GST ಮಂಡಳಿ ಸಭೆ ಜೂನ್‌ 28-29ಕ್ಕೆ, ಕುದುರೆ ರೇಸ್, ಆನ್‌ಲೈನ್‌ ಗೇಮಿಂಗ್‌ಗೆ 28% ಜಿಎಸ್‌ಟಿ ನಿರೀಕ್ಷೆ - Vistara News

ಪ್ರಮುಖ ಸುದ್ದಿ

GST ಮಂಡಳಿ ಸಭೆ ಜೂನ್‌ 28-29ಕ್ಕೆ, ಕುದುರೆ ರೇಸ್, ಆನ್‌ಲೈನ್‌ ಗೇಮಿಂಗ್‌ಗೆ 28% ಜಿಎಸ್‌ಟಿ ನಿರೀಕ್ಷೆ

ಜಿಎಸ್‌ಟಿ ಮಂಡಳಿಯ 47ನೇ ಸಭೆ, ಜೂನ್‌ 28 ಮತ್ತು 29 ರಂದು ನಡೆಯಲಿದೆ. ಹಲವು ವಸ್ತು, ಸೇವೆಗಳ ಜಿಎಸ್‌ಟಿ ಪರಿಷ್ಕರಣೆ ಹಾಗೂ ರಾಜ್ಯಗಳಿಗೆ ನಷ್ಟ ಪರಿಹಾರ ಕುರಿತ ಚರ್ಚೆ ನಿರೀಕ್ಷಿಸಲಾಗಿದೆ.

VISTARANEWS.COM


on

gst meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಿಎಸ್‌ಟಿ ಮಂಡಳಿಯ ೪೭ನೇ ಸಭೆ ಚಂಡಿಗಢದಲ್ಲಿ ಜೂನ್‌ ೨೮ ಮತ್ತು ೨೯ರಂದು ನಡೆಯಲಿದೆ. ಎರಡು ದಿನಗಳ ಈ ಸಭೆಯ ಅಧ್ಯಕ್ಷತೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಲಿದ್ದಾರೆ. ಹಲವಾರು ಉತ್ಪನ್ನಗಳು ಮತ್ತು ಸೇವೆಗಳ ಜಿಎಸ್‌ಟಿ ದರದಲ್ಲಿ ಬದಲಾವಣೆ ಮಾಡುವ ನಿರೀಕ್ಷೆ ಇದೆ.‌ ಕುದುರೆ ರೇಸ್‌, ಕ್ಯಾಸಿನೊ, ಆನ್‌ಲೈನ್‌ ಗೇಮಿಂಗ್‌ ಮೇಲೆ ಜಿಎಸ್‌ಟಿ ದರ ೨೮%ಕ್ಕೆ ಏರಿಕೆಯಾಗುವ ನಿರೀಕ್ಷೆ ಇದೆ.

ಈಗ ಕುದುರೆ ರೇಸ್‌, ಆನ್‌ಲೈನ್‌ ಗೇಮಿಂಗ್‌, ಕ್ಯಾಸಿನೊ ಸೇವೆಗಳಿಗೆ ೧೮% ಜಿಎಸ್‌ಟಿ ಇದೆ. ಇವುಗಳಿಗೆ ತಂಬಾಕು, ಪಾನ್‌ ಮಸಾಲಾ ಮೇಲಿರುವಂತೆ ೨೮%ರ ಗರಿಷ್ಠ ಜಿಎಸ್‌ಟಿ ದರ ಅನ್ವಯವಾಗುವ ಸಾಧ್ಯತೆ ಇದೆ.

ಆರು ತಿಂಗಳಿನ ಅಂತರದ ಬಳಿಕ ಸಭೆ ನಡೆಯುತ್ತಿದೆ. ಈ ಹಿಂದೆ ಶ್ರೀನಗರದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಭದ್ರತೆಯ ಕಾರಣಗಳಿಗೋಸ್ಕರ ಸ್ಥಳವನ್ನು ಚಂಡಿಗಢಕ್ಕೆ ಬದಲಾಯಿಸಲಾಗಿದೆ.

ಜಿಎಸ್‌ಟಿ ನಷ್ಟ ಪರಿಹಾರ ವಿಸ್ತರಣೆ ಕುರಿತ ಚರ್ಚೆ?

ಹಲವು ವಸ್ತುಗಳ ತೆರಿಗೆ ದರಗಳಲ್ಲಿ ಬದಲಾವಣೆ ಹೊರತುಪಡಿಸಿ, ರಾಜ್ಯಗಳಿಗೆ ಜಿಎಸ್‌ಟಿ ನಷ್ಟ ಪರಿಹಾರವನ್ನು ಜೂನ್‌ ಬಳಿಕವೂ ವಿಸ್ತರಿಸುವ ಬಗ್ಗೆ ಚರ್ಚೆ ನಿರೀಕ್ಷಿಸಲಾಗಿದೆ. ಪ್ರತಿ ಪಕ್ಷಗಳು ಜಿಎಸ್‌ಟಿ ನಷ್ಟ ಪರಿಹಾರವನ್ನು ೫ ವರ್ಷಗಳಿಂದಾಚೆಗೂ ವಿಸ್ತರಿಸಲು ಒತ್ತಾಯಿಸಿವೆ. ಜಿಎಸ್‌ಟಿಯ ಈಗಿನ ನೀತಿಯ ಪ್ರಕಾರ ಜೂನ್‌ಗೆ ೫ ವರ್ಷಗಳ ಅವಧಿ ಮುಕ್ತಾಯವಾಗುತ್ತಿದೆ.

ತೆರಿಗೆ ಬದಲಾವಣೆ ನಿರೀಕ್ಷೆಗಳೇನು?

