Ranji Trophy 2022 | ಐದು ದಶಕಗಳ ನಂತರ ರಣಜಿ ಟ್ರೋಫಿ ಗೆದ್ದ ಮಧ್ಯಪ್ರದೇಶ - Vistara News

ಕ್ರಿಕೆಟ್

Ranji Trophy 2022 | ಐದು ದಶಕಗಳ ನಂತರ ರಣಜಿ ಟ್ರೋಫಿ ಗೆದ್ದ ಮಧ್ಯಪ್ರದೇಶ

ತೀವ್ರ ಕುತೂಹಲ ಕೆರಳಿಸಿದ್ದ ಫೈನಲ್‌ ಪಂದ್ಯದಲ್ಲಿ 41 ಬಾರಿಯ ಚಾಂಪಿಯನ್‌ ಮುಂಬಯಿ ತಂಡದ ವಿರುದ್ಧ 6 ವಿಕೆಟ್‌ಗಳ ಜಯ ಗಳಿಸುವ ಮೂಲಕ ಮಧ್ಯಪ್ರದೇಶ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐದು ದಶಕಗಳ ನಂತರ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

VISTARANEWS.COM


on

ಮಧ್ಯ ಪ್ರದೇಶ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಣಜಿ ಫೈನಲ್‌ ಪಂದ್ಯದಲ್ಲಿ ೪೧ ಬಾರಿಯ ಚಾಂಪಿಯನ್‌ ಮುಂಬೈ ತಂಡದ ವಿರುದ್ಧ ಗೆದ್ದ ಮಧ್ಯಪ್ರದೇಶ ತಂಡ ೫ ದಶಕಗಳ ನಂತರ ರಣಜಿ ಟ್ರೋಪಿ ತನ್ನದಾಗಿಸಿಕೊಂಡು ಬೀಗಿದೆ. ಈ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಪೈನಲ್‌ ಪಂದ್ಯದಲ್ಲಿ ಮುಂಬೈ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಈ ಮಹತ್ವದ ಸಾಧನೆ ಮಾಡಿದೆ. ೧೯೫೨-೫೩ ರಲ್ಲಿ ಕೊನೆಯದಾಗಿ ಮಧ್ಯಪ್ರದೇಶ ತಂಡ (ಹೋಳ್ಕರ್‌) ಈ ಪ್ರಶಸ್ತಿ ಗೆದ್ದಿತ್ತು.

ಬುಧವಾರ ಆರಂಭವಾದ ಫೈನಲ್‌ ಪಂದ್ಯದಲ್ಲಿ ಮೊದಲು ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಸರ್ಫರಾಜ್‌ ಖಾನ್‌(134) ಶತಕದ ನೆರವಿನಿಂದ 127.4 ಓವರ್‌ಗಳಲ್ಲಿ 374 ರನ್‌ ಕಲೆ ಹಾಕಿತು. ಬಳಿಕ ಬ್ಯಾಟಿಂಗ್‌ ಮಾಡಿದ ಮಧ್ಯಪ್ರದೇಶ ತಂಡ ಯಶ್‌ ದುಬೆ(133), ಶುಭಂ ಶರ್ಮಾ(116) ಹಾಗೂ ರಜತ್‌ ಪಾಟೀದಾರ್‌(122) ಶತಕದ ನೆರವಿನಿಂದ 177.2 ಓವರ್‌ಗಳಲ್ಲಿ 536 ರನ್‌ ಕಲೆ ಹಾಕಿ, 162 ರನ್ ಮುನ್ನಡೆ ಗಳಿಸಿತು.

162 ರನ್‌ಗಳ ಹಿನ್ನಡೆಯೊಂದಿಗೆ 4ನೇ ದಿನದಾಟದ ಅಂತ್ಯದಲ್ಲಿ 2ನೇ ಇನ್ನಿಂಗ್ಸ್‌ ಬ್ಯಾಟಿಂಗ್‌ ಆರಂಭಿಸಿದ ಮುಂಬೈ ತಂಡಕ್ಕೆ ನಾಯಕ ಪೃಥ್ವಿ ಶಾ ಸ್ಫೋಟಕ ಆರಂಭ ಒದಗಿಸಿದ್ದರು. ಹಾರ್ದಿಕ್‌ ತಮೊರೆ ಜತೆಗೂಡಿ ತಂಡದ ಮೊತ್ತವನ್ನು 10 ಓವರ್‌ಗಳಲ್ಲಿ 60 ರನ್‌ ಗಡಿ ದಾಟಿಸಿದರು. ಇದರ ಬೆನ್ನಲ್ಲೇ ಪೃಥ್ವಿ ಶಾ 44(52 ಎಸೆತ) ಗಳಿಸಿದ್ದಾಗ ಔಟಾದರು.
ಬಳಿಕ ಆಗಮಿಸಿದ ಅರ್ಮಾನ್‌ ಜಾಫರ್(‌37), ಸವೇದ್‌ ಪಾರ್ಕರ್‌ (51) ಹಾಗೂ ಸರ್ಫರಾಜ್‌ ಖಾನ್‌ (45) ಬಳಿಕ ಮುಂಬೈ ತಂಡ ವಿಕಟ್‌ಗಳನ್ನು ಕೈಚೆಲ್ಲುತ್ತಾ ಹೋಯಿತು. ಪರಿಣಾಮ 5 ದಿನದಾಟದ ವೇಳೆ 269 ರನ್‌ ಗಳಿಸಿ ಆಲ್‌ಔಟ್‌ ಆಯಿತು.

