ಮಹಾರಾಷ್ಟ್ರ ಮಹಾ ಅʼಗಾಡಿʼ ಸರ್ಕಾರ ಪಂಕ್ಚರ್‌?; ಶುರುವಾದಂತಿದೆ ಆಪರೇಶನ್‌ ಕಮಲ ! - Vistara News

ದೇಶ

ಮಹಾರಾಷ್ಟ್ರ ಮಹಾ ಅʼಗಾಡಿʼ ಸರ್ಕಾರ ಪಂಕ್ಚರ್‌?; ಶುರುವಾದಂತಿದೆ ಆಪರೇಶನ್‌ ಕಮಲ !

Maharashtra Political Crisis: ರಾಜ್ಯ ಸಭಾ ಚುನಾವಣೆಯಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರಕ್ಕೆ ಶಾಕ್‌ ಕೊಟ್ಟಿದ್ದ ಬಿಜೆಪಿ , ಈಗ ವಿಧಾನಪರಿಷತ್‌ ಚುನಾವಣೆಯಲ್ಲೂ ದೊಡ್ಡ ಆಘಾತ ನೀಡಿದೆ.

VISTARANEWS.COM


on

Maharashtra Politics
ಶರದ್‌ ಪವಾರ್‌ ಮತ್ತು ಉದ್ಧವ್‌ ಠಾಕ್ರೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮಹಾರಾಷ್ಟ್ರ ಮೈತ್ರಿ ಸರ್ಕಾರಕ್ಕೀಗ ಪತನ (Maharashtra Political Crisis) ಭಯ ಶುರುವಾಗಿದೆ. ಶಿವಸೇನೆಯ ನಾಯಕ, ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್‌ ಶಿಂಧೆ, ತನ್ನ 11 ಮಂದಿ ಬೆಂಬಲಿಗ ಶಾಸಕರೊಂದಿಗೆ ಸೂರತ್‌ನ ರೆಸಾರ್ಟ್‌ ಸೇರಿಕೊಂಡು ಯಾರ ಸಂಪರ್ಕಕ್ಕೂ ಸಿಗದಂತಾಗಿದ್ದಾರೆ (ಸುಮಾರು ೨೧ ಶಾಸಕರು ರೆಸಾರ್ಟ್‌ಗೆ ಹೋಗಿದ್ದಾರೆಂದು ಹೇಳಲಾಗುತ್ತಿದ್ದರೂ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ) ಹೀಗೆ ಭಿನ್ನಾಭಿಪ್ರಾಯ ಎದ್ದು ಅಲ್ಲಿಗೆ ಶಮನವಾಗುತ್ತದೆಯೋ? ಇಡೀ ಸರ್ಕಾರವೇ ಉರುಳಿ ಹೋಗುತ್ತದೆಯೋ?-ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ ಶುರುವಾಗಿದೆ. ಹೀಗೆ ರೆಸಾರ್ಟ್‌ ಸೇರಿಸಿಕೊಂಡ ಸಚಿವರು-ಶಾಸಕರು ಸರ್ಕಾರವನ್ನು ಪತನ ಮಾಡದೆ ವಾಪಸ್‌ ಬಂದಿರುವ ಉದಾಹರಣೆ ತುಂಬ ಕಡಿಮೆ. ಹೀಗಾಗಿ ಮಹಾರಾಷ್ಟ್ರ ರಾಜಕೀಯದಲ್ಲಿ ಬಿಕ್ಕಟ್ಟು ಪ್ರಾರಂಭವಾಗಿದ್ದು ಮೇಲ್ನೋಟಕ್ಕೆ ಗೋಚರಿಸುತ್ತಿದೆ.