  • ಮೂಳೆಗಳ ಚಿಕಿತ್ಸೆ, ಕಸಿಗೆ ಸಂಬಂಧಿಸಿದ ಜಿಎಸ್‌ಟಿಯ ಶ್ರೇಣಿ ೫%ಕ್ಕೆ ಸ್ಥಿರವಾಗುವ ಸಾಧ್ಯತೆ. ಈಗ ೫%-೧೨% ತನಕ ಇದೆ.
  • ಪಾಲಿಷ್‌ ರಹಿತ ಸ್ಟೋನ್‌, ಟೈಲ್ಸ್‌ಗಳ ಮೇಲಿನ ಜಿಎಸ್‌ಟಿ ೫% ಸ್ಥಿರ ಸಂಭವ. ಈಗ ೫%-೧೮%ರ ಶ್ರೇಣಿ ಇದೆ.
  • ಕುದುರೆ ರೇಸ್‌, ಆನ್‌ಲೈನ್‌ ಗೇಮಿಂಗ್‌, ಕ್ಯಾಸಿನೊ ಸೇವೆ ಮೇಲೆ ಜಿಎಸ್‌ಟಿ ೧೮%ರಿಂದ ೨೮%ಕ್ಕೆ ಹೆಚ್ಚಳ ಸಂಭವ.

ಇತರ ಶಿಫಾರಸುಗಳು

  • ಆಹಾರ ಧಾನ್ಯಗಳ ಉಪ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರವನ್ನು ೫%ಕ್ಕೆ ಇಳಿಸುವುದು.
  • ಖಾಸಗಿ ವಲಯದಿಂದ ಆಮದು ಮಾಡುವ ಕೆಲವು ಡಿಫೆನ್ಸ್‌ ಉತ್ಪನ್ನಗಳ ಮೇಲಿನ ಐಜಿಎಸ್‌ಟಿ ಕಡಿತ.
  • ಒಳಚರಂಡಿ ನೀರನ್ನು ಸಂಸ್ಕರಿಸಿ ಸಿದ್ಧಪಡಿಸಿದ ನೀರಿನ ಮೇಲಿನ ಜಿಎಸ್‌ಟಿ ರದ್ದು. ಈಗ ೧೮% ಇದೆ.
  • ಎಲೆಕ್ಟ್ರಿಕ್‌ ವಾಹನಗಳ ಬ್ಯಾಟರಿ ಪ್ಯಾಕ್‌ ಮೇಲಿನ ಜಿಎಸ್‌ಟಿ ರಿಯಾಯಿತಿ ಬಗ್ಗೆ ತೀರ್ಮಾನ.
  • ಟೆಟ್ರಾ ಪ್ಯಾಕ್/‌ ಪ್ಯಾಕೇಜಿಂಗ್‌ ಪೇಪರ್‌ ಮೇಲಿನ ಜಿಎಸ್‌ಟಿ ೧೨%ರಿಂದ ೧೮%ಕ್ಕೆ ಏರಿಕೆ.

ತೆರಿಗೆ ದರ ಯಥಾಸ್ಥಿತಿ ಸಾಧ್ಯತೆ

  • ಹಣ್ಣಿನ ಪಾನೀಯಗಳು, ಉಪ್ಪಿನಕಾಯಿ (೧೨%)
  • ರೆಡಿ-ಟು-ಈಟ್‌, ರೆಡಿ-ಟು-ಕುಕ್‌ ಫುಡ್ಸ್‌, ಇನ್‌ಸ್ಟಂಟ್‌ ಫುಡ್‌ ಮಿಕ್ಸ್‌ (೧೮%)
  • ಬ್ರ್ಯಾಂಡೆಡ್‌ ಸ್ನ್ಯಾಕ್ಸ್‌, ಚಿಪ್ಸ್‌ ಇತ್ಯಾದಿ (೧೨%)
  • ಛಾವಣಿ ಸೋಲಾರ್‌ ಫಲಕ, ಡಿಸಿಆರ್‌ (೧೨%)
  • ಡೇರಿ ಉತ್ಪನ್ನಗಳು, ಕೋವಿಡ್‌ -೧೯ ಔಷಧಗಳು, ಏವಿಯೇಶನ್‌ ಇಂಧನ, ಹೆಲಿಕಾಪ್ಟರ್‌ ಮತ್ತು ಏರ್‌ ಕ್ರಾಫ್ಟ್‌ ಬಿಡಿಭಾಗಗಳ ಜಿಎಸ್‌ಟಿ ಯಥಾಸ್ಥಿತಿಯಲ್ಲಿ ಮುಂದುವರಿಯುವ ನಿರೀಕ್ಷೆ ಇದೆ.

ಜಿಎಸ್‌ಟಿ ಅಡಿಯಲ್ಲಿ ನಾಲ್ಕು ದರಗಳ ಶ್ರೇಣಿಗಳು ಇವೆ. ಕೆಲವು ಉತ್ಪನ್ನಗಳಿಗೆ ತೆರಿಗೆ ವಿನಾಯಿತಿ ಇದೆ. ಹಲವು ಅಗತ್ಯ ವಸ್ತುಗಳ ಜಿಎಸ್‌ಟಿ ದರ ೫%ರಲ್ಲಿದೆ. ಐಷಾರಾಮಿ ವಸ್ತುಗಳಿಗೆ ೨೮% ದರ ಇದೆ. ೧೨% ಮತ್ತು ೧೮% ಉಳಿದ ಎರಡು ಶ್ರೇಣಿಗಳಾಗಿವೆ. ಇದಲ್ಲದೆ ೨೮% ಶ್ರೇಣಿಯಲ್ಲಿರುವ ಉತ್ಪನ್ನಗಳ ಮೇಲೆ ಸೆಸ್‌ ಅನ್ವಯಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

CM Siddaramaiah: ರಾಜ್ಯದಲ್ಲಿ ಬರ ಹಾಗೂ ಮಳೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ಕೊಂಚ ಸಡಿಲ ಮಾಡಲಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ಸಿಕ್ಕಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್ ಕರೆಯಲು ಚುನಾವಣಾ ಆಯೋಗದಿಂದ ಅವಕಾಶ ಸಿಕ್ಕಿದೆ. ಅಲ್ಲದೆ, ಸಿಎಂ ಹಾಗೂ ಸಚಿವರು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅನುಮತಿಯನ್ನು ನೀಡಲಾಗಿದೆ. ಆದರೆ, ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರಿದಿದೆ. ಆದರೆ, ಜೂನ್ ಒಳಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.