ನಂತರ 108 ರನ್‌ಗಳ ಗುರಿಯೊಂದಿಗೆ ಎರಡನೇ ಇನ್ನಿಂಗ್ಸ್‌ ಬ್ಯಾಟಿಂಗ್‌ ಆರಂಭಿಸಿದ ಮಧ್ಯ ಪ್ರದೇಶ ತಂಡಕ್ಕೆ ಧವಲ್‌ ಕುಲಕರ್ಣಿ 2ನೇ ಓವರ್‌ನಲ್ಲಿ ಯಶ್‌ ದುಬೆ(1) ವಿಕೆಟ್‌ ಪಡೆಯುವ ಮೂಲಕ ಆಘಾತ ನೀಡಿದರು. ಆದಾಗ್ಯೂ ಹಿಮಾಂಶು ಮಂತ್ರಿ ಮತ್ತು ಶುಭಂ ಶರ್ಮಾ ಎಚ್ಚರಿಕೆಯ ಆಟವಾಡಿದರು. ಈ ಮೂಲಕ ಅರ್ಧ ಶತಕದ ಜತೆಯಾಟದ ಬಳಿಕ ಹಿಮಾಂಶು ಮಂತ್ರಿ (37) ಶಮ್ಸ್‌ ಮುಲಾನಿಗೆ ವಿಕೆಟ್‌ ಒಪ್ಪಿಸಿದರು. ಇದರ ಬೆನ್ನಲ್ಲೇ ಪಾರ್ಥ್‌ ಸಹಾನಿ(5) ಕ್ಯಾಚ್‌ ನೀಡಿ ನಿರ್ಗಮಿಸಿದರು. ನಂತರ ಶುಭಂ ಶರ್ಮಾ ಮತ್ತು ರಜತ್‌ ಪಾಟಿದಾರ್‌ ತಂಡದ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡರು. ಅಂತಿಮವಾಗಿ 4 ವಿಕೆಟ್‌ ಕಳೆದುಕೊಂಡು 29.5 ಓವರ್‌ಗಳಲ್ಲಿ 108 ರನ್‌ ಗುರಿ ತಲುಪಿದ
ಮಧ್ಯಪ್ರದೇಶ ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಇದನ್ನೂ ಓದಿ | Team India ಹಿಟ್ಟರ್‌ ರೋಹಿತ್‌ ಶರ್ಮಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ: ಇಲ್ಲಿದೆ ನೋಡಿ ಅಭಿಮಾನಿಗಳಿಗೆ ವಿಶೇಷ ಸಂದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

MS Dhoni Fan: ಧೋನಿ(MS Dhoni) ಯಾವಾಗಲೂ ತಮ್ಮ ವ್ಯಕ್ತಿತ್ವದಿಂದ ಅವರ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಾರೆ. ಹೀಗಾಗಿ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು(MS Dhoni Fan) ಹೊಂದಿದ್ದಾರೆ.

VISTARANEWS.COM


on

MS Dhoni
Koo

ಪ್ಯಾರಿಸ್​: ಟೀಮ್​ ಇಂಡಿಯಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಧೋನಿ(MS dhoni) ಅವರು ತಮ್ಮ ಕುಟುಂಬದ ಜತೆ ಪ್ಯಾರಿಸ್​ ಪ್ರವಾಸದಲ್ಲಿದ್ದಾರೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾ ತಮ್ಮ ಪ್ರವಾಸವನ್ನು ಎಂಜಾಯ್​ ಮಾಡುತ್ತಿದ್ದಾರೆ. ಕಳೆದ ವಾರ ಧೋನಿ ಅವರ ಪತ್ನಿ ಸಾಕ್ಷಿ ಅವರು ಪ್ರವಾಸದ ಫೋಟೊಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದೀಗ ಅಭಿಮಾನಿಯೊಬ್ಬ(MS dhoni Fan) ಧೋನಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾನೆ. ಈ ಫೋಟೊ ವೈರಲ್ ಆಗಿದೆ.

ಧೋನಿ ಅವರು ಪ್ಯಾರಿಸ್​ನ ಪ್ರವಾಸಿ ಸ್ಥಳವೊಂದಕ್ಕೆ ಭೇಟಿ ನೀಡಿದ ಸಂದರ್ಭ ಅವರ ಅಭಿಮಾನಿಯೊಬ್ಬ ಧೋನಿ ಅವರ ಕಾಲಿಗೆ ಬಿದ್ದಿದ್ದಾನೆ. ಈ ವೇಳೆ ಧೋನಿ ಆತನಿಗೆ ಆಶೀರ್ವಾದ ಮಾಡಿದ್ದಾರೆ. ಈ ಫೋಟೊವನ್ನು ಕಂಡ ಧೋನಿ ಅಭಿಮಾನಿಗಳು ನೀವು ಜಿಜವಾಗಿಯೂ ಅದೃಷ್ಟಶಾಲಿ ಎಂದು ಕಮೆಂಟ್‌ ಮಾಡಿದ್ದಾರೆ.

