ವಿಸ್ತಾರ Explainer: ಅಮೆರಿಕಕ್ಕೆ ರಿಸೆಷನ್ ಭೀತಿ, ಭಾರತಕ್ಕೂ ಫಜೀತಿ? - Vistara News

EXPLAINER

ವಿಸ್ತಾರ Explainer: ಅಮೆರಿಕಕ್ಕೆ ರಿಸೆಷನ್ ಭೀತಿ, ಭಾರತಕ್ಕೂ ಫಜೀತಿ?

ಅಮೆರಿಕದಲ್ಲಿ ಕಳೆದ 40 ವರ್ಷಗಳಲ್ಲೇ ಗರಿಷ್ಠ ಎತ್ತರಕ್ಕೆ ಜಿಗಿದಿದೆ ಹಣದುಬ್ಬರ. ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಸಂಭವಿಸಿದರೆ ಏನಾದೀತು? ಭಾರತದ ಮೇಲೆ ಇದರ ಪರಿಣಾಮ ಏನು? ಇಲ್ಲಿದೆ ವಿಸ್ತೃತ ಮಾಹಿತಿ.

VISTARANEWS.COM


on

inflation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಶವ ಪ್ರಸಾದ್ ಬಿ, ಬೆಂಗಳೂರು
ಆರ್ಥಿಕ ಹಿಂಜರಿತದ ಕಡೆಗೆ ಅಮೆರಿಕ ಜಾರಿದೆಯೇ ಎಂಬ ಪ್ರಶ್ನೆ ಎದ್ದಿದೆ. ಬಿಲಿಯನೇರ್‌ ಹೂಡಿಕೆದಾರ ಲಿಯೋನ್‌ ಕೂಪರ್‌ಮ್ಯಾನ್‌ ಹೇಳುವ ಪ್ರಕಾರ, ಮುಂದಿನ ವರ್ಷ ಅಮೆರಿಕದ ಆರ್ಥಿಕತೆ ಹಿಂಜರಿತಕ್ಕೀಡಾಗಲಿದೆ. ಇದಕ್ಕೆ ಕಾರಣ ಒಟ್ಟಾರೆ ಎಕಾನಮಿಯ ಮಂದಗತಿ.

ಅಮೆರಿಕದ ಕಂಪನಿಗಳ ಆದಾಯ ಇಳಿಕೆಯಾಗಲಿದ್ದು, ಪರಿಣಾಮವಾಗಿ ಷೇರು ಸೂಚ್ಯಂಕ ಎಸ್‌ ಆಂಡ್‌ಪಿ ಶೇ. 40ರಷ್ಟು ಕುಸಿಯಲಿದೆ. ಸದ್ಯದ ಭವಿಷ್ಯದಲ್ಲಿ ಷೇರು ಪೇಟೆಯಲ್ಲಿ ಗೂಳಿಯ ಅಬ್ಬರ ಕಾಣಲು ಸಿಗಲಿಕ್ಕಿಲ್ಲ.
ಹೂಡಿಕೆದಾರರು ಈ ವರ್ಷ ಷೇರುಗಳನ್ನು ಕೈಗೆ ಸಿಕ್ಕ ಬೆಲೆಗೆ ಮಾರಾಟ ಮಾಡಲು ಆರಂಭಿಸಿದ್ದಾರೆ. ಫೆಡರಲ್‌ ರಿಸರ್ವ್‌ ಬಡ್ಡಿ ದರಗಳನ್ನು ಏರಿಸಿರುವುದು ಅವರಿಗೆ ಆರ್ಥಿಕ ಬೆಳವಣಿಗೆ ಬಗ್ಗೆ ನಂಬಿಕೆ ಹೊರಟು ಹೋಗುವಂತೆ ಮಾಡಿದೆ.‌ ಇದಕ್ಕಿಂತ ಆತಂಕದ ಸಂಗತಿ ಏನೆಂದರೆ ಪ್ರತಿ 10 ಮಂದಿ ಅಮೆರಿಕನ್ನರಲ್ಲಿ 6 ಮಂದಿ ತಮ್ಮ ಉಳಿತಾಯದ ಹಣವನ್ನು ಬೆಳೆಯಬಹುದು ಎಂಬ ನಂಬಿಕೆಯೊಂದಿಗೆ ಷೇರು ಮಾರುಕಟ್ಟೆಯಲ್ಲಿ ಹೂಡಿದ್ದಾರೆ. ಒಂದೊಮ್ಮೆ ಷೇರು ಸೂಚ್ಯಂಕ 40 ಪರ್ಸೆಂಟ್‌ ಕುಸಿದರೆ, ಉಂಟಾಗುವ ನಷ್ಟವನ್ನು ಭರಿಸಲು ಮತ್ತೆಷ್ಟು ವರ್ಷ ಕಾಯಬೇಕೇನೋ ಎಂಬ ಆತಂಕ ಕೂಪರ್‌ಮ್ಯಾನ್‌ ಅವರದ್ದು.

ಕಾರ್ಪೊರೇಟ್‌ ಕಂಪನಿಗಳ ಆದಾಯ ಕುಸಿಯಲಿದ್ದು, ಅದರ ಬೆನ್ನಲ್ಲೇ ಷೇರುಗಳು ನೆಲಕಚ್ಚಲಿವೆ ಎಂಬುದು ಮಾರುಕಟ್ಟೆ ತಜ್ಞರ ಲೆಕ್ಕಾಚಾರ. ಈ ವರ್ಷ ಅಮೆರಿಕದ ಷೇರು ಮಾರುಕಟ್ಟೆಗಳಲ್ಲಿ ಹೂಡಿಕೆದಾರರು ಕೈಗೆ ಸಿಕ್ಕ ಬೆಲೆಗೆ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಬೆಲೆ ಏರಿಕೆಯನ್ನು ಕಡಿಮೆ ಮಾಡಲು ಫೆಡರಲ್‌ ರಿಸರ್ವ್‌ ಬಡ್ಡಿ ದರ ಏರಿಸುತ್ತಿರುವುದರಿಂದ ಮಾರುಕಟ್ಟೆ ಮೇಲೆ ಯಾವ ಪರಿಣಾಮ ಬೀರಬಹುದು ಎಂಬ ಕಳವಳ ಹೂಡಿಕೆದಾರರನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಆರ್ಥಿಕ ತಜ್ಞರ ಪ್ರಕಾರ ಅಮೆರಿಕದಲ್ಲಿ ರಿಸೆಷನ್‌ ಪಕ್ಕಾ