2019ರಲ್ಲಿ ಮಹಾರಾಷ್ಟ್ರ ಸರ್ಕಾರ ರಚನೆ ಮಾಡುವಾಗ ನಡೆದ ಹೈಡ್ರಾಮವನ್ನು ಇಡೀ ದೇಶ ನೋಡಿದೆ. ರಾಜ್ಯದಲ್ಲಿ ಒಟ್ಟು 288 ವಿಧಾನಸಭಾ ಕ್ಷೇತ್ರಗಳು ಇದ್ದು, 2019ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 106 ಕ್ಷೇತ್ರಗಳನ್ನು, ಶಿವಸೇನೆ 55, ಕಾಂಗ್ರೆಸ್‌ 44 ಮತ್ತು ಎನ್‌ಸಿಪಿ 52 ಸೀಟ್‌ಗಳನ್ನು ಗೆದ್ದುಕೊಂಡಿತ್ತು. ಮುಖ್ಯಮಂತ್ರಿ ಹುದ್ದೆಯನ್ನು 50:50 ಹಂಚಿಕೆ ಮಾಡಿಕೊಳ್ಳುವ ವಿಚಾರಕ್ಕೆ ಬಿಜೆಪಿ ಮತ್ತು ಅದರ ಮೈತ್ರಿಪಕ್ಷವಾಗಿದ್ದ ಶಿವಸೇನೆ ನಡುವೆ ಜಗಳ ಶುರುವಾಗಿತ್ತು. ಹೀಗಾಗಿ ಚುನಾವಣೆ ನಡೆದು ಎರಡು ವಾರಗಳೇ ಕಳೆದುಹೋದರೂ ಸರ್ಕಾರ ರಚನೆಯಾಗಲಿಲ್ಲ. ರಾಷ್ಟ್ರಪತಿ ಆಳ್ವಿಕೆಯೂ ಜಾರಿಯಾಗಿತ್ತು. ಇತ್ತ ಬಿಜೆಪಿ-ಶಿವಸೇನೆ ಕಗ್ಗಂಟು, ಅತ್ತ ಎನ್‌ಸಿಪಿಗಾಗಲೀ, ಕಾಂಗ್ರೆಸ್‌ಗಾಗಲೀ ಇಲ್ಲದ ಬಹುಮತ ಒಟ್ಟಾರೆ ಮಹಾರಾಷ್ಟ್ರ ರಾಜಕಾರಣ ಅತಂತ್ರವಾಗಿತ್ತು.

ಆದರೆ ಅಚ್ಚರಿಯೆಂಬಂತೆ ಅವಸರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್‌ ಅವರು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಜತೆ ಸೇರಿಬಿಟ್ಟಿದ್ದರು. 2019ರ ನವೆಂಬರ್‌ 23ರ ಮುಂಜಾನೆ ಹೊತ್ತಲ್ಲಿ ಫಡ್ನವೀಸ್‌ ಮುಖ್ಯಮಂತ್ರಿಯಾಗಿ, ಅಜಿತ್‌ ಪವಾರ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇಲ್ಲಿ ಅಜಿತ್‌ ಪವಾರ್‌ ತಮ್ಮ ಪಕ್ಷದ ನಾಯಕ ಶರದ್‌ ಪವಾರ್‌ ಗಮನಕ್ಕೆ ಬಾರದೆ ಇಷ್ಟು ದೊಡ್ಡ ನಿರ್ಧಾರ ಮಾಡಿದ್ದರು. ಆದರೆ ಇದು ತುಂಬ ದಿನ ಉಳಿಯಲಿಲ್ಲ. ಪ್ರತಿಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದವು. ಬಹುಮತ ಇಲ್ಲದೆ ದೇವೇಂದ್ರ ಫಡ್ನವೀಸ್‌ ಸರ್ಕಾರ ರಚನೆಗೆ ಮುಂದಾಗಿದ್ದಾರೆ ಎಂಬುದು ಆರೋಪ. ಇಷ್ಟೆಲ್ಲ ನಾಟಕೀಯ ಬೆಳವಣಿಗೆಯಾದ ಬಳಿಕ ಅಜಿತ್‌ ಪವಾರ್‌ ಮೊದಲು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ತಮ್ಮ ಪಕ್ಷ ಎನ್‌ಸಿಪಿ ಗೂಡು ಸೇರಿಕೊಂಡರು. ಇತ್ತ ಫಡ್ನವೀಸ್‌ ಅನಾಥರಾಗಿ ಸಿಎಂ ಹುದ್ದೆ ಬಿಟ್ಟರು..ನಂತರ ಶಿವಸೇನೆ-ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿಯಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರ ರಚನೆಯಾಯಿತು..ಇದು ಹಳೇ ಕತೆ.