VISTARANEWS.COM


on

Pension and NAREGA money credited to farmers loans CM Siddaramaiah slams bank
Koo

ಬೆಂಗಳೂರು: ಬರ ಪರಿಹಾರ (Drought Relief), ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿಧಾನಸೌಧದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರೈತರ ಖಾತೆಗಳಿಗೆ ಜಮೆಯಾಗುತ್ತಿರುವ ಬಗ್ಗೆ ಕೆಂಡವಾಗಿದ್ದಾರೆ. ಇದು ತಕ್ಷಣವೇ ನಿಲ್ಲಬೇಕು. ಕೂಡಲೇ ಎಲ್ಲ ಬ್ಯಾಂಕ್‌ಗಳಿಗೂ ಪತ್ರ ಬರೆದು ತಾಕೀತು ಮಾಡಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಪಿಂಚಣಿ, ನರೇಗಾ ಕೂಲಿಗೆ ಸಂಬಂಧಪಟ್ಟ ಹಣವು ರೈತರ ಬ್ಯಾಂಕ್‌ಗಳಿಗೆ ಜಮೆಯಾಗುತ್ತಿದ್ದರೆ ಅದನ್ನು ಬ್ಯಾಂಕ್‌ನವರು ರೈತರ ಸಾಲಗಳಿಗೆ ವಜಾ ಮಾಡಿಕೊಳ್ಳುವುದು ಸರಿಯಲ್ಲ. ಹೀಗಾಗಿ ಬ್ಯಾಂಕ್‌ಗಳಿಗೆ ಖಡಕ್‌ ಸೂಚನೆಯನ್ನು ರವಾನೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.

ರಾಜ್ಯದಲ್ಲಿ ಬರ ಹಾಗೂ ಮಳೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ಕೊಂಚ ಸಡಿಲ ಮಾಡಲಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ಸಿಕ್ಕಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್ ಕರೆಯಲು ಚುನಾವಣಾ ಆಯೋಗದಿಂದ ಅವಕಾಶ ಸಿಕ್ಕಿದೆ. ಅಲ್ಲದೆ, ಸಿಎಂ ಹಾಗೂ ಸಚಿವರು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅನುಮತಿಯನ್ನು ನೀಡಲಾಗಿದೆ. ಆದರೆ, ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರಿದಿದೆ. ಆದರೆ, ಜೂನ್ ಒಳಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಸರ್ಕಾರದ ವಿರುದ್ಧ ಕಿಡಿಕಾರಿದ್ದ ಎಚ್‌ಡಿಕೆ

ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್‌ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿದ್ದ ಅವರು, ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ, ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ.‌ ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದರು. ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎಂದು ಆಗ್ರಹಿಸಿದ್ದರು.

ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಮುಂದಿನ ವರ್ಷ ಹೀಗಿರುವುದಿಲ್ಲ

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಯಾವಾಗಲೂ ಶೇಕಡಾ 5ರಷ್ಟು ಗ್ರೇಸ್‌ ಮಾರ್ಕ್ಸ್‌ ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿದೆವು. ಇದು ಈ ವರ್ಷಕ್ಕೆ ಮಾತ್ರವಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಇನ್ನು 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದರಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆ ಗ್ರೇಸ್‌ ಮಾರ್ಕ್ಸ್‌ ಹೆಚ್ಚಳದ ತೀರ್ಮಾನವನ್ನು ಮಾಡಿತ್ತು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಕೆ ಮಾಡಿದ್ದಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿತ್ತು. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿತ್ತು. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿತ್ತು. ಆದರೆ, ಇದಕ್ಕೆ ಈಗ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Continue Reading

ಪ್ರಮುಖ ಸುದ್ದಿ

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

ಕಾನ್‌ ಫಿಲ್ಮ್ ಫೆಸ್ಟಿವಲ್‌ನ 3ನೇ ದಿನದಂದು (Canne Film Festival 2024) ಬಾಲಿವುಡ್ ನಟಿ ಅಥಿಯಾ ಶೆಟ್ಟಿಯ ಶಿಮ್ಮರ್ ಜಂಪ್‌ಸೂಟ್‌ನಲ್ಲಿ ಶೋಭಿತಾ ಕಾಣಿಸಿಕೊಂಡರೆ; ಊರ್ವಶಿ ರೌತೆಲಾ ಆಕರ್ಷಕ ರೆಡ್ ಗೌನ್‌ನಲ್ಲಿ ಕಣ್ಮನ ಸೆಳೆದರು. ಇನ್ನುಳಿದವರು ಹೇಗೆಲ್ಲಾ ಕಂಡರು? ಇದಕ್ಕಾಗಿ ಹೇಗೆಲ್ಲಾ ಸಿದ್ಧಗೊಂಡಿರುತ್ತಾರೆ ಎಂಬುದರ ಬಗ್ಗೆ ಫ್ಯಾಷನ್ ವಿಮರ್ಶಕರು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

Canne Film Festival 2024
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಕಾನ್‌ ಫಿಲ್ಮ್ ಫೆಸ್ಟಿವಲ್ 2024ರ ರೆಡ್‌ ಕಾರ್ಪೆಟ್‌ (Canne Film Festival 2024) ಮೇಲೆ ಒಂದೊಂದು ದಿನವೂ ಒಂದೊಂದು ಬಗೆಯ ವಿಶೇಷವಾದ ಡಿಸೈನರ್‌ವೇರ್‌ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್ ನಟಿಯರು ಹಾಗೂ ಸೆಲೆಬ್ರೆಟಿಗಳು 3ನೇ ದಿನವೂ ಕೂಡ ಆಫ್ ಶೋಲ್ಡರ್ ಡಿಸೈನರ್‌ವೇರ್‌ಗಳಿಗೆ ಪ್ರಾಮುಖ್ಯತೆ ನೀಡಿದ್ದರು. ಅಂದಹಾಗೆ, ಬಾಲಿವುಡ್ ನಟಿ ಶೋಭಿತಾ, ಕಳೆದ ಬಾರಿ ನಟಿ ಅಥಿಯಾ ಶೆಟ್ಟಿ ಲ್ಯಾಕ್ಮೆ ಫ್ಯಾಷನ್ ವೀಕ್‌ನಲ್ಲಿ ಡಿಸೈನರ್ ನಮ್ರತಾ ವಿನ್ಯಾಸಗೊಳಿಸಿ, ಧರಿಸಿದ್ದ ಶಿಮ್ಮರ್ ಪರ್ಪಲ್ ಜಂಪ್‌ಸೂಟ್‌ನಲ್ಲಿ ಕಾಣಿಸಿಕೊಂಡರು. ಹಳೆಯ ಡಿಸೈನ್ ಮತ್ತೊಮ್ಮೆ ರಿಪೀಟ್ ಮಾಡಿದರು.