ಯಾವುದೇ ದೇಶದ ಆರ್ಥಿಕ ಬೆಳವಣಿಗೆ ಸತತ 6 ತಿಂಗಳು ಅಥವಾ ಎರಡು ತ್ರೈಮಾಸಿಕ ಅವಧಿಯಲ್ಲಿ ಕುಸಿದರೆ, ಅದನ್ನು ರಿಸೆಷನ್‌ ಎನ್ನುತ್ತಾರೆ. ಈ ವರ್ಷ ಮೊದಲ ಮೂರು ತಿಂಗಳುಗಳಲ್ಲಿ ಅಮೆರಿಕದ ಆರ್ಥಿಕತೆ ಸತತ ಕುಸಿದ ಪರಿಣಾಮ ರಿಸೆಷನ್‌ ಭೀತಿ ಕಾಣಿಸಿಕೊಂಡಿದೆ. ಗಾಯಕ್ಕೆ ಉಪ್ಪು ಸವರುವಂತೆ ಅಮೆರಿಕದ ರಫ್ತು ಗಣನೀಯ ಕುಸಿದಿದೆ. ರಾಜ್ಯಗಳು ಹಾಗೂ ಸ್ಥಳೀಯಾಡಳಿತಗಳಲ್ಲಿ ಸಾರ್ವಜನಿಕ ವೆಚ್ಚ ಕಡಿಮೆಯಾಗುತ್ತಿದೆ. ಇತ್ತೀಚೆಗೆ ಐಟಿ ಷೇರುಗಳೂ ಕುಸಿದಿವೆ. ಇದೆಲ್ಲವೂ ರಿಸೆಷನ್‌ ಆಗಬಹುದೇ ಎಂಬ ಆತಂಕಕ್ಕೆ ಕಾರಣವಾಗಿದೆ.
ಅಮೆರಿಕಕ್ಕೆ ರಿಸೆಷನ್‌ ಹೊಸತೇನೂ ಅಲ್ಲ. ಆದರೆ ಅಮೆರಿಕದ ಹಿಂಜರಿತ ಬಹುತೇಕ ಜಗತ್ತನ್ನು ನೇರ ಅಥವಾ ಪರೋಕ್ಷವಾಗಿ ಕಾಡುತ್ತದೆ. ಆದರೆ ಅದರ ತೀವ್ರತೆಯಲ್ಲಿ ವ್ಯತ್ಯಾಸವಿರುತ್ತದೆ. ಏಕೆಂದರೆ ಅಮೆರಿಕದ ಡಾಲರ್‌ ಜಾಗತಿಕ ಕರೆನ್ಸಿ. ಪ್ರಪಂಚದ ಬಲಾಢ್ಯ ಎಕಾನಮಿಗಳಲ್ಲಿ ಒಂದಾಗಿರುವುದರಿಂದ ಬಹುತೇಕ ರಾಷ್ಟ್ರಗಳು ಅದರ ಜತೆಗೆ ವ್ಯವಹಾರವನ್ನು, ವಾಣಿಜ್ಯ ಸಂಬಂಧವನ್ನು ಹೊಂದಿರುತ್ತದೆ.
ನಮ್ಮಲ್ಲಿ ಆರ್‌ಬಿಐ ಇರುವಂತೆ ಅಮೆರಿಕದ ಸೆಂಟ್ರಲ್‌ ಬ್ಯಾಂಕ್‌ ಆಗಿರುವ ಫೆಡರಲ್‌ ರಿಸರ್ವ್‌ ಕಳೆದ 30 ವರ್ಷದಲ್ಲೇ ಗರಿಷ್ಠ ಬಡ್ಡಿ ದರ ಏರಿಕೆ ಮಾಡಿರುವುದರಿಂದ ಸಾಲದ ಬಡ್ಡಿ ದರ ಹೆಚ್ಚಲಿದೆ. ಜನ ಗೃಹ ಸಾಲ, ವಾಹನ ಸಾಲ ಪಡೆಯುವುದನ್ನು ಕಡಿಮೆ ಮಾಡುತ್ತಾರೆ. ಆಗ ವ್ಯವಸ್ಥೆಯಲ್ಲಿ ಉತ್ಪನ್ನ ಮತ್ತು ಸೇವೆಗಳಿಗೆ ಬೇಡಿಕೆ ತಗ್ಗುತ್ತದೆ. ಬೆಲೆ ಇಳಿಯುತ್ತದೆ ಎಂಬುದು ಬಡ್ಡಿ ದರ ಏರಿಕೆ ಹಿಂದಿನ ಲೆಕ್ಕಾಚಾರ. ಹಾಗಂತ ಈ ಬಡ್ಡಿ ದರ ಇಳಿಕೆಯಿಂದ ಬೇಡಿಕೆ ಕುಸಿದು ರಿಸೆಷನ್‌ ಆಗಲಿದೆಯೇ ಎಂಬುದು ಸದ್ಯಕ್ಕೆ ಭಾರಿ ಚರ್ಚೆಯಾಗುತ್ತಿದೆ. ಫೈನಾನ್ಷಿಯಲ್‌ ಟೈಮ್ಸ್‌ ನಡೆಸಿದ ಸಮೀಕ್ಷೆಯ ಪ್ರಕಾರ ಶೇ.70ರಷ್ಟು ಆರ್ಥಿಕ ತಜ್ಞರು ಮುಂದಿನ ವರ್ಷ ಅಮೆರಿಕದಲ್ಲಿ ರಿಸೆಶನ್‌ ಪಕ್ಕಾ ಎನ್ನುತ್ತಾರೆ. ಇನ್ನು ಕೆಲವರು, ಆದರೆ ಒಳ್ಳೆಯದು ಎಂದೂ ಹೇಳುತ್ತಾರೆ.

ಅಮೆರಿಕದಲ್ಲಿ 40 ವರ್ಷದಲ್ಲೇ ಅತಿ ಹೆಚ್ಚಿನ ಬೆಲೆ ಏರಿಕೆ

ಜಗತ್ತಿನ ನಂ.1 ಎಕಾನಮಿ ಎನ್ನಿಸಿರುವ ಅಮೆರಿಕದಲ್ಲೇ ಈಗ ದಿನ ನಿತ್ಯದ ಹಾಲು, ಮೊಟ್ಟೆ, ತರಕಾರಿ, ಅಡುಗೆ ಅನಿಲ, ಆಸ್ಪತ್ರೆ ಖರ್ಚು, ರೆಫ್ರಿಜರೇಟರ್‌ನಿಂದ ಕಾರು, ಮನೆ, ಸೈಟು, ಫ್ಲ್ಯಾಟ್‌ ಎಲ್ಲದರ ದರ ಭಾರಿ ದುಬಾರಿಯಾಗಿ ಜನ ತತ್ತರಿಸಿದ್ದಾರೆ. ಕೋವಿಡ್‌ ಬಿಕ್ಕಟ್ಟು ಶುರುವಾದಂದಿನಿಂದ ನಿಧಾನವಾಗಿ ಮಂದಗತಿಗೆ ತಿರುಗಿದ ಎಕಾನಮಿ, ಕಳೆದೊಂದು ವರ್ಷದಿಂದೀಚೆಗೆ, ಕಳೆದ ಹಲವಾರು ದಶಕಗಳಲ್ಲೇ ಕಂಡರಿಯದಂತೆ ಕುಸಿಯುತ್ತಿದೆ.
ಕಳೆದ ಕೆಲವು ತಿಂಗಳಿನಿಂದ ಅಮೆರಿಕದಿಂದ ಬರುತ್ತಿರುವ ಸುದ್ದಿಗಳಂತೂ, ಇಡೀ ಜಗತ್ತಿನ ಕಳವಳವನ್ನು ಹೆಚ್ಚಿಸಿದೆ. ಮೇನಲ್ಲಿ ಹಣದುಬ್ಬರ ಅಥವಾ ಬೆಲೆ ಏರಿಕೆ 8.6%ಕ್ಕೆ ಹೆಚ್ಚಳವಾಗಿದೆ. ಇದು 40 ವರ್ಷಗಳಲ್ಲಿಯೇ ಗರಿಷ್ಠ ಪ್ರಮಾಣವಾಗಿದೆ. ಏಪ್ರಿಲ್-ಮೇ ಒಂದರಲ್ಲಿಯೇ ಹಣದುಬ್ಬರ 1 ಪರ್ಸೆಂಟ್‌ ಏರಿತ್ತು. ಜನರ ಕೈಯಲ್ಲಿ ದುಡ್ಡು ನಿಲ್ಲುತ್ತಿಲ್ಲ. ಹೀಗಾಗಿ ಹೆಚ್ಚುತ್ತಿರುವ ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಮೆರಿಕದ ಸೆಂಟ್ರಲ್‌ ಬ್ಯಾಂಕ್‌ ಫೆಡರಲ್‌ ರಿಸರ್ವ್‌ ಬಡ್ಡಿ ದರಗಳನ್ನು ಕಳೆದ 30 ವರ್ಷದಲ್ಲೇ ಹೆಚ್ಚಿನ ಮಟ್ಟಕ್ಕೆ ಏರಿಸಿದೆ. ಕಳೆದ ಮಾರ್ಚ್‌ನಿಂದ ಬಡ್ಡಿ ದರ ಏರಿಕೆಯ ಅಸ್ತ್ರವನ್ನು ಅದು ಪ್ರಯೋಗಿಸಿದೆ.
ಭಾರತದಲ್ಲಿ ಆರ್‌ಬಿಐ ಹಣಕಾಸು ನೀತಿಗಳನ್ನು ಜಾರಿಗೊಳಿಸುವಂತೆ, ಅಮೆರಿಕದಲ್ಲಿ ಫೆಡರಲ್‌ ರಿಸರ್ವ್‌ ಕಾರ್ಯನಿರ್ವಹಿಸುತ್ತದೆ. ಬಡ್ಡಿ ದರಗಳನ್ನು ಏರಿಸುವ ಅದರ ನಿರ್ಧಾರದಿಂದ ಎಕಾನಮಿ ಚುರುಕಾಗಬಹುದೇ ಅಥವಾ ರಿಸೆಷನ್‌ಗೆ ಕಾರಣವಾಗಬಹುದೇ ಎಂಬ ಚರ್ಚೆ ಈಗ ನಡೆಯುತ್ತಿದೆ. ಬಡ್ಡಿ ದರದ ತೀವ್ರ ಏರಿಕೆಯಿಂದ ಬೇಡಿಕೆ ಕುಸಿದು ಆರ್ಥಿಕ ಚಟುವಟಿಕೆಗಳು ಕುಸಿದರೆ ರಿಸೆಶನ್‌ ಆಗಬಹುದು ಎಂಬ ವಾದ ಹೂಡಿಕೆದಾರರ ವಲಯದಲ್ಲಿದೆ. ಬಡ್ಡಿ ದರ ಏರಿಕೆಯಾದಾಗ ಕಾರ್ಪೊರೇಟ್‌ ಕಂಪನಿಗಳೂ ಸಾಲ ತೆಗೆದು ಹೂಡಿಕೆ ಮಾಡುವುದಿಲ್ಲ. ಹೂಡಿಕೆಯ ನಿರ್ಧಾರಗಳನ್ನು ಮುಂದೂಡುತ್ತವೆ.