ಧೋನಿ(MS Dhoni) ಯಾವಾಗಲೂ ತಮ್ಮ ವ್ಯಕ್ತಿತ್ವದಿಂದ ಅವರ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಾರೆ. ಹೀಗಾಗಿ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು(MS Dhoni Fan) ಹೊಂದಿದ್ದಾರೆ. ಅವರ ಭೇಟಿಗಾಗಿ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಾರೆ. ಕೆಲ ಅಭಿಮಾನಿಗಳು ಧೋನಿಯನ್ನು ಭೇಟಿಯಾಗಿ ಅವರಿಗೆ ವಿಶೇಷ ಉಡುಗೊರೆಯನ್ನು ನೀಡುತ್ತಾರೆ. 

ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಳವು ವರ್ಷಗಳಾಗಿವೆ. ಕೇವಲ ಐಪಿಎಲ್​ ಟೂರ್ನಿಯಲ್ಲಿ(IPL 2024) ಮಾತ್ರ ಆಡುತ್ತಿದ್ದಾರೆ. ಈ ಆವೃತ್ತಿಯಲ್ಲಿ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿತ್ತು. ಆದರೆ ಧೋನಿ ಇದುವರೆಗೆ ತಮ್ಮ ನಿವೃತ್ತಿ ಪ್ರಕಟಿಸಿಲ್ಲ. ಮುಂದಿನ ಬಾರಿಯೂ ಅವರು ಆಡಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ಮಾಹಿತಿ ನೀಡಿದೆ.

ಇದನ್ನೂ ಓದಿ MS Dhoni’s last-ball Heroics: ಧೋನಿ ಮಿಂಚಿನ ವೇಗದ ರನೌಟ್​; ಭಾರತಕ್ಕೆ 1 ರನ್‌ ರೋಚಕ ಜಯ; ಇದು ಮರೆಯಲಾಗದ ನೆನಪು

ಭಾರತ ಸುತ್ತುವ ಆಸೆ ಇದೆ

ಕಳೆದ ವರ್ಷ ಸಂದರ್ಶನವೊಂದರಲ್ಲಿ ಅಭಿಮಾನಿಯೊಬ್ಬರು ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ವೇಳೆ, “ಪ್ರಮಾಣಿಕವಾಗಿ ಹೇಳಬೇಕೆಂದರೆ ನಾನು ಹೆಚ್ಚು ಪ್ರಯಾಣ ಮಾಡಿದ್ದೇನೆ. ಆದರೆ, ಅದು ಪ್ರವಾಸವಲ್ಲ. ನನ್ನ ಕ್ರಿಕೆಟ್ ಆಡುವ ಸಮಯದಲ್ಲಿ ಮಾಡಿದ ಪ್ರಯಾಣ. ಕ್ರಿಕೆಟ್​ ಸರಣಿಗಾಗಿ ನಾನು ಹಲವು ದೇಶಕ್ಕೆ ಭೇಟಿ ನೀಡಿದ್ದೇನೆ. ಆದರೆ ಅಲ್ಲಿರುವ ಯಾವುದೇ ಪ್ರವಾಸಿ ತಾಣಗಳಿಗೆ ಹೋಗಿಲ್ಲ. ಕ್ರಿಕೆಟ್​ ಆಡಿದ ಬಳಿಕ ನೇರವಾಗಿ ಭಾರತಕ್ಕೆ ಬರುತ್ತಿದೆ. ನನ್ನ ಪತ್ನಿಗೆ ಟ್ರಾವೆಲ್​ ಎಂದರೆ ಬಲು ಇಷ್ಟ. ಕ್ರಿಕೆಟ್​ ನಿವೃತ್ತಿ ಬಳಿಕ ನಾನು ಖಂಡಿತಾ ಪ್ರವಾಸ ಮಾಡುವ ಎಲ್ಲ ಯೋಜನೆಗಳನ್ನು ಈಗಾಗಲೇ ರೂಪಿಸಿದ್ದೇನೆ. ಭಾರತವೇ ನನ್ನ ಮೊದಲ ಆಯ್ಕೆ ಮತ್ತು ಆದ್ಯತೆ ಎಂದು ಧೋನಿ ಹೇಳಿದ್ದರು. “ಭಾರತದಲ್ಲಿ ಹಲವು ಸುಂದರ ತಾಣಗಳಿವೆ. ನಾನು ನನ್ನ ಮೊದಲ ಪ್ರವಾಸವನ್ನು ನಮ್ಮ ದೇಶದಲ್ಲೇ ಮಾಡಿ ಇಲ್ಲಿನ ಪ್ರವಾಸೋದ್ಯಮಕ್ಕೆ ಬೆಂಬಲ ಸೂಚಿಸುತ್ತೇನೆ” ಎಂದು ಧೋನಿ ಅಂದು ಸಂದರ್ಶನವೊಂದರಲ್ಲಿ ಹೇಳಿದ್ದರು.

Continue Reading

ಕ್ರೀಡೆ

RSA vs BAN: ಬಾಂಗ್ಲಾ ಸೋಲಿಗೆ ಐಸಿಸಿ ಹೊಸ ನಿಯಮವೇ ಕಾರಣ; ಬೌಂಡರಿ ದಾಖಲಾದರೂ ರನ್​ ನೀಡಲಿಲ್ಲವೇಕೆ?