ಊರ್ವಶಿ ರೌತೆಲಾ ಆಕರ್ಷಕ ರೆಡ್ ಗೌನ್: ಇನ್ನು ಬಾಲಿವುಡ್ ನಟಿ ಊರ್ವಶಿ ರೌತೆಲಾ, ತುನೇಸಿಯನ್ ಡಿಸೈನರ್‌ನ ಆಫ್ ಶೋಲ್ಡರ್ ಕೇಪ್ ಶೈಲಿಯ ಬಲೂನ್ ಸ್ಲೀವ್‌ನ ಆಕರ್ಷಕ ರೆಡ್ ಗೌನ್‌ನಲ್ಲಿ ಯೂರೋಪಿಯನ್ ಕ್ವೀನ್ ಲುಕ್‌ ಮೂಲಕ ಕಣ್ಮನ ಸೆಳೆದರು.

ಇದನ್ನೂ ಓದಿ: Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

ದೀಪ್ತಿ – ನಮಿತಾ ತಾಪರ್ ಡಿಸೈನರ್‌ವೇರ್ಸ್: ಇನ್ನು, ದೀಪ್ತಿ ಯೆಲ್ಲೋ & ಗೋಲ್ಡ್ ಫಿಶ್ಟೇಲ್ ರಫಲ್ ಗೌನ್‌ನಲ್ಲಿ ಕಾಣಿಸಿಕೊಂಡರೆ, ನಮಿತಾ ರಾಯಲ್ ಬ್ಲ್ಯೂ ಸ್ಯಾಟೀನ್ ಗೌನ್‌ನಲ್ಲಿ ಪೋಸ್ ನೀಡಿದರು.

ಸೆಲೆಬ್ರೆಟಿಗಳ ರೆಡ್‌ಕಾರ್ಪೆಟ್‌ ಸ್ಟೈಲಿಂಗ್ ಬದಲಾವಣೆ: ಮೊದಲ ದಿನ ಬಹುತೇಕ ಸೆಲೆಬ್ರೆಟಿಗಳು ತಮ್ಮ ಡಿಸೈನರ್‌ವೇರ್‌ಗಳು ಎಕ್ಸ್ಕ್ಲೂಸಿವ್ ಡಿಸೈನ್ ಹೊಂದಿವೆ ಎಂದು ಭಾವಿಸಿಯೇ ರೆಡ್ ಕಾರ್ಪೆಟ್‌ ಮೇಲೆ ವಾಕ್ ಮಾಡಿದರೆ, ತದನಂತರ ಕೊಂಚ ಜಾಗರೂಕರಾಗಿ ಸ್ಟೈಲಿಂಗ್‌ನಲ್ಲಿ ಬದಲಾವಣೆ ತಂದಿರುವುದು ಕಂಡು ಬಂದಿತು.

ಡಿಸೈನರ್‌ವೇರ್‌ ಬದಲಿಸಲಾಗದು!

ಹಾಗೆಂದು ಇದ್ದಕ್ಕಿದ್ದಂತೆ ಯಾವ ಸೆಲೆಬ್ರೆಟಿಗೂ ಕೂಡ ಡಿಸೈನರ್ವೇರ್ ಮತ್ತೊಬ್ಬರ ದಿರಸಿನಂತೆ ಇದೆ ಎಂದು ಅರಿವಾದಾಕ್ಷಣ ಬದಲಿಸಲು ಆಗುವುದಿಲ್ಲ! ಯಾಕೆಂದರೇ, ಅವರು ಧರಿಸುವ ಒಂದೊಂದು ಉಡುಪು ಲಕ್ಷಗಟ್ಟಲೆ ರೂ. ಬೆಲೆ ಬಾಳುತ್ತವೆ. ಅಲ್ಲದೇ, ತಿಂಗಳಾನುಗಟ್ಟಲೇ ಮೊದಲೇ ಯಾವುದನ್ನು ಧರಿಸಬೇಕೆಂಬುದು ನಿರ್ಧರಿತವಾಗಿರುತ್ತದೆ. ಇದಕ್ಕಾಗಿ ಸ್ಟಾರ್ಗಳ ಡಿಸೈನರ್‌ಗಳು ಕೂಡ ತಿಂಗಳಾನುಗಟ್ಟಲೇ ಹೋಮ್‌ ವರ್ಕ್‌ ಮಾಡಿರುತ್ತಾರೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ವಿಶೇಷ ದಿರಸನ್ನು ಸಿದ್ಧಪಡಿಸಲು ಸಾಕಷ್ಟು ಕಷ್ಟಪಟ್ಟಿರುತ್ತಾರೆ. ಕೆಲವು ಯಾರೂ ಧರಿಸದ ಹೊಸ ಡಿಸೈನರ್‌ಗಳಾಗಿ ಹಿಟ್ ಲಿಸ್ಟ್‌ಗೆ ಸೇರಿದರೇ, ಮತ್ತೆ ಕೆಲವು ಸೇಮ್ ಟು ಸೇಮ್ ಅಥವಾ ಕಾಪಿಕ್ಯಾಟ್ ಆಗಿ ನಗೆಪಾಟಲೀಗಿಡಾಗುತ್ತವೆ ಎನ್ನುತ್ತಾರೆ ಫ್ಯಾಷನಿಸ್ಟಾ ರಾಕ್.