ರಷ್ಯಾ ವಿರುದ್ಧದ ನಿರ್ಬಂಧಗಳ ಎಫೆಕ್ಟ್

ಉಕ್ರೇನ್‌ ವಿರುದ್ಧ ದಾಳಿ ನಡೆಸುತ್ತಿರುವ ರಷ್ಯಾದ ವಿರುದ್ಧ ಅಮೆರಿಕ ಅನೇಕ ನಿರ್ಬಂಧಗಳನ್ನು ವಿಧಿಸಿದೆ. ಅಮೆರಿಕದ ಕಂಪನಿಗಳು ರಷ್ಯಾಕ್ಕೆ ರಫ್ತು ಮಾಡಬಾರದು, ರಷ್ಯಾದಿಂದ ತೈಲ ಖರೀದಿಸಬಾರದು ಎಂಬ ನಿರ್ಬಂಧಗಳೂ ಇವೆ. ಇದರ ಪರಿಣಾಮ ಅಮೆರಿಕದ ಕಂಪನಿಗಳಿಗೆ ಉತ್ಪಾದನೆಯ ಖರ್ಚು ವೆಚ್ಚಗಳು ಜಾಸ್ತಿಯಾಗಿವೆ. ರಷ್ಯಾದಿಂದ ಅಮೆರಿಕಕ್ಕೆ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಕೃಷಿ ಉತ್ಪನ್ನಗಳ ಅಭಾವಕ್ಕೆ ಇದು ಕಾರಣವಾಗಿದೆ. ತರಕಾರಿಗಳ ಬೆಲೆ ಗಗನಕ್ಕೇರಿದೆ. ಹವಾಮಾನ ವೈಪರೀತ್ಯವೂ ಕಷ್ಟವನ್ನು ಹೆಚ್ಚಿಸಿದೆ.
ರಷ್ಯಾ ಮತ್ತು ಉಕ್ರೇನ್‌ ಸಂಘರ್ಷದ ಪರಿಣಾಮಗಳು ಕಚ್ಚಾ ತೈಲ ಮತ್ತು ದಿನ ನಿತ್ಯ ಬಳಕೆಯ ವಸ್ತುಗಳ ದರಗಳನ್ನು, ಕಚ್ಚಾ ವಸ್ತುಗಳ ಬೆಲೆಯನ್ನು ಗಗನಕ್ಕೇರುವಂತೆ ಮಾಡಿವೆ. ಉದಾಹರಣೆಗೆ ಆಹಾರ ವಸ್ತುಗಳ ದರ ಏಪ್ರಿಲ್-ಮೇ ನಡುವೆ 10% ಏರಿಕೆಯಾಗಿದೆ. ಇಂಧನ ದರ 34% ಜಿಗಿದಿದೆ. ಪ್ರತಿ ತಿಂಗಳೂ ಇದೇ ರೀತಿ ಬೆಲೆಗಳು ಏರಿದರೆ ಹೇಗೆ ಎಂಬುದು ಅಲ್ಲಿನ ಜನರ ಆತಂಕವಾಗಿದೆ.

ನೇರವಾಗಿ ದುಡ್ಡು ಹಂಚಿತ್ತು ಅಮೆರಿಕ ಸರಕಾರ

ಕೋವಿಡ್‌ ಬಿಕ್ಕಟ್ಟಿನಿಂದ ಅಮೆರಿಕ ಕೂಡ ಕಂಗೆಟ್ಟಿತ್ತು. ಇಂಥ ಸಂದರ್ಭ ಫೆಡರಲ್‌ ರಿಸರ್ವ್‌ 3 ಲಕ್ಷ ಕೋಟಿ ಡಾಲರ್‌ ನೋಟುಗಳನ್ನು ಮುದ್ರಿಸಿತು. ಬೈಡೆನ್‌ ಸರಕಾರ ಜನತೆಗೆ ನೆರವಾಗುವ ಉದ್ದೇಶದಿಂದ ಕಳೆದ ವರ್ಷ 1.9 ಲಕ್ಷ ಕೋಟಿ ಡಾಲರ್‌ ಪ್ಯಾಕೇಜನ್ನು ಘೋಷಿಸಿತು. ಜನರ ಬ್ಯಾಂಕ್‌ ಖಾತೆಗೆ ದುಡ್ಡು ಜಮೆ ಮಾಡಲಾಯಿತು. ನೇರ ನಗದನ್ನು ಹೆಚ್ಚಿಸಲಾಯಿತು. ಫೆಡರಲ್‌ ರಿಸರ್ವ್‌ ಹೇಗೂ 3 ಲಕ್ಷ ಕೋಟಿ ಡಾಲರ್‌ ನೋಟುಗಳನ್ನು ಮುದ್ರಿಸಿಟ್ಟಿತ್ತು. ಇದರ ಪರಿಣಾಮ ಜನರ ಆದಾಯದಲ್ಲಿ ವರ್ಷದೊಳಗೆ ಮೂರರಿಂದ ನಾಲ್ಕು ಪರ್ಸೆಂಟ್‌ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಯಿತು. ಆದರೆ ನಿಜಕ್ಕೂ ಉಂಟಾಗಿದ್ದು ದೊಡ್ಡ ಬ್ಲಂಡರ್. ನೋಟುಗಳನ್ನು ಪ್ರಿಂಟ್‌ ಹಾಕುವುದು ಮತ್ತು ವಿತರಿಸುವುದು ದೊಡ್ಡದಲ್ಲ, ಆದರೆ ಅದಕ್ಕೆ ತಕ್ಕಂತೆ ಉತ್ಪಾದನೆ, ಪೂರೈಕೆಯ ಚಟುವಟಿಕೆಗಳು ಚುರುಕಾಗಬೇಕು. ಅಮೆರಿಕದಲ್ಲಿ ಅದು ನಡೆಯಲಿಲ್ಲ. ಇದರ ಪರಿಣಾಮ ಉಂಟಾಗಿದ್ದು, 40 ವರ್ಷಗಳಲ್ಲೇ ಕಂಡರಿಯದ ಹಣದುಬ್ಬರ.

ರಿಸೆಷನ್‌ ಆತಂಕ ಬೇಡ ಎನ್ನುತ್ತಿದ್ದಾರೆ ಜೊ ಬೈಡೆನ್

ಬೆಲೆ ಏರಿಕೆ ಆಗಿರುವುದು ನಿಜ, ಆರ್ಥಿಕತೆಯಲ್ಲಿ ಕೆಲವು ತೊಂದರೆಗಳಿರುವುದೂ ಹೌದು. ಆದರೆ ಬೇರೆ ದೇಶಗಳಿಗೆ ಹೋಲಿಸಿದರೆ ನಾವೇ ವಾಸಿ. ಆರ್ಥಿಕ ಹಿಂಜರಿತ ಆಗಲಿದೆ ಎಂದು ನನಗೆ ಅನ್ನಿಸುತ್ತಿಲ್ಲ ಎನ್ನುತ್ತಾರೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್.‌
ಇಂಧನ ಪೂರೈಕೆಯಲ್ಲಿನ ಕೊರತೆಯಿಂದ ದೇಶದ ಜನತೆಗೆ ಸಂಕಷ್ಟವಾಗಿದೆ. ಇದನ್ನು ಬಗೆಹರಿಸಲು ಸರ್ಕಾರ ಯತ್ನಿಸುತ್ತಿದೆ ಎಂಬುದು ಜೋ ಬೈಡೆನ್‌ ಅವರ ಸಮರ್ಥನೆ.


ಇದಕ್ಕೆ ಪೂರಕವಾಗಿ ಕೆಲ ಆರ್ಥಿಕ ತಜ್ಞರೂ ತಮ್ಮ ವಾದವನ್ನು ಮುಂದಿಡುತ್ತಾರೆ. ಅಮೆರಿಕದಲ್ಲಿ ಕೋವಿಡ್‌ ಬಿಕ್ಕಟ್ಟಿನ ಸಂದರ್ಭ ನಷ್ಟವಾಗಿದ್ದ ಉದ್ಯೋಗಗಳೆಲ್ಲ 2022ರ ವೇಳೆಗೆ ಭರ್ತಿಯಾಗಿದೆ. ಉದ್ಯೋಗ ಸೃಷ್ಟಿ ಚುರುಕಾಗಿದೆ. ಗ್ರಾಹಕರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಖರ್ಚು ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಬೇಡಿಕೆಗೆ ಕೊರತೆ ಇಲ್ಲ. ಕಾರ್ಪೊರೇಟ್‌ ಕಂಪನಿಗಳಲ್ಲಿ ಸಂಬಳ ಹೆಚ್ಚುತ್ತಿದೆ ಎಂಬ ವಾದವೂ ಇದೆ.

ಭಾರತದ ಮೇಲೆ ಪರಿಣಾಮವೇನು?

