ತಾನೆ. ಬಾಲಕ ಎಷ್ಟೇ ಬೇಡ ಎಂದು ಅಳುತ್ತಿದ್ದರೂ ಕೇಳದ ಕ್ರಿಸ್ಟೋಫರ್‌ ಮತ್ತೆ ಮತ್ತೆ ಹಿಂಸೆ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ತಂದೆಯ ಹಿಂಸೆಯ ತಡೆಯಲಾರದೇ ತೀವ್ರ ಒತ್ತಡ ಅನುಭವಿಸಿದ್ದ ಬಾಲಕ ಕೋರೆ ತೀವ್ರವಾಗಿ ಅಸ್ವಸ್ತಗೊಂಡಿದ್ದ. ಕೋರೆ ದೇಹದ ಮೇಲೆ ಗಂಭೀರವಾದ ಗಾಯಗಳೂ ಆಗಿದ್ದವು. ಇದರಿಂದ ಬಾಲಕನ ತಾಯಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾಳೆ. ಬಾಲಕನ ಸಿಟಿ ಸ್ಕ್ಯಾನ್‌ ಮಾಡಿದಾಗ ಆತನಿಗೆ ಹೃದಯ ಸಂಬಂಧ ಖಾಯಿಲೆ ಇರುವುರು ವೈದ್ಯರಿಗೆ ತಿಳಿದು ಬಂದಿತ್ತು. ಈ ವೇಳೆ ವೈದ್ಯರ ಮಾಹಿತಿ ಮೇರೆಗೆ ಕ್ರಿಸ್ಟೋಫರ್‌ ಜಾರ್ಜ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಈ ವೇಳೆ ತಂದೆ ನೀಡುತ್ತಿದ್ದ ಹಿಂಸೆಯ ಬಗ್ಗೆ ಬಾಲಕ ತಿಳಿಸಿದ್ದ. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳಿಕ ಕ್ರಿಸ್ಟೋಫರ್‌ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು. ಕೋರ್ಟ್‌ ವಿಚಾರಣೆ ವೇಳೆ ಈ ವಿಡಿಯೋ ಪ್ರಸಾರ ಮಾಡಿ ಮಾಡಿದ್ದಾರೆ. ಆ ವಿಡಿಯೋ ನೋಡುತ್ತಿದ್ದಂತೆ ಕೊರ್ಟ್‌ನಲ್ಲಿ ಹಾಜರಿದ್ದ ಬಾಲಕನ ತಾಯಿ ಕಣ್ಣೀರು ಹಾಕಿದ್ದಾಳೆ.

ಇದನ್ನೂ ಓದಿ: Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

2022 ಮಾರ್ಷ್‌ 9ರಂದು ಕೊಲೆ ಪ್ರಕರಣದಲ್ಲಿ ಕ್ರಿಸ್ಟೋಫರ್‌ ಜಾರ್ಜ್‌ನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ಇದೀಗ ಜಾಮೀನು ರಹಿತ ಬಂಧನಕ್ಕೊಳಗಾಗಿರುವ ಆತನನ್ನು ಓಶಿಯನ್‌ ಸಿಟಿ ಜೈಲಿನಲ್ಲಿ ಇರಿಸಲಾಗಿದೆ. ಮಂಗಳವಾರ ವಿಚಾರಣೆಗೆ ಹಾಜರಾದ ಕ್ರಿಸ್ಟೋಫರ್‌ ಜಾರ್ಜ್‌ನ ಕೃತ್ಯವನ್ನು ಕಂಡು ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಕಂಡು ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ; ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು

Viral News: ಇದೊಂದು ವಿಚಿತ್ರ, ವಿರಳ ಪ್ರಕರಣ. ಮದುವೆ ಮುನ್ನವೇ ಎರಡು ಬಾರಿ ಗರ್ಭ ಧರಿಸಿದ ಅಪ್ರಾಪ್ತ ಬಾಲಕಿಯೊಬ್ಬಳು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಘಟನೆ ಇದು. ಅಕ್ರಮ ಸಂಬಂಧ ಹೊಂದಿದ್ದ ಆಕೆ ಇಬ್ಬರು ಬೇರೆ ಬೇರೆ ಪುರುಷರಿಂದ ಗರ್ಭ ಧರಿಸಿದ್ದಳು. ಈ ಪೈಕಿ ಒಂದು ಮಗುವನ್ನು ಪೋಷಕರು ತನಗೆ ತಿಳಿಯದೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ.