RSA vs BAN: ಹೊಸ ನಿಯಮಗಳ ಪ್ರಕಾರ, ಅಂಪೈರ್ ಔಟ್ ನೀಡಿದಾಗ ಬಾಲ್ ಡೆಡ್ ಎಂದು ಪರಿಗಣಿಸಲ್ಪಡುತ್ತದೆ. ಹೀಗಾಗಿ ಈ ರನ್​ ಬಾಂಗ್ಲಾ ತಂಡಕ್ಕೆ ಸಿಗಲಿಲ್ಲ. ಒಂದೊಮ್ಮೆ ಈ ರನ್​ ಸಿಗುತ್ತಿದ್ದರೆ ಬಾಂಗ್ಲಾ ಗೆಲುವು ಸಾಧಿಸುತ್ತಿತ್ತು. ಏಕೆಂದರೆ ಬಾಂಗ್ಲಾ ಸೋತಿದ್ದು ಕೂಡ 4 ರನ್​ ಅಂತರದಿಂದ

VISTARANEWS.COM


on

RSA vs BAN
Koo

ನ್ಯೂಯಾರ್ಕ್​: ಸೋಮವಾರ ರಾತ್ರಿ ನಡೆದ ಟಿ20 ವಿಶ್ವಕಪ್(T20 World Cup 2024)​ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ದಕ್ಷಿಣ ಆಫ್ರಿಕಾ(RSA vs BAN) ವಿರುದ್ಧ 4 ರನ್​ಗಳ ವಿರೋಚಿತ ಸೋಲು ಕಂಡಿತ್ತು. ಬಾಂಗ್ಲಾ ತಂಡದ ಸೋಲಿಗೆ ಐಸಿಸಿಯ ಹೊಸ ನಿಯಮವೇ(Major DRS Controversy) ಕಾರಣ ಎಂಬ ಆರೋಪ ಕೇಳಿಬಂದಿದೆ.

ಹೌದು, ಈ ಪಂದ್ಯದಲ್ಲಿ ಅಂಪೈರ್‌ ತೆಗೆದುಕೊಂಡು ತಪ್ಪು ನಿರ್ಧಾರ(ICC Rule Exposed) ಮತ್ತು ವಿವಾದಾತ್ಮಕ ಡಿಆರ್‌ಎಸ್‌ ನಿಯಮದಿಂದಾಗಿ ಬಾಂಗ್ಲಾದೇಶ ಸೋಲು ಕಂಡಿದೆ ಎಂದು ಬಾಂಗ್ಲಾ ಆಟಗಾರರು ಸೇರಿ ಅನೇಕ ಮಾಜಿ ಕ್ರಿಕೆಟಿಗರು ಕೂಡ ಚರ್ಚೆ ನಡೆಸುತ್ತಿದ್ದಾರೆ. ಚೇಸಿಂಗ್​ ನಡೆಸುತ್ತಿದ್ದ ಬಾಂಗ್ಲಾದೇಶಕ್ಕೆ ಪಂದ್ಯ ಗೆಲ್ಲಲು 24 ಎಸೆತಗಳಲ್ಲಿ 27 ರನ್ ಗಳಿಸಬೇಕಿತ್ತು. 4 ವಿಕೆಟ್​ ಕೂಡ ಕೈಯಲ್ಲಿತ್ತು. ಅನುಭವಿ ಮಹಮ್ಮದುಲ್ಲಾ ಮತ್ತು ತೌಹೀದ್ ಹೃದಯ ಕ್ರೀಸ್​ನಲ್ಲಿದ್ದರು.

17ನೇ ಓವರ್‌ನಲ್ಲಿ ದಕ್ಷಿಣ ಆಫ್ರಿಕಾದ ಬೌಲರ್ ಒಟ್ನೀಲ್ ಬಾರ್ಟ್‌ಮನ್ ಅವರ ಎರಡನೇ ಎಸೆತದಲ್ಲಿ ಮಹಮ್ಮದುಲ್ಲಾ ಫ್ಲಿಕ್ ಶಾಟ್ ಹೊಡೆಯುವು ಪ್ರಯತ್ನದಲ್ಲಿ ವಿಫಲರಾದರು. ಆದರೆ, ಚೆಂಡು ಅವರ ಪ್ಯಾಡ್‌ಗೆ ತಾಗಿ ಬೌಂಡರಿ ದಾಖಲಾಯಿತು. ಚೆಂಡು ಪ್ಯಾಡ್​ಗೆ ತಾಗಿದ ಕಾರಣ ದಕ್ಷಿಣ ಆಫ್ರಿಕಾ ಬ್ಯಾಟರ್​ಗಳು ಎಲ್​ಬಿಡಬ್ಲ್ಯುಗೆ ಮನವಿ ಮಾಡಿದರು. ಅಂಪೈರ್​ ಔಟ್​ ನೀಡಿದರು. ಈ ವೇಳೆ ಮಹಮ್ಮದುಲ್ಲಾ ರಿವ್ಯೂ ಪಡೆದರು. ಫೀಲ್ಡ್​ ಅಂಪೈರ್​ ಈ ತೀರ್ಪನ್ನು ಮೂರನೇ ಅಂಪೈರ್​ಗೆ ನೀಡಿದರು. ಮೂರನೇ ಅಂಪೈರ್​ ಇದನ್ನು ಪರೀಕ್ಷಿಸುವ ವೇಳೆ ಚೆಂಡು ಇಂಪ್ಯಾಕ್ಟ್​ ಲೈನ್​ನಲ್ಲಿ ಇದ್ದರೂ ವಿಕೆಟ್ ಮಿಸ್ಸಿಂಗ್​ ಇರುವುದು ಕಂಡು ಬಂತು. ಹೀಗಾಗಿ ನಾಟೌಟ್​ ನಿರ್ಧಾರ ಪ್ರಕಟಿಸಿದರು. ಆದರೆ, ಲೆಗ್​ ಬೈ ಆಗಿ ಬಂದ ಬೌಂಡರಿ ರನ್​ ಮಾತ್ರ ಬಾಂಗ್ಲಾ ತಂಡಕ್ಕೆ ನೀಡಲಿಲ್ಲ. ಇದು ಈಗ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ RSA vs BAN: ಹ್ಯಾಟ್ರಿಕ್​ ಗೆಲುವು ಸಾಧಿಸಿ ಸೂಪರ್​-8 ಹಂತಕ್ಕೆ ಲಗ್ಗೆಯಿಟ್ಟ ದಕ್ಷಿಣ ಆಫ್ರಿಕಾ