ಪ್ರತಿ ಸಲವೂ ಜಾಗತಿಕ ಆರ್ಥಿಕ ಬಿಕ್ಕಟ್ಟು ಉಂಟಾದಾಗಲೆಲ್ಲ ಭಾರತದ ಐಟಿ ಕ್ಷೇತ್ರಕ್ಕೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬ ಚರ್ಚೆ ಸಾಮಾನ್ಯ. ಅದರಲ್ಲೂ ಅಮೆರಿಕದಲ್ಲಿ ನಡೆಯುವ ವಿದ್ಯಮಾನಗಳಿಗೂ, ಭಾರತದ ಐಟಿ ವಲಯಕ್ಕೂ ಹೋಲಿಸುವುದು ಹೆಚ್ಚು. ಇದಕ್ಕೆ ಕಾರಣವೂ ಇದೆ. ಭಾರತದ ಐಟಿ ಕಂಪನಿಗಳ ಆದಾಯದಲ್ಲಿ 40ರಿಂದ 78 ಪರ್ಸೆಂಟ್‌ ಪಾಲು ಅಮೆರಿಕದಿಂದ ಬರುತ್ತದೆ. ಟಿಸಿಎಸ್‌, ಇನ್ಫೋಸಿಸ್‌, ವಿಪ್ರೊ, ಎಚ್‌ಸಿಎಲ್‌ ಟೆಕ್ನಾಲಜೀಸ್‌, ಟೆಕ್‌ ಮಹೀಂದ್ರಾದ ಬಹುಪಾಲು ಆದಾಯ ಅಮೆರಿಕದ ಗ್ರಾಹಕರಿಂದ ಸಿಗುತ್ತದೆ. ಹೀಗಾಗಿಯೇ ಅಮೆರಿಕದ ಬಿಕ್ಕಟ್ಟು ಪ್ರಭಾವ ಬೀರಬಹುದೇ ಎಂಬ ಪ್ರಶ್ನೆ ಕಾಡುತ್ತಿದೆ. ಸಾಲದ್ದಕ್ಕೆ ಜೆಪಿ ಮೋರ್ಗಾನ್‌ ಸಂಸ್ಥೆಯೂ ತನ್ನ ಇತ್ತೀಚಿನ ವರದಿಯಲ್ಲಿ ಐಟಿ ವಲಯ ಒತ್ತಡದಲ್ಲಿದೆ. ಮುಂಬರುವ ದಿನಗಳಲ್ಲಿ ಆದಾಯಕ್ಕೆ ಹೊಡೆತ ಬೀಳಬಹುದು ಎಂದು ಎಚ್ಚರಿಸಿದೆ.
ಆದರೆ ಭಾರತದ ಐಟಿ ಉದ್ದಿಮೆ ಈಗ ಪ್ರಬುದ್ಧವಾಗಿದ್ದು, ಯಾವುದೇ ಬಾಹ್ಯ ಒತ್ತಡಗಳನ್ನು ನಿಭಾಯಿಸಬಲ್ಲುದು ಎನ್ನುತ್ತಾರೆ ಅಸೊಚೆಮ್‌ನ ಮಾಜಿ ಅಧ್ಯಕ್ಷ ಸಂಪತ್‌ ರಾಮನ್.‌
ಇತ್ತೀಚೆಗೆ ಐಟಿ ಕಂಪನಿಗಳ ಷೇರು ದರಗಳಲ್ಲಿ ಕುಸಿತಕ್ಕೀಡಾಗಿದ್ದರೂ, ಇಂಥ ಏರಿಳಿತಗಳನ್ನು ಉದ್ದಿಮೆ ತಾಳಿಕೊಳ್ಳಲಿದೆ ಎನ್ನುತ್ತಾರೆ ತಜ್ಞರು. ಕೋವಿಡ್‌ ಸಂದರ್ಭದಲ್ಲೂ ಐಟಿ ಕಂಪನಿಗಳ ಭವಿಷ್ಯದ ಬಗ್ಗೆ ಊಹಾಪೋಹಗಳು ಉಂಟಾಗಿತ್ತು. ಆದರೆ ಕೋವಿಡ್‌ ಲಾಕ್‌ ಡೌನ್‌ ನಡುವೆಯೂ ಟೆಕ್ಕಿಗಳು ಮನೆಯಿಂದಲೇ ಕೆಲಸ ಮುಂದುವರಿಸಿದ್ದರು. ಈ ಅವಧಿಯಲ್ಲಿ ಬಹುತೇಕ ಉದ್ದಿಮೆಗಳು ಡಿಜಿಟಲೀಕರಣಕ್ಕೆ ತಮ್ಮನ್ನು ಒಡ್ಡಿಕೊಂಡ ಪರಿಣಾಮ ಐಟಿ ವಲಯಕ್ಕೆ ನಿರೀಕ್ಷೆ ಮೀರಿ ಬೇಡಿಕೆ ವೃದ್ಧಿಸಿತು. ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಯಿತು. ಈಗಲೂ ಅದೇ ಟ್ರೆಂಡ್‌ ಮುಂದುವರಿದಿದೆ.
ಆದರೆ ಭಾರತವು ಅಮೆರಿಕಕ್ಕೆ ಐಟಿ ಹೊರತುಪಡಿಸಿ ಇತರ ಅನೇಕ ಉತ್ಪನ್ನಗಳನ್ನು ರಫ್ತು ಮಾಡುತ್ತದೆ. ಅದರಲ್ಲಿ ಜವಳಿ ಉತ್ಪನ್ನಗಳು, ಎಂಜಿನಿಯರಿಂಗ್‌, ಔಷಧ, ಅಮೂಲ್ಯ ಶಿಲೆಗಳು, ಯಂತ್ರೋಪಕರಣಗಳು, ಎಲೆಕ್ಟ್ರಿಕಲ್‌, ಎಲೆಕ್ಟ್ರಾನಿಕ್‌ ಸಾಧನಗಳು, ಸಾವಯವ ರಾಸಾಯನಿಕಗಳು, ಸಾಗರೋತ್ಪನ್ನಗಳು, ಪ್ಲಾಸ್ಟಿಕ್‌, ಪೀಠೋಪಕರಣಗಳು, ರಬ್ಬರ್‌, ಅಲ್ಯುಮಿನಿಯಂ, ಕಬ್ಬಿಣ ಮತ್ತು ಉಕ್ಕು, ಪಾದರಕ್ಷೆ, ಸೌಂದರ್ಯವರ್ಧಕಗಳು, ಕಾಫಿ,ಚಹಾ, ಏರ್‌ಕ್ರಾಫ್ಟ್‌, ಸ್ಪೇಸ್‌ ಕ್ರಾಫ್ಟ್‌, ಗ್ಲಾಸ್‌, ತೈಲಬೀಜಗಳು, ಹತ್ತಿ, ಅನೇಕ ಉದ್ದಿಮೆಗಳಿಗೆ ಬೇಕಾಗುವ ಕಚ್ಚಾ ವಸ್ತುಗಳನ್ನು ಭಾರತ ರಫ್ತು ಮಾಡುತ್ತದೆ. ಐಟಿ ಒಂದು ಭಾಗ ಮಾತ್ರ. ಇವುಗಳ ಹಿತಾಸಕ್ತಿಗೆ ಅಮೆರಿಕದ ಪರಿಸ್ಥಿತಿ ಚೆನ್ನಾಗಿರುವುದು ಮುಖ್ಯ. 2021ರಲ್ಲಿ ಎರಡೂ ರಾಷ್ಟ್ರಗಳ ದ್ವಿಪಕ್ಷೀಯ ಸರಕು ವ್ಯಾಪಾರ ದಾಖಲೆಯ 100 ಬಿಲಿಯನ್‌ ಡಾಲರ್‌, ಅಂದರೆ ಅಂದಾಜು 7.8 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿತ್ತು. ಹೀಗಾಗಿ ಬಡ್ಡಿ ದರ ಏರಿಕೆ ಪರಿಣಾಮ ಭಾರತದ ಉತ್ಪನ್ನಗಳಿಗೆ ಅಮೆರಿಕದಲ್ಲಿ ಬೇಡಿಕೆ ಕ್ಷೀಣಿಸಿದರೆ ಮಾತ್ರ ಕಷ್ಟವಾದೀತು. ಎರಡನೆಯದಾಗಿ ಭಾರತದಲ್ಲಿ ಅಮೆರಿಕದ ಹೂಡಿಕೆ ಕಡಿಮೆಯಾದರೆ ಸವಾಲಾದೀತು. ಆದರೆ ಭಾರತ ಮೇಕ್‌ ಇನ್‌ ಇಂಡಿಯಾ ಅಭಿಯಾನ, ಪಿಎಲ್‌ಐ ಸ್ಕೀಮ್‌ ಅಡಿ ದೇಶಿ ಉತ್ಪಾದನೆಗೆ ಒತ್ತು ನೀಡುತ್ತಿದೆ, ಹೀಗಾಗಿ ವಿದೇಶಿ ಹೂಡಿಕೆಯ ಒಳಹರಿವು ಉಂಟಾಗುತ್ತಿದೆ ಎನ್ನುತ್ತಾರೆ ತಜ್ಞರು.

