IT Raid | ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ - Vistara News

ಕರ್ನಾಟಕ

IT Raid | ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

IT Raid | ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರ್ನಾಟಕ ಮತ್ತು ಗೋವಾ ವಲಯದ ಐಟಿ ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ಆಗಿದೆ.

VISTARANEWS.COM


on

income tax
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:  ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಗುರುವಾರ (ಜೂನ್‌ 23) ಬೆಳ್ಳಂಬೆಳ್ಳಗೆ ಐಟಿ (IT Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬಾಗಲೂರಿನಲ್ಲಿರುವ ರೇವಾ ಶಿಕ್ಷಣ ಸಂಸ್ಥೆ, ದಿವ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಕೃಷ್ಣದೇವರಾಯ ಇನ್ಸ್ಟಿಟ್ಯೂಷನ್ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಇದರ ಜತೆಗೆ ರಿಯಲ್ ಎಸ್ಟೇಟ್ ಮತ್ತು ಬಿಲ್ಡರ್‌ಗಳ ಮನೆ ಮೇಲೂ ದಾಳಿ ನಡೆಸಲಾಗಿದೆ. 

ಇದನ್ನೂ ಓದಿ | IT raid | ಎಂಜಿಎಂ ಗ್ರೂಪ್‌ ಮೇಲೆ ಐಟಿ ರೇಡ್‌, ಬೆಂಗಳೂರಿನ ಹಲವೆಡೆ ಸೇರಿ 50 ಕಡೆ ಶೋಧ

ಏಕಕಾಲಕ್ಕೆ ಕಾಲೇಜು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರ ಮನೆ ಮೇಲೂ ದಾಳಿ ನಡೆಸಲಾಗಿದೆ. ಸರ್ಚ್ ವಾರಂಟ್ ಪಡೆದು ಮುಂಜಾನೆ ಐಟಿ ದಾಳಿ ಕಾರ್ಯಾಚರಣೆ ನಡೆದಿದೆ. 20ಕ್ಕೂ ಹೆಚ್ಚು ಕಡೆ 250ಕ್ಕೂ ಹೆಚ್ಚು ಅಧಿಕಾರಿಗಳಿಂದ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಕರ್ನಾಟಕ ಮತ್ತು ಗೋವಾ ವಲಯದ ಐಟಿ ಅಧಿಕಾರಿಗಳು ಈ ದಾಳಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | ಐದು ರಾಜ್ಯಗಳ 400 ಸ್ಥಳಗಳಲ್ಲಿ ಲಿಕ್ಕರ್‌ ಸೇರಿದಂತೆ ನಾನಾ ಉದ್ದಿಮೆಗಳ ಮೇಲೆ ಐಟಿ ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಯೋಗಾಸನ ಹಾಕಿದ ಸಿಎಂ; ನಟಿ ಶ್ರೀಲೀಲಾ ನೋಡಲು ಮುಗಿಬಿದ್ದ ಜನ

CM Siddaramaiah: ನಟಿ ಶ್ರೀಲೀಲಾಗೆ ಸಿಎಂ ಶಾಲು ಹೊದಿಸಿ ಸನ್ಮಾನಿಸಿದರು. ನಟಿ ಶ್ರೀಲೀಲಾ ತೆಗೆದ ಸೆಲ್ಫಿಗೆ ಸಿಎಂ, ಸಂತೋಷ್ ಲಾಡ್ ಪೋಸ್ ಕೊಟ್ಟರು. ಅಕ್ಕಮಹಾದೇವಿ ಕೈಬರಹದ ಫೋಟೋ ಅನ್ನು ಸಿಎಂ ಬಿಡುಗಡೆ ಮಾಡಿದರು. ವೇದಿಕೆ ಮೇಲಿದ್ದ ನಟಿ ಶ್ರೀಲೀಲಾ ನೋಡಲು ಜನ ಮುಗಿಬಿದ್ದರು.

VISTARANEWS.COM


on

cm siddaramaiah international yoga day 2024
Koo

ಬಳ್ಳಾರಿ: ಬಳ್ಳಾರಿಯ ಜಿಂದಾಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನ (International Yoga Day 2024) ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ನಟಿ ಶ್ರೀಲೀಲಾ (Actress Sreeleela) ಭಾಗವಹಿಸಿದರು. ಶ್ವಾಸಗುರು ವಚನಾನಂದ ಸ್ವಾಮೀಜಿ (Shwasa Guru Vachanananda Swamiji) ನೇತೃತ್ವದಲ್ಲಿ ಕಾರ್ಯಕ್ರಮ ಹಾಗೂ ಯೋಗಾಸನಗಳ (Yogasana) ಪ್ರದರ್ಶನ ನಡೆಯಿತು.

ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೆಲ ಹೊತ್ತು ವೇದಿಕೆ ಮೇಲೆ ಯೋಗ ಮಾಡಿದರು. ಬಳಿಕ ಸಸಿಗೆ ನೀರು ಎರೆದು ಭಾಷಣ ಮಾಡದೇ ವೇದಿಕೆಯಿಂದ ನಿರ್ಗಮಿಸಿದರು.

“ಯೋಗ ದಿನದಲ್ಲಿ ಭಾಗಿ ಆಗಿದ್ದು ತುಂಬಾ ಸಂತೋಷ ಆಗ್ತಿದೆ. ಸೂರ್ಯನಮಸ್ಕಾರ, ಪ್ರಾಣಾಯಾಮ ಮನುಷ್ಯನಿಗೆ ಬಹಳ ಮುಖ್ಯ. ನಾನು ಮನೆಯಲ್ಲಿ ಇದ್ದಾಗ ಯೋಗ ಮಾಡುತ್ತೇನೆ. ಬಳ್ಳಾರಿಗೆ ಬಂದಿದ್ದು ನನ್ನ ಮನೆಗೆ ಬಂದಂಥ ಅನುಭವ ಆಯ್ತು. ಅಭಿಮಾನಿಗಳು ನನ್ನನ್ನು ಕಂಡು ಸಂತೋಷ ಪಟ್ರು, ನಾನೂ ಸಂತೋಷ ಪಟ್ಟೆ. ಸಂತೋಷ್ ಲಾಡ್, ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ” ಎಂದು ನಟಿ ಶ್ರೀಲೀಲಾ ಹೇಳಿದರು.

“ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದು ನನ್ನ ಅದೃಷ್ಟ. ಯಾವೆಲ್ಲ ಸಿನಿಮಾ ಮಾಡ್ತಿದ್ದಿಯಾ ಅಂತ ಸಿದ್ದರಾಮಯ್ಯ ಕೇಳಿದ್ರು. ದೊಡ್ಡವರ ಜೊತೆಗೆ ವೇದಿಕೆ ಹಂಚಿಕೊಂಡಾಗ ಮತ್ತಷ್ಟು ಜವಾಬ್ದಾರಿ ಹೆಚ್ಚಾಗುತ್ತದೆ” ಎಂದು ಶ್ರೀಲೀಲಾ ನುಡಿದರು. ಈ ಸಂದರ್ಭದಲ್ಲಿ, ನಟ ದರ್ಶನ್ ವಿರುದ್ಧ ಕೇಳಿಬಂದ ಕೊಲೆ ಆರೋಪದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶ್ರೀಲೀಲಾ ಉತ್ತರ ನೀಡಲು ಹಿಂದೇಟು ಹಾಕಿದರು. “ಕೇವಲ ಯೋಗ ದಿನದ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಈ ಸಂದರ್ಭದಲ್ಲಿ ವಚನಾನಂದ ಸ್ವಾಮೀಜಿ ತಡೆದರು.

ನಟಿ ಶ್ರೀಲೀಲಾಗೆ ಸಿಎಂ ಶಾಲು ಹೊದಿಸಿ ಸನ್ಮಾನಿಸಿದರು. ನಟಿ ಶ್ರೀಲೀಲಾ ತೆಗೆದ ಸೆಲ್ಫಿಗೆ ಸಿಎಂ, ಸಂತೋಷ್ ಲಾಡ್ ಪೋಸ್ ಕೊಟ್ಟರು. ಅಕ್ಕಮಹಾದೇವಿ ಕೈಬರಹದ ಫೋಟೋ ಅನ್ನು ಸಿಎಂ ಬಿಡುಗಡೆ ಮಾಡಿದರು. ವೇದಿಕೆ ಮೇಲಿದ್ದ ನಟಿ ಶ್ರೀಲೀಲಾ ನೋಡಲು ಜನ ಮುಗಿಬಿದ್ದರು. ವೇದಿಕೆ ಮೇಲೆ ನಿಂತು ಶ್ರೀಲೀಲಾ ಕೈಬೀಸುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ, ಕೇಕೆ ಹೊಡೆದು ಸಂಭ್ರಮಿಸಿದರು.