ಹೊಸ ಬೆಳವಣಿಗೆ ಏನು?
ಸೈದ್ಧಾಂತಿಕ ವೈರುಧ್ಯವಿದ್ದರೂ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಬೇಕು ಎಂಬ ಒಂದೇ ಕಾರಣಕ್ಕೆ ಒಂದಾದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪ್ರಾರಂಭದಿಂದಲೂ ಹಲವು ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತಲೇ ಬಂದಿವೆ. ಅದರ ಲಾಭವವನ್ನು ಬಿಜೆಪಿಯೂ ಪಡೆದುಕೊಂಡಿದೆ. ಮಹಾ ಸರ್ಕಾರ ಉರುಳಿಸಲು ಇದುವರೆಗೆ ಬಹಿರಂಗವಾಗಿ ಬಿಜೆಪಿ ಪ್ರಯತ್ನ ಮಾಡದೆ ಇದ್ದರೂ, ತೆರೆಮರೆಯಲ್ಲಿ ಒಂದು ಸಣ್ಣ ಯತ್ನವನ್ನು ಜಾರಿಯಲ್ಲಿಟ್ಟಿತ್ತು ಎಂಬುದು ಮೂಲಗಳಿಂದ ತಿಳಿದುಬಂದ ಮಾಹಿತಿ.

ಇತ್ತೀಚೆಗೆ ಒಮ್ಮೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಬಿಜೆಪಿ ಪ್ರತಿಪಕ್ಷ ನಾಯಕ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ʼ2024ರ ವಿಧಾನಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಖಂಡಿತವಾಗಿಯೂ ಬಿಜೆಪಿ ಸರ್ಕಾರ ರಚನೆ ಮಾಡುತ್ತದೆʼ ಎಂದು ಹೇಳಿದ್ದರು. ಆದರೆ ಕೆಲವೇ ದಿನಗಳ ಹಿಂದೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸೀಟ್‌ಗಳನ್ನು ಗೆದ್ದುಕೊಂಡಿದ್ದ ಬಿಜೆಪಿಯ ಧಾಟಿಯೇ ಬದಲಾಗಿತ್ತು. ಯಾಕೆಂದರೆ ಈ ಚುನಾವಣೆಯಲ್ಲೂ ಕೂಡ ಅಡ್ಡಮತದಾನವಾಗಿತ್ತು. ಶಿವಸೇನೆಯ ಅಧಿಕೃತ ಅಭ್ಯರ್ಥಿ ಶಿವಸೇನೆಯ ಸಂಜಯ್‌ ಪವಾರ್‌ ಸೋತು, ಬಿಜೆಪಿಯ ಧನಂಜಯ್ ಮಹಾದಿಕ್ ಗೆದ್ದಿದ್ದರು. ಆಗಲೇ ಮಹಾ ವಿಕಾಸ್‌ ಅಘಾಡಿ ಮೈತ್ರಿಯಲ್ಲಿ ಬಂಡಾಯ ಆರಂಭವಾಗುವ ಸಣ್ಣ ಮುನ್ಸೂಚನೆ ಸಿಕ್ಕಿತ್ತು. ಬಿಜೆಪಿಯ ಒಟ್ಟು ಆರು ರಾಜ್ಯಸಭಾ ಅಭ್ಯರ್ಥಿಗಳಲ್ಲಿ ಮೂವರು ಜಯಸಾಧಿಸಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಪಕ್ಷದ ವಕ್ತಾರ ಕೇಶವ್‌ ಉಪಾಧ್ಯಾಯ, ʼಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಶೀಘ್ರವೇ ಪತನವಾಗಲಿದೆ ಮತ್ತು ಬಿಜೆಪಿ ಅಧಿಕಾರಕ್ಕೆ ಏರಲಿದೆʼ ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಈಗ ಶಿವಸೇನೆಯ ಸಚಿವರು ತನ್ನ ಬೆಂಬಲಿಗರನ್ನು ಕಟ್ಟಿಕೊಂಡು ರೆಸಾರ್ಟ್‌ ಹೊಕ್ಕಿದ್ದು, ದೊಡ್ಡಮಟ್ಟದ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮಹಾ ವಿಧಾನ ಪರಿಷತ್ತಿಗೆ ಬಿಜೆಪಿಯಿಂದ ನಾಲ್ವರು, ಎನ್‌ಸಿಪಿ ಹಾಗೂ ಶಿವಸೇನೆಯ ತಲಾ ಇಬ್ಬರ ಆಯ್ಕೆ