ಈಗಲೂ ಅಮೆರಿಕ ಸೂಪರ್‌ ಪವರ್‌

ಶೀತಲ ಸಮರದ ಕಾಲಘಟ್ಟದಲ್ಲಿ ಬ್ರಿಟಿಷ್‌ ಸಾಮ್ರಾಜ್ಯ ಪತನವಾಯಿತು. ಅಮೆರಿಕ ಮತ್ತು ಸೋವಿಯತ್‌ ಒಕ್ಕೂಟ ಕಣದಲ್ಲಿ ಉಳಿಯಿತು. ಶೀತಲಸಮರ ಅಂತ್ಯವಾಗುವ ಹೊತ್ತಿಗೆ 1991ರಲ್ಲಿ ಸೋವಿಯತ್‌ ಒಕ್ಕೂಟ ವಿಸರ್ಜನೆಯಾಯಿತು. ಅಮೆರಿಕ ವಿಶ್ವದ ಏಕೈಕ ಸೂಪರ್‌ ಪವರ್‌ ಆಯಿತು. ಈಗಲೂ ಜಾಗತಿಕ ಮಟ್ಟದಲ್ಲಿ ಅಮೆರಿಕ ತನ್ನ ಪ್ರಭಾವವನ್ನು ಹೊಂದಿದೆ. ಜಗತ್ತಿನಲ್ಲಿ ಅತಿ ದೊಡ್ಡ ಮಿಲಿಟರಿ ಬಜೆಟ್‌ ಅನ್ನು ಇದು ಒಳಗೊಂಡಿದೆ. ಅತಿ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹಲವು ದೇಶಗಳಿಗೆ ರಫ್ತು ಮಾಡುತ್ತದೆ. ಇದಕ್ಕಾಗಿಯೇ ಜಗತ್ತಿನ ಒಂದಿಲ್ಲೊಂದು ಕಡೆಗಳಲ್ಲಿ ಸಂಘರ್ಷಗಳಿಗೆ ಕುಮ್ಮಕ್ಕು ನೀಡುತ್ತದೆ ಎಂಬ ಆರೋಪವೂ ಅಮೆರಿಕದ ಮೇಲಿದೆ. ಮಾಹಿತಿ ತಂತ್ರಜ್ಞಾನ, ಆಟೊಮೊಬೈಲ್‌, ಬಾಹ್ಯಾಕಾಶ, ಪರಮಾಣು ಇಂಧನ ಹಾಗೂ ಉತ್ಪಾದನೆಯಲ್ಲಿ ಅಮೆರಿಕ ಮುಂಚೂಣಿಯಲ್ಲಿದೆ.
ಈಗಲೂ ಅಮೆರಿಕ ಸೂಪರ್‌ ಪವರ್‌ ಆಗಿದೆ. ಜನ ಅಂದುಕೊಂಡಷ್ಟು ದುರ್ಬಲವಾಗಿಲ್ಲ. ರಿಸೆಶನ್‌ ಆಗಲಿದೆ ಎಂದು ಗ್ರಹಿಸುವುದು ಕಷ್ಟ ಎನ್ನುತ್ತಾರೆ ಹೂಡಿಕೆದಾರ ಕೆವಿನ್‌ ಒಲಿಯರಿ. ಅದಕ್ಕೆ ಎರಡು ಕಾರಣಗಳನ್ನೂ ಅವರು ವಿವರಿಸುತ್ತಾರೆ. ಮೊದಲನೆಯದಾಗಿ ಕಳೆದ ಕೆಲ ವರ್ಷಗಳಲ್ಲಿ ಅಮೆರಿಕದ ಆರ್ಥಿಕತೆಗೆ 4.5 ಲಕ್ಷ ಕೋಟಿ ಡಾಲರ್ ಹಣವನ್ನು ಸೇರಿಸಲಾಗಿದೆ. ಗ್ರಾಹಕರು ಮತ್ತು ಬಿಸಿನೆಸ್‌ ವಲಯಕ್ಕೂ ಭರಪೂರ ಹಣ ನೀಡಲಾಗಿದೆ. ಈ ಹಣದಿಂದ ಗ್ರಾಹಕರು ತಮಗೆ ಬೇಕಾದ್ದನ್ನು ಖರೀದಿಸುತ್ತಿದ್ದಾರೆ. ಎರಡನೆಯದಾಗಿ ತಂತ್ರಜ್ಞಾನದ ಪರಿಣಾಮ ಉತ್ಪಾದನೆ ಗಣನೀಯವಾಗಿ ಸುಧಾರಿಸಿದೆ. ಹೀಗಾಗಿ ರಿಸೆಶನ್‌ ಉಂಟಾಗದು ಎನ್ನುತ್ತಾರೆ ಅವರು.
ಹೀಗಾಗಿ ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಆಗಲಿದೆಯೇ ಎಂಬುದನ್ನು ಗ್ರಹಿಸುವುದು ಕಷ್ಟ. ಆದರೆ ಹಣದುಬ್ಬರ ಕಳೆದ 40 ವರ್ಷಗಳಲ್ಲಿಯೇ ಕಂಡರಿಯದ ಮಟ್ಟಕ್ಕೇರಿದ್ದು, ಅಮೆರಿಕದ ಪ್ರಜೆಗಳನ್ನು ಕಂಗೆಡಿಸಿರುವುದಂತೂ ವಾಸ್ತವ. ಈ ಬಿಕ್ಕಟ್ಟು ಎಲ್ಲಿಗೆ ಬಂದು ನಿಲ್ಲುತ್ತದೆ ಎಂದು ಕಾದು ನೋಡಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜ್ಞಾನ

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

ಭಾರತ ಪರಮಾಣು ಶಕ್ತಿ ರಾಷ್ಟ್ರವಾಗಿ ಇಂದಿಗೆ 50 ವರ್ಷ. ಇಂದಿಗೆ ಸುಮಾರು 50 ವರ್ಷಗಳ ಹಿಂದೆ ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯನ್ನು (Nuclear Test In Pokhran) ನಡೆಸಿತ್ತು. ಈ ಕುರಿತ ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

By

Nuclear test at Pokhran
Koo

ಇಂದಿಗೆ 50 ವರ್ಷಗಳ ಹಿಂದೆ ಭಾರತದ (India) ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ ದಾಖಲಾಗಿತ್ತು. ಅದುವೇ ಅಣು ಪರೀಕ್ಷೆ. ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ (Nuclear Test In Pokhran) ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ (Prime Minister) ಇಂದಿರಾ ಗಾಂಧಿಯವರು (Indira gandhi) 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ (BARC) ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಭಾರತ ಇಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು.

ಸ್ಮೈಲಿಂಗ್ ಬುದ್ಧ ಹೆಸರು ನೀಡಿದ್ದು ಯಾಕೆ?

ಈ ಪರೀಕ್ಷೆಗೆ ‘ಸ್ಮೈಲಿಂಗ್ ಬುದ್ಧ’ ಎಂಬ ಸಂಕೇತನಾಮವನ್ನು ನೀಡಲಾಯಿತು. 1974ರ ಮೇ 18ರಂದು ಆ ವರ್ಷದ ಬುದ್ಧ ಪೂರ್ಣಿಮೆಯಂದು ಪರೀಕ್ಷೆಯನ್ನು ನಡೆಸಲಾಗಿದ್ದರಿಂದ ಈ ಹೆಸರನ್ನು ಆಯ್ಕೆ ಮಾಡಲಾಯಿತು. “ಬುದ್ಧ ಅಂತಿಮವಾಗಿ ಮುಗುಳ್ನಕ್ಕ” ಎಂಬುದು ಭಾರತದ ಪ್ರಧಾನ ಪರಮಾಣು ಸಂಶೋಧನಾ ಸಂಸ್ಥೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕ ರಾಜಾ ರಾಮಣ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂದೇಶವನ್ನು ರವಾನಿಸಿದ್ದರು!


ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಹೊಂದಿರದ ರಾಷ್ಟ್ರವೊಂದು ನಡೆಸಿದ ಮೊದಲ ಪರಮಾಣು ಪರೀಕ್ಷೆ ಇದಾಗಿದೆ.

ಪೋಖ್ರಾನ್‌ನಲ್ಲಿ ಸ್ಫೋಟಿಸಿದ ಸಾಧನದ ಬಗ್ಗೆ ಚರ್ಚೆಯಾಗಿದ್ದರೂ, ಇದು ಸುಮಾರು 8- 12 ಕಿಲೋ ಟನ್‌ಗಳಷ್ಟು ಟಿಎನ್‌ಟಿ (ಪರಮಾಣು ಪರೀಕ್ಷೆ ಮಾಪನ) ಎಂದು ನಂಬಲಾಗಿದೆ. ಪರೀಕ್ಷೆಯ ಪ್ರಮುಖ ಅಂಶವೆಂದರೆ ಭಾರತವು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಗುಪ್ತಚರ ಸಂಸ್ಥೆಗಳ ಪತ್ತೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದು. ಇಂತಹ ಪರೀಕ್ಷೆಗಳು ಪರಮಾಣು ಪ್ರಸರಣಕ್ಕೆ ಕಾರಣವಾಗಬಹುದು ಎಂದು ಹೇಳಿದ ಅಮೆರಿಕದಂತಹ ರಾಷ್ಟ್ರದ ನಿರ್ಬಂಧಗಳ ಸರಣಿಯನ್ನು ದೇಶವು ಎದುರಿಸಿತು.