ಜೆಎಸ್‌ಡಬ್ಲ್ಯೂ ಟೌನ್‌ಶಿಪ್‌ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಎರಡು ಸಾವಿರಕ್ಕೂ ಅಧಿಕ ಜನರು ಭಾಗಿಯಾದರು. ಸಚಿವ ಸಂತೋಷ್ ಲಾಡ್, ಎಂಪಿ ತುಕಾರಾಂ, ಮಾಜಿ ಸಚಿವ ಮುರುಗೇಶ್ ನಿರಾಣಿ, ಕೂಡ್ಲಿಗಿ ಶಾಸಕ ಶ್ರೀನಿವಾಸ್, ನಟಿ ಶ್ರೀಲೀಲಾ ಸಾಥ್ ನೀಡಿದರು. ʼಸ್ವಂತ ಮತ್ತು ಸಮಾಜಕ್ಕಾಗಿ ಯೋಗʼ ಧ್ಯೇಯ ವಾಕ್ಯದೊಂದಿಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತಿದೆ.

ಯೋಗ ನಿತ್ಯಜೀವನದ ಭಾಗವಾಗಲಿ: ನರೇಂದ್ರ ಮೋದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (jammu and kashmir) ಶ್ರೀನಗರದಲ್ಲಿ ಇಂದು ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಲು ಕರೆ ನೀಡಿದರು.

“ವಿಶ್ವದಾದ್ಯಂತ ಯೋಗಾಭ್ಯಾಸ ಮಾಡುವವರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಯೋಗದ ಮೂಲಕ ನಾವು ಹೆಚ್ಚಿನ ಶಕ್ತಿಯನ್ನು ಪಡೆಯಬಹುದು. ಯೋಗ ದಿನದಂದು ದೇಶದ ಜನರಿಗೆ ಮತ್ತು ವಿಶ್ವದ ಮೂಲೆ ಮೂಲೆಗಳಲ್ಲಿ ಯೋಗ ಮಾಡುವ ಜನರಿಗೆ ನಾನು ಶುಭಾಶಯಗಳನ್ನು ಹೇಳುತ್ತೇನೆ. ಅಂತಾರಾಷ್ಟ್ರೀಯ ಯೋಗ ದಿನವು 10 ವರ್ಷಗಳ ಐತಿಹಾಸಿಕ ಪ್ರಯಾಣವನ್ನು ಪೂರ್ಣಗೊಳಿಸಿದೆ. 2014ರಲ್ಲಿ ನಾನು ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರಸ್ತಾಪಿಸಿದೆ. ಭಾರತದ ಈ ಪ್ರಸ್ತಾಪವನ್ನು 177 ರಾಷ್ಟ್ರಗಳು ಬೆಂಬಲಿಸಿದವು. ಅಂದಿನಿಂದ ಯೋಗ ದಿನವು ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ” ಎಂದು ಮೋದಿ ನುಡಿದರು.

“ನಾನು ವಿದೇಶದಲ್ಲಿರುವಾಗ ಜಾಗತಿಕ ನಾಯಕರು ಯೋಗದ ಬಗ್ಗೆ ನನ್ನೊಂದಿಗೆ ಚರ್ಚಿಸುತ್ತಾರೆ. ನಾವು 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ, ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವಾಗಿಸಲು ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ” ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: International Yoga Day 2024: ಯೋಗ ದಿನಚರಿಯ ಭಾಗವಾಗಲಿ: ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ

Continue Reading

ಶಿಕ್ಷಣ

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೀಟ್ ಲಭ್ಯತೆ ಬಗ್ಗೆ ಅಧಿಸೂಚನೆ ಹೊರಡಿಸಿದೆ. 2024- 25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ (Engineering Seats) ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ ಟೆಕ್ ಆಗಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸೀಟುಗಳು ಲಭ್ಯ ಆಗಲಿವೆ. ಆದರೆ ಸಿಇಟಿ ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಖ್ಯೆಯೂ ಕಳೆದ ಬಾರಿಗಿಂತ ಈ ವರ್ಷ ಹೆಚ್ಚಿದೆ.