VISTARANEWS.COM


on

Viral News
Koo

ಮುಂಬೈ: 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮದುವೆ ಮುನ್ನವೇ ಎರಡು ಬಾರಿ ಗರ್ಭ ಧರಿಸಿರುವ ವಿಚಿತ್ರ ಪ್ರಕರಣವೊಂದು ವರದಿಯಾಗಿದೆ. ಸದ್ಯ ಈ ಘಟನೆ ಸಿನಿಮೀಯ ತಿರುವು ಪಡೆದುಕೊಂಡಿದೆ. ತನ್ನ ಒಂದು ಮಗುವನ್ನು ತನಗೆ ತಿಳಿಯದಂತೆಯೇ ಮಾರಾಟ ಮಾಡಲಾಗಿದೆ ಎಂದು ದೂರಿರುವ ಆಕೆ ಇದೀಗ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾಳೆ. ಪೋಷಕರು, ಶಿಕ್ಷಕರು, ವಕೀಲ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ(Viral News). ಮಹಾರಾಷ್ಟ್ರದಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ.

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 17 ವರ್ಷದ ಬಾಲಕಿ ಇಬ್ಬರು ವಿಭಿನ್ನ ಪುರುಷರ ಜತೆ ದೇಹ ಸಂಬಂಧ ಬೆಳೆಸಿದ್ದಳು. ಹೀಗಾಗಿ ಎರಡು ಬಾರಿ ಗರ್ಭ ಧರಿಸಿದ್ದಳು. ಈ ಪೈಕಿ ಒಂದು ನವಜಾತ ಶಿಶುವನ್ನು ತನ್ನ ಪೋಷಕರು, ಶಾಲಾ ಪ್ರಾಂಶುಪಾಲರು, ಇಬ್ಬರು ಮಹಿಳಾ ವೈದ್ಯರು, ಸಾಮಾಜಿಕ ಕಾರ್ಯಕರ್ತೆ, ವಕೀಲರು ಮತ್ತು ಇತರರು ಸೇರಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಾಲಕಿಯ ಪೋಷಕರು ಸೇರಿದಂತೆ ಕನಿಷ್ಠ 16 ಮಂದಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ ಮತ್ತು ಬಾಲನ್ಯಾಯ ಕಾಯ್ದೆ (Juvenile Justice Act)ಯಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

2021ರಲ್ಲಿ 23 ವರ್ಷದ ಅನ್ಯ ಕೋಮಿನ ಜತೆ ಅಕ್ರಮ ಸಂಬಂಧ ಹೊಂದಿದ್ದ ಬಾಲಕಿ ಮೊದಲ ಬಾರಿ ಗರ್ಭಿಣಿಯಾಗಿದ್ದಳು. ಆಕೆ ಗರ್ಭ ಧರಿಸಿರುವ ವಿಚಾರ ಪೋಷಕರ ಗಮನಕ್ಕೆ ಬಂದಿತ್ತು. ಬಳಿಕ ಪೋಷಕರು ಶಾಲೆಯ ಪ್ರಾಂಶುಪಾಲ ಮತ್ತು ಸಾಮಾಜಿಕ ಕಾರ್ಯಕರ್ತೆಗೆ ವಿಚಾರ ತಿಳಿಸಿ ಅವರ ಸಹಾಯ ಕೋರಿದರು.