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವು
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಗೆದ್ದಿದ್ದರೆ, ಶಿವಸೇನೆ ಮತ್ತು ಎನ್‌ಸಿಪಿಯ ತಲಾ ಇಬ್ಬರು ಗೆದ್ದರು. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಒಟ್ಟಾರೆ ಶಾಸಕರ ಬಲ 288. ಆದರೆ ನಿನ್ನೆ ಮಾನ್ಯತೆ ಪಡೆದ ಮತಗಳು 283 ಮಾತ್ರ. ಯಾಕೆಂದರೆ 288 ಸೀಟ್‌ಗಳಲ್ಲಿ ಒಂದು ಖಾಲಿಯಿದೆ. ಜೈಲು ಶಿಕ್ಷೆಗೊಳಗಾದ ಇಬ್ಬರು ಸದಸ್ಯರಿಗೆ ವಿಧಾನಪರಿಷತ್‌ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿತ್ತು. ಅಚ್ಚರಿಯೆಂದರೆ, ವಿಧಾನಸಭೆಯಲ್ಲಿ ಬಿಜೆಪಿಗೆ ಇದ್ದಿದ್ದು ೧೦೬ ಸದಸ್ಯಬಲ. ಆದರೆ ಬಿಜೆಪಿ ಅಭ್ಯರ್ಥಿಗಳಿಗೆ ಸುಮಾರು 20 ಮತಗಳು ಹೆಚ್ಚುವರಿಯಾಗಿ ಬಿದ್ದಿವೆ. ಈ 20 ಮತಗಳೂ ಶಿವಸೇನೆ-ಕಾಂಗ್ರೆಸ್‌ನಿಂದಲೇ ಬಂದಿದ್ದು ಎಂದಲ್ಲ. ಇತರ ಕೆಲವು ಪಕ್ಷಗಳ ಶಾಸಕರೂ ಮತದಾನ ಮಾಡಿರಬಹುದು. ಆದರೆ ಅಡ್ಡಮತದಾನವಾಗಿದ್ದಂತೂ ಸ್ಪಷ್ಟ.

ಈ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ ಎಲ್ಲ 20 ಶಾಸಕರೂ ಆ ಪಕ್ಷದತ್ತ ಒಲವು ಹೊಂದಿದ್ದಾರೆ, ಅವರೊಮ್ಮೆ ಬಿಜೆಪಿ ಸೇರುತ್ತಾರೆ ಎಂದಾದರೆ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಲ ೧೨೬ಕ್ಕೆ ಏರುತ್ತದೆ. ಅಷ್ಟಾದರೂ ಸರ್ಕಾರ ರಚನೆಗೆ ಬಹುಮತ ಸಿಗುವುದಿಲ್ಲವಾದರೂ ಇತ್ತ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಅಪಾಯವಂತೂ ಕಟ್ಟಿಟ್ಟ ಬುತ್ತಿ. ಯಾಕೆಂದರೆ ಇನ್ನಿತರ ಚಿಕ್ಕಪಕ್ಷಗಳು, ಸ್ವತಂತ್ರ ಶಾಸಕರನ್ನು ಸೆಳೆದುಕೊಳ್ಳುವುದು ಮತ್ತು ಕಾಂಗ್ರೆಸ್‌-ಶಿವಸೇನೆ-ಎನ್‌ಸಿಪಿಯ ಇನ್ನಷ್ಟು ಶಾಸಕರನ್ನು ಕರೆದುಕೊಳ್ಳುವುದು ಬಿಜೆಪಿಗೇನೂ ದೊಡ್ಡ ವಿಷಯವಲ್ಲ..!