(ಲೇಖಕಿ ಫ್ಯಾಷನ್ ಪತ್ರಕರ್ತೆ)

Continue Reading

ದೇಶ

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

Arvind Kejriwal: ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದಾರೆ. ಲಾಭದ ಸ್ವಲ್ಪ ಮೊತ್ತವನ್ನು ಆಪ್‌ಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೆ ಬಳಸಲಾಗಿದೆ ಎಂದು ಕೋರ್ಟ್‌ಗೆ ಸಲ್ಲಿಸಿದ 8ನೇ ಚಾರ್ಜ್‌ಶೀಟ್‌ನಲ್ಲಿ ಇ.ಡಿ ಅಧಿಕಾರಿಗಳು ಪ್ರಸ್ತಾಪ ಮಾಡಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ (Delhi Excise Policy Case) ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal)‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯವು ರೋಸ್‌ ಅವೆನ್ಯೂ ಕೋರ್ಟ್‌ಗೆ ಪೂರಕ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಅಬಕಾರಿ ನೀತಿ ಕೇಸ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಆಮ್‌ ಆದ್ಮಿ ಪಕ್ಷವನ್ನು ಆರೋಪಿಗಳು ಎಂದು ಪ್ರಸ್ತಾಪಿಸಿದೆ.

ಅರವಿಂದ್‌ ಕೇಜ್ರಿವಾಲ್‌ ಹಾಗೂ ಆಪ್‌ಅನ್ನು ಆರೋಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪಿಸಿದ ಕಾರಣ ಮುಂದಿನ ದಿನಗಳಲ್ಲಿ ಕೇಜ್ರಿವಾಲ್‌ ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಚಾರ್ಜ್‌ಶೀಟ್‌ ಸಲ್ಲಿಸಿರುವ ಇ.ಡಿ, “ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದಾರೆ. ಲಾಭದ ಸ್ವಲ್ಪ ಮೊತ್ತವನ್ನು ಆಪ್‌ಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೆ ಬಳಸಲಾಗಿದೆ” ಎಂದು ಇ.ಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ‌ಮತ್ತೊಂದೆಡೆ, ಇ.ಡಿ ಬಂಧನ ಪ್ರಶ್ನಿಸಿ ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿದೆ.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Continue Reading

ಹಾಸನ

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಶುಕ್ರವಾರ ನಡೆದ ವಿಚಾರಣೆಯಲ್ಲಿ ಮಧ್ಯಂತರ ರಿಲೀಫ್‌ ಸಿಕ್ಕಂತೆ ಆಗಿದೆ. ವಾದ – ಪ್ರತಿವಾದವನ್ನು ಆಲಿಸಿದ 42ನೇ ಎಸಿಎಂಎಂ ಕೋರ್ಟ್‌ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದು, ಅಂದು ಆದೇಶವನ್ನು ನೀಡಲಿದೆ. ಹೀಗಾಗಿ ರೇವಣ್ಣ ಅವರಿಗೆ ಜೈಲಾಗುತ್ತದೆಯೋ? ಇಲ್ಲವೇ ಬೇಲಾಗುತ್ತದೆಯೋ ಎಂಬ ವಿಚಾರವು ಸೋಮವಾರ ಗೊತ್ತಾಗಲಿದೆ.

VISTARANEWS.COM


on

HD Revanna case Hearing in Holenarasipura sexual assault case adjourned to Monday
Koo

ಬೆಂಗಳೂರು: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ನೀಡಲಾಗಿದೆ. ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ರಿಲೀಫ್‌ ಸಿಕ್ಕಿದೆಯಾದರೂ ಜೈಲಾ? ಬೇಲಾ? ಎಂಬುದು ಸೋಮವಾರ ಪ್ರಕಟವಾಗುವ ತೀರ್ಪಿನ ಮೇಲೆ ನಿಂತಿದೆ.

42ನೇ ಎಸಿಎಂಎಂ ಕೋರ್ಟ್‌ನಲ್ಲಿ ಶುಕ್ರವಾರ ವಿಚಾರಣೆ ಆರಂಭವಾಯಿತು. ಈ ವೇಳೆ ಮಾಜಿ‌ ಸಚಿವ ಎಚ್.ಡಿ. ರೇವಣ್ಣ ಅವರು ಬರಿಗಾಲಿನಲ್ಲಿಯೇ ಕೋರ್ಟ್‌ಗೆ ಹಾಜರಾದರು. ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಮುಂಚೆ ಇನ್ ಕ್ಯಾಮೆರಾ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಮೊದಲು ಅರ್ಜಿ ವಿಚಾರಣೆಯ ಅರ್ಹತೆ ಬಗ್ಗೆ ವಾದ ಮಂಡಿಸಿ. ನಂತರ ಇನ್ ಕ್ಯಾಮೆರಾ ವಿಚಾರಣೆ ನಡೆಸೋಣ ಎಂದು ಹೇಳಿದರು.

ವಾದ ಶುರು ಮಾಡಿದ ಎಸ್ಐಟಿ ಪರ ಎಸ್ ಪಿಪಿ ಜಯ್ನಾ ಕೊಠಾರಿ, ಹೊಳೆನರಸೀಪುರ ಪ್ರಕರಣದಲ್ಲಿ ಐಪಿಸಿ 376 ಸೆಕ್ಷನ್ ಹಾಕಲಾಗಿದ್ದು, ಇದು ಅತ್ಯಾಚಾರ ಆರೋಪವಾಗಿದೆ. ಸಂತ್ರಸ್ತೆಯ ವಿಚಾರಣೆ ಬಳಿಕ ಅತ್ಯಾಚಾರ ಆರೋಪ ದಾಖಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ಅವರು ಕೋರ್ಟ್‌ನಲ್ಲಿ ಓದಿ ಹೇಳಿದರು. ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್ 354 ಮಾತ್ರ ಇತ್ತು. ವಿಚಾರಣೆ ಬಳಿಕ 376 ಸೇರ್ಪಡೆಯಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿರುವ ಅಂಶಗಳನ್ನು ಉಲ್ಲೇಖಿಸಿ ಕೋರ್ಟ್‌ ಗಮನಕ್ಕೆ ತಂದರು.

ಆಶ್ರಯ ಮನೆಯೂ ವಾಪಸ್‌

ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಂಶಗಳ ಕೋರ್ಟ್‌ ಮುಂದೆ ಓದಿದ ಎಸ್‌ಪಿಪಿ ಜಯ್ನಾ ಕೊಠಾರಿ, ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಕಿರುಕುಳ ತಾಳಲಾರದೆ ಮನೆ ಬಿಟ್ಟು ಬಂದಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಕೆಲಸ ಬಿಟ್ಟು ಬಂದಿದಕ್ಕೆ ಮೊದಲು‌ ನೀಡಿದ್ದ ಆಶ್ರಯ ಮನೆಯನ್ನು ಬಲವಂತವಾಗಿ ವಾಪಸ್‌ ಪಡೆದಿದ್ದಾರೆ. ಆ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲ. ಸಂತ್ರಸ್ತೆಯ ಆರೋಪಗಳನ್ನು ಕೋರ್ಟ್‌ ಮುಂದೆ ಹೇಳಿದರು.