7ನೇ ತರಗತಿಯ ಬಳಿಕ ಶಾಲೆಯಿಂದ ಹೊರಗುಳಿದ ಬಾಲಕಿಯ ನಿಯಮಿತ ತಪಾಸಣೆ ಮತ್ತು ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ʼʼಇದಕ್ಕೂ ಮೊದಲು ಪೋಷಕರು ತನ್ನನ್ನು ಮುಂಬೈಯ ಯಾವುದೋ ಒಂದು ಸ್ಥಳಕ್ಕೆ ಕರೆದೊಯ್ದು ಅಲ್ಲಿ ವಕೀಲರ ಸಮ್ಮುಖದಲ್ಲಿ ಕೆಲವು ದಾಖಲೆಗಳಿಗೆ ಸಹಿ ಹಾಕಿಸಿದ್ದರುʼʼ ಎಂದು ಬಾಲಕಿ ತಿಳಿಸಿದ್ದಾಳೆ ಎಂದು ಮೂಲಗಳು ವರದಿ ಮಾಡಿವೆ. 2021ರ ಸೆಪ್ಟೆಂಬರ್ 24ರಂದು ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಮರುದಿನ ಆ ಮಗುವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಹಸ್ತಾಂತರಿಸಲಾಯಿತು. ಹೆರಿಗೆಯ ಬಗ್ಗೆ ಯಾರಲ್ಲೂ ಮಾತನಾಡದಂತೆ ಆಕೆಗೆ ಪೋಷಕರು ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಹೆರಿಗೆಯ ಆರು ತಿಂಗಳ ನಂತರ ಅಪ್ರಾಪ್ತೆ ಮಗುವಿನ ತಂದೆಯನ್ನು ಸಂಪರ್ಕಿಸಿದಳು. ಈ ವೇಳೆ ಆತ ಆಕೆಯನ್ನು ವರಿಸಲು ಸಿದ್ಧನಾಗಿರುವುದಾಗಿ ಹೇಳಿದ್ದ. ಆದರೆ ಪೋಷಕರು ಇದಕ್ಕೆ ಸಮ್ಮತಿ ನೀಡಲಿಲ್ಲ. ʼʼತನ್ನ ಪೋಷಕರು ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಪೈಕಿ ಪೋಷಕರು ಮತ್ತು ಚಿಕ್ಕಪ್ಪ ತಲಾ 1.5 ಲಕ್ಷ ರೂ. ಪಡೆದರೆ, ಸಾಮಾಜಿಕ ಕಾರ್ಯಕರ್ತೆ ಮತ್ತು ಇತರ ಕೆಲವರು ಉಳಿದ 1 ಲಕ್ಷ ರೂ.ಗಳನ್ನು ಹಂಚಿಕೊಂಡಿದ್ದಾರೆʼʼ ಎಂದು ಅಪ್ರಾಪ್ತೆ ದೂರಿದ್ದಾಳೆ. ಈ ಬಗ್ಗೆ ಅವಳು ಪೋಷಕರನ್ನು ಪ್ರಶ್ನಿಸಿದಾಗ ಅಜ್ಜಿಯ ಮನೆಗೆ ಕಳುಹಿಸಿದ್ದರು. ಅಲ್ಲಿ ಅವಳ ಕುಟುಂಬವು 23 ವರ್ಷದ ವ್ಯಕ್ತಿಯೊಂದಿಗೆ ಮದುವೆಯನ್ನು ನಿಶ್ಚಯಿಸಿತ್ತು ಎಂದು ಮೂಲಗಳು ತಿಳಿಸಿವೆ.