ಶರದ್‌ ಪವಾರ್‌ ಸಭೆ
ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರ ರಚನೆಯಾಗಿದ್ದರೂ, ಎನ್‌ಸಿಪಿ ನಾಯಕ ಶರದ್‌ ಪವಾರ್‌ ಸೂತ್ರದಾರರು. ಮೂರು ಪಕ್ಷಗಳು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಅಲ್ಲಲ್ಲೇ ಬಗೆಹರಿಸಿಕೊಂಡು ಈ ಮೂರುವರ್ಷ ಆಡಳಿತ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಇದೇ ಶರದ್‌ ಪವಾರ್‌. ರಾಜಕೀಯದಲ್ಲಿ ಪಳಗಿರುವ ಅವರು ತುಂಬ ಸೂಕ್ಷ್ಮವಾಗಿ ಹೆಜ್ಜೆಯಿಡುತ್ತಿದ್ದಾರೆ. ಮೂರು ಪಕ್ಷಗಳ ಕೊಂಡಿಯಂತಿದ್ದಾರೆ. ಇದೀಗ ಶಿವಸೇನೆ ಸಚಿವ-ತನ್ನ ಅನುಯಾಯಿಗಳೊಂದಿಗೆ ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರಿಂದು ಒಂದು ತುರ್ತು ಸಭೆಯನ್ನೂ ಕರೆದಿದ್ದಾರೆ.

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ೫ಮಂದಿಯಲ್ಲಿ ೪ಸದಸ್ಯರು ಗೆದ್ದಿದ್ದರೆ, ಮಹಾವಿಕಾಸ್‌ ಅಘಾಡಿಯಿಂದ ಸ್ಪರ್ಧಿಸಿದ್ದ ಆರು ಮಂದಿಯಲ್ಲಿ ನಾಲ್ವರು ಗೆದ್ದಿದ್ದಾರೆ. ಇಲ್ಲಿ ಅಡ್ಡಮತದಾನವೇ ಸರ್ಕಾರಕ್ಕೆ ದೊಡ್ಡಮಟ್ಟದ ಅಡ್ಡಗಾಲು ಆಗುವ ಎಲ್ಲ ಲಕ್ಷಣವೂ ಗೋಚರಿಸುತ್ತಿದ್ದಾರೆ. ಇಂದು ಉದ್ಧವ್‌ ಠಾಕ್ರೆ ಕೂಡ ಸಭೆ ನಡೆಸಲಿದ್ದು, ಶರದ್‌ ಪವಾರ್‌ ಸಹ ಮಹತ್ವದ ಸಭೆ ಮಾಡಿದ್ದಾರೆ.

ಇದನ್ನೂ ಓದಿ: ಮಹಾ ಸರ್ಕಾರದಲ್ಲಿ ಭಿನ್ನಮತ?; ಸಂಪರ್ಕಕ್ಕೆ ಸಿಗದೆ, ರೆಸಾರ್ಟ್‌ ಸೇರಿದ ಶಿವಸೇನೆ ಸಚಿವ, 11 ಶಾಸಕರು


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Arvind Kejriwal: ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಕೇಂದ್ರ ಸರ್ಕಾರ, ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅಬ್ಬರದ ಭಾಷಣಗಳ ಮೂಲಕ ಜನರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಅವರು 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಅವರು, ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಜನರಿಗಾಗಿ 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ (India Bloc) ಅಧಿಕಾರಕ್ಕೆ ಬಂದರೆ ಇಷ್ಟೆಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದಿದ್ದಾರೆ.

“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನಿಂದು 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇನೆ. ನನ್ನ ಬಂಧನದಿಂದಾಗಿ ಘೋಷಣೆ ಮಾಡುವುದು ವಿಳಂಬವಾಯಿತು. ಆದರೂ, ದೇಶದಲ್ಲಿ ಇನ್ನೂ ಹಲವು ಹಂತಗಳ ಮತದಾನ ಬಾಕಿ ಇದೆ. ಹಾಗಂತ, ಇಂಡಿಯಾ ಒಕ್ಕೂಟದ ಪಕ್ಷಗಳ ಜತೆ ಚರ್ಚಿಸಿ ಗ್ಯಾರಂಟಿಗಳನ್ನು ಘೋಷಣೆ ಮಾಡಿಲ್ಲ. ಇದರಿಂದ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಭಾವಿಸಿದ್ದೇನೆ. ಇಂಡಿಯಾ ಒಕ್ಕೂಟವು ದೇಶದಲ್ಲಿ ಅಧಿಕಾರಕ್ಕೆ ಬಂದರೆ ಈ 10 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು” ಎಂದು ಹೇಳಿದರು.