VISTARANEWS.COM


on

By

Engineering Seats
Koo

ಬೆಂಗಳೂರು: ಎಂಜಿನಿಯರ್ (engineering) ಆಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ (students) ಒಂದು ಸಿಹಿ ಸುದ್ದಿ. ಈ ಬಾರಿ ರಾಜ್ಯದಲ್ಲಿ ಹೆಚ್ಚುವರಿಯಾಗಿ ಎಂಟು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಸುವರ್ಣ ಅವಕಾಶ ಸಿಗಲಿದೆ.

ಎಂಜಿನಿಯರಿಂಗ್ ಸೀಟುಗಳಿಗೆ (Engineering Seats) ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ತಾಂತ್ರಿ ಕ ಶಿಕ್ಷಣ ಪರಿಷತ್ (AICTE) ಇನ್ ಟೇಕ್ (IN-Take) ಸಡಿಲಗೊಳಿಸಿದ್ದರಿಂದ ಎಂಟು ಸಾವಿರಕ್ಕೂ ಹೆಚ್ಚು ಸೀಟುಗಳು ಈ ವರ್ಷದಲ್ಲಿ ಸಿಗಲಿದೆ.

ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೀಟ್ ಲಭ್ಯತೆ ಬಗ್ಗೆ ಅಧಿಸೂಚನೆ ಹೊರಡಿಸಿದೆ. 2024- 25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ ಟೆಕ್ ಆಗಿದೆ. ಇದರಲ್ಲಿ ಸರ್ಕಾರಿ ಕೋಟಾದಡಿಯಲ್ಲಿ 62,930 ಸೀಟುಗಳು, COMED-K ಕೋಟಾದ ಅಡಿಯಲ್ಲಿ 28,656 ಸೀಟುಗಳು ಮತ್ತು ಸೂಪರ್ ನ್ಯೂಮರರಿ ಕೋಟಾದ ಅಡಿಯಲ್ಲಿ 5,155 ಸೀಟುಗಳು ಸೇರಿವೆ.

ಈ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) 62,930 ಸೀಟುಗಳ ಲಭ್ಯ ವಾಗಿದೆ. 2023ರಲ್ಲಿ 245 ಕಾಲೇಜುಗಳಿಂದ 1,24,551 ಸೀಟುಗಳು ಲಭ್ಯವಾಗಿದ್ದು, ಇದರಲ್ಲಿ ಕೆಇಎಗೆ 58,845 ಸೀಟುಗಳಿದ್ದವು.
ಕಳೆದ ವರ್ಷ ಒಟ್ಟು ಸೀಟುಗಳ ಸಂಖ್ಯೆ 1,24,551 ಮತ್ತು ಸರ್ಕಾರಿ ಕೋಟಾದ ಸೀಟುಗಳು 58,845 ಆಗಿತ್ತು. ಈ ಬಾರಿ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಎಂಜಿನಿಯರಿಂಗ್ ಪ್ರವೇಶದ ಮೇಲಿನ ಮಿತಿಯನ್ನು ತೆಗೆದುಹಾಕುವುದರೊಂದಿಗೆ, ಈ ಶೈಕ್ಷಣಿಕ ವರ್ಷದಲ್ಲಿ ಸೀಟುಗಳ ಸಂಖ್ಯೆ 7,758 ಹೆಚ್ಚಲಿದೆ. ಇದರಲ್ಲಿ ಸರ್ಕಾರಿ ಕೋಟಾದ ಅಡಿಯಲ್ಲಿ 4,085ರಷ್ಟು ಸೀಟು ಹೆಚ್ಚು ಸಿಗಲಿದೆ.

ಇನ್ನು 13 ಕಾಲೇಜುಗಳ ಸೀಟುಗಳು ಇದಕ್ಕೆ ಸೇರ್ಪಡೆಯಾಗಲಿದ್ದು, ಹೀಗಾಗಿ ಕೆಇಎಗೆ ಇನ್ನೂ ಹೆಚ್ಚಿನ ಸೀಟುಗಳು ಲಭ್ಯವಾಗುವ ನಿರೀಕ್ಷೆ ಇದೆ.

ಎಲ್ಲಿ ಎಷ್ಟು ಸೀಟು ?

ಕೆಇಎಗೆ ಲಭ್ಯವಾಗಿರುವ 62,930 ಸೀಟುಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ 38,024 ಖಾಸಗಿ ವಿವಿಗಳಲ್ಲಿ 9,988 ಸೀಟುಗಳು ಸೇರಿವೆ. ಇದರಲ್ಲಿ 246 ಸೀಟುಗಳು ಆರ್ಕಿಟೆಕ್ಚರ್ ಗೆ ಸಂಬಂಧಿಸಿದೆ.