ಈ ವೇಳೆ ಅಪ್ರಾಪ್ತೆ ಮತ್ತೆ ತನ್ನ ವಿವಾಹ ನಿಶ್ಚಿತವಾದ ಯುವಕನೊಂದಿಗೆ ದೇಹ ಸಂಪರ್ಕ ಬೆಳೆಸಿದಳು. ಬಳಿಕ ಮತ್ತೊಮ್ಮೆ ಗರ್ಭ ಧರಿಸಿದಳು. ಈ ವೇಳೆ ಆತನಿಗೆ ಅಪ್ರಾಪ್ತೆಯ ಮೊದಲ ಮಗುವಿನ ಬಗ್ಗೆ ತಿಳಿದು ಬಂದಿತ್ತು. ಹೀಗಾಗಿ ವಿವಾಹವಾಗಲು ನಿರಾಕರಿಸಿದ. ನಂತರ ಬಾಲಕಿ ಅಜ್ಜಿ ಮನೆಯಿಂದ ತನ್ನ ಮನೆಗೆ ಮರಳಿದಳು. ಪರಿಚಯಸ್ಥರ ನೆರವಿನಿಂದ ಆಕೆ 2024ರ ಮಾರ್ಚ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಎರಡನೇ ಮಗುವನ್ನೂ ಮಾರಾಟ ಮಾಡುವಂತೆ ಪೋಷಕರು ಒತ್ತಡ ಹೇರುತ್ತಿರುವುದರಿಂದ ಆಕೆ ಇದೀಗ ಪೊಲೀಸ್‌ ಠಾಣೆಯ ಮೊರೆ ಹೋಗಿದ್ದಾಳೆ. ಮಾರಾಟವಾದ ಹೆಣ್ಣು ಮಗು ಎಲ್ಲಿದೆ ಎಂಬುದನ್ನು ಹುಡುಕಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Continue Reading

ಕ್ರೀಡೆ

MS Dhoni: ರನ್​ ಓಡದೆ ಸ್ವಾರ್ಥ ತೋರಿದ ಧೋನಿ; ನೆಟ್ಟಿಗರಿಂದ ಭಾರೀ ಟೀಕೆ

MS Dhoni: ಯಾವುದೇ ವಿವಾದಗಳಿಗೆ ಒಳಗಾಗದೆ ಶಾಂತ ಸ್ವಭಾವದಿಂದ ಆಡುವ ಧೋನಿ ಹಲವು ಬಾರಿ ಸಹ ಆಟಗಾರರ ಶತಕ ಮತ್ತು ಅರ್ಧಶತಕಕ್ಕೋಸ್ಕರ ರನ್​ ಗಳಿಸದೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಆದರೆ, ಪಂಬಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನಡೆಸುವ ಸಲುವಾಗಿ ಸ್ವಾರ್ಥಿಯಾಗಿ ಕಂಡು ಬಂದರು.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಮಾಜಿ ನಾಯಕ​ ಮಹೇಂದ್ರ ಸಿಂಗ್ ಧೋನಿ(MS Dhoni) ಬುಧವಾರ ನಡೆದ ಪಂಜಾಬ್​ ಲಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ತೋರಿದ ವರ್ತನೆಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದು ಮಾಡುತ್ತಿದೆ. ಹಲವು ನೆಟ್ಟಿಗರು ಧೋನಿ ಇಷ್ಟೊಂದು ಸ್ವಾರ್ಥಿಯಾಗಬಾರದೆಂದು ಟೀಕಿಸಿದ್ದಾರೆ.