ಕೇಜ್ರಿವಾಲ್‌ ಘೋಷಿಸಿದ ಪ್ರಮುಖ ಗ್ಯಾರಂಟಿಗಳು

  1. ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಸುವುದು. ಇದರಿಂದ ಬಡವರಿಗೆ, ಉದ್ಯಮಿಗಳಿಗೆ ಅನುಕೂ ಮಾಡಿಕೊಡುವುದು.
  2. ಕೇಂದ್ರ ಹಾಗೂ ರಾಜ್ಯಗಳ ಸಹಕಾರದೊಂದಿಗೆ 5 ಲಕ್ಷ ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂತ ಶಾಲೆ ನಿರ್ಮಿಸಿ, ಬಡವರಿಗೆ ಶಿಕ್ಷಣ ನೀಡುವುದು
  3. ದೇಶಾದ್ಯಂತ ಮೊಹಲ್ಲಾ ಕ್ಲಿನಿಕ್‌ಗಳನ್ನು ಸ್ಥಾಪಿಸಿ, ಉಚಿತವಾಗಿ ಚಿಕಿತ್ಸೆ ನೀಡಲಾಗುವುದು
  4. ಚೀನಾದ ಹಿಡಿತದಲ್ಲಿರುವ ಭಾರತದ ಜಾಗವನ್ನು ವಾಪಸ್‌ ಪಡೆಯುವುದು
  5. ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಿ, ಸೇನೆಯನ್ನು ಇನ್ನಷ್ಟು ಬಲಪಡಿಸುವುದು
  6. ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ನೀಡುವುದು
  7. ದೆಹಲಿಗೆ ರಾಜ್ಯ ಸ್ಥಾನಮಾನ ನೀಡುವ ಮೂಲಕ ಏಳಿಗೆಗೆ ಇನ್ನಷ್ಟು ಶ್ರಮಿಸುವುದು

ಗ್ಯಾರಂಟಿ ಘೋಷಿಸಿದ ಬಳಿಕ ಮಾತನಾಡಿದ ಕೇಜ್ರಿವಾಲ್‌, “ದೇಶದ ಬಡವರು ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಬಂದರೆ, ಬಡವರಿಗೆ ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ಇದಕ್ಕಾಗಿಯೇ ಗ್ಯಾರಂಟಿಗಳನ್ನು ಘೋಷನೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Continue Reading

ಉದ್ಯೋಗ

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಟೆಕ್ಸ್‌ಟೈಲ್ಸ್‌ ಕಮಿಟಿ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು. ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯ (Ministry of Textiles)ದ ಟೆಕ್ಸ್‌ಟೈಲ್ಸ್‌ ಕಮಿಟಿ (Textiles Committee) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ (Project Assistant) ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು (Textiles Committee Recruitment 2024). ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ಬೆಂಗಳೂರು – 4, ಮುಂಬೈ – 7, ನವಿ ಮುಂಬೈ – 3, ಚೆನ್ನೈ – 3, ಕಾನ್ಪುರ – 1, ಕಣ್ಣೂರು – 1, ಕರೂರು – 1, ಹೈದರಾಬಾದ್‌ – 4, ಗುರುಗ್ರಾಮ – 3, ಜೈಪುರ – 2, ತಿರುಪುರ – 3, ಗುಂಟೂರು – 1, ಕೊಯಂಬತ್ತೂರು – 5, ಲುಧಿಯಾನ – 1, ಕೋಲ್ಕತ್ತಾ – 1 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 26 ಸಾವಿರ ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರನ್ನು 3 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಗಮನಿಸಿ

  • 2024ರ ಮಾರ್ಚ್‌ 31ಕ್ಕೆ ಹೊಂದಿಕೊಂಡು ಕನಿಷ್ಠ ಮತ್ತು ಗರಿಷ್ಠ ವಯಸ್ಸನ್ನು ನಿರ್ಧರಿಸಲಾಗುತ್ತದೆ.
  • ವಾರಕ್ಕೆ ಒಂದು ದಿನ ರಜೆ ಇರಲಿದ್ದು, ವರ್ಷಕ್ಕೆ 8 ಕ್ಯಾಶುವಲ್‌ ಲೀವ್‌ ನಿಗದಿಪಡಿಸಲಾಗಿದೆ.
  • ಟಿಎ / ಡಿಎ ಪಾವತಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಒಂದು ಕಡೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.