ಯಾವುದಕ್ಕೆ ಹೆಚ್ಚಿನ ಬೇಡಿಕೆ?

ಹೆಚ್ಚಿನ ಸೀಟುಗಳು ಕಂಪ್ಯೂಟರ್ ವಿಜ್ಞಾನ ಮತ್ತು ಸಂಬಂಧಿತ ವಿಷಯಗಳಲ್ಲಿವೆ. ಈ ಶೈಕ್ಷಣಿಕ ವರ್ಷದಿಂದ, ಎಐಸಿಟಿಇ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಮಿತಿಯನ್ನು ತೆಗೆದುಹಾಕಿದೆ. ಅದರ ಅನಂತರ ಹಲವಾರು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಕಂಪ್ಯೂಟರ್ ಸೈನ್ಸ್ ಮತ್ತು ಸಂಬಂಧಿತ ವಿಷಯಗಳಿಗೆ ಸೀಟು ಗಳ ಸಂಖ್ಯೆಯನ್ನು 500ರಿಂದ 1,000ಕ್ಕೆ ಹೆಚ್ಚಿಸಿವೆ.

ಇದನ್ನೂ ಓದಿ: NEET UG : ಫಿಸಿಕ್ಸ್​ನಲ್ಲಿ 85, ಕೆಮೆಸ್ಟ್ರಿಯಲ್ಲಿ 5! ನೀಟ್ ಆಕಾಂಕ್ಷಿಯ ಸ್ಕೋರ್ ಕಾರ್ಡ್ ಸೋರಿಕೆ, ಆರೋಪಿ ಸೆರೆ

ಎಂಜಿನಿಯರಿಂಗ್ ಆಕಾಂಕ್ಷಿಗಳು ಹೆಚ್ಚಳ

ಈ ವರ್ಷ ಸಿಇಟಿಗೆ ಹಾಜರಾದ 3.1೦ ಲಕ್ಷ ವಿದ್ಯಾರ್ಥಿಗಳ ಪೈಕಿ 2.74 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಸೇರಲು ಅರ್ಹರಾಗಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 2.03 ಲಕ್ಷ ಇತ್ತು. ಈ ವರ್ಷ 30 ಸಾವಿರ ವಿದ್ಯಾರ್ಥಿಗಳು ಹೆಚ್ಚಾಗಿದೆ.

ಈ ಹಿಂದೆ ಸೀಟು ಹೆಚ್ಚಳಕ್ಕೆ ಆಯಾ ವಿವಿಗಳಿಗೆ ಕಾಲೇಜುಗಳು ಪ್ರಸ್ತಾವನೆ ಸಲ್ಲಿಸಬೇಕಿತ್ತು. ಇದನ್ನು ಸ್ಥಳೀಯ ವಿಚಾರಣಾ ಸಮಿತಿ ಪರಿಶೀಲಿಸಿ ನಿರ್ಣಯ ಕೈಗೊಳ್ಳುತ್ತಿತ್ತು. ಆದರೆ ಈ ಬಾರಿ ಕಾಲೇಜುಗಳು ಸೀಟು ಹೆಚ್ಚಳಕ್ಕೆ ನೇರವಾಗಿ ಎಐಸಿಟಿಇಯಿಂದ ಅನುಮೋದನೆಯನ್ನು ಪಡೆಯಬೇಕಾಗಿದೆ. ಇದನ್ನು ರಾಜ್ಯ ಸರ್ಕಾರ ವಿರೋಧಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

Continue Reading

ಕ್ರೈಂ

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

Assault Case : ಮೂರು ವರ್ಷದ ಬಾಲಕಿ ಮೇಲೆ ಎರಗಿದ ಮಲತಂದೆ ಕ್ರೌರ್ಯವನ್ನೇ ಮೆರೆದಿದ್ದಾನೆ. ಬಾಲಕಿಯ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ವಿಕೃತಿ ಮೆರೆದಿದ್ದಾನೆ. ಸದ್ಯ ಮಲತಂದೆ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