ಹೀಗಾಗಿ ಸಂತ್ರಸ್ತೆ ಹೇಳಿಕೆ ಮೇಲೆ ಸೆಕ್ಷನ್ 376 ಅನ್ನು ಸೇರಿಸಲಾಗಿದೆ ಎಂದು ವಾದಿಸಿದ ಜಯ್ನಾ ಕೊಠಾರಿ, ನಾನ್ ಬೇಲಬಲ್ ಸೆಕ್ಷನ್ ಸೇರಿಸಿರುವುದರಿಂದ ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಬೇಕು. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ತನಿಖಾಧಿಕಾರಿಯ ಮನವಿ ನಂತರ ಸೆಕ್ಷನ್‌ 376 ಸೇರ್ಪಡೆಗೊಂಡಿದೆ. ಈ ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್‌ 354 A, D ಮಾತ್ರವಿತ್ತು. ಪ್ರಜ್ಬಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ಇರುವ ಪ್ರಕರಣವನ್ನು ವಿಭಜಿಸಬಾರದು. ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಇಂತಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದಿಸಿದರು.

ದೂರುದಾರೆಗೆ ಇಬ್ಬರಿಂದಲೂ ಕಿರುಕುಳ

ಎಸ್ಐಟಿ ತಂಡದಿಂದ ತನಿಖೆ ಪ್ರಗತಿಯಲ್ಲಿದೆ. ಈ‌ ಸಂದರ್ಭದಲ್ಲಿ ಆರೋಪಿಗೆ ಜಾಮೀನು ನೀಡುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ. ಬೇಲಬಲ್ ಸೆಕ್ಷನ್ ಇದ್ದಾಗ ಮಾತ್ರ ಸೆಕ್ಷನ್‌ 436 ಪ್ರಕಾರ ಜಾಮೀನು ನೀಡಬಹುದು. ಆದರೆ, ಈ ಪ್ರಕರಣದಲ್ಲಿ ನಾನ್ ಬೇಲಬಲ್ ಸೆಕ್ಷನ್ 436 ಅಡಿಯಲ್ಲಿ ಜಾಮೀನು ನೀಡುವಂತಿಲ್ಲ. ಅಲ್ಲದೆ, ನಾನ್ ಬೇಲಬಲ್ ಸೆಕ್ಷನ್ ಇರುವುದಿರಿಂದ ಇದರ ವಿಚಾರಣೆಯು ಸೆಷನ್ಸ್‌ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ವಿಚಾರಣೆ ನಡೆಯಬೇಕು. ದೂರುದಾರರಿಗೆ ಮನೆಯಲ್ಲಿ ಇಬ್ಬರಿಂದಲೂ (ರೇವಣ್ಣ, ಪ್ರಜ್ವಲ್) ಕಿರುಕುಳ ನಡೆದಿದೆ. ಇದನ್ನೆಲ್ಲ ಮುಕ್ತ ನ್ಯಾಯಾಲಯದಲ್ಲಿ ವಿವರಿಸಲು ಆಗದು. ಇದು ಇನ್ ಕ್ಯಾಮೆರಾ ವಿಚಾರಣೆ ನಡೆಯಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಜಾಮೀನು ಅರ್ಜಿ ವಿಚಾರಣೆ ವ್ಯಾಪ್ತಿ ಈ ಕೋರ್ಟ್‌ಗಿಲ್ಲ: ಜಯ್ನಾ ಕೊಠಾರಿ

ಇಲ್ಲಿ ತಂದೆ – ಮಗ ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ರೇವಣ್ಣ ಅವರಿಂದ ಇಷ್ಟೇ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಅದೆಲ್ಲವೂ ತನಿಖೆಯ ನಂತರವಷ್ಟೇ ಗೊತ್ತಾಗಬೇಕಿದೆ. ಈಗಲೇ ಶಾಸಕ ರೇವಣ್ಣ ಮೇಲೆ ಅತ್ಯಾಚಾರ ಆರೋಪ ಇಲ್ಲವೆಂದು ಹೇಳಲು ಸಾಧ್ಯವಾಗುವುದಿಲ್ಲ. ಒಮ್ಮೆ ಅತ್ಯಾಚಾರ ಆರೋಪ ದಾಖಲಾದರೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆ ನಡೆಸಲು ಈ ಕೋರ್ಟ್‌ಗೆ ವ್ಯಾಪ್ತಿ ಇಲ್ಲ. ಸೆಕ್ಷನ್‌ 376 ಅಪರಾಧಕ್ಕೆ ಜೀವಾವಧಿ ಶಿಕ್ಷೆ ಇದೆ. ಇದು ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದಾಗ ಜಾಮೀನು ಅರ್ಜಿ ಊರ್ಜಿತವಲ್ಲ. ಇಬ್ಬರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿದೆ. ಆರೋಪ ಪಟ್ಟಿ ದಾಖಲಾದ ನಂತರವಷ್ಟೇ ಯಾರ ಮೇಲೆ ಏನು ಆರೋಪ‌ ಎಂದು ತಿಳಿಯಲಿದೆ. ಸೆಕ್ಷನ್‌ 41ಎ ಅಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಬಂದಿಲ್ಲ. ಇದನ್ನು ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೇಳುತ್ತೇನೆ. ಈಗ ಜಾಮೀನು ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬಾರದೆಂಬ ವಿಚಾರಕ್ಕಷ್ಟೇ ವಾದಿಸುತ್ತಿದ್ದೇನೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿದರು.