ಎರಡು ವರ್ಷಗಳ ತಯಾರಿ

ಈ ಪರೀಕ್ಷೆಯನ್ನು ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಪೋಖ್ರಾನ್-II ಪರೀಕ್ಷೆ

1974ರ ಅನಂತರ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 1998ರಲ್ಲಿ ಭಾರತವು ಅದೇ ಸ್ಥಳದಲ್ಲಿ ಪೋಖ್ರಾನ್- II ಹೆಸರಿನಲ್ಲಿ ಮತ್ತೊಂದು ಪರಮಾಣು ಪರೀಕ್ಷೆ ನಡೆಸಿತು. ಈ ಪರೀಕ್ಷೆ ಮೇ 1998ರಲ್ಲಿ ಪೋಖ್ರಾನ್‌ನಲ್ಲಿ ಐದು ಪರಮಾಣು ಸ್ಫೋಟಗಳ ಸರಣಿಯನ್ನು ಕಂಡವು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. 2020ರಿಂದ ಭಾರತವು 1974ರ ಪೋಖ್ರಾನ್ ಪರೀಕ್ಷೆಗಳ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಾರಂಭಿಸಿತ್ತು.

Continue Reading

ರಾಜಕೀಯ

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನ ಮಂತ್ರಿ (Prime Minister Of India) ಸ್ಥಾನವನ್ನು ಅಲಂಕರಿಸಿದ್ದಾರೆ. ಅವರಲ್ಲಿ ಕೆಲವರು ಮಾತ್ರ ಸುದೀರ್ಘಾವಧಿಗೆ ಪ್ರಧಾನಿಯಾಗಿದ್ದರು. ಯಾರು ಎಷ್ಟು ಅವಧಿಗೆ ಪ್ರಧಾನಮಂತ್ರಿಯಾಗಿದ್ದರು? ಈ ಕುರಿತ ದಾಖಲೆ ಇಲ್ಲಿದೆ.

VISTARANEWS.COM


on

By

Prime Minister of India
Koo

ಪ್ರತಿ ಬಾರಿಯೂ ಲೋಕಸಭಾ ಚುನಾವಣೆ (Lok sabha election) ಘೋಷಣೆಯಾದ ಬಳಿಕ ಮುಂದಿನ ಪ್ರಧಾನಿ (Prime Minister Of India) ಯಾರಾಗಬಹುದು ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ.

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರೆಂದರೆ ಜವಾಹರ್ ಲಾಲ್ ನೆಹರೂ (Jawaharlal Nehru) , ಲಾಲ್ ಬಹಾದ್ದೂರ್ ಶಾಸ್ತ್ರೀ (Lal Bahadur Shastri), ಇಂದಿರಾ ಗಾಂಧಿ (Indira gandhi), ಮೊರಾರ್ಜಿ ದೇಸಾಯಿ (morarji desai), ಚರಣ್ ಸಿಂಗ್ (charan singh), ರಾಜೀವ್ ಗಾಂಧಿ (rajiv gandhi), ವಿಶ್ವನಾಥ್ ಪ್ರತಾಪ್ ಸಿಂಗ್ (vishwanath pratap singh), ಚಂದ್ರಶೇಖರ್ (chandra shekhar) , ಪಿ.ವಿ. ನರಸಿಂಹ ರಾವ್ (p.v. narasimha rao), ಅಟಲ್ ಬಿಹಾರಿ ವಾಜಪೇಯಿ (atal bihari vajpayee), ಎಚ್.ಡಿ. ದೇವೇಗೌಡ (h.d. deve gowda), ಇಂದರ್ ಕುಮಾರ್ ಗುಜ್ರಾಲ್ (inder kumar gujral), ಮನ್ ಮೋಹನ್ ಸಿಂಗ್ (manmohan singh), ನರೇಂದ್ರ ಮೋದಿ (narendra modi). ಇವರಲ್ಲಿ ಕೆಲವರು ಮಾತ್ರ ದೀರ್ಘಾವಧಿಗೆ ಪ್ರಧಾನಿ ಯಾಗಿದ್ದರು. ಅವರು ಯಾರು? ಇಲ್ಲಿದೆ ಮಾಹಿತಿ.


ಇಂದಿರಾ ಗಾಂಧಿ (1966ರಿಂದ1977, 1980ರಿಂದ1984)

ಜವಾಹರಲಾಲ್ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಒಟ್ಟು 15 ವರ್ಷ 350 ದಿನಗಳ ಕಾಲ ಪ್ರಧಾನಿಯಾಗಿದ್ದರು. 1975ರಲ್ಲಿ ತುರ್ತುಪರಿಸ್ಥಿತಿಯ ಜಾರಿ, ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆ ಸೇರಿದಂತೆ ಹಲವು ದಿಟ್ಟ ಮತ್ತು ವಿವಾದಾತ್ಮಕ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದರು. ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದು ಇಂದಿರಾ ಗಾಂಧಿ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಹೀನಾಯ ಹಿನ್ನಡೆ ಕಂಡು ಅಧಿಕಾರ ತ್ಯಜಿಸಬೇಕಾಯಿತು. ಆದರೆ 1980ರಲ್ಲಿ ಅವರು ಮತ್ತೆ ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಮರಳಿದರು. ಆದರೆ 1984ರಲ್ಲಿ ಸಿಖ್‌ ಭಯೋತ್ಪಾದನೆಗೆ ಬಲಿಯಾದರು.


ಅಟಲ್ ಬಿಹಾರಿ ವಾಜಪೇಯಿ (1996, 1998-2004)

ನುರಿತ ವಾಗ್ಮಿ ಮತ್ತು ದೂರದೃಷ್ಟಿಯ ನಾಯಕ, ಅಟಲ್ ಬಿಹಾರಿ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಒಮ್ಮೆ 13 ದಿನ, ಮತ್ತೊಮ್ಮೆ 13 ತಿಂಗಳಷ್ಟೇ ಅವರು ಪ್ರಧಾನಿಯಾಗಿದ್ದರು. ಆದರೆ 1998ರಿಂದ 2004ರ ಅವರು ಪೂರ್ಣಾವಧಿ ಪ್ರಧಾನಿಯಾಗಿದ್ದರು. ಒಂದೆಡೆ ಪರಮಾಣು ಪರೀಕ್ಷೆಯ ದಿಟ್ಟತನ ಮತ್ತು ಇನ್ನೊಂದೆಡೆ ಪಾಕಿಸ್ತಾನದೊಂದಿಗೆ ಶಾಂತಿಯನ್ನು ಬೆಳೆಸುವ, ಸಂದರ್ಭ ಬಂದಾಗ ಅದಕ್ಕೆ ಬುದ್ಧಿ ಕಲಿಸುವ ಅವರ ಉಪಕ್ರಮಗಳಿಗಾಗಿ ವಾಜಪೇಯಿ ಸದಾ ನೆನಪಿನಲ್ಲಿರುತ್ತಾರೆ. ಹೆದ್ದಾರಿ ನಿರ್ಮಾಣದ ಕ್ರಾಂತಿ ನಡೆದಿದ್ದು ಅವರ ಕಾಲದಲ್ಲಿ.


ಮನಮೋಹನ್ ಸಿಂಗ್ (2004-2014)

ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು ಒಟ್ಟು 10 ವರ್ಷಗಳ ಕಾಲ ಪ್ರಧಾನಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯು ಗಮನಾರ್ಹ ಆರ್ಥಿಕ ಸುಧಾರಣೆಗಳು ಮತ್ತು ಉದಾರೀಕರಣದ ಉಪಕ್ರಮಗಳಿಂದ ಗುರುತಿಸಲ್ಪಟ್ಟಿದೆ.


ನರೇಂದ್ರ ಮೋದಿ (2014ರಿಂದ ಈಗಿನವರೆಗೆ)

ಪ್ರಸ್ತುತ ಭಾರತದ ಪ್ರಧಾನಮಂತ್ರಿ ಆಗಿರುವ ನರೇಂದ್ರ ಮೋದಿ ಅವರು ಸತತ ಎರಡನೇ ಅವಧಿಯಲ್ಲಿದ್ದಾರೆ. ವರ್ಚಸ್ವಿ ನಾಯಕತ್ವಕ್ಕೆ ಹೆಸರುವಾಸಿಯಾದ ಅವರು ದೇಶದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಇದೇ ವೇಳೆ ಅವರನ್ನು ವಿರೋಧಿಸುವವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಪಾಕಿಸ್ತಾನಕ್ಕೆ ನಡುವ ಹುಟ್ಟಿಸಿದ ಕೀರ್ತಿ ಖ್ಯಾತಿ ಇವರಿಗಿದೆ. ನೋಟ್‌ ಬ್ಯಾನ್‌, ಜಿಎಸ್‌ಟಿ ಜಾರಿಯಂಥ ಆರ್ಥಿಕ ಸುಧಾರಣೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದೇಶಿ ನಾಯಕರೊಂದಿಗೆ ಮಾತುಕತೆ ನಡೆಸಿ ಶಾಂತಿ ನೆಲೆಸುವ ಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಎರಡನೇ ಅವಧಿಯು 2019ರಲ್ಲಿ ಪ್ರಾರಂಭವಾಯಿತು. ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳಿವೆ. ಆದರೆ ಮೋದಿ ಅವರು ಮೂರನೇ ಅವಧಿಯಲ್ಲಿ ಪ್ರಧಾನಿಯಾಗಿ ಪೂರ್ಣಾವಧಿ ಮುಗಿಸಿದರೂ ನೆಹರೂ ಮತ್ತು ಇಂದಿರಾ ಗಾಂಧಿ ಅವರ ಸುದೀರ್ಘ ಆಡಳಿತ ಅವಧಿಯ ದಾಖಲೆ ಹಾಗೆಯೇ ಮುಂದುವರಿಯುತ್ತದೆ. ಈ ದಾಖಲೆ ಮುರಿಯಬೇಕೆಂದರೆ ಮೋದಿ ನಾಲ್ಕನೇ ಬಾರಿಯೂ ಪ್ರಧಾನಿ ಆಗಬೇಕಾಗುತ್ತದೆ!