Textiles Committee Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Textiles Committee Recruitment 2024 ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ.
  • ಫೋಟೊ ಲಗತ್ತಿಸಿ.
  • ಸೆಲ್ಫ್‌ ಎಟೆಸ್ಟ್‌ ಮಾಡಿದ ಡಾಕ್ಯುಮೆಂಟ್‌ಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

Textiles Committee, FKCCI,
WTC Building, 1st Floor, Kempe Gowda Road,
Bangaluru – 560 009, Karnataka.

ಹೆಚ್ಚಿನ ವಿವರಗಳಿಗೆ ಫೋನ್‌ ನಂಬರ್‌: (080) 2226 1401, ಇಮೇಲ್‌: blr.tc@nic.inಗೆ ಸಂಪರ್ಕಿಸಿ. ಗಮನಿಸಿ ನಿಮ್ಮ ಅಪ್ಲಿಕೇಷನ್‌ ಫಾರಂ ಮೇ 31ರೊಳಗೆ ತಲುಪುವಂತಿರಬೇಕು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ದೇಶ

Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Narendra Modi: ಪಶ್ಚಿಮ ಬಂಗಾಳದ ಬರಾಕ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಬ್ಬರದ ಪ್ರಚಾರ ಕೈಗೊಂಡರು. ಇದೇ ವೇಳೆ ಟಿಎಂಸಿ ಸರ್ಕಾರದ ವಿರುದ್ಧ ಅವರು ವಾಗ್ಬಾಣ ಪ್ರಯೋಗಿಸಿದರು. ರೋಡ್‌ ಕೂಡ ಕೈಗೊಂಡು ಜನರ ವಿಶ್ವಾಸ ಗಳಿಸಲು ಯತ್ನಿಸಿದರು.

VISTARANEWS.COM


on

Narendra Modi
Koo

ಕೋಲ್ಕೊತಾ: ಲೋಕಸಭೆ ಚುನಾವಣೆಯ (Lok Sabha Election 2024) ಮೂರು ಹಂತದ ಮತದಾನ ಮುಗಿದು, ನಾಲ್ಕನೇ ಹಂತದ ಮತದಾನಕ್ಕೆ ಕೆಲವೇ ಗಂಟೆ ಬಾಕಿ ಇವೆ. ಇದರ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಶ್ಚಿಮ ಬಂಗಾಳದಲ್ಲಿ (West Bengal) ಅಬ್ಬರದ ಪ್ರಚಾರ ಮಾಡಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (TMC) ವಿರುದ್ಧ ವಾಗ್ದಾಳಿ ನಡೆಸುವ ಜತೆಗೆ ಮೋದಿ ಅವರು ಪಶ್ಚಿಮ ಬಂಗಾಳಕ್ಕಾಗಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದರು.

ಪಶ್ಚಿಮ ಬಂಗಾಳದ ಪರಾಕ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಅವರು, “ನಾನು ಪಶ್ಚಿಮ ಬಂಗಾಳದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡುತ್ತಿದ್ದೇನೆ. ನಾನು ಇರುವವರೆಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡಲು ಬಿಡಲ್ಲ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಲು ಬಿಡುವುದಿಲ್ಲ. ನೀವು ರಾಮನವಮಿಯನ್ನು ಆಚರಿಸುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಬಿಡುವುದಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಯಾರಿಂದಲೂ ಬದಲಿಸಲು ಬಿಡಲ್ಲ” ಎಂದು ಮೋದಿ ಅವರು ಐದು ಗ್ಯಾರಂಟಿಗಳನ್ನು ಘೋಷಿಸಿದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ

ಭಾಷಣದ ವೇಳೆ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. “ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್‌ನ ಒಂದು ಕುಟುಂಬದ ಸದಸ್ಯರು ದೇಶವನ್ನು ದಶಕಗಳವರೆಗೆ ಆಳಿದರು. ಆದರೆ, ಅವರು ಪೂರ್ವ ಭಾರತದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದರು. ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ ಸೇರಿ ಹಲವು ರಾಜ್ಯಗಳ ಅಭಿವೃದ್ಧಿಯನ್ನು ಕಾಂಗ್ರೆಸ್‌ ಕಡೆಗಣಿಸಿತು. ಆದರೆ, ನೀವು 2014ರಲ್ಲಿ ಮೋದಿಯನ್ನು ಆಯ್ಕೆ ಮಾಡಿದಿರಿ. ಹಾಗಾಗಿ, ಈಗ ಇಡೀ ದೇಶವೇ ಏಳಿಗೆ ಹೊಂದುತ್ತಿದೆ. ಆರ್ಥಿಕತೆಯಲ್ಲಿ ನಾವು ದಾಪುಗಾಲು ಇಡುತ್ತಿದ್ದೇವೆ” ಎಂದರು.

ಪ್ರಧಾನಿ ರೋಡ್‌ ಶೋ

ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರಕ್ಕೂ ಮೋದಿ ಚಾಟಿ ಬೀಸಿದರು. “ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಒಂದು ಕಾಲದಲ್ಲಿ ವೈಜ್ಞಾನಿಕ ಆವಿಷ್ಕಾರಗಳಿಗೆ ಬಂಗಾಳ ಖ್ಯಾತಿಯಾಗಿತ್ತು. ಆದರೆ, ಈಗ ರಾಜ್ಯದಲ್ಲಿ ಬಾಂಬ್‌ ತಯಾರಿಕೆ ಉದ್ಯಮವೇ ಹುಟ್ಟಿಕೊಂಡಿದೆ. ಒಂದು ಕಾಲದಲ್ಲಿ ಬಂಗಾಳದಲ್ಲಿ ಒಳನುಸುಳುಕೋರರ ವಿರುದ್ಧ ಕ್ರಾಂತಿ ನಡೆದಿತ್ತು. ಈಗ ನುಸುಳುಕೋರರಿಗೆ ರಾಜ್ಯದಲ್ಲಿ ರಕ್ಷಣೆ ನೀಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು. ಅಲ್ಲದೆ, ಬರಾಕ್‌ಪುರದಲ್ಲಿ ಮೋದಿ ಅಬ್ಬರದ ರೋಡ್‌ ಶೋ ಕೂಡ ಕೈಗೊಂಡರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading
Advertisement
Arvind Kejriwal
ದೇಶ10 mins ago

Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Prajwal Revanna Case: Beware of making a statement Parameshwara warns to HD Kumaraswamy
ರಾಜಕೀಯ10 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Road Accident
ಕ್ರೈಂ25 mins ago

Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

Ram Charan get mobbed by fans during public appearances
ಸಿನಿಮಾ28 mins ago

Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

Mother's Day 2024 Duniya Vijay jaggesh Post Viral
ಸಿನಿಮಾ29 mins ago

Mother’s Day 2024: ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌!

Job Alert
ಉದ್ಯೋಗ49 mins ago

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Dead Body Found
ಕ್ರೈಂ57 mins ago

Dead Body Found : ಡ್ಯಾಂನಲ್ಲಿ ಬಿದ್ದಿತ್ತು ವ್ಯಕ್ತಿ ಶವ; ರೈಲು ಬೋಗಿ ಒಳಗೆ ಕೊಳೆಯುತ್ತಿತ್ತು ಮಹಿಳೆಯ ಡೆಡ್‌ಬಾಡಿ

Narendra Modi
ದೇಶ1 hour ago

Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Prajwal Revanna Case Preetham Gowda close aides arrested and Congress hits back at BJP
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಹಂಚಿಕೆ ಕೇಸ್‌; ಪ್ರೀತಂ ಗೌಡ ಅತ್ಯಾಪ್ತರ ಸೆರೆ: ಬಿಜೆಪಿಗೆ ಚೆಕ್‌ಮೇಟ್‌?

Mother's Day
ಮಹಿಳೆ1 hour ago

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Two people of pen drive allottees arrested
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ9 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು23 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

ಟ್ರೆಂಡಿಂಗ್‌