ಹೊಸ ನಿಯಮಗಳ ಪ್ರಕಾರ, ಅಂಪೈರ್ ಔಟ್ ನೀಡಿದಾಗ ಬಾಲ್ ಡೆಡ್ ಎಂದು ಪರಿಗಣಿಸಲ್ಪಡುತ್ತದೆ. ಹೀಗಾಗಿ ಈ ರನ್​ ಬಾಂಗ್ಲಾ ತಂಡಕ್ಕೆ ಸಿಗಲಿಲ್ಲ. ಒಂದೊಮ್ಮೆ ಈ ರನ್​ ಸಿಗುತ್ತಿದ್ದರೆ ಬಾಂಗ್ಲಾ ಗೆಲುವು ಸಾಧಿಸುತ್ತಿತ್ತು. ಏಕೆಂದರೆ ಬಾಂಗ್ಲಾ ಸೋತಿದ್ದು ಕೂಡ 4 ರನ್​ ಅಂತರದಿಂದ. ಈ ನ್ಯೂನತೆಯ ಬಗ್ಗೆ ಅನೇಕ ಕ್ರಿಕೆಟ್‌ ತಜ್ಞರು ಭಾರತ ಮಾಜಿ ಆಟಗಾರ ವಾಸಿಂ ಜಾಫರ್​ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಇಲ್ಲಿನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ದಕ್ಷಿಣ ಆಫ್ರಿಕಾ 6 ವಿಕೆಟ್​ಗೆ 113 ರನ್​ ಬಾರಿಸಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಬಾಂಗ್ಲಾದೇಶ ಒಂದು ಹಂತದ ವರೆಗೆ ಉತ್ತಮವಾಗಿ ಆಡಿ ಆ ಬಳಿಕ ಕುಸಿತ ಕಂಡು 7 ವಿಕೆಟ್​ಗೆ 109 ರನ್​ ಮಾತ್ರ ಗಳಿಸಿ ಸೋಲು ಕಂಡಿತು. 46 ರನ್​ ಬಾರಿಸಿದ ದಕ್ಷಿಣ ಆಫ್ರಿಕಾದ ಹೆನ್ರಿಚ್​ ಕ್ಲಾಸೆನ್​ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Continue Reading

ಕ್ರೀಡೆ

IND vs USA: ಅಪಾಯಕಾರಿ ಅಮೆರಿಕ ಸವಾಲಿಗೆ ಸಡ್ಡು ಹೊಡೆದೀತೇ ಟೀಮ್​ ಇಂಡಿಯಾ?

IND vs USA: ಸಂಪೂರ್ಣ ಬೌಲಿಂಗ್​ ಟ್ರ್ಯಾಕ್ ಆಗಿರುವ ನಸ್ಸೌ ಪಿಚ್​ನಲ್ಲಿ ಬ್ಯಾಟಿಂಗ್​ ನಡೆಸುವುದು ಅಷ್ಟು ಸುಲಭವಲ್ಲ. 100 ರನ್​ ಬಾರಿಸಿದರೂ ಇದನ್ನು ತಡೆದು ನಿಲ್ಲಿಸುವ ಸಾಮರ್ಥ್ಯ ಬೌಲರ್​ಗಳಿಗಿದೆ. ಪಿಚ್​ನಲ್ಲಿ ಬಿರುಕು ಇರುವ ಕಾರಣ ಚೆಂಡಿನ ಚಲನೆ ಯಾವ ರೀತಿ ಇರುತ್ತದೆ ಎನ್ನುವುದನ್ನು ಅರಿತುಕೊಳ್ಳುವಲ್ಲಿ ಬ್ಯಾಟರ್​ಗಳು ವಿಫಲರಾಗುತ್ತಿದ್ದಾರೆ.

VISTARANEWS.COM


on

IND vs USA
Koo

ನ್ಯೂಯಾರ್ಕ್​: ಪ್ರಸಕ್ತ ಸಾಗುತ್ತಿರುವ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಲೀಗ್​ ಹಂತದ ಪಂದ್ಯದಲ್ಲಿ ಸತತ 2 ಪಂದ್ಯಗಳನ್ನು ಗೆದ್ದು ಅಜೇಯ ಓಟ ಕಾಯ್ದುಕೊಂಡಿರುವ ಭಾರತ ಮತ್ತು ಅಮೆರಿಕ(IND vs USA) ನಾಳೆ ನಡೆಯುವ ಪಂದ್ಯದಲ್ಲಿ ಕಣಕ್ಕಿಳಿಯಲಿವೆ. ಇತ್ತಂಡಗಳ ನಡುವಣ ಮೊದಲ ಕ್ರಿಕೆಟ್​ ಮುಖಾಮುಖಿ ಇದಾಗಿದೆ.