VISTARANEWS.COM


on

By

assault Case
ವಿಕೃತಿ ಮೆರೆದಿದ್ದ ಮಲತಂದೆ
Koo

ಬೆಂಗಳೂರು/ಚಿಕ್ಕಬಳ್ಳಾಪುರ: ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಮಲತಂದೆ ದೌರ್ಜನ್ಯ (Assault Case) ನಡೆಸಿದ್ದಾನೆ. ಮಹಿಳೆಯ ಮೂರನೇ ಗಂಡನ ವಿಕೃತಿ ಅದ್ಯಾವ ಪರಿ ಇದೆ ಎಂದರೆ ಮಗುವಿನ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ಮೃಗೀಯ ರೀತಿ ವರ್ತಿಸಿದ್ದಾನೆ.

ಗೌರಿಬಿದನೂರಿನಲ್ಲಿ ಮಲತಂದೆಯೊಬ್ಬ ಅಟ್ಟಹಾಸ ತೋರಿದ್ದಾನೆ. ಜರೀನಾ ತಾಜ್‌ ಎಂಬಾಕೆ ಒಟ್ಟು ಮೂರು ಮದುವೆ ಆಗಿದ್ದು, ಅದರಲ್ಲಿ ಎರಡನೇ ಗಂಡನ ಮಗುವಿಗೆ ಮೂರನೇ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಅಜ್ಮಂತ್‌ ಎಂಬಾತ ಮಗುವಿಗಷ್ಟೇ ಅಲ್ಲದೇ ಪತ್ನಿ ಮೇಲೂ ಹಲ್ಲೆ ನಡೆಸಿದ್ದಾನೆ.

ಮೂರು ವರ್ಷದ ಮಗುವಿನ ಮುಖ, ಕತ್ತು ಹಾಗೂ ತಲೆ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು, ಮಗುವಿನ ಗುಪ್ತಾಂಗ ಕಚ್ಚಿ, ಮನಬಂದಂತೆ ಥಳಿಸಿದ್ದಾನೆ. 15 ವರ್ಷದ ಮತ್ತೊಬ್ಬ ಮಗಳ ಕೈ ಮುರಿದು ವಿಕೃತಿ ಮೆರೆದಿದ್ದಾನೆ.

ಜರೀನಾ ತಾಜ್‌ಗೆ ಮೂರು ಮದುವೆಯಾಗಿದ್ದು, ಮೊದಲ ಪತಿಯಿಂದ 2 ಹೆಣ್ಮಕ್ಕಳು ಆಗಿದ್ದವು. 2ನೇ ಪತಿಯಿಂದ ಮತ್ತೊಂದು ಹೆಣ್ಣು ಮಗು ಜನಿಸಿತ್ತು. ಇಬ್ಬರು ಗಂಡಂದಿರನ್ನು ತೊರೆದಿದ್ದ ಜರೀನಾ ಅಜ್ಮಂತ್‌ ಜತೆಗೆ ಮೂರನೇ ಮದುವೆಯಾಗಿದ್ದಳು. ಎರಡನೇ ಪತಿಯಿಂದ ಜನಿಸಿದ್ದ ಹೆಣ್ಣು ಮಗುವಿನ ಮೇಲೆ ಅಜ್ಮಂತ್‌ ಕಿರುಕುಳ ನೀಡಿದ್ದಾನೆ.

ತೀವ್ರ ಗಾಯಗೊಂಡಿರುವ ಮೂರು ವರ್ಷದ ಮಗುವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ತಂದೆಯ ವಿಕೃತಿಯಿಂದ ಪುತ್ರಿ ಶಾಕ್‌ಗೆಗೊಳಗಾಗಿದ್ದಾಳೆ. ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