ಯಾವುದೇ ವಿವಾದಗಳಿಗೆ ಒಳಗಾಗದೆ ಶಾಂತ ಸ್ವಭಾವದಿಂದ ಆಡುವ ಧೋನಿ ಹಲವು ಬಾರಿ ಸಹ ಆಟಗಾರರ ಶತಕ ಮತ್ತು ಅರ್ಧಶತಕಕ್ಕೋಸ್ಕರ ರನ್​ ಗಳಿಸದೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಧೋನಿಯ ಈ ನಡೆಯ ಬಗ್ಗೆ ಅನೇಕರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು. ಆದರೆ, ಪಂಬಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನಡೆಸುವ ಸಲುವಾಗಿ ಸ್ವಾರ್ಥಿಯಾಗಿ ಕಂಡು ಬಂದರು.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ ಅಂತಿಮ ಓವರ್​ನಲ್ಲಿ ಅರ್ಷದೀಪ್​ ಎಸೆದ ಈ ಓವರ್​ನ ಮೂರನೇ ಎಸೆತವನ್ನು ಧೋನಿ ಬಲವಾಗಿ ಹೊಡೆದರು. ಚೆಂಡು ಬೌಂಡರಿ ಲೈನ್​ ಬಳಿ ಹೋದರೂ ಕೂಡ ಧೋನಿ ರನ್​ ಓಡದೆ ಸ್ವಾರ್ಥ ತೋರಿದರು. ನಾನ್​ಸ್ಟ್ರೈಕ್​ನಲ್ಲಿದ್ದ ಡೇರಿಯಲ್​ ಮಿಚೆಲ್​ ಅವರು ರನ್​ಗಾಗಿ ಓಡಿ ಕ್ರೀಸ್​ ಬಳಿ ಬಂದರು. ಈ ವೇಳೆ ಧೋನಿ ಅವೇಶದಲ್ಲಿಯೇ ಮಿಚೆಲ್​ಗೆ ಹಿಂದೆ ಹೋಗುವಂತೆ ತಿಳಿಸಿದರು. ಸ್ಟ್ರೈಕ್​ ತನಕ ಓಡಿದ್ದ ಮಿಚೆಲ್​ ಮತ್ತೆ ನಾನ್​ಸ್ಟ್ರೈಕರ್​ ಬಳಿಗೆ ಓಡಿ ಬಂದರು. ಮುಂದಿನ ಎಸೆತವನ್ನು ಧೋನಿ ಬೀಟ್​ ಮಾಡಿದರು. 5ನೇ ಎಸೆತದಲ್ಲಿ ಸಿಕ್ಸರ್​ ಬಾರಿಸಿ ಅಂತಿಮ ಎಸೆತದಲ್ಲಿ ರನೌಟ್​ ಆದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಬ್ಯಾಟಿಂಗ್​ಗಾಗಿ ಆಸೆ ತೋರಿದ ಧೋನಿಯ ಈ ಸ್ವಾರ್ಥವನ್ನು ಅನೇಕ ನೆಟ್ಟಿಗರು ಟೀಕಿಸಿದ್ದಾರೆ. ಇದು ಮತ್ತೊಬ್ಬ ಆಟಗಾರನಿಗೆ ಮಾಡುವ ಅವಮಾನ ಎಂದು ಕಮೆಂಟ್​ ಮಾಡಿದ್ದಾರೆ. ಈ ಘಟನೆಯ ವಿಡಿಯೊ ಎಲ್ಲಡೆ ವೈರಲ್(viral video)​ ಆಗಿದೆ. ಧೋನಿ ಸ್ಟ್ರೈಕ್​ ಉಳಿಸಿಕಿಕೊಂಡರೂ ಕೂಡ ಅವರಿಂದ ದೊಡ್ಡ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ. 11  ಎಸೆತಗಳಿಂದ 14 ರನ್ ಮಾತ್ರ ಗಳಿಸಿದರು.

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವು ಸಾಧಿಸಿತು.

Continue Reading
Advertisement
K. Annamalai
ಪ್ರಮುಖ ಸುದ್ದಿ20 mins ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ26 mins ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ1 hour ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ2 hours ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Dr Vinayaka Prasanna passed away
ಬಳ್ಳಾರಿ2 hours ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 hours ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ2 hours ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ2 hours ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

BJP workers meeting in Banavasi
ರಾಜಕೀಯ2 hours ago

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Yakshagana performance for voting awareness in Uttara Kannada district on May 4
ಉತ್ತರ ಕನ್ನಡ2 hours ago

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ18 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