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ಆರೋಗ್ಯ

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು (Most costly medicine) ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾಗಿ ಅದರಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

By

Most costly medicine
Koo

ಜೈಪುರ: ಜನಪ್ರಿಯ ನಟ (actor), ಭಾರತ ತಂಡದ ಕ್ರಿಕೆಟಿಗ (cricketer), ವ್ಯಾಪಾರಿಗಳು (Vendor), ತರಕಾರಿ ಮಾರಾಟಗಾರರು ಮತ್ತು ಸಾಮಾನ್ಯ ಜನರು ಒಗ್ಗಟ್ಟಾಗಿ 22 ತಿಂಗಳ ಮಗುವೊಂದರ ಜೀವ ಉಳಿಸಲು ದುಬಾರಿ ಔಷಧ ಖರೀದಿಗಾಗಿ (Most costly medicine) ಹೊರಡಿರುವ ಹೃದಯಸ್ಪರ್ಶಿ ಕಥೆ ರಾಜಸ್ಥಾನದ (Rajasthan) ಜೈಪುರದಲ್ಲಿ (jaipur) ನಡೆದಿದೆ. ಈ ಔಷಧದ ಹಿನ್ನೆಲೆ ಕುತೂಹಲಕರವಾಗಿದೆ.

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾದರು.

ರಾಜಸ್ಥಾನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನರೇಶ್ ಶರ್ಮಾ ಅವರ ಪುತ್ರ ಹೃದಯಾಂಶ್ ಶರ್ಮಾ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂಬ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದನ್ನು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಝೋಲ್ಗೆನ್ಸ್ಮಾ (Zolgensma) ಎಂಬ ಜೀನ್ ಥೆರಪಿ ಇಂಜೆಕ್ಷನ್‌ನೊಂದಿಗಿನ ಚಿಕಿತ್ಸೆಯಿಂದ ಮಾತ್ರ ಗುಣಪಡಿಸಬಹುದಾಗಿದೆ. ಇದರ ಬೆಲೆ 17.5 ಕೋಟಿ ರೂ.


ಚುಚ್ಚು ಮದ್ದು ನೀಡಲು ಗಡುವು

ಬಾಲಕ 20 ತಿಂಗಳ ಮಗುವಾಗಿದ್ದಾಗ ಫೆಬ್ರವರಿಯಲ್ಲಿ ರಾಜಸ್ಥಾನ ಪೊಲೀಸರು ಕಟ್ಟುನಿಟ್ಟಾದ ಗಡುವನ್ನು ಹೊಂದಿದ್ದ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು. ಏಕೆಂದರೆ ಮಗುವಿಗೆ 2 ವರ್ಷ ವಯಸ್ಸಿನವರೆಗೆ ಮಾತ್ರ ಈ ಚುಚ್ಚುಮದ್ದನ್ನು ನೀಡಬಹುದು.

ನಟ, ಕ್ರಿಕೆಟಿಗನ ಬೆಂಬಲ

ಇವರ ಈ ಅಭಿಯಾನಕ್ಕೆ ಕ್ರಿಕೆಟಿಗ ದೀಪಕ್ ಚಾಹರ್ ಮತ್ತು ನಟ ಸೋನು ಸೂದ್ ಅವರೂ ಬೆಂಬಲ ನೀಡಿದರು. ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿಗಳನ್ನು ಪೋಸ್ಟ್ ಮಾಡಿದರು ಮತ್ತು ಜೈಪುರದಾದ್ಯಂತ ಜನರಿಂದ ಹಣವನ್ನು ಸಂಗ್ರಹಿಸುವ ಚಾಲನೆ ನೀಡಲಾಯಿತು.

ಹಣ್ಣು, ತರಕಾರಿ ಮಾರಾಟಗಾರರು, ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗಗಳ ಜನರಿಂದ ಹಣದ ಸಹಾಯ ಪಡೆಯಲಾಯಿತು. ವಿವಿಧ ಎನ್‌ಜಿಒಗಳು ಮತ್ತು ಸಾಮಾಜಿಕ ಸಂಸ್ಥೆಗಳು ಪ್ರಚಾರಕ್ಕಾಗಿ ಹಣವನ್ನು ಸಂಗ್ರಹಿಸಲು ಸಹಾಯ ಮಾಡಿದವು.


ಮೂರು ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

ರಾಜಸ್ಥಾನದಲ್ಲಿ ಈ ಪ್ರಮಾಣದಲ್ಲಿ ಕ್ರೌಡ್‌ಫಂಡಿಂಗ್ ನಡೆಯುತ್ತಿರುವುದು ಇದೇ ಮೊದಲು. ಮೂರು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಜೈಪುರದ ಜೆಕೆ ಲೋನ್ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಚುಚ್ಚುಮದ್ದನ್ನು ನೀಡಲಾಯಿತು. ಉಳಿದ ಮೊತ್ತವನ್ನು ಮೂರು ಕಂತುಗಳಲ್ಲಿ ಒಂದು ವರ್ಷದೊಳಗೆ ಆಸ್ಪತ್ರೆಗೆ ಜಮಾ ಮಾಡಬೇಕಿದೆ.

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂದರೇನು?

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆ ಅಥವಾ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಎಂಬುದು ಒಂದು ಆನುವಂಶಿಕ ಅಸ್ವಸ್ಥತೆಯಾಗಿದೆ. ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ನಷ್ಟದಿಂದಾಗಿ ವ್ಯಕ್ತಿಯು ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ.

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆಯು ಸರ್ವೈವಲ್ ಮೋಟಾರ್ ನ್ಯೂರಾನ್‌ಗಳು 1 ಎಂಬ ಜೀನ್‌ನ ನಷ್ಟದಿಂದ ಉಂಟಾಗುತ್ತದೆ. ಇದು ಪ್ರೋಟೀನ್ ತಯಾರಿಸಲು ಅಗತ್ಯವಾದ ಮಾಹಿತಿಯನ್ನು ಹೊಂದಿರುತ್ತದೆ. ಇದು ದೇಹದ ಪ್ರತಿಯೊಂದು ಜೀವಕೋಶಕ್ಕೂ ಅಗತ್ಯವಾಗಿರುತ್ತದೆ. ಮಾನವ ಸಾಮಾನ್ಯವಾಗಿ ಹೆಚ್ಚುವರಿ ಜೀನ್ (SMN2) ಅನ್ನು ಹೊಂದಿರುತ್ತಾನೆ. ಆದರೆ ಅದು SMN1 ನಷ್ಟವನ್ನು ಭಾಗಶಃ ಸರಿದೂಗಿಸುತ್ತದೆ.

SMN1 ಗೆ ಹೋಲಿಸಿದರೆ SMN2 ಕೇವಲ ಒಂದು ಸಣ್ಣ ಪ್ರಮಾಣದ ಅಗತ್ಯ ಪ್ರೋಟೀನ್ ಅನ್ನು ಉತ್ಪಾದಿಸುತ್ತದೆ ಮತ್ತು ದೇಹದಲ್ಲಿನ ಅನೇಕ ಜೀವಕೋಶಗಳು ಮತ್ತು ಅಂಗಗಳು ಈ ಕಡಿಮೆ ಪೂರೈಕೆಯೊಂದಿಗೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತೋರುತ್ತದೆಯಾದರೂ ಮೆದುಳಿನಿಂದ ಸ್ನಾಯುಗಳಿಗೆ ಸಂದೇಶಗಳನ್ನು ಕಳುಹಿಸುವ ಜವಾಬ್ದಾರಿಯುತ ಮೋಟಾರ್ ನ್ಯೂರಾನ್ ಗಳು ಕಡಿಮೆ ಮಟ್ಟದ SMNಗೆ ಸ್ಪಂದಿಸುವುದಿಲ್ಲ. ಹೀಗಾಗಿ ಇದು ಸ್ನಾಯು ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ.