ಪುಣೆ : ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳು ಈಗ ಹೆಚ್ಚು ಟ್ರೆಂಡ್ ಆಗುತ್ತಿದೆ. ಹಾಗಾಗಿ ಯುವಕ-ಯುವತಿಯರು ತಮ್ಮ ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ಹಾಗೂ ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜೀವಕ್ಕೆ ಅಪಾಯವಾಗುವಂತಹ ಸ್ಟಂಟ್ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಅನೇಕರು ಸಾವನಪ್ಪಿರುವುದು, ಗಾಯಗೊಂಡಿರುವುದು ನಾವು ಆಗಾಗ ನೋಡಿದ್ದೇವೆ. ಆದರೂ ಜನರಿಗೆ ರೀಲ್ಸ್ ಹುಚ್ಚು ಬಿಡುವುದಿಲ್ಲ. ಇದೀಗ ಪುಣೆಯಲ್ಲಿ ಹುಡುಗಿಯೊಬ್ಬಳು, ಹುಡುಗನೊಬ್ಬನ ಕೈಯನ್ನು ಹಿಡಿದುಕೊಂಡು ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡುತ್ತಿರುವ ವಿಡಿಯೊ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಹುಡುಗನೊಬ್ಬ ಕಟ್ಟಡದ ತುದಿಯಲ್ಲಿ ಮಲಗಿದ್ದಾನೆ. ಹುಡುಗಿ ಆತನ ಕೈಯನ್ನು ಹಿಡಿದುಕೊಂಡು ಕಟ್ಟದಿಂದ ಇಳಿಯುತ್ತಿರುವುದನ್ನು ಕಾಣಬಹುದು. ಇನ್ನೊಂದು ಬದಿಯಲ್ಲಿ ಆಕೆಯ ಸ್ನೇಹಿತರು ವಿವಿಧ ಆ್ಯಂಗಲ್ ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೊವನ್ನು ಪುಣೆಯ ಜಂಬುಲ್ವಾಡಿ ಸ್ವಾಮಿನಾರಾಯಣ ಮಂದಿರದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ತೆಗೆಯಲಾಗಿದೆ. ಜೂನ್ 19ರಂದು ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. ಇದಕ್ಕೆ 55,000ಕ್ಕೂ ಹೆಚ್ಚು ವೀವ್ಸ್ ಸಿಕ್ಕಿದೆ ಮತ್ತು ಅನೇಕರು ಅವರ ಮೂರ್ಖತನಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಈ ವಿಡಿಯೊವನ್ನು ಪುಣೆ ಪೊಲೀಸರಿಗೆ ಟ್ಯಾಗ್ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಹಲವಾರು ಘಟನೆಗಳು ವರದಿಯಾದ ಮೇಲೂ ಇಂತಹ ಬೇಜವಾಬ್ದಾರಿ ಕೆಲಸ ನಿಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯ. ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ತನ್ನ ಕುಟುಂಬವನ್ನು ಜೀವನಪರ್ಯಂತ ನರಳುವಂತೆ ಮಾಡುವ ಮನೋಭಾವ ಇದು ಎಂದು ಮತ್ತೊಬ್ಬ ಬಳಕೆದಾರರು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Actor Darshan: ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ.

VISTARANEWS.COM


on

ram mohan raju actor darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣವನ್ನು ಮುಚ್ಚಿ ಹಾಕಲು ನಟ ದರ್ಶನ್‌ (Actor Darshan) ತನ್ನ ಸಹಚರರಿಗೆ ನೀಡಿದ್ದ 30 ಲಕ್ಷ ರೂ. ಹಣವನ್ನು ಒಬ್ಬ ಮಾಜಿ ಕಾರ್ಪೊರೇಟರ್‌ನಿಂದ ಪಡೆದಿದ್ದು ಗೊತ್ತಾಗಿದೆ. ಈ ಕುರಿತು ಈ ವ್ಯಕ್ತಿಯನ್ನು ಪೊಲೀಸರು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಈ ಆಸಾಮಿ ಯಾರ ಕಣ್ಣಿಗೂ ಬೀಳದೆ (Absconded) ನಾಪತ್ತೆಯಾಗಿದ್ದಾರೆ.

ರೇಣುಕಾ ಸ್ವಾಮಿ ಕೇಸ್‌ನಲ್ಲಿ ಮತ್ತೊಬ್ಬ ವ್ಯಕ್ತಿಯ ಕೈವಾಡ ಇರುವುದು ಪತ್ತೆಹಚ್ಚಿದ ಪೊಲೀಸರಿಗೆ ಗೊತ್ತಾಗಿರುವುದು ದರ್ಶನ್‌ಗೆ ಲಕ್ಷ ಲಕ್ಷ ಹಣ ನೀಡಿದ ಆ ವ್ಯಕ್ತಿಯ ಬಗ್ಗೆ. ಕೊಲೆ‌ ನಡೆದ ಬೆನ್ನಲ್ಲೇ ದರ್ಶನ್ ಆ ವ್ಯಕ್ತಿಯಿಂದ ಹಣ ಪಡೆದಿದ್ದಾನೆ. ಸಾಕ್ಷಿ ನಾಶ ಮಾಡುವುದಕ್ಕೆಂದೇ 40 ಲಕ್ಷ ರೂ. ಹಣವನ್ನು ಇವರಿಂದ ದರ್ಶನ್‌ ಪಡೆದಿದ್ದ. ಆ 40 ಲಕ್ಷ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಹಣದ ಬಗ್ಗೆ ಆ ವ್ಯಕ್ತಿಯನ್ನು ಪ್ರಶ್ನಿಸಬೇಕಿದೆ.