ಸವಾಲು ಸುಲಭದಲ್ಲ


ಅಮೆರಿಕ ತಂಡ ಕ್ರಿಕೆಟ್​ ಶಿಶು ಆಗಿದ್ದರೂ ಕೂಡ ತಂಡದಲ್ಲಿ ಆಡುವ ಆಟಗಾರರಿಗೆ ಕ್ರಿಕೆಟ್​ ಹೊಸದಲ್ಲ. ಎಲ್ಲರು ಅನುಭವಿ ಆಟಗಾರರು. ಈ ತಂಡದ ವಿಶೇಷವೆಂದರೆ ಭಾರತ, ಪಾಕಿಸ್ತಾನ, ನ್ಯೂಜಿಲ್ಯಾಂಡ್​, ಕೆನಡಾ ಸೇರಿ ಹಲವು ದೇಶಗಳ ಕ್ರಿಕೆಟಿಗರು ಈ ತಂಡದಲ್ಲಿ ಕಾಣಿಸಿಕೊಂಡಿರುವುದು. ಬಹುಪಾಲು ಭಾರತೀಯ ಆಟಗಾರರೇ ನೆಚ್ಚಿಕೊಂಡಿದ್ದಾರೆ. ಕನ್ನಡಿಗ ನಾಸ್ತುಷ್‌ ಕೆಂಜಿಗೆ, 2010ರಲ್ಲಿ ಭಾರತ ಪರ 19 ವಿಶ್ವಕಪ್​ ಆಡಿದ್ದ ಎಡಗೈ ವೇಗದ ಬೌಲರ್ ಸೌರಭ್ ನೇತ್ರವಲ್ಕರ್, ನಾಯಕ ಮೊನಾಂಕ್ ಪಟೇಲ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ.

ವಿಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಆರನ್ ಜೋನ್ಸ್ ಕೂಡ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಭಾರತ ಯಾವುದೇ ಕಾರಣಕ್ಕೂ ಎದುರಾಳಿಗಳನ್ನು ಕಡೆಗಣಿಸುವಂತಿಲ್ಲ. ಈಗಾಗಲೇ ಪಾಕಿಸ್ತಾನಕ್ಕೂ ಅಮೆರಿಕ ನೀರು ಕುಡಿಸಿದೆ. ಹೀಗಾಗಿ ಅತಿಯಾದ ಆತ್ಮವಿಶ್ವಾಸದಿಂದ ಈ ಸವಾಲನ್ನು ಹಗುರವಾಗಿ ಕಂಡೆರೆ ಭಾರತಕ್ಕೂ ಸೋಲು ಕಟ್ಟಿಟ್ಟ ಬುತ್ತಿ! ಎನ್ನಲಡ್ಡಿಯಿಲ್ಲ.

ಗೆದ್ದರೆ ಸೂಪರ್​-8 ಪ್ರವೇಶ


ಉಭಯ ತಂಡಗಳ ಪೈಕಿ ಯಾರೇ ಗೆದ್ದರೂ ಕೂಡ ‘ಎ’ ವಿಭಾಗದಿಂದ ಮೊದಲ ತಂಡವಾಗಿ ಸೂಪರ್​-8 ಹಂತಕ್ಕೆ ಪ್ರವೇಶ ಪಡೆಯಲಿದ್ದಾರೆ. ಈಗಾಗಲೇ ‘ಡಿ’ ವಿಭಾಗದಿಂದ ದಕ್ಷಿಣ ಆಫ್ರಿಕಾ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಒಂದು ಗ್ರೂಪ್​ನಿಂದ ಕೇವಲ 2 ತಂಡಗಳು ಮಾತ್ರ ಈ ಹಂತಕ್ಕೇರುತ್ತದೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

ಮಳೆ ಭೀತಿ


ಭಾನುವಾರ ಇಲ್ಲೇ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತ್ತು. ಇದೀಗ ನಾಳೆ ನಡೆಯುವ ಪಂದ್ಯಕ್ಕೂ ಮಳೆ ಕಾಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಯುವೆದರ್‌ನ ಮುನ್ಸೂಚನೆಯ ಪ್ರಕಾರ ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನದ ವೇಳೆ ಶೇ. 40 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಭಾರತದಲ್ಲಿ ಈ ಪಂದ್ಯ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತದೆ. ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ 1 ಅಂಕ ನೀಡಲಾಗುತ್ತದೆ. ಏಕೆಂದರೆ ಲೀಗ್​ ಪಂದ್ಯಗಳಿಗೆ ಮೀಸಲು ದಿನ ಇಲ್ಲ. ಒಂದೊಮ್ಮೆ ಭಾರತ ಮತ್ತು ಅಮೆರಿಕ ಪಂದ್ಯ ಮಳೆಯಿಂದ ರದ್ದಾದರೆ ಪಾಕಿಸ್ತಾನ ಲೀಗ್​ನಿಂದ ಹೊರಬೀಳಲಿದೆ. ಈಗಾಗಲೇ 4 ಅಂಕಗಳಿಸಿರುವ ಭಾರತ ಮತ್ತು ಅಮೆರಿಕಗೆ ಈ ಒಂದು ಅಂಕದಿಂದ ಒಟ್ಟು ಅಂಕ 5 ಆಗಲಿದೆ. ಪಾಕ್​ ಮುಂದಿನ 2 ಪಂದ್ಯಗಳನ್ನು ಗೆದ್ದರೂ ಕೂಡ 4 ಅಂಕ ಮಾತ್ರ ಆಗಲಿದೆ. ಹೀಗಾಗಿ ಪಾಕ್​ ಹೊರಬೀಳಲಿದೆ.