17 ಕೋಟಿ ರೂ. ನ ದುಬಾರಿ ಔಷಧ

ಐಎಎನ್ ಎಸ್ ವರದಿ ಮಾಡಿದಂತೆ 17 ಕೋಟಿ ರೂ. ವೆಚ್ಚದ ವಿಶ್ವದ ಅತ್ಯಂತ ದುಬಾರಿ ಚುಚ್ಚುಮದ್ದನ್ನು ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವ ಎರಡು ವರ್ಷದೊಳಗಿನ ಮಕ್ಕಳಿಗೆ ನೀಡಬೇಕು. ಈ ಔಷಧವನ್ನು ಕ್ರೌಡ್‌ಫಂಡಿಂಗ್ ಸಹಾಯದಿಂದ ಝೋಲ್ಗೆನ್ಸ್ಮಾ ಎಂಬ ಈ ಇಂಜೆಕ್ಷನ್ ಅನ್ನು ಯುಎಸ್ ನಿಂದ ಜೈಪುರಕ್ಕೆ ತರಲಾಯಿತು. ಈ ಔಷಧ ಪಡೆಯಲು ಹಲವಾರು ಭಾರತೀಯ ಕುಟುಂಬಗಳು ಪರದಾಡುತ್ತಿವೆ.

ಭಾರತದಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಯಿಲೆ ಹೊಂದಿರುವ ಭಾರತೀಯರ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲದಿದ್ದರೂ, ಅಸ್ತಿತ್ವದಲ್ಲಿರುವ ಪ್ರಕಾರ 10,000 ಜೀವಂತವಾಗಿ ಜನಿಸಿದ ಶಿಶುಗಳಲ್ಲಿ 1ರಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಣಿಸಿಕೊಳ್ಳುತ್ತಿದೆ. ಒಂದು ಅಧ್ಯಯನದ ಪ್ರಕಾರ 38 ಭಾರತೀಯರಲ್ಲಿ ಒಬ್ಬರು ಬೆನ್ನುಮೂಳೆಯ ಸ್ನಾಯು ಕ್ಷೀಣತೆಗೆ ಒಳಗಾಗುತ್ತಾರೆ.

ಅತ್ಯಂತ ದುಬಾರಿ ಔಷಧ ಇದು

ಅಪರೂಪದ ಆನುವಂಶಿಕ ಕಾಯಿಲೆಯಾದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯೊಂದಿಗೆ ಜನಿಸಿದ ಶಿಶುಗಳು ಚಿಕಿತ್ಸೆಯಿಲ್ಲದೆ ಎರಡು ವರ್ಷ ಕೂಡ ಪೂರ್ಣಗೊಳಿಸುವುದಿಲ್ಲ. 1990ರ ದಶಕದವರೆಗೂ ಇದಕ್ಕೆ ಯಾವುದೇ ಚಿಕಿತ್ಸೆಗಳು ಇರಲಿಲ್ಲ. ಇದನ್ನು ತಡೆಗಟ್ಟಲು ಇತ್ತೀಚೆಗೆ ಪರವಾನಗಿ ಪಡೆದ ಎರಡು ಔಷಧಿಗಳಿವೆ. ಇದರಲ್ಲಿ ಒಂದು Zolgensma, ಯುಕೆಯಲ್ಲಿ ಶಿಶುಗಳಿಗೆ ಚಿಕಿತ್ಸೆ ನೀಡಲು ಇದು ಇತ್ತೀಚೆಗೆ ಅಷ್ಟೇ ಲಭ್ಯವಾಗುತ್ತಿದೆ. ಇದನ್ನು “ವಿಶ್ವದ ಅತ್ಯಂತ ದುಬಾರಿ ಔಷಧ” ಎಂದು ಕರೆಯಲಾಗುತ್ತದೆ. ಯಾಕೆಂದರೆ ಇದರ ಒಂದು ಡೋಸ್ ಗೆ ಸುಮಾರು 1.79 ಮಿಲಿಯನ್ ಡಾಲರ್ ಅಂದರೆ ಭಾರತೀಯ ಕರೆನ್ಸ್ ಮೌಲ್ಯ 17 ಕೋಟಿ ರೂ. ಪಾವತಿಸಬೇಕು.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ಈ ಕಾಯಿಲೆಗೆ ಲಭ್ಯವಿರುವ ಇನ್ನೊಂದು ಔಷಧ ಸ್ಪಿನ್ರಾಜಾ (ಜೆನೆರಿಕ್ ಹೆಸರು ನುಸಿನೆರ್ಸೆನ್) ಇದು SMN2 ಜೀನ್ ದೇಹಕ್ಕೆ ಅಗತ್ಯವಿರುವ ಪ್ರೋಟೀನ್ ಅನ್ನು ಒದಗಿಸಲು ಸಹಾಯ ಮಾಡುವ ಡಿಎನ್‌ಎಯ ಒಂದು ಸಣ್ಣ ಭಾಗವಾಗಿದೆ. ಇದನ್ನು ನೇರವಾಗಿ ಬೆನ್ನುಮೂಳೆಯ ನಿರ್ಧಿಷ್ಟ ಭಾಗಕ್ಕೆ ಚುಚ್ಚಬೇಕಾಗುತ್ತದೆ. ಇದನ್ನು ನಿಯಮಿತವಾಗಿ ವರ್ಷದಲ್ಲಿ ಆರು ಬಾರಿ ಮಾಡಬೇಕು. ಚಿಕಿತ್ಸೆಯ ಮೊದಲ ವರ್ಷದಲ್ಲಿ ಆರು ಚುಚ್ಚುಮದ್ದುಗಳು ಪ್ರತಿ ಇಂಜೆಕ್ಷನ್‌ಗೆ 75,000 ಡಾಲರ್ ಪಾವತಿಸಬೇಕಾಗುತ್ತದೆ.

2021 ರಿಂದ ಲಭ್ಯವಿರುವ Zolgensma ಮಾನವನ SMN1 ಜೀನ್ ನ ನಕಲು ಮಾಡಲು ಸಹಾಯ ಮಾಡುತ್ತದೆ. SMN1 ಜೀನ್ ಅನ್ನು ರಕ್ತಪ್ರವಾಹಕ್ಕೆ ಚುಚ್ಚಿದಾಗ ಇದು ವ್ಯಕ್ತಿಗೆ ಅಗತ್ಯವಿರುವ ಹೆಚ್ಚಿನ ಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ. ನಿರ್ವಹಣೆಗೆ ಸುಲಭ ಮತ್ತು ಕಡಿಮೆ ಅಡ್ಡ ಪರಿಣಾಮ ಉಂಟು ಮಾಡುವ Zolgensmaನ ಕೇವಲ ಒಂದು ಡೋಸ್ ಸಾಕಾಗುತ್ತದೆ.

ಭಾರತಕ್ಕೆ ಈ ಔಷಧ ತರಿಸಲು ಯಾವುದೇ ತೆರಿಗೆ ಪಾವತಿಸಬೇಕಿಲ್ಲ. ಆದರೆ ತೆರಿಗೆ ಇಲ್ಲದೇ ಇಲ್ಲಿ ಈ ಔಷಧೀಯ ದರ ಸುಮಾರು 17 ಕೋಟಿ ರೂ. ಆಗುತ್ತದೆ!

ನೊವಾರ್ಟಿಸ್ ವೆಬ್‌ಸೈಟ್‌ನ ಪ್ರಕಾರ, ಈ ಔಷಧವನ್ನು 45 ದೇಶಗಳಲ್ಲಿ ಅನುಮೋದಿಸಲಾಗಿದೆ. 2 500 ಕ್ಕೂ ಹೆಚ್ಚು ರೋಗಿಗಳು ಜಾಗತಿಕವಾಗಿ ಇದರ ಚಿಕಿತ್ಸೆ ಪಡೆಯುತ್ತಾರೆ. ಕಂಪೆನಿಯು 36 ದೇಶಗಳಲ್ಲಿ ಸುಮಾರು 300 ಮಕ್ಕಳಿಗೆ ಇದರ ಥೆರಪಿಯನ್ನು ಉಚಿತವಾಗಿ ನೀಡಿದೆ.

Continue Reading
Advertisement
SSLC 2024 Exam 2
ಪ್ರಮುಖ ಸುದ್ದಿ5 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ13 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Voter Turnout
ದೇಶ28 mins ago

Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Uttara Kannada News Take precautionary measures to prevent the spread of infectious diseases in the district says DC Gangubai manakar
ಉತ್ತರ ಕನ್ನಡ32 mins ago

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

BJP State President B Y Vijayendra latest statement in bengaluru
ಕರ್ನಾಟಕ34 mins ago

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

Shed houses electric poles damaged due to heavy rain and wind in Karatagi
ಕೊಪ್ಪಳ37 mins ago

Heavy Rain: ಕಾರಟಗಿಯಲ್ಲಿ ಭಾರೀ ಮಳೆ ಗಾಳಿಗೆ ಅಪಾರ ಹಾನಿ; ಸಚಿವ ಶಿವರಾಜ ತಂಗಡಗಿ ಪರಿಶೀಲನೆ

cylinder explosion in Kunigal 6 people seriously injured, Kunigal MLA Dr Ranganath visit victoria Hospital in bengaluru
ತುಮಕೂರು39 mins ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; ಮನೆಯ ಮೂವರಲ್ಲದೆ, ಪಕ್ಕದ ಮನೆಯ ಮೂವರಿಗೂ ಗಂಭೀರ ಗಾಯ

RCB vs CSK
ಕ್ರೀಡೆ50 mins ago

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Virat Kohli
ಕ್ರೀಡೆ1 hour ago

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ23 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