ಮಾಜಿ ಕಾರ್ಪೊರೇಟರ್‌ ಆಗಿರುವ ಮೋಹನ್ ರಾಜ್ ಎಂಬಾತನೇ ಈ ವ್ಯಕ್ತಿಯಾಗಿದ್ದು, ಈತನಿಂದ ದರ್ಶನ್‌ಗೆ ಹಣ ಸಂದಾಯವಾಗಿದೆ. ದರ್ಶನ್‌ಗೆ ಆಪ್ತ ಸ್ನೇಹಿತ ಆಗಿರುವ ಮೋಹನ್ ರಾಜ್, ಆತನಿಗೆ 40 ಲಕ್ಷ ರೂ. ಹಣ ನೀಡಿದ್ದಾನೆ. ಈ ಹಣವನ್ನು ತನ್ನ ಸಹಚರರಿಗೆ ನೀಡಿರುವ ದರ್ಶನ್‌, ತನ್ನ ಹೆಸರು ಎಲ್ಲಿಯೂ ಕಾಣಿಸಿಕೊಳ್ಳದಂತೆ ತಿಳಿಸಿದ್ದಾನೆ. ಇದೀಗ ಇರುವ ಪ್ರಶ್ನೆಯೆಂದರೆ, ಈ ಹಣ ಪಡೆಯುವಾಗ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ತಿಳಿದಿತ್ತೇ ಇಲ್ಲವೇ ಎಂಬುದು. ತಿಳಿದಿತ್ತು ಎಂದಾದರೆ, ಕೊಲೆ ಪ್ರಕರಣ ಮೋಹನ್‌ ರಾಜ್‌ ಕೊರಳಿಗೂ ಸುತ್ತಿಕೊಳ್ಳಲಿದೆ.

ಹಣದ ಬಗ್ಗೆ ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಪೊಲೀಸರು ಉಲ್ಲೇಖ ಮಾಡಿದ್ದಾರೆ. ಮೋಹನ್ ರಾಜ್‌ಗಾಗಿ ಹುಡುಕಾಟ ನಡೆಸುತ್ತಿದ್ದು, ಬಂಧನ ಸಾಧ್ಯತೆಯೂ ಇದೆ. ಈ ಮೋಹನ್‌ ರಾಜು 2019ರಲ್ಲಿ ಬೆಂಗಳೂರಿನ ಉಪಮೇಯರ್ ಆಗಿದ್ದ. ಬೊಮ್ಮನಹಳ್ಳಿ ವಾರ್ಡ್ ಕಾರ್ಪೋರೇಟರ್ ಆಗಿದ್ದ. ರಾಜಕೀಯ ವಲಯದಲ್ಲಿ ಸಾಕಷ್ಟು ಪ್ರಭಾವಿಯೂ ಆಗಿದ್ದಾನೆ.

ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ವಿಶೇಷವೆಂದರೆ, 2018ರಲ್ಲಿ ಇದೇ ಮೋಹನ್ ರಾಜ್ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಜಮೀನು ವಿಚಾರವಾಗಿ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿ, ಬೊಮ್ಮನಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Continue Reading
Advertisement
cm siddaramaiah international yoga day 2024
ಪ್ರಮುಖ ಸುದ್ದಿ5 seconds ago

CM Siddaramaiah: ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಯೋಗಾಸನ ಹಾಕಿದ ಸಿಎಂ; ನಟಿ ಶ್ರೀಲೀಲಾ ನೋಡಲು ಮುಗಿಬಿದ್ದ ಜನ

Engineering Seats
ಶಿಕ್ಷಣ22 mins ago

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

Pavithra Gowda Number 6024 in parappana jail
ಕ್ರೈಂ23 mins ago

Pavithra Gowda: ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

assault Case
ಕ್ರೈಂ37 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ41 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್44 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest1 hour ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest1 hour ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ1 hour ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