ಪಿಚ್​ ರಿಪೋರ್ಟ್​


ಸಂಪೂರ್ಣ ಬೌಲಿಂಗ್​ ಟ್ರ್ಯಾಕ್ ಆಗಿರುವ ನಸ್ಸೌ ಪಿಚ್​ನಲ್ಲಿ ಬ್ಯಾಟಿಂಗ್​ ನಡೆಸುವುದು ಅಷ್ಟು ಸುಲಭವಲ್ಲ. 100 ರನ್​ ಬಾರಿಸಿದರೂ ಇದನ್ನು ತಡೆದು ನಿಲ್ಲಿಸುವ ಸಾಮರ್ಥ್ಯ ಬೌಲರ್​ಗಳಿಗಿದೆ. ಪಿಚ್​ನಲ್ಲಿ ಬಿರುಕು ಇರುವ ಕಾರಣ ಚೆಂಡಿನ ಚಲನೆ ಯಾವ ರೀತಿ ಇರುತ್ತದೆ ಎನ್ನುವುದನ್ನು ಅರಿತುಕೊಳ್ಳುವಲ್ಲಿ ಬ್ಯಾಟರ್​ಗಳು ವಿಫಲರಾಗುತ್ತಿದ್ದಾರೆ. ಇದುವರೆಗೂ ಇಲ್ಲಿ ನಡೆದ ಪಂದ್ಯದಲ್ಲಿ 120 ರನ್​ಗಳ ಗಡಿ ದಾಟಿಲ್ಲ.

ಸಂಭಾವ್ಯ ತಂಡ


ಅಮೆರಿಕ:
ಸ್ಟೀವನ್ ಟೇಲರ್, ಮೊನಾಂಕ್ ಪಟೇಲ್ (ನಾಯಕ), ಆಂಡ್ರೀಸ್ ಗೌಸ್, ಆರನ್ ಜೋನ್ಸ್, ನಿತೀಶ್ ಕುಮಾರ್, ಕೋರಿ ಆಂಡರ್ಸನ್, ಹರ್ಮೀತ್ ಸಿಂಗ್, ಜಸ್ದೀಪ್ ಸಿಂಗ್, ನಾಸ್ತುಷ್‌ ಕೆಂಜಿಗೆ, ಸೌರಭ್ ನೇತ್ರವಲ್ಕರ್, ಅಲಿ ಖಾನ್.

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

Continue Reading

ಕ್ರೀಡೆ

Danielle Wyatt Marriage: ಸಲಿಂಗ ಸಂಗಾತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇಂಗ್ಲೆಂಡ್ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ

Danielle Wyatt Marriage: ಕಳೆದ ವರ್ಷ ಮಾರ್ಚ್ 2ರಂದು ಜಾರ್ಜಿ ಹಾಡ್ಜ್ ಅವರೊಂದಿಗೆ ವ್ಯಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದು ಇಂಗ್ಲೆಂಡ್​ ಆಟಗಾರ್ತಿ ಸಲಿಂಗ ವಿವಾಹವಾದ ಎರಡನೇ ನಿದರ್ಶನವಾಗಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಮಹಿಳಾ ರಾಷ್ಟ್ರೀಯ ತಂಡದ ಕ್ರಿಕೆಟಿಗರಾದ ನತಾಲಿಯಾ ಸೀವರ್ ಮತ್ತು ಕ್ಯಾಥರಿನ್ ಬ್ರಂಟ್ ಸಲಿಂಗ ವಿವಾಹವಾಗಿದ್ದರು.

VISTARANEWS.COM


on

Danielle Wyatt Marriage
Koo

ಲಂಡನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್​ ಆಟಗಾರ್ತಿ ಡೇನಿಯಲ್ ವ್ಯಾಟ್(Danielle Wyatt) ಅವರು ತನ್ನ ಬಹುಕಾಲ ಗೆಳತಿ ಜಾರ್ಜಿ ಹಾಡ್ಜ್(Georgie Hodge) ಅವರೊಂದಿಗೆ ಮದುವೆಯಾಗಿದ್ದಾರೆ. ಮದುವೆಯ ಫೋಟೊಗಳನ್ನು ವ್ಯಾಟ್ ತಮ್ಮ ಇನ್​​ಸ್ಟಾಗ್ರಾಮ್ ಮತ್ತು ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.


ಕಳೆದ ವರ್ಷ ಮಾರ್ಚ್ 2ರಂದು ಜಾರ್ಜಿ ಹಾಡ್ಜ್ ಅವರೊಂದಿಗೆ ವ್ಯಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದು ಇಂಗ್ಲೆಂಡ್​ ಆಟಗಾರ್ತಿ ಸಲಿಂಗ ವಿವಾಹವಾದ ಎರಡನೇ ನಿದರ್ಶನವಾಗಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಮಹಿಳಾ ರಾಷ್ಟ್ರೀಯ ತಂಡದ ಕ್ರಿಕೆಟಿಗರಾದ ನತಾಲಿಯಾ ಸೀವರ್ ಮತ್ತು ಕ್ಯಾಥರಿನ್ ಬ್ರಂಟ್ ಸಲಿಂಗ ವಿವಾಹವಾಗಿದ್ದರು.


ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ 2014ರಲ್ಲಿ ಡೇನಿಯಲ್ ವ್ಯಾಟ್​ “ಕೊಹ್ಲಿ ನನ್ನನ್ನು ಮದುವೆಯಾಗು!!’ ಎಂದು ಟ್ವೀಟ್ ಮೂಲಕ ಪ್ರೇಮ ನಿವೇದನೆ ಮಾಡಿದ್ದರು. ಆದರೆ ಕೊಹ್ಲಿ ಇದಕ್ಕೆ ಕೊಹ್ಲಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಇದನ್ನೂ ಓದಿ WPL Auction: ಡಬ್ಲ್ಯುಪಿಎಲ್ ಟೂರ್ನಿಯಲ್ಲಿ ಅವಕಾಶ ಸಿಗದೆ, ಹೃದಯ ಒಡೆದು ಹೋಗಿದೆ; ಡೇನಿಯಲ್ ವ್ಯಾಟ್

‘ನಮ್ಮ ಮುಂದಿನ ಜೀವನವನ್ನು ದೃಢಪಡಿಸಿಕೊಳ್ಳುತ್ತಿದ್ದೇವೆ’ ಎಂದು ಮನೆಯ ಎಮೊಜಿಗಳನ್ನು ಹಾಕಿ ಟ್ವಿಟರ್​ ಪೋಸ್ಟ್​ ಮೂಲಕ ಡೇನಿಯಲ್‌ ವ್ಯಾಟ್‌ ತಮ್ಮ ವಿವಾಹದ(Danielle Wyatt Marriage) ವಿಚಾರವನ್ನು ತಿಳಿಸಿದ್ದಾರೆ. ಮದುವೆಯ ಮೂರು ಫೋಟೊಗಳನ್ನು ಕೂಡ ಹಂಚಿಕೊಂಡಿದ್ದಾರೆ.


ದಾಂಪತ್ಯ ಜೀವನಕ್ಕೆ ಕಾಲಿರಿಸಿ ಈ ಜೋಡಿಗಳಿಗೆ ಭಾರತ ಮಹಿಳಾ ತಂಡದ ಆಟಗಾರ್ತಿ ಶೆಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮೀಮಾ ರೋಡ್ರಿಗಸ್​ ಸೇರಿ ಹಲವು ದೇಶದ ಆಟಗಾರ್ತಿಯರು ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಕೂಡ ಶುಭ ಕೋರಿದೆ. ನಾಯಕಿ ಹೀದರ್ ನೈಟ್, ಡ್ಯಾನಿ ವ್ಯಾಟ್, ಇಶಾ ಗುಹಾ, ಜೆನ್ನಿ ಗನ್ ಸೇರಿದಂತೆ ಇಂಗ್ಲೆಂಡ್ ತಂಡದ ಪ್ರಸ್ತುತ ಮತ್ತು ಹಿಂದಿನ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.


33 ವರ್ಷದ ಡೇನಿಯಲ್‌ ವ್ಯಾಟ್‌ ಅವರು ಇಂಗ್ಲೆಂಡ್​ ಪರ 2 ಟೆಸ್ಟ್​, 110 ಏಕದಿನ ಮತ್ತು 156 ಟಿ20 ಪಂದ್ಯಗಳನ್ನು ಆಡಿ ಒಟ್ಟು 4,762 ರನ್​ ಬಾರಿಸಿದ್ದಾರೆ. ಏಕದಿನ ಮತ್ತು ಟಿ20ಯಲ್ಲಿ ತಲಾ 2 ಶತಕ ಬಾರಿಸಿದ್ದಾರೆ. ಬೌಲಿಂಗ್​ನಲ್ಲಿಯೂ ಸಾಧನೆ ಮಾಡಿರುವ ಇವರು 73 ಅಂತಾರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ. ಮಹಿಳಾ ಐಪಿಎಲ್​ ಟೂರ್ನಿಯಾದ ಡಬ್ಲ್ಯುಪಿಎಲ್​ನಲ್ಲಿ ಯುಪಿ ವಾರಿಯರ್ಸ್​ ತಂಡದ ಆಟಗಾರ್ತಿಯಾಗಿದ್ದಾರೆ.​

Continue Reading
Advertisement
Wedding Jewel Fashion
ಫ್ಯಾಷನ್2 mins ago

Wedding Jewel Fashion: ವೆಡ್ಡಿಂಗ್‌ ಜ್ಯುವೆಲ್‌ ಫ್ಯಾಷನ್‌ನಲ್ಲಿ ಮಹಿಳೆಯರನ್ನು ಸೆಳೆಯುತ್ತಿವೆ ಈ 3 ಟ್ರೆಡಿಷನಲ್‌ ಮಾಟಿಗಳು

EPF Account Rules
ಮನಿ-ಗೈಡ್22 mins ago

EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

Renu Desai Second Marriage
ಸಿನಿಮಾ27 mins ago

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Odisha chief minister
ಪ್ರಮುಖ ಸುದ್ದಿ29 mins ago

Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

Renuka Swamy Murder Case
ಕರ್ನಾಟಕ45 mins ago

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Raksha Khadse
ರಾಜಕೀಯ59 mins ago

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

Health Tips For Monsoon
ಆರೋಗ್ಯ1 hour ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ1 hour ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

CM Siddaramaiah
ಕರ್ನಾಟಕ2 hours ago

CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

karnataka weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ8 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