ಬಳಿಕ ಮತ್ತೊಬ್ಬ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ, ಜನಪ್ರತಿನಿಧಿಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಇಲ್ಲಿಗೆ ಬರುತ್ತವೆ. ಜಾಮೀನು ಅಂದರೆ ಸೆಷನ್ ನ್ಯಾಯಾಲಯದ ಕೋರ್ಟ್ 82ಕ್ಕೆ ಬರುತ್ತದೆ ಎಂದು ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಇದು ಪೋಕ್ಸೋ ಕೇಸ್‌ ಆಗಿದ್ದರೆ ನೀವು ಸೆಷನ್ ಕೋರ್ಟ್‌ಗೆ ಹೋಗಿ. ಇದು ಇಲ್ಲಿ ನಿರ್ವಹಿಸಲಾಗದಿದ್ದರೆ ಅಲ್ಲಿಗೆ ಕಳಿಸಲಾಗುತ್ತದೆ ಎಂದು ಹೇಳಿದರು.

ಮತ್ತೆ ವಾದ ಮುಂದುವರಿಸಿದ ಅಶೋಕ್‌ ನಾಯಕ್‌, ಸಂತ್ರಸ್ತೆ ಮೇಲೆ ತಂದೆ ಮತ್ತು ಪುತ್ರ ಇಬ್ಬರೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಒಬ್ಬಳ ಮೇಲೆ ಪದೇ ಪದೆ ದೌರ್ಜನ್ಯವೆಸಗಿದ್ದಾರೆ. ಕೊಲೆ ಪ್ರಕರಣದಲ್ಲಿ 302 ಸೆಕ್ಷನ್ ಜತೆಗೆ ಇತರೆ ಬೇಲಬಲ್ ಸೆಕ್ಷನ್‌ಗಳನ್ನ ಹಾಕಿರುತ್ತಾರೆ. ಹಾಗಂತ ಆರೋಪಿಗಳನ್ನು ಹಾಗೂ ಕೇಸ್‌ ಅನ್ನು ವಿಭಜನೆ ಮಾಡಲು ಆಗುತ್ತದೆಯೇ? ಅದೇ ರೀತಿ ಈ ಪ್ರಕರಣದಲ್ಲಿ ತಂದೆ, ಮಗ ಇಬ್ಬರೂ ಒಂದೇ ಅಪರಾಧ ಎಸಗಿದ್ದಾರೆ. ಒಂದೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಎರಡನೇ ಆರೋಪಿಯನ್ನು ಮೊದಲನೇ ಆರೋಪಿಯೇ ರಕ್ಷಣೆ ಮಾಡುತ್ತಿದ್ದಾರೆ. ದೇಶ ಬಿಟ್ಟು ಹೋಗಲು ಮೊದಲ ಆರೋಪಿಯೇ ಸಹಾಯ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿ ವಾದ ಮಂಡಿಸಿದ ಸಿ.ವಿ. ನಾಗೇಶ್‌

ಈ ವೇಳೆ ರೇವಣ್ಣ ಪರ ವಕೀಲ‌ ಸಿ.ವಿ. ನಾಗೇಶ್ ಪ್ರತಿವಾದ ಆರಂಭಿಸಿ, ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಪ್ರಕರಣವು ಬೇಲಬಲ್ ಸೆಕ್ಷನ್‌ಗಳಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಜಾಮೀನು ನೀಡಬೇಕಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಎಫ್ಐಆರ್ ದಾಖಲಾದ ದಿನಾಂಕ, ಅದರಲ್ಲಿರುವ ಸೆಕ್ಷನ್‌ಗಳು ಏನು ಎಂಬುದನ್ನು ಇದೇ ವೇಳೆ ಕೋರ್ಟ್‌ ಗಮನಕ್ಕೆ ತಂದರು. ಯಾವುದೇ ವ್ಯಕ್ತಿಯ ವಿರುದ್ಧ ದೂರು ದಾಖಲಾದರೆ, ಆತ ಬಂಧನಕ್ಕೊಳಗಾಗುವ ಮುನ್ನ ಶರಣಾದರೆ ಜಾಮೀನು ನೀಡಬಹುದು. ಇದರ ಗ್ರಾವಿಟಿಯೇ 436 ಸಿಆರ್‌ಪಿಸಿ ಆಗಿದೆ. ಇಲ್ಲಿ ಸಿಆರ್‌ಪಿಸಿ 439 ಅಲ್ಲ. ರೇವಣ್ಣ ವಿರುದ್ಧ ಈಗ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವು ದೂರು ದಾಖಲಾದ ದಿನ ಅಥವಾ ವಾರದ ಹಿಂದೆ ಇಲ್ಲವೇ ವರ್ಷದ ಹಿಂದೆ ನಡೆದಿಲ್ಲ. ಕೃತ್ಯ ನಡೆದು ಹಲವು ವರ್ಷಗಳೇ ಕಳೆದು ಹೋಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗರ್ಭಗುಡಿಯಲ್ಲಿ ದೇವರು ಕುಳಿತಂತೆ ಕುಳಿತಿದ್ದೆ!

ಈ ವೇಳೆ ಮಧ್ಯ ಪ್ರವೇಶ ಮಾಡಿದ ಎಸ್‌ಪಿಪಿ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಲು ಮುಂದಾದರು. ಅದಕ್ಕೆ ಸಿಟ್ಟಾದ ಸಿ.ವಿ. ನಾಗೇಶ್, “ನೀವು ವಾದ ಮಾಡಬೇಕಾದರೆ ನಾನು ಗರ್ಭಗುಡಿಯಲ್ಲಿ‌ ದೇವರು ಕುಳಿತ ಹಾಗೆ ಕುಳಿತುಕೊಂಡಿದ್ದೆ. ಏನಾದರೂ ತೊಂದರೆ ಮಾಡಿದ್ದೇನಾ? ಎಂದು ಪ್ರಶ್ನಿಸಿ ತಮ್ಮ ವಾದವನ್ನು ಮುಂದುವರಿಸಿದರು. ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂದು ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಇದು ಅತ್ಯಾಚಾರ ಪ್ರಕರಣ ಅಲ್ಲ

ಸೆಷನ್ಸ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ 376 ಸೆಕ್ಷನ್ ಇರಲಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಬಂದಾಗ ಈ ಸೆಕ್ಷನ್‌ ಸೇರ್ಪಡೆಯಾಗಿದೆ. ಅವತ್ತು ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಇವರು ಮೊದಲೇ 376 ಇದೆ ಎಂದು ಹೇಳಿದ್ದರೆ, ನಾವು ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ವಾಪಸ್‌ ಪಡೆಯುತ್ತಿರಲಿಲ್ಲ. ರೇವಣ್ಣ ವಿರುದ್ಧ 376 ಇದೆ ಅಂತ ಹೇಳಲಿ. ಆಗ ನಾವು ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ನ ಕಕ್ಷಿದಾರದರ ವಿರುದ್ಧ ದಾಖಲಾಗಿರೋದು ಕೇವಲ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದೆ. ಅತ್ಯಾಚಾರ ಪ್ರಕರಣ ಅಲ್ಲ. ಇದೊಂದು‌ ಸುಳ್ಳು ಕೇಸ್ ಆಗಿದೆ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಇದುವರೆಗೂ ರೇವಣ್ಣ ಅವರಿಗೆ ನೀಡಿದ ಯಾವ ನೋಟಿಸ್‌ನಲ್ಲೂ ಸೆಕ್ಷನ್‌ 376 ಇದೆ ಅಂತ ಉಲ್ಲೇಖಿಸಿಲ್ಲ. ಈಗ 376 ಇದೆ ಎಂದು ಹೇಳುತ್ತಿದ್ದಾರೆ. ಇದರಿಂದ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬಹುದು. ರೇವಣ್ಣ ವಿರುದ್ಧ ದಾಖಲಾಗಿರುವ ಕೇಸ್‌ನಲ್ಲಿ ಎಲ್ಲವೂ ಬೇಲಬಲ್ ಸೆಕ್ಷನ್‌ಗಳಿವೆ. ಹೀಗಾಗಿ ಜಾಮೀನು‌ ನೀಡಬೇಕೆಂದು ಮನವಿ ಮಾಡಿದ ಸಿ.ವಿ. ನಾಗೇಶ್ ತಮ್ಮ ವಾದವನ್ನು ಮುಕ್ತಾಯ ಮಾಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಎಫ್‌ಐಆರ್‌ ಬಳಿಕವೂ ಸೆಕ್ಷನ್‌ ಸೇರಿಸಬಹುದು

ಬಳಿಕ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ರೇವಣ್ಣ ಪರ ವಕೀಲರು ಕೇವಲ ಬೇಲಬಲ್ ಸೆಕ್ಷನ್‌ಗಳ ಬಗ್ಗೆ ಮಾತ್ರ ಹೇಳಿದ್ದಾರೆ. ಪ್ರಾರಂಭದಲ್ಲೇ ಜಾಮೀನು ರಹಿತ ಸೆಕ್ಷನ್‌ಗಳನ್ನು ದಾಖಲಿಸದೆ ಇರಬಹುದು. ತನಿಖೆ ನಡೆದಾಗ ಯಾವಾಗ ಬೇಕಿದ್ದರೂ ಅಪರಾಧ ನಡೆದಿರುವ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಬಹುದು. ಈ ಬಗ್ಗೆ ಅವಕಾಶವೂ ಇದೆ. ನಂತರವು ಜಾಮೀನು ರಹಿತದ ಸೆಕ್ಷನ್‌ಗಳನ್ನು ಕೂಡಾ ಸೇರಿಸುವ ಅವಕಾಶ ಇದೆ. ಅದಕ್ಕೆ‌ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ಹೇಳಿದರು.

ಭಯದಿಂದ ಗಂಡನ ಬಳಿ ಸತ್ಯ ಮುಚ್ಚಿಟ್ಟಿರುವ ಸಂತ್ರಸ್ತೆ

ರೇವಣ್ಣ ಪರ ವಕೀಲರು‌ ಹೇಳುವಂತೆ ಮಹಿಳಾ ಪೊಲೀಸ್ ಇಲ್ಲದೆ ನಮ್ಮ ಪೊಲೀಸರು ಹೋಗಿಲ್ಲ. ಮಹಿಳಾ ಸಿಬ್ಬಂದಿಯ ಜತೆಯಲ್ಲೆ ಹೋಗಿ ದೂರು ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಸಂತ್ರಸ್ತೆ ತನ್ನ ಗಂಡನ ಬಳಿ ಕೆಲವೊಂದನ್ನು ಮುಚ್ಚಿಟ್ಟಿದ್ದಾಳೆ. ಸತ್ಯ ಹೇಳಿದರೆ ಮನೆಯಿಂದ ಹೊರ ಹಾಕುತ್ತಾರೆ ಎಂಬ ಭಯದಲ್ಲಿ ಆಕೆ ಗಂಡನಿಗೆ ಆ ರೀತಿಯಾಗಿ ಹೇಳಿದ್ದಾಳೆ. ಆಕೆಯ ಸುರಕ್ಷತೆಗೆ ಸಂಬಂಧಿಸಿದ ವಿಚಾರವಾಗಿದ್ದರಿಂದ ರಹಸ್ಯ ಸ್ಥಳದಲ್ಲಿ ದೂರು ಪಡೆಯಲಾಗಿದೆ. ಇದು ಸಂಪೂರ್ಣವಾಗಿ ಮಹಿಳೆಯ ರಕ್ಷಣೆಗೆ ಸಂಬಂಧಿಸಿದ ವಿಚಾರವಾಗಿದೆ. ನಾವು ಮೆಮೋ ಹಾಕಿದ್ದೆವು, ರಿಮಾಂಡ್ ಅಪ್ಲಿಕೇಶನ್‌ನಲ್ಲೂ ಲೈಂಗಿಕ ದೌರ್ಜನ್ಯ ಅಂತ ಹೇಳಿದ್ದೆವು. ಆದರೆ, ಈಗ ಸೆಕ್ಷನ್‌ 376 ಹಾಕಿರುವುದಕ್ಕೆ ದಾಖಲೆ ಇದೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.

Continue Reading
Advertisement
7 books release programme on May 19 in Bengaluru
ಬೆಂಗಳೂರು8 mins ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ13 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ16 mins ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ21 mins ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ29 mins ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ33 mins ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

HD Revanna case Hearing in Holenarasipura sexual assault case adjourned to Monday
ಹಾಸನ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್1 hour ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ1 hour ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Narendra Modi
ದೇಶ1 hour ago

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